ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

“ಮುಂದೆ ಅಪರೂಪವಾಗ ಬಹುದಾದ ಸೈಕಲ್”ವಿಶೇಷಲೇಖನ ಎನ್‌ ವಿ ರಮೇಶ್

ಸೈಕಲ್‌ ಸಂಗಾತಿ ಎನ್‌ ವಿ ರಮೇಶ್ “ಮುಂದೆ ಅಪರೂಪವಾಗ ಬಹುದಾದ ಸೈಕಲ್” ಸನಿಹದಲ್ಲೇ ಮುಂದೊಂದು ಕಾಲ ಬರಬಹುದು ಮನೆಯ ಗೋಡೆಯ ಮೇಲಿನ ಚಿತ್ರಗಳಲ್ಲಿ ಮಾತ್ರ ಕಾಣುವ ಸೈಕಲ್ಲನ್ನು ಮುಂದಿನ ತಲೆಮಾರಿನ ಮಗು ಏನೋ ವಿಚಿತ್ರ ವಸ್ತು ಎಂಬಂತೆ ಕಾಣಬಹುದು. ಏಕೆಂದರೆ ಹಿಂದೆ ಎಲ್ಲರೂ ಸಂಚರಿಸುತ್ತಿದ್ದ, ಬರಬರುತ್ತಾ, ಕೆಲವರು ಮಾತ್ರ ಸವಾರಿ ಮಾಡುತ್ತಿದ್ದ ಸೈಕಲ್ ಇಂದು ಕೇವಲ ಬಡವರು, ಶ್ರಮಜೀವಿಗಳು, ಕ್ರೀಡಾಪಟುಗಳು, ಬೊಜ್ಜು ಕರಗಿಸಲು ಹಲವರು ಬಳಸುತ್ತಿರುವ ವಾಹನವಾಗಿದೆ.ನಾನು ನೀವೆಲ್ಲಾ ಚಿಕ್ಕಂದಿನಲ್ಲಿ, ಅಪ್ಪ, ಅಣ್ಣ, ಅವರ ಗೆಳೆಯರು ಸೈಕಲ್ ಓಡಿಸುತ್ತಿದ್ದುದ್ದನ್ನು ಬೆರಗಾಗಿ ಕಂಡು, ನಾನು ಎಂದು ಸೈಕಲ್ ಓಡಿಸುತ್ತೇನೋ ಎಂದು ತುಂಬಾ ಆಸೆ, ಕಾತುರಗಳಿಂದ ಕಾಯುತ್ತಿದ್ದ ಆ ದಿನಗಳು ನಿಮಗೆ ನೆನಪಿದೆಯೇ? ಅಣ್ಣ, ಅಪ್ಪ, ಮಾವ, ಚಿಕ್ಕಪ್ಪ, ಸೈಕಲ್ಲಿನಲ್ಲಿ ಹೊರಟರೆ, ಆಗಾಗ ಮಕ್ಕಳಾದ ನಮ್ಮನ್ನು ಸೈಕಲ್ ಬಾರ್ ಮೇಲೆ (ಮುಂದುಗಡೆ) ಅಥವಾ ಕ್ಯಾರಿಯರ್ (ಸೈಕಲ್ ಹಿಂಭಾಗ) ಕೂರಿಸಿಕೊಂಡು ಹೋಗುವ ಗಳಿಗೆಗಾಗಿ ಅತ್ಯಂತ ಆಸಕ್ತಿ, ಕುತೂಹಲಗಳಿಂದ ಕಣ್ಣು ದೊಡ್ಡದಾಗಿ ತೆಗೆದು ಕಾಯುತ್ತಿದ್ದ ಆ ನಮ್ಮ ನಿಮ್ಮ ಬಾಲ್ಯದ ನೆನಪುಗಳು ಈಗ ಫೋಟೋದಲ್ಲಿ ಮಾತ್ರ ನೋಡ ಸಿಗುವಂತಹ ದೃಶ್ಯವಾಗಿದೆ. ಕಾಲ ಬದಲಾದಂತೆ ಈಗ ಬಹಳ ಸ್ಥಳಗಳಲ್ಲಿ ನಮ್ಮ ಜೀವನದಿಂದ ಮಾಯವಾಗಿದೆ. ಹಿಂದೆ ಇಂದಿನ ಅನೇಕ ವಾಹನಗಳು ರಸ್ತೆಗೆ ಬಂದಿರದ ಕಾಲದಲ್ಲಿ, ಸೈಕಲ್ ಎಲ್ಲ ಜನರ ದಿನನಿತ್ಯದ ಆವಶ್ಯಕತೆಯ ವಸ್ತುವಾಗಿತ್ತು. ಕಾಲ ಬದಲಾದಂತೆ, ಜನರ ಆಸೆ, ಆಸಕ್ತಿ, ಬಯಕೆ, ಬದಲಾದಂತೆ, ಜನರ ಕೈಯಲ್ಲಿ ಹೆಚ್ಚು ಹೆಚ್ಚು ಹಣ ಕುಣಿದಾಡಿದಂತೆ ಸೈಕಲ್‌ಗೆ ಪರ್ಯಾಯವಾದ ಅನೇಕ ವಾಹನಗಳು ಬಂದಿವೆ. ಸುಮಾರು ಎಪ್ಪತ್ತು ವರ್ಷಗಳ ಕೆಳಗೆ ನನಗೆ ಐದು ವರ್ಷವಾಗಿದ್ದಾಗ, ನಾನು ನನ್ನ ತಂದೆಯ ಸೈಕಲ್ಲಿನ ಮುಂಭಾಗದಲ್ಲಿ ಕುಳಿತು ಹೋಗುತ್ತಿದ್ದಾಗ ಬಲಗೈಗೆ ಸಿಗುತ್ತಿದ್ದ ಸೈಕಲ್ ಬೆಲ್ ಅನ್ನು ಟಣ್ ಟಣ್ ಎಂದು ಬಾರಿಸಿದ್ದು ಈಗಲೂ ನನ್ನ ಕಣ್ಣ ಮುಂದೆ ಕಟ್ಟಿದಂತಿದೆ. ಆ ಕಾಲದಲ್ಲಿ ನಡೆದು ಹೋಗುವವರಿಗಿಂತ, ಬಸ್ಸಿನಲ್ಲಿ ಹೋಗುವವರಿಗಿಂತ ಸೈಕಲ್ ಇಟ್ಟಿದ್ದವರೇ ಸಾಹುಕಾರರು. ಎಂದು ನಮ್ಮ ಆ ಕಾಲದ ಭಾವನೆಯಾಗಿತ್ತು. ಕ್ರಮೇಣ ಕಾಲ ಸರಿದಂತೆ ಸೈಕಲ್ ಹಿನ್ನೆಲೆಗೆ ಹೋಗಿ ನಾನಾ ತರಹದ ವಿವಿಧ ಕಂಪನಿಗಳ ಸ್ಕೂಟರ್, ಬೈಕ್, ಕಾರುಗಳು ಬಂದು ಸೈಕಲ್ ಈಗ ಬೊಜ್ಜು ಇಳಿಸಲು ಜನ ಬಳಸುವ ಒಂದು ಸಾಧನವಾಗಿದೆ. ಕ್ರೀಡಾಪಟುಗಳು ಹಾಗೂ ಶಾರೀರಿಕ ವ್ಯಾಯಾಮ ಬೇಕೆಂದವರು ಇನ್ನೊಮ್ಮೆ ಸೈಕಲ್ಲಿನ ಬೆನ್ನು ಹತ್ತಿದ್ದಾರೆ. ಮಕ್ಕಳಿಗೆ ಮೂರು ಚಕ್ರದ ಸೈಕಲ್‌ಗಳು ಹಿಂದೆ ಜನಪ್ರಿಯವಾಗಿದ್ದವು. ಆಗ ಮದುವೆಯಲ್ಲಿ  ಮಾವ ಬಲುಕಷ್ಟಪಟ್ಟು ಅಳಿಯನಿಗೆ ಕೊಡುತ್ತಿದ್ದ ಸೈಕಲ್ ಉಡುಗೊರೆ ಆಗಿನ ಕಾಲದಲ್ಲಿ ಅದೇ ಬೆಲೆಬಾಳುವ ಕಾಣಿಕೆಯಾಗಿತ್ತು. ಈಗ ಒಮ್ಮೆ ಹೇಳಿ ನೋಡಿ – ಹತ್ತು ವರ್ಷ ದಾಟಿದ ಮಗು ಸಹ, ತನಗೆ ಲೈಸೆನ್ಸ್ ಸಿಗದಿದ್ದರೂ ಬೈಕ್ ಓಡಿಸಲು ಮುಂದೆ ನುಗ್ಗುತ್ತಾನೆ ಹೊರತು ಸೈಕಲ್ ಕಂಡರೆ “ತೂ ಇದರಲ್ಲಿ ನಾನು ಹೋಗುವುದಿಲ್ಲ.” ಟಿ.ವಿಯಲ್ಲಿ, ರಸ್ತೆ ಬೋರ್ಡುಗಳಲ್ಲಿ, ಆಕರ್ಷಕ ಬ್ಯಾನರ್‌ಗಳಲ್ಲಿ, ಸಿನಿಮಾ ಟಾಕೀಸಿನ ಜಾಹೀರಾತಿನಲ್ಲಿ ಕಂಡು ಬರುವ ಚಲನಚಿತ್ರ ನಟ-ನಟಿಯರು, ಖ್ಯಾತ ಕ್ರೀಡಾಪಟುಗಳು, ಬೈಕ್-ಕಾರ್ ಓಡಿಸುವ ರೋಲ್ ಮಾಡಲ್‌ಗಳು ಇವರನ್ನು ಕಂಡು ಮರುಳಾಗಿ, ತಾವು ಯಾವಾಗ ಲಕ್ಷ ಲಕ್ಷ ರೂಪಾಯಿ ಕೊಟ್ಟು ಇಂತಹ ಬೈಕ್ ಕೊಂಡು ಸ್ನೇಹಿತ ಅಥವಾ ಸ್ನೇಹಿತೆ, ಪ್ರಿಯತಮ-ಪ್ರಿಯತಮೆಯೊಂದಿಗೆ ಜಿಗಿದು, ಹಾರಿ, ಓವರ್ ಸ್ಪೀಡಿನಲ್ಲಿ ಯರ‍್ಯಾರಿಗೋ, ಯಾವ್ಯಾವುದಕ್ಕೋ, ಡಿಕ್ಕಿ ಹೊಡೆಯುವ ವೇಗದಲ್ಲಿ ಹಾರುತ್ತೇವೆಯೋ ಎಂಬ ಭ್ರಮಾ ಲೋಕದಲ್ಲಿದ್ದಾರೆ. ಜೇಬಿನಲ್ಲಿ ದುಡ್ಡು ಇಲ್ಲದಿದ್ದರೂ. ಓದು, ಕೆಲಸ, ಇಲ್ಲದಿದ್ದರೂ ಬೈಕ್-ಕಾರುಗಳ ಹಗಲು ಕನಸು ಕಾಣುವ ಕನಸುಗಾರರ ಪ್ರಪಂಚ ಇಂದು ಎಲ್ಲೆಡೆ ಇದೆ. ವಿಶ್ವದಲ್ಲಿ ಒಂದೆಡೆ ಹೆಚ್ಚುತ್ತಿರುವ ಜನಸಂಖ್ಯೆಯ ಅಪಾರ ಬೇಡಿಕೆ, ಪೂರೈಸಲಾಗದ ಬೇಡಿಕೆ, ಕಂಡು ಬರುತ್ತಿದೆ. ಅದರಲ್ಲೂ ಈಗ ವಿಶ್ವದಲ್ಲಿ ಹಲವಾರು ತಿಂಗಳುಗಳಿAದ ನಡೆದಿರುವ ಯುದ್ಧ, ವಿವಿಧ ದೇಶಗಳ ಮಧ್ಯದ ಸಂಘರ್ಷ, ನಾ ಹೆಚ್ಚು ನನ್ನ ಮಾತು ಕೇಳು, ಇದೇ ನನ್ನ ಮಾತು ನಡೆಯಬೇಕು, ಕೇಳದಿದ್ದರೇ ಆಕ್ರಮಣ. ಈ ರೀತಿ ಪರಸ್ಪರ ಹೊಂದಾಣಿಕೆ ಇಲ್ಲದೇ, ತಿಂಗಳಾನುಗಟ್ಟಲೆ ನಡೆದ ಯುದ್ಧ, ಪ್ರತಿಕ್ಷಣ ಏನಾಗುವುದೋ ಎಂಬ ಆತಂಕ, ಭಯ ನಮ್ಮನ್ನೆಲ್ಲಾ ಆವರಿಸಿದೆ. ನಮ್ಮ ದೇಶದಲ್ಲಿ ವಿವಿಧ ಮೂಲಗಳಿಂದ ಉತ್ಪಾದನೆಯಾಗುವ ಇಂಧನ ತೈಲಗಳ ಪೂರೈಕೆಯ ಸಾಮರ್ಥ್ಯ, ಈ ದೇಶದಲ್ಲಿ ಲಭ್ಯವಿರುವ ಇಂಧನ ಇವುಗಳು, ಈ ದೇಶದಲ್ಲಿಯ ಮಿತಿಮೀರಿದ ಬೇಡಿಕೆಯ ಇಂಧನ ಪೂರೈಕೆಗೆ ದೊಡ್ಡ ಜನಸಂಖ್ಯೆಯ ದೊಡ್ಡ ಬೇಡಿಕೆ, ಪೂರೈಸಲಾಗದ, ಅತ್ಯಂತ ಕಷ್ಟದಿಂದ ಪೂರೈಸಬೇಕಾದ ಸ್ಥಿತಿಗೆ ಒಂದು ದೊಡ್ಡ ಚಾಲೆಂಜ್ ಅಥವಾ ಆಹ್ವಾನವಾಗಿದೆ. ನಮ್ಮ ದೇಶದ ಪ್ರಧಾನ ಮಂತ್ರಿಗಳು, ತೈಲ ಇಂಧನ ಪೂರೈಸುವ ಕಂಪನಿಗಳು, ಇದಕ್ಕೆ ಸಂಬAಧಿಸಿದ ಕೇಂದ್ರ ಸರ್ಕಾರದ ಇಲಾಖೆಗಳು ಹಗಲೂ ರಾತ್ರಿ ಪ್ರಯತ್ನಿಸಿದರೂ ಸಂಪೂರ್ಣ ಬೇಡಿಕೆ ಬಯಸಿದ ಕ್ಷಣದಲ್ಲಿ ಕೆಲವು ಕಡೆಗಳಲ್ಲಿ ಸಿಗುತ್ತಿಲ್ಲ. ಆಗ ಅನೇಕ ಸಾಮಾನ್ಯ ಜನ ಸರ್ಕಾರವನ್ನು ಟೀಕಿಸುತ್ತಾರೆ. ಆದರೆ ೯೯% ಪ್ರತಿಶತ ೯೯ ಜನ ಪರ್ಯಾಯ ಮಾರ್ಗಗಳನ್ನು ಬಳಸಲು ಮನಸಾರೆ ಪ್ರಯತ್ನ ಮಾಡುತ್ತಿಲ್ಲ. ವ್ಯಕ್ತಿಗಳು ತಮ್ಮ ಕುಟುಂಬದಲ್ಲೀಯ ಹಣಕಾಸು ಸೇರಿದಂತೆ ವಿವಿಧ ವಸ್ತುಗಳ ಕೊರತೆಯಾದಾಗ ಬಹಳಷ್ಟು ಬಾರಿ ಇದ್ದುದ್ದಕ್ಕೇ, ಇದ್ದಷ್ಟಕ್ಕೇ ಸುಲಭವಾಗಿ ಹೊಂದಿಕೊಳ್ಳುತ್ತಾರೆ. ಆದರೆ ದೇಶದಲ್ಲಿ ಇಂಧನ ಸಮಸ್ಯೆಯಾದಾಗ ಅದಕ್ಕೆ ತಕ್ಷಣ ಹೊಂದಿಕೊಳ್ಳಲು ನಿರಾಕರಿಸುತ್ತಾರೆ. ಬಹುಶಃ ಅದಕ್ಕೇ ಏನೋ, ಪ್ರಕೃತಿ ಮೌನವಾಗಿ ಗಹಗಹಿಸಿ ನಗುತ್ತಾ “ ನನ್ನ ಮಕ್ಕಳೇ, ನೀವು ಹೀಗೆಯೇ ಜೀವನ ಕೇವಲ ಮೋಜು ಮಸ್ತಿ ಎಂದು ತಿಳಿದುಕೊಂಡು ಭೂಮಿಯ ಮೇಲೆ ಭೂಮಿಯ ಅಂತರಾಳದಲ್ಲಿ ಇರುವ ಎಲ್ಲಾ ಸಂಪನ್ಮೂಲಗಳನ್ನೂ ದೆವ್ವ ಕಬಳಿಸುವಂತೆ ರಾಕ್ಷಸವೇಗದಲ್ಲಿ ಕಬಳಿಸುತ್ತಾ ಬರುತ್ತಿದ್ದೀರಲ್ಲವೇ? ನಾನು ನಿಮ್ಮ ವೇಗವನ್ನು ತಡೆಯ ಬಯಸಿದರೇ, ನಿಮ್ಮ ಮಧ್ಯೆ ಇರುವ ಅನುಭವಿ ಹಿರಿಯರು, ದೇಶ ಕಟ್ಟುವವರು, ಹೇಳುವ ಕಿವಿ ಮಾತನ್ನು ಅಲಕ್ಷಿಸಿಸುತ್ತಿದ್ದೀರಿ. ಹೀಗಾಗಿ ನಿಮಗೆ ಒಳ್ಳೆಯ ಮಾತಿನಿಂದ, ಮೃದುವಾಗಿ, ಸೂಕ್ಷö್ಮವಾಗಿ, ಎಷ್ಟು ಬಾರಿ ಹೇಳಿದರೂ ಕಿಂಚಿತ್ತೂ ಕಿವಿಗೆ ಹಾಕಿಕೊಳ್ಳದ ನಿಮ್ಮನ್ನು ಎಚ್ಚರಿಸಲು ಪ್ರಯತ್ನಿಸುತ್ತಿದ್ದೇನೆ. ನನ್ನ ಎಚ್ಚರಿಕೆಯ ಮಾತುಗಳ ಗಂಟೆ ನಿಮಗೆ ಕೇಳಿಸುತ್ತಿಲ್ಲ. ಎಚ್ಚರ…” ಬಹುಶಃ ಭೂದೇವಿ ಹೀಗೆ ಕಿವಿ ಕೇಳಿಸುವವರಿಗೆ ಮಾತ್ರ ಹೇಳುತ್ತಿರಬಹುದು. ನನ್ನಂತವರಿಗೆ ಮಾತ್ರ ಈ ಕರೆ ಕೇಳಿಸಿದೆ.ಪ್ರಿಯ ಯುವಜನರೇ, ನನ್ನ ಮಾತುಗಳನ್ನು ದಯವಿಟ್ಟು ಕೇಳಿ “ಭೂಗರ್ಭದೊಳಗಿಂದ ಅಗೆದು ತೆಗೆದ, ಹೂತು ಹೋಗಿದ್ದ, ಪಳೆಯುಳಿಕೆ ಇಂಧನವಾದ ಪೆಟ್ರೋಲ್, ಡೀಸಲ್, ಮುಂತಾದ ಕಚ್ಛಾತೈಲ ಹಂತ ಹಂತವಾಗಿ ಕರಗುತ್ತಾ ಬರುತ್ತಿದೆ. ಎಂಬ ಲಕ್ಷಣಗಳನ್ನು ನಿಮ್ಮ ಕಣ್ಣಿಗೆ ಕಾಣುವಂತೆ ವಿವಿಧ ರೀತಿ ಭೂದೇವಿ ನಮಗೆ ತೋರಿಸುತ್ತಿದ್ದಾಳೆ.”ಇದಕ್ಕೆ ಪರ್ಯಾಯವಾಗಿ ಜಲಜನಕ ಆಧರಿಸಿದ ಇಂಧನ ಸಮೃದ್ಧವಾಗಿ ಉತ್ಪಾದಿಸಲು ಪ್ರಯತ್ನ ನಡೆಸಿರುವ ಕೆಲವು ವಿಜ್ಞಾನಿಗಳ ಸಂಶೋಧನೆಗಳನ್ನು ನಾನು ಗಮನಿಸಿದ್ದೇನೆ. ಆದರೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿರುವ ಜನಸಂಖ್ಯೆ, ಮತ್ತು ಕರಗಲಾರದ ಪರ್ವತದಂತೆ ಹಬ್ಬುತ್ತಿರುವ ಮಾನವರ ಆಸೆಯನ್ನು ಗಮನಿಸಿದಾಗ ಇಂತಹ ಪ್ರಯತ್ನಗಳು ಎಷ್ಟೇ ನಡೆದರೂ ಬಳಕೆದಾರ ಮಾನವರ ಬೇಡಿಕೆ ಕಡಿಮೆಯಾಗುತ್ತಿಲ್ಲ. ಇಂಧನದ ಬೆಲೆ ಎಷ್ಟೇ ಹೆಚ್ಚಾಗಲೀ, ನಾವು ಕೊಂಡೇ ಕೊಳ್ಳುತ್ತೇವೆ ಎಂಬ ಹಠ, ಚೆನ್ನಾಗಿ ಸಂಪಾದಿಸುವ ಯುವಜನರದು. ಮಕ್ಕಳು ಕಣ್ಣು ಬಿಟ್ಟ ತಕ್ಷಣ ಅವರ ತಂದೆ-ತಾಯಿ ಈ ವಾಹನಗಳ ಮೇಲೆ ಕೂರಿಸಿಕೊಂಡು ಹೋಗುವುದರಿಂದ, ನೋಡ ನೋಡುತ್ತಾ ಬೆಳೆದ ಈ ಮಕ್ಕಳು ಯುವ ಜನರಾದ ತಕ್ಷಣ ತಂದೆ-ತಾಯಿಯರನ್ನೂ ಬೈಕ್‌ಗಾಗಿ ಪೀಡಿಸುತ್ತಾರೆ. ನಮ್ಮ ಮನೆ ಬಳಿ ಒಬ್ಬ ಹಿರಿಯರ ಹದಿಹರೆಯದ ಮೊಮ್ಮಗ, ಮೂರನೇ ಅಂತಸ್ತಿನಿAದ ಕೂಗುತ್ತಿದ್ದ. ದೃಶ್ಯ ನನ್ನ ಕಿವಿಗೆ ಕೇಳಿಸಿತು, ನಂತರ ನನ್ನ ಕಣ್ಣಿಗೆ ಕಾಣಿಸಿತು. ಅವನು ಜೋರಾಗಿ ಕೂಗುತ್ತಿದ್ದ “ತಾತ, ನೀನು ನನಗೆ ತಕ್ಷಣ… ಬ್ರಾö್ಯಂಡಿನ ಬೈಕ್ ತೆಗೆದುಕೊಡದಿದ್ದರೆ ನಾನು ಮೇಲಿಂದ ಹಾರಿ ಕೆಳಗೆ ಬೀಳುತ್ತೇನೆ, ಪ್ರಾಣ ಕಳೆದುಕೊಳ್ತೀನಿ ಗಾಡಿ ಇಲ್ಲದಿದ್ದರೆ, ನಾನು ಬದುಕಲಾರೆ”ಸದ್ಯದಲ್ಲಿ ವಿಶ್ವದಲ್ಲಿರುವ ಮುಂದೇನು? ಎಂಬ ಒತ್ತಡದ, ಹೆದರಿಕೆಯ ವಾತಾವರಣದಲ್ಲಿ ನಾನು ಯೋಚಿಸುತ್ತಾ ಕುಳಿತ್ತಿದ್ದಾಗ, ಒಬ್ಬ ವೃದ್ಧರು ಸೈಕಲ್ ಹೊಡೆಯುತ್ತಾ ಬಂದು ನನ್ನ ಬಳಿ ನಿಂತು ಕೇಳಿದರು. “ ನನ್ನ ಹಾಗೆ ನಿನಗೂ ಸೈಕಲ್ ಹೊಡೆಯೋಕೆ ಬರುತ್ತಾ!?” ನಾನು ನಗುತ್ತಾ ಅಂದೆ, “ಅಜ್ಜಾ, ನಾನೂ ನಿನ್ನಂತೆಯೇ ಸೈಕಲ್ ಹೊಡೆಯುತ್ತೇನೆ, ನಡೆದು ಹೋಗುತ್ತೇನೆ,” ಆ ವೃದ್ಧರು ನಗುತ್ತಾ ಆಶ್ಚರ್ಯದಿಂದ ಕೇಳಿದರು “ಯಾಕೆ ನಿನಗೆ ಬೈಕ್ ಕಾರು ಚಾಲನೆ ಮಾಡಲು ಬರುವುದಿಲ್ಲವೇ” ನಾನು ಉತ್ತರಿಸಿದೆ. “ಬರುತ್ತಿತ್ತು ಹಿಂದೆ. ನನ್ನ ಯೌವ್ವನದ ಕಾಲದಲ್ಲಿ ನಾನೂ ಮೋಪೆಡ್ ಕಲಿತು ೨೬ ವರ್ಷ ಓಡಿಸಿದ್ದೇನೆ. ಆದರೆ ವಯಸ್ಸಾಗುತ್ತಿದ್ದಂತೆ, ರಸ್ತೆಯಲ್ಲಿಯ ಜನರ ಹಾಗೂ ವಾಹನ ದಟ್ಟಣೆ, ಆಗಾಗ ಸಂಭವಿಸುವ ರಸ್ತೆ ಅಪಘಾತಗಳನ್ನು ಕಂಡು ವಾಹನ ಪ್ರಯಾಣವನ್ನು ೨೦೧೧ರ ಡಿಸೆಂಬರ್ ಒಂದರಿAದ ನಿಲ್ಲಿಸಿದ್ದೇನೆ. ಹೀಗಾಗಿ ಸೈಕಲ್ ಓಡಿಸುತ್ತೇನೆ. ಅದಕ್ಕಿಂತ ಹೆಚ್ಚಾಗಿ ವಾಕಿಂಗ್ ಹೋಗುತ್ತೇನೆ.” ಎನ್.ವ್ಹಿ.ರಮೇಶ್. ನಿವೃತ್ತ ಕಾರ್ಯಕ್ರಮ ಅಧಿಕಾರಿಗಳುಆಕಾಶವಾಣಿಮೈಸೂರುಮೊ:೯೮೪೫೫೬೫೨೩೮

