ಕಾವ್ಯಯಾನ

ಕಾವ್ಯಯಾನ

ಗಝಲ್ ಉಮೇಶ ಮುನವಳ್ಳಿ ಬೇಡಿದಾಗ ನೀ ಕೊಡದೇ ಹೋದರೆ, ಹುಡುಕುವಾಗ ನಿನಗೆ ಸಿಗದೇ ಇರಬಹುದು. ನೀಡಿದಾಗ ನೀ ಸ್ವೀಕರಿಸದೇ ಹೋದರೆ, ಬೇಡುವಾಗ ನಿನಗೆ ಸಿಗದೇ ಇರಬಹುದು. ಹಲುಬಿದಾಗ ನೀ ಹೊರಳಿ ನೋಡದಿರೆ, ಮರಳಿ ಬಂದಾಗ ನಿನಗೆ ಸಿಗದೇ ಇರಬಹುದು. ಕೊಡಲು ಬಂದಾಗ ನೀ ಕೊಸರಿಕೊಂಡರೆ, ಕನವರಿಸಿದಾಗ ನಿನಗೆ ಸಿಗದೇ ಇರಬಹುದು. ಬಯಸಿದಾಗ ನೀ ಬಿಗುಮಾನ ಬಿಡದಿರೆ, ಬೇಕೆಂದಾಗ ನಿನಗೆ ಸಿಗದೇ ಇರಬಹುದು. ಸನಿಹ ಬಂದಾಗ ನೀ ಮುನಿಸಿಕೊಂಡರೆ, ಸಹಿಸಿ ಬಂದಾಗ ನಿನಗೆ ಸಿಗದೇ ಇರಬಹುದು. ರೀತಿ ಬಿಟ್ಟಾಗ […]

ಕಾವ್ಯಯಾನ

ಅಸ್ತ್ರಗಳಿವೆ ಲಕ್ಷ್ಮೀ ದೊಡಮನಿ ಕಾಳಕೂಟ ಮೀರಿಸಬಲ್ಲ ವಿಷಗಳಿವೆ ನಮ್ಮೊಳಗೆ ಅಮೃತವ ಹಾಳುಮಾಡಬಲ್ಲ ಕುತಂತ್ರಿಗಳಿವೆ ನಮ್ಮೊಳಗೆ ಕಟುವಾಣಿ,ಅಶ್ಲೀಲ ವಿಚಾರ,ಸಂಶಯಗಳ ಮುಖೇನ ಅಂದದ ತನುವ ನಶಿಸಬಲ್ಲ ರಸಾಯನಗಳಿವೆ ನಮ್ಮೊಳಗೆ ಸಂಬಂಧದ ಲೆಕ್ಕವಿಲ್ಲ, ಸಮಯ-ಜಾಗದ ಪರಿವೆಯಿಲ್ಲ ಸ್ತ್ರೀಯರ ಆಸಿಸಬಲ್ಲ ಕ್ರಿಮಿಗಳಿವೆ ನಮ್ಮೊಳಗೆ ಪ್ರಗತಿಯ ರಸ್ತೆಯಿಂದ. ಧುಮ್ಮಿಕ್ಕುವವರ ಎಳೆಯುವ ಧ್ಯೇಯದಿಂದ ದೂರಾಗಿಸಬಲ್ಲ ಭಾವನೆಗಳಿವೆ ನಮ್ಮೊಳಗೆ ಅವನನ್ನುಹೊರುವ, ಅರ್ಧಾಂಗಿಯಾಗಬಲ್ಲ ಅವಳ ಅಸಮತೆಯಿಂದ ಕಾಣಬಲ್ಲ ನೋಟಗಳಿವೆ ನಮ್ಮೊಳಗೆ ಬೆರಳಿಂದ ಬ್ರಹ್ಮಾಂಡವರಿವ ಶಕ್ತಿ ಹುಟ್ಟಿದೆ ‘ಚೆಲುವೆ’ ಪುಸ್ತಕ ಸಂಸ್ಕೃತಿ ಅಳಿಸಬಲ್ಲ ಅಸ್ತ್ರಗಳಿವೆ ನಮ್ಮೊಳಗೆ *******

