ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ಅನುವಾದ ಸಂಗಾತಿ

ಸರಳವೇ ಸುಂದರ ಇಂಗ್ಲೀಷ್ ಮೂಲ:ಮ್ಯಾಥಿವ್ ಪಿ ಥಾಮಸ್ ಕನ್ನಡಕ್ಕೆ:ಚೈತ್ರಾ ಶಿವಯೋಗಿಮಠ ಪುಟ್ಟ ವೃಕ್ಷಮಾತೆಯೊಬ್ಬಳು ಕೈಚಾಚಿ ಕರೆದಳು,ತನ್ನ ಪ್ರೀತಿಯ ತೆಕ್ಕೆಯಲ್ಲಿ ನನ್ನ ಎತ್ತಿ ಮೇಲಕ್ಕೆಸೆದು ಆಡಿಸಿದಳುಅಲ್ಲಿ ಮೇಲೆ, ಸಣ್ಣ ಬಿಳಿ ಹತ್ತಿಯಂತಹ ಮೋಡಗಳು ತೇಲುವುದ ಕಂಡೆಬಾಳಿನ ಅವ್ಯಕ್ತ ಚಿತ್ರಗಳನು ತಿಳಿ ನೀಲಿ ಬಾನ ಪಟದ ಮೇಲೆ ಬಿಡಿಸಿದಂತೆ. ಅವಳು ತನ್ನ ನೆಮ್ಮದಿಯ ನೆಳಲಿನ ಮಡಿಲಲಿ ನನ್ನ ಮಲಗಿಸಿದಳು.ದೂರದೂರುಗಳ, ಹಚ್ಚ ಹಸಿರು ಬಯಲುಗಳ ಕನಸ ಕಂಡೆಅಲ್ಲಿ, ಉಕ್ಕಿ ಹರಿಯುವ ನದಿಗಳು ಪ್ರತಿ ಕಲ್ಲುಗಳನ್ನು ನುಣುಪಾಗಿಸುವುವುಅಲ್ಲಿ, ನವಿಲು ತನ್ನ ನಲ್ಲೆಯ ಹೃದಯದ ತಾಳಕೆ ಹೆಜ್ಜೆ ಹಾಕುವುದುಅಲ್ಲಿ, ಹುಲ್ಲೆ-ಹುಲಿಗಳು ಸ್ವಚ್ಛಂದವಾಗಿ ಒಂದೇ ಕೊಳದಲಿ ನೀರು ಕುಡಿಯುವವುಅಲ್ಲಿ, ಮಕ್ಕಳು ಗಾಳಿಯಲ್ಲಿ ಅಚ್ಚ ಬಿಳಿ ಹೊಗೆಯುಂಗುರಗಳನು ಹಿಡಿಯಲು ಯಾವ ಅಳುಕಿಲ್ಲದೆ ಓಡುವರು.ಅಲ್ಲಿ, ಮುಂಬೆಳಗಲಿ ಮುಗಿಲು ಬೆಟ್ಟಗಳನು ತಬ್ಬುವುದು.ದೂರದೂರುಗಳ, ಹಚ್ಚ ಹಸಿರು ಬಯಲುಗಳ ಕನಸ ಕಂಡೆ ವರುಷಗಳ ನಂತರ….. ವಿಮಾನದಲ್ಲಿ ಕುಳಿತು ಮುಗಿಲ ಮೇಲೆ ಹಾರಿದೆ.ಎತ್ತರದ ಕಾರ್ಖಾನೆ-ಕಟ್ಟಡಗಳು ಉಗುಳುವ ಹೊಗೆ-ಧೂಳುಗಳಿಂದ ಮೋಡಗಳು ಕಡುಗಪ್ಪಾಗಿ ಬಿಮ್ಮನಿಸಿದ್ದವುಹಾಲು-ಜೇನುಗಳ ಸಮೃದ್ಧ ನಾಡನ್ನು ಕಟ್ಟಲು,ಕಲ್ಲಿನ ಗಣಿಗಳು, ಬೆಳ್ಳಿ-ಬಂಗಾರದ ಖನಿಗಳ ಕನಸ ಕಂಡೆಆಯುಧದ ಬಲಿಪೀಠಗಳು, ಹುತಾತ್ಮರ ಪ್ರತಿಮೆಗಳ ಕನಸ ಕಂಡೆಮರಮುಟ್ಟು, ಉಕ್ಕು, ಗಾರೆ, ಇಟ್ಟಿಗೆಗಳ ಕನಸ ಕಂಡೆಇಷ್ಟೆಲ್ಲ ಕನಸುಗಳುವಿಮಾನ ಕೆಳಗಿಳಿದು, ವಿವಿಧ ಆಕಾರದ ಮುಖಗವಸುಗಳ ತೊಟ್ಟಮನುಷ್ಯರು ಅಂತರ ಕಾಯ್ದುಕೊಂಡು ನನ್ನನ್ನು ಸ್ವಾಗತಿಸುವವರೆಗೆ! ಆ ದೇವರ ಸೃಷ್ಟಿಯ ಒಂದು ಸಣ್ಣ ವೈರಾಣುವಿನಿಂದಾಗಿಮತ್ತೆ ಸ್ವಚ್ಛ ಆಕಾಶ, ಸ್ವಚ್ಛ ಭೂಮಿಯ ಕನಸ ಕಂಡೆ.ಇನ್ನಿಲ್ಲದ ಮರದ ಅಪ್ಪುಗೆ ಬಯಸಿ ಹಂಬಲಸಿದೆ! “ಸರಳವೇ ಸುಂದರ”‌ವೆಂದು ಮಮ್ಮಲ ಮರುಗಿದೆ! ********************************

