Category: ಕಥಾಗುಚ್ಛ

ಕಥಾಗುಚ್ಛ

ಅತಿ ಮಧುರಾ ಅನುರಾಗ

ಅಮ್ಮಾ ! ದುನಿಯಾ ಬದಲಾಗ್ತಿದೆ. ಈಗ ಇಷ್ಟಪಟ್ಟವರ ಜೊತೆಯಲ್ಲೇ ಮದುವೆಗಳು ಆಗ್ತಿರೋದು. ಇವು ತಪ್ಪು ಸಹ ಅಲ್ಲ. ಅದೆಲ್ಲ ಸರಿ. ನಿಮಗಿಷ್ಟಾನಾ ಇಲ್ಲಾ ಅದ್ ಹೇಳಿ “ ಎಂದಳು.

ಅಧ್ಯಾತ್ಮಿಕ ತುಡಿತದೆಡೆಗೆ ಮನ

ಕಥೆ ಅಧ್ಯಾತ್ಮಿಕ ತುಡಿತದೆಡೆಗೆ ಮನ ಬಸವರಾಜ ಕಾಸೆ ಆತ ಪ್ರಕಾಶ, ಅದೇನೋ ಚಿಕ್ಕವನು ಇದ್ದಾಗಿನಿಂದಲೇ ದೇವರೆಂದರೆ ಆತನಿಗೆ ಅಪಾರ ಭಕ್ತಿ. ಅವನ ಮನಸ್ಸು ಸದಾ ಅಲೌಕಿಕ ಕಡೆಗೆ ತುಡಿಯುತ್ತಿತ್ತು. ಆತನ ಮೈ ಬಣ್ಣ ಕಡುಕಪ್ಪು. ಆದರೆ ಶ್ವೇತ ಬಣ್ಣದ ಅತ್ಯಂತ ಸುಂದರ ಭಾವನೆಗಳಿದ್ದವು. ಆ ಬಣ್ಣದ ಕಾರಣದಿಂದ ಬಂಧುಗಳಿಂದಲೇ ಒಂದಿಷ್ಟು ತಿರಸ್ಕಾರಕ್ಕೆ ಒಳಗಾಗಿದ್ದ. ಆತನದು ಕೆಳಜಾತಿ ಎನ್ನುವ ಕಾರಣಕ್ಕೆ ಇನ್ನೂ ಹೊರಗಿನ ಜನಗಳಿಂದ ಅಸಡ್ಡೆಗೆ ಒಳಗಾಗಿದ್ದ. ಇವೆಲ್ಲವೂ ಒಂದೊಂದಾಗಿ ಬೆಳೀತಾ ಬೆಳೀತಾ ಆತನ ಅರಿವಿಗೆ ಬರತೊಡಗಿತು. ಇದರಿಂದಾಗಿ […]

ಧನ್ಯ ಮಿಲನ

ಕಥೆ ಧನ್ಯ ಮಿಲನ ಸರೋಜಾ ಶ್ರೀಕಾಂತ್ ಅಮಾತಿ ರಾಧೆ,ರಾಧೆ….ಅದೇ ಧ್ವನಿ!…..ಹೌದು ಇದು ಅದೇ ಧ್ವನಿ,ಕೃಷ್ಣ ….ಕೃಷ್ಣ ! ಎಲ್ಲವಿತಿರುವೆ!? ಎದುರಿಗೊಮ್ಮೆ ಬರಬಾರದೆ? ಅದೆಷ್ಟೋ ವರುಷಗಳ ನಂತರ ಮತ್ತೆ ಕೃಷ್ಣ ಬಂದಿದ್ದ.ಅದೇ ತೇಜಸ್ಸು,ನಗುದುಂಬಿದ ಮುಖ ಕೃಷ್ಣನ ದರ್ಶನವಾಗುತ್ತಲೇ ನದಿ ದಂಡೆಯ ಆ ಉರಿಬಿಸಿಲೂ ಹಿತವೆನಿಸಿಸುತ್ತಿತ್ತು ರಾಧೆಗೆ.ಅಬ್ಬಾ! ,ಅಂತೂ ಬಂದೆಯಲ್ಲ ಸ್ವಾಮಿ ಇಷ್ಟು ವರ್ಷಗಳು ಬೇಕಾದವೆ ಈ ರಾಧೆಯನ್ನು ಕಾಣಲು? ಅಂದಾಗ ನೀನೆಂದೂ ನನ್ನ ಜೊತೆಯೇ ಇರುವೆ ರಾಧೆ ಏಕೆ ನಿನಗೆ ಹಾಗೇಣಿಸುವುದಿಲ್ಲವೇ?ಭೇಟಿ ವಿಳಂಬವಾಯಿತೆಂದು ನನ್ನನ್ನೇ ಮರೆತು ಬಿಟ್ಟೆಯಾ ಹೇಗೆ? […]

