Month: December 2020

ಯುಗ ಯುಗದ ಸೀತೆಯರು

ಯುಗ ಯುಗದ ಸೀತೆಯರು ರೇಶ್ಮಾಗುಳೇದಗುಡ್ಡಾಕರ್ ಇದು ಚರಿತ್ರೆಯ ಅವತಾರವಲ್ಲನಿತ್ಯವು ಉದ್ಭವಿಸುವಉದ್ವೇಗಗಳಿಗೆ ಇತಿಹಾಸಮರುಕಳಿಸುತ್ತಲೇತನ್ನ ಇರವ ಸಾಧಿಸುತ್ತದೆಯಲ್ಲ … ರಾಮನಿಲ್ಲದ ಸೀತೆಯರಿಗೆಕಮ್ಮಿ ಇಲ್ಲ ಈ ಜಗದಲ್ಲಿಒಡಲ ಕುಡಿಗಾಗಿ ಬದುಕಸವೆಸುವಳು ಕಂಡವರಸೆರಗಲ್ಲಿ ಗಂಡ ಬಿದ್ದರು ತನ್ನಬೆವರ ಹನಿಯ ದೀಪವಾಗಿಸಿಮನೆಯ ಬೆಳಗುವಳು …. ನೊರೆಂಟು ಮಾತುಗಳುಹಾದಿ – ಬೀದಿಯ ರಂಪಗಳುಎಷ್ಟಿದ್ದರು ಮನವದು ಗಟ್ಟಿಯಾಗುತ್ತಲೆಸಾಗುವದು ಕಲ್ಲು ಬಂಡೆಯನ್ನು ಮೀರಿಸಿಬದುಕಿನ ದಾರಿಯ ಹಿಡಿಯುವುದು ಸಮಯದೊಂದಿಗೆ ಓಡಿತಿಂಗಳ ಪಗಾರವನು ಕಾಪಿಟ್ಟುಪುಟ್ಟ ಪುಟ್ಟ ಕನಸ ನೇರವೇರಿಸಿತನ್ನ ಒಡಲ ಸಿರಿಗಾಗಿ ನಗುವ ಕಾಣುವಳುಎಲ್ಲ‌ ನೋವ ಮರೆತು ….. ತ್ರೇತಾಯುಗದ ಸೀತೆಗೆ […]

ಗಜಲ್

ಗಜಲ್ ಮರುಳಸಿದ್ದಪ್ಪ ದೊಡ್ಡಮನಿ ಹಸಿದ ಕೂಸಿಗೆ ಹಾಲಿಲ್ಲದೆ ಅಳುತಿದೆ ಸಖಿಸೊಸಿದ ಹಾಲಿಗೆ ವಿಷವು ಬೆರೆತಿದೆ ಸಖಿ ದುಡಿವ ಕೈಗೆ ಕೆಲಸವಿಲ್ಲದೆ ನೊಂದಿದೆ ಬದುಕುಗಗನಕ್ಕೆರಿದ ಬೆಲೆ ಕಂಡು ಮನ ಒದ್ದಾಡುತಿದೆ ಸಖಿ ಉಳ್ಳವರ ಉಡಿ ತುಂಬಿ ತುಳುಕ್ಯಾಡಿ ಹೋಗಿವೆಬಡವರ ಮನೆ ದೀಪಕೆ ಎಣ್ಣೆಇಲ್ಲದೆ ಆರುತಿದೆ ಸಖಿ ಎಲ್ಲಿಯ ತನಕ ಹುಚ್ಚಾಟ ಕಚ್ಚಾಟ ತಿಳಿಯದುಮನು ಕುಲಕೆ ಹೊಸೆದು ಬತ್ತಿ ಇಡುತಿದೆ ಸಖಿ ಮರುಳ ನಮ್ಮನಾಳುವ ದೊರೆಗೆ ಸಿರಿವಂತರ ಚಿಂತಿನಾಡು ಹಾಳಾಗುತ ನಾಳೆ ಹತ್ತಿರ ಬರುತಿದೆ ಸಖಿ ******************************************

