ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ

ಗಝಲ್ ಲೋಕ

ಗಝಲ್ ಲೋಕ’ ಬಸವರಾಜ್ ಕಾಸೆಯವರ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಎರಡನೆ ಅದ್ಯಾಯ ಗಜಲ್ ನಡೆದು ಬಂದ ಹಾದಿ ಯಾವುದೇ ಒಂದು ಸಾಹಿತ್ಯದ ಪ್ರಕಾರವೇ ಆಗಲಿ ಅದರ ಗುಣ ಲಕ್ಷಣಗಳನ್ನು ಅರಿಯುವ ಮೊದಲು ಅದು ನಡೆದು ಬಂದ ಹಾದಿ, ಅರ್ಥ ಮತ್ತು ಇತಿಹಾಸವನ್ನು ತಿಳಿದುಕೊಳ್ಳಬೇಕಿರುವುದು ಅತಿ ಅಗತ್ಯವಾದ ಮೊದಲ ಸಂಗತಿಯಾಗಿದೆ. ಗಜಲ್ ಪದದ ಅರ್ಥ ಮೂಲತಃ ಅರಬ್ಬೀ ಶಬ್ದವಾದ ಗಜಲ್, ಆ ಭಾಷೆಯಲ್ಲಿ ಗಜಲ್ ಎಂದರೆ “ನಲ್ಲೆಯೊಂದಿಗಿನ ಸಂವಾದ”. ಆ ಸಂವಾದ ಯಾವುದೇ ತೆರನಾದರೂ ಆಗಿರಬಹುದು. ವಿಶೇಷವೆಂದರೆ ಆಗ ಗಂಡಸರು ಮಾತ್ರ ಗಜಲ್ ಬರೆಯಬೇಕಿತ್ತು. ಆದರೆ ಕಾಲಕ್ರಮೇಣ ಅಲ್ಲಲ್ಲಿ ಮಹಿಳೆಯರು ಬರೆದರೂ ಸಹ ಅದು ಗಂಡಿನ ಭಾವನೆ ಹೊಮ್ಮಿಸುವ ಕಾವ್ಯ ಧ್ವನಿ ಆಗಿರುತ್ತಿತ್ತು ಅದಕ್ಕೆ ಏನೋ ಬರೆಯುವನು ನಲ್ಲನೇ ಆದ್ದರಿಂದ ಇಲ್ಲಿ ನಲ್ಲ ಎನ್ನುವ ಪದ ಯಾವಾಗಲೂ ಮರೆಯಾಗಿ ಇರುತ್ತಿತ್ತು. ಇಲ್ಲಿ ಅತಿ ಹೆಚ್ಚು ಮಹತ್ವ ಪಡೆಯುವುದು ಅವನ ಅನುರಾಗ, ಮೋಹ, ಶೃಂಗಾರ ಪ್ರೇಮ, ವಿರಹದಂತಹ ಸಂಗತಿಗಳು.ಆದ ಕಾರಣ ಇವು ಮೋಹದ ಪದ್ಯಗಳು ಹೌದು, ಪ್ರೇಮಗೀತೆಯೂ ಹೌದು ಜೊತೆಜೊತೆಗೆ ವಿರಹದ ಹಾಡುಗಳು ಸಹ ಹೌದು ಅದೇ ಗಜಲ್ ಎಂದರೆ ಪಾರ್ಸಿ ಭಾಷೆಯಲ್ಲಿ ಜಿಂಕೆ ಎಂದರ್ಥ. ತನ್ನದೇ ಆದ ಜಗತ್ತನ್ನು ಹೊಂದಿರುವ ಮನ ಬಂದಂತೆ ವಿಹರಿಸುವ ಯಾವುದೇ ಅಡೆತಡೆಗಳಿಲ್ಲದೆ ಎಲ್ಲೆಂದರಲ್ಲಿ ನೆಗೆಯುವ ಜಿಂಕೆಯ ಮನಸ್ಸು ಮತ್ತು ಅದು ಕೊನೆಯ ಕ್ಷಣದಲ್ಲಿ ಸಹ ಹೊರಡಿಸುವ ವಿವಿಧ ಸ್ವರಗಳ ಸಾರವೇ ಇಲ್ಲಿ ಗಜಲ್. ಇಲ್ಲಿ ಗಜಲನ್ನು ಜಿಂಕೆಗೆ ಸಮೀಕರಿಸಿ ಹಲವಾರು ವ್ಯಾಖ್ಯಾನಗಳನ್ನು ನೀಡಲಾಗುತ್ತದೆ. ಗಜಲ್ ಎಂದರೆ ಪಾರ್ಸಿ ಭಾಷೆಯ ಇನ್ನೊಂದು ಅರ್ಥದಲ್ಲಿ ಕಸ ಗುಡಿಸುವ, ಪಾತ್ರೆ ಉಜ್ಜುವವರ ಹಾಡು! ನಮ್ಮ ಜನಪದರು ಕೆಲಸ ಮಾಡುವಾಗ ಗೀತೆ ಕಟ್ಟಿ ಹಾಡುತ್ತಿದಂತೆ ಪಾರ್ಸಿಯಲ್ಲಿ ಮನೆ ಕೆಲಸದವರು ಶ್ರೀಮಂತರ, ರಾಜರ ಮನೆಯಲ್ಲಿ ಕೆಲಸ ಮಾಡುವಾಗ ಹಾಡುತ್ತಿದ್ದ ಸಾಮಾನ್ಯ ಹಾಡುಗಳೇ ಅಲ್ಲಿಯ ಅರಸೊತ್ತಿಗೆ ತಲುಪಿ ಬೇರೊಂದು ಆಕಾರ ಪಡೆದವು ಎನ್ನುವುದು ಇದರ ಹಿಂದಿರುವ ವಿಷಯ.. ಗಜಲ್ ಬೆಳೆದ ರೀತಿ ಅರಬ್ಬೀ ಭಾಷೆಯಲ್ಲಿ ತನ್ನ ಮೂಲವನ್ನು ಹೊಂದಿರುವ ಗಜಲನ ಉಗಮವು ಆಸ್ತಾನದ ಸಭಿಕರು ತಮ್ಮ ರಾಜನನ್ನು, ಯುದ್ದೋತ್ಸಾಹಿಗಳನ್ನು, ದಾರ್ಶನಿಕತೆಯನ್ನು ತುಂಬಿ ಹೊಗಳುತ್ತಿದ್ದ ನವರಸಗಳಿಂದಲೇ ಶೃಂಗಾರಗೊಂಡಿದ ಕಸೀದ್ ಎನ್ನುವ ಕಾವ್ಯ ಪ್ರಕಾರದಿಂದ ವಿಕಾಸಗೊಂಡಿತು ಎಂದು ತಿಳಿದು ಬರುತ್ತದೆ. ಕಸೀದನ ತಷಬೀಬ್ ಅಲ್ಲಿ ಇರುವಂತೆ ಪೀಠಿಕೆ, ದ್ವಿಪದಿ, ಶೇರ್, ಮಕ್ತಾ, ಮತ್ಲಾ, ಕಾಫಿಯಾ, ರಧೀಪ್ ಮೊದಲಾದ ಕಾವ್ಯ ಲಕ್ಷಣಗಳನ್ನು ಸಹ ಗಜಲ್ ಒಳಗೊಂಡು ಬೆಳವಣಿಗೆ ಹೊಂದಿದೆ. ಆದರೆ ತದ ನಂತರದ ಯುದ್ಧ ಮತ್ತು ಅರಬ್ಬರ ಗಂಭೀರ ನಡೆಯ ಕಾರಣ ಅರಬ್ಬೀ ಭಾಷೆಯಲ್ಲಿ ಗಜಲ್ ಸಂಕುಚಿತಗೊಂಡರೂ ಅದೇ ಕಾಲಘಟ್ಟದಲ್ಲಿ ಪಾರ್ಸಿ ಭಾಷೆಯಲ್ಲಿ ಮತ್ತಷ್ಟು ಬೆಳೆದು ಬಂತು. ರಾಗ ತಾಳ ಲಯಬದ್ಧವಾಗಿ ಹಾಡುತ್ತಿದ್ದ ಚಾಮ್ ಎನ್ನುವ ಮತ್ತೊಂದು ಕಾವ್ಯ ಪ್ರಕಾರ ಆಗ ಇರಾನ್ ರಾಷ್ಟ್ರದಲ್ಲಿ ಅತ್ಯಂತ ಪ್ರಚಲಿತದಲ್ಲಿ ಇತ್ತು. ಸರಳವಾಗಿ ಸಹಜವಾಗಿ ಗಂಡು ಹೆಣ್ಣು ಎಂಬ ಭೇದ ಭಾವವಿಲ್ಲದೆ ಅಲ್ಲಿನ ಗ್ರಾಮೀಣ ಜನರು ಕಟ್ಟಿ ಹಾಡುತ್ತಿದ್ದ ಈ ಗೀತೆಗಳು ಬಹು ಜನಪ್ರಿಯಗೊಂಡಿದವು. ನಿಜವಾದ ಗಜಲನ ಆರಂಭ ಆಗ ಇರಾನ್ ಇರಾಕ್ ಮೊದಲಾದ ಅರಬ್ ರಾಷ್ಟ್ರಗಳೊಂದಿಗೆ ವ್ಯಾಪಾರ ಸಂಪರ್ಕವನ್ನು ಹೊಂದಿದ ಭಾರತ ಕೊಡುವ, ತಗೊಳ್ಳುವ ಪದ್ಧತಿಯಿಂದಾಗಿ ವರ್ತಕರು ಗ್ರಾಹಕರ ಸಂಬಂಧದ ಮೂಲಕ ಉರ್ದು ಭಾಷೆಗೆ ಸಹ ಗಜಲ್ ತನ್ನ ಪ್ರಭಾವವನ್ನು ಚಾಚಿಕೊಂಡಿತು. ವಿಶಿಷ್ಟ, ವಿಭಿನ್ನ ಅಂಶಗಳಿಂದಾಗಿ ಭಾರತೀಯರ ಮನಸೂರೆಗೊಂಡ ಗಜಲ್ ಉರ್ದು ಅಲ್ಲಿ ಬೆಳೆದು ಬಂದ ರೀತಿಯೇ ಅಮೋಘ. ಹಿಂದೆಂದೂ ಕಂಡಿರದ ಗಜಲ್ ತನ್ನ ನಿಜವಾದ ಆರಂಭವನ್ನು ಉರ್ದು ಭಾಷೆಯಲ್ಲಿ ಪಡೆದ ಪರಿಣಾಮ ಅದರ ಖದರೇ ಬದಲಾಗಿ ಹೋಯಿತು. ಹಂತಹಂತವಾಗಿ ಕಡಿಮೆ ಸಮಯದಲ್ಲಿಯೇ ಗಜಲ್ ತನ್ನಲ್ಲಿ ಭಾರತೀಯ ನಡೆ, ಸಂಸ್ಕೃತಿ, ರೀತಿ ನೀತಿ ಮೊದಲಾದವುಗಳನ್ನು ತುಂಬಿಕೊಂಡಿತು. ಇದಕ್ಕೆ ಜೊತೆಯಾದ ಉರ್ದು ಭಾಷೆ ತನ್ನ ಮೃದು, ಮಧುರತೆಯಿಂದಾಗಿ ಗಜಲ್ ಅತ್ಯುನ್ನತ ಮಟ್ಟ ತಲುಪಲು ಪೂರಕ ವಾತಾವರಣ ನಿರ್ಮಿಸಿತು. ತದ ನಂತರ ಹಿಂತಿರುಗಿ ನೋಡದ ಗಜಲ್ ಶರವೇಗವನ್ನು ಪಡೆದುಕೊಂಡು ವಿಶ್ವದ ವಿವಿಧ ದೇಶಗಳಿಗೆ ತನ್ನ ಜನಪ್ರಿಯವನ್ನು ಪಸರಿಸಿತು. ಇದರಿಂದ ಆಕರ್ಷಿತರಾದ ಜನ ತಮ್ಮ ದೇಶಿಯ ಭಾಷೆಗಳಲ್ಲಿಯೇ ಗಜಲ್ ಕೃಷಿ ನಡೆಸತೊಡಗಿದರು. ಇಂಗ್ಲಿಷ್, ಪ್ರೆಂಚ್, ಸ್ಪಾನಿಷ್, ಮೊದಲಾದ ಪಾಶ್ಚಿಮಾತ್ಯ ಭಾಷೆಗಳಲ್ಲಿಯೂ ಸಹ ರಚನೆಗೊಂಡ ಗಜಲ್ ಕನ್ನಡ ಸೇರಿದಂತೆ ಮರಾಠಿ, ಹಿಂದಿ, ಭೋಜಪುರಿ, ತೆಲುಗು ಎನ್ನದೇ ಸಾಕಷ್ಟು ಭಾಷೆಗಳಲ್ಲಿ ಹೊಸ ಕಾವ್ಯ ಪ್ರಕಾರವಾಗಿ ಗಜಲ್ ಮೂಡಿ ಬಂದು ಮತ್ತಷ್ಟು ಯಶಸ್ವಿಯಾಗಿ ದಾಪುಗಾಲಿಟ್ಟಿತು. ********** ಬಸವರಾಜ ಕಾಸೆ

ಗಝಲ್ ಲೋಕ Read Post »