ಪುಸ್ತಕ ಸಂಗಾತಿ

ನಿನ್ನ ಪ್ರೀತಿಯ ನೆರಳಿನಲ್ಲಿ… ನೋವು ನಲಿವಿನ ಸ್ಪಂದನ ನಿನ್ನ ಪ್ರೀತಿಯ ನೆರಳಿನಲ್ಲಿ… ನೋವು ನಲಿವಿನ ಸ್ಪಂದನ ಲೇಖನಗಳ ಸಂಕಲನ ಎನ್. ಆರ್ ರೂಪಶ್ರೀ ಬೆನಕ ಬುಕ್ಸ್ ಬ್ಯಾಂಕ್ ಮೈಸೂರಿನಲ್ಲಿ ಅರ್ಥಶಾಸ್ತ್ರ ಉಪನ್ಯಾಸಕಿಯಾಗಿರುವ ರೂಪಶ್ರೀ ಅವರ ಜ್ಞಾನ ಜ್ಯೋತಿ – ಆಧ್ಯಾತ್ಮಿಕ ಲೇಖನಗಳ ಸಂಕಲನ, ಮೌನ ಕಾಲ ಮತ್ತು ಕನಸ ತುಂಬಿದ ಕವಿತೆ ಎಂಬ ಕವನ ಸಂಕಲನಗಳು, ನೆನಪಿನ ನವಿಲುಗರಿ ನೆಲಕ್ಕೆ ಬಿದ್ದಿತ್ತು, ಹೆಜ್ಜೆಯಲ್ಲಿ ಗೆಜ್ಜೆನಾದ ಕಥಾಸಂಕಲನಗಳು ಈ ಹಿಂದೆ ಪ್ರಕಟಗೊಂಡಿವೆ. ಮೂಲತಃ ಶಿರಸಿಯವರಾದ ಇವರು ಕವಿ ಕಾವ್ಯ […]

ಕಾವ್ಯಯಾನ

ನಾನೀಗಲೂ ನಿನಗೆ ಆಭಾರಿ. ಶೀಲಾ ಭಂಡಾರ್ಕರ್ ಕನಸೊಂದನ್ನು ಕನಸಾಗಿಯೇ ಉಳಿಸಿದಕ್ಕಾಗಿ, ಮತ್ತೆ ಮತ್ತೆ ಅದೇ ಕನಸಿನ ಗುಂಗಿನಲ್ಲಿ ಇರಿಸಿದಕ್ಕಾಗಿ, ನಿನಗೆ ನಾ ಸದಾ ಆಭಾರಿ. ಕನಸೊಂದಿತ್ತು ನನಗೆ ಸಮುದ್ರ ಕಿನಾರೆಯಲ್ಲಿ, ಮುಸ್ಸಂಜೆಯ ಹೊತ್ತಲ್ಲಿ, ಸೂರ್ಯನೂ ನಾಚಿ ಕೆಂಪಾಗಿ ನಮ್ಮನ್ನೋಡುತ್ತಾ ಮುಳುಗುತ್ತಿರುವಾಗಲೇ ಕೈಯೊಳಗೆ ಕೈ ಹಿಡಿದು ನಮ್ಮೊಳಗೆ ನಾವು ಕಳೆದು ಹೋಗುತ್ತಲೇ ಇರಬೇಕು ದೂರ ಬಲು ದೂರ ನಡೆದು. ಆ ದಿನವಿನ್ನೂ ಬರಲೇ ಇಲ್ಲ. ಸೂರ್ಯನು ನಾಚಿ ನಮ್ಮನ್ನು ನೋಡಲೇ ಇಲ್ಲ. ನಮ್ಮೊಳಗೆ ನಾವು ಕಳೆದು ಹೋಗಲೇ ಇಲ್ಲ. […]

ಕಾವ್ಯಯಾನ

ಕೀಲಿ ಕೈ ತರಲು ಧರಣೇಂದ್ರ ದಡ್ಡಿ ಯಾವ ದೇವರು ಕಣ್ಣು ತೆರೆಯಲೇ ಇಲ್ಲ ಯಾವ ದೇವರು ತಾನೇ ಕಣ್ಣು ತೆರೆದಾನು? ಕಲ್ಲಿನಲಿ ಯಾವುದೋ ಶಿಲ್ಪಿ ಕೆತ್ತಿದ ಮೂರ್ತಿ ಇಲ್ಲಿ ಮನಸ್ಸುಗಳೆಲ್ಲ ಕೋಟೆ ಬಾಗಿಲಿನ ಹಾಗೇಯೆ ಮುಚ್ಚಿಕೊಂಡಿವೆ ಮುಚ್ಚಿದ ಬಾಗಿಲಿಗೆ ಚಿಲಕ ಹಾಕಿದೆ ಜೊತೆಗೆ ದೊಡ್ಡದೊಂದು ಬೀಗವು ಕೂಡ ಹಾಕಿದ ಬೀಗದ ಕೀಲಿ ಕೈ ಸಮುದ್ರಕ್ಕೆ ಎಸೆದಿರುವಾಗ ನಾನೇ ಮೂರ್ಖ! ಈ ಕಲ್ಲು ದೇವರುಗಳೆಲ್ಲ ಕಣ್ಣು ತೆರೆಯುವುವು ಎಂದು ಕಾಯುತ್ತಿದ್ದೇನೆ ಇರಲಿ, ಆದರೂ ಒಂದು ಮಾತು ನೆನಪಿರಲಿ ದೇವರು […]

