ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ, ಕಥಾಗುಚ್ಛ

ತೆಲುಗು ಕಥೆ “ಶೋಭನ್‌ ಬಾಬು-ಗಣೇಶ್‌ ಬೀಡಿ” ತೆಲುಗುಮೂಲ ಜಿ.ಉಮಾಮಹೇಶ್ವರ್‌ , ಕನ್ನಡಕ್ಕೆ ರಂಗನಾಥ ರಾಮಚಂದ್ರ ರಾವು

ಅನುವಾದ ಸಂಗಾತಿ ಶೋಭನ್‌ ಬಾಬು-ಗಣೇಶ್‌ ಬೀಡಿ ತೆಲುಗುಮೂಲ ಜಿ.ಉಮಾಮಹೇಶ್ವರ್‌ಕನ್ನಡಕ್ಕೆ ರಂಗನಾಥ ರಾಮಚಂದ್ರ ರಾವು ಶ್ರೀಶೈಲದಂತಹ ಆಧ್ಯಾತ್ಮಿಕ ಕ್ಷೇತ್ರದ ಅಂಚಿನಲ್ಲಿ ಇರುವುದರಿಂದಲೋ ಅಥವಾ ಮಧ್ಯಮ ವರ್ಗದ ನೌಕರರ  ಕುಟುಂಬಗಳು ಅಧಿಕವಾಗಿ ಇರುವುದರಿಂದಲೋ ಮತ್ತು ಸುನ್ನಿಪೆಂಟದಲ್ಲಿ  ಭಕ್ತಿ ಕಾರ್ಯಕ್ರಮಗಳು, ಮತ್ತು ಹಬ್ಬಗಳ ಸಂಭ್ರಗಳು ಚೆನ್ನಾಗಿ ಇರುತ್ತಿದ್ದವು. ವಿನಾಯಕಚವಿತಿಗೆ, ರಾಮನವಮಿಗೆ ಚಪ್ಪರಗಳನ್ನು ಹಾಕುವವರು. ಒಂಬತ್ತು ದಿನಗಳ ಹಬ್ಬದ ಗಡಿಬಿಡಿಯಲ್ಲಿ ನಾಟಕಗಳು, ಹರಿಕಥೆಗಳು, ಬುರ್ರಕಥೆಗಳು ಅದರಲ್ಲಿ ಭಾಗವಾಗಿದ್ದವು. ಚಿಕ್ಕಮಕ್ಕಳಿಗೆ ಹಾಡುಗಳು, ಏಕಪಾತ್ರಾಭಿನಯಗಳು, ನೃತ್ಯಸ್ಪರ್ಧೆಗಳಲ್ಲಿ ಬಹುಮಾನಗಳು ವಿತರಿಸುವವರು. ಶಿವರಾತ್ರಿಗೆ ಸಿನಿಮಾ ಹಾಲುಗಳಲ್ಲಿ ತ್ರೀ ಶೋಸ್ ಹಾಕುವವರು. ಧನುರ್ಮಾಸದಲ್ಲಿ ನಗರ ಸಂಕೀರ್ತನೆಗಳು ಚಳಿಯನ್ನು ಜಯಿಸುತ್ತವೆ. ಸಂಕ್ರಾಂತಿಗೆ ಅಘೋಷಿತ ರಂಗೋಳಿ ಸ್ಪರ್ಧೆಗಳು ನಡೆಯುತ್ತಿದ್ದವು. ಯಾರ ರಥ ಎಷ್ಟು ದೂರ ಸಾಗಿತೋ ಎಂದು ಅಳೆಯುತ್ತಿದ್ದರು. ದೊಡ್ಡ ದೊಡ್ಡ ರಂಗೋಳಿಗಳಿಗೆ ವಿಶೇಷ ಪ್ರಶಂಸೆಗಳು ದೊರೆಯುತ್ತಿದ್ದವು. ಅಕ್ಕಾತಂಗಿಯರು,ತಾಯಿ-ಆತ್ತೆಗಳು ರಂಗೊಳಿಗಳು ಹಾಕುತ್ತಿದ್ದಾರೆ  ಅಣ್ಣ-ತಮ್ಮಂದಿರು, ತುಂಟ ಮಕ್ಕಳು ಸ್ವಂತ ರಂಗೊಳಿಗಳಿಗೆ ಕಾಪಾಲಾ ಕಾಯುತ್ತಾ, ಹೊರಗಿನ ರಂಗೊಳಿಗಳನ್ನು ವಿಶ್ಲೇಷಿಸುತ್ತಾ ತಿರುಗಾಡುತ್ತಿದ್ದರು. ಸುನ್ನಿಪೆಂಟಗೆ ಸಂಬಂಧಿಸಿದವರೆಗೂ ಸತ್ಯನಾರಾಯಣಸ್ವಾಮಿ ದೇವಸ್ಥಾನ, ರಾಮಮಂದಿರಗಳು ಭಕ್ತಿ ಮತ್ತು ಆಧ್ಯಾತ್ಮಿಕ ಕೇಂದ್ರಗಳಾಗಿವೆ.ಶ್ರೀಶೈಲದಲ್ಲಿ ಸಹಜ ಸಿದ್ಧವಾಗಿ ಕೆಲವುರು ಸಾಧುಗಳು, ಸನ್ಯಾಸಿಗಳು ಯಾವಾಗಲೂ ಕಂಡು ಬರುತ್ತಿರುತ್ತಾರೆ. ಇವರಲ್ಲದೆ, ಹೊರ ಪ್ರದೇಶಗಳಿಂದಲೂ ಕೆಲವರು ಬಂದು ಇಲ್ಲಿ ಯಾವುದೋ ಸತ್ರದಲ್ಲಿ ಊಟ ಮಾಡುತ್ತಾ, ಕಾಲ ಕಳೆಯುತ್ತಾ   ಬದುಕುವವರು ಅನೇಕರು ಇರುವವರು. ಮುಮುಕ್ಷುವುರಾದ ಸಾಧುಗಳು ಯಾರೋ, ಭಿಕ್ಷುಕುರಾದ ಸನ್ಯಾಸಿಗಳು ಯಾರೋ ಕಂಡುಹಿಡಿಯುವುದು ತುಂಬಾಕಷ್ಟ. ಉಡುಗೆ ತೊಡುಗೆಗಳಿಂದ, ಹಾವಭಾವಗಳಿಂದ, ಮಾತಿನ ಪದ್ಧತಿ ಸುಮಾರಾಗಿ ಒಂದೇ ವಿಧವಾಗಿ ಇರುತ್ತದೆ.ಒಮ್ಮೆ ಪೂರ್ಣಾನಂದ ಸ್ವಾಮಿ ಎಂಬ ಸ್ವಾಮಿಗಳು ತಮ್ಮ ಪತ್ನಿಸಮೇತ ಶ್ರೀಶೈಲಕ್ಕೆ ಬಂದರು.  ಅಯ್ಯಪ್ಪಸ್ವಾಮಿಯ ದೇವಸ್ಥಾನದಲ್ಲಿ ಕೆಲವು ದಿನಗಳು, ಮತ್ತು ಸತ್ಯನಾರಾಯಣ ಸ್ವಾಮಿಯ ದೇವಸ್ಥಾನದಲ್ಲಿ ಕೆಲವು ದಿನಗಳು ಪ್ರವಚನಗಳನ್ನು ಹೇಳುತ್ತಾ ಸುಮಾರು ಮೂರುತಿಂಗಳ ಕಾಲವು ಅವರು ಸುನ್ನಿಪೆಂಟದಲ್ಲಿ ಕಳೆದರು. ಹಾಗಾಗಿ ಪೂರ್ಣಾನಂದಸ್ವಾಮಿಗಳು ಶ್ರೀಶೈಲದಲ್ಲಿದ್ದ ಮೂರುತಿಂಗಳಲ್ಲಿ ಒಂದುತಿಂಗಳು ನಮ್ಮ ಮನೆಯಲ್ಲಿಯೇ ಇದ್ದರು. ಪೂರ್ಣಾನಂದಸ್ವಾಮಿಗಳು, ತಾವು ವೇದಾಂತಂ ಲಕ್ಷ್ಮಯ್ಯನವರ ಶಿಷ್ಯರೆಂದು, ಅವರ ಊರು ಕಡಪಜಿಲ್ಲೆಯ ಮಾಮಿಡಾಲಪಲ್ಲೆ ಎಂದೋ, ಇನ್ನೂ ಯವುದೋ ಊರು ಎಂದು ಹೇಳಿದ್ದು ನೆನಪಿದೆ. ಪ್ರತಿದಿನ, ಸಾಯಂಕಾಲ ಆರರಿಂದ ಏಳರ ವರೆಗೆ ಅವರು  ಉಪದೇಶ ಮಾಡುತ್ತಿದ್ದರು. ಆಗ ಹೆಂಗಸರೆಲ್ಲ ಆ ಸಮಯಕ್ಕೆ  ಸೇರಿ ಸ್ವಲ್ಪ ಹೊತ್ತು ಕಾಲಕ್ಷೇಪ ಮಾಡುತ್ತಿದ್ದರು. ಭಾನುವಾರಗಳಲ್ಲಿ ಮಾತ್ರ ಮಧ್ಯಾಹ್ನ ಮೂರರಿಂದ ನಾಲ್ಕರವರೆಗೂ ಹೇಳುತ್ತಿದ್ದರು.ಒಂದುದಿನ ಯಾವುದೋ ಕೆಲಸಕ್ಕೆ ನನ್ನ ತಾಯಿಯನ್ನು ಕರೆದುಕೊಂಡು ಬರಬೇಕೆಂದು ಅಪ್ಪ ಹೇಳಿದರೇ ನಾನು ದೇವಸ್ಥಾನಕ್ಕೆ ಹೋಗಿದ್ದೆ. ಇನ್ನೊಂದು ಐದು ನಿಮಿಷಗಳಲ್ಲಿ ಮುಗಿಯುತ್ತದೆ. ಕೂತ್ಕೋ ಅಂದರೆ, ನಾನೂ ಕೂತ್ಕೊಂಡು ಕೇಳುತ್ತಿದ್ದೇನೆ. ಅವರು ಶ್ಯಾಸೆದ ಬಗ್ಗೆ, ಶ್ಯಾಸೆ ಮೇಲಿನ ಧ್ಯಾಸದ ಬಗ್ಗೆ, ಮೌನವಾಗಿ ಮಾಡುವ ಧ್ಯಾನದ ಬಗ್ಗೆ ಹೇಳುತ್ತಾ  ಅಧ್ಯಾತ್ಮಿಕ ಸಂಬಂಧವಾದ ಮಾತುಗಳೇನೊ ಹೇಳಿತ್ತಿದ್ದರು.ನಾನು ಏನೋ  ಯೋಚಿಸುತ್ತಾ ಕೂತಿದ್ದಾರೆ ನಾಗಮಣಿ ಅತ್ತೆ ನನ್ನನ್ನು ಹತ್ತಿರಕ್ಕೆ ಕರೆದು –“ಈ ಸ್ವಾಮಿ ಇಷ್ಟೊಂದು ಮಾತುಗಳು ಹೇಳ್ತಾನೆ, ಆದರೆ, ಇವರಿಗೆ ಸಿನಿಮಾ ಹುಚ್ಚು ಹೋಗಿಲ್ಲ” ಎಂದಳು.ವಾಸ್ತವಕ್ಕೆ ಈ ಚರ್ಚೆಯಲ್ಲಿ ಚಲನ ಚಿತ್ರಗಳ ಪ್ರಸ್ತಾವನೆ ಏಕೆ ಬಂದವೋ ನನಗೆ ಅರ್ಥವಾಗಿಲ್ಲ. ಆ ಅತ್ತೆ ಸಿನಿಮಾಗಳು ಚೆನ್ನಾಗಿ ನೋಡುತ್ತಾಳೆ. ಚೆನ್ನಾಗಿ ಫಾಲೋ ಆಗುತ್ತಾಳೆ  ಕೂಡಾ. ಇವರಿಗೆ ಸಿನಿಮಾಹುಚ್ಚು ಎಂದು ಹೇಗೆ ನಿರ್ಧರಿಸಿದ್ದಾಳೋ  ತಿಳಿಯದೆ ನಾನು ತಲೆ ಕೆಡಿಸಿಕೊಂಡಾಗ, ಅವರೇ ನನ್ನನ್ನು ಮತ್ತಿಷ್ಟೂ ಹತ್ತಿರಕ್ಕೆ ಕರೆದು-“ಬೇಕಿದ್ದರೆ ಕೇಳು, ಅವರು ಮಾತು ಮಾತಿಗೆ ಶೋಭನ್ ಬಾಬು, ಶೋಭನ್ ಬಾಬು ಎನ್ನುತ್ತಿದ್ದಾನೆ”ನಾನು ಸ್ವಲ್ಪ ಕಿವಿಕೊಟ್ಟು ಶ್ರದ್ಧೆ ಯಿಂದ ಕೇಳಿದಾಗ, ಹಾಗೆ ಅನಿಸಿತು, ಆದರೆ ಅದಲ್ಲ ಅಂತಲೂ ಅನಿಸಿತು. ನನಗೆ ತೆಲುಗು ಭಾಷೆಯೆಂದರೆ ಒಲವು, ಮನೆಯಲ್ಲಿದ್ದ ಪುಸ್ತಕಗಳನ್ನು(ಪೂರ್ಣಾನಂದಸ್ವಾಮಿ ಅವರವು ಕೂಡಾ) ನೋಡಿದ್ದೇನೆ. ಅದರಿಂದ ಮತ್ತಿಷ್ಟೂ ಶ್ರದ್ಧೆಯಿಂದ ಕೇಳಿದರೆ  ಆಗ  ಸ್ಫುರಿಸಿತು ಆ ಪದವು, ಅದರ ಅರ್ಥ್!ಆ ಅತ್ತೆ ಮತ್ತೆ ಕರೆದು  “ಗಮನಿಸಿದ್ದೀಯಾ?” ಎಂದು ಕೇಳಿದಳು.ಆಗ ನಾನು ಅವಳಿಗೆ ಹೇಳಿದೆ –“ಅತ್ತೆ, ಅದು ನೀವು ಅಂದುಕೊಂಡಂತೆ ಶೋಭಾನ್ ಬಾಬು ಅಲ್ಲ – ಸೋಹಂ ಭಾವ – ಅಂದರೆ ನಾನೇ ದೇವರು ಎಂಬ ಭಾವನೆ ” ಎಂದು ಹೇಳಿದರೆ  ಅವಳ ಮುಖ ಸಂಪೂರ್ಣವಾಗಿ ಕಳೆಗುಂದಿತ್ತು. ನಂಬಿದಂತೆ ಕಾಣಿಸಲಿಲ್ಲ. ಮನೆಗೆ ಬಂದಮೇಲೆ ನನ್ನ ಅಕ್ಕಗೆ ಹೇಳಿದೆ. ಈಗಲೂ  ಆ ವಿಷಯವನ್ನು ನೆನೆದರೆ  ತಡೆಯಲಾರದಷ್ಟು ನಗು ಬರುತ್ತದೆ.ಇನ್ನೊಂದು ಸಲ ಸನ್ಯಾಸಿಯೊಬ್ಬರು ಮಹದೇವಪ್ಪನವರನ್ನು ಭೇಟಿಮಾಡಿ  ತಾನು ಬಂದು ವ್ರತವನ್ನು ಸಂಕಲ್ಪಿಸಿದ್ದೇ ನೆಂದು ಅದು ಮುಗಿಯುವ ತನಕ ಅವರ ಸಹಾಯ ಬೇಕೆಂದು ಕೇಳಿದ. ಬೋಳ ಶಂಕರನಂತಹ  ಮಹದೇವಪ್ಪ ಮಾಮಾ ಆ ವ್ರತವು ಏನು, ಅದು ಮುಗಿಸಲು ಎಷ್ಟು ದಿನಗಳು ಬೇಕಾಗುತ್ತವೋ  ಅದಕ್ಕೆ  ಏನೇನು ಬೇಕಾಗುತ್ತವೋ ಏನೂ  ಕೇಳದೆ ಅವರಿಗೆ ಅಭಯ ಕೊಟ್ಟರು.  ಅಯ್ಯಪ್ಪಸ್ವಾಮಿಯ ದೇವಸ್ಥಾನದಲ್ಲಿ ಆಶ್ರಯವೂ ಕೊಡಿಸಿದರು. ಒಂದುವಾರ ಅವರಿಗೆ ಎರಡು ಸಲ ಊಟ ಕಳುಹಿಸುವ ಸರದಿ ನಮ್ಮದಾಗಿತ್ತು.ದೇವಸ್ಥಾನದ ಈಶಾನ್ಯದ  ಮೂಲೆಯಲ್ಲಿ ಸ್ವಲ್ಪ ಖಾಲೀ ಜಾಗವಿತ್ತು. ಅಲ್ಲಿಯೇ ಅವರು ತಮ್ಮ ಚೀಲ ಇಟ್ಟುಕೊಂಡು, ಅಲ್ಲಿಯೇ ಇದ್ದ ನಲ್ಲಿಯ ಬಳಿ ಸ್ನಾನ ಮಾಡುತ್ತಿದ್ದರು. ಅವರು ಅಷ್ಟೊಂದು ಪೂಜೆ ಪುಂಸ್ಕಾರಗಳು ಮಾಡಿದಂತೆ ಕಾಣಿಸುತ್ತಿರಲಿಲ್ಲ. ಯಾವಾಗಲೂ ಮೌನವಾಗಿ ಏನೋ ಯೋಚಿಸುತ್ತಿದ್ದವನಂತೆ ಇರುವವನು. ಆಗಾಗ, ಕೆಲವೊಮ್ಮೆ ಗೋಡೆಗೆ ಒರಗಿ ಮಲಗಿದ್ದೇನೋ  ಧ್ಯಾನ ಮಾಡುತ್ತಿದ್ದಾನೋ ತಿಳಿಯದ ಸ್ಥಿತಿಯಲ್ಲಿ ಇರುತ್ತಿದ್ದ.