ಕಾವ್ಯಯಾನ

ಆಯುಧಕ್ಕಿಂತ ಹರಿತ ರಾಜು ದರ್ಗಾದವರ ಮೊನ್ನೆತಾನೆ ಗೊತ್ತಾಯ್ತು ಕವಿತೆಗಳು ಆಯುಧಕ್ಕಿಂತ ಹರಿತವೆಂದು! ಸಮಾಜಕ್ಕೆ ಅಪಾಯಕಾರಿಯೆಂದೀಗ ಘೋಷಿಸಿ ಜೈಲಿಗಟ್ಟಿದ್ದಾರೆ ಕವಿತೆಗಳನ್ನು ಬರೆದವನ. ಕವಿ ಸಿಕ್ಕಿರಬಹುದು ಆದರೆ ಆ ಕವಿತೆ ಅದೆಲ್ಲಿಯವರೆಗೂ ತಲುಪಿದಿಯೋ? ನಿಮ್ಮಲ್ಲಿಯೂ ಅಂತ ಕವಿತೆಯಿದ್ದರೆ ಪಸರಿಸಬೇಡಿ. ಸುಟ್ಟುಬಿಡಿ…! ಅವರಿಗೂ ಬೇಕಾಗಿದ್ದು ಅದೇ..!! ************