ಕಾವ್ಯಯಾನ

ಕಾವ್ಯಯಾನ

ಗಝಲ್ ಎ.ಹೇಮಗಂಗಾ ಎಲ್ಲ ಜಂಜಡಗಳ ಮರೆಸುವ ಮಾಯೆಯಿದೆ ನಿನ್ನ ನಗುವಿನಲ್ಲಿ ಎಲ್ಲ ಒತ್ತಡಗಳ ಶೂನ್ಯವಾಗಿಸುವ ಕಲೆಯಿದೆ ನಿನ್ನ ನಗುವಿನಲ್ಲಿ ನನಗೆಂದೇ ದೈವ ಬುವಿಗೆ ಕಳಿಸಿದ ಕೊಡುಗೆ ನೀನು ಮಗುವೇ… ಎಲ್ಲ ಚಿಂತೆಗಳ ಇಲ್ಲವಾಗಿಸುವ ಮೋಡಿಯಿದೆ ನಿನ್ನ ನಗುವಿನಲ್ಲಿ ಕಾಲದ ಪರಿವೆಯಿಲ್ಲದೇ ಕಾದೆ ಬರಿದಾದ ಮಡಿಲು ತುಂಬಲೆಂದು ಎಲ್ಲೆಡೆಯೂ ಮುದ ಹರಡುವ ಮುಗ್ಧತೆಯಿದೆ ನಿನ್ನ ನಗುವಿನಲ್ಲಿ ಹೆಣ್ತನಕೆ ಹಿರಿಮೆ ತಂದ ತಾಯ್ತನದ ಭಾಗ್ಯ ನನ್ನದಾಗಿದೆ ಇಂದು ಅಶಾಂತಿಯ ತೊಡೆವ ಶಾಂತಿಯ ನೆಲೆಯಿದೆ ನಿನ್ನ ನಗುವಿನಲ್ಲಿ ಕಿವಿಗಳ ತಣಿಸುತಿವೆ ನಿನ್ನ […]

ಕಾವ್ಯಯಾನ

ಹೇ ರಾಮ್ ಡಿ.ಎಸ್.ರಾಮಸ್ವಾಮಿ ಅವತ್ತು ಆ ದುರುಳನ ಗುಂಡಿಗೆಹೇ ರಾಂ ಎನ್ನುತ್ತಲೇ ಗುಂಡಿಗೆಯಿತ್ತವನನ್ನೂಅನುಮಾನಿಸಿ ಅವಮಾನಿಸಿದವರುಮತ್ತೀಗ ವಿಝೃಂಭಣೆಯ ತುರೀಯದಲ್ಲಿಗತದ ನೋವುಗಳನ್ನರಿಯದೇ ಬರಿದೇಸ್ವಚ್ಛತೆಯ ಮಾತ ಭಜನೆ ಮಾಡುತ್ತಿದ್ದಾರೆ, ಪೊರಕೆ ಹಿಡಿದಂತೆ ಆ ಅವರ ಭಂಗಿಕುಡಿಸಿ ಅಮಲೇರಿಸುವ ಮಾತುನಾಳೆಗಿರಲಿ ಇವತ್ತಿಗೇ ನಕಲಿ ಸಾಬೀತಾಗಿನಿಜಕ್ಕೂ ಕೊಳೆ ತೆಗೆಯ ಹೊರಟವರೆಲ್ಲರಿಗೂಆಘಾತ, ಸಂವಿಧಾನದ ವಿಧಿಗೂ ವಿಧ ವಿಧದಮರು ಜೋಡಣೆಯ ವ್ಯಾಖ್ಯಾನ ಗಾಂಧಿ ಎಂದರೆ ಅವನೊಬ್ಬನೇ ತಾತಈ ದೇಶಕ್ಕಷ್ಟೇ ಅಲ್ಲ, ಅವನು ವಿಶ್ವ ವಿಖ್ಯಾತ.ಬೋಂಗು ಬಿಡುವವರಿಗೆ ಸತ್ಯ ಬೇಕಿರುವುದಿಲ್ಲಅವರದೇನಿದ್ದರೂ ಮನ ರಂಜನೆಯದೇ ಗುರಿಚಪ್ಪಾಳೆಗೆ ಖುಷಿಪಡುವವರಿಗೆ ಬೌದ್ಧಿಕತೆಯಅಗತ್ಯಕ್ಕಿಂತಲೂ ದಿರಿಸಿನದೇ […]

