ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಸಾವಿಲ್ಲದ ಶರಣರು

“ಸಾವಿರದ ಶರಣರು ಮಾಲಿಕೆ” ಗುರುವಿನ ಗುರು ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು

ಶರಣರ ಸಂಗಾತಿ ಸಾವಿಲ್ಲದ ಶರಣರು ಶಶಿಕಾಂತ್‌ ಪಟ್ಟಣ ರಾಮದುರ್ಗಾ ಗುರುವಿನ ಗುರು ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು  ಯಳಂದೂರು ಶ್ರೀ  ಬಸವಲಿಂಗ ಶಿವಯೋಗಿಗಳು ಚಾಮರಾಜನಗರ ಜಿಲ್ಲೆಯ ಕಾರಾಪುರದ ಗ್ರಾಮದ. ಮಧ್ಯಮ ವ್ಯಾಪಾರ ಕಾಯಕದ ಲಿಂಗಾಯತ ಬಣಜಿಗ ಕುಟುಂಬದಲ್ಲಿ ಜನಿಸಿದರು.  ಬಾಲ್ಯದಲ್ಲಿ ಶ್ರೀ ಯಳಂದೂರು ಬಸವಲಿಂಗ ಶಿವಯೋಗಿಗಳು ಶ್ರೀ ಸಿದ್ಧಾರೂಢರ ಕೃಪೆ ಕಟಾಕ್ಷಕ್ಕೆ ಒಳಗಾದರು. ಮುಂದೆ ಗದುಗಿನ ತೋಂಟದಾರ್ಯ ಮಠದ ಅಧಿಪತಿಯಾದರು.  ಒಬ್ಬ ಪ್ರಮುಖ ಲಿಂಗಾಯತ  ಆಧ್ಯಾತ್ಮಿಕ ನಾಯಕರು ಮತ್ತು ವ್ಯಕ್ತಿ, ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಗುರುಗಳು  ಮತ್ತು ಪೂಜ್ಯರು, ತಮ್ಮ ಆಧ್ಯಾತ್ಮಿಕ ಕೊಡುಗೆಗಳಿಂದ ಶ್ರೀ ಹಾನಗಲ್ ಕುಮಾರ ಸ್ವಾಮೀಜಿಗೆ ಚೈತನ್ಯ ದೀಕ್ಷೆ ನೀಡಿ ತಮ್ಮ ಬಳಿಗೆ 12 ವರುಷ ವಿದ್ಯಾರ್ಜನೆಗೆ ಇಟ್ಟು ಕೊಂಡಿದ್ದರು.  ಶ್ರೀ ಶಿವಯೋಗ ಮಂದಿರ ಮತ್ತು ಲಿಂಗಾಯತ  ಧರ್ಮದ ಬೆಳವಣಿಗೆಗೆ ಕಾರಣರಾದರು, ಇವರನ್ನು “ಗುರುವಿನ ಗುರು” ಎಂದು ಗೌರವಿಸಲಾಗುತ್ತದೆ.   *ಬದುಕು ಮತ್ತು  ಕೊಡುಗೆಗಳು:* _____________________ ಆಧ್ಯಾತ್ಮಿಕ ನಾಯಕತ್ವ: ಯಳಂದೂರು ತಾಲ್ಲೂಕಿನ ಕಾರಾಪುರ ವಿರಕ್ತಮಠದ ಪ್ರಮುಖ ಗುರುಗಳಾಗಿದ್ದರು. ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಗುರುಗಳಾಗಿ, ಅವರ ಆಧ್ಯಾತ್ಮಿಕ ಪರಂಪರೆಯನ್ನು ಮುಂದುವರಿಸಿದರು. ಮಹಾಸಭೆಯಲ್ಲಿ ಪಾತ್ರ: ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿ ಮಹಾಸಭೆಯ ಸ್ಥಾಪನೆ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಶ್ರೀ ಶಿವಯೋಗ ಮಂದಿರ:  ಶ್ರೀ ಶಿವಯೋಗ ಮಂದಿರದ ರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಅವರ ಕೊಡುಗೆ ಮಹತ್ವದ್ದು. ಮಂದಿರದ ತಾಳೆ ಗ್ರಂಥಗಳ ರಕ್ಷಣೆ ಮತ್ತು ಗ್ರಂಥಾಲಯ ಸ್ಥಾಪನೆಯಲ್ಲಿ ಅವರ ಪ್ರಭಾವವಿತ್ತು. *ಧಾರ್ಮಿಕ ಮತ್ತು ಸಾಮಾಜಿಕ ಕೊಡುಗೆ:*  ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ಧಾರ್ಮಿಕ ಚಟುವಟಿಕೆಗಳನ್ನು ನಡೆಸುತ್ತಾ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಮಹತ್ತರ ಕೊಡುಗೆ ನೀಡಿದರು.  , ಯಳಂದೂರು ಬಸವಲಿಂಗ ಶಿವಯೋಗಿಗಳು ಲಿಂಗಾಯತ  ಧರ್ಮದ ಜಾಗೃತಿ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಒಬ್ಬ ಮಹಾನ್ ಶಿವಯೋಗಿಗಳು.  ಪರಮ ಪೂಜ್ಯ ಯಳಂದೂರು ಬಸವಲಿಂಗ ಶಿವಯೋಗಿಗಳು. * *ಅಖಿಲ ಭಾರತ ವೀರಶೈವ ಮಹಾಸಭೆ ಸ್ಥಾಪನೆ*  ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪನೆ  ಹಾನಗಲ್ಲ ಶ್ರೀ ಕುಮಾರಸ್ವಾಮಿಗಳು ಶ್ರೀ ಬಿದರಿ  ಸದಾಶಿವ ಮಹಾಸ್ವಾಮಿಗಳು  ಪರಮ ಪೂಜ್ಯ ಯಳಂದೂರು ಬಸವಲಿಂಗ ಶಿವಯೋಗಿಗಳು. ವೈರಾಗ್ಯದ ಮಲ್ಲಣ್ಣಾರ್ಯರ ನಿರಂತರ ಪ್ರಯತ್ನ ಮತ್ತು ವಾರದ ಮಲ್ಲಪ್ಪನವರ ಆರ್ಥಿಕ ಸಹಾಯ ಅರಟಾಳ ರುದ್ರಗೌಡರ ನಿರಂತರ ಯೋಜನೆ ಮುಖ್ಯ ಕಾರಣ.   *ಗುರುವಿನ ಗುರು ಶ್ರೀ ಯಳಂದೂರು ಬಸವಲಿಂಗ ಶಿವಯೋಗಿಗಳು* ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು  ಕಾರಾಪುರ ವಿರಕ್ತಮಠ ಚಾಮರಾಜನಗರ ಜಿಲ್ಲೆ ಅಂದು ಶ್ರೀ  ಹಾನಗಲ್ ಕುಮಾರ ಸ್ವಾಮೀಜಿ ಅವರು  ಯಳಂದೂರು ಶ್ರೀ ಬಸವಲಿಂಗ  ಶಿವಯೋಗಿಗಳ ಲಿಂಗ ಹಸ್ತದಿಂದ ಗುರು ಕಾರುಣ್ಯ ಚೈತನ್ಯ ದೀಕ್ಷೆ ಪಡೆದರು. ಮುಂದೆ ಹಾನಗಲ್ ಶ್ರೀ  ಕುಮಾರ ಶಿವಯೋಗಿಗಳು ಶಿವಯೋಗ ಮಂದಿರ ನಿರ್ಮಾಣಕ್ಕೆ ಮುಂದಾಗಿ ತಮ್ಮ ದೀಕ್ಷಾ ಗುರುಗಳಾದ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಆಶ್ರಯಕ್ಕೆ ನಿಂತರು. ಶಿವಯೋಗ ಮಂದಿರದ ವಟುಗಳಿಗೆ ಶ್ರೀ ಹಾನಗಲ್ ಶ್ರೀ ಕುಮಾರ ಶಿವಯೋಗಿಗಳ ಸಾಕ್ಷಾತ್ ದೇವರು ಅರುವಿನ ಗುರು.ಹೀಗಾಗಿ  ಇಂತಹ ದೊಡ್ಡ ಕುಮಾರ ಶಿವಯೋಗಿಗಳ ಗುರುಗಳು ಭಕ್ತ ವರ್ಗದ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು   ಯಳಂದೂರು ತಾಲ್ಲೂಕಿನ ಶ್ರೀ ಕಾರಾಪುರ ವಿರಕ್ತಮಠವು ಕರ್ನಾಟಕ ಧಾರ್ಮಿಕ ಇತಿಹಾಸಕ್ಕೆ ಮಹತ್ತರ ಕೊಡುಗೆ ನೀಡಿದೆ  *ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಲಿಂಗ ಸಮಾಧಿ* ಮೂವತ್ತಾರು  ವರ್ಷಗಳ ಹಿಂದೆ ನಾನು  ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಚರಿತ್ರೆ ಹುಟ್ಟು ಬಾಲ್ಯ ಮತ್ತು ಅವರ ಶಿಷ್ಯ ಪರಂಪರೆಯನ್ನು ಹುಡುಕುತ್ತಾ ಮೊದಲು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠಕ್ಕೆ ಹೋಗಿದ್ದೆ. ಅಲ್ಲಿನ ಅನೇಕ ಹಿರಿಯರ ಮೌಖಿಕ ಚರ್ಚೆಗಳನ್ನು ಆಧರಿಸಿ ಗದಗ ತೋಂಟದಾರ್ಯ ಮಠದಲ್ಲಿ ಅವರ ಚರಿತ್ರೆಗೆ ಶೋಧ ನಡೆಸಿದೆ. ಆಶ್ಚರ್ಯ ಎಂದರೆ  ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು ಗದಗ ತೋಂಟದಾರ್ಯ ಮಠದ ಜಗದ್ಗುರುಗಳಾಗಿದ್ದರು.  ಇವರ ಲಿಂಗೈಕ್ಯವಾದ ಸಮಾಧಿಯ ಕುರುಹು ನನಗೆ ಸಿಗಲಿಲ್ಲ ಆಗ ಒಬ್ಬ ವಯೋವೃದ್ಧರು ನನಗೆ ಸರ್ ಅಣ್ಣಿಗೇರಿಯಲ್ಲಿ ಒಬ್ಬ ಒಂದು ಲಿಂಗಾಯತ ಧರ್ಮದ ಗದ್ದುಗೆ ಇದೆಯೆಂದು ಹೇಳಿದರು. ಅವರ ಮಾತಿನ ಜಾಡು ಹಿಡಿದುಕೊಂಡು ಅಣ್ಣಿಗೇರಿಗೆ ಹೋಗುವ ಪ್ರಯತ್ನ ಮಾಡಿದೆ.  ನನ್ನ ತಾಯಿಯ ತವರು ಮನೆ ಮುಳುಗುಂದ ವಾಲಿ ಮನೆತನ. ಅಲ್ಲಿಂದ ನಾನು ಶ್ರೀ ಬಸವರಾಜ ವಾಲಿ ಎಂಬ ನನ್ನ ಮಾವನವರೊಂದಿಗೆ ಅಣ್ಣಿಗೇರಿಗೆ ಬಂದೆನು. ಆಗ ತೋಂಟದಾರ್ಯ ಮಠದ ಒಂದು ಗದ್ದುಗೆ ಕಣ್ಣಿಗೆ ಬಿತ್ತು. ಆ ಗದ್ದುಗೆಯ ಗುಡಿಯ ಸುತ್ತಲೂ ಕುರುಳು ಬೆರಣಿ ಉರುವಲು ತಟ್ಟುತ್ತಿದ್ದರು. ಅಣ್ಣಿಗೇರಿ ಗ್ರಾಮಸ್ಥರು ಇದು ನಮ್ಮ ಹಿಂದಿನ ಅಜ್ಜಾರ ಗದ್ದುಗೆ ಎಂದು ಹೇಳಿದರು. ಗ್ರಾಮೀಣ ಭಾಗದ ಜನರಿಗೆ ಅಷ್ಟೊಂದು ಹೆಸರುಗಳು ನೆನಪಿಗೆ ಇರಲಿಲ್ಲ. ಆಗ ನನಗೆ ಇವರು ಗದುಗಿನ ತೋಂಟದಾರ್ಯ ಮಠದ ಪರಂಪರೆ ಜಗದ್ಗುರು ಆಗಿದ್ದರು ಎಂಬ ಸಾಕ್ಷಿ ಸಿಕ್ಕಿತ್ತು. ಇದನ್ನು ಅವಲಂಬಿತವಾಗಿ ಇಟ್ಟು ಕೊಂಡು ಇದು ತೋಂಟದಾರ್ಯ ಮಠದ ಪರಂಪರೆ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಗದ್ದುಗೆ ಎಂದು ತೀರ್ಮಾನ ಮಾಡಲು ಅನುಕೂಲವಾಯಿತು. ಇದನ್ನು ಗದುಗಿನ ಅಂದಿನ ಜಗದ್ಗುರುಗಳು ಅಪ್ಪಟ ಬಸವ ಪ್ರೇಮಿ  ಶ್ರೀ ಡಾ ಸಿದ್ಧಲಿಂಗ ಸ್ವಾಮೀಜಿ ಅವರಿಗೆ  ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಗದ್ದುಗೆ ವಿಷಯ ಪ್ರಸ್ತಾಪ ಮಾಡಿದೆ. ಆಗ ಶ್ರೀ ಡಾ ಸಿದ್ಧಲಿಂಗ ಸ್ವಾಮೀಜಿ ಅವರು ಅಣ್ಣಿಗೇರಿಯ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಗದ್ದುಗೆ ಸ್ವಚ್ಛ ಮಾಡಲು ಹೇಳಿ ಮುಂದೆ ಬೋರ್ಡ್ ಹಚ್ಚಿಸುವ ವ್ಯವಸ್ಥೆ ಮಾಡಿ ಐತಿಹಾಸಿಕ ಪ್ರಜ್ಞೆಯನ್ನು ಮೆರೆದರು. ಇದನ್ನು ಮುಂದೆ ತೋಂಟದಾರ್ಯ ಮಠದ ಶ್ರೀ ಎಸ್ ಎಸ್ ಪಟ್ಟಣಶೆಟ್ಟಿ ಆಡಳಿತಾಧಿಕಾರಿಗಳು ಅವರಿಗೆ ಹೇಳಿದ್ದು ನೆನಪಿದೆ. ಇದನ್ನು ಸ್ವತಃ  ಎಸ್ ಎಸ್ ಪಟ್ಟಣಶೆಟ್ಟಿ ಆಡಳಿತಾಧಿಕಾರಿಗಳು ನನಗೆ ಹೇಳಿದರು.  ಅಸ್ಪಷ್ಟವಾಗಿದ್ದ ಸಂಗತಿ ಮತ್ತು ಕೆಲವರಿಗೆ ಮಾತ್ರ ಗೊತ್ತಿದ್ದ ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳ ಗದ್ದುಗೆ ಅಧಿಕೃತವಾಗಿ ದಾಖಲಾಗುವಲ್ಲಿ ಲಿಂಗೈಕ್ಯ ಡಾ ಸಿದ್ಧಲಿಂಗ ಸ್ವಾಮಿಗಳು ಮತ್ತು ಅದನ್ನು ಮುಕ್ತ ಮನಸ್ಸಿನಿಂದ ಹೇಳಿಕೊಳ್ಳುತ್ತಿದ್ದರು. ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