ಅಯ್ಯಪ್ಪಸ್ವಾಮಿ ದೇವಸ್ಥಾನ ನಮ್ಮ  ಕಾರ್ಯಕಲಾಪಕ್ಕೆ ಮುಖ್ಯವಾದ ಜಾಗಾ. ಅದು ದೊಡ್ಡ  ಜನಸಂದಣಿ ಇರುವ ದೇವಸ್ಥಾನ ವಲ್ಲ. ಆ ಪ್ರಾಜೆಕ್ಟ್ ನಲ್ಲಿ ಉದ್ಯೋಗಿಯೊಬ್ಬರು ಆ ದೇವಸ್ಥಾನಕ್ಕೆ ಧರ್ಮ ಕರ್ತ, ಪೂಜಾರಿ  ಎಲ್ಲಾ ಅವನೇ ಆಗಿ ನಡೆಸುತ್ತಿದ್ದನು. ಆ ದೇವಸ್ಥಾನ, ಅವರ ಮನೆ ಪೂಜಾ ಕೋಣೆಗೆ ತುಂಬಾ ದೊಡ್ಡದಾಗಿದಂತೆ,  ಮತ್ತು ಸಾಂಪ್ರದಾಯಿಕ ದೇವಸ್ಥಾನಗಳಿಗೆ ತುಂಬಾ ಚಿಕ್ಕದಾಗಿದಂತೆ ಕಾಣಿಸುತ್ತಿತ್ತು. ಅವರ ಮನೆ ಒಳೆಗೆಯಿಂದ ದೇವಸ್ಥಾನಕ್ಕೆ ದಾರಿಯಿತ್ತು. ದೇವಸ್ಥಾನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ, ಪೂಜೆ, ನೈವೇದ್ಯ ಎಲ್ಲವನ್ನೂ ಅವರೇ ನೋಡಿಕೊಳ್ಳುತ್ತಿದ್ದರು. ಅವರ ಮಗನ  ಹೆಸರು ಮಣಿಕಂಠ. ಅದೇನೇ ಇರಲಿ, ಶನಿವಾರ ರಾತ್ರಿಯಿಂದ ಭಾನುವಾರ ರಾತ್ರಿಯ ವರೆಗೂ ಅದು ಮಕ್ಕಳ ಆಟಗಳ  ಜಾಗಾವಾಗಿತ್ತು.ಶನಿವಾರ ಸಂಜೆ ಏಳುಗಂಟೆಗೆಲ್ಲಾ , ‘ಈಗಲಪೆಂಟ’ದಿಂದ ಒಬ್ಬ ಮಲಯಾಳ/ ತಮಿಳ ಭಜನ ತಂಡ ಬರುತ್ತಿತ್ತು. ಅಲ್ಲಿಯ ವರೆಗೂ ಅಲ್ಲಲ್ಲಿ ಆಟವಾಡುತ್ತಿದ್ದ ಮಕ್ಕಳೆಲ್ಲರು ಮನೆಗೆ  ಹೋಗಿ ಕೈಕಾಲೂ ತೊಳೆದುಕೊಂಡು ಬಂದು  ಭಜನೆಯಲ್ಲಿ ಭಾಗ ವಹಿಸುವವರು. ಘಂಟೆಸಾಲ ಅವರ ಶುಕ್ಲಾಂಬರಧರಂದಿಂದ ಪ್ರಾರಂಭವಾಗಿ “ಸುಬ್ರಹ್ಮಣ್ಯಂ ಸುಬ್ರಹ್ಮಣ್ಯಂ”, “ಚಂದ್ರಶೇಖರ, ಚಂದ್ರಶೇಖರ” ಎಂಬ ಭಜನೆಗಳ ಮೂಲಕ  “ಒನ್ರಾಮ್ ತಿರುಪ್ಪಡಿ ಶರಣಂ ಪುನ್ನಯ್ಯಪ್ಪ” ಎಂದು  ಸಾಗುವ ಸೋಪಾನದ ಗೀತೆಯೊಂದಿಗೆ ಕೊನೆಗೊಳ್ಳುವುದು.  ಸೋಪಾನಗಳ ಹಾಡು ಉಂಬಾ ಉತ್ಸಾಹದಿಂದ  ತುಂಬಿ ತುಳುಕುತ್ತಿತ್ತು. ಪ್ರತಿಯೊಂದು ಸೋಪಾನಕ್ಕೆ ಒಂದು ಚರಣವಿದೆ. ಪ್ರತಿಚರಣ ಮುಗಿಯುತ್ತಿದ್ದಂತೆ, ಪ್ರಸಾದಕ್ಕೆ ಹತ್ತಿರವಾಗುತ್ತಿದ್ದ ತೃಪ್ತಿ. ನಡುವೆ ಕಾಲಕ್ಷೇಪಕ್ಕಾಗಿ ನಾನು ಶಿವ ಶಿವ ಶಂಕರ…  ಎನ್ನುತ್ತಾ ಭಕ್ತ  ಕನ್ನಪ್ಪ ಗೀತವನ್ನು ಹಾಡುತ್ತಿದ್ದೆ.  ಆ ಭಜನ ತಂಡಕ್ಕೇ ನನ್ನ ಹೆಸರು ಶಿವ ಶಿವ ಶಂಕರ ಎಂದೇ ಗುರುತು. ಕೊನೆಗೆ ಮಂಗಳಾರತಿಯ ನಂತರ ಅರ್ಚಕರು ಬಿಸಿಬಿಸಿ ಚಕ್ಕರ ಪೊಂಗಲಿಯನ್ನು  ಚಿಕ್ಕ ಚಿಕ್ಕ  ದೊನ್ನೆಗಳಲ್ಲೋ , ಎಲೆಗಳಲ್ಲೋ  ಹಂಚುವವರು.  ಅಂದು ರಾತ್ರಿ ಆರತಿ ಮುಗಿಸಿದ ಮೇಲೆ ತಿನ್ನುವ ಆ ಪ್ರಸಾದ ಅದ್ಬುತವಾದ ರುಚಿಯಿಂದ, ಆಹಾ… ಅನ್ನಿಸುವಷ್ಟು ರುಚಿಯಾಗಿ ಇರುತ್ತಿತ್ತು. ಬಹಳಷ್ಟು ಬಾರಿ  ಆ ಪ್ರಸಾದದ ಮೇಲೆ ಅನುರಕ್ತಿಯಿಂದ ದೇವಸ್ಥಾನಕ್ಕೆ ಹೋಗುತ್ತಿದ್ದೇವೆ ಎಂದರೆ  ಅದರಲ್ಲಿ ಸ್ವಲ್ಪವಾದರೂ ಸುಳ್ಳು ಇಲ್ಲ..ಹಾಗೆ ಆದಿವಾರದ ಬೆಳಿಗ್ಗೆ ತಮ್ಮ ತಮ್ಮ ಮನೆಗಳಲ್ಲಿ ತಾವು ತಿಂಡಿ ಮುಗಿಸಿಕೊಂಡು ಎಲ್ಲಿ ಆಟ ಆಡಬಹುದು, ಏನು ಆಡಬೇಕು ಎಂದು ಚರ್ಚಿಸಿತ್ತಿದ್ದೆವು. ಹಾಗೆ ನಾವು ಚರ್ಚಿಸಲು ಹೋಗುವ ಮೊತ್ತ ಮೊದಲಿನ ಪ್ರದೇಶ ಅಯ್ಯಪ್ಪಸ್ವಾಮಿ ದೇವಸ್ಥಾನವು.  ಆ ದಿನವೂ ಎಂದಿನಂತೆ ಎಲ್ಲರೂ ಗುಂಪು ಸೇರಿ ಯಾವಾವು ಆಟಗಳು ಆಡಬೇಕೋ ಚರ್ಚಿಕೊಳ್ಳುತ್ತಿದ್ದರೆ ಸಾಧುವು ನನ್ನನು ಆತ್ತ ಇತ್ತ  ನೋಡಿ  ಇಲ್ಲಿಬಾ ಎಂಬಂತೆ ಕೈ ಸನ್ನೆ ಮಾಡಿದ.  ನನ್ನೇ ಎಂದು ನಿರ್ಧರಿಸಿಕೊಂಡು ನಾನೇ ಅವಾರ ಕಡೆಗೆ ಹೋದ. ಅವರು ನನ್ನನ್ನು ದೇವಸ್ಥಾನದ ಹಿಂಭಾಗಕ್ಕೆ ಕರೆದೊಯ್ದು, ಮೇಲಿನ ಜೇಬಿನಿಂದ ಒಂದು ರೂಪಾಯಿ ನೋಟು ತೆಗೆದು, ‘ಒಂದು ಗಣೇಶ್ ಬೀಡಿ ಕಟ್ಟು ತೆಗೆದುಕೊಂಡು ಬಾ ಮಗು. ಹಾಗೆ ನಿನಗೂ ಬೇಕಾದರೆ,  ಐದುಪೈಸೆಗೆ ಏನಾದರೂ  ಕೊಂಡುಕೋ’  ಎಂದು ಹೇಳಿ ಆ ರೂಪಾಯನ್ನು ಕೈಯಲ್ಲಿ ಇಟ್ಟ.ನಾನು ಏನೂ ಯೋಚಿಸದೆಯೇ  ಅಂಗಡಿಯ ಕಡೆಗೆ ಓಡಿದೆ. ಮಲ್ಲಿಕಾರ್ಜುನ ಟಾಕೀಸುಗೆ ತಿರುಗುವ ಮೂಲೆಯಲ್ಲಿ ಒಂದು ಅಂಗಡಿ ಇತ್ತು. ಅಲ್ಲೇ ನಾವು ರೂಢಿಯಾಗಿ ಸಾಮಾನುಗಳನ್ನು ತಂದುಕೊಳ್ಳುತ್ತಿದ್ದೆವು. ಆ ಅಂಗಡಿಯಲ್ಲಿ ಇಬ್ಬರು ಸಹೋದರರು ಇರುತ್ತಿದ್ದರು. ನಾವು ಅವರನ್ನು ಚಿಕ್ಕ ಶೆಟ್ಟಿ  ಮತ್ತು ದೊಡ್ಡ ಶೆಟ್ಟಿ ಎಂದು ಕರೆದುಕೊಳ್ಳುತಿದ್ದೆವು.   .ಚಿಕ್ಕ ಶೆಟ್ಟಿ ಎಲ್ಲರೊಂದಿಗೆ ಚೆನ್ನಾಗಿ ಮಾತನಾಡುತ್ತಾ, ಉತ್ತಮ ಗ್ರಾಹಕರ ಪ್ರಜ್ಞೆಯನ್ನು ತೋರಿಸುವವನು. ನಾನು ಬೀಡಿ ಕೇಳಿದೊಡನೆ ಒಂದು ಕಟ್ಟು ಕೊಟ್ಟು ಏನೋ ಕೇಳುತ್ತಿದ್ದಾಗ ನಾನು ಓಡುತ್ತಾ ಬಂದುಬಿಟ್ಟೆ. ದೇವಸ್ಥಾನದಲ್ಲಿ ಗಣೇಶ್ ಬೀಡಿಗಳ ಕಟ್ಟು, ಉಳಿದ ಚಿಲ್ಲರೆ, ಸಾಧುವಿಗೆ ನೀಡಿ, ನನ್ನ ಆಟಗಳಲ್ಲಿ ನಾನು ಮುಳುಗಿಹೋದೆ.ಒಂದು ವಾರದ ನಂತರ, ಅಪ್ಪ ಯಥಾಲಾಪವಾಗಿ  ಪಡಶಾಲೆಯಲ್ಲಿ ಇದ್ದ ನನ್ನನ್ನು ಕರೆದು “ಏನೋ ಬೀಡಿ ಸೇದುತ್ತಿದ್ದೀಯಾ?”  ಎಂದು ಸ್ವಲ್ಪ ಕಟುವಾಗಿಯೇ ಕೇಳಿದರು.  ನನ್ನ ಬಾಯಿಂದ ಮಾತು ಬರಲಿಲ್ಲ. ಅಷ್ಟರಲ್ಲಿ ಅಮ್ಮನೂ ಬಂದಳು. ವಿಷಯ ತಿಳಿದುಕೊಂಡು, “ಛ, ಚ ಅವನು ಏಕೆ ಸೇದುತ್ತಾನೆ? ” ಎಂದು ನನ್ನನ್ನು ಸಮರ್ಥಿಸಿದಳು.ಮತ್ತೆ ತಾನೇ “ಇಷ್ಟಕ್ಕೂ ನಿಮಗೆ ಯಾರು ಹೇಳಿದರು?” ಎಂದು ಕೇಳಿದಾಗ, ಅಪ್ಪ “ಯಾರೋ ಹೇಳಿದರೆ ನಾನೇಕೆ ನಂಬುತ್ತೇನೆ,  ಯಾರ ಹತ್ರ  ಇವನು ಖರೀದಿಸಿದನೋ  ಅವನೇ, ಚಿಕ್ಕಶೆಟ್ಟಿ ಹೇಳಿದ” ಎಂದ.ನನಗೆ ವಿಷಯವು ಅರ್ಥವಾಯಿತು. ನಾನು ಮುಗುಳ್ನಗುತ್ತಾ “ಓಹ್, ಅದಾ, ದೇವಸ್ಥಾನದಲ್ಲಿ ಸ್ವಾಮಿ ಇದ್ದಾನಲ್ಲ, ಕಳೆದ ಭಾನುವಾರ ಅವರು ಖರೀದಿಸಿಕೊಂಡು ಬಾ ಅಂತ ಹೇಳಿದರು. ಆಗ ನಾನು  ಖರೀದಿಸಿದೇ. ನಾನು ಕುಡಿಯಲು ಅಲ್ಲ.”ಎಂದೆ.ಅಪ್ಪ ನಂಬುವಂತೆ ಕಾಣಲಿಲ್ಲ. “ನೀವು ತಪ್ಪು ಮಾಡಿದ್ದು ಅಲ್ಲದೆ, ಅಪರಾಧವನ್ನು ಇನ್ನೊಬ್ಬರಿ ಮೇಲೆ ಹಾಕುವೇ ” ಎಂದು ಅವರು ಪ್ರತಿದಾಳಿ ನಡೆಸಿದರು.ಆ ಮಾತುಗಳಿಗೆ ನನ್ನ ಮುಖವು ಕೆಂಪಾಯಿತು. ದುಃಖವಾಯಿತು. ಕೀಚಲು ಧ್ವನಿಯಲ್ಲಿ ನಮ್ಮಮ್ಮಯೊಂದಿಗೆ, “ಬೇಕಾದರೆ ಈಗಲೇ ದೇವಸ್ಥಾನಕ್ಕೆ ಹೋಗೋಣ. ಅವರಿಂದಲೇ ಮಾತನಾಡಿಸುವೆ” ಎಂದೆ.ನನ್ನ  ನಿರಪರಾಧತ್ವ ಮೇಲೆ ನನಗಿಂತಲೂ ಜಾಸ್ತಿ ನಂಬಿಕೆ ಇರುವ ಅಮ್ಮ ತಕ್ಷಣ-“ಹೋಗಿ ಅವರನ್ನೇ ಕೇಳೋಣ” ಎಂದಳು.ನನ್ನ ತಂದೆಯೂ ಅಂಗಿ ಧರಿಸುತ್ತಾ-“ತಕ್ಷಣ ಹೋಗಿ ಮಹದೇವಪ್ಪ ಮಾಮನವರನ್ನು ಕರೆದುಕೊಂಡುಬಾ ಹೋಗು, ಇಲ್ಲಿ ಇದ್ದಂತೆ ಬರಬೇಕು. ಏಕೆ ಎಂದು ಕೇಳಿದರೆ ಬಂದಾಗಾ ಅಪ್ಪ ಹೇಳುತ್ತರಂತೆ ಎಂದು ಹೇಳು. ನಾವು ದೇವಸ್ಥಾನದ ಹೊರಗೆ ಇರುತ್ತೇವೆ” ಎಂದೆ.ನಾನು ಮಿಂಚಿನ ವೇಗದಿಂದ ಹೋಗಿ ಹತ್ತು ನಿಮಿಷದಲ್ಲಿ ಮಹದೇವಪ್ಪ ಮಾಮಾನ ಜೊತೆ ದೇವಸ್ಥಾನಕ್ಕೆ ಬಂದೆ. ಅಪ್ಪ ಮಾಮನೊಂದಿಗೆ ಏನೋ ಮಾತಾಡಿದರು. ಮಾಮ, ಹಿಂದೆ ಅಪ್ಪ, ಆ ಹಿಂದೆ ಅಮ್ಮ, ನಾನು ದೇವಸ್ಥಾನದ ಒಳಗೆ ಹೋಗಿ ಸ್ವಾಮಿ ಕುಳಿತಿದ್ದ ಜಾಗಕ್ಕೆ ಸೇರೀದೆವು .ನಮ್ಮ ಬರುವಿಕೆಯನ್ನು ನಿಜಕ್ಕೆ ಊಹಿಸದ ಅವರು, ‘ರಾತ್ರಿ ಊಟ ತೆಗೊಂಡು ಯಾರೋ ಭಕ್ತರು ಬರಬೇಕಾದ ಸಮಯದಲ್ಲಿ ಇವರು ಬಂದಿದ್ದರೇನು?’ ಎಂದು ಆಶ್ಚರ್ಯ ಹೋದ. ಸ್ವಲ್ಪ ತಬ್ಬಿಬ್ಬಾದ.ಮಹದೇವಪ್ಪ ಮಾಮ ಅವು ಇವು ಮಾತಾಡಿ-“ನೀವು ಈ ಹುಡುಗನೊಂದಿಗೆ ಹೋದ ವಾರ

