ಕಾವ್ಯಯಾನ

ಕಾವ್ಯಯಾನ

ನಿಶೆಯನರಿಸಿ ಶಾಲಿನಿ ಆರ್. ನಿಶೆಯರಸಿ ನೇಸರ ಹೊಂಟ್ಯಾನ ನಿಶೆಯರಸಿ ಬಂದಾಳಾ ಸಂತೆಯೊಳಗೆ ಸದ್ದಿಲ್ಲದಂತೆ            ಬದುಕ ಅಡವಿಯಿದು            ಬೆತ್ತಲಾಗಿಹುದಿಲ್ಲಿಮನದ            ಭಾವಗಳು ಗುಟ್ಟುರಟ್ಟಾಗಿ            ಹರಿದಿಹುದಿಲ್ಲಿ ಈ ಹೊತ್ತು ಸರಸ ವಿರಸಗಳ ಸಮ ರಸ ಸಮ್ಮಿಳಿತದ ಭಾವ ಆ ಸುಖದ ನೋವ ಅನುಭವಿಸಿ ಅರಗಿಸಿ ಕನವರಿಸಿ ಮಾನಿನಿ ಸರಸಿ             ಅಂಚಿಲ್ಲದ ಸೆರಗಿಲ್ಲದ             ಸವಿನೆನಪ ಪಾಚಿಯ ಹೊದ್ದು             ಅಂಟಿಯು ಅಂಟದಿಹ ಬಾಳ             ಗದ್ದುಗೆಯಲಿ ನೆಮ್ಮದಿಯ  ನಿದಿರೆಗೆ ಮರುಳಾಗಿ ಮಲಗಿಹಳಿಲ್ಲಿ ಸುಖನಾಶಿನಿ… ******

ಕಾವ್ಯಯಾನ

ಬದುಕಿನ ಬಣ್ಣದಲ್ಲಿ ಅನಾಥ ಪ್ರೀತಿ ವೀಣಾ ರಮೇಶ್ ಪ್ರೀತಿ ಸಿಗದ ಒಂದಷ್ಟು ಮನಸುಗಳು ನಮ್ಮ ನಡುವೆ ಇವೆ ನೀವೇನು ಮಾಡಬೇಕಿಲ್ಲ ವಾತ್ಸಲ್ಯದ ಪ್ರೀತಿಗೆ ಬಣ್ಣ ತುಂಬಿದರೆ ಸಾಕು. ಆ ಮನಸ್ಸಿನೊಳಗೆ ಕನಸು ಕಟ್ಟಿದ ಬಣ್ಣ ಸುಂದರ ಬದುಕಿನ ಬಣ್ಣ ಯಾವ ಕಲ್ಮಶವು ಇಲ್ಲದ ತಿಳಿನೀರಿನ ಬಣ್ಣ. ಪ್ರೀತಿ ಸಿಗದ ,ಹೃದಯ ಭಾರವಾಗಿದೆ ,ಬಿಟ್ಟರೆ ಮನಸು ಹೂವಿನಷ್ಟು ಹಗುರ,ನೀವೇ ಎತ್ತಿ ನೋಡಿ ಅಷ್ಟೇನು ಭಾರವಿಲ್ಲ,ಎದೆಯೊಳಗೆ ನೋವು ತುಂಬಿದ ಭಾರ ವಷ್ಟೇ. | ಆ ಮನಸುಗಳಿಗೆ ನೀವೇ ರಂಗು ತುಂಬಿ […]

ಬದುಕು-ಬರಹ

ಅಮೃತಾ ಪ್ರೀತಮ್ ಜ್ಞಾನಪೀಠ ಪ್ರಶಸ್ತಿ ವಿಜೇತೆ, ಹೆಸರಾಂತ ಪಂಜಾಬಿ ಲೇಖಕಿ ಅಮೃತಾ ಪ್ರೀತಮ್..! ಅಮೃತಾ ಪ್ರೀತಮ್ ಹೆಸರಾಂತ ಪಂಜಾಬಿ ಲೇಖಕಿ, ಕವಯಿತ್ರಿ, ಕತೆಗಾರ್ತಿ, ಕಾದಂಬರಿಗಾರ್ತಿ. ಜ್ಞಾನಪೀಠ ಪ್ರಶಸ್ತಿ ವಿಜೇತೆ. ಅವಿಭಕ್ತ ಪಂಜಾಬಿನ ಲಾಹೋರಿನ ಬಳಿಯ ಗುಜರಾವಾಲೆಯಲ್ಲಿ 31ನೆಯ ಆಗಸ್ಟ್ 1919ರಂದು ಜನಿಸಿದರು. ಇವರ ತಂದೆ ಕರ್ತಾರಸಿಂಹ ‘ಹಿತಕಾರಿ’ ಸಹ ಅಂದಿನ ಪ್ರಸಿದ್ದ ಲೇಖಕರಲ್ಲೊಬ್ಬರು. ಪ್ರೀತಮ್ ತಮ್ಮ ಹನ್ನೊಂದನೆಯ ವಯಸ್ಸಿನಲ್ಲಿ ತಾಯಿ ರಾಜಕೌರ್ ಅವರನ್ನು ಕಳೆದುಕೊಂಡರು. ಅನಂತರ ತಂದೆಯ ಪೋಷಣೆಯಲ್ಲಿ ಬೆಳೆದು ಅವರ ಪ್ರೇರಣೆಯಿಂದಲೇ ಸಾಹಿತ್ಯ ರಚನೆಗೆ ತೊಡಗಿದವರು… […]