ಅನುವಾದ ಸಂಗಾತಿ Read Post »

ಅನುವಾದ

ಅನುವಾದ ಸಂಗಾತಿ

ಶೂರ್ಪನಖಾಯಣ ಮಲಯಾಳಂ ಮೂಲ:ರವೀಂದ್ರನ್ ಪಾಡಿ ಕನ್ನಡಕ್ಕೆ:ಚೇತನಾ ಕುಂಬ್ಳೆ ರಾತ್ರಿ ಕಂಡ ಕನಸಿನಲ್ಲಿನನ್ನ ಮುಂದಿದ್ದಳು ಶೂರ್ಪನಖಿಎಲ್ಲಿಯೂ ಸೀತೆಯನ್ನು ಕಾಣಲಿಲ್ಲಬಳಿಯಲ್ಲಿ ರಾಮನೂ ಇರಲಿಲ್ಲ ಹಲವು ದಿನಗಳಿಂದ ಆಲೋಚನೆಗಳಲ್ಲಿರಾಮ ರಾವಣ ಯುದ್ಧವೇ ತುಂಬಿತ್ತುಯಾರ ಪಕ್ಷ ಸೇರಲಿ?ಮಾನ್ಯರಲ್ಲ ಇಬ್ಬರೂ ಸೀತೆಯೊಂದಿಗೆ ನಿಂತುರಾಮನನ್ನು ದೂಷಿಸಬಹುದೇ?ವಾಲಿಯನ್ನು ವಧಿಸದೆರಾಮನ ವಿರುದ್ಧ ನಿಲ್ಲಬಹುದು ತಾಟಕಿ, ಶಂಬೂಕರುನಮ್ಮ ಪಕ್ಷ ಸೇರುವರುರಾವಣನನುಜ ವಿಭೀಷಣನನ್ನು ಅಂಕೆಯಲ್ಲಿರಿಸಬಹುದು ಹನುಮಂತನನ್ನು ಸೋಲಿಸಲುವಾಲಿಯೊಬ್ಬನೇ ಸಾಕಲ್ಲವೇಪ್ರಜೆಗಳು ಹೇಗಾದರೂ ಇರಲಿಅಮ್ಮನಿಗೆ ಕೈಯೆತ್ತುವರು ಅವರ ಮಾತನಾಲಿಸಿನಾಡಿನಲ್ಲಿ ಬದುಕಲು ಸಾಧ್ಯವೇ?ಗಾಳಿಸುದ್ದಿಯನ್ನೇ ಹಬ್ಬಿಸುವರೆಲ್ಲರೂಬೇರೇನೂ ಕೆಲಸವಿಲ್ಲವಲ್ಲ ವಾಲ್ಮೀಕಿ ಬರೆಯಲಿಅವರು ಕವಿಯಲ್ಲವೇಕವಿತೆಗಳೆಲ್ಲವೂ ಕಥೆಗಳಲ್ಲಕಥೆಗಳೆಲ್ಲವೂ ನಿಜವಲ್ಲ ರಾಮನಿಗೆ ಸೀತೆ ಏನಾಗಬೇಕೆಂದುಚಿಂತಿಸುತ್ತಲೇಜನರು ಸಮಯ ವ್ಯಯಿಸುತ್ತಾರೆಕಾಡುಗಳಲ್ಲಿ ಮತ್ತೆ ಹೂಗಳರಳುತ್ತವೆ ಬಂದುಬಿಡು ಪ್ರಾಣಸಖಿಶೂರ್ಪನಖೀ ನನ್ನೊಲವೇಲಕ್ಷ್ಮಣ ಹೋಗಲಿ ಬಿಡುನಾನಿದ್ದೇನೆ ನಿನಗೆ ****************************

