ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ

ಹೊತ್ತಾರೆ

ಅಮ್ಮನೂರಿನ ನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ರಂಗ ತಿಮ್ಮರಿಗೆ ನಿಯಂತ್ರಣದ ಅಥವಾ ಮೇಲ್ವಿಚಾರಣೆಯ ಅವಶ್ಯಕತೆಯೂ ಇರಲಿಲ್ಲ. ಗುಡ್ಡದಂತಿದ್ದ ನಮ್ಮ ಊರಿನಲ್ಲಿ ನೀರಿನ ವ್ಯವಸ್ಥೆಗೆ ಇದ್ದದ್ದು ಎರಡು ಕೈಪಂಪು (ಬೋರ್ ವೆಲ್) ಮತ್ತೊಂದು ಸೇದುವಬಾವಿ.  ನಮ್ಮ ಮನೆ ಗುಡ್ಡದ ತುದಿಯಲ್ಲಿದ್ದ ಮತ್ತು ಊರಿನ ಹಿಂಭಾಗದಲ್ಲಿದ್ದ ಕಡೇ ಮನೆ.  ಬಾವಿ ಮತ್ತು ಬೋರ್ ವೆಲ್ ಗಳು ಊರಿನ ಮುಂದಿನ ಭಾಗದಲ್ಲಿದ್ದವು. ನೀರು ಹೊರುವುದು ಒಂದು ಫಜೀತಿ. ಹಾಗಾಗಿ  ಗಾಡಿಯ ಮೇಲೆ ಬ್ಯಾರೆಲ್ ಇರಿಸಿ ನೀರು ತರುವುದು ನಮ್ಮ ಮನೆಯ ರೂಢಿ. ತಿಮ್ಮ ರಂಗರ ಬಗ್ಗೆ ಮನೆಯಲ್ಲಿ ದೊಡ್ಡವರಿಗೆ ಇದ್ದ ನಂಬಿಕೆಯೆಷ್ಟೆಂದರೆ, ನೀರು ತರಲು ಗಾಡಿ ಕಟ್ಟಬೇಕೆಂದರೆ, ಮೂಕಿ ಎತ್ತಿ ರಂಗ ತಿಮ್ಮರ ಕೊರಳಿಗೆ ನೊಗ ಏರಿಸುವವರೆಗೆ ಮಾತ್ರ ದೊಡ್ಡವರು ಬೇಕಾಗಿತ್ತು. ಎಷ್ಟೋ ಬಾರಿ ನಾನು ನನ್ನ ಜೊತೆಯ ಗೆಳೆಯರೇ ಗಾಡಿ ಏರಿ ನಾವೇ ನೀರು ತರುತ್ತೇವೆಂದು ಮನೆಯವರನ್ನು ಪೀಡಿಸುತ್ತಿದ್ದೆವು. ಗಾಡಿ ಮೇಲೆ ದೊಡ್ಡವರಿಲ್ಲದೇ ನಾನೇ ಗಾಡಿ ಹೊಡೆಯುವುದು ಒಂದು ಹೆಮ್ಮೆ. ಆಗಿನ ಮನಸ್ಥಿತಿಗೆ ಅದೊಂಥರಾ ಸೂಪರ್ ಬೈಕ್ ರೈಡ್ ಅಥವಾ ಫೆರ್ರಾರಿ ಓಡಿಸಿದಷ್ಟು ಖುಷಿ. ರಂಗ ತಿಮ್ಮರ ಮೇಲಿನ ನಂಬುಗೆಯಿಂದ ಮನೆಯವರು ಅದಕ್ಕೆ ಅಡ್ಡಿಮಾಡುತ್ತಲೂ ಇರಲಿಲ್ಲ. ಗಾಡಿಯ ಮೇಲೆ ಯಾರಿಲ್ಲದಿದ್ದರೂ, ಹೋಗಬೇಕಾದ ಜಾಗ ಕಿವಿಗೆ ಬೀಳುವಂತೆ ಹೇಳಿದರೆ ಸಾಕಾಗಿತ್ತು ರಂಗ ತಿಮ್ಮರಿಗೆ.  ಅದರಲ್ಲೂ ಊರಿನ ಒಳಗೆ, ಊರು ಸುತ್ತಮುತ್ತ ಅಂದರೆ, ಈ ಜೋಡಿಗೆ ನಡುಮನೆಯಿಂದ ಅಂಗಳಕ್ಕೆ ಬಂದಷ್ಟೇ ಸಲೀಸು. ಆದರೆ ಯಾವಾಗಲೂ ಒಂದು ಪರ್ಮನೆಂಟ್ ವಾರ್ನಿಂಗ್ ಇರುತ್ತಿತ್ತು. ಕಲ್ಹಳ್ಳಿ ಎತ್ತನ್ನ ಕೆಣಕೋ ಹಾಗಿಲ್ಲ,  ಅಂದರೆ  ತಿಮ್ಮನನ್ನು ಮುಟ್ಟುವ ಹಾಗೂ ಇಲ್ಲ. ಕಟ್ಟೆಅರಸಮ್ಮನ ಗುಡಿ ಯಾವಾಗಲೋ ಅಪರೂಪಕ್ಕೆ ಹೋಗುವಂತಹ ಜಾಗ. ಆವತ್ತು ಹೊರಟಿದ್ದವರಲ್ಲಿ ತಾತನಿಗಷ್ಟೇ ಗೊತ್ತಿದ್ದು. ತಾತ ಗಾಡಿ ಮುಂದೆ ಕುಳಿತು ಹುಂ ನಡಿರಿ ಎಂದಿದ್ದೇ. ರಂಗ ತಿಮ್ಮರ ಕೊರಳಿನ ಗೆಜ್ಜೆ ಮತ್ತು ಗೊರಸಿಗೆ ಕಟ್ಟಿದ ಹಲ್ಲೆಯ ಟುಕ್ಕು ಬುಕ್ಕು ಸದ್ದು ಶುರುವಾಯ್ತು. ಮನೆಯಿಂದ ಎಡಕ್ಕೆ ತಿರುಗುವಂತೆ ತಾತ ಸೂಚಿಸಿದಂತೆ ರಂಗ ತಿಮ್ಮರ ಜೋಡಿ ತೋಟದ ಹಾದಿ ಹಿಡಿಯಿತು. ಆ ದಾರಿಯು ತೋಟದ ನಡುವೆ ಹಾದು ದೇವಮ್ಮನ ಗುಡಿ ದಾಟಿ ಪಕ್ಕದೂರಿನ ಅಡ್ಡರಸ್ತೆಯ ಮೂಲಕ ಬೋರ್ಡ್ ಗಲ್ಲಿನ ಹತ್ತಿರ ಬಲಕ್ಕೆ ತಿರುಗಿ ರಾಜ್ಯ ಹೆದ್ದಾರಿಯಲ್ಲಿ ಮುಂದೆ ಸಾಗಿ ಡ್ಯಾಮ್ ಮುಂದಿರುವ ಸೇತುವೆಯ ಮೂಲಕ ಹೊಳೆ ದಾಟಿ ಅದರಾಚಿನ ತಾಲ್ಲೂಕಿನಲ್ಲಿರುವ ಗುಡಿ ತಲುಪಬೇಕಾಗಿತ್ತು.  ಮನೆಯಿಂದ ಹೊರಟಾಗ ತಾತ ಕೊಟ್ಟಿದ್ದು ಒಂದೇ ಸೂಚನೆ. ರಾತ್ರಿ ಹೊತ್ತಾಗಿದ್ದರಿಂದ ರಂಗ ತಿಮ್ಮರು ಬೋರ್ಡ್ ಗಲ್ಲಿನ ಬಳಿಯಿರುವ ಭತ್ತದ ಗಿರಣಿ ಇರಲಾರದು ಎಂದು ಗೊತ್ತುಮಾಡಿಕೊಂಡು ತಾವೇ ಬಲಕ್ಕೆ ತಿರುಗಿ ಮುಂದೆ ಸಾಗತೊಡಗಿದವು.  ಅಪರೂಪಕ್ಕೆ ಬಸ್ಸು, ಲಾರಿಗಳು ಹಾದು ಹೋಗುತ್ತಿದ್ದವು.  ತಾತನಿಗೆ ಮನೆಯಿಂದ ಹೊರಟು ತೋಟ ದಾಟುವಷ್ಟರಲ್ಲಿ ನಿದ್ರೆ ಹತ್ತಿತ್ತು. ರಂಗ ತಿಮ್ಮರು ಹತ್ತು ಕಿಲೋಮೀಟರ್ ನಲ್ಲಿ  ಹೊಳೆ ದಡದ ಊರಿನಲ್ಲಿ ಇದ್ದ ನಮ್ಮ ನೆಂಟರ ಮನೆಯ ಅಡ್ಡದಾರಿಯಲ್ಲಿ ಎಡಕ್ಕೆ ತಿರುಗಿದವು. ಮುತ್ತಜ್ಜಿಗೆ  ಹೆದ್ದಾರಿಯ ವಾಹನಗಳ ತೀಕ್ಷ್ಣ ಬೆಳಕಿನಿಂದಾಗಿ  ನಿದ್ರೆ ಹತ್ತಿರಲಿಲ್ಲ… ನಾನು ರಂಗ ತಿಮ್ಮರ ಕೊರಳಿನ ಗೆಜ್ಜೆಯನ್ನೇ ಆಲಿಸುತ್ತಾ ಇನ್ನೇನು ತೂಕಡಿಕೆಯ ಹೊಸ್ತಿಲಲ್ಲಿದ್ದೆ.  “ಏಯ್ ತಮ್ಮಯ್ಯ ಎಡಕ್ಕೆ ತಿರುಗ್ತಾವೆ ಎತ್ತು ನೋಡೋ. ಆಗಲೇ ನಿದ್ದೆ ಇವ್ನಿಗೆ” ಅಂದರು ಮುತ್ತಜ್ಜಿ.   ತಾತ ತಡಿಕೆಗೆ ಒರಗಿಕೊಂಡಿರುವುದು ಒಂಚೂರೂ ಅಲುಗದಂತೆ  ಹಾಗೆಯೇ ಹಗ್ಗದಲ್ಲೇ ಸೂಚಿಸಿ ಮತ್ತೆ ರಾಜ್ಯ ಹೆದ್ದಾರಿಯ ಕಡೆ ದಾರಿ ಬದಲಿಸಿದರು.  ಹೀಗೆ, ರಂಗ ತಿಮ್ಮರು ತಮಗೆ ನೆನಪಿಲ್ಲದ ಜಾಗಕ್ಕೆ ಲಾಟೀನಿನ ಬೆಳಕಿನಲ್ಲಿ ಗಾಡಿ ಎಳೆಯುತ್ತಾ ಕವಲುದಾರಿಯಲ್ಲಿ ಎಡಕ್ಕೋ ಬಲಕ್ಕೋ ಅನ್ನುವ ಅನುಮಾನದಿಂದ ತಾತನ ಸೂಚನೆ ಕಾಯುತ್ತಾ ಒಂದೆರಡು ಕಡೆ ನಿಂತು, ಸಾಗಿ, ಬೆಳಗಿನ ಜಾವಕ್ಕೆ ಗುಡಿ ತಲುಪಿದೆವು. ತಾತನೂ  ಸೇರಿ ಗಾಡಿಯಲ್ಲಿದ್ದ ಎಲ್ಲರೂ ಮೂರ್ನಾಲ್ಕು ಗಂಟೆ ನಿದ್ರಿಸಿದ್ದೆವು.  ಗುಡಿಗೆ ಬಂದ ನಂತರ ಮುತ್ತಜ್ಜಿಯ ಹರಕೆಯನ್ನು ಸಾಂಗವಾಗಿ ಮುಗಿಸುವವರೆಗೂ, ಗಾಡಿಯ ಹಿಂಬದಿಯಲ್ಲಿದ್ದ ಹುಲ್ಲು ತಿನ್ನುತ್ತಾ  ಸ್ವಲ್ಪ ಹೊತ್ತು ನಿಂತು, ನಂತರ ಮಲಗಿ ದಣಿವಾರಿಸಿಕೊಂಡ ರಂಗತಿಮ್ಮರು ಮಧ್ಯಾಹ್ನದ ಹೊತ್ತಿಗೆ ಮನೆ ಕಡೆ ಹೊರಡಲು ಸಿದ್ಧವಾಗಿದ್ದವು. ವಾಪಸ್ಸು ಬರುವಾಗ “ತಾತ, ನಾನ್ ಗಾಡಿ ಹೊಡಿತಿನಿ” ಅಂದಿದ್ದಕ್ಕೆ, ಸರಿ ಅಂತ್ಹೇಳಿ ಅಡ್ಡತಡಿಕೆ ಮೂಕಿಯ ಮಧ್ಯೆ  ನನ್ನ ಕಾಲಿಳಿಸಿ, ನನ್ನ ಹಿಂದೆ ತಾತ ಕೂತರು. “ಮುಟ್ಟೋದು ಗದರೋದು ಮಾಡಬೇಡ, ದಾರಿ ಗೊತ್ತೈತೆ ಅವಕ್ಕೆ” ಅಂದು ತಾತ ಮುತ್ತಜ್ಜಿಯ ಮತ್ತು ಮನೆಯವರ ಜೊತೆ ಮಾತಿಗೆ ಕೂತರು. ಕತ್ತಲಾಗುವ ಹೊತ್ತಿಗೆ ಪಿಕ್ನಿಕ್ ಮುಗಿಸಿ ಮನೆ ತಲುಪಿದ್ದೆವು. ರಂಗ ತಿಮ್ಮ ಎಳೆಯುವ ಗಾಡಿಯಲ್ಲಿ ಸಾರಥಿ ಯಾರೇ ಆಗಿದ್ದರೂ ಅದು ನೆಪಕ್ಕೆ ಮಾತ್ರ.  ತೀರಾ ಇಳಿಜಾರು… ಹೊಲಗದ್ದೆಯ ಅಂಕುಡೊಂಕಾದ ದಾರಿಗಳು, ಗಾಡಿಜಾಡು ಇಲ್ಲದ ಹೊಲದ ಬದುಗಳಲ್ಲಿ ಗಾಡಿ ಹೊಡೆಯಬೇಕಾದಾಗ ಮಾತ್ರ  ಗಾಡಿಯ ಸುರಕ್ಷತೆಗಾಗಿ ಅನುಭವ ಇರುವವರ ಅಗತ್ಯವಿರುತ್ತಿತ್ತು. ಒಂದು ಗಾಡಿಗೆ ಗರಿಷ್ಟಮಟ್ಟಕ್ಕೆ ತುಂಬಬಹುದಾದ ಹೊರೆಯನ್ನು ನಿರಾಯಾಸವಾಗಿ ಎಳೆಯುತ್ತಿದ್ದ ರಂಗ ತಿಮ್ಮರಿಗೆ ತುಂಬಾ ಭಾರ ಅನಿಸಬಹುದಾದ ಹೊರೆ ಹೊರಿಸಲು ಮುಂದಾದರೆ, ಗಾಡಿ ಮುರಿದುಬೀಳುತ್ತಿತ್ತೇ ಹೊರತು, ಅವುಗಳಿಗೇನೂ ಕಷ್ಟವಾಗುತ್ತಿರಲಿಲ್ಲ. ಹೊಲಗದ್ದೆ ಉಳುಮೆಯಿಂದ ಹಿಡಿದು, ಯಾವುದೇ ಕೃಷಿ ಕೆಲಸವೂ ರಂಗ ತಿಮ್ಮರಷ್ಟು ಬೇಗನೆ ಅಕ್ಕ ಪಕ್ಕದ ಮನೆಯವರ ಎತ್ತುಗಳಿಂದ ಸಾಧ್ಯವಾಗುತ್ತಿರಲಿಲ್ಲ. ಹೊತ್ತು ಇಳಿಯುತ್ತಿದೆ ಬೇಗ ಕೆಲಸ ಮಾಡಬೇಕು ಅಂದರೆ ಅತಿ ಬಿರುಸಾಗಿಯೂ, ಸೂಕ್ಷ್ಮವಾದ ಕೆಲಸಗಳಿದ್ದರೆ ಅತಿ ಜಾಗರೂಕವಾಗಿಯೂ ನಡೆದಾಡುವ ಕೌಶಲ್ಯ ರಂಗ ತಿಮ್ಮರಿಬ್ಬರಿಗೂ ಮೈಗೂಡಿತ್ತು. ಜೊತೆಗೆ ಎಲ್ಲ ಎತ್ತುಗಳಂತೆ ಎಡಗೋಲು ಅಥವಾ ಬಲಗೋಲು ಎಂಬ ಶಿಷ್ಟಾಚಾರವೇನೂ ಇರಲಿಲ್ಲ.  ರೂಢಿ ಎನ್ನುವಂತೆ  ರಂಗ ಬಲಕ್ಕಿರುತ್ತಿದ್ದ ತಿಮ್ಮ  ಎಡಕ್ಕಿರುತ್ತಿದ್ದ. ಆದರೆ ಅವರೆಂದೂ ಬಲಗೋಲು, ಎಡಗೋಲಿಗೆ ಬದ್ಧರಾಗಿರಲಿಲ್ಲ. ಅವರ ಜಾಗ ಅದಲು ಬದಲಾದರೂ ಅವರ ಕೌಶಲ್ಯತೆ ಮತ್ತು ಸಾಮರ್ಥ್ಯ ಕಿಂಚಿತ್ತೂ ಬದಲಾಗುತ್ತಿರಲಿಲ್ಲ. ಕೆಲವೊಮ್ಮೆ  ಅಕ್ಕಪಕ್ಕದ ಮನೆಯವರು ಗದ್ದೆನಾಟಿ ಮಾಡುವ ಸಮಯದಲ್ಲಿ ಮಂಡಿಯುದ್ದ ಹೂತುಕೊಳ್ಳುವ ಗದ್ದೆಗಳಿಗೆ ಸಾಮಾನ್ಯ ಎತ್ತುಗಳಿಂದ ಉಳಲಾಗದಿದ್ದಾಗ, ಮಳೆ ಗಾಳಿಗೆ ಮರ ಬಿದ್ದಾಗ ಎಳೆದುಹಾಕಲು, ಯಾವುದಾದರೂ ಬಂಡೆ ಸರಿಸಬೇಕು ಅಂದಾಗ, ಇಂಥಹ ಎಷ್ಟೋಸಂದರ್ಭಗಳಲ್ಲಿ  ಒಂದ್ಹೊತ್ತು ಎತ್ತು ಕೊಡಿ ಎಂದು ರಂಗ ತಿಮ್ಮನನ್ನು ಎರವಲು ಕೇಳುತ್ತಿದ್ದರು. ಸರಿ ಹಿಡ್ಕೊಂಡ್ ಹೋಗಿ ಅನ್ನೋ ಹಾಗಿಲ್ಲ.  ರಂಗನದ್ದೇನೋ ಒಂದು ಮಟ್ಟಿಗೆ ಸರಿ. ತಿಮ್ಮನೆಂದರೆ ನಮ್ಮ ಮನೆಯ ವಿಐಪಿ.  ಮನೆಯವರಲ್ಲದೇ ಬೇರೆ ಯಾರಾದರೂ ಬಂದರೆಂದರೆ ಗದ್ದೆ ಉಳುಮೆಯಿರಲಿ, ಅವನನ್ನು ಗದ್ದೆಯ ತನಕ ಹಿಡಿದುಕೊಳ್ಳೋ ಧೈರ್ಯವನ್ನೂ ಮಾಡುತ್ತಿರಲಿಲ್ಲ. ತಾತನ ಪರಿಚಯದವರಾಗಿದ್ದರೆ ಅಥವಾ ಮನೆಯವರೊಬ್ಬರು ಜೊತೆಯಲ್ಲಿದ್ದರೆ ಪರವಾಗಿರಲಿಲ್ಲ. ಹೆಚ್ಚಿನ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆಯಂತೆ ತಾತನೇ ಖುದ್ದಾಗಿ ಹೋಗಿ, ನೊಗ ಹೂಡಿ ಬರುವುದು, ಕೆಲಸ ಮುಗಿದ ನಂತರ ತಾನೇ ಹಿಡಿದು ಮನೆಗೆ ತರುವುದು ಮಾಡುತ್ತಿದ್ದರು. ತಿಮ್ಮನ ಈ ವಿಐಪಿ ಗುಣ, ಯಾರು ಯಾವಾಗ ಬೇಕಾದರೂ ಇವುಗಳನ್ನು ಎರವಲು ಪಡೆಯಬಹುದು ಎನ್ನುವುದಕ್ಕೆ ಕಡಿವಾಣ ಹಾಕಿದಂತಿತ್ತು. ಆಲೆಮನೆಯದ್ದೇ ಒಂದು ವಿಶಿಷ್ಟತೆ. ಆಲೆಮನೆಗೆ ಹೊಂದಿಕೊಂಡ ಕತೆಗಳೆಲ್ಲ ರೋಚಕವಾಗಿರುತ್ತಿದ್ದವು. ಕಬ್ಬು ಕಡಿಯಲು ಆರೇಳು ಆಳಿದ್ದರೂ, ದಿನವಿಡೀ ಗಾಣ ತಿರುಗಬೇಕಾಗಿದ್ದರೂ ಯಾವುದೇ ಅಡ್ಡಿಯಿಲ್ಲದೇ ಗಾಣ ತಿರುಗಿಸುತ್ತಾ, ಒಂದು ಆಲೆಮನೆಯ ಜವಾಬ್ದಾರಿಯನ್ನು ಸಲೀಸಾಗಿ ನಿಭಾಯಿಸುವಂತಹವರು ಈ ರಂಗ ತಿಮ್ಮರು. ಕೆಲವೊಮ್ಮೆ ಗಾಣದಲ್ಲಿ ಅರೆಯಲು ಕಬ್ಬು ಇಲ್ಲದೇ, ಆಳುಗಳಿಗೆ ಅವಸರ ಮಾಡಿ ಜ್ವರ ಬರಿಸಿದ್ದಂತ ಉದಾಹರಣೆಗಳಿದ್ದವಂತೆ. ಆದರೆ ಆಲೆಮನೆ ಕತೆಗಳೆಲ್ಲ ನಾನು ಕೇಳಿದ್ದಷ್ಟೇ… ಎರಡು ವರ್ಷ  ಕೊಪ್ಪರಿಕೆ ಕಟ್ಟಿ ಆಲೆಮನೆ ಹೂಡಿದ್ದ ಸ್ವಲ್ಪವೇ ನೆನಪಿನ ಹೊರತಾಗಿ, ನನ್ನ ಬುದ್ಧಿ ಬೆಳೆಯುವ ಹೊತ್ತಿಗೆ ಆಲೆಮನೆ ಹೂಡುವ ಅಭ್ಯಾಸ ನಿಂತು, ಗಾಣ, ಕೊಪ್ಪರಿಕೆ, ಅಚ್ಚಿನಮಣೆಗಳೆಲ್ಲ ಬರೀ ಬಾಡಿಗೆಗೆ ಕೊಡುವಷ್ಟರಮಟ್ಟಿಗೆ ಬಂದು ನಿಂತಿತ್ತು. ರಂಗ ತಿಮ್ಮರಿಗೆ ಪೇಟೆಯ ಸಂತೆಗೆ ಹೋಗುವುದೊಂದು ನಿಯಮಿತವಾಗಿದ್ದ ಕೆಲಸ.  ಮನೆಯಲ್ಲಿದ್ದ ಭತ್ತ, ರಾಗಿ, ಬೆಲ್ಲ, ಎಳನೀರು, ತೆಂಗಿನ ಕಾಯಿ, ಅಡಿಕೆ ಕೊಯ್ಲಿನ ಸಮಯದಲ್ಲಿ ಕೊಯ್ಲುಮಾಡಿ ಸುಲಿದು ಬೇಯಿಸಿ ಒಣಗಿಸಿಟ್ಟಿದ್ದ ಅಡಿಕೆ, ಒಣಮೆಣಸಿನಕಾಯಿ ಇವುಗಳನ್ನೆಲ್ಲ ಮನೆಯಿಂದ ಸಂತೆಗೆ ಸಾಗಿಸುವುದು ಮತ್ತೆ ಮನೆಯ ನಿತ್ಯಬಳಕೆಯ ವಸ್ತುಗಳನ್ನು ಪೇಟೆಯ ದಿನಸಿ ಅಂಗಡಿಯಿಂದ ತುಂಬಿಸಿಕೊಂಡು ಬರುವುದು, ತಿಂಗಳಿನಲ್ಲಿ ಎರಡು ಮಂಗಳವಾರಗಳು ಖಾಯಂ ಆಗಿರುತ್ತಿತ್ತು. ಅಷ್ಟೇ ಅಲ್ಲದೇ ಹಬ್ಬದ ದಿನಗಳ ಹಿಂದಿನ ವಾರ ಹೆಚ್ಚುವರಿ ಸಂತೆಯೂ ಇರುತ್ತಿತ್ತು.  ನಮ್ಮ ಮನೆಯ ಸರಕು ಸಾಗಿಸುವ ಕೆಲಸವಿಲ್ಲದಿದ್ದರೂ, ಊರಿನ ಬೇರೆ ಮನೆಯವರ  ಮಾರಾಟದ ಸರಕುಗಳನ್ನು ಸಾಗಿಸುವುದು ಮತ್ತೆ ಪೇಟೆಯಿಂದ ಅವರು ಖರೀದಿಸುವ ದೊಡ್ಡ ಗಾತ್ರದ ವಸ್ತುಗಳನ್ನು ಮನೆಗೆ ಸಾಗಿಸುವ ಸಲುವಾಗಿ ಪ್ರತಿ ಮಂಗಳವಾರವೂ ಗಾಡಿ ಹೂಡುತ್ತಿದ್ದರು.  ಪೇಟೆಯ ಪ್ರಯಾಣ ರಂಗ ತಿಮ್ಮರಿಗೆ ಮಕ್ಕಳು ಪ್ರತಿದಿನ ಶಾಲೆಗೆ ಹೋಗುತ್ತಿದ್ದಷ್ಟೇ ಸಾಮಾನ್ಯವಾಗಿತ್ತು. ಬಹುಶಃ ಗಾಡಿಗೆ ದವಸವನ್ನೆಲ್ಲ ತುಂಬಿ ಬೆಳಿಗ್ಗೆ ಬಸ್ಸಿನಲ್ಲಿ ಹೋಗಿದ್ದರೂ ಮಂಡಿ ಎದುರು  ಗಾಡಿ ನಿಂತಿರುತ್ತಿತ್ತು ಎಂದು ಅನುಮಾನವಿಲ್ಲದೇ ಹೇಳಬಹುದು. ಆದರೆ ಕಳ್ಳರು ದವಸವನ್ನು ಲಪಟಾಯಿಸಿಬಿಡಬಹುದು ಎಂದೋ ಏನೋ, ತಾತನಾಗಲೀ ಅಥವಾ ಮಾವಂದಿರಲ್ಲಿ ಒಬ್ಬರಾಗಲೀ ಊರಿನ ಬೇರೊಬ್ಬರ ಜೊತೆಯಲ್ಲಿ ಗಾಡಿ ಏರುತ್ತಿದ್ದರು.  ಸಂತೆಗೆ ಗಾಡಿ ಹೂಡುವ ಪ್ರತಿ ದಿನವೂ  ನಾನು ಗಾಡಿಯಲ್ಲಿ ಸಂತೆಗೆ ಹೋಗಬೇಕು ಅಂತ ಮುತ್ತಜ್ಜಿಯಿಂದ ಹಿಡಿದು ಮನೆಯ ಎಲ್ಲರನ್ನೂ ಗೋಳು ಹೊಯ್ದುಕೊಳ್ಳುತ್ತಿದ್ದೆ. ಆದರೆ ನಾನು ಅತ್ತು ಸುಸ್ತಾಗಿ ಮಲಗೋದಷ್ಟೇ ಆಗ್ತಾ ಇದ್ದಿದ್ದು. ಬೆಳಗ್ಗೆ  ನಾನು ಏಳುವಷ್ಟರಲ್ಲಿ ಗಾಡಿ ಸಂತೆ ಸೇರಿರುತ್ತಿತ್ತು. ಒಂದು ದಿನವೂ  ರಂಗ ತಿಮ್ಮರ ಜೊತೆ ಸಂತೆ ಪ್ರಯಾಣ ಮಾಡಲಾಗಲಿಲ್ಲ.  ಜೊತೆಗೆ ಅದು ಮಂಗಳವಾರದ ಸಂತೆ… ಶಾಲೆಗೆ ಚಕ್ಕರ್ ಹೊಡಿಯಬೇಕಿತ್ತು.  ಹಾಗಾಗಿ ರಂಗ ತಿಮ್ಮರ ಪೇಟೆ ಬೀದಿಯ ಸಲೀಸು ಪ್ರಯಾಣ ನಾನು ಬೇರೆಯವರಿಂದ ಕೇಳಿರುವಂತಹದ್ದು.

