ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ

“ಕಿಲಾಪತ್ ಸೇನಾನಿಗರು.1921” ಹಮೀದ್ ಹಸನ್ ಮಾಡೂರು ಅವರ ಕವಿತೆ

ಕಾವ್ಯ ಸಂಗಾತಿ ಹಮೀದ್ ಹಸನ್ ಮಾಡೂರು “ಕಿಲಾಪತ್ ಸೇನಾನಿಗರು.1921” ಸ್ವಾತಂತ್ರ್ಯದ….ವೀರಾಧಿ ವೀರರಿವರು,ಮಲೆಬಾರ ಮಣ್ಣಿನ ಧೀರರು,ಕಿಲಫತ್ ಕದನದ ಯೋಧರಿವರು,ಕೇರಳದ ಮಾಪಿಲ ಕಾಕರು,ಮಲಬಾರಿನ ಕೆಚ್ಚೆದೆಯ ಸೇನಾನಿಗರು,!    ಅಂದು ಆ ನಮ್ಮವರು,   ಹಿರಿಯರು ಕಿರಿಯರೆಲ್ಲರು,   ಎದೆಯೊಡ್ಡಿ ಹೋರಾಡಿದವರು,   ಜನ್ಮಭೂಮಿಗೆ ಸ್ವಾತಂತ್ರ್ಯ ತಂದವರು,   ಕಿಚ್ಚಿನ ಮಾಪಿನ ಕಾಕರು,   ಮಲಬಾರಿನ ಕೆಚ್ಚೆದೆಯ ಸೇನಾನಿಗರು,!   ಬಿಳಿಯರ ಬಿಲಗಳ…ಮುತ್ತಿಟ್ಟು ಘರ್ಜಿಸಿದವರು,ಸ್ವಾತಂತ್ರ್ಯಕ್ಕಾಗಿ ಬಲಿಯಾದವರು,ಬಂದೂಕಿಗೆ ಎದೆಕೊಟ್ಟ ದೇಶ ಭಕ್ತರುಭಾರತದ ಮಾಪಿಲ ಸುಪುತ್ರರು,ಮಲಬಾರಿನ ಕೆಚ್ಚೆದೆಯ ಸೇನಾನಿಗರು,!    ಸ್ವಾತಂತ್ರ್ಯದ ಕಿಚ್ಚಲಿ…   ಸೆಣದಾಡಿ ಗೆದ್ದ ಕಿಲಾಪತರು,   ಸ್ವಾತಂತ್ರ್ಯ ಭಾರತದ ಕನಸಿಗರು,   1921ರ ಧೀರಾ ಕಿಲಾಪತ್ ಸೇನಾನಿಗರು,   ಕೇರಳ ಮಣ್ಣಿನ ಮಾಣಿಕ್ಯರು   ಮಲಬಾರಿನ ಕೆಚ್ಚೆದೆಯ ಸೇನಾನಿಗರು,!   ಸ್ವಾತಂತ್ರ್ಯದ ಧ್ಯೇಯಕೆ…ಒಕ್ಕೊರಲ ಕೂಗಿಗೆ ಬ್ರಿಟಿಷರು,ಸೋಲ ಉಣಿಸಿ, ಬೆಚ್ಚಿಸಿ ಬಿಟ್ಟವರು,ಬ್ರಿಟೀಷರ ಕೋವಿಗೆ ಜೀವ ತೆತ್ತವರುಎದೆಯೊಡ್ಡಿದ ಬಲಿದಾನಿಗಳು,ಮಲಬಾರಿನ ಕೆಚ್ಚೆದೆಯ ಸೇನಾನಿಗರು.! ಹಮೀದ್ ಹಸನ್ ಮಾಡೂರು.

“ಕಿಲಾಪತ್ ಸೇನಾನಿಗರು.1921” ಹಮೀದ್ ಹಸನ್ ಮಾಡೂರು ಅವರ ಕವಿತೆ Read Post »