“ಮುಂದೆ ಅಪರೂಪವಾಗ ಬಹುದಾದ ಸೈಕಲ್”ವಿಶೇಷಲೇಖನ ಎನ್‌ ವಿ ರಮೇಶ್ Read Post »

ಇತರೆ

“ಹಂಚುವ ಗುಣವನ್ನು ಕಾಗೆಯಿಂದ ಕಲಿಯಿರಿ”ಲೇಖನ ಕವಿತಾ ಶ್ರೀನಿವಾಸ್ ನಾಯಕ್ 

ವಿಶೇಷ ಸಂಗಾತಿ “ಹಂಚುವ ಗುಣವನ್ನು ಕಾಗೆಯಿಂದ ಕಲಿಯಿರಿ” ಕವಿತಾ ಶ್ರೀನಿವಾಸ್ ನಾಯಕ್  ​ನಮ್ಮ ಸುತ್ತಮುತ್ತಲಿನ ಪ್ರಕೃತಿಯನ್ನು ನಾವು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲಿನ ಪ್ರತಿ ಜೀವಿಯೂ ನಮಗೆ ಒಂದಲ್ಲ ಒಂದು ಜೀವನ ಪಾಠವನ್ನು ಕಲಿಸುತ್ತಿರುತ್ತದೆ. ಅತೀ ಸಾಮಾನ್ಯ ಪಕ್ಷಿ ಎಂದು ನಾವು ಕಡೆಗಣಿಸುವ ‘ಕಾಗೆ’ಯ ಜೀವನಶೈಲಿಯಲ್ಲೇ ಮನುಷ್ಯನಿಗೆ ಅಗತ್ಯವಾದ ಅತಿ ದೊಡ್ಡ ಗುಣಗಳಿವೆ. ಕಾಗೆ ಎಂದರೆ ಕೇವಲ ಅಶುಭದ ಸಂಕೇತವಲ್ಲ, ಅದು ‘ಸಹಬಾಳ್ವೆ ಮತ್ತು ಹಂಚಿಣ್ಣುವಿಕೆ’ಯ ಸಾಕಾರ ಮೂರ್ತಿ.​ಒಗ್ಗಟ್ಟಿನಲ್ಲಿ ಬಲವಿದೆಕಾಗೆಗಳದ್ದು ಅದ್ಭುತವಾದ ಸಂಘಟನಾ ಶಕ್ತಿ. ಯಾವುದಾದರೂ ಕಾಗೆಗೆ ಆಹಾರ ಸಿಕ್ಕಾಗ, ಅದು ಎಂದಿಗೂ ಒಬ್ಬಂಟಿಯಾಗಿ ತಿಂದು ತೇಗಲು ಬಯಸುವುದಿಲ್ಲ. ಬದಲಾಗಿ, ಆಹಾರ ಕಂಡ ತಕ್ಷಣ ಜೋರಾಗಿ ‘ಕಾವ್ ಕಾವ್’ ಎಂದು ಕೂಗಿ ತನ್ನೆಲ್ಲಾ ಬಳಗವನ್ನು ಕರೆಯುತ್ತದೆ. ತನಗೆ ಸಿಕ್ಕಿದ್ದನ್ನು ತನ್ನವರಿಗೂ ಹಂಚಬೇಕು ಎಂಬ ಅದರ ಈ ಔದಾರ್ಯ, ಸ್ವಾರ್ಥದ ಸುಳಿಗೆ ಸಿಲುಕಿರುವ ಇಂದಿನ ಮನುಕುಲಕ್ಕೆ ನಿಜಕ್ಕೂ ಮಾದರಿ. “ನಾನು ಮತ್ತು ನನ್ನ ಕುಟುಂಬ” ಎಂಬ ಸಂಕುಚಿತ ಮನೋಭಾವದಿಂದ ಹೊರಬಂದು, “ನಮ್ಮವರು” ಎಂಬ ವಿಶಾಲ ಭಾವನೆಯನ್ನು ಬೆಳೆಸಿಕೊಳ್ಳಲು ಕಾಗೆ ನಮಗೆ ಕಲಿಸುತ್ತದೆ.​ಸಂಕಟದಲ್ಲಿ ಜೊತೆಗೂಡುವ ಮನಸ್ಸುಕಾಗೆಗಳ ಸಾಮಾಜಿಕ ಕಳಕಳಿ ಅತಿ ಹೆಚ್ಚು. ಯಾವುದಾದರೂ ಒಂದು ಕಾಗೆಗೆ ತೊಂದರೆಯಾದರೆ ಅಥವಾ ಅದು ಮೃತಪಟ್ಟರೆ, ನೂರಾರು ಕಾಗೆಗಳು ಒಂದೆಡೆ ಸೇರಿ ಕೂಗಾಡುವುದನ್ನು ನಾವು ಗಮನಿಸಿರಬಹುದು. ಇದು ಕೇವಲ ಶಬ್ದವಲ್ಲ, ಅವರ ನಡುವಿನ ಬಲವಾದ ಬಾಂಧವ್ಯದ ಪ್ರತೀಕ. ದುಃಖವನ್ನು ಹಂಚಿಕೊಳ್ಳುವ ಮೂಲಕ ನೋವನ್ನು ಕಡಿಮೆ ಮಾಡುವ ಗುಣ ಅವುಗಳಲ್ಲಿದೆ. ಇಂದು ಮನುಷ್ಯ ತನ್ನ ನೆರೆಯವರ ಕಷ್ಟವನ್ನೂ ಕೇಳದಷ್ಟು ತಂತ್ರಜ್ಞಾನದ ಜಾಲದಲ್ಲಿ ಸಿಲುಕಿದ್ದಾನೆ. ಅಂತಹ ಸಂದರ್ಭದಲ್ಲಿ, ಕಾಗೆಗಳ ಈ ಸಾಮಾಜಿಕ ಬದ್ಧತೆ ನಿಜಕ್ಕೂ ಶ್ಲಾಘನೀಯ.​ತಾನುಂಡು ಇತರರಿಗೂ ಉಣಬಡಿಸುವುದುಭಾರತೀಯ ಸಂಸ್ಕೃತಿಯಲ್ಲಿ “ತಾನುಂಡು ಇತರರಿಗೂ ಉಣಬಡಿಸುವವನೇ ನಿಜವಾದ ಮನುಷ್ಯ” ಎಂದು ಹೇಳಲಾಗಿದೆ. ಕಾಗೆಗಳು ಯಾವುದೇ ಭೇದವಿಲ್ಲದೆ ಎಲ್ಲವನ್ನೂ ಹಂಚಿಕೊಳ್ಳುತ್ತವೆ. ಸ್ವಾರ್ಥದ ಈ ಲೋಕದಲ್ಲಿ, ನಮ್ಮಲ್ಲಿರುವ ಜ್ಞಾನ, ಸಂಪತ್ತು ಅಥವಾ ಪ್ರೀತಿಯನ್ನು ನಾಲ್ಕು ಜನರೊಂದಿಗೆ ಹಂಚಿಕೊಂಡರೆ ಸಮಾಜ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ಕಾಗೆಗಳು ಪ್ರತಿಕ್ಷಣವೂ ಸಾಬೀತುಪಡಿಸುತ್ತಿವೆ. ನಾವು ಕೇವಲ ಭೌತಿಕ ವಸ್ತುಗಳನ್ನು ಹಂಚಿಕೊಳ್ಳುವುದು ಮಾತ್ರವಲ್ಲದೆ, ಕಷ್ಟದಲ್ಲಿರುವವರಿಗೆ ಧೈರ್ಯ ತುಂಬುವ ಮೂಲಕವೂ ‘ಹಂಚುವಿಕೆ’ಯನ್ನು ಚಾಲ್ತಿಯಲ್ಲಿಡಬಹುದು.​ಕಾಗೆಯ ಗುಣ ನಮ್ಮ ಬದುಕಿನ ಭಾಗವಾಗಲಿನಾವು ಕಾಗೆಯನ್ನು ಕೇವಲ ಒಂದು ಪಕ್ಷಿಯೆಂದು ನೋಡದೆ, ಅದರ ‘ಹಂಚಿಣ್ಣುವ’ ಸಂಸ್ಕೃತಿಯನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಧಾವಂತದ ಬದುಕಿನಲ್ಲಿ ನಾವು ಸಣ್ಣ ಸಣ್ಣ ಸಂತೋಷಗಳನ್ನು ಹಂಚಿಕೊಳ್ಳುವುದನ್ನೇ ಮರೆತಿದ್ದೇವೆ. ಮನೆಯಲ್ಲಿ ತಯಾರಿಸಿದ ಅಡುಗೆಯನ್ನು ನೆರೆಹೊರೆಯವರಿಗೆ ನೀಡುವುದಿರಲಿ, ಕನಿಷ್ಠಪಕ್ಷ ನಮ್ಮ ಹತ್ತಿರವಿರುವ ಸಕಾರಾತ್ಮಕ ವಿಚಾರಗಳನ್ನಾದರೂ ಹಂಚಿಕೊಳ್ಳೋಣ. ಸಣ್ಣ ಆಹಾರದ ತುತ್ತನ್ನು ಹಂಚುವ ಕಾಗೆಯ ಗುಣ ನಮ್ಮಲ್ಲಿದ್ದರೆ, ಖಂಡಿತವಾಗಿಯೂ ಹಸಿವು ಮತ್ತು ಒಂಟಿತನವಿಲ್ಲದ ಒಂದು ಸುಂದರ ಸಮಾಜವನ್ನು ನಿರ್ಮಿಸಬಹುದು.​ಕಾಗೆಗಳು ಎಂದಿಗೂ ತನ್ನ ಆಹಾರಕ್ಕಾಗಿ ಜಗಳವಾಡುವುದಿಲ್ಲ, ಅವು ಸಮುದಾಯದ ಪಕ್ಷಿಗಳಾಗಿ ಬದುಕುತ್ತವೆ. “ಕಾಗೆ ಒಂದೇ ಗೂಡಿನ ಪಕ್ಷಿಯಲ್ಲ, ಅದು ಸಮುದಾಯದ ಪಕ್ಷಿ.” ನಾವು ಕೂಡ ಹಾಗೆಯೇ ಆಗೋಣ. ನಾವು ಗಳಿಸುವ ಸಂಪತ್ತು, ಗಳಿಸುವ ಕೀರ್ತಿ ಅಥವಾ ನಾವು ಪಡೆಯುವ ಜ್ಞಾನ—ಯಾವುದೂ ನಾವು ಸತ್ತಾಗ ಜೊತೆಗೆ ಬರುವುದಿಲ್ಲ. ಆದರೆ, ನಾವು ಸಮಾಜಕ್ಕೆ ನೀಡಿದ ಪ್ರೀತಿ ಮತ್ತು ಸಹಕಾರ ಶಾಶ್ವತವಾಗಿ ಉಳಿಯುತ್ತದೆ.​ನಮ್ಮ ಬದುಕು ಕಾಗೆಯಂತಿರಲಿ. ಸದ್ದು ಮಾಡಿ ಬದುಕೋಣ, ಎಲ್ಲರನ್ನೂ ಸೇರಿಸಿಕೊಳ್ಳೋಣ ಮತ್ತು ಬದುಕನ್ನು ಹಂಚಿಕೊಂಡು ಆನಂದಿಸೋಣ. ಈ ಪ್ರಕೃತಿಯಲ್ಲಿ ಪ್ರತಿ ಜೀವಿಯಲ್ಲೂ ಒಂದು ಅರ್ಥವಿದೆ. ಆ ಅರ್ಥವನ್ನು ಅರಿತು ಬದುಕಿದಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ. ಇಂದಿನ ದಿನಗಳಲ್ಲಿ ಪರಸ್ಪರ ದ್ವೇಷ, ಅಸೂಯೆಗಳನ್ನು ಬದಿಗಿಟ್ಟು, ಸಹಬಾಳ್ವೆಯ ಪಾಠವನ್ನು ಕಾಗೆಯಿಂದ ಕಲಿತು, ಒಂದು ಸಾಮರಸ್ಯದ ಸಮಾಜಕ್ಕೆ ನಾಂದಿ ಹಾಡೋಣ.​————— ಕವಿತಾ ಶ್ರೀನಿವಾಸ್ ನಾಯಕ್ ಕಾರ್ಕಳ, ಉಡುಪಿ ಜಿಲ್ಲೆ.

“ಹಂಚುವ ಗುಣವನ್ನು ಕಾಗೆಯಿಂದ ಕಲಿಯಿರಿ”ಲೇಖನ ಕವಿತಾ ಶ್ರೀನಿವಾಸ್ ನಾಯಕ್  Read Post »