ಅನುವಾದ ಸಂಗಾತಿ Read Post »

ಅನುವಾದ

ಅನುವಾದ ಸಂಗಾತಿ

ಕವಿತೆ ಧ್ಯಾನ ಕನ್ನಡಮೂಲ: ಸುನೀತಾ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಧ್ಯಾನ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು ಕೂಸುಗಳ ಕೇಕೆಜತೆಯಾದ ಕ್ಷಣ ಕ್ಷಣವೂಕಣ ಕಣಕೂ ಹಿತಮತ್ತೊಮ್ಮೆ ಬದುಕಿಬಿಡೆಂದುಚಾಚುವ ಕೈಕಣ್ಣ ಸುತ್ತಿದ ಬಳೆಯಾಕಾರದಕಪ್ಪನೂ ನೇವರಿಸುವಕೂದಲ ಬಣ್ಣದ ಲೇಪನಕೆಹೊಸ ಹೊಳಪುಭೂತ ಭವಿಷ್ಯದಹಂಗ ತೊರೆವ ವರ್ತಮಾನತೀರಾ ಖಾಸಗಿ ಬದುಕೇಆದರೂ ಸದ್ದಿಲ್ಲದೆಮುಟ್ಟುಗೋಲಾಗುವ ಮುಟ್ಟಿಗೂಹುಟ್ಟುತ್ತಿದೆ ಹೊಸಹುರುಪುದಿನ,ದಿನಾಂಕಗಳಗಡಿದಾಟಿ ಬರುವಲವಲವಿಕೆಯ ಮತ್ತು. A Musing.. ‌‌Far and wide surrounded by gloom,‌But still have some kind of musing.‌A poem is invading even inside the home,‌Day to day covering like a moonlit sky. ‌‌Like babies giggling in‌Their rainbow dreams‌Drowning in pleasure bit by bit.‌In every intimate moment. ‌‌A held out hand is making me alive again.‌Even the coloured hair caressing‌The dark circles of eyes‌Is gleaming with new light. ‌‌As the seasons turnSo the periods change,‌The present is though‌Too personal of a life,Is careless of future and past, Silently forfeited monthly cycleIs giving birth to a new spirit.A vigorous spree is crossingAll the borders ofTime and space… *********************

ಅನುವಾದ ಸಂಗಾತಿ Read Post »

ಅನುವಾದ

ನಿನ್ನನಾ ಹೋಲಿಸಲೆ ಮಧುವಸಂತ ಬೇಸಿಗೆಗೆ?

ಅನುವಾದಿತ ಕವಿತೆ ಮೂಲ: ವಿಲಿಯಂ ಷೇಕ್ಸ್ ಪಿಯರ್ ಕನ್ನಡಕ್ಕೆ:ವಿ.ಗಣೇಶ್ ನಿನ್ನನಾ ಹೋಲಿಸಲೆ ಮಧು ವಸಂತ ಬೇಸಿಗೆಗೆ? ಅದಕಿಂತ ಮಿಗಿಲಾದ ಸ್ಥಿತಪ್ರಜ್ಞ ಸುಂದರನು ನೀನು ಬೇಸಿಗೆಯ ಬಿರುಗಾಳಿಗೆ ಮೊಗ್ಗು ಮುದುಡಬಹುದು ಮಳೆಗಾಲದ ಆರ್ಭಟಕೆ ವಸಂತ ನಾಶಿಸಬಹುದು ಕೆಲವೊಮ್ಮೆ ಸೂರ್ಯನೂ ಉರಿಗಣ್ಣ ಬಿಡಬಹುದು ಬಂಗಾರದ ಕಾಂತಿಯು ಮಸುಕು ಮಸುಕಾಗಬಹುದು  ಆ ಪ್ರಕೃತಿಯ ಕೋಪಕ್ಕೆ ಕಾಲಚಕ್ರದ ಏರಿಳಿತಗಳಿಗೆ ಚೆಲುವರಲಿ ಚೆಲುವನೂ ಸಹ ಕಳೆಗುಂದಬಹುದು. ಆದರೆ ಚೆಲುವರಲಿ ಚೆಲುವಾದ ಈ ನಿನ್ನ ಚೆಲುವು ಎಂದೆಂದೂ ಮಾಸದೆ ಚಿರವಾಗಿ ಉಳಿಯುವುದು  ನಾಶವಾಗದೆ ಅದು ಚಿಗುರೊಡೆದು ಬೆಳೆಯುವುದು ಬೆಳೆಯುತ್ತ ಬೆಳೆಯುತ್ತ ಹೆಮ್ಮರವಾಗಿ ಹರಡುವುದು  ನಯನಗಳ ನೋಟ ಕಿವಿಗಳ ಶ್ರವಣ ಉಳಿದಿರುವವರೆಗೆ ಉಳಿವ ಈ ಕಾವ್ಯವು ನೀಡುವುದು ನಿನಗೆ ಅಮರತ್ವವನು

