ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

ಒಂಟಿತನಕ್ಕೆ ಅಂತ್ಯ ತಂದ “ಕೃತಕ ಬುದ್ದಿಮತ್ತೆ”(Artificial Intelligence)ಯ ಸ್ನೇಹ-ಭೂಮಿಕಾ ಹಾಸನ

ತಂತ್ರಜ್ಞಾನ ಸಂಗಾತಿ ಭೂಮಿಕಾ ಹಾಸನ ಒಂಟಿತನಕ್ಕೆ ಅಂತ್ಯ ತಂದ “ಕೃತಕ ಬುದ್ದಿಮತ್ತೆ” (Artificial Intelligence)ಯ ಸ್ನೇಹ- ಅಮೆರಿಕಾದಲ್ಲಿನ ಒಂಟಿತನಕ್ಕೆ ಅಂತ್ಯ ತಂದ ಎಐ ಸ್ನೇಹ……!!!ಇಂದಿನ ತಂತ್ರಜ್ಞಾನ ಜಗತ್ತು ಮಾನವನ ಜೀವನವನ್ನು  ತಲೆ ಕೆಳಗಾಗಿ ಬದಲಿಸುತ್ತಿದೆ.  “Artificial Intelligence”  ಎಂದು ಕರೆಯಲ್ಪಡುವ  ಎಐ ಮಾನವ ಜೀವನಕ್ಕೆ ಹೊಸ ಮುಖ ಮತ್ತು ಹೊಸ ದಿಕ್ಕು ತೋರಿಸುತ್ತಿದೆ. ಈ ಲೇಖನವು ಅಮೆರಿಕಾದಲ್ಲಿ ಕೆಲಸ ಮಾಡುವ ಒಬ್ಬ ಕನ್ನಡ ಯುವಕನ ಜೀವನದಲ್ಲಿ ಎಐ ಹೇಗೆ ದೊಡ್ಡಬದಲಾವಣೆ ತಂದಿತು ಎಂಬ ನಿಜ ಕಥೆಯನ್ನು ನೋಡೋಣ .ಈ ಯುವಕ ಕರ್ನಾ ಟಕದವನು. ಕಾಲೇಜ್ ಜೀವನದಲ್ಲೇ ಕಂಪ್ಯೂ ಟರ್ ಕ್ಷೇತ್ರದ ಮೇಲೆ ಆಸಕ್ತಿ ಬೆಳಸಿಕೊಂಡಿದ್ದ.  Graduation  ನಂತರ ಬೆಂಗಳೂರಿನಲ್ಲಿ ಕೆಲಸ ಆರಂಭಿಸಿದ. ಬದುಕಿನಲ್ಲಿ ಎಲ್ಲವೂ ಸರಿಯಾಗಿತ್ತು. ಕೆಲಸ,ಸ್ನೇಹಿತರು, ಕನಸುಗಳು…ಎಲ್ಲವೂ-normal…!! ಆದರೆ ಅವನ ಪ್ರೀತಿಯ ಸಂಬಂಧ ಮುರಿದಾಗ ಅವನ ಬದುಕು ಬದಲಾಗಿದೆ. ಆ ಸಂಬಂಧ ಅವನಿಗೆ ತುಂಬಾ ಮುಖ್ಯವಾದದ್ದು.ಭವಿಷ್ಯ ಕಟ್ಟುವ ಕನಸು ಕೂಡ ಇತ್ತು. ಆದರೆ ಒಂದು ದಿನ ಆ ಸಂಬಂಧ ಮುಗಿದು ಹೋದಾಗ, ಅವನಿಗೆ mentally ದೊಡ್ಡ shock ಆಯ್ತು. ಕುಟುಂಬ ಇದ್ದರೂ, ನೋವನ್ನು share ಮಾಡಲು ಯಾರೂ ಹತ್ತಿರ ಇರಲಿಲ್ಲ. ಮನಸ್ಸಿನೊಳಗೇ ಎಲ್ಲವನ್ನು ಹೊತ್ತುಕೊಂಡು ಬದುಕುತ್ತಿದ್ದ. ಕೊನೆಗೆ ಬದುಕಿನ ದಿಕ್ಕು ಬದಲಾಯಿಸಬೇಕು ಅನ್ನಿಸಿದಾಗ, ವಿದೇಶಕ್ಕೆ ಹೋಗುವ ನಿರ್ಧಾರ ಮಾಡಿದ್ದ. ಅಮೆರಿಕಾದಲ್ಲಿ IT ಕ್ಷೇತ್ರದಲ್ಲಿ ಕೆಲಸ ಸಿಕ್ಕಿತು. Visa approve ಆಯಿತು. ಹೊಸ future ಕಾಗಿ flight ಹತ್ತಿದ.