ಅಂಕಣ ಸಂಗಾತಿ

ಗಝಲ್ ಲೋಕ

‘ಗಝಲ್ ಲೋಕ’ ಬಸವರಾಜ್ ಕಾಸೆಯವರ ಹೊಸ ಅಂಕಣ. ಗಝಲ್ ಪ್ರಕಾರದ ಬಗ್ಗೆ ಸಂಪೂರ್ಣ ಮಾಹಿತಿನೀಡಬಲ್ಲ ಮತ್ತು ಹಲವರಿಗೆ ತಿಳಿದಿರದ ಗಝಲ್ ರಚನೆಯ ಹಿಂದಿರುವ ನಿಯಮಗಳನ್ನುತಿಳಿಸುವಪ್ರಯತ್ನ ಇಲ್ಲಿದೆ ಮೊದಲ ಅದ್ಯಾಯ ಒಲವಿನ ಅಧಿವೇಶನವೇ ಈ ಗಜಲ್ ಗಜಲ್ ಎನ್ನುವ ಪದ ಕೇಳಿದರೆ ಸಾಕು ಇದರಲ್ಲಿ ಏನೋ ಇದೆ ಎಂದು ತನ್ನಷ್ಟಕ್ಕೇ ತಾ ಹಿಡಿದಿಟ್ಟು ಕಾಡುವ ಒಂದು ಭಾವ ಕಣ್ಣು ಮುಂದೆ ಬರುತ್ತದೆ. ಹೌದು ಗಜಲ್ ಎಂದರೆ ಹಾಗೆ ಮನಸ್ಸಿಗೆ ಮುಟ್ಟಿ ಬಿಟ್ಟ ನಂತರವೂ ಸಹ ಆವರಿಸುವ ಒಂದು ಬೆಚ್ಚನೆ ಅನುಭೂತಿ. ಅದಕ್ಕೆ ಅಡೆತಡೆಗಳಿಲ್ಲದೆ ಸದಾ ಹರಿಯುವುದು ಮಾತ್ರವಲ್ಲದೆ ಪುಟಿಯುವುದು ಗೊತ್ತು. ಬಿಡದೇ ಸುರಿಯುವ ಜಡಿ ಮಳೆಯಂತೆ ಗಜಲ್, ಚಳಿಗಾಲದ ಒಲವಿನ ಅಧಿವೇಶನಕ್ಕಾಗಿ ಕಾಯುತ್ತಿರುವ ಪ್ರೇಮಿಗಳ ನಾಡಿ ಮಿಡಿತ ಈ ಗಜಲ್. ಹೊತ್ತಲ್ಲದ ಹೊತ್ತಲ್ಲಿ ನೆನಪುಗಳ ಹೊತ್ತು ತರುವ ಪರಿಮಳವೇ ಗಜಲ್. ಹೌದು ಗಜಲ್ ಎಂದರೆ ಹಾಗೆ ಹೀಗೆ ಮತ್ತು ಅದಕ್ಕೆ ಇರುವ ಶಕ್ತಿಯೇ ಅಷ್ಟು ಅನನ್ಯ ಮತ್ತು ಅಪೂರ್ವ. ಅಂತಹ ಅಮೋಘ ಕಾವ್ಯ ಪ್ರಕಾರವಾದ ಗಜಲ್ ಕುರಿತ ಅಂಕಣಕ್ಕೆ ತಮಗೆ ಇದೋ ಸ್ವಾಗತ. ಗಜಲ್ ಬಹುತೇಕವಾಗಿ ಎಲ್ಲರೂ ಒಮ್ಮೆ ಆದರೂ ಓದಿಯೇ ಇರುತ್ತೀರಿ ಇಲ್ಲ ಅಂದ್ರೆ ಆ ಬಗ್ಗೆ ಕೇಳಿಯೇ ಇರುತ್ತೀರಿ. ಈ ಮೊದಲು ತುಂಬಾ ಅಪರೂಪವಾಗಿದ್ದ ಗಜಲ್ ಇತ್ತಿಚೆಗೆ ಕನ್ನಡದಲ್ಲೂ ಸಾಕಷ್ಟು ಸದ್ದು ಮಾಡುತ್ತಿದೆ. ಆ ಮೂಲಕ ನಮ್ಮ ವಿಶಾಲ ಕನ್ನಡ ಸಾಹಿತ್ಯ ಗಜಲಗಳಿಗೂ ತೆರೆದುಕೊಂಡಿದ್ದೂ ಹೊಸ ಹೊಸ ಬರಹಗಾರರು ಇದರಲ್ಲಿ ತೊಡಗಿಸಿಕೊಂಡಿರುವುದು ಆಸಕ್ತಿಕರ ವಿಷಯ. ಈಗಾಗಲೇ ಕೆಲವು ಬೆರಳಣಿಕೆ ಸಂಖ್ಯೆಯ ಪರಿಣತಿ ಹೊಂದಿದ ಉತ್ತಮ ಗುಣಮಟ್ಟದ ಖ್ಯಾತ ಗಜಲಕಾರರು ಕನ್ನಡದಲ್ಲಿ ಇದಾರೆ. ಅಂತೆಯೇ ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಗಜಲಕಾರರು ಹೊರ ಹೊಮ್ಮುತ್ತಿರುವುದು ಸಹ ಖುಷಿಯ ವಿಚಾರ ಗಜಲ್ ಏನನ್ನು ನಿರೀಕ್ಷಿಸುವುದು ಯಾವುದೇ ಸಾಹಿತ್ಯ ಪ್ರಕಾರವಾದರೂ ಸರಿ ನಾವು ಬರೆಯಬೇಕು ಎಂದರೆ ಅದಕ್ಕೆ ಆ ಬಗ್ಗೆ ತಿಳುವಳಿಕೆ, ಆಳವಾದ ಜ್ಞಾನ, ಸತತ ಅಧ್ಯಯನ, ಉತ್ತಮ ಓದು ಮೊದಲಾದವು ಬಹು ಅಗತ್ಯ. ಅದು ಇಲ್ಲವಾದರೆ ಪೊಳ್ಳು ಜೊಳ್ಳುಗಳಾಗಿ ಬೆಲೆ ಕಳೆದುಕೊಳ್ಳುತ್ತವೆ. ಈ ದೃಷ್ಟಿಯಿಂದ ನೋಡಿದಾಗ ಈ ಡಿಜಿಟಲ್ ಯುಗದಲ್ಲಿ ಫೇಸ್ಬುಕ್, ಟ್ವಿಟ್ಟರ್, ಇನಸ್ಟಾಗ್ರಾಮ್ ಮೊದಲಾದ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ದಿನಕ್ಕೆ ಒಬ್ಬರು ಬರಹಗಾರರು ಹುಟ್ಟುತ್ತಿದ್ದಾರೆ. ಹಾಗೆ ಅದೊಂದು ಒಳ್ಳೆಯ ಬರಹವೇ ಎಂದು ನೋಡಿದರೆ ಖಂಡಿತ ಅದರಲ್ಲಿ ಏನು ಇರುವುದಿಲ್ಲ. ಆ ಬಗ್ಗೆ ವಿಚಾರಿಸಿದರೆ ಅವರಿಗೆ ಆ ವಿಷಯದ ಕುರಿತು ಕನಿಷ್ಠ ಜ್ಞಾನದ ಅರಿವು ಇರುವುದಿಲ್ಲ. ಬರಿದಿದ್ದೂ ಎಲ್ಲಾ ಬರಹಗಳು ಆಗಲ್ಲ ಅಂತೆಯೇ ಕವಿಗಳು ಸಹ ಆಗುವುದಿಲ್ಲ. ಹಾಗೆಯೇ ಗಜಲ್ ಕೂಡ ಸಾಕಷ್ಟು ಅರ್ಹತೆಗಳನ್ನು, ಕೌಶಲಗಳನ್ನು ನಿರೀಕ್ಷಿಸುತ್ತದೆ. ಇತರ ಸಾಹಿತ್ಯ ಪ್ರಕಾರಗಳಿಗಿಂತ ಗಜಲ್ ಬರಹಗಳಿಗೆ ಹೆಚ್ಚಿನ ಪೂರ್ವ ಸಿದ್ದತೆಗಳೇ ಬೇಕು ಯಾಕೆಂದರೆ ಗಜಲ್ ಅಷ್ಟು ಸುಲಭವಾಗಿ ಒಗ್ಗುವಂತದಲ್ಲ, ಇಲ್ಲಿ ಪ್ರತಿ ಬರಹಗಳು ಧ್ಯಾನದಂತೆ ಜೀವಿಸಬೇಕು. ಗಜಲ್ ಛಾಯೆ ಕನ್ನಡದ ಪ್ರಸಿದ್ಧ ಹಿರಿಯ ಕಿರಿಯ ದಿನಪತ್ರಿಕೆಗಳು, ವಾರಪತ್ರಿಕೆಗಳು, ಮಾಸಪತ್ರಿಕೆಗಳು, ಅಂತರ್ಜಾಲ ಪತ್ರಿಕೆಗಳು ಮೊದಲಾದವುಗಳಲ್ಲಿ ಗಜಲ್ ಎಂದು ಪ್ರಕಟವಾಗುವ ಎಷ್ಟೋ ಬರಹಗಳು ಗಜಲಗಳೇ ಆಗಿರುವುದಿಲ್ಲ. ಗಜಲ್ ಅಲ್ಲದ ಇಂತಹ ಗಜಲಗಳನ್ನು ಗಜಲ್ ಎಂದು ಪ್ರಕಟಿಸುವುದಕ್ಕೆ ಇರುವ ಮಾನದಂಡಗಳು ಏನು ಎಂದು ಇತ್ತೀಚೆಗೆ ಸಾಕಷ್ಟು ಗಜಲಕಾರರು ಆಕ್ಷೇಪಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೆಲವರು ಪತ್ರಿಕೆಗಳಿಗೆ ಪತ್ರ ಬರೆದು ಕರೆ ಮಾಡಿ ವಿವರಣೆ ಕೇಳಿಯೂ ಇದ್ದಾರೆ. ಹಾಗೆ ನೋಡಿದಾಗ ಗಜಲ್ ಬರಹಗಳನ್ನು ಪ್ರಕಟಿಸಲು ಅಲ್ಲಿ ಪ್ರತ್ಯೇಕ ಗಜಲ್ ತಜ್ಞರು ಇರುವುದಿಲ್ಲ ಮತ್ತು ಓದಿದಾಗ ಸ್ವಲ್ಪ ಚೆನ್ನಾಗಿ ಇದೆ ಎನಿಸಿದರೆ ಪ್ರಕಟಿಸಿ ಬಿಡುವುದು ಅವರ ರೀತಿ ನೀತಿಗಳು. ಹೀಗೆಂದು ಪತ್ರಿಕೆಯೊಂದರ ಸಂಪಾದಕರೇ ತಿಳಿಸಿದಾಗ ಒಂದಿಷ್ಟು ಬೇಸರ ಆಗಿದ್ದೂ “ಓದುಗರು ಏನೋ ಚೆನ್ನಾಗಿ ಇದ್ದರೆ ಓದಿ ಖುಷಿ ಪಡಬಹುದು. ಆದರೆ ಅದನ್ನು ಓದುವ ಇತರ ಬರಹಗಾರರು ಆಕರ್ಷಣೆಗೆ ಒಳಗಾಗಿ ಅಲ್ಲಿನ ಬರಹವನ್ನೇ ಗಜಲ್ ಎಂದು ಅನುಸರಿಸಿದರೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಮತ್ತು ಒಂದು ಒಳ್ಳೆಯ ಪ್ರಕಾರವನ್ನು ಬೇಕಾಬಿಟ್ಟಿ ಹರಿಯ ಬಿಟ್ಟು ಹಾಳು ಮಾಡಿದಂತೆ” ಎಂದಾಗ ಈ ಬಗ್ಗೆ ಗಮನಿಸಿ ಇನ್ನೂ ಮುಂದೆ ಹಾಗಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹೌದು ಈಗಾಗಲೇ ಹಲವಾರು ಬರಹಗಾರರು ಗಜಲ್ ಅಲ್ಲದ ಆದರೆ ಗಜಲ ಛಾಯೆ ಹೊಂದಿದ ಬರಹಗಳನ್ನು ಅನುಸರಿಸಿ ಗಜಲ್ ಹೆಸರಿನಲ್ಲಿ ಏನೇನೋ ಬರೆಯುತ್ತಿದ್ದಾರೆ. ಆದರೆ ಮೌಲ್ಯ ಕಳೆದುಕೊಳ್ಳುವ ಅಂತಹ ಬರಹಗಳು ಇತರ ಉದಯೋನ್ಮುಖ ಬರಹಗಾರರನ್ನು ಗೊಂದಲಕ್ಕೆ ಒಳಗಾಗಿಸುತ್ತವೆ. ಆದರೆ ಗಜಲ್ ಅಂತಹ ಬರಹಗಳನ್ನು ಕಾಲಕ್ರಮೇಣ ಮೂಲೆ ಗುಂಪಾಗಿಸುತ್ತದೆ ಗಜಲ್ ಬರೆಯಲು ಏನು ಬೇಕು ಕವನ ಆಗಬಹುದು, ಚುಟುಕು ಆಗಬಹುದು, ಭಾವಗೀತೆ ಆಗಿರಬಹುದು ಅಥವಾ ನೀಳ್ಗವಿತೆಯೇ ಆಗಿರಬಹುದು ಯಾವುದೇ ಕಾವ್ಯ ಪ್ರಕಾರವನ್ನು ನೋಡಿ ಪ್ರತಿಯೊಂದು ಸಹ ತನ್ನದೇ ಆದ ಚೌಕಟ್ಟು, ಗುಣ ಲಕ್ಷಣಗಳು ಮೊದಲಾದವುಗಳನ್ನು ಹೊಂದಿವೆ. ಇದನ್ನು ಗಜಲಗಳಿಗೆ ಹೋಲಿಸಿದರೆ ಇದರ ಚೌಕಟ್ಟು ಅತ್ಯಂತ ಕಟ್ಟುನಿಟ್ಟಾಗಿದ್ದೂ ಗುಣ ಲಕ್ಷಣಗಳೊಂದಿಗೆ ನಿಯಮಗಳನ್ನು ಸಹ ಹೊಂದಿದೆ. ಪ್ರತಿ ಸಾಲು ಹೀಗೆ ಇರಬೇಕು ಹಾಗೆ ಇರಬೇಕು ಎಂದು ಬಯಸುವ ಗಜಲ್, ಬರೆಯಲು ಅದರ ಬಗೆಗಿನ ಅರಿವು ಮೊದಲ ಮತ್ತು ಕನಿಷ್ಠ ಅವಶ್ಯಕತೆ. ಜೊತೆಗೆ ಗಜಲ್ ಇತಿಹಾಸ, ಬೆಳೆದು ಬಂದ ರೀತಿ, ತನ್ನೊಳಗೆ ಹಲವು ಪ್ರಕಾರಗಳನ್ನು ಅಡಗಿಸಿಗೊಂಡಿರುವ ನೀತಿ ಹೀಗೆ ಗಜಲ್ ಬಗ್ಗೆ ಉತ್ತಮ ಬರವಣಿಗೆಗೆ ಏನು ಬೇಕು, ಏನು ಬೇಕು, ಹೇಗೆ ಇರಬೇಕು ಎನ್ನುವ ಮೊದಲಾದ ಅಂಶಗಳನ್ನು ನಿಮ್ಮ ಮುಂದೆ ತೆರೆದಿಡುವುದು ಗಜಲ್ ಲೋಕ ಎನ್ನುವ ಈ ಅಂಕಣದ ಹೊಣೆಯಾಗಿರಲಿದೆ. ಇನ್ನೂ ಮುಂದೆ ಇದರ ಬಗ್ಗೆ ಪ್ರತಿ ಸಂಚಿಕೆಯಲ್ಲಿ ಮಾಹಿತಿ ನೀಡುತ್ತಾ ಸಾಗಲಾಗುವುದು. *********** ಬಸವರಾಜ ಕಾಸೆ

ಗಝಲ್ ಲೋಕ Read Post »

