ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ

ಮನ್ಸೂರ್ ಮುಲ್ಕಿ  ಅವರ ಕವಿತೆ “ಕಣ್ಣ ನೋಟ”

ಕಾವ್ಯ ಸಂಗಾತಿ ಮನ್ಸೂರ್ ಮುಲ್ಕಿ  “ಕಣ್ಣ ನೋಟ” ರಾತ್ರಿ ನೀಲ ಗಗನದಲ್ಲೂ ಬಿಸೋ ಗಾಳಿ ಮಳೆಯಲ್ಲೂಚಂದಿರನು ಹೊಳೆಯುತಾನ.ನಿನ್ನ ಕಣ್ಣ ನೋಟದಾಂಗ ನನ್ನ ಹೃದಯ ಮಾತಿನಾಂಗಮನಸು ಸೇರಿ ಕನಸು ನೀಡುತಾವಾ… ಚುಕ್ಕಿ ಬೆಳಕ ಹೊಳಪಿನಲ್ಲೂ ಕಡಲ ತಟದ ತೀರದಲ್ಲೂಮನುಜ ಪ್ರೀತಿ ಕಾಣುತಾನಾ..ಒಲವ ಕಾಣೋ ಹೃದಯದಲ್ಲಿ ಮುತ್ತಿನಂತ ಮಾತಿನಲ್ಲಿನಗುವು ತಾನೇ ಮೂಡುತಾವ. ಬಳ್ಳಿ ಹೂವ ಕಾಣುವಾಗ ಮುಡಿಗೆ ತಾನೇ ಇರಿಸುವಾಗತನ್ನ ಚೆಲುವ ಬೀರುತಾವ…ಗೆಜ್ಜೆ ಶಬ್ದ ಮಾಡಿಕೊಂಡು ನೀಲ ಜಡೆಯ ಬೀಸಿಕೊಂಡುಬಿಂಕದಲ್ಲಿ ನಡೆಯುತಾವ… ಪಚ್ಚಾ ಪೈರು ಹುಲ್ಲಿನಲ್ಲೂ ಅರಳುತ್ತಿರುವ ಹೂವಿನಂತೆತನ್ನ ಸೊಗಸ ಚೆಲ್ಲುತಾವ..ಅವಳ ನಡೆಯ ನುಡಿಯಲ್ಲಿಸುಗಂಧ ಪರಿಮಳ ಬೀರುತಾವ… ಮನ್ಸೂರ್ ಮುಲ್ಕಿ 

ಮನ್ಸೂರ್ ಮುಲ್ಕಿ  ಅವರ ಕವಿತೆ “ಕಣ್ಣ ನೋಟ” Read Post »

ಕಾವ್ಯಯಾನ

ನಾಗರಾಜ ಬಿ. ನಾಯ್ಕ ಅವರ “ಕಥೆಗೆ ಒಂದು ಚಿತ್ರ……”

ಕಾವ್ಯ ಸಂಗಾತಿ ನಾಗರಾಜ ಬಿ. ನಾಯ್ಕ “ಕಥೆಗೆ ಒಂದು ಚಿತ್ರ……” ಚಿತ್ರ ಗೆರೆ ಬದುಕುಮೂರು ಒಂದು ಕಥೆಯ ದಾರಿಯಾರೋ ನಡೆದು ಹೋದಂತೆಇನ್ನಾರೋ ಹಿಂಬಾಲಿಸಿದಂತೆಕೆಲವು ಚಿತ್ರಗಳು ಮುಂದೆಓಡಿದಂತೆ ಕಾಲದ ಓಟಕ್ಕೆತೆಗೆವ ತರತರದ ಚಿತ್ರಗಳುಬಣ್ಣದ ಎಳೆಗಳ ಹೊದಿಕೆಕಾಣದ ಮುಖ ಪುಟಅಂದುಕೊಳ್ಳುವ ಸಲಿಗೆದೂರ ನಿಂತ ನಿಲುವುಹಸಿರಿನಿಂದ ಹುಟ್ಟಿದಸಸಿಯೊಂದು ಹಸಿರು ಹರಡಿಹಗೆರೆಗಳ ಚಿತ್ರಮೋಡದ ಮೇಲೊಂದು ಕುಳಿತಹನಿ ಮೋಡದ ಸನಿಹಚಿಟ್ಟೆ ಹೆಜ್ಜೆಯ ಗುರುತುಹಕ್ಕಿ ಗೂಡಿನ ಹಾಡುಮುಳುಗುವ ದಿಗಂತದಿಸಾಗುವ ಪುಟ್ಟ ದೋಣಿಹುಲ್ಲು ಹೊರೆಯ ನಡುವೆಮಗುವಿಗೆ ಕಟ್ಟಿಟ್ಟಅಮ್ಮನ ಹಸಿವೆಯ ರೊಟ್ಟಿಅಪ್ಪನ ಕಿಸೆಯಂಚಿನಲ್ಲಿಕುಳಿತ ಸೊಪ್ಪು ಕಟ್ಟಿನ ಬಾಕಿಯಾರಿಗೂ ಕಾಯದೇಹೊರಡುವ ಬಸ್ಸಿನ ಪಯಣದೂರ ದಾರಿಯ ನಡುವೆಇಳಿವ ಗುರುತಿಗೆಕಾಣುವ ಸಣ್ಣ ದಣಪೆಯಕೇಳದ ಕಥೆಗಳುಎಲ್ಲವೂ ವಾಸ್ತವದಚಿತ್ರದ ಕವಿತೆಗಳು ನಾಗರಾಜ ಬಿ. ನಾಯ್ಕ