ಇತರೆ

“ಕಲ್ಲಂಗಡಿ ಹಣ್ಣಿನ ಪೂಜೆ” ತಾರಾ ಸತ್ಯನಾರಾಯಣ ನನ್ನ ಮದುವೆಯಾಗಿದ್ದ ಹೊಸದು ಮದುವೆಯಾಗಿ ಹದಿನೈದು ದಿನಕ್ಕೆ ಯುಗಾದಿ ಹಬ್ಬ ಬಂತು ಹಬ್ಬಕ್ಕೆ ನಮ್ಮಿಬ್ಬರನ್ನು ಕರೆದುಕೊಂಡು ಹೋಗಲು ನನ್ನ ಅಣ್ಣ ಬಂದ ಇವರಿಗೆ ಆಫೀಸಿನ ಕೆಲಸದ ನಿಮಿತ್ತ ಚೆನ್ನೈಗೆ ಹೋಗಬೇಕಾದ್ದರಿಂದ ಇವರು “ನಾನು ಬರಲು ಸಾಧ್ಯವಿಲ್ಲ ನೀನು ಹೋಗಿ ಬಾ “ಎಂದು ಹೇಳಿದರು. ನಾನು ಅಣ್ಣನ ಜೊತೆ ತವರಿಗೆ ಹೋದೆ.ಹಬ್ಬ ಮುಗಿಸಿಕೊಂಡು ಅಣ್ಣನ ಜೊತೆ ಗಂಡನ ಮನೆಗೆ ಹೊರಟೆ .ನಾನು ಹೋಗುವ ಹಿಂದಿನ ದಿನ ಅವನ ಫ್ರೆಂಡ್  ತೋಟದಿಂದ ಒಂದೆರಡು […]

ಕಾವ್ಯಯಾನ

ಅನುವಾದ ಸಂಗಾತಿ ಮೂಲ: ರಾಲ್ಫ ಯಾಕೊಬ್ಸೆನ್(ನಾರ್ವೆ ಕವಿ) ಕನ್ನಡಕ್ಕೆ: ಕಮಲಾಕರ ಕಡವೆ “ಸೂಕ್ಷ್ಮ ಸೂಜಿಗಳು” ತುಂಬಾನೇ ಸೂಕ್ಷ್ಮ ಈ ಬೆಳಕು.ಮತ್ತದು, ಇರುವುದು ಸಹ ಭಾಳ ಕಮ್ಮಿ. ಕತ್ತಲೋಬೃಹತ್ತರವಾದುದು.ಕೊನೆಯಾಗದ ರಾತ್ರಿಯಲ್ಲಿಸೂಕ್ಷ್ಮ ಸೂಜಿಯಂತೆ ಈ ಬೆಳಕು,ಮತ್ತದಕ್ಕೆ ಎಷ್ಟು ದೂರ ಕ್ರಮಿಸಬೇಕಿದೆಈ ಪಾಳು ಜಾಗದಲ್ಲಿ. ಎಂದೇ ಅದರೊಡನೆ ನಯವಾಗಿ ವರ್ತಿಸೋಣಆರೈಕೆ ಮಾಡೋಣ.ಮತ್ತೆ ಮುಂಜಾನೆ ತಿರುಗಿ ಅದು ಬರಲೆಂದುಹಾರೈಸೋಣ.********** “Just Delicate Needles” It’s so delicate, the light.And there’s so little of it. The darkis huge.Just delicate […]

ಇತರೆ

ಎಲ್ಲಿ ಕಳೆದು ಹೋಯಿತು ಆ ಜಾತ್ರೆಯ ಸೊಬಗು ಬಿದಲೋಟಿ ರಂಗನಾಥ್ ಎಲ್ಲಿ ಕಳೆದು ಹೋಯಿತು ಆ ಜಾತ್ರೆಯ ಸೊಬಗು ಅದು ಎಂಬತ್ತರ ದಶಕ ಬಂದ ಫಸಲನ್ನು ಕೂಡಿಟ್ಟು ಮನೆಗೊಯ್ದು ಅವರೆ ಸೊಗಡನು ಬಿಡಿಸುವ ಕಾಲ, ಇನ್ನೂ ಕ್ಯಾಮೇನಹಳ್ಳಿ ಜಾತ್ರೆ ತಿಂಗಳಿರುವಾಗಲೇ , ಕೂಲಿ ನಾಲಿ ಮಾಡಿ ಬಂದ ಸಣ್ಣ ಕಾಸಿನಲ್ಲೇ ಮಕ್ಕಳಿಗೆ ಬಟ್ಟೆ ತರುವ ಅಪ್ಪನ ಇರಾದೆ. ವಾರದ ಮುಂಚೆಯೇ ಸಂತೆ ಬಟ್ಟೆ ತಂದು ಪೆಟಾರಿಯಲ್ಲಿ ಬಚ್ಚಿಡುವ ಪ್ರೀತಿ.ಅದರಲ್ಲು ಮೂವರು ಮಕ್ಕಳಿಗೂ ಒಂದೆ ತರಹದ ಬಣ್ಣ ಬಣ್ಣದ […]