ಅಂಕಣ ಸಂಗಾತಿ

ಸ್ವಾತ್ಮಗತ

ನಾಳೆ ಬಪ್ಪುದು ಕೆ.ಶಿವುಲಕ್ಕಣ್ಣವರ ಹಲವಾರು ಪಲ್ಲಟಗಳನ್ನು ಹೊಂದಿರುವ ‘ನಾಳೆ ಬಪ್ಪುದು’ ಎಂಬ ಹನುಮಂತ ಹಾಲಿಗೇರಿಯವರ ನಾಟಕವೂ..! ಸಾಹಿತಿ ಹನುಮಂತ ಹಾಲಿಗೇರಿಯವರು ತಮ್ಮ ‘ಏಪ್ರಿಲ್ ಫೂಲ್’ ಕಥೆಗಳ‌ ಸಂಕಲನದ ‘ಏಪ್ರಿಲ್ ಪೂಲ್’ ಕಥೆಯನ್ನು ಆಧರಿಸಿ ‘ನಾಳೆ ಬಪ್ಪುದು’ ಎಂಬ ನಾಟಕವನ್ನು ಬರೆದಿದ್ದಾರೆ… ಈ ನಾಟಕವನ್ನು ಓದುತ್ತಿದ್ದಂತೆ, ಇದು ಮುಖ್ಯವಾಗಿ ನಾಟಕಕಾರ ಹನುಮಂತ ಹಾಲಿಗೇರಿಯವರ ಫ್ಯಾಂಟಸಿ ನಾಟಕದಂತೆ ನನಗೆ‌ ಭಾಸಾವಾಯಿತು… ಯಾರಿಗೆ ಗೊತ್ತು ಇದು ಮುಂದೆ ವಾಸ್ತವವಾಗಲೂಬಹುದು. ಇರಲಿ. ಮುಂದೆ ಈ ನಾಟಕದ ಹಂದರ ನೋಡೋಣ… ಇಲ್ಲಿ ಮುಖ್ಯವಾಗಿ ನನಗೆ ಮೈತ್ರಿರಾವ್, ಈಕೆಯ ಗಂಡ ರಾಮು, ಮೈತ್ರಿರಾವ್ ಮಗಳು ಭೂಮಿರಾವ್, ‌ಮೈತ್ರಿರಾವ್ ಮಗ ದೀಪು ಮತ್ತು ಮೈತ್ರಿರಾವ್ ಸೊಸೆಯಾಗುವವಳು ಶರ್ಮಿಳಾರಾವ್ ಗಳ ಪಾತ್ರ ಮುಖ್ಯವಾಗಿ ಕಂಡವು. ಈ ಪಾತ್ರಗಳೇ ಈ ನಾಟಕದಲ್ಲಿ ಮುಖ್ಯವಾದವು ಮತ್ತು ಇವುಗಳ ಜೊತೆಗೆ ಅನೇಕಾನೇಕ ಪಾತ್ರಗಳೂ ಇಲ್ಲಿ ಬರುತ್ತವೆ… ಇಲ್ಲಿ ಬರುತ್ತಿರುವ ಪಾತ್ರಗಳು ಒಂದು ಕಾಲದಲ್ಲಿ ಅಂದರೆ ಪ್ರಸ್ತುತ ಕಾಲದಲ್ಲೂ ಪುರುಷ ಪ್ರಧಾನ ಸಮಾಜದಲ್ಲಿ ಮುಖ್ಯವಾಗಿ ಕನಸ್ಸು ಕಾಣುತ್ತಿರುವುದು ಹನುಮಂತ ಹಾಲಿಗೇರಿಯವರ ಸ್ತ್ರೀ ಸಮಾನಾಂತರ ಸಮಾಜವನ್ನು. ಪುರುಷರಿಗೆ ಸ್ತ್ರೀಯರು ಸಮಾನವಾಗಿ ಎಲ್ಲಾ ವಿಧದಲ್ಲೂ ಕಾಣಬೇಕೆನ್ನುವ ನಿಟ್ಟಿನಲ್ಲಿ ಹನುಮಂತ ಹಾಲಿಗೇರಿಯವರು ಈ ‘ನಾಳೆ ಬಪ್ಪುದು’ ಎಂಬ ನಾಟಕ ಹೆಣೆದಿದ್ದಾರೆ… ಇಲ್ಲಿ ಬರುವ ಪಾತ್ರಗಳು ಮುಖ್ಯವಾಗಿ ಪ್ರಸ್ತುತ ಕಾಲಘಟ್ಟದಲ್ಲಿ ಪುರುಷರು ಅದು ಹೇಗೆ ಸ್ತ್ರೀಯನ್ನು ಅಸಮವಾಗಿ ಕಾಣುತ್ತಾರೋ ಹಾಗೆಯೇ ನಾಳೆಯ ದಿನಗಳಲ್ಲಿ ಸ್ತ್ರೀಯರು ಪುರುಷರನ್ನು ಅಸಮವಾಗಿ ಕಾಣುವ ದೃಶ್ಯಗಳನ್ನು ನಾವು ಅಂದರೆ ನಾಟಕಕಾರ ಕಾಣುವ ಸಮಾಜವನ್ನೂ ಅಲ್ಲಗಳೆಯಲಾಗದು. ಅಂದರೆ ಇಲ್ಲಿ ಪುರುಷ ಮುಂದೊಂದು ದಿನ ಸ್ತ್ರೀಯೂ ಕಾಲಚಕ್ರದಲ್ಲಿ ಬದಲಾಗಿ ಈ ಪುರುಷರನ್ನು ಹಿಮ್ಮೆಟ್ಟಿಸಿ ಮುನ್ನಡೆಯಬಹದು‌ ಎಂಬ ಸಂದೇಶವನ್ನು ಪರೋಕ್ಷವಾಗಿ ಕೊಡುತ್ತಾರೆ… ಇಲ್ಲಿ ಮುಂದೊಂದು ಕಾಲದಲ್ಲಿ ಬರುವ ಮತ್ತೊಂದು ಮುಖ್ಯ ಪಾತ್ರವಾದ ಬಾಪಣ್ಣ ಎಂಬ ಪುರುಷ ರಕ್ಷಣಾ ವೇದಿಕೆ ಅಧ್ಯಕ್ಷನದು. ಹೆಂಡತಿ ಮತ್ತು ಅತ್ತೆಯಿಂದ ಸಾಕಷ್ಟು ಶೋಷಣೆಗೆ ಒಳಗಾಗಿ ಮನೆಯಿಂದ ಹೊರಗೆ ದಬ್ಬಲ್ಪಟ್ಟ ನಂತರ ಅವರು ಸದರಿ ಸಂಘಟನೆ ಕಟ್ಟಿಕೊಂಡು ಪುರುಷನೇ ಈ ಪ್ರಕೃತಿಗೆ ಪ್ರಧಾನ ಎಂದು ವೇದ ಕಾಲದಿಂದಲೂ ಹೇಳಿಕೊಂಡು ಬರಲಾಗುತ್ತಿದೆ. ಆದರೆ ಕಾಲ ಬದಲಾದಂತೆ ಮಹಿಳೆಯರೇ ಅಧಿಕಾರ ಚುಕ್ಕಾಣಿ ಹಿಡಿದುಕೊಂಡು ಅಮಾಯಕ ಪುರುಷರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸಂವಿಧಾನವನ್ನು ತಮಗೆ ಬೇಕಾದಂತೆ ಬದಲಾಯಿಸಿಕೊಂಡು ಎಲ್ಲ ಚರ ಮತ್ತು ಸ್ಥಿರಾಸ್ತಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ನಮ್ಮ ಪೂರ್ವಜ ಪುರುಷರು ಮಾಡಿದ ತಪ್ಪಗೆ ಸ್ತ್ರೀಯರು ಸಮಾಜದ ಎಲ್ಲ ಪುರುಷರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆಂಬಲ್ಲಿಯಿಂದ ಹಿಡಿದು ಒಟ್ಟಾರೆ ಸಮಾಜದಲ್ಲಿ ಸ್ತ್ರೀಯರು ಪುಷರನ್ನು ಹಿಂಸಿಸಿಸುತ್ತಿದ್ದಾರೆಂಬಲ್ಲಿಯ ವರೆಗೆ ಬಾಪಣ್ಣ ಹೇಳುತ್ತಾನೆ ಮತ್ತು ವೇದ ಕಾಲದ ಗುಣಗಾನ ಮಾಡುತ್ತಾನೆ. ಅಲ್ಲದೇ ಸ್ತ್ರೀ ಕಾಲವನ್ನು ದೂಷಿಸುತ್ತಾನೆ… ಬಾಪಣ್ಣನದು ಒಂದು ಮನವಿ ಇದೆ. ಅದೆಂದರೆ ಹೆಂಗಸರಿಗೆ ಸಮಾನವಾಗಿ ಪುರುಷರಿಗೆ ಶಿಕ್ಷಣ ಹಕ್ಕು, ಆಸ್ತಿ ಹಕ್ಕು ಇತ್ಯಾದಿ ಹಕ್ಕುಗಳನ್ನು ನೀಡುವವರೆಗೆ ತಮ್ಮ ಹೋರಾಟ ನಡೆದಿರುತ್ತದೆ ಎಂಬುದು ಬಾಪಣ್ಣನ ಹಕ್ಕೊತ್ತಾಯವಾಗಿರುತ್ತದೆ… ಹೀಗೆಯೇ ಪುರುಷರ ಕಾಲದ ಕನಸಿನ ಮನವರಿಕೆಯ ಹಕ್ಕೊತ್ತಾಯವೂ ಆಗಿರುತ್ತದೆ ಮತ್ತದೇ ಮುಂದೊಂದು ಕಾಲದಲ್ಲಿ ಈ ಸ್ತ್ರೀಯರ ಕಾಲವನ್ನು ಮೈತ್ರಿರಾವ್ ಕನಸ್ಸಿನಲ್ಲಿ ಕಂಡವರಂತೆ ಶಿರಸಾವಸಿ ಪಾಲಿಸಿಕೊಂಡು ಬಂದವಳು. ಮತ್ತು ಅಂತೆಯೇ ತನ್ನ ಜೀವನದಲ್ಲೂ ಅಳವಡಿಸಿಕೊಂಡವಳು. ತನ್ನ ಗಂಡ ರಾಮುನನ್ನು ತನ್ನ ಅಂಕೆಯಲ್ಲೇ ಇಟ್ಟುಕೊಂಡು, ಸ್ತ್ರೀ ದಬ್ಬಾಳಿಕೆಯನ್ನು ನಡೆಸುತ್ತಲೇ ಬಂದವಳು. ಅಂತೆಯೇ ಮೈತ್ರಿರಾವ್ ತನ್ನ ಮಗಳು ಭೂಮಿರಾವ್ ಳನ್ನೂ ಬೆಳೆಸಿದವಳು. ಮಗ ದೀಪು ತನ್ನಪ್ಪ ರಾಮುನಂತೆಯೇ ಇಲ್ಲಿ ಸ್ತ್ರೀ ಪ್ರಧಾನ ಸಮಯದಲ್ಲಿ ದೀಪು ಕೂಡ ಸ್ತ್ರೀ ದಬ್ಬಾಳಿಕೆ ಅನುಭವಿಸಿದನು. ಮೈತ್ರಿರಾವ್ ಮಗಳು ಭೂಮಿರಾವ್ ಮಾತ್ರ ತನ್ನ ತಾಯಿ ಮೈತ್ರಿರಾವ್ ಳಂತೆ ಬೆಳೆದವಳು ಮತ್ತು ಸ್ತ್ರೀ ಪ್ರಧಾನವಾಗಿ ಈ ಸಮಾಜವನ್ನು ನೋಡುವವಳು. ಮೈತ್ರಿರಾವ್ ಸೊಸೆಯಾಗುವವಳು ಶರ್ಮಿಳಾರಾವ್ ಕೂಡ ಮೈತ್ರಿರಾವ್ ಳಂತೆಯೇ ಇರಬೇಕೆಂಬುದು ಮೈತ್ರಿರಾವ್ ಕನಸ್ಸು… ಹೀಗೆ ಸಾಗುವ ಈ ನಾಟಕ ಹಂದರ ಒಂದು ಕನಸ್ಸನ್ನು ಹುಟ್ಟು ಹಾಕುತ್ತದೆ. ಈ ಸುಂದರ ಭೂಮಿಯಲ್ಲಿ ಗಂಡು-ಹೆಣ್ಣು ಸಮವಾಗಿ ಬದುಕಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆಯು ಒಡಮೂಡಿಸುತ್ತದೆ. ಗಂಡು-ಹೆಣ್ಣು ಸಮವಾಗಿ ಬದಕಲು ಸಾಧ್ಯವಿಲ್ಲವೇ ಎಂಬ ಪ್ರಶ್ನೆ ಏಳುಸುತ್ತದೆ. ಅದು ಸಾಧ್ಯವಿದೆ ಆದರೆ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ‘ಮನುವಾದ’ವಾದದ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಪುರುಷ ಪ್ರಾಧಾನ್ಯತೆಯ ಮನವರಿಕೆ ಆಗಿ ಹೆಣ್ಣು-ಗಂಡು ಸಮವಾಗಿ ಬಾಳಿದರೆ ಮಾತ್ರ ಎಂಬ ಅರಿವನ್ನು ಈ ನಾಟಕ ಮೂಡಿಸುತ್ತದೆ… ಅನಾದಿ ಕಾಲದಿಂದ ಹೆಣ್ಣು ಹುಟ್ಟಿದಾಗ ತಂದೆಯ ಆಶ್ರಯದಲ್ಲಿ, ದೊಡ್ಡವಳಾಗಿ ಮದುವೆ ಆಗುತ್ತಿದಂತೆ ಗಂಡನ ನೆರಳಲ್ಲಿ, ಮುದುಕೆಯಾಗುತ್ತಿದ್ದಂತೆ ಮಕ್ಕಳ ಆಶ್ರಯದಲ್ಲಿ ಬದುಕು ಸಾಗಿಸಬೇಕೆಂಬ ಅನ್ನುವ ದುರಾಲೋಚನೆಯ ಗಂಡಸರು ಮನುಶ್ಯಾಸ್ತ್ರ, ವೇದ, ಉಪನಿಷತ್ತು, ಪುರಾಣಗಳಲ್ಲಿ ಹೇಳುತ್ತಲೇ ಬಂದವು‌ ಸ್ಬಾರ್ಥ ಈ ಗಂಡು ಪ್ರಧಾನ ಗ್ರಂಥಗಳು. ಹೆಣ್ಣನ್ನು ಕಪಟಿ, ಮೋಸಗಾತಿ, ಮಾಯೆ, ಅಬಲೆ ಎಂಬ ಋಣಾತ್ಮಕತೆಯನ್ನು ಅಂಟಿಸಿಬಿಟ್ಟವು ಆ ಮನುವಿನ ಮಕ್ಕಳು. ಹೆಣ್ಣು ಒಂದು ವೇಳೆ ಬೀದಿಪಾಲಾದರೆ ಆ ಹೆಣ್ಣಿನ ಪರಿಸ್ಥಿತಿಯಂತೂ ಊಹಿಸಲೂ ಆಗದು… ಹಾಗಾಗಿಯೇ ಹೆಣ್ಣು ಬಾಯಿ ಮುಚ್ಚಿಕೊಂಡು ಪುರುಷ ಪ್ರಧಾನ ಸಮಾಜದಲ್ಲಿ ಬದುಕಬೇಕಾಗಿತ್ತು. ಆದರೆ ಕಾಲ ಚಕ್ರ ಬದಲಾ ಒಂದೇ ತರಹವಿರುದಿಲ್ಲ. ಈ ಕಾಲ ಚಕ್ರ ಉರುಳುತ್ತಿದ್ದಂತೆ ಬದಲಾಯಿತು ಸಮಾಜ. ಹೆಣ್ಣು ಗಟ್ಟಿಯಾದ ಧ್ವನಿಯಲ್ಲಿ ಪ್ರಶ್ನಿಸತೊಡಗಿದಳು ಈ ಮೊದಲಿನ ಸಮಾಜವನ್ನು. ಅಕ್ಷರಾಭ್ಯಾಸ ಮಾಡತೊಡಗಿದಳು. ಮಹಿಳಾ ದೌರ್ಜನ್ಯದ ವಿರುದ್ಧ ಹೋರಾಡತೊಡಗಿದಳು. ಹಾಗೆಯೇ ರಾಜಕೀಯ ಇಚ್ಛಾಶಕ್ತಿ ಬೆಳೆಸಿಕೊಂಡಳು. ಪರಿಣಾಮವಾಗಿ ಬಿಬಿಪಿ ಪಕ್ಷ ಕಟ್ಟಿಕೊಂಡು ಆ ಮುಖೇನ ರಾಜಕಾರಣಕ್ಕೂ ಇಳಿದಳು.ಕಾಲಕ್ರಮೇಣ ಬದಲಾಯಿತು ಸಮಾಜ. ಮಹಿಳೆಯರು ಅಧಿಕಾರ ಚುಕ್ಕಾಣಿ ಹಿಡಿಯುತ್ತಿದಂತೇ ಈ ಮಹಿಳೆಯರಿಗೂ ಮದವೇರಿತು ಪುರುಷರನ್ನು ಕಾಲಕಸ ಮಾಡಿಕ್ಕೊಂಡನಾಟಕ ಈ ಮಹಿಳಾ ಮಣಿಗಳ ಪಿತ್ತವೂ ನೆತ್ತಿಗೇರಿದಂತೆ ಮೈತ್ರಿರಾವ್ ಪಾತ್ರ ಕುಣಿಯಲಾರಂಭಿಸಿತು… ಹೀಗೆ ಈ ನಾಟಕ ‘ನಾಳೆ ಬಪ್ಪುದು’ ಎಂಬುದನ್ನು ಸಾಹಿತಿ ಹನುಮಂತ ಹಾಲಿಗೇರಿಯವರು ಸಾಧರಪಡಿಸುತ್ತಾರೆ…. ಹೀಗೆ ಶಿಲಾಯುಗ, ವೇದಕಾಲ, ವರ್ತಮಾನ ಕಾಲ ಮತ್ತು ಭವಿಷ್ಯದ ಹೊಳವನ್ನು ಹೊಂದಿರುವ ಮಹಿಳೆಯರ ಕಾಲದ ಪಲ್ಲಟಗಳಿಂದ ಈ ನಾಟಕ ಕೂಡಿದೆ… *******

ಸ್ವಾತ್ಮಗತ Read Post »

ಅಂಕಣ ಸಂಗಾತಿ

ಗಝಲ್ ಲೋಕ

ಬಸವರಾಜ್ ಕಾಸೆ ಗಝಲ್ ಬಗ್ಗೆ ಮಾಹಿತಿ ನೀಡುವ ಮತ್ತು ಗಝಲ್ ರಚನೆಗೆಇರುವ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿ ಕೊಡುವ ಹೊಸ ಅಂಕಣವೇ ‘ಗಝಲ್ ಲೋಕ’ ಪ್ರತಿ ಬುದವಾರಮತ್ತು ಶನಿವಾರ ನಮ್ಮ ನಡುವಿನಕವಿ ಬಸವರಾಜ್ ಕಾಸೆ ಅವರ ಲೇಖನಿಯಿಂದ

ಗಝಲ್ ಲೋಕ Read Post »