ನಿನ್ನನಾ ಹೋಲಿಸಲೆ ಮಧುವಸಂತ ಬೇಸಿಗೆಗೆ? Read Post »

ಅನುವಾದ

ಸಂವಿಧಾನ ಶಿಲ್ಪಿಗೆ

ಅನುವಾದ ಕನ್ನಡ ಮೂಲ: ಪೂರ್ಣಿಮಾ ಸುರೇಶ್ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಗಂಡು ಹುಡುಗ ಆಗಬಾರದಿತ್ತೇ!ಆ ನಿಡುಸುಯ್ಲುಹರಿತ ಚೂರಿಯಾಗಿಮರ್ಮವನ್ನು ಇರಿಯುತ್ತಿತ್ತು.ಪಾದದ ಕೆಳಗಿನ ಮಣ್ಣಜಾರದಂತೆ ಒತ್ತಿಟ್ಟುಕೊಳ್ಳಬೇಕು.ನೆಟ್ಟ ನೋಟದಿಂದ ನೋಡುತ್ತಿದ್ದೆ. ನೀವು ನೆನಪಾಗುವಿರಿ. ನಿನ್ನ ಮಗಳು ದೊಡ್ಡವಳಾದಳೇ!ಒಳಕೋಣೆಗೆ ಸರಿಸಿಡು ಒಳಗೇ ಇರಲಿನೋವು ಎದೆಯಾಳಕೆ ಬಸಿದುಒಡಲನುರಿಸಿ ಸಾಗುತ್ತಿದೆಲಾವಾರಸ ಬಸಿದಿಟ್ಟು ಕೊಳ್ಳಬೇಕುಹರಿದ ದೃಷ್ಟಿಯಿಂದ ಕಾಣುತ್ತಿದ್ದೆ ನೀವು ನೆನಪಾಗುತ್ತೀರಿ ನೀನೀಗ ಅವನ ಹೆಂಡತಿ ನೆನಪಿರಲಿ!ಅವನ ಹೆಜ್ಜೆಯ ಹಣೆಗೊತ್ತಿ ನಡೆಸರ್ರನೆ ಜಾರಿ ಬಿದ್ದಿದ್ದೆನನ್ನೊಳಗಿನಾಕೆಗೆ ಆತ್ಮಶಕ್ತಿ ತುಂಬಬೇಕುಇರಿವ ಕಣ್ಣಿಂದ ಕಂಡೆ ನೀವು ನೆನಪಾಗುವಿರಿ. ಅವಮಾನದ ಗಾಯತಿರಸ್ಕೃತರಾಗುವ ನೋವುನೀವು ಉಂಡು,ಸೆಟೆದು ನಿಂತವರಲ್ಲವೇ?ಶತಮಾನದ ಸಂಕೋಲೆತುಕ್ಕು ಹಿಡಿದು ವಿಷವಾಗಿದೆಅಪಮಾನದ ಬೂದಿಯಿಂದಹೊಸ ಹುಟ್ಟನ್ನುಕಟ್ಟಿ ನಡೆದಾಡಬೇಕು. ಇದೋ,ಹೆಜ್ಜೆ ಎತ್ತಿಟ್ಟಿದ್ದೇವೆ.ನೀವು ನಮ್ಮೊಳಗಿದ್ದೀರಿ. Wouldn’t you be a boy?a sharp sickle ofher painful sighwas piercings hardmy inner core.Soil under my footto be held pressednot to be slipped off.I were looking at her. ….I remember thee. Is your daughter,matured?push her inside the room.The burning pain,from my heart, spreadedthroughout the body.Yes! The lava also tobe preserved.I were looking through. …I remember thee. Forget not! Now you’re a wife!bend your head at his feet.follow him unto the last.at once I had slipped off.but she was tobe confident.who was within me.I were looking sharp …I remember thee. The wound of insultpain of rejectionyou injested.still stood strong.centuries restraints of societyrusted and poisonous Must build a new lifeout of this exploitation ash.and walk with firm steps Now! We are on our wayYou are within us. *******************************