ತೆಲುಗು ಕಥೆ “ಶೋಭನ್‌ ಬಾಬು-ಗಣೇಶ್‌ ಬೀಡಿ” ತೆಲುಗುಮೂಲ ಜಿ.ಉಮಾಮಹೇಶ್ವರ್‌ , ಕನ್ನಡಕ್ಕೆ ರಂಗನಾಥ ರಾಮಚಂದ್ರ ರಾವು Read Post »

ಅನುವಾದ

“ಮೇಣದ ಬತ್ತಿಯಂತೆ ಕರಗಬಲ್ಲೆ, ಬೆಳಗಬಲ್ಲೆ!” ತೆಲುಗು ಮೂಲ: ಆಶಾರಾಜು,ಕನ್ನಡ ಅನುವಾದ: ಕೋಡೀಹಳ್ಳಿ  ಮುರಳೀ ಮೋಹನ್

ಅನುವಾದ ಸಂಗಾತಿ “ಮೇಣದ ಬತ್ತಿಯಂತೆ ಕರಗಬಲ್ಲೆ, ಬೆಳಗಬಲ್ಲೆ!” ತೆಲುಗು ಮೂಲ: ಆಶಾರಾಜು, ಕನ್ನಡಕ್ಕೆ: ಕೋಡೀಹಳ್ಳಿ  ಮುರಳೀ ಮೋಹನ್ ಇಲ್ಲಿ ನಗುವುದೇ ನಿಷಿದ್ಧ,ನನಗೆ ನಗುವುದು ಗೊತ್ತು.ಇಲ್ಲಿ ಶಬ್ದವೇ ನಿಷಿದ್ಧ,ನನಗೆ ಮಾತಾಡುವುದು ಗೊತ್ತು.ಇಲ್ಲಿ ಪ್ರಶ್ನೆಗಳೇ ನಿಷಿದ್ಧ,ನನಗೆ ಕಾರಣಗಳನ್ನು ಹುಡುಕುವುದು ಗೊತ್ತು.ನಾನು ಮೇಣದ ದೀಪ.ಸುಡುತ್ತಾ ಕರಗಿಹೋಗುವುದು ಗೊತ್ತು;ಬೆಳಗಾಗುವವರೆಗೂ ಹೊಳೆಯುವುದೂ ಗೊತ್ತು.ಕಣ್ಣೀರು ವಿಚಿತ್ರವಾದ ಇತಿಹಾಸ ಹೊಂದಿವೆ.ಕೋಪದಂತೆ ಉರಿಯಾಗಿ ಬರುತ್ತವೆ,ಶಾಂತಿಯಂತೆ ತಂಪಾಗಿ ಇಳಿಯುತ್ತವೆ.ಸೋತಾಗ ಉಕ್ಕಿ ಹರಿಯುತ್ತವೆ,ಗೆದ್ದಾಗಲೂ ಮಿನುಗುತ್ತವೆ.ವೀರರು ಇದನ್ನೇ ಧೈರ್ಯ ಎನ್ನುತ್ತಾರೆ,ಕವಿಗಳು ಇದನ್ನೇ ಅಲುಗದ, ಬೆದರದ ಬದುಕು ಎನ್ನುತ್ತಾರೆ! ತೆಲುಗು ಮೂಲ: ಆಶಾರಾಜುಕನ್ನಡ ಅನುವಾದ: ಕೋಡೀಹಳ್ಳಿ  ಮುರಳೀ ಮೋಹನ್

“ಮೇಣದ ಬತ್ತಿಯಂತೆ ಕರಗಬಲ್ಲೆ, ಬೆಳಗಬಲ್ಲೆ!” ತೆಲುಗು ಮೂಲ: ಆಶಾರಾಜು,ಕನ್ನಡ ಅನುವಾದ: ಕೋಡೀಹಳ್ಳಿ  ಮುರಳೀ ಮೋಹನ್ Read Post »

ಅನುವಾದ

“ಅಫ್ಟ್ರಾಲ್ ವಾಚ್ಮನ್” ತೆಲುಗು ಮೂಲ ಉಪ್ಪುಲ ಲಿಂಗಯ್ಯ ಕನ್ನಡಕ್ಕೆ ಧನಪಾಲ ನಾಗರಾಜಪ್ಪ

ಅನುವಾದ ಸಂಗಾತಿ ಅಫ್ಟ್ರಾಲ್ ವಾಚ್ಮನ್ ತೆಲುಗು : ಉಪ್ಪುಲ ಲಿಂಗಯ್ಯಕನ್ನಡಕ್ಕೆ : ಧನಪಾಲ ನಾಗರಾಜಪ್ಪಅ vಕೊರಿಯರ್ ಪಾರ್ಸಲ್ಮೇಲಕ್ಕೆ ತಂದುಕೊಡುಟಿಫನ್ ತಂದುಕೊಡುದಿನಸಿ ಸರಕುಗಳನ್ನು ತಂದುಕೊಡುಕನ್ನಡಕ ಮೇಲಿಟ್ಟು ಮರೆತಿರುವೆತೆಗೆದುಕೊಂಡು ಬಾಬಸ್ ನಿಲ್ದಾಣದ ಬಳಿ ಬಿಟ್ಟಿರುವಗಾಡಿಯನ್ನು ಹಾಕಿಕೊಂಡು ಬಾಇದನ್ನು ಒರೆಸು, ಅಲ್ಲಿಗೆ ಹೋಗು…ಒಮ್ಮೊಮ್ಮೆ ಒಂದೊಂದು ಕೆಲಸಒಮ್ಮೊಮ್ಮೆ ಒಂದೊಂದು ಗದರಿಕೆಪ್ರೀತಿಯಿಂದ ಹೇಳುವವರು ಕೆಲವರುಒದರುವಂತೆ ಹೇಳುವವರು ಕೆಲವರು ಡ್ಯೂಟಿ ಅಂತಾರೆಆದರೆ…ಇವೆಲ್ಲಾ ಡ್ಯೂಟಿಯನ್ನು ಮೀರಿದ ಕೆಲಸಗಳುಮಾಡಬೇಕನಿಸುತ್ತದೆಆಗಾಗ ಮಾಡಬಾರದನಿಸುತ್ತದೆಮೈಕೈ ನುಜ್ಜುಗುಜ್ಜಾಗುತ್ತದೆಜೀವ ದಣಿದು ಹೋಗುತ್ತದೆಹೇಳಿದ ರೀತಿಗೆ ಚುರುಕ್ ಅನ್ನುತ್ತದೆ“ಈಗ ಆಗುವುದಿಲ್ಲ ಸರ್ಗೇಟಿನ ಬಳಿ ಯಾರೂ ಇಲ್ಲ ಸರ್”ತಡಬಡಿಸುತ್ತ ನಾನು ಹೇಳಿದೊಡನೆಅವರು ಹೇಳುವರು…“ಅಫ್ಟ್ರಾಲ್ ವಾಚ್ಮನ್ನಮ್ಮ ಮಾತಿಗೇ ಎದುರು ಮಾತಾಡುವೆಯಾನಿನ್ನ ಕೆಲಸ ಕಿತ್ತುಹಾಕುವೆ” ಎಷ್ಟು ಸಲ ಎಷ್ಟೆಲ್ಲಾ ಮಾಡಿದೆನಲ್ಲಎಷ್ಟೋ ಸಲ ನಿದ್ದೆಯನ್ನೇ ತೊರೆದನಲ್ಲಇದೇನಿದು…ಒಂದು ಸಲ ಆಗುವುದಿಲ್ಲ ಎಂದರೆಅಫ್ಟ್ರಾಲ್ ವಾಚ್ಮನ್ ಆಗಿಬಿಡುವೆಎಲ್ಲರನ್ನೂ ಕಾಯುವ ನಾನು ಅಫ್ಟ್ರಾಲ್ ವಾಚ್ಮನ್ ಹೇಗಾಗುವೆ! ತೆಲುಗು : ಉಪ್ಪುಲ ಲಿಂಗಯ್ಯಕನ್ನಡಕ್ಕೆ : ಧನಪಾಲ ನಾಗರಾಜಪ್ಪ

“ಅಫ್ಟ್ರಾಲ್ ವಾಚ್ಮನ್” ತೆಲುಗು ಮೂಲ ಉಪ್ಪುಲ ಲಿಂಗಯ್ಯ ಕನ್ನಡಕ್ಕೆ ಧನಪಾಲ ನಾಗರಾಜಪ್ಪ Read Post »

ಅನುವಾದ

ಮಲಯಾಳಂ ಕವಿತೆ “ಒಂದು ನುಡಿ?”ಮೂಲ ತಾಜುದ್ದೀನ್‌ ಕನ್ನಡಕ್ಕೆ ಐಗೂರು ಮೋಹನ್ ದಾಸ್ ಜಿ.