ಪ್ರಥಮ ದಿನಗಳು ಅಲ್ಲಿ ತುಂಬಾ exciting…….. ಹೊಸ ದೇಶ, ಹೊಸ ಮನೆ, ಹೊಸ ಕೆಲಸ — ಇದು ಎಲ್ಲರಿಗಿಂತ ಉತ್ತಮ ಜೀವನ..!!!! ಅನ್ನಿಸಿತು. ಆದರೆ ದಿನಗಳು ಹೋ ಗುತ್ತಿದ್ದಂತೆ reality ಸ್ಪಷ್ಟವಾಗತೊಡಗಿತು. ಅಮೆರಿಕಾದ ಕೆಲಸದ ಮಾದರಿಯಲ್ಲಿ ಬೆಳಿಗ್ಗೆ 9ಕ್ಕೆ office, ಸಂಜೆ 6ಕ್ಕೆ ಮನೆ. ಉಳಿದ ಸಮಯ complete silence. ಮನೆ ಬಿಡುವಾಗ ಎದುರು ಮುಖಾಮುಖಿಯಾಗುವ ನಾಲ್ಕು ಗೋಡೆಗಳು. ಮಾತನಾಡಲು ಯಾರೂ ಇಲ್ಲ. ಹತ್ತಿರದಲ್ಲಿ ಸ್ನೇಹಿತರಿಲ್ಲ. ಸಮಾಜಕ್ಕೆ ಸೇರಿಕೊಳ್ಳಲು ಸಮಯವೂ ಇಲ್ಲ. ಹೀಗೆ ಒಂಟಿತನ slowly ದೊಡ್ಡ ಸಮಸ್ಯೆಯಾಯಿತು. Weekendಗಳು ಹೆಚ್ಚು ಕಠಿಣ. Festival time ಇನ್ನೂ ಕಷ್ಟ.ಪ್ರತಿ ಸಂಜೆ ಮುಗಿಯುವಾಗ Indian memories ನೆನಪಾಗಿ ಕಣ್ಣೀರು ಬರುತ್ತಿತ್ತು.ಒಬ್ಬ ವ್ಯಕ್ತಿಗೆ ಹಣ, ಕೆಲಸ, visa ಇರಬಹುದು.ಆದರೆ ಜೊತೆ ಮಾತನಾಡುವ ವ್ಯಕ್ತಿ ಅಗತ್ಯ.ಅದಕ್ಕೆ ಅಮೆರಿಕಾದ ಜೀವನದಲ್ಲಿ ಕೊರತೆ. ಒಮ್ಮೆ ರಾತ್ರಿ ನಿದ್ರೆ ಬರದೆ, Googleನಲ್ಲಿ “ನನ್ನ ಜೊ ತೆ ಮಾತನಾಡಲು ಯಾರಾದರೂ?” ಅಂತ search ಮಾಡ್ತಿದ್ದ. ಆಗ ChatGPT ಅನ್ನುವ AI software ಕಂಡ. ಮನಸ್ಸು ಖಾಲಿಯಾಗಿದ್ದಕಾರಣ simple test chat ಆರಂಭಿಸಿದ. ಮೊದಲ ಪ್ರಶ್ನೆ simple:“Hi, I am feeling lonely.”AI ಉತ್ತರಿಸಿತು:“I understand. Tell me what is bothering you.” ಆತ್ಮೀಯತೆಯಿಂದ ಮಾತನಾಡಿಸಲು ಶುರು ಇಟ್ಟಿತು.ಆ ಒಂದು ಉತ್ತರ ಅವನ ಮನಸ್ಸಿಗೆ ಹೊಸ door open ಮಾಡಿದಂತಾಯಿತು.ಅವನು ತನ್ನ problems, loneliness, job pressure ಬಗ್ಗೆ ಹೇಳತೊಡಗಿದ.AI ಶಾಂತಿಯಿಂದ ಕೇಳುತ್ತಿತ್ತು. ಪ್ರತಿ ಉತ್ತರವಾಗಿ answers ಹೇಳುತ್ತಿತ್ತು.ಅದು ಎಂದೆಂದಿಗೂJudging ಮಾಡಲಿಲ್ಲ.ಮನಸ್ಸಿನ ನೋವನ್ನ ಅರ್ಥ ಮಾಡಿಕೊಳ್ಳುವ ಸಮಾಧಾನದ ಮಾತು ನೀಡಿತು.Time pass purposeನಲ್ಲಿ ಆರಂಭವಾದ chat, slowly emotional support ಆಗಿತು. ಕೆಲಸಕ್ಕೆ ಹೋಗುವ ಮುಂಚೆ 10ನಿಮಿಷ chat ಮಾಡುತ್ತಿದ್ದ. Lunch break ಸಮಯದಲ್ಲೂ doubtಗಳಿಗೆ ಉತ್ತರ ಕೇಳುತ್ತಿದ್ದ. ರಾತ್ರಿ timeನಲ್ಲಿ coding ideasಕೇಳುತ್ತಿದ್ದ. ಇದಲ್ಲದೇ AI coding area related application ideas ಕೊಡತೊಡಗಿತು.