ಕಾವ್ಯಸಂಕ್ರಾಂತಿ

ಕಾವ್ಯಸಂಕ್ರಾಂತಿ

ಸಾಕೊಂದಿಷ್ಟು ಕವಿತಾ ಸಾರಂಗಮಠ ಉತ್ತರಾಯಣನ ಪುಣ್ಯ ಕಾಲಕೆ ಗದ್ದಲದ ಅಂಧರ ಮಂಡಿಪೇಟೆಯಲ್ಲಿ ಸಂಕ್ರಮಣ ಕಾಲಕೆ ಕಣ್ಣಾವೆಗಳಾದರೂ ಸಂಧಿಸಿವೆ ಸಾಕೊಂದಿಷ್ಟು ಈ ಕಾಲಕೆ..! ಹ್ಯಾಪಿ ಪೊಂಗಲ್ ಡೇ ಎಂಬ ಜಾಹೀರಾತಿಗೆ ಸಂತೋಷ ಉಕ್ಕಿ ಮೋಬೈಲ್ ಮಾತಲಿ ತೊಡಗಿದವರ ನಡುವೆಯೂ ಕುಂಟರಿಬ್ಬರ ತೆವಳುವಿಕೆಗೆ ಗಾಳಿಯಾದರೂ ಬೀಸಿದೆಯಲ್ಲ ಸಾಕೊಂದಿಷ್ಟು ಈ ಕಾಲಕೆ..! ಭವಿಷ್ಯ ಕೇಳಿ ಮದುವೆಯಾಗಬಾರದು ಎಂಬ ನುಡಿಗೆ,ಕಣ್ಣುಗಳ ಒದ್ದೆಮಾಡಿಕೊಂಡಿದ್ದೇನಿಲ್ಲಿ ಬಿಕ್ಕಿಸಿ ಅತ್ತಾಗ ಬೀದಿ ನಾಯಿಯಾದರೂ ನಲುಗಿತಲ್ಲ ಸಾಕೊಂದಿಷ್ಟು ಈ ಕಾಲಕೆ..! ಹಬ್ಬವೆಂದರೆ ಕಿಬ್ಬದಿಯ ಕೀಲು ಮುರಿಸಿಕೊಂಡು,ಗೇಣು ಭೂಮಿಗೆ ಕಾದಾಡಿ ನ್ಯಾಯ […]

ಅನುವಾದ ಸಂಗಾತಿ

ಸುನೀತ ಸಹಮನಸ್ಕರ ಮದುವೆಗೆ ತಡೆಯ ತರಲಾರೆನಾನು. ಪ್ರೀತಿಯದು ಪ್ರೀತಿಯಲ್ಲ ಕಂಡಂತೆಬದಲಾದ ಪರಿಸರವ ತಾನೂ ಬದಲುತ್ತಲಿರೆ,ಅಥವಾ ಪ್ರೇಮಿ ನಿಲುವಲ್ಲಿ ಪಲ್ಟಿಯಾದಂತೆ:ಇಲ್ಲವೇ ಇಲ್ಲ! ಅದೊಂದು ಸದಾಸ್ಥಿರ ಚಿನ್ಹೆಬಿರುಗಾಳಿಯೆದುರಿಗೂ ಕಂಪಿಸದೆ ನಿಲುವದು.ಅಲೆವ ಹಡಗುಗಳಿಗೆಲ್ಲ ಅದುವೆ ಸ್ಥಾಯಿ ಚುಕ್ಕೆದೂರ ತಿಳಿದರೂ ಅದರ ಬೆಲೆ ಅರಿವ ಮೀರಿದ್ದುಪ್ರೀತಿಯಲ್ಲ ಕಾಲನ ಗುಲಾಮ, ಸುಂದರಾಂಗಗಳುಇವೆ ಅವನ ಡೊಂಕು ಕುಡುಗೋಲಿನ ಅಂಕೆಯಲಿಪ್ರೀತಿಯ ಬದಲಿಸದು ಅವನ ಕ್ಷಣಿಕ ತಾಸು ವಾರಗಳುನಾಶದಂಚಿನವರೆಗೂ ತಾಳುವುದು ಕೆಚ್ಚಿನಲಿ.ರುಜುಮಾಡಿ ತೋರಿದರೆ ನನ್ನೀ ಮಾತು ತರವಲ್ಲನಾನು ಕವಿಯೇ ಅಲ್ಲ, ಪ್ರೇಮಿಯೂ ಎಲ್ಲಿಲ್ಲ. ***** Let me not […]

