ಈ ಅಸಹಾಯಕ ಸಂದರ್ಭದಲ್ಲಿ ನನ್ನ ಜೈಹಿಂದ್ ಹೈಸ್ಕೂಲು ಸಹಪಾಠಿ ಪ್ರಭು ಎಂಬಾತ ಸಹಾಯಕ್ಕೆ ನಿಂತ. (ಕ್ಷಮೆ ಇರಲಿ ಅವನ ಹೆಸರು ಮರೆತಿದ್ದೇನೆ). ಅಂಕೋಲೆಯ ಮಠಾಕೇರಿಯ ಜಿ.ಎಸ್.ಬಿ ಸಮುದಾಯದ ಪ್ರಭು ನನಗೆ ಹೈಸ್ಕೂಲು ದಿನಗಳಲ್ಲಿ ತುಂಬಾ ಆತ್ಮೀಯನಾಗಿದ್ದವನು. ಆತ ನನಗೆ ವಾಸ್ತವ್ಯದ ವ್ಯವಸ್ಥೆಯಾಗುವವರೆಗೆ ನಿಜಲಿಂಗಪ್ಪ ಹಾಸ್ಟೆಲ್ಲಿನ ತಮ್ಮ ಕೊಠಡಿಯಲ್ಲಿಯೇ ಉಳಿಯಲು ಅವಕಾಶ ನೀಡಿದ. ಇದಕ್ಕೆ ಅವನ ರೂಮ್ಮೇಟ್ ಕೂಡ ಆಕ್ಷೇಪವೆತ್ತದೆ ಸಹಕರಿಸಿದ. ಇಬ್ಬರ ಉಪಕಾರ ಬಹು ದೊಡ್ಡದು
Copy and paste this URL into your WordPress site to embed
Copy and paste this code into your site to embed