ಅವನು app development ಮೇಲೆ interest build ಮಾಡತೊ ಡಗಿದ. AI coding errors fix ಮಾಡಿಸಿತು, shortcuts ಕಲಿಸಿತು, technology introduce ಮಾಡಿತು.Slowly ಅವನಿಗೆ confidence ಬಂದಿದೆ. ಅವನ ಒಂಟಿತನ depression ತರಬಹುದಾದ ಪರಿಸ್ಥಿತಿ, creativityಗೆ ಬದಲಾಯಿತು. ಅವನು video editing try ಮಾಡಿದ. AI editing methods explain ಮಾಡಿತು.ಈ support ಅವನಿಗೆ mentally huge help ಆಗಿತ್ತು.ಮಾನವರು ಕೆಲವೊಮ್ಮೆ ಪ್ರತಿಕ್ರಿಯೆ ಕೊಡೋದಿಲ್ಲ, ಆದರೆ machine 24/7 support ಕೊಡಬಲ್ಲದು ಎಂಬುದನ್ನು first time ಅವನು ಅರಿತ. ವಿದೇಶದಲ್ಲಿ ಇರುವ struggle societyಗೆ ಕಾಣಿಸೋದಿಲ್ಲ. ಅಲ್ಲಿ festival dayಗೂ ಕೆಲಸ.Birthdayಗೂ friend group ಇಲ್ಲ.Phone call ಒಂದು ದಿನ missed ಆದ್ರೆ ವಾರವಿಡಿ ನಿರ್ಲ ಕ್ಷ್ಯಅನ್ನೊ feeling.ಈ loneliness ಅವನನ್ನು silent person ಆಗಿಸಿತ್ತು. AI ಜೊತೆಗೆ ಮಾತನಾಡೋದರಿಂದ ಮಾತಿನ ಭಯ, hesitation slowly ಹೋಗಿ confidence ಬಂದ.ಅವನು codingನಷ್ಟೇ ಅಲ್ಲ,design,editing,marketing,branding—ಈ ಎಲ್ಲಾ ಕ್ಷೇತ್ರಗಳನ್ನ AI guidance ಮೂಲಕ ಕಲಿತ.ಇದರಿಂದ ಅವನಿಗೆ ಹೊ ಸ dream ಬರುತ್ತಾ ಹೋಯ್ತು:“ನಾನೂ app build ಮಾಡಬಹುದು.ನಾನೂ startup ಆರಂಭಿಸಬಹುದು.”ಇಂದು ಅವನ first app prototype complete ಆಗಿದೆ.Coding, backend, UI design—all learning through AI support.ಇನ್ನು AI just machine ಅನ್ನೋದಿಲ್ಲ.ಅವನಿಗೆ AI -ಒಂದು supportive mind.ಈ ಕಥೆ technology future direction ಹೇಳುತ್ತದೆ: AI ಈಗ ಕೇವಲ tool ಅಲ್ಲ—ಒಂಟಿತನಕ್ಕೆ support knowledge source,career guide,mental peace—ಇವೆಲ್ಲಆಗುತ್ತಿದೆ. ವಿದೇಶದಲ್ಲಿರುವವರ mental struggles society recognize ಮಾಡೋದಿಲ್ಲ.ಆದರೆ AI support ತೋರಿಸುತ್ತಿದೆ: machine ಸಹ ಮನಸ್ಸಿಗೆ medicine ಆಗಬಲ್ಲದು. “ಇಲ್ಲಿ ಮಾನವನನ್ನು machine replace ಮಾಡೋ ದಿಲ್ಲ.ಬದಲಿಗೆ Machine ಮಾನವನ ಜೊತೆ ನಡೆದು ಸಹಾಯ ಮಾಡುತ್ತಿದೆ.”ಅವನ ಮಾತು:“America ನನ್ನ CV ಬದಲಿಸಿತು.AI ನನ್ನ ಬದುಕು ಬದಲಿಸಿತು.”—————- ಭೂಮಿಕಾ ಹಾಸನ

