ಕಾವ್ಯಯಾನ

ಕಾವ್ಯಯಾನ

ಜೀವನಕ್ಕೊಂದು ಕ್ಲಾಸ್ ಶೀಲಾ ಭಂಡಾರ್ಕರ್ ನಾನೊಂದು ಹೆಜ್ಜೆ ಇಡುವುದರಲ್ಲಿ..ಸಾಗುತ್ತದೆ. ನಾಲ್ಕು ಹೆಜ್ಜೆ ಮುಂದೆ ನನ್ನ ಜೀವನ. ಪುನಃ ನನ್ನ ಒಂದು ಹೆಜ್ಜೆಗೆ ಅದು ಮತ್ತೆ ನಾಲಕ್ಕು. ಆದರೂ ನಗುತ್ತಲೇ ಇದ್ದ ನನ್ನ ನೋಡಿ. ಕೇಳಿತೊಮ್ಮೆ ನನ್ನದೇ ಮನಸ್ಸು. ನಗುತ್ತಲೇ ಇರುವಿಯಲ್ಲ.. ಬದುಕೇ ನಿನ್ನಿಂದ ಬಲು ಮುಂದೆ ಸಾಗಿದ್ದರೂ..!! ನಾನಂದೆ.. ಎಷ್ಟು ವೇಗವಾಗಿ ಸಾಗಿದರೂ ಇದ್ದೇ ಇದೆಯಲ್ಲ ಮುಂದೆ ಗಡಿ.. ಅಲ್ಲಿಂದ ಇಡಲಾದೀತೆ ಒಂದೇ ಒಂದು ಅಡಿ. ಅಲ್ಲಿ ನಿಂತು ಕಾಯುತ್ತಿರಲಿ. ತಲುಪುತ್ತೇನೆ ನಾನು ನನ್ನದೇ ವೇಗದಲ್ಲಿ ನನ್ನದೇ […]

ಗಾಳೇರ್ ಬಾತ್

ಗಾಳೇರ್ ಬಾತ್-02 Housekeeping ನ ಆ ದಿನಗಳು.…….         ಈ ಲೇಖನದ ತಲೆಬರಹ ಓದಿದರೆ ನಿಮಗೆ ಆಶ್ಚರ್ಯವಾಗಬಹುದು. ಓದಿದವರಿಗೆ ಅಷ್ಟೇಕೆ ಕೇಳಿದವರಿಗೂ ಕೂಡ ವಿಚಿತ್ರ ಅನಿಸುತ್ತದೆ. ಯಾಕೆಂದರೆ ನನ್ನ life ಯೇ ಒಂತರಾ ವಿಚಿತ್ರ. ನಾನೇನೋ ಅವತ್ತು ಟೂರ್ ಪೀಸ್ ಗಾಗಿ ಬಂದು ಬೆಂಗಳೂರು ಸೇರ್ಕೊಂಡ್ ಬಿಟ್ಟೆ. ಸೇರ್ಕೊಂಡ್ ಅನಂತರದಲ್ಲಿ hotel ನಲ್ಲಿ cleaner ಆಗಿ ಕೆಲಸ ನಿರ್ವಹಿಸಿದೆ. ಆ hotel ಮಾಲೀಕ ಸರಿಯಾಗಿ ಸಂಬಳ ಕೊಡುವುದಿಲ್ಲ ಎಂದು ತಿಳಿದ ಮೇಲೆ ಅನಿವಾರ್ಯವಾಗಿ ದುಡಿದ ಶ್ರಮ ಅಲ್ಲಿಯೇ […]

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ನಿನ್ನ ಬಿಟ್ಟು ನಾನು ಬಹುದೂರ ಬಂದಿರುವೆನು ಗೆಳೆಯ ನೀನು ಅತ್ತು ಕೂಗಿದರೂ ಕೇಳಿಸದಾಗಿದೆ ನನಗೀಗ ಗೆಳೆಯ ಇಷ್ಟು ದಿನ ಪ್ರೀತಿಯ ಭ್ರಮಿಸಿ ಕನವರಿಸಿ ನಿತ್ರಾಣವಾಗಿರುವೆನು ನಾನು ಮನವೀಗ ಅರಸಿಬಂದರು ಮರುನೋಡದೆ ಒಪ್ಪಿಕೊಳ್ಳದಾಗಿದೆ ಗೆಳೆಯ ಬಿಸಿಲ್ಗುದುರೆಯೇರಿ ಮೋಹದ ಓಣಿಯ ಜೀವಜಲಕ್ಕಾಗಿ ಓಡಿದೆ ನಾನು ಹೆಜ್ಜೆಗಳು ಬಸವಳಿದು ಕಣ್ಣರಳಿಸಲಾರದೆ ಕಳೆಗುಂದಿದೆ ಗೆಳೆಯ ಘಮಭರಿತ ಸುಮವೀಗ ನಿರ್ವಾತಕ್ಕೆ ಸಿಲುಕಿ ಕಠಿಣ ಶಿಲೆಯಾಗಿ ಬದಲಾಗಿದೆ ಕ್ರಿಯೆಗೆ ಪ್ರತಿಕ್ರಿಯಿಸುವ ಸೂಕ್ಷ್ಮ ಸಂವೇದನೆಗಳ ಕಳೆದುಕೊಂಡಿದೆ ಗೆಳೆಯ ನೀನೀಗ ಒಲವ ಅಮೃತಧಾರೆಯನ್ನೇ ಸ್ಪುರಿಸಿದರೂ […]

