ಕಾವ್ಯಯಾನ

ಕಾವ್ಯಯಾನ

ಇರಬಹುದೆ? ಪ್ರಮೀಳಾ ಎಸ್.ಪಿ. ನಿತ್ಯ ನಿರಂತರ ನೆರಳು ನೀಡುವ ಎಲೆ ಯುದುರದ ಮರವಾದರೂ ಇರಲಹುದೇ! ಮುಂಗಾರೂ ಮೂರೇ ದಿನ ಮಲ್ಲಿಗೆಯ ಪರಿಮಳವೂ ಸಪ್ತದಿನಗಳೇ! ಚಂದಿರನು ಬೆಳದಿಂಗಳ ತಿಂಗಳಿಡೀ ಹೊಳಪಾಗಿ ಹರವಲಹುದೇ! ತುಂಬೆಯ ರಸ ಸವಿದ ದುಂಬಿಯೊಂದು ಮತ್ತದರತ್ತ ಇರಲುಬಹುದೇ! ಅದರದರ ಕಾಲಕ್ಕೆ ಭಾವ ಬಕುತಿಯ ತಾಳಕ್ಕೆ ಸಿಕ್ಕಷ್ಟು ದಕ್ಕಿಸುವುದು ನೇಮವಲ್ಲವೇ! ಇಷ್ಟಾದರೂ ಹುಡುಕುತ್ತಲೇ ಇರುವೆ ನಿತ್ಯವೂ ಹಸಿರಾದ ಪ್ರೀತಿಯನು ನಾನು ಮೂರ್ಖಳಾದೆನೆ ಗೆಳೆಯ!

ನಮ್ಮ ಕವಿ

ಪ್ರತಿ ಎರಡು ವಾರಕ್ಕೊಮ್ಮೆ(ಎರಡನೆ,ನಾಲ್ಕನೇ ಶುಕ್ರವಾರ) ಕನ್ನಡದ ಕವಿಯೊಬ್ಬರು ನಡೆದು ಬಂದ ಹಾದಿ ಮತ್ತು ಸಾಧನೆಯನ್ನು ಇಲ್ಲಿ ಪರಿಚಯಿಸಲಾಗುವುದು. ಈಸರಣಿಯ ಮೊದಲ ಕವಿಯ ಬದುಕು-ಬರಹ ನಿಮ್ಮ ಮುಂದಿದೆ: ಸತ್ಯಮಂಗಲ ಮಹಾದೇವ ಸತ್ಯಮಂಗಲ ಮಹಾದೇವ 1983 ಜೂನ್ 12 ರಂದು ತುಮಕೂರು ಜಿಲ್ಲೆಯ ಸತ್ಯಮಂಗಲಗ್ರಾಮದಲ್ಲಿ, ಬುಟ್ಟಿ  ಹೆಣೆಯುವುದು, ಹಚ್ಚೆಹಾಕುವುದು, ವಿವಿಧ ವೃತ್ತಿಗಳಲ್ಲಿ ತೊಡಗಿದ್ದ ಅಲೆಮಾರಿ ಕುಟುಂಬದ ರಾಜಣ್ಣ ಮತ್ತು ಜಯಮ್ಮ ದಂಪತಿಗಳ ಎರಡನೆಯ ಮಗನಾಗಿ ಜನನ. ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸ ಸತ್ಯಮಂಗಲದ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಮತ್ತು ಶ್ರೀಶಿವಾನಂದಪ್ರೌಢಶಾಲೆಯಲ್ಲಿ […]

ಆರ್ಥಿಕತೆ.