“ಸಾವಿರದ ಶರಣರು ಮಾಲಿಕೆ” ಗುರುವಿನ ಗುರು ಯಳಂದೂರು ಶ್ರೀ ಬಸವಲಿಂಗ ಶಿವಯೋಗಿಗಳು Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ,”ಕನ್ನಡದ ಕಟ್ಟಾಳು ಗಡಿ ಕಾಯ್ದ ಯೋಧ ಡೆಪ್ಯೂಟಿ  ಚನ್ನಬಸಪ್ಪನವರು”-ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಶರಣ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ ಸಾವಿಲ್ಲದ ಶರಣರು ಮಾಲಿಕೆ, “ಕನ್ನಡದ ಕಟ್ಟಾಳು ಗಡಿ ಕಾಯ್ದ ಯೋಧ ಡೆಪ್ಯೂಟಿ  ಚನ್ನಬಸಪ್ಪನವರು”- ಕಿತ್ತೂರು ಸಂಸ್ಥಾನ ಪೇಶ್ವೆ ಮರಾಠರು ಹೀಗೆ ಕರ್ನಾಟಕ ಮಹಾರಾಷ್ಟ್ರ ರಾಜ್ಯಗಳ ಸಾಂಸ್ಕೃತಿಕ ಸಂಬಂಧ ಹಲವು ಶತಮಾನಗಳಿಂದ ನಿರಂತರ ಸಾಗಿ ಬಂದಿವೆ. ಒಂದು ಅರ್ಥದಲ್ಲಿ ಮಹಾರಾಷ್ಟ್ರದ ಕುಲ ದೇವತೆ ಪಂಡರಾಪುರದ  ವಿಠ್ಠಲ ಹಂಪಿಯುವನು. ಹೀಗಾಗಿ ಮಹಾರಾಷ್ಟ್ರದ ಜನರು ಮತ್ತು  ವಾರಕರಿ ಪಂಥ ಈಗಲೂ ಕೂಡ ವಿಠಲನನ್ನು ಕಾನಡೋ ವಿಠ್ಠಲ.ಅಂದರೆ ಕನ್ನಡದ ವಿಠ್ಠಲ ಎನ್ನುತ್ತಾರೆ. ಅನೇಕ ಕರ್ನಾಟಕದ  ಅರಸು ಮನೆತನಗಳು  ಮಹಾರಾಷ್ಟ್ರದಲ್ಲಿ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಿವೆ.  ರಾಷ್ಟ್ರಕೂಟರ  ದಂತಿದುರ್ಗ ಅಜಂತಾ ಎಲ್ಲೋರ ಕೈಲಾಸ ದೇವಾಲಯವನ್ನು. ಮಹಾರಾಷ್ಟ್ರದಲ್ಲಿ ಸ್ಥಾಪಿಸಿದರು. ರಾಮದುರ್ಗ ನರಗುಂದ ಜಮಖಂಡಿ ಸಂಸ್ಥಾನಗಳನ್ನು ಮರಾಠಿ ಮೂಲದ ಕೊಂಕಣಿ ಬ್ರಾಹ್ಮಣರು ಸ್ಥಾಪಿಸಿದರು.ಮುಧೋಳ ಘೋರ್ಪಡೆ ಮನೆತನದ ಮರಾಠರು ಆಳಿದರು. ಹೀಗೆ ಮುಂದುವರೆದ ಕನ್ನಡ ಮರಾಠಿ ಭಾಷೆಗಳ ಸಾಂಸ್ಕೃತಿಕ ಸಂಬಂಧ ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿಗೆ ಒಮ್ಮೆ ಕುತ್ತು ತರುವ ಹಾಗಾಯಿತು. ಇಂತಹ ಆಪತ್ತನ್ನು ಮುಕ್ತ ಗೊಳಿಸಿದ ದಿಟ್ಟ ಯೋಧ ಡೆಪ್ಯುಟಿ ಚೆನ್ನಬಸಪ್ಪನವರು. 19ನೆಯ ಶತಮಾನದ ಉತ್ತರಾರ್ಧವು ಮುಂಬೈ ಕರ್ನಾಟಕದಲ್ಲಿ ಮರಾಠಿಯ ಪ್ರಾಬಲ್ಯದ ಹಾಗೂ ಇಂಗ್ಲೀಷಿನ ಪ್ರಾರಂಭದ ಕಾಲ.  ಆಗ ಕನ್ನಡ ಭಾಷೆ, ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಮಹಾ ಕಾರ್ಯಕ್ಕೆ ನಾಂದಿ ಹಾಡಿದವರು ಡೆಪ್ಯುಟಿ ಚನ್ನಬಸಪ್ಪನವರು.  ಜನನ  ಚನ್ನಬಸಪ್ಪನವರು 1834 ವರ್ಷದ ನವೆಂಬರ್ 1ರಂದು ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ಜನಿಸಿದರು.  ತಂದೆ ಬಸಲಿಂಗಪ್ಪನವರು ಮತ್ತು ತಾಯಿ ತಿಮ್ಮಮ್ಮನವರು (ತಿಪ್ಪವ್ವ). ಚೆನ್ನಬಸಪ್ಪನವರ ತಂದೆಯವರು ತಮ್ಮ ಮನೆತನದ ಮೂಲ ಕಾಯಕವಾದ ವ್ಯಾಪಾರಕ್ಕಾಗಿ  ಧಾರವಾಡಕ್ಕೆ ಬಂದರು. ಶಿಕ್ಷಣ ಅವರ ಪ್ರಾರಂಭಿಕ ಶಿಕ್ಷಣ ನಡೆದಿದ್ದು ಧಾರವಾಡದಲ್ಲಿ.  ಕಲಿತದ್ದು ಕನ್ನಡ, ಮರಾಠಿ ಮತ್ತು ಗಣಿತ.  ಬಾಲಕ ಚನ್ನಬಸಪ್ಪನವರು ಇಂಗ್ಲಿಷ್ ಕಲಿಯುವ ಹಂಬಲದಿಂದ ಯಾರಿಗೂ ಹೇಳದೆ ಕೇಳದೆ, ಧಾರವಾಡದಿಂದ ಗೋಕಾಕಕ್ಕೆ ಬರಿಗಾಲಿನಿಂದ ನಡೆದುಕೊಂಡು ಹೋಗಿ ಅಲ್ಲಿ ತಮ್ಮ ಸಂಬಂಧಿಗಳ ಹತ್ತಿರ ಐವತ್ತು ರೂಪಾಯಿ ಕೂಡಿಸಿಕೊಂಡು ಮತ್ತೆ ಕಾಲ್ನಡಿಗೆಯಲ್ಲಿ   ಪುಣೆ ತಲುಪಿದರು. ಪುಣೆಯಲ್ಲಿ ಅವರಿಗೆ ಆಶ್ರಯ ನೀಡಿದವರು ಗೋವಿಂದರಾವ್ ಮೆಹಂಡಳೇಕರ ಅವರು. ಓದಿನಲ್ಲಿ ಪಾರಂಗತರೆನಿಸಿದ ಡೆಪ್ಯುಟಿ ಚೆನ್ನಬಸಪ್ಪನವರು ಅವರಿಗೆ  ಪ್ರತಿ ತಿಂಗಳೂ ಹತ್ತು ರೂಪಾಯಿ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರಂತೆ.  ಅಂದಿನ ದಿನದಲ್ಲಿ ಕೆಲಸದಲ್ಲಿದ್ದವರಿಗೆ ಸಂಬಳ ಅಷ್ಟು ಬರುತಿದ್ದರೆ ಹೆಚ್ಚಿರುತ್ತಿದ್ದ ಕಾಲ.  ಈ ಸಮಯದಲ್ಲಿ ತಮ್ಮ  ತಾಯಿಯನ್ನು ತಮ್ಮ ಬಳಿ ವಾಸಕ್ಕೆ ಪುಣೆಗೆ ಕರೆಸಿಕೊಂಡಾಗ ತಿಪ್ಪಮ್ಮನಿಗೆ  ಅಪರಿಮಿತ ಸಂತೋಷ ಖುಷಿ ಆಗಿತ್ತು. ಚನ್ನಬಸಪ್ಪನಾವರು ಇಂಗ್ಲೆಂಡಿನಲ್ಲಿ ಅದೇ ತಾನೇ ತೆರೆದ ಕೂಪರ್ಸ್‌ಹಿಲ್ ಇಂಜಿನಿಯರಿಂಗ್ ಕಾಲೇಜಿಗೆ ಸೇರಲು ಆಯ್ಕೆಯಾದ ಐವರು ಪ್ರತಿಭಾವಂತ ವಿದ್ಯಾರ್ಥಿಗಳಲ್ಲೊಬ್ಬರಾಗಿದ್ದರು.  ದಾದಾಬಾಯಿ ನವರೋಜಿಯವರ ಈ ಯೋಜನೆ ಅಯಶಸ್ವಿಯಾಗಿ ಇಂಗ್ಲೆಂಡ್ ಪ್ರಯಾಣ ರದ್ದುಗೊಂಡಿತು.  ಆಗ ಅವರು ವಿಧಿಯಿಲ್ಲದೆ  1855ರಲ್ಲಿ ಮತ್ತೆ ಧಾರವಾಡಕ್ಕೆ ವಾಪಸ್ಸು ಬಂದರು.   ವೃತ್ತಿ ಜೀವನ ಕೆಲಕಾಲ ಅಂಚೆ ಕಚೇರಿಯಲ್ಲಿ ಕೆಲಸ ಮಾಡಿದರು.  ಅಷ್ಟರಲ್ಲಿ ಧಾರವಾಡದಲ್ಲಿ ನೂತನವಾಗಿ ಆರಂಭಗೊಂಡ ನಾರ್ಮಲ್ ಶಾಲೆಯ ಮುಖ್ಯೋಪಾಧ್ಯಾಯರಾಗಿ ಆಯ್ಕೆಗೊಂಡರು.  