Category: ಕವಿತೆ ಕಾರ್ನರ್

ಕವಿತೆ ಕಾರ್ನರ್

ಕವಿತೆ ಕಾರ್ನರ್

ಬಾ ಮಗುವೆ ಬಾ! ಕು.ಸ.ಮಧುಸೂದನ ನಾನೇನೂ ಅಲ್ಲ ಮೊನ್ನೆ ಮೂರುವರ್ಷದ ಮಗುವೊಂದು ನೀನ್ಯಾರೆಂದು ಕೇಳಿದಾಗ ಹೇಳಲಾಗದೆ ಏನನ್ನೂ ತಡವರಿಸಿದಾಗ ಮೊದಲಬಾರಿ ಯೋಚಿಸಿದೆ ನಾನ್ಯಾರುಮತ್ತುನಾನೇನು? ಯಾವ ದಾರಿಯೂ ನನ್ನದಾಗಲಿಲ್ಲಅಥವಾ ನನ್ನದಾಗಿ ಮಾಡಿಕೊಳ್ಳಲಾಗಲಿಲ್ಲ. ಸೋತಿದ್ದೇನೊ ಗೊತ್ತಾಯಿತಾದರುಆಟ ಆಡಿದ್ದೆನಾ ಇಲ್ಲ ಆಡಿದಂತೆ ನಟಿಸಿದ್ದೆನಾ ಗೊತ್ತಿಲ್ಲ. ಎಲ್ಲರೂ ಇತಿಹಾಸದ ಭಾಗವಾಗಲು ಸಾದ್ಯವಿಲ್ಲವಾದರುಅದರದೊಂದು ಅದ್ಯಾಯದ ಅಂಚಿನಲ್ಲಿಯಾದರು ಏನಾದರು ಆಗಿರುತ್ತಾರೆ. ಕನಸುಗಳು ನನಗೂ ಇದ್ದವುಸಾಕಾರಗೊಳಿಸಿಕೊಳ್ಳುವ ಅನೇಕ ಅಡ್ಡ ದಾರಿಗಳೂ ನನಗೆ ಗೊತ್ತಿದ್ದವು ಆದರಾ ಎಲ್ಲ ದಾರಿಗಳು ನನ್ನ ಆತ್ಮಸಾಕ್ಷಿಯ ವಿರುದ್ದವಾಗಿದ್ದವು. ಆತ್ಮದ ಮಾತಿಗಿಂತ ಸುಖವೇ ಮುಖ್ಯಎಂದು […]

ಕವಿತೆ ಕಾರ್ನರ್

ನಕ್ಷತ್ರದಂತವಳನ್ನು ಪ್ರೀತಿಸಿದ ಕವಿಯ ಕಥೆ ಕು.ಸ.ಮದುಸೂದನ ನಕ್ಷತ್ರದಂತವಳನ್ನು ಪ್ರೀತಿಸಿದ ಕವಿಯ ಕಥೆ! ನಕ್ಷತ್ರದಂತವಳನ್ನು ಪ್ರೀತಿಸಿದ ಕವಿಯ ಕಥೆ! ಬರೆಸಿಕೊಳ್ಳಲು ಕವಿತೆ ಒಪ್ಪದಿದ್ದಾಗ ಗದ್ಯದತ್ತ ಮುಖ ಮಾಡಲು ಮನಸು ಒಲ್ಲೆಂದಾಗಲೆಲ್ಲ ಅವನು ಮಾಡುತ್ತಿದ್ದುದು ಒಂದೇ ಕೆಲಸ ಅವಳಿಗೆ ಪ್ರೆಮಪತ್ರಗಳನ್ನು ಬರೆಯುತ್ತಿದ್ದು. ಅವನೇನು ಆ ಪತ್ರಗಳನ್ನು ಪ್ರಿಯೆ ಎಂದೊ ಇಲ್ಲಾ ಅವಳ ಹೆಸರಿನಿದಲೋ ಶುರು ಮಾಡುತ್ತಿರಲಿಲ್ಲ ಪ್ರತಿ ಪತ್ರವೂ ಹಿಂದಿನ ಪತ್ರದ ಮುಂದುವರಿಕೆಯಂತಿರುತ್ತಿತ್ತು ಅಲ್ಲಿಯೂ ಅವನೇನು ಅವಳನ್ನು ಚಿನ್ನ ರನ್ನ ಎಂದು ಮುದ್ದಿಸುತ್ತಿರಲಿಲ್ಲ. ಕಳೆದ ರಾತ್ರಿಯ ತನ್ನ ಒಂಟಿತನದ ಬಗ್ಗೆ, […]