ಬದುಕು

ಬದುಕು ತಂತಿಯ ಆಟ ಡಾ.ಗೋವಿಂದ ಹೆಗಡೆ ಮೊನ್ನೆ ೧೧ರಂದು ಅಪರಾತ್ರಿಯಲ್ಲಿ ಬೇಲೂರು ತಲುಪಿದ್ದು. ನಿನ್ನೆ ಬೆಳಿಗ್ಗೆ (೧೨/೧/೨೦) ಚೆನ್ನಕೇಶವನ ದರ್ಶನ ಮುಗಿಸಿ ಚಪ್ಪಲಿ ಸ್ಟ್ಯಾಂಡ್ ಗೆ ತೆರಳಿದೆ. ನಾಲ್ಕು ಹೆಜ್ಜೆ ಗಳ ದೂರದಲ್ಲಿ ಆ ವೃದ್ಧರು ಕೂತಿದ್ದರು. ಕೈಯಲ್ಲಿ ಮೇಲೆ ತೋರಿಸಿದ ಚಿತ್ರದ ತಂತಿಗಳ ಗೊಂಚಲು ‌‌. “ಯಜಮಾನರೇ ಏನಿದು” ಅಂದೆ. ಇವು ಪಜಲ್ಸ್ ಅಂದರು. ತಮ್ಮ ಕೈಯಲ್ಲಿ ಬಿಡಿಯಾಗಿ ಇರಿಸಿಕೊಂಡಿದ್ದ ತಂತಿಯ ಆಟಿಕೆಯನ್ನು ತೋರಿಸಿ “ನೋಡಿ ಈ ರಿಂಗ್ ಇದೆಯಲ್ಲ, ಇದನ್ನು ಹೊರತೆಗೆಯಬೇಕು” ಅಂತ ತೋರಿಸಿದರು. […]

ಕಾವ್ಯಯಾನ

ರಥ ಸಪ್ತಮಿ ಹೊಸ ಪಥದಿ ಮೂಡಿ ಬಂದ ಮಂಜಿನ ತೆರೆ ಸರಿಸಿ ನಕ್ಕಳಿವಳು ಎಳ್ಳು ಬೆಲ್ಲವ ನೀಡಿ ‘ಒಳ್ಳೆಯ ಮಾತಾಡು’ಅಂದಳು ಸೂರ್ಯ ನಕ್ಕಿದ್ದುಂಟೇ! ಸಿಡಿ ಮಿಡಿ ಅನ್ನುತ್ತಲೇ ಬಿಸಿ ತೋಳುಗಳ ಬಳಸಿ ಅಪ್ಪಿಕೊಂಡ. ******** ಪ್ರೇಮಲೀಲಾ ಕಲ್ಕೆರೆ

ಕಾವ್ಯಸಂಕ್ರಾಂತಿ

ಪರಿವರ್ತನೆಯ ಪರ್ವಕಾಲ  ಅವ್ಯಕ್ತ ಅನಂತ ಆಗಸದಿ ಸ್ವಚ್ಛಂದ ಕ್ರಮಿಸುವನು, ಆದಿತ್ಯ ಸ್ನೇಹರಾಶಿಗಳ ಮನೆಯಿಂದ ಮನೆಗೆ, ಧನುವಿಗೆ ಕೈಬೀಸಿ ಮಕರನಿಗೆ ಕೈಚಾಚುತಲಿ, ಕಾಯದ ನಾಡಿಗಳಿಗೆ ಉತ್ತರಾಯಣಾಗಮನದ ಸಂಭ್ರಮ… ಜೀವಲೋಕದ ದಿನಕರನ ಕಣಕಣದ ಆಟದ ಪರಿಯೋ ! ರಾತ್ರಿ ಮಾಗಿ ಹಗಲು ಹಿಗ್ಗಿ, ವಿರಸ ಕಳೆದು ಸರಸ ಬೆಳೆದು, ಶೀತ ಕರಗಿ ಶಾಖವರಳಿ, ಬಂಜೆ ಬಾಡಿ ಭೂ ರಮೆಯಾಗಿರಲು, ರವಿತೇಜನ ತಂಪಿಗೆ ಹಬ್ಬಿತೆಲ್ಲೆಡೆ ಸಂಕ್ರಮಣದ ಸಡಗರ… ಸ್ವಾಗತಿಸುವ ಸಂಭ್ರಮದಿ ಸಂತಸವ ಹಂಚುತಲಿ, ಎಳ್ಳು ಬೆಲ್ಲ ಕಡಲೆ ಕೊಬ್ಬರಿ ಕಬ್ಬು ಬಾಳೆ […]