ಶಿಕ್ಷಣ ಇಲಾಖೆಯನ್ನು ಪ್ರವೇಶಿಸಿ 1861ರಲ್ಲಿ  ಬೆಳಗಾಂ ಜಿಲ್ಲೆಯ ಡೆಪ್ಯೂಟಿ ಇನ್‌ಸ್ಪೆಕ್ಟರೆನಿಸಿದರು.  ಹೀಗಾಗಿ ಅವರ ಹೆಸರಿಗೆ  ಡೆಪ್ಯೂಟಿ  ವಿಶೇಷಣ ಅಂಟಿಕೊಂಡಿತು.  ಚನ್ನಬಸಪ್ಪನವರು ಅಧಿಕಾರಕ್ಕೆ ಬರುವ ಮುನ್ನ ಧಾರವಾಡ, ಬೆಳಗಾವಿ, ಬಿಜಾಪುರ ಜಿಲ್ಲೆಯ ಕನ್ನಡ ಶಾಲೆಯ ಸಂಖ್ಯೆ ಕೇವಲ 34 ಇತ್ತು.  ಚನ್ನಬಸಪ್ಪನವರ ಹತ್ತು ವರುಷದ ಆಡಳಿತದಲ್ಲಿ ಕನ್ನಡ ಶಾಲೆಗಳ ಸಂಖ್ಯೆ 668ಕ್ಕೆ ಏರಿತು.  ಚನ್ನಬಸಪ್ಪನವರು, ತಮ್ಮ ಸ್ನೇಹಿತರಾದ  ರಾಮಚಂದ್ರ ಚುರಮುರಿ, ಗಂಗಾಧರ ಮಡಿವಾಳೇಶ್ವರ ತುರಮರಿ ಮೊದಲಾದ ಕನ್ನಡ ಭಕ್ತರಿಗೆ ಕನ್ನಡದಲ್ಲಿ ಗ್ರಂಥ ರಚಿಸಲು  ಪ್ರೇರಣೆ, ಪ್ರೋತ್ಸಾಹ, ಬೆಂಬಲಗಳನ್ನು ಒದಗಿಸಿದರು. ಸ್ವಯಂ ತಾವೇ ಪಠ್ಯ ಪುಸ್ತಕಗಳನ್ನು ರಚಿಸಿದರು.  ಉಚಿತ ವಿದ್ಯಾರ್ಥಿ ನಿಲಯದ ಸ್ಥಾಪನೆ  ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಚಿತ್ರದುರ್ಗದ ನಿರಂಜನ ಜಗದ್ಗುರು ಬೃಹನ್ಮಠದ ಮಹಾಲಿಂಗ ಸ್ವಾಮಿಗಳ ( ಶಿರಸಂಗಿ) ಮನವೊಲಿಸಿ ಬೆಳಗಾವಿಯಲ್ಲಿ ವೀರಶೈವ ಉಚಿತ ವಿದ್ಯಾರ್ಥಿನಿಲಯವನ್ನು ತೆರೆದರು. ಸ್ವಾಮಿಗಳ ನಿಧನಾನಂತರ ತಾವೇ ಇದರ  ಆರ್ಥಿಕ ಹೊಣೆ ಹೊತ್ತರು.  ಹೆಂಡತಿ ಮೈಮೇಲಿನ ನಗ, ಆಭರಣ ಒಡವೆ ಮಾರಿದರು. ಸಾಲದ ಬಾಧೆಗೆ  ಮನೆ-ಮಠಮಾರಿ ವಿದ್ಯಾರ್ಥಿ ನಿಲಯದ ನಿರ್ವಹಣೆ ಮಾಡಿದರಂತೆ. ಸಾಹಿತ್ಯ ಕೃತಿಗಳು ಚನ್ನಬಸಪ್ಪನವರು ‘ಕಾಮೆಡಿ ಆಫ್ ಎರರ್ಸ್‌’ (ನಗದವರನ್ನು ನಗಿಸುವ ಕಥೆ) ಮತ್ತು ‘ಮ್ಯಾಕ್‌ಬೆತ್’ ಕೃತಿಗಳನ್ನು ಪ್ರಕಟಿಸಿದರು. ‘ಮ್ಯಾಕ್‍ಬೆತ್’ ಕೃತಿಯ ಮೂಲಕ ಶೇಕ್ಸಪಿಯರ್ ಅನ್ನು ಮೊದಲು ಕನ್ನಡಕ್ಕೆ ತಂದವರು ಚನ್ನಬಸಪ್ಪನವರು. ಚನ್ನಬಸಪ್ಪಾ ಇವರು ಹುಟ್ಟು ಹಾಕಿದ ಮತ್ತು ಶತಮಾನೋತ್ಸವವನ್ನು ಆಚರಿಸಿದ ಕನ್ನಡದ ಏಕಮೇವ ಶೈಕ್ಷಣಿಕ ಮಾಸಿಕ “ಜೀವನ ಶಿಕ್ಷಣ” ಪತ್ರಿಕೆ. ಈ ಪತ್ರಿಕೆ ಸ್ಥಾಪಕರಾಗಿ ಹಲವು ಆರ್ಥಿಕ ಸಂಕಷ್ಟಕೆ ಈಡಾದರೂ  ಮಕ್ಕಳ ಕಲಿಕೆಗೆ ತಮ್ಮ ಸರ್ವಸ್ವವನ್ನು ಮಾರಿದ ಸದಾ ಸ್ಮರಣೀಯರು.  ಮಕ್ಕಳ ಶಿಕ್ಷಣಕ್ಕಾಗಿ ತಮ್ಮನ್ನೇ ಅರ್ಪಿಸಿಕೊಂಡಿದ್ದ ಚನ್ನಬಸಪ್ಪನವರಿಗೆ ಜೀವನವೇ ಶಿಕ್ಷಣ ಶಾಲೆಯಾಗಿದ್ದರಲ್ಲಿ ಅಚ್ಚರಿಯಿಲ್ಲ. ಡೆಪ್ಯುಟಿ ಚೆನ್ನಬಸಪ್ಪನವರು ಧಾರವಾಡ ಟಿಸಿಏಚ್ ಕಾಲೇಜನ್ನು ಸ್ಥಾಪಿಸಿ ಕನ್ನಡ ಶಾಲಾ ಶಿಕ್ಷಕರ ತರಬೇತಿ ಕೇಂದ್ರ ಸ್ಥಾಪಿಸಿ ಅದರ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸಿದ ಮಹಾನುಭಾವರು. ಡೆಪ್ಯುಟಿ ಚನ್ನಬಸಪಪ್ನವರು 1881 ವರ್ಷದ ಜನವರಿ 4 ರಂದು ಈ ಲೋಕವನ್ನಗಲಿದರು.  1981 ವರ್ಷದಲ್ಲಿ ಚನ್ನಬಸಪ್ಪನವರು ನಿಧನರಾದ ನೂರು ವರ್ಷಗಳಾದ ಸಂದರ್ಭದಲ್ಲಿ ಡೆಪ್ಯೂಟಿ ಚನ್ನಬಸಪ್ಪ ಪ್ರಾಥಮಿಕ ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಲಾಯಿತು. ಇದು ಪ್ರಾಥಮಿಕ ಶಿಕ್ಷಣ ಹಾಗೂ ಶಿಕ್ಷಕ ತರಬೇತಿ ರಂಗದಲ್ಲಿ ಕಾರ್ಯನಿರ್ವಹಿಸುವ ಸೇವಾಸಂಸ್ಥೆಯಾಗಿದೆ. ಕನ್ನಡದ ಪುನರುಜ್ಜೀವನ ಮತ್ತು ಶಿಕ್ಷಣ ಪ್ರಸಾರ ಕಾರ್ಯದ ಶಕಪುರುಷಕ್ಕಾಗಿ ತಮ್ಮನ್ನೇ ಅರ್ಪಿಸಿಕೊಂಡ ಡೆಪ್ಯೂಟಿ ಚನ್ನಬಸಪ್ಪನವರ ನೆನಪು ಎಲ್ಲಕಾಲಕ್ಕೂ ಸ್ಪೂರ್ತಿದಾಯಕ. ತಮ್ಮ ಬದುಕಿನ ಕೇವಲ 47 ನೆಯ  ವಯಸ್ಸಿನಲ್ಲಿ ಅಗಾಧವಾದ ಕಾರ್ಯ ಮಾಡಿ ಗಡಿ ನಾಡು ವಿಜಯಪುರ ಧಾರವಾಡ ಬೆಳಗಾವಿ ಕಾರವಾರ ಬೀದರ ಮುಂತಾದ ರಾಜ್ಯಗಳಲ್ಲಿ ಕನ್ನಡ ಶಾಲೆಗಳನ್ನು ತೆರೆದು ಕನ್ನಡವ ಉಳಿಸಿ ಬೆಳೆಸಿದ ಕನ್ನಡದ ಕಟ್ಟಾಳು ಮತ್ತು ಗಡಿ ರಕ್ಷಣೆಗೆ ನಿಂತ ದಿಟ್ಟ ಯೋಧರು. ಕರ್ನಾಟಕ ರಾಜ್ಯ ಸರ್ಕಾರ ಇವರ ಹೆಸರಿನಲ್ಲಿ ಪ್ರತಿಷ್ಠಾನ ಮಾಡಲಿ ಮತ್ತು ಕರ್ನಾಟಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಡೆಪ್ಯುಟಿ ಚೆನ್ನಬಸಪ್ಪನವರ ಅಧ್ಯಯನ ಪೀಠ ತೆರೆಯ ಬೇಕು. ಅಪ್ಪಟ ಬಸವ ಭಕ್ತ ಲಿಂಗಾಯತ ಧರ್ಮದ ಅನುಯಾಯಿ ತಮ್ಮ ನಿಸ್ವಾರ್ಥ ಸೇವೆಗೆ ಕನ್ನಡಿಗರ ಮನದಲ್ಲಿ ಚಿರಾಯುವಾಗಿದ್ದಾರೆ. ಇಂತಹ ಶರಣರಿಗೆ ನಮ್ಮ ಭಕ್ತಿ ಪೂರ್ವಕ ಶತ ಕೋಟಿ ನಮನಗಳು. __________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಸಾವಿಲ್ಲದ ಶರಣರು ಮಾಲಿಕೆ,”ಕನ್ನಡದ ಕಟ್ಟಾಳು ಗಡಿ ಕಾಯ್ದ ಯೋಧ ಡೆಪ್ಯೂಟಿ  ಚನ್ನಬಸಪ್ಪನವರು”-ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ-“ಹಳ್ಳಿಯಿಂದ ದಿಲ್ಲಿ ದರ್ಬಾರಕ್ಕೆ ಹೋದ ಶ್ರೀ ಬಸಪ್ಪ ದಾನಪ್ಪ ಜತ್ತಿ”