ಕವಿತೆ ಕಾರ್ನರ್

ಮೂರ್ಖರು ಕು.ಸ.ಮಧುಸೂದನ ಮೂರ್ಖರುಕೋವಿಯಿಂದ ಕ್ರಾಂತಿ ಮಾಡುತ್ತೇವೆಂದು ಹೊರಟಮೂರ್ಖ ನಕ್ಸಲರು! ಧರ್ಮದಆಧಾರದ ಮೇಲೆದೇಶ ಕಟ್ಟುತ್ತೇವೆಂದು ಹೊರಟಮೂರ್ಖಮತಾಂಧರು! ಜಾತ್ಯಾತೀತಅಂತ ಹೇಳುತ್ತಾ ಜನಗಳ ಒಡೆಯುತ್ತಿರುವ ಹುಸಿಕ್ರಾಂತಿಕಾರಿಗಳು! ಇವರುಗಳ ನಡುವೆಇದ್ಯಾವ ಶಬ್ದಗಳನ್ನೂ ಕೇಳಿರದಬಡವರುತಣ್ಣಗೆಹೊಲಗದ್ದೆಗಳಲ್ಲಿಕಾರ್ಖಾನೆಗಳಲ್ಲಿಕೆಲಸ ಮಾಡುತ್ತಾದೇಶ ಕಟ್ಟುತ್ತಿದ್ದಾರೆ ಭಾಷಣಗಳ ಬೀಕರತೆಯಿಂದ ದೂರವುಳಿದು! *********

ದುರಿತ ಕಾಲದ ದನಿ

ರಣ ಹಸಿವಿನಿಂದ! ಮೊನ್ನೆ ಇವರೂ ಹಲವು ಯುದ್ದಗಳ ಗೆದ್ದಿದ್ದರುಗೆದ್ದ ರಾಜ್ಯದ ಹೆಣ್ನುಗಳ ಬೇಟೆಯಾಡಿದ್ದರುಇದೀಗ ಸಾಂತ್ವಾನ ಕೇಂದ್ರಗಳ ತೆರೆದು ಕೂತಿದ್ದಾರೆ! ಮೊನ್ನೆ ಇವರೂ ಊರೂರುಗಳಿಗೆ ಬೆಂಕಿ ಹಚ್ಚಿದ್ದರುಉರಿದ ಮನೆಗಳಲ್ಲಿ ಹೆಂಗಸರು ಮಕ್ಕಳೆನ್ನದೆ ತಲೆ ತರೆದಿದ್ದರುಇದೀಗ ಆನಾಥಾಶ್ರಮಗಳ ತೆರೆದು ಕೂತಿದ್ದಾರೆ! ಮೊನ್ನೆ ಇವರೂ ಕೋವಿ ಖಡ್ಘಗಳ ಹಿಡಿದಿದ್ದರುಇದೀಗ ಧರ್ಮಗ್ರಂಥಗಳ ಪಾರಾಯಣ ಮಾಡುತ್ತಿದ್ದಾರೆ! ಮೊನ್ನೆಮೊನ್ನೆಯವರೆಗೂ ನಡೆದ ಅಕಾರಣ ಯುದ್ದಗಳಿಗೀಗಸಕಾರಣಗಳ ಪಟ್ಟಿ ಮಾಡುತ್ತ ಕೂತಿದ್ದಾರೆ ತರಿದ ತಲೆಗಳಭೋಗಿಸಿದ ಯೋನಿಗಳಕಚ್ಚಿದ ಮೊಲೆಗಳಕಲಸಿಹಾಕಿದ ಭ್ರೂಣಗಳನಿಖರ ಅಂಕಿಅಂಶಗಳಿಗಾಗಿ ತಲೆ ಕೆರೆದುಕೊಳ್ಳುತ್ತಿದ್ದಾರೆ ಪ್ರತಿ ಮನುಷ್ಯನಿಗೂಇರಬಹುದಾದ ಮೃಗದ ಮುಖವಾಡವಕಳಚಲೆತ್ನಿಸಿದಷ್ಟೂ ಗೊಂದಲವಾಗುವುದು […]