ನಾಗರಾಜ ಬಿ. ನಾಯ್ಕ ಅವರ “ಕಥೆಗೆ ಒಂದು ಚಿತ್ರ……” Read Post »

ಕಾವ್ಯಯಾನ

ವನಜ ಮಹಾಲಿಂಗಯ್ಯ  ಅವರ ಕವಿತೆ “ಉದುರಿದ ಹೂವಿನ ಕಥೆ”

ಕಾವ್ಯ ಸಂಗಾತಿ ವನಜ ಮಹಾಲಿಂಗಯ್ಯ  “ಉದುರಿದ ಹೂವಿನ ಕಥೆ” ಮರಳಿನ ದೇಶ ರಾಜಸ್ಥಾನದಲ್ಲಿಒಂದು ಚಿಕ್ಕ ಚಿಲುಮೆ ಹೂವು ಅರಳಿತ್ತುಹೆಸರು ಹೇಳುವ ಮೊದಲೇಅಮಾನುಷತೆಯ ಕತ್ತಿ ಅದನ್ನು ಕತ್ತರಿಸಿತು ಅವಳ ಕೈಯಲ್ಲಿ ಬಳೆ ಇರಬೇಕಿತ್ತುಕಾಲಲ್ಲಿ ಗೆಜ್ಜೆ ಸದ್ದು ಇರಬೇಕಿತ್ತುಬದಲಾಗಿ ಮೌನ ಮತ್ತು ಕಣ್ಣೀರು ಮಾತ್ರ ಉಳಿದವು ಯಾರ ಮಗಳೋ, ಯಾರ ಅಕ್ಕನೋಯಾರ ತಂಗಿಯೋ ಅವಳುಕನಸು ಕಾಣುವ ವಯಸ್ಸಲ್ಲಿ  ಕತ್ತಲೆಗೆ ತಳ್ಳಲಾಯಿತು ಆಕಾಶವೂ ಇಂದು ಅಳುತ್ತಿದೆಗಾಳಿಯೂ ನಾಚುತ್ತಿದೆಏಕೆಂದರೆ ನಾವಿನ್ನೂ ಮನುಷ್ಯರಾಗಿಲ್ಲ ಆ ಹೂವು ಉದುರಿದ್ದು ವ್ಯರ್ಥವಾಗಬಾರದುಪ್ರತಿಯೊಂದು ಮನೆಯಲ್ಲಿ ಹೆಣ್ಣು ಸುರಕ್ಷಿತವಾಗುವವರೆಗೆನಮ್ಮ ಹೋರಾಟ ನಿಲ್ಲಬಾರದು ನ್ಯಾಯ ಬೇಕು..ಇನ್ನೊಂದು ಉದುರಿದ ಹೂವಿನ ಕಥೆ ಬೇಡ.. ವನಜ ಮಹಾಲಿಂಗಯ್ಯ 