ಕಾವ್ಯಯಾನ

ಅನುವಾದಿತ ಟಂಕಾಗಳು ಮೂಲ ಕರ್ತೃ – ಸಂಪತ್ ಕುಮಾರ್ ಅನುವಾದ- ವಿಜಯ್ ಕುಮಾರ್ ಮಲೇಬೆನ್ನೂರು ನೀನಿತ್ತ ಜನ್ಮ ಬೇಡೆ ನಾ ಮರುಜನ್ಮ! ಭವಸಾಗರ ದಾಟಿಸು, ನೆನೆವೆನಾ ಕೊನೆ ಜೀವ ಕ್ಷಣಕು. Life bestowed by you Don’t need next life Rescue from worldly pursuits Always remember Till my last breath ಬರುವೆನಿಲ್ಲಿ ನೋವ ಮರೆಯೆ, ಭೇದ ಇಲ್ಲ ನಿನ್ನಲಿ. ಮಧು ಉಣಿಸಿ, ಮನ ತಣಿಸೈ “ಮಧುಶಾಲಾ” Come here To forget […]

ಕಾವ್ಯಯಾನ

ನೀ ಬರುವೆಯ ಒಮ್ಮೆ ಉಷಾ ಸಿ ಎನ್ ಬದುಕ ಜಂಜಾಟದಲ್ಲೀಗ, ಅಲೆಗಳ ಸಂಭ್ರಮದ ವಿಹಂಗಮ ನೋಟದಿ ಕಷ್ಟಸುಖಗಳ ಮೆಲುಕುಹಾಕುತ್ತಾ ಒಬ್ಬಂಟಿಗಳಾಗಿ ಬಿಟ್ಟಿದ್ದೇನೆ..!! ನಿನ್ನ ನೆನಪುಗಳ ಬದಿಗೊತ್ತಿ ಮರೆಮಾಚಿ ಕೈ ಚೆಲ್ಲಿದ್ದೇನೆ. ಹೊಸ ಬದುಕ ಹೊಸೆಯಲು ತುರಾತುರಿ ತಯಾರಿ ನಡೆಸಿದ್ದೇನೆ. ನೆನಪುಗಳಿಗೆ ಮುಕ್ತಿ ಸಿಕ್ಕಿತೆಂಬ, ಕ್ಷಣಿಕ ಸಂತಸ ಕೂಡ ಮೊಳಕೆಯೊಡಿಯುತ್ತಿಲ್ಲ..!! ಅದೆಲ್ಲೊ ಮೂಲೆಯಲ್ಲಿ ಅವಿತು ಕುಳಿತ ನೆನಪುಗಳು ಬರಸೆಳೆದು ಬರುತ್ತಿವೆ ನನ್ನತ್ತಲೇ!! ನನ್ನಂತರಾಳದ ಭದ್ರತೆಯ ಸರದಾರ, ಭರವಸೆಯ ಹರಿಕಾರ ವಿರಹದ ಕಾದಾಟಕೆ ಪೂರ್ಣವಿರಾಮವಿಟ್ಟು!! ಬಂದು ಬಿಡು ಒಮ್ಮೆ ಬದುಕು […]

ಅನುವಾದ ಸಂಗಾತಿ

ಮುದುಕ ಗ್ರೀಸ್ ದೇಶದ ರಾಷ್ಟ್ರ ಕವಿ ಕೋನ್ಸ್ಟಾ೦ಟಿನ್ ಪಿ ಕವಾಫಿ ಯ “ಏನ್ ಓಲ್ದ್ ಮ್ಯಾನ್”ಕವಿತೆಯ ನ್ನು ಕನ್ನಡಕ್ಕೆ ಅನುವಾದಿಸಿದ್ದೇನೆ. ಇದೊ೦ದು ವೃದ್ಧಾಪ್ಯದ ಲ್ಲಿ ನಿ೦ತು ಕಳೆದುಹೋದ ಯೌವನದ ಕಾಲವನ್ನು ಕುರಿತು ಯೋಚಿಸುತ್ತಾ ತಳ ಮಳ ಗೊಳ್ಳುವ ಚಿತ್ರವನ್ನು ಕಟ್ಟಿಕೊಡುವಸು೦ದರ ಕವನ. ನನ್ನ ಅನುವಾದದ ಜತೆಗೆ ಕವಾಫಿಯ ಕವನದ ಇ೦ಗ್ಲಿಶ್ ಪಠ್ಯವನ್ನೂ ಇಲ್ಲಿಕೊಟ್ಟಿದ್ದೇನೆ ಮೇಗರವಳ್ಳಿ ರಮೇಶ್ ಅಲ್ಲಿ, ಗದ್ದಲದ ಕೆಫೆಯ ಆ ಕೊನೆಯಲ್ಲಿತಲೆ ಬಗ್ಗಿಸಿ ಕುಳಿತಿದ್ದಾನೊಬ್ಬ ಮುದುಕಎದುರು ಟೇಬಲ್ಲಿನ ಮೇಲೆ ಹರಡಿದೆ ವೃತ್ತ ಪತ್ರಿಕೆ. ನಿಸ್ಸಾರ ಮುದಿತನದ […]

