Category: ಪುಸ್ತಕ ಸಂಗಾತಿ

ಪುಸ್ತಕ ಸಂಗಾತಿ

ಪುಸ್ತಕ ವಿಮರ್ಶೆ

ಪುಟ್ಟ ಗೌರಿ ಪುಟ್ಟ ಗೌರಿ : ಕುರಿತು ಕೆಲವು ಮಾತುಗಳು ಹೊಟ್ಟೆಯೊಳಗಡೆ ಗೋರಿ ಕಟ್ಟಿಕೊಂಡಿರುವವರೆ, ಹೊಡೆಯಲೆತ್ತಿರುವ ಕೈ ಹೊತ್ತಿ ಹೊಗೆಯುವೆದೆ, ವಿಷವುಗುಳಿ ನಗುವ ನಾಲಿಗೆ, ಎಲೆಲೇ, ತಡೆಯಿರಿ, ತಡೆಹಿಡಿಯಿರಿ: ಮಗು ನಗುತ್ತಿದೆ, ಮಗು ಆಡುತ್ತಿದೆ.               ( ಒಳ್ಳೆತನ ಸಹಜವೇನಲ್ಲ – ಎಂ ಗೋಪಾಲಕೃಷ್ಣ ಅಡಿಗ ) ಮೇಲಿನ ಸಾಲುಗಳು ಪ್ರತೀಕ್ಷಣವೂ ಎಚ್ಚರಿಸುವ, ಒಂದಷ್ಟು ಅಸಹಜ ಕಾರ್ಯಗಳನ್ನು ಒಳಗಿಂದ ತಡೆವಂತೆ ಮಾಡುವ ಕಾರ್ಯವನ್ನು ಮಾಡುತ್ತಾ ಜಾಗೃತವಾಗಿಟ್ಟಿದೆ. ದುಷ್ಟ ಮನಸ್ಥಿತಿ ಅಡಿಗರು ಬರೆದು ಹಾದಿ ಕಾಣಿಸಿಕೊಟ್ಟ ನಂತರೂ ಬದಲಾಗದಿರುವುದು […]

ಲಂಕೇಶ್ ಮೋಹಕ ರೂಪಕಗಳ ನಡುವೆ

ಪುಸ್ತಕ ಪರಿಚಯ ಲಂಕೇಶ್ ಮೋಹಕ ರೂಪಕಗಳ ನಡುವೆ ಲೇಖಕರು:-ಶೂದ್ರ ಶ್ರೀನಿವಾಸ,ಪ್ರಕಟನೆ-ಪಲ್ಲವ ಪ್ರಕಾಶನ,೯೪೮೦೩೫೩೫೭,ಪುಟ-೨೮೨,ಬೆಲೆ-೨೫೦/- ..     ನಾನು ಪಿಯುನಲ್ಲಿ ಓದುವಾಗಲೇ ಲಂಕೇಶ್ ಪತ್ರಿಕೆ ಗುಂ ಬಂ ಎಂಬ ಹೊಸ ನುಡಿಗಟ್ಟಿನೊಂದಿಗೆ ಕನ್ನಡದ ಜಾಣ ಜಾಣೆಯರಿಗಾಗಿ ಎಂಬ ಟ್ಯಾಗ್ ಲೈನ್ ದೊಂದಿಗೆ ಅದೇ ಆರಂಭವಾಗಿತ್ತು.ಪ್ರಥಮ ಸಂಚಿಕೆಯಿಂದ ಆರಂಭಿಸಿ ಕೊನೆಯ ಸಂಚಿಕೆಯವರೆಗೂ ಬಿಟ್ಟು ಬಿಡದೇ ಓದಿದ ನನಗೆ ಅತ್ಯಂತ ಬೆಳೆಯುವ ವಯಸ್ಸಿನಲ್ಲಿ ಪ್ರಭಾವ ಬೀರಿದವರು ಲಂಕೇಶ್ ಹಾಗೂ ಅವರ ಪತ್ರಿಕೆಯ ಬಳಗದ ಆಗಿನ ಎಲ್ಲ ಲೇಖಕರು,ವರದಿಗಾರರು.ಇಡೀ ಪತ್ರಿಕೆಯ ಒಂದಕ್ಷರವು ಬಿಡದೇ ಓದುತ್ತಿದ್ದೆ.ಲಂಕೇಶ, […]