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಮಾಲಿಕೆ- “ಹಳ್ಳಿಯಿಂದ ದಿಲ್ಲಿ ದರ್ಬಾರಕ್ಕೆ ಹೋದ ಶ್ರೀ ಬಸಪ್ಪ ದಾನಪ್ಪ ಜತ್ತಿ” ಒಬ್ಬ ಹಳ್ಳಿಯ ಸಾಧಾರಣ ಲಿಂಗಾಯತ ವ್ಯಾಪಾರಸ್ಥ ಮನೆತನದಲ್ಲಿ ಹುಟ್ಟಿ ಭಾರತದ ಪರಮೋಚ್ಚ ಅಧ್ಯಕ್ಷ ಸ್ಥಾನಕ್ಕೆ ಹೋದ ಅಪ್ರತಿಮ ರಾಜಕೀಯ ಮುತ್ಸದ್ಧಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಬಸಪ್ಪ ದಾನಪ್ಪ ಜತ್ತಿ ಅವರ ಬದುಕು ಒಂದು ಸಂಘರ್ಷವೇ ಆಗಿದೆ. ಒಂದು ಅವಿಸ್ಮರಣೀಯ ಪ್ರಸಂಗ _______________________ ಸಾವಳಗಿ ಇವತ್ತಿನ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಒಂದು ಪುಟ್ಟ ಗ್ರಾಮ. ಆ ಊರಿನಲ್ಲಿ ದಾನಪ್ಪ ಎಂಬ ವ್ಯಾಪಾರಿ ಮನೆತನದ ಮಧ್ಯಮ ವರ್ಗದ ವ್ಯಕ್ತಿ ಅಥಣಿಯ ಶ್ರೀ ಮುರುಗೇಂದ್ರ ಶಿವಯೋಗಿಗಳ ಪರಮ ಶಿಷ್ಯರಾಗಿದ್ದರು. ಒಂದು ದಿನ ದಾನಪ್ಪನವರು ತಮ್ಮ ಕಿಡಿಗೇಡಿ ಬಾಲಕ ಬಸಪ್ಪನನ್ನು ಕರೆದು ಕೊಂಡು ಅಥಣಿಯ ಶ್ರೀ ಗಚ್ಚಿನ ಮಠಕ್ಕೆ ಪರಮ ಪೂಜ್ಯರ ದರ್ಶನಕ್ಕೆ ಹೋದರು.  ಪರಮ ಪೂಜ್ಯ ಶ್ರೀ ಅಥಣಿಯ ಮುರುಗೇಂದ್ರ ಶಿವಯೋಗಿಗಳು ಲಿಂಗ ಪೂಜೆ ಮುಗಿಸಿ ಮಠದ ಆವರಣದಲ್ಲಿ ಭಕ್ತರ ದರ್ಶನ ನೀಡಲು ಬಂದು ಕುಳಿತು ಕೊಳ್ಳುತ್ತಾರೆ. ಆಗ ಮಠದಲ್ಲಿ ಆಡುತ್ತಿದ್ದ ಬಾಲಕ ಓಡಿ ಹೋಗಿ ಪರಮ ಪೂಜ್ಯ ಶ್ರೀ ಅಥಣಿಯ ಮುರುಗೇಂದ್ರ ಶಿವಯೋಗಿಗಳ ತೊಡೆಯ ಮೇಲೆ ಕುಳಿತು ಕೊಳ್ಳುತ್ತಾನೆ. ಮಗನ ಶಿಕ್ಷಣ ಮತ್ತು ವಿದ್ಯೆಗಾಗಿ ಪೂಜ್ಯ ಶ್ರೀ ಶಿವಯೋಗಿಗಳ ಆಶೀರ್ವಾದಕ್ಕಾಗಿ ಬಂದ ಶ್ರೀ ದಾನಪ್ಪನಿಗೆ ಒಂದು ರೀತಿಯ ಮುಜುಗರ ಉಂಟಾಗಿತ್ತು. ಅವಸರದಲ್ಲಿ ಓಡಿ ಹೋಗಿ ಶ್ರೀಗಳ ತೊಡೆಯ ಮೇಲೆ ಕುಳಿತ ಬಾಲಕ ಬಸಪ್ಪನನ್ನು ಕರೆದು ಕೊಳ್ಳಲು ಹೋದಾಗ  ಪರಮ ಪೂಜ್ಯ ಶ್ರೀ ಅಥಣಿಯ ಮುರುಗೇಂದ್ರ ಶಿವಯೋಗಿಗಳು ದಾನಪ್ಪ ಇರಲಿ ಬಿಡು ಈ ಹುಡುಗ ಮುಂದ ದಿಲ್ಲಿ ದರ್ಬಾರದಾಗ ಮೆರೆತನ ಎಂದು ಆಶೀರ್ವಾದ ಮಾಡಿದರಂತೆ. ಬಾಲ್ಯದಲ್ಲಿಯೇ ಇಂತಹ ಮಹಾತ್ಮರ ಕೃಪೆಗೆ ಒಳಗಾದ ಬಾಲಕ ಬಸಪ್ಪ ದಾನಪ್ಪ ಜತ್ತಿ ಎಂಬ ಹಳ್ಳಿಯ ಹುಡುಗ ಸಾವಳಗಿ ಗ್ರಾಮ ಪಂಚಾಯತಿ ಸದಸ್ಯರಿಂದ ಹಿಡಿದು ಜಮಖಂಡಿ ನಗರ ಸಭೆ ಅಧ್ಯಕ್ಷ ನಂತರ ಮುಂಬೈ ಸರಕಾರದಲ್ಲಿ ಬೇರೆ ಬೇರೆ ಖಾತೆ ನಿರ್ವಹಣೆ ಉಪಮುಖ್ಯಮಂತ್ರಿ ಸಂಸದೀಯ ಸಚಿವ ಕಾರ್ಯದರ್ಶಿ ರಾಜ್ಯ ವಿಂಗಡಣೆ ಆದ ಮೇಲೆ    ಕರ್ನಾಟಕ ರಾಜ್ಯ ಸರ್ಕಾರದ ಹಲವು ಖಾತೆ ಮತ್ತು  ಮುಖ್ಯ ಮಂತ್ರಿ ಎರಡು ರಾಜ್ಯಗಳ ಗವರ್ನರ್ ಕೊನೆಗೆ ರಾಜ್ಯ ಸಭಾ ಸದಸ್ಯ ಉಪರಾಷ್ಟ್ರಪತಿ ಹಂಗಾಮಿ ರಾಷ್ಟ್ರಪತಿ ಆಗಿ ಉತ್ತರ ಕರ್ನಾಟಕದ ಅಪರೂಪದ ಪ್ರಬುದ್ಧ ಪ್ರಾಮಾಣಿಕ ರಾಜಕೀಯ ಮುತ್ಸದ್ಧಿ ಎಂದು ಹೆಸರು ವಾಸಿಯಾದರು. ಡಾ ಬಸಪ್ಪ ದಾನಪ್ಪ ಜತ್ತಿ _________________________ ( ಬಿ.ಡಿ.ಜತ್ತಿ) (ಸೆಪ್ಟೆಂಬರ್ 10,1912 – ಜೂನ್ 7, 2002) – ಭಾರತದ ಮಾಜಿ ಉಪರಾಷ್ಟ್ರಪತಿಗಳಲ್ಲೊಬ್ಬರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಲ್ಲೊಬ್ಬರು. ಸ್ವಲ್ಪ ದಿನಗಳ ಕಾಲ ಹಂಗಾಮಿ ರಾಷ್ಟ್ರಪತಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕದ ಇವತ್ತಿನ  ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮ ಪಂಚಾಯತಿಯಿಂದ ದೇಶದ ಹಂಗಾಮಿ ರಾಷ್ಟ್ರಪತಿ ಹುದ್ದೆಯವರೆಗೆ ತಲುಪಿದ ಏಕೈಕ ರಾಜಕಾರಣಿ ಬಿ.ಡಿ.ಜತ್ತಿ.  ವಿಜಯಪುರ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಹತ್ತಿರದ ಕುರಗೊಡ(ತಾಯಿಯ ಊರು) ಎಂಬ ಚಿಕ್ಕ ಗ್ರಾಮದಲ್ಲಿ 1912ರ ಸೆಪ್ಟಂಬರ್ 10ರಂದು ಜನಿಸಿದರು. ತಂದೆ ದಾನಪ್ಪ ಜತ್ತಿ, ತಾಯಿ ಭಾಗವ್ವ. ದಾನಪ್ಪ ಜತ್ತಿಯವರು ಒಬ್ಬ ವ್ಯಾಪಾರಿ, ಅವರ ಮೂವರು ಗಂಡುಮಕ್ಕಳಲ್ಲಿ ಬಸಪ್ಪನವರು ಒಬ್ಬರು.ಗ್ರಾಮವು ಅಂದು ಮುಂಬೈ ಪ್ರಾಂತದ ಜಮಖಂಡಿ ಸಂಸ್ಥಾನಕ್ಕೆ ಸೇರಿತ್ತು.  ತಂದೆ ದಾನಪ್ಪ, ತಾಯಿ ಭಾಗವ್ವ- ಇಬ್ಬರೂ ಶ್ರಮ ಜೀವಿಗಳು, ದೈವ ಭಕ್ತರು, ಗುರು ಹಿರಿಯರಲ್ಲಿ ಅಪಾರ ಗೌರವುಳ್ಳವರು. ಇವರ ಸದ್ಗುಣಗಳು ಬಸಪ್ಪನವರಿಗೆ ಬಳುವಳಿಕೆಯಾಗಿ ಬಂದವು. ವಿದ್ಯಾಭ್ಯಾಸ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅಭ್ಯಾಸದ ಅನಂತರ ಕೊಲ್ಲಾಪುರದ ರಾಜಾರಾಂ ಕಾಲೇಜಿನಲ್ಲಿ ವ್ಯಾಸಂಗಮಾಡಿ ಕಲಾ ಪದವಿಯನ್ನು   ಮುಂದೆ   ಲಾ ಕಾಲೇಜಿನಲ್ಲಿ ಎಲ್‍ಎಲ್.ಬಿ. ಪದವಿಯನ್ನೂ ಗಳಿಸಿ (1940) ಜಮಖಂಡಿಯಲ್ಲಿ ವಕೀಲರಾಗಿ ಜೀವನ ಆರಂಭಿಸಿದರು (1940-45). 