ನೋಟು ರದ್ದತಿಗೆ ಮೂರು ವರ್ಷ ಗಣೇಶ್ ಭಟ್ ಶಿರಸಿ 2016 ರ ನವೆಂಬರ್ 08 ರಂದು ಭಾರತದಲ್ಲಿ ಆಂತರಿಕ ರ‍್ಥಿಕ ರ‍್ಜಿಕಲ್ ಸ್ಟ್ರೈಕ್ ನಡೆಯಿತು. ರೂ. 500 , 1000 ರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದೆ ಪಡೆಯಲಾಯಿತು. ಕಪ್ಪು ಹಣವನ್ನು ಹೊರಗೆಡಹುವದು ಭ್ರಷ್ಟಾಚಾರ ನರ‍್ಮೂಲನೆ ಮಾಡಲು ಈ ಕಠಿಣ ನರ‍್ಣಯ ಕೈಗೊಳ್ಳಲಾಗಿದೆಯೆಂದು ಜನರಿಗೆ ಹೇಳಲಾಯಿತು. ಸ್ವಲ್ಪ ದಿನಗಳ ನಂತರ ನೋಟ ರದ್ದತಿಯ ಉದ್ದೇಶಗಳನ್ನು ಇನ್ನಷ್ಟು ವಿಸ್ತ್ರತಗೊಳಿಸಲಾಯಿತು. ಚಲಾವಣೆಯಲ್ಲಿರುವ ಖೋಟಾ ನೋಟುಗಳನ್ನು ಕಂಡು ಹಿಡಿಯುವುದು , ಭಯೋತ್ಪಾದಕರಿಗೆ […]

ಫೋಟೋ ಆಲ್ಬಂ

ಪಂಚವರ್ಣದ ಹಂಸ ಸತ್ಯಮಂಗಲ ಮಹಾದೇವ ಕೃತಿ ಬಿಡುಗಡೆಯ ಸಂಭ್ರಮದ ಕ್ಷಣಗಳು ದಿನಾಂಕ: 04-11-2019 ಬಿಡುಗಡೆ: ಶ್ರೀ ಮಲ್ಲೇಪುರಂ.ಜಿ.ವೆಂಕಟೇಶ್ ಕೃತಿ ಕುರಿತು ಮಾತಾಡಿದವರು: ಡಾ.ಸಿ.ಎನ್. ರಾಮಚಂದ್ರನ್

ಕಾವ್ಯಯಾನ

ಖಾಲಿ ದೀಪ ಮತ್ತು ಕತ್ತಲು ಬಿದಲೋಟಿ ರಂಗನಾಥ್ ಕಟ್ಟಿದ ಮಣ್ಣಗೋಡೆಯು ತಪ ತಪನೆ ಬೀಳುತ್ತಿದೆ ನಿದ್ದೆಯಿಲ್ಲದ ರಾತ್ರಿಗಳ ಕನಸು ಆ ಮನೆ  ಪ್ರತಿ ಇಟ್ಟಿಗೆಯ ಮೇಲೂ  ನಿನ್ನ ಶ್ರಮದ ಬೆವರ ವಾಸನೆ ನೀನು ಮಲಗೆದ್ದ ಜಾಗದ ನಿಟ್ಟುಸಿರು ಕಣ್ಣೀರಾಕುತ್ತಿದೆ ನೀನೆ ನೆಟ್ಟ ನಂಬಿಕೆಯ ಗಿಡದ ಬುಡಕ್ಕೆ ಪಾದರಸ ಸುರಿದ ಅವಳು  ಇವತ್ತು ಬೀದಿ ನಾಯಿಯ ಬಾಲ ಅವಮಾನದ ಗಾಯ ನಂಜಾಗಿ ನಸಿರಾಡಿ ಬದುಕುವ ಭರವಸೆಯು ಕುಂದಿ ನೆಲದ ಮೇಲಿಟ್ಟ ಅಷ್ಟೂ ಹೆಜ್ಜೆಗಳು ಕೆಂಡಗಳಾಗಿ ಧಗ ಧಗಿಸಿ ಉರಿದು […]

ವರ್ತಮಾನ

“ಓಟದಿಂದ ಕಲಿಯುವ ಆಡಳಿತದ ಪಾಠ” ಗಜಾನನ ಮಹಾಲೆ  ಓಟದ ಸ್ಪರ್ಧೆಯಲ್ಲಿ ಬೇರೆ ಬೇರೆ ರೀತಿಯ ಓಟಗಳಿರುತ್ತವೆ. 5000 ಮೀಟರ್‌ ಹಾಗೂ 100 ಮೀಟರ್‌ ಓಟಗಳ ಎರಡು ವಿಭಾಗದ ಮಧ್ಯೆ ಬಹಳಷ್ಟು ವ್ಯತ್ಯಾಸವಿರುತ್ತದೆ. ವ್ಯತ್ಯಾಸ ಓಡುವ ದೂರದ ಬಗ್ಗೆ ಮಾತ್ರವಲ್ಲ. ಓಡುವ ವಿಧಾನದಲ್ಲಿಯೂ ವ್ಯತ್ಯಾಸವಿದ್ದು ಸರಿಯಾದ ವಿಧಾನದಲ್ಲಿ ಓಡಿದ ಸ್ಪರ್ಧಿ ಮೊದಲಿಗನಾಗುವ ಸಂಭವ ಹೆಚ್ಚಿರುತ್ತದೆ. 100 ಮೀಟರ್ ಓಟದಲ್ಲಿ ಪ್ರಾರಂಭದಿಂದ ಅತ್ಯಂತ ವೇಗವಾಗಿ ಓಡಿದವರು ಮತ್ತು ಆ ಸಾಮರ್ಥ್ಯವಿದ್ದವರು ಪ್ರಥಮ ಸ್ಥಾನ ಗಳಿಸುತ್ತಾರೆ. 5000 ಮೀಟರ್ ಓಟದಲ್ಲಿ ಈ […]