ಪುಸ್ತಕ ವಿಮರ್ಶೆ

ಮಾಯಾ ಕನ್ನಡಿ ಕಮಲಾ ಹೆಮ್ಮಿಗೆ ಕಮಲಾ ಹೆಮ್ಮಿಗೆಯವರ ‘ಹೊಸತಾದ ಸ್ತ್ರೀ‌ ಪ್ರಪಂಚ’ವೇ ಆಗಿದೆ ಈ‌ ‘ಮಾಯಾಕನ್ನಡಿ’ ಎಂಬ ಕಥೆಗಳ ಸಂಕಲನ..! ಸಾಹಿತ್ಯದ ವಿವಿಧ ಪ್ರಕಾರಗಳಿಗೆ ತಮನ್ನು ಒಡ್ಡಿಕೊಂಡಿರುವ ಲೇಖಕಿ ಕಮಲಾ ಹಮ್ಮಿಗೆಯವರು ಇದುವರೆಗೆ ಒಂಬತ್ತು ಅನುವಾದಿತ ಕೃತಿಗಳನ್ನು ಕೊಟ್ಟಿದ್ದಾರೆ. ನಾನಾ ಕಾರಣದಿಂದ ಕೇರಳದಲ್ಲಿ ನೆಲೆಸಿದ್ದರಿಂದ ಇವರು ಮಲೆಯಾಳೀ ಸ್ತ್ರೀ ಸಂಕಥನಗಳಿಗೆ ಕೈಹಚ್ಚಿದರು. ‘ಚಿರು ಕಥ’ ಎಂದು ಕರೆಸಿಕೊಳುವ ಸಣ್ಣ ಕಥೆಗಳ ಪ್ರಖರತೆ ಮನಗೊಂಡು ಅತ್ತಿ ಹಣ್ಣಿನಂಥ ಹೆಣ್ಣಿನ ಬದುಕನ್ನು — ಅಂದರೆ ಮೇಲೆ ಆಕರ್ಷಕವಾಗಿದ್ದು ಒಳಗೆ ಅರೆಕೊರೆಯಿದ್ದರೂ […]

ಕಾವ್ಯಯಾನ

ಮುಖ ಪುಸ್ತಕ ಗೌರಿ.ಚಂದ್ರಕೇಸರಿ ಮುಖ ಪುಸ್ತಕ ತೆರೆದರೆ ನಿತ್ಯ ಹತ್ತಾರು ರಿಕ್ವೆಸ್ಟುಗಳು ಕನ್ಫರ್ಮ್ ಮಾಡುವ ಎಂದರೆ ಮನಸು ಬುದ್ಧಿ ಹೇಳುತ್ತದೆ ಸ್ನೇಹದ ಅರಿಕೆ ಇಟ್ಟವರ ಕಥೆ ಹೇಳುತ್ತವೆ ಅವರ ಪೋಸ್ಟು ಲೈಕು, ಕಮೆಂಟುಗಳು ಅವೇ ಹಳಸಲು ಜೋಕುಗಳು ಫಾರ್ವರ್ಡ್ ಮೆಸೇಜುಗಳು ಯಾರೋ ಹೆಣೆದ ವಿಶ್ಶುಗಳು ಬೇಡವೆಂದರೂ ಬೆರಳು ತಾಗಿ ಬಿಡುತ್ತವೆ ಪುಟ್ಟ ನೀಲಿಯ ಬಾಕ್ಸಿಗೆ ಅಷ್ಟರಲ್ಲಿ ಬಂದು ಬೀಳುತ್ತದೆ ಒಂದು ‘ಹಾಯ್’ ನನ್ನ ಮೆಸೆಂಜರಿಗೆ ಇದು ಬೇಕಿತ್ತಾ ಎಂದು ಕೇಳುತ್ತದೆ ಮನಸು ಮೊಬೈಲ್ ಬೆಳಕು ಬೀರಿದಾಗಲೆಲ್ಲ ಗುಡ್ […]

