ಸ್ವಾತ್ಮಗತ

ಸ್ವಾತ್ಮಗತ

ಕನ್ನಡದ ಪ್ರಸಿದ್ಧ ಗಜಲ್ ಕೃತಿಕಾರ ಶಾಂತರಸ ಹೆಂಬೆರಳುರರೂ..! ಕೆ.ಶಿವು ಲಕ್ಕಣ್ಣವರ ಕನ್ನಡದ ಪ್ರಸಿದ್ಧ ಗಜಲ್ ಕೃತಿಕಾರ ಶಾಂತರಸ ಹೆಂಬೆರಳುರರೂ..! ಹಾಗೂ ಅಪ್ಪನ ಕುರಿತ ಇವರ ಮಗಳು ಭಾರತಿ ಮೋಹನ ಕೋಟಿಯವರ ಆಲಾಪನೆಯೂ..!! ಕನ್ನಡದ ಪ್ರಸಿದ್ಧ ಗಜಲ್ ಕವಿ. ಇವರು ಕನ್ನಡದ ಹೆಸರಾಂತ ಸಾಹಿತಿ. ಇವರು ೧೯೯೨ರಲ್ಲಿ ತಮಗೆ ನೀಡಲಾಗಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಭ್ರಷ್ಟ ಸರಕಾರ, ಜನೋಪಯೋಗಿಯಗಿಲ್ಲದ ಸರಕಾರದಿಂದ ಪ್ರಶಸ್ತಿ ಪಡೆಯುವುದಿಲ್ಲವೆಂದು ಹೇಳಿ ತಿರಸ್ಕರಿಸಿದ್ದರು. ಇವರು ೨೦೦೬ರಲ್ಲಿ ಬೀದರದಲ್ಲಿ ಜರುಗಿದ ೭೩ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. […]

ನಾನು ಕಂಡ ಹಿರಿಯರು

ನಂಜುಂಡು ನಗು ಹಂಚಿದ ಪರಮೇಶ್ವರ: ಎಸ್. ವಿ. ಪಿ. ಡಾ.ಗೋವಿಂದ ಹೆಗಡೆ ಇಂದು ಫೆಬ್ರವರಿ ೮, ಹಲವು ರೀತಿಗಳಲ್ಲಿ ಕನ್ನಡದ ತೇರನ್ನು ಕಟ್ಟಿದ ಪ್ರೊ ಎಸ್ ವಿ ಪರಮೇಶ್ವರ ಭಟ್ಟರ ಜನ್ಮದಿನ. ಆ ಪ್ರಯುಕ್ತ ಕನ್ನಡದ ಕಟ್ಟಾಳುವಿಗೆ ನಮನಗಳನ್ನು ಸಲ್ಲಿಸುತ್ತ ಅವರ ನೆನಪಿನ ಈ ಬರಹ. ನಂಜುಂಡು ನಗು ಹಂಚಿದ ಪರಮೇಶ್ವರ: ಎಸ್. ವಿ. ಪಿ. (೧೯೧೪-೨೦೦೦) ೧೯೮೫-೮೯ರವರೆಗೆ , ಮೈಸೂರಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದಾಗ ಅಲ್ಲಿನ ತಾತಯ್ಯನವರ ವಿದ್ಯಾರ್ಥಿನಿಲಯ ‘ಅನಾಥಾಲಯ’ದಲ್ಲಿ ವಾಸವಾಗಿದ್ದೆ. ಆರ್ಥಿಕವಾಗಿ […]

ಲಹರಿ

ಗುಬ್ಬಿಯ ಅಳಲು ತಾರಾ ಸತ್ಯನಾರಾಯಣ “ಗುಬ್ಬಿಯ ಅಳಲು”                ನನ್ನ ಸಂಸಾರದ ಹೊಟ್ಟೆ ತುಂಬಿಸಲು ನಾನು ದೂರ ಬಹುದೂರ ಬಂದರೂ ……ಎಲ್ಲಿಯೂ ನನಗೆ ಹಣ್ಣುಗಳಿರುವ ಮರಗಳೇ ಕಾಣುತ್ತಿಲ್ಲ.ಎಲ್ಲಿ ನೋಡಿದರೂ ಬರೀ ಕಟ್ಟಡ ಕೆಲವಂತೂ ಗಗನಚುಂಬಿ ಕಟ್ಟಡಗಳು ಕೆಳಗಡೆ ನೋಡಿದರೆ ಟಾರಿನ ರಸ್ತೆಗಳು ಹೋಗಲಿ ಮನೆಗಳಿರುವ ಕಡೆಯೇ ಹೋಗೋಣವೆಂದರೆ ಅಲ್ಲೂ ಕೂಡ ಮನೆಯ ಸುತ್ತ ಮುತ್ತ ಸಿಮೆಂಟಿನಿಂದ ಕೂಡಿದ ನೆಲ. ಮನೆಯ ಮುಂಭಾಗದಲ್ಲಿ ಮನೆಯ ಹಿಂಭಾಗದಲ್ಲಿ ಗಿಡಮರಗಳಿಲ್ಲ. ಎರಡು  ಮೂರು […]