ಕಾವ್ಯಯಾನ

ನಿರುಪದ್ರವಿ ವಸುಂಧರಾ ಕದಲೂರು ಗಿಡಗಂಟಿ ಬಳಿ ಹೂ ಕೊಯ್ಯಲು ಹೋದೆ; ಮೈ ಮೇಲೆ ಕಪ್ಪು ಇರುವೆ ಹತ್ತಿದೆ. ಅದು ಹಾದಿ ತಪ್ಪಿತೆ ಅಥವಾ ನಾನು ತಪ್ಪಿದೆನೆ ಬೆರಳ ಬೆಟ್ಟಗುಡ್ಡ ಏರಿಳಿದು, ಅಂಗೈ ರೇಖೆ ಅಳೆದು, ಸರಸರಾ ಸರಸರಾ ಸಂಚರಿಸಿತು ಸಾವಧಾನವೇ ಇಲ್ಲ ಸರಸರಾ ಸರಸರಾ.. ನೋಡುತಿದ್ದೆ ಕಂಗೆಟ್ಟದ್ದು ಯಾರು ಭುಜದ ಮೇಲೆ; ಹಣೆ, ಮೂಗು, ಕೆನ್ನೆ ಮೇಲೆಲ್ಲಾ ಹರಿದಾಡಿತು ಸರಸರಾ ಸರಾಸರಾ.. ಈ ಮೈ, ಈ ಜೀವವುಳ್ಳ ನನ್ನನ್ನು ಹೊತ್ತ ಮೈ ; ಬಲು ಬಂಜರೆನಿಸಿತೇನು ಎದೆಗಿಳಿಯಲಿಲ್ಲ; […]

ಗಾಳೇರ್ ಬಾತ್

ಅಂಕಣ ಗಾಳೇರ ಬಾತ್-01 ಮೊದಲ ಬಾರಿ ರಾಜಧಾನಿಗೆ….. ಇವತ್ತಿನ ನನ್ನ present situation ನೋಡಿದರೆ ರಾಜಧಾನಿಯ ನನ್ನ ಮೊದಲ ಭೇಟಿ, ಹೀಗೆ ಇತ್ತು ಎಂದು ಯಾರೂ ಊಹಿಸಲು ಸಾಧ್ಯವಿಲ್ಲ. ಅದು ಅಷ್ಟೊಂದು ಭಯಾನಕರೂ ಅಲ್ಲ. ಅದು ಅಷ್ಟೊಂದು ಆನಂದಮಯನೂ ಅಲ್ಲ. ಅದೊಂತರ ವಿಶಿಷ್ಟವಾದ ಬೇಟಿ ಎನ್ನಬಹುದು. ಆದರೆ ಈ ತರದ ಬೇಟಿ ಯಾವ ಮಕ್ಕಳಿಗೂ ಆಗಬಾರದು ಎನ್ನುವುದು ನನ್ನ ಈ ಲೇಖನದ ಆಕಾಂಕ್ಷೆ ಆಗಿದೆ. ನನ್ನ ನೆನಪಿನ ಬುತ್ತಿ ಬಿಚ್ಚಿ ಒಮ್ಮೆ ಹೊರಳಿ ನೋಡಿದಾಗ, ಬೆಂಗಳೂರಿನ ಬೇಟಿ […]