ಸಂವಿಧಾನ ಶಿಲ್ಪಿಗೆ Read Post »

ಅನುವಾದ

ಅನುವಾದ ಸಂಗಾತಿ

ಕವಿತೆ ಕನ್ನಡ ಮೂಲ: ಪೂರ್ಣಿಮಾ ಸುರೇಶ್ ಇಂಗ್ಲೀಷಿಗೆ: ನಾಗರೇಖಾ ಗಾಂವಕರ್ ಸಂವಿಧಾನ ಶಿಲ್ಪಿಗೆ ಗಂಡು ಹುಡುಗ ಆಗಬಾರದಿತ್ತೇ!ಆ ನಿಡುಸುಯ್ಲುಹರಿತ ಚೂರಿಯಾಗಿಮರ್ಮವನ್ನು ಇರಿಯುತ್ತಿತ್ತು.ಪಾದದ ಕೆಳಗಿನ ಮಣ್ಣಜಾರದಂತೆ ಒತ್ತಿಟ್ಟುಕೊಳ್ಳಬೇಕು.ನೆಟ್ಟ ನೋಟದಿಂದ ನೋಡುತ್ತಿದ್ದೆ ನೀವು ನೆನಪಾಗುವಿರಿ. ನಿನ್ನ ಮಗಳು ದೊಡ್ಡವಳಾದಳೇ!ಒಳಕೋಣೆಗೆ ಸರಿಸಿಡು ಒಳಗೇ ಇರಲಿನೋವು ಎದೆಯಾಳಕೆ ಬಸಿದುಒಡಲನುರಿಸಿ ಸಾಗುತ್ತಿದೆಲಾವಾರಸ ಬಸಿದಿಟ್ಟು ಕೊಳ್ಳಬೇಕುಹರಿದ ದೃಷ್ಟಿಯಿಂದ ಕಾಣುತ್ತಿದ್ದೆ ನೀವು ನೆನಪಾಗುತ್ತೀರಿ ನೀನೀಗ ಅವನ ಹೆಂಡತಿ ನೆನಪಿರಲಿ!ಅವನ ಹೆಜ್ಜೆಯ ಹಣೆಗೊತ್ತಿ ನಡೆಸರ್ರನೆ ಜಾರಿ ಬಿದ್ದಿದ್ದೆನನ್ನೊಳಗಿನಾಕೆಗೆ ಆತ್ಮಶಕ್ತಿ ತುಂಬಬೇಕುಇರಿವ ಕಣ್ಣಿಂದ ಕಂಡೆ ನೀವು ನೆನಪಾಗುವಿರಿ. ಅವಮಾನದ ಗಾಯತಿರಸ್ಕೃತರಾಗುವ ನೋವುನೀವು ಉಂಡು,ಸೆಟೆದು ನಿಂತವರಲ್ಲವೇ?ಶತಮಾನದ ಸಂಕೋಲೆತುಕ್ಕು ಹಿಡಿದು ವಿಷವಾಗಿದೆಅಪಮಾನದ ಬೂದಿಯಿಂದಹೊಸ ಹುಟ್ಟನ್ನುಕಟ್ಟಿ ನಡೆದಾಡಬೇಕು. ಇದೋ,ಹೆಜ್ಜೆ ಎತ್ತಿಟ್ಟಿದ್ದೇವೆ.ನೀವು ನಮ್ಮೊಳಗಿದ್ದೀರಿ. ************************* To the father of constitution Wouldn’t you be a boy?a sharp sickle ofher painful sighwas piercings hardmy inner core.Soil under my footto be held pressednot to be slipped off.I were looking at her.….I remember thee. Is your daughter,matured?push her inside the room.The burning pain,from my heart, spreadedthroughout the body.Yes! The lava also tobe preserved.I were looking through.…I remember thee. Forget not! Now you’re a wife!bend your head at his feet.follow him unto the last.at once I had slipped off.but she was tobe confident.who was within me.I were looking sharp…I remember thee. The wound of insultpain of rejectionyou injested.still stood strong.centuries restraints of societyrusted and poisonous Must build a new lifeout of this exploitation ash.and walk with firm steps Now! We are on our wayYou are within us. ********************

