Category: ಅನುವಾದ

ಅನುವಾದ

ಅನುವಾದ ಸಂಗಾತಿ

ಚಿರಂಜೀವಿ ಮೂಲ ಮಲಯಾಳಂ:ರಾಧಾಕೃಷ್ಣ ಪೆರುಂಬಳ ಕನ್ನಡಕ್ಕೆ:ಚೇತನಾ ಕುಂಬ್ಳೆ ಮರಣ ಇತರರಿಗಿರುವುದು ರೋಗಗಳೂ ದುರಂತಗಳೂ ಅವರಿಗಾಗಿಯೇ ನನಗಲ್ಲ ಮರಣ ಪಕ್ಕದಮನೆಯಲ್ಲೇ ಇದೆ ಅನ್ಯ ಜಾತಿ ಮತದವರಿಗೆ ಬೇರೆ ಪಕ್ಷದಲ್ಲಿರುವವರಿಗೆ ನನ್ನ ಯಾರಾದರೂ ಬಂಧುಗಳೋ, ಗೆಳೆಯರೋ ಅಥವಾ ಯಾರಾದರೂ ನಾಯಕರು ಅದೇ ರೀತಿ ನೆರೆಕರೆಯವರು ನಿಧನರಾದಾಗಲೋ, ರೋಗಬಾಧಿತರಾದಾಗಲೋ ಅಪಘಾತಕ್ಕೊಳಗಾದಾಗಲೋ ಅಂಥ ದುಃಖದಲ್ಲಿ ನನಗೂ ಪಾಲ್ಗೊಳ್ಳುವ ಅವಕಾಶವಿದೆ ಆಗ ನಾನೂ ದುಃಖಪಡುತ್ತೇನೆ ಅಲ್ಲಿಗೆ ಭೇಟಿ ನೀಡುತ್ತೇನೆ ಅವರ ನೋವಿನಲ್ಲಿ ಭಾಗಿಯಾಗುತ್ತೇನೆ ಸಾಂತ್ವನ ಪಡಿಸುತ್ತೇನೆ, ಸಹಾಯ ಮಾಡುತ್ತೇನೆ ಹೂ ಇಡುತ್ತೇನೆ, ಭಾಷಣ ಮಾಡುತ್ತೇನೆ […]

ಅನುವಾದ ಸಂಗಾತಿ

ಯಾರಿವಳು? ಕನ್ನಡ: ಶೀಲಾ ಭಂಡಾರ್ಕರ್ ಮಲಯಾಳಂ: ಚೇತನಾ ಕುಂಬ್ಳೆ ಅಡುಗೆಮನೆಯಲ್ಲಿ ಹಾಲು ಉಕ್ಕುವುದರೊಳಗೆ ಓಡಿ ಅದನ್ನು ತಪ್ಪಿಸುವವಳು. ಹೆಣೆದಿಟ್ಟ ಮಧುರ ಕ್ಷಣಗಳ ಕನಸುಗಳು ಹರಿದುಹೋದರೂ ಕಾಣದಂತೆ ಸುಮ್ಮನಿರುವಳು. ರೊಟ್ಟಿ ಕರಕಾಗದಂತೆ ಎಚ್ಚರಿಕೆಯಿಂದ ಬೇಯಿಸಿಕೊಡುವವಳು.. ಎಷ್ಟೋ ಆಸೆಗಳನ್ನು ಸುಟ್ಟು ಬೂದಿ ಮಾಡಿ ಎಸೆದು ಬಿಡುವಳು. ಪಾತ್ರೆಗಳು ಬಿದ್ದು ತಗ್ಗುನುಗ್ಗಾಗದಂತೆ ನೋಡಿಕೊಳ್ಳುವವಳು. ತನ್ನ ಹುಮ್ಮಸ್ಸು, ಉತ್ಸಾಹಗಳನ್ನು ತಾನೇ ಹೊಸಕಿ ಹಾಕುವಳು. ಬಟ್ಟೆಯ ಕಲೆಗಳನ್ನು ಜಾಣ್ಮೆಯಿಂದ ತೊಡೆಯುವವಳು.. ಅಶಕ್ತ ಶಬ್ಧಗಳನ್ನು ಬರೆದ ವಿಷಾದದ ಮಸಿಯನ್ನು ಎದೆಯ ಗೋಡೆಯ ಮೇಲಿಂದ ಅಳಿಸಿಹಾಕುವಳು. ಬಂಧಿಸಿಟ್ಟ […]