ಅನುವಾದ ಸಂಗಾತಿ ಮಲಯಾಳಂ ಕವಿತೆ “ಒಂದು ನುಡಿ?” ಮೂಲ ತಾಜುದ್ದೀನ್‌ ಕನ್ನಡಕ್ಕೆ ಐಗೂರು ಮೋಹನ್ ದಾಸ್ ಜಿ. ಸಹ ಪ್ರಯಾಣಿಕನೇ…….,ಈ ತಿರುವಿನಲ್ಲಿಯೂಅಥವಾಮುಂದಿನ ತಿರುವಿನಲ್ಲಿಯೂನಾವು ಬೇರೆಯಾಗುತ್ತೇವೆ….!ನೀನು ಪುನಃಯಾತ್ರೆಯನ್ನು ಮುಂದುವರಿಸುವಾಗನನ್ನ  ‘ಶವಪೆಟ್ಟಿಗೆ ‘ಯನ್ನುಹೊತ್ತುಕೊಂಡು ಸಾಗಬೇಡಾ….!!!. ಯಾರದ್ದರೂನನ್ನ ಕುರಿತು ಕೇಳಿದ್ದರೇ…….,ನಾನುಜೊತೆಗೆ ಇದ್ದುನಷ್ಟವಾದ ದುರಾದೃಷ್ಟವಂತ….!ಬಾಳಿನಿಂದ ದೂರವಾದಪಾತ್ರದಾರ……ಎಂದು ಮಾತ್ರ ಹೇಳಬೇಕು….!‘ ದರಿದ್ರ’ನಾಗಿದ್ದೆ ಎಂದುಮಾತ್ರ ಹೇಳಬಾರದು…..!!! ನನ್ನ ನೋಟಗಳಲ್ಲಿಬರೆಯದೇ ಇದ್ದದ್ದುಓದಿದ್ದರೇ……ಅಳಿಸಿ ಹಾಕಲುನೀನು ‘ಅವಳ ‘ಬಳಿ ಹೇಳಬೇಕು….!!! ನಾನು ಒಂದು‘ಹೂವು’ ಸಹಕಿತ್ತು ಹಾಕಿಯೇಇಲ್ಲ….!!!. ಮಲಯಾಳಂ ಮೂಲ: ತಾಜುದ್ದೀನ್.ಕನ್ನಡ ಅನುವಾದ: ಐಗೂರು ಮೋಹನ್ ದಾಸ್ ಜಿ.                                 

ಮಲಯಾಳಂ ಕವಿತೆ “ಒಂದು ನುಡಿ?”ಮೂಲ ತಾಜುದ್ದೀನ್‌ ಕನ್ನಡಕ್ಕೆ ಐಗೂರು ಮೋಹನ್ ದಾಸ್ ಜಿ. Read Post »

ಅನುವಾದ, ಕಾವ್ಯಯಾನ

ಡಾ. ದೇವರಾಜು ಮಹಾರಾಜು ಅವರ ತೆಲುಗು ಕವಿತೆ”ಜಲಭಾಷೆ” ಕನ್ನಡಾನುವಾದ ರಂಗನಾಥ ರಾಮಚಂದ್ರರಾವು

ಅನುವಾದ ಸಂಗಾತಿ “ಜಲಭಾಷೆ” ತೆಲುಗು ಮೂಲ:ಡಾ. ದೇವರಾಜು ಮಹಾರಾಜು ಕನ್ನಡಾನುವಾದ ರಂಗನಾಥ ರಾಮಚಂದ್ರರಾವು ಕವನ ಒಂದು ಪ್ರತ್ಯೇಕ ಪರಿಭಾಷೆಅದು ಎಲ್ಲಾ ಭಾಷೆಗಳಿಗೂ ಬಗ್ಗುತ್ತದೆಎಲ್ಲಾ ಭಾಷೆಗಳನ್ನು ಬಗ್ಗಿಸಿಕೊಳ್ಳುತ್ತದೆತಲೆ ಬಗ್ಗಿಸಿದಂತೆ ಬಗ್ಗಿಸಿ, ಎಲ್ಲಾ ಪ್ರಕಾರಗಳನ್ನುತನ್ನ ರೆಕ್ಕೆಗಳ ಕೆಳಗೆ ಎಳೆದುಕೊಳ್ಳುತ್ತದೆಕಾಲದೊಂದಿಗೆ ಸಾಗುತ್ತಾಒಂದೊಂದು ಸಲ ಕಾಲವನ್ನೂ ದಾಟಿಹೋಗುತ್ತದೆಕವನ ಒಂದು ಜಲ ಭಾಷೆಅದು ಯಾವ ಪಾತ್ರೆಯಲ್ಲಾದರೂ ತುಂಬುತ್ತದೆ –ಒದಗುತ್ತದೆ ಕವನ ಒಂದು IDEOGRAMಅದು ಛಂದಸ್ಸಿನಲ್ಲಿ ಬದುಕುವುದೇಮಾತ್ರಾ ಛಂದಸ್ಸಿನಲ್ಲಿ ಬದುಕುವುದೇವಚನದಲ್ಲಿ ಬದುಕುತ್ತದೆ ಎಂಬ ಚರ್ಚೆಎಷ್ಟು ಅರ್ಥರಹಿತವೆಂದರೆ …ಜೀವವು ಯಾವ ರೀತಿಯ ಜೀವಿಯಾಗಿ ನಿಲ್ಲುತ್ತದೆಪ್ರಾಣಿಗಳು ಹುಟ್ಟುತ್ತವೆ, ಸಾಯುತ್ತವೆ , ಆದರೆ …ನಿರಂತರವಾಗಿ ಮುಂದುವರಿಯುವುದು ಜೀವಶಕ್ತಿ ಮಾತ್ರವೇ!ಪ್ರಕಾರಗಳೂ ಅಷ್ಟೇ !!ಅಂತರ್ಗತವಾಗಿ ಸಾಗುವುದು ಕವನಶಕ್ತಿ ಮಾತ್ರವೇ!ಅದೊಂದೇ ಕಾಲಕ್ಕೂ ಜೀವನಕ್ಕೂ ಮಾನವತೆಗೂತಳಮಟ್ಟದಲ್ಲಿ ಹರಿಯುವುದುಆಧಾರವಾಗಿ ಇರುತ್ತಿರುವುದುಕವನ ಒಂದು ಫ್ರತ್ಯೇಕ ಭಾಷೆಅದು ಎಲ್ಲಾ ಜೀವಿಗಳ ಜೀವ ಭಾಷೆಗಳಲ್ಲಿ ಪ್ರಕಟಗೊಳ್ಳುತ್ತದೆ ! ತೆಲುಗುಮೂಲ: ಡಾ. ದೇವರಾಜು ಮಹಾರಾಜುಕನ್ನಡಕ್ಕೆ : ರಂಗನಾಥ ರಾಮಚಂದ್ರರಾವು

ಡಾ. ದೇವರಾಜು ಮಹಾರಾಜು ಅವರ ತೆಲುಗು ಕವಿತೆ”ಜಲಭಾಷೆ” ಕನ್ನಡಾನುವಾದ ರಂಗನಾಥ ರಾಮಚಂದ್ರರಾವು Read Post »

ಅನುವಾದ

ವೇಲ್ಫುಲ ನಾರಾಯಣ ಅವರ ತೆಲುಗುಕವಿತೆ “ಉದ್ಯಾನ ಗೀತ”ದ ಕನ್ನಡಾನುವಾದ ಕೋಡೀಹಳ್ಳಿ ಮುರಳೀಮೋಹನ್

ಅನುವಾದ ಸಂಗಾತಿ ಉದ್ಯಾನಗೀತ ತೆಲುಗು ಮೂಲ :ವೇಲ್ಪುಲ ನಾರಾಯಣಕನ್ನಡ ಅನುವಾದ : ಕೋಡೀಹಳ್ಳಿ ಮುರಳೀಮೋಹನ್  ಭಾರವಾಗಿ ಸುರಿದ ಹಿಮರಾಶಿಯಮುತ್ತುಗಳಾಗಿಸಿ ರೂಪಾಂತರಿಸಿ,ಮೃದು ಕಿರಣಗಳ ಸೂರ್ಯೋದಯವಮಿನುಗುತ್ತಲೇ ಸ್ವಾಗತಿಸುತಿದೆ. ನಡೆಗೆ ಬಂದವರ ಮಾತುಕತೆಯಲ್ಲಿಸಭ್ಯತೆಯ ಲಹರಿ ಕೇಳುತ್ತಿದೆ,ಸಂತಸದ ನಗುವಿನ ಪರವಶದಿ ನಾದಗಳೆಲ್ಲವೂ ಸಂಗೀತವಾಗುತ್ತಿದೆ.ದಣಿವಿನಲಿ ಮೌನವಾಗಿ ಕುಳಿತರೆಚದುರಿದ ಮನಕೆ ಆಸರೆಯಾಗಿ,ಬಾಳ ಪಯಣದ ಯುದ್ಧಗಳ ಮಧ್ಯೆಶಕ್ತಿಯ ತುಂಬುವ ಶಾಂತಿ ಸರೋವರವಿದು. ಎಲೆಗಳು ಉದುರಿದ ಮರಗಳಲಿನವಚೈತನ್ಯದ ಚಲನೆಯಿದೆ,ಚಿಗುರೊಡೆಯುವ ಕೊಂಬೆಗಳ ನಡುವೆಭವಿಷ್ಯದ ಕೋಗಿಲೆಯ ಕುಹೂಗಾನವಿದೆ. ಸುಂಟರಗಾಳಿಯ ಸವಾಲಿಗೂಬಗ್ಗದ ಬೆನ್ನಲಬಿನ ಧೈರ್ಯವಿದು,ಬಿದ್ದವರ ಎದೆಯಲಿ ಮತ್ತೆ ಏಳುವಪ್ರೇರಣೆಯ ದೀಪವಿದು. ಅನ್ಯಾಯದ ಅಂಧಕಾರವ ಸೀಳುವಆಶೆಗಳ ಅಗ್ನಿಜ್ವಾಲೆಯಾಗಿ,ಬಂಧನದ ಬೇಡಿಗಳನು ಮುರಿದುಬೀಸುವ ಸ್ವಾತಂತ್ರ್ಯದ ಗಾಳಿಯಾಗಿದೆ. ಕಣ್ಣೀರಿನ ಕಾಲುವೆಯ ಕಲ್ಲೋಲದಿಹೊಸ ಕ್ರಾಂತಿಯ ಕಿಡಿ ಎಬ್ಬಿಸಿ,ದೌರ್ಜನ್ಯದ ಅರಣ್ಯವ ಸುಡುವವಿಪ್ಲವದ ವಸಂತವಾಗಲಿ. ಬದುಕಿನ ಓಟದ ಒರಟು ಹಾದಿಯಲಿಪ್ರಕೃತಿಯ ಮಡಿಲ ಅರಳಿದ ಹೂವಾಗಿ,ಪ್ರತಿ ಮುಂಜಾವಿನ ಹೊಸ ಉತ್ಸಾಹದ ಉಸಿರಾಗಲಿ ಈ ‘ಉದ್ಯಾನಗೀತ’. ತೆಲುಗು ಮೂಲ :ವೇಲ್ಪುಲ ನಾರಾಯಣಕನ್ನಡ ಅನುವಾದ : ಕೋಡೀಹಳ್ಳಿ ಮುರಳೀಮೋಹನ್

ವೇಲ್ಫುಲ ನಾರಾಯಣ ಅವರ ತೆಲುಗುಕವಿತೆ “ಉದ್ಯಾನ ಗೀತ”ದ ಕನ್ನಡಾನುವಾದ ಕೋಡೀಹಳ್ಳಿ ಮುರಳೀಮೋಹನ್ Read Post »