ಅಂಕಣ ಸಂಗಾತಿ, ಇತರೆ

ಜ್ಞಾನಪೀಠ ವಿಜೇತರು

ಯು.ಆರ್.ಅನಂತಮೂರ್ತಿ..! ಜ್ಞಾನಪೀಠ ಪುರಸ್ಕೃತ ಯು.ಆರ್.ಅನಂತಮೂರ್ತಿ..! ಕನ್ನಡಕ್ಕೆ ಆರನೆಯ ಜ್ಞಾನಪೀಠ ಪ್ರಶಸ್ತಿ ೧೯೯೪ರಲ್ಲಿ ಬಂದಾಗ ಕನ್ನಡ ಸಾಹಿತ್ಯ ಲೋಕ ಮತ್ತೊಮ್ಮೆ ಇಡೀ ದೇಶದ ಗಮನ ಸೆಳೆಯಿತು. ಈ ಗೌರವ ಪಡೆದವರು ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ… ಎಲ್ಲರಿಗೂ ಅವರವರ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಅತ್ಯಗತ್ಯ ಎಂದು ಬಲವಾಗಿ ಪ್ರತಿಪಾದಿಸುವ ಅನಂತಮೂರ್ತಿ; ವಿದೇಶಗಳ ಹಲವಾರು ಭಾಷೆ ತಿಳಿದಿರುವ ನಮಗೆ ನಮ್ಮ ಅಕ್ಕಪಕ್ಕದ ನಾಡಿನ ಭಾಷೆಗಳು ಗೊತ್ತೇ ಇಲ್ಲದ್ದರ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸುತ್ತಾರೆ. ಜಗತ್ತಿನ ಬೇರೆ ಬೇರೆ ಭಾಷೆಗಳ ಹಲವು ಮಹತ್ವದ ಕೃತಿಗಳು ಇಂಗ್ಲೀಷಿಗೆ ಸಮರ್ಥವಾಗಿ ಅನುವಾದಗೊಳ್ಳಲು ಸಾಧ್ಯವಿಲ್ಲ ಎನ್ನುವುದ ಅವರ ಅಭಿಪ್ರಾಯವಾಗಿದೆ. ಕನ್ನಡ ಸಾಹಿತಿಯೂ ಮತ್ತು ಭಾರತೀಯ ಸಾಹಿತ್ಯದ ವಿಮರ್ಶಕರೂ ಆದ ಅನಂತಮೂರ್ತಿ ತಮ್ಮನ್ನು ಕನ್ನಡ ಸಂಸ್ಕೃತಿಯ Critical Insider ಎಂದು ಕರೆದುಕೊಳ್ಳುತ್ತಾರೆ… ತಮ್ಮ ಬಹು ಚರ್ಚಿತ ಸಂಸ್ಕಾರ ಕಾದಂಬರಿಯಿಂದ ಭಾರತೀಯ ಸಾಹಿತ್ಯ ಮತ್ತು ಚಲನಚಿತ್ರ ರಂಗಗಳಲ್ಲಿ ಒಂದು ದೊಡ್ಡ ವಿವಾದವನ್ನೇ ಮಾಡಿದ ಅನಂತಮೂರ್ತಿ ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಳಿಗೆ ಹಳ್ಳಿಯಲ್ಲಿ. ಇಬ್ಬರು ಜ್ಞಾನಪೀಠ ಪ್ರಶಸ್ತಿ ವಿಜೇತ (ಕುವೆಂಪು ಮತ್ತು ಅನಂತಮೂರ್ತಿ) ರನ್ನು ನೀಡಿದ ಹೆಗ್ಗಳಿಕೆ ತೀರ್ಥಹಳ್ಳಿ ತಾಲ್ಲೂಕಿನದು. ಇವರು ಹುಟ್ಟಿದ್ದು ೧೯೩೨ರ ಡಿಸೆಂಬರ್ ೨೧ರಂದು. ತಂದೆ ಉಡುಪಿ ರಾಜಗೋಪಾಲಾಚಾರ್ಯ. ತಾಯಿ ಸತ್ಯಮ್ಮ (ಸತ್ಯಭಾಮ)… ದೂರ್ವಾಸಪುರದ ಸಾಂಪ್ರದಾಯಿಕ ಸಂಸ್ಕೃತ ಪಾಠಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಆರಂಭಿಸಿದ ಅನಂತಮೂರ್ತಿಯವರ ಓದು ಅನಂತರ ತೀರ್ಥಹಳ್ಳಿ, ಮೈಸೂರುಗಳಲ್ಲಿ ಮುಂದುವರೆಯಿತು. ಮೈಸೂರು ವಿಶ್ವವಿದ್ಯಾಲಯದಲ್ಲಿ ಇಂಗ್ಲೀಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದ ಇವರು ಹೆಚ್ಚಿನ ವ್ಯಾಸಂಗಕ್ಕಾಗಿ ಇಂಗ್ಲೆಂಡಿಗೆ ಹೋದರು. ಕಾಮನ್‍ವೆಲ್ತ್ ವಿದ್ಯಾರ್ಥಿ ವೇತನ ಪಡೆದ ಇವರು ಬರ್ಮಿಂಗ್‍ಹ್ಯಾಮ್ ವಿಶ್ವವಿದ್ಯಾನಿಲಯದಿಂದ ಇಂಗ್ಲೀಷ್ ಮತ್ತು ತೌಲನಿಕ ಸಾಹಿತ್ಯ ಎಂಬ ವಿಷಯದಲ್ಲಿ ೧೯೬೬ರಲ್ಲಿ ಪಿಎಚ್.ಡಿ. ಪಡೆದರು… ೧೯೭೦ರಿಂದ ಮೈಸೂರು ವಿಶ್ವವಿದ್ಯಾಲಯದ ಇಂಗ್ಲೀಷ್ ವಿಭಾಗದಲ್ಲಿ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ಕೆಲಸ ಮಾಡಿದ ಅನಂತಮೂರ್ತಿಯವರು, ೧೯೮೭ರಲ್ಲಿ ಕೇರಳದ ಕೋಟ್ಟಯಂನ ಮಹಾತ್ಮಾಗಾಂಧಿ ವಿಶ್ವವಿದ್ಯಾಲಯದ ಉಪಕುಲಗತಿಗಳಾಗಿದ್ದರು. ೧೯೯೨-೯೩ರ ಅವಧಿಯಲ್ಲಿ ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯದ ಅಧ್ಯಕ್ಷರಾಗಿದ್ದರು. ೧೯೯೩ರಲ್ಲಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಗೋಕಾಕರ ಅನಂತರ ಈ ಸಂಸ್ಥೆಯ ಅಧ್ಯಕ್ಷರಾದ ಎರಡನೆಯ ಕನ್ನಡಿಗರು ಇವರು… ಅನಂತಮೂರ್ತಿಯವರು ದೇಶವಿದೇಶಗಳ ಹಲವು ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಜವಾಹರಲಾಲ್ ನೆಹರೂ ವಿ.ವಿ., ಜರ್ಮನಿಯ ತೂಬಿಂಗೆನ್ ವಿ.ವಿ., ಅಮೇರಿಕ ದೇಶದ ಐಯೊವಾ ವಿ.ವಿ., ಟಫಟ್ಸ್ ವಿ.ವಿ., ಕೊಲ್ಲಾಪುರದ ಶಿವಾಜಿ ವಿ.ವಿ.ಗಳಲ್ಲಿ ಪ್ರಾಧ್ಯಾಪಕರಾಗಿದ್ದರು… ಬರಹಗಾರರಾಗಿ, ಭಾಷಣಕಾರರಾಗಿ ಅನಂತಮೂರ್ತಿಯವರು ದೇಶದ ಒಳಗೆ ಮತ್ತು ಹೊರಗೆ ಹಲವಾರು ಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ; ಉಪನ್ಯಾಸ ನೀಡಿದ್ದಾರೆ. ೧೯೮೦ರಲ್ಲಿ ಸೋವಿಯತ್ ರಷ್ಯಾ, ಹಂಗೇರಿ, ಪಶ್ಚಿಮ ಜರ್ಮನಿ ಮತ್ತು ಫ್ರಾನ್ಸ್ ದೇಶಗಳಿಗೆ ಭೇಟಿ ನೀಡಿದ ಭಾರತೀಯ ಲೇಖಕರ ಬಳಗದ ಸದಸ್ಯರಾಗಿದ್ದರು. ಮಾರ್ಕ್ಸ್‌ವಾದದಿಂದ ತುಂಬ ಪ್ರಭಾವಿತರಾಗಿದ್ದ ಇವರು ತಮ್ಮ ಹಲವಾರು ಅಭಿಪ್ರಾಯಗಳನ್ನು ಪರೀಕ್ಷಿಸಿ ನೋಡಲು ಈ ಭೇಟಿ ನೆರವಾಯಿತು. ಸೋವಿಯತ್ ಪತ್ರಿಕೆಯೊಂದರ ಸಲಹಾ ಸಮಿತಿಯ ಸದಸ್ಯರಾಗಿ ೧೯೮೯ರಲ್ಲಿ ಮಾಸ್ಕೋಗೆ ಭೇಟಿ ನೀಡಿದರು. ೧೯೯೩ರಲ್ಲಿ ಚೀನಾ ದೇಶಕ್ಕೆ ಭೇಟಿ ನೀಡಿದ ಭಾರತೀಯ ಬರಹಗಾರರ ಬಳಗಕ್ಕೆ ಇವರು ನಾಯಕರಾಗಿದ್ದರು. ಇವಲ್ಲದೆ ದೇಶವಿದೇಶಗಳ ಹಲವಾರು ವೇದಿಕೆಗಳಿಂದ ನೂರಕ್ಕೂ ಹೆಚ್ಚು ಉಪನ್ಯಾಸ ನೀಡಿದ್ದಾರೆ… ಇಷ್ಟೇ ಅಲ್ಲದೆ, ಅನಂತಮೂರ್ತಿಯವರು ಕನ್ನಡದ ಹಲವಾರು ಸಾಹಿತ್ಯ ದಿಗ್ಗಜರನ್ನು ರೇಡಿಯೋ ಮತ್ತು ದೂರದರ್ಶನಗಳಲ್ಲಿ ಸಂದರ್ಶಿಸಿದ್ದಾರೆ. ಮೈಸೂರು ಆಕಾಶವಾಣಿಗಾಗಿ ಗೋಪಾಲಕೃಷ್ಣ ಅಡಿಗ, ಶಿವರಾಮ ಕಾರಂತ, ಆರ್.ಕೆ. ನಾರಾಯಣ್, ಆರ್.ಕೆ.ಲಕ್ಷ್ಮಣ್ ಮತ್ತು ಜನರಲ್ ಕಾರಿಯಪ್ಪ ಅವರನ್ನು ಸಂದರ್ಶಿಸಿದ್ದಾರೆ. ಶಿವರಾಮ ಕಾರಂತ, ಗೋಪಾಲಕೃಷ್ಣ ಅಡಿಗ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರುಗಳನ್ನು ಕುರಿತು ದೂರದರ್ಶನವು ನಿರ್ಮಿಸಿದ ಸಾಕ್ಷ್ಯ ಚಿತ್ರಗಳಲ್ಲಿ ಸಂದರ್ಶಕರಾಗಿ ಭಾಗವಹಿಸಿದ್ದಾರೆ… ಅನಂತಮೂರ್ತಿಯವರು ಪ್ರಸಿದ್ಧರಾಗಿರುವುದು ಕನ್ನಡದ ಬರಹಗಾರರಾಗಿ ಮತ್ತು ಕನ್ನಡ ಸಂಸ್ಕೃತಿಯ critical insider ಆಗಿ. ೧೯೫೫ರಲ್ಲಿ “ಎಂದೆಂದೂ ಮುಗಿಯದ ಕತೆ” ಕಥಾ ಸಂಕಲನದಿಂದ ಅವರ ಸಾಹಿತ್ಯ ಕೃಷಿ ಆರಂಭವಾಯಿತು. ಮೌನಿ, ಪ್ರಶ್ನೆ, ಆಕಾಶ ಮತ್ತು ಬೆಕ್ಕು -ಇವರ ಕಥಾಸಂಕಲನಗಳು. ಈ ಎಲ್ಲ ಕತೆಗಳನ್ನೂ ಒಳಗೊಂಡ “ಮೂರು ದಶಕದ ಕಥೆಗಳು” ೧೯೮೯ರಲ್ಲಿ ಹೊರಬಂದಿದೆ. ಹಿರಿಯ ಸಮಾಜವಾದಿ ರಾಜಕಾರಣಿ ಜೆ. ಎಚ್. ಪಟೇಲರ ಸಮೀಪವರ್ತಿಯಾಗಿದ್ದ ಅನಂತಮೂರ್ತಿ ಅವರು ಶಾಂತವೇರಿ ಗೋಪಾಲ ಗೌಡ ಮತ್ತು ಲೋಹಿಯಾ ಅವರ ಪ್ರಭಾವಕ್ಕೆ ಒಳಗಾದವರು. ಇವರ ಬರಹದಲ್ಲಿ ಈ ಇಬ್ಬರ ಪ್ರಭಾವಗಳು ಎದ್ದು ಕಾಣುತ್ತವೆ… ೧೯೬೫ರಲ್ಲಿ ಇವರ ಮೊದಲ ಕಾದಂಬರಿ “ಸಂಸ್ಕಾರ” ಪ್ರಕಟವಾಯಿತು. ಪ್ರಕಟವಾದಾಗ ಮತ್ತು ಚಲನಚಿತ್ರವಾದಾಗ ತುಂಬ ವಿವಾದವನ್ನುಂಟು ಮಾಡಿದ ಈ ಕಾದಂಬರಿ ಹಲವಾರು ದೇಶೀಯ ಮತ್ತು ವಿದೇಶೀಯ ಭಾಷೆಗಳಿಗೆ ಅನುವಾದಗೊಂಡಿದೆ. ಭಾರತೀಪುರ, ಅವಸ್ಥೆ ಮತ್ತು ಭವ -ಇವರ ಇತರ ಕಾದಂಬರಿಗಳು. “ಆವಾಹನೆ” ಎಂಬ ಒಂದು ನಾಟಕವನ್ನು ಬರೆದಿರುವ ಅನಂತಮೂರ್ತಿ “೧೫ ಪದ್ಯಗಳು”, “ಮಿಥುನ” ಮತ್ತು “ಅಜ್ಜನ ಹೆಗಲ ಸುಕ್ಕುಗಳು” ಎಂಬ ಮೂರು ಕವನ ಸಂಕಲನಗಳನ್ನೂ ಪ್ರಕಟಿಸಿದ್ದಾರೆ. ಪ್ರಜ್ಞೆ ಮತ್ತು ಪರಿಸರ, ಪೂರ್ವಾಪರ, ಸಮಕ್ಷಮ -ಇವು ಅವರ ಪ್ರಬಂಧ ಸಂಕಲನಗಳು. ಇಷ್ಟಲ್ಲದೆ ಇಂಗ್ಲೀಷಿನಲ್ಲಿ ಇವರು ಬರೆದಿರುವ ಹಲವಾರು ಪ್ರಬಂಧಗಳು ದೇಶ-ವಿದೇಶಗಳ ಸಾಹಿತ್ಯಕ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ೧೯೮೧ರಲ್ಲಿ ರಾಜಕೀಯ, ಸಾಂಸ್ಕೃತಿಕ ಮತ್ತು ಸಾಹಿತ್ಯಕ ವಿಷಯಗಳಿಗೆಂದು “ರುಜುವಾತು” ಎಂಬ ತ್ರೈಮಾಸಿಕ ಪತ್ರಿಕೆಯನ್ನು ಪ್ರಾರಂಭಿಸಿದರು… ಅನಂತಮೂರ್ತಿಯವರ ಹಲವು ಕತೆಗಳು ಕನ್ನಡ ಸಾಹಿತ್ಯ ವಿಮರ್ಶಕರ ಗಮನ ಸೆಳೆದಿವೆ ಮತ್ತು ಚರ್ಚೆಗೂ ವಿವಾದಕ್ಕೂ ಒಳಗಾಗಿವೆ. ಸೂರ್ಯ ಕುದುರೆ, ನವಿಲುಗಳು, ಬರ, ಘಟಶ್ರಾದ್ಧ, ತಾಯಿ, ಹುಲಿಯ ಹೆಂಗರಳು ಈ ಸಾಲಿಗೆ ಸೇರುತ್ತವೆ… ಅನಂತಮೂರ್ತಿಯವರ ಸಂಸ್ಕಾರ, ಅವಸ್ಥೆ ಕಾದಂಬರಿಗಳನ್ನು ಮತ್ತು ಬರ, ಘಟಶ್ರಾದ್ಧ ಕತೆಗಳನ್ನು ಆಧರಿಸಿ ಚಲನಚಿತ್ರಗಳು ನಿರ್ಮಾಣವಾಗಿವೆ. ಇವೆಲ್ಲವೂ ಮಹತ್ವದ ಚಿತ್ರಗಳಾಗಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದಿವೆ. ಘಟಶ್ರಾದ್ಧ ಕತೆಯನ್ನು ಆಧರಿಸಿ “ದೀಕ್ಷಾ” ಎಂಬ ಹಿಂದಿ ಚಲನಚಿತ್ರವೂ ತಯಾರಾಗಿದೆ. ಸಂಸ್ಕಾರ ಮತ್ತು ಘಟಶ್ರಾದ್ಧ ಚಲನಚಿತ್ರಗಳು ಭಾರತ ಸರಕಾರದಿಂದ ಸ್ವರ್ಣಕಮಲ ಪ್ರಶಸ್ತಿಯನ್ನು ಪಡೆದಿವೆ… ಸಂಸ್ಕಾರ, ಘಟಶ್ರಾದ್ಧ ಮತ್ತು ಬರ ಚಿತ್ರಗಳಿಗೆ ಅತ್ಯುತ್ತಮ ಕತೆಗಾಗಿ ಅನಂತಮೂರ್ತಿಯವರಿಗೆ ಪ್ರಶಸ್ತಿ ಸಿಕ್ಕಿದೆ. ೧೯೮೩ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೮೪ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,೧೯೯೨ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೯೪ರಲ್ಲಿ ಮಾಸ್ತಿ ಪ್ರಶಸ್ತಿ -ಇವು ಅನಂತಮೂರ್ತಿಯವರಿಗೆ ಬಂದ ಮನ್ನಣೆಗಳಲ್ಲಿ ಕೆಲವು. ೧೯೯೪ರಲ್ಲಿ ಬಂದಿರುವ ಜ್ಞಾನಪೀಠ ಪ್ರಶಸ್ತಿ ಇವೆಲ್ಲವುಗಳಿಗೆ ಕಳಶಪ್ರಾಯವಾದುದು… ಹೀಗಿದ್ದರು ಹೀಗಿತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್.ಅನಂತಮೂರ್ತಿಯವರ ಬದುಕು ಮತ್ತು ಸಾಹಿತ್ಯ… *********** ‌‌‌‌ — ಕೆ.ಶಿವು.ಲಕ್ಕಣ್ಣವರ

ಜ್ಞಾನಪೀಠ ವಿಜೇತರು Read Post »