ಹೊತ್ತಾರೆ Read Post »

ಅಂಕಣ ಸಂಗಾತಿ

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಡಾ.ಸಣ್ಣರಾಮ ಕಳೆದ ಸಂಚಿಕೆಯಿಂದ…       ಅಕ್ಕ ಕೂಡಲ ಸಂಗಮವನ್ನು ಪ್ರವೇಶಿಸುತ್ತಲೇ ಮತ್ತೊಂದು ಅಗ್ನಿ ಪರೀಕ್ಷೆ ಅವಳಿಗೆ ಕಾದಿತ್ತು. ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಅಲ್ಲಮ ಪ್ರಭು ಯಾರೇ ಬರಲಿ ಪರೀಕ್ಷಿಸದೇ ಅನುಮತಿಯನ್ನು ಕೊಡುತ್ತಿರಲಿಲ್ಲ. ಶರಣೆ ಅಕ್ಕಮಹಾದೇವಿಯನ್ನು ಕಂಡು ದಿಗ್ಭ್ರಮೆಗೊಂಡ ಅಲ್ಲಮ ಅವಳನ್ನು ಪರೀಕ್ಷಿಸಲು ಮುಂದಾಗಿ                              “ಸತಿ ನೀನು ಇತ್ತಲೇಕೆ ಬಂದೆಯವ್ವಾ ಸತಿಯೆಂದರೆ ಮುನಿವರು   ನಮ್ಮ ಶರಣರು ನಿನ್ನ ಪತಿಯ ಕುರುಹು ಹೇಳಿದರೆ ಬಂದು ಕುಳ್ಳಿರು     ಇಲ್ಲದಿದ್ದರೆ ತೊಲಗು ತಾಯಿ” ಅಕ್ಕ; “ಹರನೇ ನೀನೆನಗೆ ಗಂಡನಾಗಬೇಕೆಂದು ಅನಂತಕಾಲ ತಪಿಸಿದ್ದೆ ನೋಡಾ” ಪ್ರಭು: ಕೇಶಿಯೆಂಬ ಸೀರೆಯು ಲಿಂಗಕ್ಕೆ ಮರೆಯಾಯಿತ್ತು. ಅಪಮಾನವೆಂತು ಹರಿಯಿತ್ತು. ಅಕ್ಕ: ಕಾಯಕರ್ರನೆ ಕಂದಿದರೇನಯ್ಯ ಕಾಯಮಿರ್ರನೆ ಮಿಂಚಿದರೇನಯ್ಯ ಅಂತರಂಗ ಶುದ್ಧವಾದ ಬಳಿಕ ಚನ್ನಮಲ್ಲಿಕಾರ್ಜುನ ಲಿಂಗವು ಒಲಿದ ಕಾಯ ಹೇಗಿದ್ದರೇನಾಯ್ಯ. ಪ್ರಭು: ಭಾವ ಶುದ್ಧವಾದಲ್ಲಿ ಸೀರೆಯನುಳಿದು ಕೂದಲು ಮರೆ ಮಾಡುವುದುದೇತಕ್ಕೆ. ಅಕ್ಕ: ಕಾಮನ ಮುದ್ರೆಯನು ಕಂಡು ನಿಮಗೆ ನೋವಾದೀತೆಂದು  ಆಭಾವದಿಂದ ಮುಚ್ಚಿದೆ. ಕಾಯದೊಳು ಅಕಾಯವಾಯಿತ್ತು. ಜೀವದೊಳಗೆ ನಿರ್ಜೀವಾಯಿತ್ತು. ಭಾವದೊಳೆ ನಿರ್ಭಾವವಾಗಿತ್ತು.   ಅಕ್ಕನ ದಿಟ್ಟ ಸ್ಪಷ್ಟ ಅಂತರಂಗ ಬಹಿರಂಗ ಶುದ್ಧಿಯ ಉತ್ತರವನ್ನು ಕೇಳಿದ ಶರಣ ಸಂಕುಲ ಮೂಕವಿಸ್ಮಿತವಾಗುತ್ತದೆ. ಅಲ್ಲಮಪ್ರಭು “ಅಂತರಂಗದ ಪ್ರಭೆ ಬಹಿರಂಗವೆಲ್ಲಾ ತಾನೆಯಾಗಿ ಗುಹೇಶ್ವರ ಲಿಂಗದಲ್ಲಿ ಸಂದಿಲ್ಲದಪ್ಪ ಮಹಾದೇವಿಯಕ್ಕನ ಶ್ರೀಪಾದಕ್ಕೆ ನಮೋ ನಮೋ” ಎಂದರು. ಆ ಕ್ಷಣವೇ ಶರಣರೆಲ್ಲ ತಲೆಬಾಗಿ ಶರಣೊ ಎನ್ನುವರು.     ಅಕ್ಕನ ವ್ಯಕ್ತಿತ್ವ, ವಿಚಾರಧಾರೆಯೇ ಅಂತದ್ದು. ಸ್ತ್ರೀ ಸ್ವಾತಂತ್ರ್ಯವನ್ನು ಮೆರೆದ          ಅಂತೆಯೇ ಬದುಕಿದ ಅಕ್ಕ ಸ್ತ್ರೀ ಸ್ವಾತಂತ್ರ್ಯ ಅದಾಗೆಯೇ ಲಭಿಸುವುದಿಲ್ಲ. ಆತ್ಮಬಲದಿಂದ ನಾವಾಗಿಯೇ ಪಡೆದುಕೊಳ್ಳಬೇಕು, ಸಾಧ್ಯವಾದರೆ ಒತ್ತಾಯದಿಂದ ಕಸಿದುಕೊಳ್ಳಬೇಕೆಂಬ ಧೋರಣೆಯ ದಿಟ್ಟ ಮಹಿಳೆ. ಪಂಚೇಂದ್ರಿಯಗಳೊಳಗೆ ಒಂದಕ್ಕೆ ಪ್ರಿಯನಾದಡೆ ಸಾಲದೆ? ಸಪ್ತ ವ್ಯಸನಂಗಳೊಳಗೆ ಒಂದಕ್ಕೆ ಪ್ರಿಯನಾದಡೆ ಸಾಲದೆ? ರತ್ನದ ಸಂಕಲೆಯಾದಡೇನು ಬಂಧನ ಬಿಡುವುದೇ ಚನ್ನಮಲ್ಲಿಕಾಜರ್ುನ…….   ಸಂಸಾರವೆಂಬುದು ರತ್ನದ ಸಂಕಲೆ ಇದ್ದಹಾಗೆ, ಆಕರ್ಷಣೀಯವಾದ ಸಂಸಾರ ಸುಖದೊಳಗೆ ಗಂಡನ ಕಟ್ಟುಕಟ್ಟಲೆಯೊಳಗೆ ಅವನಿಚ್ಛೆಯಂತೆ ಬದುಕುವುದು ಅದೊಂದು ಜೀವನವೇ? ಶತಶತಮಾನಗಳ ಪುರುಷನ ದೌರ್ಜನ್ಯವನ್ನು ಪ್ರಶ್ನಿಸಿ ದಿಕ್ಕರಿಸಿದ ಅಕ್ಕ ಬಿಡುಗಡೆಯ ಬಯಸಿದ ಸ್ವತಂತ್ರ ಪ್ರೇಮಿ. ಸಂಸಾರ ಬಂಧನಕ್ಕೆ ಕಾರಣವಾಗುವ ಪಂಚೇಂದ್ರಿಯ ಮತ್ತು ಸಪ್ತ ವ್ಯಸನಗಳ ನಿಯಂತ್ರಿಸಿಕೊಂಡರೆ ಈ ರತ್ನದ ಸಂಕಲೆಯಿಂದ ಬಿಡುಗಡೆಯನ್ನು ಪಡೆಯಬಹುದು. ಮುಂದುವರೆದು ಅಕ್ಕ ಹೇಳುವುದು,  “ಈ ಸಾವಕೆಡುವ ಗಂಡರನೊಯ್ದು ಒಲೆಯೊಳಗೆ ಇಕ್ಕು ತಾಯಿ”-ಎನ್ನುತ್ತಾಳೆ. ಇದು ಅಕ್ಕನ ಉಗ್ರವಾದ ಪ್ರತಿಭಟನೆ. ಆಧುನಿಕ ಮಹಿಳಾ ವಾದಿಯರನ್ನು  ಬೆಚ್ಚಿಬೀಳಿಸುವ ಮಾತುಗಳಿವು.