ಇತರೆ

‌”ಸ್ತ್ರೀ ಮತ್ತು ಬೇಂದ್ರೆ ಸಾಹಿತ್ಯ” ವಿಶೇಷ ಲೇಖನ, ಡಾ.ಯಲ್ಲಮ್ಮ ಕೆ

ಸಾಹಿತ್ಯ ಸಂಗಾತಿ ಡಾ.ಯಲ್ಲಮ್ಮ ಕೆ ‌”ಸ್ತ್ರೀ ಮತ್ತು ಬೇಂದ್ರೆ ಸಾಹಿತ್ಯ” ನಾನು ಮತ್ತೆ ಮತ್ತೆ ಏನನ್ನಾದರೂ ಬರೆಯಲೇಬೇಕು ಎಂದುಕೊಂಡಾಗಲೆಲ್ಲ.., ಬರಿಲಿಕ್ಕೇನಿದೆ? ಎಂಬ ಪ್ರಶ್ನೆ ಧುತ್ತೆಂದು ಕಣ್ಮುಂದೆ ಬಂದು ನಿಲ್ಲುತ್ತದೆ! ಈಗಾಗಲೇ ಸಾಕಷ್ಟು ಜನ ಬರೆದು-ಹೊಟ್ಟೆ ಹೊರೆದು ಹಾಕಿದ್ದು ಎದುರಿಗೆ ಗುಡ್ಡೆಬಿದ್ದಿರುವಾಗ ನಾನಿನ್ನೂ ಓದೋದು ಬಾಳಷ್ಟಿದೆ ಅನಿಸುವ ಹೊತ್ತಲೇ ನನ್ನ ಆತ್ಮೀಯರಲ್ಲೋರ್ವರು ಯಾವುದೋ ಸಮಯ-ಸಂದರ್ಭದ ನಿಮ್ಮಿತ್ತ ಲೇಖನವೊಂದನ್ನು ಬರೆದುನೀಡುವಂತೆಯೂ, ಹಾಗೆನೇ ವಿಷಯವಸ್ತುವೊಂದನ್ನು ಸೂಚಿಸಿದರು ಕೂಡ; ಉದಾ: ಬೇಂದ್ರೆ ಸಾಹಿತ್ಯದಲ್ಲಿ ಸ್ತ್ರೀ ಎಂದಿಟ್ಟುಕೊಳ್ಳೋಣ. ಇಲ್ಲಿ ಬೇಂದ್ರೆ ಎಂಬ ಹೆಸರನ್ನು ತೆಗೆದು ಕನ್ನಡದ ಖ್ಯಾತನಾಮ ಯಾವೊಬ್ಬ ಕವಿ-ಸಾಹಿತಿಯ ಹೆಸರು ಸೇರಿಸಿದರೂ ಸರಿಯೆ! ಪತ್ರಿಕಾ ವರದಿ, ದತ್ತಕಾರ‍್ಯ ರೂಪದ, ಅಕಾಡೆಮಿಕ್ ರೀತೀಯಲ್ಲಿ ಸಂಶೋಧನಾ ಲೇಖನಗಳನ್ನು ಯಾರೂ ಕೂಡ ಬರೆಯಬಹುದೆಂದು ಯೋಚಿಸುತ್ತಿರುವಾಗಲೇ.., ಒಂದು ಸಾಮಾನ್ಯ ಸರಳ ಸೂತ್ರವೆಂಬಂತೆ – ತಾಯಿ, ಪ್ರೇಯಸಿ, ಗೃಹಿಣಿ, ಮೃದು ಸ್ವಭಾವ, ಮಮತೆ ಮತ್ತು ವಾತ್ಸಲ್ಯದ ಪ್ರತಿರೂಪದ, ಗುಣವತಿ, ಸಹನಶೀಲೆ, ಕ್ಷಮಯಾ ಧರಿತ್ರಿ, ದೈವೀಶಕ್ತಿರೂಪಿಣಿ ಎಂಬ ಸ್ತ್ರೀರೂಪಗಳು ಎಲ್ಲ ಕಾಲ ಮತ್ತು ಕವಿ-ಸಾಹಿತ್ಯದಲ್ಲೂ ಕಂಡುಬರುವಂತಹ ಗಮನೀಯ ಅಂಶಗಳು ಎಂದೆನ್ನಬಹುದೇ? ಇಲ್ಲವೇ ಸ್ತ್ರೀ ವಾಸ್ತವ ಬದುಕಿನ ಅನಾವರಣ-ಚಿತ್ರಣವೆಂದೆನ್ನಬಹದೇ?ಚಾರ್ಲ್ಸ್ ಡಾರ್ವಿನ್‌ನ ಸಿದ್ಧಾಂತದನ್ವಯ ಆದಿಮಾನವನಿಂದ್ಹಿಡಿದು ಆಧುನಿಕ ಮತ್ತು ಆಧುನಿಕೋತ್ತರ ಮಾನವನ ಜೀವವಿಕಸನದ ಹಾದಿಯನ್ನೊಮ್ಮೆ ಸಿಂಹಾವಲೋಕನ ಕ್ರಮದಿ ಗ್ರಹಿಸಿದಾಗ ಮಾತು ಮತ್ತು ಬುದ್ಧಿಬಲದ ದೆಸೆಯಿಂದ ಪ್ರಾಣಿಪ್ರಪಂಚದಿಂದ ಭಿನ್ನವೆನಿಸಿಕೊಂಡು ಮುನ್ನಡೆಯ ಹಾದಿಯಲ್ಲಿ ಜೈವಿಕ ಆಧಾರದಿ ಗಂಡು-ಹೆಣ್ಣೆಂಬ ಭೇದ, ಬಲಿಷ್ಠರು-ಅಶಕ್ತರು ಎಂಬ ವರ್ಗ ಸಂಘರ್ಷದಿ ಮೇಲೂ-ಕೆಳಗೂ, ಕೆಳಗೂ-ಮೇಲಾಗಿ ಸಾಗುತ್ತಲೇ ಸಂಘಜೀವಿ ಮನುಷ್ಯ ಸುತ್ತಣ ತನ್ನದೇ ಆದ ಗುಂಪು ಅಥವಾ ಸಮುದಾಯ ಅದಕ್ಕೊಂದು ಆಚಾರ-ವಿಚಾರ, ರೀತಿ-ನೀತಿ-ನಿಯಮಗಳೆಂಬ [ವಿವಾಹ, ಕುಟುಂಬ, ಜಾತಿ, ಮತ, ಧರ್ಮ] ಸಾಮಾಜಿಕ ಚೌಕಟ್ಟನ್ನು ನಿರ್ಮಿಸಿಕೊಂಡ; ಈ ಚೌಕಟ್ಟಿನೊಳಗಡೆ ಸ್ತ್ರೀ ತನಗೊದಗಿದ ಪಾತ್ರಗಳನ್ನು ಅತ್ಯಂತ ಮನೋಜ್ಞವಾಗಿ ಅನುಭವಿಸುತ್ತ.., ಅಭಿನಯಿಸುತ್ತ ತನ್ನ ಬದುಕಿನ ಪಾಡನ್ನೇ ಹಾಡನ್ನಾಗಿಸಿ ಹಾಡುತ್ತ ಹೆಜ್ಜೆಯ ಹಿಂದೆ ಹೆಜ್ಜೆಯ ಗೆಜ್ಜೆನಾದವಗೈಯುತ ಸಾಗುತ್ತಲೇ ಗಂಡಿನ ಅವಜ್ಞೆಗೆ ಗುರಿಯಾದಳೆಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.ಈ ಅವಜ್ಞೆಯ ದೆಸೆಯಿಂದಾಗಿಯೇ ಸ್ತ್ರೀ ಮನುಕುಲ-ವಂಶೋದ್ಧಾರದ ತಂತ್ರವಾಗಿಯೂ, ಮಕ್ಕಳನ್ನು ಹೆರುವ ಯಂತ್ರವಾಗಿಯೂ, ಬೋಗ-ಲಾಲಸೆಯ ವಸ್ತುವಾಗಿಯೂ, ಬಿಕರಿಯ ಸರಕಾಗಿಯೂ; ಬಾಲ್ಯ, ಯವ್ವೌನ ಮತ್ತು ಮುಪ್ಪನ್ನು ಕ್ರಮವಾಗಿ ತಂದೆ-ಗಂಡ ಮತ್ತು ಮಕ್ಕಳ ಸಂರಕ್ಷಣೆಯಲ್ಲಿಯೇ ಬಾಳಿ ಬದುಕಬೇಕಾದ ದುಸ್ಥಿತಿಯನ್ನು ತಲುಪಿದ ಸಂದರ್ಭ – ವಚನ ಮತ್ತು ದಾಸ ಸಾಹಿತ್ಯದ ಜ್ಞಾನಪ್ರಕಾಶದಿ ಅಂದಕಾರವ ಕಳೆದು ಬೆಳಕಿನ ಯುಗಾದಿಯೆಡೆಗೆ ಪಯಣಿಸಿ.., ನವ್ಯ, ನವೋದಯ, ಪ್ರಗತಿಶೀಲ, ದಲಿತ ಮತ್ತು ಬಂಡಾಯ, ತರುವಾಯ ಅಸ್ಮಿತೆಯ ಕುರುಹಾಗಿ ಬೆಳೆದುಬಂದ ಸ್ತ್ರೀವಾದಿ ಸಾಹಿತ್ಯ ಇತ್ಯಾದಿ ಪ್ರಕಾರಗಳು ಬೆಳೆದುಬಂದದ್ದು ಕಣ್ಮುಂದಿನ ಇತಿಹಾಸ.ಕನ್ನಡ ಭಾಷೆ ಮತ್ತು ಸಾಹಿತ್ಯದ ಸಂದರ್ಭದಿ ಸ್ತ್ರೀ-ಹೆಣ್ಣನ್ನು ನೋಡುವುದಾದರೆ.., ಮುಖ್ಯವಾಗಿ ಹೆಣ್ಣನ್ನು ಪುರುಷ ಅಥವಾ ಪುರುಷ ಪ್ರಧಾನ ಸಮಾಜ ಕಂಡಿರುವ ದೃಷ್ಟಿ, ಹೆಣ್ಗಳ್ಳಿನ ಪುರುಷ ಹೆಣ್ಣನ್ನು ಕಂಡಿರುವ ದೃಷ್ಟಿ, ಹೆಣ್ಣನ್ನು ಹೆಣ್ಣು ಕಂಡಿರುವ ದೃಷ್ಟಿ ಎಂದು ಈ ಮೂರು ಆಯಾಮಗಳಲ್ಲಿ ಅವಲೋಕಿಸುವುದು ಉತ್ತಮ ಮಾರ್ಗವಾದೀತು ಎಂದು ನನಗನಿಸುತ್ತೆ. ನಾವು ಹೀಗೆ ಆಲೋಚಿಸುವಾಗ ಜನ್ಮದತ್ತವಾಗಿ ವರವಾಗಿಯೋ ಶಾಪವಾಗಿಯೋ ನಮಗಂಟಿಕೊಂಡು ಬಂದಿರುವ ಪೂರ್ವಾಗ್ರಹಗಳು ಯಾವುದೇ ಒಂದು ವಸ್ತು-ವಿಷಯ-ಸಂಗತಿಯ ಕುರಿತಾಗಿ ಕೇಳುವಾಗ, ಮಾತನಾಡುವಾಗ, ಓದುವಾಗ, ಬರೆಯುವಾಗ; ಚರ್ಚಿಸಲು, ತರ್ಕಿಸಲು, ವಿಶ್ಲೇಷಿಸಲು ತೊಡಗಿದಾಗ ಶೂನ್ಯದಿಂದ ಏನನ್ನೂ ಸೃಷ್ಟಿಸಲಾಗದು ಎಂಬ ಮಾತಿಗೆ ಮಣೆಹಾಕುತ್ತ.., ಹಲ-ಕೆಲವು ಪೂರ್ವಾಗ್ರಹಗಳನ್ನು ಹೊತ್ತುಕೊಂಡೇ ಮುನ್ನಡೆಯುತ್ತೇವೆ; ನೀವು ಏನೇ ಮಾತಾಡಿದರೂ ಆ ಮಾತಿನ ಲಯ ಮತ್ತು ದಾಟಿ, ಏನೇ ಬರೆದರೂ ಆಬರಹದ ಓಘ ಅಥವಾ ಶೈಲಿಯಿಂದಲೇ ಎಡ-ಬಲ-ಮಧ್ಯಂತರಗಳೆಂಬ ಕವಲಿಗೆ ಸಿಕ್ಕಿಹಾಕಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಈ ಒಂದು ಖಯಾಲಿಯಿಂದ ಹೊರಬಂದರೇ ಮಾತ್ರ ಈ ಮೂರು ಆಯಾಮಗಳಲ್ಲಿ ಸ್ತಿçÃಯನ್ನು ಸಮಗ್ರವಾಗಿ ಗ್ರಹಿಸಬಹುದು ಎಂಬುದು ನನ್ನ ಮನದಿಂಗಿತವಾಗಿದೆ. ಹೆಣ್ಣನ್ನು ಪುರುಷ ಅಥವಾ ಪುರುಷ ಪ್ರಧಾನ ಸಮಾಜ ಕಂಡಿರುವ ದೃಷ್ಟಿ:ಅನುಕೂಲ ಮತ್ತು ಅನನಕೂಲ, ಸಮ್ಮತಿ-ಅಸಮ್ಮತಿಯ ಹಿನ್ನಲೆಯಲ್ಲಿ ಹೆಣ್ಣು ಒಲಿದರೆ ನಾರಿ ಮುನಿದರೆ ಮಾರಿ, ಹೆಣ್ಣಿಗೆ ಹಣ್ಣೇ ಶತ್ರು, ಎರಡು ಜಡೆಯನ್ನು ಕೂಡಿಸಲಾಗದು, ಹೆಣ್ಮಕ್ಕಳ ಬುದ್ಧಿ ಮೊಣಕಾಲ ಕೆಳಗೆ ಎಂದು ಜರೆಯುವ, ಹೆಣ್ಣು ಗಂಡಿನ ಬಾಳಿಗೆ ಕಣ್ಣಾಗುವ ಅದೇ ಹೆಣ್ಣು ಹುಣ್ಣಾಗುವ ಇಬ್ಬದಿತನದ ಧೋರಣೆಯ ಪೂರ್ವಾಗ್ರಹಗಳಿಂದ, ಕಣ್ಣಿಗೆ ಮಣ್ಣೆರೆಚುವ ಮಾತುಗಳ ಪ್ರೇರೇಪಣೆಯಿಂದ ನೋಡಿದಾಗ; ತಾಯಿಯಾದವಳು ಮಗ-ಸೊಸೆಯನ್ನು, ಮಗಳು-ಅಳಿಯನನ್ನು ಕಾಣುವ ಬಗೆ, ಅತ್ತೆ ಒಡೆದ ಕಂಚಿಗೆ ಬೆಲೆಯಿಲ್ಲ ಎಂಬ ಮನೋಧೋರಣೆ, ಅದೇ ಸೊಸೆ – ಅತ್ತೆ-ಮಾವ-ನಾದಿನಿ-ಮೈದುನನ್ನು ಕಾಣುವ ಬಗೆಗೂ ಅದೇ ತನ್ನ ಅಣ್ಣ-ತಮ್ಮ, ಅಕ್ಕ-ತಂಗಿಯರನ್ನು ಕಾಣುವ ಬಗೆಗೂ ತುಂಬ ವ್ಯತ್ಯಾಸವನ್ನು ಕಾಣಬಹುದು. ಅಂಗೀಯ ಮ್ಯಾಲಂಗಿ ಚಂದೇನೋ ನನ ರಾಯ ಎಂಬ ಗರತಿಯು ಸವತಿಯನ್ನು ಕಾಣುವ ಬಗೆ, ಗಂಡನಾದವನು ಮತ್ತೊಬ್ಬಾಕೆಯ ಸಂಗಡದಲ್ಲಿರುವುದನ್ನು ತಿಳಿದು ಆಕೆಯನ್ನು ಕಾಣುವ ಬಗೆ, ತಾಯಿ ಸತ್ತಮ್ಯಾಲೆ ತಂದೆ ಚಿಗಪ್ಪ ಅಂತ! ಮಲತಾಯಿ ಆ ತಬ್ಬಲಿ ಮಕ್ಕಳನ್ನು ಹಾಗೂ ತನ್ನ ಹೊಟ್ಟೆಯ ಮಕ್ಕಳನ್ನು ಕಾಣುವ ಬಗೆಯನ್ನು ಕತೆ, ಕವಿತೆ, ಕಾದಂಬರಿಗಳಲ್ಲಿ ಅಷ್ಟೇ ಅಲ್ಲದೇ ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಈ ಮೇಲಿನ ಆಯಾಮದಲ್ಲಿ ನೋಡಬಹುದಾಗಿದೆ.ಹೆಣ್ಣನ್ನು ತಾಯ್ಗಳ್ಳಿನ ಅಥವಾ ಹೆಣ್ಗಳ್ಳಿನ ಪುರುಷ ಕಂಡಿರುವ ದೃಷ್ಟಿ:ಹೆಣ್ಣು ಅಂದಂದಿನ ಕಾಲಘಟ್ಟದಿ ಕೌಟುಂಬಿಕ ಮತ್ತು ಸಾಮಾಜಿಕ ಜನ-ಜೀವನದಲ್ಲಿ ಅನುಭವಿಸಿದ ಯಮ-ಯಾತನೆಗಳನ್ನು ತುಂಬ ಹತ್ತಿರದಿಂದ ಕಂಡುಂಡ ತಾಯ್ಗಳ್ಳಿನ ಅಥವಾ ಹೆಣ್ಗಳ್ಳಿನ ಹೃದಯ ಆದ್ರವಾಗಿ ಮಿಡಿದ ಭಾವನೆಗಳ ಒಟ್ಟಂದದಿ ಚಿತ್ರಿತವಾದ ಸ್ತ್ರೀ–ತಾಯಿ, ಪ್ರೇಯಸಿ, ಸದ್ಗೃಹಿಣಿಯಾಗಿ ಕಂಡಿರುವಂತದ್ದು. ಒಟ್ಟಾರೆಯಾಗಿ ಬೇಂದ್ರೆ ಸಾಹಿತ್ಯವನ್ನು ಅವಲೋಕಿಸಿದಾಗ ಈ ಮೇಲಿನ ಆಯಾಮದಲ್ಲಿ ಮೂಡಿಬಂದಿರುವಂತದ್ದು ಎಂಬುದರಲ್ಲಿ ಎರಡು ಮಾತಿಲ್ಲ.ಸೌಂಧರ‍್ಯವೆಂಬುದುಕಣ್ಣಿನ ತುತ್ತಲ್ಲಕಣ್ಣಿಗೂ ಕಣ್ಣಾಗಿಒಳಗಿಹುದುರೂಪ-ಲಾವಣ್ಯಕೆಅಳೆಯಲುಬಾರದುಅವುಗಳೇಇದರೊಂದು ಕಣವಿಹವು.ಸೌಂಧರ‍್ಯ ಎಂದರೆ ಅದು ಬರೀ ಕಣ್ಣು ಸೆರೆಹಿಡಿಯುವ ಹೊರದೃಶ್ಯವಲ್ಲ, ಕಣ್ಣು ನೋಡುವುದಕ್ಕಿಂತ ಗಾಡವಾಗಿ, ಮನಸ್ಸು, ಹೃದಯದಿಂದ ಮಾತ್ರವೇ ಗ್ರಹಿಸಬಹುದಾದ ಒಳಗಿನ ಗುಣವೇ ನಿಜವಾದ ಸೌಂಧರ‍್ಯ. ಅದನ್ನು ನಾವು ತೂಕ, ಬಣ್ಣ, ಮುಖದ ರೀತಿ ಇತ್ಯಾದಿಗಳಿಂದ ಅಳೆಯಲು ಸಾಧ್ಯವಿಲ್ಲ, ನಾವು ಕಾಣುವ ರೂಪ-ಲಾವಣ್ಯವು ಆ ನಿಜವಾದ ಸೌಂಧರ‍್ಯದ ಒಂದು ಚಿನ್ನದ ಕಣ, ಸಣ್ಣ ಭಾಗ ಮಾತ್ರವೇ ಆಗಿದೆ. ನಿಜವಾದ ಸೌಂಧರ‍್ಯ ಕಣ್ಣಿಗೂ ಮೀರಿದ, ಹೃದಯದಿ ಅನುಭವವಾಗುವ, ಒಳಗಿನ ಮೌನ-ಮೌಲ್ಯಗಳಲ್ಲಿ ಅಡಗಿದೆ. ಮನುಷ್ಯನ ಸೌಂಧರ‍್ಯ ಬಾಹ್ಯ ರೂಪದಲ್ಲಿಲ್ಲ; ಹೃದಯ, ಗುಣ, ಸ್ವಭಾವ, ಆಂತರ‍್ಯದ ಪ್ರಕಾಶ – ಇವುಗಳೇ ನಿಜವಾದ ಸೌಂರ‍್ಯ ಎಂಬರ್ಥದಿ ಬೇಂದ್ರೆಯವರು ಸ್ತ್ರೀಯನ್ನು ಚಿತ್ರಿಸಿದ್ದಾರೆ. ಮಾತಿನಲ್ಲಿರುವಂಥಮೌನದ ಧ್ವನಿಯಿಂದವಿವ್ಹಲತೆಬೆಳೆಯುವುದಿಬ್ಬರಲಿಇಬ್ಬರ ಮನವಾಗಇಬ್ಬಗೆಯಾಗುವುದುಒಬ್ಬರಿಗೂ ಸುಖವಿಲ್ಲಬದುಕಿನಲಿ.ಮಧುರವಾದ ಸಂಬಂಧದಲ್ಲಿ ಹೇಳದಿರುವ ಮೌನ, ಒಡೆದ ಮಾತುಗಳು, ವ್ಯಕ್ತಗೊಳ್ಲದ ನೋವು-ನಲಿವು, ಇವು ಎರಡು ಹೃದಯ[ಮನಸ್ಸು]ಗಳನ್ನು ದೂರ ಮಾಡುತ್ತವೆ. ಮಾತುಕ[ವಿ]ತೆ, ನೇರ ಸಂಭಾಷಣೆಯಿರದ ಸಂಬಂಧದಲ್ಲಿ ಇಬ್ಬರೂ ಸುಖವನ್ನು ಕಾಣಲಾಗದು, ಗಂಡ-ಹೆಂಡಿರ ಗಂಧಾ ತೀಡಿದ್ಹಂಗ ಇರಬೇಕಾ, ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಜನಪದರ ಗಾದೆಮಾತು ಸುಳ್ಳಾಗೇ.., ಅದು ವಿಚ್ಛೇದನದಿ ರ‍್ಯಾವಸಾನಗೊಳ್ಳುತ್ತದೆ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ.ಪಾದ ಪದ್ಧತಿಯಲ್ಲಿಪದ ಕೂಡಿ ಬರುವಾಗಯಾರಾರೆ ಗುರು-ಲಘು ಎಣಿಸುವರೆ?ಯಾ ರಾಗವೆಂದರುಯಾ ರಾಗ ಕೇಳುವರುಅನುರಾಗವನುರಣಿಸಿತಣಿಸುತಿರೆ!.ಪದಗಳ ನಿಯಮ, ಛಂದಸ್ಸು, ಗುರು-ಲಘು, ರಾಗ-ತಾಳ ಇವೆಲ್ಲವೂ ಕೇವಲ ತಾಂತ್ರಿಕ ಇತಿ-ಮಿತಿಗಳು, ಆದರೆ ಸಂಕಷ್ಟದ ಬದುಕಿನ ಪಾಡೇ ಹಾಡಾಗಿ ಹೃದಯದಿ ಹುಟ್ಟುವ ಪದವು [ಅನುರಾಗ, ಭಾವ, ಪ್ರೀತಿ, ನಿಸ್ಸಳ ಸ್ಪಂದನೆ] ಪಾದ ಪದ್ದತಿಯಲ್ಲಿ ಅಂದರೆ ಕಾಲ್ನಡಿಗೆಯ ರೂಪದಿ ಎಡ-ಬಲವೆಂದೆಣಿಸದೆ ಜತೆಗೂಡಿ ಮುನ್ನಡೆಯುತ್ತಿರಾಗ.., ಗುರು-ಲಘು ಎಣಿಸುವರೆ? ಇಲ್ಲಿ ನಿಯಮಗಳಿಗಿಂತ ಭಾವ ತೀವ್ರತೆಯೇ ಕವಿತೆಯ ಜೀವವಾಗಿ, ರಾಗಕೆ ಶ್ರವಣ, ಮನಸ್ಸಿಗೆ ತಣಿ[ಮುದ]ವನ್ನು ನೀಡುತ್ತದೆ ಎಂಬರ್ಥದಿ ಗಂಡು-ಹೆಣ್ಣಿನ ಅನುರಾಗ-ದಾಂಪತ್ಯ ಜೀವನಕ್ಕೆ ಮುನ್ನಡಿ ಬರೆಯುತ್ತ..,ನಾನು ಬಡವಿ ಆತ ಬಡವಒಲವೆ ನಮ್ಮ ಬದುಕುಬಳಸಿಕೊಂಡೆವದನೆ ನಾವುಅದಕು ಇದಕು ಎದಕು.ಆತ ಕೊಟ್ಟ ವಸ್ತು ಒಡವೆನನಗೆ ಅವಗೆ ಗೊತ್ತುತೋಳುಗಳಿಗೆ ತೋಳ ಬಂದಿಕೆನ್ನೆ ತುಂಬ ಮುತ್ತು.ಕುಂದು ಕೊರತೆ ತೋರಲಿಲ್ಲಬೇಕು ಹೆಚ್ಚಿಗೇನು?ಹೊಟ್ಟೆಗಿತ್ತ ಜೀವ ಫಲವತುಟಿಗೆ ಹಾಲು ಜೇನು.ಎಂದು ಒಲವೆ ನಮ್ಮ ಬದುಕು ಎಂಬೀ ಕವಿತೆಯ ಮೂಲಕ ಸಮರಸವೇ ಜೀವನವೆಂಬ ಸಾಮರಸ್ಯದ ಬದುಕಿಗೆ ಕನ್ನಡಿ ಹಿಡಿಯುತ್ತಾರೆ.ಪುಟ್ಟ ವಿಧವೆ:ಬಾಲ್ಯವಿವಾಹ, ಸತಿ ಪದ್ಧತಿ ನಿಷೇಧ, ಮಹಿಳಾ ಶಿಕ್ಷಣ, ವಿಧವಾ ಪುನರ್ವಿವಾಹ, ಮಹಿಳಾ ಹಕ್ಕುಗಳ ಪರ ಹೋರಾಟ, ಮಹಿಳಾ ಸ್ವಾತಂತ್ರ್ಯ, ಸ್ವಾವಲಂಬನೆ, ಸ್ವಾಭಿಮಾನಕ್ಕೆ ಒತ್ತಾಯ, ಗ್ರಾಮಗಳಲ್ಲಿ ಮಹಿಳಾ ಆರೋಗ್ಯ ಮತ್ತು ಅರಿವು ಎಂಬಿತ್ಯಾದಿ ವಿಚಾರಗಳ ದಿಸೆಯಲ್ಲಿನ ಸಮಾಜ ಸುಧಾರಣೆಯ ಮೊದಲ ಪ್ರಮುಖ ಧ್ವನಿಯೆಂದರೆ – ರಾಜಾ ರಾಮ್‌ಮೋಹನ್ ರಾಯ್, ತದನಂತರದಿ ಈಶ್ವರಚಂದ್ರ ವಿದ್ಯಾಸಾಗರ, ಮಹಾತ್ಮ ಗಾಂಧಿ, ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ, ಅನ್ನಿಬೆಸೆಂಟ್, ದ್ವಾರಕನಾಥ್ ಗಂಗೂಲಿ, ಕಸ್ತೂರಬಾ ಗಾಂಧಿ, ಕರ್ನಾಟಕದಲ್ಲಿ ಟಿ.ನರಸಿಂಹಾಚಾರ‍್ಯ, ಡಿ.ವಿ.ಗುಂಡಪ್ಪ ಈ ಎಲ್ಲ ಮಹನೀಯರ ಹೋರಾಟದ ಫಲವೆಂಬಂತೆ; ಹರಬಿಲಾಸ್ ಸರ್ಡಾ ಅವರು ಮಂಡಿಸಿದ – ೧೯೨೯ ರ ಸರ್ಡಾ ಕಾಯ್ದೆ / ಅhiಟಜ ಒಚಿಡಿಡಿiಚಿge ಖesಣಡಿಚಿiಟಿಣ ಂಛಿಣ  – ಇದು ಭಾರತೀಯ ಬಾಲ್ಯವಿವಾಹ ನಿಯಂತ್ರಣದ ಮೊದಲ ಕಾನೂನು ಜಾರಿಯಾಯಿತು.ಈ ಹಿನ್ನಲೆಯಲ್ಲಿ ಹೆಣ್ಣಿನ ವೈದವ್ಯದ ಬಾಳಿನ-ಗೋಳಿನ ಕತೆಯನ್ನು ನೋಡಲಾಗದೆ ಇದನ್ನು ಕಾನೂನಾತ್ಮಕವಾಗಿ ಸಂಪೂರ್ಣವಾಗಿ ತೊಡೆದುಹಾಕಲು ಶ್ರಮಿಸಿದವರು ಪ್ರಾತಃ ಸ್ಮರಣೀಯರು. ಇಂತದ್ದೇ ಒಂದು ನೈಜ ಘಟನೆ ಬೇಂದ್ರೆಯವರ ಮನಕಲಕಿದ್ದರ ಪರಿಣಾಮ – ಪುಟ್ಟವಿಧವೆ ಕವಿತೆಯಲ್ಲಿ ಚಿತ್ರಿಸಿದ್ದಾರೆ;ಆಕೆಯಿದ್ದಳು ಕೂಸು; ಈತನಿನ್ನೂ ಹುಡುಗಅವರ ತಾಯ್ತಂದೆಗಳ ಹಿಗ್ಗು ಎಷ್ಟು!ಧರ್ಮದಾ ಹೆಸರಿನಲಿ ಅವರ ಕೈಕೂಡಿಸಲುಇವರಿಗೆನಿಸಿತು ಹರ್ಷ ಹಬ್ಬದಷ್ಟು.ಹತ್ತು ದಿವಸಕೆ ಹಾಳು ಮುತ್ತೈದೆತನ ಹೋಗಿವೈದವ್ಯ ಸಂಪತ್ತು ಪಡೆದಳಾಕೆ;ಮನೆಯವರು ವೈದಿಕರು, ಊರು ಧರ್ಮದ ತವುರು;ಶಾಸ್ತ್ರವಿರೆ ಬೇರೆಯ ವಿಚಾರವೇಕೆ?ಕುರುಡು ಧರ್ಮಕ್ಕೆ ಸ್ಮಾರಕವು ನಿಂತಂತಾಕೆಮೈಮರೆತು ನಿಂತಾಗ ಗೂಗೆ ಹಾಡಿತ್ತು,ಮುದ್ರೆಯೊತ್ತುವ ಕಣ್ಣು ಮೋರೆ ನೋಡಿತೊಮ್ಮೆಊರ ಕೃಷ್ಣನ ಕಥೆಗೆ ಕೋಡು ಮೂಡಿತ್ತು.ಈ ಒಂದು ಕವಿತೆ: ತಂದೆ-ತಾಯಂದಿರ ಜವಾಬ್ದಾರಿ, ಕನ್ಯಾದಾನ, ಕೌಟುಂಬಿಕ ರಕ್ಷಣೆ, ಅನಿಶ್ಚಿತತೆಯ ಬಾಳು, ಅಕಾಲಿಕ ಮರಣ, ವೈದವ್ಯ ಪ್ರಾಪ್ತಿ, ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ನಮ್ಮ ಅಜ್ಞಾನಕ್ಕೆ ಹೆಣ್ಣಿನ ಬಾಳು ಆಹುತಿಯಾದುದರ ಕುರುಹಾಗಿ ಪುಟ್ಟ ವಿಧವೆ ನಮ್ಮ ಕಣ್ಮುಂದೆ ನಿಲ್ಲುತ್ತಾಳೆ, ಕಂಬನಿ ಮಿಡಿಯುವಂತೆ ಮಾಡುತ್ತಾಳೆ,ಹುಬ್ಬಳ್ಳಿಯಾಂವಾ:ಬೇಂದ್ರೆಯವರ ಪ್ರತಿಕಾ ಓದಿನ ಅಭಿರುಚಿ ಎಷ್ಟಿತ್ತೆಂದರೆ.., ಅದೊಂದು ಗೀಳಾಗಿ ಅಂಟಿಕೊಂಡಿತ್ತೆಂದು ಹೇಳಬಹುದೆನೋ, ಹುಬ್ಳಿಯಿಂದ ವಾರಕ್ಕೆ ಮೂರು ದಿನ ಅಚ್ಚಾಗಿ ಹೊರಡುತ್ತಿದ್ದ ಪತ್ರಿಕೆ ಅನಿವರ‍್ಯ ಕಾರಣಗಳಿಂದ ಅಚ್ಚಿನ ಮನೆಯಲ್ಲಿ ಬೆಚ್ಚಗೆ ಕುಳಿತದ್ದರಿಂದ; ಪತ್ರಿಕೆ ಬಾರದೇ ಇದ್ದಾಗ, ಓದದೇ ಇದ್ದಾಗ ಆಗುನ ಮನಸ್ಸಿನ ಚಡಪಡಿಕೆ; ಇಲ್ಲಿ ಸಾಗಂತ್ಯ ತೊರೆದು ಹೋದ ಇನಿಯನ ನೆನವರಿಕೆ, ಕನವರಿಕೆ ಭಾವ ತೀವ್ತೆಯಿಂದ ಹೊರಹೊಮ್ಮಿದ ಕವಿತೆ ಈ ಹುಬ್ಬಳ್ಳಿಯಾಂವಾ ಎಂದು ಹೇಳಬಹುದು.ಮಾತು ಮಾತಿಗೆ ನಕ್ಕನಗಿಸಿ ಆಡಿಸ್ಯಾಡಾಂವಾಏನೋ ಅಂದರ ಏನೋ ಕಟ್ಟಿ ಹಾಡ ಹಾಡಾಂವಾ.ಇರು ಅಂದರ ಬರತೇನಂತ ಎದ್ದು ಹೊರಡಾಂವಾಮಾರೀ ತೆಳಗ ಹಾಕಿತೆಂದರ ಇದ್ದು ಬಿಡಾಂವಾ ಚಹಾದ ಜೋಡಿ ಚೂಢಾಧಾಂಗ ನೀ ನನಗಂದಾಂವಾಚೌಡಿಯಲ್ಲ ನೀ ಚೂಡಾಮಣಿಯಂತ ರಮಿಸ ಬಂದಾಂವಾಕಣ್ಣಿನಾಗಿನ ಗೊಂಬೀಹಾಂಗ ಎದ್ಯಾಗ ನಟ್ಟಾಂವಾಇನ್ನೂ ಯಾಕ ಬರಲಿಲ್ಲವ್ವಾ ಹುಬ್ಬಳ್ಳಿಯಾಂವಾ?ಇಲ್ಲಿ ಗಂಡಿನ ಅನುರಾಗದಿ ಮಿಂದೆದ್ದ ಹೆಣ್ಣಿನ ಮನದಾಳದ ಇರಿಸು-ಮುರಿಸು, ಮುನಿಸು, ಸರಸ-ಸಲ್ಲಾಪ-ಸಂಭಾಷಣೆಯ ನೆನಹು, ಇನಿಯನ ಬರವಿನ ನಿರೀಕ್ಷೆ, ಕಾತರ, ಕಾವಳ ಭಾವದಿ ಬರುವ ಹಾದಿಯ ಎದುರು ನೋಡುತ್ತಾ ನಿಂತ ಪ್ರೇಯಸಿಯ ಮನದಾಳದಿ ಬಚ್ಚಿಟ್ಟ ಭಾವನೆಗಳನ್ನು ನಮ್ಮೆದುರಿಗೆ ಬೇಂದ್ರೆಯವರು ಬಿಚ್ಚಿಟ್ಟಿದ್ದಾರೆ.ಹುಣ್ಣಿವಿ ಚಂದಿರನ ಹೆಣ:ಮಗ ಸತ್ತ ಸುದ್ದಿ ತಿಳಿದು ದಿಗ್ಭ್ರಮೆಗೊಂಡು, ಕಂಬನಿಗರೆಯದೆ ಕಲ್ಲಾಗಿ ಮೂಲೆಹಿಡಿದು ಕೂತ ಹೆಂಡತಿಯ ಮುಖಭಾವವನ್ನು – ನೀ ಹೀಂಗ ನೋಡಬ್ಯಾಡ ನನ್ನ ನಿನ್ನ ನೇರ ದಿಟ್ಟಿಯನ್ನು ಎದುರಿಸುವ ಶಕ್ತಿ ನನಗಿಲ್ಲ, ಎಂದು ಪರಿಪರಿಯಾಗಿ ಸಂತೈಯಿಸುತ್ತ – ನಕ್ಯಾಕ ಮರಸತೀ ದುಃಖ? ಎದೆ ಬಡಿಸಿ ಕೆಡವು ಬಿರಿಗಣ್ಣು ಬ್ಯಾಡ

‌”ಸ್ತ್ರೀ ಮತ್ತು ಬೇಂದ್ರೆ ಸಾಹಿತ್ಯ” ವಿಶೇಷ ಲೇಖನ, ಡಾ.ಯಲ್ಲಮ್ಮ ಕೆ Read Post »