ಕವಿತೆ ಕಾರ್ನರ್

ಆತ್ಮದ ಮಾತುಗಳು ಈಗ ಹಗಲನ್ನುಇರುಳನ್ನೂ ಕಳೆದುಕೊಂಡೆ ಹೊಂಬಣ್ಣದ ಸಂಜೆಯೊಳಗೆ ತುಂಗೆಯ ಮರಳುರಾಶಿಯಲ್ಲಿ ಮೂಡಿದನಿನ್ನ ಹೆಜ್ಜೆಗಳ ಅನುಸರಿಸುವ ಭ್ರಮೆಯೊಳಗೆ ಕಾಲುಗಳುಹೂತುಹೋದದ್ದು ಗೊತ್ತಾಗಲೇ ಇಲ್ಲ ಮೋಡಗಳ ಮರೆಯಿಂದ ಇಣುಕುತ್ತಿದ್ದ ಸೂರ್ಯನಿರಂತರವಲ್ಲವೆಂಬ ಅರಿವು ಮೂಡುವಷ್ಟರಲ್ಲಿಕಳೆದುಕೊಂಡಿದ್ದೆ ನಿನ್ನನೂ ಕವಿತೆಯ ಪ್ರತಿಸಾಲನ್ನೂ ನೀನು ಆಕ್ರಮಿಸುವಾಗಪ್ರತಿ ಶಬುದವನ್ನೂ ಜತನದಿಂದ ಕಂಠಪಾಠ ಮಾಡಿಟ್ಟುಕೊಂಡಿದ್ದೆ ನಿನ್ನೆದುರು ಹಾಡಲುಆಗುಂಬೆಯ ಸೂರ್ಯಾಸ್ತದಲ್ಲಿ ಮುಳುಗಿದ್ದವನು ಮುಸುಕಿದ ಕತ್ತಲ ಕಂಡುತಿರುಗಿ ನೋಡುವಷ್ಟರಲ್ಲಿ ನೀನಾಗಲೇ ವಿದಾಯ ಹೇಳಿಯಾಗಿತ್ತು ಯಾಕೆ ಹೋದೆ ಎಲ್ಲಿ ಹೋದೆ ಯಾರಿರುವರು ಜೊತೆಗೆಕೇಳಬಾರದ ಕೇಳಲಾರದ ಪ್ರಶ್ನೆಗಳಿಗೆ ಉತ್ತರಕ್ಕಾಗಿಅಲೆಯುತ್ತಿದ್ದೇನೆ ಈಗ ತುಂಗೆಯಿಂದ ದೂರಬಯಲು ಸೀಮೆಯ […]

