ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ದಾರಾವಾಹಿ

ದಾರಾವಾಹಿ ಆವರ್ತನ ಅದ್ಯಾಯ-37 ಗೋಪಾಲನಿಗೆ ಬಿದ್ದ ಕನಸಿನಲ್ಲಿ ಅವನ ಮನೆಯೆದುರಿನ ನಾಗಬನದಿಂದ ಘಟಸರ್ಪವೊಂದು ಅವನ ಮನೆಯತ್ತಲೇ ಧಾವಿಸುವುದನ್ನು ಕಂಡವನು ಹೆದರಿ ಕಂಗಾಲಾಗಿ ಮಡದಿ, ಮಕ್ಕಳನ್ನು ಎಬ್ಬಿಸಲು ಮುಂದಾಗುತ್ತಾನೆ. ಆದರೆ ಅವರಲ್ಲಿ ಯಾರಿಗೂ ಎಚ್ಚರವಾಗುವುದಿಲ್ಲ. ತಾನಾದರೂ ಎದ್ದು ಓಡಿಹೋಗಬೇಕು ಎಂದುಕೊಳ್ಳುತ್ತಾನೆ. ಆದರೆ ಆಶ್ಚರ್ಯ! ತನ್ನ ಕೈಕಾಲುಗಳನ್ನು ಯಾರೋ ಬಿಗಿಯಾಗಿ ಕಟ್ಟಿ ಹಾಕಿರುವಂತೆ ಭಾಸವಾಗುತ್ತದೆ. ಜೋರಾಗಿ ಅರಚಿಕೊಳ್ಳುತ್ತಾನೆ. ಆದರೂ ಬಿಡುಗಡೆ ದೊರಕುವುದಿಲ್ಲ. ವಿಧಿಯಿಲ್ಲದೆ ಮರಳಿ ತನ್ನ ಕುಟುಂಬವನ್ನು ತಬ್ಬಿಕೊಂಡು ಮುದುಡುತ್ತಾನೆ. ಅಷ್ಟರಲ್ಲಿ ರಾಧಾಳಿಗೆ ಎಚ್ಚರವಾಗುತ್ತದೆ. ಅವಳೂ ಆ ಮಹಾಸರ್ಪವನ್ನು ಕಂಡು ಕಿಟಾರ್ರನೇ ಕಿರುಚುತ್ತಾಳೆ. ‘ಅಯ್ಯೋ ದೇವರೇ… ಇದೇನಿದು ಭಯಂಕರ ಹಾವು! ಏಳಿ ಮಾರಾಯ್ರೇ… ಎದ್ದೇಳಿ ಮಕ್ಕಳನ್ನು ಎತ್ತಿಕೊಳ್ಳಿ. ಇಲ್ಲಿಂದ ಓಡಿ ಹೋಗುವ. ಆ ಹಾವು ಎಲ್ಲರನ್ನೂ ಕಚ್ಚಿ ಸಾಯಿಸಿಯೇ ಬಿಡುತ್ತದೆ. ನಿಮ್ಮ ದಮ್ಮಯ್ಯ ಎದ್ದೇಳಿ ಮಾರಾಯ್ರೇ…!!’ ಎಂದು ಕಿರುಚುತ್ತಾಳೆ. ಆದರೆ ಗೋಪಾಲನಿಗೆ ಹೇಗ್ಹೇಗೆ ಪ್ರಯತ್ನಿಸಿದರೂ ಕುಳಿತಲ್ಲಿಂದ ಚೂರೂ ಅಲ್ಲಾಡಲಾಗುವುದಿಲ್ಲ. ‘ಇಲ್ಲ ರಾಧಾ, ನನ್ನ ಕೈಕಾಲುಗಳು ಬಿದ್ದು ಹೋಗಿವೆ. ನೀನಾದರೂ ಮಕ್ಕಳನ್ನೆತ್ತಿಕೊಂಡು ದೂರ ಹೋಗಿ ಬದುಕಿಕೋ. ಹ್ಞೂಂ ಹೊರಡು!’ ಎಂದು ಕೂಗುತ್ತಾನೆ. ‘ಅಯ್ಯೋ ಇಲ್ಲ ಮಾರಾಯ್ರೇ… ನಿಮ್ಮನ್ನು ಬಿಟ್ಟು ನಾವು ಎಲ್ಲಿಗೂ ಹೋಗುವುದಿಲ್ಲ. ಸಾಯುವುದಿದ್ದರೆ ಒಟ್ಟಿಗೆ ಸಾಯುವ!’ ಎಂದು  ಅಳುತ್ತಾಳೆ.    ಅಷ್ಟರಲ್ಲಿ ಆ ಕಾಳಸರ್ಪವು ಗೋಪಾಲನ ಮನೆಯತ್ತ ಬಂದೇ ಬಿಟ್ಟಿತು ಮತ್ತದು ನೋಡು ನೋಡುತ್ತಿದ್ದಂತೆಯೇ ಬೆಳೆಯತೊಡಗಿತು. ಬೆಳೆಯುತ್ತ ಬೆಳೆಯುತ್ತ ಅವನ ಮನೆಯನ್ನೂ ಮೀರಿ ಆಕಾಶದೆತ್ತರಕ್ಕೆ ಬೆಳೆದು ಸೆಟೆದು ನಿಂತುಕೊಂಡಿತು! ಅದರ ವಿರಾಟರೂಪವನ್ನೂ, ಎದೆ ನಡುಗುವಂಥ ಫೂತ್ಕಾರವನ್ನೂ ಕೇಳಿದ ರಾಧಾ ಪ್ರಜ್ಞೆ ತಪ್ಪಿಬಿದ್ದಳು. ಗೋಪಾಲ ಮೂಕನಂತಾದ. ಅತ್ತ ಹಟ್ಟಿಯಲ್ಲಿದ್ದ ದನಕರು, ನಾಯಿ, ಕೋಳಿಗಳ ಕೂಗು, ಆಕ್ರಂದನ ಮುಗಿಲು ಮುಟ್ಟಿತು. ಆ ಮುಗ್ಧಜೀವಿಗಳ ಆರ್ತನಾದವನ್ನೂ ಗೋಪಾಲನ ಅಸಹಾಯಕತೆಯನ್ನೂ ಕಂಡ ಸರ್ಪವು ತನ್ನ ಒಂದೊಂದು ಹೆಡೆಯನ್ನು ಒಂದೊಂದು ರೀತಿಯಲ್ಲಿ ಕೊಂಕಿಸಿ, ಕುಣಿಸಿ ಅಟ್ಟಹಾಸ ಮಾಡತೊಡಗಿತು. ಅಷ್ಟರಲ್ಲಿ ಗೋಪಾಲನಿಗೆ ಅಲ್ಲಿ ಇನ್ನೊಂದು ಆಘಾತವೂ ಬಡಿಯಿತು. ಆ ಮಹಾಸರ್ಪವನ್ನು ವಠಾರದ ಮಂದಿಯೆಲ್ಲ ವಿಸ್ಮಯದಿಂದ ನೋಡುತ್ತ ನಿಂತಿದ್ದಾರೆ. ಆದರೆ ಅವರಲ್ಲಿ ಯಾರಿಗೂ ಚೂರೂ ಭಯವಿರಲಿಲ್ಲ. ಎಲ್ಲರೂ ಗೋಪಾಲನ ಕುಟುಂಬದ ಒದ್ದಾಟವನ್ನು ನೋಡಿ ಗೇಲಿ ಮಾಡುತ್ತ ನಗುತ್ತಿದ್ದಾರೆ! ಅವನಿಗೆ ಅವರಲ್ಲಿ ಯಾರ ಗುರುತೂ ಸರಿಯಾಗಿ ಹತ್ತುವುದಿಲ್ಲ. ಆದರೆ ಸುಮಿತ್ರಮ್ಮ ಮಾತ್ರ ಸ್ಪಷ್ಟವಾಗಿ ಕಾಣಿಸುತ್ತಾರೆ. ಅವನಲ್ಲಿ ಸ್ವಲ್ಪ ಧೈರ್ಯ ಮೂಡುತ್ತದೆ. ‘ಸುಮಿತ್ರಮ್ಮಾ, ಸುಮಿತ್ರಮ್ಮಾ… ನಿಮ್ಮ ದಮ್ಮಯ್ಯ. ನಮ್ಮನ್ನು ಕಾಪಾಡಿಯಮ್ಮಾ…!’ ಎಂದು ಗೋಗರೆಯುತ್ತಾನೆ. ಆದರೆ ಸುಮಿತ್ರಮ್ಮನೂ ಅವನನ್ನು ಕಂಡು ಗಹಗಹಿಸಿ ನಗುತ್ತಾರೆ! ಅವನಿಗೆ ಇನ್ನಷ್ಟು ಆಘಾತವಾಗುತ್ತದೆ. ಭಯದಿಂದ ಹಾವಿನತ್ತ ನೋಡುತ್ತಾನೆ. ಅದು ಅವನ ಮಣ್ಣಿನ ಗೋಡೆಯ, ತಾಳೆಮರದ ಪಕ್ಕಾಸಿನ ಮೇಲೆ ಮೂರನೇ ದರ್ಜೆಯ ಹೆಂಚು ಹೊದೆಸಿದ್ದ ಸಣ್ಣ ಮನೆಯನ್ನು ತನ್ನ ಬಲಿಷ್ಠ ಹೆಡೆಗಳಿಂದ ಬೀಸಿ ಅಪ್ಪಳಿಸಿ ಪುಡಿ ಮಾಡಲು ಮುಂದಾಯಿತು ಎಂಬಷ್ಟರಲ್ಲಿ, ‘ಅಯ್ಯಯ್ಯಮ್ಮಾ…!?’ ಎಂದು ಗೋಪಾಲ ವಿಕಾರವಾಗಿ ಕಿರುಚುತ್ತ ನಿಜವಾದ ನಿದ್ರೆಯಿಂದ ಎಚ್ಚೆತ್ತು ಎದ್ದು ಕುಳಿತುಕೊಳ್ಳುತ್ತಾನೆ. ಗಂಡನ ಬೊಬ್ಬೆಗೆ ರಾಧಾಳೂ ಬೆಚ್ಚಿಬಿದ್ದು ಎದ್ದಳು. ಗೋಪಾಲ ಚಳಿಜ್ವರದಿಂದ ನಡುಗುತ್ತಿದ್ದ. ಅವಳಿಗೆ ಗಾಬರಿಯಾಯಿತು. ಗಂಡನನ್ನು ತಬ್ಬಿಕೊಂಡು ಸಂತೈಸುತ್ತ, ‘ಏನಾಯ್ತು ಮಾರಾಯ್ರೇ… ಜ್ವರ ಈಗಲೂ ಸುಡುತ್ತಿದೆಯಲ್ಲಾ…? ಯಾಕೆ ಕಿರುಚಿಕೊಂಡ್ರೀ…, ಕೆಟ್ಟ ಕನಸು ಬಿತ್ತಾ…?’ ಎಂದು ಅಕ್ಕರೆಯಿಂದ ಅವನ ಹಣೆ ಮತ್ತು ಎದೆಯನ್ನು ಒರಸುತ್ತಾ ಕೇಳಿದಳು. ಆದರೆ ಗೋಪಾಲ ಇಹದ ಪ್ರಜ್ಞೆಯೇ ಇಲ್ಲದವನಂತೆ ಹೆಂಡತಿಯನ್ನು ನೋವಿನಿಂದ ದಿಟ್ಟಿಸಿದ. ಅವನ ಕಣ್ಣಗುಡ್ಡೆಗಳು ಕೆಂಪಾಗಿ ಹೊರಚಾಚಿದ್ದವು. ಗಂಟಲ ನರಗಳು ಉಬ್ಬಿ ಕಾಣುತ್ತಿದ್ದವು. ಒಮ್ಮೆ ವಿಚಿತ್ರವಾಗಿ ತನ್ನ ಮೈಕೊಡವಿಕೊಂಡವನು, ‘ಆದಷ್ಟು ಬೇಗ ನಾವಿಲ್ಲಿಂದ ದೂರ ಹೊರಟು ಹೋಗಬೇಕು ಮಾರಾಯ್ತೀ… ಈ ಜಾಗ ನಮಗಿನ್ನು ಖಂಡಿತಾ ಆಗಿ ಬರುವುದಿಲ್ಲ!’ ಎಂದು ನಡುಗುತ್ತ ಅಂದವನು ದೊಪ್ಪನೆ ಅಂಗಾತ ಬಿದ್ದ. ಇಡೀ ದೇಹವನ್ನು ಬಿರುಸಾಗಿ ಹಿಂಡುತ್ತ ಅತ್ತಿತ್ತ ಹೊರಳಾಡತೊಡಗಿದ. ನಂತರ ವಿಚಿತ್ರವಾಗಿ ನುಲಿಯುತ್ತ ಕೋಣೆಯಿಡೀ ತೆವಳತೊಡಗಿದ!    ಗಂಡನ ಸ್ಥಿತಿಯನ್ನು ಕಂಡ ರಾಧಾಳಿಗೆ ದಿಕ್ಕೇ ತೋಚದಾಯಿತು. ಅವನ ಆ ತೆವಳುವಿಕೆಯು ಹೆಡೆ ತುಳಿದ ಸರ್ಪವೊಂದು ನೋವು, ಕೋಪದಿಂದ ಬುಸುಗುಟ್ಟುತ್ತಿರುವಂತೆಯೇ ಅವಳಿಗೆ ಭಾಸವಾಯಿತು. ಹಾಗಾಗಿ ಅವಳಲ್ಲೂ ನಾಗದೋಷದ ಭೀತಿಯು ಹುಟ್ಟಿಕೊಂಡು ದಂಗು ಬಡಿಸಿತು. ತುಸುಹೊತ್ತು ಗಂಡನ ಹತ್ತಿರ ಸುಳಿಯಲೂ ಅಂಜಿಬಿಟ್ಟಳು. ಅಷ್ಟರಲ್ಲಿ ಗೋಪಾಲ ತನ್ನ ಇಡೀ ದೇಹವನ್ನು ವಿಪರೀತ ಮುರಿಯಲೂ ಕೊಸರಾಡಲೂ ಶುರುವಿಟ್ಟುಕೊಂಡ. ಅಪ್ಪನ ವಿಚಿತ್ರ ನರಳಾಟ ಮತ್ತವನಿಂದ ಉಸಿರುಗಟ್ಟಿ ಹೊರಡುತ್ತಿದ್ದ ಬುಸ್! ಬುಸ್! ಬುಸ್! ಎಂಬ ಫೂತ್ಕಾರವು ಮಕ್ಕಳನ್ನೂ ಎಬ್ಬಿಸಿತು. ಅವು ಅಪ್ಪನನ್ನು ಕಂಡವು ‘ಹೋ…!!’ ಎಂದು ಅಳಲಾರಂಭಿಸಿದವು. ಆಗ ರಾಧಾ ಸ್ವಲ್ಪ ಧೈರ್ಯ ತಂದುಕೊಂಡಳು. ಗಂಡನ ಮೊಬೈಲ್ ಫೋನಿನಿಂದ ತಕ್ಷಣ ಅಪ್ಪನಿಗೆ ಕರೆ ಮಾಡಿ ವಿಷಯ ತಿಳಿಸಿದಳು. ಅವರೂ ಹೆದರಿದರು ಆದರೂ ಕೂಡಲೇ ಹೊರಟು ಬರುವುದಾಗಿ ಮಗಳಿಗೆ ಧೈರ್ಯ ಹೇಳಿದರು. ಸ್ವಲ್ಪಹೊತ್ತಲ್ಲಿ ಗೋಪಾಲ ಯಥಾಸ್ಥಿತಿಗೇನೋ ಬಂದ. ಜ್ವರವಿನ್ನೂ ಸುಡುತ್ತಿತ್ತು. ಬೆಳಕು ಹರಿಯುವವರೆಗೆ ರಾಧಾ ತನಗೆ ತಿಳಿದ ಮಟ್ಟಿಗೆ ಗಂಡನ ಶುಶ್ರೂಷೆ ಮಾಡಿದಳು. ಅವಳ ಅಪ್ಪ, ಅಮ್ಮ ಟ್ಯಾಕ್ಸಿ ಮಾಡಿಕೊಂಡು ನಸುಕಿನಲ್ಲೇ ಬಂದರು. ಗೋಪಾಲನನ್ನು ಕಾರಿನಲ್ಲಿ ಕೂರಿಸಿಕೊಂಡು ರಾಧಾಳ ಸೂಚನೆಯಂತೆ ಡಾಕ್ಟರ್ ನರಹರಿಯ ಮನೆಗೆ ಕರೆದೊಯ್ದರು.                                                                                         *** ಡಾಕ್ಟರ್ ನರಹರಿ ಪ್ರತಿನಿತ್ಯ ಅರುಣೋದಯದಲ್ಲಿ ಎದ್ದು ಯೋಗ ಮತ್ತು ಧ್ಯಾನ ಮಾಡುವ ಅಭ್ಯಾಸವಿದ್ದವನು. ಇಂದು ಕೂಡಾ ಮನೆಯ ತಾರಸಿಯ ಮೇಲೆ ದೇಹ ದಂಡನೆಯಲ್ಲಿ ತೊಡಗಿದ್ದವನಿಗೆ ಎರಡು ಮೂರು ಬಾರಿ ಕಾಲಿಂಗ್ ಬೆಲ್ ಬಾರಿಸಿದ್ದು ಕೇಳಿಸಿತು. ಪೇಶೆಂಟ್ ಬಂದಿರಬೇಕೆಂದುಕೊಂಡು ವ್ಯಾಯಾಮ ನಿಲ್ಲಿಸಿ ಕೆಳಗೆ ಬಂದ. ರಾಧಾ ಮತ್ತು ಅವಳ ಹೆತ್ತವರು ಗೋಪಾಲನನ್ನು ಹೊರ ಜಗುಲಿಯಲ್ಲಿ ಕುಳ್ಳಿರಿಸಿಕೊಂಡು ಕಾಯುತ್ತಿದ್ದರು. ನರಹರಿ ನಗುತ್ತ ಅವರನ್ನು ಶುಶ್ರೂಷೆಯ ಕೋಣೆಗೆ ಕರೆದೊಯ್ದು ಕುಳ್ಳಿರಿಸಿ ಗೋಪಾಲನನ್ನು ಪರೀಕ್ಷಿಸಿದ. ಅವನಿಗೆ ಗೋಪಾಲನ ಜ್ವರದ ಕುರಿತು ಅನುಮಾನ ಬಂತು. ‘ಏನಮ್ಮಾ, ಇವನಿಗೆ ಈ ಜ್ವರ ಎಷ್ಟು ದಿನಗಳಿಂದ ಕಾಣಿಸಿಕೊಳ್ಳುತ್ತಿದೆ?’ ಎಂದು ರಾಧಾಳನ್ನು ಕೇಳಿದ. ‘ನಿನ್ನೆಯಿಂದ ಶುರುವಾಗಿದ್ದು ಡಾಕ್ಟ್ರೇ. ಏನಾಗಿದೆ ಅವರಿಗೇ…?’ ಎಂದವಳು ಆತಂಕದಿಂದ. ‘ಗಾಬರಿ ಪಡುವಂಥದ್ದೇನಿಲ್ಲ. ಕೆಲವು ಪರೀಕ್ಷೆಗಳನ್ನು ಮಾಡಿಸಬೇಕಾಗುತ್ತದೆ. ಬರೆದು ಕೊಡುತ್ತೇನೆ. ಆದಷ್ಟು ಬೇಗ ಮಾಡಿಸಿಕೊಂಡು ಬನ್ನಿ!’ ಎಂದ ನರಹರಿ ಪರೀಕ್ಷೆಯ ಚೀಟಿಯನ್ನೂ ಎರಡು ದಿನದ ಔಷಧಿಯನ್ನೂ ಕೊಟ್ಟು ಕಳುಹಿಸಿದ. ಗೋಪಾಲನ ಅತ್ತೆ, ಮಾವ ಅವನನ್ನು ಮನೆಗೆ ಕರೆದುಕೊಂಡು ಹೋಗಿ ಬಿಟ್ಟವರು ಅಳಿಯನಿಗೆ ಸಾಂತ್ವನ ಹೇಳಿ ಮಗಳ ಕೈಯಲ್ಲಿ ಒಂದು ಸಾವಿರ ರೂಪಾಯಿಯನ್ನಿಟ್ಟು ಧೈರ್ಯ ತುಂಬಿ ಹೊರಟು ಹೋದರು.    ಅಂದು ಸಂಜೆ ಗೋಪಾಲನಿಗೆ ಜ್ವರ ಬಿಟ್ಟಿತು. ಗಂಜಿ ಕುಡಿಸಲು ಬಂದ ರಾಧಾಳನ್ನು ಸಮೀಪ ಕುಳ್ಳಿರಿಸಿಕೊಂಡ. ಹಿಂದಿನ ದಿನ ರಾತ್ರಿ ತನಗೆ ಬಿದ್ದ ಭೀಕರ ಕನಸನ್ನು ಎಳೆಎಳೆಯಾಗಿ ಅವಳಿಗೆ ವಿವರಿಸಿದ. ಅವನು ಹಾಗೆ ಮಾಡಬಾರದಿತ್ತೇನೋ. ಆದರೆ ಅವನೊಳಗೆ ತಣ್ಣನೆ ಹೊಕ್ಕು ರಾಕ್ಷಸಾಕಾರವಾಗಿ ಬೆಳೆದು ಅವನ ವಿವೇಚನೆಯನ್ನೇ ಕಸಿದುಕೊಂಡಿದ್ದ ನಾಗದೋಷದ ಭಯವು ಅವನಿಂದ ಆ ಕೆಲಸವನ್ನು ಮಾಡಿಸಿಬಿಟ್ಟಿತ್ತು. ಗಂಡನ ಕನಸನ್ನು ಕೇಳಿದ ರಾಧಾಳ ಮನಸ್ಸು ಕೆಟ್ಟಿತು. ಮರುಕ್ಷಣ ಅವಳ ಯೋಚನೆಯೂ ಎಲ್ಲರಂತೆ ಓಡತೊಡಗಿತು. ಸುಮಿತ್ರಮ್ಮ ಮತ್ತು ವಠಾರದವರು ಅನ್ನುವಂತೆ ನಮ್ಮೆಲ್ಲ ಕಷ್ಟಕಾರ್ಪಣ್ಯಗಳಿಗೂ ಗಂಡನ ಕನಸಿಗೂ ಹಾಗು ಅವನನ್ನು ಕಾಡಿದ ವಿಚಿತ್ರ ಜ್ವರಕ್ಕೂ ನಾಗದೋಷವೇ ಕಾರಣ ಎಂದು ಅವಳೂ ಬಲವಾಗಿ ನಂಬಿಬಿಟ್ಟಳು. ಅಲ್ಲಿಂದ ಆ ಕೊರಗು ಅವಳನ್ನೂ ಭಾದಿಸತೊಡಗಿತು. ಹೀಗಾಗಿ ಡಾ. ನರಹರಿ ಸೂಚಿಸಿದ ಪರೀಕ್ಷೆಗಳನ್ನು ಮಾಡಿಸುವುದನ್ನು ಇಬ್ಬರೂ ಮರೆತುಬಿಟ್ಟರು.    ಮರುದಿನ ಸಂಜೆಯ ಹೊತ್ತಿಗೆ ರಾಧಾಳ ತಳಮಳ ತೀವ್ರವಾಯಿತು. ಅದನ್ನು ಸಹಿಸಲಾಗದೆ ಸುಮಿತ್ರಮ್ಮನ ಮನೆಗೆ ಓಡಿದಳು. ಅವರು ತುಳಸಿಕಟ್ಟೆಯ ಪಕ್ಕದಲ್ಲಿ ಕುಳಿತುಕೊಂಡು ಬತ್ತಿ ಹೆಣೆಯುತ್ತಿದ್ದರು. ಗೇಟು ತೆಗೆದು ಒಳಗೆ ಬಂದ ರಾಧಾಳ ಮುಖದಲ್ಲಿದ್ದ ಗಾಬರಿಯನ್ನು ಕಂಡವರಿಗೆ ಅಚ್ಚರಿಯಾಯಿತು. ‘ಓಹೋ, ರಾಧಾ ಬಾ ಮಾರಾಯ್ತೀ ಕುಳಿತುಕೋ. ಏನು ವಿಷಯ…?’ ಎನ್ನುತ್ತ ಕೈಸನ್ನೆ ಮಾಡಿ ತಮ್ಮಿಂದ ಸ್ವಲ್ಪ ದೂರದಲ್ಲಿ ಕುಳಿತುಕೊಳ್ಳಲು ಸೂಚಿಸಿದರು. ಸುಮಿತ್ರಮ್ಮನನ್ನು ಕಂಡ ರಾಧಾಳಿಗೆ ಅಳು ಉಕ್ಕಿ ಬಂತು. ಅದನ್ನು ಕಂಡ ಸುಮಿತ್ರಮ್ಮ ಗಲಿಬಿಲಿಯಾದರು. ‘ಅಯ್ಯೋ ದೇವರೇ…ಏನಾಯ್ತು ಮಾರಾಯ್ತೀ ಯಾಕೆ ಅಳುತ್ತೀ…?’ ಎಂದರು ಆತಂಕದಿಂದ. ರಾಧಾ ಕಣ್ಣೀರೊರೆಸಿಕೊಳ್ಳುತ್ತ ತನ್ನ ಗಂಡನಿಗೆ ಬಿದ್ದ ಭೀಕರ ಕನಸನ್ನೂ ಆ ಹೊತ್ತು ಅವನು ವರ್ತಿಸಿದ ರೀತಿಯನ್ನೂ ಆರ್ತಳಾಗಿ ಅವರಿಗೆ ವಿವರಿಸಿದಳು. ಅಷ್ಟು ಕೇಳಿದ ಸುಮಿತ್ರಮ್ಮನೂ ಗಾಬರಿಯಾದರು. ಬಳಿಕ ಇನ್ನೇನೋ ಯೋಚಿಸಿದರು. ‘ಅಯ್ಯಯ್ಯೋ, ದೇವರೇ! ಆ ಬನವು ನಾಗನ ಮೂಲಸ್ಥಾನ ಮಾರಾಯ್ತೀ… ವಠಾರವನ್ನು ಆದಷ್ಟು ಶುಚಿಯಾಗಿಟ್ಟುಕೊಳ್ಳಿ ಅಂತ ನಾನಾವತ್ತೇ ಬಡಕೊಂಡೆ. ಆದರೆ ನಿಮಗಿಬ್ಬರಿಗೂ ನನ್ನ ಮಾತೇ ಅರ್ಥವಾಗಲಿಲ್ಲ ಅಲ್ಲವಾ! ಇನ್ನೆಂಥ ಅನಾಹುತಗಳು ಕಾದಿವೆಯೋ ಮುಖ್ಯಪ್ರಾಣಾ…!’ ಎಂದು ಭಯದಿಂದ ಗೊಣಗಿದರು.    