ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಅನುವಾದ

ಅನುವಾದ ಸಂಗಾತಿ

ನಿಕ್ಕಿ ಗಿಯೊವಿನ್ನಿ ಅಮೇರಿಕಾದ ಕವಿಯಿತ್ರಿ ಕನ್ನಡಕ್ಕೆ: ಕಮಲಾಕರ ಕಡವೆ “ನೀನೂ ಸಹ ಬಂದೆ” ನಾನು ಬಂದೆ ಸರ್ವರ ಸಮ್ಮುಖ ಸ್ನೇಹಿತರ ಅರಸಿನಾನು ಬಂದೆ ಸರ್ವರ ಸಮ್ಮುಖ ಒಲವ ಅರಸಿನಾನು ಬಂದೆ ಸರ್ವರ ಸಮ್ಮುಖ ಸಹಾನುಭೂತಿಗಾಗಿ ನಿನ್ನ ಕಂಡುಕೊಂಡೆನಾನು ಬಂದೆ ಸರ್ವರ ಸಮ್ಮುಖ ಅಳಲುನಾನು ಬಂದೆ ಸರ್ವರ ಸಮ್ಮುಖ ನಗಲು ನೀನು ನನ್ನ ಕಣ್ಣೊರೆಸಿದೆನೀನು ನನ್ನ ಸಂತೋಷವ ಹಂಚಿಕೊಂಡೆನಾನು ಸರ್ವರ ಸಮ್ಮುಖ ತೊರೆದು ನಿನ್ನ ಅರಸಿ ಹೊರಟೆ ನಾನು ಸರ್ವರ ಸಮ್ಮುಖ ತೊರೆದು ಹೋದೆ ನನ್ನನೇ ಅರಸಿನಾನು ಸದಾಕಾಲಕ್ಕೆ ಸರ್ವರ ಸಮ್ಮುಖ ತೊರೆದೆನೀನೂ ಸಹ ಜೊತೆಯಾದೆ. ========= ಆಂಗ್ಲ ಮೂಲ: You Came , Too” I came to the crowd seeking friendsI came to the crowd seeking loveI came to the crowd for understanding I found youI came to the crowd to weepI came to the crowd to laugh You dried my tearsYou shared my happinessI went from the crowd seeking you I went from the crowd seeking meI went from the crowd foreverYou came, too ============

ಅನುವಾದ ಸಂಗಾತಿ Read Post »

ಅನುವಾದ

ಅನುವಾದ ಸಂಗಾತಿ

ಓಂಪ್ರಕಾಶ್ ವಾಲ್ಮೀಕಿ ಉತ್ತರಭಾರತದ ದಲಿತ ಕಾವ್ಯ ಕನ್ನಡಕ್ಕೆ-ಕಮಲಾಕರ ಕಡವೆ ಠಾಕೂರನ ಬಾವಿ ಒಲೆ ಮಣ್ಣಿಂದುಮಣ್ಣು ಕೊಳದ್ದುಕೊಳ ಠಾಕೂರಂದು ಹಸಿವು ರೋಟೀದುರೋಟಿ ರಾಗಿಯದುರಾಗಿ ಗದ್ದೇದುಗದ್ದೆ ಠಾಕೂರಂದು ಎತ್ತು ಠಾಕೂರಂದುನೇಗಿಲು ಠಾಕೂರಂದುನೇಗಿಲ ಮೇಲಿನ ಕೈ ನಮ್ದುಫಸಲು ಠಾಕೂರಂದು ಬಾವಿ ಠಾಕೂರಂದುನೀರು ಠಾಕೂರಂದುಗದ್ದೆ-ಕಣಜ ಠಾಕೂರಂದುರಸ್ತೆಬೀದಿ ಠಾಕೂರಂದುಮತ್ತೆ ನಮ್ದೇನುಂಟು?ಹಳ್ಳಿ?ಪೇಟೆ?ದೇಶ? ********************************* ಮೂಲಕವಿತೆ ठाकुर का कुआँ / ओमप्रकाश वाल्मीकि चूल्‍हा मिट्टी कामिट्टी तालाब कीतालाब ठाकुर का । भूख रोटी कीरोटी बाजरे कीबाजरा खेत काखेत ठाकुर का । बैल ठाकुर काहल ठाकुर काहल की मूठ पर हथेली अपनीफ़सल ठाकुर की । कुआँ ठाकुर कापानी ठाकुर काखेत-खलिहान ठाकुर केगली-मुहल्‍ले ठाकुर केफिर अपना क्‍या ?गाँव ?शहर ?देश ?

