ಕಾವ್ಯಯಾನ

ಕಾವ್ಯಯಾನ

ವ್ಯತ್ಯಾಸ ಪ್ರಮೀಳಾ ಎಸ್.ಪಿ. ಎದೆಯ ಮೇಲೊಮ್ಮೆ ಕಿವಿಯಿಡು ನಿನ್ನೆಸರೇ ನನ್ನುಸಿರಲಿ ಎಂದಿದ್ದವ ಗೊರಕೆ ಸದ್ದುಸಹಿಸಲಾರೆ ದೂರ ಮಲಗುವೆಯಾ ಎನ್ನುತ್ತಿದ್ದಾನೆ ಬೈಕ್ ಮೇಲೆ ನಿನ್ನಬಾಡಿ ಲೈಟ್ ವೈಟ್,ಹಾರೀಯೆ ಎಂದಿದ್ದವ ಕಾರಿಗೂ ಮುಂಬಾರ ಹಿಂದೆ ಕೂರುವೆಯಾ ಎನ್ನುತ್ತಿದ್ದಾನೆ. ನಿನ್ನ ಮುಡಿಗೆ ಮಲ್ಲಿಗೆ ತಂದಿರುವೆ ಮುಡಿಯಲೇ ಬೇಕು ಎಂದಿದ್ದವ ಮಾರೀಗ ರೂಪಾಯಿ ನೂರು ಖಾಲಿ ಜಡೆಯೆ ಚೆನ್ನ ಎನ್ನುತ್ತಿದ್ದಾನೆ ಮಸಾಲೆ ದೋಸೆ ನಿನ್ನಿಷ್ಟ ತಿನ್ನು ನೀ ಎಷ್ಟಾದರೂ ಎಂದಿದ್ದವ ಅನ್ನ ಸಕ್ಕರೆ ಬೇಡ ಸಿರಿಧಾನ್ಯ ತಿನ್ನಲಾರೆಯಾ ಎನ್ನುತ್ತಿದ್ದಾನೆ. ಸೀರೆಯಲಿ ನೀ ಸುಂದರಿ […]

ಕಾವ್ಯಯಾನ

ನಾ ಮನುಷ್ಯಾ ಅದೀನಿ ಚಂರಾನನ ದು:ಖ ಆದಾಗ ಅತ್ತೇನಿ ಸಂತೋಷ ಆದಾಗ ನಕ್ಕೇನಿ ಯಾಕಂದ್ರ ನಾ ಮನಷ್ಯಾ ಅದೀನಿ….. ಮನಸ್ನ್ಯಾಗೊಂದು, ಮಾತ್ನ್ಯಾಗೊಂದು, ಕೆಲಸ್ದಾಗೊಂದು ಮಾಡಿಲ್ಲ ಯಾಕಂದ್ರ ನಾ ಮನಷ್ಯಾ ಅದೀನಿ…. ಮುಖವಾಡ ಇಟ್ಕೊಂಡ್ ನೋಡಿಲ್ಲ ಮುಖವಾಡ ಹಾಕ್ಕೊಂಡ್ ಆಡಿಲ್ಲ ಯಾಕಂದ್ರ ನಾ ಮನುಷ್ಯಾ ಅದೀನಿ….. ಇದ್ರ ಕೊಟ್ಟೀನಿ,ಇಲ್ಲಾಂದ್ರ ಬಿಟ್ಟೀನಿ ಮುಂದ್ ಹೊಗಳಿಲ್ಲ,ಹಿಂದ್ ಬೈದಿಲ್ಲ ಯಾಕಂದ್ರ ನಾ ಮನಷ್ಯಾ ಅದೀನಿ….. ಕಷ್ಟ ಅಂದ್ರ ಕರಗೀನಿ,ಇಷ್ಟ ಅಂದ್ರ ಹಿಗ್ಗೀನಿ ಏನೂ ಇಲ್ಲಾಂದ್ರ ಸುಮ್ಮನದೀನಿ ಯಾಕಂದ್ರ ನಾ ಮನಷ್ಯಾ ಅದೀನಿ…… ಬದಕಾಕ […]

ನನ್ನೊಳಗೆ!