ಕವಿತೆ ಕಾರ್ನರ್

ಮುಂದಾಗಲಿಲ್ಲ ಇಷ್ಟು ವರುಷ ಎದೆಯೊಳಗಡಗಿಸಿಟ್ಟ ಮಾತುಗಳ ಮೂಟೆಗಳ ಬಾರವನ್ನಿಳಿಸಿ ಹಗುರಾಗಲೆಂದೇ ಆ ಬೇಟಿಯನ್ನು ನಿಕ್ಕಿ ಮಾಡಿದ್ದರು ಅಪರಿಚಿತ ಊರಿನ ಜನಸಂದಣಿಯಿರದ ಜಾಗ ಹುಡುಕಿ ಕೂತರು. ಮಾತು ಶುರು ಮಾಡುವುದಾದರೂ ಯಾರೆಂಬುದು ಅರ್ಥವಾಗದೆ ಕುಳಿತೇ ಇದ್ದರೂ ದ್ಯಾನಸ್ಥ ಪ್ರತಿಮೆಗಳಂತೆ ಬೆಳಿಗ್ಗೆ ಬಂದು ಕೂತವರು ಮೊದಲ ಮಾತಾಡುವ ಹೊತ್ತಿಗೆಮದ್ಯಾಹ್ನವಾಗಿತ್ತು ‘ಹೇಳು’ ಕೇಳಿದವನಿಗೇನೆ ಅನುಮಾನವಿತ್ತು ತನ್ನ ದ್ವನಿಯವಳ ಕಿವಿ ತಲುಪಿದ್ದರ ಬಗ್ಗೆ ಅಷ್ಟುಮೆಲುವಾಗಿ ಮಾತಾಡಿದ್ದ ಏನಿದೆ ಹೇಳಲು ಎಲ್ಲ ಮಾಮೂಲು ಇವತ್ತು ಒಂದು ದಿನ ಬಿಡುವು ಮಾಡಿಕೊಂಡು ಬರುವಷ್ಟರಲ್ಲಿ ಸಾಕುಸಾಕಾಯ್ತು ಎಲ್ಲಿಗೆ […]

ಮತ್ತೆಂದೂ ಬರೆಯಲಾರೆ

ನಾನಿನ್ನು ಕಾಯಲಾರೆಮುರಿದ ಮೌನದೊಳಗೆ ತೇಲಿಬರುವನಿನ್ನ ಮಾತಿನೊಂದು ಹೆಣಕ್ಕಾಗಿನಾನಿನ್ನು ಕಾಯಲಾರೆಕುಸಿದುಬಿದ್ದ ನಂಬಿಕೆಯೊಂದುಮತ್ತೊಮ್ಮೆ ಚಿಗುರುವ ಚಣಕ್ಕಾಗಿನಾನಿನ್ನು ಕಾಯಲಾರೆ ಎಂದೂ ಅರಳಲಾರೆನೆಂದು ಮುನಿಸಿಕೊಂಡಹೂವು ಬಿರಿಯುವಾ ಕ್ಷಣಕ್ಕಾಗಿನಾನಿನ್ನು ಕಾಯಲಾರೆಸ್ವರ್ಗದ ನಿರೀಕ್ಷೆಯಲಿನಿತ್ಯ ನರಕದ ಬಾಗಿಲು ಕಾಯುವಯಾತನಾದಾಯಕ ಬದುಕಿನಂಗಳದಲ್ಲಿನಾನಿನ್ನು ಕಾಯಲಾರೆಹೊರದಾರಿಗಳೇ ಇರದೀ ನರಕದೆಡೆಗೆನಡೆದು ಬರುವೆಂಬ ನಂಬಿಕೆಯಲ್ಲಿ ನಾನಿನ್ನು ಬರೆಯಲಾರೆಬರೆದದ್ದೆಲ್ಲ ವ್ಯರ್ಥಪ್ರಲಾಪವಾಗಿಲೋಕನಿಂದಿತನಾದವನ ಕಂಡುನಗುವ ಜನರ ಬಾಯಿಗೆ ಅನ್ನವಾಗಿನರಳುವ ಕುನ್ನಿಯಾಗಿ! ಕಾಯಲಾರೆಬೇಡಲಾರೆಮರುಗಲಾರೆಮತ್ತೆಂದೂಬರೆಯಲಾರೆ.