ಬಳಿಕ, ‘ಸರಿ, ಸರಿ. ಆಗಿದ್ದು ಆಯಿತು. ಇನ್ನಾದರೂ ತಪ್ಪನ್ನು ತಿದ್ದಿಕೊಂಡು ಬದುಕಲು ಕಲಿಯಿರಿ ಮಾರಾಯ್ತೀ. ನಾಳೆ ಬೆಳಿಗ್ಗೆ ನೀನು ನನ್ನೊಂದಿಗೆ ಗುರೂಜಿಯವರಲ್ಲಿಗೆ ಬಂದುಬಿಡು. ಇದಕ್ಕೆಲ್ಲ ಅವರೇ ಸೂಕ್ತ ಪರಿಹಾರ ಸೂಚಿಸುತ್ತಾರೆ!’ ಎಂದು ಅವಳನ್ನು ಸಂತೈಸಿದರು. ಗುರೂಜಿಯ ಹೆಸರೆತ್ತಿದ ಮೇಲೆ ರಾಧಾ ತುಸು ಸಮಾಧಾನವಾದಳು. ‘ಆಯ್ತು ಸುಮಿತ್ರಮ್ಮ ಬರುತ್ತೇನೆ. ಈ ದುರಾವಸ್ಥೆಯಿಂದ ನನ್ನ ಸಂಸಾರವನ್ನು ನೀವೇ ಕಾಪಾಡಬೇಕಮ್ಮಾ!’ ಎಂದು ಬೇಡಿಕೊಂಡು ಮತ್ತೆ ಅತ್ತಳು. ಅವಳ ದುಃಖ ಕಂಡ ಸುಮಿತ್ರಮ್ಮನ ಕರುಳು ಮಿಡಿಯಿತು. ‘ಆಯ್ತು ರಾಧಾ, ಚಿಂತಿಸಬೇಡ. ಎಲ್ಲಾ ಸಮ ಆಗುತ್ತದೆ. ಈಗ ನೆಮ್ಮದಿಯಿಂದ ಮನೆಗೆ ಹೋಗು!’ ಎಂದರು ಅಕ್ಕರೆಯಿಂದ. ಅವರ ಮಾತಿನಿಂದ ರಾಧಾಳ ನೋವು ಅರ್ಧಕ್ಕರ್ಧ ತಣ್ಣಗಾಯಿತು. ಅವರಿಗೆ ಡೊಗ್ಗಾಲು ಬಿದ್ದು ನಮಸ್ಕರಿಸಿ ಹಿಂದಿರುಗಿದಳು. (ಮುಂದುವರೆಯುವುದು) ಗುರುರಾಜ್ ಸನಿಲ್ ಗುರುರಾಜ್ಸನಿಲ್ಉಡುಪಿಇವರುಖ್ಯಾತಉರಗತಜ್ಞ, ಸಾಹಿತಿಯಾಗಿನಾಡಿನಾದ್ಯಂತಹೆಸರುಗಳಿಸಿದವರು. .‘ಹಾವುನಾವು’, ‘ದೇವರಹಾವು: ನಂಬಿಕೆ-ವಾಸ್ತವ’, ‘ನಾಗಬೀದಿಯೊಳಗಿಂದ’, ‘ಹುತ್ತದಸುತ್ತಮುತ್ತ’, ‘ವಿಷಯಾಂತರ’ ‘ಕಮರಿದಸತ್ಯಗಳುಚಿಗುರಿದಸುದ್ದಿಗಳು’ ಮತ್ತುಅವಿಭಜಿತದಕ್ಷಿಣಕನ್ನಡಜಿಲ್ಲೆಗಳನೈಸರ್ಗಿಕನಾಗಬನಗಳಉಳಿವಿನಜಾಗ್ರತಿಮೂಡಿಸುವ ‘ನಾಗಬನವೆಂಬಸ್ವರ್ಗೀಯತಾಣ’ , ‘ಗುಡಿಮತ್ತುಬಂಡೆ’ ಎಂಬಕಥಾಸಂಕಲವನ್ನುಹೊರತಂದಿದ್ದಾರೆ. ಇತ್ತೀಚೆಗೆ ‘ಆವರ್ತನ’ ಮತ್ತು ‘ವಿವಶ’ ಎರಡುಕಾದಂಬರಿಗಳುಬಂದಿವೆ.‘ಹಾವುನಾವು’ ಕೃತಿಗೆಕರ್ನಾಟಕಸಾಹಿತ್ಯಅಕಾಡೆಮಿಯು 2010ನೇಸಾಲಿನ ‘ಮಧುರಚೆನ್ನದತ್ತಿನಿಧಿಪುಸ್ತಕಪ್ರಶಸ್ತಿ’ ನೀಡಿಗೌರವಿಸಿದೆ. ‘ ‘ಕರುಣಾಎನಿಮಲ್ವೆಲ್‍ಫೇರ್ಅವಾರ್ಡ್(2004)’ ‘ಕರ್ನಾಟಕಅರಣ್ಯಇಲಾಖೆಯ ‘ಅರಣ್ಯಮಿತ್ರ’(2013)’ ಕರ್ನಾಟಕಕಾರ್ಮಿಕವೇದಿಕೆಯು ‘ಕರ್ನಾಟಕರಾಜ್ಯೋತ್ಸವಪ್ರಶಸ್ತಿ(2015)’ ಪಡೆದಿದ್ದಾರೆ. ಪ್ರಸ್ತುತಉಡುಪಿಯಪುತ್ತೂರಿನಲ್ಲಿವಾಸವಾಗಿದ್ದಾರೆ