ಅಂಕಣ ಬರಹ ಕತೆಗಾರ ರಾಮಕೃಷ್ಣ ಗುಂದಿ ಅವರ ಆತ್ಮಕಥೆ ….5 ಅಪ್ಪ ಅವ್ವನ ಅದ್ಧೂರಿ ಮದುವೆ             ಜೋಯ್ಡಾದಲ್ಲಿ ಶಾನುಭೋಗಿಕೆಯ ಕೆಲಸ ತುಂಬಾ ಅನುಕೂಲಕರವಾಗಿತ್ತು. ತಿಂಗಳ ಸಂಬಳದಲ್ಲಿ ಒಂದು ಪೈಸೆಯನ್ನೂ ಖರ್ಚುಮಾಡಗೊಡದೆ ಹಳ್ಳಿಯ ರೈತಾಪಿ ಜನ ದವಸ-ಧಾನ್ಯ ತರಕಾರಿಗಳನ್ನೆಲ್ಲ ತಂದುಕೊಟ್ಟು ಸಹಕರಿಸುತ್ತಿದ್ದರಂತೆ. ಚಾವಡಿಯ ಒಂದು ಮೂಲೆಯಲ್ಲಿಯೇ ವಾಸ್ತವ್ಯಕ್ಕೆ ಅವಕಾಶವೂ ಇತ್ತು. ಬೆಟ್ಟದ ಹಳ್ಳಿಗಾಡಿನ ಹಳೆಯ ಕಟ್ಟಡವಾದ್ದರಿಂದ ಸಹಜವಾಗಿಯೇ ಕೋಣೆ ತುಂಬಾ ಬಿಲಗಳಿದ್ದವು. ಆ ಬಿಲಗಳಲ್ಲಿ ಆಗಾಗ ಕಾಣಿಸಿಕೊಳ್ಳುವ ಇಲಿ ಹೆಗ್ಗಣ ಮತ್ತು ಅವುಗಳ ವಾಸನೆ ಹಿಡಿದು ಅಲ್ಲಿಗೆ […]

ಮದರಂಗಿ (ಮೆಹೆಂದಿ)

ಮದರಂಗಿ (ಮೆಹೆಂದಿ) ಮದರಂಗಿಯಲ್ಲಿ ಮನಸ್ಸಿನ ರಂಗು ಮೂಡಿದೆ. ಆಶಾ ಸಿದ್ದಲಿಂಗಯ್ಯ ಮದುವೆಯ ಸಂದರ್ಭದಲ್ಲಿ ಮದುಮಗ ಅಥವಾ ಮದುಮಗಳಿಗೆ ಕೈಗೆ ಹಚ್ಚುವ ಪ್ರಾಕೃತಿಕ ಬಣ್ಣ. ಎಂದರೆ ಇದೊಂದು ಎಲ್ಲರಿಗೂ ಇಷ್ಟವಾಗುವ ನಿಸರ್ಗದ ಒಂದು ಗಿಡವಾಗಿದೆ. ಔಷಧೀಯ ಗುಣವುಳ್ಳ ಗಿಡವಾಗಿದ್ದು, ಇದರ ಸೊಪ್ಪನ್ನು ಔಷಧಕ್ಕೆ ಬಳಸುತ್ತಾರೆ. ಭಾರತೀಯ ಸಂಪ್ರದಾಯದಲ್ಲಿ ಕೈಗಳಿಗೆ ಬಣ್ಣವನ್ನು ಹಚ್ಚಿಕೊಳ್ಳುವ ರೂಢಿ ಇದೆ. ಮದರಂಗಿ ತಯಾರಿಕೆ ಮದರಂಗಿಯನ್ನು ಕೈಗಳಿಗೆ ಹಚ್ಚಿಕೊಳ್ಳುವುದಾದರೆ, ಮದರಂಗಿಯ ಸೊಪ್ಪು, ನಿಂಬೆಹಣ್ಣಿನ ರಸವನ್ನು ಸೇರಿಸಿ ಚೆನ್ನಾಗಿ ಅರೆದು, ಕೈಗಳಿಗೆ ಹಚ್ಚಬೇಕು. ವಿಜ್ಞಾನ ಮುಂದುವರಿದ ಹಾಗೆ […]