ಇತರೆ

“ಸುಖಸ್ಯಾ ನಂತರಂ ದುಃಖಂ ದುಃಖಸ್ಯಾ ನಂತರಂ ಸುಖಂ” ಶೋಭಾ ನಾಗಭೂಷಣ

ವಿಶೇಷ ಸಂಗಾತಿ ಶೋಭಾ ನಾಗಭೂಷಣ “ಸುಖಸ್ಯಾ ನಂತರಂ ದುಃಖಂ ದುಃಖಸ್ಯಾ ನಂತರಂ ಸುಖಂ”    ಜೀವನ ಎನ್ನುವುದು ಒಂದೇ ರೀತಿಯಾಗಿ ಇರುವುದಿಲ್ಲ ಸುಖದ ಹಿಂದೆ ದುಃಖ; ದುಃಖದ ಹಿಂದೆ ಸುಖ ಎನ್ನುವುದು ಸರ್ವೇ ಸಾಮಾನ್ಯ. ವ್ಯಕ್ತಿ ಈ ಘಳಿಗೆಯಲ್ಲಿ ಸುಖ, ಶಾಂತಿ, ನೆಮ್ಮದಿಗಳಿಂದ ಇದ್ದಾನೆ ಎಂದರೆ ಆ ಸುಖವು ಶಾಶ್ವತವಾಗಿ ಇರಬೇಕೆಂದಿಲ್ಲ. ಆ ವ್ಯಕ್ತಿಯು ಯಾವುದಾದರೂ ಒಂದು ಕಾರಣಕ್ಕೆ ತನ್ನ ಜೀವನದಲ್ಲಿ ಅತೀವ ದುಃಖಕ್ಕೆ ಒಳಗಾಗಿರುತ್ತಾನೆ. ಎಂತಹ ಪ್ರಭಾವಿ ವ್ಯಕ್ತಿಯೂ; ಎಂತಹ ಆಗರ್ಭ ಶ್ರೀಮಂತನಾಗಿದ್ದರೂ ಅವನು ಸಂಪೂರ್ಣವಾಗಿ ಸುಖಿಯಾಗಿರುತ್ತಾನೆ ಎಂದು ಹೇಳಲು ಸಾಧ್ಯವಿಲ್ಲ. ಆ ವ್ಯಕ್ತಿಗೆ ಜೀವನದಲ್ಲಿ ಯಾವುದಾದರೂ ಒಂದು ದುಃಖ ಖಂಡಿತಾ ಇರುತ್ತದೆ. ಹಾಗೆಯೇ ಜೀವನದಲ್ಲಿ ಕಷ್ಟಗಳನ್ನೇ ಕಂಡ ಹಲವಾರು ವ್ಯಕ್ತಿಗಳು ಒಮ್ಮೆ ಸುಖವನ್ನು ಕಂಡಿರುತ್ತಾನೆ. “ಒಳ್ಳೆಯ ದಿನಗಳು ಬರಬೇಕೆಂದರೆ ಸ್ವಲ್ಪ ಕೆಟ್ಟ ದಿನಗಳ ಜೊತೆ ಕಾಲ ಕಳೆಯಬೇಕು” ಎನ್ನುವ ಜೀವನದ ಸತ್ಯವನ್ನು ಅರ್ಥಮಾಡಿಕೊಂಡು ಕಷ್ಟವನ್ನು ನುಂಗಿ ಸುಖದ ನಿರೀಕ್ಷೆಯೊಂದಿಗೆ ಬದುಕನ್ನು ನಡೆಸುತ್ತಿರುತ್ತಾನೆ.    ನಾವು ರಾಜಾ ಹರಿಶ್ಚಂದ್ರನು ಸತ್ಯ ಹರಿಶ್ಚಂದ್ರನಾದ ಕಥೆಯನ್ನು ನೋಡಿದರೆ,  ಹರಿಶ್ಚಂದ್ರನು ಸತ್ಯಕ್ಕಾಗಿ ಅಪಾರ ಕಷ್ಟವನ್ನು ಅನುಭವಿಸುತ್ತಾನೆ. ತನ್ನ ರಾಜ್ಯದಲ್ಲಿ ದಕ್ಷ ಆಡಳಿತ ಮಾಡುತ್ತಿದ್ದಲ್ಲದೇ, ಪ್ರಜಾನುರಾಗಿಯಾಗಿ, ಪ್ರಜೆಗಳಿಗಾಗಿ ಅತ್ಯುತ್ಕೃಷ್ಟ  ಕಾರ್ಯಗಳನ್ನು ಮಾಡುತ್ತಾ ಬದುಕಿದ್ದ ಹರಿಶ್ಚಂದ್ರನಿಗೂ ಒಮ್ಮೆ ರಾಜ್ಯ, ಕುಟುಂಬ , ಗೌರವ ಎಲ್ಲವನ್ನೂ ಕಳೆದುಕೊಳ್ಳುವ ಸ್ಥಿತಿ ಒದಗಿಬರಲಿಲ್ಲವೇ? ಆದರೆ ಅವನು ಎಂದಿಗೂ ಧೃತಿಗೆಡದೆ ಬಂದದ್ದನ್ನು ಸ್ವೀಕರಿಸುತ್ತಾ, ಸತ್ಯಮಾರ್ಗವನ್ನು ಬಿಡದೆಯೇ ನಡೆದುಕೊಂಡ ಈ ಕಾರಣಕ್ಕಾಗಿ ಅಂತಿಮವಾಗಿ ಅವನ ಸತ್ಯನಿಷ್ಠೆಗೆ ಫಲವಾಗಿ ಮತ್ತೆ ಸುಖ, ರಾಜ್ಯ ಮತ್ತು ತನ್ನ ಕುಟುಂಬ, ಗೌರವ ಎಲ್ಲವನ್ನೂ ಮರಳಿ ಪಡೆದುಕೊಂಡ. ಕಷ್ಟದ ಸಂದರ್ಭದಲ್ಲಿ ಹರಿಶ್ಚಂದ್ರನೇನಾದರೂ ಸ್ಥೈರ್ಯಗೆಟ್ಟು ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಿದ್ದರೆ, ಇಂದು ಕಲಿಯುಗದಲ್ಲಿ ಸತ್ಯಕ್ಕೆ ಹೆಸರಾಗಿ ಉಳಿದಿರುವ ಹರಿಶ್ಚಂದ್ರ ಹೇಳ ಹೆಸರಿಲ್ಲದಂತೆ ಆಗುತ್ತಿದ್ದ. ಹಾಗೆಯೇ ರಾಮಾಯಣದಲ್ಲಿ  ಶ್ರೀರಾಮನ ವನವಾಸದ ಕಥೆ; ಶ್ರೀರಾಮ ಸುಖದಲ್ಲಿ ಇದ್ದಾಗಲೇ ಇನ್ನೇನು ರಾಜ್ಯ ಪಟ್ಟಾಭಿಷೇಕ ಆಗುತ್ತದೆ ಎನ್ನುವ ಕಾಲಕ್ಕೆ ವನವಾಸ ಪ್ರಾಪ್ತವಾಗುತ್ತದೆ. ಅನೇಕ ಸಂಕಷ್ಟಗಳು ಒದಗಿಬರುತ್ತವೆ. ಕೊನೆಯಲ್ಲಿ ಅಯೋಧ್ಯೆಗೆ ಮರಳಿ ರಾಜನಾಗುತ್ತಾನೆ.  ಮಹಾಭಾರತದ ಪಾಂಡವರ ಕಥೆಯೂ ಹಾಗೆಯೇ. ಪಾಂಡವರು ಅನೇಕ ಕಷ್ಟಗಳು, ವನವಾಸ-ಅಜ್ಞಾತವಾಸ, ಅವಮಾನಗಳನ್ನು ಅನುಭಸಿದ್ದರೂ ನ್ಯಾಯಕ್ಕಾಗಿ ಹೋರಾಡಿ ವಿಜಯ ಪಡೆಯುತ್ತಾರೆ.  ದುಃಖ ಎನ್ನುವುದು ಶಾಶ್ವತವಲ್ಲ ಧೈರ್ಯದಿಂದ ಇದ್ದರೆ ಸುಖ ಬಂದೇ ಬರುತ್ತದೆ.ಒಂದು ಹಳ್ಳಿಯಲ್ಲಿ ಒಬ್ಬ ವೃದ್ಧ ರೈತ ವಾಸಿಸುತ್ತಿದ್ದ. ಅವನ ಬಳಿ ಒಂದು ಸುಂದರ ಕುದುರೆ ಇತ್ತು ಆ ಕುದುರೆಯೇ ಅವನ ಜೀವನೋಪಾಯ. ಒಂದು ದಿನ ಆ ಕುದುರೆ ದಾರಿ ತಪ್ಪಿ ಕಾಡಿಗೆ ಹೊರಟುಹೊಯಿತು. ಆ ವೃದ್ಧನಿಗೆ ಅದೃಷ್ಟದಂತಿದ್ದ ಕುದುರೆ ಕಾಣದಾದಾಗ, ಆ ಹಳ್ಳಿಯ ಜನರು ವೃದ್ಧನನ್ನು ಕುರಿತು “ನಿನ್ನ ಅದೃಷ್ಟವೇ ಕೆಟ್ಟು ಹೋಯಿತು , ಆ ದೇವರು ನಿಮಗೆ ಇಷ್ಟು ದುಃಖವನ್ನು ಕೊಡಬಾರದಿತ್ತು” ಎಂದರು. ಆಗ ಆ ವೃದ್ಧನು “ಯಾರಿಗೆ ಗೊತ್ತು, ಬಹುಶಃ ಇದು ಒಳ್ಳೆಯದ್ದೋ! ಕೆಟ್ಟದ್ದೋ” ಎಂದನು. ಕೆಲವು ದಿನಗಳು ಹೀಗೇ ಕಳೆಯಿತು. ಒಂದು ದಿನ ಆ ಕುದುರೆ ಮರಳಿ ಬಂದಿತು. ಅದರೊಂದಿಗೆ ಇನ್ನೂ ಮೂರು ಕಾಡು ಕುದುರೆಗಳೂ ಬಂದವು. ಹಳ್ಳಿಯವರಿಗೆ ಆಶ್ಚರ್ಯವೋ ಆಶ್ಚರ್ಯ. ಹಳ್ಳಿಯವರು ರೈತನನ್ನು ಕುರಿತು “ನಿಮ್ಮ ಅದೃಷ್ಟ ನಿಜಕ್ಕೂ ತುಂಬಾ ಚೆನ್ನಾಗಿದೆ!” ಎಂದರು. ರೈತ ಮತ್ತೆ “ಯಾರಿಗೆ ಗೊತ್ತು, ಬಹುಶಃ ಇದು ಒಳ್ಳೆಯದ್ದೋ! ಕೆಟ್ಟದ್ದೋ” ಎಂದನು. ಒಂದು ದಿನ ಆ ರೈತನ ಮಗ ಆ ಕಾಡು ಕುದುರೆಯನ್ನು ತನ್ನ ವಶಕ್ಕೆ ಪಡೆದುಕೊಳ್ಳಲು ಯತ್ನಿಸಿದ. ಆದರೆ ಕುದುರೆಯಿಂದ ಬಿದ್ದು ಅವನ ಕಾಲು ಮುರಿದು ಹೋಯಿತು. ಹಳ್ಳಿಯವರು ದುಃಖದಿಂದ “ಅಯ್ಯೋ! ತುಂಬಾ ಕೆಟ್ಟ ದ್ದಾಯಿತು” ಎಂದರು. ಆದರೆ ಆ ರೈತ ಮಾತ್ರ ಆಗಲೂ ಮತ್ತದೇ ಮಾತನ್ನು ಆಡಿದ “ಯಾರಿಗೆ ಗೊತ್ತು, ಬಹುಶಃ ಇದು ಒಳ್ಳೆಯದ್ದೋ! ಕೆಟ್ಟದ್ದೋ” ಎಂದ. ಕೆಲವು ದಿನಗಳ ಬಳಿಕ ರಾಜ್ಯದಲ್ಲಿ ಯುದ್ಧ ಆರಂಭವಾಯಿತು. ಹಳ್ಳಿಯ ಎಲ್ಲಾ ಯುವಕರನ್ನೂ ಸೈನ್ಯಕ್ಕೆ ಕರೆದುಕೊಂಡು ಹೋದರು. ಆದರೆ ರೈತನ ಮಗನ ಕಾಲು ಮುರಿದುದ್ದರಿಂದ ಅವನನ್ನು ಕರೆದೊಯ್ಯಲಿಲ್ಲ. ಯುದ್ಧಕ್ಕೆ ಹೋದ ಅನೇಕರು ಮರಳಿ ಬರಲಿಲ್ಲ.  ಆಗ ಹಳ್ಳಿಯವರು ಬಂದು “ ನಿಜವಾಗಿಯೂ ಇದು ಒಳ್ಳೆಯದ್ದೇ ಆಯಿತು” ಎಂದರು. ಆಗ ಆ ರೈತ ನಕ್ಕು “ಜೀವನದಲ್ಲಿ ಯಾವುದು ಸುಖ ಯಾವುದು ದುಃಖ ಎಂದು ತಕ್ಷಣ ನಿರ್ಧರಿಸಲಾಗುವುದಿಲ್ಲ” ಎಂದು ಹೇಳಿದ.  ಯಾವ ಘಟನೆಯು ನಮಗೆ ಒಳ್ಳೆಯದ್ದನ್ನು ಮಾಡುತ್ತದೆ; ಯಾವುದು ಕೆಟ್ಟದ್ದನ್ನು ಮಾಡುತ್ತದೆ ಎಂದು ನಾವು ಹೇಳಲು ಸಾಧ್ಯವಿಲ್ಲ. ಬಂದದ್ದನ್ನೆಲ್ಲಾ ಸ್ವೀಕರಿಸುತ್ತಾ, ಒಳ್ಳೆಯ ಆಲೋಚನೆಗಳನ್ನು ಮಾಡುತ್ತಾ ನಮ್ಮ ಕರ್ತವ್ಯವನ್ನು ಮಾಡುತ್ತಾ ಸಾಗಬೇಕು.ಶ್ರೀ ಕೃಷ್ಣನು ಭಗವದ್ಗೀತೆಯ ಎರಡನೇ ಅಧ್ಯಾಯದ ೧೪ನೇ ಶ್ಲೋಕದಲ್ಲಿ ಹೇಳುವಂತೆ,ಮಾತ್ರಾ ಸ್ಪರ್ಶಾಸ್ತು ಕೌಂತೇಯ ಶೀತೋಷ್ಣಸುಖದುಃಖದಾಃ ।ಆಗಮಾಪಾಯಿನೋऽನಿತ್ಯಾಸ್ತಾಂಸ್ತಿತಿಕ್ಷಸ್ವ ಭಾರತ| ಭಗವಂತನು ಅರ್ಜುನನಿಗೆ ಹೇಳುತ್ತಾನೆ “ಇಂದ್ರಿಯಗಳ ಮೂಲಕ ಹೊರ ಪ್ರಪಂಚದಿಂದ ಉಂಟಾಗುವ ಶೀತ ಮತ್ತು ಉಷ್ಣ, ನಲಿವು ಮತ್ತು ನೊವುಗಳನ್ನು ಆದಿ ಮತ್ತು ಅಂತ್ಯವನ್ನು ಹೊಂದಿವೆ. ಅವುಗಳು ಅನಿತ್ಯ; ಅವುಗಳನ್ನು ಸಹಿಸು ಎನ್ನುತ್ತಾನೆ. ಅದರಂತೆಯೇ ಅದೇ ಅಧ್ಯಾಯದ ೩೮ ನೇ ಶ್ಲೋಕದಲ್ಲಿ ಹೇಳುವಂತೆ ಸುಖದುಃಖೇ ಸಮೇಕೃತ್ವಾಲಾಭಾಲಾಭೌ ಜಯಾಜಯೌ|ತತೋ ಯುದ್ಧಾಯ ಯುಜ್ಯಸ್ವನೈವಂ ಪಾಪಮವಾಪ್ಸ್ಯಸಿ|| ಅಂದರೆ ಸುಖ-ದುಃಖ, ಲಾಭ-ನಷ್ಟ ಮತ್ತು ಗೆಲುವು- ಸೋಲುಗಳನ್ನು ಸಮವಾಗಿ ಭಾವಿಸಿಕೊಂಡು ಯುದ್ಧಕ್ಕೆ ಅನುವಾಗು ಆಗ ನೀನು ಪಾಪವನ್ನು ಗಳಿಸುವುದಿಲ್ಲ.  ಭಗವಂತನ ಈ ಮಾತುಗಳೆಲ್ಲವು ಕೂಡ ಸುಖ- ದುಃಖಗಳ ಬಗೆಗೆ ಚಿಂತಿಸದೇ ನಾವು ನಮ್ಮ ಕಾರ್ಯವನ್ನು ಮಾಡಬೇಕು ಎಂದು ತಿಳಿಸುತ್ತವೆ. ಬರದಿಹುದರೆಣಿಕೆಯಲಿ ಬಂದಿಹುದ ಮರೆಯದಿರು|ಗುರುತಿಸೊಳಿತಿರುವುದನು ಕೇಡುಗಳ ನಡುವೆ||ಇರುವ ಭಾಗ್ಯವ ನೆನೆದು ಬಾರದೆಂಬುದನು ಬಿಡು|ಹರುಷಕಿದೆ ದಾರಿಯೆಲೊ-ಮಂಕುತಿಮ್ಮ|| ಡಿ ವಿ ಜಿ ಯವರ ಮಕುತಿಮ್ಮನ ಕಗ್ಗದ ಸಾಲುಗಳಿವು ಜೀವನದಲ್ಲಿ ನಮಗೆ ದೊರೆತಿರುವ ಪುಣ್ಯವನ್ನು ಹಾಗೂ ಅದರ ಒಳ್ಳೆಯ ಫಲವನ್ನು ಅನುಭವಿಸದೇ ಬಾರದಿರುವುದರ ಬಗ್ಗೆ ನಾವು ಚಿಂತಿಸುತ್ತೇವೆ. ಆ ಬಾರದಿರುವುದು ಸುಖವೂ ಆಗಿರಬಹುದು ಅಥವಾ ಹಲವಾರು ಕಾರಣಗಳಿಂದ ಮುಂದೆ ಬರಬಹುದಾದ ದುಃಖವೂ ಆಗಿರಬಹುದು. ನಾವು ಮುಂದಿನ ದುಃಖದ ಬಗೆಗೆ ಹೆಚ್ಚು ಆಲೋಚಿಸಿದರೆ ಇಂದು ನಮ್ಮ ಪಾಲಿಗೆ ಒದಗಿರುವ ಸುಖವನ್ನು ಅನುಭವಿಸದೇ ಅದನ್ನೂ ಕೂಡ ದುಃಖವನ್ನಾಗಿಸಿಕೊಂಡು ನಮ್ಮ ಕೈಯ್ಯಲ್ಲಿಯೇ ನಮ್ಮ ಜೀವನದ ರಸ ನಿಮಿಷವನ್ನು ಹಾಳುಮಾಡಿಕೊಳ್ಳುತ್ತೇವೆ. ಅದನ್ನು ಹೊರತುಪಡಿಸಿ ನಾವು ಪ್ರತಿಕ್ಷಣವನ್ನು ಜೀವಿಸಬೇಕು. ತೃಪ್ತಿಕರವಾಗಿ ಅನುಭವಿಸಬೇಕು. ಬರದಿರುವುದರ ಬಗ್ಗೆ ಆಲೋಚಿಸಿ, ಈಗಿರುವ ಒಳ್ಳೆಯದ್ದನ್ನು ಮರೆಯಬಾರದು. ಕಷ್ಟಗಳ ನಡುವೆಯೂ ಕಿಂಚಿತ್ತಾದರೂ ಸುಖ ಎನ್ನುವುದು ಇರುತ್ತದೆ. ಆ ಸಂತೋಷವನ್ನು ನಾವು ಹುಡುಕಿ ತೆಗೆದು ಬದುಕಬೇಕು. ಇರುವ ಭಾಗ್ಯವ ನೆನೆದು ಬದುಕಿದರೆ ಮನಸ್ಸಿಗೆ ಹರುಷವು ಸಿಗುತ್ತದೆ. ಎನ್ನುವ ಹಿರಿಯರ ಅನುಭವಜನ್ಯವಾದ ಮಾತು ಎಲ್ಲರಿಗೂ ಬದುಕುವ ಭರವಸೆಯನ್ನು ನೀಡುತ್ತದೆ. ನಾವು ಯಾವುದೇ ಯಶಸ್ವೀ ವ್ಯಕ್ತಿಗಳ ಜೀವನವನ್ನು ತೆಗೆದುಕೊಂಡರೂ ಆ ಯಶಸ್ಸಿನ ಹಿಂದೆ ಅವರ ದೊಡ್ಡ ಶ್ರಮ, ಸಂಕಷ್ಟಗಳು ಇರುತ್ತವೆ. ಬೆಂದು ಬೇಂದ್ರೆಯದ ದ.ರಾ.ಬೇಂದ್ರೆಯವರು, ಡಿವಿಜಿಯವರು, ಡಾ||ರಾಜ್ ಕುಮಾರ್, ಅಬ್ದುಲ್ ಕಲಾಂ, ನಾರಾಯಣಮೂರ್ತಿ-ಸುಧಾಮೂರ್ತಿ ದಂಪತಿಗಳು, ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು, ನಮ್ಮ ರಾಷ್ಟ್ರದ ಪ್ರಥಮ ಪ್ರಜೆಯಾಗಿರುವ ದ್ರೌಪದಿ ಮುರ್ಮು ಅವರು,  ಇನ್ನೂ ಅನೇಕ ವ್ಯಕ್ತಿಗಳು. ಇವು ಬೆರಳೆಣಿಕೆಯಷ್ಟೇ ಹೆಸರುಗಳು ಇಂತಹ ಸಾವಿರಾರು ಉದಾಹರಣೆಗಳನ್ನು ನಾವು ಕಾಣಬಹುದು. ಇವರೆಲ್ಲಾ ಇಂದು ಇಷ್ಟು ಮಹಾನ್ ವ್ಯಕ್ತಿಗಳಾಗಿದ್ದಾರೆ ಎಂದರೆ ಅವರ ಜೀವನದ ಹಾದಿಯೇನೂ ಹೂವಿನ ಹಾಸಿಗೆಯಾಗಿ ಇರಲಿಲ್ಲ. ಅವರುಗಳು ಅನುಭವಿಸಿದ ಸಂಕಷ್ಟಗಳೇನೂ ಕಡಿಮೆಯಲ್ಲ. ಆದರೆ ಅವರ್ಯಾರೂ ಕಷ್ಟಗಳಿಗೆ ಕುಗ್ಗಲಿಲ್ಲ. ಅವುಗಳನ್ನು ಹಿಮ್ಮೆಟ್ಟಿಸಿ ಬೆಳೆದವರು. ಸಂಕಲ್ಪತೊಟ್ಟು ಗುರಿಸಾಧಿಸಿದವರು.  ಸೂರ್ಯೋದಯದ  ಮೊದಲು ಕತ್ತಲೆ ಗಾಢವಾಗಿ ಇರುತ್ತದೆ; ಹಾಗೆಯೇ ಸುಖದ ಮೊದಲು ದುಃಖವೂ ಇರುತ್ತದೆ. ಕತ್ತಲಾಯಿತೆಂದು ನಾವು ತಲೆಯ ಮೇಲೆ ಕೈಹೊತ್ತು ಕುಳಿತರೆ ಚಂದ್ರನ ಬೆಳದಿಂಗಳಿನ ಸುಖವನ್ನು ಅನುಭವಿಸಲು ಸಾಧ್ಯವಾಗುವುದಿಲ್ಲ. ಬದಲಾವಣೆ ಎನ್ನುವುದು ಜಗದ ನಿಯಮ. ಬದುಕಲ್ಲಿ ಲಾಭವನ್ನೇ ಕಂಡವನು ನಷ್ಟಕ್ಕೆ ಹೆದರಿ ಜೀವ ಕಳೆದುಕೊಳ್ಳಬಾರದು. ಇಂದು ಅದೆಷ್ಟೋ ವ್ಯಕ್ತಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕುಟುಂಬಗಳು ಜೀವನದಲ್ಲಿ ಬಂದ ತಾತ್ಕಾಲಿಕವಾದ ಕಷ್ಟಗಳಿಗೆ ಹೆದರಿ ಜೀವವನ್ನು ಕಳೆದುಕೊಂಡ ಅನೇಕ ಸುದ್ದಿಗಳು ಪ್ರತಿದಿನವೂ ಕೂಡ ಸುದ್ದಿವಾಹಿನಿಗಳಲ್ಲಿ, ವಾರ್ತಾ ಪತ್ರಿಕೆಗಳಲ್ಲಿ ಪ್ರಕಟವಾಗುತ್ತಲೇ ಇವೆ. ಒಮ್ಮೆ ಕಳೆದುಹೋದ ಜೀವನವನ್ನು ಮತ್ತೆ ನಾವು ಪಡೆಯಲು ಸಾಧ್ಯವಿಲ್ಲ. ಈ ಜೀವವು ನಾವು ಬೇಡಿ ಬಂದದ್ದಲ್ಲ. ಅದು ಪರಮಾತ್ಮನ ಕರುಣೆಯಿಂದ ಸೃಷ್ಟಿಯಾದದ್ದು. ಹೀಗಿರುವಾಗ ಈ ಜೀವದ ಅಂತ್ಯವೂ ಅವನ ಕೈಯಿಂದಲೇ ಆಗಬೇಕು. ಅಲ್ಲಿಯವರೆಗೂ ಬದುಕನ್ನು ಎದುರಿಸಿ ಮುನ್ನಡೆಯಲೇಬೇಕು. ಸುಖಸ್ಯಾನಂತರಂ ದುಃಖಂ ದುಃಖಸ್ಯಾನಂತರಂ ಸುಖಂ ಎನ್ನುವ ವಾಕ್ಯವನ್ನು ನಾವು ಸದಾ ನೆನಪಿನಲ್ಲಿ ಇಡಬೇಕು. ಶೋಭಾ ಬಿಕಾವ್ಯನಾಮ: ಶೋಭಾ ನಾಗಭೂಷಣಶಿಕಕ್ಷಿ , ಕವಯತ್ರಿ ಹಾಗೂ ನಿರೂಪಕಿಪ್ರಧಾನ ಕಾರ್ಯದರ್ಶಿಮೈಸೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ(ನೋಂ)

“ಸುಖಸ್ಯಾ ನಂತರಂ ದುಃಖಂ ದುಃಖಸ್ಯಾ ನಂತರಂ ಸುಖಂ” ಶೋಭಾ ನಾಗಭೂಷಣ Read Post »