ಕನಸುಗಳು ಖಾಸಗಿ

ಪುಸ್ತಕ ಪರಿಚಯ ಕನಸುಗಳು ಖಾಸಗಿ ಕತ್ತಲದಾರಿಯ ಸಂದಿಗೊಂದಿಗಳಲ್ಲಿ ಕರೆದೊಯ್ಯುವ  ‘ಕನಸುಗಳು ಖಾಸಗಿ’          ಆಧುನಿಕ ಜಗತ್ತಿನ ಕರಾಳ ಮುಖಗಳನ್ನು ‘ಕನಸುಗಳು ಖಾಸಗಿ’ ಎಂಬ ತಮ್ಮ ಒಂಬತ್ತು ಕಥೆಗಳ ಸಂಕಲನದ ಮೂಲಕ   ನರೇಂದ್ರ ಪೈಯವರು  ಕಾಣಿಸಿಕೊಟ್ಟಿದ್ದಾರೆ.. ಇಲ್ಲಿರುವುದು ಕನಸುಗಳು ಅನ್ನುವುದಕ್ಕಿಂತ   ಕಥೆಗಳನ್ನು ಓದುತ್ತಿರುವಾಗ ಕಣ್ಣ ಮುಂದೆ ರುದ್ರ ನರ್ತನ ಮಾಡುವ ದುಸ್ವಪ್ನಗಳು ಅನ್ನುವುದು ಹೆಚ್ಚು ಸೂಕ್ತ .  ವೇಗದ ಮೇಲಿನ ನಿಯಂತ್ರಣವನ್ನೇ ಕಳೆದುಕೊಳ್ಳು ತ್ತಿರುವ ಇಂದಿನ ಜಗತ್ತಿನಲ್ಲಿ  ಸಂಬಂಧಗಳು  ಛಿದ್ರಗೊಂಡಿವೆ, ಸ್ವಾರ್ಥ ಮೇರೆ ಮೀರಿದೆ, ಹಿಂಸೆ ಹದ್ದು ಮೀರಿದೆ, […]

ಪುಸ್ತಕ ಪರಿಚಯ

ಬೌದ್ಧ ಮದ್ಯಮಮಾರ್ಗ ( ಬುದ್ಧ ನಡೆ-೧)             ಪ್ರಜ್ಞಾಪಾರಮಿತ ಹೃದಯ ಸೂತ್ರ(ಬುದ್ಧ ನಡೆ-೨)       ಲಾವ್ ತ್ಸು ದಾವ್ ದ ಜಿಂಗ್ ಸೂತ್ರಗಳು ( ಬುದ್ಧನಡೆ-೩)      ಮನಮಗ್ನತೆ( ಬುದ್ದನಡೆ -೪) ರೇಶ್ಮಾಗುಳೇದಗುಡ್ಡಾಕರ್  ಬೌದ್ಧ ಮದ್ಯಮಮಾರ್ಗ ( ಬುದ್ಧ ನಡೆ-೧)              ಪ್ರಜ್ಞಾಪಾರಮಿತ ಹೃದಯ ಸೂತ್ರ(ಬುದ್ಧ ನಡೆ-೨)             ಲಾವ್ ತ್ಸು ದಾವ್ ದ ಜಿಂಗ್ ಸೂತ್ರಗಳು ( ಬುದ್ಧನಡೆ-೩)       ಮನಮಗ್ನತೆ( ಬುದ್ದನಡೆ -೪) ಬೆಲೆ : 170 ರೂ. ನೆಮ್ಮದಿಯ ಆಗರ ಬುದ್ಧ ಗುರುವಿನ ಮಾತು ,ಬರಹಗಳು .ಇಂದಿನ ಅಂತರ್ಜಾಲದ ತಾಣದಲ್ಲಿ‌ಯೂ ಬುದ್ಧಗುರುವಿನ ಕೋಟ್ಗಳು ಒಂದು ಪವರ್ ಫುಲ್ tonic ನಂತೆ ಓದುಗರಿಗೆ ಎದುರಾಗುತ್ತದೆ . ಬದುಕಿನ ಒತ್ತಡ,ನಿರಾಸೆ ,ನೋವಿಗೆ  ಸಮಾಧಾನ ನೀಡುತ್ತವೆ, ಇಂತಹ ಬುದ್ಧಗುರುವಿನ […]

