ಕೃಷ್ಣಮೂರ್ತಿ ಹೆಗಡೆ ಪ್ರತಿಷ್ಠಿತ “ಶಿಂತ್ರಿ ಬಿಲ್ಡಿಂಗ್” ನಲ್ಲಿ ಬಾಡಿಗೆ ರೂಮು ಮಾಡಿಕೊಂಡಿದ್ದ. ಇತರ ಬ್ರಾಹ್ಮಣ ಹುಡುಗರು ಸಪ್ತಾಪುರ ಇತ್ಯಾದಿ ಕಡೆಗಳಲ್ಲಿ ರೂಮು ಪಡೆದಿದ್ದರು. ಒಮ್ಮೆಯಂತೂ ಅವರಲ್ಲಿ ಯಾರೋ ತನ್ನ ಕುರಿತು ಸಲ್ಲದ ಮಾತನಾಡಿದರೆಂದು ಕೋಪಗೊಂಡ ಕೃಷ್ಣಮೂರ್ತಿ ಹೆಗಡೆ ರಾತ್ರಿ ವೇಳೆ ಅವರ ರೂಮಿಗೆ ಹೋಗಿ ರಂಪ ಮಾಡಿದ ಸಂಗತಿ ಮರುದಿನ ಕನ್ನಡ ವಿಭಾಗದಲ್ಲಿಯೇ ಚರ್ಚೆಯ ಸಂಗತಿಯಾಗಿತ್ತು!