ಇತರೆ

“ಶಿಶು ಕಾವ್ಯ ಕವಿ ರಾಜೇಂದ್ರ ಪಾಟೀಲ್” ಗೊರೂರು ಅನಂತರಾಜು

ವ್ಯಕ್ತಿ ಸಂಗಾತಿ ಗೊರೂರು ಅನಂತರಾಜು “ಶಿಶು ಕಾವ್ಯ ಕವಿ ರಾಜೇಂದ್ರ ಪಾಟೀಲ್”   ಕವಿ ರಾಜೇಂದ್ರ ಪಾಟೀಲ್ ಅವರು ಉಮಾತನಯ ಕಾವ್ಯನಾಮದಲ್ಲಿ ಕವಿತೆ ರಚಿಸಿಕೊಂಡು ಬಂದವರು.ಇವರು 10.07.1965ರಂದು ಮಹಾರಾಷ್ಟ್ರ ರಾಜ್ಯದ ಸೋಲಾಪುರದಲ್ಲಿ ಜನಿಸಿದರು.ಮೂಲಸ್ಥಳ ಮಿರಗಿ, ಇಂಡಿ ತಾಲೂಕು, ವಿಜಯಪುರ ಜಿಲ್ಲೆ.ಇವರ ತಾಯಿ ಶ್ರೀಮತಿ ಉಮಾದೇವಿ,ತಂದೆ  ಶ್ರೀ ಶಂಕರರಾವ್. ಇವರಪ್ರಾಥಮಿಕ ಶಿಕ್ಷಣ ನಡೆದಿದ್ದು ಮಾಶಾಳ, ಕಮಲಾಪುರ, ರೇವೂರದಲ್ಲಿ.  ಪ್ರೌಢಶಿಕ್ಷಣ   ಅಫಜಲ್ ಪುರ‌‌ದಲ್ಲಿ.ಕಾಲೇಜು ಮತ್ತು ಪದವಿ( ಬಿಎ) ಶಿಕ್ಷಣ ಕಲಬುರಗಿಯಲ್ಲಿ.ತಾಂತ್ರಿಕ ಶಿಕ್ಷಣ ವರ್ಕ್ ಶಾಪ್ ಟೆಕ್ನಾಲಜಿ ಬಿಇಎಂಎಲ್, ಕೆಜಿಎಫ್‌ ನಲ್ಲಿ. ಪತ್ರಕರ್ತರಾಗಿ  ಗ್ರೀನೋಬಲ್ಸ್, ಚಿಂತಕ ( ಕಲಬುರಗಿ).1987 ರಿಂದ 1990ವರೆಗೆ,ಕನ್ನಡಮ್ಮ, ನಾಡೋಜ, ಹಸಿರುಕ್ರಾಂತಿ ( ಬೆಳಗಾವಿ)1990 ರಿಂದ 1998 ರವರೆಗೆ.ಸಂಯುಕ್ತ ಕರ್ನಾಟಕ  1998 ರಿಂದ 2022 ರವರೆಗೆ ಸೇರಿದಂತೆ ಪತ್ರಕರ್ತರಾಗಿ ಇವರ ಸೇವಾವಧಿ 33 ವರ್ಷ‌.ಸುಧಾ, ತರಂಗ, ವಾರಪತ್ರಿಕೆ, ರಾಗಸಂಗಮ, ಮಂಗಳ, ಮಯೂರ, ಮಲ್ಲಿಗೆ, ಪ್ರಜಾವಾಣಿ, ಪ್ರಜಾಮತ, ಉತ್ಥಾನ, ಗ್ರಿನೋಬಲ್ಸ್, ಚಿಂತಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ, ಬುಕ್ ಬ್ರಹ್ಮಾ ಹೀಗೆ ನಾಡಿನ ನೂರಾರು ಪತ್ರಿಕೆಗಳಲ್ಲಿ ಇವರ ಕವನ ಕತೆ, ಲೇಖನ, ವಿಮರ್ಶೆ,  ಅಂಕಣಗಳು ಪ್ರಕಟವಾಗಿವೆ.  ಹಲವಾರು ಕವಿಗೋಷ್ಠಿಗಳಲ್ಲಿ ಪಾಲ್ಗೊಂಡಿದ್ದಾರೆ.ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಿಸಿದ ಮಕ್ಕಳ ಸಾಹಿತ್ಯ  ಕವನ ಸಂಕಲನಗಳಲ್ಲಿ ಇವರ ಕವಿತೆಗಳು ಪ್ರಕಟಗೊಂಡಿವೆ. ಕಲಬುರಗಿಯಲ್ಲಿ ನಡೆದ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ, ಡಾ. ಶಿವರಾಮ ಕಾರಂತರ ಅಧ್ಯಕ್ಷತೆಯಲ್ಲಿ ಧಾರವಾಡದಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಕಮ್ಮಟದಲ್ಲಿ ಶಿಬಿರಾರ್ಥಿಯಾಗಿ ಭಾಗವಹಿಸಿದ್ದಾರೆ. ಧಾರವಾಡದಲ್ಲಿ ಬಾಲವಿಕಾಸ ಅಕಾಡೆಮಿ ಆಯೋಜಿಸಿದ್ದ ಮಕ್ಕಳ ಸಾಹಿತ್ಯ ಶಿಬಿರದಲ್ಲಿ, ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ  ದಾವಣಗೆರೆ, ಕುಷ್ಟಗಿ, ಕಲಬುರಗಿ, ವಿಜಯಪುರ, ಬೆಳಗಾವಿ, ಬೆಂಗಳೂರು, ಕೊಪ್ಪಳ, ಬದಾಮಿ ಭಾಗವಹಿಸಿದ್ದಾರೆ.  50 ಕ್ಕೂ ಹೆಚ್ಚಿನ  ಕವನ ಸಂಕಲನಗಳಿಗೆ ಮುನ್ನುಡಿ,ಳ ಬರೆದಿರುವರು. ಇವರ ಜೇನ್ಗೊಡ, ನೆನಪ ರಂಗೋಲಿ ಕವನ ಸಂಕಲನ, ಕಥಾಗುಚ್ಛ ಕಥಾ ಸಂಕಲನ ಪ್ರಕಟಗೊಂಡಿವೆ. ಕರ್ನಾಟಕ ಸರಕಾರದ ಪಠ್ಯಪುಸ್ತಕ ನಿರ್ದೇಶನಾಲಯವು 1 ನೇ ತರಗತಿಗೆ ಅಮ್ಮ ಕವನವನ್ನು, 2ನೇ  ಮತ್ತು 5 ನೇ ತರಗತಿಗೆ ತಂಗಿಯ ಪತ್ರ ಕವನವನ್ನು ಪಠ್ಯದಲ್ಲಿ ಅಳವಡಿಸಿದೆ. 1989ರ ನವೆಂಬರ್ ನಲ್ಲಿ ನೆಹರು ಜನ್ಮ ಶತಮಾನೋತ್ಸವ ಪ್ರಯುಕ್ತ ಇವರ ಕವಿತೆ ಶಾಂತಿದೂತ  ಆಕಾಶವಾಣಿ ಕಲಬುರಗಿ, ಧಾರವಾಡ, ಬೆಂಗಳೂರು, ಮೈಸೂರು, ಮಂಗಳೂರು  ಕೇಂದ್ರಗಳಿಂದ ಏಕಕಾಲಕ್ಕೆ ಪ್ರಸಾರವಾಗಿದೆ. ಕರ್ನಾಟಕ ಸಾಹಿತ್ಯ ಕಲಾ ವೇದಿಕೆ ರಾಜ್ಯ ಸಂಚಾಲಕರಾಗಿ ಮೂರು ವರ್ಷ ಸಾಂಸ್ಕೃತಿಕ ಸೇವೆ. ಭಾವ ಸಂಗಮ ಸಾಂಸ್ಕೃತಿಕ ವೇದಿಕೆಯ ರಾಜ್ಯ ಸಂಚಾಲಕರಾಗಿ 2015 ರಿಂದ ಇಲ್ಲಿಯವರೆಗೆ 11 ಸಮ್ಮೇಳನಗಳನ್ನು ಆಯೋಜಿಸಿದ್ದಾರೆ. ಪ್ರಸ್ತುತ ಉಮಾಶಂಕರ ಪ್ರತಿಷ್ಠಾನ ಕಾರ್ಯಾಧ್ಯಕ್ಷರಾಗಿದ್ದಾರೆ. ಇವರಿಗೆರಾಷ್ಟ್ರೀಯ ಬಸವ ವಿಭೂಷಣ, ಬಸವನಬಾಗೇವಾಡಿ, ಅಸ್ಮಿತಾ ಫೌಂಡೇಶನ್ ಹಿರಿಯ ನಾಗರಿಕರ ಪ್ರಶಸ್ತಿ, ಗೊರೂರು ಅನಂತರಾಜು, ಹಾಸನ9449462879ವಿಳಾಸ: ಹುಣಸಿನಕೆರೆ ಬಡಾವಣೆ 29ನೇ ವಾರ್ಡ್, ಮೂರನೇ ಕ್ರಾಸ್ಹಾಸನ – 574201

“ಶಿಶು ಕಾವ್ಯ ಕವಿ ರಾಜೇಂದ್ರ ಪಾಟೀಲ್” ಗೊರೂರು ಅನಂತರಾಜು Read Post »

ಇತರೆ, ರಂಗಭೂಮಿ

“ಪೌರಾಣಿಕ ನಾಟಕ ನಿರ್ದೇಶಕರು ನಟ ಕೇಶವ ಜಿ. ಜಿ. ಗರೀಘಟ್ಟ.”‌ ಗೊರೂರು ಅನಂತರಾಜು

ರಂಗ ಸಂಗಾತಿ ಗೊರೂರು ಅನಂತರಾಜು “ಪೌರಾಣಿಕ ನಾಟಕ ನಿರ್ದೇಶಕರು ನಟ ಕೇಶವ ಜಿ. ಜಿ. ಗರೀಘಟ್ಟ.”‌ ಮೊನ್ನೆ ಭಾನುವಾರ ಅರಕಲಗೂಡಿನಲ್ಲಿ ಶ್ರೀ ವೇಣುಗೋಪಾಲ ಕೃಪಾಪೋಷಿತ ನಾಟಕ ಮಂಡಳಿ ಕಲಾವಿದರು ಹಾರ್ಮೋನಿಯಂ ಮಾಸ್ಟರ್ ಜಿ..ಜಿ.. ಕೇಶವ ಗರಿಘಟ್ಟ ಇವರ ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸಿದರು.  ನಾಟಕ ವೀಕ್ಷಿಸಲು ಹೋಗಿದ್ದ ನನಗೆ ಸೂತ್ರಧಾರಿ ಪಾತ್ರಧಾರಿ ಹಾಡಿದ ರಂಗಗೀತೆ ಅದೇ ಪ್ರಥಮ ಬಾರಿ ಕೇಳಿ ಬಹಳ ಇಷ್ಟವಾಯಿತು. ಪ್ರೇಕ್ಷಕರು ಕೂಡ ಸೂತ್ರದಾರಿ ಹಾಡಿUÉ ಚಪ್ಪಾಳೆ ಬಾರಿಸಿ ಮೆಚ್ಚುಗೆ  ವ್ಯಕ್ತಪಡಿಸಿದರು. ಈ ಗೀತೆಯಲ್ಲಿ ಏನೆಲ್ಲಾ ಕನ್ನಡ ಕಲಾ ಸಾರಸ್ವತ ಲೋಕವನ್ನು ತೆರೆದಿಟ್ಟಿದ್ದಾರೆ  ಕವಿ ಎಂದರೆ..  ಕನ್ನಡ ನಾಡಿನ ಕಲೆ ಮಕ್ಕಳೇ ಅಳಿಯದೆ ಉಳಿಯಲಿ ನಮ್ಮೀ ಕಲೆಎ¯Éèಲ್ಲೂ ಬೆಳಗಲಿ ನಮ್ಮೀಕಲೆ ಪಂಪ ರನ್ನ ಜನ್ಮ ಪೊನ್ನರಾಮಾನುಜ ತೀರ್ಥಂಕರ ಬೇಲೂರುಹಳೇಬೀಡು ಕಲೆಗಳ ತವರೂರುಸುಬ್ಬಯ್ಯ  ನಾಯ್ಡುವಿನ ನಟನಾ ಕಲೆ ನಾಟಕ ರತ್ನ ಗುಬ್ಬಿ ವೀರಣ್ಣ ನಟಸಾರ್ವಭೌಮ ರಾಜಕುಮಾರ ಅಭಿನವ  ಭಾರ್ಗವ ಶಿರೋಮಣಿ ಮಲ್ಲಪ್ಪ  ನಟನಾ ಕಲೆ..   ಶ್ರೀ ಕೇಶವರವರು ಸಾಕ್ಷರತಾ ಆಂದೋಲನದಲ್ಲಿ ಕೆಲಸ ಮಾಡಿದ ವಿಚಾರ ಕೂಡ ಶಿಕ್ಷಕರು ಪಿ. ನಂದಕುಮಾರರಿಂದ ತಿಳಿಯಿತು. 1997ರ ಕಾಲಘಟ್ಟದಲ್ಲಿ ನಾನು (ಗೊರೂರು ಅನಂತರಾಜು) ಸಾಕ್ಷರತಾ ಆಂದೋಲನದಲ್ಲಿ ತೊಡಗಿಸಿಕೊಂಡು ಅಕ್ಷರ ಅಭಿಷೇಕ ನವ ಸಾಕ್ಷರರ ಪಠ್ಯ ಪುಸ್ತಕ ರಚನಾ ಸಮಿತಿಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೆ.. ಈ ಒಂದು ಆಸಕ್ತಿಯಲ್ಲಿ ಕೇಶವರವರಿಗೆ ತಮ್ಮ ಒಂದು ಕಲಾ ಪರಿಚಯವನ್ನು ಬರೆಯಲು ಬಯಸಿ ಸಂಪರ್ಕಿಸಿದೆ.. ಅವರು ಹೇಳಿದರು. ಅನಂತರಾಜ್ ಸಾರ್,, ನಾನು ನಿಮ್ಮನ್ನು ಬಲ್ಲೆನು. ಆದರೆ ನನ್ನ ಪರಿಚಯ ನಿಮಗಿಲ್ಲ ಅಷ್ಟೇ..ನಾನು ಕೇಶವ ಜಿ. ಜಿ.  ಹುಟ್ಟಿದ ಊರು ಗರೀಘಟ್ಟ.ಇದು ಅರಕಲಗೋಡು ತಾಲೂಕಿಗೆ  ಸೇರಿದೆ.  ಹಾಸನ ಜಿಲ್ಲೆಯಲ್ಲಿ ಬರುತ್ತದೆ. ನನ್ನ    ಜನ್ಮ ದಿನಾಂಕ 04.06.1979. ನಾನು    ಪ್ರಾಥಮಿಕ ಶಿಕ್ಷಣವನ್ನುಗರೀಘಟ್ಟದಲ್ಲಿ  ಹಾಗೂ ಹೊನ್ನವಳ್ಳಿಯ ಹೇಮಾವತಿ ಪ್ರೌಢಶಾಲೆಯಲ್ಲಿ ಹೈಸ್ಕೂಲು ವ್ಯಾಸಂಗ ªÀÄÄV¹ ಪಿ.ಯು.ಸಿ ಮತ್ತು  ಬಿ.ಎ. ಪದವಿ ಸರ್ಕಾರಿ ಕಲಾ ಕಾಲೇಜು ಹಾಸನ ಇಲ್ಲಿ ಮಾಡಿದೆ. ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳುವಿಕೆ, ರಾಜ್ಯ ಸರ್ಕಾರದ ಸಾಕ್ಷರತಾ ಆಂದೋಲನದಲ್ಲಿ ಸ್ವಯಂಸೇವಕನಾಗಿ ಸೇವೆ.   2005-06ನೇ ಸಾಲಿನಲ್ಲಿ ಪ್ರಾರಂಭವಾದ ಸಾಕ್ಷರತಾ ಮುಂದುವರಿಕೆ ಶಿಕ್ಷಣ ಕಾರ್ಯಕ್ರಮದಲ್ಲಿ ಕ್ರಮವಾಗಿ ಪ್ರೇರಕ ಹಾಗೂ ನೋಡಲ್ ಪ್ರೇರಕ, ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ  ಸಾಕ್ಷರತಾ ಕಲಾವಿದನಾಗಿ ಸೇವೆ, ಅರಿವು ಕಾರ್ಯಕ್ರಮದಲ್ಲಿ ಬೀದಿ ನಾಟಕ ಹಾಗೂ ಕಲಾಜಾಥಾ ಕಾರ್ಯಕ್ರಮದ ನಿರ್ದೇಶಕನಾಗಿ ಸೇವೆ ಸಲ್ಲಿಕೆ, ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ತರಬೇತಿ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಕೆ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿವಿದ ಕಾರ್ಯಕ್ರಮದಲ್ಲಿ ನಿರೂಪಕನಾಗಿ 2014ರಲ್ಲಿ ರಂಗಭೂಮಿ ಕ್ಷೇತ್ರಕ್ಕೆ ಪ್ರವೇಶ ಮಾಡಿದೆ.  ಅರಕಲಗೂಡು ಪಟ್ಟಣದಲ್ಲಿ ತಾಲ್ಲೂಕಿನ ವಿವಿಧ ವಿಕಲಚೇತನರನ್ನೊಳಗೊಂಡ ವಿಕಲಚೇತನರ ಸಂಘವನ್ನು ರಚಿಸಿ ವಿಕಲಚೇತನರಿಂದಲೇ ದಾನಶೂರಕರ್ಣ  ನಾಟಕ ಪ್ರದರ್ಶನದಲ್ಲಿ ಕರ್ಣನ ಪಾತ್ರದ ಮೂಲಕ ರಂಗಭೂಮಿಗೆ ಪ್ರವೇಶ ಮಾಡಿದೆ.  ಶ್ರೀಕೃಷ್ಣ, ಅರ್ಜುನ, ಧರ್ಮರಾಯ, ಸತ್ಯವ್ರತ, ಬೀಷ್ಮ, ದ್ರೋಣ, ದೃತಾರಾಷ್ಟ್ರ, ನಾರದ, ವಿಧುರ, ಭರತ, ವಿಭಿಷಣ, ವಸಿಷ್ಠ ಮುಂತಾದ ಪಾತ್ರಗಳಲ್ಲಿ ಅಭಿನಯಿಸಿದೆ. ಗುರುಗಳ ಕೈ ನೋಡಿಕೊಂಡು ಹಾರ್ಮೋನಿಯಂ ಕಲಿಕೆ ಪ್ರಾರಂಭಿಸಿದೆ. ಯಾವ ಗುರುಗಳ ಬಳಿಯೂ ಅಭ್ಯಾಸ ಮಾಡದೆ ತರಬೇತಿಯೂ ಇಲ್ಲದೇ ಸ್ವತಃ ಹಾರ್ಮೋನಿಯಂ ನುಡಿಸುವುದನ್ನು ಅಭ್ಯಾಸ ಮಾಡಿಕೊಂಡು ಮೊದಲಬಾರಿಗೆ 2023ರಲ್ಲಿ ರಾಜ ವಿಕ್ರಮ ನಾಟಕದ ನಿರ್ದೇಶನ ಮಾಡಿ  ಆ ದಿನದಿಂದ ಈವರೆಗೆ ರಾಜಾವಿಕ್ರಮ, ರಾಜ ಸತ್ಯವ್ರತ, ದಾನಶೂರಕರ್ಣ, ಕುರುಕ್ಷೇತ್ರ ಹೀಗೆ 12 ನಾಟಕಗಳ ನಿರ್ದೇಶನ ಮಾಡಿರುವೆ. ಹರಿಕಥೆ ಕಲಾವಿದನಾಗಿಯೂ ಸೇವೆ ಸಲ್ಲಿಸುತ್ತಿರುವೆ .  ನನ್ನ ಈ ಸೇವೆ ಗಮನಿಸಿ ಕೆಲವು ಸಂಘ ಸಂಸ್ಥೆಗಳು ರಂಗರತ್ನ, ಹೊಯ್ಸಳರತ್ನ, ಕಲಾಬೀಷ್ಮ, ರಂಗ ಕುಸುಮ, ರಂಗರತ್ನಾಕರ  ಹೀಗೆ ಪ್ರಶಸ್ತಿ ನೀಡಿ ಗೌರವಿಸಿರುತ್ತಾರೆ. ಇದುವರೆಗೂ ಸರಿಸುಮಾರು 400ಕ್ಕೂ ಹೆಚ್ಚು ಸ್ವ ಸಹಾಯ ಸಂಘಗಳನ್ನು ರಚನೆ ಮಾಡಿ ಮಾಹಿತಿ ನೀಡಿ  ಮಾರ್ಗದರ್ಶನ ಮಾಡಿರುತ್ತೇನೆ, ಗ್ರಾಮೀಣ ಭಾಗದ ವಿಕಲಚೇತನರಿಗೆ ಗ್ರಾಮ ಮಟ್ಟದಲ್ಲಿ ಸರ್ಕಾರಿ ಸವಲತ್ತುಗಳ ಮಾಹಿತಿ ನೀಡುವ ಸಂಬಂಧ ಗ್ರಾಮ ಪಂಚಾಯಿತಿ ಮಟ್ಟದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿರುವೆ. ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ಸಲುವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕಲಾ ಮತ್ತು ಸಾಂಸ್ಕೃತಿಕ ಸಂಘ ಸ್ಥಾಪಿಸಿ ಅ ಮೂಲಕ  ರಂಗ ಕಲೆಯನ್ನು ಉಳಿಸುವ ಪೋಷಿಸುವ ಸಲುವಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಸಂಘಟಿಸಿರುವೆ.   ಇವರ ಸಂಪರ್ಕ ವಿಳಾಸ:ಕೇಶವ ಜಿ. ಜಿ. ರಂಗನಿರ್ದೇಶಕರು,  ಗರೀಘಟ್ಟ, ಕಸಬಾ ಹೋಬಳಿ, ಅರಕಲಗೂಡು ತಾ. ಹಾಸನ ಜಿಲ್ಲೆ. ಮೊ  ಸಂಖ್ಯೆ 9880183485 ಗೊರೂರು ಅನಂತರಾಜು

“ಪೌರಾಣಿಕ ನಾಟಕ ನಿರ್ದೇಶಕರು ನಟ ಕೇಶವ ಜಿ. ಜಿ. ಗರೀಘಟ್ಟ.”‌ ಗೊರೂರು ಅನಂತರಾಜು Read Post »