ಅನುವಾದ ಸಂಗಾತಿ Read Post »

ಅನುವಾದ

ಬೇಲಿ

ಅನುವಾದಿತ ಕವಿತೆ ಕನ್ನಡ ಮೂಲ: ಸುನೀತ ಕುಶಾಲನಗರ ಇಂಗ್ಲೀಷಿಗೆ:ಸಮತಾ ಆರ್. ಬೇಲಿ ಬೇಲಿ ಹಾಕಲೇಬೇಕೆಂಬುದು ಬಹುದಿನದ ಕನಸು ಹಾಗೆ,ಹೀಗೆ  ಬೇಕಾದ ಸರಕು ಜೋಡಣೆ, ಭರದ ಸಿದ್ಧತೆ ನಮ್ಮದೇ ಭದ್ರತೆಯ ಕೋಟೆಗೆ ಅದೆಂತ ಉತ್ಸಾಹ ಸಂಧಿ,ಗೊಂಧಿಗಳಲೂ ಹಾವು,ಜಂತೂ ನುಸುಳದಂತೆ ಗಿಡ ನೆಟ್ಟು ಬೇಲಿಯಲೂ ಹೂಗಳ ನಿರೀಕ್ಷೆ. ಕನಸಿನಂತೆ ಮೊಗ್ಗು  ಬಿರಿದೇ ಇಲ್ಲವೆಂದಲ್ಲ ಅವು ಆರಂಭ ಶೂರತ್ವ ಗಿಡವಿರಬೇಕು ಅರಳಿ ಉದುರಿದ ಬೀಜ ಚಿಗುರಲೇಕೋ ಆಕಳಿಸಿ ಎದುರಿದ್ದ ಬೇಲಿಯಲಿ ನಳ ನಳಿಸಿದ ನೀಲಿ ಹೂವಲಿ ಬಿದ್ದ ಕಣ್ಣ ಕೀಳಲಾಗದೆ ಝೇಂಕರಿಸುವ ಹುನ್ನಾರ ಕನಸಿನ ಬೇಲಿ ಸೊರಗಿ ಕೊರಡಾಗುವುದನೊಪ್ಪದೆ ಕೊನರಿಸಲೇಬೇಕೆಂಬ ಹಠಕ್ಕೆ ಬಿದ್ದು ಹನಿಸಿದಷ್ಟೂ ಕಣ್ಣು ಕೊಳವಲ್ಲ ಕಡಲು. ಬೇಲಿ ತುಂಬಾ ಅಂತರದ ಬಿರುಕು ಸಲಗ ಪಳಗಿಸುವಂತೆ  ಕಾಷ್ಠ ಪಲ್ಲವಿಸಲು ಹೈರಾಣು. ಮಳೆ ಹೊಯ್ಯುತ್ತಿದೆ ಈಗ  ಹೊಸ ಭರವಸೆಯ ಬೀಜ  ತಂದಿರಿಸಿರುವೆ ತಡ ಮಾಡದೆ ಬೇಲಿಗುಂಟ ಬಿತ್ತಬೇಕಿದೆ. .                A FENCE Since ages,Dreamt of building a fence,Around our own castle.Desparately collected,This and that andWhatever needed,With suchA vigour and speed. Even the smallest of gapsWere filled with plants,For not to let any snakeOr a tiny worm to creep in. The buds did bloom,As I had dreamt,Every plant at firstBlossomed,Like a new knight,Ready to fight.But the seed from the pod,Yawned to sprout.  Then could notTake the eyes offA beaming blue flowerOn the opposite fenceA plot started to buzz. As my fence of dreamsCan’t be seen so dried.Eyes shed to fillNot only pondsBut oceans.Then determinedTo bringBack to life All the sprigs dried. Struggling off to fillThe gaps of fence,Like fighting  to tameA wild elephant. Now, it has startedTo rain again,Have bought someSeeds of hope,To sow along the line Of the fence of mine. *****