ಅನುವಾದ ಸಂಗಾತಿ

ಕನ್ನಡ: ಕು.ಸ.ಮಧುಸೂದನ ಮಲಯಾಳಂ: ಚೇತನಾ ಕುಂಬ್ಳೆ ಅಪ್ಪಚ್ಚನ ಅದೊಂದು ಮನೆಯೂ, ನನ್ನ ಸೋದರತ್ತೆಯೂ! ಅದೊಂದು ಮನೆಯಿತ್ತು ನನ್ನದೂ ನನ್ನ ಅಪ್ಪಚ್ಚನ ಕಾಲದ್ದು ಅವನ ವಿರೋಧಿಸಿ ಮನೆ ಬಿಟ್ಟು ಬಂದ ಅಚ್ಚ ಮತ್ತೆ ಅದರೊಳಗೆ ಕಾಲಿಡದೆಲೆ ಸತ್ತು ಹೋಗಿ ನನ್ನನ್ನೂ ಅಪರಿಚಿತ ಊರಲ್ಲಿ ಪರದೇಸಿಯಾಗಿಸಿದ ನಂತರವೂ ಮೊಮ್ಮಗ ಬರುತ್ತಾನೆಂದು ಸಾಯುವ ತನಕ ಕಾವಲು ಕಾಯುತ್ತಿದ್ದ ಮುದುಕ ಅಷ್ಟು ವರುಷ ಇಲ್ಲದ್ದು ಮೊನ್ನೆ ಕಾಲುಜಾರಿ ಮನೆಯ ಹಿಂದಿನ ಅದೇ ಹಳೆಯ ಬಾವಿಗೆ ಬಿದ್ದು ಸತ್ತು ಹೋದನಂತೆ! ವಿಷಯ ಕಿವಿಗೆ ಬಿದ್ದು […]

ಅನುವಾದ ಸಂಗಾತಿ

ಕನ್ನಡಕವಿತೆ:ಸರಜೂ ಕಾಟ್ಕರ್ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ನ್ಯಾಶನಲ್ ಹೈವೇಗುಂಟ ಹೋಗುತ್ತಿರುವಾಗ ನ್ಯಾಶನಲ್ ಹೈವೇಗುಂಟ ಹೋಗುತ್ತಿರುವಾಗ ಅಲ್ಲಿದ್ದ ಗಿಡಮರಗಳನ್ನು ನಿರ್ದಯವಾಗಿ ಕತ್ತರಿಸಿ ಹಾಕಿದ ರಾಕ್ಷಸರನ್ನು ನೆನೆನೆನೆದು ಸಿಟ್ಟಾಗುತ್ತೇನೆ. ಅಲ್ಲಿಯ ಬೋಳು ಮೈದಾನಗಳಲ್ಲಿ ತಮ್ಮ ಗೂಡುಗಳನ್ನು ಹುಡುಕುತ್ತಿರುವ ಸಾವಿರಾರು ಪಕ್ಷಿಗಳ ಆಕ್ರಂದನ ಕೇಳಿ ಕಂಗಾಲಾಗುತ್ತೇನೆ. ಎಲ್ಲಿ ಹೋಯಿತು ಈ ಗಿಡಗಳ ದಟ್ಟ ಹಸಿರು? ಗಿಡಗಳಿಗಿಂತಲೂ ಉದ್ದವಾಗಿ ಬೀಳುತ್ತಿದ್ದ ನೆರಳು? ವಿಧವಿಧ ಪಕ್ಷಿಗಳ ಕಲರವ? ಗಿಡಗಳ ಸಾಕ್ಷಿಯಲ್ಲಿ ನಡೆಯುತ್ತಿದ್ದ ಪ್ರೇಮದಾಟ? ಏನಾಗಿರಬಹುದು ಈ ಗಿಡಮರಗಳಿಗೆ- ಸತ್ತು ಭಸ್ಮವಾದವೇ ಈ ಮರಗಳು ಅಥವಾ […]