ಇತರೆ

“ಸಾವಿನಲ್ಲೂ ಸಾರ್ಥಕತೆ ಮೆರೆದ…ನೀರಜಾ ಭಾನೋಟ್.” ವೀಣಾ ಹೇಮಂತ್‌ ಗೌಡ ಪಾಟೀಲ್

ವ್ಯಕ್ತಿ ಸಂಗಾತಿ “ಸಾವಿನಲ್ಲೂ ಸಾರ್ಥಕತೆ ಮೆರೆದ… ನೀರಜಾ ಭಾನೋಟ್.” ವೀಣಾ ಹೇಮಂತ್‌ ಗೌಡ ಪಾಟೀಲ್ ಸಾವಿನಲ್ಲೂ ಸಾರ್ಥಕತೆ ಮೆರೆದ…ನೀರಜಾ ಭಾನೋಟ್. ಕೇವಲ 22 ವರ್ಷದ ಹರಯದಲ್ಲಿ ಆಕೆ ತನ್ನ ಬದುಕಿನಲ್ಲಿ ಮೊತ್ತ ಮೊದಲ ಬಾರಿಗೆ ಅಂತರಾಷ್ಟ್ರೀಯ ವಿಮಾನ ಯಾನ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿದಳು. ಆ ದಿನ ಸಪ್ಟಂಬರ್ 5 1986. ತನ್ನ ಹುಟ್ಟು ಹಬ್ಬಕ್ಕೆ ಎರಡು ದಿನ ಮೊದಲು ಫ್ರಾಂಕ್ ಫರ್ಟ್ ಮೂಲಕವಾಗಿ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಅಂತರಾಷ್ಟ್ರೀಯ ವಿಮಾನ ಪ್ಯಾನ್ ಆ್ಯಮ್  ವಿಮಾನ ಸಂಖ್ಯೆ 73  ಎಂಬ ಹೆಸರಿನ ಆ ವಿಮಾನವು ಕರಾಚಿಯಲ್ಲಿ ನಸುಕಿನ ಜಾವ ಐದು ಗಂಟೆಯ ಸುಮಾರಿಗೆ  ಇಂಧನವನ್ನು ತುಂಬಿಸಲು ರನ್‌ ವೇಯಲ್ಲಿ ನಿಂತಿತ್ತು. ಆಗ ಸೆಕ್ಯೂರಿಟಿ ಗಾರ್ಡ್ಗಳಂತೆ ವೇಷ ಧರಿಸಿದ ನಾಲ್ವರು ಯುವಕರು ವಿಮಾನವನ್ನು ಪ್ರವೇಶಿಸಿದರು  ಒಳ ಬಂದ ನಾಲ್ಕು ಜನ ಯುವಕರು ಜೋರಾಗಿ ಆರ್ಭಟ ಮಾಡಿದಾಗ ಪ್ರಯಾಣಿಕರೆಲ್ಲರೂ ಭಯದಿಂದ ಕಿರುಚಿದರು. ವಿಮಾನದ ಸಿಬ್ಬಂದಿಗಳು ಕೂಡ ನಿಂತಲ್ಲಿಯೇ ತಣ್ಣಗಾದರೂ…. ಆಕೆ ಮಾತ್ರ ಧೈರ್ಯದಿಂದ ಸನ್ನಿವೇಶವನ್ನು ಎದುರಿಸುವ ಮನಸ್ಥಿತಿಯನ್ನು ಹೊಂದಿದ್ದಳು.ವಿಮಾನದ ಮುಖ್ಯ ಫ್ಲೈಟ್ ಅಟೆಂಡೆಂಟಾಗಿ ಕಾರ್ಯನಿರ್ವಹಿಸುತ್ತಿದ್ದ ಕೇವಲ 22 ರ ಹರೆಯದ ಆಕೆ ತನ್ನ ಬದುಕಿನಲ್ಲಿ ಅತಿ ಮುಖ್ಯ ಮಾರ್ಗವನ್ನು ಪ್ರಥಮ ಬಾರಿಗೆ ಪ್ರಯಾಣಿಸಲಿದ್ದಳು…. ಆಕೆಯೇ ನೀರಜಾ ಭಾನೋಟ್. ವಿಮಾನವನ್ನು ಅಪಹರಿಸಿದ ಹೈಜಾಕರ್ ಗಳನ್ನು ನೋಡಿಯೇ ವಿಮಾನದ ಪ್ರಯಾಣಿಕರು ಗಾಬರಿಗೊಂಡರೆ ನೀರಜಾ ಮಾತ್ರ ಕೊಂಚವೂ ಧೃತಿಗೆಡದೆ ನೂರಾರು ಜನರ ಜೀವವನ್ನು ಉಳಿಸಿದಳು. ಅತ್ಯಂತ ಸೂಕ್ಷ್ಮವಾಗಿ ( ಅದರಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಹೈಜಾಕರ್ ಗಳಿಗೂ ಕೂಡ ಗೊತ್ತಾಗದಷ್ಟು )ಆಕೆ ಹೈಜಾಕರ್ ಗಳ ಕೋಡ್ ಸಂಖ್ಯೆಯನ್ನು ಇಂಟರ್ಕಾಂನಲ್ಲಿ ತನ್ನ ಮೇಲಧಿಕಾರಿಗಳಿಗೆ ಕಳುಹಿಸಿದ್ದಳು  ಕಾಕ್ ಪಿಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ರಿವ್ ಸಿಬ್ಬಂದಿಯವರು ಅದರಲ್ಲೂ ವಿಶೇಷವಾಗಿ ಪೈಲೆಟ್ ಗಳು ತಮ್ಮ ತಲೆಯ ಮೇಲಿರುವ ಓವರ್ ಹೆಡ್ ಹ್ಯಾಚ್ಗಳ ಮೂಲಕ ಅಲ್ಲಿಂದ ತಪ್ಪಿಸಿಕೊಂಡು ಹೊರಟು ಹೋದರು…. ಸಾಧಾರಣವಾಗಿ ಹೈಜಾಕರ್ ಗಳ ಕೈಯಲ್ಲಿ ಪೈಲೆಟ್ ಗಳು ಸಿಕ್ಕಾಗ ಹೈಜಾಕರಗಳು ಅವರನ್ನು ವಿಮಾನವನ್ನು ತಮ್ಮಿಷ್ಟ ಬಂದ ಜಾಗಕ್ಕೆ ಹಾರಿಸಲು ಒತ್ತಾಯಿಸುತ್ತಾರೆ… ಅವರ ಈ ತಂತ್ರವನ್ನು ತಡೆ ಹಿಡಿಯಲು ಹಾಗೂ ವಿಮಾನವು ನೆಲದಲ್ಲಿಯೇ ಇರುವಂತೆ ಮಾಡಲು ವಿಮಾನಯಾನ ಸಿಬ್ಬಂದಿಗಳಿಗೆ ಈ ಕುರಿತು ತರಬೇತಿ ನೀಡಲಾಗಿರುತ್ತದೆ…. ಈಗಾಗಲೇ ಪ್ಯಾನ 73 ಎಂಬ ಹೆಸರಿನ ಆ ವಿಮಾನವನ್ನು ಹೈಜಾಕ್ ಮಾಡುವ ತಂತ್ರ ತುಸುಮಟ್ಟಿಗೆ ವಿಫಲಗೊಂಡಿತ್ತು ಆದರೆ 379 ಜನ ಪ್ರಯಾಣಿಕರು ಹಾಗೂ ಇನ್ನುಳಿದ ಗಗನಯಾನ ಸಿಬ್ಬಂದಿಗಳು ಉಗ್ರರ ಕೈಯಲ್ಲಿ ಸಿಲುಕಿದ್ದರು. ಮುಂದಿನ ಸುಮಾರು 17 ಗಂಟೆಗಳ ಕಾಲ ನೀರಜಾ ಉಗ್ರಗಾಮಿಗಳು ಹಾಗೂ ಮುಗ್ಧ ಪ್ರಯಾಣಿಕರ ನಡುವೆ ತಡೆಗೋಡೆಯಾಗಿ ನಿಂತುಕೊಂಡರು. ಆ ಎಲ್ಲ ಹೈಜಾಕರ್ ಗಳು ಅಬು ನಿಡಲ್ ಆರ್ಗನೈಜೇಷನ್ ಎಂಬ ಪ್ಯಾಲಸ್ಟನಿಯನ್ ಮಿಲಿಟರಿ ಗುಂಪಾಗಿತ್ತು. ಅವರ ಪ್ರಮುಖ ಗುರಿ ಅಮೆರಿಕದ ಪ್ರಜೆಗಳಾಗಿದ್ದರು…. ಎಲ್ಲ ಪ್ರಜೆಗಳ ಪಾಸ್ ಪೋರ್ಟ್ ಗಳನ್ನು ಅವರು ಪರೀಕ್ಷಿಸುತ್ತಿದ್ದರು.  ನೀರಜಾ ಮತ್ತು ಆಕೆಯ ಸಹೋದ್ಯೋಗಿಗಳು ಅತ್ಯಂತ ಸೂಕ್ಷ್ಮವಾಗಿ ಅಮೆರಿಕದ ಪಾಸ್ಪೋರ್ಟ್ ಹೊಂದಿರುವವರ ಪಾಸ್ಪೋರ್ಟ್ ಗಳನ್ನು ಸಂಗ್ರಹಿಸಿ ಸೀಟುಗಳ ಕೆಳಗೆ ಬಚ್ಚಿಡಲು ಆರಂಭಿಸಿದರು. ಮತ್ತೆ ಕೆಲವರ ಪಾಸ್ಪೋರ್ಟ್ ಗಳನ್ನು ಕಸದ ಬುಟ್ಟಿಗಳ ಹಿಂದೆಯೂ,ತಲೆಯ ಮೇಲಿರುವ ಬ್ಯಾಗುಗಳನ್ನು ಇಡುವ ಕಂಪಾರ್ಟ್ಮೆಂಟುಗಳ ನಡುವೆ  ಅಡಗಿಸಿ ಇಟ್ಟರು. ಮತ್ತೆ ಕೆಲ ಪಾಸ್ಪೋರ್ಟ್ ಗಳನ್ನು ಆಕೆ ಟಾಯ್ಲೆಟ್ ನ ನೀರಿನಲ್ಲಿ ಫ್ಲಶ್ ಮಾಡಿ ಇನ್ನಿಲ್ಲದಂತೆ ಮಾಡಿದಳು. ಅತ್ಯಂತ ಚಾಣಾಕ್ಷತೆ ಹಾಗೂ ಶಾಂತ ಮನಸ್ಥಿತಿಯಿಂದ ಆಕೆ ಅಮೆರಿಕದ ನಿವಾಸಿಗಳನ್ನು ಗುರುತಿಸಿ ಅವರನ್ನು ಸೂಕ್ಷ್ಮವಾಗಿ ಎಚ್ಚರಿಸಿದಳು. ಇಡೀ ವಿಮಾನದಲ್ಲಿರುವ ಯಾವುದೇ ಪ್ರಯಾಣಿಕರು ಗಾಬರಿಗೊಳ್ಳದೆ ಇರುವಂತೆ ಅವರನ್ನು ಪ್ರಶಾಂತವಾಗಿ ಇರಿಸಲು ಆಕೆ ಪ್ರಯತ್ನಿಸಿದಳು  ಅಳುವ ಚಿಕ್ಕ ಮಕ್ಕಳನ್ನು ಸಮಾಧಾನಿಸಿದ ಆಕೆ ಹಿರಿಯರಿಗೆ ಏನೂ ಆಗುವುದಿಲ್ಲ, ಧೈರ್ಯದಿಂದಿರಿ ಎಂದು ಭರವಸೆ ನೀಡಿದಳು. ಹಿಂದಿ, ಇಂಗ್ಲಿಷ್, ಪಂಜಾಬಿ ಭಾಷೆಗಳಲ್ಲಿ ಪ್ರಬುದ್ಧತೆಯನ್ನು ಹೊಂದಿದ್ದ ಆಕೆ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರೊಂದಿಗೆ ಲಘು ಸಂಭಾಷಣೆಯಲ್ಲಿ ನಿರತಳಾಗಿ ಅವರ ಭಯವನ್ನು ಹೋಗಲಾಡಿಸಲು ಪ್ರಯತ್ನಿಸಿದಳು. ಆಕಸ್ಮಿಕದಲ್ಲಿ ಬದುಕುಳಿದ ನೂರಾರು ಜನ ಪ್ರಯಾಣಿಕರು ಆಕೆ ಅತ್ಯಂತ ಚಿಕ್ಕ ಹುಡುಗಿಯಾಗಿದ್ದರೂ ಕೂಡ ಹೆದರಿದ್ದರೂ ಕೂಡ ತನ್ನ ಹೆದರಿಕೆಯನ್ನು ಯಾರಿಗೂ ತೋರಿಸದೆ ನಮ್ಮಂತಹ ನೂರಾರು ಜನರಿಗೆ ಧೈರ್ಯ ತುಂಬಿದ ಕಾರಣವೇ ನಾವು ನಮ್ಮ ದುಃಖವನ್ನು ಹೊರ ಹಾಕದೆ ಇರಲು ಸಾಧ್ಯವಾಯಿತು ಎಂದು ಹೇಳಿದರು ಗಂಟೆಗಳ ಕಾಲ ಹೈಜಾಕರ್ಸ್ ಮತ್ತು ವಾಯುಯಾನ ಸಂಸ್ಥೆಯ ನಡುವೆ ಮಾತುಕತೆ, ಸಂಧಾನ ಪ್ರಕ್ರಿಯೆ ನಡೆದು ಒಂದು ಹಂತದಲ್ಲಿ ನಿಲುಗಡೆಯಾಯಿತು. ಇದು ಹೈಜಾಕರ್ಸ್ ಗಳಲ್ಲಿ ತಳಮಳವನ್ನು ಉಂಟು ಮಾಡಿತು ಇದೇ ಸಮಯದಲ್ಲಿ ವಿಮಾನದ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಪರಿಸ್ಥಿತಿ ಒದಗಿತು. ಕ್ಯಾಬಿನ್ ಲೈಟ್ ಗಳು ಪಕ ಪಕ ಮಾಡಲಾರಂಭಿಸಿ ಅಂತಿಮವಾಗಿ ಎಲ್ಲರನ್ನು ಕತ್ತಲೆಗೆ ದೂಡಿ ಆರಿ ಹೋದವು. ಹೀಗೆಯೇ 17 ಗಂಟೆಗಳು ಕಳೆದು ಹೋದವು. ಇದು ಹೈಜಾಕರ್ಸಗಳಲ್ಲಿ ಸಿಟ್ಟು ಮತ್ತು ಆತಂಕವನ್ನು ಹೆಚ್ಚಿಸಿ ಆಗ ಅವರು ಸರ್ಕಾರವನ್ನು ಹೆದರಿಸಲು ಗನ್ ಫೈಯರ್ ಆರಂಭಿಸಿದರು   ಜನನಿಬಿಡವಾದ ಕ್ಯಾಬಿನ್ ನಲ್ಲಿ ಒಂದೊಮ್ಮೆ ಗುಂಡಿನ ಮೊರೆತ ಶುರುವಾದಾಗ ಆ ಗಾಢವಾದ ಕತ್ತಲಿನಲ್ಲಿ ಭಯದ ಕೇಕೆ ಹಾಕುತ್ತ ಪ್ರಯಾಣಿಕರು ಸೀಟುಗಳ ಅಡಿಯಲ್ಲಿ ಕಿರುಚುತ್ತಾ ಅಡಗಿಕೊಳ್ಳಲು ಪ್ರಯತ್ನಿಸಿದರು. ಇದೇ ಸಮಯದಲ್ಲಿ ನೀರಜಾ ಅತ್ಯಂತ ಚಾಣಾಕ್ಷತೆಯಿಂದ ಓಡಿ ಹೋಗಿ ವಿಮಾನದ ತುರ್ತು ನಿರ್ಗಮನದ ಬಾಗಿಲನ್ನು ತೆರೆಯಲು ಪ್ರಯತ್ನಿಸಿದಳು. ತೆರೆಯಲು ಅಪಾರ ಶಕ್ತಿಯ ಅವಶ್ಯಕತೆ ಇದ್ದು ಆಕೆ ಪ್ರಯಾಣಿಕರನ್ನು ಬಾಗಿಲಿನ ಕಡೆ ಜೋರಾಗಿ ತಳ್ಳುತ್ತಾ ಆ ಬಾಗಿಲಿನ ಮೂಲಕ ಹಾರಿ ಓಡಿ ತಪ್ಪಿಸಿಕೊಳ್ಳಲು ಕೂಗಿ ಹೇಳಿದಳು    ಜೀವಭಯದಿಂದ ತತ್ತರಿಸಿದ ಜನರು ತುರ್ತು ನಿರ್ಗಮದ ಬಾಗಿಲಿನ ಮೂಲಕ ರನ್ ವೇ ಮೂಲಕ ಇಳಿದು ಓಡಿ ಹೋಗಲು ಪ್ರಯತ್ನಿಸಿದರು ಮತ್ತೆ ಕೆಲವರು ಬಿದ್ದು ಗಾಯಗೊಂಡರು. ಕೆಲವರಿಗೆ ಗುಂಡಿನ ಪೆಟ್ಟು ತಗುಲಿತ್ತು.. ಆದರೂ ಕೂಡ ಅವರೆಲ್ಲರೂ ಅಲ್ಲಿಂದ ತಪ್ಪಿಸಿಕೊಂಡಿದ್ದರು.ಇನ್ನೇನು ಎಲ್ಲರೂ ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ ಎಂಬ ಹೊತ್ತಿಗೆ ನೀರಜಾಳ ಕಣ್ಣಿಗೆ ಮೂರು ಜನ ಪುಟ್ಟ ಮಕ್ಕಳು ತಮ್ಮ ಸೀಟಿಗೆ ಅಂಟಿಕೊಂಡು ಕುಳಿತು ಭಯದಿಂದ ತತ್ತರಿಸುತ್ತಿರುವುದು ಕಂಡು ಬಂತು. ಒಂದು ಕ್ಷಣ ಕೂಡ ಅಳುಕದೆ ಆಕೆ ಆ ಮಕ್ಕಳ ಬಳಿಗೆ ಓಡಿ ಹೋಗಿ ಅವರನ್ನು ಬಳಸಿ ಎತ್ತಿಕೊಂಡು ತುರ್ತು ನಿರ್ಗಮನದ ಬಾಗಿಲ ಬಳಿ ಧಾವಿಸಿ ಅವರನ್ನು ಎತ್ತಿ ಹೊರಗೆ ಹಾಕಿದಳು. ಇದನ್ನು ನೋಡುತ್ತಿದ್ದ ಉಗ್ರರು ಆ ಮಕ್ಕಳತ್ತ ಹಾರಿಸಿದ ಗುಂಡುಗಳು ನೀರಜಾಗೆ ತಗುಲಿದವು. ಆಕೆಯ ಪುಟ್ಟ ದೇಹ ರಕ್ತಸಿಕ್ತವಾಯಿತು.ಆಸ್ಪತ್ರೆಗೆ ತಲುಪುವ ಮುನ್ನವೇ 22 ವರ್ಷ 11 ತಿಂಗಳು 29 ದಿನಗಳ ಇನ್ನೇನು ಮುಂದಿನ ಎರಡು ದಿನಗಳಲ್ಲಿ ತನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಿದ್ದ ಆಕೆ ವಿಪರೀತ ರಕ್ತಸ್ರಾವದಿಂದ ಅಸು ನೀಗಿದಳು. . 20 ಜನರು ಆ ದುರ್ಘಟನೆಯಲ್ಲಿ ಮರಣ ಹೊಂದಿದರೆ ಒಟ್ಟು 359 ಪ್ರಯಾಣಿಕರು ರಕ್ಷಿಸಲ್ಪಟ್ಟರು. ದುರ್ಘಟನೆಯಲ್ಲಿ ಮರಣ ಹೊಂದಿದ ಹಾಗೂ ಬದುಕುಳಿದವರ ಸಂಖ್ಯೆಯಲ್ಲಿನ ಅಗಾಧ ವ್ಯತ್ಯಾಸದ ಅನುಪಾತವನ್ನು ನೋಡಿ ಜನ ದಿಗ್ಭ್ರಮೆಗೊಂಡರು…. ಈ ಸಮಯದಲ್ಲಿ ಎಲ್ಲರಿಗೂ ಅರಿವಾಗಿದ್ದು ನೀರಜಾಳ ಸಮಯೋಚಿತ ಆಲೋಚನೆಗಳು ಹಾಗೂ ಅವುಗಳನ್ನು ಕಾರ್ಯರೂಪಕ್ಕೆ ತರುವಲ್ಲಿನ ಪ್ರಯತ್ನ. ಅಂತಿಮ ಘಟ್ಟದಲ್ಲಿ ಪೈಲೆಟ್ ಗಳಿಗೆ ಎಚ್ಚರಿಕೆ ನೀಡಿ ಅವರು ವಿಮಾನದಿಂದ ತಪ್ಪಿಸಿಕೊಂಡು ಹೋಗುವಂತೆ ಮಾಡುವ ಮೂಲಕ ಆಕೆ ಘಟನೆಗೆ ಅತಿ ದೊಡ್ಡ ತಿರುವನ್ನು ನೀಡಿದಳು. ಅತಿ ದೊಡ್ಡ ಹತ್ಯಾಕಾಂಡವಾಗಬೇಕಿದ್ದ ದುರ್ಘಟನೆಯು ಆಕಸ್ಮಿಕ ದುರಂತದಲ್ಲಿ ಪರ್ಯವಸಾನವಾಯಿತು. ಭಾರತ ಮಾತ್ರವಲ್ಲದೆ ಪಾಕಿಸ್ತಾನ ಮತ್ತು ಅಮೆರಿಕದಲ್ಲಿ ಆಕೆಗೆ ಮರಣೋತ್ತರ ಗೌರವವನ್ನು ಸಲ್ಲಿಸಲಾಯಿತು.ಭಾರತ ದೇಶವು ಶಾಂತಿ ಸಮಯದಲ್ಲಿ ನೀಡುವ ಅತ್ಯುನ್ನತ ಗೌರವ ಪ್ರಶಸ್ತಿಯಾದ ಅಶೋಕ ಚಕ್ರ ಪ್ರಶಸ್ತಿಯನ್ನು ಮರಣೋತ್ತರವಾಗಿ ಆಕೆಗೆ ನೀಡಿ ಗೌರವಿಸಿದ್ದು, ನೀರಜಾ ಈ ಗೌರವ ಪಡೆದ ಅತ್ಯಂತ ಚಿಕ್ಕ ವಯಸ್ಸಿನ ವ್ಯಕ್ತಿ ಹಾಗೂ ಮೊದಲ ಮಹಿಳಾ ನಾಗರಿಕಳಾಗಿದ್ದಾಳೆ. ವಿಶ್ವಸಂಸ್ಥೆಯು ಆಕೆಗೆ ವಿಮಾನಯಾನ ಸುರಕ್ಷಾ ಫೌಂಡೇಶನ್ ನಾಯಕತ್ವದ ಪ್ರಶಸ್ತಿಯನ್ನು ನೀಡಿ ( ಫ್ಲೈಟ್ ಸೇಫ್ಟಿ ಫೌಂಡೇಶನ್ ಹೀರೋಯಿಸಂ ಅವಾರ್ಡ್ )ಗೌರವಿಸಿದೆ. ಇದರ ಜೊತೆಗೆ ಜಸ್ಟಿಸ್ ಫಾರ್ ಕ್ರೈಂ ಅವಾರ್ಡ್ ಪ್ರಶಸ್ತಿಯನ್ನು ನೀಡಿದೆ. ಪಾಕಿಸ್ತಾನ ಸರ್ಕಾರವು ಆಕೆಗೆ ತಂಗ ಯೇ ಇನ್ಸಾನಿಯತ್ ( ಅವಾರ್ಡ್ ಫಾರ್ ಹುಮ್ಯಾನಿಟಿ ) ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ಆದರೆ ಇದೆಲ್ಲಕ್ಕಿಂತ ಮಿಗಿಲಾಗಿ ಆ ದಿನದ ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟ ಪ್ರಯಾಣಿಕರಿಂದ ಆಕೆಗೆ ದೊರೆತಿದೆ. ಅಮೆರಿಕದ ಓರ್ವ ಪ್ರಜೆ ಸನ ಶೈನ್ ವೇ ಸುವಾಲ ಎಂಬ ಹೆಣ್ಣು ಮಗಳು ತನ್ನ ಮಗಳಿಗೆ ಆಕೆಯನ್ನು ರಕ್ಷಿಸಿದ ನೀರಜಾ ಎಂಬ ಹೆಸರಿನಿಂದ ಪುನರ್ ನಾಮಕರಣ ಮಾಡಿದಳು. ಸಾಕಷ್ಟು ಜನ ಆಕೆಯನ್ನು ದೈವ ರಕ್ಷಕಿ (ಗಾರ್ಡಿಯನ್ ಏಂಜಲ್) ಎಂದು ಕರೆದರು. ಆಕೆಯಿಂದ ರಕ್ಷಿಸಲ್ಪಟ್ಟ ಮೂರು ಜನ ಮಕ್ಕಳ ಪಾಲಕರು ಆಕೆ ತನ್ನನ್ನು ತಾನು ಬಲಿಕೊಟ್ಟು ನಮ್ಮನ್ನು ಉಳಿಸಿದಳು ಎಂದು ಆಕೆಯನ್ನು ಕೊಂಡಾಡಿದರು  2016ರಲ್ಲಿ ಬಾಲಿವುಡ್ ಆಕೆಯ ಹೆಸರಿನಲ್ಲಿ ನೀರಜಾ ಎಂಬ ಚಿತ್ರವನ್ನು ನಿರ್ಮಾಣ ಮಾಡಿ ಆಕೆಯ ಕಥೆ ಲಕ್ಷಾಂತರ ಜನರಿಗೆ ತಲುಪುವಂತೆ ಮಾಡಿತು. ಏರ್ಪೋರ್ಟ್ ಗಳು, ಸ್ಕಾಲರ್ಶಿಪ್ ಗಳು ಹಾಗೂ ಪ್ರಶಸ್ತಿಗಳು ಆಕೆಯ ಹೆಸರಿನಲ್ಲಿ ನೀಡಲ್ಪಟ್ಟವು. ಇದೆಲ್ಲಕ್ಕಿಂತ ಶಾಶ್ವತವಾದ ನೆನಪನ್ನು ಕೆತ್ತಲಾಗಿದ್ದು ಯಾವುದೇ ಅಮೃತ ಶಿಲೆಯ ಇಲ್ಲವೇ ಕಂಚಿನ ಫಲಕದಲ್ಲಿ ಅಲ್ಲ ಬದಲಾಗಿ 369 ಜನ ಪ್ರಯಾಣಿಕರು ತಮ್ಮ ತಮ್ಮ ಕುಟುಂಬಗಳಿಗೆ ಮರಳಿ ದೊರೆತದ್ದು. ಇಂದಿಗೂ ಆ ಕುಟುಂಬಗಳ ಸಂತೋಷದ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ  ಮುಂತಾದ ಕಾರ್ಯಕ್ರಮಗಳನ್ನು ಆಚರಿಸಿಕೊಳ್ಳಲು ಕಾರಣವಾದದ್ದು ಪಾತಕಿಗಳ ವಿರುದ್ದ ನೀರಜಾಳ ಸೋಲೊಪ್ಪಿಕೊಳ್ಳದಿರುವ ಮನೋಭಾವ. ನೀರಜಾ ಭಾನೋಟ್ ಸೈನಿಕಳಾಗಿರಲಿಲ್ಲ.. ಆಕೆಗೆ ಇಂತಹ ಆಕಸ್ಮಿಕಗಳ ವಿರುದ್ಧ ಹೋರಾಡುವ ಯಾವುದೇ ತರಬೇತಿ ಇರಲಿಲ್ಲ. ಅತ್ಯಂತ ಚಿಕ್ಕ ವಯಸ್ಸಿನ ಸಾಮಾನ್ಯವಾಗಿ ವಿಮಾನ ಪರಿಚಾರಕರು ನಿರ್ವಹಿಸುವ ಕರ್ತವ್ಯದ ಬದ್ಧತೆ ಮಾತ್ರ ಆಕೆಯದಾಗಿತ್ತು….ಆದರೆ ದುಷ್ಟ ಶಕ್ತಿಗಳು ಆಕೆಯ ವಿಮಾನವನ್ನು ಏರಿದಾಗ ಆಕೆ ಅಲ್ಲಿಂದ ಓಡಿ ಹೋಗಲಿಲ್ಲ, ಅಡಗಿಕೊಳ್ಳಲಿಲ್ಲ ಬದಲಾಗಿ ಆಕೆ ಕತ್ತಲು ಮತ್ತು ಬೆಳಕಿನ ನಡುವೆ ಗೋಡೆಯಾಗಿ ನಿಂತಳು…. ಹಾಗೂ ತನ್ನ ಕೊನೆಯ ಉಸಿರಿನವರೆಗೂ ಅಚಲವಾದ ರಕ್ಷಣಾ ಗೋಡೆಯಾಗಿ ಪರಿಣಮಿಸಿದಳು  ಆಕೆಯ ಮುಂದೆ ಇಡೀ ಬದುಕು ಇತ್ತು. ಪ್ರೀತಿಸುವ ತಂದೆ ತಾಯಿ ಒಡಹುಟ್ಟಿದವರ ಕಾಳಜಿ ಕೂಡ…. ಆದರೆ ಆಕೆ ತನ್ನ ಬದುಕನ್ನೇ 350ಕ್ಕೂ ಹೆಚ್ಚು ಜನ ಅಪರಿಚಿತ ಪ್ರಯಾಣಿಕರ ಭವಿಷ್ಯಕ್ಕಾಗಿ ಮುಡುಪಾಗಿಟ್ಟಳು ಅದುವೇ ಆಕೆಯ ಮಹತಿ…. ಕರ್ತವ್ಯ ಪ್ರಜ್ಞೆ ಹಾಗೂ ಶಿಸ್ತಿನ ಅತ್ಯಂತ ಶುದ್ಧವಾದ ರೂಪ ನೀರಜಾ  ಈ ಜಗತ್ತಿಗೆ ನೀರಜಾ ಭಾನೋಟಿ ಏನೂ ಅಲ್ಲ ಆದರೆ ಆ 359 ಜನ ಪ್ರಯಾಣಿಕರ ಬದುಕಿಗೆ ಆಕೆಯೇ ಎಲ್ಲಾ. ಆಕೆಯಿಂದಲೇ ಅವರೆಲ್ಲ ಇಂದು ಬದುಕಿ ಬಾಳುತ್ತಿರುವುದು…… ಸಾವಿನಲ್ಲೂ ಸಾರ್ಥಕತೆ ಕಂಡವಳು ನೀರಜಾ ಆಕೆಗೆ ನಮ್ಮ ತುಂಬು ಹೃದಯದ ನಮನಗಳು ವೀಣಾ ಹೇಮಂತ್ ಗೌಡ ಪಾಟೀಲ್

