ಅನುವಾದ ಸಂಗಾತಿ

ಅನುವಾದ ಸಂಗಾತಿ

ಜುಲೈನ ಗಸಗಸೆಯ ಹೂಗಳು ಮೂಲ: ಸಿಲ್ವಯಾ ಪ್ಲಾತ್(ಅಮೇರಿಕಾ ಕವಿ) ಕನ್ನಡಕ್ಕೆ ಕಮಲಾಕರ ಕಡವೆ ಜುಲೈನ ಗಸಗಸೆಯ ಹೂಗಳು ಪುಟ್ಟ ಗಸಗಸೆಯ ಹೂವೇ, ಪುಟ್ಟ ನರಕದ ಜ್ವಾಲೆಯೇನೀನು ಏನೂ ಹಾನಿ ಮಾಡೆಯೇನು? ನೀ ಕಂಪಿಸುವಿ, ನಿನ್ನ ಮುಟ್ಟಲಾರೆ ನಾನುಜ್ವಾಲೆಗಳ ನಡುವೆ ಕೈ ಇಡುವೆ ನಾನು. ಏನೂ ಸುಡುತ್ತಿಲ್ಲ ನಿನ್ನ ನೋಡುವುದರಲ್ಲೇ ನಿತ್ರಾಣನಾದೆ ನಾನುಹಾಗೆ ಕಂಪಿಸುತ್ತ, ಸುಕ್ಕುಗಟ್ಟಿ, ಕಡು ಕೆಂಪಾಗಿ, ಬಾಯೊಳಗಿನ ಚರ್ಮದಂತೆ ಬಾಯಿಯೊ ಅಷ್ಟೇ ರಕ್ತರಂಜಿತರಕ್ತಮಯ ಲಂಗದಂತೆ! ಮುಟ್ಟಲಾರೆ ಆ ಹೊಗೆಯ ನಾನುಎಲ್ಲಿ ನಿನ್ನ ಮಾದಕತೆ, ನಿನ್ನ ವಾಕರಿಕೆ […]

ಕಾವ್ಯಯಾನ

ಸುಡುಗಾಡು ರಾಜು ದರಗಾದವರ ಸುಡುಗಾಡು ನೀನೆಷ್ಟು ಸಹೃದಯಿ, ಭೇದಭಾವವಿಲ್ಲದ ನಿನ್ನಲ್ಲಿ ಅದೆಂತಹ ತಿಳಿಮೌನ. ಮೇಲುಕೀಳು ಕಾಣದ ನಿನ್ನಲ್ಲಿ ಹೋಲಿಕೆಗೆ ಸಿಗದ ಐಕ್ಯತೆ. ದೊಡ್ಡವ ಚಿಕ್ಕವ ಅನ್ನೋ ತಾರತಮ್ಯವಿಲ್ಲದ, ಎಲ್ಲರನ್ನು ಸಮಾನಭಾವದಿಂದ ಸ್ವಾಗತಿಸುವ ನಿನ್ನದು ಅದೆಂತಹ ಧರ್ಮ…! ವೀರರನ್ನು ,ಹೇಡಿಗಳನ್ನು ಪುಣ್ಯವಂತರನ್ನು,ಪಾಪಿಗಳನ್ನು ಬೇರ್ಪಡಿಸುವ ಬುದ್ಧಿಯೆಂತು ಇಲ್ಲ. ಹೆಣ್ಣು,ಗಂಡು ಒಂದೇ ಎಂದು ಸಮಾನಕಾಣೋ ಹೃದಯವಂತಿಕೆ ನಿನ್ನಲ್ಲಿ ಬಿಟ್ಟು ಮತ್ತ್ಯಾರಲ್ಲಿ ಬರಲು ಸಾಧ್ಯ ಹೇಳು…? ಓ ಸ್ಮಶಾನವೇ…ನಿನಗೆ ನೀನೇ ಆದರ್ಶ…! ********