ಬಂದು ಹೋಗುವ ಮಳೆಯಲ್ಲಿ

ಕಥೆ ಬಂದು ಹೋಗುವ ಮಳೆಯಲ್ಲಿ ತೆಲುಗಿನಲ್ಲಿ: ಅಫ್ಸರ್ ಕನ್ನಡಕ್ಕೆ : ಚಂದಕಚರ್ಲ ರಮೇಶ ಬಾಬು “ಈ ಶಿಥಿಲಗಳ ಬಣ್ಣಗಳು ನಿನ್ನ ಹಿಡಿತಕ್ಕೆ ತುಂಬಾ ಚೆನ್ನಾಗಿ ಬಂದಿವೆ. ಈ ಬಣ್ಣಾನ್ನ ಅಷ್ಟು ಖಚಿತವಾಗಿ ನಿನ್ನ ಕಾನ್ವಾಸ್ ಮೇಲೆ ಅದ್ಹೇಗೆ ತರ್ತೀಯೋ ಮಾರಾಯಾ ! ಏನ್ ಮಿಕ್ಸ್ ಮಾಡ್ತಿಯೋ ಗೊತ್ತಿಲ್ಲಾಗ್ಲೀ ! ಪ್ರತಿ ಚಿತ್ರದಲ್ಲೂ ಅವಕ್ಕೆ ಭಿನ್ನವಾದ ಮೈ ಬಣ್ಣ ಹೊಂದಿರುವ ಹೆಣ್ಣುಗಳು…. ಒಂದು ಮೋಡ…. ನನಗೆ ಗೊತ್ತಿದ್ದ ಹಾಗೆ ಹತ್ತು ವರ್ಷದಿಂದ ಇದೇ ಅಲ್ವಾ ನಿನ್ನ ಕಾನ್ವಾಸ್…..!” ಕಾನ್ವಾಸಿನ […]

ಚಿಕ್ಕಿಯ ಫೋಟೋ

ಕಥೆ ಚಿಕ್ಕಿಯ ಫೋಟೋ ಮಧುರಾ ಕರ್ಣಮ್ “ಚಿಕ್ಕಿ ಇಸ್ಕೂಲಿಗೆ ಬತ್ತೀಯೇನೆ? ಟೇಮಾಗ್ತಾ ಐತೆ” ಎಂದು ಕಮಲಿ ಕೂಗು ಹಾಕಿದಾಗ ಚಿಕ್ಕಿ “ಒಸಿ ನಿಂತ್ಕೊಳ್ಳೆ, ಬಂದೆ” ಎನ್ನುತ್ತ ತಟ್ಟೆಯಲ್ಲಿದ್ದ ತಂಗಳನ್ನ ಮುಗಿಸಿ ಕೈ ತೊಳೆದಳು. ಅಲ್ಲಲ್ಲಿ ಹರಿದ ಸ್ಕೂಲ್ ಬ್ಯಾಗ್ ಹೆಗಲಿಗೇರಿಸಿ “ನಾನ್ ಇಸ್ಕೂಲಿಗೆ ಹೋಗ್ಬರ್ತೀನಿ ಕಣವ್ವೋ” ಎಂದು ಕೂಗು ಹಾಕಿದಳು. “ಚಿಕ್ಕಿ, ಹಿಂದೆ ಒಂದ್ನಾಲ್ಕು ಪಾತ್ರೆ ಅವೆ, ತೊಳದ್ಹೋಗೆ” ಎಂಬ ಕೂಗು ಕೇಳಿಸದಂತೆ ಕಮಲಿಯ ಕೈಹಿಡಿದು ಓಡಿದಳು. “ಈ ಅವ್ವ ಹೋಗಾಗಂಟ ಕೆಲ್ಸ ಮಾಡಿದ್ರೂನು ಮತ್ತೆ `ಇದ್ […]

ಡಿಯರ್-ಟೈಗರ್!