ಇತರೆ, ಪ್ರಬಂಧ

ಚಹಾಯಣ…ದ ರಾಮಾಯಣ(ಕಿರು ಪ್ರಬಂಧ) ಡಾ.ವೈ ಎಂ.ಯಾಕೊಳ್ಳಿ

ಪ್ರಬಂಧ ಸಂಗಾತಿ ಡಾ.ವೈ ಎಂ.ಯಾಕೊಳ್ಳಿ ಚಹಾಯಣ…ದ ರಾಮಾಯಣ ಇಂದು ೨೦/೦೫/೨೦೨೬ಚಹಾದ ದಿನವಂತೆ..ಚಹಾ ಇಲ್ಲದೆ ಸೂರ್ಯೋದಯವೇ ಆಗದ ನಮಗೆ ಅಂದರೆ ಉತ್ತರ ಕರ್ನಾಟಕದ ಮಂದಿಗೆ ಚಹಾಕ್ಕೊಂದು ದಿನವಿದೆಯಂದರೆ ನಗೆ ಬರುತ್ತದೆ.ಹಾಗೆ ನೋಡಿದರೆ ನಮ್ಮ ಜನಕ್ಕೆ ಯಾಕೊ ಕಾಫಿ ಕಂಡರೆ ಅಷ್ಟಕ್ಕಷ್ಟೇ. ನಮ್ಮಪ್ರಕಾರ ಎಲ್ಲದಕ್ಕೂ ದಿವ್ಯೌಷಧಿ ಚಹಾನೆ.ಅಂತೆಯೆ ಅದನ್ನು ದೇವಲೋಕದ ಅಮೃತ ಎಂದು‌ ಕರೆಯುವದೂ ಇದೆ.ಮನೆಗಳಿಗೆ ಬಂದಾಗ ಅತಿಥಿಗಳಿಗೆ ಕೊಡಮಾಡುವ ಕನಿಷ್ಟ ಪಕ್ಷದ ಆತಿಣಥ್ಯ ಎಂದರೆ ಚಹಾನೇ ಆಗಿದೆ.”ಬರ್ರಿ ಬರ್ರಿ ಅರ್ಧ ಕಪ್ ಚಹಾ ಕುಡದ ಹೋಗರಿ” ಎಂದು ನಾವು ಅತಿಥಿಗಳಿಗೆ ಒತ್ತಾಯ ಮಾಡುವದೂ ಇದೆ.ಬಂದ ಅತಿಥಿಗಳಿಗೆ ನಾವು ಏನು‌ಕೊಡದಿದ್ದರೂ ಪರ್ವಾ ಇಲ್ಲ ಒಂದು ಕಪ್ ಚಹಾನಾದರೂ ಕೊಡಲೇ ಬೇಕು.ಒಂದು ವೇಳೆ ಚಹಾನೂ ಆಫರ್ ಮಾಡದವರನ್ನು ಕಂಡು ” ಏನ್ ಜಿಪುಣರೆಪಾ,ಅವರ ಮುಖಕ್ಕ ಅರ್ಧ ಕಪ್  ಚಹಾ ಹುಟ್ಟಲಿಲ್ಲ” ಎಂದು ಬೈಯುವವರೂ ಇದ್ದಾರೆ. ಚಹಾ ಅಂಗಡಿಗಳೆಂದು ನಾವು ಹೋಟೆಲ್ ನ್ನು ಹೆಸರಿಸುತ್ತೇವೆ.ಅಲ್ಲಿ ಏನೆಲ್ಲ ಖಾದ್ಯಗಳನ್ನು‌ ಮಾಡಬಹುದಾದರೂ ಅವುಗಳ ಸೇವನೆಯ ನಂತರ ಅರ್ಧ ಕಪ್ ಚಹಾ ಸೇವನೆ ಇರಲೇಬೇಕು.ಇರದಿದ್ದರೆ ಏನೇ ತಿಂದರೂ ಅದು ಅಪೂರ್ಣ.ಅದು ಒಂದುರೀತಿಯಲ್ಲಿ ಕಾರ್ಯಕ್ರಮಗಳಲ್ಲಿ ವಂದನಾರ್ಪಣೆ ಇದ್ದಂತೆ.ಎಂಥ ದೆ ಭಾಷಣ ನಡೆದರೂ ಕಡೆಗೆ ಒಂದು ಸಾಲಿನದಾದರೂ ವಂದನಾರ್ಪಣೆ ಯಾಗದಿದ್ದರೆ ಅದೆಂತಹ ಕಾರ್ಯಕ್ರಮ ಎನ್ನುವ ಹಾಗೆ ಏನೆ ಲ್ಲ ತಿಂಡಿ ತಿಂದರೂ ಚಹಾ ಇರದಿದ್ದರೆ ಅರ್ಧ ಆದಂತೆಯೆ ಎಂದು ತಿಳಿವಳಿಕೆ ಸರ್ವೇ ಸಾಮಾನ್ಯ.ನಮ್ಮಲ್ಲಿ ಊರುಗಳ ಸಿರಿತನವೂ ಈ ಹೊಟೆಲ್ ಗಳ ಆಧಾರದ ಮೇಲೆಯೆ ನಿರ್ಣಯವಾಗುವದುಂಟು.ಒಂದು ಚಹಾದಂಗಡಿಯೂ ಇರದೆ‌ ಇದ್ದರೆ” ಅದೆಂಥ ಹಿಂದುಳಿದ ಊರು ” ಎಂದು ಅಸಹ್ಯ ಮಾಡುವವರೂ ಇದ್ದಾರೆ. ಎಂಥ ಹಿರಿತನಗಳೂ  ನ್ಯಾಯನಿರ್ಣಯಗಳೂ ಚಹಾ ಸೇವನೆ ಯಿಂದಲೇ  ಆರಂಭ ಮತ್ತು‌ ಮುಕ್ತಾಯ ಎಂಬುದು ಉತ್ತರಕರ್ನಾಟದ ಒಂದು ನಿಯಮವೇ ಆಗಿದೆ. ಎಲ್ಲ ಸಮಾರಂಭಗಳ ಆರಂಭಕ್ಕೆ ಚಹಾ ಕೊಟ್ಟೇ ಕಾರ್ಯಕ್ರಮ ಆರಂಭಿಸೋದು ನಮ್ಮ‌ ಪದ್ಧತಿ. ಪೂರ್ತಿ ಚಹಾ ಕುಡಿಯುವವರಿಗಿಂತ ಅರ್ಧ ಚಹಾ ಕುಡಿಯುವವರೆ ಜಾಸ್ತಿ.ಗೆಳೆಯರು ಸೇರಿಕೊಂಡು ಅರ್ಧ ತಾಸಿಗೊಂದು ಬೈಟೂ ಚಹಾ ಕುಡಿಯುತ್ತ ಇಡಿ ದಿನವನ್ನೆಲ್ಲ ಊರ ಚಹಾದಂಗಡಿಗಳ ಕಟ್ಟೆಯ ಲ್ಲಿಯೇ ಕಳೆಯುವ ಯಜಮಾನರನ್ನು ನಾವು ಕಾಣುತ್ತೇವೆ.ಇಂಥ ಜಿಗರಿ ದೋಸ್ತರನ್ನು ಬೈಟೂ ದೋಸ್ತರು ಎಂತಲೂ‌ ಕರೆಯಬಹುದು.  ನಮ್ಮ ಹಳ್ಳಿಗಳಲ್ಲಿ ಕೆಲವರಂತೂ ಎಷ್ಟು ಚಹಾದಂಗಡಿಯ ಚಹಾದ ಮೇಲೆ ಜೀವ ಇಟ್ಟಿರುತ್ತಾರೆಂದರೆ ಎದ್ದೊಡನೆ ಅವರ ಮುಂಜಾನೆಗಳಾಗುವದೆ ಹೊಟೆಕಿನ ಮುಂದೆ.ಅಲ್ಲಿ ಬಂದು‌ಮುಖಮಾರ್ಜನ ಕಾರ್ಯಕ್ರಮ ಮುಗಿಸಿ ಒಂದಾದ‌ ಮೇಲೊಂದರಂತೆ  ಚಹಾ ಕುಡಿದು ಅಂಗಡಿಯವನ ಖಾತೆಗೇರಿಸಿ ಮುಂದಿನ ಕಾರ್ಯಕ್ಕೆ ತೆರಳೂವ ಭೂಪರಿಗೇನೂ ಕಡಿಮೆಯಿಲ್ಲ. ಹಿರಿಯ ಪ್ರಭಂಧಕಾರರಾದ ವಿರೇಂದ್ರ ಶಿಂಪಿ ಯವರು ಬರೆದ ನಮ್ಮೂ ರ ಚಹಾ ಹೊಟೆಲು ಎಂಬ ಪ್ರಬಂಧದಲ್ಲಿ ಈ ಚಹಾ ಹೊಟೆಲುಗಳನ್ನು “ಹಳ್ಳಿಯ ಪಾರ್ಲಿಮೆಂಟ್ ” “ವಿಧಾನ ಸೌಧ”ಗಳೆಂದು ಕರೆಯುತ್ತಾರೆ.ಏಕೆಂದರೆ ಊರಿನ ಎಲ್ಲ ಸುದ್ದಿಗಳೂ ಅಲ್ಲಿ ಬಂದು ಹೋಗುವದರಿಂದ ಅವು ವಾರ್ತಾ ಇಲಾಖೆಗಳಂತೆಯೂ ಕೆಲಸ ಮಾಡುವದುಂಟು. ನಿಮಗೆ ಊರಿನ ಯಾವ ಮೂಲೆಯ ಎಂಥದೆ ತಾಜಾ ಸುದ್ದಿ ಬೇಕಾದರೂ ನೀವು ಚಹಾದಂಗಡಿಯ ಒಂದು‌ ಮೂಲೆ ಹಿಡಿದು ಮೌನ ಕುಳಿತರೆ ಸಾಕು ನಿಮಗೆ ಎಲ್ಲವೂ ತಿಳಿಯುತ್ತಾ ಹೋಗುತ್ತದೆ. ಈಚೆಗಂತೂ ಸಕ್ಕರೆ ಖಾಯಿಲೆ ಭಾರತದ ಬಹು ದೊಡ್ಡ ಖಾಯಿಲೆಯಾದ ಮೇಲೆ ಸಕ್ಜರೆ ಹಾಕಿದ ಚಹಾ  ಕುಡಿಯುವರ ಸಂಖ್ಯೆ ಕಡಿಮೆಯಾಗಿ ಊರಿಗೂರಿಗೆ ಗಲ್ಲಿ ಗಲ್ಲಿಗಳಲ್ಲಿ ಬೆಲ್ಲದ ಚಹಾ ಎಂಬ ಹೆಸರಿನ ಗುಲ್ಪಿ ಚಹಾದಂಗಡಿಗಳೂ,ಕೇಸರ ಚಹಾದಂಗಡಿಗಳೂ ತಲೆಯೆತ್ತಿರುವದನ್ನು ಕಾಣುತ್ತವೆ. ಇನ್ನು ಸಕ್ಕರೆ ಖಾಯಿಲೆ ಗೆ ತುತ್ತಾದವರು ಸುಗರ್ ಲೆಸ್ ಚಹಾ ಸೇವನೆ ಮಾಡಿಯಾದರೂ ಚಹಾದ ಚಟ ತೀರಿಸಿಕೊಳ್ಳುತ್ತಾರೆ. ಈಚಿಚೆಗೆ ಅವರದೆ ಸಂಖ್ಯೆ ಜಾಸ್ತಿಯಾದುದರಿಂದ ಸುಗರ್ ಲೆಸ್ಸಾ ಎಂದು ಅಂಗಡಿಯವರೆ ಕೇಳಿ ಖಂಡಿತ ಮಾಡಿಕೊಳ್ಳುವದುಂಟು. ಸರಕಾರಿ ಕಛೇರಿಗಳಲ್ಲಿ ಚಹಾದ ವಿರಾಮ ಎಂದು ಒಂದು ಬಗೆಯ ವಿರಾಮ ಕಾಲವೇ ನಿರ್ಣಯವಾಗಿರುತ್ತದೆ. ಬೆಂಗಳೂರಿನಂತಹ ದೊಡ್ಡ ನಗರಗಳಿರಲಿ, ಚಿಕ್ಕ ನಗರಗಳಿರಲಿ ಸರಕಾರಿ ಇಲಾಖೆಯ ಅಧಿಕಾರಿಗಳು ಖಾಯಂ ಮ್ಮಾಗಿ ಅಂತರ್ಧಾನ ಆಗಿರುವದು..ಕೇಳಿದರೆ ಚಹಾಕ್ಕೆ ಹೋಗಿದ್ದಾರೆ ಎಂದು ಹೇಳುವದು ಸಾನಾನ್ಯವಾಗಿದೆ.ಕಛೇರಿಯ ನಿರ್ಣಯವಾಗದ ಕೆಲವು ಕೇಸಗಳ ಪರೊಹಾರೋಪಾಯವನ್ನು ಚಹಾದಂಗಡಿಯ ಟೇಬಲ್ ಬಳಿಯೆ ಕೇಸ್ ವರ್ಕರ್ ಗಳು ಮುಗಿಸಿಕೊಳ್ಳು ವದೂ ಅನುಭವಸ್ತರ ಎಷ್ಟು ಬರೆದರೂ ಈ ಚಹಾಯಣ ಮುಗಿಯಲಾರದು.ಎಲ್ಲ ಚಹಾಪ್ರಿಯರ ಅನುಭವಗಳು ಒಬ್ಬರಿಗಿಂತ ಒಬ್ಬರವು ಭಿನ್ನ‌ಮತ್ತು ಶ್ರೀ ಮಂತ ಆಗಿರುವದು ಕಾಣಬರುತ್ತದೆ. ಚಹಾಯಣವಂತೂ ರಾಮಾಯಣ ಕ್ಕಿಂತ ದೀರ್ಘವಾಗುತ್ತದೆ. ಚಹಾ ಕುಡಿಯುವದನ್ನು ಒಂದು ಬಗೆಯ habit ಎನ್ನುವ ಇಂಗ್ಲಿಷರ ಅದು ತೀರಾ ಕನಿಷ್ಟತಮ ಚಟ ಎನ್ನುತ್ತಾರೆ. ಅಂದರೆ ಯಾವ ಚಟವಿ ರದಿದ್ದರೂ ಚಹಾ ಚಟವಾದರೂ ಇದ್ದೇ ಇರುತ್ತದೆ ಎನ್ನುದದಕ್ಕೆ ಚಮತ್ಕಾರಿಕವಾಗಿ ಹೇಳುವದಿದೆ .habit ಪದದಲ್ಲಿ h ಹೋದರೆ a bit (ಸ್ವಲ್ಪ) ಉಳಿಯುವದಂತೆ .a ಹೋದರೆ bit (ತೀರ ಸ್ವಲ್ಪ) ಉಳಿಯುವದಂತೆ.b ಹೋದರೆ  it (ಇದು) ಉಳಿಯುತ್ತದೆ.I ಹೋದ‌ಮೇಲೆ t ( ಚಹಾ) ಉಳಿದೆ ಉಳಿಯುತ್ತದೆ ಎನ್ನುತ್ತಾರೆ. ಕಡೆಗೆ t ಕುಡಿಯುವ ಚಟವಂತೂ ಕನಿಷ್ಟ ಇದ್ದೇ ಇರುತ್ತದೆ ಎಂಬ ಭಾವನೆ ಅಲ್ಲಿ ಹೊರಹೊಮ್ಮುತ್ತದೆ. ಚಹಾ ಬೇರೆ ದೇಶದಿಂದ ಬಂದ ಪೇಯ ಎಂದು ವಿಜ್ಞಾನಿಗಳು ಹೇಳುತ್ತಾರೆ.ಆದರೆ ಅದು ಭಾರತೀಯರ ಅತ್ಯಂತ ಪ್ರಿಯ ಪೇಯವಾಗಿರುವದಂತೂ ಸತ್ಯ.ತಲೆ ನೋಯುವವರಿಗೆ, ಜ್ವರ ಬಂದ ರೋಗಿಗಳಿಗೆ ಇದು ದಿವ್ಯೌಷಧಿ. ದಿನಕ್ಕೆ ಎಷ್ಟು ಸಲ ಚಹಾ ಕುಡಿಯಬೇಕು ವೈದ್ಯರು ಏನೆಲ್ಲ ನಿಯಮ ಹೇಳಿದರೂ ನಾಲ್ಕಾರು ಸಲ ಅರ್ಧ ಕಪ್ ಚಹಾ ಸೇವನೆ ನಮ್ಮ ರೂಢಿಯಾಗಿದೆ ಎನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಅಂತೂ ಚಹಾ ಇಲ್ಲದೆ ಬದುಕುವ ಭಾರತಿಯರ ಸಂಖ್ಯೆ ತೀರಾ ಕಡಿಮೆ..ಚಹಾ ಕುಡಿಯುವ ಚಟ ಇಲ್ಲದವರು ಒಂದು ರೀತಿಯಲ್ಲಿ ನಮಗೆ ದೇವತೆಗಳ ಹಾಗೆ ಕಾಣಿಸುವದು ಸುಳ್ಳಲ್ಲ.ಎಲ್ಲರಿಗೂ ಚಹಾ ದಿನದ ಶುಭಾಶಯಗಳು ಇಂದು ೨೦/೦೫/೨೦೨೬ಚಹಾದ ದಿನವಂತೆ..ಚಹಾ ಇಲ್ಲದೆ ಸೂರ್ಯೋದಯವೇ ಆಗದ ನಮಗೆ ಅಂದರೆ ಉತ್ತರ ಕರ್ನಾಟಕದ ಮಂದಿಗೆ ಚಹಾಕ್ಕೊಂದು ದಿನವಿದೆಯಂದರೆ ನಗೆ ಬರುತ್ತದೆ.ಹಾಗೆ ನೋಡಿದರೆ ನಮ್ಮ ಜನಕ್ಕೆ ಯಾಕೊ ಕಾಫಿ ಕಂಡರೆ ಅಷ್ಟಕ್ಕಷ್ಟೇ. ನಮ್ಮಪ್ರಕಾರ ಎಲ್ಲದಕ್ಕೂ ದಿವ್ಯೌಷಧಿ ಚಹಾನೆ.ಅಂತೆಯೆ ಅದನ್ನು ದೇವಲೋಕದ ಅಮೃತ ಎಂದು‌ ಕರೆಯುವದೂ ಇದೆ.ಮನೆಗಳಿಗೆ ಬಂದಾಗ ಅತಿಥಿಗಳಿಗೆ ಕೊಡಮಾಡುವ ಕನಿಷ್ಟ ಪಕ್ಷದ ಆತಿಣಥ್ಯ ಎಂದರೆ ಚಹಾನೇ ಆಗಿದೆ.”ಬರ್ರಿ ಬರ್ರಿ ಅರ್ಧ ಕಪ್ ಚಹಾ ಕುಡದ ಹೋಗರಿ” ಎಂದು ನಾವು ಅತಿಥಿಗಳಿಗೆ ಒತ್ತಾಯ ಮಾಡುವದೂ ಇದೆ.ಬಂದ ಅತಿಥಿಗಳಿಗೆ ನಾವು ಏನು‌ಕೊಡದಿದ್ದರೂ ಪರ್ವಾ ಇಲ್ಲ ಒಂದು ಕಪ್ ಚಹಾನಾದರೂ ಕೊಡಲೇ ಬೇಕು.ಒಂದು ವೇಳೆ ಚಹಾನೂ ಆಫರ್ ಮಾಡದವರನ್ನು ಕಂಡು ” ಏನ್ ಜಿಪುಣರೆಪಾ,ಅವರ ಮುಖಕ್ಕ ಅರ್ಧ ಕಪ್  ಚಹಾ ಹುಟ್ಟಲಿಲ್ಲ” ಎಂದು ಬೈಯುವವರೂ ಇದ್ದಾರೆ. ಚಹಾ ಅಂಗಡಿಗಳೆಂದು ನಾವು ಹೋಟೆಲ್ ನ್ನು ಹೆಸರಿಸುತ್ತೇವೆ.ಅಲ್ಲಿ ಏನೆಲ್ಲ ಖಾದ್ಯಗಳನ್ನು‌ ಮಾಡಬಹುದಾದರೂ ಅವುಗಳ ಸೇವನೆಯ ನಂತರ ಅರ್ಧ ಕಪ್ ಚಹಾ ಸೇವನೆ ಇರಲೇಬೇಕು.ಇರದಿದ್ದರೆ ಏನೇ ತಿಂದರೂ ಅದು ಅಪೂರ್ಣ.ಅದು ಒಂದುರೀತಿಯಲ್ಲಿ ಕಾರ್ಯಕ್ರಮಗಳಲ್ಲಿ ವಂದನಾರ್ಪಣೆ ಇದ್ದಂತೆ.ಎಂಥ ದೆ ಭಾಷಣ ನಡೆದರೂ ಕಡೆಗೆ ಒಂದು ಸಾಲಿನದಾದರೂ ವಂದನಾರ್ಪಣೆ ಯಾಗದಿದ್ದರೆ ಅದೆಂತಹ ಕಾರ್ಯಕ್ರಮ ಎನ್ನುವ ಹಾಗೆ ಏನೆ ಲ್ಲ ತಿಂಡಿ ತಿಂದರೂ ಚಹಾ ಇರದಿದ್ದರೆ ಅರ್ಧ ಆದಂತೆಯೆ ಎಂದು ತಿಳಿವಳಿಕೆ ಸರ್ವೇ ಸಾಮಾನ್ಯ.ನಮ್ಮಲ್ಲಿ ಊರುಗಳ ಸಿರಿತನವೂ ಈ ಹೊಟೆಲ್ ಗಳ ಆಧಾರದ ಮೇಲೆಯೆ ನಿರ್ಣಯವಾಗುವದುಂಟು.ಒಂದು ಚಹಾದಂಗಡಿಯೂ ಇರದೆ‌ ಇದ್ದರೆ” ಅದೆಂಥ ಹಿಂದುಳಿದ ಊರು ” ಎಂದು ಅಸಹ್ಯ ಮಾಡುವವರೂ ಇದ್ದಾರೆ. ಎಂಥ ಹಿರಿತನಗಳೂ  ನ್ಯಾಯನಿರ್ಣಯಗಳೂ ಚಹಾ ಸೇವನೆ ಯಿಂದಲೇ  ಆರಂಭ ಮತ್ತು‌ ಮುಕ್ತಾಯ ಎಂಬುದು ಉತ್ತರಕರ್ನಾಟದ ಒಂದು ನಿಯಮವೇ ಆಗಿದೆ. ಎಲ್ಲ ಸಮಾರಂಭಗಳ ಆರಂಭಕ್ಕೆ ಚಹಾ ಕೊಟ್ಟೇ ಕಾರ್ಯಕ್ರಮ ಆರಂಭಿಸೋದು ನಮ್ಮ‌ ಪದ್ಧತಿ. ಪೂರ್ತಿ ಚಹಾ ಕುಡಿಯುವವರಿಗಿಂತ ಅರ್ಧ ಚಹಾ ಕುಡಿಯುವವರೆ ಜಾಸ್ತಿ.ಗೆಳೆಯರು ಸೇರಿಕೊಂಡು ಅರ್ಧ ತಾಸಿಗೊಂದು ಬೈಟೂ ಚಹಾ ಕುಡಿಯುತ್ತ ಇಡಿ ದಿನವನ್ನೆಲ್ಲ ಊರ ಚಹಾದಂಗಡಿಗಳ ಕಟ್ಟೆಯ ಲ್ಲಿಯೇ ಕಳೆಯುವ ಯಜಮಾನರನ್ನು ನಾವು ಕಾಣುತ್ತೇವೆ.ಇಂಥ ಜಿಗರಿ ದೋಸ್ತರನ್ನು ಬೈಟೂ ದೋಸ್ತರು ಎಂತಲೂ‌ ಕರೆಯಬಹುದು.  ನಮ್ಮ ಹಳ್ಳಿಗಳಲ್ಲಿ ಕೆಲವರಂತೂ ಎಷ್ಟು ಚಹಾದಂಗಡಿಯ ಚಹಾದ ಮೇಲೆ ಜೀವ ಇಟ್ಟಿರುತ್ತಾರೆಂದರೆ ಎದ್ದೊಡನೆ ಅವರ ಮುಂಜಾನೆಗಳಾಗುವದೆ ಹೊಟೆಕಿನ ಮುಂದೆ.ಅಲ್ಲಿ ಬಂದು‌ಮುಖಮಾರ್ಜನ ಕಾರ್ಯಕ್ರಮ ಮುಗಿಸಿ ಒಂದಾದ‌ ಮೇಲೊಂದರಂತೆ  ಚಹಾ ಕುಡಿದು ಅಂಗಡಿಯವನ ಖಾತೆಗೇರಿಸಿ ಮುಂದಿನ ಕಾರ್ಯಕ್ಕೆ ತೆರಳೂವ ಭೂಪರಿಗೇನೂ ಕಡಿಮೆಯಿಲ್ಲ. ಹಿರಿಯ ಪ್ರಭಂಧಕಾರರಾದ ವಿರೇಂದ್ರ ಶಿಂಪಿ ಯವರು ಬರೆದ ನಮ್ಮೂ ರ ಚಹಾ ಹೊಟೆಲು ಎಂಬ ಪ್ರಬಂಧದಲ್ಲಿ ಈ ಚಹಾ ಹೊಟೆಲುಗಳನ್ನು “ಹಳ್ಳಿಯ ಪಾರ್ಲಿಮೆಂಟ್ ” “ವಿಧಾನ ಸೌಧ”ಗಳೆಂದು ಕರೆಯುತ್ತಾರೆ.ಏಕೆಂದರೆ ಊರಿನ ಎಲ್ಲ ಸುದ್ದಿಗಳೂ ಅಲ್ಲಿ ಬಂದು ಹೋಗುವದರಿಂದ ಅವು ವಾರ್ತಾ ಇಲಾಖೆಗಳಂತೆಯೂ ಕೆಲಸ ಮಾಡುವದುಂಟು. ನಿಮಗೆ ಊರಿನ ಯಾವ ಮೂಲೆಯ ಎಂಥದೆ ತಾಜಾ ಸುದ್ದಿ ಬೇಕಾದರೂ ನೀವು ಚಹಾದಂಗಡಿಯ ಒಂದು‌ ಮೂಲೆ ಹಿಡಿದು ಮೌನ ಕುಳಿತರೆ ಸಾಕು ನಿಮಗೆ ಎಲ್ಲವೂ ತಿಳಿಯುತ್ತಾ ಹೋಗುತ್ತದೆ. ಈಚೆಗಂತೂ ಸಕ್ಕರೆ ಖಾಯಿಲೆ ಭಾರತದ ಬಹು ದೊಡ್ಡ ಖಾಯಿಲೆಯಾದ ಮೇಲೆ ಸಕ್ಜರೆ ಹಾಕಿದ ಚಹಾ  ಕುಡಿಯುವರ ಸಂಖ್ಯೆ ಕಡಿಮೆಯಾಗಿ ಊರಿಗೂರಿಗೆ ಗಲ್ಲಿ ಗಲ್ಲಿಗಳಲ್ಲಿ ಬೆಲ್ಲದ ಚಹಾ ಎಂಬ ಹೆಸರಿನ ಗುಲ್ಪಿ ಚಹಾದಂಗಡಿಗಳೂ,ಕೇಸರ ಚಹಾದಂಗಡಿಗಳೂ ತಲೆಯೆತ್ತಿರುವದನ್ನು ಕಾಣುತ್ತವೆ. ಇನ್ನು ಸಕ್ಕರೆ ಖಾಯಿಲೆ ಗೆ ತುತ್ತಾದವರು ಸುಗರ್ ಲೆಸ್ ಚಹಾ ಸೇವನೆ ಮಾಡಿಯಾದರೂ ಚಹಾದ ಚಟ ತೀರಿಸಿಕೊಳ್ಳುತ್ತಾರೆ. ಈಚಿಚೆಗೆ ಅವರದೆ ಸಂಖ್ಯೆ ಜಾಸ್ತಿಯಾದುದರಿಂದ ಸುಗರ್ ಲೆಸ್ಸಾ ಎಂದು ಅಂಗಡಿಯವರೆ ಕೇಳಿ ಖಂಡಿತ ಮಾಡಿಕೊಳ್ಳುವದುಂಟು. ಸರಕಾರಿ ಕಛೇರಿಗಳಲ್ಲಿ ಚಹಾದ ವಿರಾಮ ಎಂದು ಒಂದು ಬಗೆಯ ವಿರಾಮ ಕಾಲವೇ ನಿರ್ಣಯವಾಗಿರುತ್ತದೆ. ಬೆಂಗಳೂರಿನಂತಹ ದೊಡ್ಡ ನಗರಗಳಿರಲಿ, ಚಿಕ್ಕ ನಗರಗಳಿರಲಿ ಸರಕಾರಿ ಇಲಾಖೆಯ ಅಧಿಕಾರಿಗಳು ಖಾಯಂ ಮ್ಮಾಗಿ ಅಂತರ್ಧಾನ ಆಗಿರುವದು..ಕೇಳಿದರೆ ಚಹಾಕ್ಕೆ ಹೋಗಿದ್ದಾರೆ ಎಂದು ಹೇಳುವದು ಸಾನಾನ್ಯವಾಗಿದೆ.ಕಛೇರಿಯ ನಿರ್ಣಯವಾಗದ ಕೆಲವು ಕೇಸಗಳ ಪರೊಹಾರೋಪಾಯವನ್ನು ಚಹಾದಂಗಡಿಯ ಟೇಬಲ್ ಬಳಿಯೆ ಕೇಸ್ ವರ್ಕರ್ ಗಳು ಮುಗಿಸಿಕೊಳ್ಳು ವದೂ ಅನುಭವಸ್ತರ ಎಷ್ಟು ಬರೆದರೂ ಈ ಚಹಾಯಣ ಮುಗಿಯಲಾರದು.ಎಲ್ಲ ಚಹಾಪ್ರಿಯರ ಅನುಭವಗಳು ಒಬ್ಬರಿಗಿಂತ ಒಬ್ಬರವು ಭಿನ್ನ‌ಮತ್ತು ಶ್ರೀ ಮಂತ ಆಗಿರುವದು ಕಾಣಬರುತ್ತದೆ. ಚಹಾಯಣವಂತೂ ರಾಮಾಯಣ ಕ್ಕಿಂತ ದೀರ್ಘವಾಗುತ್ತದೆ. ಚಹಾ ಕುಡಿಯುವದನ್ನು ಒಂದು ಬಗೆಯ habit ಎನ್ನುವ ಇಂಗ್ಲಿಷರ ಅದು ತೀರಾ ಕನಿಷ್ಟತಮ ಚಟ ಎನ್ನುತ್ತಾರೆ. ಅಂದರೆ ಯಾವ ಚಟವಿ ರದಿದ್ದರೂ ಚಹಾ ಚಟವಾದರೂ ಇದ್ದೇ ಇರುತ್ತದೆ ಎನ್ನುದದಕ್ಕೆ ಚಮತ್ಕಾರಿಕವಾಗಿ ಹೇಳುವದಿದೆ .habit ಪದದಲ್ಲಿ h ಹೋದರೆ a bit (ಸ್ವಲ್ಪ) ಉಳಿಯುವದಂತೆ .a ಹೋದರೆ bit (ತೀರ ಸ್ವಲ್ಪ) ಉಳಿಯುವದಂತೆ.b ಹೋದರೆ  it (ಇದು) ಉಳಿಯುತ್ತದೆ.I ಹೋದ‌ಮೇಲೆ t ( ಚಹಾ) ಉಳಿದೆ ಉಳಿಯುತ್ತದೆ ಎನ್ನುತ್ತಾರೆ. ಕಡೆಗೆ t ಕುಡಿಯುವ ಚಟವಂತೂ ಕನಿಷ್ಟ ಇದ್ದೇ ಇರುತ್ತದೆ ಎಂಬ ಭಾವನೆ ಅಲ್ಲಿ ಹೊರಹೊಮ್ಮುತ್ತದೆ. ಚಹಾ ಬೇರೆ ದೇಶದಿಂದ ಬಂದ ಪೇಯ ಎಂದು ವಿಜ್ಞಾನಿಗಳು ಹೇಳುತ್ತಾರೆ.ಆದರೆ ಅದು ಭಾರತೀಯರ ಅತ್ಯಂತ ಪ್ರಿಯ ಪೇಯವಾಗಿರುವದಂತೂ ಸತ್ಯ.ತಲೆ ನೋಯುವವರಿಗೆ, ಜ್ವರ ಬಂದ ರೋಗಿಗಳಿಗೆ ಇದು ದಿವ್ಯೌಷಧಿ. ದಿನಕ್ಕೆ ಎಷ್ಟು ಸಲ ಚಹಾ ಕುಡಿಯಬೇಕು ವೈದ್ಯರು ಏನೆಲ್ಲ ನಿಯಮ ಹೇಳಿದರೂ ನಾಲ್ಕಾರು ಸಲ ಅರ್ಧ ಕಪ್ ಚಹಾ ಸೇವನೆ ನಮ್ಮ ರೂಢಿಯಾಗಿದೆ ಎನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ.