Read Post »

ಇತರೆ

ಮಹಿಷಾ ಮಂಡಲದಲ್ಲಿ ಬೌದ್ಧ ಪರಂಪರೆ

ನಮ್ಮ ಆಚರಣೆಗಳಲ್ಲಿಯೇ ನಮ್ಮ ಚರಿತ್ರೆಗಳನ್ನು ಕಂಡುಕೊಳ್ಳಬೇಕಿದೆ. ಮಹಿಷಾ ಮಂಡಲದಲ್ಲಿ ಬೌದ್ಧರ ನಾಶದ ಹಿಂದೆ ಒಂದು ಚಾರಿತ್ರಿಕ ವಂಚನೆಯನ್ನು ಗ್ರಹಿಸಬೇಕಿದೆ.

ಮಹಿಷಾ ಮಂಡಲದಲ್ಲಿ ಬೌದ್ಧ ಪರಂಪರೆ Read Post »

ಇತರೆ

ತಾಯಿಯೇ ಮಕ್ಕಳನ್ನು ಅಳಿಸಬಹುದೇ?

ಆದರೆ ಅವರನ್ನು ಈಗಲೇ ತಯಾರು ಮಾಡೋದ್ರಲ್ಲಿ ತಪ್ಪೇನಿದೆ? ಇವತ್ತು ತಿದ್ದಿಕೊಳ್ಳದಿದ್ದರೆ ಈಗ ನೋಡಿ ನಾನು ಅಳ್ತಿದ್ದೀನಲ್ಲ, ಹಾಗೆ ಮುಂದೆ ಅವರೂ ಹಾಗೇ ಅಳ್ತಾರೆ ಅಷ್ಟೇ. ತಾಯಿಯೇ ಮಕ್ಕಳನ್ನು ಅಳಿಸುವುದೇ?

ತಾಯಿಯೇ ಮಕ್ಕಳನ್ನು ಅಳಿಸಬಹುದೇ? Read Post »

ಇತರೆ

ವಾರ್ಷಿಕ ವಿಶೇಷಾಂಕ

‘ಸಂಗಾತಿ’ ಕನ್ನಡ ಸಾಹಿತ್ಯದ ವೆಬ್ ಪತ್ರಿಕೆ ಇದೇ ಅ.೨೦ ಕ್ಕೆ ಎರಡು ವರ್ಷ ಮುಗಿಸಿ,ಮೂರನೇ ವಸಂತಕ್ಕೆ ಅಡಿಯಿಡುತ್ತಿದೆ
ಈ ಎರಡು ವರ್ಷಗಳಲ್ಲಿ ಸಂಗಾತಿ ಪತ್ರಿಕೆ ಕವಿತೆ, ಕತೆ, ಜೀವನ ಚರಿತ್ರೆ, ಅಂಕಣ ಬರಹಗಳ ಮೂಲಕ ಕನ್ನಡ ಸಾಹಿತ್ಯದ ವರ್ತಮಾನದ ದನಿಯನ್ನು ಕಟ್ಟಿಕೊಟ್ಟಿದೆ. ನಾಡಿನ ಹಿರಿಯರು, ಕಿರಿಯರು ಸಂಗಾತಿಗೆ ಬರೆದಿದ್ದಾರೆ.
ಎರಡು ವರ್ಷದ ಪಯಣದ ಈ ಸಂದರ್ಭದಲ್ಲಿ ಪತ್ರಿಕೆ ವಿಶೇಷ ಸಂಚಿಕೆ ತರಲು ತಿರ್ಮಾನಿಸಿದೆ

ವಾರ್ಷಿಕ ವಿಶೇಷಾಂಕ Read Post »

ಇತರೆ

ಪ್ರಿಯ ಬಾಪುವಿಗೊಂದು ಪತ್ರ

ಹೋರಾಟ, ಜೈಲು, ಉಪವಾಸ, ಬರಹ, ತ್ಯಾಗ- ಅಬ್ಬಬ್ಬಾ! ಬರೆಯುತ್ತಾ ಹೋದರೆ ಎಂದೂ ಮುಗಿಯದಿರುವ ಅಗಣಿತ ಅದ್ಭುತ ನೀವು. ನಿಮ್ಮ ಬದುಕಿನ ರೀತಿ, ನೀತಿ, ಸಿದ್ಧಾಂತಗಳು ಇಂದಿಗೂ ಚಾಲ್ತಿಯಲ್ಲಿರುವುದನ್ನು ಕಂಡಾಗ ನನ್ನ ಮನಸ್ಸು ಹೇಳುತ್ತದೆ- ‘ಬಾಪು, ನೀವು ಎಂದೆಂದಿಗೂ ಅಮರ.’

ಪ್ರಿಯ ಬಾಪುವಿಗೊಂದು ಪತ್ರ Read Post »

ಇತರೆ, ದಾರಾವಾಹಿ

ಆಶ್ಚರ್ಯ! ತನ್ನ ಕೈಕಾಲುಗಳನ್ನು ಯಾರೋ ಬಿಗಿಯಾಗಿ ಕಟ್ಟಿ ಹಾಕಿರುವಂತೆ ಭಾಸವಾಗುತ್ತದೆ. ಜೋರಾಗಿ ಅರಚಿಕೊಳ್ಳುತ್ತಾನೆ. ಆದರೂ ಬಿಡುಗಡೆ ದೊರಕುವುದಿಲ್ಲ. ವಿಧಿಯಿಲ್ಲದೆ ಮರಳಿ ತನ್ನ ಕುಟುಂಬವನ್ನು ತಬ್ಬಿಕೊಂಡು ಮುದುಡುತ್ತಾನೆ.

Read Post »

ಇತರೆ

ಪತ್ರಕರ್ತ ಗಾಂಧೀಜಿ

ಪತ್ರಿಕೋದ್ಯಮ ನನಗೆ ಶಿಕ್ಷಣ ಇದ್ದಂತೆ. ನನ್ನೊಳಗೆ ಇಣುಕಿ ನೋಡಿ ನನ್ನ ದೌರ್ಬಲ್ಯಗಳನ್ನು ಕಂಡುಕೊಳ್ಳುವುದು ಸಾಧ್ಯವಾಗುತ್ತದೆ. ಚುರುಕಾದ ಪದಪ್ರಯೋಗ, ಕಠಿಣ ವಿಶೇಷಣ ಬಳಸಬೇಕೆಂದು ನನ್ನ ಕೋಪ ಹಾಗೂ ಪ್ರತಿಷ್ಠೆ ಆಜ್ಞಾಪಿಸುತ್ತದೆ. ಕಳೆಯನ್ನೆಲ್ಲಾ ಕಿತ್ತುಹಾಕಲು ಬರವಣಿಗೆ ಒಂದು ಸಾಧನ ಎನ್ನುತ್ತಿದ್ದ ಗಾಂಧೀಜಿ ಒಬ್ಬ ಮಹಾಗದ್ಯ ಶಿಲ್ಪಿ

