ಕಾವ್ಯಯಾನ

ಕಾವ್ಯಯಾನ

ದಲಿತ ಚೇತನ ಮನುಶ್ರೀ ಸಿದ್ದಾಪುರ ಓ ದಲಿತರ ಮಹಾಚೇತನವೇ ಇಗೋ ನಿನಗೆನ್ನಯ ನಮನ ಕಷ್ಟ-ಕಾರ್ಪಣ್ಯಗಳ ಬಳ್ಳಿಯಲಿ ಅರಳಿ ನಗುವ ಚೆಲ್ಲಿದೆ ಗುಲಾಬಿ ಯಂತೆ. ನರನಾಡಿಗಳ ಬತ್ತಿಯಾಗಿ ತಾನುರಿದು ಸುತ್ತಲೂ ಜ್ಞಾನದ ಬೆಳಕು ಹರಡಿದೆ. ಶೋಷಿತರ ದನಿಗೆ ಮೂಕನಾಯಕನಾಗಿ ಸೆಟೆದು ನಿಂತೆ ದೀನ ದಲಿತರ ಬದುಕಿನ ಉದ್ದಾರಕೆ. ಕಗ್ಗಲ್ಲಿನಲಿ ಮೂಡಿದೆ ಉಜ್ವಲ ಮೂರ್ತಿಯಾಗಿ ಕೂಗಿ ಕರೆದು ತೋರಿಸಿದೆ ಮಹಾಮನೆಯ ಬಿರುಕನು ಶಿಕ್ಷಣ ಸಂಘಟನೆ ಹೋರಾಟದ ತ್ರಿಪಟಿಕ ಸೂತ್ರ ದಲಿತರ ಬದುಕಿನ ಪಾವನದಿ ಸಾಗಿಬಂದ ಮಹಾಪಾತ್ರ. ಹೊನ್ನ ಚರಿತೆಯ ಮಹಾಪುರುಷರಲಿ […]

ಕಾವ್ಯಯಾನ

ಅಂಬೇಡ್ಕರ್ ಸ್ವಗತ ಮಧುಕುಮಾರ ಸಿ ಎಚ್ ಯಾವುದು ಆಗಬಾರದೆಂದು ನಾ ಎಣಿಸಿದೆನೋ ಅದು ಆಗಿಯೇ ತೀರಿದೆ ಅದಕ್ಕಾಗಿ ವಿಷಾದಿಸುತ್ತೇನೆ. ವ್ಯಕ್ತಿಪೂಜೆ ಬೇಡವೆಂದ ಮಾತು ಹಳ್ಳ ಹಿಡಿದು ಇಲ್ಲಿ ಈ ದಿನ ಪ್ರತಿಮೆಗೆ ಹಾರ ತುರಾಯಿ ಹಾಕಿ ಜೈಕಾರ ಮೊಳಗಿಸಿ ಅಭಿಮಾನ ತೋರುವ ಆಚರಣೆ ವಿಜೃಂಭಣೆಯಿಂದಲೇ ನಡೆದಿದೆ. ನಾಲ್ಕು ತಿಂಗಳು ಕಳೆದ ಬಳಿಕ ಅಲ್ಲಲ್ಲಿ ‘ಗಣೇಶನ’ ಕೂರಿಸಿ ಮತ್ತದೇ ಹಾರ ತುರಾಯಿ ಹಾಕಿ ಜೈಕಾರ ಮೊಳಗಿಸಿ ಕುಡಿದು ಕುಣಿದು ಕುಪ್ಪಳಿಸುವುದು ತಪ್ಪದೇ ನಡೆಯುವುದಿದೆ. ಎಡ-ಬಲ ಎರಡೆರಡು ಹೋಳಾಗಿ ಒಳಗೊಳಗೊಂದು […]