ಕಾವ್ಯಯಾನ

ಅಯ್ಯೋ… ಸಂತೇಬೆನ್ನೂರು ಫೈಜ್ನಾಟ್ರಾಜ್ ಮುರಿದು ಬಿಟ್ಟಿರಾ…ಛೆ..ಬಿಟ್ಟಿದ್ದರೆ ನೆಲದ ಮೇಲೆ ಆಕಾಶ ನೋಡ್ತಾ ನಾಲ್ಕು ದಿನ ಹೇಗೋ ಬಾಳುತ್ತಿತ್ತು ಅಯ್ಯೋ ಹರಿದು ಹಾಕಿದಿರಾ…ಛೆ ಮನವರಳೋ ನಾಲ್ಕಕ್ಷರ ಬರೆದು ಹಾಕಿದ್ದರೆ ಸಾಕಿತ್ತು ಕಿತ್ತೇಕೆ ಎಸೆದಿರಿ…ಛೆ ಮಳೆ ಬಂದಿದ್ದರೆ ಮೈ ಮುರಿದು ಚಿಗುರುತ್ತಿತ್ತೇನೋ ಪಾಪ ಏನಂದಿರಿ….ಛೆ ತುಸು ಕಾದು ನೋಡಿದ್ದರೆ ನಿಮ್ಮಂತೆಯೇ ಇರುತ್ತಿದ್ದರೋ…ಏನೋ… ಮುಖ ತಿರುವಿ ಬಿಟ್ಟಿರಾ… ಛೆ ನಗ್ತಾ ಒಂದೆರಡು ಮಾತಾಡಿದ್ದರೆ ಹೂ ನಗೆ ಕೊಡುತ್ತಿದ್ದರೇನೋ….! ಬಾಗಿಲು ಹಾಕಿಯೇ ಬಿಟ್ಟಿರಾ…‌ಛೆ ಒಲವ ಒಲವಿಂದ ನೋಡದೇ ಹಳದಿ ಕಣ್ಣೇಕೆ ಬಿಟ್ಟಿರಿ ಪಾಪ […]

ಪ್ರಸ್ತುತ

ಗ್ರಾಮಮಟ್ಟದಿಂದ ರಾಜ್ಯ ಮಟ್ಟದವರೆಗೂ ಸ್ವಾವಲಂಬನೆ ಗಣೇಶಭಟ್ ಮಾನ್ಯ ಪ್ರಧಾನಿಯವರು ಸ್ವಾವಲಂಬಿ ಭಾರತ, ಗ್ರಾಮಮಟ್ಟದಿಂದ ರಾಜ್ಯ ಮಟ್ಟದವರೆಗೂ ಸ್ವಾವಲಂಬನೆಯ ಕುರಿತು ಟ್ವೀಟಿಸಿದ್ದಾರೆ. https://twitter.com/PMOIndia/status/1253562403544915970 ಇಂದು ದೇಶ ಅನುಸರಿಸುತ್ತಿರುವ ಬಂಡವಾಳವಾದ ನೀತಿಯಿಂದ ಈ ಉದ್ದೇಶ ಈಡೇರಲು ಸಾಧ್ಯವಿಲ್ಲ.ಲಕ್ಷ ಲಕ್ಷ ಕೋಟಿ ಹಣ ಸುರಿದರೂ ಅಷ್ಟೇ. ಮಿಶ್ರ ಆರ್ಥಿಕನೀತಿ, ಗಾಂಧೀವಾದ,ಸರ್ವೋದಯ,ಜೆಪಿ ಚಿಂತನೆ,ಸಮಾಜವಾದ ಮುಂತಾದವುಗಳೆಲ್ಲವೂ ಬಂಡವಾಳವಾದದ ವಿವಿಧ ರೂಪಗಳು. ಕಮ್ಯೂನಿಸಮ್ ಎಂಬುದು state capitalism. ಪ್ರಾದೇಶಿಕ ಸ್ವಾವಲಂಬನೆಗೆ ಬೇಕಾದುದು ನವ ಆರ್ಥಿಕ ಚಿಂತನೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಆಧರಿಸಿ ರೂಪುಗೊಳ್ಳುವ ತಳ ಮಟ್ಟದ […]

ಪುಸ್ತಕ ಸಂಗಾತಿ

ಬರ್ಫದ ಬೆಂಕಿ ನಾಗರೇಖಾ ಗಾಂವಕರ್ ಗೆಳತಿ ನಾಗರೇಖಾ ಗಾಂವಕರ ಅವರ ಪುಸ್ತಕಗಳು ತಲುಪಿ ಬಹಳ ದಿನಗಳಾದರೂ ಓದಿದ್ದು ಈ ವಾರ..ಭರವಸೆಯ ಕವಯಿತ್ರಿ, ಕತೆಗಾರ್ತಿಯಾಗಿ ಗುರುತಿಸಿಕೊಳ್ಳುತ್ತಿರುವ ಉತ್ತರ ಕನ್ನಡದವರು. “ಬರ್ಫದ ಬೆಂಕಿ” ಹೆಸರೇ ಹೇಳುವಂತೆ ಹೊಸ ರೀತಿಯ ಕಾವ್ಯ ಕಟ್ಟುವಿಕೆಯ ಪ್ರಯತ್ನ. ನನಗೆ ಸ್ವಲ್ಪ ಸಂಕೀರ್ಣವೆನಿಸಿದ ಕವಿತೆಗಳನ್ನು ಶ್ರೀ ಸುಬ್ರಾಯ ಚೊಕ್ಕಾಡಿಯವರ ಮುನ್ನುಡಿಯ ಹಿನ್ನೆಲೆಯಲ್ಲಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸಿದೆ. ಇಲ್ಲಿನ ಕವಿತೆಗಳು ಭಾವ, ಅನುಭವದ ಹಿನ್ನೆಲೆಯಲ್ಲಿ ಸಹಜವಾಗಿ ಹೊಮ್ಮಿದಂಥವು. ಮಾಗುವುದೆಂದರೆ ಅವಳ ಕವಿತೆಗಳು ಕಾಲಾತೀತ ಕವಿತೆಗಳು ಬಾನ್ಸುರಿಯ ನಾದ […]