ಕಾವ್ಯಯಾನ

ಏಕೆ ಕಾಡುವೆ ಶಾಂತಾ ಜೆ ಅಳದಂಗಡಿ ಏಕೆ ಕಾಡುವೆ ಮಾರುದ್ದ ಒಲವಿನೋಲೆ ಬರೆದು ಹೃದಯದೊಳಗೆ ನನ್ನ ಸೆಳೆದು ತಡವಿಲ್ಲದೆ ತಾಳಿಯ ಬಿಗಿದು ದೂರವಾದೆ ಬಾಳಿಗಂತ್ಯ ಬರೆದು ಮುಗ್ಗರಿಸಿ ಸಾಗಿದೆ ನನ್ನ ಬದುಕಿಂದು ಗಾಲಿಕಳಚಿದ ಗಾಡಿ ಈ ಬಾಳು ಕಣ್ಣೆವೆಯಲೆ ಕುಳಿತು ಕಾಡುವೆ ನನ್ನ ಅಳಿಸಲಾಗದ ಪ್ರೇಮಬರಹ ಬರೆದು ಹೂ ದುಂಬಿಗಳ ಒಲವಿನಾಟದಿ ಕಾಣುವೆ ನನ್ನ ನಿನ್ನ ಅನುಬಂಧ ಏಕೆ ಸರಿದೆ ನೇಪಥ್ಯಕೆ ಅವಸರದೆ ಮನೋಮಂದಿರಕೆ ಒಡೆಯನಾಗಿದ್ದೆ ದಿಗಂತದಾಚೆಗಿರುವೆ ನನ್ನ ನಿರೀಕ್ಷೆಯಲ್ಲಿ ಬಂದೇ ಬರುವೆ ಅತಿಶೀಘ್ರದಲ್ಲಿ ರಕ್ತಧಮನಿಗಳೆ ಬಿರಿವಂಥ […]

ಕಾವ್ಯಯಾನ

ಮೂಕವಾಯಿತು ರೇಖಾ ವಿ.ಕಂಪ್ಲಿ ಮೂಕವಾಯಿತು ಮೂಕವಾಯಿತು ಕೋಗಿಲೆ ವಸಂತನಾಗಮನವಿರದೆ ತನ್ನ ಗಾನವ ಮರೆತು ನಿನ್ನದೇ ಚಿಂತೆ ಯೊಳಗೆ…….. ಮೂಕವಾಯಿತು ವೀಣೆ ಮೀಟದ ಬೆರಳುಗಳಿರದೆ ತನ್ನ ರಾಗವ ಮರೆತು ನಿನ್ನ ಬೆರೆಯಲರಿಯದೆ…….. ಮೂಕವಾಯಿತು ಓಲೆಯೊಂದು ರವಾನಿಸುವ ಹಂಸವಿರದೆ ತನ್ನ ಪದವ ಮರೆತು ನಿನ್ನ ಅರಿಯಲಾರದೆ……. ಮೂಕವಾಯಿತು ಕನಸೊಂದು ನನಸಾಗದ ಮನಸ್ಸಿರದೆ ತನ್ನ ಊಹೆ ಮರೆತು ನಿನ್ನ ಮರೆಯಲಾರದೆ…. ಮೂಕವಾಯಿತು ಕವಿತೆ ಬರೆಯುವ ಕವಿಯೊರ್ವನಿರದೆ ತನ್ನ ಯಾನವ ಮರೆತು ನಿನ್ನ ಮನವರಿಯದೆ….. ********