ಕವಿತೆ ಕಾರ್ನರ್

ಆತ್ಮಸಾಕ್ಷಿ ನನ್ನ ಮುಂದೆ ನಡೆಎಂದು ನಾನು ಕೇಳುವುದಿಲ್ಲ ನನ್ನ ಹಿಂದೆ ಬಾಎಂದು ನಾನು ಹೇಳುವುದಿಲ್ಲ ನನ್ನ ಎಡಕ್ಕೆ ಇಲ್ಲಾ ಬಲಕ್ಕೆಬಾಎಂದು ನಾನು ಭೇಡುವುದಿಲ್ಲ! ನಾ ನಕ್ಕಾಗನನ್ನೊಡನೆ ನಗು ನಾ ಅತ್ತಾಗನನ್ನೊಡನೆ ಅಳು ನಾ ನಡೆವಾಗ ನನ್ನ ನೆರಳಾಗಿರುನಾ ನುಡಿವಾಗ ನನ್ನ ಕೊರಳಾಗಿರುಎಂದೂ ಕೇಳುವುದಿಲ್ಲ! ಹೇಗೆ ನಾನುನಡೆಯುತ್ತೇನೆಯೊನನ್ನ ಆತ್ಮಸಾಕ್ಷಿಯ ಹಾಗೆ! ನೀನೂ ನಡೆನಿನ್ನ ಆತ್ಮಸಾಕ್ಷಿಯ ಹಾಗೆಅಂತಲಾದರೂನಾನು ಯಾಕೆ ಹೇಳಲಿ?

ಯಾತನೆಯ ದಿನಗಳು

ಇವು ಯಾತನೆಯ ದಿನಗಳುರಾಜಕೀಯ ಪರಿಬಾಷೆಯಲ್ಲಿ ಬಣ್ಣಿಸಲಾಗದಂತಹ,ಕವಿತೆಗಳನ್ನಾಗಿಸಲೂ ಸಾದ್ಯವಿರದಂತಹ-ಕತೆಗಳನ್ನಾಗಿಸಲೂ ಸಂಯಮವಿರದಂತಹ ಕಾಲ! ಅದೆಲ್ಲೊ ಆಧಾರ್ ಲಿಂಕ್ ಇರದೆಹಸಿವಿನಿಂದ ಹೆಣ್ಣು ಮಗುವೊಂದು ಸಾಯುತ್ತದೆಅದೆಲ್ಲೋ ಹೆಣ್ಣೊಬ್ಬಳನ್ನುಅತ್ಯಾಚಾರ ಮಾಡಿ ಯೋನಿಗೆ ಸಲಾಕೆ ತೂರಿಸಿ ಕೊಲ್ಲುತ್ತಾರೆಅದೆಲ್ಲೋ ತುಂಬು ಬಸುರಿಯ ಗರ್ಭಸೀಳಿಹುಟ್ಟಬೇಕಿರುವ ಮಗುವ ಕೊಲ್ಲುತ್ತಾರೆ ಹಸಿದವಳೊಬ್ಬಳು ತುಂಡು ರೊಟ್ಟಿಕದ್ದಿದ್ದಕ್ಕೆ ಬೆತ್ತಲು ಮಾಡಿಮೆರವಣಿಗೆಮಾಡುತ್ತಾರೆಅದೆಲ್ಲೊ ಸತ್ತ ದನದ ಚರ್ಮಸುಲಿದ ತಪ್ಪಿಗೆ ದಲಿತ ಯುವಕರನ್ನುಥಳಿಸಲಾಗುತ್ತದೆಅದೆಲ್ಲೋ ಅವರುಗಳನ್ನೆದುರಿಸಿಮಾತಾಡಿದವರನ್ನು ಹತ್ಯೆಗಯ್ಯಲಾಗುತ್ತದೆ ಇವೆಲ್ಲವನ್ನೂ ಅದೆಲ್ಲೋಅಂತಂದುಕೊಂಡುಮೌನಕ್ಕೆ ಮುಗಿಬಿದ್ದ ನನ್ನಷಂಡತನಕ್ಕೆ ಸಾಕ್ಷಿಯಾಗಿಹೊಟ್ಟೆತುಂಬ ಉಂಡು ತೇಗುತ್ತೇನೆ ಗೆಳೆಯರೊಂದಿಗೆ ಹೊಸದೊಂದುವಾದವಿವಾದಕ್ಕಾಗಿ ಹೊಸಆಯುಧಗಳನ್ನು ಅನ್ವೇಷಿಸಲುಮುಂದಾಗುತ್ತೇನೆ,ಸವಕಲಾದ ಅವೇ ಹಳೆಯ ಶಬುದಗಳಮತ್ತೆ ಮಸೆದು ಮಚ್ಚಾಗಿಸಿಹಲ್ಲು […]