ಅನುವಾದ ಸಂಗಾತಿ

ಕ್ಷುದ್ರ್ ಕೀ ಮಹಿಮಾ ಶಾಮ್ ನಂದನ್ ಕಿಶೋರ್ ಅನುವಾದಕರ ಟಿಪ್ಪಣಿ ಪದ್ಮಶ್ರಿ ಶ್ರೀ ಶಾಮ್ ನಂದನ್ ಕಿಶೋರ್ ಹಿಂದಿಯ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ಅವರ ಒಂದು ಕವಿತೆ “ಕ್ಷುದ್ರ್ ಕೀ ಮಹಿಮಾ” ಓದಲು ಸಿಕ್ಕಿತು. ಮೊದಲ ಓದಿಗೇನೂ ಹೆಚ್ಚು ಅರ್ಥವಾಗಲಿಲ್ಲ. ಆದರೂ ಕವಿ ಏನೋ ವಿಭಿನ್ನವಾದುದನ್ನು ಹೇಳಲು ಹೊರಟಿದ್ದಾರೆಂಬುದರ ಅರಿವಿತ್ತು. ಮತ್ತೆ ಮತ್ತೆ ಓದಿದಾಗ ಅರ್ಥ ಸ್ಪಷ್ಟವಾಗತೊಡಗಿತು. ಶಬ್ದಗಳೊಳ ಹೊಕ್ಕು ಕವಿಯ ಭಾವವನ್ನು ಅರಿಯಲು ಸಹಾಯ ಮಾಡಿದವಳು ಗೆಳತಿ ರೂಪಾ. ಅವಳು ಹಿಂದಿ ಭಾಷೆಯ ಅನುವಾದಿತ ಕೃತಿಗಳ […]

ಅನುವಾದ ಸಂಗಾತಿ

ಕನ್ನಡ ಮೂಲ: ರಾಜು ಹೆಗಡೆ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಹುಟ್ಟು ಹುಟ್ಟು ದೇವರಾಣೆ! ನನಗೆ ಗೊತ್ತಿರಲಿಲ್ಲ. ನಾನು ಹುಟ್ಟುತ್ತೇನೆಂದು ಹುಟ್ಟಿ ಇಷ್ಟು ವರ್ಷವಾದರೂ ಹುಟ್ಟಲಾಗಲೇ ಇಲ್ಲ. ಖಾಲಿ ಆಕಾಶದ ಕೆಳಗೆ ಬಟಾಬಯಲ ಒಳಗೆ ಬೋಳು ಮರದಡಿಯಲ್ಲಿ ಕೂರುತ್ತಿರಲಿಲ್ಲ ಹೀಗೆ ನಾನು ಹುಟ್ಟಿದ್ದರೆ ನಿರುದ್ಯೋಗ ಕಲಿಯದಿದ್ದರೆ ಇರುತ್ತಿರಲಿಲ್ಲ ಹೀಗೆ ನಾ ಹುಟ್ಟಿದ್ದರೆ ಕ್ಷಮಿಸಿ, ನನ್ನ ಕೈಲಿನ್ನೂ ಹುಟ್ಟಲಾಗಲೇ ಇಲ್ಲ.. -********** Birth ——- Swear God! I didn’t know that I would be born. After […]