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು Read Post »

ಅಂಕಣ ಸಂಗಾತಿ

ಹೊತ್ತಾರೆ

ಅಮ್ಮನೂರಿನನೆನಪುಗಳು ಅಮೇರಿಕಾದಿಂದ ಅಶ್ವಥ್ ಬರೆಯುತ್ತಾರೆ ಅಶ್ವಥ್ ಹೋರಿ ಕಣ್ಣು ಮೊನ್ನೆ ರಾತ್ರಿ ಊಟ ಮುಗಿಸಿ ಮಲಗಿದ ನಿದ್ರೆ ಹತ್ತಿದ ಸ್ವಲ್ಪ ಹೊತ್ತಿನಲ್ಲೇ ಯಾಕೋ ಇದ್ದಕ್ಕಿದ್ದ ಹಾಗೆ ಕಲ್ಹಳ್ಳಿ ಎತ್ತು ಎದುರಲ್ಲಿ ಬಂದು ನಿಂತಂತೆ ಇತ್ತು!  ಸುತ್ತ ನೋಡಿದೆ, ಯಾರಿದಾರೆ ಜೊತೆಯಲ್ಲಿ,  ಬರೀ ಕಲ್ಹಳ್ಳಿ ಎತ್ತು… ಮನೆ ಎತ್ತು ಯಾವ್ ಕಡೆ ಹೋಯ್ತು? ಮತ್ತೆ ಇನ್ನೊಂದು ಸಲ ಪರಿಶೀಲಿಸಲೇ, ಎಲ್ಲಿದಿವಿ, ಕಲ್ಹಳ್ಳಿ ಎತ್ತು ಮತ್ತು ನಾನು ಇಬ್ಬರೇ. ಯಾರಿಗೆ ಹೇಳೋದು ಈಗ, ಗಾಬರಿಯಾಯ್ತು. ಆ ಗಾಬರಿಗೆ ಕಾರಣ,  ಮನೆ ಎತ್ತು ಜೊತೆಯಲ್ಲಿದ್ದರೆ ಮಾತ್ರ  ಕಲ್ಹಳ್ಳಿ ಎತ್ತಿನ  ಹತ್ತು ಇಪ್ಪತ್ತು ಅಡಿ ದೂರದಲ್ಲಿ ನಾನು ಸುಳಿಯಲು ಧೈರ್ಯಮಾಡುತ್ತಿದ್ದುದು.  ಆದರೆ ಇವತ್ತು  ಎದುರೇ ನಿಂತುಬಿಟ್ಟಿದಾನೆ, ದುರುಗುಟ್ಟು ನೋಡ್ತಾ ಇರುವ ಹಾಗಿದೆ ಬೇರೆ. ಮತ್ತೆ ಸ್ವತಃ ಧೈರ್ಯ ತಂದುಕೊಳ್ಳೋಕೆ ಮನೆಯ ಬೇರೆ ಯಾರೂ ಜೊತೆಯಲ್ಲಿ ಇಲ್ಲ. ಈ ಮನೆ ಎತ್ತು ಮತ್ತು ಕಲ್ಹಳ್ಳಿ ಎತ್ತುಗಳೆರಡೂ ತಾವು ಬದುಕಿದ ಬಹುತೇಕ ದಿನಗಳಲ್ಲಿ ಜೊತೆಯಲ್ಲೇ ಇದ್ದವು. ಬಹುಶಃ ಅವೆರಡಕ್ಕೂ ವಯಸ್ಸಲ್ಲಿ ಎರಡು ಅಥವಾ ಮೂರು ವರ್ಷಗಳ ಅಂತರವಿದ್ದಿರಬಹುದು. ಎಳೆಗರುವಿನಿಂದ ಮುದಿಯಾಗುವವರೆಗೂ ಜೊತೆಯಾಗಿಯೇ ಬೆಳೆದವು, ಜೊತೆಯಾಗಿಯೇ ದುಡಿದವು. ಮನೆಯಲ್ಲೇ ಹುಟ್ಟಿದ ಕರುವಿಗೆ ಜೋಡಿಮಾಡಲು ಕಲ್ಹಳ್ಳಿಯಿಂದ ಖರೀದಿಸಿ ತಂದಿದ್ದ ಕರು ಕಲ್ಹಳ್ಳಿ ಎತ್ತಾಗಿ ಬೆಳೆಯಿತು. ನಾನು ಆರೇಳು ವರ್ಷದವನಿದ್ದಾಗ ಇವೆರಡೂ ಆಗತಾನೇ ತಮ್ಮ ಇಳಿವಯಸ್ಸಿನ ಕಡೆ ಮುಖಮಾಡಿದ್ದರಿಂದ ಅವುಗಳ ಹೆಸರು ಹೋರಿ ಎನ್ನುವುದರಿಂದ ಎತ್ತು ಎನ್ನುವುದಕ್ಕೆ ಬದಲಾಗುತ್ತಿತ್ತು. ಕೆಲವೊಮ್ಮೆ ಹೋರಿ ಎಂದೂ ಮತ್ತೆ ಕೆಲವೊಮ್ಮೆ ಎತ್ತು ಎನ್ನುತ್ತಲೂ, ಬರುಬರುತ್ತಾ ಎತ್ತು, ಮುದಿಎತ್ತು ಹೀಗೆ ಅವುಗಳ ಹೆಸರಿನ ಬಡ್ತಿಯ ನೆನಪು. ಮನೆ ಹೋರಿ ಕರುವಾಗಿದ್ದಾಗಿನಿಂದಲೂ ಮನೆಯವರ ಮತ್ತು ಊರವರ ನೆನಪಿನಲ್ಲೆಲ್ಲಾ ಶಾಂತ ಸ್ವಭಾವದ್ದಾಗಿದ್ದು, ಗೋವು ಅಂತ ನಿರ್ವಿವಾದವಾಗಿ ಕರೆಯಬಹುದಾಗಿತ್ತು. ಅದೇ ಕಾರಣಕ್ಕೋ ಏನೋ, ನನ್ನ ಬಾಲ್ಯದ ಬುದ್ಧಿಗೆ ಮನೆಹೋರಿಯ ಹೆಸರು ‘ರಂಗ’ ಅಂತ ಹೊಳೆದಿತ್ತು. ಕಲ್ಹಳ್ಳಿ ಹೋರಿಯದು ಬೇರೆಯೇ ಕತೆ. ಮನೆ ಹೋರಿಗೆ ಹೋಲಿಕೆಯಲ್ಲಿ ಬಹುತೇಕ ಹೊಂದುತ್ತಿತ್ತಾದರೂ, ಸ್ವಭಾವ ಅದರ ತದ್ವಿರುದ್ಧ. ಮನೆ ಹೋರಿಯ ಜೊತೆಯಲ್ಲೇ ಇದ್ದಿದ್ದರಿಂದಲೋ ಏನೋ, ಶಾಂತವಾಗೇನೋ ಇರುತ್ತಿತ್ತು. ಆದರೆ ಅದರ ಕೋಪ ಪೊಲೀಸನ ಸೊಂಟದಲ್ಲಿರುವ ಪಿಸ್ತೂಲಿನಂತೆ ಸದಾ ಬದಿಯಲ್ಲಿಯೇ ತೂಗುತ್ತಿರುತ್ತಿತ್ತು. ಹಾಗಾಗಿ ಅದರ ಹೆಸರು ನರಸಿಂಹ, ಎಂದು ಕಲ್ಪಿಸಿಕೊಂಡು ನಂತರ ಆ ಹೆಸರನ್ನು ಕುದಿಸಿ ಭಟ್ಟಿ ಇಳಿಸಿ ಸರಳವಾಗಿ ‘ತಿಮ್ಮ’ ಎಂದು ಕಲ್ಪಿಸಿಕೊಂಡಿದ್ದೆ.  ಈ ರಂಗ ಮತ್ತು ತಿಮ್ಮ, ಇವರ ಹೆಸರು ನಾನು ಕಲ್ಪಿಸಿಕೊಳ್ಳುವುದಕ್ಕೆ ಇನ್ನೊಂದು ಕಾರಣವಿತ್ತು. ಈ ಜೋಡಿ ಎತ್ತುಗಳು ಅಜ್ಜಿಮನೆಯ(ಅಮ್ಮನ ತವರು) ದೊಡ್ಡ ಸಂಸಾರದ ಖಾಯಂ ಸದಸ್ಯರಾಗಿ ಇದ್ದಂತಹವು.  ಹಾಗಾಗಿ ಆಕಾರದಲ್ಲಿ ಮನುಷ್ಯರಂತಿಲ್ಲದೆ, ಮಾತು ಬಾರದಿದ್ದರೂ ಅವರಿಬ್ಬರ ಸುತ್ತಮುತ್ತ ಇರುವಾಗ ನಮ್ಮಂತೆಯೇ ಅವುಗಳೂ ಮಾತನಾಡುತ್ತವೆ ಎಂದೇ ಅನಿಸುತ್ತಿತ್ತು… ಸದ್ದು ಬಾರದಿದ್ದರೂ ಅವುಗಳ ಮಾತು ಕಣ್ಣುಗಳಲ್ಲಿ, ಕಾಲ್ಗಳಲ್ಲಿ, ಬಾಲದಲ್ಲಿ ವ್ಯಕ್ತವಾಗುತ್ತಿತ್ತು. ಆ ಜೋಡಿ, ಮನೆಯಲ್ಲಿರುವ ಎರಡು ದುಡಿಯುವ ಮೂಕ ಸದಸ್ಯರು, ಆದರೆ ತಮ್ಮ ನಡೆಯೇ ಅವರ ಭಾಷೆಯಾಗಿ ನಮ್ಮೊಟ್ಟಿಗೆ ಮಾತನಾಡುತ್ತಾರೆ ಎಂಬುದೇ ನನ್ನ ಕಲ್ಪನೆಯಾಗಿತ್ತು.  ರಂಗನ ಬಗ್ಗೆ ನಮಗೆ ಎಳ್ಳಷ್ಟೂ ಆತಂಕವಿರಲಿಲ್ಲ. ಮೈತೊಳೆಯುವುದು, ಹುಲ್ಲುಹಾಕುವುದು, ಹಣೆ ಸವರುವುದು ಏನು ಮಾಡಿದರೂ ರಂಗ ಅಪ್ಪಟ ಸಾಧು.  ತಿಮ್ಮನ ಹತ್ತಿರ ಸುಳಿಯುವುದಿರಲಿ, ನಾನೊಬ್ಬನೇ ಇದ್ದರೆ  ತಿಮ್ಮನ ಕಣ್ಣು ತಪ್ಪಿಸಿಕೊಂಡು ಓಡಾಡುತ್ತಿದ್ದೆ. ಎಲ್ಲೋ ಅಪರೂಪಕ್ಕೊಮ್ಮೆ ಹತ್ತಿರ ಸುಳಿಯುವುದಿದ್ದರೂ, ಅದು ತಾತನ ಅಥವಾ ಮಾವಂದಿರ ಜೊತೆ ಸುರಕ್ಷಿತವಾಗಿದ್ದಾಗ ಮಾತ್ರ. ನಾನು ಹುಟ್ಟುವುದಕ್ಕೂ ಮೊದಲೇ ನಮ್ಮ ಮನೆಯಲ್ಲಿ ಹೋರಿಗಳಾಗಿದ್ದ ಈ ನಮ್ಮ ಕುಟುಂಬದ ಸದಸ್ಯರ ಬಗ್ಗೆ ತರಹೇವಾರಿ ಕತೆಗಳನ್ನು ನಾನು ಕೇಳಿದ್ದೇನೆ.  ಬೇಸಿಗೆಯ ಒಂದು ದಿನ ಕಟ್ಟೆಅರಸಮ್ಮನ ಹರಕೆಯ ಬಗ್ಗೆ ಮಾತಾಡಿ, ಯಾವತ್ತು ಹೋಗೋದು ಅಂತ ಚರ್ಚಿಸಿ ಒಂದು ದಿನ ಗೊತ್ತುಮಾಡಿದರು. ಕಟ್ಟೆಅರಸಮ್ಮನಿಗೆ ಮುತ್ತಜ್ಜಿಯ ಯಾವುದೋ ಒಂದು ಹಳೆಯ ಹರಕೆಯಿತ್ತಂತೆ. ನಮ್ಮ ಊರಿನಿಂದ ಕಟ್ಟೆಅರಸಮ್ಮನ ಗುಡಿ ನಲವತ್ತು ಕಿಲೋಮೀಟರು ದೂರ. ಗುಡಿ ಅನ್ನೋದಕ್ಕಿಂತ ಅದು ಆಗ ಒಂದು ಸಣ್ಣ ಗೂಡು.  ಈಗ ಒಂದು ಕಟ್ಟಡ ಆಗಿ ಅದು ಗುಡಿ ಆಗಿದೆ.  ಕಟ್ಟೆಅರಸಮ್ಮನ ಹರಕೆ ಅಂದರೆ ಅದು ಕುರಿ, ಕೋಳಿ, ಹಂದಿಯನ್ನು ದೇವಸ್ಥಾನದ ಬಳಿ ಬಲಿಕೊಡುವುದು.ಅದರಲ್ಲಿ ಕಟ್ಟೆ ಅರಸಮ್ಮನ ಪಾಲು ತುಂಬಾ ಕಡಿಮೆಯೇ. ಮಾಂಸವೂ ಸೇರಿದಂತೆ, ಬೇಯಿಸಿದ ಎಲ್ಲಾ ಅಡುಗೆಯನ್ನೂ, ಒಂದು ಆಳಿಗೆ ಬಡಿಸುವಷ್ಟನ್ನು ಬಾಳೆಯೆಲೆಯಲ್ಲಿ ಬಡಿಸುವುದು, ಅದನ್ನು ಇನ್ನೊಂದು ಬಾಳೆಯೆಲೆಯಲ್ಲಿ ಮುಚ್ಚುವುದು. ಅಲ್ಲಿಗೆ ಬಂದಿರುವ ಮನೆಯ ಸದಸ್ಯರೆಲ್ಲರೂ ಹಣ್ಣು ಕಾಯಿ ಇಟ್ಟು ಅಗರಬತ್ತಿ, ಕರ್ಪೂರ ಹಚ್ಚಿ  ಪೂಜೆ ಮುಗಿಸಿದರೆ ಅಲ್ಲಿಗೆ ಹರಕೆ ತೀರಿದಂತೆ. ಆಮೇಲೆ ದೇವರಿಗಿಟ್ಟ ಪಾಲೂ ಸೇರಿದಂತೆ ಮಾಡಿದ ಅಡುಗೆಯೆಲ್ಲ ಪ್ರಸಾದ. ಇದೊಂಥರಾ ಪಕ್ಕಾ ಫ್ಯಾಮಿಲಿ ಪಿಕ್ನಿಕ್ಕು. ಅಂತಹ ಒಂದು ಪಿಕ್ನಿಕ್ಕು ಮುತ್ತಜ್ಜಿಯ ಹರಕೆಯ ಪೂರೈಕೆಗಾಗಿ ಸಿದ್ಧವಾಗಿತ್ತು. ಮುತ್ತಜ್ಜಿ ನನ್ನ ತಾತನಿಗೆ ಚಿಕ್ಕಮ್ಮ, ತಾತನನ್ನು ತಮ್ಮಯ ಅಂತ ಕರೆಯುತ್ತಿತ್ತು.  “ತಮ್ಮಯ್ಯ, ಗಾಡಿಗೆ ದಬ್ಬೆ ಬಿಗಿಬೇಕು, ಯಾರ್ನಾದರೂ ಕರ್ಕೊಂಡ್ ಬಂದು ಬಿರ್ರನೆ  ಶುರು ಮಾಡದಲ್ವಾ” ಅಂದರು ಮುತ್ತಜ್ಜಿ.  “ಗಾಡಿ ತಡಿಕೆ ಐತಲ್ಲ ಮಳೆ ಏನ್ ಬರಾಂಗಿಲ್ಲ, ಸುಮ್ನೆ ಯಾಕೆ ಈ ಕಮಾನು ದಬ್ಬೆ ಚಿಕ್ಕವ್ವ” ಅಂದರು ತಾತ….  “ರಾತ್ರಿಯೆಲ್ಲಾ ಗಾಳಿ ಥಂಡಿಯಿರ್ತದೆ, ದಮ್ಮು ಜಾಸ್ತಿಯಾದ್ರೆ ಆಸ್ಪತ್ರೆಗೆ ಸೇರಿಸಿ ಬತ್ತೀಯಾ, ಸುಮ್ನೆ ಹೇಳಿದ್ದ್ ಕೇಳು, ದಬ್ಬೆ ಕಟ್ಟಿ ಟಾರ್ಪಲ್ ಹಾಕು”  ಎಂದು ಹೇಳುವುದರಿಂದ ಶುರುವಾದ ಪ್ರಯಾಣದ ಕೆಲಸ, ಮುಸ್ಸಂಜೆಯಾಗುವವರೆಗೂ ಎಲ್ಲರೂ ಒಂದಿಲ್ಲೊಂದು ಕಡೆ ಗದ್ದಲದಿಂದ ಕೆಲಸ ಮಾಡುತ್ತಾ ಮುಂದುವರಿದಿತ್ತು. ರಂಗ ಮತ್ತು ತಿಮ್ಮ ಎರಡೂ ರಾಗಿಹುಲ್ಲು ಮೆಲುಕುತ್ತಾ ಎಲ್ಲರನ್ನೂ ಗಮನಿಸುತ್ತಿದ್ದವು. ಮಧ್ಯಾಹ್ನದ ಹೊತ್ತಿಗಾಗಲೇ ಹೊಟ್ಟೆ ತುಂಬಿಸಿಕೊಂಡವರೇ, ಮನೆಮಂದಿಯೆಲ್ಲಾ ಓಡಾಡುವುದನ್ನು ಗಮನಿಸಿ, ಇವತ್ತು ಸಂಜೆ ಗಾಡಿ ಕಟ್ತಾರೆ…  ರಾತ್ರಿಯಿಡೀ ನಾವು ನಡಿತಾನೇ ಇರಬೇಕು ಅಂತ ಗೊತ್ತಾಗಿ ಮಲಗಿದ್ದಲ್ಲೇ ಕೊರಳು ಅತ್ತಿತ್ತ ಆಡಿಸುತ್ತ ಸುಲಭವಾಗಿ ಬಾಯಿಗೆ ಸಿಗುತ್ತಿದ್ದ ಹುಲ್ಲನ್ನು ಬೇಕೋ ಬೇಡವೋ ಎಂಬಂತೆ  ನಿಧಾನವಾಗಿ ಮೆಲ್ಲುತ್ತಿದ್ದವು.  ನಲವತ್ತು ಕಿಲೋಮೀಟರ್ ಅಂದರೆ ಆರೇಳು ಗಂಟೆಯ ಎತ್ತಿನಗಾಡಿಯ ಪ್ರಯಾಣ. ರಂಗ ಮತ್ತು ತಿಮ್ಮರ ದಾಪುಗಾಲಿಂದ ಬೇಗನೆ ತಲುಪಲು ಸಾಧ್ಯವಿದ್ದರೂ, ಮರದ ಗಾಡಿಯಲ್ಲಿ ಪಾತ್ರೆ, ಅಡುಗೆ ಸಾಮಾನು ಜೊತೆಗೆ ಮನೆಯವರು ಗಾಡಿಯಲ್ಲಿ ಕೂತಿರುವುದರಿಂದ ಆತುರದಿಂದ ಓಡಿ ತಲುಪುವುದು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿಯೇ, ರಾತ್ರಿ ಊಟ ಮುಗಿಸಿ ಹತ್ತು ಹನ್ನೊಂದರ ಸುಮಾರಿಗೆ ಗಾಡಿ ಕಟ್ಟಿದರು…  ಹಂದಿಯ ಕಾಲು ಬಿಗಿದು ಗಾಡಿಯ ತಳಬದಿಗೆ ಕಟ್ಟಿದ್ದರು. ಒಂದರ್ಧ ಗಂಟೆಯಷ್ಟು ಅದರ ಅರಚಾಟ, ನಂತರ ನಿಧಾನವಾಗಿ ರಾಗಾಲಾಪ ಮಾಡಿ ತನ್ನ ವೇದನಾಗಾಯನಕ್ಕೆ ಮಂಗಳ ಹಾಡಿತು. ಗಾಡಿಯ ಮುಂದೆ ದಾರಿ ಕಾಣುವಂತೆ ಒಂದು ಲಾಟೀನು ಕಟ್ಟಿದರು. ಮುತ್ತಜ್ಜಿಯ ಜೊತೆಯಲ್ಲಿ ನಾನೂ ಸೇರಿದಂತೆ ಇನ್ನು ನಾಲ್ಕು ಜನ ತಯಾರಾಗಿ ಗಾಡಿ ಏರಿ ಕುಳಿತೆವು. ಮುತ್ತಜ್ಜಿಗೆ ಹೊದಿಯಲು ಒಂದು ದಟ್ಟಿ, ಕುದಿಸಿ ಆರಿಸಿದ ನೀರು ಇಟ್ಟುಕೊಂಡು,  ‘ಹುಂ ಹೊರಡಿ’ ಅಂತ ಹೇಳಿದರು. ರಂಗ ಮತ್ತು ತಿಮ್ಮರಿಗೆ ಅನುಭವ ಎಷ್ಟರಮಟ್ಟಿಗಿತ್ತೆಂದರೆ, ಅವುಗಳಿಗೆ ಮಾಮೂಲು ಎತ್ತುಗಳಿಗೆ ಸೂಚಿಸುವ ಹಾಗೆ ಅರ್ರ, ಅನ್ನುವುದು ಮಪ್ಪುರಿಯುವುದು, ಏಯ್, ಹೋಯ್ ಎಂದು ಚೀರುವಂತಹ ಯಾವ ಅಗತ್ಯವೂ ಇರಲಿಲ್ಲ.  ಇನ್ನು ಚಾವುಟಿಯ ಅಥವಾ ಬಾರುಕೋಲಿನ ಅಗತ್ಯವಂತೂ ಇಲ್ಲವೇ ಇಲ್ಲ. ಅವು ಕೆಲಸದಲ್ಲಿ ತಲ್ಲೀನರಾಗಿದ್ದಾಗ ಬೆನ್ನ ಮೇಲೆ ಸಣ್ಣಗೆ ಕೈ ತಾಗಿಸಿದರೂ ಚುರುಕಾಗಿಬಿಡುತ್ತಿದ್ದವು. ಅದರಲ್ಲೂ ತಿಮ್ಮನಂತೂ ಚಂಗನೆ ಜಿಗಿಯುತ್ತಿದ್ದ. ಅಪರೂಪಕ್ಕೆಂಬಂತೆ  ಎಲ್ಲಾದರೂ ನಿಧಾನವಾದರೆ, ಒಂದು ಹುಯ್ಗುಟ್ಟರೆ ತಂತಾನೇ ಜಾಗರೂಕರಾಗಿಬಿಡುತ್ತಿದ್ದವು. ಅಪರೂಪದ ದಾರಿಗಳ ಹೊರತಾಗಿ, ಊರಿನ ಒಳಗಿನ ದಾರಿಗಳು, ನೆಂಟರ ಮನೆಗಳು, ಪೇಟೆಯ ಸಂತೆ ದಾರಿ, ಆ ಸಂತೆಯೊಳಗಿನ ಬೀದಿಗಳು, ಊರಿನ ಎಲ್ಲಾ ಹೊಲಗದ್ದೆಗಳ ದಾರಿ, ದೇವಸ್ಥಾನ ಇವೆಲ್ಲ ಹೆಸರಿನ ಸಮೇತ ರಂಗ ತಿಮ್ಮರಿಗೆ ತಿಳಿದಿತ್ತು.  ಅವುಗಳಿಗೆ ಕೊರಳ ಹುರಿ, ಮೂಗುದಾರ ಮತ್ತು ಹಗ್ಗಗಳು ನೆಪಮಾತ್ರಕ್ಕೆ. ಕುಣಿಕೆ ಬಿಗಿಯದೆಯೂ ಕೊಟ್ಟಿಗೆಯಲ್ಲಿ ಅಥವಾ ಮನೆಗೆ ಚಾಚಿಕೊಂಡಂತೆ ಇದ್ದ ಗಾಡಿ ನಿಲ್ಲಿಸುವ ಮಾಡಿನಲ್ಲಿ  ಹಾಗೆಯೇ ಬಿಟ್ಟಿದ್ದರೂ ತಾವು ಇದ್ದಲ್ಲಿಯೇ ಇರುತ್ತಿದ್ದವು.  ಸೈನ್ಯದಲ್ಲಿ ತರಬೇತಿ ಕೊಟ್ಟ ಸೈನಿಕರಷ್ಟೇ ಶಿಸ್ತಾಗಿರುತ್ತಿತ್ತು ಅವುಗಳ ಚಲನವಲನಗಳು. ಭಾರವಾದ ಹೊರೆ ತುಂಬಿದ ಗಾಡಿ ಎಳೆಯುವಾಗ ಇರಬೇಕಾದ ಬಲಾಢ್ಯತೆಯನ್ನಾಗಲೀ,  ಬಿತ್ತನೆಯಾದ ಒಂದೆರಡು ವಾರವಿರುವ ಪೈರಿನ ನಡುವೆ ಕುಂಟೆ ಹೊಡೆಯುವಾಗ ಇರಬೇಕಾಗಿದ್ದ ಸೂಕ್ಷ್ಮತೆಯಾಗಲೀ ಅವೆರಡಕ್ಕೂ ಹೇಳಿ ತಿಳಿಸಬೇಕಾದ  ಅಗತ್ಯವೇ ಇರುತ್ತಿರಲಿಲ್ಲ. ಬಹುಶಃ ತಿಮ್ಮ ಯಾರಿಗಾದರೂ ತಿವಿದು ಎಡವಟ್ಟು ಮಾಡಿಯಾನು ಎನ್ನುವ ಜಾಗರೂಕತೆಯಿಂದ ತಿಮ್ಮನಿಗೆ ಹಗ್ಗ ಮೂಗುದಾರ ಬೇಕಾಗಿತ್ತೇನೋ. ಆದರೆ ರಂಗನಿಗೆ ಖಂಡಿತಾ ಬೇಕಿರಲಿಲ್ಲ. ————-