1948ರಲ್ಲಿ ಜಮಖಂಡಿಯು ಮುಂಬಯಿಗೆ ಸೇರಿದ ನಂತರ ಮತ್ತೆ ಕಾನೂನು ವೃತ್ತಿಗೆ ವಾಪಸಾದರು ವೃತ್ತಿಯಲ್ಲಿ ವಕೀಲರು 1940 ರಲ್ಲಿ ನ್ಯಾಯವಾದಿಯಾಗಿ ಬದುಕು ಆರಂಭಿಸಿದ ಅವರು ರಾಜಕಾರಣಿಯಾಗಿ ಜೀವನವನ್ನು ಸಮಾಜ ಸೇವೆಗೆ ಅರ್ಪಿಸಿಕೊಂಡರು. ಬಸಪ್ಪನವರು 10 ವರ್ಷದ ಬಾಲಕನಾಗಿದ್ದಾಗಲೇ 5 ವರ್ಷದ ಬಾಲಕಿ ಸಂಗವ್ವಳೊಂದಿಗೆ ವಿವಾಹವಾಯಿತು.  ತಂದೆಯ ಮರಣದ ನಂತರ ಕುಟುಂಬ ನಿರ್ವಹಣೆಯ ಹೊಣೆ ತಮ್ಮ ಮೇಲೆ ಬಿದ್ದುದರಿಂದ, ಬಸಪ್ಪನವರು ಕಾನೂನು ಶಿಕ್ಷಣವನ್ನು ಕೈಬಿಟ್ಟು ಸ್ವಗ್ರಾಮಕ್ಕೆ ಮರಳಿದರು. ಕುಟುಂಬದ ಹೊಣೆಯ ಜೊತೆಗೆ ತಮ್ಮ ಹಳ್ಳಿಯ ಸಾರ್ವಜನಿಕ ಸಮಸ್ಯೆಗಳನ್ನು ಬಿಡಿಸುವ ಹೊಣೆಯನ್ನೂ ವಹಿಸಿಕೊಂಡರು.ಗ್ರಾಮ ಪಂಚಾಯಿತಿ ಸ್ಥಾಪಿಸಿ, ಅದರ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾಗಿ ಮೂರೂವರೆ ವರ್ಷ ಅದನ್ನು ಮುನ್ನಡೆಸಿದರು. ಇದು ಅವರ ಸಮಾಜ ಸೇವಾ ಕಾರ್ಯದ ಮೊದಲ ಹಂತ. ಗಾಂಧೀಜಿಯವರ ಆದರ್ಶಗಳಿಂದ ತುಂಬ ಪ್ರಭಾವಿತರಾಗಿದ್ದ ಬಸಪ್ಪನವರು ರಾಜಕೀಯ ಬೆಳವಣಿಗೆಗಳ ಬಗ್ಗೆ ಸದಾ ಜಾಗರೂಕರಾಗಿರುತ್ತಿದ್ದರು. ಸುಧೀರ್ಘ ರಾಜಕೀಯ ಅನುಭವ ______________________ ಮುಂಬಯಿ ರಾಜ್ಯ ಶಾಸನ ಸಭೆಗೆ ಅವರನ್ನು ನಾಮ ನಿರ್ದೇಶನ ಮಾಡಲಾಗಿತ್ತು. ಒಂದೇ ವಾರದಲ್ಲಿ ಅವರನ್ನು ಸಂಸದೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. 1952ರ ಸಾರ್ವತ್ರಿಕ ಚುನಾವಣೆಯಾದ ನಂತರ ಜತ್ತಿಯವರನ್ನು ಮುಂಬಯಿ ಸರ್ಕಾರದಲ್ಲಿ ಆರೋಗ್ಯ ಮತ್ತು ಕಾರ್ಮಿಕ ಮಂತ್ರಿಯನ್ನಾಗಿ ನೇಮಿಸಲಾಯಿತು. ಭಾಷಾವಾರು ಪ್ರಾಂತ್ಯಗಳು ರಚನೆಯಾದ ನಂತರ ಜತ್ತಿಯವರು ಮೈಸೂರಿ ಶಾಸನಸಭೆಯ ಅಧ್ಯಕ್ಷರೂ ಮತ್ತು ಭೂ ಸುಧಾರಣಾ ಸಮಿತಿಯ ಅಧ್ಯಕ್ಷರೂ ಆಗಿದ್ದರು. 3ನೇ ಸಾರ್ವತ್ರಿಕ ಚುನಾವಣೆಯಲ್ಲಿ ಜಮಖಂಡಿ ಕ್ಷೇತ್ರದಿಂದ ಮರು ಚುನಾಯಿತರಾದರು.  1962ರಲ್ಲಿ ನಿಜಲಿಂಗಪ್ಪನವರ ಸಚಿವ ಸಂಪುಟದಲ್ಲಿ ಹಣಕಾಸು ಮಂತ್ರಿಯಾದರು. ಅದೇ ಕ್ಷೇತ್ರದಿಂದ ನಾಲ್ಕನೆಯ ಶಾಸನಸಭೆಗೆ ಮರು ಚುನಾವಣೆಯಲ್ಲಿ ಆಯ್ಕೆಯಾದರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಂತ್ರಿಯಾದರು. ನಂತರ ಅವರು ರಾಷ್ಟ್ರ ರಾಜಕಾರಣಕ್ಕೆ ತೊಡಗಿಸಿಕೊಂಡು 1968ರಲ್ಲಿ ಪಾಂಡಿಚೆರಿಯ ಲೆಫ್ಟಿನೆಂಟ್‌ ಗವರ್ನರ್‌ ಆಗಿ ನೇಮಕಗೊಂಡರು. 1973ರಲ್ಲಿ ಒರಿಸ್ಸಾದ ರಾಜ್ಯಪಾಲರಾಗಿ, ನಂತರ 1974ರಲ್ಲಿ ಭಾರತದ ಉಪರಾಷ್ಟ್ರಾಧ್ಯಕ್ಷರಾಗಿ 1980ರ ವರೆಗೆ ಸೇವೆ ಸಲ್ಲಿಸಿದರು. ರಾಜ್ಯದಲ್ಲಿ ಸಚಿವರಾಗಿ, ನಂತರ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿ, ಪಾಂಡಿಚೇರಿಯಲ್ಲಿ ಲೆ.ಗೌವರನರ್ ಆಗಿ ಸೇವೆ ಸಲ್ಲಿಸಿ, ಮುಂದೆ ಉಪರಾಷ್ಟ್ರಪತಿ ಮತ್ತು ಫಕ್ರುದ್ದಿನ್ ಅಹ್ಮದ್ ಅವರ ಅಕಾಲ ಮೃತ್ಯುವಿನ ನಂತರ ಕೆಲಕಾಲ ಹಂಗಾಮಿ ರಾಷ್ಟ್ರಪತಿಯಾಗಿ ಇವರು ಸೇವೆ ಸಲ್ಲಿಸಿದರು. ಉತ್ತಮ ಆಡಳಿತಗಾರ, ಸರಳ ಜೀವಿ ಮತ್ತು ರಾಜಕೀಯ “ಜಟ್ಟಿ”ಎಂದು ಜತ್ತಿ ಹೆಸರು ಗಳಿಸಿದ್ದಾರೆ. ಜಮಖಂಡಿಯ ಪೌರಸಭೆಯ ಸದಸ್ಯರಾಗಿ ಎರಡುಬಾರಿ ಆಯ್ಕೆ ಹೊಂದಿದರಲ್ಲದೆ ಅದರ ಅಧ್ಯಕ್ಷರಾಗಿಯೂ ಇದ್ದರು (1940-45). ಜಮಖಂಡಿ ಸಂಸ್ಥಾನದ ಪ್ರಜಾ ಪರಿಷತ್ತಿನ ಪ್ರಮುಖ ಕಾರ್ಯಕರ್ತರಲ್ಲಿ ಇವರೂ ಒಬ್ಬರಾಗಿದ್ದರು. ಜಮಖಂಡಿಯಲ್ಲಿ ಪ್ರಜಾಪ್ರತಿನಿಧಿ ಸರ್ಕಾರ ಸ್ಥಾಪನೆಯಾದಾಗ ಮಂತ್ರಿಮಂಡಳ ರಚಿಸುವ ಹೊಣೆ ಇವರದಾಯಿತು. 1947ರಲ್ಲಿ ಭಾರತ ಸ್ವತಂತ್ರವಾದಾಗ ಸಂಸ್ಥಾನಗಳ ಭವಿಷ್ಯದ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ದಕ್ಷಿಣ ಸಂಸ್ಥಾನಗಳ ಒಕ್ಕೂಟರಚನೆಯ ಪ್ರಯತ್ನಗಳು ನಡೆದಿದ್ದುವು. ಜತ್ತಿಯವರು ಜಮಖಂಡಿ ಸಂಸ್ಥಾನಿಕರ ಮನವೊಲಿಸಿ ಭಾರತ ಒಕ್ಕೂಟದಲ್ಲಿ ಆ ಸಂಸ್ಥಾನ ವಿಲೀನಗೊಳ್ಳುವಂತೆ ಮಾಡಲು ಶ್ರಮಿಸಿದರು. ವಿಲೀನಗೊಂಡ ಪ್ರದೇಶಗಳ ಪ್ರನಿನಿಧಿಯಾಗಿ ಜತ್ತಿಯವರು ಮುಂಬಯಿ ವಿಧಾನಸಭೆಗೆ ನಾಮಕರಣ ಹೊಂದಿದರು ಮತ್ತು ಅಲ್ಲಿಯ ಮುಖ್ಯಮಂತ್ರಿ ಬಿ.ಜಿ ಖೇರರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕಗೊಂಡರು (1948). 1952ರ ಚುನಾವಣೆಯಲ್ಲಿ ಮುಂಬಯಿ ವಿಧಾನಸಭೆಗೆ ಚುನಾಯಿತರಾಗಿ ಆ ರಾಜ್ಯದ ಆರೋಗ್ಯ ಮತ್ತು ಕಾರ್ಮಿಕ ಉಪಮಂತ್ರಿಯಾದರು. 1956ರಲ್ಲಿ ರಾಜ್ಯ ಪುನರ್ರಚನೆಯಾದ ಅನಂತರ ಜತ್ತಿಯವರು ನೂತನ ಮೈಸೂರು ರಾಜ್ಯದ (ಈಗ ಕರ್ನಾಟಕ) ಭೂಸುಧಾರಣಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡರು.  ರಾಜ್ಯದ ಭೂಸುಧಾರಣಾ ಕಾಯಿದೆಗಳಿಗೆ ಜತ್ತಿ ಸಮಿತಿಯ ವರದಿ ತಳಹದಿಯಾಯಿತು.  1957 ಮತ್ತು 1967ರ ಚುನಾವಣೆಗಳಲ್ಲಿ ಅವರು ರಾಜ್ಯವಿಧಾನಸಭೆಗೆ ಆಯ್ಕೆಯಾದರು. ಮುಖ್ಯಮಂತ್ರಿಯಾಗಿ ಆಯ್ಕೆ 1958ರ ಜತ್ತಿಯವರು ಮೈಸೂರಿನ ವಿಧಾನ ಮಂಡಲ ಕಾಂಗ್ರೆಸ್ ಪಕ್ಷದ ನಾಯಕರಾಗಿ ಆಯ್ಕೆಯಾಗಿ ರಾಜ್ಯದ ಮುಖ್ಯಮಂತ್ರಿಯಾದರು. ಅನಿರೀಕ್ಷಿತವಾಗಿ ಬಂದ ಹೊಣೆಯನ್ನು ಜತ್ತಿಯವರು ದಕ್ಷತೆಯಿಂದ ನಿರ್ವಹಿಸಿದರು.  1962ರ ಚುನಾವಣೆಗಳ ಅನಂತರ ರಚಿತವಾದ ಶ್ರೀ ಎಸ್  ನಿಜಲಿಂಗಪ್ಪನವರ  ಮಂತ್ರಿಮಂಡಲದಲ್ಲಿ ಶ್ರೀ ಜತ್ತಿಯವರು ಹಣಕಾಸಿನ ಮಂತ್ರಿಯಾದರು-1965ರ ವರೆಗೆ ಆ ಹುದ್ದೆಯಲ್ಲಿದ್ದರು.  ಅನಂತರ 1968ರ ವರೆಗೆ ಅವರು ಆಹಾರ ಮಂತ್ರಿಯಾಗಿದ್ದರು. ಒರಿಸ್ಸಾದಲ್ಲಿ  1973-74ರಲ್ಲಿ ಆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಬಂದಾಗ ಜತ್ತಿಯವರು ಅದರ ಆಡಳಿತವನ್ನು ಯಶಸ್ವಿಯಾಗಿ ನಿರ್ವಹಿಸಿದರು. ಉಪರಾಷ್ಟ್ರಪತಿ ಮತ್ತು ಹಂಗಾಮಿ ರಾಷ್ಟ್ರಪತಿ 1977 ಫೆಬ್ರವರಿ 11ರಿಂದ ಜುಲೈ 25 1977ರ ವರೆಗೂ ಭಾರತದ ಹಂಗಾಮಿ ರಾಷ್ಟ್ರಪತಿಗಳಾಗಿದ್ದರು ಹಾಗೂ 5ನೇ ಉಪ ರಾಷ್ಟ್ರಪತಿಗಳಾಗಿದ್ದರು. ತುರ್ತು ಪರಿಸ್ಥಿತಿಯ ನಂತರ ನಡೆದ ಚುನಾವಣೆಯಲ್ಲಿ ಜನತಾ ಪಕ್ಷ ಬಹುಮತದಿಂದ ಜಯಗೊಳಿಸಿದರೂ, ಮುರಾರ್ಜಿ ದೇಸಾಯಿಯವರನ್ನು ಪ್ರಧಾನಿ ಮಂತ್ರಿ ಹುದ್ದೆ ಸ್ವೀಕರಿಸಲು ಆಹ್ವಾನಿಸಲು, ಆಗ ಹಂಗಾಮಿ ರಾಷ್ಟ್ರಪತಿಗಳಾಗಿದ್ದ ಜತ್ತಿಯವರು ತಡ ಮಾಡಿದರೆಂದು ಅವರ ವಿರುದ್ಧ ದೆಹಲಿಯಲ್ಲಿ ಭಾರಿ ಪ್ರತಿಭಟನೆ ನೆಡೆದಿತ್ತು.ಇದರಿಂದಾಗಿ, ಶ್ರೀ ಎಸ್ ನಿಜಲಿಂಗಪ್ಪನವರು ರಾಷ್ಟ್ರಪತಿಯಾಗಲು ನಿರಾಕರಿಸಿದ ನಂತರ ಬಹುದಿನಗಳ ನಂತರ ಜತ್ತಿಯವರಿಗೆ ದೊರೆತಿದ್ದ ರಾಷ್ಟ್ರಪತಿ ಹುದ್ದೆ ಅವಕಾಶವು ಕೊನೆಗೆ ನೀಲಂ ಸಂಜೀವ ರೆಡ್ಡಿಯವರ ಪಾಲಾಯಿತೆಂದು ಆಗ ರಾಜಕೀಯ ಚರ್ಚೆ ನೆಡೆದಿತ್ತು. ಅದರ ಸತ್ಯಾಸತ್ಯತೆಗಳೇನೇ ಇರಲಿ, ಕನ್ನಡಿಗರಿಗೆ ರಾಷ್ಟ್ರಪತಿಯಾಗುವ ಅವಕಾಶ ದೂರವಾಗಿದ್ದು ಮಾತ್ರ ಸತ್ಯವಾಗಿದೆ. ಅಧ್ಯಾತ್ಮ ಒಲವು ___________________ ಬಸವೇಶ್ವರರ ಉಪದೇಶ ಮತ್ತು ವಿಚಾರಗಳ ಪ್ರಚಾರದ ಉದ್ದೇಶದಿಂದ ರಚಿತವಾಗಿರುವ ಬಸವ ಸಮಿತಿಗೆ ಜತ್ತಿಯವರು ಪ್ರಾರಂಭದಿಂದಲೂ ಅಧ್ಯಕ್ಷರಾಗಿದ್ದಾರೆ. ಸಣ್ಣ ವಯಸ್ಸಿನಿಂದಲೂ ಅವರು ಆಧ್ಯಾತ್ಮದಲ್ಲಿ ಒಲವು ಬೆಳೆಸಿಕೊಂಡವರು. ಬಸವ ಸಮಿತಿಯು 1964 ರಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಡಾ. ಬಿ.ಡಿ. ಜತ್ತಿ ಅವರಿಂದ ಸ್ಥಾಪನೆಗೊಂಡು, 12 ನೇ ಶತಮಾನದ ಬಸವಣ್ಣವರ ಹಾಗು ಅವರ ಸಮಕಾಲೀನ ಶರಣರ ತತ್ವ ಸಂದೇಶಗಳನ್ನು ಪ್ರಪಂಚದಾದ್ಯಂತ ಸಾರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಭಾರತದ ಮಾಜಿ ರಾಷ್ಟ್ರಪತಿ ಡಾ|| ಬಸಪ್ಪ ದಾನಪ್ಪ ಜತ್ತಿ ಅವರು ಬಸವಣ್ಣವರ ಹಾಗೂ ಶರಣರ ತತ್ವಗಳನ್ನು, ಶರಣ ಸಂಸ್ಕೃತಿಯನ್ನು ಶರಣರ ಸಮಾನತೆಯ ತತ್ವವನ್ನು ಸಾರುವ ಉದ್ದೇಶದಿಂದ 1964 ರಾಲಿ  ಬಸವ ಸಮಿತಿಯನ್ನು ಸ್ಥಾಪಿಸಿದರು. ಅಂದಿನಿಂದ ಇಂದಿನವರೆಗೆ ಪಕ್ಷ, ಜಾತಿ ಭೇದವಿಲ್ಲದೆ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತ ಬಸವ ಸಂದೇಶಗಳನ್ನು ಹಾಗೂ ಶರಣರ ತತ್ವಗಳನ್ನು ಪ್ರಚಾರ ಮಾಡುತ್ತಿದೆ. ಬಸವ ಸಮಿತಿಯು ಶರಣರ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮತ್ತು ಎಲ್ಲಾ ಮಾನವರ ಕಲ್ಯಾಣಕ್ಕಾಗಿ (ಉದ್ಧಾರಕ್ಕಾಗಿ) ಶರಣರ ಕೊಟ್ಟ ಸಂದೇಶಗಳನ್ನು ಕಲುಷಿತಗೊಳಿಸದೆ ಇಂದಿನ ಆಧುನಿಕ ಸಮಾಜಕ್ಕೆ ಒಪ್ಪುವಂತೆ ನವೀಕರಿಸುವ ಉದ್ದೇಶ ಹೊಂದಿದೆ. ಅನ್ನದಾನಯ್ಯಪುರಾಣಿಕ,ಕೆ.ಎಂ.ನಂಜಪ್ಪ,ವೈ.ಸಿ.ಬಸಪ್ಪ,ಗಂಗಪ್ಪ,ಬಿ.ಎಸ್.ಶಂಕರಪ್ಪಶೆಟ್ಟಿ, ಡಾ ಡಿ ಸಿ ಪಾವಟೆ ಮೊದಲಾದ ಗಣ್ಯರ ಜೊತೆಗೂಡಿ, ಮಾನ್ಯ ಶ್ರೀ ಎಸ್ ನಿಜಲಿಂಗಪ್ಪನವರ ಮಾರ್ಗದರ್ಶನದಲ್ಲಿ  ಬೆಂಗಳೂರಿನಲ್ಲಿ ಅಖಿಲ ಭಾರತ ಬಸವ ಸಮಿತಿ ಸ್ಥಾಪಿಸಿದರು. ಬಸವತತ್ವ ಪ್ರಚಾರಕ್ಕಾಗಿ ಮೀಸಲಾದ ಈ ಸಂಸ್ಥೆಯ ಅಭಿವೃದ್ಧಿಗಾಗಿ ಅಧ್ಯಕ್ಷರಾಗಿ ಜತ್ತಿ ಮತ್ತು 27 ವರ್ಷಗಳ ಕಾಲ ಗೌರವ ಕಾರ್ಯದರ್ಶಿಯಾಗಿ ಅನ್ನದಾನಯ್ಯ ಪುರಾಣಿಕ ನಿರಂತರ ಮತ್ತು ನಿಸ್ಪಾರ್ಥ ಸೇವೆ ಸಲ್ಲಿಸಿದ್ದಾರೆ. ಇಂದು ಡಾ ಅರವಿಂದ ಜತ್ತಿ ಅವರು ಬಸವ ಸಮಿತಿ ಅಧ್ಯಕ್ಷರಾಗಿ ಶರಣರ ವಚನಗಳನ್ನು ರಾಷ್ಟ್ರೀಯ ಇತರ ಭಾಷೆಗಳಿಗೆ ಮತ್ತು ಫ್ರೆಂಚ್ ಇಂಗ್ಲಿಷ್ ಐರಿಶ್ ಜರ್ಮನಿ ಚೀನೀ ಭಾಷೆಗಳಿಗೆ ಭಾಷಾಂತರ ಮಾಡುತ್ತಿದ್ದಾರೆ. ನಿರ್ವಹಿಸಿದ ಪ್ರಮುಖ  ಹುದ್ದೆಗಳು ಅವರು ಹೊಂದಿದ್ದ ಪ್ರಮುಖ ಹುದ್ದೆಗಳಲ್ಲಿ ಕೆಲ ಮಾಹಿತಿಗಳನ್ನು ಇಲ್ಲಿ ನೀಡುತ್ತಿದ್ದೇವೆ. ಸಾವಳಗಿಯ ಗ್ರಾಮ ಪಂಚಾಯ್ತಿ ಸದಸ್ಯ (1943) ಮುಂಬಯಿ ವಿಧಾನಸಭೆಯ ಶಾಸಕ (1949) ಮುಂಬಯಿ ರಾಜ್ಯದ