“ಸಾವಿನಲ್ಲೂ ಸಾರ್ಥಕತೆ ಮೆರೆದ…ನೀರಜಾ ಭಾನೋಟ್.” ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

ಇತರೆ, ಜೀವನ

“ಯಾರಿಗಿದೆ ನೆಮ್ಮದಿ?” ವನಜ ಮಹಾಲಿoಗಯ್ಯ ಮಾದಾಪುರ

ಬದುಕಿನ ಸಂಗಾತಿ “ಯಾರಿಗಿದೆ ನೆಮ್ಮದಿ?” ವನಜ ಮಹಾಲಿoಗಯ್ಯ ನಾನು ಯಾರನ್ನು ಉದ್ದೇಶಿಸಿ ಈ ಮಾತನ್ನು ಹೇಳುತ್ತಿಲ್ಲ ಜಗತ್ತಿನ ಪ್ರತಿ ಒಬ್ಬರು ತಿಳಿದುಕೊಳ್ಳಬೇಕಾದ ಮಾತಿದು ಎಷ್ಟೇ ಕೋಟಿ ಹಣ ಆಸ್ತಿ ಇದ್ದರೂ ನಾವು ಹೋಗುವಾಗ ಏನನ್ನು ತೆಗೆದುಕೊಂಡು ಹೋಗುವುದಿಲ್ಲ. ಇಷ್ಟೆಲ್ಲ ಇದ್ದರೂ ಅದನ್ನೆಲ್ಲವನ್ನು ಅನುಭವಿಸುವಂತಹ ಶಕ್ತಿ ಮನುಷ್ಯನಿಗೆ ಇಲ್ಲ. ಕಾರಣ ಆಸ್ತಿ ಹಣಕ್ಕೆ ಇರುವಷ್ಟು ವಯಸ್ಸು ಮನುಷ್ಯನಿಗೆ ಇಲ್ಲ.ಇದ್ದಾಗ ಇರುವಷ್ಟುನ್ನು ಅನುಭವಿಸುವಷ್ಟು ಮನೋ ಧೈರ್ಯವೂ ಮನುಷ್ಯನಿಗೆ ಇಲ್ಲ. 10 ಕಾರಿದ್ದರು ಒಂದು ಸಲಕ್ಕೆ ಒಂದೇ ಕಾರಿನಲ್ಲಿ  ಕುಳಿತು ಪ್ರಯಾಣ ಮಾಡಲು ಸಾಧ್ಯ. ಹಾಗೆಯೇ ಕೋಟಿ ಕೋಟಿ ಹಣ ವಿದ್ದರೂ ಅದನ್ನೆಲ್ಲ ಎಲ್ಲರ ಎದುರಿಗೆ ತೋರಿಸುವಷ್ಟು ಧೈರ್ಯವಿಲ್ಲ. ಕಾರಣ ಅಷ್ಟೊಂದು ಹಣ ಬರಲು ಒಳ್ಳೆಯ ದಾರಿಯಿಂದ ಅವಕಾಶವಿಲ್ಲ. ಇದ್ದ ಹಣದಲ್ಲಿ ಧಾರಾಳವಾಗಿ ಯಾರಿಗೂ ಸಹಾಯ ಮಾಡದೆ ತನ್ನಲ್ಲಿ ಹಾಗೆ ಇಟ್ಟು ಅದನ್ನು ಉಪಯೋಗಕ್ಕೆ ಬರದಂತೆ ಮಾಡುವುದು ಕೆಟ್ಟ ಮನಸ್ಥಿತಿ ಇರುವ ಮನುಷ್ಯನಿಗೆ ಮಾತ್ರ ಸಾಧ್ಯ. ಹಾಗೆ ತಾನು ಅನುಭವಿಸದೆ ತನ್ನವರಿಗೂ ಕೊಡದೆ ಸತ್ತಾಗ “ದರಿದ್ರದವರು ಬದುಕಿದ್ದು ಏನು ಪ್ರಯೋಜನ ಸತ್ತರೆ ಸಾಯಲಿ ಬಿಡಿ” ಎಂದು ಜನ ಅಂದುಕೊಳ್ಳುವಂತೆ ಬದುಕುವುದು ಏಕೆ ಬೇಕು? ನ್ಯಾಯವಾಗಿ ಬದುಕಿ ದುಡಿದದ್ದರಲ್ಲಿ ತನಗೆ ತನ್ನವರಿಗೆ ಎಂದು ಬಚ್ಚಿಡದೆ ಇರುವಷ್ಟು ದಿನ ಎಲ್ಲರೊಂದಿಗೆ ಪ್ರೀತಿಯಿಂದ ಬದುಕಿ ಸತ್ತಾಗ “ಈ ಮನುಷ್ಯ ಇನ್ನಷ್ಟು ದಿನ ಬದುಕಿರಬೇಕಿತ್ತು “ಅಂದುಕೊಳ್ಳುವಂತೆ ಬದುಕುವುದು ಎಷ್ಟು ಒಳ್ಳೆಯ ಸಾರ್ಥಕತೆಯ ಬದುಕಲ್ಲವೇ?.ಇತ್ತೀಚಿನ ದಿನಗಳಲ್ಲಿ ಮನುಷ್ಯ ಮನುಷ್ಯನಾಗಿಯೇ ಇಲ್ಲ ಅವನನ್ನು ಮೃಗಗಳಿಗೆ ಹೋಲಿಸುವುದು ಖಂಡಿತ ಬೇಡವೇ ಬೇಡ. ಮೃಗಗಳಿಗಿರುವಷ್ಟು ಒಳ್ಳೆಯತನ ಈ ಕೆಟ್ಟ ಮನುಷ್ಯನಿಗಿಲ್ಲ. ಸ್ವಾರ್ಥ ಮೋಸ ಧಗ ವಂಚನೆ ಅನ್ಯಾಯ ಇವೆಲ್ಲವೂ ಮನುಷ್ಯನ ಐದು ಅಂಗಗಳಂತಾಗಿದೆ. ಮನುಷ್ಯ ತನ್ನ ದುನ೯ಡತೆ ದುರ್ಗುಣ ಇವುಗಳಿಂದ ತನ್ನನ್ನು ತಾನು ಹಾಳು ಮಾಡಿಕೊಂಡು ತನ್ನ ಸುತ್ತಮುತ್ತಲಿನ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾನೆ. ಒಳ್ಳೆಯದು ಮಾಡಲು ಒಂದು ಕ್ಷಣ ಯೋಚನೆ ಮಾಡಿದರೆ ಸಾಕು. ಕೆಟ್ಟದ್ದನ್ನು ಮಾಡಲು ಸಾವಿರ ಸಲ ಯೋಚಿಸಬೇಕು. ಆದರೆ ಈಗಿನ ಯುವ ಜನತೆ ತಪ್ಪನ್ನು ಮಾಡಲು ಒಂದೇ ಕ್ಷಣ ಯೋಚಿಸುತ್ತಾರೆ ಒಳ್ಳೆಯದನ್ನು ಮಾಡಲು ಸಾವಿರ ಸಲ ಯೋಚಿಸುತ್ತಾರೆ. ಹಾಗಾಗಿ ಇಂದು ಎಷ್ಟೋ ಯುವಜನತೆ ತಪ್ಪುಗಳನ್ನು ಮಾಡಿ  ಜೈಲನ್ನು ಸೇರಿದ್ದಾರೆ. ಅವರನ್ನೆಲ್ಲ ನೋಡಿ ಆದರೂ ಉಳಿಧ ಜನರುಬುದ್ದಿ ಕಲಿತು ಬದುಕಬೇಕು.ಇವತ್ತಿನ ಮಕ್ಕಳು ತಂದೆ ತಾಯಿಯರ ಮಾತಿಗೆ ಬೆಲೆ ಕೊಡದೆ, ತಮ್ಮದೇ ಆದ ರೀತಿಯಲ್ಲಿ ನಡೆದುಕೊಂಡು ಜೀವನ ವನ್ನೇ ಹಾಳುಮಾಡಿಕೊಂಡು, ಕೇಳಿದರೆ ಅವ್ರೆಲ್ಲ ಹೇಳೋ ಮಾತು ಏನು ಗೊತ್ತಾ? ನಾವು ನಿಮ್ಮ ಕಾಲದವರಲ್ಲ, ಇವತ್ತಿನ ಜನರೇಷನ್ ನಾವು ಎಂದು  ಉತ್ತರಿಸುವ ರೀತಿ ಅಸಯ್ಯ ತರುತ್ತೆ. ತಂದೆ ತಾಯಿಗಳು ಈ ಮಕ್ಕಳ ಕಾಲದಲ್ಲಿ ಸೋತು ಹೋಗಿದ್ದಾರೆ. ನಾನು ತಂದೆ ತಾಯಿಗಳಿಗೆ ಒಂದು ಮಾತು ಹೇಳುತ್ತೇನೆ. ಯಾರ ಮಕ್ಕಳೇ ಆಗಲಿ ಮರ್ಯಾದೆ ತೆಗೆಯೋ ಕೆಲಸ ಮಾಡಿದರೆ ನೀವು ನೊಂದುಕೊಂಡು ಜೀವ ಕಳೆದುಕೊಳ್ಳಬೇಡಿ. ಕಾರಣ ಯಾವ ತಂದೆ ತಾಯಂದಿರು  ಮಕ್ಕಳನ್ನು  ಕೆಟ್ಟ ದಾರಿಗೆ ಹೋಗಲು ಪ್ರೇರೇಪಿಸುವುದಿಲ್ಲ. ಹಾಗೆಯೇ ಯಾರು ನೋವುಂಡ ತಂದೆ ತಾಯಿಯರಿಗೆ ದಯವಿಟ್ಟು ಅವಮಾನಿಸಿ ಮಾತನಾಡಬೇಡಿ. ಹಣ ಇಲ್ಲ ಅಂದ್ರೆ ಜನಗಳ ಎದುರಿಗೆ ಓಡಾಡಬಹುದು  ಆದ್ರೆ ಮರ್ಯಾದೆ ಹೋದರೆ ಹೇಗೆ ಓಡಾಡಬಹುದು ಅಲ್ಲವೇ,  ಮರ್ಯಾದೆ ಇಲ್ಲ ಅಂದ್ರೆ ನೆಮ್ಮದಿ ಎಲ್ಲಿರುತ್ತೆ. ವನಜ ಮಹಾಲಿoಗಯ್ಯ ಮಾದಾಪುರ

“ಯಾರಿಗಿದೆ ನೆಮ್ಮದಿ?” ವನಜ ಮಹಾಲಿoಗಯ್ಯ ಮಾದಾಪುರ Read Post »