ಅನುವಾದ, ಕಥಾಗುಚ್ಛ

“ವೈರುಧ್ಯಗಳು” ಭಾಗವತುಲ ಕೃಷ್ಣಾರಾವು ಅವರತೆಲುಗು ಕಥೆಯ ಕನ್ನಡಾನುವಾದ‌ ಕೋಡೀಹಳ್ಳಿಮುರಳೀ ಮೋಹನ್

ಅನುವಾದ ಸಂಗಾತಿ “ವೈರುಧ್ಯಗಳು” ತೆಲುಗು ಮೂಲ: ಭಾಗವತುಲ ಕೃಷ್ಣಾರಾವುಕನ್ನಡ ಅನುವಾದ : ಕೋಡೀಹಳ್ಳಿ ಮುರಳೀ ಮೋಹನ್ ಸಮಯ ರಾತ್ರಿ ಹತ್ತೂವರೆ. ನಿವೃತ್ತ ಇಂಗ್ಲಿಷ್ ಉಪನ್ಯಾಸಕ ಆನಂದರಾಯರಿಗೆ ಇದು ಗಾಢ ನಿದ್ರೆಯ ಸಮಯ. ಶಿಸ್ತಿನ ಸಿಪಾಯಿಯಂತಿದ್ದ ಅವರಿಗೆ ಹತ್ತು ಗಂಟೆಯಾದರೆ ಸಾಕು, ಬಾಹ್ಯ ಪ್ರಪಂಚದ ಸಂಪರ್ಕ ಕಡಿತಗೊಳ್ಳುತ್ತಿತ್ತು. ಆದರೆ ಅಂದು ರಾತ್ರಿ ಫೋನಿನ ಕರ್ಕಶ ಶಬ್ದ ಅವರ ನಿಶ್ಯಬ್ದ ಲೋಕವನ್ನು ಸೀಳಿತು. ನಿದ್ರೆಗಣ್ಣಿನಲ್ಲೇ ಫೋನು ಎತ್ತಿದ ರಾಯರು, ಮಂಪರಿನ ಧ್ವನಿಯಲ್ಲೇ “ಹಲೋ” ಎಂದರು. ಅತ್ತ ಕಡೆಯಿಂದ ಸಹೋದ್ಯೋಗಿ ನಾಗರಾಜು ಮಾತಾಡುತ್ತಿದ್ದರು. “ಏನಪ್ಪಾ ಆನಂದ್.. ಮನೆಯಲ್ಲೇ ‘ಅಂಗಡಿ’ (ಬಾರ್) ತೆರೆದಿದ್ದೀಯಾ ಅನ್ಸುತ್ತೆ? ಆ ಧ್ವನಿ ಕೇಳಿದರೆ ಹಾಗೇ ಅನ್ನಿಸುತ್ತಿದೆಯಲ್ಲಪ್ಪಾ!” ಎಂದು ವ್ಯಂಗ್ಯವಾಗಿ ನಕ್ಕರು. ರಾಯರಿಗೆ ಆಘಾತವಾಯಿತು. ಅದು ಕುಡಿತದ ಅಮಲಲ್ಲ, ನಿದ್ರೆಯ ಮಂಪರು ಎಂದು ನಾಗರಾಜುಗೆ ಅನಿಸಲೇ ಇಲ್ಲ. ಬೇಸರದಿಂದಲೇ ಫೋನು ಇಟ್ಟರು. ಕೆಲವೇ ನಿಮಿಷಗಳಲ್ಲಿ ಮತ್ತೊಂದು ಕರೆ. ಈ ಬಾರಿ ವಿಶ್ವನಾಥ್ ಎಂಬ ಇನ್ನೊಬ್ಬ ಸಹೋದ್ಯೋಗಿ. ಅದೇ ನಿದ್ರೆಯ ಧ್ವನಿಯನ್ನು ಕೇಳಿದ ವಿಶ್ವನಾಥ್ ತಕ್ಷಣ ಗಾಬರಿಗೊಂಡು, “ಆನಂದ್, ಯಾಕೋ ಧ್ವನಿ ಸರಿ ಇಲ್ಲ. ಹಲ್ಲು ನೋವೇನಾದರೂ ಇದೆಯೇ? ಸುಮ್ಮನೆ ನರಳಬೇಡ, ನಾಳೆನೇ ಒಬ್ಬ ಒಳ್ಳೆ ದಂತವೈದ್ಯರನ್ನು ಹೋಗಿ ನೋಡು” ಎಂದು ಪ್ರೀತಿಯಿಂದ ಸಲಹೆ ನೀಡಿದರು. ಮರುದಿನ ಬೆಳಗ್ಗೆ ಪೆಟ್ರೋಲ್ ಬಂಕ್ ಹತ್ತಿರ ಆನಂದರಾಯರ ಜೀವನದ ಎರಡನೇ ಪಾಠ ಕಾದಿತ್ತು. ಬಂಕ್‌ನ ಉದ್ದನೆಯ ಸಾಲಿನಲ್ಲಿ ನಿಂತಿದ್ದಾಗ, ಒಬ್ಬ ಯುವಕ ಓಡುತ್ತಾ ಬಂದು ಅವರ ಪಾದಗಳಿಗೆ ನಮಸ್ಕರಿಸಿದ. ಆತ ಅವಿನಾಶ್. ವರ್ಷಗಳ ಹಿಂದೆ ತೆಲುಗು ಮಾಧ್ಯಮದಿಂದ ಬಂದು ಇಂಗ್ಲಿಷ್ ಮಾತಾಡಲು ಒದ್ದಾಡುತ್ತಿದ್ದ ಆ ಹುಡುಗನಿಗೆ ರಾಯರು ಮಾರ್ಗದರ್ಶನ ನೀಡಿದ್ದರು. ಇಂದು ಆತ ಐಐಟಿ ಪದವೀಧರನಾಗಿ ಉನ್ನತ ಸ್ಥಾನದಲ್ಲಿದ್ದಾನೆ. ಕೃತಜ್ಞತೆಯಿಂದ ಹೂಗುಚ್ಛ ನೀಡಿ, “ನಾಳೆ ಮನೆಗೆ ಬಂದು ಅಮ್ಮನವರ ಆಶೀರ್ವಾದ ಪಡೆಯುತ್ತೇನೆ” ಎಂದು ವಿನಯದಿಂದ ಹೊರಟುಹೋದ. ರಾಯರು ಗಾಡಿ ಸ್ಟಾರ್ಟ್ ಮಾಡುವಷ್ಟರಲ್ಲಿ ಮತ್ತೊಬ್ಬ ಹಳೆಯ ಶಿಷ್ಯ ತರುಣ್ ಎದುರಾದ. ಕೈಯಲ್ಲೊಂದು ಸಿಗರೇಟು, ಕಣ್ಣಿಗೆ ಕಪ್ಪು ಕನ್ನಡಕ—ಪಕ್ಕಾ ಇಂದಿನ ‘ಜುಲಾಯಿ’ ಯುವಕನಂತೆ ಕಾಣುತ್ತಿದ್ದ. ಅಂದು ತರಗತಿಯಲ್ಲಿ ಕೊನೆಯ ಬೆಂಚಿನಲ್ಲಿದ್ದು ಕಿಡಿಗೇಡಿತನ ಮಾಡುತ್ತಾ ಫೇಲ್ ಆಗುತ್ತಿದ್ದವನು ಈತ. “ಅಂಕಲ್, ಜಂಕ್ಷನ್ ವರೆಗೆ ಲಿಫ್ಟ್ ಕೊಡ್ತೀರಾ?” ಎಂದು ತರುಣ್ ಕೇಳಿದಾಗ, ರಾಯರ ಮುಖದಲ್ಲಿ ಅಸಹ್ಯ ಮೂಡಿತು. ಏನೂ ಕೇಳದವರಂತೆ ಅವರು ಗಾಡಿ ಓಡಿಸಿ ಮುಂದೆ ಹೋದರು. ಮನೆಗೆ ಹಿಂದಿರುಗುವಾಗ ರಾಯರ ಮನಸ್ಸಿನಲ್ಲಿ ದ್ವಂದ್ವಗಳ ಸಂತೆ. ಒಂದೇ ಧ್ವನಿಯನ್ನು ಕೇಳಿದ ಇಬ್ಬರು ಸಹೋದ್ಯೋಗಿಗಳು ಬೇರೆ ಬೇರೆಯಾಗಿ ಹೇಗೆ ಅರ್ಥೈಸಿಕೊಂಡರು? ಒಬ್ಬನೇ ಗುರುವಿನ ಹತ್ತಿರ ಓದಿದ ಇಬ್ಬರು ಶಿಷ್ಯರು ಇಷ್ಟು ವ್ಯತಿರಿಕ್ತವಾಗಿ ಹೇಗೆ ಬೆಳೆದರು? ಈ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು ಒಂದು ಕೃಷ್ಣ ಮಂದಿರದ ಹತ್ತಿರ. ಅಲ್ಲಿ ಘಂಟಸಾಲ ಅವರ ಕಂಠಸಿರಿಯಲ್ಲಿ ಭಗವದ್ಗೀತೆಯ ಶ್ಲೋಕಗಳು ಕೇಳಿಬರುತ್ತಿದ್ದವು. ‘ಶ್ರದ್ಧಾತ್ರಯ ವಿಭಾಗ’ ಯೋಗದ ಆ ಶ್ಲೋಕಗಳು ರಾಯರ ಸಂಶಯಗಳಿಗೆ ಕನ್ನಡಿ ಹಿಡಿದವು. ಮನುಷ್ಯರು ನೋಡಲು ಒಂದೇ ರೀತಿ ಇದ್ದರೂ, ಅವರ ಆಹಾರ ಮತ್ತು ಅಭ್ಯಾಸಗಳಿಂದ ರೂಪುಗೊಳ್ಳುವ ಸಾತ್ವಿಕ, ರಾಜಸ ಮತ್ತು ತಾಮಸ ಗುಣಗಳು ಅವರ ವರ್ತನೆಯನ್ನು ನಿರ್ಧರಿಸುತ್ತವೆ ಎಂಬ ಸತ್ಯ ಅವರಿಗೆ ಹೊಳೆಯಿತು. “ಮೆಣಸಿನ ಗಿಡಕ್ಕೆ ಎಷ್ಟು ಸಿಹಿ ನೀರು ಹಾಕಿದರೂ ಅದು ಖಾರವಾದ ಮೆಣಸಿನಕಾಯಿಯನ್ನೇ ನೀಡುತ್ತದೆ. ಮಾವು ಮತ್ತು ಸಪೋಟ ಗಿಡಗಳು ಯಾವಾಗಲೂ ಸಿಹಿಯಾದ ಹಣ್ಣುಗಳನ್ನೇ ಕೊಡುತ್ತವೆ.” ಆನಂದರಾಯರಿಗೆ ಜ್ಞಾನೋದಯವಾಯಿತು. ಒಬ್ಬ ಗುರುವಾಗಿ ಅವರು ಎಲ್ಲರಿಗೂ ಒಂದೇ ರೀತಿಯ ಪಾಠ ಮಾಡಿದ್ದರು, ಆದರೆ ವಿದ್ಯಾರ್ಥಿಗಳು ಅವರವರ ಸ್ವಭಾವಕ್ಕೆ ತಕ್ಕಂತೆ ಅದನ್ನು ಸ್ವೀಕರಿಸಿದ್ದರು. ಸಂಶಯಗಳೆಲ್ಲಾ ಮಂಜಿನಂತೆ ಕರಗಿದವು. ಅವರು ಕೇವಲ ಇಂಗ್ಲಿಷ್ ಮೇಷ್ಟ್ರಾಗಿ ಅಲ್ಲ, ಜೀವನದ ದೊಡ್ಡ ಪಾಠವನ್ನು ಕಲಿತ ವಿದ್ಯಾರ್ಥಿಯಾಗಿ ಸಂತೋಷದಿಂದ ಮನೆಗೆ ಹೆಜ್ಜೆ ಇಟ್ಟರು. ತೆಲುಗು ಮೂಲ: ಭಾಗವತುಲ ಕೃಷ್ಣಾರಾವುಕನ್ನಡ ಅನುವಾದ : ಕೋಡೀಹಳ್ಳಿ ಮುರಳೀ ಮೋಹನ್

“ವೈರುಧ್ಯಗಳು” ಭಾಗವತುಲ ಕೃಷ್ಣಾರಾವು ಅವರತೆಲುಗು ಕಥೆಯ ಕನ್ನಡಾನುವಾದ‌ ಕೋಡೀಹಳ್ಳಿಮುರಳೀ ಮೋಹನ್ Read Post »

ಅನುವಾದ

“ವಾಕ್ಯದಲ್ಲಿ ನಾಡಿ” ಡಾ.ದೇವರಾಜು ಮಹಾರಾಜು ಅವರ ತೆಲುಗು ಕವಿತೆಯ ಕನ್ನಡಾನುವಾದ ರಂಗನಾಥ ರಾಮಚಂದ್ರ ರಾವು

ಅನುವಾದ ಸಂಗಾತಿ ವಾಕ್ಯದಲ್ಲಿ ನಾಡಿ ತೆಲುಗು ಮೂಲ : ಡಾ. ದೇವರಾಜು ಮಹಾರಾಜುಕನ್ನಡಕ್ಕೆ : ರಂಗನಾಥ  ರಾಮಚಂದ್ರರಾವು ಸಮುದ್ರದಲ್ಲಿ ಕವನವಿದೆಮಂಜಿನ ಹನಿಯಲ್ಲಿ ಕವನವಿದೆಮಂಜಿನ ಹನಿ ಸಾಗರದಲ್ಲಿ  ಅದೃಶ್ಯವಾಗುವುದರಲ್ಲಿಅಮೋಘವಾದ ಕವನವಿದೆ! ಮಣ್ಣಿನಲ್ಲಿ ಕವನವಿದೆಬೀಜದಲ್ಲಿ ಕವನವಿದೆಬೀಜ ಮಣ್ಣಿನಲ್ಲಿ ಅದೃಶ್ಯವಾಗಿಮರದಂತೆ ಬೆಳೆಯುವುದರಲ್ಲಿಅದ್ವಿತೀಯವಾದ ಕವನವಿದೆ! ಸೂರ್ಯೋದಯ –ಸೂರ್ಯಾಸ್ತಮಯಆರಂಭವು-ಅಂತ್ಯಗಳಂತೆಪ್ರಕೃತಿ ಕವನಕ್ಕೆ ಎರಡು ಮುಖ್ಯವಾದ ಚರಣಗಳು! ತೆಗೆಯುತ್ತಿರುವ ಪ್ರತಿಯೊಂದು ಉಸಿರಿನಲ್ಲಿಕವನ ಇರುವುದರಿಂದಲೇನಿನ್ನಲ್ಲಿ ಇನ್ನೂ ಜೀವವಿದೆ ಜೀವವೆಂದರೆ ಕೇವಲ ಚಲನವಲ್ಲಕವನವೆಂದರೆ ಕೇವಲ ವಾಕ್ಯ ವಿನ್ಯಾಸವಲ್ಲವಾಕ್ಯದಲ್ಲಿ  ನಾಡಿ ಮಿಡಿಯುವುದು ಕವನಚಲನದಲ್ಲಿ ಸ್ಪೃಹೆ ಧ್ವನಿಸುವುದು ಕವನ! ತೆಲುಗು ಮೂಲ : ಡಾ. ದೇವರಾಜು ಮಹಾರಾಜುಕನ್ನಡಕ್ಕೆ : ರಂಗನಾಥ  ರಾಮಚಂದ್ರರಾವು

“ವಾಕ್ಯದಲ್ಲಿ ನಾಡಿ” ಡಾ.ದೇವರಾಜು ಮಹಾರಾಜು ಅವರ ತೆಲುಗು ಕವಿತೆಯ ಕನ್ನಡಾನುವಾದ ರಂಗನಾಥ ರಾಮಚಂದ್ರ ರಾವು Read Post »