ಹಾಸ್ಯಲೋಕ

ನಾಯಿ ಬೇಕಾ ನಾಯಿ! ತಾರಾ ಸತ್ಯನಾರಾಯಣ ನಾಯಿ ಬೇಕಾ ನಾಯಿ! ನನ್ನ ನಾಲ್ಕು ವರ್ಷದ ಮಗಳು ಸೋನುಗೆ ನಾಯಿ ಕಂಡರೆ ತುಂಬಾ ಇಷ್ಟ.ಎಲ್ಲೇ ಹೋಗ್ತಾ ಇದ್ದರೂ……… ಬೀದಿ ನಲ್ಲಿ ಯಾವ ನಾಯಿ ನೋಡಿದರೂ……. .ನೋಡುತ್ತಾ ನಿಂತುಬಿಡುತ್ತಿದ್ದಳು.ಆ ಸ್ಥಳದಲ್ಲೇ ನಂಗೂ ನಾಯಿಮರಿಬೇಕು ತಂದುಕೊಡು ಅಂತ ಹಠ ಮಾಡುತ್ತಿದ್ದಳು. ಇವಳ ಜೊತೆ ನನ್ನ ಹೆಂಡತಿ ಬೇರೆ, “ನೋಡಿ ಮಗು ನಾಯಿಮರಿ ಬೇಕು ಅಂತ ಎಷ್ಟು ಹಠ ಮಾಡುತ್ತಾಳೆ ಅವಳ ಜೊತೆಗೆ ಒಂದು ನಾಯಿಮರಿ ಇದ್ದರೆ ಅವಳ ಪಾಡಿಗೆ ಅವಳು ಆಟ […]

ಕಾವ್ಯಯಾನ

ಕೊನೆಯೂ ಅಲ್ಲ! ರೇಖಾ ವಿ.ಕಂಪ್ಲಿ ನಾವು ಇಲ್ಲಿ ಮೊದಲು ಅಲ್ಲ ಕೊನೆಯು ಅಲ್ಲ ಮೊದಲಾದೊಡೆ ಮೊದಲಿಗರು ಕೊನೆಯಾದಡೆ ಕೊನೆಗಿರುವ ಎಮ್ಮ ಜೀವದಾಟದಲ್ಲಿ ನಾವೇ ಮೊದಲಿಗರು, ಕೊನೆಯವರು ಎಮ್ಮ ದುಃಖ ಎಮಗೆ ಹಿರಿದು ತಮಗೆ ಕಿರಿದು ಕಾಲನುರುಳಲಿ ಕವಿಯು ಬರೆಯಲಿ ಮೊದಲು ಕೊನೆಯ ನಡುವಿನಲಿ ಜೀವದೂಟದ ಎಲೆಯಲಿ ಕಾವ್ಯ ಕಥನವು ಉಳಿಯಲಿ ಕವಿ ಕಾಣದೇ ಅಳಿಯಲಿ ನಾವು ಇಲ್ಲಿ ಮೊದಲು ಅಲ್ಲ ಕೊನೆಯು ಅಲ್ಲ… ***********************************

ಕಥಾಗುಚ್ಛ

ಒಂದು ಸಾವಿನ ಸುತ್ತಾ ವೇಣುಗೋಪಾಲ್ ಕೆಲಸ ಮುಗಿದು ಮನೆಗೆ ಬರುವ ಹೊತ್ತಿಗೆ ರಾತ್ರಿ ಎಂಟು ಗಂಟೆಯಾಗಿತ್ತು. ಬಟ್ಟೆ ಬದಲಿಸಿ ಮುಖ ತೊಳೆದು, ಫ್ರಿಡ್ಜ್ನಲ್ಲಿದ್ದ ಎರಡು ಮೊಟ್ಟೆಗಳನ್ನ ತೆಗೆದುಕೊಂಡು ಬೆಳಗ್ಗಿನ ತಂಗಳಿಗೆ ಎಗ್ರೈಸ್ ಮಾಡಲು ಈರುಳ್ಳಿ ಕತ್ತರಿಸುತ್ತಿದ್ದೆ ಫೋನ್ ರಿಂಗಣಿಸಿತು ಅಪ್ಪನ ಫೋನ್ ಹಲೋ ಹೇಳಣ್ಣ.? ಎಲ್ಲಿದ್ದಿಲಾ.? ಇವಾಗ ಬಂದೆ ಮನೆಗೆ ಏನು ಹೇಳು.? ಮಾಗಡಿ ನಿಮ್ಮತ್ತೆ ಮಗ ಕೆರೆಗೆ ಬಿದ್ದನಂತೆ.. ಪೊಲೀಸೆರೆಲ್ಲ ಬಂದು ಹುಡುಕಿದರೂ ಸಿಕ್ಕಿಲ್ಲವಂತೆ ಅಲ್ಲಿ ಯಾರು ಇರೋದು ಕಾಣೆ..!? ಹೋಗು ಅದೇನ್ ವಿಚಾರಿಸು ಒಂದೇ […]