ಮಲ್ಲಿಕಾರ್ಜುನ ಕಡಕೋಳ ಅವರ ‘ಯಡ್ರಾಮಿ ಸೀಮೆ ಕಥನಗಳು’ ಪುಸ್ತಕಕ್ಕೆ ಕಲ್ಯಾಣ ಕರ್ನಾಟಕ ಪ್ರಶಸ್ತಿ

ಮಲ್ಲಿಕಾರ್ಜುನ ಕಡಕೋಳ ಅವರ ‘ಯಡ್ರಾಮಿ ಸೀಮೆ ಕಥನಗಳು’ ಪುಸ್ತಕಕ್ಕೆ ಕಲ್ಯಾಣ ಕರ್ನಾಟಕ ಪ್ರಶಸ್ತಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಬುರ್ಗಿ ವಿಶ್ವವಿದ್ಯಾಲಯ ನೀಡುವ ಕಲ್ಯಾಣ ಕರ್ನಾಟಕ ಪ್ರದೇಶದ ಪುಸ್ತಕ ಬಹುಮಾನ ಹಾಗೂ ಲೇಖಕ/ ಪ್ರಕಾಶಕರ ಗೌರವ ಪ್ರಶಸ್ತಿಯನ್ನು ಇಂದು ಘೋಷಿಸಲಾಗಿದೆ. ಹಿರಿಯ ಸಾಹಿತಿ ಮಲ್ಲಿಕಾರ್ಜುನ ಕಡಕೋಳ ಅವರ ‘ಯಡ್ರಾಮಿ ಸೀಮೆ ಕಥನಗಳು’ ಪುಸ್ತಕಕ್ಕೆ ಕಲ್ಯಾಣ ಕರ್ನಾಟಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ ಎಂದು ಕಲಬುರ್ಗಿ ವಿಶ್ವವಿದ್ಯಾಲಯದ ಪ್ರಸಾರಾಂಗದ ನಿರ್ದೇಶಕರಾದ ಎಚ್ ಟಿ ಪೋತೆ ಅವರು ತಿಳಿಸಿದರು. ಕಡಕೋಳ ಅವರೊಡನೆ ಅವಧಿ’ಯ […]

ಕಾಗೆ ಮುಟ್ಟಿದ ನೀರು

ಪುಸ್ತಕ ಪರಿಚಯ ಕಾಗೆ ಮುಟ್ಟಿದ ನೀರು ಪುಸ್ತಕ:- ಕಾಗೆ ಮುಟ್ಟಿದ ನೀರುಲೇಖಕರು:-ಡಾ.ಪುರುಷೋತ್ತಮ ಬಿಳಿಮಲೆಪ್ರಕಾಶನ:-ಅಹರ್ನಿಶಿ ಪ್ರಕಾಶನ,ಶಿವಮೊಗ್ಗ ಕಾಗೆ ಮುಟ್ಟಿದ ನೀರು ಪುಸ್ತಕ ಅನೇಕ ಓದುಗ ಪ್ರಭುಗಳ ಉತ್ತಮ ಅನಿಸಿಕೆಗಳ ಓದಿ ತೀರಾ ಮನಸ್ಸಾಗಿ ಓದಲು ಹಂಬಲ ಹೆಚ್ಚಾಗಿ,ತೀರಾ ಕಡಿಮೆ ರಿಯಾಯತಿಯಲ್ಲಿ ಪುಸ್ತಕ ಕೊಡುವುದಾದರೆ ಕಳಿಸಿ ಎಂದು ಪ್ರಕಾಶಕರಿಗೆ ಸಂದೇಶವನ್ನು ಕಳಿಸಿದ ಕೂಡಲೇ, ಆಯ್ತು ವಿಳಾಸ ಬರಲಿ ಎಂದು ಅತ್ತಕಡೆಯಿಂದ ಕಳುಹಿಸಿ ಕೊಟ್ಟರು.ಆತ್ಮಕತೆ ನನ್ನಿಷ್ಟದ ಒಂದು ಓದುವಿನ‌ ವಿಭಾಗ. ಪುಸ್ತಕವೂ ಕೈಸೇರಿತು, ಸಿಕ್ಕಗಳಿಗೆ ಮೊದಲು ಬೆನ್ನುಡಿ-ಮುನ್ನುಡಿ ಓದುವ ಹವ್ಯಾಸ ನನ್ನದಾಗಿದೆ. […]