ಅಂಕಣ ಸಂಗಾತಿ

ಜ್ಞಾನಪೀಠ ವಿಜೇತರು

ಮಾಸ್ತಿ ವೆಂಕಟೇಶ ಅಯ್ಯಂಗಾರ್ ‘ಕನ್ನಡದ ಆಸ್ತಿ’ ಮಾಸ್ತಿ ವೆಂಕಟೇಶ ಅಯ್ಯಂಗಾರ್..! ‘ಕನ್ನಡದ ಆಸ್ತಿ’ ಎಂದೇ ಪರಿಗಣಿತರಾದರು ‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ ಅಯ್ಯಂಗಾರ್ಯರು..! ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾರ್ “ಪೆರಿಯಾತ್” ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು… ತಿರುಮಲ್ಲಮ್ಮ ದಂಪತಿಗಳಿಗೆ ೮-೬-೧೮೯೧ರಲ್ಲಿ ಜನಿಸಿದರು. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಮೈಸೂರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಪ್ರಥಮ ದರ್ಜೆಯಲ್ಲಿ ಎಫ್.ಎ. ಪದವಿ, ಬೆಂಗಳೂರು ಸೆಂಟ್ರಲ್ ಕಾಲೇಜಿನಿಂದ ೧೯೧೨ರಲ್ಲಿ ಬಿ.ಎ. ಮತ್ತು ೧೯೧೩ರಲ್ಲಿ ಎಂ.ಸಿ.ಎಸ್. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರು. ಮುಂದೆ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಿಂದ ಎಂ.ಎ. (ಇಂಗ್ಲಿಷ್) ಪದವಿ ಪಡೆದರು. ಇವರು ೧೯೧೪ರಲ್ಲಿ ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ಮಾಸ್ತಿ ಅವರು ಸಬ್ ಡಿವಿಜನ್ ಆಫೀಸರ್ (೧೯೨೭) ಮ್ಯಾಜಿಸ್ಟ್ರೇಟ್ ಮತ್ತು ಕಂಟ್ರೋಲರ್ (೧೯೩0) ಡೆಪ್ಯುಟಿ ಕಮೀಷನರ್ (೧೯೩೪) ಎಕ್ಸೈಜ್ ಕಮೀಷನರ್ (೧೯೪0) ಮೊದಲಾದ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ೧೯೪೩ ಸ್ವಇಚ್ಛೆಯಿಂದ ಸರ್ಕಾರಿ ಸೇವೆಯಿಂದ ನಿವೃತ್ತರಾದರು… ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ (೧೯೪೩-೪೮), ಅಧ್ಯಕ್ಷರಾಗಿ (೧೯೫0-೬೪) ಸೇವೆ ಸಲ್ಲಿಸಿರುವ ಇವರು ‘ಜೀವನ’ ಮಾಸಪತ್ರಿಕೆಯನ್ನು ೨೫ ವರ್ಷ ಪ್ರಕಟಿಸಿದರು. ಕನ್ನಡ ಏಕೀಕರಣಕ್ಕೆ ಶ್ರಮಿಸಿದರು. ಸಹಾಯನಿಧಿ ಮೂಲಕ ಕನ್ನಡ ಲೇಖಕರನ್ನು ಬೆಳಕಿಗೆ ತಂದರು. ಪಿಇಎನ್ ಸಂಸ್ಥೆಯ ಉಪಾಧ್ಯಕ್ಷರಾಗಿ (೧೯೬೪) ಆಯ್ಕೆಯಾಗಿದ್ದರು. ೧೯೪೨ರಲ್ಲಿ ಅಖಿಲ ಭಾರತ ಪ್ರಾಚ್ಯ ಸಮ್ಮೇಳನದ ಕನ್ನಡ ವಿಭಾಗದ ಅಧ್ಯಕ್ಷರಾಗಿದ್ದರು. ಅನೇಕ ಅಖಿಲ ಭಾರತ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾರೆ ಮಾಸ್ತಿಯವರು… ಮೈಸೂರು ಮಹಾರಾಜರು ರಾಜಸೇವಾ ಪ್ರಸಕ್ತ ಬಿರುದನ್ನು ೧೯೪೨ರಲ್ಲಿ ನೀಡಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್(೧೯೫೬), ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನ(೧೯೬೮), ವರ್ಧಮಾನ ಪ್ರಶಸ್ತಿ (೧೯೮೩), ಮೈಸೂರು ವಿಶ್ವವಿದ್ಯಾನಿಲಯದ ಡಾಕ್ಟರೇಟ್(೧೯೭೭), ಭಾರತೀಯ ಜ್ಞಾನಪೀಠ ಪ್ರಶಸ್ತಿ (೧೯೮೩), ಕರ್ನಾಟಕ ಸರ್ಕಾರದ ಸನ್ಮಾನ (೧೯೮೪), ನಾಡಿನ ನಾನಾ ಸಂಸ್ಥೆಗಳಿಂದ ನೂರಾರು ಸನ್ಮಾನ, ಪ್ರಶಸ್ತಿ, ಗೌರವಗಳು ಮಾಸ್ತಿ ಅವರಿಗೆ ಸಂದಿವೆ… ಕನ್ನಡ ಸಣ್ಣಕತೆಗಳ ಜನಕರೆಂದೇ ಖ್ಯಾತಿ ಹೊಂದಿದ ಮಾಸ್ತಿ ಅವರು ನೂರಕ್ಕೂ ಮೀರಿ ಕೃತಿಗಳನ್ನು ವಿವಿಧ ವಿಷಯಗಳ ಮೇಲೆ ರಚಿಸಿ ಕನ್ನಡವನ್ನು ಬೆಳೆಸಿದವರಲ್ಲಿ ಒಬ್ಬರಾಗಿದ್ದಾರೆ. ಇಲ್ಲಿ ಅವರ ಕೆಲವು ಕೃತಿಗಳನ್ನು ಉದಾಹರಿಸಿದೆ… ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು. 1910 ರಲ್ಲಿ ಬರೆದ ‘ರಂಗನ ಮದುವೆ’ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ ‘ಮಾತುಗಾರ ರಾಮಣ್ಣ’ ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩… ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, “ಜೀವನ” ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ. 20ನೆಯ ಶತಮಾನದ ಆರಂಭದ ಕಾಲದಲ್ಲಿ ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು… ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ‘ಚಿಕವೀರ ರಾಜೇಂದ್ರ’ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ”. “ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥವಾಗಿದೆ… ಸಣ್ಣ ಕತೆಗಳ ಸಂಗ್ರಹ.– ಸಣ್ಣಕತೆಗಳು (೫ ಸಂಪುಟಗಳು). ರಂಗನ ಮದುವೆ. ಮಾತುಗಾರ ರಾಮಣ್ಣ. ನೀಳ್ಗತೆ.– ಸುಬ್ಬಣ್ಣ (೧೯೨೮). ಶೇಷಮ್ಮ(೧೯೭೬). ಕಾವ್ಯ ಸಂಕಲನಗಳು– ಬಿನ್ನಹ, ಮನವಿ(೧೯೨೨). ಅರುಣ(೧೯೨೪). ತಾವರೆ(೧೯೩೦). ಸಂಕ್ರಾಂತಿ(೧೯೬೯). ನವರಾತ್ರಿ(೫ ಭಾಗ ೧೯೪೪-೧೯೫೩) ಚೆಲುವು, ಸುನೀತ. ಮಲಾರ. ಶ್ರೀರಾಮ ಪಟ್ಟಾಭಿಷೇಕ (ಖಂಡಕಾವ್ಯ). ಜೀವನ ಚರಿತ್ರೆ.– ರವೀಂದ್ರನಾಥ ಠಾಕೂರ(೧೯೩೫). ಶ್ರೀ ರಾಮಕೃಷ್ಣ(೧೯೩೬). ಪ್ರಬಂಧ– ಕನ್ನಡದ ಸೇವೆ(೧೯೩೦). ವಿಮರ್ಶೆ (೪ ಸಂಪುಟ ೧೯೨೮-೧೯೩೯). ಜನತೆಯ ಸಂಸ್ಕೃತಿ(೧೯೩೧). ಜನಪದ ಸಾಹಿತ್ಯ(೧೯೩೭). ಆರಂಭದ ಆಂಗ್ಲ ಸಾಹಿತ್ಯ(೧೯೭೯). ನಾಟಕಗಳು.– ಶಾಂತಾ, ಸಾವಿತ್ರಿ, ಉಷಾ (೧೯೨೩). ತಾಳೀಕೋಟೆ(೧೯೨೯). ಶಿವಛತ್ರಪತಿ(೧೯೩೨). ಯಶೋಧರಾ(೧೯೩೩). ಕಾಕನಕೋಟೆ(೧೯೩೮). ಲಿಯರ್ ಮಾಹಾರಾಜ. ಚಂಡಮಾರುತ, ದ್ವಾದಶರಾತ್ರಿ. ಹ್ಯಾಮ್ಲೆಟ್. ಶೇಕ್ಸ್ ಪಿಯರ್ ದೃಶ್ಯಗಳು ೧,೨,೩. ಪುರಂದರದಾಸ. ಕನಕಣ್ಣ. ಕಾಳಿದಾಸ. ಅಜ್ಜನದಾರಿ, ಭಟ್ಟರಮಗಳು, ವಿಮಲಾ ಮರಿಯಾನ್. ಬಾನುಲಿ ದೃಶ್ಯಗಳು. ಕಾದಂಬರಿಗಳು.– ಚೆನ್ನಬಸವ ನಾಯಕ(೧೯೫೦). ಚಿಕವೀರ ರಾಜೇಂದ್ರ(೧೯೫೬). ಆತ್ಮಚರಿತ್ರೆ.– ಭಾವ. ಹೀಗೆ ಅನೇಕಾನೇಕ ಕೃತಿಗಳ ರಚನೆಯೊಂದಿಗೆ ಮಾಸ್ತಿ‌‌ ವೆಂಕಟೇಶ ಅಯ್ಯಂಗಾರ್ ಅವರು ಬದುಕಿ‌ ಬಾಳಿದರು..! — ಕೆ.ಶಿವು.ಲಕ್ಕಣ್ಣವರ ಕೆ.ಶಿವು ಲಕ್ಕಣ್ಣವರ

ಜ್ಞಾನಪೀಠ ವಿಜೇತರು Read Post »

ಅಂಕಣ ಸಂಗಾತಿ

ಸ್ವಾತ್ಮಗತ

ಕವಿ ಹೋರಾಟಗಾರ ಗವಿಸಿದ್ದ ಎನ್ ಬಳ್ಳಾರಿ ಕೆ.ಶಿವು ಲಕ್ಕಣ್ಣವರ ಹೈದರಾಬಾದ್ ಕರ್ನಾಟಕದ ಜನಧ್ವನಿ ಸಾಹಿತಿ, ಹೋರಾಟಗಾರ ಗವಿಸಿದ್ಧ ಎನ್. ಬಳ್ಳಾರಿ..! ಕೊಪ್ಪಳವನ್ನು ಕೇಂದ್ರವನ್ನಾಗಿಟ್ಟುಕೊಂಡೇ ರಾಜ್ಯಮಟ್ಟದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದವರು ಗವಿಸಿದ್ಧ ಎನ್. ಬಳ್ಳಾರಿ.ಯವರು. ಹುಟ್ಟಿದ್ದು ಜೂನ್ ೧೭, ೧೯೫೦ ರಂದು. ಮಾರ್ಚ್ ೧೪, ೨೦೦೪ ರಂದು ೫೪ ನೇ ವಯಸ್ಸಿನಲ್ಲೇ ನಿಧನರಾದರು… ಸಾಹಿತ್ಯ ಕ್ಷೇತ್ರದಲ್ಲಿ ‘ರಾಜ್ಯೋತ್ಸವ ಪ್ರಶಸ್ತಿ’ಯನ್ನು ಪಡೆದವರು. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಕೆಲಸ ನಿರ್ವಹಿಸಿದವರು… ಬಿ.ಎಸ್ಸಿ., ಎಂ.ಎ ಪದವೀಧರರು. ಪ್ರೌಢಶಿಕ್ಷಣದವರೆಗೆ ಕೊಪ್ಪಳದ ಗವಿಸಿದ್ಧೇಶ್ವರ ಸಂಸ್ಥೆಯಲ್ಲಿಯೇ ಓದಿ, ಬಿ.ಎಸ್ಸಿ. ಪದವಿಯನ್ನು ಹುಬ್ಬಳ್ಳಿಯ ಪಿ.ಸಿ. ಜಾಬಿನ್ ಕಾಲೇಜಿನಲ್ಲಿ ಮುಗಿಸಿದರು. ಅಲ್ಲಿನ ಕ್ರಾಂತಿಕಾರಿ ಕವಿಗಳ ಇಡೀ ದಂಡಿನಲ್ಲಿ ಸರಳ, ಸಜ್ಜನಿಕೆ ಮತ್ತು ಹರಿತ ಕಾವ್ಯದ ಮೂಲಕ ಆಗಲೇ ಹೆಸರಾಗಿದ್ದವರು… ಕರ್ನಾಟವ ವಿಶ್ವ ವಿದ್ಯಾಲಯ ಧಾರವಾಡದಲ್ಲಿ ಎಂ.ಎ. ಕನ್ನಡ ಸ್ನಾತಕ ಪದವಿಯನ್ನು ಪಡೆದರು. ತುರ್ತುಪರಿಸ್ಥಿತಿಯ ಕಾಲಘಟ್ಟದಲ್ಲಿ ‘ಕತ್ತಲು ದೇಶದ ಪದ್ಯಗಳು’ ಎನ್ನುವ ಮೊದಲ ಸಂಕಲನವನ್ನು ೧೯೭೭ ರಲ್ಲಿ ಪ್ರಕಟಿಸಿದರು. ನಂತರ ೧೯೮೪ ರಲ್ಲಿ ‘ಕಪ್ಪುಸೂರ್ಯ’ ಎಂಬ ಎರಡನೆಯ ಕವನ ಸಂಕಲನದ ಮೂಲಕ ರಾಜ್ಯದ ಸಾಹಿತ್ಯ ವಲಯದಲ್ಲಿ ಮಿಂಚು ಹರಿಸಿದವರು. ಈ ಕೃತಿಗೆ ಗುಲಬರ್ಗಾ ವಿಶ್ವ ವಿದ್ಯಾಲಯದ ೫,೦೦೦ ರೂ. ಗಳ ಬಹುಮಾನ ದೊರೆಯಿತು. ೨೦೦೪, ಮಾರ್ಚ್ ೧೪ ರಂದು ಬಳ್ಳಾರಿಯ ಲೋಹಿಯಾ ಪ್ರಕಾಶನ ಪ್ರಕಟಿಸಿದ ‘ಈ ಮಣ್ಣು ಅಪ್ಪಿಕೊಳ್ಳುವ ಮುನ್ನ’ ಕವನ ಸಂಕಲನ ಬಿಡುಗಡೆಯಾಯಿತು. ವಿಪರ್ಯಾಸವೆಂಬಂತೆ ಅದೇ ಸಮಯದಲ್ಲಿ ಅವರು ನಿಧನ ಹೊಂದಿದರು. ಈ ಕೃತಿಗೆ ‘ಕಣವಿ ಕಾವ್ಯ ಪ್ರಶಸ್ತಿ’ ದೊರೆತಿದೆ… ಡಾ. ಜಿ.ಎಸ್. ಶಿವರುದ್ರಪ್ಪನವರು ಒಮ್ಮೆ ಕೊಪ್ಪಳಕ್ಕೆ ಬಂದಾಗ ‘ನಾನು ಗವಿಸಿದ್ಧ ಅವರನ್ನು ಭೇಟಿಯಾಗಿಯೇ ಹೋಗಬೇಕು, ಅವರನ್ನು ಕರೆಸಿರಿ’ ಎಂದು ಹೇಳಿದ್ದು ಗವಿಸಿದ್ಧ ಬಳ್ಳಾರಿಯವರ ಕಾವ್ಯದ ಗಟ್ಟಿತನ ತೋರಿಸುತ್ತದೆ… ಮೂಲತಃ ಇವರದು ವ್ಯಾಪಾರಿ ಮನೆತನ. ಹವ್ಯಾಸದಲ್ಲಿ ಪತ್ರಿಕೋದ್ಯಮದಲ್ಲಿಯೂ ಕೆಲಸ ಮಾಡಿದರು. ಇಂಡಿಯನ್ ಎಕ್ಸಪ್ರೆಸ್ ವರದಿಗಾರರಾಗಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿಯೂ ಕೆಲಸ ಮಾಡಿದ್ದಾರೆ. ೧೯೯೯ ರಲ್ಲಿ ‘ತಳಮಳ’ ಎನ್ನುವ ವಾರಪತ್ರಿಕೆ ಆರಂಭಿಸಿ ಇಡೀ ಹೈದರಾಬಾದ್ ಕನಾಟಕದ ಜನಧ್ವನಿಯಾಗಿ ಅನೇಕ ಕವಿಗಳ, ಕಲಾವಿದರ, ಎಲೆ ಮರೆಯ ಕಾಯಿಯಂತಿದ್ದ ಹಲವರನ್ನು ಪರಿಚಯಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಕಲಬುರ್ಗಿಯ ಶ್ರೀ ಶರಣ ಬಸವೇಶ್ವರ ಸಂಸ್ಥಾನದಿಂದ ಬಂಗಾರದ ಪದಕವನ್ನು ಪಡೆದ ಪ್ರತಿಭಾವಂತರಾಗಿದ್ದರು. ಬಾಲ್ಯದಲ್ಲಿಯೇ ಕವಿತೆಗಳ ಮೂಲಕ ಶಾಲೆಯಲ್ಲಿ ಗುರುತಿಸಿಕೊಂಡಿದ್ದರು. ಮುಂದೆ ಪಿ.ಸಿ. ಜಾಬಿನ್ ಕಾಲೇಜು ಇವರ ಸಾಹಿತ್ಯದ ಹರವು ವಿಸ್ತಾರಗೊಳಿಸಿತು. ಮೈಸೂರು ದಸರಾ, ಅಖಿಲ ಭಾರತ ಸಾಹಿತ್ಯ ಸಮ್ಮೇಳನ, ಬಂಡಾಯ ಸಮ್ಮೇಳನಗಳು, ಹಂಪಿ ಉತ್ಸವ ಮೊದಲಾದ ರಾಜ್ಯ, ಅಂತಾರಾಜ್ಯ ಮಟ್ಟದ ಹೊರ ರಾಜ್ಯದ ಸಮ್ಮೇಳನಗಳಲ್ಲಿ ಕಾವ್ಯ ವಾಚನ ಮಾಡಿ ಗಮನ ಸೆಳೆಯುತ್ತಿದ್ದರು… ಇವರ ಕವನಗಳು ಪದವಿಗೆ ಪಠ್ಯವಾಗಿಯೂ ಪ್ರಕಟವಾಗಿವೆ. ನಾಡಿನ ಎಲ್ಲ ಪ್ರಮುಖ ಪತ್ರಿಕೆಗಳಲ್ಲಿ ಮತ್ತು ಬೆಂಗಳೂರು, ಧಾರವಾಡ, ಭದ್ರಾವತಿ, ಗುಲಬರ್ಗಾ ಆಕಾಶವಾಣಿಗಳಲ್ಲಿ ಅಷ್ಟೇ ಅಲ್ಲದೇ ಚಂದನ, ಡಿ.ಡಿ. ಬೆಂಗಳೂರು ದೂರದರ್ಶನದಲ್ಲಿ ಇವರ ಕವನಗಳು ಪ್ರಕಟಗೊಂಡಿವೆ… ಕೊಪ್ಪಳದಲ್ಲಿ ನಡೆದ ೬೨ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿನ ಹಿಂದೆ ಇವರ ಪಾತ್ರ ಬಹಳಷ್ಟಿದೆ. ಗೌರವ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಸಮ್ಮೇಳನದ ನೆನಪಿನ ಸಂಚಿಕೆ ‘ತಿರುಳ್ಗನ್ನಡ’ದ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದಾರೆ… ಇವರನ್ನು ಪ್ರೀತಿಯಿಂದ ಜನತೆ ‘ನಾಡಕವಿ’ ಎಂದೇ ಸಾಹಿತಿಗಳು, ಸಾಹಿತ್ಯಾಸಾಕ್ತರು ಕರೆಯುತ್ತಿದ್ದರು. ನಾಡಿನ ಪ್ರಮುಖ ಚಳುವಳಿಯಾದ ಗೋಕಾಕ್ ಚಳುವಳಿ, ಹೈದರಾಬಾದ್ ಕರ್ನಾಟಕದ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ, ಕೊಪ್ಪಳ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದವರು… ೧೯೮೬ ರಲ್ಲಿ ಕನ್ನಡ ಸಾಹಿತ್ಯ ಅಕಾಡೆಮಿಯ ವತಿಯಿಂದ ಆಂಧ್ರಪ್ರದೇಶಕ್ಕೆ ಸಾಹಿತ್ಯದ ಪ್ರವಾಸ ಕೈಗೊಂಡು ಅಧ್ಯಯನ ಮಾಡಿದ್ದಾರೆ ಇವರು… ಇವರ ಇನ್ನಿತರ ಪ್ರಕಟಣೆಗಳೆಂದರೆ — ಕಾವ್ಯಮೇಳ (೧೦೯೪) (ಸಂ. ಹಾ.ಮಾ.ನಾ.), ದಶವಾರ್ಷಿಕ ಕವಿತೆಗಳು (ಸಂ. : ಗೋ.ಕೃ. ಅಡಿಗ), ೧೯೭೪-೮೪ : ರತ್ನ ಸಂಪುಟ ೧೯೮೫ (ಮೈಸೂರು ವಿ.ವಿ.), ಗಾಂಧೀ ಗಾಂಧೀ (ಚಂಪಾ), ಬಂಡಾಯ ಕಾವ್ಯ : ೧೯೯೦ (ಸಂ. ಬರಗೂರು ರಾಮಚಂದ್ರಪ್ಪ), ರತ್ನ ಸಂಪುಟ ಕಾವ್ಯ (ಸಂ. ಮೈಸೂರು ವಿ.ವಿ)… ಹೀಗೆಯೇ ನಾನಾ ಕೃತಿಗಳನ್ನು ರಚಿಸಿದರು ಮತ್ತು ಅನೇಕಾನೇಕ ಕೃತಿಗಳನ್ನು ಸಂಪಾದಿಸಿದ್ದಾರೆ ಗವಿಸಿದ್ಧ.ಎನ್. ಬಳ್ಳಾರಿಯವರು. ಹೀಗೆ ಸಾಗಿತ್ತು‌ ಗವಿಸಿದ್ಧ.ಎನ್. ಬಳ್ಳಾರಿಯವರ ಬದುಕು-ಬರಹದ ಪಯಣ….!