ಬೇಲಿ Read Post »

ಅನುವಾದ

ಶರಣಾಗಿ ಬಿಡಲೆ

ಅನುವಾದಿತ ಕವಿತೆ ಮೂಲ ಕನ್ನಡ: ವಸುಂಧರಾ ಕದಲೂರು ಇಂಗ್ಲೀಷಿಗೆ: ಸಮತಾ ಆರ್. ಶರಣಾಗಿ ಬಿಡಲೆ ನಿನ್ನ ಕಂಗಳ ಪ್ರಾಮಾಣಿಕತೆ  ನನ್ನನು ಹಿಂಬಾಲಿಸುತ್ತಿದೆ. ಭದ್ರ ಕೋಟೆ ಗಟ್ಟಿ ಬೇಲಿ ಛಿದ್ರಗೊಳಿಸಿ ಎದೆ ತಟ್ಟುತ್ತಿದೆ. ನೀನು ಮಂಡಿಯೂರಿ ಬಿಡು ನೀನೂ ಮಂಡಿಯೂರಿ ಬಿಡು ಮಾರ್ದನಿಸುವ ಮಾತುಗಳಿಗೆ ಇನ್ನೆಷ್ಟು ಕಾಲ ಕಿವುಡಾಗಿರಲಿ ಹಾದಿ ಮರೆವ ಮುನ್ನ ನಾಕು ಹೆಜ್ಜೆ ನಡೆದು ಬರಲೆ ಹನಿ ಮುತ್ತು ಜಲಗರ್ಭದ ಚಿಪ್ಪೊಳಗೆ ಕಾಣೆಯಾಗಲು ಬಿಡಬೇಡ ಮುಳುಗಿ ತೆಗೆ ಪಿಸುಮಾತು ಕೇಳುತ್ತಿದೆ ಪ್ರತಿಧ್ವನಿ ತರಂಗವಾಗಿ ಹೃದಯದಲಿ ನಯವಾಗಿ ನವುರಾಗಿ ಲಯವಾಗಿ ಕಂಪನ ಎಬ್ಬಿಸುತ್ತಿವೆ. ದುಬಾರಿ ಕಾಲ ಸಾಬೀತು  ಪಡಿಸುತ್ತಿದೆ ಕ್ಷಣಕ್ಕೊಮ್ಮೆ ಜಾರಿಹೋದ ನೆನಪುಗಳ ಈಟಿಯಿಂದ ಇರಿಯುತ್ತಾ. ನಾನು ಶರಣಾಗಿ ಬಿಡಲೆ ನಾನೂ ಶರಣಾಗಿ ಬಿಡಲೆ ————————– SHALL    I    SURRENDER The honest yearning of your eyesIs haunting me across,Destructing all the fortress’ and barricades,Now knocking at my heart. You kneel down,You too kneel down. I can’t keep all those whispersUnheard anymore,Shall I tread a few more stepsBefore the path fades. A murmur says to dive deepAnd pick the pearl drop,Before it gets trappedIn the oyster of an aquatic womb. All the echoes are transversingTo reach my heart,And trembling itWith a soft tender rhythm. The precious spear of timeIs piercing me hard,to proveThe innocence of bygone memories,Moment by moment. Shall I get surrenderedShall I too get surrendered. *******************

ಶರಣಾಗಿ ಬಿಡಲೆ Read Post »