ಚಂದಿರನ ಬೆಳದಿಂಗಳಲ್ಲಿ

ಭಾವಲಹರಿ… ಭಾವಲಹರಿ… ರಶ್ಮಿ.ಎಸ್. ಒಬ್ಬಂಟಿಯೆನಿಸಿದಾಗಲೆಲ್ಲ ಬಾಲ್ಕನಿಗೆ ಬಂದು ನಿಲ್ತೇನಿ. ಅದೆಷ್ಟು ದೂರದ ಗೊತ್ತಿಲ್ಲ.. ಅಷ್ಟೂ ದೂರದಿಂದ ನಕ್ಷತ್ರವೊಂದು ಮಿಣಮಿಣ ಅಂತ ಮಿಣುಕ್ತದ. ಕಣ್ಣುಪಿಳುಕಿಸಿ, ಕಣ್ಣಾಗ ನಗ್ತದ. ನನ್ನ ಮನಿ ಮುಂದಿನ ಬೇವಿನ ಮರದ ಎಲೆಗಳು ತಣ್ಣಗ ಗಾಳಿ ಸೂಸ್ತದ. ಅದರೊಳಗೊಂದು ಕಹಿಯ ಕಂಪೂ ಇರ್ತದ. ಇರುಳಿನ ತಂಪೂ ಇರ್ತದ. ಅಪಾರ್ಟ್‌ಮೆಂಟಿನಾಗ ಸಾಕಿದ್ದ ನಾಯಿ ಚೂರಿ ಬಂದು ಬೊಗಳ್ತದ. ‘ಚೂರಿ ಮಲಗೂದು ಬ್ಯಾಡೇನು.. ಅಂದ್ರ ಸಾಕು..’ ಪಾಪ ತನಗೆ ಅನ್ಕೊಂಡು ಸುಮ್ನಾಗಿ ಒಳಗ ಹೋಗ್ತದ. ಮತ್ತದೆ ರಾತ್ರಿ, ಮತ್ತದೆ […]

ಗಝಲ್

ಗಝಲ್ ನೂರುಲ್ಲಾ ತ್ಯಾಮಗೊಂಡ್ಲು ನಿನ್ನ ಶಹರಿನಲಿ ಬೆಳಕಿಗೆ ಕಾಲು ಮೂಡಿದಾಗ ನೀನಿದ್ದೆಆ ಬೃಂದಾವನದಲಿ ದುಂಬಿ ಮಕರಂದ ಹುಡುಕುವಾಗ ನೀನಿದ್ದೆ ಕಣ್ಣ ಕೊಂಬೆಯ ಮೇಲೆ ನಕ್ಷತ್ರ ಮಿನುಗುವ ಹೊತ್ತುಭರವಸೆಯ ಕಿರಣವೊಂದು ರೆಪ್ಪೆ ಮೇಲೆ ಹರಿದಾಗ ನೀನಿದ್ದೆ ಯಾವುದೊ ವಿಳಾಸವಿಲ್ಲದ ದಾರಿಯಲಿ ಕಾಲುಗಳು ಎಡವಿದವು ನಿಜಆದರೆ ನೀ ಹೊರಳಿ ಹೋಗಿದ್ದ ದಾರಿಯಲಿ ಅತ್ತರು ಘಮಿಸಿದಾಗ ನೀನಿದ್ದೆ ಯಾವುದದು ಮರೆಮಾಚುವ ವಚನ ಕಾಡಿತ್ತೊ ಅರಿಯೆಆದರೂ ನಿನ್ನ ಆ ಮರೆಮಾಚಿಕೆ ವಿಫಲವಾದಾಗ ನೀನಿದ್ದೆ ಗೊತ್ತು ನಿರೀಕ್ಷೆಗಳೆಲ್ಲ ಹುಸಿಯಾಗದು ಎಂದೂ ‘ಸಾಘರ್’ಕಾಡುವಿಕೆಗೂ ಒಂದು ಮಿತಿಯಿದೆ […]