ಕಾವ್ಯಯಾನ

ಬಾಬಾರವರ ನೆನಪಲ್ಲಿ ಹೆಚ್ ರಾಠೋಡ ಬಾಬಾ ನಿನ್ನ ನೆರಳಿನಲ್ಲಿಭರತಖಂಡ ನಡೆದಿದೆ ಶ್ರೇಷ್ಠ ಭಾರತದೇಶ ಎಂಬ ಹೆಗ್ಗಳಿಕೆಯು ಪಡೆದಿದೆ ಭರತ ಭೂಮಿ ನಿತ್ಯ ನಿನ್ನ ನೆನೆದು ಹೆಜ್ಜೆ ಇಡುತ್ತಿದೆ ಪ್ರತಿ ಹೆಜ್ಜೆ ಹೆಜ್ಜೆಯಲ್ಲೂ ಧನ್ಯ ಸಾರ್ಥಕತೆ ಮೆರೆದಿದೆ ನೀನುಹಾಕಿಕೊಟ್ಟ ದಾರಿಯಲ್ಲೇ ಇಂದು ದೇಶ ಸಾಗಿದೆ ನಿನ್ನ ಜ್ಞಾನ ಪಾಂಡಿತ್ಯಕ್ಕೆ ವಿಶ್ವವೇ ತಲೆದೂಗಿದೆ ಸಮಾನತೆಯ ಭಾವದಲ್ಲಿ ಸಂವಿಧಾನ ರಚಿಸಿದೆ ಶ್ರೇಷ್ಠ ಸಂವಿಧಾನ ರಚಿಸಿದ ಶಿಲ್ಪಿ ಎಂದೆನಿಸಿದೆ ಭಾರತೀಯರ ಎದೆಯಲ್ಲಿ ನಿನ್ನ ಪ್ರತಿಮೆ ನಿಂತಿದೆ ಅಂಬೇಡ್ಕರ್ ಎಂಬ ನಾಮ ಅಜರಾಮರವಾಗಿದೆ ಭೀಮನೆಂಬ […]

ಕಾವ್ಯಯಾನ

ಬಡವರ ಆಕರ ರಾಹು ಅಲಂದಾರ ಓ ಬಡವರ ಆಕಾರ ದೀನ ದಲಿತರ ಸಾಹುಕಾರ ಜಗಜ್ಯೋತಿ ಅಂಬೇಡ್ಕರ್ ಹಾಕುವೆ ನಿಮಗೆ ನಮಸ್ಕಾರ ಬಡವರ ಉತ್ತರಕ್ಕಾಗಿ ದುಡಿದೆ ದೀನ ದಲಿತರ ಹಿತಕ್ಕಾಗಿ ನಡೆದೆ ಸಮಾನತೆಯನ್ನೇ ನುಡಿದೆ ಜನತೆಯ ಏಳಿಗೆಗಾಗಿ ಮಡಿದೆ ರಚಿಸಿದೆ ನೀ ಸಂವಿಧಾನ ಆಯಿತು ಸರ್ವರಿಗೂ ಅನುದಾನ ಕನಸಿಟ್ಟೆ ನೀ ಎಲ್ಲರಲ್ಲೂ ಸಮಾನ ನಮಗೆಲ್ಲಾ ನೀ ಆಶಾಕಿರಣ ಉಳಿದೆ ಎಲ್ಲರ ಮನದಲ್ಲಿ ಸಮಾನತೆಯನ್ನೋ ಬೆಳಕು ಚೆಲ್ಲಿ ನೆನಪಿಸುವರು ಜನತೆ ಬಾಳಲ್ಲಿ ಹುಟ್ಟಿ ಬಾ ಇನ್ನೊಮ್ಮೆ ಜಗದಲ್ಲಿ **********

ಪ್ರಸ್ತುತ

ಡಾ.ಬಿ.ಆರ್.ಅಂಬೇಡ್ಕರ್..! ಎಲ್ಲಾ ಜನಾಂಗೀಯ ನಾಯಕ ಮತ್ತು ಸರ್ವರ ಅದರಲ್ಲೂ ದಲಿತರ ಏಳಿಗೆಗಾಗಿ ದುಡಿದ ಡಾ.ಬಿ.ಆರ್.ಅಂಬೇಡ್ಕರ್..! ಏಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ. ಆ ನಿಮಿತ್ತವಾಗಿ ಈ ಪುಟ್ಟ ಲೇಖನ… ಅಂದು ಆ ಬಾಲಕ ಅಸ್ಪೃಶ್ಯತೆ, ಬಡತನವನ್ನು ಮೆಟ್ಟಿ ನಿಂತು ವಿದ್ಯಾಭ್ಯಾಸ ಮಾಡದೆ ಹೋಗಿದ್ದರೆ ಇವತ್ತು ಈ ಅಖಂಡ ಭಾರತದಲ್ಲಿ ಮರೆಯಲಾರದ ಚೇತನವೊಂದು ಸೃಷ್ಟಿಯಾಗುತ್ತಿರಲಿಲ್ಲವೇನೋ? ಆ ಬಾಲಕ ಯಾರೆಂದು ಕ್ಷಣಮಾತ್ರದಲ್ಲಿ ಊಹಿಸಬಹುದು. ಅದೇ ಡಾ. ಬಿ.ಆರ್. ಅಂಬೇಡ್ಕರ್. ಈ ಹೆಸರು ಹೇಳುತ್ತಿದ್ದಂತೆಯೇ ಮೈ ರೋಮಾಂಚನಗೊಳ್ಳುತ್ತದೆ… ಭೀಮರಾವ್ ರಾಮ್‍ಜಿ ಅಂಬೇಡ್ಕರ್ […]