ಅನುವಾದ ಸಂಗಾತಿ Read Post »

ಅನುವಾದ

ಅನುವಾದ ಸಂಗಾತಿ

ಮೂಲ: ಜಾವಿದ್ ಆಖ್ತರ್.. ಅನುವಾದ ಸಂಗೀತ ಶ್ರೀಕಾಂತ ಯಾವಗಲೆಲ್ಲ ನೋವಿನ ಮೋಡ ಹರಡುತ್ತದೆಯೊ, ಯಾವಗಲೆಲ್ಲ ಬೇಸರದ, ನೆರಳು ಹರಡುತ್ತದೆಯೋ, ಯಾವಗಲೆಲ್ಲಾ ಕಣ್ಣಿಂದ ಹನಿ ರೆಪ್ಪೆಯ ಬಳಿ ಬರುತ್ತದೆಯೋ, ಯಾವಗಲೆಲ್ಲಾ ಏಕಾಂತದಿಂದ ಹೃದಯ ಹೆದರುತ್ತದೆಯೋ, ಆಗೆಲ್ಲ ನಾನು ನನ್ನ ಹೃದಯವನ್ನು ಸಂತೈಸಿದ್ದೆನೆ ಏ ಹೃದಯವೇ ನೀನೆಕೆ ಹೀಗೆ ಆಳುತ್ತಿದ್ದಿಯಾ ಜಗತ್ತಿನಲ್ಲಿ ಎಲ್ಲರಿಗೂ ಹೀಗೆ ಆಗುತ್ತದೆ. =======

ಅನುವಾದ ಸಂಗಾತಿ Read Post »