ಅನುವಾದ ಸಂಗಾತಿ

ಮೌನ ಕನ್ನಡ ಕವಿತೆ: ನಾಗರಾಜ ಹರಪನಹಳ್ಳಿ ಇಂಗ್ಳಿಷಿಗೆ: ನಾಗರೇಖಾ ಗಾಂವಕರ್ ನಾಗರಾಜ ಹರಪನಹಳ್ಳಿ ನಾಗರೇಖಾ ಗಾಂವಕರ್ ಕನ್ನಡ ಕವಿತೆ ಮೌನ ಮೌನದಲ್ಲೂ ನಾನು ಸುಳಿದಾಡುವೆ ಒಬ್ಬಳೇ ಇರುವೆ ಎಂದು ಭಾವಿಸಬೇಡ ಸುಳಿಯುವ ಗಾಳಿಯಲ್ಲಿ ಎರಡು ನಿಟ್ಟುಸಿರುಗಳಿವೆ ಅವು ಪ್ರೇಮದ ಪಲ್ಲವಿಗಳಾಗಿ ಬದಲಾಗಿ ಬಿಡಲಿ ಕಣ್ಣಲ್ಲಿ ನಕ್ಷತ್ರಗಳು ಹಾಡಲಿ ಕಾಲ್ಗೆಜ್ಜೆಗಳಲ್ಲಿ ಏಳು ಸುತ್ತಿನ ಮಲ್ಲಿಗೆ ಅರಳಲಿ ನೀನುಟ್ಟ ಸೀರೆ ಸೆರಗ ತಾಗಿದ ಗಾಳಿ ಪ್ರೇಮದ ನವಿರು ಹೊತ್ತು ತಂತು ಆಡಿದ ಆಡದೇ ಉಳಿದ ಮಾತು ಮೌನಗಳ ಸಂಕಲನ ಮೋಡಗಳಲ್ಲಿ […]

ಕಾವ್ಯಯಾನ

ಹಸಿರು ಕುದುರೆ ನೀ.ಶ್ರೀಶೈಲ ಹುಲ್ಲೂರು ಹಸಿರು ಕುದುರೆ ರಾಜನೊಂದು ಸಂಜೆ ತನ್ನ ರಾಜ ತೋಟದಲ್ಲಿ ಬರಲು ಮೋಜುಗರೆವ ಹಕ್ಕಿಯುಲಿಗೆ ಸೋತುಹೋದನು ಹಚ್ಚಹಸಿರು ಕಂಡ ತಾನು ಮೆಚ್ಚಿ ಹರುಷ ಸೂಸುತಿರಲು ಹುಚ್ಚು ಮನದಿ ಆಸೆಯೊಂದು ಹುಟ್ಟಿಕೊಂಡಿತು ಹಸಿರು ಸಿರಿಯ ನಡುವೆ ನಲಿದು ಹೊಸತನೊಂದ ಯೋಚಿಸುತಲಿ ಹಸಿರು ಕುದುರೆ ಏರೊ ಕನಸು ತುಂಬಿಕೊಂಡನು ಬೀರಬಲ್ಲನನ್ನು ಕರೆದು ಕೊರೆವ ಆಸೆ ಹೇಳಿಕೊಂಡು ವಾರದಲ್ಲಿ ಹಸಿರು ಕುದುರೆ ತರಲು ಹೇಳಿದ ಉಕ್ಕಿಬರುವ ನಗೆಯ ತಡೆದು ಅಕ್ಕರೆಯಲಿ ಒಪ್ಪಿಕೊಂಡು ಸಿಕ್ಕ ಸಿಕ್ಕ ಊರಿನಲ್ಲಿ ಸುಮ್ಮನಲೆಯತೊಡಗಿದ […]

Back To Top