ಇತರೆ

“ವ್ಯಾಪಾರದ ನಡುವೆ ‘ವಕೀಲʼರಾಗಿ ಉದಯಿಸಿದ ಕುಶಾಲನಗರದ ಪರಮೇಶ್”‌ ಐಗೂರು ಮೋಹನ್ ದಾಸ್ ಜಿ

ವ್ಯಕ್ತಿ ಸಂಗಾತಿ ಐಗೂರು ಮೋಹನ್ ದಾಸ್ ಜಿ “ವ್ಯಾಪಾರದ ನಡುವೆ ‘ವಕೀಲʼರಾಗಿ ಉದಯಿಸಿದ ಕುಶಾಲನಗರದ ಪರಮೇಶ್”‌           ಒಂದನೊಂದು ಕಾಲದಲ್ಲಿ ಪಿ.ಯು.ಸಿ.ಶಿಕ್ಷಣಕ್ಕೆ ಮಂಗಳ ಹಾಡಿ, ಜೀವನಕ್ಕೆ ಭದ್ರವಾದ ಬುನಾದಿ ಹಾಕಲು ಹಲವು ‘ಉದ್ಯೋಗ ‘ ಎಂದು ಎಲ್ಲಾಡೆ ಓಡಾಡಿದ್ದರೂ ಹೆಚ್ಚಿನ ಫಲ ಮಾತ್ರ ದೊರೆಯಲಿಲ್ಲ….! ದುಡಿದು ಸಂಪಾದಿಸುತ್ತಿದ್ದ ಕಾಸು ಹೊಟ್ಟೆ – ಬಟ್ಟೆ – ಇನ್ನಿತರ ಖಚು೯ಗಳಿಗೆ ಖಾಲಿಯಾಗಿಬಿಡುತ್ತಿತ್ತು…!ಒಂದು ಮಧುರವಾದ ಕನಸು ಕಾಣುತ್ತಾ ‘ನಿದ್ರೆ’ ಮಾಡಲು ಸಹ ಸಾಧ್ಯವಾಗುತ್ತಿರಲಿಲ್ಲ….! ಆದರೆ ಜೀವನದಲ್ಲಿ ಏನಾದ್ದರೂ ಒಂದು ‘ಸಾಧನೆ’ ಮಾಡುವಂತಹ ಗುರಿ ಮಾತ್ರ ಇತ್ತು…!    ಕಾಲಚಕ್ರ ತಿರುಗ ತೊಡಗಿತ್ತು…. ನಂತರ ಒಂದು ವಿದೇಶ ಪ್ರಯಾಣ…. ಮದುವೆ…. ಮಕ್ಕಳು ಎಂದು ಹೇಳುತ್ತಾ, 40ರವಯಸ್ಸಿನ ಗಡಿ ತಲುಪಿದೇ ತಿಳಿಯಲಿಲ್ಲ…! ಬದುಕು ಸಾಗಿಸಲು ಒಂದು ಮಾರುತಿ ವ್ಯಾನ್ ನಲ್ಲಿ, ಬ್ರೆಡ್ – ಬನ್-ಕೇಕ್ – ಮಸಾಲೆ ಕಡಲೆಯಂತಹ ‘ ಬೇಕರಿ ‘ತಿಂಡಿ – ತಿನಿಸುಗಳನ್ನು ತುಂಬಿಸಿಕೊಂಡು, ವಿವಿಧ ಗ್ರಾಮಗಳ ಹೋಟೆಲ್ – ಅಂಗಡಿಗಳಿಗೆ ಈ ತಿಂಡಿ-ತಿನಿಸುಗಳನ್ನು ತಲುಪಿಸಿ, ಒರ್ವ ‘ ವ್ಯಾಪಾರಿ’ ಎಂಬ ಹಣೆಪಟ್ಟಿ ದೊರೆಯಿತ್ತು…! ಜೊತೆಗೆ ವ್ಯಾಪಾರವು ಬಹಳ ಚೆನ್ನಾಗಿ ನಡೆಯುತ್ತಿದ್ದ ಕಾರಣ, ಈ ಹಿಂದೆ ಕಂಡ ಕನಸುಗಳು ಮೆಲ್ಲನೆನನಸಾಗ ತೊಡಗಿತ್ತು….!!       ಈ ಕನಸುಗಾರ…. ಸಾಧನೆಗಾರ….. ಕೊಡಗು ಜಿಲ್ಲೆಯಕುಶಾಲನಗರದ ನ್ಯೂ ಹೌಸಿಂಗ್ ಬೋಡ್೯ ನಿವಾಸಿ   ಪರಮೇಶ್..!ಹೀಗೆ ಈ ವ್ಯಾಪಾರವು ಯಾವುದೇ ವಿಘ್ನ ಇಲ್ಲಾದೇ ಸಾಗುತ್ತಿದ್ದಾಗ, ಪ್ರಪಂಚವನ್ನು ನಡುಗಿಸಿದ ‘ಕೊರೋನಾ’ ಮಾರಿಯಿಂದ ಇವರ ವ್ಯಾಪಾರಕ್ಕೆ ತುಸು ಇಳಿಕೆ ಕಂಡು ಬಂತು.. ಯಾವುದೇ ಕಡೆ ಓಡಾಡುವಂತೆ ಇಲ್ಲ….! ನಾಲ್ಕು ಗೋಡೆಗಳ ನಡುವೆ ‘ಹಗ್ಗ ‘ಇಲ್ಲಾದೇ ಎಲ್ಲಾರ ರೀತಿ ಇವರನ್ನು ಸಹ ಕೊರೋನಾ ಮಾರಿ ಕಟ್ಟಿಹಾಕಿತ್ತು…!       ಆ ಸಮಯದಲ್ಲಿ ಈ ಹಿಂದೆ ಇವರು ಕನಸು ಕಂಡಿದ್ದ ‘ ಪದವಿ’ ಯ ಕನಸು ಪುನಃ ಮನಸ್ಸಿನಲ್ಲಿ ಮೊಳಕೆ ಹೊಡೆಯಿತ್ತು…! ಈಗ ಪುನಃ ಓದು ಮುಂದುವರಿಸಿ ಹೆಸರು ನೊಂದಿಗೆ ಕೇವಲ ‘ಪದವಿ’ ಸೇರಿಸಿ ಪ್ರಯೋಜನ ಇಲ್ಲ…. ಈ ಪದವಿಯಿಂದ ಸಮಾಜದಲ್ಲಿ ಹತ್ತು ಮಂದಿಗೆ ಪ್ರಯೋಜನವಾಗ ಬೇಕೆಂದು, ಅವರ ಮನ ನುಡಿಯಿತ್ತು…! ಆಗ ಅವರನ್ನು ಕೈ ಬೀಸಿ ಕರೆದದ್ದು ಲಾ…. ಎಲ್.. ಎಲ್.ಬಿ.ಶಿಕ್ಷಣ…!ಇದು ಇವರಿಗೆ ಸುಲುಭದ ಮಾತುವಾಗಿರಲಿಲ್ಲ !       ಈ ಹಿಂದೆ ಪಿ.ಯು.ಸಿ.ಶಿಕ್ಷಣವನ್ನು ಮುಗಿಸಿ ಸುಮಾರು 24 ವಷ೯ಗಳೇ ಕಳೆದು ಹೋಗಿದ್ದ ಕಾರಣ, ಓದು -ಬರಹ ಸುಲುಭದ ವಿಚಾರವಾಗಿರಲಿಲ್ಲ…! ಆದರೂ ಧೈರ್ಯ ಮಾಡಿ ಮೈಸೂರಿನ ‘ಕನಾ೯ಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ, ಕಾನೂನು ಕಲಿಕೆ ವಿದ್ಯಾಥಿ೯ಯಾಗಿ ದಾಖಲುಯಾಗಿಬಿಟ್ಟರು….!ಐದು ವಷ೯ಗಳ ಓದು…! ಜೊತೆಗೆ ವ್ಯಾಪಾರವು ಎಂದಿನಂತೆ ಸಾಗಬೇಕು,..! ಮನದಲ್ಲಿ ಒಂದು ಧೃಡವಾದ ಗುರಿ ಮತ್ತು ಕನಸು ಇದ್ದ ಕಾರಣ, ನಿತ್ಯ ಕುಶಾಲನಗರದಿಂದ ಮೈಸೂರಿಗೆ ಪ್ರಯಾಣ ಬೆಳೆಸುತ್ತಾ, ಪುನಃ ಅವರ ಬಾಳಿನಲ್ಲಿ ಮತ್ತೊಂದು ‘ಕಾಲೇಜ್ ಲೈಫ್’ಶುರುವಾಯಿತ್ತು…!        ನಿತ್ಯ ಬೆಳಿಗ್ಗೆ ಐದು ಗಂಟೆಗೆ ಕುಶಾಲನಗರದಿಂದ ಬಸ್ ಏರಿ, ಮೈಸೂರುಗೆ ತಲುಪಿ, ಅಲ್ಲಿಂದ ಹತ್ತು ಕಿ.ಮೀ ದೂರದಲ್ಲಿರುವ ಬನ್ನೂರು ರಸ್ತೆಯಲ್ಲಿರುವ ಕಾಲೇಜ್ ಗೆಹೋಗಿ ಜಾಣ ವಿದ್ಯಾಥಿ೯ಯಾಗಿ ಓದು ಪ್ರಾರಂಭಿಸಿಯೇ ಬಿಟ್ಟರು…! ಕೈಯಲ್ಲಿರುವ ದೊಡ್ಡ-ದೊಡ್ಡ ಗಾತ್ರದ ಪುಸ್ತಕಗಳನ್ನು ನೋಡುವಾಗ ಮನಸ್ಸಿನ ಒಂದು ಮೂಲೆಯಲ್ಲಿ ಭಯವಾಗುತ್ತಿತ್ತು…! ಆದರೂ ಮನಸ್ಸು ಗಟ್ಟಿಯಾಗಿದ್ದ ಕಾರಣ, ಓದು ಸುಗಮವಾಗಿ ಸಾಗುತ್ತಿತ್ತು…!ಕಾಲೇಜ್ ಓದು ಮುಗಿಸಿ, ಮನೆಗೆ ತಲುಪಿ ನಂತರ ಎಂದಿನಂತೆ ‘ವ್ಯಾಪಾರ’ದ ಚಟುವಟಿಕೆಗಳು ಪ್ರಾರಂಭವಾಗುತ್ತಿತ್ತು!ಈ ಕೆಲಸ ಮುಗಿಯುವ ವೇಳೆಗೆ ರಾತ್ರಿಹನ್ನೊಂದು -ಹನ್ನೇರಡು ಗಂಟೆಯಾಗುತ್ತಿತ್ತು….! ನಂತರ ಒಂದು ಸಣ್ಣ. ‘ಕೋಳಿ ನಿದ್ರೆ’..! ಮರುದಿನ ಎಂದಿನಂತೆ ಕಾಲೇಜ್ – ವ್ಯಾಪಾರ ಎಂದು ಬದುಕಿನ ಬಂಡಿ ಸಾಗುತ್ತಿತ್ತು.!!    ಮನಸ್ಸಿನಿಂದ ಸೋಮಾರಿತನವನ್ನು ಓಡಿಸಿ, ಮನಸ್ಸುನಲ್ಲಿಗುರಿ ಮತ್ತು ಕನಸುಗೆ ಭದ್ರವಾದ ಸ್ಥಾನ ನೀಡಿದ್ದ ಫಲವಾಗಿ ,ಐದು ವಷ೯ದ ಕಾನೂನು ಪದವಿ ಪರೀಕ್ಷೆ ಬರೆದು ಮುಗಿಸಿ ಫಲಿತಾಂಶ ಹೊರಬಂದಾಗ, ಈ ವ್ಯಾಪಾರಿ ಉತ್ತಮ ಅಂಕದೊಂದಿಗೆ ವಕೀಲರು ಯಾಗಿ, ಅರಳಿ ಬಿಟ್ಟರು…! ಕನಸು ನನಸಾಯಿತ್ತು….! ಪರಿಶ್ರಮಕ್ಕೆ ದೇವರು ತಕ್ಕ ಪ್ರತಿಫಲವನ್ನು ನೀಡಿತ್ತು..!ಈಗ ವ್ಯಾಪಾರಿ ಪರಮೇಶ್,ವಕೀಲ.. ಲಾಯರ್ ಪರಮೇಶ್….!ಹೆಸರು ಜೊತೆ ಪದವಿ..!      ಈಗ ಪರಮೇಶ್ ನವರ ಕೈಯಲ್ಲಿ ಎರಡು ‘ತಕ್ಕಡಿ’ಗಳು ಇದೆ..!ಒಂದು ವ್ಯಾಪಾರದ ಲಾಭ-ನಷ್ಟಗಳ ಲೆಕ್ಕಚಾರದ ತಕ್ಕಡಿ…! ಮತ್ತೊಂದು ಅನ್ಯಾಯ-ನ್ಯಾಯಗಳನ್ನು ತೂಕ ಮಾಡಿ, ನೊಂದ ಮನಸ್ಸುಗಳಿಗೆ ನ್ಯಾಯ ಒದಗಿಸುವ ನ್ಯಾಯದ ತಕ್ಕಡಿ…!      ಈ ಶುಭ ವೇಳೆಯಲ್ಲಿ ಎರಡು ತಕ್ಕಡಿಗಳ ಪೈಕಿ ಒಂದನ್ನು ಆಯ್ಕೆ ಮಾಡಿಕೊಳ್ಳಲು ಪರಮೇಶ್ ನವರಿಗೆ ಹೇಳಿದ್ದರೇ, ಅವರಿಗೆ ಬಲು ಕಷ್ಟವಾಗುತ್ತದೆ…! ಏಕೆಂದರೆ ವ್ಯಾಪಾರದ ತಕ್ಕಡಿ ಅವರನ್ನು ಕಷ್ಟ ಕಾಲದ ದಿನಗಳಲ್ಲಿ ಕೈ ಹಿಡಿದು ಮೇಲೆ ಕ್ಕೆ ಎತ್ತಿ, ಈ ಸಮಾಜದಲ್ಲಿ ಒಂದು ಬೆಲೆ – ಗೌರವದಿಂದ ಬಾಳುವಂತಹ ರೀತಿಯಲ್ಲಿ ಕೆತ್ತನೆ ಮಾಡಿದ್ದು…!ಈಗ ಕೈಯಲ್ಲಿ ಇರುವ ನ್ಯಾಯದ ತಕ್ಕಡಿ ಸುಮ್ಮನೆ ‘ ಟೈಂ ಪಾಸ್’ ಅಥವಾ ಅದೃಷ್ಟ ಬಲದಿಂದ ದೊರೆತದ್ದು ಅಲ್ಲ…..!ಇದಕ್ಕಾಗಿ ಐದು ವಷ೯ಗಳ ಕಾಲ ಸರ್ವ ಮೋಜು- ನಿದ್ರೆ ಹಾಳು ಮಾಡಿಕೊಂಡು, ಓಡಾಡಿ ಓದಿದ ಫಲವಾಗಿ ಮಾತ್ರ ಈ‘ಕರಿಕೋಟು’ ಧರಿಸುವಂತಹ ಸೌಭಾಗ್ಯ ಸಿಕ್ಕಿದ್ದು….!    ಈಗ ಪರಮೇಶ್ ನವರು ಪತ್ನಿ ಸುಮಿ ಮತ್ತು ಮಕ್ಕಳಾದ ಅಭಯ್ -ಜಿನಿಯೊಂದಿಗೆ ಕುಶಾಲನಗರದಲ್ಲಿ ಬದುಕನ ಬಂಡಿ ಸಾಗಿಸುತ್ತಿದ್ದಾರೆ….!ಕರಿಕೋಟು ಧರಿಸಿ ಕೋರ್ಟ್ ಗೆಹೋಗುವ ವೇಳೆ, ಪ್ರೀತಿಯಿಂದ ಪತ್ನಿಯಿಂದ ಒಂದು ನೋಟ ನೋಡಿ ಮುಂದಕ್ಕೆ ಸಾಗುತ್ತಾರೆ..!ಏಕೆಂದರೆ ಇವರ ಈ ಗೆಲುವಿನ ಹಿಂದೆ ಪತ್ನಿಯ ಪರಿಶ್ರಮವು ಬಹಳ ಇದೆ ಎಂದು ಹೇಳಲು ಪರಮೇಶ್ ಮರೆಯುವುದಿಲ್ಲ…!   ಪರಮೇಶ್ ನವರ ಈ ಸಾಧನೆಯ ಕಥೆ ಕೇಳಿದಾಗ, ನಿಮ್ಮ ಯಾವುದಾದರೂ ಬಾಡಿ ಹೋಗಿರುವ ಕನಸುಗಳಿಗೆ ಜೀವ ತುಂಬಲು ಮತ್ತು ಪರಮೇಶ್ ನವರಿಗೆ ಒಂದು ಅಭಿನಂದನೆ ತಿಳಿಸಲು 8296521805 ನಂಬರಿಗೆ ಒಂದು ಕರೆ ಮಾಡಿ..! ಐಗೂರು ಮೋಹನ್ ದಾಸ್ ಜಿ

“ವ್ಯಾಪಾರದ ನಡುವೆ ‘ವಕೀಲʼರಾಗಿ ಉದಯಿಸಿದ ಕುಶಾಲನಗರದ ಪರಮೇಶ್”‌ ಐಗೂರು ಮೋಹನ್ ದಾಸ್ ಜಿ Read Post »

ಇತರೆ

“ನಿಶ್ಶಬ್ದರತ್ನಾಕರ” ತೆಲುಗು ಕವಿತೆ- ಮೂಲ: ಪನ್ಯಾಲ ಜಗನ್ನಾಥದಾಸ್ ಕನ್ನಡಕ್ಕೆ: ಕೊಡೀಹಳ್ಳಿ ಮುರಳೀ ಮೋಹನ್

ಅನುವಾದ ಸಂಗಾತಿ “ನಿಶ್ಶಬ್ದರತ್ನಾಕರ” ತೆಲುಗು ಕವಿತೆ- ಮೂಲ: ಪನ್ಯಾಲ ಜಗನ್ನಾಥದಾಸ್ ಕನ್ನಡಕ್ಕೆ: ಕೊಡೀಹಳ್ಳಿ ಮುರಳೀ ಮೋಹನ್ ನನ್ನೊಳಗಿನ ನಿಶ್ಶಬ್ದವೇನನಗೆ ಅರ್ಥವಾಗದೆ ಸಾಯುತ್ತಿದೆ;ಇನ್ನು ಎದುರಿಗಿರುವವರ ಮೌನವನುನಾನೇಗೆ ತಾನೇ ಅರಿಯಲಿ? ಹೇಗಾದರೂ ಮಾಡಿ ಈ ಮೌನಕ್ಕೆಒಂದು ಪರಿಹಾರ ಕಂಡುಕೊಳ್ಳಬೇಕು;ಜಗದ ಮಾತುಗಳೆಲ್ಲವೂಬತ್ತಿ ಹೋಗುವ ಮುನ್ನವೇಒಂದು ‘ನಿಶ್ಶಬ್ದರತ್ನಾಕರ’ವ ರೂಪಿಸಿಕೊಳ್ಳಬೇಕು.ನಿಶ್ಶಬ್ದದ ಮರ್ಮಕ್ಕೆ ಸಾವಕಾಶವಾಗಿ ಟೀಕು-ಟಿಪ್ಪಣಿಗಳನ್ನು ಬರೆದಿಡಬೇಕು; ಎದುರಿಗಿರುವವರ ಮೌನವನ್ನಅವರ ಪಾಡಿಗೆ ಬಿಟ್ಟರೆ-ಕನಿಷ್ಠ ಪಕ್ಷ, ಆಗಲಾದರೂನನ್ನ ನಿಶ್ಶಬ್ದ ನನಗೆ ಅರ್ಥವಾಗಬಹುದೇನೋ! ಮೂಲ: ಪನ್ಯಾಲ ಜಗನ್ನಾಥದಾಸ್ ಕನ್ನಡಕ್ಕೆ: ಕೊಡೀಹಳ್ಳಿ ಮುರಳೀ ಮೋಹನ್

“ನಿಶ್ಶಬ್ದರತ್ನಾಕರ” ತೆಲುಗು ಕವಿತೆ- ಮೂಲ: ಪನ್ಯಾಲ ಜಗನ್ನಾಥದಾಸ್ ಕನ್ನಡಕ್ಕೆ: ಕೊಡೀಹಳ್ಳಿ ಮುರಳೀ ಮೋಹನ್ Read Post »

ಇತರೆ

“ಕುಟುಂಬಗಳ ಮಧ್ಯೆ ಬಾಂಧವ್ಯ ಬೆಸೆಯುವ ಸಂಕ್ರಾಂತಿ ಹಬ್ಬ” ನಾಗರತ್ನ ಹೆಚ್‌ ಗಂಗಾವತಿ

ಸಂಕ್ರಾಂತಿ ಸಂಗಾತಿ ನಾಗರತ್ನ ಹೆಚ್‌ ಗಂಗಾವತಿ “ಕುಟುಂಬಗಳ ಮಧ್ಯೆ ಬಾಂಧವ್ಯ ಬೆಸೆಯುವ ಸಂಕ್ರಾಂತಿ ಹಬ್ಬ” ಸಂಕ್ರಾಂತಿ ಹಬ್ಬದ ಪ್ರತೀಕವಾಗಿದ್ದು  .ಇದು ರೈತನ ಸುಗ್ಗಿ ಹಬ್ಬವಾಗಿದೆ ಅಷ್ಟೇ ಅಲ್ಲದೆ ಜಾನುವಾರುಗಳಿಗೆ ಕೃತಜ್ಞತೆ ಸಲ್ಲಿಸುವ ಹಬ್ಬವಾಗಿದೆ ಮತ್ತು ಕುಟುಂಬದ ನಡುವೆ ಬಾಂಧವ್ಯ ಬೆಸುವ ಹಬ್ಬ ವಾಗಿದೆ  . ಎಲ್ಲಾ ರಾಜ್ಯಗಳಲ್ಲಿ ಒಂದೊಂದು ಬಗೆಯ ಹೆಸರಿನಿಂದ ಕರೆಯಲಾಗುತ್ತದೆ ಕರ್ನಾಟಕದಲ್ಲಿ ಸಂಕ್ರಾಂತಿ, ಆಂಧ್ರಪ್ರದೇಶದಲ್ಲಿ ಸಂಕ್ರಾಂತಿ, ತಮಿಳುನಾಡಿನಲ್ಲಿ ಪೊಂಗಲ್, ಪಂಜಾಬ್ ಮತ್ತು ಹರಿಯಾಣದಲ್ಲಿ ಲೋಹರಿ ಮತ್ತು ಅಸ್ಸಾಂನಲ್ಲಿ ,ಮಘಾ ಎಂದು ಆಚರಿಸಲಾಗುತ್ತದೆ. ಹೊಸ ಬೆಳೆ ಬಂದ ಸಮಯದಲ್ಲಿ ಆಚರಿಸುವ ಹಬ್ಬ ಇದು ರೈತರ ತಮ್ಮ ಜಾನುವಾರುಗಳಿಗೆ ಕೃತಜ್ಞತೆ ಸಲ್ಲಿಸಿ ಅಲಂಕರಿಸುತ್ತಾರೆ ಮತ್ತು ಕೆಲವೆಡೆ ಎತ್ತುಗಳನ್ನು ಸಿಂಗರಿಸಿ ಓಟದ ಸ್ಪರ್ಧೆಯನ್ನು ಕೂಡ ಮಾಡಲಾಗುತ್ತದೆ.ಸೂರ್ಯದೇವ ,ಬ್ರಹ್ಮ ವಿಷ್ಣು, ಮಹೇಶ್ವರ ಗಣೇಶ ಮತ್ತು ಆದಿಶಕ್ತಿಯನ್ನು ಕೂಡ ಈ ಹಬ್ಬದಲ್ಲಿ ವಿಶೇಷವಾಗಿ ಪೂಜಿಸಲಾಗುತ್ತದೆ. ಹಾಗೂ ಚಿಕ್ಕ ಮಕ್ಕಳಿಗೆ ಆರತಿ ಮಾಡಿ ಶುಭ ಹಾರೈಸಲಾಗುತ್ತದೆ. ಸಂಕ್ರಾಂತಿ ಕೇವಲ ಧಾರ್ಮಿಕ ಹಬ್ಬವಲ್ಲ ಇದು ಸಂಸ್ಕೃತಿ ಮತ್ತು ಕೃಷಿ ಮತ್ತು ಕುಟುಂಬದ ನಡುವಿನ ಭಾಂಧವ್ಯ ಬೆಳೆಸುವ ಒಂದು ಸಂಭ್ರಮದ ಹಬ್ಬವಾಗಿದೆ . ಹಾಗೂ ವಿಶೇಷ ಸ್ಥಳದಲ್ಲಿ ಸೂರ್ಯನ ಕಿರಣಗಳು ಶಿವಲಿಂಗದ ಮೇಲೆ ಬೀಳುವ ವಿದ್ಯಮಾನಗಳು ಕೂಡ ನಾವು ಕಾಣಬಹುದು. ಸಾಮಾನ್ಯವಾಗಿ ಈ ದಿನ ಸೂರ್ಯನ ತನ್ನ ಪಥ ಬದಲಿಸಿ ಉತ್ತರಾಯಣಕ್ಕೆ ಚಲಿಸುತ್ತಾನೆ ಎಂದು ನಂಬಲಾಗುತ್ತದೆ ಉತ್ತರಾಯಣಕ್ಕೆ ಎಂದರೆ ಸೂರ್ಯನು ದಕ್ಷಿಣದಿಂದ ಉತ್ತರ ದಿಕ್ಕಿಗೆ ಸಂಚರಿಸಲು ಪ್ರಾರಂಭಿಸುವ ಪವಿತ್ರ ಕಾಲ ಎಂದು ಕೂಡ ಕರೆಯಲಾಗುತ್ತದೆ. ಹಿಂದೂ ಸಂಸ್ಕೃತಿಯಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ ಈ ದಿನದಂದು ಸ್ನಾನ ಮಾಡೋದು ಮತ್ತು ದಾನ ಮಾಡುವುದು ಮುಂತಾದ ಆಚರಣೆಯನ್ನು ಮಾಡುವುದರಿಂದ ಶುಭ ಫಲಿತಾಂಶ ದೊರೆಯುತ್ತವೆ ಎಂದು ನಂಬಿಕೆ ಅಷ್ಟೇ ಅಲ್ಲದೆ ಸಂತೋಷ ಸಮೃದ್ಧಿ ತುಂಬಿದ ಬದುಕು ಸಿಗುತ್ತದೆ. ಈ ದಿನ ಗಂಗಾ ಸ್ನಾನ ಮಾಡೋದು ಪವಿತ್ರ ಎಂದು ನಂಬಲಾಗಿದೆ ಬೆಳಿಗ್ಗೆ ಬೇಗ ಎನ್ನು ಸ್ನಾನ ಮುಗಿಸಿ ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಒಳ್ಳೆಯ ಶುಭ ಫಲವನ್ನು ಕೂಡ ಪಡೆಯಬಹುದು ಎಂಬ ನಂಬಿಕೆ ಇದೆ. ಸಂಕ್ರಾಂತಿಯಲ್ಲಿ ಎಳ್ಳನ್ನು ಅದೃಷ್ಟ ಹೆಚ್ಚು ಪ್ರಮಾಣದಲ್ಲಿ ಉಪಯೋಗಿಸುತ್ತಾರೆ ಉದಾಹರಣೆಗೆ:  ನಿನ್ನ ಸ್ನಾನ ಮಾಡಿ ಎಳ್ಳು ಬೆಲ್ಲವನ್ನು ಸೇವಿಸುವುದು ಹಾಗೂ ಇತರರಿಗೂ ಕೊಡುವುದು ಪೂಜ್ಯರಿಗೆ  ಎಳ್ಳು ದಾನ ಮಾಡುವುದು ಶಿವಮಂದಿರಗಳಲ್ಲಿ ಎಳ್ಳೆಣ್ಣೆ ದೀಪ ಹಚ್ಚುವುದು ಉತ್ತಮ ಎಂದು ಹಿರಿಯರ ಸಂಪ್ರದಾಯ. ನಾಗರತ್ನ ಹೆಚ್ ಗಂಗಾವತಿ.