ಅನುವಾದ

ಅನುವಾದ ಸಂಗಾತಿ

ಮೂಲ: ಅರುಣ್ ಕೊಲ್ಜಾಟ್ಕರ್ ಮಹಾರಾಷ್ಟ್ರದ ದ್ವಿಭಾಷಾ ಕವಿ ಅನುವಾದ:ಕಮಲಾಕರ ಕಡವೆ ಮುದುಕಿ ಮುದುಕಿಅಂಗಿ ಅಂಚನು ಹಿಡಿದುಬೆನ್ನು ಬೀಳುತ್ತಾಳೆ. ಅವಳು ಬೇಡುತ್ತಾಳೆ ಎಂಟಾಣೆಕುದುರೆ ಲಾಳದ ಮಂದಿರ ನಿಮಗೆತೋರಿಸುವಳಂತೆ ನೀವದನ್ನು ಅದಾಗಲೇ ನೋಡಿದ್ದೀರಿಅಂದರೂ ಕುಂಟುತ್ತ ಬರ್ತಾಳೆ ಹಿಂದೆಬಿಗಿಯಾಗಿ ಹಿಡಿದು ಅಂಗಿ ಅಂಚನು ನಿಮಗೆ ಹೋಗಗೊಡುವುದಿಲ್ಲ ಅವಳುಗೊತ್ತಲ್ಲ, ಮುದುಕಿಯರ ಪರಿಹತ್ತಿ ಹೂವಂತೆ ಅಂಟಿಕೊಳ್ಳುವರು ತಿರುಗಿ ಎದುರಿಸುವಿರಿ ನೀವುಅವಳನ್ನು, ಈ ಆಟ ಮುಗಿಸುವಖಡಾಖಂಡಿತ ನಿಲುವಲ್ಲಿ ಅವಳಾಗ ಅನ್ನುತ್ತಾಳೆ: “ಇನ್ನೇನುಮಾಡಿಯಾಳು ಮುದುಕಿಯೊಂಟಿಇಂಥ ದರಿದ್ರ ಕಲ್ಲುಗುಡ್ಡಗಳಲ್ಲಿ?” ನೀವು ನೋಡುತ್ತೀರಿ. ನಿರಾಳ ಆಕಾಶಅವಳ ಗುಂಡು ಕೊರೆದ ತೂತಿನಂತಹಕಣ್ಣುಗಳ ಮೂಲಕ. ನೀವು ನೋಡುತ್ತಲಿರುವಂತೇಅವಳ ಕಣ್ಣುಗಳ ಸುತ್ತ ಸುರುವಾಗುವಸುಕ್ಕುಗಳು ಪಸರುತ್ತವೆ ಚರ್ಮದಾಚೆಗೂ ಗುಡ್ಡಗಳು ಬಿರುಕು ಬಿಟ್ಟುಮಂದಿರಗಳು ಬಿರುಕು ಬಿಟ್ಟುಆಕಾಶ ಕಳಚಿ ಬೀಳುತ್ತದೆ ಗ್ಲಾಸು ಬಿದ್ದು ಚೂರಾಗುವ ಗೌಜಲ್ಲಿಏಕಾಕಿ ನಿಂತಒಡೆಯಲಾಗದ ಮುದಿ ಜೀವ ಹಾಗೂ ನೀವಾಗಿರುತ್ತೀರಿಅವಳ ಕೈಯಲ್ಲಿನಚಿಲ್ಲರೆ ನಾಣ್ಯ. ======== ಆಂಗ್ಲಮೂಲ: An Old Woman An old woman grabshold of your sleeveand tags along. She wants a fifty paise coin.She says she will take youto the horseshoe shrine. You’ve seen it already.She hobbles along anywayand tightens her grip on your shirt. She won’t let you go.You know how old women are.They stick to you like a burr. You turn around and face herwith an air of finality.You want to end the farce. When you hear her say,‘What else can an old woman doon hills as wretched as these?’ You look right at the sky.Clear through the bullet holesshe has for her eyes. And as you look onthe cracks that begin around her eyesspread beyond her skin. And the hills crack.And the temples crack.And the sky falls with a plateglass clatteraround the shatter proof cronewho stands alone. And you are reducedto so much small changein her hand. =======