ಕಾವ್ಯಯಾನ

ಈ ಚಳಿಗೆ ದಯೆಯಿಲ್ಲ. ದಾಕ್ಷಾಯಿಣಿ ವಿ ಹುಡೇದ ಈ ಚಳಿಗೆ ದಯೆಯಿಲ್ಲ… ಈ ಚಳಿಗೆ ದಯೆಯಿಲ್ಲ ;ಬೀಸಿ ತಂಗಾಳಿಮಂಜನು ಉದುರಿಸಿಪಕ್ಕೆಲುಬುಗಳಲಿ ನಡುಕ ಹುಟ್ಟಿಸಿಹೊಕ್ಕಳ ನಡು ಮಧ್ಯದಿಂದ ನಿನ್ನ ನೆನಪಿಗೆ ಆಹ್ವಾನ ನೀಡಿದೆ. ಈ ಚಳಿಗೆ ದಯೆಯಿಲ್ಲ ;ನಿನ್ನ ಬಿಸಿಯಪ್ಪುಗೆಯಬಿಸುಪಿಗೆ ಸವಾಲೊಡ್ಡಿಸೆಣಸಾಡಿ ಸೋತದ್ದಕ್ಕೀಗಸೇಡು ತೀರಿಸಿಕೊಳ್ಳುತ್ತಿದೆ,ಒಂಟಿ ಹೆಣ್ಣ ಕಣ್ಣ ಕಾಡಿದೆಅಪ್ಪಿ ನನ್ನನೇ ಬೇಡಿದೆ. ಈ ಚಳಿಗೆ ದಯೆಯಿಲ್ಲ ;ನೀನಿಲ್ಲದ ಈ ಘಳಿಗೆಗಳಲ್ಲಿಇದನ್ನೆಲ್ಲ ಎದುರಿಸುವವಿಫಲ ಯತ್ನ ನಡೆದೇ ಇದೆ ;ವ್ಹಿಸ್ಕಿ, ರಮ್ಮು, ಟಕೀಲಾಗಳ ಜೊತೆ ನಿನ್ನ ಬೆರೆಸಿ ಕುಡಿದು ಸೋತಿದ್ದೇನೆ. ಈ […]

ಅನುವಾದ ಸಂಗಾತಿ

ಚೆ ಗುವೆರಾನ ಮುಖ ಇದ್ದ ಮನುಷ್ಯ ಮೂಲ:ವಾಷಿಂಗ್ಟನ್ ಕುಕುರ್ಟೋ ಕನ್ನಡಕ್ಕೆ:ಕಮಲಾಕರ ಕಡವೆ ಚೆ ಗುವೆರಾನ ಮುಖ ಇದ್ದ ಮನುಷ್ಯ ಅವನು ಚೆ ಯ ಟ್ಯಾಟೂವ ತನ್ನ ತೋಳುಗಳ ಮೇಲೆ ಹೊಂದಿದ್ದಆ ಕಾಲದಲ್ಲಿ ಯಾರೂ ಟ್ಯಾಟೂ ಹಾಕಿ ಕೊಳ್ಳುತ್ತಿರಲಿಲ್ಲಆ ಕಾಲದಲ್ಲಿ ಯಾರಿಗೂ ಚೆ ಗೊತ್ತೂ ಇರಲಿಲ್ಲಹಾಗಿದ್ದಾಗ ಅವನು ಟ್ಯಾಟೂ ಹಾಕಿಸಿ ಕೊಂಡಿದ್ದ “ಯಾಕಪ್ಪಾ ಹಾಗೆ ಟ್ಯಾಟೂ ಹಾಕಿಸ್ ಕೊಂಡಿದ್ದಿ”ನನ್ನ ಅಜ್ಜಿ ಕೇಳಿದಳು, “ಒಳ್ಳೇ ಜೈಲಿಂದ್ ಹೊರ ಬಂದೋರುಹಾಕಿಸ್ಕೊತಾರಲ್ಲ ಹಾಂಗೆ”.“ಅಮ್ಮ, ಇನ್ನೇನು ನಮ್ ಲೈಫು ಅಂದ್ರೆ,ದೊಡ್ಡದೊಂದು ಜೈಲು ಅಲ್ದಿದ್ರೆ?”ಚೆ ಇನ್ನೂ […]