ಕಾವ್ಯಯಾನ

ಗಝಲ್ ರುಕ್ಮಿಣಿ ನಾಗಣ್ಣವರ ನೀ ಬರುವ ದಾರಿಯಲಿ ಕಂಗಳಿರಿಸಿ ಕಾಯುತಿರೆ ಕಾತುರದಿ ಸಂಧಿಸಲು ಬೇಗ ಬಾ ಕಾಣದ ನಿನ್ನನು ಹೊಳೆದಂಡೆಯೂ ಕೂಗುತಿರೆ ದಡಬಡಿಸಿ ಸಂತೈಸಲು ಬೇಗ ಬಾ ತುಟಿ ಮೇಲೆ ತರದ ಥರಥರ ಹೊಸಥರದ ಯೋಚನೆ ನೂರು ಪಟ್ಟಿ ಮಾಡಿರುವೆ ಎದುರು ಬದುರು ಕೂತು ಚರ್ಚಿಸಿ ನಾಳೆಗೊಂದ ಹೊಸಗನಸ ನೇಯಲು ಬೇಗ ಬಾ ಹೊತ್ತುಗಳೆಯಲರಿಯದ ಇಂದ್ರಿಯಗಳು ವಿರಹದಾಗ್ನಿಯಲಿ ಬೆಂದು ಚಡಪಡಿಸುತಿರೆ ಅಂಗೈಲ್ಹಿಡಿದ ಹರಳುಗಳು ಸಜೆ ಅನುಭವಿಸುತಿವೆ ಬಿಡುಗಡೆಗೊಳಿಸಲು ಬೇಗ ಬಾ ಹೃದಯಗೂಡಿನ ಬೆಚ್ಚನೆ ಭಾವಗಳು ನಿನಗಾಗಿ ಹಪಹಪಿಸಿ […]

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಎದೆಕದದ ಅಗುಳಿ ತೆಗೆದಂತೆ ಅದೊಂದು ಹಾಡು ಮತ್ತಕಡಲಲಿ ಮುಳುಗಿದಂತೆ ಅದೊಂದು ಹಾಡು ಚಿಟ್ಟೆಗಳ ಹಿಂಬಾಲಿಸುತ್ತ ಪರವಶ ಹುಡುಗ ಪುಲಕಗಳೆ ಬೊಗಸೆಗಿಳಿದಂತೆ ಅದೊಂದು ಹಾಡು ಸಂತೆಯ ಝಗಮಗಗಳಿಗೆ ಕಣ್ಣು ತೆತ್ತು ಪೋರಿ ಬಯಕೆಗಳಿಗೆ ಹರಯ ಬಂದಂತೆ ಅದೊಂದು ಹಾಡು ಕೋಲೂರಿ ತಡವರಿಸಿ ನಡೆದು ಇಳಿಸಂಜೆಗೆ ನೆನಪಮಡುವಲಿ ಮಿಂದಂತೆ ಅದೊಂದು ಹಾಡು ಸವೆದ ಜಾಡುಗಳ ಸವೆಸಿ ತಿರುಗಣಿ ಬದುಕು ‘ವಿಶು’ ನಡುವೆ ಕಾಡುವ ಕೊಳಲುಲಿಯಂತೆ ಅದೊಂದು ಹಾಡು ************