“ಕುಟುಂಬಗಳ ಮಧ್ಯೆ ಬಾಂಧವ್ಯ ಬೆಸೆಯುವ ಸಂಕ್ರಾಂತಿ ಹಬ್ಬ” ನಾಗರತ್ನ ಹೆಚ್‌ ಗಂಗಾವತಿ Read Post »

ಇತರೆ, ಜೀವನ

“ಇದಕ್ಕೆಲ್ಲ ಕಡಿವಾಣ ಹೇಗೆ ಮತ್ತು ಯಾವಾಗ?”ವನಜ ಮಹಾಲಿಂಗಯ್ಯ

ವಿಚಾರ ಸಂಗಾತಿ ವನಜ ಮಹಾಲಿಂಗಯ್ಯ “ಇದಕ್ಕೆಲ್ಲ ಕಡಿವಾಣ ಹೇಗೆ ಮತ್ತು ಯಾವಾಗ?” ಹಿಂದಿನ ಕಾಲದಲ್ಲಿ ಈ ಜ್ಯೋತಿಷ್ಯಕ್ಕೆ  ಈಗ ಕೊಡುವಷ್ಟು ಪ್ರಾಮುಖ್ಯತೆಯನ್ನು ಕೊಡತ್ತಿರಲಿಲ್ಲ. ಯಾಕೆಂದರೆ ಕಷ್ಟಪಟ್ಟು ದುಡಿಯೋದು  ಹೊಟ್ಟೆತುಂಬ ತಿನ್ನೋದು  ಕಣ್ತುಂಬ ನಿದ್ದೆ ಮಾಡೋದು ಅಷ್ಷೆ.   ಕಲ್ಲನ್ನು ಜೋಡಿಸಿ ಮಣ್ಣು ಕಲಸಿ ಮೆತ್ತಿ ಮನೆ ಕಟ್ಟಿ, ಅದಕ್ಕೆ ಸುಣ್ಣ, ಕೆಂಪುಬಣ್ಣ (ಉರುಮಂಜು) ಬಳಿದು ಕೊಂಡು ಬಂಗಾರದ ಬದುಕು ಬದುಕಿದವರು ನಮ್ಮ ಹಿರಿಯರು. ಹಬ್ಬ, ಮದುವೆ ಗಳಿಗೆ ಸಂಬಂಧಿ ಕರೆಲ್ಲ ಕೂಡಿಕೊಂಡು ಅವರ ಸಂಭ್ರಮ ಹೇಳತೀರದು. ಆಗ ಮನಸ್ಸನ್ನು ಹಾಳುಮಾಡುವ ಈ ಟಿ ವಿ , ಮೊಬೈಲು,   ಅಲ್ಲದೆ ಬೈಕು ಕಾರು ಇವ್ಯಾವು ಇರಲಿಲ್ಲ. ಅಂದು ಎತ್ತಿನ ಗಾಡಿ, ಕುದುರೆ ಸಾರೋಟ, ಸೈಕಲ್,ಇವ್ಯಾವು ಇಲ್ಲ ಅಂದ್ರೆ ಕಾಲ್ನಡಿಗೆ ಅಷ್ಟೇ. ಆದರೂ ಅಂದಿನಜನರೆಲ್ಲ ನೆಮ್ಮದಿಯಿಂದ  ಸಮಾಧಾನದಿಂದ ಪ್ರೀತಿ ವಿಶ್ವಾಸ ನಂಬಿಕೆಯಿಂದ ಹೊಂದಾಣಿಕಯಿಂದ ಜೀವಿಸುತ್ತಿದ್ದರು. ಎಲ್ಲವೂ ತನ್ನಷ್ಟಕ್ಕೆ ತಾನು ನಡೆಯುತ್ತಾ ಹೋಗುತ್ತಿತ್ತು. ಅಂದರೆ ಪ್ರಕೃತಿಯ ನಿಯಮಗಳನ್ನು ಪಾಲಿಸುತ್ತಾ ಜನ ಸೌಖ್ಯವಾಗಿ, ಖಷಿಯಿಂದ , ಹೊಂದಾಣಿಕೆಯಿಂದಬದುಕುತ್ತಿದ್ದರು. ಆಡಂಬರವಿಲ್ಲ, ಅತಿಯಾಸೆ ಇಲ್ಲ, ಅಸೂಯೆಯಿಲ್ಲ .  ಕಂಪ್ಲೇಟಿಲ್ಲ , ಕೋರ್ಟು ಕಚೇರಿಗಳಿಲ್ಲ. ಆದರೆ ಈಗ ವಿದ್ಯಾವಂತರು ಜಾಸ್ತಿಯಾಗಿ , ಅವರವರೇ ನಿಯಮಗಳನ್ನು ಹಾಕಿಕೊಂಡಿದ್ದಾರೆ. ಅಂದರೆ ಬದುಕಿನ ಅರ್ಥವೇ ಬದಲಾಗಿದೆ. ಎಲ್ಲವೂ ಕ್ಷಣಿಕ ಎನ್ನಿಸಿದೆ.ಕಾರಣ ಅವಸರದ ಅಪಾಯದ ಪಯಣ. ತಂತ್ರಜಾನದ ಮುಂದೆ ಯಾಂತ್ರಿಕ ಜೀವನ.10 ರಿಂದ 1 ಲಕ್ಷದವರೆಗಿನ  ಅಂಗೈಯಲ್ಲಿರುವ  ಮೊಬೈಲ್ ಎಲ್ಲವನ್ನು  ಎಲ್ಲರನ್ನೂ ಬದಲಾಯಿಸಿದೆ.  ಟಿ ವಿ ಧಾರಾವಾಹಿಗಳ ಅಬ್ಬರ. ಸಂಬಂಧಗಳ ದೂರ ತೀರ,  ಎಲ್ಲವೂ ಆನ್ಲೈನ್, ಅಮ್ಮನ ಕೈರುಚಿಯಿಂದ ವಂಚಿತರಾಗಿ,  ದುಡ್ಡೇ ದೊಡ್ಡಪ್ಪ ಅದಿಲ್ಲ ಅಂದರೆ ಬದುಕೇ ಇಲ್ಲಪ್ಪ ಅನ್ನುವ ಹಾಗೆ, ಬೇರೆ ಬೇರೆ ಊರು, ರಾಜ್ಯ, ದೇಶಗಳಿಗೆ ದುಡಿಯಲೆಂದು ಹೋದ ಮಕ್ಕಳು ತಂದೆ ತಾಯಿಯ ಸುಖಕ್ಕಲ್ಲ  ಅವರ ಶವಕ್ಕು ಬರದಂತಹ ಪರಿಸ್ಥಿತಿಯಲ್ಲಿ ಬದುಕು ಕಳೆಯುತ್ತಿದ್ದಾರೆ ಎಂದರೆ ಎಲ್ಲಿಗೋಯಿತು? ನಮ್ಮ  ಜೀವನ?  ಅದರ ನಡು ವೆ ಜ್ಯೋತಿಷ್ಯ, ವಾಸ್ತು ಅಂತ ಜನ ಮುಗಿಬಿದ್ದಿದ್ದಾರೆ. ಬೆಳಗ್ಗೆ ಎಂಟು ಗಂಟೆಗೆ ಎಲ್ಲಾ ನ್ಯೂಸ್ ಚಾನಲ್ಗಳಲ್ಲಿ ಬರುವ ಜ್ಯೋತಿಷಿಗಳು ಅವರ ಬದುಕೆ ಅದ್ವಾನಕ್ಕಿಟ್ಟಿರುತ್ತದೆ , ಅದರೆ ಅವರು ಎಲ್ಲರ ಬದುಕಿನ ಬಗ್ಗೆ ಹೇಳಲು ಕೂತಿರುತ್ತಾರೆ. ಅವರ ಹಿನ್ನೆಲೆ ಹೇಗಿದೆ,  ಅವರಿಗೆ ಅವರ ಭವಿಷ್ಯದ ಬಗ್ಗೆಯೇ ಅವರಿಗೆ ಗೊತ್ತಿಲ್ಲ, ಇತ್ತೀಚೆಗೆ ನಡೆದ ಜ್ಯೊತಿಷಿಯ ಕೊಲೆಯನಂತರವಾದರು ,ಟಿ ವಿ ಮಾಧ್ಯಮಗಳು ಅಂತಹ  ಕಾರ್ಯಕ್ರಮಳಿಗೆ   ಹಾಗೂ ಟಿವಿಗಳಲ್ಲಿ ಬರುವ ಕೆಲವು ಜಾಹೀರಾತುಗಳು ನಿಜಕ್ಕೂ ಮನೆ ಮಂದಿಯನ್ನು ಮುಜುಗರ ಪಡಿಸುತ್ತಿವೆ. ಅದೂ ಅಲ್ಲದೆ ಮಹಿಳೆರ ಒಳ ಉಡುಪುಗಳ ಜಾಹೀರಾತು ಗಳು ಹಾಗೂ ಪ್ಯಾಡ್ ಮತ್ತು IVF  ಜಾಹೀರಾತು ಗಳು ನಿಜಕ್ಕೂ ಬೇಜಾರು ತರುತ್ತವೆ. ಹಾಗೆಯೇ ಕೆಲವು ರಿಯಾಲಿಟಿ ಷೋಗಳು  ಡಬಲ್ ಮೀನಿಂಗ್ ಬಳಸುವುದು ಹಾಗೂ ಕೆಟ್ಟ ಕೆಟ್ಟ ದೃಶ್ಯ ಗಳನ್ನು ವೈಭವೀಕರಿಸಿ ತೋರಿಸುವುದು ನಿಜಕ್ಕೂ ಅಸಹ್ಯವಾಗುತ್ತಿದೆ.ಇದಕ್ಕೆಲ್ಲ ಕಡಿವಾಣ ಹಾಕಬೇಕಿತ್ತು ಅಲ್ಲವೇ  ? ಕಡಿವಾಣ ಹಾಕುವವರು ಯಾರು? ವನಜ ಮಹಾಲಿಂಗಯ್ಯ                          

“ಇದಕ್ಕೆಲ್ಲ ಕಡಿವಾಣ ಹೇಗೆ ಮತ್ತು ಯಾವಾಗ?”ವನಜ ಮಹಾಲಿಂಗಯ್ಯ Read Post »

ಇತರೆ

“ಐತಿಹಾಸಿಕ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ”ಗೊರೂರು ಅನಂತ ರಾಜು ಹಾಸನ.

