ಕಾವ್ಯ ಸಂಗಾತಿ ಉತ್ತರ ಹೇಳು ಸಖ ಶಂಕರಾನಂದ ಹೆಬ್ಬಾಳ ನಿಬಿಡಾರಣ್ಯದಲಿಒಬ್ಬಂಟಿ ನಾನುಬೋಳು ಮರದಂತೆ,ನಿಶ್ಚಲ ಭಾವವಿಷಣ್ಣತೆಯಲಿಗೊಣಗುತಿರುವೆ… ಜಾರಿದ ಸಮಯಕ್ಕೂಗೊತ್ತಾಗಲಿಲ್ಲವೆ..?ಉಳಿದ ನೆನಪುಗಳುತೊಗಲು ಬೊಂಬೆಯಂತೆಥೈತಕ ಕುಣಿಯುತ್ತಿವೆ…. ಬೇಗೆಯಲಿ ದಿಗ್ಗನೆದ್ದುಬಂದಂತೆ ಭಾಸವಷ್ಟೆನಿಂತ ಜಾಗ ಕುಸಿದಂತೆಕೊಂಚ ಅಳುಕುಎದ್ದು ಕುಳಿತೆಬುದ್ದನಂತೆಶಾಂತಿಯಿಲ್ಲದೆ… ಈಗ ಹೊರಟಿದ್ದೇನೆಧ್ರುವಕೆ ವಿಮುಖನಾಗಿ“ದಾರಿಯಾವುದಯ್ಯಾವೈಕುಂಠಕೆ ಎಂದು”ದಾಸ ಮಾರ್ಗವನುಹಿಡಿದು,ಸತ್ಯವನರಸಿಮೋಕ್ಷಾಪೇಕ್ಷಿಯಾಗಿಅಲೆವ ಯೋಗಿನಂತೆನಡೆದಿದ್ದೇನೆ ದಿನದಿನಗಳ ಸವೆಸಿಸವೆದ ಚಪ್ಪಲಿಯಾಗಿದ್ದೇನೆ…. ದುಗುಡವಾವರಿಸಿದುಃಖದೊಳು ತೇಲಿಪರಿಹಾರವಿಲ್ಲದಫಲಾನುಭವಿ ನಾನುಉತ್ತರವೆಲ್ಲಿದ ಸಖನನ್ನ ಮನದ ಪ್ರಶ್ನೆಗೆ….?
Copy and paste this URL into your WordPress site to embed
Copy and paste this code into your site to embed