ಅನುವಾದ ಸಂಗಾತಿ Read Post »

ಅನುವಾದ

ಅನುವಾದ ಸಂಗಾತಿ

ಮೂಲ-ಜಯಂತ ಮಹಾಪಾತ್ರ ಒರಿಸ್ಸಾದ ಭಾರತೀಯ ಆಂಗ್ಲ ಕವಿ ಅನುವಾದ–ಕಮಲಾಕರ ಕಡವೆ “ಪುರಿಯಲ್ಲಿ ಬೆಳಗು” ಕೊನೆಯಿರದ ಕಾಗೆಗಲಭೆಪವಿತ್ರ ಮರಳಲ್ಲಿ ತಲೆಬುರುಡೆಯೊಂದುಹಸಿವಿನೆಡೆಗೆ ವಾಲಿಸುತ್ತದೆ ಖಾಲಿ ದೇಶವನ್ನು. ಬಿಳಿತಳೆದ ವಿಧವೆಯರುತಮ್ಮ ಬಾಳಿನ ಮಧ್ಯದಾಚೆಮಹಾಮಂದಿರದೊಳಗೆ ಹೊಗಲು ಕಾದಿದ್ದಾರೆ. ಅವರ ವಿರಕ್ತ ಕಣ್ಣುಗಳುಬಲೆಯಲ್ಲಿ ಸಿಕ್ಕಿಬಿದ್ದವರಂತೆ ದಿಟ್ಟಿಸುತ್ತವೆ,ಬೆಳಬೆಳಗ್ಗೆ ಶ್ರದ್ಧೆಯ ಬೆಳಗಿನೆಳೆಗೆ ಜೋತುಬಿದ್ದು. ನಿತ್ರಾಣ ಮುಂಜಾನೆ ಬೆಳಕಿಗೆ ಬಿದ್ದಿವೆಒಂದನಿನ್ನೊಂದು ಆತಿರುವ ಪಾಳು ತೊನ್ನುಭರಿತ ಚಿಪ್ಪುಗಳು,ಹೆಸರಿರದೆ ಕುಗ್ಗಿಹೋದ ಮುಖಗಳ ಮುಂದೆ, ತಟ್ಟನೆ ನನ್ನ ತೊಗಲೊಳಗಿಂದ ಹೊರಬೀಳುವ ಬಿಕ್ಕುಸೇರುತ್ತದೆ ಏಕಾಕಿ ಮಂಕು ಚಿತೆಯೊಂದರ ಹೊಗೆಯನನ್ನ ಮುದಿ ಅಮ್ಮನ ಕವಿಯುವ ಧಗೆಯ: ತನ್ನನಿಲ್ಲಿ ಸುಡಬೇಕೆಂಬ ಅವಳ ಕೊನೆಯಾಸೆನೆಲೆಬದಲುವ ಮರಳದಿಣ್ಣೆಯ ಮೇಲೆಬೆಳಕಂತೆ ಸಂದಿಗ್ಧವಾಗಿ ತಿರುಚಿ. ಮೂಲ ಕವಿತೆ: Endless crow noisesA skull in the holy sandstilts its empty country towards hunger. White-clad widowed Womenpast the centers of their livesare waiting to enter the Great Temple Their austere eyesstare like those caught in a nethanging by the dawn’s shining strands of faith. The fail early light catchesruined, leprous shells leaning against one another,a mass of crouched faces without names, and suddenly breaks out of my hideinto the smoky blaze of a sullen solitary pyrethat fills my aging mother: her last wish to be cremated heretwisting uncertainly like lighton the shifting sands