ಪ್ರವಾಸಿ ಸಂಗಾತಿ ಗೊರೂರು ಅನಂತ ರಾಜು “ಐತಿಹಾಸಿಕ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ” ನಾವು ಶಿರಸಿಯಿಂದ ಬನವಾಸಿ ಬಸ್ಸು ಹತ್ತಿದಾಗಲೇ ನಾಲ್ಕೂವರೆ ಆಗಿತ್ತು. ಶಾಲೆ ಬಿಡುವ ವೇಳೆ ಬಸ್ ರಷ್ ಆಗಿತ್ತು. ನುಗ್ಗಿ ಬಸ್ ಹತ್ತಿ  ಬನವಾಸಿಯಲ್ಲಿ ಇಳಿದಾಗ ಐದೂವರೆ ಆಗಿತ್ತು. ಕ್ಯಾಂಟಿನ್‌ನಲ್ಲಿ ಟೀ ಕುಡಿದು ಮೈಂಡ್ ಪ್ರೆಶ್ ಆಯಿತು. ಅಲ್ಲಿ ದೇವಾಲಯದ ದಾರಿ ಕೇಳಲು ನೀವು ಆಟೋದಲ್ಲಿ ಹೋಗಿ ಆರೂವರೆಗೆ ದೇವಸ್ಥಾನದ ಬಳಿಗೆಯೇ ಬಸ್ ಬರುತ್ತದೆ ಅಲ್ಲಿ ವಾಪಸ್ಸು ಹತ್ತಬಹುದು ಎಂದರು. ಎರಡು ಆಟೋದಲ್ಲಿ  ಮಧುಕೇಶ್ವರ ದೇವಸ್ಥಾನಕ್ಕೆ ಹೋದವು. ದೇವಸ್ಥಾನದ ಪ್ರವೇಶದ್ವಾರದಲ್ಲಿ ನಾವು ಐವರು ಎ.ಹೆಚ್.ಗಣೇಶ್, ಪುಟ್ಟಸ್ವಾಮಿಗೌಡರು, ಬೇಕ್ರೀ ರಾಜೇಗೌಡರು, ಪಟ್ನ ವೆಂಕಟೇಗೌಡರು ಪೋಟೋ ತೆಗೆಸಿಕೊಂಡವು.   ಅರ್ಚಕರು ನಿಮಗೆ ಗೈಡ್ ಬೇಕೆ ಎಂದರು. ಹೌದೆಂದು ಅವರಿಂದ ಅನೇಕ ಐತಿಹಾಸಿಕ ಮಾಹಿತಿ ಪಡೆದೆವು.  ಸಿರಸಿಯಿಂದ ಬನವಾಸಿಗೆ ೨೨ ಕಿ.ಮೀ. ದೂರದ ಪ್ರಯಣ. ನಾವು ಪ್ರಯಣಿಸಿದ್ದು ಸೊರಬ ರಸ್ತೆಯಲ್ಲಿ. ವರದಾ ನದಿ ದಂಡೆಯಲ್ಲಿ ಬನವಾಸಿ ಇದೆ. ಇದು ಶಿರಸಿ ತಾಲ್ಲೂಕಿಗೆ ಸೇರಿದೆ.  ಕ್ರಿ.ಶ. ೧ನೇ ಶತಮಾನದಲ್ಲಿ ಬಾರತಕ್ಕೆ ಬಂದಿದ್ದ ಗ್ರೀಕ್ ಪ್ರವಾಸಿ ಟಾಲೆಮಿ ಈ ಪಟ್ಟಣವನ್ನು ಬನೌಸಿ ಇಂದು ಕರೆದಿದ್ದಾನೆ. ಕ್ರಿ.ಶ.೪ನೇ ಶತಮಾನದಲ್ಲಿ ಜಯಂತಿಪುರ ಅಥವಾ ವೈಜಯಂತಿ ಎಂದು ಕರೆಯಲಾಗುತ್ತಿತ್ತು. ಪಾಂಡವರು ತಮ್ಮ ವನವಾಸದ ಕೆಲಕಾಲ ಇಲ್ಲೇ ಕಳೆದರೆಂದೂ ಧರ್ಮರಾಜನ ಅಶ್ವಮೇಧಯಾಗದ ಸಂದರ್ಭ ಸಹದೇವ ದಕ್ಷಿಣ ಭಾರತದ ದಿಗ್ವಿಜಯ ಕಾಲದಲ್ಲಿ ವನವಾಸಕಾ ನಗರವನ್ನು ಗೆದ್ದನೆಂದೂ ಮಹಾಭಾರತದಲ್ಲಿ ಬನವಾಸಿಯನ್ನು ವನವಾಸಕ ಎಂಬ ಉಲ್ಲೇಖವಿದೆ. ವೈಜಯಂತಿ ಎಂದು ಹೆಸರಾದ ಈ ನಗರದಲ್ಲಿ ಮಧು ಕೈಟಭರೆಂಬ ದೈತ್ಯರನ್ನು ವಿಷ್ಣು ಕೊಂದನೆಂದು, ಶಿವಭಕ್ತರಾದ ಈ ದೈತ್ಯರ ಹೆಸರಿನಲ್ಲಿ ಬನವಾಸಿಯಲ್ಲಿ ಮಧುಕೇಶ್ವರ ಮತ್ತು ನದಿಯ ಇನ್ನೊಂದು ದಂಡೆಯಲ್ಲಿರುವ ಅವನಟ್ಟಿ ಅಥವಾ ಕುಪ್ಪತ್ತೂರಿನಲ್ಲಿ ಕೈಟಭೇಶ್ವರ ದೇವಾಲಯ ನಿರ್ಮಿಸಲಾಗಿದೆ ಎಂದು ಹೇಳಲಾಗಿದ್ದರೂ ಈಗಿರುವಂತೆ ಆ ದೇವಾಲಯಗಳು ಅನಂತರ ಕಾಲದವು. ನಾನು ಹಾಸನದಲ್ಲಿ ನೋಡಿದ ದೇವಿ ಮಹಾತ್ಮೆ ನಾಟಕದಲ್ಲಿ ಈ ಎರಡು ಪಾತ್ರಗಳು ಬರುತ್ತವೆ. ಬೌದ್ಧ ಧರ್ಮ ಪ್ರಸಾರಕ್ಕಾಗಿ ಅಶೋಕ ಚಕ್ರವರ್ತಿ ಕಳುಹಿಸಿದ  ಬೌದ್ಧ ಭಿಕ್ಷು ರಖ್ಖಿತ ಬನವಾಸಿ ಪ್ರಾಂತ್ಯಕ್ಕೆ ಬಂದಿದ್ದನೆಂದು ಮಹಾವಂಶ ಎಂಬ ಬೌದ್ಧಗ್ರಂಥ ತಿಳಿಸುತ್ತದೆ.  ನಾಗಾರ್ಜುನಕೊಂಡದ ಒಂದು ಶಾಸನದ ಪ್ರಕಾರ  ಸಿಂಹಳದ ಭೌದ್ಧ ಭಿಕ್ಷುಗಳು ಧರ್ಮ ಪ್ರಸಾರಕ್ಕಾಗಿ ಬನವಾಸಿಗೆ ಬಂದಿದ್ದರಂತೆ.  ಬನವಾಸಿ ಗೌತಮೀ ಪುತ್ರ ಸಾತಕರ್ಣಿಯ ನೇರ ಆಡಳಿತಕ್ಕೆ ಸೇರಿದ್ದು ಅವನು ತನ್ನ ಸೈನ್ಯದೊಡನೆ ವಿಜಯ ವೈಜಯಂತಿಯಲ್ಲಿ ಬೀಡುಬಿಟ್ಟಿದ್ದನೆಂದು ನಾಸಿಕದ ಶಾಸನ ಹೇಳುತ್ತದೆ.  ಬನವಾಸಿಯಲ್ಲಿ ದೊರಕಿದ ಸಾತವಾಹನ ದೊರೆ ವಾಸಿಷ್ಠೀ ಪುತ್ರ ಸಿವಸಿರಿ ಪುಳುಮಾವಿನ ಅನಂತರ ಬಂದ (ಕ್ರಿ.ಶ.೨ನೇ ಶತಮಾನ) ಶಿವಶ್ರೀ ಪುಳುಮಾವಿಯ ಶಾಸನ ಅವನ ರಾಣಿಯ ಸ್ಮಾರಕ ಶಿಲೆಯಾಗಿದ್ದು ಆ ಕಾಲದಲ್ಲಿ ಬನವಾಸಿಯ ಪ್ರಾಮುಖ್ಯವನ್ನು ಸೂಚಿಸುತ್ತದೆ. ಮುಂದೆ ಸಾತವಾಹನರ ಸಾಮಂತರೂ ಆ ವಂಶದ ಶಾಖೆಗೆ ಸೇರಿದವರೂ ಆದ ಚಟುಸಾತಕರ್ಣಿ ದೊರೆಗಳ ಕಾಲದಲ್ಲೂ ಬನವಾಸಿ ಪ್ರಮುಖ ನಗರವಾಗಿತ್ತು.  ಮಧುಕೇಶ್ವರ ದೇವಾಲಯದ ಕಂಬದ ಮೇಲೆ ರಾಷ್ಟ್ರಕೂಟ, ಕಲ್ಯಾಣ ಚಾಳುಕ್ಯ, ವಿಜಯನಗರ ಮತ್ತು ಸೋದೆ ಅರಸರ ಹಲವಾರು ಶಾಸನಗಳು ದೇವಸ್ಥಾನದ ಜೀರ್ಣೋದ್ದಾರ ದಾನದತ್ತಿಗಳ ಬಗ್ಗೆ ತಿಳಿಸುತ್ತವೆ.  ಕನ್ನಡವನ್ನು ರಾಜ್ಯ ಭಾಷೆಯಾಗಿ ಬಳಸಿದ ಪ್ರಪ್ರಥಮ ರಾಜವಂಶ ಕದಂಬರು.  ಈ ರಾಜ್ಯದ ಸ್ಥಾಪಕ ಮಯೂರಶರ್ಮ (ಕ್ರಿ.ಶ.೩೪೫-೩೬೫) ಈತನ ರಾಜಧಾನಿ ಬನವಾಸಿ. ರಾಜಾ ಕಾಕುಸ್ಥವರ್ಮನ ಕಾಲದಲ್ಲಿ (೪೩೫-೪೫೫) ಉಚ್ರ್ರಾಯ ಸ್ಥಿತಿಯಲ್ಲಿತ್ತು. ಕನ್ನಡದ ಆದಿಕವಿ ಪಂಪ ತನ್ನ ಕಾವ್ಯ ವಿಕ್ರಮಾರ್ಜುನ ವಿಜಯದಲ್ಲಿ ಬನವಾಸಿಯನ್ನು ವರ್ಣಿಸುತ್ತ ಆರಂಕುಶವಿಟ್ಟೊಡಂ  ನೆನೆವುದೆನ್ನ ಮನಂ ಬನವಾಸಿ ದೇಶಮಂ  ಎಂದಿದ್ದಾನೆ. ಬನ ಮತ್ತು ವಾಸಿ ಪದಗಳಿಂದ ಬನವಾಸಿ ಎಂಬ ಹೆಸರು ಬಂದಿದ್ದು ಕ್ರಮವಾಗಿ ಕಾಡು ಮತ್ತು ವಸಂತ ಎಂಬ ಅರ್ಥ ಕೊಡುತ್ತದೆ. ಬನವಾಸಿ ಕರ್ನಾಟಕದ ಹಳೆಯ ಪಟ್ಟಣಗಳಲ್ಲಿ ಒಂದು. ಕದಂಬರ ಕಾಲದ ಅನೇಕ ಬಾರಿ ನವೀಕರಿಸಿದ ಸುಂದರ ಮಧುಕೇಶ್ವರ ದೇವಾಲಯ ಪ್ರಾಚೀನ ಇತಿಹಾಸ ಮತ್ತು ಶಾಸನಗಳಿಂದ ಕೂಡಿದೆ. ಇದು ಶಿವನಿಗೆ ಸಮರ್ಪಿತವಾದ ದೇವಾಲಯ. ಗರ್ಭಗುಡಿಯಲ್ಲಿ ಜೇನು ಬಣ್ಣದ ಲಿಂಗವಿದೆ.  ಇಲ್ಲಿಯ ಕೋಟೆ ಬಹಳ ಪುರಾತನವಾದದ್ದು. ಚಾಲುಕ್ಯ ಇಮ್ಮಡಿ ಪುಲಕೇಶಿಯ ಐಹೊಳೆ ಶಾಸನದಲ್ಲಿ ಈ ಕೋಟೆಯ ಪ್ರಸ್ತಾಪವಿದೆ. ತಾಳಗುಂದ ಗುಂಡನೂರು ಚಂದ್ರವಳ್ಳಿ ಹಲಸಿ ಮತ್ತು ಹಲ್ಮಿಡಿ ಶಾಸನಗಳು ಈ ಕನ್ನಡ ವಂಶದ ಬಗ್ಗೆ ಬೆಳಕು ಚೆಲ್ಲುತ್ತವೆ.  ಕನ್ನಡದ  ಮೊಟ್ಟಮೊದಲ ಶಾಸನವೆಂದು ಹೆಸರಾಗಿರುವ ಹಲ್ಮಿಡಿ ಶಾಸನ (ಕ್ರಿ.ಶ.೪೫೦) ಬೇಲೂರು ತಾ. ಹಲ್ಮಿಡಿ ಗ್ರಾಮದಲ್ಲಿ ದೊರಕಿದೆ. ರಾಜಾ ಶಾಂತಿವರ್ಮನ (ಕ್ರಿ.ಶ.೪೫೦) ಕಾಲದ ತಾಳಗುಂದದ ಶಾಸನವು ಬನವಾಸಿ ಕದಂಬರ ಸಾಮ್ರಾಜ್ಯದ ಹುಟ್ಟಿನ ಸಂಭವನೀಯ ವಿವರ ನೀಡುತ್ತದೆ. ತಾಳಗುಂದದ ನಿವಾಸಿ ಮಯೂರವರ್ಮನು ತನ್ನ ಅಜ್ಜ ಮತ್ತು ಗುರು ವೀರವರ್ಮನೊಂದಿಗೆ  ವೈದಿಕ ವಿದ್ಯಾರ್ಜನೆಗಾಗಿ ಕಂಚಿಗೆ ಹೋಗುತ್ತಾನೆ. ಅಲ್ಲಿ ಪಲ್ಲವರ ಕಾವಲು ಭಟರೊಂದಿಗೆ ಮನಸ್ತಾಪವಾಗಿ ಅವರಿಂದ ಅವಮಾನಿತನಾಗುತ್ತಾನೆ. ಇದರಿಂದ ಕೋಪಿತನಾಗಿ ಪ್ರತೀಕಾರದ ಪ್ರತಿಜ್ಞೆಗೈದು ಕಂಚಿಯನ್ನು ಬಿಟ್ಟು ವಾಪಸ್ಸು ಬಂದು ಶಸ್ತ್ರಾಭ್ಯಾಸ ಪ್ರಾರಂಭಿಸುತ್ತಾನೆ.  ಸೈನ್ಯ ಕಟ್ಟಿ ಪಲ್ಲವರೊಂದಿಗೆ ದೀರ್ಘಕಾಲದ ಯುದ್ಧ ನಂತರ ಕದಂಬರು ಸ್ವತಂತ್ರ ರಾಜ್ಯ ಘೋಷಿಸಿ ಕದಂಬರನ್ನು ಹತ್ತಿಕ್ಕಲಾರದೆ ಪಲ್ಲವರು ಅವರ ಸ್ವತಂತ್ರ ರಾಜ್ಯವನ್ನು ಒಪ್ಪಬೇಕಾಯಿತು. ಅಂತಿಮವಾಗಿ ಬಾದಾಮಿಯ ಚಾಲುಕ್ಯರಿಂದ ಈ ಸಾಮ್ರಾಜ್ಯ ಪತನವಾಯಿತು. ಅಲ್ಲಿಂದ ಮುಂದೆ ಬಾದಾಮಿ ಚಾಲುಕ್ಯರು ನಂತರ ರಾಷ್ಟ್ರಕೂಟರ  ಕಲ್ಯಾಣಿ ಚಾಲುಕ್ಯರ ಸಾಮಂತರಾಗಿ ಈ ವಂಶ ಮುಂದುವರಿಯಿತು.     ದೇವಸ್ಥಾನದ ಆವರಣದಲ್ಲಿ ಇರುವ ಫಲಕದಲ್ಲಿ ದೇವಸ್ಥಾನ ಕುರಿತ್ತಾದ ಕೆಲವು ಐತಿಹಾಸಿಕ ಮಾಹಿತಿಗಳಿವೆ. ಕದಂಬರ ಕಾಲದ ಮಧುಕೇಶ್ವರ ದೇವಾಲಯ ಕಲ್ಯಾಣ ಚಾಲುಕ್ಯರಿಂದ ಸೋಂದಾ ಅರಸರ ಕಾಲದವರೆಗೆ ಅನೇಕ ವಾಸ್ತು ಸೇರ್ಪಡೆ ಬದಲಾವಣೆಗಳನ್ನು ಮಾಡುತ್ತಾ ಬಂದಿರುವುದು ಇಲ್ಲಿನ ವಾಸ್ತು ಶೈಲಿ  ಮತ್ತು ದೊರಕಿರುವ ೧೨ ಶಾಸನಗಳಿಂದ ತಿಳಿಯಬಹುದಾಗಿದೆ.  ಕದಂಬರು ಶಾತವಾಹನರ ಶಿಲ್ಪ ಕಲಾ ಶೈಲಿಯನ್ನು ಅಳವಡಿಸಿಕೊಂಡರು. ಪೂರ್ವಾಭಿಮುಖವಾಗಿ ಇರುವ ದೇವಾಲಯದ ಚೌಕಾಕಾರ ಗರ್ಭ ಗೃಹದ ಸುತ್ತಲೂ ಪ್ರದಕ್ಷಿಣಾ ಪಥವಿದೆ. ಗರ್ಭಗೃಹದಲ್ಲಿ ಪೀಠದ ಮೇಲೆ ಮಧುಕೇಶ್ವರ ಲಿಂಗವಿದೆ. ಲಿಂಗವು ಜೇನುತುಪ್ಪದ ಬಣ್ಣದಲ್ಲಿದೆ. ಎಡಭಾಗದಲ್ಲಿ ಪಾರ್ವತಿ ದೇವಾಲಯವಿದೆ. ಪೂರ್ವಭಾಗದ ಗೋಡೆಗೆ ಅಂಟಿಕೊಂಡoತೆ ಇರುವ  ೨ ಉಪಗುಡಿಗಳಲ್ಲಿ ಮಹಿಷಮರ್ದಿನಿ ಗಣೇಶನ ಶಿಲ್ಪಗಳಿವೆ ಮತ್ತು ದೊಡ್ಡ ಕಂಬಗಳಿರುವ ವಿಶಾಲ ಮಂಟಪವಿದೆ. ಈ ಎಲ್ಲಾ ರಚನೆಗಳು ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದವುಗಳಾಗಿವೆ. ಈ ಮಂಟಪದ ಮುಂಭಾಗದಲ್ಲಿ ತಿರುಗಣಿ ಯಂತ್ರದಿಂದ ರಚಿತವಾದ  ಅಲಂಕೃತ ಕಂಬಗಳಿರುವ ನವರಂಗವಿದೆ. ಅದರಲ್ಲಿ ಕುಳಿತ ನಂದಿಯ ಶಿಲ್ಪವಿದೆ. ನಂದಿಯ ಒಂದು ಕಣ್ಣು ಮಧುಕೇಶ್ವರನನ್ನು ಇನ್ನೊಂದು ಕಣ್ಣು ಪಾರ್ವತಿಯನ್ನು ನೋಡುತ್ತಿದೆ ನೋಡಿ ಎಂದರು ಅರ್ಚಕರು. ನವರಂಗದ ಸುತ್ತಲೂ ಕಕ್ಷಾಸನವಿದ್ದು ನವರಂಗಕ್ಕೆ ಮೂರು ಪ್ರವೇಶ ದ್ವಾರಗಳಿವೆ. ಇವುಗಳು ಸಹ ಕಲ್ಯಾಣ ಚಾಲುಕ್ಯರ ಕಾಲದ ನಿರ್ಮಿತಿಗಳಾಗಿವೆ. ದೇವಾಲಯದ ಒಳಭಾಗದಲ್ಲಿ ಪ್ರಾಚೀನ ಶಿಲ್ಪ ಶೈಲಿಯ ಲಕ್ಷಣಗಳಿರುವ  ಆದಿಮಾಧವ ಮತ್ತು ಕಾರ್ತಿಕೇಯನ ಶಿಲ್ಪಗಳಿವೆ. ದೇವಾಲಯಕ್ಕೆ ಈಗಿರುವ  ಶಿಖರವು ವಿಜಯನಗರ ಸೋಂದಾ ಅರಸರ ಕಾಲಕ್ಕೆ ಸೇರಿದ್ದು ಸುಖನಾಸಿಯನ್ನು ಹೊಂದಿರುವ ಕದಂಬ ನಾಗರ ಶಿಖರವು ಪಿರಮಿಡ್ಡು ಆಕಾರದಲ್ಲಿ ಮೇಲಕ್ಕೇರುತ್ತದೆ.  ನಾಲ್ಕು ಮೂಲೆಗಳಲ್ಲಿ ನಂದಿ ವಿಷ್ಣುವಿನ ದಶಾವತಾರ ೧೨ ಆದಿತ್ಯರು, ದಿಕ್ಪಾಲಕರು, ನಾಗಬಂಧ ಮತ್ತು ಇತರ ದೇವತೆಗಳ ಗಾರೆ ಶಿಲ್ಪಗಳಿಂದ ಶಿಖರವನ್ನು ಅಲಂಕರಿಸಲಾಗಿದೆ. ನವರಂಗದ ಛಾವಣಿಯ ಸಮತಟ್ಟಾಗಿ ಅದರ ಅಂಚು ಇಳಿಜಾರಿನಿಂದ ಕೂಡಿದೆ. ದೇವಾಲಯದ ಮುಂಭಾಗ ದ್ವಜ ಸ್ಥಂಭವಿದೆ. ಪ್ರಾಕಾರದಲ್ಲಿರುವ ಉಪ ಗುಡಿಗಳಲ್ಲಿ ಸೋಂದಾ ಅರಸರ ಕಾಲದ ದಿಕ್ಪಾಲರು ದುಂಡಿರಾಜ, ಗಣಪತಿ ಚಿಂತಾಮಣಿ ನರಸಿಂಹ ಮತ್ತಿತರ ಶಿಲ್ಪಗಳಿವೆ. ಶಾಸನ ಸಹಿತ ನಾಗಶಿಲ್ಪ ಮತ್ತು ಅಲಂಕೃತ ಶಿಲಾಮಂಟಪದoತಿರುವ ಮಂಟಪವು ದೇವಾಲಯದಲ್ಲಿರುವ ಮುಖ್ಯ ರಚನೆಗಳಾಗಿವೆ. ಆಯತಾಕಾರದ ತೆಳು ಶಿಲಾ ಫಲಕದ ಮಧ್ಯದಲ್ಲಿ ಸುತ್ತಿಕೊಂಡಂತೆ ಇರುವ ೫ ಹೆಡಗಳುಳ್ಳ ನಾಗಶಿಲ್ಪವಿದೆ. ಶಿಲಾಫಲಕದ ಎರಡೂ ಬದಿಯ ಅಂಚಿನಲ್ಲಿ ಕ್ರಿ.ಶ.೨ನೇ ಶತಮಾನಕ್ಕೆ ಸೇರುವ ಬ್ರಾಹ್ಮಿ ಲಿಪಿಯ ಪ್ರಾಕೃತ ಶಾಸನವಿದೆ. ಅದು ಹರಿತಪುತ್ರ ವಿನುಕಡೆ ಚುಟುಕುಲಾನಂದ ಶಾಕಕರ್ಣಿಯ ೧೨ನೇ ಆಳ್ವಿಕೆಯ ವರ್ಷದಲ್ಲಿ ಅವನ ಪುತ್ರಿ ಶಿವಸ್ಕಂದ ನಾಗಶ್ರೀಯು ಒಂದು ಕೆರೆ ಹಾಗೂ ವಿಹಾರದೊಂದಿಗೆ ಈ ಕಲಾತ್ಮಕ ನಾಗಶಿಲ್ಪವನ್ನು ನಿರ್ಮಿಸಿ ಕೊಡುಗೆಯಾಗಿ ನೀಡಿದ್ದಾಗಿ ತಿಳಿಸುತ್ತದೆ. ಸಂಜಯoತಿಯ (ಬನವಾಸಿ) ನಿವಾಸಿ ಅಚಾರ್ಯ ದಾಮೋರಕನ ಶಿಷ್ಯ ನಾಟಕನೆಂಬ ಶಿಲ್ಪಿಯು ಈ ನಾಗಶಿಲ್ಪವನ್ನು ಕೆತ್ತಿದನೆಂದು ಶಾಸನವು ದಾಖಲಿಸಿದೆ.  ಸೋಂದಾ ಅರಸ ಸದಾಶಿವ ನಾಯಕನು (ಕ್ರಿ.ಶ.೧೬ನೇ ಶತಮಾನ) ನಿರ್ಮಿಸಿರುವ ಅತ್ಯಂತ ಸೂಕ್ಷ್ಮ ಕೆತ್ತನೆಗಳಿಂದ ಕೂಡಿದ ತ್ರಿಲೋಕ ಮಂಟಪವೆಂದು ಕರೆಯಲಾಗುವ ಶಿಲೆಯು ನವರಂಗದಲ್ಲಿದೆ. ರಘುನಾಥ ನಾಯಕ (ಕ್ರಿ.ಶ.೧೬೨೮) ಕೊಡುಗೆಯಾಗಿ ನೀಡಿದ ಶಿಲಾಮಂಟಪದಲ್ಲಿ ಗಿಡ, ಬಳ್ಳಿ, ಪ್ರಾಣಿ  ಮತ್ತು ಜಾಮಿತಿಯ ಅಲಂಕರಣಿಗಳಿಂದ ಕೂಡಿದ ಸೂಕ್ಷ್ಮ ಕೆತ್ತನೆಗಳಿವೆ. ಇಲ್ಲಿನ ಗಣೇಶನ ಅರ್ಧಬಾಗ ಮಾತ್ರ ಇರುವ ಮೂರ್ತಿ ಇದರ ಇನ್ನರ್ದ ವಾರಣಾಸಿಯಲ್ಲಿದೆಯಂತೆ.   ದೇವಾಲಯ ಸಮುಚ್ಛಯದ ಪೂರ್ವ ಭಾಗದಲ್ಲಿರುವ ಮುಖ್ಯ ಪ್ರವೇಶ ದ್ವಾರದಲ್ಲಿರುವ ಮೆಟ್ಟಿಲುಗಳ ಕೈಪಿಡಿ ಗೋಡೆಗಳನ್ನು ಎರಡು ಅಲಂಕೃತ ಆನೆಗಳ ಶಿಲ್ಪಗಳಿಂದ ಕೆತ್ತಲಾಗಿದೆ.  ಇಲ್ಲಿಯ ಕಲ್ಲಿನ ಮಂಚ ಪ್ರಧಾನ ಆಕರ್ಷಣೆಗಳಲ್ಲೊಂದು. ಬನವಾಸಿ ಪರಿಸರದಲ್ಲಿ ಸಾಮಾನ್ಯ ಅಲಂಕರಣೆಗಳ  ಆದಿ ಕದಂಬರೇಶ್ವರ, ಆದಿ ಮಧುಕೇಶ್ವರ, ಅಲ್ಲಮಪ್ರಭು  ದೇವಾಲಯಗಳಿವೆ. ನಾವು ದೇವಸ್ಥಾನದಿಂದ ಹೊರಬಂದಾಗ ಕತ್ತಲು ಆವರಿಸುತ್ತಿತ್ತು. ದೇವಾಲಯದ ಹೊರಬಾಗದಲ್ಲಿ ಎರಡು ರಥಗಳನ್ನು ಎತ್ತರಕ್ಕೆ ಮನೆ ನಿರ್ಮಿಸಿ ನಿಲ್ಲಿಸಲಾಗಿದೆ. ಈಗ ರಥೋತ್ಸವಕ್ಕೆ ಹೊಸ ರಥ ಬಳಸಲಾಗುತ್ತಿದ್ದು ಹಳೆಯ ರಥವನ್ನು ಸಂರಕ್ಷಿಸಲಾಗಿದೆ. ಹೊರಗಡೆ ಒಂದು  ಸುತ್ತು ಹಾಕಿ ನಡೆದುಕೊಂಡೆ ಬಸ್‌ಸ್ಟ್ಯಾಂಡ್‌ಗೆ  ಬಂದೆವು. ಕೆಲಹೊತ್ತಿಗೆ ಬಸ್ಸು ಬಂತು. ಹತ್ತಲು ಹೋದೆವು. ದೇವಸ್ಥಾನಕ್ಕೆ ಹೋಗಿ ಬರುತ್ತೇವೆ ಇಲ್ಲೇ ಇರಿ ಎಂದ ಕಂಡಕ್ಟರ್ ಮೇಡಂ ಹತ್ತಿಸಿಕೊಳ್ಳಲಿಲ್ಲ. ಕದಂಬ ಸೈನ್ಯ ಅಧ್ಯಕ್ಷರು ಬೇಕ್ರಿ ರಮೇಶ್ ನಮಗೆ ಬನವಾಸಿಯ ಗುತ್ಯಪ್ಪ ಮಾದರ್ ಕಪ್ಪಗೇರಿ ಅವರ ಪೋನ್ ನಂಬರ್ ನೀಡಿದ್ದರು. ನಾವು ಬಸ್ ಕಾಯುವಾಗ ಗುತ್ಯಪ್ಪರು ಪೋನ್ ಮಾಡಿ ನಮ್ಮನ್ನು ಗುರುತಿಸಿ   ಮಾತನಾಡಿಸಲು ಬಂದರು. ಅಷ್ಟರಲ್ಲಿ ದೇವಸ್ಥಾನದಿಂದ ಬಸ್ಸು ಬಂತು. ನಾಳೇ ಭುವನಗಿರಿಯಲ್ಲಿ ಭೇಟಿಯಾಗೋಣ ಎಂದು ಗುತ್ಯಪ್ಪರಿಗೆ ವಿಶ್ ಮಾಡಿ ಶಿರಸಿ ಬಸ್ಸು ಹತ್ತಿದವು. ಗೊರೂರು ಅನಂತರಾಜು, ಹಾಸನ.