ಕಾವ್ಯಯಾನ

ಗಝಲ್ ಸುಜಾತಾ ರವೀಶ್ ಏಕೋ ತಿಳಿಯೆ  ವಿಷಾದದಲೆಗಳಲಿ ಮುಳುಗಿಬಿಟ್ದಿದೆ ಕವಿತೆ  ಏನೋ ಅರಿಯೆ ಅಂತರಂಗದಾಳದಲಿ ಹುದುಗಿಬಿಟ್ಠಿದೆಕವಿತೆ  ಸ್ಪರ್ಧೆಗಳ ಪ್ರವಾಹದ ಹುಚ್ಚುಹೊಳೆಯಲಿ ಕೊಚ್ಚಿಹೋಯ್ತೇಕೆ ಕವಿತೆ ? ಪರಸ್ಪರ ಪ್ರಶಂಸೆ ಮೆಚ್ಚುವಬ್ಬರದಲಿ ಮುಚ್ಚಿಬಿಟ್ಟಿದೆ ಕವಿತೆ  ಮನದಾಳದ ಭಾವಾಭಿವ್ಯಕ್ತಿ ಎಂಬುದೇ ಮರೆಸಿಬಿಟ್ಟಿದೆ ಕವಿತೆ  ಸವಾಲುಗಳ ಎದುರಿಸುತ ಯಶವನೇ ಮೆರೆಸಿಬಿಟ್ಟಿದೆ ಕವಿತೆ  ಪರರ  ನಿರ್ಣಯಗಳೆಂಬ ರಾಜಕೀಯದಲಿ ಸೋತುಬಿಟ್ದಿದೆ ಕವಿತೆ  ಪಕ್ಷಪಾತಗಳ ಸ್ಮಶಾನದಲಿ ಹೂತು ಹೋಗಿಬಿಟ್ಟಿದೆ ಕವಿತೆ ವಿಜಯವ ಅರಸುತಲಿ ಬಂಧನಗಳ ಮೀರಿಬಿಟ್ಟಿದೆ ಕವಿತೆ  ಸುಜಿಹೃದಯವ ಉರಿಸುತಲಿ ಚೈತನ್ಯ ಹೀರಿಬಿಟ್ಟಿದೆ ಕವಿತೆ ************

ಕಾವ್ಯಯಾನ

ಆಯುಧಕ್ಕಿಂತ ಹರಿತ ರಾಜು ದರ್ಗಾದವರ ಮೊನ್ನೆತಾನೆ ಗೊತ್ತಾಯ್ತು ಕವಿತೆಗಳು ಆಯುಧಕ್ಕಿಂತ ಹರಿತವೆಂದು! ಸಮಾಜಕ್ಕೆ ಅಪಾಯಕಾರಿಯೆಂದೀಗ ಘೋಷಿಸಿ ಜೈಲಿಗಟ್ಟಿದ್ದಾರೆ ಕವಿತೆಗಳನ್ನು ಬರೆದವನ. ಕವಿ ಸಿಕ್ಕಿರಬಹುದು ಆದರೆ ಆ ಕವಿತೆ ಅದೆಲ್ಲಿಯವರೆಗೂ ತಲುಪಿದಿಯೋ? ನಿಮ್ಮಲ್ಲಿಯೂ ಅಂತ ಕವಿತೆಯಿದ್ದರೆ ಪಸರಿಸಬೇಡಿ. ಸುಟ್ಟುಬಿಡಿ…! ಅವರಿಗೂ ಬೇಕಾಗಿದ್ದು ಅದೇ..!! ************

ಪ್ರಸ್ತುತ

ಅಕ್ಷರಸಂತ ಹಾಜಬ್ಬ ಕೆ.ಶಿವು ಲಕ್ಕಣ್ಣವರ ಸ್ವಂತ ದುಡುಮೆಯಿಂದ ಶಾಲೆ ಕಟ್ಟಿಸಿದ ಹರೆಕಳ ಹಾಜಬ್ಬರು ಪದ್ಮಶ್ರೀ ಪಡೆದ ಸಾಹಸಗಾಥೆ..! ಆ ವ್ಯಕ್ತಿ ಕೋಟ್ಯಾಧಿಪತಿಯಲ್ಲ. ಸ್ವಂತಮನೆಯೂ ಅವನಿಗೆ ಇರಲಿಲ್ಲ. ಉನ್ನತ ವಿದ್ಯಾಭ್ಯಾಸವಂತೂ ದೂರದ ಬೆಟ್ಟವಾದರೂ ಅಕ್ಷರ ಸ್ನೇಹಿ. ಮಂಗಳೂರಿನ ರಸ್ತೆ ಬದಿಗಳಲ್ಲಿ ಕಿತ್ತಳೆ ಹಣ್ಣು ಮಾರಿಕೊಂಡು ನಿತ್ಯ ಜೀವನ ಸಾಗಿಸುತ್ತಿರುವ ಹರೆಕಳ ಹಾಜಬ್ಬನವರು ತಮ್ಮ ಜೀವನ ಸುಃಖಗಿಂತಲೂ ಬೇರೆಯವರ ನೋವಿಗೆ ಸ್ಪಂದಿಸುವವರು… ಹಾಜಬ್ಬನವರು ಕಿತ್ತಳೆ ವ್ಯಾಪಾರದಿಂದ ಅವರಿಗೆ ದಿನಕ್ಕೆ ಲಭಿಸುವುದು ಕೇವಲ 100 ರಿಂದ 120ರೂಪಾಯಿ. ಮಂಗಳೂರು ನಗರದಲ್ಲಿ ಕಿತ್ತಳೆ […]

Back To Top