Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಮೌನದ ಮಡುವಿನೊಳಗೆ ಸಂತೆಬೆನ್ನೂರು ಫೈಜ್ನಾಟ್ರಾಜ್ ಮನಸ್ಸು ನೀರಿಂದ ಹೊರಬಂದ ಮೀನು ಇಂದಿನಿಂದ ಅಲ್ಲ ಅಂದಿನಿಂದಲೂ…! ಕಾರಣವಲ್ಲದ ಕಾರಣಕ್ಕೆ ಸುಖಾ ಸುಮ್ಮನೆ ಮಾತಿಗೆ ಮಾತು ಬೆಳೆದು’ಮೌನ’ ತಾಳಿ ತಿಂಗಳ ಮೇಲೆ ಹನ್ನರೆಡು ದಿನಗಳಾದವು! ದಾಂಪತ್ಯ ಆದಾಗ್ಯೂ ನೂರಾರು ಕ್ಷಣಗಳನ್ನು ಹೇಗೆಂದರೆ ಹಾಗೆ ಎಲ್ಲೆಂದರೆ ಅಲ್ಲಿ ಸರಸದಿ ಹಾಡು ಹಳೆಯದಾದರೇನು ಎಂಬಂತೆ  ಕಳೆದಿದ್ದೂ ಒಂದು ‘ಮಾತು’ ನೂರು ಸುಖಗಳನ್ನು ಕೊಲ್ಲುತ್ತೆ ಅನ್ನೋದೆಷ್ಟು ಘಾಟು ಅಲ್ವಾ? ಜಗಳ ಆಡೋದು ಇಬ್ಬರಿಗೂ ಚಟ ಅಲ್ಲ, ಚಾಳೀನೂ ಇಲ್ಲ. ಒಣ ಅಹಂ ಇಷ್ಟು ಅಂತರ […]

ಕಾವ್ಯಯಾನ

ಆರ್ಭಟ ಅವ್ಯಕ್ತ ದಿನಕರನ ಉದಯ, ಅಳಿವಿಲ್ಲದ ಅಂಧಾಕಾರವಾಗಿದೆ, ಶಶಿಧರನ ತಂಪು, ಕೋಲ್ಮಿಂಚಿನ ಧಗೆಯಾಗಿದೆ. ನೀಲಿ ಗಗನದಲಿ ಕಾರ್ಮೋಡ ಕವಿದು ನಿಂತಿದೆ, ತಂಪು ಗಾಳಿಯಲಿ ದುರ್ಗಂಧ ಪಸರುತ್ತಿದೆ, ತಿಳಿ ನೀರಿನಲಿ ವಿಷದ ತೊಟ್ಟೊಂದು ಸೇರಿದೆ, ಹಸಿರು ತುಂಬಿರಬೇಕಾದ ನೆಲ ಬಂಜರಾಗಿ ಹೋಗಿದೆ… ಸ್ತಬ್ಧ ಶಿಲೆಗಳ ಕಣ್ಣಂಚಿನಲ್ಲಿ ಒಂದು ಹನಿ ನೀರಿಲ್ಲ, ಯಾವ ರೋಧನೆಗೂ ಕಿವಿಯೊಂದು ಒಡೆಯಲಿಲ್ಲ, ಮಿಡಿವ ಕಲ್ಲು ಚೂರಾದರೂ ಮನಕೆ ನಾಟಲಿಲ್ಲ, ದೈತ್ಯಾಕಾರದ ಭುಜಗಳಿಗೆ ವ್ಯಾಘ್ರತ್ವದ ಅರಿವಿಲ್ಲ, ಆ ಭಯಂಕರ ಆಕ್ರಂದ! ಯಾವ ಪಾಪದ ಶಿಕ್ಷೆಯೋ ಇದು, […]