ಅಂಕಣ ಬರಹ ರಂಗರಂಗೋಲಿ-5 ಪಾತ್ರೆ ತುಂಬಿದ ಇನ್ನೆರಡು ಪಾತ್ರಗಳು ಪೂರ್ಣ… ಪೂ..ರ್ಣ.. ಅವರು ಕರೆಯುತ್ತಿದ್ದಾರೆ!. ತೆಳ್ಳಗಿನ ಸ್ವರವದು. ಉದ್ದ ಜಗಲಿಯನ್ನು ಹಂಚಿಕೊಂಡ ಮೂರನೆಯ ಹೊಸ್ತಿಲಿನ ಕೊನೆಯ ಕೋಣೆಯದು. ಮುಸ್ಸಂಜೆ ಸಮಯ,  ಒಬ್ಬರೇ ಆ‌ ಮರದ ಕಿಟಕಿಯ ಬಳಿ ಕೂತು  ತಿನ್ನುತ್ತಿದ್ದದ್ದು ಒಂದು ಆಮ್ಲೇಟ್. ಅದೂ ಚಿಕ್ಕದು. ಅದಕ್ಕೆ ಬಹಳ ಹೊತ್ತು ತೆಗೆದುಕೊಳ್ಳುತ್ತಿದ್ದರು.  ಆ ಸಮಯ ಮಾತ್ರ ಅವರು ನನ್ನ ಹೆಸರು ಕೂಗುತ್ತಿದ್ದರು. ಮನೆಯ ಹಿಂಬದಿಗೆ ಆ ಕಿಟಕಿಯ ಅರೆ ಕತ್ತಲಿಗೆ ನಾನು ಓಡುತ್ತಿದ್ದೆ. ಕಡ್ಡಿಯಂತಹ ಬಿಳೀ ಬೆರಳುಗಳು. […]

ಇಬ್ಬನಿಯ ಹನಿಗಳು

ಇಬ್ಬನಿಯ ಹನಿಗಳು ನಾಗರಾಜ ಹರಪನಹಳ್ಳಿ. -1-ರಂಗೇರಿತು ಕೆನ್ನೆನೀ ಬಂದಸುಳಿವು ಸಿಕ್ಕಿರಬೇಕುಒಲವಿಗೆ -2-ಎಲೆ ಅಲುಗುತ್ತಿಲ್ಲಕತ್ತಲ ಆವರಣಭೂಮಿಒಬ್ಬಂಟಿಯಾಗಿದೆ -3-ಹೆಜ್ಜೆಗಳಿಗೆಎದೆಗೊಟ್ಟಿದೆದಾರಿಒಲವಿಲ್ಲದ ಬದುಕುಮೌನ ಇರುಳು -4-ಹಕ್ಕಿಗಳ ಕೊರಳಒಲವುಂಡಮರ ಧನ್ಯತೆಅನುಭವಿಸಿತುಒಲವ ಗಾಳಿತಲೆದೂಗಿತು -5- ಉಸಿರು ಕದ್ದವಳೇಎಲ್ಲಿಹೋದೆಉಸಿರುಬೆಸೆಯಬೇಕಿದೆಇಲ್ಲಿಇಲ್ಲೇ ಪಕ್ಕದಲ್ಲಿಪಾರಿವಾಳಗಳುಚಳಿಗೆ ಗುಟುರುಹಾಕಿಬೆಸೆದುಕೊಂಡಿವೆ -6-ಚಳಿಗೆದಾರಿ ಸಹಮುದುಡಿಕೊಂಡಿದೆಉರಿವ ಒಲೆಯಮುಂದೆಹೊಸೆವ ಕೈಗಳುವಿರಹಗೊಂಡಿವೆ -7-ಕೆನ್ನೆಯಮೇಲಿನ ಕೈ ಬೆರಳುಬಿಸಿ ಉಸಿರನೆನೆದುಪಿಸು ಮಾತಬಯಸಿತು… -8-ಬೆಳಗ್ಗೆ ಕೆನ್ನೆಗೆತಾಗಿದ ತಣ್ಣೀರುಎಳೆ ಬಿಸಿಲಸ್ಪರ್ಶಆಕೆಯನೆನಪಿಸಿದವು -9- ಕಪ್ಪು ಆಗಸದಿಬೆಳುದಿಂಗಳಹಾಸಿಗೆಆಕೆಯ ಸೆರಗು -10- ಬಿಸಿ ಬಿಸಿಚಹಾ ದೊಂದಿಗೆಎದೆಗೆ ಬಿತ್ತುಸಾಂಸ್ಕೃತಿಕ ಕಣ್ಣು ***********************

ನಿರಾಕಾರ ಶಕ್ತಿ

ನಿರಾಕಾರ ಶಕ್ತಿ ಮಾಲಾ.ಮ.ಅಕ್ಕಿಶೆಟ್ಟಿ. ವಿಘ್ನಗಳ ನಾಶ,ಸುಖ ದುಃಖ ಕೊಡುವಪರೀಕ್ಷೆ ನಡೆಸುವ, ಸಕಲ ಪೊರೆವಶ್ರೇಷ್ಠ ದೇವ ದೇವತೆಗಳು ಅನಂತದಲಿ ಹುಲುಮಾನವನ ಬುದ್ಧಿ ನಿನ್ನ ಸೃಷ್ಟಿಕೈಚಳಕ ನಿಮಗೊಂದು ಆಕಾರದ ಕೊಡುಗೆಬಿಂಕದಲಿ ಬೀಗುವ ನಿಮ್ಮನ್ನು ನೋಡಿ ಅಭಯ ಹಸ್ತ ಸದಾ ನಮಗೆಹಣೆ ಪಟ್ಟಿ ಮೂರ್ಖರುಬಟ್ಟೆ ಬರೆಗಳಿಂದ,ಬಂ‌ಗಾರ ಬೆಳ್ಳಿಯಿಂದವಿಶಾಲ ಎಕರೆಯಲ್ಲಿ ದೊಡ್ಡ ಗುಡಿ ಕಟ್ಟಿಸಿಭಾರೀ ವಜ್ಜನಿನ ಕೀಲಿ ಹಾಕಿ, ಕಾವಲುಗಾರ ನೇಮಿಸಿನಾವೇ ನಿನ್ನನ್ನು ರಕ್ಷಿಸಿದ್ದೇವೆಂದರೆ ದೇವರು ದಿನ್ನರುಗಳು ಕಪೋಲಕಲ್ಪಿತವಾದಗಳು ಹೆಚ್ಚುಇರಲಿ, ಕಾಣದ ಶಕ್ತಿ ಜಗತ್ತಿನಲ್ಲಿನಿನ್ನ ರೂಪದಲ್ಲಿ ಇರಬಾರದೇಕೆ? ರಕ್ಷಿಸುಸದಾ ನಮ್ಮನ್ನು ಹೀಗೆಯೇನಿರಾಕಾರ ಶಕ್ತಿಗೆ […]

ಗಜಲ್

ಗಜಲ್ ಅರುಣಾ ನರೇಂದ್ರ ನೀ ಹಚ್ಚಿಕೊಳ್ಳುವ ಅತ್ತರಿನದೆ ವಾಸನೆ ಬರುತಿದೆ ಎಲ್ಲಿರುವಿಮೋಹಬ್ಬತ್ತಿನ ಈ ಹಾಡಲ್ಲಿ ನಿನ್ನದೇ ಧ್ವನಿ ಕೇಳುತಿದೆ ಎಲ್ಲಿರುವಿ ಮುಂಜಾನೆಯ ಮಂಜಿನ ಹನಿಗೂ ಕಣ್ಣ ಕನಸುಗಳಿವೆಆಗಸದ ಹಾಳೆಯಲಿ ನೀ ಬರೆದ ಚಿತ್ರ ಕಾಣುತಿದೆ ಎಲ್ಲಿರುವಿ ಮುಂಗುರುಳ ತೀಡುವ ತಂಗಾಳಿ ಇಂದೇಕೋ ಹಠ ಮಾಡುತಿದೆಇಲ್ಲಿ ನೀ ನಡೆದಾಡಿದ ಹೆಜ್ಜೆಗಳ ಗುರುತಿದೆ ಎಲ್ಲಿರುವಿ ಧುಮ್ಮಿಕ್ಕುವ ಪ್ರವಾಹಕ್ಕೆ ಗೋಡೆ ಕಟ್ಟಲಾಗುತ್ತಿಲ್ಲನಿನ್ನ ನಗೆಯ ಅಲೆ ಎದೆಗೆ ಅಪ್ಪುತಿದೆ ಎಲ್ಲಿರುವಿ ಎದುರಿನಲಿ ಸಿಕ್ಕು ಬಿಡು ಒಮ್ಮೆ ಹೀಗೇಕೆ ಹಿಂಬಾಲಿಸುತ್ತಿಅರುಣಾಳ ಅಂತರಾತ್ಮ ನಿನ್ನನ್ನೇ ಧ್ಯಾನಿಸುತಿದೆ […]

Back To Top