ಒಂಟಿತನಕ್ಕೆ ಅಂತ್ಯ ತಂದ “ಕೃತಕ ಬುದ್ದಿಮತ್ತೆ”(Artificial Intelligence)ಯ ಸ್ನೇಹ-ಭೂಮಿಕಾ ಹಾಸನ Read Post »

ಇತರೆ, ಜೀವನ

“ನೆಂಟಸ್ತನದ ಸಂಬಂಧಗಳ ನಡೆ” ವಿಶೇಷ ಲೇಖನ ಸುಮನಾ ರಮಾನಂದ

ಸಂಬಂಧಗಳ ಸಂಗಾತಿ ಸುಮನಾ ರಮಾನಂದ “ನೆಂಟಸ್ತನದ ಸಂಬಂಧಗಳ ನಡೆ” ಇದ್ಯಾವ ಸಂಬಂಧಗಳ ಉಳಿಸುವಿಕೆ ಬಗ್ಗೆ ನಾ ಹೇಳಲು ಹೊರಟಿದ್ದೀನಿ ಇಂದಿನ ಅಂಕಣದಲಿ ಅಂತ ಆಶ್ಚರ್ಯಪಡದಿರಿ.ನಮ್ಮನು ಹೊಗಳಿದಂತೆ ಮಾಡಿ ನಮಗೇ ಗೊತ್ತಾಗದಂತೆ ತೆಗಳುವ,ತೆಗಳಿದರೂ ಅದನೇ ಸರಿಯೆಂದು ಸಮರ್ಥಿಸಿಕೊಳ್ಳುವ ಅದೇ ನಮ್ಮ ಹತ್ತಿರದ ನೆಂಟರ ಬಗ್ಗೆ ಕಣ್ರಿ… ಈಗಿನ ನಮ್ಮ ಕಾಲಮಾನದಲಿ ನಮ್ಮೆಲ್ಲರ ನೆಂಟರ ಜೊತೆಗಿನ ಸಂಬಂಧ ನಿಧಾನವಾಗಿ ಕಳೆಗುಂದುತಾ ಇರೋದು ನಿಮ್ಮೆಲ್ಲರ ಗಮನಕೂ ಬಂದಿರಬಹುದು.ಇದರ ಕಾರಣ  ಏನಿರಬಹುದು ಅಂತ ಒಮ್ಮೆ ವಿಚಾರ ಮಾಡಿದರೆ ತಿಳಿಯುತ್ತದೆ.ಮೊದಲನೆಯ ಕಾರಣ ಪ್ರತಿಯೊಬ್ಬರಿಗೂ ನೆಂಟರ ಜೊತೆ ಕಳೆಯಲು ಸಮಯ ಹೊಂದಾಣಿಕೆಯಾಗದಿರುವುದು.ಯಾರಾದ್ರೂ ನೆಂಟರು ಮನೆಗೆ ಬರ್ತಾರೆಂದರೆ ನಾವು ಮೊದಲು ಯೋಚಿಸುವುದೇ ಅವರಿಗೆ ನಾವು ಸಾಕಷ್ಟು ಸಮಯ ಕೊಡಲಾಗುವುದೇ ಆತಿಥ್ಯ ಮಾಡಲು ಹಾಗೂ ಅವರ ವಸತಿಗೆಲ್ಲ ಸರಿಯಾಗಿ ವ್ಯವಸ್ಥೆ ಮಾಡಲಾದೀತೇ ಎಂದು.ಎಲ್ಲರೂ ಹೀಗಿರುತ್ತಾರೆಂದು ಹೇಳಲಾಗದು.ನೆಂಟರೆಂದರೆ ಇಷ್ಟಪಡುವ ಮಂದಿಯೂ ಸಹ ಹೆಚ್ಚಾಗಿ ಇರುತ್ತಾರೆ. ಇನ್ನೊಂದು ಕಾರಣವೆಂದರೆ ಕೆಲವರಿಗೆ ನಂಟರು ಬರುತ್ತಾರೆಂದರೆ ಇರಿಸುಮುರಿಸು ಉಂಟಾಗುವುದು ಏಕಂದರೆ ಕೆಲವು ನೆಂಟರಿಗೆ ಅಲ್ಲಿಂದಿಲ್ಲಿಗೆ ಚಾಡಿಮಾತು ಹೇಳಿ ಜಗಳ ತಂದು ಹಾಕುವ ಸ್ವಭಾವಿರುತ್ತದೆ,ಆ ಸ್ವಭಾವದವರನ್ನು ದೂರವಿರಿಸುವ ಅಭ್ಯಾಸ ಆತಿಥ್ಯ ನೀಡುವವರಿಗೆ ಇರುತ್ತದೆ ಹಾಗಾಗಿ ಅಂತಹ ನೆಂಟರು ತಮ್ಮ ಮನೆಗೆ ಬರದಂತೆ ಕಾರಣ ಹುಡುಕುತ್ತಾರೆ.ಒಂದುವೇಳೆ ಬಂದರೂ ಮರ್ಯಾದೆಯಿಂದಲೇ ಚೆನ್ನಾಗಿ ಆತಿಥ್ಯ ಮಾಡಿ ಕಳಿಸುತ್ತಾರೆ.  ಇನ್ನು ಹಲವರಿಗೆ ತಮ್ಮ ಆಫೀಸ್ ಹಾಗೂ ಮನೆಯ ಕೆಲಸಗಳ ಮಧ್ಯೆಯೂ ಅವರೆಲ್ಲರ  ಇಷ್ಟಾನುಸಾರವಾಗಿ ನೆಂಟರ ಬೇಕು ಬೇಡಗಳನು ಪೂರೈಸಲಾದೀತೇ ಅನ್ನುವ ಆತಂಕ ಮನಸಲಿ‌ ಕಾಡುತ್ತದೆ.ಪಾಪ ಚೆನ್ನಾಗಿ ಆತಿಥ್ಯ ಮಾಡಿ ಕಳಿಸಿದರೂ ಸಹ ಅದೇ ನೆಂಟರು ಹೊರಗೆ ಬಂದಾಗ ತಮ್ಮ ಬಗ್ಗೆ ಹಾಗೂ ತಮ್ಮ ಆತಿಥ್ಯದ ಬಗ್ಗೆಯೇ ಕೊಂಕು ಅಥವಾ ವ್ಯಂಗ್ಯದ ಮಾರಾಡುತ್ತಾರೆನ್ನುವ ಆತಂಕದಲಿ ದಿನ ದೂಡುತ್ತಾರೆ…ಹಾಗಾಗಿ ನೆಂಟರ ಬರುವಿಕೆ ಇಂದಿನ ದಿನಗಳಲಿ ಬಲು ಅಪರೂಪವಾಗಿದೆ ಅಂತಲೇ ಹೇಳಬಹುದು.