ಗಿರಗಿಟ್ಟಿ

ಪುಸ್ತಕ ಪರಿಚಯ ಗಿರಗಿಟ್ಟಿ ಲೇಖಕರು: ತಮ್ಮಣ್ಣ ಬೀಗಾರ. ‌ಪ್ರಕಾಶನ: ಪ್ರೇಮ ಪ್ರಕಾಶನ ಮೈಸೂರು.ಮೊಬೈಲ ನಂ: ೯೮೮೬೦೨೬೦೮೫ಪುಟ: ೧೦೦.ಬೆಲೆ:೯೦ ರೂ.ಪ್ರಕಟಣೆ:೨೦೨೦ ಹಿರಿಯ ಕಿರಿಯರೆಲ್ಲ ಓದಬೇಕಾದ “ ಗಿರಗಿಟ್ಟಿ” ತಮ್ಮಣ್ಣ ಬೀಗಾರ ಅವರು ಮಕ್ಕಳಿಗಾಗಿ ಕತೆ, ಕವಿತೆ, ಪ್ರಬಂಧ, ಕಾದಂಬರಿಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಹಿರಿಯ ಸಾಹಿತಿಗಳು. ಕಿರಿಯರನ್ನೂ ಗೌರವಿಸುವ ಸೌಮ್ಯ ಸ್ವಭಾವದವರು. ಹೀಗೆ “ಪ್ರಾಗಿ” ಕತೆಯ ಸನ್ನಿವೇಶ ಕುರಿತು ಮಾತನಾಡುವಾಗ ‘ಹುಡುಗರು ಕಪ್ಪೆಗೆ ಹಿಂಸೆ ಮಾಡುವುದು ಸಹಜ. ಅದನ್ನು ನೀವೇಕೆ ಬರವಣಿಗೆಯಲ್ಲಿ ಕಾಣಿಸಲಿಲ್ಲ ?’ಎನ್ನುವ […]

ಇರುಳ ಹೆರಳು

ಪುಸ್ತಕ ಪರಿಚಯ ಮನ ಸೆಳೆವ ಇರುಳ ಹೆರಳು [11:15 am, 11/10/2020] YAKOLLY: ತಮ್ಮ‌ಮೊದಲ ಹನಿಗವನ ಸಂಕಲನ ಪಿರುತಿ ಹನಿಗಳು ಸಂಕಲನಕ್ಕೆ  ಅತ್ಯತ್ತಮ ಸಂಕಲನ ಪ್ರಶಸ್ತಿ ಪಡೆದ ಪ್ರತಿಭಾವಂತ ಕವಿ ನೀ ಶ್ರೀಶೈಲ ಅವರು ಕವಿಯಾಗಿ ಮಾತ್ರವಲ್ಲ,ಒಳ್ಳೆಯ ಗೆಳೆಯನಾಗಿ ಹೃದಯ ಗೆದ್ದವರು.ಅವರ ಭಾವದ ಪಲಕುಗಳನ್ನು ದಿನವೂ ಮುಖ ಪುಸ್ತಕದಲ್ಲಿ ಓದಿ ಮರುಳಾಗುತ್ತಿರುವವನು ನಾನು.ಹನಿಗವನ ಲೋಕದಲ್ಲಿ ತುಂಬ ಸುಂದರವಾದ ರಚನೆಗಳನ್ನೇ ಕೊಟ್ಟಿರುವ ಶ್ರೀಶೈಲ ಅವರ ಕವಿತೆಯ ತುಂಬ ತುಂಬಿದ ಪ್ರೀತಿಯ ಬೆಳಕನ್ನು ಬೊಗಸೆ ತುಂಬಿ ಹಿಡಿಯಲೂ ಆಗದೆ ನನ್ನ […]

