ಮಹಾತ್ಮ ಗಾಂಧಿ, ‘ಗ್ರಾಹಕರನ್ನು ದೇವರು’ ಎಂದರು. ಆದರೆ, ದೇವರನ್ನೇ ಜಾಹೀರಾತಿಗೆ ಬಂಡವಾಳ ಮಾಡಿಕೊಂಡವರು ನಾವು. ಇಂತಲ್ಲಿ ಇಂತಹ ಪೂಜಾ ಕೈಂಕರ್ಯವೋ, ಸೇವೆಯೋ ಕೈಗೊಂಡರೆ ಇಂತಹದ್ದು ಸಿದ್ಧಿಸುತ್ತದೆ. ನಮ್ಮ ದೈವದ ಸ್ಥಳ ಮಹತ್ವ ಇದು, ನಮ್ಮ ದೈವದ ಶಕ್ತಿ ಇಂತಿಥದ್ದು… ಇದೆಲ್ಲಾ ಜಾಹೀರಾತು ತಾನೇ!? ಹೀಗೆ ದೇವಾನುದೇವತೆಗಳೇ ಜಾಹೀರಾತಿಗೆ ಬಿಕರಿಯಾಗುವಾಗ ಜನಸಾಮಾನ್ಯರ ಪಾಡೇನು?