ಕಾವ್ಯಯಾನ

ಗಝಲ್ ಲಕ್ಷ್ಮಿಕಾಂತ ಮಿರಜಕರ ಮನೆಗಳು ,ಗದ್ದೆಗಳು ಮಳೆಗೆ ಕೊಚ್ಚಿ ಹೋದವು,ಮುಳುಗಿಲ್ಲ ಬದುಕು ಊರಿಗೆ ಊರುಗಳೇ ನೆರೆಗೆ ನಲುಗಿ ಹೋದವು ಮುಳುಗಿಲ್ಲ ಬದುಕು ಕನಸು ಮುರಿದಿದೆ ಮನಸು ಮುರಿದಿಲ್ಲ ರಟ್ಟೆ ಗಟ್ಟಿಯಿದೆ ಇನ್ನೂ ಕೆಸರು ತುಂಬಿದ ಭೂಮಿಯಲ್ಲೇ ಕಮಲ ಅರಳಿಸುವೆವು ಮುಳುಗಿಲ್ಲ ಬದುಕು ಕಣ್ಣಾಲಿ ತುಂಬೆಲ್ಲ ದುಡಿದು ಕೂಡಿಸಿ ಕಾಪಿಟ್ಟ ಬದುಕಾಧಾರಗಳ ಅವಶೇಷಗಳು ಭರವಸೆಯ ಬಣ್ಣ ತುಂಬಿ ವಿಶೇಷ ಮಾಡುವೆವು ಮುಳುಗಿಲ್ಲ ಬದುಕು ಕೈ ಹಿಡಿದಿಲ್ಲ ಪ್ರಭುತ್ವ,ಗಾಳಿಯಲ್ಲೇ ತೇಲಾಡುತ್ತಿವೆ ಸುಳ್ಳು ಆಶ್ವಾಸನೆಗಳು ಬಂದೇ ಬರ್ತಾರೆ ಒಂದಿನ ಬುದ್ಧಿ ಕಲಿಸುವೆವು […]

ಕಾವ್ಯಯಾನ

ಇವನಾರವ ಇವನಾರವ ರಾಜು ದರಗಾದವರ ಅಂದು ಇವ ನಮ್ಮವ, ಇವ ನಮ್ಮವ ಅಂದವನು; ಇಂದು ಇವನಾರವ,ಇವನಾರವ ಎನ್ನುತಿರುವನಲ್ಲ….! ಅಂದೇ ಕೇಳಿದ್ದರೆ ? ನಮ್ಮ ಅಜ್ಜನೋ ಅವರ ಅಜ್ಜನೋ ಗುನುಗುತ್ತಿದ್ದ. ರಕ್ತ ಚೆಲ್ಲಿದ ಭೂಮಿ ಹೇಳುತ್ತಿತ್ತು. ಕೇಳುವುದಾದರೆ ಜಂಗು ಹಿಡಿದ ಬಂದೂಕು ಕೇಳು, ಎದೆ ಸೀಳಿ ಕುಡಿದ ರಕ್ತದಾವುದು…!? ಹರಿದು ಮೂಲೆ ಸೇರಿದ ಬೂಟನ್ನ ಕೇಳು ವದಿಕೆ ತಿಂದ ಕಾಯದಾವುದು..!? ಅವರಿವರೆನ್ನದೆ ಒಡಲಬಳ್ಳಿ ಹಬ್ಬಿದ ಮೂಲ ಸಿಗುವುದಾದರೂ ಯಾರಿಗೆ..? **************

ಕಾವ್ಯಯಾನ

ಬುದ್ಧನಾಗಲು ರೇಖಾ ವಿ.ಕಂಪ್ಲಿ ಬುದ್ಧನಾಗಲು ಬುದ್ಧನಾಗಲು ಬದ್ಧ ವೈರಾಗಿಯಾಬೇಕಿಲ್ಲ ಬದ್ಧ ವೈರಿಗಳನ್ನು ಕ್ಷಮಿಸಿದರೆ ಸಾಕು ಬುದ್ಧನಾಗ ಬಹುದಲ್ಲವೇ? ಬುದ್ಧನಾಗಲು ಬೋಧಿ ವೃಕ್ಷದ ನೆರಳುಬೇಕಿಲ್ಲ ನಾನೆಂಬ ಅಂಧಕಾರದರಳು ತೆಗೆದರೆ ಸಾಕು ಬುದ್ಧನಾಗ ಬಹುದಲ್ಲವೇ? ಬುದ್ಧನಾಗಲು ಶುದ್ಧ ವೈಶಾಖದಲ್ಲಿ ಹುಟ್ಟಬೇಕಿಲ್ಲ ಶುದ್ಧ ಪರಿಶುದ್ಧ ಮನಸ್ಸಿರಲು ಸಾಕು ಬುದ್ಧನಾಗ ಬಹುದಲ್ಲವೇ? ಬುದ್ಧನಾಗಲು ರಾಜ್ಯ, ಸಂಸಾರ ಬಿಡಬೇಕಿಲ್ಲ ಸತ್ಸಂಗದ ವಿಚಾರಧಾರೆ ಸಾಕು ಬುದ್ಧನಾಗ ಬಹುದಲ್ಲವೇ? ****************

