ರಾಕ್ಷಸ ಸಂಹಾರಕ್ಕೆ ವೀರರಾದ ಬಾಲಕರನ್ನು ಕಳಿಸಿಕೊಡೆಂದು ಕೇಳಿದಾಗ ದಶರಥ ಮಹಾರಾಜ ಹೌಹಾರಿದ್ದನೆಂದೇ ರಾಮಾಯಣ ಹೇಳುತ್ತದೆ. ‘ಮಕ್ಕಳಿನ್ನೂ ಹಾಲುಗಲ್ಲದ ಹಸುಗೂಸುಗಳು, ನಾನೇ ಬರುವೆ, ಸೈನ್ಯ ತರುವೆ..‘ ಎಂದು ಚಡಪಡಿಸಿ ಬಡಬಡಾಯಿಸಿದ್ದ ಎಂದು ತಿಳಿದಾಗ, ಎಂಥಾ ರಾಜಾಧಿರಾಜ ಆದರೂ ಅಪ್ಪನೆಂಬ ಅಂತಃಕರಣ ಮೀರಲಾದೀತೇ ಎನಿಸುತ್ತದೆ.