ಆಹಾರ, ಆಚಾರ, ವಿಚಾರ, ಬದುಕಿನ ಕ್ರಮ, ಧರ್ಮ, ತತ್ವ, ಸಿದ್ಧಾಂತ, ಅಭಿರುಚಿ, ಭಾಷೆ ಹೀಗೆ ಒಡೆಯುತ್ತಲೇ ಬದುಕುವ ನಮಗೆ ಬಸವಣ್ಣನವರ ವಚನವು ಮನುಷ್ಯರು ಒಗ್ಗೂಡಲು ಸಾವಿರ ಕಾರಣಗಳಿವೆ, ಅದಕ್ಕೆ ಮೂಲ ಆಂತರ್ಯದಲ್ಲಿ ಸಹಿಸಿಕೊಳ್ಳುವ ಗುಣ ಬೇಕಿದೆ ಎಂಬುದನ್ನು ತಿಳಿಸುತ್ತದೆ.