ವನಜ ಮಹಾಲಿಂಗಯ್ಯ  ಅವರ ಕವಿತೆ “ಉದುರಿದ ಹೂವಿನ ಕಥೆ” Read Post »

ಕಾವ್ಯಯಾನ

ಎನ್. ಜಯಚಂದ್ರನ್ ದಾಂಡೇಲಿ “ಬದುಕೇ ಅಮರತ್ವ”

ಕಾವ್ಯ ಸಂಗಾತಿ ಎನ್. ಜಯಚಂದ್ರನ್ ದಾಂಡೇಲಿ “ಬದುಕೇ ಅಮರತ್ವ” ಸಾವಿನ ದಡದಾಚೆಯೂಬೆಳಕಾಗಿ ಉಳಿಯುವ ಹೆಜ್ಜೆಯೇ ಅಮರತ್ವ,ಕಾಲದ ಮರಳಿನ ಮೇಲೆಅಳಿಯದ ಗುರುತು ಬಿಡುವ ಬದುಕೇ ಅಮರತ್ವ. ಉಸಿರು ನಿಲ್ಲಬಹುದು,ದೇಹ ಮಣ್ಣಿನಲ್ಲಿ ಬೆರೆತು ಹೋಗಬಹುದು,ಆದರೆ ;ಸತ್ಕಾರ್ಯದ ಸುಗಂಧಯುಗಗಳವರೆಗೂ ಹರಡಬಹುದು. ಮರವು ಬಿದ್ದು ಹೋದರೂಅದರ ಬೀಜ ಕಾಡಾಗಿ ಬೆಳೆಯುವಂತೆ,ಮನುಜನ ದೇಹ ಮರೆಯಾದರೂ ;ಅವನ ಚಿಂತನೆಗಳು ಜೀವಂತವಾಗಿರುತ್ತವೆ. ಕವಿಯು ಬರೆದ ಸಾಲುಗಳಲ್ಲಿ,ವೀರನ ರಕ್ತದ ತ್ಯಾಗದಲ್ಲಿ,ತಾಯಿಯ ಮಮತೆಯ ಸ್ಪರ್ಶದಲ್ಲಿ,ಗುರುವಿನ ಜ್ಞಾನದ ಬೆಳಕಿನಲ್ಲಿಅಮರತ್ವ ಮೌನವಾಗಿ ಅರಳುತ್ತದೆ. ಅದು ದೇವರ ವರವಲ್ಲ,ಮಾನವನ ಕರ್ಮದ ಫಲವೂ ಅಲ್ಲ ,ಸ್ವಾರ್ಥದಾಚೆ ಬದುಕಿದಆತ್ಮದ ಹುಸಿ ಕಲ್ಪನೆಯೂ ಅಲ್ಲ ;ಅಮರತ್ವ ಎಂಬುದು ಕಾಯ ಕಾಯಕಗಳಶಾಶ್ವತ ಪ್ರತಿಫಲ ಕಾಲವು ಎಲ್ಲವನ್ನೂ ಕಸಿದುಕೊಳ್ಳಬಹುದು,ಆದರೆ ಪ್ರೀತಿಯಿಂದ ಕಟ್ಟಿದ ನೆನಪುಗಳನ್ನು ಅಲ್ಲ;ಸತ್ಯಕ್ಕಾಗಿ ಬದುಕಿದ ಜೀವವನ್ನು ಅಲ್ಲ,ಮಾನವೀಯತೆಯ ಜ್ಯೋತಿಯನ್ನು ಅಲ್ಲ ಈ ಕಾರಣ ಬದುಕುಕೇವಲ ಉಸಿರಿನ ಎಣಿಕೆಯಾಗಬಾರದು,ಹೃದಯಗಳಲ್ಲಿ ಬೆಳಗುವಒಂದು ದೀಪವಾಗಬೇಕು ಆ ದೀಪವೇ ಅಮರತ್ವ,ಆ ಬೆಳಕೇ ಶಾಶ್ವತತೆ,ಮರಣವನ್ನೂ ಮೀರಿ ಉಳಿಯುವಮನುಷ್ಯತ್ವದ ಮಹೋನ್ನತ ಗೀತೆ. ಎನ್. ಜಯಚಂದ್ರನ್ .ದಾಂಡೇಲಿ