ಹೊತ್ತಾರೆ Read Post »

ಅಂಕಣ ಸಂಗಾತಿ

ಅವ್ಯಕ್ತಳ ಅಂಗಳದಿಂದ

ಅವ್ಯಕ್ತ ಉಡುಗೊರೆ ಉಡುಗೊರೆ ಅವನ್ಯಾರೋ ನಂಗೆ ಗೊತ್ತಿಲ್ಲ, ಮುಗ್ಧ ನಗುವ ಹೊನಲು ಮುಖದಲ್ಲಿ ಹಾರಾಡ್ತಿರ್ತಿತ್ತು , 100 ಮಕ್ಳ ಕ್ಲಾಸಲ್ಲಿ ವಿಭಿನ್ನ ಇವ್ನು. ಹೊಳೆವ ಕಣ್ಣುಗಳು, ಮುಖದಲ್ಲಿ ಕಾಂತಿ, ಬಾಡಿ ಲ್ಯಾಂಗ್ವೇಜಲ್ಲಿ ಗೌರವ…ನಾನು ನಿತ್ಯ ನನ್ನ ಕೆಲಸ ಮಾಡೋದು- ಪ್ರಶ್ನೆ ಕೇಳೋದು, ಉತ್ತರ ಹೇಳೋದು, ಕೊನೇ ಘಳಿಗೇಲಿ ಸ್ವಲ್ಪ ಹೊತ್ತು ಜೀವನದ ಬೆಲೆ  ಬಗ್ಗೆ ವಿಶ್ಲೇಷಣೆ….        ಹೀಗೆ ದಿನ ಕಳೆದ್ವು, ಎದ್ರು ಬಂದಾಗ್ಲು ಎದುರು ನಿಲ್ಲಲು ಹಿಂಜರಿತಿದ್ದ. ಫಸ್ಟ್ ಪಿಯುಸಿ ಅಲ್ವಾ ಭಯ ಇರ್ಬಹ್ದು ಅಂತ ಸುಮ್ನಾದೆ. ನಂಗೆ ಒಂದು ಹುಚ್ಚು ಕುತೂಹಲ, ಮಕ್ಳನ್ನ ಅವರ ಗುಣಗಳ್ನ ಅನ್ವೇಷಿಸೋದು ಸೈಲೆಂಟಾಗಿ ವೀಕ್ಷಿಸುತ್ತಾ ಹೋದ್ರೆ ಅವರ ಮನಸನ್ನ ಕೂಡ ಶೋಧಿಸ್ಬಹ್ದು ಅಂತ ಗೊತ್ತಿತ್ತು, ಕಲ್ತಿದ್ದೆ. ಸಮಯ ಸಿಕ್ಕಾಗ್ಲೆಲ್ಲಾ ಹುಡುಗನ ಚಟುವಟಿಕೆಗಳನ್ನು ದೂರದಿಂದಲೇ ವೀಕ್ಷಿಸುತ್ತಿದ್ದೆ ಸೋಜಿಗ ಎಂದರೆ ಎಲ್ಲಿದ್ದರೂ ಅಲ್ಲಿ ನಗೆಯ ಹೊನಲಿತ್ತು, ಅನ್ಯೋನ್ಯತೆ ಕಾಣುತ್ತಿತ್ತು. ಆದರೆ ನಾನು ಎದುರಿಗೆ ಹೋಗುವಾಗ ಮೌನ ಮುಗುಳ್ನಗು, ಗೌರವದ ಒಂದು ಸೂಚನೆ, ವಾಹ್! ಅಪರೂಪದ ರತ್ನ, 21ನೇ ಶತಮಾನದಲ್ಲೂ ಇಂಥ ಮಕ್ಕಳು..ಎಂದು ಮನಸ್ಸಲ್ಲೆ ಯೋಚಿಸಿ ಒಳ್ಳೇದಾಗಲಿ ಎಂದು ಆಶೀರ್ವಾದ ಮಾಡಿ ಬಿಡುತ್ತಿದ್ದೆ. ಕಾಲೇಜಿನ ವಾರ್ಷಿಕೋತ್ಸವ ಹೊಸತನದ ಹುಚ್ಚು.. ನನ್ನಲ್ಲಿ, ಮಕ್ಳಲ್ಲಿರುವ ಎಲ್ಲಾ ಗುಣಗಳ್ನ ಹೊರತೆಗಿಬೇಕಂತ ಆಸೆ. ಆ ಕಲೆಗಳ್ಗೆ ಗುರುತು ಕೊಡೋದೇ ನನ್ನ ಹುಚ್ಚು ಹಠ.. ಈ ನಿಟ್ನಲ್ಲಿ ಈ ಬಾರಿ ಕಾವ್ಯ ಕುಂಚ ಗಾನ ಎಂಬ 3 ಕಲೆಗಳ ಸಂಯೋಜನೆ ಮಾಡ್ದೆ-ಒಂದೇ ಸ್ಟೇಜಲ್ಲಿ. ಹಾಡುವವರು, ಹಾಡಿಗೆ ಚಿತ್ರ ಬರೆಯುವವರು, ಅದೇ ಹಾಡಿಗೆ ಮ್ಯೂಸಿಕಲ್ ಇನ್ಸ್ಟ್ರುಮೆಂಟ್ಸ್ ನುಡ್ಸೋರು…. ಗೊತ್ತಿರ್ಲಿಲ್ಲ ಇವನು ಮ್ಯಾಂಡೊಲಿನ್ ನುಡಿಸ್ತಾನೆ ಅಂತ….. ಅಭ್ಯಾಸ ಶುರುವಾಯ್ತು, ಅಭ್ಯಾಸದೊಂದಿಗೆ ಸರಿ-ತಪ್ಗಳ ವಿಶ್ಲೇಷಣೆ, ರಾಗತಾಳಗಳ ಬಗ್ಗೆ ಸಂಯೋಜನೆ, ಹೆಚ್ ತಿಳ್ದೋರು-ಸ್ವಲ್ಪ ತಿಳ್ದೋರ ಮಧ್ಯದಲ್ಲಿ ಒಂದು ಬ್ಯಾಲೆನ್ಸ್ ತರೋ ಪ್ರಯತ್ನ…. ಸ್ವಲ್ಪ ಹೆಣ್ಣುಮಕ್ಕಳು, ಸ್ವಲ್ಪ ಗಂಡುಮಕ್ಕಳು, ತಬಲ, ಹಾರ್ಮೋನಿಯಂ, ಕೀಬೋರ್ಡ್, ಚಿತ್ರಗಾರರು, ರಾಗತಾಳಗಳು,ಹಿಮ್ಮೇಳಗಳು,ಅವಶ್ಯಕತೆಗಳು, ಕಲ್ಪನೆಗಳು, ಆಲೋಚನೆಗಳು, ಧೋರಣೆಗಳು, ಒಂದರಮೇಲೊಂದು ಸಮಾಗಮಗಳು… ಆ ದಿನ ಕೆಲಸದ ಒತ್ತಡ ಹೆಚ್ಚಾಗಿ, ಬೇರೆ ಸಮಸ್ಯೆಗಳೂ ಸೇರಿ, ಒಂತರಾ ಅಸಹನೆ ಕೂಡಿತ್ತು ನನ್ನಲ್ಲಿ. ರೋಸಿಹೋದ ದೇಹವನ್ನು ಹೊತ್ತು,ಮನಸಲ್ಲಿ ಸಾವಿರ ಪ್ರಶ್ನೆಗಳ ಉತ್ರಾ ಹುಡುಕ್ತಾ ಲ್ಯಾಬ್ನ ಕಡೆ ನಡ್ದೆ.. ಯಾವುದೋ ಸಿಟ್ನಲ್ಲಿ, ವ್ಯವಧಾನ ಕಳ್ಕೊಂಡು ಹೇಳಿದೆ  “ಪ್ರಾಕ್ಟೀಸ್ ಮಾಡಕ್ಕೆ ಏನ್ರೋಗ ನಿಮ್ಗೆ? ದಿನಾ ನಾನೇ ಬಂದು ಹೇಳ್ಬೇಕು! ಇಷ್ಟು ದೊಡ್ಡೋರಾಗಿದೀರ! ಜವಾಬ್ದಾರಿ ಬೇಡ್ವಾ. ಎಲ್ಲಾದುಕ್ಕೂ ನಾನೇ ತಲೆ ಚಚ್ಕೋಬೇಕಾ?” ಆ ಕಡೆಯಿಂದ ಮ್ಯಾಂಡೋಲಿನ್ ನಲ್ಲಿ “ಜೊತೆಯಲಿ ಜೊತೆ ಜೊತೆಯಲಿ ಇರುವೆನು ಹೀಗೆ ಎಂದು” ನುಡಿಯಲಾರಂಭವಾಯಿತು. ನನ್ನ ಅತಿಪ್ರಿಯ ಹಾಡುಗಳಲ್ಲಿ ಒಂದು ಅದು. ನನ್ನ ಮುಖದಲ್ಲಿ ಮುಗುಳ್ನಗೆ ಅರಳಿದ್ದು ನಂಗೇ ಗೊತ್ತಾಗಲಿಲ್ಲ.. ನಕ್ಬಿಟ್ಟೆ..ಆಶ್ಚರ್ಯದಿಂದ ಅವನನ್ನ ಹತ್ರ ಕರ್ದು ಕೇಳ್ದೆ “ಹೇಗೆ ಗೊತ್ತು ಈ ಹಾಡು ನಿಂಗೆ, ಇದನ್ನೇ ಯಾಕ್ ನುಡುಸ್ದೆ ನೀನು?”        ಅದಕ್ಕೆ ಅವನು ಆಡಿದ ಮಾತು ಕೇಳಿ ದಂಗಾದೆ,” ಮಿಸ್,ಅವತ್ತು ಲ್ಯಾಬ್ ರೆಕಾರ್ಡ್ ಇಡಲಿಕ್ಕೆ ಬಂದಾಗ ನೀವು ಕಿಟಕಿಯ ಕಡೆ ನೋಡ್ಕೊಂಡು ಇದೇ ಹಾಡನ್ನು  ಗುನುಗ್ತಾ ಇದ್ರಿ, ಬಹಳ ಹಾಡುಗಳನ್ನು ನೀವುಗುಣ ಗಿದ್ದೀರಿ ಆದರೆ ಈ ಹಾಡಲ್ಲಿ ನಿಮ್ಮ ಮುಗುಳ್ನಗೆ ನಿಜವಾಗಿರುತ್ತೆ ಮಿಸ್”  “ನಿಮಗೆ ಸಂತೋಷವಾಗಲಿ ಎಂದೇ ಇದನ್ನು ನುಡಿಸಿದೆ”……ಇದಾದ್ನಂತ್ರ ದಿನಾ ಲ್ಯಾಬ್ಗೆ ನಾನು ಬಂದು ಕೂರ್ತಿದ್ಹಂಗೆ, ಒಂದು ನಿಮಿಷ ಈ ಹಾಡು.. ನನ್ನ ಮುಗುಳ್ನಗೆ.. ನಂತರ ರೆಗ್ಯುಲರ್ ಪ್ರಾಕ್ಟೀಸ್. ವಾರ್ಷಿಕೋತ್ಸವ ಆಯ್ತು, ಇಷ್ಟ್ರಲ್ಲೇ ನಾನು ಇವ್ನಲ್ಲಿ ಬಹಳ ವಿಶೇಷ ಗುಣಗಳ್ನ ಗುರುತಿಸಿದ್ದೆ..      ಆಟ ಆಡ್ತಾ ನಗ್ ನಗ್ತಾ ಇನ್ನೊಬ್ರ ಬೇಸ್ರಾನ ಗುರ್ತಿಸ್ತಿದ್ದ, ಅದ್ನ ಕಡ್ಮೆ ಮಾಡಕ್ಕೆ ತನಗಾದ ಪ್ರಯತ್ನ ಮಾಡ್ತಿದ್ದ.. ಎಲ್ಲಾ ಸಂಬಂಧಗಳಿಗೂ ಒಂದು ಬೆಲೆ ಇದೆ ಎಂಬ ಔಚಿತ್ಯ ಅರಿತುಕೊಂಡಿದ್ದ. ಬೇರೆಯವರು ಅವರವರ ಸಂಬಂಧಗಳನ್ನು ಹೇಗೆ ಬೆಳೆಸಬೇಕು ಎಂಬ ಸೂಕ್ಷ್ಮವನ್ನು ಹೇಳಿಕೊಡುತ್ತಿದ್ದ…ಸಂಬಂಧಗಳಿಗೆ ಗೌರವ ಪ್ರೀತಿ ವಿಶ್ವಾಸ ತುಂಬಿ ಸಂತೋಷದ ಹೊನಲು ಹಂಚುವ ಗುಣ ಬಹಳ ವಿರಳ… ಇಷ್ಟು ಸಣ್ಣ ವಯಸ್ಸಿಗೆ ಇಷ್ಟೊಂದು ನಿಸ್ವಾರ್ಥ ನಿಷ್ಕಾಮ ಪ್ರಬುದ್ಧ ತೆ ಇದೇ ಮೊದಲ ಬಾರಿ ನೋಡಿದ್ದು..ವಿಪರ್ಯಾಸ ಅಂದ್ರೆ, ಈ ವಿದ್ಯೆ ಯಾವ ಪುಸ್ತಕದಲ್ಲೂ ಹೇಳ್ಕೊಡೊದಿಲ್ಲ, ಅಂಕಪಟ್ಟಿಯ ಸಾಲಿನಲ್ಲಿ ಸೇರೊದಿಲ್ಲ, ಮೆಡಲ್ ಗಳು ಖಂಡಿತಾ ಇಲ್ಲ, ಇದಕ್ಕೆ ಯಾವ Rank ಕೂಡ ಕೊಡೋದಿಲ್ಲ…           ಈ ಸ್ವಾರ್ಥ ಲೋಕದಲ್ಲಿ ನಿಸ್ವಾರ್ಥ ಹಕ್ಕಿಯಾಗಿದ್ದು ಇವನು ಹಾರುವ ಮುನ್ನವೆ ಮುದುಡಿ ಹೋಗಿದ್ದು ತುಂಬಲಾರದ ನಷ್ಟವೇ ಸರಿ…ಸ್ವಾರ್ಥಿಗಳ ಸ್ವಾರ್ಥವೋ? ನಿಸ್ವಾರ್ಥದ ವರ ಶಾಪವೋ? ನಾನರಿಯೆ! ನನ್ನ ಮನಸ್ಸಲ್ಲಿ ಎಂದೂ ಆರದ ದೀಪವಾಗಿ ಆ ಗುಣಗಳನ್ನು ಅಳವಡಿಸಿಕೊಂಡು ಅವನನ್ನು ನನ್ನಲ್ಲಿ ಉಳಿಸಿಕೊಂಡೆ…..ಇರೋದ್ ಮೂರು ದಿನದಲ್ಲಿ ಹಂಚು ಪ್ರೀತಿಯ, ಈ ಉಡುಗೊರೆಗೆ ಸರಿಸಮ ಇನ್ನೇನಿಲ್ಲ

ಅವ್ಯಕ್ತಳ ಅಂಗಳದಿಂದ Read Post »