ಅನುವಾದ ಸಂಗಾತಿ

ಮೌನ ಕನ್ನಡ ಕವಿತೆ: ನಾಗರಾಜ ಹರಪನಹಳ್ಳಿ ಇಂಗ್ಳಿಷಿಗೆ: ನಾಗರೇಖಾ ಗಾಂವಕರ್ ನಾಗರಾಜ ಹರಪನಹಳ್ಳಿ ನಾಗರೇಖಾ ಗಾಂವಕರ್ ಕನ್ನಡ ಕವಿತೆ ಮೌನ ಮೌನದಲ್ಲೂ ನಾನು ಸುಳಿದಾಡುವೆ ಒಬ್ಬಳೇ ಇರುವೆ ಎಂದು ಭಾವಿಸಬೇಡ ಸುಳಿಯುವ ಗಾಳಿಯಲ್ಲಿ ಎರಡು ನಿಟ್ಟುಸಿರುಗಳಿವೆ ಅವು ಪ್ರೇಮದ ಪಲ್ಲವಿಗಳಾಗಿ ಬದಲಾಗಿ ಬಿಡಲಿ ಕಣ್ಣಲ್ಲಿ ನಕ್ಷತ್ರಗಳು ಹಾಡಲಿ ಕಾಲ್ಗೆಜ್ಜೆಗಳಲ್ಲಿ ಏಳು ಸುತ್ತಿನ ಮಲ್ಲಿಗೆ ಅರಳಲಿ ನೀನುಟ್ಟ ಸೀರೆ ಸೆರಗ ತಾಗಿದ ಗಾಳಿ ಪ್ರೇಮದ ನವಿರು ಹೊತ್ತು ತಂತು ಆಡಿದ ಆಡದೇ ಉಳಿದ ಮಾತು ಮೌನಗಳ ಸಂಕಲನ ಮೋಡಗಳಲ್ಲಿ […]

ಅನುವಾದ ಸಂಗಾತಿ

ಒಂದುಕತ್ತಲನ್ನುಎತ್ತಿಟ್ಟುಕೊಂಡಿದ್ದೇನೆ ಕನ್ನಡ ಮೂಲ: ರಾಜು ಹೆಗಡೆ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ನಾಗರೇಖಾ ಗಾಂವಕರ್ ರಾಜು ಹೆಗಡೆ ಒಂದು ಕತ್ತಲನ್ನು ಎತ್ತಿಟ್ಟುಕೊಂಡಿದ್ದೇನೆ ಹಕ್ಕಿಗಳನ್ನು ಮಲಗಿಸಿ ಚುಕ್ಕೆಗಳನ್ನು ಎಬ್ಬಿಸಿ ಇನ್ನು ಕೆಲವೇ ಗಂಟೆಗಳಿವೆ ಗಿಡಗಂಟಿಗಳ ಜೊತೆಗೆ ಮಾತಾಡಲು ಆಡದಿದ್ದವರ ಸುದ್ದಿಬೇಡ! ಒಂದೊಂದಾಗಿ ದೀಪ ಆರಿಸುತ್ತೇನೆ ಕತ್ತಲೆ ನನಗೆ ಧೈರ್ಯ ತುಂಬುತ್ತದೆ ಗೋಡೆ ಕೂಡ ಮಾತಾಡುತ್ತಿದೆ ಗಡಿಯಾರದ ಬಾಯಲ್ಲಿ ಎಷ್ಟು ಸಂತೋಷ ಕತ್ತಲೆಗೆ ಸುಮ್ಮನೆ ನಗುತ್ತಿದೆ ಅರಿವೆ ಧರಿಸಿರುವ ನನ್ನ ನೋಡಿ. ಒ ಗೇಟಿನ ಸಪ್ಪಳ ಎಲ್ಲಿ ಅಡಗಿಕೊಳ್ಳಲಿ ದಾರಿಯನ್ನೂ ಬಿಡುವುದಿಲ್ಲ […]