ಅನುವಾದ, ಕಥಾಗುಚ್ಛ

ತೆಲುಗು ಕಥೆ “ನಾಸ್ತಿಕ ದೇವರು”ಕನ್ನಡಾನುವಾದ ರಂಗನಾಥ ರಾಮಚಂದ್ರರಾವು

ಅನುವಾದ ಸಂಗಾತಿ ನಾಸ್ತಿಕ ದೇವರು ತೆಲುಗು ಮೂಲ : ಜಿ. ಉಮಾಮಹೇಶ್ವರ್ಕನ್ನಡಕ್ಕೆ : ರಂಗನಾಥ ರಾಮಚಂದ್ರರಾವು ಶ್ರೀಶೈಲಂ ಪ್ರಾಜೆಕ್ಟ್ ಕಾಲೋನಿಯಲ್ಲಿ ಎಲ್ಲರನ್ನೂ ಅತ್ತೆ-ಮಾಮಾ ಎಂದು ಕರೆಯುವುದುವಾಡಿಕೆ. ಹಾಗಾಗಿ ಅವರು ಯಾವದೇ ಪ್ರದೇಶದವರಾಗಲಿ, ಯಾವುದೇ ಧರ್ಮದವರಾಗಲಿ, ಯಾವುದೇ ಜಾತಿಯವರಾಗಲಿ ಅಲ್ಲಿ ಅತ್ತೆ-ಮಾವ. ಮಕ್ಕಳು ನಮಗಿಂತ ದೊಡ್ಡವರಾಗಿದ್ದರೆ, ಅಣ್ಣ ಮತ್ತು ಅಕ್ಕಾ ಎಂದೇ ಕರೆಯುತ್ತಿದ್ದೆವು.  ಹಾಗೆ ನನ್ನ ತಂದೆಯ ಕಛೇರಿಯಲ್ಲಿ ಕೆಲಸಮಾಡುವ ಲಕ್ಷ್ಮೀರೆಡ್ಡಿ ಅವರು ನಮಗೆ ಮಾಮವಾದರು. .ಸ್ವಲ್ಪ ತೆಳ್ಳಗಿನ ಗುಂಗುರು ಕೂದಲನ್ನು ಹಿಂದಕ್ಕೆ ಬಾಚಿಕೊಂಡು ಬಿಳಿಅಂಗಿ ಹಾಕಿಕೊಂಡು ಮೊಣಕೈಯ ವರೆಗೆ ಮಡಚಿ ಸೈಕಾಲ್ ತುಳಿಯುತ್ತಿದ್ದರು. ಅವರು ನನ್ನ ತಂದೆಯ ಕಛೇರಿಯ ಅಕೌಂಟ್ಸ್ ವಿಭಾಗದಲ್ಲಿ ಕೆಲಸಮಾಡುತ್ತಿದ್ದರು. ಆ ದಿನಗಳಲ್ಲಿ ಪ್ರಾಜೆಕ್ಟ್  ಕೆಲಸಗಳು  ಬಿರುಸಿನಿಂದ ನಡೆಯುತ್ತಿದ್ದರಿಂದ ಕೆಲಸದ ಒತ್ತಡ ಹೆಚ್ಚಿತ್ತು. ಎಲ್ಲರೂ  ತಪಾಸಣೆಗೆ ಹೋಗಿ ನೋಟ್ ಮಾಡಿದ ಎಂ.ಬುಕ್ಸ್ ಗಳಲ್ಲಿನ (ಮೇಸರ್ಮೆಂಟ್ಸ್ ಬುಕ್ಸ್)  ವಿವರಗಳನ್ನು ಪರಿಶೀಲಿಸಿ, ಅವುಗಳನ್ನು ಎಣಿಸಿ ಅವು ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು  ನಿರ್ಧರಿಸಿದರು. ಇದಲ್ಲದೆ ಅವರು ಕ್ಲೆಯಿಮ್  ಮಾಡಿದ ಮೊತ್ತವೂ, ಈ ವಿವರಗಳಿಗ ಅನುಗುಣವಾಗಿಯಿದಯೆ  ಅಥವಾ ಇಲ್ಲವೇ ಎಂಬುದನ್ನೂ ಸಹಾ ಪರಿಶೀಲಿಸುತ್ತಿದ್ದರು. ಕ್ಷೇತ್ರದಲ್ಲಿ ಕೆಲಸ ಮಾಡುವವರೆಲ್ಲರೂ ದಿನವಿಡೀ ಕೆಲಸ ಮಾಡುತ್ತಿದ್ದರು ಮತ್ತು ಸಂಜೆಯ ಹೊತ್ತಿಗೆ, ಅವರು ಆ ಪುಸ್ತಕಗಳನ್ನು  ಅಕೌಂಟ್ಸ್ ವಿಭಾಗಕ್ಕೆ ಸಲ್ಲಿಸುತ್ತಿದ್ದರು ಮತ್ತು ಉಳಿದ ಕೆಲಸವನ್ನು ನನ್ನ ತಂದೆ ಮನೆಗೆ ತರುತ್ತಿದ್ದರು.  ಅವುಗಳಲ್ಲಿ ಹೆಚ್ಚಿನವು ಘನ ಪರಿಮಾಣದ ಲೆಕ್ಕಾಚಾರಗಳಲ್ಲಿ ಇರುತ್ತಿದ್ದವು . ಎತ್ತರ, ಉದ್ದ, ಅಗಲ ಇರುತ್ತಿದ್ದವು- ಅದರ ಆಧಾರದಮೇಲೆ ಅವರು ಎಷ್ಟು ಘನಅಡಿ ಕೆಲಸ ಮಾಡಲಾಗಿದೆ ಎಂದು ಲೆಕ್ಕಹಾಕಿ ಅದನ್ನು ಯೂನಿಟ್ ರೇಟ್  ನಿಂದ  ಗುಣಿಸುತ್ತಿದ್ದರು.  ಆ ಲೆಕ್ಕಾಚಾರಗಳನ್ನು ಆಗಾಗ ಕಲಿತಿದ್ದರಿಂದ ನಾನು ಆಗಾಗ ಅಪ್ಪನ ಜೊತೆ ಕುಳಿತು ಕೆಲವು ಲೆಕ್ಕಾಚಾರಗಳನ್ನು ಮಾಡುತ್ತಿದ್ದೆ. ತುಂಬಾ ಕೆಲಸವಿದ್ದಾಗ, ಲಕ್ಷ್ಮಿರೆಡ್ಡಿ ಮಾಮ ಭಾನುವಾರ ಬೆಳಿಗ್ಗೆ ಟಿಫಿನ್  ಮಾಡಿದ ನಂತರ ಸೈಕಲ್‌ನಲ್ಲಿ ನಮ್ಮ ಮನೆಗೆ ಬರುತ್ತಿದ್ದರು. ಅವರು ಬರುತ್ತಾರೆಂದು ತಿಳಿದ ದಿನ ನಾನು ಅವರ ಆಗಮನಕ್ಕಾಗಿ ಸಾವಿರ ಕಣ್ಣುಗಳಿಂದ ಕಾಯುತ್ತಿದ್ದೆ. ನಾನು ಕಾಯುತ್ತಿದ್ದೇನೆ ಎಂದು ಗ್ರಹಿಸಿದ ಅವರು ಬಂದೊಡನೆ ‘ಮಾಸ್ಟರ್’ಎಂದು ಕರೆಯುತ್ತಿದ್ದರು. ಅದು ಕೇಳಿದ ತಕ್ಷಣ  ಎಲ್ಲಿದ್ದರೂ  ಓಡೋಡಿ ಬಂದು ಚಾಚಿದ  ಅವರ ಕೈಯಲ್ಲಿನ ಸೈಕಲ್ ಕೀಲಿಗಳನ್ನು ನಾಯಿ ಮರಿಯಂತೆ ಗಪ್ಪೆಂದು ಹಿಡಿದುಕೊಂಡು ಸರ್ರ್  ಎಂದು ಓಡಿಹೋಗುತ್ತಿದ್ದೆ. ಅಷ್ಟು ಆಸೆ ಯಾಕೆ  ನಮ್ಮ ಮನೆಯಲ್ಲಿ  ಸೈಕಲ್ಇರಲಿಲ್ಲ. ಆಫೀಸು ಅರ್ಧಕಿಲೋ ಮೀಟರ್ ಇರಲಿ  ಅಥವಾ  ಆರು ಕಿಲೋ ಮೀಟರ್ ಇದ್ದರೂ ನಮ್ಮ  ಅಪ್ಪ   ಆಫೀಸಿಗೆ ನಡೆದುಕೊಂಡೇ ಹೋಗುತ್ತಿದ್ದರು. ಬಾಡಿಗಗೆ  ಸೈಕಾಲ್ ಪಡೆದರೂ, ಒಂದು ಗಂಟೆಗಿಂತ ಹೆಚ್ಚು ಸಮಯ ಸವಾರಿ ಮಾಡಲು ನನಗೆ ಹಣ ಕೊಡುತ್ತಿರಲಿಲ್ಲ. ಅದಕ್ಕಾಗಿಯೇ ಲಕ್ಷ್ಮಿರೆಡ್ಡಿ ಮಾಮ ಬಂದಾಗ, ನಾನು ಕೀಲಿಗಳನ್ನು ತೆಗೆದುಕೊಂಡು, ಸೈಕಲ್ ಹತ್ತಿ ಅಡ್ಡ ಕಾಲಿಂದ ಫೆಡಲ್ ತುಳಿಯುತ್ತಾ ಕ್ಲಬ್ ಬಳಿಯ ಗ್ರೌಂಡ್ ಗೆ ಓಡಿಹೋಗುತ್ತಿದ್ದೆ!  ಅಡ್ಡ ಕಾಲು ಹಾಕಿ ಸೈಕಲ್ ತುಳಿಯುತ್ತಾ ಊರೆಲ್ಲಾ ತಿರುಗುತ್ತಿದ್ದೆ. ಒಂದೊಂದು ದಿನ ಒಂದೊಂದು ದಾರಿಯಲ್ಲಿ ಪ್ರಯಾಣ ಸಾಗುತ್ತಿತ್ತು.  ಮೂರನೇ ಸಾಲಿನಿಂದ ಕೆಳಗಿಳಿಯುವಾಗ ಡೌನ್ ನಲ್ಲಿ ಹೋಗುತ್ತಿರುವಾಗ  ತುಂಬಾ ಸಂತೋಷದಿಂದ ಗಾಳಿಯಲ್ಲಿ ತೇಲುತ್ತಿರುವಂತೆ ಭಾಸವಾಯಿತು. ಮತ್ತೆ ನಾನು ಹಿಂತಿರುಗಿ ಅಪ್  ಏರುವಾಗ ಬೆವರು ಸುರಿಸುತ್ತಿದ್ದೆ. ಅಲ್ಲದೆ ನಾನು ವಾಟರ್ ವರ್ಕ್ಸ್ ನಿಂದ   ಎಡಕ್ಕೆ ತಿರುಗಿ, ವರ್ಕ್ ಷಾಪ್ ದಾಟಿ, ನಂತರ ಬರುವ ಮುಂದಿನ ತಿರುವುಗಳಿಗೆ ಹೆದರಿ ಹಿಂತಿರುಗುತ್ತಿದ್ದೆ. ಸ್ಕೂಲ್ , ಪಾರ್ಕ್, ಬಸ್ ಸ್ಟಾಂಡ್ ನಿಂದ  ನೇರವಾಗಿ ಉಮಾಮಹೇಶ್ವರ ಟಾಕಿಸ್ ತನಕ, ಎಲ್ಲಿಯೂ ಕಾಲು ಕೆಳಗೆ ಇಡದೆ ಸೈಕಲ್ ತುಳಿಯುವುದು ಸಾಧ್ಯವಾಗುತ್ತಿರವಿಲ್ಲ. SBI ಬಳಿ ಒಂದು ಸಣ್ಣ ಬೆಟ್ಟವಿತ್ತು. ಸೈಕಲ್ ತುಳಿಯುವ ಮತ್ತು ಕಾಲುಗಳನ್ನು ಕೆಳಗೆಇಡದೆ ಮೇಲಕ್ಕೆ ಏರುವ ಸ್ಪರ್ಧೆಗಳು ಸಹ ನಡೆಯುತ್ತಿದ್ದೆವು.  ನಮ್ಮ ತರಗತಿಯಲ್ಲಿ ಈಗಾಗಲೇ ಎತ್ತರವಾಗಿದ್ದ ಅನೇಕ ಮಕ್ಕಳು ತಮ್ಮ ಸೈಕಲ್‌ಗಳಲ್ಲಿ  ಚೆಕ್‌ಪೋಸ್ಟ್‌ ವರೆಗೆ ಸುಲಭವಾಗಿ ಹೋಗಿ ಬರುತ್ತಿದ್ದರು. ಅವರಲ್ಲಿ ಕೆಲವರು  ಶ್ರೀಶೈಲಕ್ಕೂ ಹೋಗಿ ಬಂದಿವೆ ಎಂದು ಹೇಳುತ್ತಿದ್ದರು. ಅವೆಲ್ಲವೂ ನನ್ನ ಪಾಲಿಗೆ ದೊಡ್ಡ ಸಾಹಸ ಕೃತ್ಯ ಗಳೆಂದು ಎನಿಸುತ್ತವೆ. ರಾಮಮಂದಿರ, ಕಾಗೆಗಳ ಸೆಂಟರ್, ಐ.ಟಿ.ಐ.. ಹೀಗೆ ಇಡೀ ಇಡೀ ಊರು ಸೈಕಲ್ ಮೇಲೆ ಎಷ್ಟು ರೌಂಡ್ಸ್ ಹಾಕಿದ್ದೇವೋ ಆ  ಹೀರೋ  ಸೈಕಲ್ ಗೂ, ನನಗೂ ಗೊತ್ತು. ಮತ್ತೆ ಯಾವಾಗಲೋ ಮಧ್ಯಾಹ್ನದ  ಊಟದ ಸಮಯಕ್ಕೆ ಅವರಿಗೆ ಸೈಕಲ್ ಹಿಂತಿರುಗಿಸುತ್ತಿದ್ದೆ. ನಾನೆಂದರೆ ಅವರಿಗೆ ತುಂಬಾ ಪ್ರೀತಿ ಮತ್ತು ಅಭಿಮಾನ. ನನ್ನನ್ನು ಮುದ್ದಾಗಿ,  ಇಷ್ಟದಿಂದ ‘ಮಾಸ್ಟರ್’  ಎಂದು ಕರೆಯುತ್ತಿದ್ದರು. ಅವರು  ದೊಡ್ಡ ಆಚರಣೆವಾದಿ ಎಂದು, ತಾವು ಏನು ಹೇಳುವರೋ  ಅದೇ  ಮಾಡುತ್ತಾರೆಂದು, ಏನು ಮಾಡುತ್ತಾರೋ ಅದೇ ಹೇಳುತ್ತಾರೆಂದು  ಅಪ್ಪ ಅಮ್ಮನೊಂದಿಗೆ ಹೇಳುವುದನ್ನು ಕೇಳುತ್ತಿದ್ದೆ. ಆ ಮಾತುಗಳಿಗೆ  ನಿಜವಾದ ಅರ್ಥವೇನೋ ಆ   ಸಮಯದಲ್ಲಿ ನನಗೆ ಅರ್ಥವಾಗಲಿಲ್ಲ. ಆದರೆ  ಆ ಮಾತುಗಳು ಎಲ್ಲೋ ಮನದಲ್ಲಿ  ನೆಲೆಗೊಂಡಿವೆ ಎಂದು ದೊಡ್ಡವನು ಆದಮೇಲೆ ವಿವಿಧ ಹಂತಗಳಲ್ಲಿ ನನಗೆ ತಿಳಿಯಿತು. ಸದಾ  ವೈಟ್ ಅಂಡ್ ವೈಟ್ ನಲ್ಲಿ ಕಾಣುತ್ತಿದ್ದ ಲಕ್ಷ್ಮೀರೆಡ್ಡಿ ಮಾವನ ಮನವೂ ಅಷ್ಟೇ ಬೆಳ್ಳಗಿತ್ತು. ಜೀವನವನ್ನು ಹೇಗೆ ಸುಲಭವಾಗಿ ಮತ್ತು ಸರಳವಾಗಿ ಬದುಕಬೇಕು ಎಂಬುದನ್ನು ನೀವು ಅವರನ್ನು  ನೋಡಿದರೆ ಅರ್ಥವಾಗುವುದು . ಸುನ್ನಿಪೆಂಟದಿಂದ , ಶ್ರೀಶೈಲದೇವಸ್ಥಾನ ಒಂಬತ್ತು, ಹತ್ತು ಕಿಲೋಮೀತರ್ ದೂರದಲ್ಲಿತ್ತು. ಪ್ರಾಜೆಕ್ಟ್ ನಲ್ಲಿ  ಕೆಲಸ ಮಾಡುವವರಿಗೆ ನೇರವಾಗಿ ಗರ್ಭಗುಡಿಗೆ ಪ್ರವೇಶವಿತ್ತು. ನಮ್ಮಪ್ಪ ವಾರಕ್ಕೊಮ್ಮೆಯಾದರೂ ದೇವರ ದರ್ಶನಕ್ಕೆ ಹೋಗುತ್ತಿದ್ದರು.  ಆಗ ಇಡೀ ಪ್ರಾಜೆಕ್ಟ್   ತುಂಬಾ , ಟಿಪ್ಪರ್ ಗಳು , ಜೀಪುಗಳು ವಿಪರೀತವಾಗಿ ಓಡಾಡುತ್ತಿದ್ದವು. ನನ್ನ ತಂದೆ ಡ್ಯಾಮ್  ಡಿವಿಜನ್  ಒಂದರಲ್ಲಿ ಡಿವಿಜಿನಲ್ ಅಕೌಂಟ್  ಆಫೀಸರ್ ಕೆಲಸ ಮಾಡುತ್ತಿದ್ದರು.  ಹಾಗೆ ಡ್ಯಾಮ್ ಸೈಟ್ ಗೆ ಹೋಗುವಾಗಯೋ, ಹೀಗೆ ಬರುವಾಗಯೋ  ಯಾವುದೋ ಒಂದು ವೆಹಿಕಲ್ ನಲ್ಲಿ ದೇವಸ್ಥಾನಕ್ಕೆ ಹೋಗಿ ದರ್ಶನ  ಮಾಡಿಕೊಂಡು ಬರುತ್ತಿದ್ದ ರು. ನಮ್ಮ ಮನೆಗೆ ಬಂಧುಗಳು ಬಂದರೆ ಅವರಿಗೆ ದೇವಾಸ್ಥಾನದಲ್ಲಿ ಸ್ವಾಮಿ ಮತ್ತು ಅಮ್ಮನ ದರ್ಶನ, ಹಾಗೂ ಸುತ್ತಮುತ್ತಲಿರುವ ಶಿಖರೇಶ್ವರಂ, ಹಠಕೇಶ್ವರಂ, ಪಾಲಧಾರ-ಪಂಚದಾರ, ಸಾಕ್ಷಿಗಣಪತಿ, ಡ್ಯಾಮ್ ಸೈಟ್ ಸ್ಥಳಗಳನ್ನು ತೋರಿಸುವುದು ಒಂದು ಸಂಪ್ರದಾಯ. ನಮಗಷ್ಟೇಅಲ್ಲ, ಅಲ್ಲಿರುವ ಎಲ್ಲರಿಗೂ ಇದು ಅನ್ವಯಿಸುತ್ತದೆ. ಒಂದುದಿನ, ನನ್ನ ತಂದೆಯ ಕಡೆಯ ಸಂಬಂಧಿಯೊಬ್ಬರು, ನನ್ನಚಿಕ್ಕಪ್ಪನಾಗುವರು, ನಮ್ಮನ್ನು ಭೇಟಿಮಾಡಲು ಬಂದರು.  