ಅಂಕಣ ಸಂಗಾತಿ

ನಾನು ಕಂಡ ಹಿರಿಯರು

ಕೋಟ ಶಿವರಾಮ ಕಾರಂತ್ ಡಾ.ಗೋವಿಂದ ಹೆಗಡೆ “ವಿದ್ಯಾಸಾಗರ’ ಕಾರಂತರು (೧೯೦೨-೧೯೯೭) ಅದು ೧೯೭೭ರ ಬೇಸಿಗೆಯಿದ್ದಿರಬಹುದು. ತುರ್ತುಸ್ಥಿತಿಯನ್ನು ಹಿಂತೆಗೆದುಕೊಂಡು ಚುನಾವಣೆಯನ್ನು ಘೋಷಿಸಲಾಗಿತ್ತು. (ಇವೆಲ್ಲ ತಿಳಿದಿದ್ದು ನಂತರ,ಆಗ ಅಲ್ಲ.) ನಮ್ಮ ಊರಿನ ಬಳಿಯ ಉಮಚಗಿಯಲ್ಲಿ ಒಂದು ಕಾರ್ಯಕ್ರಮ. ಹತ್ತು ಹನ್ನೊಂದರ ಹುಡುಗ ನಾನು ಅಲ್ಲಿದ್ದೆ. ಎತ್ತರದ, ಗೌರವರ್ಣದ, ನೀಳ ಕೇಶದ ಪಂಚೆಯುಟ್ಟ ಹಿರಿಯರು ಮಾತನಾಡಿದರು. ಮುಂದೆ ಕುಳಿತಿದ್ದ ನಾವು ನಾಲ್ಕಾರು ಮಕ್ಕಳು ಕೆಲಹೊತ್ತು ಅವರ ಮಾತು ಕೇಳಿದೆವು ಏನೂ ತಿಳಿಯಲಿಲ್ಲ ; ಬೇಸರ ಬಂತು. ಗುಸುಗುಸು ಪಿಸುಮಾತು ಕೊನೆಗೆ ಜೋರಾಯಿತು. ಅವರು ನಮ್ಮನ್ನು ಗದರಿ ಮಾತು ಮುಂದುವರಿಸಿದರು. ಕೋಟ ಶಿವರಾಮ ಕಾರಂತರನ್ನು ನಾನು ಮೊದಲು ನೋಡಿದ್ದು ಹೀಗೆ. ಮುಂದೆ ಕಾಲೇಜು ದಿನಗಳಲ್ಲಿ ಅವರ ಅನೇಕ ಬರಹಗಳನ್ನು, ಹುಚ್ಚು ಮನಸ್ಸಿನ ಹತ್ತು ಮುಖಗಳನ್ನು ಓದಿದಾಗ ಕಾರಂತರ ಕಿರು ಪರಿಚಯವಾದದ್ದು. ೧೯೮೫ರಲ್ಲಿ ಮೈಸೂರಿನಲ್ಲಿ ನಡೆದ ಪ್ರಥಮ ವಿಶ್ವ ಕನ್ನಡ ಸಮ್ಮೇಳನ ನೆನಪಿನಲ್ಲಿ ಹಸಿರಾಗಿದೆ. ಉದ್ಘಾಟನೆಯಲ್ಲಿ ಅತಿಥಿ ಯಾಗಿದ್ದ ಕಾರಂತರು”ಬರದ ಕಾರಣ ಸಮ್ಮೇಳನ ನಡೆಯಕೂಡದು “ಎಂಬ ತಾರಕಕ್ಕೇರಿದ್ದ ವಿವಾದವನ್ನು ತಮ್ಮ ಮಾತಿನ ಆರಂಭದಲ್ಲೇ ಪ್ರಸ್ತಾಪಿಸಿದರು. ‘ ಬರ ದ ಕಾರಣಕ್ಕೆ ಮಸಾಲೆದೋಸೆ ತಿನ್ನುವುದನ್ನು ಬಿಟ್ಟಿದ್ದೇವಾ?’ ಎಂಬ ಅವರ ಮಾತು ಇನ್ನೊಂದು ವಿವಾದವನ್ನೇ ಸೃಷ್ಟಿಸಿತ್ತು. ೧೯೯೫/೯೬ ರ ಸುಮಾರಿಗೆ ಶಿರಸಿಯಲಿ ನಡೆದ ‘ಬಿ ಎಚ್ ಶ್ರೀಧರ ಸಾಹಿತ್ಯ ಪ್ರಶಸ್ತಿ’ ಸಮಾರಂಭದಲ್ಲಿ ಕಾರಂತರು ಮುಖ್ಯ ಅತಿಥಿ. ಪ್ರಶಸ್ತಿ ಪುರಸ್ಕೃತರು ದು ನಿಂ ಬೆಳಗಲಿ. ‘ಸ್ನೇಹಿತರೇ’ಎಂದು ಆರಂಭಿಸಿ ಇಪ್ಪತ್ತೈದು ಮೂವತ್ತು ನಿಮಿಷಗಳ ಕಾಲ ಮಾತನಾಡಿದ ಕಾರಂತರ ಒಂದು ಗುಡುಗು ಈಗಲೂ ನೆನಪಿನಲ್ಲಿದೆ. ಶಿರಸಿಯ ಬಳಿಯ ಯಾಣ ಒಂದು ಪ್ರಾಕೃತಿಕ ವಿಸ್ಮಯ. ಅಲ್ಲಿ ಬತ್ತಲೇಶ್ವರ ಎಂಬ ಕವಿ ಇದ್ದನಂತೆ. ಅವನ ಬತ್ತಲೇಶ್ವರ ರಾಮಾಯಣ ಕೃತಿ ಈಗ ಸಿಗುತ್ತಿಲ್ಲ ಎಂದು ವಿಷಾದಿಸಿದ ಕಾರಂತರು ಮರುಗಳಿಗೆಯಲ್ಲಿ ನಮ್ಮ ಜಡ ನಡತೆಯ ಮೇಲೆ ಕೆಂಡವನ್ನೇ ಕಾರಿದರು! “ಇಷ್ಟು ಜನ ಮೇಷ್ಟ್ರುಗಳಿದ್ದೀರಿ,ಕನ್ನಡದ ಹೆಸರಿನಲ್ಲಿ ಅನ್ನ ತಿನ್ನುತ್ತೀರಿ. ಅಂಥದೊಂದು ಪುಸ್ತಕವನ್ನು ಈ ನೆಲದ ಕೊಡುಗೆಯನ್ನು ಪುನರ್ಮುದ್ರಣ ಮಾಡುವ ಯೋಗ್ಯತೆ ಇಲ್ಲವೆ ನಿಮಗೆ?” ಎಂದರು… ಕಾರ್ಯಕ್ರಮದ ಕೊನೆಯಲ್ಲಿ ಮುದ್ದಾದ ಮಗುವನ್ನು ಯಾರೋ ಅವರ ಬಳಿ ತಂದರು. ಮಗುವಿನ ಗಲ್ಲ ನೇವರಿಸಿದ ಕಾರಂತರ ಹೊಳಪುಗಣ್ಣು ಕಲಾವಿದ, ಛಾಯಾಚಿತ್ರಗ್ರಾಹಕ ಜಿ ಎಂ ಹೆಗಡೆ ತಾರಗೋಡ ಅವರ ಕ್ಯಾಮರಾದಲ್ಲಿ ಸೆರೆಯಾದಂತೆ ನೆನಪು. ೧೦-೨-೧೯೦೨ ರಂದು ದಕ್ಷಿಣಕನ್ನಡದ ಕೋಟದಲ್ಲಿ ಜನಿಸಿದ ಕಾರಂತರು ಗಾಂಧೀಜಿಯವರ ಪ್ರಭಾವಕ್ಕೊಳಗಾಗಿ ಕಾಲೇಜು ಶಿಕ್ಷಣವನ್ನು ತ್ಯಜಿಸಿ ಸ್ವಾತಂತ್ರ್ಯ ಚಳುವಳಿಯಲ್ಲಿ, ಸಮಾಜ ಸುಧಾರಣೆಯಲ್ಲಿ ಸ್ವದೇಶಿ ಆಂದೋಲನದಲ್ಲಿ, ತೊಡಗಿಸಿಕೊಂಡವರು.. ಅವರು ಕಲಿತಿದ್ದು ಜಗದ ಶಿಕ್ಷಣ ಶಾಲೆಯಲ್ಲಿ. ಪತ್ರಿಕೆಯ ಸಂಪಾದಕ,ಪ್ರಕಾಶಕ ಮುದ್ರಣಾಲಯ ಸ್ಥಾಪಕ, ಮುದ್ರಕ, ಕಾದಂಬರಿಕಾರ, ಪ್ರಾಥಮಿಕ ಶಿಕ್ಷಣದಲ್ಲಿ ಪ್ರಯೋಗ ನಿರತ, ಮಕ್ಕಳಿಗಾಗಿ ಬಾಲಪ್ರಪಂಚ ವಿಜ್ಞಾನ ಪ್ರಪಂಚ ಹೀಗೆ ವಿಶ್ವಕೋಶಗಳನ್ನು ಬರೆದಾತ, ಯಕ್ಷಗಾನ ಕಲಿಕೆ ಕಲಿಸುವಿಕೆ ,ಅದರಲ್ಲಿ ಸಂಶೋಧನೆ ಮತ್ತು ಬರಹ, ಸಿನಿಮಾ ನಿರ್ದೇಶನ, ನಿಘಂಟು ಬರಹ, ಪರಿಸರ ಚಳುವಳಿ, ಪ್ರವಾಸ,ಫೋಟೋಗ್ರಫಿ ಹೀಗೆ ಕಾರಂತರ ವ್ಯಕ್ತಿತ್ವಕ್ಕೆ ಹಲವು ಮುಖಗಳು! ೪೩ ಕಾದಂಬರಿಗಳು, ಕವನಸಂಕಲನಗಳು, ಕಥಾಸಂಕಲನ, ಜ್ಞಾನ ವಿಜ್ಞಾನದ ಹಲವು ಶಾಖೆಗಳಲ್ಲಿ ಬರಹ…ಕಾರಂತರ ಬಗ್ಗೆ, ಅವರ ಬರಹಗಳ ಬಗ್ಗೆ ಬರೆದಷ್ಟೂ ಕಡಿಮೆಯೇ. ‘ವಿದ್ಯಾಸಾಗರ ಕಾರಂತರು’.. ಈ ಮಾತು ನನ್ನದಲ್ಲ. ದೇಜಗೌ ಅವರದು. ಪದ್ಮಭೂಷಣ ಪುರಸ್ಕಾರ,ಜ್ಞಾನಪೀಠ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ತಿ, ಹಲವಾರು ಗೌರವ ಡಾಕ್ಟರೇಟ್ ಗಳು, ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಹೀಗೆ ಅವರನ್ನು ಅಲಂಕರಿಸಿದ ಪ್ರಶಸ್ತಿ-ಪುರಸ್ಕಾರ, ಗೌರವಗಳು ಹಲವು. ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿ ೯-೧೨-೧೯೯೭ರಂದು ನಿಧನರಾದರು ಈ ಕಡಲತಡಿಯ ಭಾರ್ಗವ. ಕನ್ನಡದ ಬದುಕನ್ನು ಹತ್ತು ಹಲವು ರೀತಿಗಳಲ್ಲಿ ಕಟ್ಟಿದ ಕಾರಂತರಿಗೆ ಅವರೇ ಸಾಟಿ. ಅವರ ಮಾತುಗಳನ್ನು ಕೇಳಿದ್ದೆ ಎಂಬುದು ನನ್ನ ಭಾಗ್ಯಗಳಲ್ಲಿ ಒಂದು. ಕೃತಿಗಳು ಕಾದಂಬರಿಗಳು-ಮೂಜನ್ಮ, ಯಾರು ಲಕ್ಷಿಸುವರು?,ಸರಸಮ್ಮನ ಸಮಾಧಿ, ಇದ್ದರೂ ಚಿಂತೆ, ಒಂಟಿ ದನಿ,ಮೈಮನಗಳ ಸುಳಿಯಲ್ಲಿ,ಮರಳಿ ಮಣ್ಣಿಗೆ,ಮೂಕಜ್ಜಿಯ ಕನಸುಗಳು, ಚಿಗುರಿದ ಕನಸು, ಚೋಮನದುಡಿ, ಗೊಂಡಾರಣ್ಯ, ಇಳೆಯೆಂಬ.., ಸ್ವಪ್ನದ ಹೊಳೆ, ಕುಡಿಯರ ಕೂಸು, ಬೆಟ್ಟದ ಜೀವ, ಔದಾರ್ಯದ ಉರುಳಲ್ಲಿ, ಮೊಗ ಪಡೆದ ಮನ, ಉಕ್ಕಿದ ನೊರೆ,ಆಳ ನಿರಾಳ, ಅದೇ ಊರು ಅದೇ ಮರ ,ಇನ್ನೊಂದೇ ದಾರಿ, ಜಗದೋದ್ಧಾರ ನಾ,ಬತ್ತದ ತೊರೆ,ಅಂಟಿದ ಅಪರಂಜಿ, ಗೆದ್ದ ದೊಡ್ಡಸ್ತಿಕೆ, ನಾವು ಕಟ್ಟಿದ ಸ್ವರ್ಗ, ಶನೀಶ್ವರನ ನೆರಳಿನಲ್ಲಿ, ನಂಬಿದವರ ನಾಕ-ನರಕ,ಮುಗಿದ ಯುದ್ಧ,ಧರ್ಮರಾಯನ ಸಂಸಾರ ಇತರ- ಬಾಲ ಪ್ರಪಂಚ, ವಿಜ್ಞಾನ ಪ್ರಪಂಚ, ಯಕ್ಷಗಾನ ಬಯಲಾಟ, ಪ್ರವಾಸ ಸಾಹಿತ್ಯ- ಅಬುವಿನಿಂದ ಬರಾಮಕ್ಕೆ, ಅಪೂರ್ವ ಪಶ್ಚಿಮ,ಅರಸಿಕರಲ್ಲ, ಪಾತಾಳಕ್ಕೆ ಪಯಣ ಆತ್ಮಕಥೆ- ಹುಚ್ಚು ಮನಸ್ಸಿನ ಹತ್ತು ಮುಖಗಳು ಸ್ಮೃತಿಪಟಲದಿಂದ (ಮೂರು ಭಾಗಗಳು) ಮಕ್ಕಳ ಸಾಹಿತ್ಯ- ಓದುವ ಆಟ-ಸಿರಿಗನ್ನಡ ಪಾಠ ಮಾಲಿಕೆ ಹುಲಿರಾಯ ಮೈಲಿಗಲ್ಲಿನೊಂದಿಗೆ ಮಾತುಕತೆಗಳು ನಚಿಕೇತ ಮರಿಯಪ್ಪನ ಸಾಹಸಗಳು ವಿಜ್ಞಾನ ಪ್ರಪಂಚ ಬಾಲ ಪ್ರಪಂಚ ಜೀವನ ಚರಿತ್ರೆ- ಪಂಜೆ ಮಂಗೇಶರಾಯರು ಶ್ರೀ ರಾಮಕೃಷ್ಣ ಪರಮಹಂಸರ ಜೀವನ ಚರಿತ್ರೆ ಕಲೆ ಶಿಲ್ಪಕಲೆ ಇತ್ಯಾದಿ- ಕಲಾದರ್ಶನ ಕಲಾಪ್ರಪಂಚ ಚಾಲುಕ್ಯರ ಶಿಲ್ಪಕಲೆ ಭಾರತೀಯ ಚಿತ್ರಕಲೆ ಅರಿವಿನ ಆನಂದ ಜ್ಞಾನ

ನಾನು ಕಂಡ ಹಿರಿಯರು Read Post »

ಅಂಕಣ ಸಂಗಾತಿ

ಹೊತ್ತಾರೆ

ಅಮ್ಮನೂರಿನ ನೆನಪುಗಳು @ಅಮೇರಿಕಾದಿಂದ ಅಶ್ವಥ್ ಬರೆಯುತ್ತಿದ್ದಾರೆ ಅಶ್ವಥ್ ತಮ್ಮಪ್ಪಣ್ಣನಸ್ವಾತಂತ್ರ‍್ಯಪ್ರವಚನ.   ಅಂದಿದ್ದೇ ತಡ… ತಮ್ಮಪ್ಪಣ್ಣ ಎದ್ದು ನಿಂತರು… ಅಂದರೆ ತಮ್ಮಪ್ಪಣ್ಣ ಎಂದಿನಂತೆ ಮುಖ್ಯ ಅತಿಥಿ. ನಾನು ಶಾಲೆಗೆ ಸೇರುವುದಕ್ಕಿಂತ ಮೊದಲು, ಶಿಶುವಿಹಾರದಲ್ಲಿದ್ದಾಗಲೂ ಸ್ವಾತಂತ್ರ‍್ಯ ದಿನಾಚರಣೆಗೆ ಶಾಲೆಯ ಮಕ್ಕಳ ಜೊತೆ ಸೇರಿಸುತ್ತಿದ್ದರಿಂದ ತಮ್ಮಪ್ಪಣ್ಣನ ಭಾಷಣದ ಇವೆಂಟ್ ಪರಿಚಯವಾಗಿತ್ತು. ಈಗ ನಾನು ಒಂದನೇ ತರಗತಿ. ಹಾಗಾಗಿ ಚಿಕ್ಕಮಕ್ಕಳ ಮುಂದಿನ ಸಾಲಿನಿಂದ ಬಡ್ತಿ ಪಡೆದು ಶಾಲೆಯ ಮಕ್ಕಳ ಸಾಲಿನಲ್ಲಿ ಕುಳಿತಿದ್ದೇ ಆ ದಿನಾಚರಣೆಯ ವಿಶೇಷ. ಅವನ ಗೊಣಗಾಟ ಮೇಷ್ಟ್ರಿಗೆ ಕೇಳಲಿಲ್ಲ, ತಮ್ಮಪ್ಪಣ್ಣನ ಕಿವಿಗೂ ಬೀಳಲಿಲ್ಲ ಸದ್ಯ! ಕೊಡು, ಲೆಕ್ಕ ಮಾಡಿ ತಂದಿದ್ದೀನಿ” ಅನ್ನುವ ಮೇಷ್ಟರ ಸೂಚನೆಯನ್ನು ಸ್ವೀಕರಿಸಿದ ಸೂರಿ, ಒಬ್ಬರಿಗೆ ಒಂದು ಚಾಕೋಲೇಟು ಒಂದು ಹಾಲ್ಕೋವಾ ಕೈಯಲ್ಲಿರಿಸಿ ಮುಂದುವರಿದ. ಎಲ್ಲರಂತೆ ನಾನೂ ಎರಡೂ ಕೈ ಚಾಚಿದೆ. ಸೂರಿಯ ಕೈಯಿಂದ ಎರಡು ಶ್ಯಾಮಾ ಚಾಕಲೇಟು ಜಾರಿದವು. ಏನೋ ಸಣ್ಣವನು ಅನ್ನುವ ಭಾವದಂತೆ ನಗುವ ಮುಖ ಮಾಡಿ ಸೂರಿ ಮುಂದುವರೆದ. ತಮ್ಮಪ್ಪಣ್ಣ ಕುಳಿತೇ ಇದ್ದರು. ಹೀಗೆ ನಾನು ಏಳನೇ ತರಗತಿ ಮುಗಿಸುವ ತನಕವೂ ತಮ್ಮಪ್ಪಣ್ಣನ ಸ್ವಾತಂತ್ರ‍್ಯ ದಿನದ ಪ್ರವಚನ “ಗಾಂಧಿ ಕಷ್ಟಪಟ್ಟು…. ಅನ್ನ ನೀರು ಬಿಟ್ಟು….. ಉಪವಾಸ ಮಾಡಿ …. ದೇಶ ನಮ್ಮದು ಅನ್ನುವ ಹಾಗೆ ಮಾಡಿದರು” ಅನ್ನುವ ಇದೊಂದೇ ವಿಚಾರವನ್ನು ಏಳು ರ‍್ಷವೂ ಕೇಳಿದ್ದಾಯ್ತು! ತಮ್ಮಪ್ಪಣ್ಣನನ್ನು ಹೊರತುಪಡಿಸಿದರೆ ಬೇರೆ ಯಾರೂ ಅಧ್ಯಕ್ಷರ ಕರ‍್ಚಿ ಅಲಂಕರಿಸಲಾಗಲೇ ಇಲ್ಲ. ಹೈಸ್ಕೂಲು ಸೇರಿದ ನಂತರ ಮೇಷ್ಟರು ಬದಲಾದರು! ಬೇರೆ ಊರಾಗಿದ್ದರಿಂದ ತಮ್ಮಪ್ಪಣ್ಣನ ಪ್ರವಚನ ತರ‍್ಗಡೆಯಾಗದೇ ಊರಿನ ಹಿರಿಯ ಪ್ರಾಥಮಿಕ ಶಾಲೆಯಲ್ಲಿಯೇ ಉಳಿಯಿತು. ಸ್ವಾತಂತ್ರ‍್ಯ ಸಂಗ್ರಾಮದ ಹಲವು ವಿಚಾರಗಳು, ಕತೆಗಳು ಉಪಕತೆಗಳು, ಗಾಂಧೀಜಿಯ ಸತ್ಯಾಗ್ರಹಗಳು, ಸಬರಮತಿ ಆಶ್ರಮ, ಸಮಾಜ ಸುಧಾರಣೆಗಳು, ಪತ್ರಿಕೋದ್ಯಮ, ಹೀಗೆ ಗಾಂಧೀ ತತ್ವಗಳ ಒಂದೊಂದೇ ಎಳೆಗಳು ಮನದ ತೆರೆಕಾಣಲಾರಂಭಿಸಿದವು. ಅನಾಹುತಗಳನ್ನು ಸುಮ್ಮನೆ ಜರ‍್ಣಿಸಿಕೊಂಡು ನಾವು ಸ್ವತಂತ್ರರೆಂದುಕೊಂಡುಬಿಡುವುದಾ? ಕುವೆಂಪು ಹೇಳಿದ ಈ ಸಾಲು ನೆನಪು ಮಾಡಿಕೊಳ್ಳಬೇಕು; “ಕತ್ತಿ ಪರಕೀಯವಾದರೆ ಮಾತ್ರ ನೋವೇ? ನಮ್ಮವರೇ ಹದಮಾಡಿ ತಿವಿದರದು ಹೂವೇ?” ಎನ್ನುವುದನ್ನು. ಅಂದಹಾಗೆ ತಮ್ಮಪ್ಪಣ್ಣ ತೀರಿಕೊಂಡು ದಶಕವಾಯ್ತು. ಆದರೂ ಸ್ವಾತಂತ್ರ‍್ಯೋತ್ಸವವೆಂದರೆ ಮೊದಲು ನೆನಪಾಗುವುದು ನಮ್ಮ ತಮ್ಮಪ್ಪಣ್ಣನ ಪ್ರವಚನ, ಉಗಿಬಂಡಿಯ ಉರುವಲಿನಂತೆ ಕೆಂಪಗಿರುತ್ತಿದ್ದ ಅವರ ತಾಂಬೂಲದ ಬಾಯಿಂದ ಹೊರಬೀಳುತ್ತಿದ್ದ ಗಾಂಧೀಜಿಯ ಉಪ್ವಾಸ, ಹೊಟ್ಟೆ ಬಟ್ಟೆ ಕಟ್ಟಿ ದೇಶ ನಮ್ಮದು ಅಂತ ಮಾಡಿಕೊಟ್ಟ ಗಾಂಧೀ ಸಾಧನೆ! “ತಟ್ಟು ಚಪ್ಪಾಳೆ ಪುಟ್ಟಮಗು ತಕೋ ಕೈ, ಇಕೋ ಕೈ, ಗಾಂಧಿಗಿಂದು ಜನುಮದಿನ” ಅಂತ ಮಗಳಿಗೆ ಹೇಳುತ್ತಾ ತಮ್ಮಪ್ಪಣ್ಣನ ಸಾಲು ಸಾಲು ಪ್ರವಚನಮಾಲೆಗಳು ನೆನಪಾದವು.