ಕನಸಿನೂರಿಂದ…. -ಕನಸಿನೂರಿನವ ಮತ್ತದೆ ದ್ವಂದ್ವ! ಚಿತ್ತಭಿತ್ತಿಯಲಿ ಸ್ಥಿರವಾಗಿ ಉಳಿದ ಅ ಮೊಗವನೆಲ್ಲಿ ಕಂಡೆ, ಪಡೆಯದೆಲೆ ಕಳೆದುಕೊಂಡೆ? ನೆನಪಿಸಿಕೊ ಹೃದಯ ಕವಾಟವೆ ಕಣ್ಣೊಳಗೆ ಬಿಂಬವಾಗಿ ಎದೆಯೊಳಗೆ ಕಂಬವಾಗಿ ನರನಾಡಿಗಳಲಿ ಜೀವ ಮಿಡಿತವಾಗಿ ನಿಂತಾ ಮೊಗವ ಎಲ್ಲಿ ಕಂಡೆ ಹೇಗೆ ಕಳೆದುಕೊಂಡೆ. ಮೊದಲ ನೋಟದಲೇನು ತುಂಬಿಕೊಂಡೆ ಆ ಮುದ್ದು ಮೊಗದ ನಕ್ಷತ್ರಗಳ ಕಣ್ಣುಗಳನೊ  ಅದರೊಳಗಿನ ಬೆಳಕನ್ನೊ? ಆ ಬಿರಿಯದೆ ಬಿಗಿದ ತುಟಿಗಳ ಹಿಂದಿನ ಮೌನವನೊ? ಬಹಳ ವರುಷಗಳ ಹಿಂದೆ ಆ ಮುಖವನ್ನು ಮೊದಲ ಬಾರಿಗೆ ನೋಡಿದೆ. ಅದೇಕೊ ಆ  ಮುಖ […]

ಕಾವ್ಯಯಾನ

ಗಝಲ್ ದೀಪಾಜಿ ಮನದಬಾಗಿಲ ಕದಲಿಸಿದರೆ ಏನರ್ಥ ಸಾಕಿ, ಒಳನುಸುಳುವ ಇಚ್ಛೆ ಇಲ್ಲದವರು ಬಯಲ ದಾಟಿ ಬರಬಾರದಿತ್ತು.. ಅಂಗಾತ ಮಲಗಿದ ರಸ್ತೆ ದಾಟಿ ಬಾಗಿಲ ವರೆಗೂ ಬಂದು ಕದತಟ್ಟದೆ ಹಿಂತಿರುಗುತ್ತೇನೆಂದರೆ ಏನರ್ಥ ಸಾಕಿ.. ಮೊಗ ನೋಡಿ ಮಾತನಾಡಲಾಗದವರು ಕಾರ್ಮೋಡದ ಮಧ್ಯದ ಕೊಲ್ಮಿಂಚಿನಂತ ಮಾತು ಆರಂಭಿಸಲು ಬರಬಾರದಿತ್ತು..ಬಿದಿಗೆ ಚಂದಿರನಂತೆ ಬಂದು ನಿಂತು ಕಾಯ್ದು,ಕದ ತೆರೆಯುವಾಗ ಬೆನ್ನುಮಾಡಿ ಹೊರಟರೆ ಏನರ್ಥ ಸಾಕಿ.. ಬೆರಳಿಗೆ ಬೆರಳ ಕಸಿಮಾಡಿದಾಗ ಹುಸಿ ಮುನಿಸಮಾಡಿ ಕೊಸರಾಡಲು ಬರಬಾರದಿತ್ತು.. ಮರುಳ ಮಾಡಿ ಕರುಳ ಹಿಂಡಿ,ಮಂಡಿ ಹಚ್ಚಿ ಕುಳಿತು ಬೆರಳ‌ […]

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

 (ಶಿವಮೊಗ್ಗ ಜಿಲ್ಲೆ ಹಲವಾರು ಚಳವಳಿಗಳ ಉಗಮಸ್ಥಾನವಾಗಿದೆ. ಇವತ್ತಿಗೂ ಶಿವಮೊಗ್ಗ ಜಿಲ್ಲೆಯ ಜನರ ಮನಸ್ಸುಗಳು ಪ್ರಗತಿಪರವಾಗಿಯೇ ಆಲೋಚಿಸುತ್ತಿವೆ. ಈ ಪ್ರಗತಿಪರ ಮನಸ್ಸುಗಳ ಮೂಲ ಬೇರು ಜಿಲ್ಲೆಯಲ್ಲಿ ಹುಟ್ಟಿದ ಚಳವಳಿಗಳಲ್ಲಿ ಅಡಗಿದೆ. ಈ ಕುರಿತು “ ಶಿವಮೊಗ್ಗ ಜಿಲ್ಲೆಯ ಚಳವಳಿಗಳು” ಎಂಬ ಹೆಸರಿನಲ್ಲಿ ಡಾ.ಸಣ್ಣರಾಮರವರು ಸವಿಸ್ತಾರವಾಗಿ ಪತ್ರಿಕೆಗೆ ಬರೆಯಲಿದ್ದಾರೆ.) ಡಾ.ಸಣ್ಣರಾಮ ಭಾಗ-ಒಂದು.     ಮನುಷ್ಯ ವಿಕಾಸದ ಹಂತದಿಂದಲೇ ಒಬ್ಬ ಮತ್ತೊಬ್ಬನಂತಿಲ್ಲ, ಆಲೋಚನ ರೀತಿ, ಗ್ರಹಿಕೆ, ಪ್ರತಿಕ್ರಿಯೆ, ದೈಹಿಕ ಸ್ವರೂಪ, ಬಣ್ಣ ಹೀಗೆ ಎಲ್ಲಾ ಬಗೆಯಲ್ಲಿಯೂ ವ್ಯಕ್ತಿಯಿಂದ ವ್ಯಕ್ತಿಗೆ ಭಿನ್ನತೆ ಇರುತ್ತದೆ. […]