ಅನುವಾದ ಸಂಗಾತಿ

ಪ್ರಭುವೆ ಕನ್ನಡ ಕವಿತೆ:ನಂದಿನಿ ವಿಶ್ವನಾಥ ಹೆದ್ದುರ್ಗ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ನಂದಿನಿ ವಿಶ್ವನಾಥ ಹೆದ್ದುರ್ಗ ನಾಗರೇಖಾ ಗಾಂವಕರ್ ಪ್ರಭುವೆ ಹಚ್ಚಿಕೊಂಡ ನಂಬಿಕೆಯೊಂದು ಕಾಯುವ ಬಯಕೆ ಹುಟ್ಟಿಸುತ್ತದೆ ಪ್ರಭುವೇ. ಕಾಲ ಭಾವಗಳ ಮಾಗಿಸಬಹುದು ಬಾಗಬಹುದು ಬಲು ಗಟ್ಟಿ ಎನಿಸಿದ್ದ ಒಳಗಿನ ಒಣ ಅಹಮ್ಮು. ಬರಡು ಎದೆಯಲ್ಲೂ ಕಳೆಹೂವುಗಳು ಅರಳಿ ಅಸಡ್ಡೆಯಲ್ಲಿ ಬಿಗಿದ ಈ ತುರುಬಿಗಿಡುವ ಆಸೆಯುದಿಸಬಹುದು. ಭೂತದ ಬೇತಾಳ ಈ ಹೆಗಲಿಂದ ಜಿಗಿದು ನೇತಾಡಿದ ಮರದಡಿಯಲ್ಲೇ ಕುಳಿತು ಹೊಸ ಮಾದರಿ ಕನಸ ಹೆಣೆಯಬಹುದು. ಹಿಡಿ ಮಣ್ಣಿನಲ್ಲಿ ಜಗ ಅಡಗಿರುವ […]

ಅನುವಾದ ಸಂಗಾತಿ

ಮೂಲ ಕವನ ಡಾ.ಶಿವಕುಮಾರ್ ಮಾಲಿಪಾಟೀಲ,ಗಂಗಾವತಿ ಅವರ “ದೇವರು ಹೇಳುತ್ತಿದ್ದಾನೆ ವಿಶ್ರಾಂತಿ ಪಡೆಯಿರಿ” ಇಂಗ್ಲೀಷಿಗೆ ನಾಗರೇಖಾ ಗಾಂವಕರ್ ಸಂಗಾತಿಯ ಓದುಗರಿಗೆ ಮೂಲ ಮತ್ತು ಅನುವಾದಿತ ಕವಿತೆಗಳೆರಡನ್ನೂ ಇಲ್ಲಿ ನೀಡಿದೆ ದೇವರು ಹೇಳುತ್ತಿದ್ದಾನೆ ಸಾಕು ನೀವೀಗ ವಿಶ್ರಾಂತಿ ಪಡೆಯಿರಿ ಗುಡಿ, ಗುಂಡಾರ, ಮಸೀದಿ, ಚರ್ಚೆಗಳಿಗೆ ಬಹಳಷ್ಟು ಅಲೆದಿದ್ದಿರಿ, ಮನವಿಲ್ಲದೆ ನನ್ನನ್ನು ಬಹಳಷ್ಟು ಹುಡುಕಿದ್ದಿರಿ ಸಾಕು ನೀವೀಗ ವಿಶ್ರಾಂತಿ ಪಡೆಯಿರಿ ಕಾಯಕ ಬಿಟ್ಟು ಸಾಮೂಹಿಕ ಭಜನೆ, ಪ್ರಾರ್ಥನೆ ಏನೇನೋ ಜಾತ್ರೆ ,ಉತ್ಸವಗಳನ್ನು ಮಾಡಿದಿರಿ ಸಾಕು ನೀವೀಗ ವಿಶ್ರಾಂತಿ ಪಡೆಯಿರಿ. ಅನ್ನ ,ಆಹಾರವಿದ್ದರೂ […]

Back To Top