ಹೊತ್ತಾರೆ Read Post »

ಅಂಕಣ ಸಂಗಾತಿ

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಡಾ.ಸಣ್ಣರಾಮ (ಹಿಂದಿನ ವಾರದಿಂದ) ಕಳೆದ ಸಂಚಿಕೆಯಿAದ…  ಶಿವಮೊಗ್ಗ ಜಿಲ್ಲೆಯ ಚಳವಳಿಗಳು  ದೈವದ ಪ್ರೇರಣೆ ಎನ್ನುವಂತೆ ಅನಿಮಿಷ ಗುರುಗಳ ದರ್ಶನವನ್ನು ಪಡೆಯುತ್ತಾರೆ. ಅಲ್ಲಮ ಪ್ರಭುವಿನ ಬದುಕಿನಲ್ಲಿ ಕಾಮಲತೆಯ ಪ್ರವೇಶ ಮತ್ತು ಮರಣ, ಅನಿಮಿಷ ಗುರುವಿನ ಸಂದರ್ಶನ ಸಂದರ್ಭಗಳು ಹೊಸ ಸಾಧನೆಯ ದಿಕ್ಕನ್ನು ತೋರಿದವು. ಅವನ ಸಾಧನೆಯಿಂದ ಅದನು ಬಹುದೊಡ್ಡ ಅನುಭಾವಿಯಾಗಿ ಮಾರ್ಪಟ್ಟನು. ಬಸವಣ್ಣನವರ ಕ್ರಾಂತಿಗೆ ಕೈ ಜೋಡಿಸಿದ ಮಹಾ ಸಾಧಕನಾಗಿ ಗುರುತಿಸಿಕೊಂಡು ಕರ್ನಾಟಕದ ಶರಣ ಚಳುವಳಿಯ ಇತಿಹಾಸದಲ್ಲಿ ಮುಖ್ಯ ಸ್ಥಾನವನ್ನು ಪಡೆದುಕೊಂಡನು.  ಅಲ್ಲಮ ಪ್ರಭುವಿನ ಬದುಕು ಕೇವಲ ಚಿಂತನೆ, ವಚನ ರಚನೆಗೆ ಮಾತ್ರ ಸೀಮಿತವಾಗಿರಲಿಲ್ಲ. ಲೋಕದ ಜನರ ಬದುಕನ್ನು ತಿದ್ದಿ ಅವರ ಜೀವನ ಸರಿ ದಾರಿ ತೋರಲು ಶ್ರಮಿಸಿದ. ಅಲ್ಲದೆ ಸಾಧಕರು ಇದ್ದಲ್ಲಿಗೆ ಹೋಗಿ ಅವರಲ್ಲಿದ್ದ ಕುಂದು ಕೊರತೆಗಳನ್ನು ತಿದ್ದಿ ಶರಣ ಚಳುವಳಿಗೆ ಪೂರಕ ಶಕ್ತಿಯಾಗುವಂತೆ ಮಾರ್ಪಡಿಸಿದರು. ದೀನ ದಲಿತರನ್ನು ಸಂತೈಸಿ ಸಮಾಜ ಸೇವೆಗೆ ತೊಡಗಿಸಿಕೊಂಡನು. ಬಸವಣ್ಣನವರ ಸಾಮಾಜಿಕ ಕ್ರಾಂತಿಗೆ ಪೂರ್ಣ ಬೆಂಬಲವಾಗಿ ನಿಂತನು. ಅನುಭವ ಮಂಟಪದ ಅಧ್ಯಕ್ಷನಾಗಿ ವೀರಶೈವ ತತ್ವ-ಚಿಂತನಾ ಮಂಥನ ಸಭೆಗಳನ್ನು ನಿಯಂತ್ರಿಸಿ ಮಹಾಶರಣ ನೆನೆಸಿಕೊಂಡನು.  ಅಲ್ಲಮಪ್ರಭು ಚಿಂತಕನೆಂತೋ ಹಾಗೆಯೇ ವಚನ ರಚನಾ ಕೌಶಲ್ಯವನ್ನು ಪಡೆದಿದ್ದನು.ಅಂತೆಯೇ ಬೆಡಗಿನ ವಚನಕಾರನೆಂದೇ ಪ್ರಸಿದ್ದಿಯನ್ನು ಪಡೆದವರು. ಅವರ ವಚನಗಳಲ್ಲಿ ನೀತಿ ಇದೆ. ಕಟು ವಿಡಂಬನೆಯಿದೆ, ತತ್ವವಿದೆ, ಬದುಕಿನ ಪೂರ್ಣತೆಯ ಹುಡುಕಾಟವಿದೆ. ಅನುಭವವಿದೆ, ಅವರ ನಿರಾಕಾರ ತತ್ವವಂತು ಚಿಂತಕರನ್ನು ಚಕಿತಗೊಳಿಸುತ್ತದೆ.  ಸ್ಪಟಿಕದ ದೀಪದಂತೆ ಒಳ ಹೊರಗು ಇಲ್ಲ ನೋಡಾ  ವಿಗಡ ಚರಿತ್ರಕ್ಕೆ ನಾ ಬೆರಗಾದೆನು  ನೋಡಿದರೆ ಕಾಣ ಬರುತ್ತದೆ, ಮುಟ್ಟಿದರೆ ಕೈಗೆ ಸಿಲುಕದು  ಹೊದ್ದಿದರೆ ಸಮೀಪ ಹತ್ತ ಸಾರಿದಡೆ ಅತ್ತತ್ತ ತೋರುತಿದೆ  ಆಕಾರ ನಿರಾಕಾರವೆ ನುಂಗಿ ಬಯಲು ಸಮಾಧಿಯಲ್ಲಿ ಸಿಲುಕಿತ್ತು  ನೋಡಾ ಗುಹೇಶ್ವರಾ  ಈ ವಚನದಲ್ಲಿ ಪ್ರಭುದೇವ ಸೃಷ್ಠಿಯ ಅನಂತತೆಯನ್ನು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಸೃಷ್ಟಿ ನಿತ್ಯ ನೂತನವಾದದು, ನಿರಂತರ ಚಲನಾಶೀಲೆ, ಅದರ ಗಹನತೆಯನ್ನು ಅರ್ಥೈಸಿಕೊಳ್ಳಲು ಸಾಧನವಲ್ಲದೆ ಸಾಮಾನ್ಯನಿಗೆ ಸಾಧ್ಯವಿಲ್ಲ. ಸೃಷ್ಟಿಯ ಆಂತರ್ಯ ಸಂಭವಿಸುವ ವಿದ್ಯಮಾನವನ್ನು ಅಲ್ಲಮನಷ್ಟು ಸಶಕ್ತವಾಗಿ ಕಟ್ಟಿಕೊಟ್ಟವರು ವಿರಳ. ಆಕಾಶ-ನಿರಾಕಾರ ಬಯಲು ಸಮಾಧಿ ಈ ಪದಗಳ ಸಂದರ್ಭೋಚಿತ ಬಳಕೆ ವಿದ್ವಾಂಸರನ್ನು ಬೆರಗುಗೊಳಿಸುತ್ತದೆ.  ಶರಣರು ಇರದ ಲೋಕಕ್ಕೆ ಮಹತ್ವವವನ್ನು ಕೊಟ್ಟವರು, ಪರಲೋಕದ ತಾಪತ್ರಯದಿಂದ ದೂರವಿದ್ದವರು. ನಮ್ಮ ಸಮಾಜದಲ್ಲಿ ನಡೆಯುತ್ತಿರುವ ಮೂಢನಂಬಿಕೆ, ಕಂದಾಚಾರವನ್ನು ನೇರ ಮಾತುಗಳಿಂದ ಖಂಡಿಸಿದವರು, ನೇರ ನುಡಿಯ ಅಲ್ಲಮಪ್ರಭು ಅಂತರAಗ ಶುದ್ದಿಗೆ ಅಪಾರ ಮಹತ್ವವನ್ನು ಕೊಟ್ಟವರು.  ಸುತ್ತಿ ಸುತ್ತಿ ಬಂದಡಿಲ್ಲ, ಲಕ್ಷ ಗಂಗೆಯ ಮಿಂದಡಿಲ್ಲ,  ತುಟ್ಟ ತುದಿಯ ಮೇಲು ಗಿರಿಯ ಮೆಟ್ಟಿ ಕೂಗಿದಡಿಲ್ಲ  ನಿತ್ಯ ನೇಮದಿಂದ ತನುವ ಮುಟ್ಟಿಕೊಂಡಡಿಲ್ಲ  ನಿಚ್ಚಕ್ಕೆ ನಿಚ್ಚ ನೆನೆವ ಮಾನವ ಅಂದAದಿಗೆ ಅತ್ತಲಿತ್ತ ಹರಿವ ಮನದ  ಚಿತ್ತದಲಿ ನಿಲಿಸಬಲ್ಲದೆ  ಬಚ್ಚ ಬರಿಯ ಬೆಳಗು ಗುಹೇಶ್ವರ ಲಿಂಗವು.  ಭಾರತೀಯ ತತ್ವಜ್ಞಾನ ಇಹಕ್ಕಿಂತ ಪರಕ್ಕೆ ಹೆಚ್ಚಿನ ಮಹತ್ವವನ್ನು ಕೊಡುತ್ತದೆ. ಪರಲೋಕ ಸಾಧಿಸಲು ಅನೇಕ ಬಗೆಯ ದೈಹಿಕ ಕಸರತ್ತನ್ನು ಆಚರಿಸಲು ಹೇಳುತ್ತದೆ. ಪರಲೋಕ ಇದೆಯೋ ಇಲ್ಲವೋ ಎಂಬುದನ್ನು ಪ್ರಮಾಣಿಸಿ ಹೇಳಿದವರು ಯಾರು ಇಲ್ಲ. ಶರಣರು ಇಹಕ್ಕೆ ಹೆಚ್ಚಿನ ಮಹತ್ವವನ್ನು ಕೊಟ್ಟವರು. ಅಲ್ಲಮಪ್ರಭು ಇದನ್ನೇ ಈ ವಚನದಲ್ಲಿ ಪ್ರತಿಪಾದಿಸಿದ್ದಾರೆ. ಮನಸ್ಸನ್ನು ನಿಯಂತ್ರಿಸದೆ ಎಷ್ಟು ಲೋಕವನ್ನು ಸುತ್ತಿದರೂ ಪೂರ್ಣತ್ವ ಪ್ರಾಪ್ತವಾಗುವುದಿಲ್ಲ ಎಂದು ಅಲ್ಲಮ ತೀಕ್ಷ÷್ಣವಾಗಿ ಪ್ರತಿಪಾದಿಸಿದ್ದಾರೆ. ಅಲ್ಲಮ ಪ್ರಭು ಒಬ್ಬ ದಾರ್ಶನಿಕ ಶರಣ. ತತ್ವಜ್ಞಾನಿಯಾಗಿ, ಸಂಘಟಕನಾಗಿ, ಸಮಾಜ ಸುಧಾರಕನಾಗಿ, ಬೆಡಗಿನ ವಚನ ರಚನಾಕಾರನಾಗಿ ಅವರ ಕೊಡುಗೆ ಅಪಾರ.  ಶಿವಶರಣರ ಚಳವಳಿಯಲ್ಲಿ ಪುರುಷರಷ್ಟೇ ಮಹಿಳೆಯರಿಗೂ ಸರಿಸಮಾನ ಸ್ಥಾನಮಾನಗಳಿದ್ದವು. ಎಂದಿಲ್ಲದ ಮಹಿಳೆಯರು ಶರಣ ಚಳವಳಿಯಲ್ಲಿ ಪಾಲ್ಗೊಂಡು ಅಪರೂಪದ ವಚನಗಳನ್ನು ರಚಿಸಿದ್ದೇ ಇದಕ್ಕೆ ಸಾಕ್ಷಿ. ವಚನಗಾರ್ತಿಯರಲ್ಲಿ ಮಂಚೂಣಿಯಲ್ಲಿ ಕಂಡು ಬರುವವಳು ಅಕ್ಕಮಹಾದೇವಿ. ಅದು ಕವಯಿತ್ರಿಯಾಗಿ, ಮಹಿಳಾವಾದಿಯಾಗಿ ಅಕ್ಕಳ ಬದುಕ ಮಾದರಿಯಾದುದು ಹತ್ತನೆ ಶತಮಾನದಲ್ಲಿ ಕಂತಿ ಎಂಬ ಹೆಸರಿನ ಮಹಿಳೆಯೋರ್ವಳು ಕೆಲವು ಸಾಲುಗಳ ಸಾಹಿತ್ಯವನ್ನು ರಚಿಸಿರಬಹುದೆಂಬುದರ ಊಹೆಯ ಹೊರತಾಗಿ ಅಕ್ಕ ಆದ್ಯ ಕವಯಿತ್ರಿಯಾಗಿ ಸಾಹಿತ್ಯ ಲೋಕಕ್ಕೆ ಸ್ಮರಣೀಯ ಕೊಡುಗೆಯನ್ನು ನೀಡಿದ್ದಾಳೆ. ಕೇವಲ ಕರ್ನಾಟಕ ಮಾತ್ರವಲ್ಲ ಭಾರತೀಯ ಚರಿತ್ರೆಯಲ್ಲಿ ಮಹಿಳಾ ವಾದದ ಪ್ರಾಚೀನತೆಯನ್ನು ಹುಡುಕುತ್ತಾ ಹೋಗುವವರಿಗೆ ಮೊಟ್ಟ ಮೊದಲಿಗೆ ಕಂಡು ಬರುವ ಹೆಸರೇ ಅಕ್ಕಮಹಾದೇವಿ. ಆಧುನಿಕ ಮಹಿಳಾ ವಾದದ ಎಲ್ಲಾ ಗುಣ ಸ್ವಭಾವಗಳು, ಹೋರಾಟಗಳು ಅಕ್ಕನಲ್ಲಿ ಕಂಡು ಬರುತ್ತವೆ. ಅಕ್ಕ ಪುರುಷ ಕೇಂದ್ರಿತ ಎಲ್ಲಾ ಕಟ್ಟು ಕಟ್ಟಲೆಗಳನ್ನು ಒಡೆದು ಛೀದ್ರಗೊಳಿಸಿ 12 ನೇ ಶತಮಾನದ ವೇಳೆಗಾಗಲೇ ಮಹಿಳಾ ಸ್ವಾಭಿಮಾನವನ್ನು ಪ್ರತಿಪಾದಿಸಿದವಳು. ಅವಳ ಬದುಕೇ ಅಷ್ಟು ರೋಚಕ ಸಂಕಥನ.  ಆಧುನಿಕ ಮಹಿಳಾವಾದವು ಸ್ತ್ರೀಯ ಮೈ-ಮನಸ್ಸುಗಳ ಮೇಲೆ ಪುರುಷನ ಹಕ್ಕನ್ನು ಧಿಕ್ಕರಿಸುತ್ತದೆ. ಹೆಣ್ಣಿನ ಮೇಲಿನ ದೌರ್ಜನ್ಯವನ್ನು ಸಮಾನತೆ ಮುಕ್ತ ಆಯ್ಕೆಯ ಹಕ್ಕುಗಳನ್ನು ಪ್ರತಿಪಾದಿಸುತ್ತದೆ. ಒಂದೊಮ್ಮೆ ಈ ಹಕ್ಕುಗಳು ಲಭ್ಯವಾಗಿದಿದ್ದರೆ ಅದನ್ನು ಪ್ರತಿಭಟನೆಯ ಮೂಲಕ ಪಡೆದುಕೊಳ್ಳುವ ಹಿಂದೇಟು ಹಾಕಕೂಡದೆಂದು ಪ್ರತಿಪಾದಿಸುತ್ತದೆ. ಈ ಎಲ್ಲಾ ಬಗೆಯ ಪ್ರತಿಭಟನೆಯನ್ನು ಅಂದೇ ಅಕ್ಕಮಹಾದೇವಿ ಮಾಡಿ ತೋರಿದ್ದಳು. ಆದ್ದರಿಂದ ಅಕ್ಕ ಮಹಾದೇವಿ ಆಧುನಿಕರಿಗೆ ಆಧುನಿಕ ಮಹಿಳಾ ಹೋರಾಟಗಾರ್ತಿ ಎಂದರೆ ತಪ್ಪಾಗಲಾರದು.  ಮೊದಲ ಮಹಿಳಾವಾದಿ ಅಕ್ಕಮಹಾದೇವಿ ಜನಿಸಿದ್ದು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ. ಈಗ ಅದು ಉಡುಗಣಿಯಾಗಿದೆ. ತಂದೆ ನಿರ್ಮಲಶೆಟ್ಟಿ ತಾಯಿ ಸುಮತಿ, ಗುರು ಲಿಂಗದೇವರು ಲಿಂಗಧಾರಣೆ ಮಾಡಿದವರು. ಚಿಕ್ಕಂದಿನಿಂದಲೇ ಶಿವಭಕ್ತಳಾದ ಅಕ್ಕಮಹಾದೇವಿ ಲೌಕಿಕ ಜೀವನದಲ್ಲಿ ನಿರಾಶಕ್ತಿಯನ್ನು ಹೊಂದಿದ್ದಳು. ಯೌವನದ ಹೊಸ್ತಿಲಲ್ಲಿ ಅಕ್ಕ ಅಸಾಧಾರಣ ಸೌಂದರ್ಯವತಿಯಾಗಿದ್ದಳು. ಅನಿರಿಕ್ಷಿತ ಸಂದರ್ಭದಲ್ಲಿ ಅಕ್ಕನನ್ನು ಕಂಡ ಕೌಶಿಕ ಮಹಾರಾಜ ಮದುವೆಯಾಗಲು ಬಯಸುತ್ತಾನೆ. ತಂದೆ-ತಾಯಿಯರಿಗೆ ಕೌಶಿಕನನ್ನು ಮದುವೆ ಮಾಡಲು ಇಷ್ಟವಿಲ್ಲದಿದ್ದರೂ ಅವನಿಂದ ತನ್ನ ತಂದೆ ತಾಯಿಗೆ ಆಗಬಹುದಾದ ಹಿಂಸೆಯನ್ನು ಮನಗಂಡು ಷರತ್ತುಬದ್ದ ಮದುವೆಯಾಗಲು ಒಪ್ಪುತ್ತಾಳೆ. ಕೌಶಿಕ ಅಕ್ಕಳ ಷರತ್ತನ್ನು ಒಪ್ಪಿ ಮದುವೆಯಾಗುತ್ತಾನೆ. ಅಕ್ಕಳ ಷರತ್ತನ್ನು ಪಾಲಿಸದ ಕೌಶಿಕ ಅಕ್ಕ ಶಿವಪೂಜೆಯಲ್ಲಿ ನಿರತಳಾಗಿದ್ದಾಗ ಮುಟ್ಟಲು ಮುಂದಾಗುತ್ತಾನೆ. ಆ ಸಂದರ್ಭದಲ್ಲಿ ಅಕ್ಕಳ ಮುಂದೆ ಎರಡು ಆಯ್ಕೆಗಳಿರುತ್ತವೆ. ಕೌಶಿಕನೊಂದಿಗೆ ಹೊಂದಿಕೊಂಡು ಸಂಸಾರವನ್ನು ಒಪ್ಪಿಕೊಳ್ಳುವುದು, ಇನ್ನೊಂದು ಇಹದ ವೈಭೋಗವನ್ನು ದಿಕ್ಕರಿಸಿ ಸ್ವತಂತ್ರವಾಗಿ ಬದುಕುವುದು. ಅಕ್ಕ ಎರಡನೆಯದ್ದನ್ನೆ ಆಯ್ಕೆ ಮಾಡಿಕೊಳ್ಳುತ್ತಾಳೆ. ಭಕ್ತಿ ಭಂಡಾರಿಯಾಗಿದ್ದ ಅಕ್ಕಮಹಾದೇವಿ ಪರಾಧೀನತೆಯ ಬದುಕನ್ನು ದಿಕ್ಕರಿಸಿ ನಿಲ್ಲುತ್ತಾಳೆ. ಈ ನಿರ್ಧಾರ ಅಕ್ಕಳ ಬದುಕಿನ ಬಹುದೊಡ್ಡ ತಿರುವಾಗಿ ಮಹಿಳೆಯರ ಸ್ವಾಭಿಮಾನದ ಬದುಕಿಗೆ ಮಾದರಿಯಾಗಿ ನಿಂತಿದ್ದಾಳೆ. ಇತಿಹಾಸದ ಪುಟದಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಿದೆ.  ಹಿಡಿಯದಿರು ತಡೆಯದಿರು ಬಿಡು ಬಿಡು ಕೈಯ ಸೆರಗ  ಭಾಷೆಯ ಬರೆದುಕೊಟ್ಟು ಸತ್ಯಕ್ಕೆ ತಪ್ಪಿದರೆ  ಅಘೋರ ನರಕ ವೆಂದರಿಯ- ಎಂದು ಅಕ್ಕಮಹಾದೇವಿ ಪರಿಪರಿಯಾಗಿ ಬೇಡುತ್ತಾಳೆ. ಒಪ್ಪದಿದ್ದಾಗ ತಿರಸ್ಕರಿಸಿ ಉಟ್ಟ ಬಟ್ಟೆಯನ್ನು ಬಿಚ್ಚೊಗೆದು ಕೇಶಾಂಬರಿಯಾಗಿ ಕೂಡಲ ಸಂಗಮಕ್ಕೆ ಹೊರಟು ಬಿಡುತ್ತಾಳೆ. – ಮುಂದುವರೆಯುತ್ತದೆ…