ಕಥೆ ಡಿಯರ್-ಟೈಗರ್! ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೆಣ್ಣು ಅಂದರೆ ಪ್ರಬಲವಾದ ಶಿಸ್ತು ಮತ್ತು ಕಬಂಧ ಬಾಹುಬಲದ  ಚೌಕಟ್ಟಿನಲ್ಲಿ ಬೆಳೆಯಬೇಕು; ಅಷ್ಟೇ ಕಟ್ಟುನಿಟ್ಟಿನ ಬೇಲಿಯೊಳಗೆ ಬದುಕಬೇಕು ಎಂಬ ಬಂಧಿಯಲ್ಲ. ಅವಳಿಗೂ ಸರ್ವಸ್ವತಂತ್ರದ ಬದುಕು ಇಷ್ಟ. ಖಂಡಿತ! ಇದು ಬಹುಶಃ ಎಲ್ಲರ  ಪಾಲಿನ ಸತ್ಯ.  ಆದರೆ, ಅನೇಕರಿಗೆ ಅಂಥ ಜೀವನ ಇರಲಿ, ಆ ರೀತಿಯ ಮುಕ್ತ ಯೋಚನೆ ಕೂಡ ಅಸಾಧ್ಯ, ಅನ್ನಿಸುವಷ್ಟು ‘ಸರಳುಗಳ ಹಿಂದಿನ ಬಾಳು!’. ವಾಸ್ತವವಾಗಿ, ಅವರಿಗೆ ಆ ಸರಳುಗಳನ್ನು ಎಣಿಸುವ ಧೈರ್ಯ ಸಹ ಇರಲಾರದು… ಕಲ್ಯಾಣಿ […]

ಕೊನೆಯ ಬೇಡಿಕೆ

ಪೂರ್ಣಿ ಹೋಟೆಲ್‌ನಿಂದ ಹೊರಬಂದಂತೆ ಕಂಡ ಅಜ್ಜ ಕತ್ತಲ ಕಾಲದ ಜೊತೆ ಮಲಗಿ ಮಿಲನ್ ಕ್ಲಾತ್ ಶಾಪ್ ಕಟ್ಟಿ ಹೊರಗ ನಿದ್ದೆ ಹೋಗಿದ್ದ.

ಬದುಕು ಬಂದಂತೆ

ಕಥೆ ಬದುಕು ಬಂದಂತೆ ಅನಸೂಯ ಎಂ.ಆರ್. ಲತ ಮನೆಗೆ ಬಂದಾಗ ಎಂದಿನಂತೆ  ಸುಶೀಲಮ್ಮನು ಬಾಗಿಲು ತೆರೆಯದೆ  ಮನು ಬಂದಾಗ “ಅಜ್ಜಿ ಎಲ್ಲೊ” ಎಂದಳು. ” ಅಜ್ಜಿ ಮಲಗಿದಾರಮ್ಮ” ಎಂದ ಕೂಡಲೇ ವ್ಯಾನಿಟಿ ಬ್ಯಾಗ್ ಮತ್ತು ಲಂಚ್ ಬಾಕ್ಸ್ ನ್ನು ಟೇಬಲ್ ಮೇಲಿಟ್ಟು “ಅತ್ತೆ” ಎನ್ನುತ್ತಾ ರೂಂ ನೊಳಗೆ ಹೋದಳು ಮುಸುಕು ಹಾಕಿ ಮಲಗಿದ್ದ ಸುಶೀಲಮ್ಮ ಮುಸುಕನ್ನು ತೆಗೆಯುತ್ತಾ “ಯಾಕೋ, ಜ್ವರ ಬಂದಂತಾಗಿದೆ ಕಣಮ್ಮ” ಎಂದರು. ಅವರ ಹಣೆಯ ಮೇಲೆ ಕೈಯಿಟ್ಟು ನೋಡಿದ ಲತಾ ” ಬಹಳ ಜ್ವರ […]