ಪತ್ರಕರ್ತ ಗಾಂಧೀಜಿ Read Post »

ಇತರೆ

ಶಾಸ್ತ್ರೀಜಿ ಎಂಬ ಧ್ರುವ ತಾರೆಯ ನೆನಪಿನಲ್ಲಿ…

ಸಾದಾರಣ ರೂಪು, ಸಾದಾರಣ ಉಡುಪಿನ, ಕುಳ್ಳಗಿನ ಆಕಾರದ ದೇಶದ ಪ್ರಧಾನಿಯೆನಿಸಿದ ವ್ಯಕ್ತಿಯೊಬ್ಬರೂ ತುಸು ದುಗುಡದಿಂದ ಮನೆಯಲ್ಲಿ ಅತ್ತಿಂದಿತ್ತ ಓಡಾಡುತ್ತಿದ್ದಾರೆ. ಅವರ ಮನದಲ್ಲಿ ನೂರಾರು ಚಿಂತೆಗಳಿವೆ. ‘ ಹತ್ಯಾರೋಂ ಕಾ ಜವಾಬ್, ಹತ್ಯಾರೋಂಸೆ ದೇಂಗೆ..

ಶಾಸ್ತ್ರೀಜಿ ಎಂಬ ಧ್ರುವ ತಾರೆಯ ನೆನಪಿನಲ್ಲಿ… Read Post »

ಇತರೆ

ಗಾಂಧಿ ಜಯಂತಿ ವಿಶೇಷ ಮಗುವಾಗಿ ಬಿಟ್ಟ ಗಾಂಧಿ ಅಜ್ಜನ ಫೋಟೋ ಅಲ್ಲಿಇಟ್ಟಿದ್ರಪ್ಪ ಹಾಗೆಹೂಗಳ ಮಾಲೆ ಎಲ್ಲ ತಂದುತುಂಬಿದ್ರಪ್ಪ ಹೀಗೆ ಹಣ್ಣು ಬೆಲ್ಲ ಇಟ್ಟಿದ್ರಲ್ಲಿಘಮ ಘಮ ಕಡ್ಡಿಯ ಕಂಪುಪುಟ್ಟ ಹಾಗೇ ನೋಡ್ತಾ ಇದ್ದಹತ್ತಿತು ಅವನಿಗೆ ಜೊಂಪು ಹಣ್ಣು ಹೂವು ಯಾವುದು ಮುಟ್ಟದೆಗಾಂಧಿ ತಾತ ಬಂದಪುಟ್ಟನ ಹತ್ತಿರ ಏನೋ ಹೇಳುತಬಾರೋ ಜೊತೆಯಲಿ ಎಂದ ತಾತನ ನಡಿಗೆ ಎಷ್ಟು ಜೋರುಪುಟ್ಟುಗೆ ಓಡುವ ಆಟಅನಾತ ಅಜ್ಜಿಯ ಜೋಪಡಿ ಹೊಕ್ಕುಕುಡಿದನು ನೀರಿನ ಲೋಟ ಅಲ್ಲಿಂದಿಲ್ಲಿಗು ಕೇಳುತ ಬಂದಗಿಡಗಳ ಬೆಳೆಸಿಲ್ಲೇನುಹೀಗೇ ಗಿಡಗಳ ಕಡಿಯುತ ಉಳಿದರೆನರಕವ ಕಟ್ಟುವ ಪ್ಲ್ಯಾನು ತಟ್ಟನೆ ಪುಟ್ಟುವ ನಿಲ್ಲಿಸಿ ಗಾಂಧಿಹೊರಟೇ ಬಿಟ್ಟ ಅತ್ತಕೆಸರಲಿ ಬಿದ್ದ ನಾಯಿಯ ಎತ್ತಿಬಿಸ್ಕೀಟ ಎರಡು ಇತ್ತ ಅಯ್ಯೋ ಅಯ್ಯೋ ಎಷ್ಟು ಹೊಲಸುಕಸದ ಗುಂಡಿ ರಸ್ತೆಕಸವನು ಹೆರಕಲು ಹೊರಟೇ ಬಿಟ್ಟಪುಟ್ಟನ ನಿಲ್ಲಿಸಿ ಮತ್ತೆ ಶಾಲೆಯ ವರೆಗೂ ಬಂದಿದ್ದಾಯ್ತುಹೋದ ಎಲ್ಲಿ ಈತಮಕ್ಕಳು ನೆಟ್ಟ ಗಿಡಗಳ ಮಧ್ಯಬಿಳಿಯ ಉಡುಗೆಯ ತಾತ ಮಕ್ಕಳ ಪ್ರೀತಿಯ ಗುರುಗಳು ಬಂದ್ರುಮಕ್ಕಳೇ ಅವರ ನೀತಿತಾತನೂ ಈಗ ಮಗುವಾಗಿ ಬಿಟ್ಟಅವನಿಗೂ ಅದುವೇ ಪ್ರೀತಿ. ——————                 ತಮ್ಮಣ್ಣ ಬೀಗಾರ.

Read Post »

ಇತರೆ

ಇರುಳೆಲ್ಲಾ ಮೋಜು ಮಸ್ತಿಮಾಡಿ ನಶೆಯಲಿ ಹೊರಳಾಡುವರು
ಹಗಲು ಉಪವಾಸ ಸತ್ಯಾಗ್ರಹದಲ್ಲಿ ಪಾಲುಗೊಂಡರು ನೋಡು

Read Post »

You cannot copy content of this page

Scroll to Top