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು Read Post »

ಅಂಕಣ ಸಂಗಾತಿ

ಅವ್ಯಕ್ತಳ ಅಂಗಳದಿಂದ

ಈ ಹೊಸ ಅಂಕಣ ಎರಡು ವಾರಕ್ಕೊಮ್ಮೆ ಪ್ರಕಟವಾಗುತ್ತದೆ. ಅವ್ಯಕ್ತ ಓದುವ ಮುನ್ನ ಮಕ್ಕಳು ಮುಂದಿನ ಸಮಾಜವನ್ನು ಕಟ್ಟುವಂತಹ ಶಿಲ್ಪಿಗಳು ಎಂದು ನಂಬಿರುವವಳು ನಾನು. ನಮ್ಮ ಸುತ್ತ ನೋಡಿದಾಗ ಎರಡು ತರಹದ ವ್ಯಕ್ತಿತ್ವಗಳನ್ನು ಕಾಣಬಹುದು ಎಜುಕೇಶನ್ ಎಂಬುದನ್ನು ಬರೀ ಅಂಕಪಟ್ಟಿಯಲ್ಲಿ ಹೆಚ್ಚಿನ ಅಂಕ ತೆಗೆಯಲು ಸೀಮಿತವಾಗಿರಿಸಿರುವುದು,ಹಣ ಮಾಡುವುದು, ಸ್ವಾರ್ಥ ಜೀವನ ನಡೆಸುವುದು…ಅಥವಾ ಎಜುಕೇಶನ್ ಎಂದರೆ ಒಂದು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುವುದು, ಸ್ವಾರ್ಥ ಹಾಗೂ ನಿಸ್ವಾರ್ಥ ಎರಡರನಡುವೆ ಸಮತೋಲನ ತರುವುದು, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು…ಮೊದಲನೆಯ ತರಹದ ವ್ಯಕ್ತಿಗಳು ಹಲವರಿದ್ದರೂ, ಎರಡನೆಯ ತರದವರು ಬೆರಳೆಣಿಕೆಯಷ್ಟು ಈ ನಿಟ್ಟಿನಲ್ಲಿ ನಾನು ನನ್ನ ಹೆಚ್ಚಿನ್ನ ಸಮಯವನ್ನುಮಕ್ಕಳೊಂದಿಗೆ ಕಳೆದಿದ್ದೇನೆ, ಮಕ್ಕಳ ಮನಸ್ಸನ್ನು ಅರಿಯಲು, ತೊಂದರೆಗಳನ್ನು ಪರಿಶೀಲಿಸುವುದುನನ್ನ ದಿನನಿತ್ಯ ಜೀವನದ ಒಂದು ಭಾಗ. ನಾವು ಕಲಿತ ರೀತಿಯಲ್ಲಿ ನಮ್ಮ ಮಕ್ಕಳಿಗೆ ಹೇಳಿ ಕೊಡಲಾಗುವುದಿಲ್ಲ ಏಕೆಂದರೆ ಇಂದಿನ ಸಮಾಜ ಹಾಗೆ ಉಳಿದಿಲ್ಲ… ಈ ನಿಟ್ಟಿನಲ್ಲಿ ನನ್ನ ಮಕ್ಕಳೊಂದಿಗಿನ ಅನುಭವಗಳನ್ನು ಸುಮ್ಮನೆ ಬರೆದಿಡಲು ಪ್ರಾರಂಭಿಸಿದೆ ಒಂದು ನಂಬಿಕೆ ಮನಸ್ಸಿನಲ್ಲಿ ಇತ್ತು ಎಂದಾದರೂಯಾರಾದರೂ ಅನುಭವಗಳನ್ನು ಮುಂದಿಟ್ಟುಕೊಂಡು ಇನ್ನಷ್ಟು ಮಕ್ಕಳಿಗೆ ಒಳ್ಳೆಯದಾಗಲಿ.. ಸಂಗಾತಿ ಪತ್ರಿಕೆಯು ಈ ಮೂಲಕ ನನ್ನ ಅನುಭವ ಹಾಗೂ ಬರವಣಿಗೆಯನ್ನು ಗುರುತಿಸಿಅದನ್ನು ಪ್ರಕಾಶಿಸಲು ಅವಕಾಶ ನೀಡಿದೆ.ಇದರಿಂದ ಹಲವು ಮಕ್ಕಳಿಗೆ, ಮಕ್ಕಳ ಬಗ್ಗೆ ಕಾಳಜಿ ಇರುವವರಿಗೆ ಸಹಾಯವಾಗಬಹುದು ಎಂದು ಆಶಿಸುತ್ತೇನೆ. ಸಮಾಜದ ಬೆಳವಣಿಗೆ ನಮ್ಮ ಜವಾಬ್ದಾರಿಯಾಗಿರುತ್ತದೆ ಒಟ್ಟಾಗಿ ಅದನ್ನು ಚಂದಗೊಳಿಸುವ ಬೆಳೆಸುವ! ಬದಲಾವಣೆ ಇನ್ನೆರಡು ದಿನಗಳಲ್ಲಿ ಶಿಕ್ಷಕರ ದಿನಾಚರಣೆ ಇದ್ದಿದ್ದರಿಂದ ಓದೋದು ಬಿಟ್ಟು ಕುಸುಕುಸು ಪಿಸಿಪಿಸಿ ಮಾತಾಡ್ಕೊಂಡು ಕೂತಿದ್ರು. ನಾನು ಪೀಠಿಕೆ ಹಾಕಿದೆ “ಎಷ್ಟು ದುಡ್ಡು ಕಲೆಕ್ಟ್ ಮಾಡ್ತಾ ಇದ್ದೀರಾ ಎಲ್ರೂ… ಟೀಚರ್ಸ್ ಡೇಗೆ?” ಮ್ಯಾಮ್1000, 500, 1500…ನನಗೆ ಕೇಳಿ ಆಶ್ಚರ್ಯ, ಕಸಿವಿಸಿಯಾಯಿತು ತೋರಿಸ್ಕೊಳ್ಲಿಲ್ಲ. ಎಲ್ರುನ್ನೂ ಸುಮ್ನೆ ಕೇಳ್ದೆ “ನಿಮ್ಮ ಇಷ್ಟದ  ಶಿಕ್ಷಕರ ಬಗ್ಗೆ ಒಬ್ಬೊಬ್ಬರುಎರಡೆರಡು ಸಾಲಿನಷ್ಟು ಹೇಳಿ”.ಎಲ್ಲರೂ ಪುಸ್ತಕ ಮುಚ್ಚಿಟ್ಟು ತಾಮುಂದು ನಾಮುಂದು ಅಂತ ಹೇಳಕ್ಕೆ ಶುರುಮಾಡಿದ್ರು…  ಒಂದು ನಿಮಿಷ ಬಿಟ್ಟು ಸ್ವಲ್ಪಸ್ವರ ಏರಿಸಿ “ಸಾಕು ಈಗ ನನ್ನ ಪ್ರಶ್ನೆಗಳಿಗೆ ಯೋಚಿಸಿ ಉತ್ತರ ಕೊಡಿ”ಅಂದೆ. ಎಲ್ಲರೂ ಅಶಕ್ತವಾಗಿ(ನಿಶ್ಯಬ್ಧವಾಗಿ) ಕೇಳತೊಡಗಿದರು. ನಾನು ಕೇಳಿದೆ “ ನಿಮ್ಮ ಗುರುಗಳು ಯಾವತ್ತಾದ್ರು ಹೀಗ್ ಹೇಳಿದ್ರಾ?“ನೀನು ಹಣವಂತನಾಗಬೇಕು, ನೀನು ನನಗೆ ಬಟ್ಟೆಬರೆ ಇತ್ಯಾದಿ ಕೊಡ್ಸು, ನೀನು ನನ್ನ ಹುಟ್ಟಿದ ಹಬ್ಬ ವಿಜ್ರಂಭಣೆಯಿಂದಆಚರ್ಸು, ನೀನು ನಂಗೆ ತಿಂಡಿ ತಿನಿಸು ಕೊಡ್ಸು, ನೀನು ದೊಡ್ಡ ಮನುಷ್ಯ ಆಗಿ ನನ್ನ ಹೆಸರನ್ನು ಹೊರಗಡೆ ಸಮಾಜಕ್ಕೆ ಹೇಳು, ನನಗೆ ತುಂಬಾ ಕಷ್ಟ ಇದೆ ನನಗೆ ಸಹಾಯ ಮಾಡು…???” ಮಕ್ಕಳು ತಟ್ಟನೆ ಹೇಳಿದ್ರು “ಇಲ್ಲ, ಯಾವತ್ತೂ ಹೇಳಿಲ್ಲ…” ಮನಸಲ್ಲಿನಗಾಡಿಕೊಂಡು “ಹೌದಾsssss! , ಹಾಗಾದ್ರೆ ಹೀಗ್ಹೇಳಿದ್ದಾರಾ?.. ನೀನು ಗುಣವಂತನಾಗು,  ಬೇಕೆಂದವರಿಗೆ ಸಹಾಯ ಮಾಡು, ನಕ್ಕು ನಗಿಸು ಯಾರನ್ನೂನೋಯಿಸ್ಬೇಡ , ಹಿರಿಯರನ್ನು ಪ್ರೀತಿ ಗೌರವದಿಂದ ನೋಡ್ಕೋ, ಕಿರಿಯರ ಮೇಲೆ ಕಾಳಜಿ ಇರ್ಲಿ,  ನಿನ್ನ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸು, ದೇಶಕ್ಕೆ ಒಳ್ಳೆಯ ಪ್ರಜೆಯಾಗು,ಮನೆಗೆ ಒಳ್ಳೆಯ ಮಗುವಾಗು” ಎಲ್ರೂ “ಹೌದು ಹೌದು!” ಅಂತ ಇನ್ನಷ್ಟು ವಿಚಾರಗಳನ್ನಹಂಚ್ಕೊಂಡ್ರು. ಎರಡು ನಿಮಿಷ ನಿಶ್ಶಬ್ದವಾಗಿ ಇದ್ದು… “ನಿಮ್ಮ ಪ್ರಿಯ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಅತ್ಯಂತ ಒಳ್ಳೆ ಉಡುಗೊರೆ ಎಂದರೆ ಅವರು ಹೇಳ್ಕೊಟ್ಟಿರೋ ವಿಚಾರಧಾರೆನನಿಮ್ಮಲ್ಲಿ ಬೆಳೆಸಿಕೊಳ್ಳೋದಲ್ವೇ ಮಕ್ಳೇ?” “ACTIONS SPEAK my children”…ಅಂದೆ.. ಎಲ್ಲರೂ ಎರಡ್ನಿಮಿಷ ನಿಷಬ್ದರಾದ್ರು. ಅದ್ರಲ್ಲಿ ಒಬ್ಬಳು ಕೇಳಿದ್ಲು”ಈಗಇರೋ ಹಣದಲ್ಲಿ ನಾವು ಹೇಗೆ ಸಹಾಯ ಮಾಡದು? ನನ್ಟೀಚರ್ ಯಾವಾಗ್ಲೂಬೇರೆಯವರಿಗೆ ಸಹಾಯ ಮಾಡಿ, ಅಂತಾರೆ!” ನಾನು ಈ ಪ್ರಶ್ನೆಗೆ ಕಾಯುತ್ತಿದ್ದ್ನೇನೋ ಅನ್ನೋಹಾಗೆ ಥಟ್ಟನೆ ಹೇಳಿದೆ “ಯೋಚಿಸ್ನೋಡು! ನಿಮ್ಮ ಶಾಲೆಯಲ್ಲಿ ಬಡಮಕ್ಕಳಿರ್ಬೌದಲ್ವಾ?… ” ಅವಳು ಸಂಭ್ರಮದಿಂದ “ಹೌದು ಮಿಸ್, ಹಾಗಾದರೆ, ಈ ಸರಿ ನಾವು ಕಲೆಕ್ಟ್ ಮಾಡಿರೋ ಹಣಾದಲ್ಲಿನಾಲ್ಕೆದು ಚಾರ್ಜರ್ ಲೈಟ್ಗಳನ್ನತಂದುಅಕ್ಕನ ಮನೆಯಲ್ಲಿಕರೆಂಟ್ಟ್ಲಿಲ್ವಲ್ಲಾ… ಅವಳಿಗೆಕೊಡೋಣ. ಓದಕ್ಕೆ ಸಹಾಯಆಗುತ್ತೆ.!! “ ನಾನು “ಶಹ್ಬಾಶ್ ಮಗ್ಳ!ಇದು ನಿಜವಾದ ಶಿಕ್ಷಕರ ದಿನಾಚರಣೆ!” ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿದ್ರು. ಎಲ್ಲಾ ಮಕ್ಕಳಿಗೆ ಕುರಿತು ಹೇಳಿದೆ  “ಬದಲಾವಣೆಗೆ ಎಂದು ಕಾದು ಕುತ್ಕೋ ಬಾರದು ಮನಸ್ಸು ಮಾಡಿ ಬದಲಾವಣೆ ನಮ್ಮಿಂದಲೇ ಪ್ರಾರಂಭ ಮಾಡ್ಬೇಕು.”

ಅವ್ಯಕ್ತಳ ಅಂಗಳದಿಂದ Read Post »

ಅಂಕಣ ಸಂಗಾತಿ

ನಾನು ಕಂಡ ಹಿರಿಯರು.