ಕಾವ್ಯಯಾನ

ಹೆದರುವುದಿಲ್ಲ! ವಿಜಯಶ್ರೀ ಹಾಲಾಡಿ ಹೆದರುವುದಿಲ್ಲ ನಿಸರ್ಗದೊಂದಿಗೆ ದುಡಿಯುವುದುಬೆವರಿನ ತುತ್ತು ತಿನ್ನುವುದುಇದೇ ಬದುಕೆಂದು ತಿಳಿದನನ್ನ ಪೂರ್ವಜರ ಕಾಲವದುನನಗಾಗಲಿ ನನ್ನ ಓರಗೆಯಮಂದಿಗಾಗಲಿ ಜನನ ಪತ್ರಗಳಸರಕಾರಿ ದಾಖಲೆಗಳಹೊಳಹೂ ತಿಳಿದಿರಲಿಲ್ಲ ಇಲ್ಲದ ಪ್ರಮಾಣ ಕಾಗದಗಳತಂದುಕೊಡಿರೆಂದು ಆಜ್ಙಿಸುವವರೆಹೂವು ಅರಳಿದ್ದಕ್ಕೆ ಸಾಕ್ಷಿಹೇಳಲು ಒತ್ತಾಯಿಸದಿರಿಶತಮಾನಗಳಿಂದ ಇದೇನೀರು ಮಣ್ಣು ಗಾಳಿಉಸಿರಾಡಿದ್ದೇವೆ- ಇನ್ನೂ ಇಲ್ಲೇಇದ್ದು, ಸತ್ತು ನೆಲದಋಣವ ಸಲ್ಲಿಸುತ್ತೇವೆ…ನೀವು ಬಂದೂಕಿಗೆಮಾತು ಕಲಿಸಿರುವಿರಿಲಾಠಿ ಬಡಿಗೆ ದೊಣ್ಣೆಗಳಕೆತ್ತಿ ಹರಿತಗೊಳಿಸಿರುವಿರಿಆದರೆರಕ್ತದ ಹಾದಿಯಲ್ಲಿ ಬೀಜ– ಮೊಳೆಯುವುದಿಲ್ಲ ಮಳೆಬೀಳುವುದಿಲ್ಲ- ಹಸಿವಿಗೆಅನ್ನ ಬೆಳೆಯುವುದಿಲ್ಲ ಇಲ್ಲದ ಕಾಗದಪತ್ರಗಳಜಾಗದಲ್ಲಿ ನಮ್ಮ ದೇಹಗಳಿವೆಈ ನೆಲದ ಸಾರಹೀರಿದ ಜೀವಕೋಶಗಳಿವೆಮನಸ್ಸುಗಳಿವೆಆತ್ಮಗಳಿವೆಕನಸುಗಳಿವೆನಂಬಿ….ಇದಕ್ಕೂ ಮೀರಿಬದುಕಿಬಾಳಿದ ಹೊಲ- ಮನೆ-ಗಳ ಅಗಲಿ […]

ಕಾವ್ಯಯಾನ

ಗಝಲ್ ಡಾ.ಗೋವಿಂದ ಹೆಗಡೆ ಗಜಲ್ ಸತ್ಯ ಎಂದಿನಂತೆ ಬೆತ್ತಲೆಯಾಗೇ ಇದೆ ಸುಳ್ಳು ವೇಷ ಕಳಚುವ ಕಾಲ ಬಂದಿದೆ ಸುಳ್ಳೀಗ ಸತ್ಯವಾಯಿತು ಎಂದರ್ಥವಲ್ಲ ಹುಸಿಯ ಅಸಲಿಯತ್ತು ಸಾಬೀತಾಗಿದೆ ಎಷ್ಟೊಂದು ಬಣ್ಣಬಣ್ಣದ ವೇಷಗಳು ಇಲ್ಲಿ ತೊಗಲುಗೊಂಬೆಗಳಿಗೆ ಜೀವ ಬಂದಂತಿದೆ ಹೊಸ್ತಿಲಲ್ಲಿ ಹುಲ್ಲು ತುಂಬಿದೆ ಎಂದರು ಅಣ್ಣ ಮಾಡುವುದೇನು ಕಣ್ಣಲ್ಲೂ ರಜ ತುಂಬಿದೆ ನೆರಳಿನೊಂದಿಗೆ ಎಷ್ಟೆಂದು ಗುದ್ದಾಟ ಗೆಳೆಯ ನಿಜದ ನೇರಕೆ ತೆರೆದು ಎದೆಯ ನಡೆಸಬೇಕಿದೆ ***********

Back To Top