ಚಹಾಯಣ…ದ ರಾಮಾಯಣ(ಕಿರು ಪ್ರಬಂಧ) ಡಾ.ವೈ ಎಂ.ಯಾಕೊಳ್ಳಿ Read Post »

ಇತರೆ

“ಅಮ್ಮನ ಸೆರಗು” ಕವಿತಾ ಶ್ರೀನಿವಾಸ ನಾಯಕ್

ವಿಶೇಷ ಸಂಗಾತಿ ಅಮ್ಮನ ಸೆರಗು ಕವಿತಾ ಶ್ರೀನಿವಾಸ ನಾಯಕ್ ​ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣಾಡಿಸುವ ಸಂದರ್ಭದಲ್ಲಿ ಒಬ್ಬ ವಿದ್ಯಾರ್ಥಿ ಬರೆದ ಪ್ರಬಂಧವೊಂದು ನನ್ನ ಗಮನ ಸೆಳೆಯಿತು. ಶಿಕ್ಷಕರು ಕೊಟ್ಟ ವಿಷಯಕ್ಕೆ ಆ ಮಗು ತನ್ನ ತಾಯಿಯ ಸೆರಗಿನ ಮಹತ್ವವನ್ನು ತನ್ನದೇ ಆದ ಮುಗ್ಧ ತಿಳುವಳಿಕೆಯಲ್ಲಿ ಬರೆದಿತ್ತು. ಆ ಸಾಲುಗಳು ನನ್ನ ಹೃದಯಕ್ಕೆ ಎಷ್ಟು ಆಳವಾಗಿ ನಾಟಿದವೆಂದರೆ, ಇಂದು ನನ್ನ ಲೇಖನಿಗೆ ಅದೇ ಪ್ರೇರಣೆಯಾಯಿತು. ಹೌದು, ಅಮ್ಮನ ಸೆರಗನ್ನು ವರ್ಣಿಸಲು ಈ ಜಗದ ಪದಗಳೇ ಸಾಲದು; ಅದು ಕೇವಲ ಒಂದು ಬಟ್ಟೆಯ ತುಂಡಲ್ಲ, ಮಗುವಿನ ರಕ್ಷಣೆಯ ಮೊದಲ ಗೂಡು!​ವಿಶೇಷವಾಗಿ 70 ಮತ್ತು 80 ರ ದಶಕದ ಮಕ್ಕಳಿಗೆ ಅಮ್ಮನ ಸೆರಗಿನ ಸುಖ ಏನೆಂಬುದು ಚೆನ್ನಾಗಿ ಗೊತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಕ್ರಮೇಣ ಆ ಸೀರೆಯ ಸೆರಗು ಮಾಯವಾಗಿ, ಎಲ್ಲೆಡೆ ನೈಟಿಗಳು ಆವರಿಸಿಬಿಟ್ಟಿವೆ. ಆ ಬದಲಾವಣೆಯೊಂದಿಗೆ ನಾವೇನೋ ಆಧುನಿಕತೆಯತ್ತ ಸಾಗಿದ್ದೇವೆ ನಿಜ, ಆದರೆ ಆ ಸೆರಗಿನಲ್ಲಿದ್ದ ಬೆಚ್ಚಗಿನ ಪ್ರೀತಿ, ಆಪ್ತತೆ ಎಲ್ಲೋ ಒಂದು ಕಡೆ ಕಳೆದುಹೋಗುತ್ತಿದೆ ಅನಿಸುವುದು ಸುಳ್ಳಲ್ಲ.​ಅಮ್ಮನ ಸೆರಗು ಆ ದಿನಗಳಲ್ಲಿ ಕೇವಲ ಮಗುವಿಗೆ ಮಾತ್ರವಲ್ಲ, ಇಡೀ ಮನೆಗೇ ಒಂದು ರಕ್ಷಣಾ ಕವಚವಾಗಿತ್ತು. ಮನೆಯ ಒಳಗೆ ಅಮ್ಮ ಅಡುಗೆಮನೆಯಿಂದ ಹಿಡಿದು ಹಿತ್ತಲವರೆಗೂ ಕೆಲಸ ಮಾಡುವಾಗ ಆಕೆಯ ಸೊಂಟಕ್ಕೆ ಸುತ್ತಿಕೊಂಡಿರುತ್ತಿದ್ದ ಸೀರೆಯ ಸೆರಗಿನಲ್ಲಿ ಇಡೀ ಸಂಸಾರದ ನೆಮ್ಮದಿ ಅಡಗಿರುತ್ತಿತ್ತು.​ಮಕ್ಕಳಿಗೆ ಅಮ್ಮನ ಸೆರಗೇ ಸರ್ವಸ್ವ:ಮಕ್ಕಳಿಗೆ ಅಮ್ಮನ ಸೆರಗು ಹಲವು ರೂಪಗಳಲ್ಲಿ ಆಸರೆಯಾಗುತ್ತಿತ್ತು. ಆಟ ಆಡಿ ಬಂದ ಮಗು ಮುಖ ಒರೆಸಿಕೊಳ್ಳಲು ಮೊದಲು ಹುಡುಕುತ್ತಿದ್ದುದೇ ಅಮ್ಮನ ಸೆರಗನ್ನು. ಬೇಸಿಗೆಯ ಸೆಕೆಗೆ ಬೀಸಣಿಕೆಯಾಗುತ್ತಿದ್ದದ್ದೂ ಅದೇ, ಚಳಿಗಾಲದ ನಡುಕಕ್ಕೆ ಬೆಚ್ಚಗಿನ ಹೊದಿಕೆಯಾಗುತ್ತಿದ್ದದ್ದೂ ಅದೇ. ಅಷ್ಟೇ ಏಕೆ, ಮನೆಗೆ ಯಾರಾದರೂ ನೆಂಟರು ಬಂದಾಗ ನಾಚಿಕೆಯಿಂದ ಓಡಿಹೋಗಿ ಅಮ್ಮನ ಸೆರಗಿನ ಮರೆಯಲ್ಲಿ ಅಡಗಿ ನಿಲ್ಲುತ್ತಿದ್ದ ಆ ಕ್ಷಣಗಳೇ ಒಂದು ಸುಂದರ ಕಾವ್ಯ. ತಾಯಿಯ ಸೆರಗನ್ನು ಗಟ್ಟಿಯಾಗಿ ಹಿಡಿದುಕೊಂಡರೆ ಸಾಕು, ಈ ಜಗತ್ತಿನ ಯಾವುದೇ ಶಕ್ತಿ ತನ್ನನ್ನು ಏನೂ ಮಾಡಲು ಸಾಧ್ಯವಿಲ್ಲ ಎಂಬ ಅದಮ್ಯ ಧೈರ್ಯ ಮತ್ತು ಸುರಕ್ಷತೆಯ ಭಾವ ಆ ಪುಟಾಣಿ ಹೃದಯದಲ್ಲಿ ಮೂಡುತ್ತಿತ್ತು.​ಮನೆಯವರಿಗೂ ಅದೊಂದು ಭರವಸೆ:ಕೇವಲ ಮಕ್ಕಳಿಗಷ್ಟೇ ಅಲ್ಲ, ಮನೆಯ ಹಿರಿಯರಿಗೂ ಅಮ್ಮನ ಸೆರಗು ಭರವಸೆಯ ಸಂಕೇತವಾಗಿತ್ತು. ಅಡುಗೆಮನೆಯಲ್ಲಿ ಸದಾ ದುಡಿಯುವ ತಾಯಿಯ ಸೆರಗಿನ ಅಂಚಿಗೆ ಮನೆಯ ಬೀಗದ ಕೈಗಳು ಕಟ್ಟಲ್ಪಟ್ಟಿರುತ್ತಿದ್ದವು. ಅದು ಕೇವಲ ಬೀಗದ ಕೈಯಲ್ಲ, ಇಡೀ ಮನೆಯ ಜವಾಬ್ದಾರಿ, ಸಂಸ್ಕಾರ ಮತ್ತು ತಾಯಿ ಮುನ್ನಡೆಸುವ ಸಂಸಾರದ ದಾರಿದೀಪ. ತಂದೆ ಆಯಾಸದಿಂದ ಕೆಲಸ ಮುಗಿಸಿ ಬಂದಾಗ, ಕಷ್ಟದ ದಿನಗಳಲ್ಲಿ ಅಮ್ಮ ಅದೇ ಸೆರಗಿನಿಂದ ತನ್ನ ಕಣ್ಣೀರನ್ನು ಮರೆಮಾಚಿ, ಎಲ್ಲರಿಗೂ ಧೈರ್ಯ ತುಂಬುತ್ತಿದ್ದಳು.​ಕಾಲ ಬದಲಾಗಿದೆ. ಇಂದು ಉಡುಗೆ-ತೊಡುಗೆಗಳು ಬದಲಾಗಿರಬಹುದು, ಬದುಕಿನ ಶೈಲಿ ಆಧುನಿಕವಾಗಿರಬಹುದು. ಆದರೆ ಅಮ್ಮನ ಸೆರಗು ನೀಡುತ್ತಿದ್ದ ಆ ನಿಷ್ಕಲ್ಮಷ ಪ್ರೀತಿ, ಮಮತೆ ಮತ್ತು ಸುರಕ್ಷತೆಯ ಭಾವ ಇಂದಿಗೂ ಶಾಶ್ವತ. ಬಟ್ಟೆಗಳು ಬದಲಾಗಬಹುದು, ಆದರೆ ತಾಯಿಯ ಮಡಿಲ ಒಲವು ಎಂದಿಗೂ ಬದಲಾಗಲಾರದು. ನಮ್ಮ ಬಾಲ್ಯದ ಆ ಸುಂದರ ದಿನಗಳನ್ನು ನೆನಪಿಸಿಕೊಳ್ಳುತ್ತಾ, ತಾಯ್ತನದ ಆ ಪರಮ ಸುಖಕ್ಕೆ ಮನದಲ್ಲೇ ನಮಿಸೋಣ. ​ಕವಿತಾ ಶ್ರೀನಿವಾಸ್ ನಾಯಕ್​ಕಾರ್ಕಳ, ಉಡುಪಿ ಜಿಲ್ಲೆ.