ಕಾವ್ಯಯಾನ

ಇನ್ನೂ ಬರಲಿಲ್ಲ ಕೃಷ್ಣಮೂರ್ತಿ ಕುಲಕರ್ಣಿ ಇನ್ನು ಬರಲಿಲ್ಲ…. ಬರ್ತಿನಂತ ಹೇಳಿದ ಗೌಡ ಇನ್ನೂ ಬರಲಿಲ್ಲ.! ಬಸ್ಸಿನ ಗದ್ದಲ, ಟ್ರಾಫಿಕ್ ಕಿರಿಕಿರಿ ಎನೊಂದು ತಿಳಿಲಿಲ್ಲ !! ಮಿಶ್ರಾ ಫೇಡ, ಬಿಗ್ ಬ್ರೇಡ್ ತರ್ತಿನಿ ಅಂದಾವ! ರಾತ್ರಿ ಊಟಕ ಪಂಜೂರ್ಲಿಗೆ ಹೋಗೋಣಾಂತ ಮೇಜೇಜ್ ಹಾಕಿದವ! ಬಟರ್ ನಾನ್ ಕಾಜೂ ಸ್ಪೇಶಲ್ ತಿನ್ನೋಣ ಅಂದಾವ! ಮಸಾಲಿ ಪಾಪಡ್ ಗೋಬಿ, ಗಡಬಡ ಐಗೆ ಕಾದೈತೆ ಜೀವ! ಕುಡ್ತಾ ಜುಬ್ಬಾ ಕೊಡಸ್ತಿನಂತ ಹೇಳಿ ಹೋದಾವ!! ಶೋಚ್ ನ್ಯಾಗ ತರಬೇಕಂತ ಬಯಸೇದ ಜೀವ!! ಬರ್ತಾನಂತ ಕಾದು […]

ಕಾವ್ಯಯಾನ

ಬಾನಾಡಿಗಳೇ ಕೇಳಿ ಸಂಜಯ್ ಮಹಾಜನ ಬಾನಾಡಿಗಳೇ ಕೇಳಿ ಈ ವಿಶಾಲ ನೀಲಿ ಆಗಸ ನಿಮ್ಮದು ಈ ತಂಗಾಳಿಯ ಸ್ಪರ್ಶ ನಿಮ್ಮದು ಈ ಶಾಂತ ಸಮುದ್ರ ನಿಮ್ಮದು ಈ ಹಸಿರು ಹೊದಿಕೆ ನಿಮ್ಮದು ಈ ಹೂವ ಕಂಪು ನಿಮ್ಮದು ಈ ಹಣ್ಣ ಸಿಹಿ ನಿಮ್ಮದು ಈ ಸಿರಿಧಾನ್ಯ ನಿಮ್ಮದು ಈ ಪ್ರಕೃತಿಯ ಸರ್ವ ಸ್ವಭಗು ನಿಮ್ಮದು ಆದೆರೆ..? ಇದನ್ನೆಲ್ಲ ನಿಮ್ಮಿಂದ ಕಸಿದುಕೊಳ್ಳುವ ಸ್ವಾರ್ತ, ಕ್ರೋಧ, ಕಷ್ಠಾಗ್ನಿಯ ಮನಸ್ಸುಳ್ಳ ಮಾನವ ನಿನ್ನವನಲ್ಲಾ *********

ಕಾವ್ಯಯಾನ

ತೆನೆ ರಾಮಾಂಜಿನಯ್ಯ ವಿ. ತೆನೆ ಅಪ್ಪ ಸಣ್ಣರೈತ. ಗಿಳಿ,ಅಳಿಲು,ಕಾಗೆಗಳ ಹಾವಳಿ ಸದಾ ಇದ್ದೇ ಇರುತ್ತಿತ್ತು; ಇದ್ದ ಒಂದೂವರೆ ಎಕರೆಯಲ್ಲಿ ಬೆಳೆಯುತ್ತಿದ್ದ ಜೋಳಕ್ಕೆ! ‘ಬೇಳೆಕಾಳುಗಳ ರಾಣಿ’ ಇವಳು! ಉದ್ದ ಜಡೆಯ ನಾರಿ, ಹಾಲುಕ್ಕಿಸುವ ಶೋಡಷಿ, ‘ಟಸೆಲ್ ಕೂದಲುಳ್ಳ ಗಂಡು’ ಇವಳು! ಅರೆ, ಇವಳೇನು ಜೀನ್ಸ್ ಗಳ ವ್ಯತ್ಯಾಸದಂತ ಮಂಗಳಮುಖಿಯಲ್ಲ. ಗಿಳಿ ಪ್ರಿಯೆ! ನಮ್ಮೂರಿನ ಮಲ್ಲಮ್ಮಾ, ಮುನೆಮ್ಮಾ ಹುಲ್ಲಿಗಂತ ಬಂದು ತೆನೆ ಮುರಿದು ರವಿಕೆಯೊಳಗೆ ಅಡಗಿಸಿದಾಗ, ಎದೆ ಮುಂದೆ ಉಬ್ಬುತ್ತಿತ್ತು ಆಗ ಅಲ್ಲಿ ‘ಟಸೆಲ್’ ಉದುರುತ್ತಿತ್ತು! ಕೆಲವೊಮ್ಮೆ ತೆನೆ ಬೆತ್ತಲಾಗಿ […]

Back To Top