ಕಾವ್ಯಸಂಕ್ರಾಂತಿ

ಸಂಕ್ರಾಂತಿ ಪ್ರಮಿಳಾ ಎಸ್.ಪಿ. ಪಥ ಬದಲಿಸುವ ನೇಸರನನ್ನು ಶರಶೆಯ್ಯಯ ಮೇಲೆ ಮಲಗಿ ಕಾದಿದ್ದನಂತೆ ಗಾಂಗೇಯ…. ಪುಣ್ಯಕಾಲಕ್ಕಾಗಿ! ಪೃಥ್ವಿಯ ತಿರುಗುವಿಕೆಯಲಿ ದಿನಕರನ ಮೇಲಾಟದಲಿ ಋತುಗಳ ಓಡಾಟದಲಿ ಇಳೆಯ ಜೀವಿಗಳ ಹೊಸ ವರುಷದ ಹುರುಪಿನಲಿ ವರುಷಕ್ಕೊಮ್ಮೆ ಬರುವುದೇ ಸಂಕ್ರಾಂತಿ ಉಳುವ ಯೋಗಿಯು ಬೆಳೆದ ಹುಲುಸಾದ ಫಸಲು ಮನ ತುಂಬಿ ಮನೆ ತುಂಬುವ ತವಕದಲಿರೆ ದುಡಿದ ದನಕರುಗಳ ಮಜ್ಜನಕ್ಕಿಳಿಸಿ ಮೈದಡವಿ ಹಿಗ್ಗು ತರುವುದೇ ಸಂಕ್ರಾಂತಿ ಕುಗ್ಗಿದ ಕೊರಗಿದ ಅಹಂ ಒಳಗೆ ಬೀಗಿದ ಮನಗಳು ಎಳ್ಳು ಬೆಲ್ಲ ನೀಡಿ-ಪಡೆದು ಹಗುರಾಗುವ ಘಳಿಗೆಯೇ ಸಂಕ್ರಾಂತಿ […]

ಕಾವ್ಯಸಂಕ್ರಾಂತಿ

ಸುಗ್ಗಿಯ ಸಂಭ್ರಮ ರತ್ನಾ ಬಡವನಹಳ್ಳಿ ಬಂದಾನೋ ಭಾಸ್ಕರ ಬೆಳ್ಳಿಯಾ ರಥವೇರಿ ಬುವಿಗೆ ಚೆಲ್ಲುತ ಬೆಳಕ ಹೊನ್ನಕಿರಣಗಳ ಕಾಂತಿ ದಿಕ್ಕು ಬದಲಿಸು ದೆಸೆಯ ತಿರುಗಿಸುತ ಸವಾರಿ ತಂದು ಧರೆಯಲಿ ಮಕರ ಸಂಕ್ರಾಂತಿಯ ಸಂಭ್ರಮ ಊರ ಬಾಗಿಲಿಗೆ ಹಸಿರು ತೋರಣವ ಕಟ್ಟಿ ತಲೆಗೊಂದು ಚೌಕದಾ ಪೇಟವಾ ಧರಿಸಿ ಎಳ್ಳು,ಬೆಲ್ಲ,ಕೊಬ್ಬರಿ ಕಬ್ಬಿನ ಸವಿಯ ಸವಿಯುತ ಬೆಳೆದ ಧಾನ್ಯಗಳ ರಾಶಿಯ ಮಾಡುವ ಸಂಭ್ರಮ ಎತ್ತುಗಳ ಅಲಂಕರಿಸಿ ಮೆರವಣಿಗೆ ಮಾಡುತಾ ಸುಗ್ಗಿಯ ಸಡಗರದಿ ಹುಗ್ಗಿಯನು ತಿನ್ನುತಾ ಕುಣಿ ಕುಣಿದು ನಲಿ ನಲಿದು ಹೆಜ್ಜೆ ಹಾಕುತ […]