“ಅಮ್ಮನ ಸೆರಗು” ಕವಿತಾ ಶ್ರೀನಿವಾಸ ನಾಯಕ್ Read Post »

ಇತರೆ, ಜೀವನ

“ಒಂದು ನಿರ್ಧಾರದ ಸುತ್ತಾ”‌ ಡಾ.ಭಾರತಿ ಅಶೋಕ್

ವಿಶೇಷ ಸಂಗಾತಿ ಡಾ.ಭಾರತಿ ಅಶೋಕ್ “ಒಂದು ನಿರ್ಧಾರದ ಸುತ್ತಾ”‌  ಯಾವುದಾದರೂ ಒಂದು ವಿಷಯದ ಬಗೆಗೆ ಆಳವಾಗಿ ಯೋಚಿಸದೇ ಅದರ  ಹರವಿನ ಬಗೆಗೆ ತಿಳಿಯದೇ  ದಿಡೀರ್ ಎಂದು ನಿರ್ಧಾರಗಳನ್ನು ತೆಗೆದುಕೊಳ್ಳುವುದು ತುಂಬಾ ಅಪಾಯಕಾರಿ. ಹಾಗೆ ತೆಗೆದುಕೊಂಡ ನಿರ್ಧಾರದಿಂದ ತುಂಬಾ ನಷ್ಟವನ್ನು ಅನುಭವಿಸಬೇಕಾಗುತ್ತದೆ, ಮತ್ತು ಕೆಲವೊಮ್ಮೆ ಈ ನಿರ್ಧಾರಗಳು ಕೌಟುಂಬಿಕ, ಸಾಂಸ್ಥಿಕವಾಗಿರಬಹುದು, ಸಾಮಾಜಿಕವಾಗಿರಬಹುದು. ಈ ಯಾವ ನೆಲೆಯಲ್ಲೂ ಅದು ಒಳ್ಳೆಯದಲ್ಲ. ಕೆಲವು ಸಲ ಅವುಗಳಿಂದ  ಅನಾಹುತ ಸಂಭವಿಸಬಹುದು. ಆದ್ದರಿಂದ ನಿರ್ಧಾರ ತೆಗೆದುಕೊಳ್ಳಲು ಹತ್ತಾರು ಬಾರಿ ಯೋಚಿಸಿಬೇಕು. ಆ ನಿರ್ಧಾರದ ಸುತ್ತಲೂ  ಧನಾತ್ಮಕ, ಋಣಾತ್ಮಕ ಫಲಿತಾಂಶದ ಬಗೆಗೆ ತಿಳುವಳಿಕೆ ಇರಬೇಕು. ಒಂದು ವೇಳೆ ಧನಾತ್ಮಕ ಪರಿಣಾಮವಾದರೆ ತೆಗೆದುಕೊಂಡ ನಿರ್ಧಾರಕ್ಕೆ ಬೆಲೆ ಇರುತ್ತದೆ. ಅದು ಸರ್ವಕಾಲಿಕ ಸತ್ಯವಾಗಿದ್ದು, ಮತ್ತು ಅದು ಅನುಸರಿಸರಣೀಯವಾಗಿರುತ್ತದೆ.             ತೆಗೆದುಕೊಂಡ ನಿರ್ಧಾರದಿಂದ ವ್ಯತಿರಿಕ್ತ ಪರಿಣಾಮಗಳಾದರೆ  ಅದು ಕ್ಷಣಿಕ ನಿರ್ಧಾರ, ಚಿಂತನೆ ಇಲ್ಲದೇ ತೆಗೆದುಕೊಂಡುದರ ಪರಿಣಾಮವಾಗಿದ್ದು, ಅದು ಸಾರ್ವತ್ರಿಕವಾಗಿರದೆ, ಸರ್ವಕಾಲಿಕವೂ ಆಗಿರದೇ ಅಪಾಯಗಳಿಂದ ಕೂಡಿರುತ್ತದೆ. ಆದ್ದರಿಂದ ವ್ಯಕ್ತಿಗೆ, ಸಮಷ್ಟಿಗೆ ತತ್ ಕ್ಷಣವೇ ತೆಗೆದುಕೊಂಡ ನಿರ್ಧಾರದ ಪರಿಣಾಮವಾಗಿ ಆಗುವ ಅನಾಹುತಕ್ಕೆ ಉದಾಹರಣೆಯಾಗುತ್ತದೆ, ಆಗ ಅಂತಹ ನಿರ್ಧಾರವು ವರ್ಜಿಸಲ್ಪಡುತ್ತದೆ.             ನಿರ್ಧಾರ ವೈಯುಕ್ತಿಕ ನೆಲೆಯಲ್ಲಿದ್ದರೆ ಅದಕ್ಕೆ ಉದಾಹರಣೆಯಾಗಿ : ಇಂದಿನ ಯುವ ಜನಾಂಗ ಮಾಡಿಕೊಳ್ಳುವ ಅನಾಹುತಗಳು ಒಂದೆ ಎರಡೇ… ನೋಡಿದಾಕ್ಷಣ ಆಕ಼ರ್ಷಣೆಗೆ ಒಳಗಾಗಿ ತಮ್ಮ ಬದುಕನ್ನು ಸಂಪೂರ್ಣವಾಗಿ ನಾಶ ಮಾಡಿಕೋಳ್ಳುವುದು ಹೀಗೆಯೇ. ಯುವಕ ಯುವತಿಯರು  ಆಕರ್ಷಿತರಾಗುತ್ತಿದ್ದಂತೆಯೇ ಅದನ್ನು ಪ್ರೀತಿ ಎಂದು ನಂಬಿ ಸಮಾಜದ ಒಪ್ಪಿಗೆ ಎಂಬಂತೆ ವಿವಾಹ ಬಂಧನಕ್ಕೆ ಒಳಗಾಗುವುದು ನಿಜಕ್ಕೂ ಅದು ಪ್ರೀತಿನಾ ಅದು ಕೊನೆಯವರೆಗೂ ಉಳಿಯುತ್ತಾ ಎಂದು ಯೋಚಿಸಲು ಸಹ ಅವಕಾಶವಿಲ್ಲದಂತೆ ತಮ್ಮನ್ನು ತಾವು ಬದುಕಿನ/ಪ್ರೀತಿಯ ಪರೀಕ್ಷೆಗೆ ಒಡ್ಡಿ ಕೊಳ್ಳುತ್ತಾರೆ. ಆಕರ್ಷಣೆ ಮುಗಿಯುತ್ತಿದ್ದಂತೆ ಬದುಕು ಅಸಹನೀಯವಾಗುತ್ತದೆ ಯಾಕೆಂದರೆ ಅವರದು ವಯೋ ಸಹಜ ಆಕರ್ಷಣೆ. ಬದುಕಿಗೆ ಪ್ರೀತಿ ಬೇಕು ಪ್ರೀತಿಯೊಂದೆ ಬದುಕಲ್ಲ ಎನ್ನುವುದರ ಅರಿವು ಇರುವುದಿಲ್ಲ. ಬದುಕಲು ಹಣ ಬೇಕು, ಹಣ ಬೇಕೆಂದರೆ ದುಡಿಯಬೇಕು, ದುಡಿಯುವ ಮಾರ್ಗವೇ ತಿಳಿದಿಲ್ಲ ಆಗಲೇ ಬದುಕು ಕಟ್ಟಿಕೊಳ್ಳುತ್ತೇವೆ ಜೊತೆಯಾಗಿ ಎಂದರೆ ಸಾಧ್ಯವಾಗದು. ತಾವು ಜೊತೆಯಾಗುತ್ತೇವೆ ಎಂದುಕೊಂಡು ಮನೆಯಿಂದ ಪೋಷಕರಿಂದ ದೂರ ಹೋಗುವಾಗ ಮನೆಯಿಂದ ಕೊಂಡ್ಯೊಯ್ದ ಪುಡಿಗಾಸು ಮುಗಿಯುತ್ತಿದ್ದಂತೆ. ಬದುಕು ಇಷ್ಟೇ ಎನ್ನಿಸಿಬಿಡುತ್ತದೆ. ಪ್ರೀತಿ ಎಂದುಕೊಂಡದ್ದುಅಸಹನೀಯವಾಗುತ್ತದೆ.  ಕಾರಣ ಬದುಕಿನ ಬಗೆಗೆ ಕಲ್ಪನೆಯೇ ಇಲ್ಲ. ಅದು ಪ್ರೀತಿ ಅಲ್ಲ ಕೇವಲ ಆಕರ್ಷಣೆ ಎಂದು ಅರ್ಥ ಮಾಡಿಕೊಳ್ಳುವ ಹೊತ್ತಿಗೆ ಎಲ್ಲವೂ ಮುಗಿದೇ ಹೋಯ್ತು ಎನ್ನುವಂತಹ ಅನುಭವವಾಗುವುದು. ಆಗ ಆ ಬಂಧ(ನ)ದಿಂದ ಮುಕ್ತಿಗಾಗಿ ವಿಚ್ಛೇದನ, ಆತ್ಮ ಹತ್ಯೆಯಂತಹ ಗಂಭೀರ ಸ್ವರೂಪದ ನಿರ್ಧಾರಕ್ಕೆ ಬರುತ್ತಾರೆ. “ಬದುಕು ಬದುಕಲಾರದಷ್ಟು ಭೀಕರವಲ್ಲ, ಅಂದುಕೊಂಡಷ್ಟು ಸರಳವೂ ಅಲ್ಲ” ಎನ್ನುವ ಸತ್ಯದ ಅರಿವಾಗಬೇಕು ಅಂಥ ಅರಿವನ್ನು ಮೂಡಿಸುವ ಕೆಲಸ ಆಗಬೇಕಿದೆ.  ಹೌದು ವಿವಾಹ ಅದರ ನಂತರದ ಬದುಕು ಅವುಗಳ ಬಗೆಗೆ ನಮ್ಮ ಯುವ ಜನಾಂಗಕ್ಕೆ ಸರಿಯಾದ ತಿಳುವಳಿಕೆ ಇಲ್ಲದಿರುವುದು ನಮ್ಮಂಥ ಸಾಂಪ್ರದಾಯಿಕ ಸಮಾಜದಲ್ಲಿ ನಿರೀಕ್ಷೆಯೂ ಸರಿಯಲ್ಲ. ಇಷ್ಟು ಮಾತ್ರವಲ್ಲದೇ ಅವರ ನಿರ್ಧಾರಗಳಿಗೆ ಇಂಬು ದೊರೆಯಲು ಅವರ ಆರ್ಥಿಕ ಭದ್ರತೆಯೂ ಪೂರಕವಾಗಿರಬೇಕು. ಅದು ಸರಿಯಾಗಿದ್ದರೆ  ಕಷ್ಟದಲ್ಲೂ ಸೈರಿಣೆಯಿಂದ ಬದುಕುವ ಸಾಧ್ಯತೆಗಳನ್ನು ಒದಗಿಸಿದಂತಾಗುತ್ತದೆ. ಹಾಗಿದ್ದಾಗಲೂ ನಿರ್ಧಾರಗಳು ಚಿಂತನೆಯನ್ನು ನಿರೀಕ್ಷಿಸುತ್ತವೆ.             ಇಂಥ ಕ್ಷಣಿಕ ನಿರ್ಧಾರಗಳನ್ನು ನಮ್ಮ ಯುವ ಜನತೆ ಮಾತ್ರ ತೆಗೆದುಕೊಳ್ಳುತ್ತದೆ ಎಂದು ಭಾವಿಸುವುದು ಸಹ ನಮ್ಮ ಕ್ಷಣಿಕ ನಿರ್ಧಾರವಾದೀತು. ಏಕೆಂದರೆ ನಮಗೆ ಇತಿಹಾಸವಿದೆ. ಅದರ ಪರಿಪಾಠ ನಮ್ಮಲ್ಲೂ ಮೈಗೂಡಿದೆ. ‘ನಭೂತೋ ನಭವಿಷ್ಯತೆ” ಎನ್ನುವಂತೆ ನಮ್ಮ ಭೂತ ನಮ್ಮನ್ನು ಬೆನ್ನಟ್ಟಿ ಭವಿಷ್ಯದಲ್ಲೂ ಜೊತೆಗಿರುತ್ತದೆ.  ಹೇಗೆ ಎನ್ನುವುದನ್ನು ನೋಡೋಣ ನಮ್ಮ ಬಾದಷಹ “ಮೊಹಮ್ಮದ್ ಬೀನ್ ತುಘಲಕ್” ತೆಗೆದುಕೊಳ್ಳುತ್ತಿದ್ದ ತತ್ ಕ್ಷಣದ ನಿರ್ಧಾರಗಳಿಂದ ಜನತೆ ಎದುರಿಸಿದ ಸಮಸ್ಯೆಗಳು ಒಂದೆರಡಲ್ಲ. ರಾಜಧಾನಿಯನ್ನು ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ(ದೆಹಲಿಯಿಂದ ದೇವಗಿರಿಗೆ, ದೇವಗಿರಿಯಿಂದ ದೆಹಲಿಗೆ)ಸ್ಥಳಾಂತರಿಸಿದಾಗ ಜನ, ದನ, ಪಶು, ಪಕ್ಷಿಗಳು ಅನುಭವಿಸಿದ ನೋವಿನ ತೀವ್ರತೆಯನ್ನು ಹೇಳಿದರೆ ಪರಿಮಕಾರಿಯಾಗಿರುವುದಿಲ್ಲ. ಅನುಭವಿಸಿದವರೇ ಬಲ್ಲರು. ಸುಲ್ತಾನನಿಗೆ ಬುದ್ಧಿ ಇರಲಿಲ್ಲ ಎಂದುಕೊಂಡರೆ ಅದು ನಮ್ಮ ಮೂರ್ಖತನವಾದೀತು. ಆತನೋ ಭಯಂಕರ ಮೇಧಾವಿ. ಪರ್ಷಿಯನ್ ಅರೇಬಿಕ್ ಭಾಷೆಗಳಲ್ಲಿ ಪಂಡಿತ. ಸಾಹಿತ್ಯ ಧರ್ಮ ಖಗೋಳ ಶಾಸ್ತ್ರ ತರ್ಕಶಾಸ್ತ್ರ,ತತ್ವಶಾಸ್ತ್ರ ಗಣಿತಶಾಸ್ತ್ರಗಳಲ್ಲಿ ಆಳವಾದ ಜ್ಞಾನವನ್ನು ಪಡೆದಿದ್ದನು. ಆತನ ಜ್ಞಾನ ನಾಲ್ಕು ಐದು ಶತಮಾನದಷ್ಟು ಮುಂದಿತ್ತು ಎಂದರು ಸರಿಯೆ. ಅಂಥಹ ಚಾಣಾಕ್ಷ.       ಯಾಕೆ ನಾನು ಇತಿಹಾಸದಿಂದ ಇಂಥ ಮೇಧಾವಿಯನ್ನು ಉದಾಹರಿಸಿದೆ ಎಂದರೆ ಆತನ ನಿರ್ಧಾರಗಳು, ಯೋಜನೆಗಳನ್ನು ಜಾರಿಗೊಳಿಸುವ ಕ್ರಮ, ಅಂದಿನ ಪರಿಸ್ಥಿತಿಯ ಕುರಿತು ಕುಳಿತು ಸರಿಯಾದ ರೀತಿಯಲ್ಲಿ ಚಿಂತನೆ ಮಾಡಿ ನಿರ್ಧಾರ ತೆಗೆದುಕೊಳ್ಳುವ ತಾಳ್ಮೆ  ಆತನಲ್ಲಿ ಇರಲಿಲ್ಲ. ಬುದ್ಧಿವಂತಿಕೆ ವ್ಯವಹಾರ ನೈಪುಣ್ಯತೆಯ ಕೊರತೆಯಿಂದಾಗಿ  ಏಕಾಏಕೀ ನಿರ್ಧಾರ ಕೈಕೊಳ್ಳುತ್ತಿದ್ದುದರ ಪರಿಣಾಮವಾಗಿತ್ತು. ಅದರೆ ಅಂದಿನ ರಾಜಕೀಯ ಸ್ಥಿತಿಗತಿಗಳಿಗೆ  ಅದು ಅನಿವಾರ್ಯವಾಗಿತ್ರು, ಬದಲಾವಣೆ ಪೂರ್ವನಿರ್ಧಾರಿತವಾಗಿದ್ದರೆ,ವ್ಯವಸ್ಥಿತವಾಗಿದ್ದರೆ..‌..ಉತ್ತಮ ಆಡಳಿತ ವ್ಯವಸ್ಥೆಯನ್ನು ಕೊಟ್ಟ ಕೀರ್ತಿ ಆತನದಾಗಿರುತ್ತಿತ್ತು      ಅಂದರೆ ಒಂದು ನಿರ್ಧಾರ ಅದು ಬಹುಮುಖ ಚಿಂತನೆಯಿಂದಕೂಡಿರಬೇಕು. ಅದರಿಂದ ವಿರುದ್ಧ ಪರಿಣಾಮಗಳಾದರೂ ಅವು ಆಶಾಶ್ವತವಾಗಿದ್ದು ವೈರುದ್ಯಗಳಿಗೂ ಶಾಶ್ವತ ಪರಿಹಾರಗಳನ್ನು ಕಂಡುಕೊಳ್ಳುವಂತಹ ನಿರ್ಧಾರಗಳನ್ನು ಮೊದಲೆ  ಮಾಡಿಕೊಂಡರೆ ಅದು ಯಶಸ್ವಿಯಾಗುತ್ತದೆ. ಹಾಗೆ ಅದರ  ಬಗೆಗೆ ವಿವರವಾದ ಆಲೋಚನೆಗಳು  ವಿಭಿನ್ನ ಆಯಾಮಗಳಿಂದ ನಡೆದು ಅದಕ್ಕೆ ತಕ್ಕುದಾದ ಅನುಸರಣೀಯ  ಮಾರ್ಗೋಪಾಯಗಳನ್ನು ಕಂಡುಕೊಂಡೇ  ನಿರ್ಧಾರ ಕೈಕೊಂಡರೆ, ಅಂದರೆ , ಒಂದು ನಿರ್ಧಾರದ ಹಿಂದೆ ಅದರ ಒಳಿತು ಕೆಡುಕುಗಳನ್ನು ನಾವು ಸ್ವೀಕರಿಸುವ  ಪರಿಸ್ಥಿತಿಯನ್ನು ಸಹ ಅರಿತುಕೊಂಡು  ನಿರ್ಧರಿಸಿದಾಗ  ಅದು ಸಹಜವಾದ ನಿರ್ಧಾರವಾಗುತ್ತದೆ. ಪರಿಣಾಮ ಯಾವಾಗಲೂ ಒಳ್ಳೆಯವೆ ಆಗಿರುತ್ತವೆ.  ಯೋಚಿಸಿ ಕೈಕೊಂಡಿದ್ದರಿಂದ ಅದಕ್ಕೆ  ಅಗತ್ಯವಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿರುತ್ತದೆ, ಇದು ಕಷ್ಟವೆನಿಸದು. ಇನ್ನು ರಾಜಕೀಯ ಕ್ಷೇತ್ರದಲ್ಲಂತು ಇದು ಅತ್ಯಂತ ಮಹತ್ವದ ಪಾತ್ರವಹಿಸುತ್ತದೆ.             ಇಂದಿನ ತಾಂತ್ರಿಕ ಯುಗದಲ್ಲಿ ಇದು ತುಂಬ ಅತ್ಯಗತ್ಯ.. ಕಾರಣ  ನಿರ್ಧಾರಗಳು ಸಾರ್ವತ್ರಿಕವಾಗಿರುವುದರಿಂದ  ಅದರ ಪರಿಣಾಮಗಳು ಇನ್ನು ಭೀಕರವಾಗಿರುವುದರಿಂದ  ನಿರ್ಧಾರದ ಹಿಂದಿನ ಪರಿಣಾಮಗಳ ಆಳವಾದ ಜ್ಞಾನ  ಚಿಂತನೆ ಅಗತ್ಯ. ಡಾ. ಭಾರತಿ ಅಶೋಕ್

“ಒಂದು ನಿರ್ಧಾರದ ಸುತ್ತಾ”‌ ಡಾ.ಭಾರತಿ ಅಶೋಕ್ Read Post »

ಇತರೆ

ವನಜಾ ಮಹಾಲಿಂಗಯ್ಯ “ಪ್ರೀತಿ ವಿವಾಹದ ನೆರಳು”