ಕಾವ್ಯಯಾನ

ನನಗಿಷ್ಟವಾದ ಕವಿತೆ ಕುರಿತು. ಕವಿತೆ ಕವಿಯಿತ್ರಿ-ಪ್ರೊ. ಗೀತಾ ವಸಂತ ಯೂಸ್ ಆಂಡ್ ಥ್ರೋ ಪೆನ್ನು ಬಂದಾಗ ಸಕತ್ತು ಸಂಭ್ರಮ. ಇಂಕು ತುಂಬುವ ರೇಜಿಗೆಯಿಲ್ಲ ನಿಬ್ಬು ಕೊರೆಯುವುದಿಲ್ಲ ಬಳಸು ಬಿಸಾಕು. ಬದುಕು ಎಷ್ಟು ಸರಾಗ.. ಆಮೇಲೆ ಬಂದೇ ಬಂದವು ಯೂಸ್ ಆಂಡ್ ಥ್ರೋ ಲೋಟ ತಟ್ಟೆ ಸಿರಿಂಜು ಹೆಂಡದ ಬಾಟಲು ಸ್ಯಾನಿಟರಿ ಪ್ಯಾಡು ಕಾಂಡೋಮು ಒಳಗೊಳಗೇ ಕೊಳೆತ ಸಂಬಂಧಗಳು ಬಣ್ಣ ಬಣ್ಣದ ರ್ಯಾಪರ್ ಹೊತ್ತವು.. ಪ್ರೇಮದ ನಶೆಯೇರಿಸಿದ್ದ ಅದೇ ಪೆನ್ನು ಲೆಕ್ಕವಿಲ್ಲದಷ್ಟು ಕವಿತೆಗಳ ತಿದ್ದಿ ತೀಡಿ ತಬ್ಬಿಕೊಂಡಾಗ ಎದೆಗೊದ್ದು […]

ಗಝಲ್

ಶಾಂತ ಜೆ ಅಳದಂಗಡಿ ನೀಡೆನಗೆ ನನ್ನೊಡೆಯ ನಿನ್ನೊಲುಮೆ ಬಾಳ ಪಥದಲಿ ಆಗಲೆನಗದು ಹಿರಿಮೆ ನಿನಗಾಗಿ ಮಿಡಿಯುತಿದೆ ಸಂತಸದೆ ನಾಡಿ ಬಾಳದಾರಿಯಲಿ ಅನುಕ್ಷಣ ಸಂತಸ ದೇವನಿತ್ತ ವರದೊಲುಮೆ ಬದುಕ ದಾರಿಯಲಿ ನೀ ಮಾರ್ಗಸೂಚಿ ಸಪ್ತನಾಡಿಗಳೂ ಅರಸುತಿವೆ ದಾರಿ ದೊರೆತರದುವೆ ಮನಕೆ ಸಂತಸ ನಿನ್ನೊಲವು ಜೀವಕದು ಗರಿಮೆ ಆಸೆ ಒಲೆ ಹೂಡಿ ಹಿಡಿದು ಅಗ್ನಿ ನಾಡಿ ಪ್ರೇಮ ಪ್ರೀತಿಯ ಪಾಕ ನಿನಗಾಗಿ ಅಟ್ಟಡಿಗೆ ಉಂಡರದುವೆನಗೆ ಸಂತಸ ಗಮ್ಯ ಸೇರಲು ಇದೆ ಪಯಣವೊಮ್ಮೆ ನಡೆವ ದಾರಿಗೆ ಚೆಲ್ಲುವೆ ಮಲ್ಲಿಗೆ ನಿನಗಾಗಿ ದೃಷ್ಟಿ […]

ನೇಣಿಗೇರಿದ ನೈತಿಕ ಮೌಲ್ಯ.

ದೀಪಾಜಿ ನಾನು ಕೂಗುತ್ತಲೆ‌ ಇದ್ದೆ ಯಾರಾದರೂ ಬಂದು ಉಳಿಸಿಯಾರೆಂದು ಓಡುತ್ತಲೆ ಇದ್ದೆ ಯಾರಾದರೂ ಹಿಡಿದು ನಿಲ್ಲಿಸಿ ಆಸ್ಪತ್ರೆಯ ಬೆಡ್ಡಿನವರೆಗೆ ತಂದು ಬಿಟ್ಟಾರೆಂದು. ಬದುಕುವ ಆಸೆಗಲ್ಲ ಜೀವದ ಹಂಗಿಗೂ ಅಲ್ಲ ನೋವಿನ ನರಳಿಕೆಗಂತೂ ಅಲ್ಲವೇ ಅಲ್ಲ ಅದೆಲ್ಲವ ಅಂದೆ ಕೈಬಿಟ್ಟಿದ್ದೆ ಅತ್ಯಾಚಾರಕೆ ಸಿಲುಕಿ ಪೋಲೀಸ್ ಠಾಣೆ ನ್ಯಾಯಾಲಯ ಮಾಧ್ಯಮಗಳ ಮುಂದೆ ಬಂದ ದಿನವೆ ನಾನು ಸತ್ತು ಹೋಗಿದ್ದೆ ಇಲ್ಲಿ ಉಳಿದದ್ದು ವರ್ಷಾನುಗಟ್ಟಲೆ‌ ಚಪ್ಪಲಿ ಸವೆಯುವಂತೆ ತಿರುಗುತ್ತಿದ್ದದ್ದು ಕೇವಲ ಅಳಿದುಳಿದ ನಂಬಿಕೆ ಎಂಬ ಭರವಸೆಯ ಮೇಲೆ ತಪ್ಪಿದಸ್ತರ ಪೊಗರು ಕಳಚಿ […]