ಲಹರಿ

ಮಳೆಯಲ್ಲಿ ನೆನೆದ ನೆನಪು ಪ್ರಮೀಳಾ ಎಸ್.ಪಿ. ” ಮಳೆ”… ಈ ಪದಕ್ಕೂ ಅದು ಸುರಿಯುವಾಗ ಕೊಡುವ ಅನುಭವಕ್ಕೂ ,ಪ್ರಕೃತಿಯಲ್ಲಿ ,ಉಂಟಾಗುವ ಬದಲಾವಣೆಗೂ ನಮ್ಮ ಬದುಕಿನಲ್ಲಿ ತರುವ ಸ್ಥಿತ್ಯಂತರಕ್ಕೂ ಹೇಳಲಾಗದ ಅವಿನಾಭಾವ ಸಂಬಂಧವಿದೆ.ಮಳೆ ಬರುತ್ತಿದೆ ಎಂದರೆ ಒಬ್ಬೊಬ್ಬರ ಯೋಚನಾ- ಲಹರಿ ಒಂದೊಂದು ರೀತಿ ಹರಿಯುತ್ತದೆ.ಹಿಂದೆಲ್ಲಾ ಹಳ್ಳಿಗಳಲ್ಲಿ ಮಳೆಗಾಲದ ಆರಂಭವಾಗುವ ಮುಂಚೆ ದನಕರುಗಳಿಗೆ ಹುಲ್ಲು ಸೊಪ್ಪು ಹೊಂದಿಸಿಕೊಂಡು;ಮನೆಗೆ ಸೌದೆ,ಬೆರಣಿ ಹಿತ್ತಲಿನಲ್ಲಿ ನೆನೆಯದ ಹಾಗೆ ಇಟ್ಟುಕೊಂಡು, ಹಪ್ಪಳ ಉಪ್ಪಿನಕಾಯಿ,ಹಿಟ್ಟು ಬೇಳೆ ಬೆಲ್ಲ ಕೂಡಿಟ್ಟುಕೊಂಡು,ಹೊಲಕ್ಕೆ ಗೊಬ್ಬರ ಚೆಲ್ಲಿ ,ಉಕ್ಕೆ ಪಾಕವಾಗಿಸಿ ಮಳೆಗಾಗಿ ಕಾಯುತ್ತಿದ್ದರು […]

ಕಾವ್ಯಯಾನ

ಜಾಗವೊಂದು ಬೇಕಾಗಿದೆ! ಪ್ರಮೀಳಾ ಎಸ್.ಪಿ. ಬೇಕಿದೆ ನನಗೊಂದು ಜಾಗ ಮನೆ ಮಂದಿರ ಕಟ್ಟಲಲ್ಲ! ಮಸೀದಿ ಚರ್ಚು ಕಟ್ಟಿ ವಿವಾದ ಹುಟ್ಟು ಹಾಕಲಲ್ಲ! ಬ್ಯಾಂಕು ಬಂಕು ಮಾಲ್ ಹಾಲ್ ನಿರ್ಮಿಸಲಲ್ಲ! ಒಂದಿಷ್ಟು ಕುಳಿತು ಅಳಲು ಏಕಾಂತ ಸಿಗುವ ಜಾಗ! ಮನೆಯಲ್ಲಿ ಮಕ್ಕಳು ನೋಡಿಯಾರು ಬೀದಿಯಲಿ ಜನ ನಕ್ಕಾರು! ಗುಡಿಯ ಪೂಜಾರಿದುರುಗುಟ್ಟಿಯಾನುಕಚೇರಿಯಲ್ಲಿ ನಗೆಗೆಆಹಾರವಾದೇನು! ಅದಕೆಯಾರೂ ನೋಡದ, ಯಾರಿಗೂಕಾಣದ ಏಕಾಂತದ ಜಾಗವೊಂದು ಬೇಕಿದೆಕಣ್ಣೀರ ಕಟ್ಟೆ ಒಡೆಯಲು.