ಕಾವ್ಯಯಾನ

ನಿಮ್ಮ ಸ್ಥಿತೀನೂ ಇದೇನಾ ಗಾಯತ್ರಿ ಆರ್. ಟ್ರಿಣ್….ಟ್ರಿಣ್….ಟ್ರಿಣ್… ರಿಂಗಣಿಸಿತು ಮನೆಯ ದೂರವಾಣಿ ಅತ್ತಲಿಂದ ಬಂತೊಂದು ಧನಿ ಕರ್ಕಶವಾಗಿ ಈ ಯುಗಾದಿಗೆ ರಜೆ ಇಲ್ಲ ನಾವು ಬರಲ್ಲ ಕಾಯಬೇಡಿ ನಮಗಾಗಿ ವಾರದಿಂದ ಮಗ, ಸೊಸೆ, ಮೊಮ್ಮಕ್ಕಳು ಬರುವರೆಂದು ಮಾಡಿದ ಸಿಹಿ ತಿಂಡಿಗಳೆಲ್ಲಾ ಅವಳ ನೋಡಿ ನಗುತ್ತಿತ್ತು ವ್ಯಂಗ್ಯವಾಗಿ. ಅಹ..ಹಾ ಅಹ…ಹಾ ಅಹ…ಹಾ. ಮನೆಯ ಮೂಲೆಯ ಪಲ್ಲಂಗದಲ್ಲಿ ಪವಡಿಸಿದ್ದ ಪತಿರಾಯ ಮಡದಿಯ ಹುಸಿನಗುವಿಂದ ಎಲ್ಲವನ್ನೂ ಅರಿತೆಂದ ನಿನ್ನ ಮನೆಕಾಯ ನನ್ನನ್ನೂ ಬಿಡದೆ, ನಿನಗೂ ಆಗದೆ, ಸಿಹಿ ಕರಿವಾಗ ನೋಡಿಲ್ಲಿ ಆದ […]

ಲಹರಿ

ಹೀಗೊಂದು ಕಾಲಕ್ಷೇಪ ರಾಮಸ್ವಾಮಿ ಡಿ.ಎಸ್. ಹೀಗೊಂದು ಕಾಲಕ್ಷೇಪ ಕಾಲ ಚಲಿಸುತ್ತಲೇ ಇದೆ. ಭೂಮಿ ಚಪ್ಪಟೆಯಾಗಿರದೆ ದುಂಡಗಿರುವ ಕಾರಣ, ಸಮಯ ಅನ್ನೋದು ಪೂರ್ವದಿಂದ ಸುರುವಾಗಿ ಪಶ್ಚಿಮಕ್ಕೆ ಹೋದ ಹಾಗೆ ಸೂರ್ಯನ ಚಲನೆಗೆ ತಕ್ಕಂತೆ ವ್ಯತ್ಯಾಸವಾಗುವುದು ಸಹಜ. ಪೂರ್ವದ ದೇಶಗಳನ್ನು ಬೆಳಗಿದ ಬೆಳಕಿನ ಎಂಜಲು ನಿಧಾನವಾಗಿ ಪಶ್ಚಿಮದ ದೇಶಗಳಿಗೆ ಬೀಳುತ್ತೆ. ಆದರೆ ಪಾಶ್ಚಿಮಾತ್ಯರ ಪ್ರಭಾವ ಅದ್ಯಾಕೋ ಪೂರ್ವದ ದೇಶಗಳ ಮೇಲೆ ಹೆಚ್ಚಾಗುತ್ತಿರುವ ಕಾರಣ ಪೂರ್ವದ ಕಾಲದಲ್ಲೇ ಹೊಳೆದ ಜ್ಞಾನವನ್ನು ಪೂರ್ವ ದೇಶದ ಜನ ಮರೆತು ಪಾಶ್ಚಿಮಾತ್ಯರ ರೀತಿ ರಿವಾಜು ಅನುಕರಿಸಿದ […]