ಕಾವ್ಯಯಾನ

ಗುಳಿಗೆ ಮಾರುವ ಹುಡುಗ ಅರುಣ್ ಕೊಪ್ಪ ಇವನು ಬ್ಯಾಗ್ ಹೊತ್ತು ಬೆವರು ಬಿತ್ತಿ ಜಿಪ್ಪು ಸರಿಸುತ್ತಾ ಸ್ಯಾಂಪಲ್ ಹಂಚುವ ಡಾಕ್ಟರ್ ಛೆಂಬರ್ ಲಿ ದಿನವೂ ಜ್ಞಾನಾರ್ಜನೆಯಂತೆ! ಸರತಿ ಸಾಲಿನಲ್ಲಿ ಮಾತು ಬರದವ ಹೊಡೆಯಲು ಹೋಗುತ್ತಲೇ… ಕಾಲು ಕಿತ್ತು ಬೇರೆ ವೈದ್ಯರ ಭೇಟಿಗೆ ಗೀಳಿಡುತ್ತಾನೆ ಇವ ಗುಳಿಗೆ ಮಾರುವ ಹುಡುಗನಂತೆ ಒಳ ಸೇರಿಸಿದ ಅಂಗಿ, ಕಪ್ಪು ಸೊಂಟದ ಪಟ್ಟಿ ಶೂ ಕೂಡ ಹೊಳೆವ ಹಾಗೇ ರೋಗಿಗಳು ಮತ್ತಷ್ಟು ಹಿಡಿ ಶಾಪ ಹಾಕುವ ಉತ್ತೇಜನ ನೀಡುವ ಹಾಗೇ ಅವನ ಡ್ರೆಸ್ […]

ಅನುವಾದ

ವಸಂತನಾಗಮನ ಮೂಲ ತೆಲುಗು ರಚನೆ: ಗುಂಟೂರು ಶೇಷೇಂದ್ರಶರ್ಮ ಗುಂಟೂರು ಶೇಷೇಂದ್ರ ಶರ್ಮಾ ಬಿ.ಏ.ಬಿ.ಯಲ್ 1927 -2007 ತೆಲುಗು ಸಾಹಿತ್ಯದಲ್ಲಿ ಜನಪ್ರಿಯ ಕವಿ ಯುಗಕವಿ ಎಂದು ಹೆಸರುಗಳಿಸಿದವರು. ಇವರು ಕವಿ, ವಿಮರ್ಶಕ ಹಾಗೂ ಬರಹಗಾರರು.1994 ರಲ್ಲಿ ಇವರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಇವರು ನೋಬಲ್ ಬಹುಮಾನಕ್ಕೂ ಭಾರತದಿಂದ ನಾಮಿನೇಟ್ ಆಗಿದ್ದರು. ಇವರ ಹಲವಾರು ರಚನೆಗಳು ಕನ್ನಡ, ಇಂಗ್ಲೀಷು ಹಿಂದೀ ಉರ್ದೂ ಬೆಂಗಾಲೀ ನೇಪಾಲಿ ಹಾಗೂ ಗ್ರೀಕ್ ಭಾಷೆಗಳಿಗೂ ಅನುವಾದಗೂಂಡಿವೆ ಕನ್ನಡಕ್ಕನುವಾದ: ನಾರಾಯಣ ಮೂರ್ತಿ ಬೂದುಗೂರು ಹೂಗಳು ತುಟಿಯರಳಿಸಿವೆ […]

Back To Top