ನನ್ನೊಳು ಸುನಾಮಿಯೊ

ನನ್ನ ಕೊಳಲು ಚಂದ್ರಪ್ರಭ ಬಿದಿರ ರಂಧ್ರಗಳಲಿ ತೂರಿ ತುಳುಕುವಾಗ ನೀನು ಕೊಳಲ ಮಾಧುರ್ಯ.. ಇಂಪು ಸೊಂಪಿನ ಅದೇ ಮೋಡಿ ಬೀಸಿ ಬಂದ ಬಿರುಗಾಳಿಯಲಿ ಬೆರೆವಾಗ ಅಲುಗುವುದೇಕೆ ಅಸ್ತಿತ್ವದ ಸೌಧ..! ಮತ್ತದೇ ಗಾಳಿ ಭೋರ್ಗರೆವ ಸುನಾಮಿಯಲಿ ಬೆರೆವಾಗ ನನ್ನೊಳು ಸುನಾಮಿಯೊ ಸುನಾಮಿಯೊಳು ನಾನೊ..!! ನಿನ್ನ ಹೊರತು ಸಾಗದ ಉಸಿರು.. ಅಳವಿಗೇ ಸಿಕ್ಕದ ನಿನ್ನ ಗಾಳಿ ಎಂದವರಾರು..?

ಕಾವ್ಯಯಾನ

ನಾನು ನಿನ್ನಾತ್ಮದ ಗುರುತಾಗಿದ್ದೆ ಬಿದಲೋಟಿ ರಂಗನಾಥ್ ಹೌದು ನಾನು ನಿನ್ನಾತ್ಮದ ಗುರುತಾಗಿದ್ದೆ ಆ ನಿನ್ನ ನೋಡುವ ನೋಟದ ಬಿಸುಪಿಗೆ ಚಳಿಯಾಗಿದ್ದೆ ಮಳೆಯಾಗಿದ್ದೆ ಮುಗಿಲೇ ಆಗಿದ್ದೆ ನಿನ್ನ ಮೈಯೊಳಗಿನ ಬಿಸಿಗೆ ಬೆರೆತ ಜೀವವಾಗಿದ್ದೆ ನೀನು ನಡೆದ ದಾರಿಯ ಮೇಲಿನ ಹೆಜ್ಜೆಯನು ಮುಟ್ಟಿ ಬೆಳಕಿನ ಕಿರಣಗಳ ಮುಡಿಸಿದ್ದೆ ಉಳಿದ ಮಾತುಗಳ ನಿಟ್ಟುಸಿರ ಮೌನಕೆ ಕಾಲದ ಸವಾರ ಕುಂಟಾಗಿ ಬಿದ್ದಿದ್ದ ಎದೆಯೊಳಗಿನ ಗಿಲಕಿಗೆ ಕೀ ಕೊಡುವ ನಿನ್ನ ಹೃದಯದ ಕೋಮಲ ಕೈಗಳು ನನ್ನಿಂದ ಜಾರಿಹೋದಾಗಿನ ಶೂನ್ಯತೆಯಲಿ ಕತ್ತಲ ಮನೆಯಲಿ ದಿನಗಳ ಎಣಿಸುತ್ತ […]

ಕಾವ್ಯಯಾನ

ನಾಲ್ಕಾರು ಮಳೆ ಹನಿಗಳು: ದೇವು ಮಾಕೊಂಡ ಸಿಂದ್ಗಿ ನನಗೆ ನಾನೇ ಬಂಧಿಯಾಗಿರುವೆ ಎರಡು ಕಳ್ಳ ಹುದುಲಗಳ ನಡುವೆ ಸಿಲುಕಿ ಬೇರೆರಡರ ಇಕ್ಕಟಿನಲಿ ಬೆಳೆದ ಈಚಲು ಸಸಿಯ ಹಾಗೆ ವಿಶಾಲ ಭೂಮಿ ಬಾನುಗಳ ನಡುವೆ ತಳಕು ಹಾಕಿಕೊಂಡಿರುವೆ ಪರೀಧಿಯೊಳಗಿನ ಕೇಂದ್ರದ ಹಾಗೆ ಬೆಳಗು ಬೈಗು ಪ್ರೀತಿ ಇಮ್ಮಡಿಗೊಳ್ಳುತ್ತದೆ ಸೂರ್ಯ ಬಿಸಲ ಪ್ರಖರ ಶಾಖಗೆ ಕಾಮ ಕಸ್ತೂರಿ ಅರಳಿದ ಹಾಗೆ ಎಲ್ಲೋ ಎಸೆದ ಬೀಜ ಮೊಳಕೆಯೊಡೆದು ನನ್ನೊಳಗೆ ಹೂವು ಬಿಡುತ್ತಿದೆ ತಿಂಗಳ ಚಂದಿರ ಮೂಡಿದ ಹಾಗೆ ಇರುಳ ರಾತ್ರಿ ಪುಟಿದೇಳುತ್ತಿದೆ […]