ಅನುವಾದ ಸಂಗಾತಿ Read Post »

ಅನುವಾದ

ಅನುವಾದ ಸಂಗಾತಿ

Solitary! ತೆಲುಗು ಮೂಲ : ರವಿ ವೀರೆಲ್ಲಿ ಅನುವಾದ : ರೋಹಿಣಿಸತ್ಯ ಒಂಟಿ ಮೇಘದಂತೆ ಅಲ್ಲಿ ಇಲ್ಲಿ ಎಷ್ಟುಹೊತ್ತು ಅಡ್ಡಾಡಲು ಸಾಧ್ಯ?! ಸ್ವಲ್ಪಹೊತ್ತಿಗೆ ಸಾವಿರವಾಗಿ ಸೀಳಿಹೋಗುತ್ತೇನೆ ಕಡೆಗೆ ಹನಿಗಳೆಲ್ಲವನ್ನು ಒಟ್ಟುಗೂಡಿಸಿಕೊಂಡು ದೊಡ್ಡ ಸಮೂಹವಾಗಿ ದಾಳಿಯಿಡುತ್ತೇನೆ ಯುದ್ಧ ಮುಗಿದಮೇಲೆ ಯಾವ ತೊರೆಯಲ್ಲೋ ಏಕಾಂಗಿಯಾಗಿ ಹರಿಯುತ್ತೇನೆ ಒಂಟಿಯಾಗಿ ಬಾಳಲಾಗದಿರುವುದಕ್ಕೆ ಸಮೂಹದಲ್ಲಿ ನಡೆಯಲಾಗದಿರುವುದಕ್ಕೆ ನಡುವೆ ಎಷ್ಟೋ ಕಾಲಗಳು ಹಾಗೆ ಓರೆಗಣ್ಣಿನಿಂದ ನೋಡುತ್ತಾ ಸಾಗುತ್ತಿರುತ್ತವೆ ಮತ್ತೆಷ್ಟೋ ಕ್ಷಣಗಳು ಕಾಯದೆ ಅನುಕಂಪದಿಂದ ಕದಲುತ್ತಿರುತ್ತವೆ ಯಾವ ಕೈಯಾಸರೆ ನನ್ನನ್ನು ಲಾಲಿಸುವುದಿಲ್ಲವೆಂದು ಯಾವ ಮೊಗ್ಗು ನನಗಾಗಿ ಮೂಡುವುದಿಲ್ಲವೆಂದು ತಿಳಿದಾಗ ನನ್ನ ಕಾಲುಗಳ ಕೊರಡಿನ ಮೇಲೆ ನಾನೇ ಬೆಳೆದು ನನ್ನ ಬೇರುಗಳ ತುದಿಗಳನ್ನು ನಾನೇ ಚಿಗುರಿಸಿಕೊಂಡು ನನ್ನೊಳಗೆ ನಾನೇ ಹೊರಲಾರದಂತಹ ಹುವ್ವಾಗಿ ಅರಳುತ್ತೇನೆ ಎಂದೋ ಒಂದು ದಿನ ನನ್ನನ್ನು ನಾನೇ ತುಂಡರಿಸಿಕೊಂಡು ಬೀಜಗಳನ್ನ ಅಪ್ಪಿಕೊಂಡು ತೇಲುವ ಹತ್ತಿಹೂವಿನಂತೆ ಯಾವುದೊ ಗಾಳಿಯ ದೋಣಿಯಲ್ಲಿ ತೇಲುತ್ತಾ ಕದಲುವ ಕಾಲಗಳ ಬಾಗಿಲುಗಳನ್ನು ಒಂದೊಂದಾಗಿ ತಟ್ಟುತ್ತಾ ಸಾಗುತ್ತಿರುತ್ತೇನೆ ಕೂಡಿಬರುವ ಕಾಲವೊಂದು ಹಿತ್ತಲ ಬಾಗಿಲು ತೆರೆದು ನನ್ನನ್ನು ಬಯಸಿ ಬಿತ್ತಿಕೊಳ್ಳುವವರೆಗು!