ಕಾವ್ಯಸಂಕ್ರಾಂತಿ

ಹಳ್ಳಿಯ ಸಂಕ್ರಾಂತಿ ಸಂಭ್ರಮ ಸುಜಾತ ರವೀಶ್ ಹಬ್ಬಿದ ಮಬ್ಬು ಕಾವಳ ಹರ್ಯೋ ಹೊತ್ತು ನೇಸರ ತನ್ನ ರಥ್ವಾ ಹೊರಳ್ಸೋ ಹೊತ್ತು ಆರಂಬದ ಕೆಲ್ಸ ಮುಗಿದು ಇನ್ನ ಸ್ವಲ್ಪ ಪುರುಸೊತ್ತು ಪಟ್ಟ ಕಷ್ಟಕ್ಕೆ ಪ್ರತಿಫಲ ಎಣಿಸೋ ಹೊತ್ತು . ಭೂಮ್ತಾಯಿ ನಮ್ನೆಲ್ಲಾ ಹರಸ್ತಾ ನಿಂತವಳೇ ಕಾಳ್ಕಡ್ಡಿ ರೂಪ್ದಾಗೆ ಕಣಜಕ್ಕೆ ಬರ್ತೌಳೆ ಕಣದಾಗೆ ರಾಸಿ ರಾಸಿ ತುಂಬೈತೆ ನೆಲ್ಲು ಆಳೆತ್ತರ ಪೇರ್ಸೈತೆ ಮೇವಿಗೆ ಒಣಹುಲ್ಲು . ಬನ್ನಿ ಎಲ್ಲ ಸಂತೋಸ್ವಾಗಿ ಹಬ್ಬ ಮಾಡೋಣ ಹಸಿರು ತಂದು ತಲ್ಬಾಗ್ಲಿಗೆ ತೋರ್ಣಾವಾ ಕಟ್ಟೋಣ […]

ಕಾವ್ಯಸಂಕ್ರಾಂತಿ

ಗಝಲ್ ಸಂಕ್ರಾಂತಿ ವಿಶೇಷ ಎ.ಹೇಮಗಂಗಾ ಹೊಸ ವರುಷದೊಡೆ ಹರುಷವಿನ್ನೂ ಮೂಡಲಿಲ್ಲ ಬಂದರೇನು ಸಂಕ್ರಾಂತಿ? ದುರ್ದಿನಗಳ ಕರಾಳ ನೆನಪಿನ್ನೂ ಮಾಸಲಿಲ್ಲ ಬಂದರೇನು ಸಂಕ್ರಾಂತಿ? ದಕ್ಷಿಣದಿಂದ ಉತ್ತರದೆಡೆಗೆ ನಿಶ್ಚಿತ ಪಥದಲಿ ಸೂರ್ಯನ ಚಲನ ಸ್ವಾರ್ಥದ ಪಥವ ಮನುಜನಿನ್ನೂ ಬದಲಿಸಲಿಲ್ಲ ಬಂದರೇನು ಸಂಕ್ರಾಂತಿ ? ಯಾಂತ್ರಿಕ ಬದುಕಲ್ಲಿ ತುಂಬುವುದು ಸುಗ್ಗಿಯ ಸಂಭ್ರಮ ಅಲ್ಪಕಾಲ ಬಡವನೊಡಲ ಬಡಬಾಗ್ನಿಯಿನ್ನೂ ತಣಿಯಲಿಲ್ಲ ಬಂದರೇನು ಸಂಕ್ರಾಂತಿ? ಸೃಷ್ಟಿಕರ್ತನ ದೃಷ್ಟಿಯಲಿ ಯಾರು ಮೇಲು, ಯಾರು ಕೀಳು ಇಲ್ಲಿ? ಅಸಮಾನತೆಯ ಗೋಡೆಯನಿನ್ನೂ ಕೆಡವಲಿಲ್ಲ ಬಂದರೇನು ಸಂಕ್ರಾಂತಿ ? ಮಂದಿರ, ಮಸೀದಿ, […]

ಸ್ವಾತ್ಮಗತ

ಸಂಕ್ರಾಂತಿಯ ಸಂಭ್ರಮ ಕೆ.ಶಿವು ಲಕ್ಕಣ್ಣವರ ಸೂರ್ಯನ ಉತ್ತರಾಯಣದ ಪರ್ವ ಕಾಲ..! ಸಂಕ್ರಾಂತಿಯ ಆಚರಣೆ ಏಕೆ? ಈ ದಿನ ಎಳ್ಳಿಗೆ ಮಹತ್ವವೇಕೆ.!? ಭೂಮಿ ಮೇಲೆ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಸೂರ್ಯನೇ ಆಧಾರ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯನು ಪ್ರವೇಶಿಸುವ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಕರೆಯಲಾಗುತ್ತದೆ… ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ […]

Back To Top