ಪುಸ್ತಕ

ಅಸಹಾಯಕ ಆತ್ಮಗಳು ಸಣ್ಣ ಕಥೆಗಳು ವೇಶ್ಯಾವಾಟಿಕೆಯ ನರಕದ ಬದುಕಿಗೆ ಯಾವ ಹೆಣ್ಣು ಮಗಳೂ ಸ್ವಇಚ್ಚೆಯಿಂದ ಅಡಿಯಿಡುವುದಿಲ್ಲ. ಬದುಕಿನ ಹಲವು ಅನಿವಾರ್ಯ ಘಟನೆಗಳು ಮತ್ತು ಅವರುಗಳ ಬದುಕಿನಲ್ಲಿ ಬರುವ ಅನಿರೀಕ್ಷಿತ ವ್ಯಕ್ತಿಗಳು ಅವರನ್ನು ವೇಶ್ಯಾವಾಟಿಕೆಯ ಕೂಪದೊಳಗೆ ಬೀಳುವಂತೆ ಮಾಡುತ್ತಿವೆ. ಇಂತಹ ಹತ್ತಾರು ಹೆಣ್ಣುಮಕ್ಕಳನ್ನು ಲೇಖಕರು ಖುದ್ದಾಗಿ ಭೇಟಿಯಾಗಿ ಅವರ ಬಾಯಿಂದಲೇ ಕೇಳಿ ತಿಳಿದ ಅವರ ಬದುಕಿನ ಕರುಣಾಜನಕ ಕತೆಗಳೇ ಈ ಪುಸ್ತಕದ ಒಳಗಿರುವ ಆತ್ಮಗಳು. ಪ್ರಿಯರೆ,ನನ್ನ ‘ಅಸಹಾಯಕ ಆತ್ಮಗಳು’ my lang ನಲ್ಲಿ e-book ರೂಪದಲ್ಲಿ ಪ್ರಕಟವಾಗಿದೆ.ಬೆಲೆ ಕೇವಲ99=00 […]

ಕಾವ್ಯಯಾನ

ನನ್ನದಲ್ಲ ಬಿಡು ನೀ.ಶ್ರೀಶೈಲ ಹುಲ್ಲೂರು ಭಾರವಾದ ಹೆಜ್ಜೆಗಳಿಗೆ ಗೆಜ್ಜೆ ಏತಕೋ ನೊಂದುಬೆಂದ ಜೀವಕೀಗ ಅಂದವೇತಕೋ? ಕೋಪ ತಾಪ ಎಲ್ಲ ಬಿಡು ರೋಷವೇತಕೋ ನಮ್ಮ ಹಾಗೆ ಪರರ ತಿಳಿ ವಿರಸವೇತಕೋ? ನಮ್ಮ ನಡುವೆ ಕೊಳ್ಳಿ ಇಡುವ ಸುಳ್ಳು ಏತಕೋ ಅರಿತು ಬೆರೆವ ಮನಕೆ ಇರಿತ ದುರಿತವೇತಕೋ? ಅಳುವಿನಲೇ ನಲಿವ ಬದುಕು ಚಿಂತೆ ಏತಕೋ ನಾಕವಿಲ್ಲಿ ನರಕವಿಲ್ಲಿ ಕೊರಗು ಏತಕೋ? ನಾನು ನನದು ಎನುವ ಜನುಮ ಇನ್ನು ಏತಕೋ ಅವನ ಜೀವ ಅವನ ಕಾಯ ನನಗೆ ಏತಕೋ? *******