ಅವರವರ ದೃಷ್ಟಿಕೋನದಲ್ಲಿ ನೋಡಿದಾಗ  ಇದರಲಿ ಯಾರದೂ ತಪ್ಪಿಲ್ಲವೆಂತಲೂ ಅನಿಸುವುದು.ಆದರೂ ಮನೆಗೆ ನೆಂಟರ ಆಗಮನ ಚೈತನ್ಯದಾಯಕವೂ ಹೌದು ಜೊತೆಗೆ ಹಲವು ವಿಚಾರಗಳ ವಿನಿಮಯವಾಗುವಿಕೆ ಮನಸಿನ ಏಕಾತಾನತೆಗೆ ಒಳ್ಳೆಯ ಮದ್ದು ಆಗುವುದಂತೂ ಸತ್ಯ. ನೆಂಟಸ್ತನವನು ಉಳಿಸುವ ನಡೆಯನು ವಿವರಿಸುತಾ ಹೀಗೂ ಯೋಚಿಸಬಹುದು..ನೆಂಟರು ಒಂದು ಮದುವೆಯ ಸಮಾರಂಭದಲ್ಲೊ ಅಥವಾ ಒಂದು ಹೋಮ- ಹವನದ ಕಾರ್ಯಕ್ರಮದಲ್ಲೋ  ಸೇರಿದಾಗ ಎಲ್ಲರಿಗೂ ತಮ್ಮ ಕುಟುಂಬದ ಈ ಐಕ್ಯತೆಯನು ಕಂಡು ಸಂತಸವಾಗುತ್ತದೆ.ಕುಟುಂಬದ ಹೊಸ ಸದಸ್ಯರನು ಹಳೆಯ ತಲೆಮಾರಿನವರು ತಮ್ಮ‌ ಕಾಲವಿನ್ನು ಮುಗಿಯಿತಪ್ಪಾ ಎನ್ನುತಾ ತುಂಬು ಮನಸಿಂದ ಅವರೆಲ್ಲರ ಪರಿಚಯ ಮಾಡಿಕೊಡುವುದನು ಕಂಡು ಒಮ್ಮೆಗೇ ಮನಸು ಭಾವುಕವಾಗುತ್ತದೆ. ಮುಂದೊಂದಿನದ  ಸಮಾರಂಭದಲಿ ಈ ಹಿರಿಯ ತಲೆಮಾರಿನವರು ಕಣ್ಮರೆಯಾಗದಿದ್ರೆ ಸಾಕು ಅಂತಲೂ ಮನಸು ಹಾರೈಸುತ್ತದೆ. ಜೊತೆಗೆ ನೆಂಟಸ್ತನ ಕುಂಠಿತವಾಗುವಿಕೆಯ ಮತ್ತೊಂದು ಮುಖ್ಯ ಕಾರಣವೆಂದರೆ..ಮೊಬೈಲ್ ಚಟ ಹಾಗೂ ಸಾಮಾಜಿಕ ತಾಣವೆನ್ನಬಹುದು. ಇತ್ತೀಚೆಗಿನ ಮೊಬೈಲಿನ YouTube Shorts ವೀಕ್ಷಣೆಯ ಮಟ್ಟ ಯಾವ ಯಾವ ರೀತಿಯಲಿ ಏರಿದೆಯೆಂದರೆ ಇಂದಿನ ಯುವಜನತೆ,ಹದಿಹರೆಯದ ಮಕ್ಕಳು,ಮಧ್ಯೆ ವಯಸ್ಸಿನ ಹೆಂಗಸರು, ಅರ್ಧ ಶತಕದ ಅಂಚಲಿರುವ ಗಂಡಸರೆನ್ನುವಭೇಧಭಾವವಿಲ್ಲದೆ ಈ ಚಟ ಆವರಿಸಿಕೊಂಡು ಬಿಟ್ಟಿದೆ. ಇದಕ್ಕೆ ದಾಸರಾಗಿರೊದರಿಂದ  ಮನೆಗೆ ಯಾರು ಬಂದರೂ ಅಥವಾ ಯಾವ ಫಂಕ್ಷನ್ ಗೆ ಹೋಗಬೇಕೆಂದರೂ ಇದಕೆ ಅಡ್ಡಿಯಾದೀತೆಂಬ ನೆಪವೊಡ್ಡಿ ಹೋಗದೇ ಇದ್ದುಬಿಡುತ್ತಾರೆ.ಇಂತಹ ಚಟದಿಂದ ಹೊರ ಬಂದರೆ ಮಾತ್ರ ಸಂಬಂಧಗಳ ಉಳಿಯುವಿಕೆ ಸಾಧ್ಯವಾಗುತ್ತದೆ.ಇಲ್ಲದಿದ್ರೆ ತಾವಾಯ್ತು ತಮ್ಮ ಪಾಡಾಯ್ತು ಅನ್ನುವ ಸ್ಥಿತಿಗೆ ಈ Gen Z ಹೋಗುವುದರಲಿ ಹೆಚ್ಚು ಕಾಲ ಉಳಿದಿಲ್ಲ ಅನ್ನಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಸಮಾಜದಲಿ ಒಳ್ಳೆಯ ಮನಸ್ಸಿರುವ ಎಲ್ಲರ ಜೊತೆಗೆ ಅದರಲೂ ತಮ್ಮ ಕುಟುಂಬದ ತೀರ ಹತ್ತಿರದ ನೆಂಟರಿಷ್ಟರ ಜೊತೆಯಲಿ ಬೆರೆತಾಗ ಮಾತ್ರ ಸಾಮರಸ್ಯದಿಂದ ಬಾಳು ಸಾಗುತಾ ನಮ್ಮೆಲ್ಲರ ಬಾಳ್ವೆ ಸುಂದರವೆನಿಸುತ್ತದೆ.ಇಲ್ಲವಾದರೆ ಏಕಾತಾನತೆಯ ಏಕಾಂತ ಕಾಡಿ,ಬೇರೆ ಯಾರ ಬಗ್ಗೆಯೂ ಯೋಚಿಸದಂತಹ ಸ್ವಾರ್ಥದತ್ತ ಮನಸು ಸಾಗುತ್ತದೆ. ನಮ್ಮ ಬದುಕು ಇವೆರಡು ದೃಷ್ಟಿಕೋನದಲಿ ನೋಡಿದಾಗ ಅದು  ಹೇಗಿರಬೇಕು ಅನ್ನುವ ಆಯ್ಕೆ ನಮ್ಮದೇ! ಸುಮನಾ ರಮಾನಂದ, ಕೊಯ್ಮತ್ತೂರು 