ಎನ್. ಜಯಚಂದ್ರನ್ ದಾಂಡೇಲಿ “ಬದುಕೇ ಅಮರತ್ವ” Read Post »

ಕಾವ್ಯಯಾನ

ಉಷಾರಾಣಿ ಗುರುಪ್ರಸಾದ್ ಅವರ ಕವಿತೆ”ಪ್ರೀತಿಯ ದೀಪ”

ಕಾವ್ಯ ಸಂಗಾತಿ ಉಷಾರಾಣಿ ಗುರುಪ್ರಸಾದ್ “ಪ್ರೀತಿಯ ದೀಪ” ಪ್ರಕೃತಿಯ ಮಡಿಲಲಿ ಮೂಡಿದ ರಂಗು,ಹೃದಯದ ಗೋಡೆಯ ಮೇಲೆ ಹೊಸ ತರಂಗು.ಮುಂಜಾವಿನ ಮಂಜಲಿ ಅರಳಿದ ಹೂವು,ಮರೆಸಿದೆ ಎದೆಯಲಿ ಮೂಡಿದ ನೋವು. ಕುಂಚದ ತುದಿಯಲಿ ಮೂಡಿದ ರೂಪ,ಮನದ ಕತ್ತಲಿಗೆಪ್ರೀತಿಯ ದೀಪ.ಕಣ್ಣಿನ ಭಾಷೆಗೆಸಿಗದ  ಅರ್ಥ,ಭಾವನೆಗಳೆಲ್ಲವೂ  ಪೂರ್ಣ ಸಮರ್ಥ. ಬಾನಿನ ಅಂಚಲಿ ಕಾಮನಬಿಲ್ಲು,ಹೃದಯ ಅಂಗಳದಿನಿನ್ನ ಹೆಜ್ಜೆಯ ಸದ್ದು.ಕನಸಿನ ಲೋಕದಸುಂದರ ಮದ್ದು,ಒಲುಮೆಯ ತೋಟದ ಸಿಹಿ ಸವಿ ಮುದ್ದು  ಉಷಾರಾಣಿ ಗುರುಪ್ರಸಾದ್,

ಉಷಾರಾಣಿ ಗುರುಪ್ರಸಾದ್ ಅವರ ಕವಿತೆ”ಪ್ರೀತಿಯ ದೀಪ” Read Post »

ಕಾವ್ಯಯಾನ

ಕಾವ್ಯ ಸುಧೆ ಅವರ ಕವಿತೆ “ಮಾಯಾಜಾಲ”

ಕಾವ್ಯ ಸಂಗಾತಿ ಕಾವ್ಯ ಸುಧೆ “ಮಾಯಾಜಾಲ” ನಿನ್ನೊಲುಮೆ ಭಾವದ ತೇರನು ಏರುತಾಹಾದಿಗುಂಟ ಹೂವ ಹಾಸಿ ಕಾದೆನುಇರುಳ ಒಂದು ಜಾವ ಕಳೆಯಲುನೆಟ್ಟ ನೋಟ ನಿನ್ನ ಜಾಡ ಅರಿಯದೆಮೂಕ ಮನದಿ ಮೌನ ರೋದನೆ ಯಾಕೋ ಬರದೆ ಹೋದೆ ನೀನುಅರಿಯದಾದೆ ಕಾರಣ, ಬೇಕು ಬೇಡಎನದೆ ಹೋದೆ ಕಾಣದಾಗೆ ತಲ್ಲಣನಿನ್ನ ಮಧುರ ನೆನಪು ಮರುಕಳಿಸಿಈಟಿಯಂಗಿರಿದು ಎದೆಗೆ ನೋವ ಬಿತ್ತರ ಭಾವಗೀತೆಯಂತೆ ನಲಿದ ಬಾಳಿನಲ್ಲಿತೊರೆದು ಹೋದೆ ಇರಿಸಿ ಬಾಧೆಮಾಯವಾದೆಯೇಕೆ ಮಾಯಾಮೃಗದಂತೆಕೈಗೆ ಸಿಗದೆ ಸುಳಿವು ಕೂಡ ನೀಡದೆ ಹೋದೆಕೆಣಕಿ ಶೋಧೆ ಸಿಲುಕಿಸೆನ್ನ ಜಾಲದಲಿ…..!! ಕಾವ್ಯ ಸುಧೆ.