ರಾಜ್ಯೋತ್ಸವದ ನೆಪದಲ್ಲೆರಡು ಮಾತು.

ಬಲಾಢ್ಯವಾಗಬೇಕಿರುವ ಕನ್ನಡಭಾಷಿಕ ಸಮುದಾಯ! ನಿಮ್ಮೆಲ್ಲರಿಗು  ಕನ್ನಡ ರಾಜ್ಯೋತ್ಷವದ ಶುಭಾಶಯಗಳು…ಈ ಸಂದರ್ಭದಲ್ಲಿ ನಿಮ್ಮೊಂದಿಗೆಕೆಲ ವಿಷಯಗಳನ್ನು ಹಂಚಿಕೊಳ್ಳಬೇಕಿದೆ. ನಿಜವಾದ ಅರ್ಥದಲ್ಲಿ ಇವತ್ತು ಕನ್ನಡ ಚಳುವಳಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಂತೆ ಕಾಣುತ್ತಿವೆ. ಇಂತಹ ಚಳುವಳಿಗಳ ಆತ್ಮವಾಗಿರಬೇಕಾಗಿದ್ದ ಅಕ್ಷರಸ್ಥ ಮದ್ಯಮವರ್ಗ ಸ್ವತ:  ಜಡಗೊಂಡಿರುವ ಈ ಸನ್ನಿವೇಶದಲ್ಲಿ ನಮ್ಮ ಕನ್ನಡ ಚಳುವಳಿ ಸಹ ನಿಸ್ತೆÃಜಗೊಂಡಂತೆ ನಮಗೆ ಬಾಸವಾಗುತ್ತಿದ್ದರೆ ಅಚ್ಚರಿಯೇನಲ್ಲ.ಇಂತಹ ನಿರಾಶಾದಾಯಕ  ಸನ್ನಿವೇಶದಲ್ಲಿಯೂ ಕನ್ನಡ ಚಳುವಳಿಯ ಕುರಿತು ಒಂದಿಷ್ಟು ಆಶಾಬಾವನೆ ಒಡಮೂಡಿದ್ದು ಇತ್ತೀಚೆಗೆ ನಡೆದ ಕಳಸಾಬಂಡೂರಿ ಮತ್ತು ಕಾವೇರಿ ನದಿ ನೀರಿನ ಹಂಚಿಕೆಯ ವಿವಾದಗಳ ಬಗ್ಗೆ ನಡೆದ […]

ಚರ್ಚೆ

ಟಿಪ್ಪು ಸುಲ್ತಾನನ ಇತಿಹಾಸ ಪಠ್ಯದಿಂದ ತೆಗೆಯುವುದು ಎಷ್ಟು ಸರಿ ? ಡಾ.ಮಹಾಲಿಂಗ ಪೋಳ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ ಹಲವು ರಾಜ ಸಂಸ್ಥಾನಗಳ ಬೀಡಾಗಿತ್ತು.ಅವು ತಮ್ಮದೇಯಾದ ಗಡಿಯನ್ನು ಹೊಂದಿದ್ದವು.ತಮ್ಮ ಸಂಸ್ಥಾನದ ಗಡಿಯನ್ನು ವಿಸ್ತರಿಸಲಿಕ್ಕೆ ಪಕ್ಕದ ರಾಜ್ಯಗಳ ಮೇಲೆ ದಾಳಿ ಮಾಡುತಿದ್ದವು.ಅಲ್ಲದೇ ತಮ್ಮದೇಯಾದ ಸಂಸ್ಕೃತಿಯ ಪ್ರಸಾರಕ್ಕೆ ಕ್ರಮ ಕೈಗೊಳ್ಳುತ್ತಿದ್ದವು.ಇದು ರಾಜಪ್ರಭುತ್ವ ಚಾಲ್ತಿಯಾದಾಗಿನಿಂದ ಬಂದದ್ದು.ಟಿಪ್ಪು ಕೂಡ ಈ ನಾಡಿನಲ್ಲಿ ಒಂದು ಸಂಸ್ಥಾನದ ರಾಜನಾಗಿದ್ದವ.ಅವನ ಸಂಸ್ಥಾನದ ಪ್ರದೇಶ ವಿಸ್ತರಿಸಲು ಪಕ್ಕದ ರಾಜ ಸಂಸ್ಥಾನಗಳ ಮೇಲೆ ದಾಳಿ ಮಾಡಿದ ಸರಿ.ಹಲವು ವಿರೋಧಿಗಳನ್ನು ಕೊಂದ ಸರಿ.ಈ […]

Back To Top