ಅವರನ್ನು ದರ್ಶನಕ್ಕೆ ಕರೆದುಕೊಂಡು ಹೋಗಲು ನನ್ನ ತಂದೆ ಕಚೇರಿಯಿಂದ ಮನೆಗೆ ಬಂದು ಅವರನ್ನು ರೆಡೀ ಮಾಡಿಕೊಂಡು ಹೋಗುವಾಗ  ಜೀಪಿನಲ್ಲಿ ಲಕ್ಷ್ಮೀರೆಡ್ಡಿ ಮಾಮ ಕೂಡ ಕಾಣಿಸಿದರು. ಎಲ್ಲೋ ಹೋಗುವ ಮಧ್ಯದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ನಾನು  ಹೊರಗೆ ಕಾಣಿಸಿಕೊಂಡರೆ ನನ್ನನ್ನು ಬರಲು ಕರೆದರು ಲಕ್ಷ್ಮೀರೆಡ್ಡಿ ಮಾಮ. ಹಾಗಾಗಿ ಅಪ್ಪ, ಚಿಕ್ಕಪ್ಪ,ಮಾಮ, ನಾನು, ಸೇರಿ ಎಂದಿನಂತೆ ಹಠಕೇಶ್ವರಂ, ಫಾಲಧರ-ಪಂಚಧರ, ಸಾಕ್ಷಿಗಣಪತಿಯನ್ನು ನೋಡಿಕೊಂಡ ದೇವಸ್ಥಾನಕ್ಕೆ ಹೋದೆವು.  ಶಿಖರವು ಬೇರೆ ದಿಕ್ಕಿನಲ್ಲಿರುವುದರಿಂದ, ಅದು ರಿಟರ್ನ್ ನಲ್ಲಿ ಕವರ್ ಮಾಡುತ್ತಾರೆ. ಅಲ್ಲಿನ ಡ್ರೈವರ್ ಗಳಿಗೆ   ಇವೆಲ್ಲ ಕಟ್ಟಿಟ್ಟ ಬುತ್ತಿ. ದೇವಸ್ಥಾನದ ಮುಖ್ಯದ್ವಾರದ ಬಳಿ ಜೀಪು ನಿಂತಿತು. ನಾವೆಲ್ಲ ಇಳಿದೆವು. ಅರ್ಧಗಂಟೆಯ ನಂತರ ಬರುತ್ತೇನೆ ಎಂದು ಡ್ರೈವರ್  ಹೊರಟುಹೋದ. ಎಲ್ಲರೂ ದೇವಸ್ಥಾನದ ಒಳಗೆ ಹೋಗಲು ತಯಾರಾಗುತ್ತಿದ್ದಾಗ ಲಕ್ಷ್ಮೀರೆಡ್ಡಿ ಮಾಮ  ‘ಮಾಸ್ಟರ್ ನೀನು ಇರು’ ಎಂದ. ನಾನು ನಿಂತುಬಿಟ್ಟೆ. ನನ್ನ ತಂದೆ ಮತ್ತು ಇತರರು ಮುಂದೆಕ್ಕೆ ಹೋದರು.  ನನ್ನ ಕೈಹಿಡಿದು ಸ್ವಲ್ಪದೂರಕ್ಕೆ ಕರೆದೊಯ್ದರು. ಅಲ್ಲಿ ತನ್ನ ಜೇಬಿನಿಂದ ಐದು ರೂಪಾಯಿಯ ನೋಟನ್ನು ತೆಗೆದು,ಒಬ್ಬ ವ್ಯಕ್ತಿ ಯಿಂದ   ಐದು ಮತ್ತು ಹತ್ತು ಪೈಸೆ ಚಿಲ್ಲೆರೆಯಾಗಿ ಬದಲಾಯಿಸಿದನು.ಅದರಲ್ಲಿ ಕೆಲವನ್ನು ನನಗೆ ಕೊಟ್ಟನು, ಕೆಲವನ್ನು ತಮ್ಮ  ಬಳಿಯೇ ಇಟ್ಟುಕೊಂಡು ಭಿಕ್ಷುಕರ ಕಡೇಗೆ ಹೋಗಿ,ನನ್ನನ್ನು ಒಂದು ಕಡೆ ಯಿಂದ ಹಾಕಲು ಹೇಳಿ, ಅವರು ಇನ್ನೊಂದು ಕಡೆ ಯಿಂದ ಹಾಕುತ್ತಾ ಬಂದರು. ನಾವು ಎಲ್ಲವನ್ನೂ ಖರ್ಚು ಮಾದುತ್ತಾ,ವಿತರಣೆಮಾಡಿ ಕೈಖಾಲಿಮಾಡಿ ಮುಖ್ಯದ್ವಾರಕ್ಕೆ ಹಿಂತಿರುಗಿದೆವು. ವ “ನೀವು ಎಂದಾದರೂ  ಈ ಇಡೀ ಪ್ರಾಕಾರವನ್ನು ನೋಡಿದ್ದೀಯಾ?” ಎಂದು ಕೇಳಿದರು. ನಾನು ಇಲ್ಲ ಅಂದೆ. “ಹೋಗೋಣ ಬಾ ” ಎಂದು  ಕೈ ಹಿಡಿದು ಇಡೀ ಪ್ರಾಕಾರವನ್ನು  ಎಡಭಾಗದಿಂದ ಸುತ್ತಲು ಪ್ರಾರಂಭಿಸಿದೆವು. ಅವರು  ದೇವಸ್ಥಾನದ ಒಳಗೆ ಯಾಕೆ ಹೋಗಲಿಲ್ಲ ಅಂತ ಮನದಲ್ಲಿ ಒಂದು ಅನುಮಾನ ಕಾಡಿಸಿತು.  ಎಲ್ಲೆಲ್ಲಿಂದಲೋ ಸಾವಿರಾರು ಕಿಲೋಮೀಟರ್ ಗಳು  ಪ್ರಯಾಣಿಸಿ ಸ್ವಾಮಿಯ ದರ್ಶನಕ್ಕೆ  ಬರುತ್ತಾರೇ , ಇವರು ಇಷ್ಟು ಹತ್ತಿರದಲ್ಲಿದ್ದು  ಯಾಕೆ ಹೋಗುವು ದಿಲ್ಲವೋ ಅನ್ನಿಸಿತು.  ಅದಕ್ಕೂ ಮುನ್ನ ಕೂಡಾ ಒಮ್ಮೆ ಮಾತುಗಳಲ್ಲಿ  ಅಪ್ಪ, ಅಮ್ಮನೊಂದಿಗೆ ಹೇಳಿರುವಂತೆ  ನೆನಪಿದೆ – ಅವರು  ದೇವಸ್ಥಾನದೊಳಗೆ ಬರುವುದಿಲ್ಲ ಎಂದು. ನಾನೇ ಮೊದಲು ಮೌನವನ್ನು ಮುರಿದೆ “ಮಾಮ, ನೀವು ಯಾಕೆ  ದೇವಸ್ಥಾನದೊಳಗೆ ಹೋಗಿಲ್ಲ. ದೇವರನ್ನು ನೋಡಲಿಲ್ಲ?” ಎಂದು ಕೇಳಿದೆ.  ಅದಕ್ಕೆ ಅವರು “ನಾನು ನಾಸ್ತಿಕ” ಎಂದು ಉತ್ತರಿಸಿದರು. ನಾಸ್ತಿಕ ಎಂದರೆ ಏನು ಎಂದು ನನಗೆ ತಿಳಿದಿದೆ ಎಂಬ ನಂಬುಗೆಯಿಂದ.  “ಅಂದರೆ ನಾಸ್ತಿಕರು ದೇವರನ್ನು ನಂಬುವುದಿಲ್ಲವೇ?’’ ನಾನುಕೇಳಿದೆ.  “ಹೌದು” ಎಂದರು. “ಏಕೆ” “ನಿಮ್ಮ ದೃಷ್ಟಿಯಲ್ಲಿ ದೇವರು ಒಳ್ಳೆಯವನಾ? ಕೆಟ್ಟವನಾ?” ಅವರು ಕೇಳಿದರು. ಸಾಕ್ಷಾತ್ ದೇವರ ಬಗ್ಗೆ ಇಂಥದೊಂದು  ಪ್ರಶ್ನೆ ಕೇಳಿದರೆ ದೇವರನ್ನು ಹೀಗೆ  ಕ್ಯಾಟಗರೈಜ್  ಮಾಡಿದರೆ ಇನ್ನೇನಾದರೂ ಇದೆಯಾ? ಯಾವುದೇ ಕಾರಣಕ್ಕಾಗಿ ಅದು ಉತ್ತಮವೆಂದು ನಾನು ಮೌನವಹಿಸಿದ್ದೆ. ಅವರು ಮಾತು  ಮುಂದು ವರಿಸಿದರು- “ಸಿಂಪುಲ್ ಮಾಸ್ಟರ್, ದೇವರು ಒಳ್ಳೆಯವನಾಗಿದ್ದರೆ, ನಾವುಒಳ್ಳೆಯದನ್ನುಮಾಡಿದರೆ, ಅವನು ಅದನ್ನು ಗುರುತಿಸುತ್ತಾನೆ, ನಾವು ತಿಳಿಯದೆ ತಪ್ಪುಮಾಡಿದರೆ, ಅವನು ನಮ್ಮನ್ನು ಕ್ಷಮಿಸುತ್ತಾನೆ, ಮತ್ತು ನಾವು ತಿಳಿದೂ ತಪ್ಪುಮಾಡಿದರೆ, ಅವನು ನಮ್ಮನ್ನು ಶಿಕ್ಷಿಸುತ್ತಾನೆ ಎಂದು ನಂಬಿದರೆ, ಒಳ್ಳೆಯದನ್ನು ಮಾಡುತ್ತಲೇ ಇರಿ, ಮತ್ತು ತಪ್ಪುಗಳನ್ನು ಮಾಡಬೇಡಿ. ಒಂದು ಸಮಯ ದೇವರು ಕೆಟ್ಟವನಾಗಿದ್ದರೆ,” ಅವರು ಸ್ವಲ್ಪ ಸಮಯದ ನಂತರ ಹೇಳಿದರು, “ಕೆಟ್ಟ ಜನರಿಂದ ದೂರವಿರುವುದು ಉತ್ತಮ. ಅಲ್ಲವೇ” ಅದಕ್ಕಾಗಿಯೇ ಅವನೊಂದಿಗೆ ನಮಗೆ ಯಾವುದೇ ಕೆಲಸ ವಿಲ್ಲ. ಅವನಿಗೆ ನಮ್ಮೊಂದಿಗೆ ಯಾವುದೇ ಕೆಲಸ ವಿಲ್ಲ, ಎಲ್ಲರೂ ತಮ್ಮ ತಮ್ಮ ಕೆಲಸವನ್ನು ಮಾಡುತ್ತಲೇ ಹೋಗಬೇಕು” ಎಂದ, ನಾನು ಬಹಳ ಸಮಯ ಯೋಚಿಸಿದೆ. ಈಬಾರಿ ಅವರು ಮೌನವನ್ನು ಮುರಿದು, “ಪೂರ್ವ ಕಾಲದಲ್ಲಿ ಅವರು ಇಷ್ಟಿಷ್ಟು ದೊಡ್ಡ ದೇವಾಲಯಗಳನ್ನು , ಗೋಪುರಗಳನ್ನು , ಶಿಲ್ಪಗಳನ್ನು ಏಕೆ ನಿರ್ಮಿಸಿದರೋ ನಿಮಗೆ ತಿಳಿದಿದೆಯೇ?”  ಎಂದು ಕೇಳಿದ. ನಾನು ತಲೆಯನ್ನು  ಅಡ್ಡವಾಗಿ ತಿರುವುದರೊಳಗೆ- “ಆ ಸಮಯದಲ್ಲಿ  ಈ ದೇವಾಲಯಗಳು ಮತ್ತು ದೇವಸ್ಥಾನಗಳು. ಸಂಸ್ಕೃತಿಕ  ಕೇಂದ್ರಗಳು. ಹತ್ತು ಜನ ಸೇರಿ ಏನಾದರೂ ಮಾಡಬೇಕಾದರೆ,  ಏನಾದರೂ ಚರ್ಚಿಸಬೇಕಾದರೆ  ಇರುವ ವೇದಿಕೆಗಳಿವು. ಅದೂ ಅಲ್ಲದೆ ಆ ಕಾಲದಲ್ಲಿ ಬೇರೆ ಕೆಲಸಗಳೂ ಯಾವು ಇರಲಿಲ್ಲ ಅಲ್ಲವೇ. ಅದಕ್ಕೆ ಇಂತಹ  ದೊಡ್ಡ ಕಟ್ಟಡಗಳನ್ನು ಕಟ್ಟಿಸಿ  ಅದಕ್ಕೆ ತಕ್ಕಷ್ಟು ಕೂಲೀ   ಹಣ ಕೊಡುವವರೇನೋ ? ” ಎಂದು ಉತ್ತರಿಸಿದರು. “ಮೇಲೆ ನೋಡು ಎಷ್ಟು ಬೆಳೆದಿಂಗಳು ಇದೀಯೋ ” ಎಂದು ಮೇಲೆ ತೋರಿಸಿದರು. ಹೌದು,ಬಹುಶಾ ಹುಣ್ಣಿಮೆಯ ದಿನ ವಾಗಿರಬಹುದು,  ಅಷ್ಟೊತ್ತಿಗೆ ಬೆಳಕು ಮರೆಯಾಗುತ್ತಾ ಕತ್ತಲಾಗುತ್ತಿತ್ತು. ಮೇಲೆ ಹಳದಿ ಹೂವಿನಂತೆ ಬೆಳದಿಂಗಳು. ಹಾಗೆ  ಆಕಾಶದತ್ತಾ ನೋಡುತ್ತಾ  ಎಷ್ಟೋ ತನ್ಮಯದಿಂದ ,ಇಂತಹ  ಬೆಳದಿಂಗಳ ರಾತ್ರಿಗಳಲ್ಲಿ ಕೆಲವು ಯಾವುದೋ ಝಾಮುದಲ್ಲಿ  ಶಿಲೆಗಳು ಮೃದುವಾಗುತ್ತವೆಯಂತೆ.  ಆಗ ಮಾತ್ರ ಅತ್ಯಂತ ಸಂಕೀರ್ಣವಾದ ಶಿಲ್ಪಗಳನ್ನು ಕೆತ್ತಲಾಗುತ್ತದೆಯಂತೆ. ದೇವತಾ  ವಿಗ್ರಹಗಳ ಮುಖಗಳು, ಆಭರಣಗಳು, ಇತ್ಯಾದಿಗಳನ್ನು ಆ ಸಮಯದಲ್ಲಿ ಮಾಡತ್ತಾರಂತೆ.  ಆ ಸಮಯಕ್ಕಾಗಿ  ಪೂರ್ತಿ ತಿಂಗಳು ಕಾಯುತ್ತಾರಂತೆ” ಎಂದು ಹೇಳಿದರು ಲಕ್ಷ್ಮೀರೆಡ್ಡಿ ಮಾಮ – ತನಗೆ ಯಾರೋ ಹೇಳಿದ ವಿಷಯ  ನೆನೆಪಿಸಿ ಕೊಳ್ಳುತ್ತಿದ್ದಂತೆಯೇ , ನನಗೆ ಹೇಳುತ್ತಿದ್ದಂತೆಯೇ  ಹೇಳಿದರು. ನನಗೆ ಅದು ತುಂಬಾ ಆಸಕ್ತಿದಾಯಕವಾಗಿ ಅನಿಸಿತು.  ಅದೇ ಸಂಭ್ರಮದಲ್ಲಿ ‘‘ಅಷ್ಟು ಎತ್ತರವಿರುವ ರಾಜಗೋಪುರಗಳು ಹೇಗೆ ಕಟ್ಟಿರುತ್ತಾರೆ? ಒಂದೇ ಶಿಲೆಯಲ್ಲಿ ಕೆತ್ತಿರ ಬಹುದೇ? ಅಥವಾ ಬಿಡಿಬಿಡಿ ಯಾಗಿ ಕೆಟ್ಟಿರುವವುಗಳನ್ನು ಒಂದರ ಮೇಲೆ ಒಂದರಂತೆ  ಜೋಡಿಸಲಾಗಿದೆಯೇ? ” ಎಂಬ ಪ್ರಶ್ನೆಯನ್ನು ತನ್ನಷ್ಟಕ್ಕೆ   ಕೇಳಿಕೊಂಡು ಮತ್ತು ಉತ್ತರವನ್ನೂ  ತಾನೇ ಹೇಳಲು ಆರಂಭಿಸಿದರು. “ಅರ್ಧ ಕೆತ್ತಿದ ಶಿಲೆಗಳನ್ನು ಬಲವಾಗಿ ಹೆಣಿದ ಹಗ್ಗಗಳಿಂದ ಕಟ್ಟಿ ಆನೆಗಲಿಂದ ಎಳೆದರು. ಮತ್ತು ಅವರು ಅಷ್ಟು ಎತ್ತರಕ್ಕೆ ಹೇಗೆ ಹತ್ತಿದರು ಎಂದು ನಿಮಗೆ ತಿಳಿದಿದೆಯೇ? ಅದನ್ನು ಸ್ಕಾ ಫೋಲ್ಡಿಂಗ್ ಎಂದು ಕರೆಯಲಾಗುತ್ತದೆ. ಅವರು ಅದರ ಎದುರಿನಲ್ಲಿ ತಾತ್ಕಾಲಿಕ ಕಟ್ಟಡವನ್ನು  ಇಳಿಜಾರಿನಲ್ಲಿ ನಿರ್ಮಿಸಿ,  ಭಾರವನ್ನು ಹೊತ್ತಿರುವ ಆನೆಗಳನ್ನು ಆ ಮಾರ್ಗದಲ್ಲಿ ಮುನ್ನಡೆಸಿ ಅವರಿಗೆ ಬೇಕಾದ ಎತ್ತರಕ್ಕೆ ಸೇರಿದ ತಕ್ಷಣ ಅವುಗಳನ್ನು ಅಲ್ಲಿ ಇಳಿಸುತ್ತಿದ್ದರು”, ಅವುಗಳನ್ನುಅಲ್ಲಿಇಳಿಸುತ್ತಿದ್ದರು.” ನಾನು ಆ ಸನ್ನಿವೇಶವನ್ನು ಊಹಿಸಿಕೊಳ್ಳಲು ಸ್ವಲ್ಪ ಗ್ಯಾಪ್ ಕೊಟ್ಟೆ. “ಈ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಬಯಸಿದರೆ, ಒಂದು ಮಧ್ಯಾಹ್ನ ಬಂದು ಗಮನಿಸಿ ನೋಡು. ಒಂದು ಭಾವವನ್ನು ತಿಳಿಸಲು ಶಿಲ್ಪಿಗಳು  ಎಷ್ಟು ಪ್ರಯತ್ನಿಸಿದರೋ ಅರ್ಥವಾಗುತ್ತದೆ. ಅವರ ಇಡೀ ಜೀವನವನ್ನು ಇವುಗಳಿಗೆ ಮೀಸಲಾಗಿಟ್ಟಿರಬೇಕು ಮತ್ತು ಅವುಗಳನ್ನು ಜೀವಂತಗೊಳಿಸಲು ಶ್ರಮಿಸಿರಬೇಕು. ಇವು ಐತಿಹಾಸಿಕ ಕಾಲ ಬಿಟ್ಟು ಹೋಗಿರುವ ಸಾಮಾಜಿಕ-ಸಾಂಸ್ಕೃತಿಕ ಕುರುಹುಗಳಾಗಿವೆ, ”ಎಂದುಅವರು ಹೇಳಿದರು. ಪ್ರಾಕಾರ ಸುತ್ತಲೂ ಕೆತ್ತಿರುವ ಅನೇಕ ಶಿವಪುರಾಣಗಳ ಕಥೆಗಳನ್ನು, ಶಿವಭಕ್ತರ ಇತಿಹಾಸಗಳನ್ನು ಅವರು ವಿವರಿಸುವಾಗ, ಅವರಿಗೆ ಇಷ್ಟು ವಿಷಯಗಳು ಹೇಗೆ ತಿಳಿದಿವೆ ಎಂದು ಆಶ್ಚರ್ಯವಾಯಿತು. ಅಕ್ಕಮಹಾದೇವಿಕಥೆ, ದಕ್ಷಯಜ್ಞ, ತ್ರಿಪುರಾಂತಕ