ಕಾವ್ಯಯಾನ

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಾವೆಲ್ಲ ಕಂದಿಲ ಮಂದತೆಯಲಿ ಹೊಸ ಕನಸುಗಳ ಕಂಡಿರುವೆವು ಕತ್ತಲ ಕೂಪದಿಂದ ಹೊರಬರಲು ಕಂದಿಲು ಹಿಡಿದು ಬಂದಿರುವೆವು ನಾಳೆಗಳು ನಮಗೂ ಬರಬಹುದೆಂಬ ಹೊಸ ಆಸೆಯ ಹೊತ್ತು ಬದುಕು ಬೆಳಕಿನಾಟದಲಿ ಕಳೆದು ಹೋದ ದಿನಗಳ ನೊಂದಿರುವೆವು ಮರೆಯಲಾಗದು ಹಚ್ಚಿಟ್ಟ ಕಂದಿಲು ಆರುವ ಮುನ್ನ ಉಂಡ ದಿನಗಳ ಎಣ್ಣೆ ಮುಗಿದಿತೆಂಬ ಭಯದಿಂದ ದಿನವು ನೊಂದ್ದಿದ್ದು ಕಂಡಿರುವೆವು ಬಡತನ ಸಿರಿತನ ಹಂಗುಗಳಿಲ್ಲದ ಕಂದಿಲು ಕತ್ತಲೆಯ ಕಳೆದಿದೆ ಮುಸ್ಸಂಜೆಯ ಗುಡಿಸಲು ಅರಮನೆಗಳಲಿ ಚೆಲ್ಲುವುದ ನೋಡಿರುವೆವು ಭರವಸೆಯೊಂದಿಗೆ ಕರಿ ಕತ್ತಲೆಯ ಕಳೆದು […]

ಸ್ವಾತ್ಮಗತ

ಶರಣೆ ನೀಲಾಂಬಿಕೆ..! ವಿಶಿಷ್ಟ ದಿಟ್ಟ ನಿಲುವಿನ ಚಿಂತಕಿ, ಅನುಭಾವಿ ಶರಣೆ ನೀಲಾಂಬಿಕೆ..! ಹನ್ನೆರಡನೆಯ ಶತಮಾನದಲ್ಲಿ ಅನೇಕ ಶರಣರು, ಸಾಧಕರು ತಮ್ಮ ಅನುಭಾವದಿಂದ ಕಲ್ಯಾಣ ಕ್ರಾಂತಿಗೆ ಕೊಡುಗೆಯಾದವರು. ಅವರಲ್ಲಿ ವಿಶಿಷ್ಟ, ಪ್ರಮುಖ ಚಿಂತಕಿ, ಅನುಭಾವಿ ದಿಟ್ಟ ನಿಲುವಿನ ಶರಣೆ ನೀಲಾಂಬಿಕೆ. ನೀಲಮ್ಮ ಬಸವಣ್ಣನವರ ಎರಡನೆಯ ಹೆಂಡತಿ. ಮೊದಲ ಪತ್ನಿ ಸೋದರ ಮಾವ ಬಲದೇವರ ಮಗಳು. ನೀಲಾಂಬಿಕೆ, ನೀಲಲೋಚನೆ, ನೀಲಮ್ಮ, ಮಾಯಾದೇವಿ ಎಂತೆಲ್ಲ ಹೆಸರಿರುವ ನೀಲಮ್ಮನ ಅಪ್ಪ ಅಮ್ಮ ಇವರ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಹರಿಹರ ಮತ್ತು ಭೀಮ ಕವಿಗಳು […]

ಕಾವ್ಯಯಾನ

ಒಂದಲ್ಲ—— ಎರಡು ಸೌಜನ್ಯ ದತ್ತರಾಜ ಹೇಳುತ್ತಾರೆಲ್ಲರೂ ನಾನು ನೀನು ಒಂದೇ ಎಂದು ಹೌದೆನಿಸುತ್ತದೆ ನೋಡಲು ಎದುರಿಗೆ ಇಬ್ಬರಿಗೂ ಇದೆ ಎರಡು ಕಣ್ಣು’ ಒಂದು ಮೂಗು ಒಂದು ಬಾಯಿ ಆದರೆ ಬಾಯೊಳಗಿನ ಹಲ್ಲುಗಳ ಲೆಕ್ಕ ಸಿಗುತ್ತಿಲ್ಲ ಮೆದುಳೊಳಗಿನ ಹುಳುಕುಗಳದ್ದು ಸಹ. ಈಗ ಹೇಗೆ ಹೇಳುವುದು ಮತ್ತೆ ಮತ್ತೆ ನಾನು ನೀನು ಒಂದೇ ಎಂದು!? ನಾನು ನೀನೂ ಒಂದೇ ಎನ್ನುತ್ತಲೇ ಇಬ್ಬರೂ ಒಂದಾಗಿ ಎರಡಾದವರು ನಾವು!…. ಇಬ್ಬರೂ ಒಂದಾಗಿದ್ದಾಗ ಸುತ್ತಲಿನವರೆಲ್ಲಾ ಹೇಳಿದರು ಇಬ್ಬರೂ ಒಂದಲ್ಲ ಬೇರೆ ಬೇರೆ ಎಂದರು ಈಗ […]

Back To Top