ಕಾವ್ಯ ಸುಧೆ ಅವರ ಕವಿತೆ “ಮಾಯಾಜಾಲ” Read Post »

ಕಾವ್ಯಯಾನ

ಜಯಶ್ರೀ ಭ. ಭಂಡಾರಿ ಅವರ ಕವಿತೆ “ಅವ್ವ ನೀನಿನ್ನು ಇರಬೇಕಿತ್ತು.”

ಕಾವ್ಯ ಸಂಗಾತಿ ಜಯಶ್ರೀ ಭ. ಭಂಡಾರಿ “ಅವ್ವ ನೀನಿನ್ನು ಇರಬೇಕಿತ್ತು.” ಮಕ್ಕಳೆಲ್ಲ ತವರಿಗೆ ಬಂದರೆಏನ್ ಸಡಗರ ಈ ಅವ್ವಗವಯಸ್ಸು ಮರುತ ಸಣ್ಣ ಹುಡುಗಿ ಆಗಿಬಿಡುತ್ತಿದ್ಲುರವೆ ಉಂಡೆ ಖಾರದ ಮಂಡಾಳ ಮುಂದಿಟ್ಟು ತಿನ್ನು ತಿನ್ನು ಅಂತಒಂದೇ ವರಾತ ಹಚ್ಚತಿದ್ಲು ಅವ್ವ ಅದಕ್ಕೆ ನೀನು ಇನ್ನಷ್ಟು ದಿನ ಇರಬೇಕಿತ್ತು. ಈಗ ಅಲ್ಲಿ ರವೆ ಉಂಡಿನೂ ಇಲ್ಲ ಮಂಡಾಳನು ಇಲ್ಲ ಬರೀ ಶೂನ್ಯ ನಿನ್ನ ಕೈ ರುಚಿ ತಿನ್ನೋ ಭಾಗ್ಯನು ಇನ್ನಿಲ್ಲ ಏನ್ ಚಂದ ನಿನ್ ಮಾತು ಏನ್ ಚೆಂದ ನಿನ್ನ  ನಗುಹಣೆ ತುಂಬಾ ಕುಂಕುಮ ತಲೆ ತುಂಬಾ ಸೆರಗು ತುರುಬಿನಲ್ಲಿ ಸದಾ ಹೂವಿನ ಮಾಲೆ. ನಿನ್ ನೋಡೋದೇ ಒಂದು ಸಡಗರ. ಅವ್ವ ಅದಕ್ಕೆ  ನೀನಿನ್ನು ಇರಬೇಕಿತ್ತು. ಆಷಾಢ ಮಾಸಾ ಶ್ರಾವಣ ಮಾಸ ಅಂತಉಡಿ ತುಂಬಿ ಹರಿಸಿ ಹಾರೈಸಿ ಕಳಿಸ್ತಿದ್ದೆನಿನ್ನಲ್ಲಿರೋದನ್ನೆಲ್ಲ ಮಕ್ಕಳಿಗೆ ಕೊಟ್ಟು ಪ್ರೀತಿಯ  ಅಮೃತದಾರೆ ಹರಿಸುತ್ತಿದ್ದೆ.ಅವ್ವ ನಿನ್ನ ಆಶೀರ್ವಾದ ಬಲದಿಂದ ಅಸಾಧ್ಯವೆಲ್ಲ ಸಾಧ್ಯವಾಗಿದ್ದು ಸತ್ಯ  ಅವ್ವ ಅದಕ್ಕೆ ನೀನಿನ್ನು  ಇರಬೇಕಿತ್ತು. ಮಕ್ಕಳು ಮೊಮ್ಮಕ್ಕಳು ಮರಿ ಮೊಮ್ಮಕ್ಕಳು ನಿನ್ನ ಸಂಭ್ರಮಕ್ಕೆ ಮಿತಿಯೇ ಇಲ್ಲ  ನಿನ್ನ ಜೀವನ ಪ್ರೀತಿಗೆ ಸಾಟಿಯೇ ಇಲ್ಲ. ನೀನು ಇಷ್ಟು ಬೇಗ ಅಗಲಿ ಅಂತ ನಾವೆಲ್ಲ ಅಂದುಕೊಂಡೆ ಇರಲಿಲ್ಲ ಅಪ್ಪನಗಲಿ ಒಂದು ದಿನ ಇದ್ದವಳಲ್ಲ ಈಗ ಅಪ್ಪ ಆಕಾಶ ದಿಟ್ಟಿಸತ್ತಾ ಮೌನವಾಗಿ ಕಣ್ಣೀರ್ ಆಗ್ತಾರೆ .  ಅವ್ವ ಅದಕ್ಕೆ ನೀನಿನ್ನು ಇರಬೇಕಿತ್ತು.  ಅವ್ವ ಎಲ್ಲರ ಸ್ಥಾನ ತುಂಬುತ್ತಾಳೆ  ಆದ್ರೆ ಅವ್ವನ ಸ್ಥಾನ ಯಾರು ತುಂಬೋಕಾಗಲ್ಲ ಅಂತ ಅರ್ಥ ಆಗಿದೆ.ನೀನಿಲ್ಲದ ಮನೆ ಮನೆಯೇ ಅಲ್ಲ ನೀರಿಲ್ಲದ ಕೆರೆಗೆ ಕರು ಹೋಗಿ  ಬಂದಂತೆ ಆಗಿದೆ ಮಕ್ಕಳ ಸ್ಥಿತಿ.  ನಿನ್ನ ಬಳೆಗಳ ಸದ್ದಿಲ್ಲದ ಅಡುಗೆ ಮನೆ ಮೌನವಾಗಿ ಮಲಗಿದೆ.ತಾಯಿ ಇದ್ರೆ ತವ್ರೆಚ್ಚು ಅದಕ್ಕೆ  ನೀನಿನ್ನು ಇರಬೇಕಿತ್ತು ಅವ್ವ. ಫೋನ್ ಹಚ್ಚಿ ಕೊಡಿ ಹಚ್ಚಿ ಕೊಡಿ ಅಂತ ಅಪ್ಪಗ ದುಂಬಾಲು ಬೀಳ್ತಿದ್ದೆ.ಫೋನ್ ಹಚ್ಚಿ ಕೊಟ್ರೆ ಮುಗಿಯಿತು ಗಂಟೆಗಟ್ಟಲೆ ಎಲ್ಲವನ್ನು ವಿಚಾರಸ್ತಿದ್ದೆ.ಈಗ್ ನಿನ್ ಫೋನು ಮಾತು ನಗುನಿನ್ನ ಸಾಮಿಪ್ಯ ಎಂದೆಂದಿಗೂ ದೂರಾದವು.ಅವ್ವ ಅದಕ್ಕೆ ನೀನು ಇನ್ನಷ್ಟು ದಿನ  ಇರಬೇಕಿತ್ತು. ಜಯಶ್ರೀ ಭ. ಭಂಡಾರಿ.