ಕಾವ್ಯಯಾನ

 ಎಲ್ಲಾ ಒಲವುಗಳು ಉಳಿಯುವುದಿಲ್ಲ  ವಸುಂಧರಾ ಕದಲೂರು ಪಡೆದುಕೊಳ್ಳಲಾಗದ ಒಲವು ನೋವಾಗಿ ಕಾಡುವಾಗ ಸಂತೈಸಿಕೋ ಮನವ.. ಏಕೆಂದರೆ, ಎಲ್ಲಾ ಒಲವುಗಳು ನಮ್ಮದಾಗಿ ಉಳಿಯುವುದಿಲ್ಲ. ಭೋರೆಂದು ಸುರಿದ ಮಳೆಯ ಹನಿ ಇಳೆಯ ಗರ್ಭಕ್ಕಿಳಿಯದೇ ಆವಿಯಾಗಿ ಬಿಡುವುದು ಕಡಲ ಅಲೆ ದಡಕ್ಕೆ ಅಪ್ಪಳಿಸಿದ ಚಿಪ್ಪೊಳಗೆಂದೂ ಮುತ್ತು ಕೂಡದು ಗಡಿಯಾರವೂ ಹಿಂದೆ ತಿರುಗಲಾರದ ಸಂಕಟಕ್ಕೆ ಆಗಾಗ್ಗೆ ನಿಸೂರ ನಿಟ್ಟುಸಿರಿಟ್ಟು ನಿಂತು ಬಿಡುವುದು ಚಿಗುರೊಡೆಯದ ಬೀಜಗಳ ಕತೆ ಗೊಬ್ಬರದ ಹಾಡಿನಲ್ಲಿ ಕೊನೆಯಾಗುವುದು ಒಲವು ಕನಸ ಕನವರಿಕೆಯಲ್ಲರಳಿ ಸುಗಂಧ ಸೂಸುವ ಮುನ್ನ ಭಗ್ನ ಸ್ವಪ್ನವಾಗಿಬಿಡುವುದು ಬರೆಯಲಾಗದ […]

ಲಾಕ್ ಡೌನ್ ದುರಿತಗಳು..

ದಾಖಲಿಸಿದ್ದ ಲಾಕ್ ಡೌನ್ ದುರಿತಗಳು ನಂದಿನಿ ಹೆದ್ದುರ್ಗ ದಾಖಲಿಸಿದ್ದ ಲಾಕ್ ಡೌನ್ ದುರಿತಗಳು.. ಕಳೆದ ವಾರ ನನ್ನ ಮೊಬೈಲ್ಲು ಬೆಂಗಳೂರಿಗರು ಕಳಿಸುತ್ತಿದ್ದ ಹೂ ಉದುರಿದ ಖಾಲಿ ರಸ್ತೆಗಳಿಂದಲೇ ತುಂಬಿಹೋಯ್ತು. ಒಂದು ರಸ್ತೆ ಹಳದಿ,ಮತ್ತೊಂದು ನೀಲಿ,ಮಗದೊಂದು ಕಡುಗೆಂಪು…ಇನ್ನೊಂದು ತಿಳಿಗುಲಾಬಿ.. ಆಹಾ… ಊರಿಗೆ ಊರೇ ಯಾರದೋ ಸ್ವಾಗತಕ್ಕೆ  ಕಾದವರಂತೆ ತೋರಣ ಕಟ್ಟಿಕೊಂಡಿದೆ… ಯಾವ ರಸ್ತೆಯಲ್ಲಿ ಯಾರು ನಡೆದರೂ ಎಲ್ಲಿ ನಲುಗುತ್ತದೊ ಎಂಬಂಥ ಪಕಳೆಗಳ ಹಾಸು. ಬೆಂಗಳೂರು ಎನ್ನುವ ಹೆಸರು ಬದಲಿಸಿ ಹೂವೂರು ಎನುವಷ್ಟು  ಹೂಮರಗಳು.. ಯಾರೊ ಇನ್ನೊಂದು ಜೋಕು ಕಳಿಸಿದ್ರು…ಮಹಾನಗರದ […]

Back To Top