ಸ್ವಾತ್ಮಗತ Read Post »

ಅಂಕಣ ಸಂಗಾತಿ

ಸ್ವಾತ್ಮಗತ

ಜಾನಪದ ಗಾರುಡಿಗ ಬೈಲೂರ ಬಸವಲಿಂಗಯ್ಯ ಹಿರೇಮಠ..! ಕೆ.ಶಿವುಲಕ್ಕಣ್ಣವರ ಜಾನಪದ ಗಾರುಡಿಗ ಬೈಲೂರ ಬಸವಲಿಂಗಯ್ಯ ಹಿರೇಮಠ..! ನಾನು ಬೈಲೂರ ಬಸವಲಿಂಗಯ್ಯ ಹಿರೇಮಠ ಅವರ ಪುಸ್ತಕವಾದ ‘ನೂರು ಜಾನಪದ ಹಾಡುಗಳು’ ಬಗೆಗೆ ವಿಮರ್ಶಾತ್ಮಕ ಲೇಖನವನ್ನು ಬರೆದೆನು. ಆಗ ಸಾಕಷ್ಟು ಪ್ರಶಂಸೆಗಳು ಬಂದವು. ಅಲ್ಲದೇ ಸಾಕಷ್ಟು ಜನರು ಅವರ ಆ ಪುಸ್ತಕವನ್ನು ಕೇಳಿದರು. ನಾನು ಅವರ ಅಂದರೆ ಬೈಲೂರ ಬಸವಲಿಂಗಯ್ಯ ಹಿರೇಮಠರ ಫೋನ್ ನಂಬರ್ ಕೊಟ್ಟು ಸುಮ್ಮನಾದೆನು. ಅದರೆ ಬಹಳಷ್ಟು ಜನರು ಬೈಲೂರ ಬಸವಲಿಂಗಯ್ಯ ಹಿರೇಮಠರ ವೈಯಕ್ತಿಕ ಮಾಹಿತಿಯನ್ನು ಕೇಳಿದರು. ನಾನು ಸಾಧ್ಯವಾದಷ್ಟು ಮತ್ತು ನನಗೆ ಗೊತ್ತಿದ್ದಷ್ಟು ಮಾಹಿತಿಯನ್ನೂ ಫೋನ್ ನಲ್ಲಿಯೇ ಹೇಳಿದೆನು. ಕೆಲವರಂತೂ ಅವರ ಕುರಿತಾಗಿ ಒಂದು ವೈಯಕ್ತಿಕ ಬದುಕಿನ ಬಗೆಗೆ ಅಂದರೆ ಅವರ ‘ಜಾನಪದ ಬದುಕಿನ ಮಜಲ’ನ್ನೇ ಒಂದು ಲೇಖನ ಮಾಡಿರೆಂದರು. ಹಾಗಾಗಿ ಆ ಅವರ ವೈಯಕ್ತಿಕ ಬದುಕಿನ ಬಗೆಗೆ ಕೇಳಿದರಿಗಾಗಿ ಏಕೆ ಒಂದು ಲೇಖನ ಬರೆಯಬಾರದೆಂದು ಈ‌ ಬೈಲೂರ ಬಸವಲಿಂಗಯ್ಯ ಹಿರೇಮಠ ಜಾನಪದ ಬದುಕಿನ ಬಗೆಗೆ ಬರೆಯಬೇಕಾಯಿತು… ಅದು ಹೀಗಿದೆ– ಬೈಲೂರ ಬಸವಲಿಂಗಯ್ಯ ಹಿರೇಮಠರು ಅತ್ಯಂತ ಗ್ರಾಮೀಣ ಸೊಗಡಿನ ಜಾನಪದ ಪ್ರತಿಭೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಬೈಲೂರಿನವರು ಇವರು… ಇವರು ಚಿಕ್ಕಂದಿನಿಂದಲೇ ಜಾನಪದ ಸಂಗೀತ ಹಾಗೂ ಬಯಲಾಟಗಳೊಂದಿಗೆ ಹಾಡುತ್ತ, ಆಡುತ್ತ ಬೆಳೆದವರು. ಮುಂದೆ ಇವರು ಜಾನಪದದಲ್ಲಿ ಎಂ.ಎ.ಪದವಿ ಪಡೆವರು. ೧೯೮೩ರಲ್ಲಯೇ ನೀನಾಸಂ ‘ಜನ ಸ್ಪಂದನ’ ಶಿಬಿರದ ಮೂಲಕ ಹವ್ಯಾಸಿ ರಂಗಭೂಮಿಗೆ ಕಾಲಿಟ್ಟವರು. ಇವರು ತಿರುಗಾಟದಲ್ಲಿ ನಟರಾಗಿ, ಗಾಯಕರಾಗಿ, ಸಂಗೀತ ನಿರ್ದೇಶಕರಾಗಿ ಕೆಲ ಮಾಡಿದವರು. ಬಿ.ವಿ.ಕಾರಂತರೊಂದಿಗೆ ‘ರಂಗ ಸಂಗೀತ’ ಕುರಿತಂತೆ ಅಭ್ಯಾಸ ಮಾಡಿದವರು… ಧಾರವಾಡದಲ್ಲೊಂದು ‘ಜಾನಪದ ಸಂಶೋಧನಾ ಕೇಂದ್ರ’ವನ್ನು ಹುಟ್ಟು ಹಾಕಿ ತನ್ಮೂಲಕ ದಂಪತಿಗಳ ಇಬ್ಬರೂ ೩೦ ವರ್ಷಗಳಿಂದ ಜಾನಪದ ರಂಗಭೂಮಿ, ಗ್ರಾಮೀಣ ವೃತ್ತಿ ರಂಗಭೂಮಿ, ಹಾಗೂ ಆದುನಿಕ ರಂಗಭೂಮಿಯಲ್ಲೂ ತಮ್ಮನ್ನು ತಾವು ತೊಡಗಿಕೊಂಡವರು. ಇವರ ರಚನೆಯ ಪರಿಷ್ಕೃತ ರಂಗರೂಪ ‘ಶ್ರೀ ಕೃಷ್ಣ ಪಾರಿಜಾತ’ ಸಾವಿರ ಪ್ರಯೋಗದತ್ತ ದಾಪುಗಾಲು ಹಾಕುತ್ತಿದೆ… ಇವರು ನಟರಾಗಿ, ಹಾಡುಗಾರರಾಗಿ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ ಇವರು ಸುಮಾರು ನೂರಕ್ಕೂ ಹೆಚ್ಚು ನಾಟಕಗಳಿಗೂ ಸಂಗೀತ ನಿರ್ದೇಶನ ಮಾಡಿದ್ದಾರೆ. ಬಿ.ವಿ.ಕಾರಂತರ ಆಸೆಯದಂತೆ ‘ರಂಗ ಸಂಗೀತ’ ಎನ್ನುವುದು ಭಾಷೆಯಾಗಬೇಕು ಎಂಬುದನ್ನು ಮನಗಂಡು ಇವರು ಆ ತೆರದಲ್ಲಿ ಸಂಗೀತ ನಿರ್ದೇಶನದಲ್ಲೂ ತೊಡಗಿಸಿಕೊಂಡಿದ್ದಾರೆ. ಜಾನಪದ ಬಯಲಾಟಗಳು, ಹಾಡುಗಳು ಅದರ ವಾದ್ಯಗಳ ಅಬ್ಬರದಲ್ಲಿ ಸ್ಪಷ್ಟತೆ ಕಳೆದುಕೊಂಡ ಈ ಸಂದರ್ಭದಲ್ಲಿ ಅಲ್ಲಿಯ ಮಟ್ಟಗಳ ಕುರಿತು ಅಧ್ಯಯನ ಮಾಡಿ ಪುಸ್ತಕಗಳನ್ನು ಹೊರತಂದಿದ್ದಾರೆ ಬೈಲೂರು ಬಸವಲಿಂಗಯ್ಯ ಹಿರೇಮಠ ಅವರು. ಹಿಂದೂಸ್ತಾನಿ ಸಂಗೀತದಲ್ಲೂ ಪದವಿ ಪಡೆದ ಇವರು ರಂಗ ಸಂಗೀತ, ದಾಸವಾಣಿ, ಶರಣವಾಣಿ, ತತ್ವಪದ ಹಾಗೂ ಬಯಲಾಟ ಪದಗಳ‌ ಕುರಿತಂತೆ ಕರ್ನಾಟಕವಲ್ಲದೇ ಹೊರ ರಾಜ್ಯ ಹಾಗೂ ಹೊರದೇಶಗಳಾದ ಅಮೆರಿಕಾ, ‌ಲಂಡನ್, ಬೆಹರಿನ್, ಸಿಂಗಪುರ ಮುಂತಾದೆಡೆ ಕಾರ್ಯಕ್ರಮ ನಡೆಸಿದ್ದಾರೆ. ನೂರಾರು ರಂಗಪದಗಳು ಒಳಗೊಂಡಂತೆ ೨೦ ಕ್ಕೂ ಹೆಚ್ಚು ಧ್ವನಿ ಸುರುಳಿಗಳನ್ನು ಹೊರ ತಂದಿದ್ದಾರೆ. ಈಗ ಮೂಲ ಪತ್ತಾರ ಮಾಸ್ತರರ ಪದ್ಯರೂಪದ‌ ‘ಸಂಗ್ಯಾ ಬಾಳ್ಯಾ’ನಿಗೊಂದು ‘ರಂಗ ರೂಪ’ ನೀಡಿ ಸಂಗೀತದ ಹೊಸ ಸಾಧ್ಯತೆಗಳತ್ತ ನೋಟಬೀರಿದ್ದಾರೆ. ಇವರ ಈ ಜಾನಪದ ಹೊಸ ಸಾಧ್ಯತೆಗಾಗಿ ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ಅಭಿನವ‌ ಶರೀಫ ಹಾಗೂ ಜಾನಪದ ಸೇರಿದಂತೆ ಅನೇಕ ಪುರಸ್ಕಾರಗಳು ಸಂದಿವೆ… ಇವಿಷ್ಟು ಬೈಲೂರ ಬಸವಲಿಂಗಯ್ಯ ಹಿರೇಮಠ ಅವರ ಬಗೆಗೆ ಹೇಳಿ ಮಾತು ಮುಗಿಸುತ್ತೇನೆ..!