ಸಾವಿಲ್ಲದ ಶರಣರು ಮಾಲಿಕೆ-“ಹಳ್ಳಿಯಿಂದ ದಿಲ್ಲಿ ದರ್ಬಾರಕ್ಕೆ ಹೋದ ಶ್ರೀ ಬಸಪ್ಪ ದಾನಪ್ಪ ಜತ್ತಿ” Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಕನ್ನಡ ಸಾಹಿತ್ಯ ದಿಗ್ಗಜೆ ಶಾಂತಾದೇವಿ ಮಾಳವಾಡ

ಸಾವಿಲ್ಲದಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಕನ್ನಡ ಸಾಹಿತ್ಯ ದಿಗ್ಗಜೆ ಶಾಂತಾದೇವಿ ಮಾಳವಾಡ ಮಹಿಳಾ ಸಾಹಿತ್ಯದ ಚರಿತ್ರೆ ಎಂದರೆ ಮಹಿಳೆಯರು ತಮ್ಮ ಅನುಭವಗಳು, ಸಮಾಜದ ಸ್ಥಿತಿ, ರಾಜಕೀಯ ಅಭಿಪ್ರಾಯಗಳನ್ನು ಸಾಹಿತ್ಯದ ಮೂಲಕ ವ್ಯಕ್ತಪಡಿಸಿದ ಪಯಣವಾಗಿದ್ದು, ಇದು ಪ್ರಾಚೀನ ಕಾಲದಿಂದಲೂ ಇದ್ದು, ಅಮೇರಿಕಾದ ಕ್ರಾಂತಿಯಂತಹ ಸಂದರ್ಭಗಳಲ್ಲಿ ತೀವ್ರಗೊಂಡಿತು; ಇವರು ಮನೆ, ಸಮಾಜ ಮತ್ತು ಪ್ರಕೃತಿಯೊಂದಿಗಿನ ಸಂಬಂಧಗಳನ್ನು ಕಾದಂಬರಿ, ಕವಿತೆಗಳ ಮೂಲಕ ನಿರೂಪಿಸಿ, ಮಹಿಳೆಯರ ಸ್ಥಾನಮಾನದ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ, ಇದು ಮುಖ್ಯವಾಗಿ ಸ್ತ್ರೀವಾದಿ ಚಿಂತನೆಗಳನ್ನು ಜಗತ್ತಿಗೆ ಪರಿಚಯಿಸಿದೆ.ಮಹಿಳಾಪರ ಚಿಂತನೆ ಆಲೋಚನೆಗಳು ಕಥೆ ಕಾದಂಬರಿ ಕಾವ್ಯ ಸಾಹಿತ್ಯ ರಚನೆಯಲ್ಲಿ ಮುಕ್ತವಾಗಿ ಬರೆಯಲು ಆರಂಭಿಸಿದರು ಕನ್ನಡತಿಯರು. 12 ನೆಯ ಶತಮಾನದ ಶ್ರೇಷ್ಠ ವಚನಕಾರ್ತಿಯರು ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜ ಕಟ್ಟಿದರು.ನವ್ಯ ನವೋದಯ ಪ್ರಗತಿಶೀಲ ಬಂಡಾಯ ದಲಿತ ಸಾಹಿತ್ಯ ಹೀಗೆ ಎಲ್ಲಾ ಘಟ್ಟಗಳಲ್ಲಿವಚನ ಸಾಹಿತ್ಯ ಮತ್ತು ಶರಣೆಯರ ಸಾಹಿತಿಕ ಸಾಂಸ್ಕೃತಿಕ ಸಾಮಾಜಿಕ ಕಾರ್ಯಗಳನ್ನು ಮರೆಯಲಾಗದು. ಕನ್ನಡ ಸಾಹಿತ್ಯದಲ್ಲಿಜಯದೇವಿ ತಾಯಿ ಲಿಗಾಡೆ ನಂತರ ಉತ್ತರ ಕರ್ನಾಟಕ ಭಾಗದಲ್ಲಿ ಮತ್ತು ಸಮಗ್ರ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅನುಪಮವಾಗಿ ದುಡಿದವರು ಶಾಂತಾದೇವಿ ಮಾಳವಾಡ ಅವರು. ಶಾಂತಾದೇವಿ ಮಾಳವಾಡ ಇವರು 1922 ಡಿಸೆಂಬರ್ 10 ರಂದು ಬೆಳಗಾವಿ ಯಲ್ಲಿ ಜನಿಸಿದರು. ತಾಯಿ ಜಯವಂತಿದೇವಿ; ತಂದೆ ಕರ್ಜಗಿ ಮುರಿಗೆಪ್ಪ ಶೆಟ್ಟರು. ತವರು ಮನೆ ಹೆಸರು ಕರ್ಜಗಿ ದಾನಮ್ಮ. ಎರಡು ವರ್ಷದವಳಿದ್ದಾಗ ತಂದೆಯನ್ನು ಹಾಗು ಹತ್ತು ವರ್ಷದವಳಿದ್ದಾಗ ತಾಯಿಯನ್ನು ಕಳೆದುಕೊಂಡ ದಾನಮ್ಮ ಅಜ್ಜಿಯ ಮಡಿಲಲ್ಲಿ ಬೆಳೆದಳು. ವನಿತಾ ವಿದ್ಯಾಲಯದಲ್ಲಿ ಹೈಸ್ಕೂಲ ಎರಡನೆಯ ತರಗತಿಯವರೆಗೆ ಅಂದರೆ ಒಂಬತ್ತನೆಯ ತರಗತಿ ಕಲಿತು, ವಿದ್ಯಾಭ್ಯಾಸವನ್ನು ನಿಲ್ಲಿಸಬೇಕಾಯಿತು. ಮದುವೆಶಾಂತಾದೇವಿ ಮಾಳವಾಡ ಅವರು ತಮ್ಮ 15 ನೆಯ ವಯಸ್ಸಿನಲ್ಲಿ1937 ನೆಯ ಇಸವಿಯಲ್ಲಿ ಪ್ರೊ. ಸ.ಸ. ಮಾಳವಾಡರ ಜೊತೆ ಮದುವೆ ಆಯಿತು. ಮುಂದೆ ತಮ್ಮ ಪತಿಯ ಒತ್ತಾಸೆಯಿಂದಾಗಿ ಶಾಂತಾದೇವಿಯವರು ಮನೆಯಲ್ಲಿಯೆ ಇಂಗ್ಲೀಷ್,ಹಿಂದಿ, ಪ್ರಾಚೀನ ಕನ್ನಡ ಸಾಹಿತ್ಯ ಹಾಗು ವಚನ ಸಾಹಿತ್ಯದ ಅಧ್ಯಯನ ಮಾಡಿದರು. 1940 ರಲ್ಲಿ ಕನ್ನಡ ಜಾಣ ಪರೀಕ್ಷೆಯಲ್ಲಿ ತೇರ್ಗಡೆಯಾದರು. ಪತಿಯ ಪ್ರೋತ್ಸಾಹದಿಂದ 1938ರಲ್ಲಿ ಅಕ್ಕನ ಬಳಗ ವೆಂಬ ಮಹಿಳಾ ಸಂಘಟನೆಯನ್ನು ಹುಟ್ಟು ಹಾಕಿದರು.ಶಾಂತಾದೇವಿ ತಾಯಿಯ ಮಮತೆ ತಂದೆಯ ಪ್ರೀತಿ ಕಾಣದ ಮುಗ್ಧ ಬಾಲಕಿಸುಮಾರು ಹತ್ತು ಸಲ ಅವರಿಗೆ ಗರ್ಭಪಾತವಾಯಿತು.ಮಕ್ಕಳಿಲ್ಲದ ಕೊರಗು ಬಿಟ್ಟು ಸಂಪೂರ್ಣ ಸಾಹಿತ್ಯ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದರು.ಅರಿವು (ಜ್ಞಾನ, ಅರಿವು), ಆಚಾರ (ಅಭ್ಯಾಸ) ಅನುಭವ (ಆಧ್ಯಾತ್ಮಿಕ ಅನುಭವ), ಕಾಯಕ (ದೈಹಿಕ ದುಡಿಮೆಯಿಂದ ಗಳಿಸುವುದು), ಸತ್ಯ ಮತ್ತು ಪರಿಶುದ್ಧತೆಯನ್ನು ಕಾಪಾಡುವುದು, ದಾಸೋಹ (ಯಾವುದೇ ಅಹಂ’ ಇಲ್ಲದೆ ದುಡಿದವರಿಗೆ ನೀಡುವುದು ಶರಣ ಸಂಸ್ಕೃತಿಯ ತತ್ವಗಳು.ಬಾಲ್ಯದಿಂದಲೂ ಇಂತಹ ಅಪೂರ್ವ ಶರಣ ಸಂಸ್ಕೃತಿ ಮೈಗೂಡಿಸಿಕೊಂಡ ಶಾಂತಾದೇವಿ ಮುಂದೊಂದು ದಿನ ನಾಡಿನ ಅಗ್ರ ಲೇಖಕಿ ಸಾಹಿತಿ ಲೇಖಕಿಯಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಾರ್ವಜನಿಕ ಸಾಮಾಜಿಕ ಸೇವೆ ಅಕ್ಕನ ಬಳಗ ಸ್ಥಾಪನೆ ( 1940)ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು (1965)ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ಸಲಹಾ ಸಮಿತಿಯ ಸದಸ್ಯರು (1974-1978)ರಾಜ್ಯ ಸಾಹಿತ್ಯ ಅಕಾಡೆಮಿ ಸದಸ್ಯರು (1979)ಧಾರವಾಡ ಆಕಾಶವಾಣಿ ಆಡಿಶನ್ ಕಮಿತಿ ಸದಸ್ಯರು(1961-1962)ಗಾಂಧಿ ಶಾಂತಿ ಪ್ರತಿಷ್ಠಾನದ ಮಹಿಳಾವಿಭಾಗದ ಕಾರ್ಯಾಧ್ಯಕ್ಷರು(1967-1970)ಕರ್ನಾಟಕ ವಿದ್ಯಾವರ್ಧಕ ಸಂಘ,ಧಾರವಾಡ ದ ಉಪಾಧ್ಯಕ್ಷರು (1974-1978)ಉತ್ತರ ಕರ್ನಾಟಕ ಲೇಖಕಿಯರ ಸಂಘ (ಹುಬ್ಬಳ್ಳಿ-ಧಾರವಾಡ) ದ ಆಜೀವ ಗೌರವಾಧ್ಯಕ್ಷರು ಸಾಹಿತ್ಯ ಕೃತಿಗಳು ಕಥಾಸಂಕಲನ ಮೊಗ್ಗೆಯ ಮಾಲೆಕುಂಕುಮ ಬಲ ಗದ್ಯ ಸಾಹಿತ್ಯ ಹಚ್ಚೇವು ಕನ್ನಡದ ದೀಪ.ಕನ್ನಡದ ತಾಯಿ.ಮಹಿಳೆಯರ ಅಲಂಕಾರಸೊಬಗಿನ ಮನೆಮಹಿಳೆಯರ ಆತ್ಮಶ್ರೀ.ರಸಾಪಾಕಸಾರ್ವಜನಿಕ ರಂಗದಲ್ಲಿ ಮಹಿಳೆ.ದಾಂಪತ್ಯಯೋಗವಧುವಿಗೆ ಉಡುಗೊರೆ.ಜನನೀ ಜನ್ಮ ಭೂಮಿಶ್ಚ.ಮಹಿಳಾ ಚೇತನ.ಸಮುಚ್ಚಯ. ಕಾದಂಬರಿಬಸವ ಪ್ರಕಾಶ.ದಾನದಾಸೋಹಿ ದಾನಮ್ಮ.ವೀರ ಶೂರರಾಣಿ ಕೆಳದಿ ಚೆನ್ನಮ್ಮ ಮಕ್ಕಳ ಸಾಹಿತ್ಯಬೆಳವಡಿ ಮಲ್ಲಮ್ಮ.ಕೆಳದಿ ಚೆನ್ನಮ್ಮ.ನಾಗಲಾಂಬಿಕೆ.ನೀಲಾಂಬಿಕೆಕುಟುಂಬ.ಬಸವಯುಗದ ಶಿವಶರಣೆಯರುಭಾರತದ ಮಾನಸಪುತ್ರಿಯರುಗಂಗಾಂಬಿಕೆಶಿವಯೋಗಿಣಿಎಣ್ಣೆ ಹೊಳೆಯ ನಂದಾದೀಪಪುರಾತನ ಶರಣರುದಾನದಾಸೋಹಿ ದಾನಮ್ಮ. ಪ್ರಶಸ್ತಿ ಗೌರವಗಳು ಜ.ಚ.ನಿ. ಪೀಠಾರೋಹಣ ಬೆಳ್ಳಿಹಬ್ಬ ‘ ಸಾಹಿತ್ಯಸುಮ ‘ ಬಂಗಾರದ ಪದಕಸಾಹಿತ್ಯ ಅಕಾಡೆಮಿ ಪ್ರಶಸ್ತಿ (1973)ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1983)ಸಾವಿತ್ರಮ್ಮ ದೇ.ಜ.ಗೌ. ಪ್ರಶಸ್ತಿ (1991)ಷಷ್ಟ್ಯಬ್ದಿ ಸಮಾರಂಭ (‘ ಪ್ರಶಾಂತ’ ಆಭಿನಂದನ ಗ್ರಂಥ ಸಮರ್ಪಣೆ:1982) 1999 ರಲ್ಲಿ ಬಾಗಲಕೋಟೆಯಲ್ಲಿ ನಡೆದ 68 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೇಷ್ಠ ಸಾಹಿತಿ ಶಾಂತಾದೇವಿ ಮಾಳವಾಡ ಅವರು 7 ಆಗಸ್ಟ್ 2005 ರಲ್ಲಿ ಬಯಲಲ್ಲಿ ಬಯಲಾದರು.ಸರಳ ಸಜ್ಜನಿಕೆಯ ಸಾಕಾರ ಮೂರ್ತಿ ಸ್ನೇಹ ಪ್ರೀತಿ ಮತ್ತು ಆತ್ಮ ಸ್ಥೈರ್ಯದ ಸಂಕೇತವಾದ ಕನ್ನಡ ಸಾಹಿತ್ಯದ ದಿಗ್ಗಜೆ ಶಾಂತಾದೇವಿ ಮಾಳವಾಡ ಅವರು ಕನ್ನಡ ಭಾಷೆ ಸಾಹಿತ್ಯ ಸಂಸ್ಕೃತಿಗೆ ಕೊಟ್ಟ ಕೊಡುಗೆ ಅಪಾರವಾಗಿದೆ. ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