ಜಯಶ್ರೀ ಭ. ಭಂಡಾರಿ ಅವರ ಕವಿತೆ “ಅವ್ವ ನೀನಿನ್ನು ಇರಬೇಕಿತ್ತು.” Read Post »

ಕಾವ್ಯಯಾನ

ಮಾಲಾ ಚೆಲುವನಹಳ್ಳಿ ಅವರ”ಮಳೆಗೊಂದು ಮನವಿ”

ಕಾವ್ಯ ಸಂಗಾತಿ ಮಾಲಾ ಚೆಲುವನಹಳ್ಳಿ “ಮಳೆಗೊಂದು ಮನವಿ” ಬಾ ಮಳೆಯೇ ಬಾಕಂಗಾಲಾದ ರೈತರಬದುಕಿಗೆ ಬೆಂಗಾವಲಾಗಿ ಬಾ ಮಿಂಚುತ್ತಾ, ಗುಡುಗುತ್ತಾಆಮಿಷ ತೋರದೇ ಬಾ, ತೋರುತ್ತಾ, ಹಾರುತ್ತಾಹಂಗಿಸಿ, ಅಣಕಿಸದೇ ಬಾ, ನೊಂದು ಹೋದ  ರೈತರಬೆಂದೆದೆಯ ಬೃಂದಾವನ ಮಾಡು ಬಾ ನಿಕೃಷ್ಟವಾದ ಬಡವರಬದುಕ ಉಥ್ಕೃ ಷ್ಟವಾಗಿಸಲು ಬಾ, ಮೇರೆ ಮೀರಿ ಮೆರೆಯುತ್ತಿರುವಸೂರ್ಯನ ತಾಪ ನೀಗಿಸಲು ಬಾ, ಇಳೆಯರಸಿ ನಾ ಕಾಯುತಿರುವೆಮಳೆಯರಸ ನೀ ಬಂದು ಸೇರೆನ್ನ ಮಾಲಾ ಚೆಲುವನಹಳ್ಳಿ