ತೆಲುಗು ಕಥೆ “ನಾಸ್ತಿಕ ದೇವರು”ಕನ್ನಡಾನುವಾದ ರಂಗನಾಥ ರಾಮಚಂದ್ರರಾವು Read Post »

ಅನುವಾದ

ಶೀಲಾ ಸುಭದ್ರಾದೇವಿಯವರ ತೆಲುಗು ಕವಿತೆ “ಸ್ನೇಹವೆಂಬ ಬಣ್ಣದ ವಿಷ” ಕನ್ನಡಾನುವಾದ ಕೋಡೀಹಳ್ಳಿ ಮುರಳೀ ಮೋಹನ್

ಅನುವಾದ ಸಂಗಾತಿ “ಸ್ನೇಹವೆಂಬ ಬಣ್ಣದ ವಿಷ” ತೆಲುಗು ಮೂಲ: ಶೀಲಾ ಸುಭದ್ರಾದೇವಿಕನ್ನಡಕ್ಕೆ: ಕೋಡೀಹಳ್ಳಿ  ಮುರಳೀ ಮೋಹನ್ ಇಪ್ಪತ್ತು ವರ್ಷಗಳ ಹಿಂದೆ ಒಂದು ಸ್ನೇಹದ ಕೂಟದಲ್ಲಿಸ್ನೇಹವೆಂಬ ಬಣ್ಣದ ವಿಷಸ್ನೇಹದ ಲೇಪ ಹಚ್ಚಿದ ಒಮ್ಮೆಗಿನ ಮಾತುಕತೆ –ಅದು ಮಾತುಕತೆ ಅಲ್ಲಮರೆಯಾಗದ ಗಾಯಕ್ಕೆ ಸವರಿದ ಉಪ್ಪುಕಣ್ಣುಗಳಲ್ಲಿ ಸುಳಿದಾಡಿದ ಸುಡಿಗುಂಡಿಗಳು ಹತ್ತು ವರ್ಷಗಳ ಹಿಂದೆಒಂದು ಮದುವೆ ಮಂಟಪದಲ್ಲಿಮದುವೆಯ ಸಂಭ್ರಮ ತುಟಿಗಳ ನಗುವಾದಾಗಸ್ನೇಹದ ನಗುವಿನೊಂದಿಗೆ ಒಮ್ಮೆಗಿನ ಮಾತುಕತೆಅದು ಮಾತುಕತೆ ಅಲ್ಲವಾಸಿಯಾದ ಪುಣ್ಣಿನ ಮೇಲೆ  ಕಾರದ ಮಳೆ ಐದು ವರ್ಷಗಳ ಹಿಂದೆ ಬಜಾರಿನಲ್ಲಿಹರಟೆಗಳ ಗಾಳಿಪಟಗಳನ್ನು ಹಾರಿಸುತ್ತಿದ್ದಾಗಗಾಳಿಯ ಹೊಡೆತದಂತೆ ಒಮ್ಮೆಗಿನ ಮಾತುಕತೆಅದು ಮಾತುಕತೆ ಅಲ್ಲಪಟಕ್ಕನೆ ಮಂಜಾ ದಾರಿಯನ್ನು ಕತ್ತರಿಸಿಕುತ್ತಿಗೆಗೆ ಸುತ್ತಿದ ವಿಷದ ನಗು ನಿನ್ನೆ ಮೊನ್ನೆಯ ರಾತ್ರಿಕನಸಿನಲ್ಲಿ ಕಣ್ಣು ಮುಚ್ಚಲೊಡನೆಕರೆ ಮಾಡಿ ಬಂದುಕುಣಿಯುತ್ತಿದ್ದ ಕನಸುಗಳನ್ನುನೆಟ್ಟಗೆ ಸುಟ್ಟುಹಾಕಿತುಅವಳು ಯಾರೇ ಆಗಿರಲಿ;ಸ್ನೇಹದ ಲೇಪ ಹಚ್ಚಿದ ಕಟುವಾದ ಮುಳ್ಳಿನಿಂದಗುಣವಾಗುತ್ತಿದ್ದ ಹೃದಯಗಾಯವನ್ನು ಕೆದಕಿದಾಗಆ ಕಣ್ಣುಗಳಲ್ಲಿ ಎಷ್ಟು ಮಿನುಗು!ಅವಳೋ  ಅಥವಾ ಅವನೋ  ಯಾರಾದರೇನು?ನಮ್ಮ ಸುತ್ತಲೂ ಅಂಥವರು ಎಷ್ಟು ಜನವೋ! ತೆಲುಗು ಮೂಲ: ಶೀಲಾ ಸುಭದ್ರಾದೇವಿಕನ್ನಡಕ್ಕೆ: ಕೋಡೀಹಳ್ಳಿ  ಮುರಳೀ ಮೋಹನ್

ಶೀಲಾ ಸುಭದ್ರಾದೇವಿಯವರ ತೆಲುಗು ಕವಿತೆ “ಸ್ನೇಹವೆಂಬ ಬಣ್ಣದ ವಿಷ” ಕನ್ನಡಾನುವಾದ ಕೋಡೀಹಳ್ಳಿ ಮುರಳೀ ಮೋಹನ್ Read Post »

You cannot copy content of this page

Scroll to Top