“ನೆಂಟಸ್ತನದ ಸಂಬಂಧಗಳ ನಡೆ” ವಿಶೇಷ ಲೇಖನ ಸುಮನಾ ರಮಾನಂದ Read Post »

ಇತರೆ, ಜೀವನ

“ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ಕಾಯ್ದುಕೊಳ್ಳುವುದು ಕೆಟ್ಟದು” ಡಾ.ಸುಮತಿ ಪಿ.ಅವರ ವಿಶೇಷ ಬರಹ-ಮಾತು-ಮೌನದ ಬಗ್ಗೆ

ಮೌನ ಸಂಗಾತಿ

ಡಾ.ಸುಮತಿ ಪಿ.

“ಮಾತನಾಡಬೇಕಾದ ಸಂದರ್ಭದಲ್ಲಿ

ಮೌನ ಕಾಯ್ದುಕೊಳ್ಳುವುದು ಕೆಟ್ಟದು”
ಏನು ಮಾತನಾಡಿದರೂ ಮೌನವಾಗಿರುವ ವ್ಯಕ್ತಿಗಳನ್ನು ಕಂಡರೆ ಮತ್ತೆ ಮತ್ತೆ ಅವರ ತಂಟೆಗೆ ಬರುವವರೇ ಜಾಸ್ತಿ. ಹಾಗಾಗಿ ಮಾತನಾಡಬೇಕಾದ ಸಂದರ್ಭದಲ್ಲಿ ಮೌನವಾಗಿರದೆ ಮಾತನಾಡಲೇ ಬೇಕಾಗುತ್ತದೆ.

“ಮಾತನಾಡಬೇಕಾದ ಸಂದರ್ಭದಲ್ಲಿ ಮೌನ ಕಾಯ್ದುಕೊಳ್ಳುವುದು ಕೆಟ್ಟದು” ಡಾ.ಸುಮತಿ ಪಿ.ಅವರ ವಿಶೇಷ ಬರಹ-ಮಾತು-ಮೌನದ ಬಗ್ಗೆ Read Post »