ಸ್ವಾತ್ಮಗತ Read Post »

ಅಂಕಣ ಸಂಗಾತಿ

ಹೊತ್ತಾರೆ

ಅಮ್ಮನ ಅಡುಗೆ ಅಮೆರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಅಜ್ಜಿಯನ್ನು ನಾನು ಅಮ್ಮ ಅಂತ ಕರೆಯುತ್ತಿದ್ದುದು. ನನ್ನ ಬಾಲ್ಯದ ಮುಕ್ಕಾಲು ಪಾಲಿಗಿಂತಲೂ ಹೆಚ್ಚು ಅಮ್ಮನ ಜೊತೆಯಲ್ಲೇ ಕಳೆದಿದ್ದರಿಂದ ನೆನಪುಗಳ ರಾಶಿಯೇ ಇದೆ. ಹಾಗಾಗಿ ನಾನು ನಿಧಾನವಾಗಿ ಸಂದರ್ಭಗಳನ್ನೆಲ್ಲ ಪೋಣಿಸುತ್ತಾ ಒಂದೊಂದೇ ಬರಹ ಬರೆಯುತ್ತಿರುತ್ತೇನೆ. ಮುಂದೆ ಎಲ್ಲವನ್ನೂ ಕ್ರೋಢೀಕರಿಸುವುದೂ ಆಗುತ್ತದೆ. ಒಂದಂತೂ ನಿಜ ಇದುವರೆಗಿನ ನನ್ನ ಬದುಕಿನ ಎಂತಹದ್ದೇ ಮುಖ್ಯ ಸಂದರ್ಭವಾದರೂ ಅಲ್ಲಿ ಅಮೂರ್ತವಾಗಿ ಅಮ್ಮ ಇದ್ದೇ ಇರುತ್ತಾರೆ. ನನಗಿನ್ನೂ ನೆನಪಿದೆ. ನನಗೆ ಬುದ್ಧಿ ತಿಳಿಯುವಾದಾಗಿಂದಲೂ, ಅಮ್ಮ ನಿತ್ಯವೂ ಕೋಳಿ ಕೂಗುವ ಹೊತ್ತಿಗೆ ಎದ್ದು ತನ್ನ ಕೆಲಸದಲ್ಲಿ ತಲ್ಲೀನರಾಗಿಬಿಡುತ್ತಿದ್ದರು. ಸುಮಾರು ಐದುಮುಕ್ಕಾಲಿಗೆ ಅಮ್ಮನ ಕೆಲಸಗಳ ಧಡಬಡ ಸದ್ದು ಕೇಳಲು ಶುರುವಾಗುತ್ತಿತ್ತು. ಸುಮಾರು ನೂರೈವತ್ತು ಅಡಿ ಉದ್ದ ಹದಿನೈದು ಅಡಿ ಅಗಲದ ಮನೆಯ ಅಂಗಳವನ್ನು ಗುಡಿಸಿ ನೀರು/ಗಂಜಲ ಹಾಕಿ ಸಾರಿಸಿ ರಂಗೋಲಿಯಿಟ್ಟು, ಹೊಸ್ತಿಲು ತೊಳೆದು ಅರಿಶಿನ ಕುಂಕುಮಗಳಿಂದ ಅಲಂಕಾರ ಮಾಡಿ, ಬಿಸಿನೀರಿನ ಒಲೆ ಹಚ್ಚುತ್ತಿದ್ದರು. ಆಮೇಲೆ ಕೊಟ್ಟಿಗೆಯಿಂದ ದನಗಳನ್ನೆಲ್ಲ ಹೊರಗೆ ಕಟ್ಟಿ ಕೊಟ್ಟಿಗೆ ಕಸ ಗುಡಿಸಲು ಅಣಿಯಾಗುತ್ತಿದ್ದರು. ಇವೆಲ್ಲವೂ ನಡೆಯುವಾಗ ನನ್ನ ನಿದ್ರೆ ಸಾಂಗವಾಗಿ ಸಾಗುತ್ತಲೇ ಇರುತ್ತಿತ್ತು. ಹಬ್ಬದ ದಿನಗಳಲ್ಲಿ ಮಾತ್ರ ಮಾತಿನಲ್ಲೇ ತಿವಿದು ತಿವಿದು ಏಳುವವರೆಗೆ ಬಿಡುತ್ತಲೇ ಇರಲಿಲ್ಲವಾದ್ದರಿಂದ ಆ ದಿನಗಳಲ್ಲಿ ಅಮ್ಮನ ನಿತ್ಯದ ಕೆಲಸಗಳನ್ನು ಗಮನಿಸುವುದು ಸಾಧ್ಯವಿತ್ತು. ಮಿಕ್ಕ ದಿನಗಳಲ್ಲಿ ಅಮ್ಮ ಕೆಲಸಗಳನ್ನೆಲ್ಲ ಮುಗಿಸಿ ನಮ್ಮ ಮನೆಯಲ್ಲಿದ್ದ ಪುಟ್ಟ ಫಿಲಿಪ್ಸ್ ರೇಡಿಯೋ ಹೊತ್ತಿಸಿದಾಗಲೇ ನನಗೆ ಬೆಳಗಾಗುತ್ತಿದ್ದುದು. ಅದರಲ್ಲೂ, ಇಯಂ ಆಕಾಶವಾಣಿಃ, ಸಂಪ್ರತಿ ವಾರ್ತಾಹ ಶ್ರೂಯಂತಾಂ, ಪ್ರವಾಚಕಾಃ ಬಲದೇವಾನಂದ ಸಾಗರಃ ಅಂದಾಗ, ಸರಿಯಾಗಿ ಆರುಮುಕ್ಕಾಲು…. ಆ ಮಾರಾಯ ಬಲದೇವಾನಂದ ಸಾಗರಾಹ ಗೆ ಹುಷಾರು ತಪ್ಪುತ್ತಲೇ ಇರಲಿಲ್ಲವೇನೋ. ಒಂದೂ ದಿನ ತಪ್ಪದ ಹಾಗೆ ಸಂಸ್ಕೃತ ವಾರ್ತೆ ಕೇಳಿಸುತ್ತಿದ್ದರು. ನಂತರ ಚಿಂತನ, ಆಮೇಲೆ ಪ್ರದೇಶ ಸಮಾಚಾರ ಹೀಗೆ ರೇಡಿಯೋ ಕಾರ್ಯಕ್ರಮಗಳು ಮುಂದುವರಿಯುತ್ತಿರುವಾಗ ನನಗೂ ಹಾಸಿಗೆಗೂ ಇರುವ ಅಂಟು ನಿಧಾನವಾಗಿ ಬಿಡಿಸಿಕೊಳ್ಳುತ್ತಿತ್ತು. ಅಂಟು ಅಂದರೆ ಅದೊಂದು ನೀಳ್ಗತೆ. ಇಲ್ಲಿ ಸ್ವಲ್ಪ polished ಭಾಷೆಯಲ್ಲಿ ಹೇಳ್ತೇನೆ. ಬಾಲ್ಯದಲ್ಲಿ ನಾನು bedwetting ಮಾಡಿಕೊಳ್ಳುವ ಹವ್ಯಾಸ ಇತ್ತು; ಹವ್ಯಾಸ ಅನ್ನುವುದಕ್ಕೆ ಅದೇನು ಫೋಟೋಗ್ರಫಿ, ಪಕ್ಷಿವೀಕ್ಷಣೆ, ಚಾರಣ ಇಂತಹದ್ದೇನಲ್ಲ. ನಿತ್ಯವೂ ತಪ್ಪದೇ ನಡೆಯುತ್ತಿದ್ದರಿಂದ ಹಾಗಂದಿದ್ದು. ನನ್ನ ಬಾಲ್ಯದಲ್ಲಿ ಕನಸು ನನಸಾಗುತ್ತಿದ್ದುದು ಉಂಟು. ಅದು ಈ ಹವ್ಯಾಸದ ಮೂಲಕವಷ್ಟೇ! ನಿತ್ಯವೂ ನಾನು ಹೊರಗೆಲ್ಲೋ ಹೋಗಿ ಸೂಸು ಮಾಡಿಬಂದಿರುತ್ತಿದ್ದೆ. ಎಚ್ಚರವಾದಾಗ ಎಂದಿನಂತೆ ಎಡವಟ್ಟಾಗಿರುತ್ತಿತ್ತು!! ಕನ್ನಡಕ್ಕೆ ಅನುವಾದಿಸಿದರೆ ಆ ಬಾಲ್ಯದ ಸಂಕೋಚ ಮತ್ತೆ ಮರಳಿಬಿಡುವುದಲ್ಲಾಂತ ಈ ರೀತಿ ಪಾಲಿಶ್ ಮಾಡಿದ್ದೇನಷ್ಟೇ. ಸಧ್ಯಕ್ಕೆ ಈ ಕತೆ ಇಲ್ಲಿಗೇ ನಿಂತಿರಲಿ. ಅಮ್ಮನ ಹೊರಗಿನ ಕೆಲಸಗಳೆಲ್ಲ ಮುಗಿದು ಅಡುಗೆ ಮನೆಗೆ ಬಂದು ರೊಟ್ಟಿ ಮಾಡಲು ಅಣಿ ಮಾಡಿಕೊಳ್ಳುತ್ತಿದ್ದರು. ಅಮ್ಮನ ತಿಂಡಿ ಅಂದರೆ ಅದು ರೊಟ್ಟಿಯೇ. ಅಪ್ಪಿತಪ್ಪಿ ಉಪ್ಪಿಟ್ಟೋ ಚಿತ್ರಾನ್ನವೋ ಆದರೆ ಆ ದಿನ ಅಮ್ಮನ ಆರೋಗ್ಯ ಸರಿಯಿಲ್ಲ ಅಂತ ಅರ್ಥ, ಅಥವಾ ಬೆಳಗಿನ ಗ್ರಹಚಾರ ನೆಟ್ಟಗಿಲ್ಲ ಅಂತ ಇನ್ನೊಂದು ಅರ್ಥ. ರೊಟ್ಟಿಯ ಹೊರತಾಗಿ ಬೇರೆ ಯಾವುದೇ ತಿಂಡಿಯನ್ನೂ ನಾನೂ ನನ್ನ ಕೊನೆಯ ಸೋದರಮಾವನೂ ಒಕ್ಕೊರಲಿನಿಂದ ನಿರಾಕರಿಸುತ್ತಿದ್ದೆವು. ಅದರಲ್ಲೂ ಅಕ್ಕಿರೊಟ್ಟಿಯೇ ಆಗಬೇಕು. ಅಪರೂಪಕ್ಕೆ ಒಮ್ಮೊಮ್ಮೆ ಅಕ್ಕಿಹಿಟ್ಟು ಖಾಲಿಯಾಗಿ ಮುದ್ದೆ ಮಾಡಲು ಯಥೇಚ್ಛವಾಗಿರುತ್ತಿದ್ದ ರಾಗಿ ಹಿಟ್ಟಿನ ರೊಟ್ಟಿಯೇನಾದರೂ ಆಯ್ತೋ, ಅದಕ್ಕೂ ಗ್ರಹಚಾರ ಬಿಡಿಸುತ್ತಿದ್ದೆವು. ರೊಟ್ಟಿಗೆ ನಿತ್ಯವೂ ತೆಂಗಿನಕಾಯಿ ಚಟ್ನಿ, ಮುಂಗಾರಿನಲ್ಲಾದರೆ ತಿಂಗಳ ಹುರುಳಿಯ ಕಾಯಿ ಫಲ್ಯ, ಆಲೂಗಡ್ಡೆ ಫಲ್ಯ. ಅಮ್ಮನ ಆ ಒಂದು ರೊಟ್ಟಿ ತಿಂದರೆ ಮಧ್ಯಾಹ್ನ ಊಟದ ಅಗತ್ಯವಿರುತ್ತಿರಲಿಲ್ಲ. ಹಾಗಾಗಿ ಸ್ಕೂಲ್ ನ ಮಧ್ಯಾಹ್ನದ ಊಟದ ಸಮಯದಲ್ಲಿ ಅದೆಷ್ಟು ಒತ್ತಾಯಿಸಿದರೂ, ಗೆಳೆಯರ ಜೊತೆಯಲ್ಲಿ ಆಟ ಆಡುವುದಕ್ಕೆ ಜಾರಿಕೊಳ್ತಿದ್ದೆ. ಹಾಗೆ ಆಟ ಆಡುವಾಗ, ಕಳ್ಳ ಪೊಲೀಸ್ ಆಟವೇನಾದರೂ ಆಗಿದ್ದು, ಗುಡ್ಡದಂತೆ ಇದ್ದ ನಮ್ಮ ಊರಿನ ಕೆಳಭಾಗದಲ್ಲಿದ್ದ ಸ್ಕೂಲ್ ನಿಂದ ಗುಡ್ಡದ ತುದಿಯಲ್ಲಿದ್ದ ನಮ್ಮ ಮನೆಯ ಸಮೀಪ ಬಂದದ್ದೇನಾದರೂ ಆಗಿದ್ದರೆ ಅಂತಹ ಮಧ್ಯಾಹ್ನ ಊಟಕ್ಕೆ. ಇಲ್ಲಾಂದ್ರೆ ಚಕ್ಕರ್. ಒತ್ತಾಯಗಳಿಗೆ ಮಣಿಯದ ನನ್ನನ್ನು ಬದಲಾಯಿಸಲಾಗದೇ ಅಮ್ಮನೇ ಒಂದರ್ಧ ರೊಟ್ಟಿಯನ್ನು ಬ್ಯಾಗಿನೊಳಗೆ ಹಾಕಿ ಸ್ಕೂಲಿಗೆ ಕಳಿಸ್ತಿದ್ದರು. ಅಮ್ಮನ ಅಡುಗೆ ಅಂದರೆ ಅದು ಖಾರಾ ಬಾಂಬು! ಓಹೋ, ಆ ಖಾರಾಪುಡಿಯನ್ನು ತಯಾರಿ ಮಾಡಿಕೊಳ್ಳುವುದಂತೂ ಅಮ್ಮನ ಸಂಪ್ರದಾಯ. ಮೆಣಸಿನಕಾಯಿ ಹೆಕ್ಕಿ ಅದನ್ನು ಬಿಸಿಲಿನಲ್ಲಿ ಹದವಾಗಿ ಒಣಗಿಸಿ ಆಮೇಲೆ ಮೆಲು ಉರಿಯಲ್ಲಿ ಹುರಿದು ಪುಡಿಮಾಡಿಸುತ್ತಿದ್ದ ಪ್ರಕ್ರಿಯೆ, ನಮ್ಮ ರಕ್ಷಣಾ ಇಲಾಖೆಯ ಮದ್ದುಗುಂಡುಗಳ ತಯಾರಿಕೆಯ ಹಾಗೆ ಇರುತ್ತಿತ್ತು. ಇನ್ನು ಉಳಿದ ಸಂಬಾರ ಪದಾರ್ಥಗಳ ಏರ್ಪಾಡು ಅಂದರೆ ಅದು ಬಿಡಿ, ಬಜೆಟ್ ಮಂಡಿಸುವುದಕ್ಕೂ ಸಹ ಹಣಕಾಸು ಸಚಿವರು ನನ್ನ ಅಮ್ಮನ ರೀತಿಯ ತಯಾರಿ ಮಾಡಿಕೊಳ್ಳಲಾರರು! ಅಮ್ಮನ ಆ ಖಾರಾಬಾಂಬಿಗೆ ನಾವು ಎಷ್ಟು ಒಗ್ಗಿಹೋಗಿದ್ದೆವೆಂದರೆ ಯಾರಾದರೂ ನೆಂಟರು ಬಂದರೆ ಅವರ ಮೇಲಿನ ಕಾಳಜಿಯಿಂದ ಅಮ್ಮ ಸ್ವಲ್ಪ ಖಾರ ಕಡಿಮೆ ಮಾಡಿದರೂ ಅವರ ಬೆವರಿಳಿಯುತ್ತಿರುತ್ತಿತ್ತು. ನಾವು ಬೇರೆ ಮನೆಗಳಲ್ಲಿ ಊಟ ಮಾಡುವಾಗ ಉಪ್ಪಿನ ಕಾಯಿ ಇದ್ದರಷ್ಟೇ ಅಮ್ಮನ ಬಾಂಬಿಗೆ ತುತ್ತಾದ ನಮ್ಮ ನಾಲಿಗೆಗೆ ಬೇರೆಯವರ ಸಾಂಬಾರಿನ ರುಚಿ ಹೊಂದಿಸಿಕೊಳ್ಳಬಹುದಾಗಿತ್ತು. ಅಮ್ಮನ ಇನ್ನೊಂದು ವೈಖರಿಯೆಂದರೆ ಕಾಲಕ್ಕೆ ತಕ್ಕಂತೆ, ಋತು ಬದಲಾದ ಹಾಗೆ ಅಮ್ಮನ ತರಕಾರಿ ಪದಾರ್ಥಗಳೂ ಬದಲಾಗುತ್ತಿದ್ದವು. ಒಂದೇ ರೀತಿಯ ತರಕಾರಿಯನ್ನು ಯಾವತ್ತೂ ಪುನರಾವರ್ತಿಸುತ್ತಿರಲಿಲ್ಲ. ಸೊಪ್ಪು ಹೊಂದಿಸುವುದಕ್ಕಂತೂ ಅರ್ಧ ಮೈಲಿ ಸುತ್ತಿ ಬರುತ್ತಿದ್ದರು. ಇನ್ನು ಅಣಬೆ ಅಂದರೆ ಮುಂಜಾವಿನಲ್ಲಿಯೇ ಹೊರಟು ಒಂದು ಬುಟ್ಟಿ ಅಣಬೆ ಹೊಂದಿಸಿ ತಂದಿಟ್ಟಿರುತ್ತಿದ್ದರು. ಸೀಗೆಸೊಪ್ಪು, ನುಗ್ಗೆಸೊಪ್ಪು, ಬಸಳೆಸೊಪ್ಪು, ಬಿದಿರಿನ ಕಳಲೆ, ಗದ್ದೆಬದುಗಳಲ್ಲಿ ಇರ್ತಿದ್ದ ಕಹಿಎಣಿಗೆ ಸೊಪ್ಪು. ಹಲಸಿನ ಬಡುಕು, ಹಲಸಿನ ಬೀಜ, ಇವು ಕೆಲವೇ ಕೆಲವು. ಇನ್ನು ತರಕಾರಿಗೆ ತಕ್ಕಂತೆ ಹೊಂದುವ ಕಾಳುಗಳು. ಅವೂ ಸಹ ಎರಡು ದಿನಕ್ಕೆ ಪುನರಾವರ್ತನೆಯಾಗುತ್ತಿರಲಿಲ್ಲ. ಇಷ್ಟೆಲ್ಲಾ ಆಹಾರ ವೈವಿಧ್ಯತೆಯಿರುತ್ತಿದ್ದರಿಂದ ನಮಗೆ ಅನಾರೋಗ್ಯ ಅನ್ನುವುದೇ ಗೊತ್ತಿರಲಿಲ್ಲ. ಅಪರೂಪಕ್ಕೆಂದು ಜ್ವರವೋ, ಕೆಮ್ಮೋ ಆದರೆ ನಮ್ಮ ಊರಿನ ಪಕ್ಕದಲ್ಲಿರುವ ಶೆಟ್ಟಿಹಳ್ಳಿಯ ಸಂತಮರಿಯಮ್ಮನ ಆಸ್ಪತ್ರೆ. ಅಲ್ಲಿ ಒಂದು ಕ್ಯಾನ್ ನಲ್ಲಿ ಇರಿಸುತ್ತಿದ್ದ ಕೆಮ್ಮಿನ ಸಿರಪ್, ಅಥವಾ ಬಿಸಿನೀರಿನಲ್ಲಿ ಸದಾ ಕುದಿಸುತ್ತಿದ್ದ ಆ ಗಾಜಿನ ಸಿರಿಂಜುಗಳಲ್ಲಿ ಮೇಲಿನ ತುದಿಗೆ ಒಂದೆರಡು ಹನಿಯಂತೆ ಎಳೆದು ಚುಚ್ಚುತ್ತಿದ್ದ ಇಂಜೆಕ್ಷನ್ನು, ಅದೂ ಯುಗಾದಿ, ದೀಪಾವಳಿಯ ಹಾಗೆ ವರ್ಷಕ್ಕೊಂದೋ ಅಥವಾ ಎರಡೋ ಅಷ್ಟೇ! ನಾವು ಮಳೆಯಲ್ಲಿ ನೆನೆಯುವುದು ಧೂಳು ಕೊಳಕಿನಲ್ಲಿ ಆಟವಾಡುತ್ತಿದ್ದಕ್ಕೆ ಶೀತ ನೆಗಡಿ ಅನ್ನುವುದು ಆಗ್ಗಾಗ್ಗೆ ತೋರ್ಪಡಿಸಿಕೊಳ್ಳುತ್ತಿತ್ತು. ಹಾಲಿಗೆ ಒಂದಿಷ್ಟು ಮೆಣಸಿನ ಪುಡಿ, ಇನ್ನೊಂದಿಷ್ಟು ಅರಿಶಿನ ಹಾಕಿ ಬಿಸಿಯಾಗಿ ಕುಡಿದರೆ ಅದೇ ಮದ್ದು. ಅದಕ್ಕಿಂತ ಹೆಚ್ಚಿನ ಶುಶ್ರೂಷೆಯ ಅಗತ್ಯವಿರಲಿಲ್ಲ. ಆದರೆ ಅಮ್ಮನ ನಿತ್ಯದ ಖಾರಾಬಾಂಬಿನ ಜೊತೆಯಲ್ಲೇ, ಪ್ರತಿಶನಿವಾರವೂ ಕೊತಕೊತ ಕುದಿಯುತ್ತಿದ್ದ ನೀರಿನ ಅಭ್ಯಂಜನ. ಅದಂತೂ ಲಾವಾರಸವೇ ಮೈಮೇಲೆ ಹರಿದ ಹಾಗಿರುತ್ತಿತ್ತು. ನಾನಂತೂ ಶನಿವಾರದ ಸ್ನಾನ ತಪ್ಪಿಸಿಕೊಳ್ಳುವುದಕ್ಕೆ ತುದಿಗಾಲಿನಲ್ಲಿರುತ್ತಿದ್ದೆ. ಆಗುತ್ತಿರಲಿಲ್ಲ. ಓಹೋ, ಮೈಯೆಲ್ಲಾ ಸುಟ್ಟು ಹೊಗೆ ಬರುವ ಹಾಗೆ ಮಾಡಿಬಿಡುತ್ತಿದ್ದರು. ಅಲ್ಲಿಗೆ ಮಿಕ್ಕ ಖಾಯಿಲೆಗಳೆಲ್ಲ ಅದರಿ ಅಲ್ಲಾಡಿ ಬೆದರಿ ಬೆಂಡಾಗಿ ಹೋಗಿಬಿಡಬೇಕಿತ್ತಷ್ಟೇ! ಅಮ್ಮನ ಜೊತೆಗಿನ ಈ ದಿನಗಳಲ್ಲಿ ಅಂಗನವಾಡಿಯ ಸಮಯದಲ್ಲಿ ಆಂಟಿಯೂ ಇದ್ದರು. ನಾನು ಒಂದನೇ ಕ್ಲಾಸಿನಲ್ಲಿದ್ದಾಗ ಅವರ ಮದುವೆಯಾಯ್ತು. ಅದಾದ ನಂತರ ಏಳನೇ ಕ್ಲಾಸಿನ ತನಕ ಅಮ್ಮನ ಜೊತೆಯಲ್ಲಿಯೇ ಇದ್ದೆ. ಅಮ್ಮನ ಜೊತೆಯಿದ್ದು ಅದೆಷ್ಟು ಅವಲಂಬಿತನಾಗಿದ್ದೆ ಅಂದರೆ, ನನಗೆ ಬಾಗಿ ನನ್ನ ಕಾಲು ತೊಳೆದುಕೊಳ್ಳುವುದಕ್ಕೇ ಬರುತ್ತಿರಲಿಲ್ಲ. ನಾಲ್ಕನೇ ಕ್ಲಾಸಿನಲ್ಲಿ ನನ್ನ ಇಮ್ಮಡಿಗಳನ್ನು ಉಜ್ಜಿ ತೊಳೆಯುವುದಕ್ಕೆ ಕಲಿತಿದ್ದು. ಅಷ್ಟೇ ಯಾಕೆ, ಮೂಗಿನ ಸಿಂಬಳ ತೆಗೆಯುವುದು ಹೇಗೆ ! ಅಂತಲೂ ಗೊತ್ತಿರಲಿಲ್ಲ. ಅಮ್ಮನ ಆ ಆರೈಕೆ ಕಾಳಜಿಗಳು ಮುಂದೆ ನಾನು ಹಾಸ್ಟೆಲ್ ಸೇರಿದ ದಿನಗಳಲ್ಲಿ ವಿಪರೀತ ಹಿಂಸೆ ಅನುಭವಿಸುವ ಹಾಗೂ ಮಾಡಿದವು. ಆದರೆ ಬಾಲ್ಯದ ಅಮ್ಮನ ಆ ಆಹಾರ ಪದ್ಧತಿಯು ನನ್ನ ಆರೋಗ್ಯವನ್ನು ಏರುಪೇರಾಗದಂತೆ ಇರಿಸಿತ್ತು. ಒಂದು ಸಾರ್ತಿ ಹಾಸನದಲ್ಲಿದ್ದಾಗ ಟೈಫಾಯ್ಡ್ ಆಗಿ ಆಸ್ಪತ್ರೆ ದಾಖಲಾಗಿದ್ದ ಒಂದೇ ಘಟನೆ. ಅದು ಬಿಟ್ಟು ನಾನು ಈವರೆಗೆ ಬೇರೆ ಖಾಯಿಲೆ ಅಂತ ಡಾಕ್ಟರನ್ನು ನೋಡಿಲ್ಲ. ಇನ್ನು ದೇಶಬಿಟ್ಟ ನಂತರವಂತೂ, ಒಂದು ದಿನ ಡ್ರೈವರ್ ಲೈಸಿನ್ಸ್ ಪಡೆಯುವುದಕ್ಕೆ ಕಡ್ಡಾಯವಾಗಿ ನಡೆಸಬೇಕಾದ ತಪಾಸಣೆಗೆಂದು ಆಸ್ಪತ್ರೆಗೆ ಹೋಗಿದ್ದು; ಆಮೇಲೆ ಒಂದು ಸಾರ್ತಿ ರಾಶಿ ಹಿಮ ಸುರಿದಿದ್ದ ಚಳಿಗಾಲದಲ್ಲಿ ಕೆಮ್ಮಾಗಿ ನಿರ್ಲಕ್ಷಿಸಿದ್ದಕ್ಕೆ ಅದು ಜ್ವರಕ್ಕೆ ತಿರುಗಿ ಒಂದು ದಿನ ಆಸ್ಪತ್ರೆಗೆ ಹೋಗಿದ್ದೆ. ಅದು ಬಿಟ್ಟರೆ ಹತ್ತು ವರ್ಷಗಳಲ್ಲಿ ಆಸ್ಪತ್ರೆಯ ಮುಖ ನೋಡಬೇಕಾದ ಅಗತ್ಯವೇ ಬಂದಿಲ್ಲ ನನಗೆ. ಹಾಂ, ಸದಾ ಕಂಪ್ಯೂಟರ್ ಮುಂದೆಯೇ ನನ್ನ ಕೆಲಸವಾಗಿರುವುದರಿಂದ, ಮೊದಲ ಕೆಲವು ವರ್ಷಗಳ ಸಿಆರ್‌ಟಿ ಮಾನಿಟರುಗಳ ಕೃಪೆಯಿಂದಾಗಿ ದೃಷ್ಟಿ ನೆಟ್ಟಗೆ ಮಾಡಿಕೊಳ್ಳುವುದಕ್ಕೆಂದು ಕನ್ನಡಕ ಕಡ್ಡಾಯವಾಗಿಬಿಟ್ಟಿದೆ! ಅದಕ್ಕಂತೂ ಪ್ರತಿ ಎರಡು ವರ್ಷಕ್ಕೊಮ್ಮೆ ರಾಜಾಸೀಟಿನ ಮೇಲೆ ಕೂತು ಆ ಡಾಕ್ಟರು ತಿರುಗಿಸುವ ಲೆನ್ಸುಗಳ ಮೂಲಕ ನೋಡಿ ನನಗೆ ಓದಲು ಬರ್ತದೋ ಇಲ್ಲವೋ ಅಂತ ಅವರ ಮುಂದೆ ಸಾಬೀತುಪಡಿಸಬೇಕಾಗ್ತದೆ. ಆದರೆ ಸಣ್ಣಪುಟ್ಟ ಖಾಯಿಲೆಗಳಿಗೆ ನಾನು ಇಂದೂ ಸಹ ಅಮ್ಮನ ಆ ಮನೆ ಔಷಧಿಗಳನ್ನೇ ಅನುಸರಿಸ್ತೇನೆ, ಖಾರಾಬಾಂಬು, ಹೊಗೆಯಾಡಿಸುವಂತಹ ಆ ಅಭ್ಯಂಜನ ಸ್ನಾನ ಇವೆರಡನ್ನು ಹೊರತುಪಡಿಸಿ! *********