ಅನುವಾದ

ಊರುಗೋಲು

ಅನುವಾದಿತ ಕವಿತೆ ಮೂಲ: ಬರ್ಟೋಲ್ಡ್ ಬ್ರೆಕ್ಟ್ ಕನ್ನಡಕ್ಕೆ: ವಿ.ಗಣೇಶ್ ಹತ್ತು ವರುಷಗಳ ಕಾಲ ಹೆಜ್ಜೆಯಿಡಲಾರದಲೆ ವೈದ್ಯನ ಸಲಹೆ ಪಡೆಯಲಂದು ನಾ ಬಂದೆ ‘ನಿಮಗೆ ಊರುಗೋಲೇಕೆ?’ ಎಂದವನು ಕೇಳಲು ನಾ ಹೆಳವ ಎನುತ ವಾದಿಸಿದೆನು. ಮುಗುಳು ನಗೆ ಸೂಸುತ ಆ ಹಿರಿಯ ವೈದ್ಯನು ‘ಮರಳಿ ಯತ್ನವ ಮಾಡು, ಮರಳಿ ಯತ್ನವ ಮಾಡು, ಊರುಗೋಲಿಂದಲೆ ನೀ ಹೆಳವನಾಗಿರುವೆ ತೆವಳುತ್ತ ತೆವಳುತ್ತ ನಡೆ ಮುಂದೆ’ ಎಂದ. ನನ್ನ ಪ್ರಿಯ ಸಾಧನವ ಕಸಿಯುತ್ತಲವನು ಸೈತಾನ ನೋಟವನು ಬೀರುತ್ತಲದರೆಡೆಗೆ ಆ ಪ್ರಿಯ ಸಾಧನವ ಮೆಟ್ಟಿ ತುಳಿಯುತಲಿ ಉರಿಯುತಿಹ ಬೆಂಕಿಗೆ ಎಸೆದು ಬಿಟ್ಟ ಪೂರ್ಣ ಗುಣಮುಖನಾಗಿ ನಡೆಯುತಿಹೆನಿಂದು ನಗುವಿನಿಂದಲೆ ನಾ ಗುಣವ ಪಡೆದಿರುವೆ ಕೆಲವೊಮ್ಮೆ ಕೋಲುಗಳ ನಾ ಕಂಡರೀಗಲೂ ಹೆಳವನಾ ರೀತಿಯಲೇ ನಡೆಯುತಿಹೆನು ************************************ Crutches By Burtlact Brect

ಊರುಗೋಲು Read Post »

ಅನುವಾದ

ವಿಚಾರವೇನೆಂದರೆ…

ಅನುವಾದಿತ ಕವಿತೆ ಮೂಲ ಇಂಗ್ಲೀಷ್: ಹೆಲೆನ್ ಬ್ಯಾಸ್ ಕನ್ನಡಕ್ಕೆ: ಅಶ್ವಥ್ ಬದುಕ ಪ್ರೀತಿಸುವುದು,ಹಂಬಲವಿಲ್ಲವೆನಿಸಿದಾಗಲೂ,ಆಪ್ತವಿದ್ದೆಲ್ಲವೂ ಉರಿದು ಬೂದಿಯಾಗಿಕೈಗಂಟುವ ಧೂಳಿನಂತಾದರೂಆ ಬೂದಿಯ ಕೆಸರುಗಂಟಲಿಗಿಳಿದು ಬಿಗಿದಾಗಲೂಬದುಕ ಪ್ರೀತಿಸುವುದು. ಕೊರಗು ನಿನ್ನ ಬಳಿಯೇ ಕುಳಿತಿರುವಾಗಲೂಅದರ ಬೇಸಿಗೆಯುರಿ, ಗಾಳಿಯನು ನೀರಾಗಿಸಿ,ಒಲೆಮೇಲೆ ಕುದಿವಂತೆ ಬೊಬ್ಬುಳಿ ತರಿಸಿನಿನ್ನುಸಿರಿಗೆ ತಾಕಿಸಿದಾಗಲೂ,ಅದೇ ಕೊರಗು ನಿನ್ನದೇ ಮಾಂಸಖಂಡಗಳಂತೆಭಾರವೆನಿಸಿ, ಉಲ್ಪಣಗೊಂಡು,ಕೊರಗಿನದೇ ಸ್ಥೂಲಕಾಯವಾದಾಗಲೂದೇಹವಿದೆಲ್ಲವನು ಹೇಗಾದರೂ ಸಹಿಸೀತು? ಅದುಕೊಳ್ಳುತ್ತಲೇಮುದ್ದಾದ ನಗುವಿರದ, ನೀಲಗಣ್ಣುಗಳಿರದಆಡಂಬರವಿರದ ಸಾಮಾನ್ಯ ಮುಖದಂತೆಬದುಕನೊಮ್ಮೆ ಅಂಗೈಗಳ ನಡುವೆ ಹಿಡಿದುಹೇಳಿಬಿಡು ಖಚಿತ, ನಾನಿನ್ನ ಸ್ವಾಗತಿಸುತ್ತೇನೆನಾನಿನ್ನ ಪ್ರೀತಿಸುತ್ತೇನೆ, ಮತ್ತೊಮ್ಮೆ ಎಂದು. **************

ವಿಚಾರವೇನೆಂದರೆ… Read Post »

You cannot copy content of this page

Scroll to Top