ಕಾವ್ಯಯಾನ

ಹೀಗೊಂದು ಕವಿತೆ ಎಸ್ ನಾಗಶ್ರೀ ಹೀಗೆ ಬಿರುಸುಮಳೆಯಲ್ಲೇ ಒಮ್ಮೊಮ್ಮೆ ಗೆಳೆತನಗಳು ಗಾಢವಾಗುವುದು ಬೇಡಬೇಡವೆಂದರೂ ಹುಣಸೆಮರದಡಿಯಲಿ ನಿಂತು ಗುಡುಗು ಸಿಡಿಲಿಗೆ ಬೆಚ್ಚುತ್ತಾ ಬಿದ್ದ ಕಾಯಿಗಳ ಕಣ್ಣಲ್ಲೇ ಭಾಗಮಾಡುತ್ತಾ ನಿನ್ನೆಯೊಂದು ಇತ್ತು ನಾಳೆ ಬರುವುದು ಇಂದು ಅರ್ಧ ಮುಗಿದಿದೆಯೆಂಬ ಯಾವ ಕುರುಹೂ ಕಾಣದಂತೆ ಮುಗಿಲಿನ ಮಾತಿಗೆ ಭುವಿ ಕಿವಿಯಾನಿಸಿ ಮತ್ತೆ ಮತ್ತೆ ಅರೆಶಬ್ದಗಳಲಿ ಉತ್ತರಿಸುವುದ ನೋಡುವುದೂ ಜೀವಮಾನದ ಅನುಭವ ಹಾಗೆ ಒಂದೊಮ್ಮೆ ಬಿರುಮಳೆಯಲ್ಲಿ ಸಿಕ್ಕ ಗೆಳತಿ ಇನ್ನು ಹತ್ತು ವರ್ಷಕ್ಕೆ ನೇಣು ಬಿಗಿದುಕೊಂಡಳು ಒಡಲಲ್ಲಿ ಐದು ತಿಂಗಳ ಹಸುಗೂಸು ಎಷ್ಟು … Continue reading ಕಾವ್ಯಯಾನ