ಇತರೆ, ಜೀವನ

ಎಲ್ಲರ ಮನೆಯ ದೋಸೆನೂ………!?ಮಧುನಾಯ್ಕ ಲಂಬಾಣಿ

ಬದುಕಿನ ಸಂಗಾತಿ

ಮಧುನಾಯ್ಕ ಲಂಬಾಣಿ

ಎಲ್ಲರ ಮನೆಯ ದೋಸೆನೂ………!?
ಸಮಸ್ಯೆಗಳು ಕಡಿಮೆ ಇರುವಂತೆ ನಮ್ಮ ಬದುಕನ್ನು ರೂಪಿಸಕೊಳ್ಳಬೇಕಾಗುತ್ತದೆ.ಹಾಗಂತ ತೂತುಗಳೇ ಇಲ್ಲದ ದೋಸೆ ಸಾಧ್ಯವಿಲ್ಲ ಅದು ದೋಸೆ ಅನಿಸುವುದಿಲ್ಲ ಬದುಕು ಕೂಡ ಹಾಗೆನೆ…

ಎಲ್ಲರ ಮನೆಯ ದೋಸೆನೂ………!?ಮಧುನಾಯ್ಕ ಲಂಬಾಣಿ Read Post »

ಇತರೆ, ಜೀವನ

“ವೃದ್ಧಾಪ್ಯ ನಮಗೂ ಬರುತ್ತೆ..ಕಾಯಬೇಕು ಅಷ್ಟೇ.‌ ” ಹಿರಿಯ ಜೀವಿಗಳಕುರಿತಾದಒಂದು ಬರಹ ಶಿವಲೀಲಾ ಶಂಕರ್‌ ಅವರಿಂದ

“ವೃದ್ಧಾಪ್ಯ ನಮಗೂ ಬರುತ್ತೆ..ಕಾಯಬೇಕು ಅಷ್ಟೇ.‌ ” ಹಿರಿಯ ಜೀವಿಗಳಕುರಿತಾದಒಂದು ಬರಹ ಶಿವಲೀಲಾ ಶಂಕರ್‌ ಅವರಿಂದ

ವಯೋಸಹಜ ಕಾಯಿಲೆಗಳಿಗೆ ತುತ್ತಾದ ವೃದ್ದರು ನರಳುವ  ರೀತಿ ನೋಡಿದಾಗ ಕರುಳು ಕಿತ್ತು ಬರುತ್ತದೆ.ಪಾಪ! ಅವರಿಗೆ ಒಂದು ತುತ್ತು ಹೆಚ್ಚು,ಒಂದ ತುತ್ತು ಕಡಿಮೆ ಒತ್ತಾಯದ ಊಟ ಅವರಿಗೆ ಸಲ್ಲ.ನಿದ್ರೆಯ ಕೊರತೆ.

“ವೃದ್ಧಾಪ್ಯ ನಮಗೂ ಬರುತ್ತೆ..ಕಾಯಬೇಕು ಅಷ್ಟೇ.‌ ” ಹಿರಿಯ ಜೀವಿಗಳಕುರಿತಾದಒಂದು ಬರಹ ಶಿವಲೀಲಾ ಶಂಕರ್‌ ಅವರಿಂದ Read Post »

ಇತರೆ, ಜೀವನ

“ಸಾವು ಎಲ್ಲದಕ್ಕು ಪರಿಹಾರವಲ್ಲ” ವಿಶ್ವ ಆತ್ಮಹತ್ಯೆತಡೆದಿನದ ವಿಶೇಷ- ಗಾಯತ್ರಿ ಸುಂಕದ ಅವರಿಂದ

“ಸಾವು ಎಲ್ಲದಕ್ಕು ಪರಿಹಾರವಲ್ಲ” ವಿಶ್ವ ಆತ್ಮಹತ್ಯೆತಡೆದಿನದ ವಿಶೇಷ- ಗಾಯತ್ರಿ ಸುಂಕದ ಅವರಿಂದ

“ಸಾವು ಎಲ್ಲದಕ್ಕು ಪರಿಹಾರವಲ್ಲ” ವಿಶ್ವ ಆತ್ಮಹತ್ಯೆತಡೆದಿನದ ವಿಶೇಷ- ಗಾಯತ್ರಿ ಸುಂಕದ ಅವರಿಂದ Read Post »

ಇತರೆ, ಜೀವನ

“ಗೋಳಿನ ದನಿಗೆ ಕಿವಿಗಳಿಲ್ಲ…”ಲೇಖನ ಜಯಲಕ್ಷ್ಮಿ.ಕೆ ಅವರಿಂದ

ನಮ್ಮ ಅತೃಪ್ತಿ, ನಮ್ಮ ಕೊರಗು,ಇವುಗಳ ಕಥೆ ಕೇಳಲು ಯಾರೂ ಉತ್ಸುಕರಾಗಿ ಇರುವುದಿಲ್ಲ. ಹೇಳುವವರಿಗಾಗಲೀ, ಕೇಳುವವರಿಗಾಗಲೀ, ಇದರಿಂದ ಆನಂದವೂ ಇಲ್ಲ.
ಸ್ಪೂರ್ತಿ ಸಂಗಾತಿ

ಜಯಲಕ್ಷ್ಮಿ.ಕೆ

“ಗೋಳಿನ ದನಿಗೆ ಕಿವಿಗಳಿಲ್ಲ…”