ಕವಿತೆ ಕಾರ್ನರ್

ಮತ್ತೆಂದೂ ಮಂಡಿಗೆ ಮೆಲ್ಲಲಿಲ್ಲ ಕತ್ತಲಾಗಲೆಂದೆ ಬೆಳಗಾಗುವುದು ಆರಲೆಂದೇ ದೀಪ ಉರಿಯುವುದು ಬಾಡಲೆಂದೇ ಹೂವು ಅರಳುವುದು ಕಮರಲೆಂದೆ ಕನಸು ಹುಟ್ಟುವುದು ಗೊತ್ತಿದ್ದರೂ  ಹಣತೆ ಹಚ್ಚಿಟ್ಟಳು ಬರಲಿರುವ ಸಖನಿಗಾಗಿ. ಮಲ್ಲೆ ಮೊಗ್ಗ ಮಾಲೆ ಹೆರಳಿಗೆ ಮುಡಿದು ನಿಂತಳು ಬರಲಿರುವ ಸಖನ ಮೂಗಿಗೆ ಘಮಿಸಲೆಂದು ಬರಡು ಎದೆಗೆ ವಸಂತನ ಕನವರಿಸಿ ಹೊಸ ಕನಸು ಚಿಗುರಿಸಿಕೊಂಡಳು ಬರುವ ಸಖನಿಗೊಂದಿಗೆ ಹಂಚಿಕೊಳ್ಳಲೆಂದು ಮುಸ್ಸಂಜೆಗೆ ಬಂದ ಸಖ ಹಚ್ಚಿಟ್ಟ ಹಣತೆ ಆರಿಸಿದ ಮಲ್ಲೆ ಮಾಲೆಯ ಹೊಸಕಿಹಾಕಿದ ಅದಾಗತಾನೆ ಚಿಗುರೊಡೆದಿದ್ದ ಕನಸುಗಳ ಚಿಗುರ  ಚಿವುಟಿ ಹಸಿಯೆದೆಯ ಮತ್ತೆ ಬರಡಾಗಿಸಿ ನಡೆದ ಮತ್ತೊಂದು ಎದೆಬಯಲ ಅರಸಿ ಅದೇ ಕಡೆ ಮತ್ತವಳೆಂದು ಹಣತೆ ಹಚ್ಚಿಡಲಿಲ್ಲ ಗಿಡದಿಂದ ಮಲ್ಲಿಗೆಯ ಬಿಡಿಸಿ ತರಲಿಲ್ಲ ಒಣಗಿದೆದೆಗೆ ನೀರು ಹಾಯಿಸಲಿಲ್ಲ ಕನಸಿರಲಿ ಮನಸಲ್ಲೂ ಮಂಡಿಗೆ ತಿನ್ನಲಿಲ್ಲ

Back To Top