ಅನುವಾದ ಸಂಗಾತಿ Read Post »

ಅನುವಾದ

ಅನುವಾದ

ವಸಂತನಾಗಮನ ಮೂಲ ತೆಲುಗು ರಚನೆ: ಗುಂಟೂರು ಶೇಷೇಂದ್ರಶರ್ಮ ಗುಂಟೂರು ಶೇಷೇಂದ್ರ ಶರ್ಮಾ ಬಿ.ಏ.ಬಿ.ಯಲ್ 1927 -2007 ತೆಲುಗು ಸಾಹಿತ್ಯದಲ್ಲಿ ಜನಪ್ರಿಯ ಕವಿ ಯುಗಕವಿ ಎಂದು ಹೆಸರುಗಳಿಸಿದವರು. ಇವರು ಕವಿ, ವಿಮರ್ಶಕ ಹಾಗೂ ಬರಹಗಾರರು.1994 ರಲ್ಲಿ ಇವರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಇವರು ನೋಬಲ್ ಬಹುಮಾನಕ್ಕೂ ಭಾರತದಿಂದ ನಾಮಿನೇಟ್ ಆಗಿದ್ದರು. ಇವರ ಹಲವಾರು ರಚನೆಗಳು ಕನ್ನಡ, ಇಂಗ್ಲೀಷು ಹಿಂದೀ ಉರ್ದೂ ಬೆಂಗಾಲೀ ನೇಪಾಲಿ ಹಾಗೂ ಗ್ರೀಕ್ ಭಾಷೆಗಳಿಗೂ ಅನುವಾದಗೂಂಡಿವೆ ಕನ್ನಡಕ್ಕನುವಾದ: ನಾರಾಯಣ ಮೂರ್ತಿ ಬೂದುಗೂರು ಹೂಗಳು ತುಟಿಯರಳಿಸಿವೆ ರಹಸ್ಯವ ತಿಳಿಸಲೂ!! ಈಗ…ಪ್ರತಿಯೊಂದು ಮರವೂ ಒಂದು ದೇವಳವೇ… ಹಕ್ಕಿಗಳೆಲ್ಲಾ ಹಾರುವಾ ದೇವತೆಯರೇ!!! ರೆಂಬೆ, ರೆಂಬೆಯಲೂ ಹಾಡಿನಾ ಸ್ಪರ್ಧೆಯೇ ಹುಲ್ಲುಕಡ್ಡೀಯಲ್ಲೂ ಗಂಧರ್ವಲೋಕವೇ.. ವೀಣೆಯು ಮೀಟಿದಂತೆ ಸ್ವರಗಳ ಅಪ್ಸರಸೆಯರು…. ಈ ಹೂಗಳಲನ್ನ ಯಾರು ಎಬ್ಬಿಸಿದರೋ…? ಏನೋ ನನ್ನ ಬೆನ್ಹತ್ತಿದೇ!!! ಯಾವುದೋ ನೆನಪುಗಳಿಗೆ ನನ್ನ ತೀಕ್ಷ್ಣವಾಗಿ ಒಳಪಡಿಸುತ್ತಿವೇ!!! ಈ ಕೋಗಿಲೆಗಳನ್ನ ಆ ಮಾವಿನಮರದ ಮೇಲೆ ಯಾರು ಇಟ್ಟರೋ ? ಅದು ಲೋಕವನ್ನ ನಿದ್ದೆ ಮಾಡಲಿಕ್ಕೆ ಬಿಡುತ್ತಿಲ್ಲ!! ವಸಂತನನ್ನ ಕರೆದು.. ಕೋಗಿಲೆಯನ್ನ, ಸುಮ್ಮನಿರಲು ಹೇಳಿದರೇ…ಅದು ಕೇಳುವುದಾ ? ನಾನು ಋಷಿಯಲ್ಲಾ..ಕೋಗಿಲೆಯ, ಸ್ವರ ಕೇಳಿ ಬೆಚ್ಚಿಬೀಳಲು… ನಮ್ಮೂರ ಮಣ್ಣಿನಿಂದ ಮಾಡಿದ ಸ್ನಾಯುಗಳು ಎನ್ನ ದೇಹದ್ದು!!! ಹಸಿರಾಗಿ ಪಂಚಮ… ದಲ್ಲಿ ಹಾಡುವಾ ಮಾವಿನಾ ಮರಾ… ನಡೆದಾಡುವದೊಂದು… ವಿನಹಾ… ಚೈತ್ರದ ಆಗಮನಕ್ಕೆ ಏನು ಬೇಕಾದರೂ ಮಾಡುವೆ ಎನ್ನುತಿದೇ!!!! ವಸಂತ ಋತುವೆಂದರೇ!!! ಕೋಗಿಲೆಗಳ ಹಾಡಿನಾ ಪಾಠಶಾಲೆ.. ಹಕ್ಕಿಗಳಾ ಸಂಗೀತ ಅಕಾಡೆಮೀ… ಒಂದೊಂದು ಹಕ್ಕೀ….ಸಾವಿರ ಹಾಡೂಗಳಾಗಿ ರೂಪಾಂತರಗೊಳ್ಳುವಾ ಋತೂ ಇದೂ!!! ಅದಕ್ಕೇ ಪ್ರಪಂಚವೆಲ್ಲಾ ಯಾವಾಗಲೂ ಒಂದು ಹೊಸ ವಸಂತಕ್ಕಾಗಿಯೇ. ನಿರೀಕ್ಷಣೇ ಮಾಡುತ್ತಿರುತ್ತೇ!!! ಚೈತ್ರವೂ…ಒಂದು ಜೇಡರಹುಳಾ…. ಹೂವುಗಳಾ ಅರಳಿಸುತ್ತೇ.. ಮೊಟ್ಟೇನೂ ಇಡುತ್ತೇ… ಹೂವುಗಳಲ್ಲೀ ಬಣ್ಣಾನೂ ತುಂಬುತ್ತೇ!!! ಬಲೆಯಲ್ಲಿ…. ಇತಿಹಾಸವನ್ನೂ.. ನೇಯುತ್ತೇ… ಏನೋ….ಪಿಸಪಿಸ ಮಾತಿನೊಂದಿಗೆ ಏಕಾಂತವನ್ನೂ ಕಾಡುತ್ತೇ!!! ಮರುಭೂಮಿಗಳ ದಾಟಿ…ದಾಟಿ.. ಹೂವರಳುವಾ ಬನಗಳಕಡೇ ಪ್ರಯಾಣ ಬೆಳಸುವೆ!!! ಸಮಯವೂ…. ಮಾವಿನಾ ಹಣ್ಣಿನಾ ಹಾಗೇ, ಮಧುರ ಸುವಾಸನೇ ಬೀರುತ್ತಾ.. ಇರುವುದನ್ನ ಅಲ್ಲಿ ಸಾಕ್ಷಾತ್ಕಾರಗೊಳಿಸುತ್ತೆ. ಉದರುವ ಎಲೆಗಾಗಿ ಭೂತಾಯಿಯಾ ನಿರೀಕ್ಷಣೇ… *****************************.