ಪ್ರೀತಿ ಸಂಗಾತಿ ವನಜಾ ಮಹಾಲಿಂಗಯ್ಯ “ಪ್ರೀತಿ ವಿವಾಹದ ನೆರಳು” ಪ್ರೀತಿ ಅಂದ್ರೆ ಕನಸು. ಮದುವೆ ಅಂದ್ರೆ ವಾಸ್ತವ. ಕನಸು ಕಾಣೋದು ತುಂಬಾ ಸುಂದರ. ಆದ್ರೆ ಆ ಕನಸನ್ನೇ ಮನೆ ಮಾಡ್ಕೊಂಡು ವಾಸ್ತವದ ನೆಲದ ಮೇಲೆ ಕಾಲೂರದೆ ಬದುಕೋಕೆ ಹೊರಟಾಗ, ಬದುಕು ಕಚ್ಚೋಕೆ ಶುರು ಮಾಡುತ್ತೆ. ಅದೇ ಪ್ರೀತಿ ವಿವಾಹದ ನೋವು.ಪ್ರೀತಿ ಮಾಡುವ ದಿನಗಳಲ್ಲಿ ಜಗತ್ತೇ ಬೇರೆ. ಫೋನ್ ಕರೆ, ಮೆಸೇಜ್, ಸಣ್ಣ ನಗು, ಸಣ್ಣ ಕೋಪ, ಎಲ್ಲವೂ ಸಿಹಿ. ಆಗ ನಾವು ಇಬ್ಬರೇ ಜಗತ್ತು. ಬೇರೆ ಯಾರೂ ಬೇಕಿಲ್ಲ ಅನಿಸುತ್ತೆ. ಕುಟುಂಬ, ಸಮಾಜ, ಜಾತಿ, ಹಣ, ಭವಿಷ್ಯ – ಯಾವುದೂ ಕಣ್ಣಿಗೆ ಕಾಣಲ್ಲ. ಕಾಣೋದು ಕೇವಲ ಅವನು ಅಥವಾ ಅವಳು. ಆ ಭಾವನೆಯ ಜೋಶಲ್ಲಿ ಕೈ ಹಿಡಿದು ಮದುವೆ ಮಂಟಪದ ಕಡೆ ನಡೆಯುತ್ತೇವೆ.ಆದ್ರೆ ಮಂಟಪದಿಂದ ಹೊರಗೆ ಬಂದ ಕೂಡಲೇ ಹೊಸ ಜಗತ್ತು ಶುರುವಾಗುತ್ತೆ. ಇಲ್ಲಿಯವರೆಗೆ ಇಬ್ಬರ ಜಗತ್ತಾಗಿದ್ದ ಬದುಕು, ಈಗ ಮನೆ, ಕುಟುಂಬ, ಜವಾಬ್ದಾರಿ, ಬಿಲ್, ಕೆಲಸದ ಒತ್ತಡಗಳಿಂದ ತುಂಬಿರುತ್ತೆ. ಪ್ರೀತಿ ಮಾತಾಡುವಾಗ ಟೈಮೇ ಸಿಗದಷ್ಟು ಕೆಲಸ ಇರುತ್ತೆ. ಮೊನ್ನೆ ಮೊನ್ನೆ “ನೀನೇ ನನ್ನ ಉಸಿರು” ಅಂದವನು, ಇವತ್ತು “Office ಕೆಲಸ ಇದೆ, ಮಾತಾಡೋಕೆ ಆಗಲ್ಲ” ಅಂತಾನೆ. ನಿನ್ನೆ “ನಿನ್ನ ನಗು ಸಾಕು” ಅಂದವಳು, ಇವತ್ತು “ಮನೆ ಬಾಡಿಗೆ ಕಟ್ಟಿದ್ದೀಯಾ?” ಅಂತ ಕೇಳ್ತಾಳೆ. ಆಗ ಮನಸ್ಸು ಮೊದಲೇ ಹೀಗಿರಲಿಲ್ಲವಲ್ಲ ಅಂತ ಕೊರಗುತ್ತೆ. ಪ್ರೀತಿ ಕಡಿಮೆ ಆಗಿಲ್ಲ, ಜವಾಬ್ದಾರಿ ಜಾಸ್ತಿ ಆಗಿದೆ ಅನ್ನೋದನ್ನ ಅರ್ಥ ಮಾಡ್ಕೊಳ್ಳೋ ತಾಳ್ಮೆ ನಮ್ಮಲ್ಲಿ ಇರಲ್ಲ.ಪ್ರೀತಿ ವಿವಾಹದ ದೊಡ್ಡ ನೆರಳು ಕುಟುಂಬ. ಅಜ್ಜ-ಅಜ್ಜಿ ನೋಡಿ ಮಾಡೋ ಮದುವೆಯಲ್ಲಿ ಎರಡು ಮನೆ ಒಂದಾಗುತ್ತೆ. ಪ್ರೀತಿ ವಿವಾಹದಲ್ಲಿ ಕೆಲವೊಮ್ಮೆ ಎರಡು ಮನೆ ಎದುರಿಗೆ ನಿಲ್ಲುತ್ತೆ. “ನಮ್ಮ ಮನೆತನಕ್ಕೆ ತಕ್ಕವಳಲ್ಲ”, “ನಮ್ಮ ಹುಡುಗನಿಗೆ ಯೋಗ್ಯನಲ್ಲ” ಅನ್ನೋ ಮಾತುಗಳು ಚೂರಿ ತರ ಇರುತ್ತೆ. ತಾಯಿ-ತಂದೆಯ ಆಶೀರ್ವಾದ ಇಲ್ಲದ ಮದುವೆ, ಎಷ್ಟು ಸಂತೋಷವಾಗಿದ್ದರೂ ಮನಸ್ಸಿನ ಒಂದು ಮೂಲೆಯಲ್ಲಿ ಸದಾ ಕೊರೆಯುತ್ತಿರುತ್ತೆ. ಹಬ್ಬ, ಹರಿದಿನ, ಮನೆ ಕಾರ್ಯ – ಎಲ್ಲಾ ಕಡೆ “ಅವರ ಮನೆಯವರು ಬರಲಿಲ್ಲ” ಅನ್ನೋ ಕೊರತೆ ಕಾಡುತ್ತೆ. ಆ ನೋವನ್ನ ಹುಡುಗ-ಹುಡುಗಿ ಒಬ್ಬರ ಮೇಲೆ ಒಬ್ಬರು ತೀರಿಸ್ಕೊಳ್ಳೋದು ಶುರು.ಮತ್ತೊಂದು ವಿಷಯ ಹಣ. ಪ್ರೀತಿ ಮಾಡುವಾಗ “ನೀನು ಇದ್ರೆ ಸಾಕು, ಕಾಡಲ್ಲಿ ಆದ್ರೂ ಇರ್ತೀನಿ” ಅಂತೀವಿ. ಆದ್ರೆ ಮದುವೆ ಆದ ಮೇಲೆ ಕಾಡು ಬೇಡ, ಒಂದು ಚಿಕ್ಕ ಮನೆ ಬಾಡಿಗೆ ಕಟ್ಟೋಕೂ ಆಗಲ್ಲ. ಸಾಲ, EMI, ಮೆಡಿಕಲ್ ಖರ್ಚು, ಮಕ್ಕಳ ಶಾಲೆ – ಲೆಕ್ಕಗಳು ಬರೋಕೆ ಶುರುವಾಗುತ್ತವೆ. ದಾರಿದ್ರ್ಯ ಬಾಗಿಲು ತಟ್ಟಿದಾಗ ಪ್ರೀತಿ ಕಿಟಕಿಯಿಂದ ಜಾರಿ ಹೋಗುತ್ತೆ ಅಂತ ಹಿರಿಯರು ಸುಮ್ನೆ ಹೇಳಿಲ್ಲ. ಹಣಕಾಸಿನ ಜಗಳ, ಪ್ರೀತಿಯ ಬುನಾದಿಯನ್ನೇ ಅಲುಗಾಡಿಸಿಬಿಡುತ್ತೆ.ಇದಕ್ಕೆಲ್ಲಾ ಕಾರಣ ನಾವು ಪ್ರೀತಿನೇ ದೇವರು ಅಂತ ಪೂಜೆ ಮಾಡೋದು. ಪ್ರೀತಿ ದೇವರು ಅಲ್ಲ , ಪ್ರೀತಿ ಒಂದು ಭಾವನೆ. ಮದುವೆ ಅಂದ್ರೆ ಆ ಭಾವನೆಯ ಜೊತೆಗೆ ಹೊಂದಾಣಿಕೆ, ತ್ಯಾಗ, ಕ್ಷಮೆ, ಸಂಭಾಷಣೆ ಇವೆಲ್ಲಾ ಬೆರೆಸಿ ಮಾಡೋ ಅಡುಗೆ. ಉಪ್ಪು ಕಡಿಮೆ ಆದ್ರೆ ಊಟ ರುಚಿ ಇರಲ್ಲ. ಹೊಂದಾಣಿಕೆ ಕಡಿಮೆ ಆದ್ರೆ ಸಂಸಾರ ರುಚಿ ಇರಲ್ಲ.ಪ್ರೀತಿ ವಿವಾಹದವರು ಒಂದು ತಪ್ಪು ಮಾಡ್ತಾರೆ. “ನಾನೇ ಆಯ್ಕೆ ಮಾಡಿಕೊಂಡಿದ್ದು, ನನಗೆ ಗೊತ್ತು” ಅನ್ನೋ ಗರ್ವ. ಹಾಗಾಗಿ ಸಣ್ಣ ಜಗಳ ಆದ ಕೂಡಲೇ “ಬೇಡ ಬಿಡು” ಅಂತ ಮಾತು ಬರುತ್ತೆ. ಹೊಂದಾಣಿಕೆ ಮಾಡಿಕೊಳ್ಳೋ ಬದಲು ಬೇರ್ಪಡೋದು ಸುಲಭ ಅನಿಸುತ್ತೆ. Arranged Marriage ನಲ್ಲಿ “ಮಾಡಿದ್ದೇ ಆಯ್ತು, ನಿಭಾಯಿಸೋಣ” ಅನ್ನೋ ಭಾವ ಇರುತ್ತೆ. ಇಲ್ಲಿ ಆ ಭಾವ ಇರಲ್ಲ.ಪ್ರೀತಿ ವಿವಾಹ ತಪ್ಪು ಅಲ್ಲ. ಆದ್ರೆ ಅದು ಮಕ್ಕಳಾಟ ಅಲ್ಲ. ಕಣ್ಣು ಮುಚ್ಚಿ ಆಡೋ ಜೂಜು ಅಲ್ಲ. ಕಣ್ಣು ತೆರೆದು, ಕುಟುಂಬವನ್ನ ಒಪ್ಪಿಸಿ, ಆರ್ಥಿಕವಾಗಿ ಸದೃಢರಾಗಿ, “ನಾನು ಬದಲಾಗ್ತೀನಿ, ನೀನೂ ಬದಲಾಗು” ಅಂತ ಪ್ರಾಮಿಸ್ ಮಾಡ್ಕೊಂಡು ಮಾಡೋ ಒಪ್ಪಂದ. ಇಲ್ಲ ಅಂದ್ರೆ ಆ ಪ್ರೀತಿ ಮದುವೆ ಮಂಟಪದವರೆಗೆ ಮಾತ್ರ. ಆಚೆ ಬದುಕಿನ ಬಿಸಿಲಿಗೆ ಬಾಡಿ ಹೋಗುತ್ತೆ. ಪ್ರೀತಿ ಮಾಡಿ. ಮನಸಾರೆ ಮಾಡಿ. ಆದ್ರೆ ಮದುವೆ ಅಂದ್ರೆ ಕೇವಲ ಪ್ರೀತಿ ಅಲ್ಲ, ಅದು ಬದುಕು ಅನ್ನೋದನ್ನ ಮರೆಯಬೇಡಿ. ಬದುಕನ್ನ ನಿಭಾಯಿಸೋ ಶಕ್ತಿ ಇದ್ರೆ ಮಾತ್ರ ಪ್ರೀತಿಮಾಡಿ ಮದುವೆ ಮಾಡಿಕೊಳ್ಳಿ. ಇಲ್ಲದೆ ಹೋದರೆ ಹಿರಿಯರಿಗೆ ಬಿಡಿ ಅವರು ನಿಮಗೆ ಅನ್ಯಾಯ ಮಾಡಲ್ಲ. ವನಜಾ ಮಹಾಲಿಂಗಯ್ಯ

ವನಜಾ ಮಹಾಲಿಂಗಯ್ಯ “ಪ್ರೀತಿ ವಿವಾಹದ ನೆರಳು” Read Post »

ಇತರೆ

“ಹಿಂದೂ ಮುಸ್ಲಿಂ ಸೌಹಾರ್ದತೆಯ ತಾಣ ಶಿಶುವಿನಹಾಳ”ವಿಶೇಷ ಲೇಖನ, ಜಯಲಕ್ಷ್ಮಿ ಕೆ

ಸೌಹಾರ್ದ ಸಂಗಾತಿ ಜಯಲಕ್ಷ್ಮಿ ಕೆ “ಹಿಂದೂ ಮುಸ್ಲಿಂ ಸೌಹಾರ್ದತೆಯ ತಾಣ ಶಿಶುವಿನಹಾಳ”   “ಲೋಕದ ಕಾಳಜಿ ಮಾಡುತ್ತೀನಂತಿ.. ನಿಂಗ್ಯಾರು ಬ್ಯಾಡಂದೋರು ಮಾಡಪ್ಪ ಚಿಂತಿ .. ಆನೆ ಅಂಬಾರಿ ಏರಬೇಕಂತಿ.. ಮಣ್ಣಲ್ಲಿ ಇಳಿಯುದ ತಣ್ಣಗ ಮರತಿ…”   ಖ್ಯಾತ ಗಾಯಕ  ಲುಂಗಿ ರಾಕ್ ಸ್ಟಾರ್ ರಘು ದೀಕ್ಷಿತ್ ರವರ ಕಂಠಸಿರಿಯಿಂದ ಮೂಡಿಬಂದು ಜನಮನ ಗೆದ್ದ ಈ ತತ್ವ ಪದದ ರಚನೆಕಾರರ ಊರೇ ಶಿಶುವಿನಹಾಳ. “ಕನ್ನಡದ ಕಬೀರ” ಎಂದೇ ಖ್ಯಾತರಾದ ಸಂತ ಶಿಶುನಾಳ ಶರೀಫರ ಸನ್ನಿಧಿ ಇರುವುದು  ಹಾವೇರಿ ಜಿಲ್ಲೆಯ ಶಿಗ್ಗಾಂವಾ ತಾಲೂಕಿನ ಶಿಶುವಿನಹಾಳದಲ್ಲಿ. ಹಿಂದೂ ಮುಸ್ಲಿಂ ಭಾವೈಕ್ಯದ ಹರಿಕಾರರಾದ ಶರೀಫರ ನಾಡಿನಲ್ಲಿ ಒಂದೇ ಮಂದಿರದಲ್ಲಿ ಎರಡು ಧರ್ಮಿಯರು   ನಡೆಸುವ ಪೂಜಾ ಕೈಂಕರ್ಯ  ನೋಡುವುದೇ ಚೆನ್ನ! ಗುರು ಗೋವಿಂದ ಭಟ್ಟರ ಮೂರ್ತಿ ಒಂದೆಡೆ.. ಶಿಶುನಾಳ ಶರೀಫರ ಮೂರ್ತಿ ಇನ್ನೊಂದೆಡೆ.  ಈ ಎರಡು ಮೂರ್ತಿಗಳ ನಡುವೆ ಶ್ವೇತ ಶಿಲೆಯಲ್ಲಿ ಕೆತ್ತಿದ    ಆಶೀರ್ವಾದ ನೀಡುವ ಭಂಗಿಯಲ್ಲಿ  ನಿಂತ ನಂದಿ, ಶಿವಲಿಂಗ. ಒಂದೆಡೆ ಹಣ್ಣು ಕಾಯಿ ಸೇವೆ, ಇನ್ನೊಂದೆಡೆ ಸಕ್ಕರೆ ಪ್ರಸಾದ ವಿತರಣೆ! ಹಿಂದೂ ಮುಸ್ಲಿಂ ಭಾವೈಕ್ಯತೆಯ ಜೊತೆ ಜೊತೆಗೆ ಗುರು ಶಿಷ್ಯ ಸಂಬಂಧದ ಪಾವಿತ್ರ್ಯತೆಯನ್ನು ಸಾರುವ  ಅಪೂರ್ವ ಚಿತ್ರಣ ! ಎಂಥವರೂ ಭಾವಪರವಶರಾಗಬೇಕು  ಹುಲಗೂರ  ಶರೀಫರ ಈ ಸನ್ನಿಧಿಯಲ್ಲಿ. ವಿಜ್ಞಾನ ತಂತ್ರಜ್ಞಾನದಲ್ಲಿ ಪಳಗಿ  ಆಧುನಿಕತೆಯ ತುತ್ತ ತುದಿಯನ್ನು ತಲುಪಿದ್ದೇವೆ ಎನ್ನುವ ಭ್ರಮೆಯಲ್ಲಿರುವ, ಜಾತಿ ಮತ ಪಂಥಗಳು ಎಂಬ ತ್ರಿಶಂಕುವಿನಿಂದ ಹೊರಬರಲಾಗದ ಸಂಕುಚಿತ ಮನೋಭಾವದವರು ಈ ದಿವ್ಯ ಕ್ಷೇತ್ರಕ್ಕೆ ಹೋಗಲೇಬೇಕು. ಅಲ್ಲಿನ ಪೂಜಾ ವಿಧಿ ವಿಧಾನಗಳನ್ನು, ಅಲ್ಲಿನ ಜನರು  ಹೊಂದಿಕೊಂಡು ಬಾಳುವ  ಪರಿಯನ್ನು ಕಣ್ತುಂಬಿಕೊಳ್ಳಲೇಬೇಕು.  ಐದರಿಂದ ಆರು ಸಾವಿರದಷ್ಟು ಜನಸಂಖ್ಯೆಯನ್ನು ಹೊಂದಿರುವ ಪುಟ್ಟ ಊರದು.  “ದೇಹವೇ ಮಸೀದಿ,ದೇಹವೇ ದೇಗುಲ ” ಎಂದು ಸಾರಿದ, ಸಾರಿದಂತೆಯೇ ಬದುಕಿ ಬಾಳಿದ  ಸಂತ ಶರೀಫರ ನೆಲದಲ್ಲಿ ನಿಂತರೆ ಸಾಕು, ಕೋಮು ಸೌಹಾರ್ದತೆ ಸಾರುವ ಅವರ ತತ್ವಪದಗಳು, ಮಾನವ ಧರ್ಮ ಸಾರುವ  ಅವರ ಪದಗಳ  ಸಾರಗಳು, ಸ್ಮೃತಿ  ಪಟಲದಲ್ಲಿ ಹಾಗೇ ತೇಲಿ ಬರುತ್ತವೆ. ಲೌಕಿಕ ದೃಶ್ಯಗಳ ಮೂಲಕ  ಪಾರಮಾರ್ಥಿಕ ಸತ್ಯಗಳನ್ನು ಸರಳ ಸುಂದರ ಆಡು ಭಾಷೆಯಲ್ಲಿ  ನಿರೂಪಿಸಿರುವ  ಶರೀಫರು  ಮೊದಲ ಸೂಫಿ ಕವಿ. ಆಕರ್ಷಕ ತತ್ವಪದಗಳ ಮೂಲಕ ಜನಮಾನಸದಲ್ಲಿ ಉಳಿದ ಸಿದ್ಧಪುರುಷ ಶರೀಫ  ಇಸ್ಲಾಂ ಧರ್ಮದಲ್ಲಿ ಹುಟ್ಟಿ, ಹಿಂದೂ ಗುರುವನ್ನು ಪಡೆದು ಜಾತಿ ಮತಗಳ ಎಲ್ಲೆ ಮೀರಿ ಬೆಳೆದು ನಿಂತವರು. ” ಕೆಲಸವಿಲ್ಲದೆ ಅಲೆಯುವ ತಿರುಕ ” ಎಂದ ಹಿಂದೂ ಧರ್ಮೀಯರ ಮಾತಿಗಾಗಲಿ, ” ಕಾಫಿರ್ ” ಎಂದ ಮುಸಲ್ಮಾನರ ತೆಗಳಿಕೆಗಾಗಲಿ ಸಂತ ಶರೀಫರ ಮನ ವಿಚಲಿತಗೊಳ್ಳಲಿಲ್ಲ. ಏಕ ತಂತಿಯ ತಂಬೂರಿ ಹಿಡಿದು ತನ್ನ ತತ್ವಗಳನ್ನು ಪದಗಳ ಮೂಲಕ ಬೀದಿಬೀದಿಯಲ್ಲಿ ಸಾರಿದರು. ಯಾವ ಖಲೀಫನಿಂದಲೂ ನಿರ್ಮಿಸಲು ಸಾಧ್ಯವಾಗದ ಮತೀಯ ಸಾಮರಸ್ಯದ ದೇಗುಲದ ನಿರ್ಮಾಣಕ್ಕೆ ಕಾರಣಕರ್ತರಾದರು. ಗೂಢಾರ್ಥದಲ್ಲಿ, ರೂಪಕಗಳನ್ನು ಬಳಸಿ ಇವರು ರಚಿಸಿರುವಂತಹ  ಕೋಡಗನ ಕೋಳಿ ನುಂಗಿತ್ತಾ, ಸೋರುತಿಹುದು ಮನೆಯ ಮಾಳಿಗಿ, ಬಿದ್ದಿಯಬ್ಬೇ ಮುದುಕಿ , ಹಾವು ತುಳಿದೇನೇ ಮಾನಿನಿ, ಇತ್ಯಾದಿ ತತ್ವಪದಗಳು ಕನ್ನಡಿಗರ ನಾಲಿಗೆಯಲ್ಲಿ ಸದಾ ಹರಿದಾಡುವ ನೀತಿ ಸಂಹಿತೆಗಳೇ ಸರಿ.      ಸಮಯ ಸಂದರ್ಭಗಳಿಗೆ ಅನುಗುಣವಾಗಿ ಉಪಮೆಗಳನ್ನು ಬಳಸುತ್ತಾ ಪದ ರಚಿಸಿ ಹಾಡುತ್ತಿದ್ದ ಈ ಸಂತ  ಮತೀಯ ಸಾಮರಸ್ಯದ ಹರಿಕಾರನಾಗಿ ನಮ್ಮೆಲ್ಲರ ಮನದಲ್ಲಿ ನೆಲೆ ನಿಂತ ಧೀಮಂತ. ಶಿಶುನಾಳ ಶರೀಫರು ಮತ್ತು ಅವರ ಗುರು ಗೋವಿಂದ ಭಟ್ಟರ ಸಮಾಧಿಗೆ ಜಾತಿ ಮತಗಳ ಹಂಗಿಲ್ಲದೆ ಪ್ರತಿದಿನ ಪೂಜೆ ನಡೆಯುತ್ತಿದ್ದು ಅದೊಂದು ಪವಿತ್ರ ಯಾತ್ರಾ ಸ್ಥಳವಾಗಿದೆ.  ಶಿಶುನಾಳ ಶರೀಫರ ದೇಗುಲಕ್ಕೆ ಹೋಗುವವರು  ಅಲ್ಲಿಂದ ಸುಮಾರು 20 -30 ಕಿಲೋ ಮೀಟರ್ ಅಂತರದಲ್ಲಿರುವ 11 ನೇ ಶತಮಾನದ ಚಾಲುಕ್ಯ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಸಿದ್ಧೇಶ್ವರ ದೇವಾಲಯ, ಮುಕ್ತೇಶ್ವರ ದೇವಾಲಯಗಳನ್ನು ನೋಡಬಹುದು. ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಈ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಲ್ಯಾಣ ಚಾಲುಕ್ಯರ ಕಾಲದ ತಾರಕೇಶ್ವರ ದೇಗುಲ,  ಹುಕ್ಕೇರಿ ಮಠ,  ಬಂಕಾಪುರದ ನಗರೇಶ್ವರ   ದೇಗುಲ ಬಂಕಾಪುರದ ಕೋಟೆ ಇತ್ಯಾದಿ ಪ್ರೇಕ್ಷಣೀಯ  ಸ್ಥಳಗಳಿವೆ. ಸಂತ ಕನಕದಾಸರ ಹುಟ್ಟೂರಾದ ಕಾಗಿನೆಲೆ ಇರುವುದೂ ಇಲ್ಲಿಯೇ.   ‘ ಏಲಕ್ಕಿ ಕಂಪಿನ ನಾಡು ‘ ಎಂದೇ ಹೆಸರಾದ ಈ ನಾಡಿನಲ್ಲಿ ಎತ್ತ ಸಂಚರಿಸಿದರೂ ರಸ್ತೆಯ ಇಕ್ಕೆಲಗಳಲ್ಲಿರುವ ಹೊಲಗಳಲ್ಲಿನ ಬ್ಯಾಡಗಿ ಕೆಂಪು ಮೆಣಸಿನಕಾಯಿ  ಮತ್ತು ಕುಸಬಿ  ಎಣ್ಣೆ ಬೀಜದ ಹೊಲಗಳು ಕಣ್ಮನ ಸೆಳೆಯುವ ಆಕರ್ಷಣೆಗಳೇ ಸರಿ . ಆಧ್ಯಾತ್ಮಿಕ ಐತಿಹಾಸಿಕ ಮಹತ್ವದಿಂದ ಕೂಡಿರುವ  ಕರ್ನಾಟಕದ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳವಿದು. ಜಯಲಕ್ಷ್ಮಿ ಕೆ

“ಹಿಂದೂ ಮುಸ್ಲಿಂ ಸೌಹಾರ್ದತೆಯ ತಾಣ ಶಿಶುವಿನಹಾಳ”ವಿಶೇಷ ಲೇಖನ, ಜಯಲಕ್ಷ್ಮಿ ಕೆ Read Post »

You cannot copy content of this page

Scroll to Top