ಹಿಮದೊಡಲ ಬೆಂಕಿ

ಪುಸ್ತಕ ಪರಿಚಯ ಹಿಮದೊಡಲ ಬೆಂಕಿ ಹಿಮದೊಡಲ ಬೆಂಕಿ.ಗಜ಼ಲ್ ಸಂಕಲನ.ಬೆಲೆ:- 80/-ಲೇಖಕರು :-ಅರುಣಾ ನರೇಂದ್ರಸಿದ್ಧಾರ್ಥ ಪ್ರಕಾಶನ ,ನಂದಿ ನಗರ , ಕೊಪ್ಪಳ. ಅರುಣಾ ನರೇಂದ್ರ ಅವರ ಹಿಮದೊಡಲ ಬೆಂಕಿ ಗಜ಼ಲ್ ಸಂಕಲನದ ಒಳಗೊಂದು ಸುತ್ತು… ಅರುಣಾ ನರೇಂದ್ರ ರವರು ಕೊಪ್ಪಳ ಜಿಲ್ಲೆಯವರಾಗಿದ್ದು ಈ ನಾಡಿನ ಹೆಸರಾಂತ ಮಹಿಳಾ ಸಾಹಿತಿಗಳಲ್ಲಿ ಇವರೂ ಒಬ್ಬರು. ಮುಖತಃ ನೋಡಿಲ್ಲದ, ಮಾತನಾಡಿಲ್ಲದ ಕೇವಲ ವಾಟ್ಸ್ ಆಪ್ ಗ್ರೂಪ್‌ನಿಂದಲೇ ಅಕ್ಷರಗಳ ಮುಖೇನ ಇವರೊಂದಿಗೆ ಅನುಸಂಧಾನ ಮಾಡುತ್ತಿರುವ ನಾನು ಇವರು  ಉದಯೋನ್ಮಖ ಬರಹಗಾರರ ಬರಹಗಳಿಗೆ ಮನಬಿಚ್ಚಿ ಬೆನ್ನುತಟ್ಟುವ […]

ಪುಸ್ತಕ ಪರಿಚಯ

ಅಲೆವ ನದಿ ಅಲೆವ ನದಿಗಜಲ್ ಗಳುಕವಿ :- ಕಿರಸೂರ ಗಿರಿಯಪ್ಪಪ್ರಕಾಶನ :- ಸನ್ಮತಿ ಪ್ರಕಾಶನ ಬಾಗಲಕೋಟೆಬೆಲೆ‌:- ೮೦ಪುಟಗಳು :- ೫೮ ಗಜಲ್ ಎಂದಾಕ್ಷಣ ನೆನಪಿಗೆ ಬರುವುದುಪ್ರೇಮಿಗಳ ಸರಸ ಸಲ್ಲಾಪ ,ಮನದಾಳದ ಸುಕೋಮಲ ಭಾವನೆಗಳು, ಹೆಂಗಳೆಯರ ಪಿಸು ನುಡಿಗಳು , ಒಳಹೊಕ್ಕು ಹೊರ ನೋಡುವ ತೀಕ್ಷ್ಣಮತಿ ಸೂಕ್ಷ್ಮವಾದ ಭಾವನೆಗಳ ಪೂರಣ, ಗಜಲ್ನಸಾಮಾನ್ಯ ಲಕ್ಷಣಗಳು ಕಾಫಿಯಾ ,ರದೀಪ್,ಮತ್ಲಾ,ಮಕ್ತಾ, ಕಾಣಬಹುದು ನೆರಳು-ಬೆಳಕಿನಾಟದಂತೆ ಇವುಗಳನ್ನು ಹೊಂದಾಣಿಕೆ ಮಾಡಿದರೆ ಮಾತ್ರ ಗಜಲ್ ಆಗಲ್ಲ ಸಹಜವಾಗಿ ಮೇಳೈಸಿಕೊಂಡು ಹೃದಯವನ್ನು ತಟ್ಟಿ ಬಡಿದೆಬ್ಬಿಸಬೇಕು. ಗಜಲ್ಗಳು ಮನಸೂರೆಗೊಂಡು ಒನ್ಸ್ […]

Back To Top