ಅನುವಾದ Read Post »

ಅನುವಾದ

ಅನುವಾದ

ತೆಲುಗು ಮೂಲ- ಡಾ.ಕತ್ತಿ ಪದ್ಮಾರಾವು ಕನ್ನಡಕ್ಕೆ ನಾರಾಯಣಮೂರ್ತಿ ಬೂದುಗೂರು ಯಾರು ಕೊಲೆಪಾತಕರು? ಸಮುದ್ರ ಹಿಮದಿಂದ ಗಾಢವಾಗಿ ಗಡ್ಡೆಕಟ್ಟಿದೆ ನಡುವೆ ಒಂದು ನೀರಿನ ಝರೀ ತಿಮಿಂಗಲಗಳು ಈಜುತ್ತಾ ಸಾಗುತ್ತಿವೆ ಹೆಚ್ಚಾಗಿ ಇಬ್ಬನಿ ಸುರಿದಾಗ, ಅವಕ್ಕೆ ಉಸಿರಾಡಲು ಕಷ್ಟವೆನಿಸುತ್ತದೆ ಈಗ ತಿಮಿಂಗಲಗಳದೇ ಬೇಟೇ ಬಲೆಗಳೆಲ್ಲಾ ಖಾಲೀ,ಖಾಲೀ ಬಿದ್ದಿವೆ ಇತ್ತೀಚೆಗೆ ಮೀನುಗಳೂ… ಬಲೆಯನ್ನು ಗುರ್ತು ಹಚ್ಚುತ್ತಿವೆ. ಆ ಕಾಲುವೆ ಬದಿಯಲ್ಲಿ ತುಂಬಾ ನಾಯೀಕೊಡೆಗಳ ಸಾಲು ರಸ್ತೆ ಒದ್ದೆ ಒದ್ದೆಯಾಗಿ ಕಿರುಪಾದಗಳ ಸಪ್ಪಳಕೆ ನೀರು ಚೆಲ್ಲುತಿದೆ. ಮನುಷ್ಯನಿಗೆ  ಈ ಚಳೀಯಲ್ಲೂ ಬೆವರು ಕಿತ್ತುಬರುತ್ತಿದೆ ಕಟಕಟೆಯಲ್ಲಿ ಒಬ್ಬೊಬ್ಬರೇ ನಿಂತು ತಪ್ಪುಗಳನ್ನ ಒಪ್ಪಿಕೊಳ್ಳುತ್ತಿದ್ದಾರೆ. ಆ ನೀರಿನ ಮೋಟಾರುಪಂಪು ನಿಂತುಹೋಗಿದೇ ಗದ್ದೆಗಳೆಲ್ಲಾ ಒಣಗಿಹೋಗಿವೆ. ಬಿತ್ತನೆಯ ಕತ್ತನ್ನು ಯಾರೋ ಹೊಸಕಿಹಾಕಿದರು. ರಿಲಯನ್ಸ್ ಷಾಪಿನೊಳಗೆ ಹೊಳೆಯುತ್ತಿರುವ ಆಪಲ್ ಒಳಗೆಲ್ಲಾ ಕೊಳೆತುಹೋಗಿದೆ. ತಿನ್ನಬಾರದೇ ಮತ್ತೇ… ಗಾಜಿನ ಒಳಗೆ, ಏಸೀ ಯಲ್ಲಿ ಇಟ್ಟಿದ ತೊಗರೀ ಬೇಳೇ ಆರ್ಗಾನಿಕ್ ಪದ್ದತಿಯಲ್ಲಿ ಬೆಳದದ್ದು ಎನ್ನುತ್ತಾರೇ. ಬೆಲೆ ಮಾತ್ರ ಬೆಟ್ಟದಷ್ಟು. ನರಕಾಸುರನನ್ನ ಕೃಷ್ಣ ಸಾಯಿಸಿದ್ದಕ್ಕೆ ಇಷ್ಟು ಕಾಲುಷ್ಯವೇಕೇ? ನರಕಾಸುರ, ಜರಾಸಂಧ ಒಬ್ಬರೇನು ? ಎಷ್ಟೋಜನರನ್ನ ಸಾಯಿಸಿದ, ಸಾಯುವಂತೆ ಮಾಡಿದ ಕೃಷ್ಣನಿಗೆ ಯಾವ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಶಂಭೂಕನ ಶಿರಚ್ಚೇದನೇ ಮಾಡಿದ, ವಾಲಿಯನ್ನ ಹಿಂಬದಿಯಿಂ ಕೊಂದ ರಾಮನಿಗೆ ಯಾವ ಶಿಕ್ಷೆ ವಿದಿಸಿದರು. ಕೊಲೆಪಾತಕರೆಲ್ಲರೂ ದೇವರುಗಳೇ. ಅವರ ಕೈಯಲ್ಲಿ ಮಾರಣಾಯುಧಗಳು. ಸತ್ತವ ರಾಕ್ಷಸ ಸಾಯಿಸಿದವ ದೈವ ಇದೆಲ್ಲಿಯ ನ್ಯಾಯ ? ಅನಾರ್ಯರೆಲ್ಲಾ ದುಷ್ಟರು ಆರ್ಯರೆಲ್ಲಾ ಶಿಷ್ಟರಾ ? ನ್ಯಾಯ ಎಲ್ಲರಿಗೂ ಒಂದೇ ಅಲ್ಲವೇ ? ಈಗ ಕಾರಾಗೃಹಗಳೆಲ್ಲಾ ಸಾಮಾನ್ಯರಿಗಲ್ಲಾ….. ಅಸಾಮಾನ್ಯರಿಗೇನೇ. ಹಡುಗು ತುಂಬಾ ಮಾದಕ ವಸ್ತುಗಳು ಅಮದಾಗುತ್ತಿವೆ. ನಿಜಾನೇ ಅಕ್ಷರಗಳ ತುಂಬಾ ವ್ಯಾಪಾರವೇ ಅಕ್ಷರ ದೊಳಗಿನ ಜ್ಞಾನವೆಂಬ ತಿರುಳನ್ನು ತೆಗೆದು ಹಾಕಿ ಅಮಲನ್ನು (ನಿಷೆ) ತುಂಬಿಸುತ್ತಿದ್ದಾರೆ. ನಿರಕ್ಷರಕುಕ್ಷಿಯಾ ! ಅಕ್ಷರಸ್ಥನಾ!! ಎನ್ನುವುದಲ್ಲ ಭ್ರಷ್ಟಾಚಾರವೇ ಒಂದು ಕಿರೀಟವಾಗಿದೆ. ಈಗ ಯೋಚಿಸುವವನೇ ನಿಜವಾದ ಮನುಷ್ಯ. ಆ ಅನ್ವೇಷಣೆಯಲ್ಲೇ ಈ ಪಯಣ. ================= ಕನ್ನಡಾನುವಾದ: ನಾರಾಯಣ ಮೂರ್ತಿ ಬೂದುಗೂರು ಮೂಲ ತೆಲುಗು ರಚನೆ: ಡಾ.ಕತ್ತಿ ಪದ್ಮಾರಾವು ಬಿ.ಕಾಂ.ಎಲ್.ಎಲ್.ಬಿ ವೃತ್ತಿ: ಬೆಂಗಳೂರಿನಲಿ ವಕೀಲರು ಹವ್ಯಾಸ: ಕನ್ಶಡ ಮತ್ತು ತೆಲುಗು ಸಾಹಿತ್ಯ, ಓದುವುದು, ಸಣ್ಣಪುಟ್ಟ ಬರೆಯುವುದು, ಅನುವಾದ ಮಾಡುವುದು. ಮೊ: 9448316432

ಅನುವಾದ Read Post »

You cannot copy content of this page

Scroll to Top