ಕನ್ನಡ ಸಾಹಿತ್ಯ ದಿಗ್ಗಜೆ ಶಾಂತಾದೇವಿ ಮಾಳವಾಡ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

“ಸಾವಿಲ್ಲದ ಶರಣರು” ಮಾಲಿಕೆ, ಕಲ್ಯಾಣದ ಮೇರು ಲಿಂಗಸಾಧಕ ಭಾಲ್ಕಿ  ಡಾ ಶ್ರೀ ಚೆನ್ನಬಸವ ಸ್ವಾಮೀಜಿ-ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ

ಶರಣ ಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ “ಸಾವಿಲ್ಲದ ಶರಣರು” ಮಾಲಿಕೆ, ಕಲ್ಯಾಣದ ಮೇರು ಲಿಂಗಸಾಧಕ ಭಾಲ್ಕಿ  ಡಾ ಶ್ರೀ ಚೆನ್ನಬಸವ ಸ್ವಾಮೀಜಿ- ಹೈದ್ರಾಬಾದ   ಕರ್ನಾಟಕದ ಶ್ರೇಷ್ಠ ಶಿವಯೋಗ ಸಾಧಕ ಭಾಲ್ಕಿ ಡಾ ಡಾ ಶ್ರೀ ಚೆನ್ನಬಸವ ಸ್ವಾಮೀಜಿ .ರಜಾಕಾರ ಮತ್ತು ಮುಸ್ಲಿಮರ ಹಾವಳಿಗೆ ಕನ್ನಡ ಶಿಕ್ಷಣ ತತ್ತರಿಸಿ ಹೋಗಿತ್ತು ಹೊರಗೆ ಉರ್ದು ಬೋರ್ಡ್ ಹಾಕಿ ಒಳಗೆ ಕನ್ನಡವನ್ನು ಕಲಿಸುವ ದಿಟ್ಟತನವನ್ನು ಪರಮ ಪೂಜ್ಯ ಡಾ ಭಾಲ್ಕಿ ಡಾ ಚೆನ್ನ ಬಸವ ಸ್ವಾಮೀಜಿಯವರು ಕೈಗೊಂಡರು ಹಿರೇಮಠ ಸಂಸ್ಥಾನ ಕನ್ನಡದ ಮಠ, ಬಸವ ತತ್ವದ ಮಠ, ಇದು ಜನತೆಯ ಮಠ, ನಮ್ಮೆಲ್ಲರ ಮಠ. ಬಸವಣ್ಣನವರನ್ನು ಹಾಸಿಕೊಂಡು, ಹೊದ್ದುಕೊಂಡಿರುವಂಥ ಮಠ. ಇವನಾರು, ಇವನಾರು? ಎಂದು  ಕೇಳದೆ ಎಲ್ಲರೂ ನಮ್ಮವರೆನ್ನುವ ಮಠ. ಬಡವರಿಗೆ, ದೀನರಿಗೆ, ದಲಿತರಿಗೆ, ಅಂಗವಿಕಲರಿಗೆ, ಅಬಲೆಯರಿಗೆ, ವಿಧವೆಯರಿಗೆ, ಅನಾಥರಿಗೆ, ಕಲಾವಿದಾರಿಗೆ ಆಶ್ರಯ ನೀಡಿರುವಂಥ ಮಠ. ಖ್ಯಾತ ಸಂಶೋಧಕರಾದ ಎಂ. ಎಂ. ಕಲಬುರ್ಗಿಯವರು “ ನಾಡಿನ ಗುರುಸ್ಥಲ ಮಠಗಳಿಗೆ  ಭಾಲ್ಕಿ ಮಠ ಮಾದರಿ ಹಾಗೂ ನಾಡಿನ ವಿರಕ್ತ ಮಠಗಳಿಗೆ ಇಳಕಲ ಮಠ ಮಾದರಿ” ಎಂದು ಬರೆದಿರುವುದು ಇಲ್ಲಿ ಸ್ಮರಿಸಬಹುದು. ಲಿಂಗೈಕ್ಯ ಡಾ|| ಚೆನ್ನಬಸವ ಪಟ್ಟದೇವರು ಹಿಂದಿನಿಂದಲೂ ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಕಲ್ಯಾಣ (ಹೈದ್ರಾಬಾದ) ಕರ್ನಾಟಕವು ಪರಕೀಯ ಆಳ್ವಿಕೆ. ಸ್ಠಳೀಯರ ಅಭಿಮಾನ ಶೂನ್ಯತೆ ಜನಮಾನಸದ ಅಸಹಕಾರ ಶೋಷಣೆಗೆ ಒಳಗಾದ ಜನಸಮುದಾಯಕ್ಕೆ ನೆರವಾಗಿ ಬಂದವರು ಡಾ.ಚೆನ್ನಬಸವ ಪಟ್ಟದೇವರು. ಬಾಲ್ಯ ಮತ್ತು ಶಿಕ್ಷಣಇವರ ಮೊದಲ ಹೆಸರು ಮಹಾರುದ್ರಪ್ಪ. ಬೀದರ ಜಿಲ್ಲೆಯ ಔರಾದ ತಾಲೂಕಿನ ಕಮಲನಗರದಲ್ಲಿ ಬುಳ್ಳಾ ಎಂಬ ವ್ಯಾಪಾರಸ್ಥ  ಮನೆತನದಲ್ಲಿ ತಂದೆ ರಾಜಪ್ಪ- ತಾಯಿ ಸಂಗಮ್ಮಎಂಬ ದಂಪತಿಗಳಿಗೆ  22 ಡಿಸೆಂಬರ್ 1890 ರಂದು  ಮಗುವಾಗಿ ಹುಟ್ಟಿದ ಇವರು ಐದು ವರ್ಷ ತುಂಬುವಾಗಲೇ ತಂದೆ-ತಾಯಿಗಳನ್ನು ಕಳೆದುಕೊಂಡು ಮಹಾ ಅನಾಥರಾದರು. ಬಾಲ್ಯದ 8 ರಿಂದ 10 ವರ್ಷಗಳವರೆಗೆ  ಭಾಲ್ಕಿ ಹಿರೇಮಠ ಶಾಖಾ ಮಠದ ಕಮಲನಗರದಲ್ಲಿ ಅನಾಥ ಬಾಲಕನಾಗಿ ಕಂತಿ ಭಿಕ್ಷೆ ಎತ್ತಿದರು. ಮಠಗಳ ದನ ಕಾಯ್ದು ಬದುಕು ಸವೆಸುತ್ತಿರುವಾಗ, ಭಾಲ್ಕಿ ಹಿರೇಮಠದ ಶ್ರೀ ಸಿದ್ಧ ಬಸವ ಸ್ವಾಮಿಗಳು ದೀಕ್ಷೆ ನೀಡಿ ಸಂಸ್ಕಾರ ಬೋಧಿಸಿ, “ ಚನ್ನಬಸವ” ನೆಂಬ ಹೆಸರಿಟ್ಟು ಸಮೀಪದ ಮುಧೋಳ ಶಿವಲಿಂಗ ಸ್ವಾಮಿಗಳ ಸೇವೆಗೆ ಕಳುಹಿಸಿದರು. ಈ ಹೊತ್ತಿಗಾಗಲೆ “ಚೆನ್ನಬಸವ” ಅಕ್ಷರ ಜ್ಜಾನ ಪಡೆದು ಮರಾಠಿ- ಕನ್ನಡ ಕಲಿಯುತ್ತಿದ್ದರು. ವಿಶೇಷವೆಂದರೇ ಕನ್ನಡ ಭಾಷೆಯನ್ನು ಮೊಡಿ ಲಿಪಿಯಲ್ಲಿ ಬರೆಯುತ್ತಿದ್ದರು ಇವರ ಅಕ್ಷರ ಪ್ರೀತಿಯನ್ನು ಕಂಡ ಶಿವಲಿಂಗ ಮಹಾಸ್ವಾಮಿಗಳು ಔರಾದ (ಬಿ) ದಲ್ಲಿನ ಕೇದಾರಗಳಂಗಳಪ್ಪನವರ ಕನ್ನಡ ಶಾಲೆಗೆ (ಜಿಲ್ಲೆಯಲ್ಲಿ ಇವರೊಬ್ಬರೆ ಕನ್ನಡ ಕಲಿಸುವವರಿದ್ದರು) ಕಳುಹಿಸಿದರು. ಚೆನ್ನಬಸವ ಇಲ್ಲಿಯೇ ಕನ್ನಡದ ಪ್ರಮುಖ ಕಾವ್ಯಗಳಾದ “ರಾಜಶೇಖರ ವಿಳಾಸ, ಶಬರಶಂಕರ ವಿಳಾಸ, ಕರ್ನಾಟಕ ಶಬ್ದ ಮಂಜರಿ, ಬಸವರಾಜ, ವಿಜಯ” ಅಭ್ಯಾಸ ಮಾಡಿದರು. ಪ್ರಸಾದ (ಊಟ)ಕ್ಕಾಗಿ ವಾರದ ಮನೆ ನಿಗದಿಗೊಂಡಿದ್ದು , ದಾಸೋಹ ಮನೆಗೆ ಮನೆಗೆ ಕಂತಿ ಭಿಕ್ಷೆ ತರಬೇಕಾಗುತ್ತಿತ್ತು. ಓದುವ ಗೀಳು ಹೊಂದಿದ್ದ ಚೆನ್ನಬಸವ ಮೈಸೂರಿನಿಂದ ಬರುತ್ತಿದ್ದ ಕನ್ನಡ ಪತ್ರಿಕೆ “ಮೈಸೂರು ಸ್ಟಾರ್” ಓದುತ್ತಿದ್ದರು. ಅದರಲ್ಲಿ ಶಿವಯೋಗ ಮಂದಿರದ ವಿಷಯಗಳು ಓದಿ ಅಲ್ಲಿಗೆ ಹೋಗುವ ಹಂಬಲವಾದರೂ ಅದಮಿಟ್ಟುಕೊಂಡರು. ಇತ್ತ  ಭಾಲ್ಕಿ ಹಿರೇಮಠಕ್ಕೆ ಹೊಸ ಪಟ್ಟಾಧ್ಯಕ್ಷರು ಬೇಕಾಗಿದ್ದರು. ಕಾಶಿರಾಯ ದೇಶಮುಖ, ಶಿವಲಿಂಗಪ್ಪ ಖಂಡ್ರೆ ಇದಕ್ಕಾಗಿ ಯೋಗ್ಯರನ್ನು, ಹುಡುಕುತ್ತಿರುವಾಗ ನಿಷ್ಠೆ, ಕರುಣೆ, ಸಚ್ಚಾರಿತ್ರ್ಯ ಮೈಗೂಡಿಸಿಕೊಂಡು ತಿಳಿವಳಿಕೆಯಿಂದ ಜ್ಜಾನಿಯಾಗಿದ್ದ ಕ್ರಿಯಾಶೀಲ ಚೆನ್ನಬಸವ ಜನಾನುರಾಗಿಯಾಗಿ ಬೆಳೆಯುತ್ತಿರುವುದನ್ನು ದೇಶಮುಖರು ಗಮನಿಸಿ ತರಬೇತಿಗಾಗಿ ಶಿವಯೋಗ ಮಂದಿರಕ್ಕೆ ಕಳುಹಿಸಿದ್ದರು. ಶಿವಯೋಗ ಮಂದಿರದಲ್ಲಿ ಹಾನಗಲ್ ಕುಮಾರ್ ಸ್ವಾಮಿಗಳ ಪ್ರೀತಿಯ ಶಿಷ್ಯನಾಗಿ, ಕನ್ನಡ ಭಾಷೆ-ಸಾಹಿತ್ಯ ವಚನಗಳ ಅಧ್ಯಯನದೊಂದಿಗೆ ಬದುಕಿನಲ್ಲಿ ಶರಣ ತತ್ವಗಳನ್ನು ರೂಢಿಸಿಕೊಂಡರು. ಇವೆಲ್ಲದರ ಮಧ್ಯ ಲೌಕಿಕ ಬದುಕಿನ ಬಗ್ಗೆ ಆಸಕ್ತಿಯೇ ತೋರಲಿಲ್ಲ. ಆದ್ದರಿಂದ ಅವರ ಬದುಕಿನ ಸ್ಥಾಯಿ “ವಿರಕ್ತ”ವಾಯಿತು ಕಾಯಕ ದಾಸೋಹ ಅವರ ಜೀವನವಾದರೆ ಲೋಕಸೇವೆ ಜೀವನದ ಗುರಿಯಾಯಿತು. ಹೀಗೆ ಶಿವಯೋಗ ಮಂದಿರ ಬದುಕಿನ ಬೆಳಕಾಯಿತು. ಗುರು ಲಿಂಗ ಜಂಗಮ ತತ್ವಗಳನ್ನು ನಾಡಿನ ತುಂಬೆಲ್ಲಾ ಪ್ರಸಾರ ಮಾಡಿ 22 ಏಪ್ರಿಲ್ 1999 ರಂದು ತಮ್ಮ ನೂರಾ ಒಂಬತ್ತನೆಯ ವಯಸ್ಸಿನಲ್ಲಿ ಬಯಲಲ್ಲಿ ಬಯಲಾದರು __________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ

“ಸಾವಿಲ್ಲದ ಶರಣರು” ಮಾಲಿಕೆ, ಕಲ್ಯಾಣದ ಮೇರು ಲಿಂಗಸಾಧಕ ಭಾಲ್ಕಿ  ಡಾ ಶ್ರೀ ಚೆನ್ನಬಸವ ಸ್ವಾಮೀಜಿ-ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಪುಣೆ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ,ವ್ಯಾಕರಣದ ಶ್ರೀ ಬೇಗೂರು ಮಲ್ಲಪ್ಪ- ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಸಾವಿಲ್ಲದ ಶರಣರು ಮಾಲಿಕೆ,ವ್ಯಾಕರಣದ ಶ್ರೀ ಬೇಗೂರು ಮಲ್ಲಪ್ಪ- ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ
ಹಿಂದುಳಿದ ಚಾಮರಾಜನಗರ ಜಿಲ್ಲೆಯಿಂದ ಬಂದು ಮೈಸೂರು ಮಹಾರಾಜರ ಪ್ರೀತಿಗೆ ಪಾತ್ರರಾಗಿ
ಶ್ರೇಷ್ಠ ವ್ಯಾಕರಣ ತಜ್ಞರೆನಿಸಿಕೊಂಡ ಬೇಗೂರ ಮಲ್ಲಪ್ಪನವರು ಲಿಂಗಾಯತ ಧರ್ಮದ ಸಾವಿಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ,ವ್ಯಾಕರಣದ ಶ್ರೀ ಬೇಗೂರು ಮಲ್ಲಪ್ಪ- ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆಯಲ್ಲಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಯೋಗ ಸಾಧಕ ಹಡಪದ ರೇಚಣ್ಣ

ಅಂಕಣ ಸಂಗಾತಿ

ಸಾವಿಲ್ಲದ ಶರಣರು

ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಯೋಗ ಸಾಧಕ ಹಡಪದ ರೇಚಣ್ಣ

ಸಾವಿಲ್ಲದ ಶರಣರು ಮಾಲಿಕೆಯಲ್ಲಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಯೋಗ ಸಾಧಕ ಹಡಪದ ರೇಚಣ್ಣ Read Post »

You cannot copy content of this page

Scroll to Top