ಮಾಲಾ ಚೆಲುವನಹಳ್ಳಿ ಅವರ”ಮಳೆಗೊಂದು ಮನವಿ” Read Post »

ಕಾವ್ಯಯಾನ, ಗಝಲ್

ಹಮೀದಾಬೇಗಂ ದೇಸಾಯಿ ಅವರ ಗಜಲ್

ಕಾವ್ಯಸಂಗಾತಿ ಹಮೀದಾಬೇಗಂ ದೇಸಾಯಿ ಗಜಲ್ ಮರಳ  ಹೆಜ್ಜೆಗಳನು ಕಡಲು ಅಳಿಸಿದಂತಾಗಿದೆ  ಈ ಬದುಕುಇರುಳು ಕಂಡ ಬಾವಿಗೆ  ಹಗಲು  ಬಿದ್ದಂತಾಗಿದೆ ಈ ಬದುಕು ತಣ್ಣಗೆ  ಉರಿಯುವ  ಬೂದಿಮುಚ್ಚಿದ  ಕೆಂಡ  ಇದಲ್ಲವೇಕೆಸರಿನಲಿ ಅವಿತ ಮುಳ್ಳಿನ ಮೊನೆಯಂತಾಗಿದೆ  ಈ ಬದುಕು ಸಂತೈಸುವ ಕೈಗಳೇ  ಬಸಿರಿಗೆ ಕೊಳ್ಳಿ ಇಟ್ಟು ನಗುತಿವೆಕತ್ತಲೆಯ ಗರ್ಭದಿ ಬೆಳಕು ಕಳೆದಂತಾಗಿದೆ ಈ ಬದುಕು ಹಗಲು ವೇಷಧಾರಿಗಳ ಮೋಜು ಬಲುಜೋರು ಇಲ್ಲಿಸತ್ತ ಹೆಣಗಳ ಸಿಂಗಾರ ನೋಡುವಂತಾಗಿದೆ ಈ ಬದುಕು ಭಾವಗಳ ರೆಕ್ಕೆ  ಮುರಿದು ಬೆತ್ತಲೆಯಾಗಿವೆ ನೊಂದು ಬೇಗಂಪ್ರೀತಿಯನು ಎದೆಯ ಗೋರಿಯಲಿ ಹುಗಿದಂತಾಗಿದೆ ಈ  ಬದುಕು ಹಮೀದಾಬೇಗಂ ದೇಸಾಯಿ

ಹಮೀದಾಬೇಗಂ ದೇಸಾಯಿ ಅವರ ಗಜಲ್ Read Post »