ಪ್ರೋ.ಎ.ಎನ್.ಮೂರ್ತಿರಾವ್ ಡಾ.ಗೋವಿಂದ ಹೆಗಡೆ ಪ್ರೊ ಎ ಎನ್ ಮೂರ್ತಿರಾವ್ (೧೯೦೦-೨೦೦೩) ೧೯೮೭ರ ಒಂದು ದಿನ. ಮೈಸೂರಿನಲ್ಲಿ ನಾನು ಎಂ ಬಿ ಬಿ ಎಸ್ ಓದುತ್ತಿದ್ದ ಸಮಯ. ಅಂದು ಕಾಲೇಜಿನ ವಿದ್ಯಾರ್ಥಿ ಸಂಘದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದವು. ಉದ್ಘಾಟನೆಗೆ ಬಂದವರು ೮೭ರ ಹರೆಯದ ವಾಮನಮೂರ್ತಿ ಪ್ರೊ.ಎ ಎನ್ ಮೂರ್ತಿರಾವ್. ಬಿಳಿಯ ಪಂಚೆ, ತುಂಬುತೋಳಿನ ಸಾದಾ ಅಂಗಿಯಲ್ಲಿದ್ದರು. ಅವರು ೧೯೮೪ರ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು ಎಂಬುದನ್ನು ಬಿಟ್ಟರೆ ನನಗೂ ಹೆಚ್ಚು ಗೊತ್ತಿರಲಿಲ್ಲ. ಕಾರ್ಯದರ್ಶಿ ಅವರನ್ನು ಸ್ವಾಗತಿಸಿ ಪರಿಚಯಿಸಿ ಮಾತನಾಡಲು ವಿನಂತಿಸಿದರು. ಒಂದೆರಡು ವಾಕ್ಯಗಳನ್ನು ಅವರು ನುಡಿಯುವಷ್ಟರಲ್ಲಿ ಹಿಂದಿನ ಸಾಲಿನ ಹುಡುಗರ ಗದ್ದಲ, ಶಿಳ್ಳೆ, ಕೇಕೆ. ನಿರುಪಾಯರಾಗಿ ಅವರು ಮಾತು ನಿಲ್ಲಿಸಬೇಕಾಯಿತು. ಹಿರಿಯರನ್ನು ಕರೆದು ಅವಗಣಿಸಿದ ಮುಜುಗರ,ವ್ಯಥೆ ನನಗಂತೂ ಆಯಿತು. ಅವರ ಮಾತುಗಳನ್ನು ಕೇಳಲು ನಾನು ೧೯೯೦ರವರೆಗೂ ಕಾಯಬೇಕಾಯಿತು. ಈ ನಡುವೆ ಅವರ ‘ಅಪರವಯಸ್ಕನ ಅಮೆರಿಕಾ ಯಾತ್ರೆ’, ‘ದೇವರು’ ಮೊದಲಾದ ಪುಸ್ತಕಗಳನ್ನು ಓದಿ ಅವರನ್ನು ತುಸು ಹೆಚ್ಚು ಪರಿಚಯಿಸಿಕೊಂಡಿದ್ದೆ. ೧೯೯೦ರ ಜುಲೈ ಇರಬೇಕು.. ಮಹಾರಾಜಾ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಅವರ ೯೦ನೇ ಜಯಂತಿಯ ಪ್ರಯುಕ್ತ ಸನ್ಮಾನ ಕಾರ್ಯಕ್ರಮವೊಂದು ಏರ್ಪಾಡಾಗಿತ್ತು. ಅಲ್ಲಿ ಅವರ ಬಗ್ಗೆ ಮತ್ತು ಅವರದೇ ನುಡಿಗಳನ್ನು ಕೇಳಿದೆ. ಅವರ ಬರಹಗಳಂತೆಯೇ ಮೆಲುಮಾತು, ತಿಳಿ ಹಾಸ್ಯ ಅವರದು. ಇಂಗ್ಲಿಷ್ ಅಧ್ಯಾಪಕರಾಗಿ,ಮೈಸೂರು ಆಕಾಶವಾಣಿಯ ಎ ಎಸ್ ಡಿ(ಉಪನಿರ್ದೇಶಕರು) ಆಗಿ, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿ ಅವರು ಮಾಡಿದ ಕಾರ್ಯಗಳು ಪ್ರಶಂಸನೀಯ. ಚಿತ್ರಗಳು-ಪತ್ರಗಳು,ಅಪರವಯಸ್ಕನ ಅಮೆರಿಕ ಯಾತ್ರೆ, ಅಲೆಯುವ ಮನ, ಸಂಜೆಗಣ್ಣಿನ ಹಿನ್ನೋಟ, ದೇವರು ಮೊದಲಾದವು ಅವರ ಕೃತಿಗಳು. ‘ಚಿತ್ರಗಳು-ಪತ್ರಗಳು’ ಒಂದು ವಿಶಿಷ್ಟ ಕೃತಿ. ಮೊದಲ ಭಾಗದಲ್ಲಿ ತಾವು ಕಂಡ ಅನೇಕ ಹಿರಿಯರ ಚಿತ್ರಣಗಳನ್ನು ಅವರು ಒದಗಿಸಿದ್ದಾರೆ ಎರಡನೆಯ ಭಾಗದಲ್ಲಿ ಸಾಹಿತಿಗಳೊಂದಿಗಿನ ಪತ್ರ ವ್ಯವಹಾರವನ್ನು ದಾಖಲಿಸುತ್ತಾರೆ. ಈ ಪುಸ್ತಕ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ತಂದು ಕೊಟ್ಟಿದೆ. ‘ಅಪರವಯಸ್ಕನ ಅಮೆರಿಕ ಯಾತ್ರೆ’ ಕನ್ನಡದಲ್ಲಿ ಬಂದ ಪ್ರವಾಸ ಕಥನಗಳ ಪೈಕಿ ಅಪೂರ್ವವಾದದ್ದು. ಇಂಗ್ಲಿಷ್ ಸಾಹಿತ್ಯದ ಗಂಭೀರ ವಿದ್ಯಾರ್ಥಿಯಾಗಿ, ಇಂಗ್ಲಿಷ್ ಪ್ರೊಫೆಸರ್ ಆಗಿ ಬದುಕಿದ ರಾಯರು ಬಿಡುಗಣ್ಣಿನ ಮೂಲಕ ತಾವು ಕಂಡ ಅಮೇರಿಕಾದ ನೆನಪುಗಳನ್ನು ದಾಖಲಿಸುತ್ತ, ಜೊತೆಗೆ ತಮ್ಮ ಓದಿನಿಂದ, ನೆನಪುಗಳಿಂದ ಅಪೂರ್ವ ಒಳನೋಟಗಳನ್ನು ನೀಡುತ್ತ ಮೌಲಿಕ ಗ್ರಂಥವನ್ನು ನಮಗೆ ನೀಡಿದ್ದಾರೆ. ‘ಸಂಜೆಗಣ್ಣಿನ ಹಿನ್ನೋಟ’ ಅವರ ಆತ್ಮಕಥನ. ಶತಾಯುಷಿ ರಾಯರು ತಮ್ಮ ನಿಡುಗಾಲದ ಬದುಕಿನಲ್ಲಿ ಕಂಡ ಹಲವು ಏಳುಬೀಳುಗಳನ್ನು ತುಂಬಾ ಸ್ವಾರಸ್ಯಕರವಾಗಿ ನಿರೂಪಿಸಿದ್ದಾರೆ. ‘ದೇವರು’ ಅತ್ಯಂತ ಚರ್ಚೆಗೊಳಗಾದ ವೈಚಾರಿಕ ಕೃತಿ. ನಾಸ್ತಿಕರಾದ ರಾಯರು ತಮ್ಮ ವಿಚಾರಧಾರೆಯನ್ನು ಓದುಗರ ಮೇಲೆ ಹೇರುವುದಿಲ್ಲ. ಬದಲಾಗಿ ದೇವರ ಬಗೆಗಿನ ನಮ್ಮ ಪರಿಕಲ್ಪನೆಗಳನ್ನು ವಿಸ್ತರಿಸುತ್ತಾರೆ, ಪ್ರಶ್ನಿಸುತ್ತಾರೆ. “ದೇವರು ಬೇಕು,ಆದರೆ ಅವನಿಲ್ಲ” ಎಂಬ ಕೊನೆಯ ಅಧ್ಯಾಯ ಅವರ ಮನೋಧರ್ಮದ ಪರಿಪಾಕವಾಗಿದೆ. ಈ ಪುಸ್ತಕ ಅವರಿಗೆ ಪಂಪ ಪ್ರಶಸ್ತಿಯನ್ನು ತಂದುಕೊಟ್ಟಿತು. ಅಲೆಯುವ ಮನ, ಹಗಲುಗನಸುಗಳು, ಮಿನುಗು- ಮಿಂಚು ಮೊದಲಾದ ಲಲಿತ ಪ್ರಬಂಧಗಳ ಸಂಕಲನಗಳಲ್ಲಿ ತಮಗೆ ವಿಶಿಷ್ಟವಾದ ನವಿರಾದ ಹಾಸ್ಯಪ್ರಜ್ಞೆ, ವಿಸ್ತಾರವಾದ ಓದಿನಿಂದ ನೀಡುವ ಮಾಹಿತಿ, ಲವಲವಿಕೆಯ ಶೈಲಿ,ಹೀಗೆ ಮೂರ್ತಿರಾಯರು ಕನ್ನಡ ಲಲಿತ ಪ್ರಬಂಧ ಪ್ರಕಾರದ ಶಿಖರ ಎನ್ನಬಹುದು. ಶೇಕ್ಸ್ಪಿಯರ್, ಬಿ ಎಂ ಶ್ರೀ, ಸಾಕ್ರೆಟೀಸನ ಕೊನೆಯ ದಿನಗಳು, ಪಾಶ್ಚಾತ್ಯ ಸಣ್ಣ ಕಥೆಗಳು ಜನತಾ ಜನಾರ್ದನ, ಯೋಧನ ಪುನರಾಗಮನ, ಗಾನ ವಿಹಾರ, ಪೂರ್ವಸೂರಿಗಳೊಡನೆ, ಆಷಾಡಭೂತಿ- ಹೀಗೆ ಜೀವನ ಚರಿತ್ರೆಗಳು, ನಾಟಕ ,ಅನುವಾದ ವೈಚಾರಿಕ ಬರಹ ಎಲ್ಲದರಲ್ಲೂ ಮೂರ್ತಿರಾಯರು ಪ್ರಥಮ ದರ್ಜೆಯ ವ್ಯವಸಾಯ ಮಾಡಿದ್ದಾರೆ. ಸಹಜವಾಗಿಯೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ೧೯೮೪ರಲ್ಲಿ ಅವರಿಗೆ ಒಲಿದು ಬಂತು. ೨೦೦೩ರಲ್ಲಿ ನಮ್ಮನ್ನು ಅಗಲಿದ ಮೂರ್ತಿರಾಯರು ಸಂಗೀತ ಪ್ರೀತಿ, ಸಾಹಿತ್ಯ ಪ್ರೀತಿ, ಜೀವನಪ್ರೀತಿ ಮುಪ್ಪುರಿಗೊಂಡು ಮಾಗಿದ ಜೀವ. ಮೊದಲ ಸಲ ಅವರನ್ನು ಕಂಡಾಗ ಮಾತು ಕೇಳಿಸಿಕೊಳ್ಳಲು ಆಗದ ಬಗ್ಗೆ ಮೇಲೆ ಬರೆದಿದ್ದೇನೆ. ತಮ್ಮ ಬರಹಗಳ ಮೂಲಕ ಮೂರ್ತಿರಾಯರು ಸದಾ ನಮ್ಮೊಡನೆ ಮಾತನಾಡುತ್ತಾರೆ. ನಾವು ಕೇಳಿಸಿಕೊಳ್ಳಬೇಕು ಅಷ್ಟೇ. ಪ್ರೊ ಎ ಎನ್ ಮೂರ್ತಿರಾವ್ ಅವರ ಕೃತಿಗಳು: ಆಷಾಡಭೂತಿ (ಅನುವಾದ) ದೇವರು ಅಲೆಯುವ ಮನ ಅಪರವಯಸ್ಕನ ಅಮೆರಿಕ ಯಾತ್ರೆ ಸಂಜೆಗಣ್ಣಿನ ಹಿನ್ನೋಟ ಹಗಲುಗನಸುಗಳು ಮಿನುಗು ಮಿಂಚು ಜನತಾ ಜನಾರ್ದನ ಮಹಾಭಾರತದಲ್ಲಿ ಕೇಡು ಎಂಬುದರ ಸಮಸ್ಯೆ ಗಾನ ವಿಹಾರ ಸಾಹಿತ್ಯ ಮತ್ತು ಸತ್ಯ ಹೇಮಾವತಿ ತೀರದ ತವಸಿ ಪೂರ್ವಸೂರಿಗಳೊಡನೆ ಶೇಕ್ಸ್ ಪಿಯರ್ ಬಿ ಎಂ ಶ್ರೀಕಂಠಯ್ಯ ಚಿತ್ರಗಳು- ಪತ್ರಗಳು ಸಾಕ್ರೆಟೀಸನ ಕೊನೆಯ ದಿನಗಳು ಯೋಧನ ಪುನರಾಗಮನ ಮತ್ತು ಅನೇಕ ಪ್ರಬಂಧ ಸಂಕಲನಗಳು.

ನಾನು ಕಂಡ ಹಿರಿಯರು. Read Post »

ಅಂಕಣ ಸಂಗಾತಿ

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಡಾ.ಸಣ್ಣರಾಮ ಹಿಂದಿನ ವಾರದ ಮುಂದುವರೆದ ಭಾಗ ಕರ್ನಾಟಕದಲ್ಲಿ ಶಿವಮೊಗ್ಗ ಜಿಲ್ಲೆ ವೈಶಿಷ್ಟ್ಯಪೂರ್ಣವಾದುದು. ಈ ಜಿಲ್ಲೆಯಲ್ಲಿ ಸದ್ಯ ಏಳು ತಾಲ್ಲೂಕುಗಳಿವೆ. ಅವುಗಳಲ್ಲಿ ನಾಲ್ಕು ಅತೀ ಹೆಚ್ಚು ಮಳೆಯಾಗುವ ತಾಲ್ಲೂಕುಗಳಾದರೆ, ಮೂರು  ಸಾಧಾರಣ ಮಳೆಯಾಗುವ ತಾಲ್ಲೂಕುಗಳು. ದಕ್ಷಿಣ ಭಾರತದ ‘ಚಿರಾಪುಂಜಿ’ ಎಂದು ಪ್ರಖ್ಯಾತವಾಗಿರುವ ಆಗುಂಬೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿದೆ. ದಟ್ಟ ಮಲೆನಾಡು ಅರೆಮಲೆನಾಡು ಭಾಗಗಳು ಜಿಲ್ಲೆಗೆ ಪ್ರಾಕೃತಿಕ, ಸಾಂಸ್ಕೃತಿಕ ವೈಶಿಷ್ಟತೆಯನ್ನು ತಂದುಕೊಟ್ಟಿದೆ. ಭಾಷೆಯ ಬಳಕೆಯಲ್ಲಿಯೂ ಈ ಏಳು ತಾಲ್ಲೂಕುಗಳು ಸೂಕ್ಷ್ಮವಾಗಿ ಭಿನ್ನತೆ ಕಂಡು ಬರುತ್ತದೆ. ಈ ಭಿನ್ನತೆ ಮತ್ತು ವೈಶಿಷ್ಟತೆ ಅಲ್ಲಿನ ಜನರಲ್ಲಿ ವೈಚಾರಿಕ ಶಕ್ತಿಯನ್ನು ಜಾಗ್ರತಗೊಳಿಸಿ ಚಿಂತನಾಶೀಲರನ್ನಾಗಿ, ಸಂವೇದನಾಶೀಲರನ್ನಾಗಿ ಮಾಡಿದೆ. ಸಾಹಿತ್ಯ ರಚನೆಯಲ್ಲಿಯೂ ಶಿವಮೊಗ್ಗ ಜಿಲ್ಲೆ ಇತರೆಲ್ಲಾ ಜಿಲ್ಲೆಗಳಿಗಿಂತ ಒಂದು ಕೈ ಮೇಲೆ ಎನ್ನಬಹುದು. ಇದುವರೆಗೆ ಕರ್ನಾಟಕಕ್ಕೆ ಲಭ್ಯವಾಗಿರುವ ಎಂಟು ಜ್ಞಾನಪೀಠಗಳಲ್ಲಿ ಮೂರು ಜ್ಞಾನಪೀಠಗಳನ್ನು ಕೊಟ್ಟ  ಶ್ರೇಯಸ್ಸು ಶಿವಮೊಗ್ಗ ಜಿಲ್ಲೆಯದು. ಈ ಎಲ್ಲಾ ಕಾರಣಗಳಿಂದಾಗಿ ಇಲ್ಲಿ ಜನಪರ ಚಳವಳಿಗಳು ಹುಟ್ಟಿವೆ. ಅಲ್ಲದೆ ಇಂದಿಗೂ ಕ್ರಿಯಾಶೀಲವಾಗಿದೆ.   ಶಿವಮೊಗ್ಗ ಜಿಲ್ಲೆಯ ಚಳವಳಿಗಳಿಗೆ ಸುದೀರ್ಘ ಇತಿಹಾಸವಿದೆ. ಕರ್ನಾಟಕದಲ್ಲಿ ಸಾಮಾಜಿಕ, ಸಾಹಿತ್ಯಕ ಕ್ರಾಂತಿಗೆ ನಾಂದಿ ಹಾಡಿದ ೧೨ನೇ ಶತಮಾನದ ಶರಣ ಚಳವಳಿಯಿಂದಲೇ ಶಿವಮೊಗ್ಗ ಚಳವಳಿಯ ಬೇರನ್ನು ಗುರುತಿಸಬಹುದು. ಶರಣ ಚಳವಳಿಯಲ್ಲಿ ತಮ್ಮ ಮೇರು ಸದೃಶ್ಯ ಚಿಂತನೆಯಿಂದ ಗಮನ ಸೆಳೆದ ಮಹಾಶರಣ ಎಂದರೆ ಅಲ್ಲಮ ಪ್ರಭುಗಳು. ಹರಿಹರನ ಕಾಲದಿಂದಲೂ ಅಲ್ಲಮಪ್ರಭುವಿನ ಜೀವನವನ್ನು  ಆಧರಿಸಿದ ನೂರಾರು ಕೃತಿಗಳು, ನಡುಗನ್ನಡ ಮತ್ತು ಆಧುನಿಕ ಕನ್ನಡ ಸಾಹಿತ್ಯದಲ್ಲಿವೆ. ಅಲ್ಲದೆ ಸ್ವತಃ ಪ್ರಭುದೇವರು ಬರೆದಿರುವ ವಚನಗಳು ಅವರ ಜೀವನ ಇತಿಹಾಸವನ್ನು ಕಟ್ಟಿಕೊಡುವಲ್ಲಿ ಸಹಕರಿಸುತ್ತವೆ. ಇಂತಹ ವಿಶ್ವಮಾನ್ಯ ಶರಣ ಶಿವಮೊಗ್ಗ ಜಿಲ್ಲೆಯಲ್ಲಿದ್ದಾನೆಂಬುದು  ಹೆಮ್ಮೆಯ ಸಂಗತಿಯಾಗಿದೆ.    ಅಲ್ಲಮ ಪ್ರಭು ಹುಟ್ಟಿದ್ದು ಶಿವಮೊಗ್ಗ  ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ ಎಂಬ ಗ್ರಾಮದಲ್ಲಿ. ಹನ್ನೆರಡನೆ ಶತಮಾನದಲ್ಲಿ ಬಳ್ಳಿಗಾವಿ “ಬನವಸೆ ಹನ್ನೆರಡು ಸಾವಿರ” ಎಂಬ ಒಂದು ದೊಡ್ಡ ಆಡಳಿತ ವಿಭಾಗದ ಮುಖ್ಯ ಸ್ಥಳವಾಗಿತ್ತು. ವೀರಶೈವರ ಕಾಳಮುಖ ಪಂಥದ ಕೇಂದ್ರ ಸ್ಥಾನವಾಗಿತ್ತು. ಚಾಮರಸ ಹೇಳುವಂತೆ ಅಲ್ಲಮಪ್ರಭುವಿನ ತಂದೆ ತಾಯಿಯರ ಹೆಸರು ‘ನಿರಹಂಕಾರ ಸುಜ್ಞಾನಿ’ ದೇವಸ್ಥಾನದಲ್ಲಿ ಮದ್ದಳೆ ಸೇವೆಯನ್ನು ಸಲ್ಲಿಸುತ್ತಿದ್ದ ಪ್ರಭುಗಳು ಪ್ರಾಯಕ್ಕೆ ಬರುತ್ತಿದ್ದಂತೆ ಮದ್ದಳೆ ನುಡಿಸುವ ಕಲೆಯನ್ನು ತುಂಬಾ ಪ್ರಾವಿಣ್ಯ ಪಡೆದಿದ್ದ. ಅವನ ಮದ್ದಳೆ ಬಾರಿಸುವ ನೈಪುಣ್ಯಕ್ಕೆ ಮನಸೋತು ‘ಕಾಮಲತೆ’ ಎಂಬ ಸುಂದರ ಹೆಣ್ಣು ಮದುವೆಯಾಗುತ್ತಾಳೆ. ಪ್ರಭುವಿನದು ಸುಂದರ ದಾಂಪತ್ಯ, ಪ್ರಭು ದಾಂಪತ್ಯ ಜೀವನದ ರಸಾನಂದವನ್ನು  ಹೆಚ್ಚು ದಿನ ಸವಿಯಲಿಲ್ಲ. ಮದುವೆಯಾದ ಕೆಲವೇ ವರ್ಷಗಳಲ್ಲಿ ಕಾಮಲತೆಯು ಮರಣ ಹೊಂದಿತ್ತಾಳೆ. ಸತಿಯ ಮರಣದಿಂದ ಅಪಾರವೇದನೆ ಪಡುವ ಅಲ್ಲಮಪ್ರಭು ಸಂಸಾರದಲ್ಲಿ ನೊಂದು ಬದುಕಿನಲ್ಲಿ ಜುಗುಪ್ಸೆಯನ್ನು ಹೊಂದುತ್ತಾನೆ. ———————ಮುಂದುವರೆಯುತ್ತದೆ…

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು Read Post »

You cannot copy content of this page

Scroll to Top