ಕಾವ್ಯಯಾನ

ಮೌನ ಮಾತಾದಾಗ ಸರೋಜಾ ಶ್ರೀಕಾಂತ ಅಮಾತಿ ಎದೆಯಗೂಡೊಳಗೆ ಬಚ್ಚಿಟ್ಟು ಮರೆಮಾಚಿದ ಮಾತುಗಳೆಷ್ಟೋ!? ನುಡಿಯದೇ ಮೌನರಾಗವಾದ ಶ್ರುತಿ,ತಾಳಗಳಿಲ್ಲದ ಹಾಡುಗಳೆಷ್ಟೋ!!? ತುಟಿಯ ಬಿಟ್ಟು ಹೊರಬರದೇ ಅಡಗಿಸಿಟ್ಟ ನಲಿವು-ನೋವ ಬಗೆಯ! ಬಿಡಿ ಬಿಡಿಸಿ ನಿನ್ನ ಮುಂದಿಡುವೆ ನಾನೀಗ ಕೇಳದಿರಬೇಡ ಗೆಳತಿ ಮನದ ಮಾತೀಗ!! ಅಳಿಯದೆ ಉಳಿದ ಭಾವಗಳಿಗೆ  ಜೀವ ಬಂದಿದೆ ಮತ್ತೊಮ್ಮೆ ಈಗ! ಮನದ ಮೂಲೆಯಲಿ ಅವಿತಿರುವ ಆಸೆ ಹಕ್ಕಿಗೆ  ಹಾರಲು ರೆಕ್ಕೆ ಬಂತೀಗ!! ನನ್ನೀ ಮೌನ ಮಾತಾಗಬೇಕೆಂದರೂ ಬೇಕು ನಿನ್ನ ಸನಿಹ ಸಾಂಗತ್ಯ ನಾ ಬರೆವ ಲೇಖನಿ ನೀನೆಂಬುದು ಸತ್ಯ! […]

ಕಾವ್ಯಯಾನ

ದಾರಿಹೋಕನೆಂದು ನಂಬಿ ಬಿಟ್ಟೆ! ಅವ್ಯಕ್ತ ಕುಶಲ ಚೇಷ್ಟೆಗಳ ಕನಸ ಮಾರುವ ಕಾಂತನೆ ಹೆಣ್ಣಿನ ಒಳಮನಸ್ಸ ಮರ್ಮವ ಹೇಳುವೆ ತಿಳಿದುಕೊ… ನಿನ್ನ ನಿಜ ಲೋಕದ ಕಡಲ ಮುತ್ತು ಗಳಂತಿರುವ, ಮೌನ ವನಿತೆಯರ ಸಖಿಗುಟ್ಟಿದು.. ಮುಂಗುರುಳ ನಡುವೆ ನಲಿವ ಕಣ್ಣಲ್ಲಿ ಕನಸೊಂದ ಹುಡುಕುವುದು ತಪ್ಪೇನಲ್ಲಾ.. ತುಂಟ ನಗುವಿನೊಳಗೆ ರಸಿಕತೆಯ ಬಯಕೆಯು ಅಲ್ಪಾಯುಷಿಯೂ ಅಲ್ಲಾ.. ಸಭ್ಯತೆಯ ನೀಳ ಸೆರಗ ಜಾರಿಸಲು ಬಾಡದ ನಿತ್ಯಾನುರಾಗವ ಹುಡುಕುವಳಷ್ಟೆ, ಸಹಜ ಜೀವನದಲ್ಲಿರುವ ತಿರುವುಗಳ ಮಧ್ಯೆ ಸ್ಪಷ್ಟ ಮನದ ಮದುರ ಪ್ರೀತಿಯ ಅರಸುವಳಷ್ಟೇ. ಉದಾಸೀನ ಪುರುಷನ ಭೂಷಣವಾದರೆ, […]

Back To Top