ಕಾವ್ಯಯಾನ

ನಮ್ಮ ನಡುವಿನ ಅಂತ ವೀಣಾ ರಮೇಶ್ ಎಲ್ಲಾ ದಿನಗಳೂ ಖಾಲಿ ಇದ್ದರೂ ಮನಸಿನ ದಾರಿಯಲಿ ನೀ ನಿರದಿದ್ದರೂ ಮುಳ್ಳುಗಳೇನಿಲ್ಲ ಚುಚ್ಚಲು ಕಲ್ಲುಗಳಿಲ್ಲ ಎಡವಲು ಬರವಿರದಿದ್ದರೂ ನಿನ್ನ ನೆನಪಿಗೆ ಬೇಸರವೆನಿಸಿದೆ ಮನಸಿಗೆ ಗೆಳತೀ ಎಲ್ಲೆಲ್ಲೂ ನೀ ಸಿಗದೆ … ಯಾಕೆ ಸಮಾನಾಂತರ ರೇಖೆಗಳಾಗಿದ್ದೇವೆ ನಡುವೆ ಎಷ್ಟೊಂದು ಅಂತರದ ಅರಿವು, ಇರಲಿ ಸಮಾನ ಅಂತರ ಕಾಯ್ದುಕೊಂಡಿದ್ದೇವೆ, ಮಾತು, ಮೌನಗಳಲೂ ಬಿಗಿಅಂತರವೇ ಗೆಳತೀ….. ಮನಸಿನಲಿ ಭಾವನೆಗಳ ಕುಟ್ಟಿ ಪುಡಿ ಮಾಡಿರುವೆ ಆದರೆ ಮೊಳಕೆಯೊಡೆದ, ಹೃದಯ ತಟ್ಟುವ , ಉಸಿರು ಕಟ್ಟುವ, ನಿನ್ನದೆ […]

ಕಾವ್ಯಯಾನ

ನಗುವ ತೊಡಿಸಲೆಂದು ಶಾಲಿನಿ ಆರ್. ತಾಳ್ಮೆ ಕಳಕೋತಿದಿನಿ ದಿನದಿಂದ ದಿನಕ್ಕೆ, ಮರೆತೆನೆಂದರು ನೆನಪ ನೋವ ಎಳೆಯ ನೂಲುತಿದೆ ಗೆಳೆಯ, ಬೇಡ ಎನಗಿದು ಬೇಸರದ ಹೊದಿಕೆ ಸ್ವಚ್ಛಂದ ಹಕ್ಕಿಯಿದು ನಭದ ನೀಲಿಯಲಿ ಹಾರುವ ಬಯಕೆ, ಒಲವ ಮಳೆಯಿದು ನನಗಾಗಿ ಕಾಯುತಿದೆ, ಬಣ್ಣದ ಕುಂಚಗಳು ತುಂಟನಗೆ ಬೀರುತಿದೆ, ಅಂಕುಡೊಂಕಿನ ನವಿಲು, ಬಿಂಕ ತೋರಿಅಣಕಿಸುತಿದೆ, ಮನದ ಸಾರಂಗ ಮನಸಾರೆ ತಪಿಸುತಿದೆ, ಕಳೆದ ನೆನ್ನೆಗಳು ನಾಳೆಗಳ ಹುಡುಕುವಂತೆ ಬಾಗಿದ ಬೆನ್ನಿಗಿದು ನೋವಿನ ಕುಣಿಕೆ, ನಾ ಒಲ್ಲೆ ಗೆಳೆಯ ನಾಳೆಯ ಸೂರ್ಯನಿಗೆ ಸುಪಾರಿ ಕೊಟ್ಟು […]

ಮಕ್ಕಳ ಹಾಡು

ನಮ್ಮಯ ಬದುಕು ಮಲಿಕಜಾನ ಶೇಖ ಹಂಸಮ್ಮಾ ಬಂದಳು ಹಂಸಮ್ಮಾ ಕ್ವ್ಯಾಕ್ -ಕ್ವ್ಯಾಕ್ ಕ್ವ್ಯಾಕ್-ಕ್ವ್ಯಾಕ್ ನುಡಿಯುತ್ತಾ ಶ್ವೇತ ಬಣ್ಣ ನನ್ನದು ಹಾಲು-ಮೀನು ಕಂಡರೆ ನಾನು ಕರಿವೆ ಎಂದಳು ಮಕ್ಕಳ-ಮರಿಯನ್ನು. ಹುಂಜಪ್ಪಾ ಬಂದನು ಹುಂಜಪ್ಪಾ ಕುಕ್ಕು-ಕೂ ಕುಕ್ಕು- ಕೂ ಕೂಗುತ್ತಾ ತೆಲೆಯಲಿ ಫುಂಜ ನನ್ನದು ಹುಳವ-ಗಿಳವ ಕಂಡರೆ ನಾನು ಕರಿವೆ ಎಂದನು, ಹೆಂಡತಿ ಮಕ್ಕಳನು. ಕಾಗಣ್ಣ ಬಂದ ಕಾಗಣ್ಣ ಕಾವ್-ಕಾವ್ ಕಾವ್-ಕಾವ್ ಕಿರಚುತ್ತಾ ಕಪ್ಪು ಬಣ್ಣದು ನನ್ನದು ಅನ್ನದ ಅಗಳ ಕಂಡರೆ ನಾನು ಕರಿವೆ ಎಂದನು, ಬಂಧು-ಬಳಗವನು. ಗುಬ್ಬಕ್ಕಾ ಬಂದಳು […]

Back To Top