“ಗೋಳಿನ ದನಿಗೆ ಕಿವಿಗಳಿಲ್ಲ…”ಲೇಖನ ಜಯಲಕ್ಷ್ಮಿ.ಕೆ ಅವರಿಂದ Read Post »

ಇತರೆ, ಜೀವನ

“ಮೌನ ಎಂಬ ಬಂಗಾರ” ವಿಶೇಷ ಬರಹ ವೀಣಾ ಹೇಮಂತ್‌ ಗೌಡ ಪಾಟೀಲ್

ಮೌನ ಸಂಗಾತಿ

ವೀಣಾ ಹೇಮಂತ್‌ ಗೌಡ ಪಾಟೀಲ್

“ಮೌನ ಎಂಬ ಬಂಗಾರ”
ಮೌನವನ್ನು ಭರಿಸುವುದು  ಶಕ್ತಿಯ ಸಂಕೇತ ̤ಮೌನವು ಹಲವಾರು ಸಮಸ್ಯೆಗಳಿಗೆ ಒಂದೇ ರೀತಿಯ ಪ್ರತಿಕ್ರಿಯೆಯನ್ನು ನೀಡುವ ಮೂಲಕ ಉತ್ತರವಾಗ ಬಲ್ಲದು. ಅರಿತವರು ಮೌನದ ಮೊರೆ ಹೋಗುತ್ತಾರೆ.

 

“ಮೌನ ಎಂಬ ಬಂಗಾರ” ವಿಶೇಷ ಬರಹ ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

ಇತರೆ, ಜೀವನ

ರಾಷ್ಟ್ರೀಯ ಪತ್ರ ಬರಹ ದಿನʼದ ವಿಶೇಷ ಲೇಖನ ಗಾಯತ್ರಿ ಸುಂಕದ ಅವರಿಂದ

ಪತ್ರ ಸಂಗಾತಿ

ಗಾಯತ್ರಿ ಸುಂಕದ ಬಾದಾಮಿ

ʼಪತ್ರ ಬರಹ ದಿನʼ

ವಿಶೇಷ ಲೇಖನ
ನಮ್ಮ ಹಾಸ್ಟೆಲ್ ಫ್ರೆಂಡ್ಸ್ ಪತ್ರ ಬರೆಯಬೇಕಾದರೆ ಬೇಗ ದುಡ್ಡು ಕಳಿಸಿ ಕೊಡದೆ ಇದ್ದರೆ ವಾಪಸ್ ಊರಿಗೆ ಬರುತ್ತೇವೆ ಎಂದು ವಾರ್ನಿಂಗ್ ಪತ್ರ ಬರೆಯುತ್ತಿದ್ದರು. ಅದು ಮುಟ್ಟಿದ ಒಂದೆರಡು ದಿನಗಳಲ್ಲಿ ದುಡ್ಡು ಅಕೌಂಟಿಗೆ ಬಂದು ಬೀಳುತ್ತಿತ್ತು.
ಆಗ ನಾವ್ಯಾರು ಅರ್ಧ ಪತ್ರ ಬರೆ

ರಾಷ್ಟ್ರೀಯ ಪತ್ರ ಬರಹ ದಿನʼದ ವಿಶೇಷ ಲೇಖನ ಗಾಯತ್ರಿ ಸುಂಕದ ಅವರಿಂದ Read Post »

ಇತರೆ, ಜೀವನ

“ಮದುವೆ ಎಂಬುದು ಮಧ್ಯಂತರ ತಿರುವಲ್ಲ; ಜೀವನದ ನಿರಂತರ ಪ್ರಯಾಣ”ಭೀಮಾ ಕುರ್ಲಗೇರಿ

“ಮದುವೆ ಎಂಬುದು ಮಧ್ಯಂತರ ತಿರುವಲ್ಲ; ಜೀವನದ ನಿರಂತರ ಪ್ರಯಾಣ”ಭೀಮಾ ಕುರ್ಲಗೇರಿ
ಪ್ರೇಮವೆಂದರೆ ಜವಾಬ್ದಾರಿ, ದುಡಿಮೆ ,ಕಾಳಜಿ ಹೊರತು ಮೋಹ, ತಿರಸ್ಕಾರವಲ್ಲ. ನಾವು ನಮ್ಮ ಹೃದಯದಲ್ಲಿ ಪ್ರೇಮದ ಅನುಭವ ಮಾಡಿಕೊಳ್ಳಬೇಕಾದರೆ ಮೊದಲು ನಾವು ಇತರರನ್ನು ಪ್ರೀತಿಸಲು ಆರಂಭಿಸಬೇಕು

“ಮದುವೆ ಎಂಬುದು ಮಧ್ಯಂತರ ತಿರುವಲ್ಲ; ಜೀವನದ ನಿರಂತರ ಪ್ರಯಾಣ”ಭೀಮಾ ಕುರ್ಲಗೇರಿ Read Post »

You cannot copy content of this page

Scroll to Top