“ಐತಿಹಾಸಿಕ ಬನವಾಸಿ ಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ”ಗೊರೂರು ಅನಂತ ರಾಜು ಹಾಸನ. Read Post »

ಇತರೆ

“ಮಕರ ಸಂಕ್ರಮಣ ಕ್ಯಾಲೆಂಡರ್ ವರ್ಷದ ಮೊದಲ ಹಬ್ಬ”‌ ವೀಣಾ ಹೇಮಂತ್‌ ಗೌಡ ಪಾಟೀಲ್

ಸಂಕ್ರಾಂತಿ ಸಂಗಾತಿ ವೀಣಾ ಹೇಮಂತ್‌ ಗೌಡ ಪಾಟೀಲ್ “ಮಕರ ಸಂಕ್ರಮಣ ಕ್ಯಾಲೆಂಡರ್ ವರ್ಷದ ಮೊದಲ ಹಬ್ಬ”‌ ಭಾರತ ದೇಶ ಹಲವು ಭಾಷೆಗಳ ಹಲವು ಜಾತಿಗಳ ನೂರಾರು ಸಂಸ್ಕೃತಿಗಳ ನೆಲೆವೀಡು. ಒಂದು ಮಾಹಿತಿಯ ಪ್ರಕಾರ ಪ್ರತಿ ೪೦ ಕಿಲೋಮೀಟರಿಗೆ ಒಮ್ಮೆ ಈ ದೇಶದ ಜನರು ಮಾತನಾಡುವ ಭಾಷೆ, ಸಂಸ್ಕೃತಿ, ನೆಲ,ಜಲ, ರೀತಿ ನೀತಿಗಳು ಬದಲಾಗುತ್ತದೆ. ಭಾವನೆಗಳು, ಬಣ್ಣಗಳು, ಭಾಷೆಗಳು, ಜಾತಿ ಧರ್ಮಗಳು ಬದಲಾದರೂ ಬಹುತೇಕ ಎಲ್ಲ ಸಂಪ್ರದಾಯಗಳ ಹೂರಣವು ಒಂದೇ ಅದು ಭಾವೈಕ್ಯತೆ. ಇಲ್ಲಿ ಹಿಂದೂ ದೇವರನ್ನು ಪೂಜಿಸುವ, ಗಣೇಶೋತ್ಸವದಲ್ಲಿ ಪಾಲ್ಗೊಳ್ಳುವ ಮುಸಲ್ಮಾನರಿದ್ದಾರೆ. ದರ್ಗಗಳಿಗೆ ಹೋಗುವ, ಸಕ್ಕರೆ ಓದಿಸುವ, ಮೊಹರಂ ಹಬ್ಬದ ಕುಣಿತಗಳಲ್ಲಿ ಮಕ್ಕಳನ್ನು ತೊಡಗಿಸುವ, ಫಕೀರರನ್ನಾಗಿಸುವ ಹಿಂದುಗಳಿದ್ದಾರೆ. ನಾವು ದೇವಸ್ಥಾನಗಳಿಗೆ ಹೋಗುವಷ್ಟೇ ಸಲೀಸಾಗಿ ದರ್ಗಗಳಿಗೂ ಹೋಗುತ್ತೇವೆ ಚರ್ಚುಗಳಿಗೂ ಹೋಗುತ್ತೇವೆ. ಇದು ಭವ್ಯ ಭಾರತದ ಪರಂಪರೆ ಸಾವಿರಾರು ವರ್ಷಗಳಿಂದಲೂ ಇದು ನಡೆದು ಬಂದಿದೆ.ಭಾರತದಲ್ಲಿ ಅಮಾವಾಸ್ಯೆಗೊಂದು ಹುಣ್ಣಿಮೆ ಗೊಂದು ಹಬ್ಬಗಳು ಬರುತ್ತವೆ. ಹಬ್ಬಗಳು ನಮ್ಮ ಸಂಸ್ಕೃತಿಯ, ನೆಲದ ಪ್ರತೀಕ. ಯುಗಾದಿ ನಮ್ಮ ಹೊಸ ವರ್ಷವಾದರೆ ಶಿವರಾತ್ರಿ ನಮ್ಮ ವರ್ಷದ ಕೊನೆಯ ಹಬ್ಬ. ಎಳ್ಳ ಅಮವಾಸೆ, ಶೀಗಿ ಹುಣ್ಣಿಮೆ, ಸಂಕ್ರಾಂತಿಗಳು ನಮ್ಮ ರೈತರ ಮುಖ್ಯ ಹಬ್ಬಗಳು. ಅದರಲ್ಲೂ ಸಂಕ್ರಾಂತಿ ಹಬ್ಬ ರೈತ ತಾನು ಬೆಳೆದ ಬೆಳೆಯನ್ನು ಕೊಯ್ದು ಒಕ್ಕಲು ಮಾಡುವ, ರಾಶಿ ಮಾಡುವ ಹಬ್ಬ.ಹಿಂದೂ ಪಂಚಾಂಗದ ಪ್ರಕಾರ ಜೂನ್ 22 ರಂದು ಸೂರ್ಯನು ಉತ್ತರಾಯಣದಿಂದ ದಕ್ಷಿಣಾಯಣದ ಕಡೆಗೆ ಪಥವನ್ನು ಬದಲಿಸಿದರೆ ಜನವರಿ 14ರಂದು ದಕ್ಷಿಣಾಯಣದಿಂದ ಉತ್ತರಾಯಣದ ಕಡೆಗೆ ಪಥವನ್ನು ಬದಲಾಯಿಸುತ್ತಾನೆ. ಅದು ಮಕರ ರಾಶಿಯ ದಿನ. ಈ ಜನವರಿ ತಿಂಗಳಲ್ಲಿ 14 ಇಲ್ಲವೇ 15ನೇ ತಾರೀಕಿನಂದು ಬರುವ ಈ ದಿನವನ್ನು ಸಂಕ್ರಾಂತಿ, ಸಂಕ್ರಮಣ, ಮಕರ ಸಂಕ್ರಾಂತಿ ಎಂದು ಕರೆಯುತ್ತಾರೆ.ಈ ಹಬ್ಬವನ್ನು ವಿವಿಧ ರಾಜ್ಯಗಳಲ್ಲಿ ಒಂದೊಂದು ಹೆಸರಿನಲ್ಲಿ ಕರೆಯಲಾಗುತ್ತದೆ. ಕರ್ನಾಟಕದಲ್ಲಿ ಸುಗ್ಗಿ, ತಮಿಳುನಾಡಿನಲ್ಲಿ ಪೊಂಗಲ್, ಕೇರಳದಲ್ಲಿ ಮಕರವಿಳಕ್ಕು ಹಾಗೂ ತೆಲುಗು ರಾಜ್ಯಗಳಾದ ಆಂಧ್ರ, ತೆಲಂಗಾಣದಲ್ಲಿ ಭೋಗಿ ಹಬ್ಬವನ್ನಾಗಿ ಆಚರಿಸುತ್ತಾರೆ. ಮಕರ ಸಂಕ್ರಮಣದ ದಿನದಂದು ಕೇರಳದ ಶಬರಿಮಲೆಯ ಅಯ್ಯಪ್ಪನ ದೇವಸ್ಥಾನದಲ್ಲಿ ವಿಶೇಷ ಪೂಜೆ-ಪುನಸ್ಕಾರಗಳು ನಡೆಯುತ್ತವೆ.  ಸಂಜೆ ಮಕರ ಜ್ಯೋತಿ ದರ್ಶನ ಹಿನ್ನೆಲೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಜ್ಯೋತಿ ದರ್ಶನ ಪಡೆಯುವುದು ವಾಡಿಕೆ.  ಈ ದಿನದಂದು ಬೆಳಿಗ್ಗೆ ಬೇಗನೆ ಏಳುವ ಮನೆಯ ಕಿರಿಕಿರಿಯ ಸದಸ್ಯರೆಲ್ಲ ತಲೆಗೆ ಎಣ್ಣೆಯನ್ನು ಹಚ್ಚಿ  ಸಾಬೂನಿನ ಬದಲು ಎಳ್ಳು ಪುಡಿಯನ್ನು ಹಚ್ಚಿ ಸ್ನಾನ ಮಾಡುತ್ತಾರೆ. ವೈಜ್ಞಾನಿಕವಾಗಿ ಹೇಮಂತ ಋತುವಿನ ಕುಳಿರ್ಗಾಳಿಗೆ ಮೈಯಲ್ಲಿನ ಎಣ್ಣೆಯ ಅಂಶ ಮಾಯವಾಗಿ ಚರ್ಮ ವಿಪರೀತ ಶುಷ್ಕವಾಗಿರುತ್ತದೆ. ಹೀಗೆ ಶುಷ್ಕವಾದ ಚರ್ಮಕ್ಕೆ ಕಾಲಕಾಲಕ್ಕೆ ಹಬ್ಬದ ನೆಪದಲ್ಲಿ ಎಳ್ಳಿನ ಸೇವನೆ, ಎಣ್ಣೆಯ ಲೇಪನ ಮಾಡುವ ಮೂಲಕ ಚರ್ಮದ ಮೃದುತ್ವಕ್ಕೆ ಕಾರಣವಾಗುತ್ತವೆ  ನಮ್ಮ ಸಂಪ್ರದಾಯಗಳು. ಆಹಾರದಲ್ಲಿಯೂ ಅಷ್ಟೇ ಹುರಿದ ಎಳ್ಳು ಮತ್ತು ಹುರಿದ ಕಡಲೆ ಬೀಜ ಇಂದಿನ ಪ್ರಮುಖ ಆಹಾರವಾಗಿ ಬಳಸಲ್ಪಡುತ್ತದೆ.ಎಳ್ಳಮಾವಾಸೆಯಿಂದ ಹಿಡಿದು ಸಂಕ್ರಮಣದವರೆಗೆ ಒಂದಲ್ಲ ಒಂದು ಕಾರಣದಿಂದ ಎಳ್ಳು ಮತ್ತು ಶೇಂಗಾ (ನೆಲಗಡಲೆ) ಬಳಸುತ್ತ ದೇಹದಲ್ಲಿ ಜಿಡ್ಡಿನ ಅಂಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ  ಹಬ್ಬಗಳ ಹೆಸರಿನಲ್ಲಿ ಕಡ್ಡಾಯವಾಗಿ ನಾವು ಈ ಸಂಪ್ರದಾಯವನ್ನು ಪಾಲಿಸುತ್ತೇವೆ. ಉತ್ತರ ಭಾರತದಲ್ಲಿ ನದಿಗಳು ಮತ್ತು ಸಮುದ್ರಗಳಲ್ಲಿ ಸ್ನಾನ, ಸೂರ್ಯದೇವನಿಗೆ ಪೂಜೆ, ಗಾಳಿಪಟಗಳನ್ನು ಹಾರಿಸುವ ಮೂಲಕ ಈ ಹಬ್ಬವನ್ನು ಆಚರಿಸಿದರೆ, ದಕ್ಷಿಣ ಭಾರತದಲ್ಲಿ ಅದರಲ್ಲೂ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳಗಳಲ್ಲಿ ಸುಗ್ಗಿಯಾಗಿ ಈ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಮನೆ ಮನೆಗಳಲ್ಲಿ ಕಬ್ಬು, ಜೋಳದ ದಂಟುಗಳನ್ನು ತಲೆಬಾಗಿಲಿಗೆ ಕಟ್ಟಿ ಶೃಂಗರಿಸಿ ದನಗಳಿಗೆ ಸ್ನಾನ ಮಾಡಿಸಿ ಅವುಗಳ ಕೊಂಬುಗಳಿಗೆ ಬಣ್ಣ ಹಚ್ಚಿ ಸಿಂಗರಿಸುತ್ತಾರೆ. ಮನೆ ಮಂದಿಯೆಲ್ಲ ಎಳ್ಳು ಹಚ್ಚಿ ಅಭ್ಯಂಗಸ್ನಾನ ಮಾಡುತ್ತಾರೆ. ಮನೆಯ ದೇವರಿಗೆ ಮತ್ತು ಸೂರ್ಯದೇವನಿಗೆ ಪೂಜಿಸಿ ಹೊಸ ಅಕ್ಕಿಯಿಂದ ತಯಾರಿಸಿದ ಪೊಂಗಲ್, ಅಕ್ಕಿ ಪಾಯಸ ಮುಂತಾದ ವಿಶೇಷ ಅಡುಗೆಗಳನ್ನು ದೇವರಿಗೆ ನೈವೇದ್ಯ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ವಿಧ ವಿಧ ತರಕಾರಿಗಳ ಅಡುಗೆ, ಎಳ್ಳು ಹೋಳಿಗೆ, ಶೇಂಗಾ ಹೋಳಿಗೆ, ಸಿಹಿ ಪೊಂಗಲ್, ಖಾರದ ಪೊಂಗಲ್, ಚಿತ್ರಾನ್ನ ಮೊಸರನ್ನ ಜೊತೆಗೆ ಹಬ್ಬದ ವೈಶಿಷ್ಟ್ಯವೆಂಬಂತೆ (ಕೆಲವೆಡೆ ಎಲ್ಲಾ ರೀತಿಯ ಸೊಪ್ಪುಗಳನ್ನು ಹಾಕಿ) ಗೆಣಸು, ಗಜ್ಜರಿ, ಬದನೆಕಾಯಿ, ಚಳ್ಳವರೆ ಮತ್ತು ಕುಂಬಳಕಾಯಿಯನ್ನು ಚೆನ್ನಾಗಿ ಕುದಿಸಿ ಅದನ್ನು ನುಣ್ಣಗೆ ಅರೆದು ಹಸಿಮೆಣಸಿನಕಾಯಿ  ಹಾಕಿ ಉಪ್ಪು ಬೆಲ್ಲ ಮತ್ತು ಎಳ್ಳಿನ ಪುಡಿಯನ್ನು ಹಾಕಿ ಕುದಿಸಿದ ಬರ್ಥವನ್ನು ತಯಾರು ಮಾಡುತ್ತಾರೆ  ಇದು ಆರೋಗ್ಯಕ್ಕೆ ಪುಷ್ಟಿದಾಯಕವೂ ಹಿತಕರವೂ ಹೌದು. ಇದನ್ನು  ಚಪಾತಿ, ತೆಳ್ಳಗೆ ಎಳ್ಳು ಮೆಣಸಿನ ಬೀಜ ಹಾಕಿ ಬಡಿದು ತಯಾರಿಸಿದ ಜೋಳದ ಮತ್ತು ಸಜ್ಜೆಯ ರೊಟ್ಟಿಗಳ ಜೊತೆಗೆ ತಿನ್ನಬಹುದು. ಇನ್ನು ಕೆಲವರು ಮನೆಯಲ್ಲಿ ಅಡುಗೆ ಮಾಡಿಕೊಂಡು ಹತ್ತಿರದ ನದಿ ತೀರಗಳಿಗೆ ಹೋಗಿ ಅಲ್ಲಿಯೇ ನದಿಯಲ್ಲಿ ಸ್ನಾನ ಮಾಡಿ ಗಂಗಾಮಾತೆಯನ್ನು, ಸೂರ್ಯ ದೇವರನ್ನು ಪೂಜಿಸಿ, ತಾವು ಮನೆಯಲ್ಲಿ ತಯಾರಿಸಿ ತಂದ ನೈವೇದ್ಯವನ್ನು ಅರ್ಪಿಸಿ ಬಂದು ಬಾಂಧವರೊಂದಿಗೆ ನದಿ ತೀರದಲ್ಲಿಯೇ ಊಟ ಮಾಡಿ ಸಂತಸ ಪಡುತ್ತಾರೆ. ಪುಣ್ಯಕ್ಷೇತ್ರ ದರ್ಶನದ ಜೊತೆ ಒಂದು ಸಂತಸದ ವನವಿಹಾರವು ನಡೆದು ಹೋಗುತ್ತದೆ. ನಂತರ ಸಾಯಂಕಾಲದ ಸಮಯದಲ್ಲಿ ಹುರಿದ ಎಳ್ಳು, ಹುರಿದ ಕಡಲೆ ಬೀಜ, ಕೊಬ್ಬರಿ, ಬೆಲ್ಲದ ಅತ್ಯಂತ ಚಿಕ್ಕ ತುಂಡುಗಳು ಇಲ್ಲವೇ ಸಕ್ಕರೆಯ ಪುಡಿ, ಏಲಕ್ಕಿ ಪುಡಿ ಹಾಗೂ ಬಣ್ಣ ಬಣ್ಣದ ಕುಸುರೆಳ್ಳು (ಎಳ್ಳು ಸಕ್ಕರೆಯ ಪಾಕದಿಂದ ತಯಾರಿಸಿದ ಮಿಶ್ರಣ) ಸೇರಿಸಿದ ಮಿಶ್ರಣವನ್ನು ಈಗಾಗಲೇ ದೇವರಿಗೆ ನೈವೇದ್ಯ ಮಾಡಿರುವುದರಿಂದ ಸಂಜೆ ಮನೆಮನೆಗೂ ತೆರಳಿ ಒಬ್ಬರಿಗೊಬ್ಬರು ಪರಸ್ಪರ ಕೊಟ್ಟು ಕೊಂಡು ಎಳ್ಳು ಬೆಲ್ಲ ತಗೊಂಡು ಒಳ್ಳೆದನ್ನೇ ಮಾತಾಡೋಣ ಎಂದು ಹೇಳಿಕೊಳ್ಳುತ್ತಾರೆ. ಇಲ್ಲಿಯೂ ಕೂಡ ಕಹಿಯಾದ ಎಳ್ಳು ಮತ್ತು ಸಿಹಿಯಾದ ಬೆಲ್ಲ ನಮ್ಮ ಬದುಕಿನ ನೋವು ನಲಿವಿನ ದೃಷ್ಟಾಂತಗಳು. ಎಷ್ಟೇ ಕಷ್ಟ ಬಂದರೂ ಎದೆಗುಂದದೆ ಎಷ್ಟೇ ಸುಖ ಬಂದರೂ ತಗ್ಗದೆ ಎಳ್ಳು ಬೆಲ್ಲದ ಮಿಶ್ರಣದಂತೆ ಸುಖ ದುಃಖಗಳನ್ನು ಸಮನಾಗಿ ಸ್ವೀಕರಿಸಬೇಕು ಎಂಬ ಸಂದೇಶವನ್ನು ಈ ಹಬ್ಬ ನಮಗೆ ನೀಡುತ್ತದೆ. ಮೈಸೂರು ಭಾಗದಲ್ಲಿ ಕಬ್ಬಿನ ತುಂಡುಗಳನ್ನು, ಬೆಲ್ಲದ ಅಚ್ಚು ಸಕ್ಕರೆಯ ಅಚ್ಚು ಕುಸುರೆಳ್ಳು ಕೊಬ್ಬರಿಯ ಬಾಗಿನವನ್ನು ಚಿಕ್ಕ ಮಕ್ಕಳು ಮನೆ ಮನೆಗೆ ಹೋಗಿ ಕೊಟ್ಟು ಬರುತ್ತಾರೆ. ಇನ್ನು ಕೆಲವು ಕಡೆ ಚಿಕ್ಕ ಮಕ್ಕಳನ್ನು ಮನೆಯ ಮುಖ್ಯ ಹೊಸ್ತಿಲಿನ ಮೇಲೆ ಕೂಡಿಸಿ ಚಿನ್ನದ ಸರ ಉಂಗುರ ಹವಳ ಮುತ್ತು ಹುಳಿ ಕಡಲೆಕಾಯಿ, ಮಂಡಕ್ಕಿ ಬೆಂಡು ಬೆತ್ತಾಸಗಳ ಮತ್ತಿತರ ವಿವಿಧ ಬಗೆಯ ಹಣ್ಣುಗಳನ್ನು ಒಂದು ಸೇರಿನಲ್ಲಿ ತುಂಬಿ ಮಗುವಿನ ತಲೆಯ ಮೇಲೆ ಸುರಿದು ಆರತಿ ಮಾಡುತ್ತಾರೆ. ಇದನ್ನು ಹಣ್ಣೆರೆಯುವುದು ಎಂದು ಕರೆಯುತ್ತಾರೆ. ಇದು ಮಕ್ಕಳ ವಿಶೇಷ ಆರೋಗ್ಯ, ಆಯುಸ್ಸು ಮತ್ತು ಶ್ರೇಯೋಭಿವೃದ್ಧಿಗಾಗಿ ಮಾಡುವ ಹಬ್ಬ.ಇಂಗ್ಲಿಷ್ ಕ್ಯಾಲೆಂಡರ್ ತಿಂಗಳ ಮೊದಲ ಹಬ್ಬಸಂಕ್ರಾಂತಿಯ ಶುಭಾಶಯಗಳು…..ಬನ್ನಿ ಎಳ್ಳು ಬೆಲ್ಲ ತಿಂದು ಒಳ್ಳೆಯದನ್ನೆ ಮಾತನಾಡೋಣ. ವೀಣಾ ಹೇಮಂತ್ ಗೌಡ ಪಾಟೀಲ್ 

“ಮಕರ ಸಂಕ್ರಮಣ ಕ್ಯಾಲೆಂಡರ್ ವರ್ಷದ ಮೊದಲ ಹಬ್ಬ”‌ ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

You cannot copy content of this page

Scroll to Top