ಉಡ್ಡಾಣ

ಕಥೆ ಉಡ್ಡಾಣ ಹೇಮಾ ಸದಾನಂದ್  ಅಮೀನ್   ಎಡೆಬಿಡದೆ ಅಳುವ ಆ ಮಗುವಿನ  ತಾಯಿಯ ಬೇಜವಾಬ್ದಾರಿತನವನ್ನು ನೋಡಿ ಯಾರೂ ಸಿಡಿಮಿಡಿಗೊಳ್ಳುವದು ಸಹಜವೇ. ಆದರೆ ಇದು  ಫಸ್ಟ್ ಕ್ಲಾಸ್ ಕಂಪಾರ್ಟ್ಮೆಂಟಿನಲ್ಲಿ  ಆಗಿರುವುದರಿಂದ ಕೇವಲ ಮುಖ ಸಿಂಡರಿಸಿ, “  ತಾನು ಡಿಸ್ಟರ್ಬ್ ಆಗಿದ್ದೇನೆ. ದಯಮಾಡಿ ನಿಮ್ಮ ಸಮಸ್ಯೆಯನ್ನು  ಆದಷ್ಟು ಬೇಗ ಬಗೆಹರಿಸಿಕೊಳ್ಳಿ “ ಎಂದು ವಕ್ರ ದೃಷ್ಟಿಯಿಂದಲೇ ಎಚ್ಚರಿಕೆ ಕೊಡುವ ಮನಸ್ಥಿತಿಯುಳ್ಳವರ ಮಧ್ಯ ಮೂರೂ ತಿಂಗಳ ಗರ್ಭಿಣಿಯಾಗಿದ್ದ  ಸಮೀಕ್ಷಳ ಮನಸ್ಸು  ತೀರ ವಿಚಲಿತಗೊಂಡಿತ್ತು. ಆಕೆ ಆ ತಾಯಿ ಮಗುವನ್ನು ಒಂದೇ […]

ಒಂದು ತಪ್ಪು ಗಂಟು

ಒಂದು ತಪ್ಪು ಗಂಟು ಎಸ್.ನಾಗಶ್ರೀ ಅದು ಕಾರ್ತೀಕ ಮಾಸದ ಪ್ರಾರಂಭದ ದಿನಗಳು. ಸಂಜೆ ಬೇಗ ಕಳೆದು ರಾತ್ರಿಯ ಚಾದರ ಹೊದ್ದು ಸುತ್ತಲೂ ಕತ್ತಲು. ಪ್ರತಿಮನೆಯ ಮುಂದೂ ಬೆಳಗುವ ಹಣತೆಗಳು. ಪ್ರಕಾಶ್ ರೆಡ್ಡಿ ಅಂದೂ ಸಂಜೆ ಏಳರ ಸಿಗರೇಟ್ ಹಚ್ಚಿ ಮನೆಯ ಮುಂದೆ ಕುರ್ಚಿ ಹಾಕಿ ಕುಳಿತಿದ್ದ. ಚಳಿ ಏಕೋ ಮೂಳೆಗಿಳಿಯುವಷ್ಟು ಏರಿದೆ ಎನಿಸಿ ಬಿಸಿ ಕಾಫಿಗೆ ಸೈಲೂ ಎಂದು ಕೂಗಿ, ಅರೆಘಳಿಗೆ ಹಿಂದಕ್ಕೆ ಒರಗಿದ. ಬೇಡಬೇಡವೆಂದರೂ ಪ್ರತಿ ಕಾರ್ತೀಕದಲ್ಲಿ ನೆನಪಾಗಿ ಹೃದಯ ಭಾರವಾಗುವ ಆ ಘಟನೆಯ ಕಿಡಿ […]

Back To Top