ಹೊತ್ತಾರೆ Read Post »

ಅಂಕಣ ಸಂಗಾತಿ

ಸ್ವಾತ್ಮಗತ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಕೋಟ ಶಿವರಾಮ ಕಾರಂತರು..! ಕೆ.ಶಿವು ಲಕ್ಕಣ್ಣವರ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಷ ಕಾರಂತ-ಲಕ್ಷ್ಮಮ್ಮ ದಂಪತಿಗಳಿಗೆ ೧೦-೧೦-೧೯0೨ರಲ್ಲಿ ಜನಿಸಿದರು. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೇ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿ ಓದಿಗೆ ಮಂಗಳ ಹಾಡಿದರು… ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದರು. ಚಲನಚಿತ್ರ ಮಾಡಿದರು, ಯಕ್ಷಗಾನ ಪ್ರಯೋಗಗಳನ್ನು ನಡೆಸಿದರು, ಹೀಗೆ ನಾನಾ ಕ್ಷೇತ್ರಗಳಲ್ಲಿ ದುಡಿದರು… ಹರಿಜನೋದ್ಧಾರಕ, ಅಸಹಕಾರ ಚಳವಳಿಯಲ್ಲಿ ಪಾಲ್ಗೊಳ್ಳುವಿಕೆ, ಸ್ವಾತಂತ್ರ್ಯ ಚಳವಳಿಗಳಲ್ಲಿ, ನೃತ್ಯ ಸಂಗೀತ ರಂಗಗಳಲ್ಲಿ ನಾನಾ ರೀತಿ ಸೇವೆ ಮಾಡಿದ ಇವರು ಬಾಲವನವನ್ನು ಮಕ್ಕಳಿಗಾಗಿ ನಡೆಸಿದರು. ಬಿಎಂಶ್ರೀ ಸ್ಮಾರಕ ಸಂಸ್ಥೆ, ಕನ್ನಡ ಸಾಹಿತ್ಯ ಪರಿಷತ್ತು ಮೊದಲಾದ ಸಂಸ್ಥೆಗಳನ್ನು ಪ್ರೋತ್ಸಾಹಿಸಿದರು, ಅನೇಕ ಸಂಸ್ಥೆಗಳಲ್ಲಿ ಸದಸ್ಯರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸಿದರು… ೧೯೫೮ರಲ್ಲಿ ಇವರ ಯಕ್ಷಗಾನ ಬಯಲಾಟಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಸ್ವೀಡನ್ ಪ್ರಶಸ್ತಿ ಬಂದಿತು. ಮೂಕಜ್ಜಿಯ ಕನಸುಗಳು ಕಾದಂಬರಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ಕರ್ನಾಟಕ ವಿಶ್ವವಿದ್ಯಾನಿಲಯ ೧೯೬೩ರಲ್ಲಿ ಇವರಿಗೆ ಗೌರವ ಡಾಕ್ಟರೇಟ್ ನೀಡಿದರೆ, ೧೯೬೮ರಲ್ಲಿ ಭಾರತ ಸರ್ಕಾರ ಪದ್ಮಭೂಷಣ ಬಿರುದಿತ್ತು ಗೌರವಿಸಿತು. ೧೯೫೧ರಲ್ಲಿ ಮೈಸೂರಿನಲ್ಲಿ ನಡೆದ ೩೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ನೀಡಿ ಪರಿಷತ್ತು ಸನ್ಮಾನಿಸಿತು. ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತು… ಕಾರಂತರ ಹಾಗೆ ವೈವಿಧ್ಯಮಯ ಕೃತಿಗಳನ್ನು ರಚಿಸಿದವರು ಕನ್ನಡದಲ್ಲಿ ವಿರಳ. ೪೪ ಕಾದಂಬರಿ, ೧೪ ನಾಟಕ, ೩ ಕಥಾಸಂಕಲನ, ೬ ಪ್ರಬಂಧಗಳು, ೯ ಕಲಾ ಗ್ರಂಥಗಳು, ೫ ಆತ್ಮಕಥೆ-ಜೀವನ ಚರಿತ್ರೆಗಳು, ಮಕ್ಕಳ ಸಾಹಿತ್ಯ-೨೫, ಇತ್ಯಾದಿ ೧೫೦ಕ್ಕೂ ಮಿಗಿಲಾದ ಕೃತಿಗಳನ್ನು ರಚಿಸಿರುವ ಕಾರಂತರು ಕನ್ನಡದ ಹಿರಿಮೆ ಸಾರುವ ಹತ್ತಾರು ಗ್ರಂಥಗಳನ್ನು ರಚಿಸಿದ್ದಾರೆ. ವಿಜ್ಞಾನ ಪ್ರಪಂಚ, ಬಾಲ ಪ್ರಪಂಚ, ಚಿತ್ರಮಯಿ ದಕ್ಷಿಣ ಕನ್ನಡ, ಯಕ್ಷಗಾನ ಬಯಲಾಟ, ಸಿರಿಗನ್ನಡ ಅರ್ಥಕೋಶ, ಕಿಸಾಗೌತಮಿ, ಹುಚ್ಚುಮನಸ್ಸಿನ ಹತ್ತು ಮುಖಗಳು, ಮೂಕಜ್ಜಿ ಕನಸುಗಳು ಮೊದಲಾದ ಕೃತಿಗಳು ಕನ್ನಡ ಸಾಹಿತ್ಯದ ಪ್ರಪಂಚದಲ್ಲೇ ಮೈಲಿಗಲ್ಲಿನ ಕೃತಿಗಳಾಗಿವೆ… ತಮ್ಮ ಪ್ರತಿಭೆ ಪ್ರದರ್ಶನ, ಸಾಹಿತ್ಯದ ಕೊಡುಗೆ, ಆದರ್ಶ ವ್ಯಕ್ತಿತ್ವಗಳಿಂದ ಕನ್ನಡದ ಅಪೂರ್ವ ಸಾಹಿತಿಯಾಗಿದ್ದ ಶಿವರಾಮ ಕಾರಂತರು ೯-೧೨-೧೯೯೭ರಲ್ಲಿ ಮಂಗಳೂರಿನಲ್ಲಿ ನಿಧನರಾದರು..! ***********

ಸ್ವಾತ್ಮಗತ Read Post »

You cannot copy content of this page

Scroll to Top