ಕಾವ್ಯಯಾನ

“ಶಿರಬಾಗಿದರೆ ಆಶೀರ್ವಾದ” ಕವಿತಾ ಶ್ರೀನಿವಾಸ್ ನಾಯಕ್ 

ವಿಶೇಷ ಸಂಗಾತಿ ಕವಿತಾ ಶ್ರೀನಿವಾಸ್ ನಾಯಕ್  “ಶಿರಬಾಗಿದರೆ ಆಶೀರ್ವಾದ” ​ಶಿರಬಾಗಿದರೆ ಆಶೀರ್ವಾದ ಈ ನಾಲ್ಕು ಪದಗಳಲ್ಲಿ ನಮ್ಮ ಭಾರತೀಯ ಸಂಸ್ಕೃತಿಯ ದೊಡ್ಡ ತತ್ವ ಅಡಗಿದೆ. ಹಿರಿಯರು, ಗುರುಗಳು ಮತ್ತು ದೇವರಿಗೆ ತಲೆಬಾಗಿ ನಮಸ್ಕರಿಸುವುದು ಕೇವಲ ಒಂದು ಪದ್ಧತಿಯಲ್ಲ, ಅದು ನಮ್ಮ ಅಂತರಂಗದ ಅಹಂಕಾರವನ್ನು ಅಳಿಸಿ, ದೊಡ್ಡವರ ಜ್ಞಾನ ಮತ್ತು ಶಕ್ತಿಯನ್ನು ನಮ್ಮದಾಗಿಸಿಕೊಳ್ಳುವ ಒಂದು ಪ್ರಕ್ರಿಯೆ.​ಅಹಂಕಾರದ ವಿಸರ್ಜನೆ :-​ಮನುಷ್ಯನ ಶಿರಸ್ಸು ಅಹಂಕಾರದ ಕೇಂದ್ರ ಎಂದು ಹೇಳಲಾಗುತ್ತದೆ. ನಾನು, ನನ್ನದು ಎಂಬ ಭಾವನೆಗಳು ನಮ್ಮ ತಲೆಯಲ್ಲಿ ತುಂಬಿರುತ್ತವೆ. ನಾವು ಯಾವಾಗ ಹಿರಿಯರ ಮುಂದೆ ತಲೆಬಾಗುತ್ತೇವೆಯೋ, ಆಗ ನಮ್ಮ ಅಹಂಕಾರವನ್ನು ಅವರ ಪಾದಗಳಿಗೆ ಸಮರ್ಪಿಸುತ್ತೇವೆ. ಅಹಂಕಾರ ಕರಗಿದಾಗ ಮಾತ್ರ ಮನಸ್ಸು ತಿಳಿಯಾಗುತ್ತದೆ.​ಗುರುಗಳ ಮುಂದೆ ಶಿಷ್ಯನು ಶಿರಬಾಗುವುದು ಅಜ್ಞಾನದಿಂದ ಜ್ಞಾನದ ಕಡೆಗೆ ನಡೆಯುವ ಮೊದಲ ಹೆಜ್ಜೆ. ಜಲಪಾತದ ನೀರು ಕೆಳಗಿರುವ ಕಣಿವೆಯತ್ತ ಹರಿಯುವಂತೆ, ಜ್ಞಾನವು ಎತ್ತರದ ವ್ಯಕ್ತಿಯಿಂದ ನಮ್ರತೆಯಿಂದ ಇರುವ ವ್ಯಕ್ತಿಗೆ ಹರಿಯುತ್ತದೆ. ತಲೆಬಾಗುವುದು ಅಂದರೆ ನಾನು ಕಲಿಯಲು ಸಿದ್ಧನಿದ್ದೇನೆ ಎಂದು ಒಪ್ಪಿಕೊಳ್ಳುವುದು.​ಕೃತಜ್ಞತಾ ಭಾವನೆ:-​ನಮಸ್ಕಾರ ಮಾಡುವುದು ನಮಗೆ ನೆರವಾದವರಿಗೆ, ನಮ್ಮನ್ನು ಸಾಕಿ ಸಲಹಿದವರಿಗೆ ತೋರುವ ಕೃತಜ್ಞತೆಯ ಸಂಕೇತ. ತಂದೆ-ತಾಯಿಯ ಪಾದಗಳಿಗೆ ಶಿರಬಾಗಿದಾಗ, ಅವರು ನಮಗಾಗಿ ಮಾಡಿದ ತ್ಯಾಗಕ್ಕೆ ನಾವು ಗೌರವ ಸಲ್ಲಿಸುತ್ತೇವೆ. ಈ ಕೃತಜ್ಞತಾ ಭಾವನೆಯೇ ಜೀವನದಲ್ಲಿ ಶಾಂತಿಯನ್ನು ತರುತ್ತದೆ.​ದೇವಸ್ಥಾನಕ್ಕೆ ಹೋದಾಗ ದೇವರ ಮುಂದೆ ತಲೆಬಾಗುತ್ತೇವೆ. ಇದು ನಮ್ಮ ಮಿತಿಯನ್ನು ಒಪ್ಪಿಕೊಂಡು, ನಮಗಿಂತ ದೊಡ್ಡದಾದ ದೈವಿಕ ಶಕ್ತಿಯ ಮೇಲೆ ಶರಣಾಗತಿಯನ್ನು ತೋರಿಸುತ್ತದೆ. ಭಕ್ತಿಯಿಂದ ಶಿರಬಾಗಿದಾಗ, ದೇವರ ಕೃಪೆ ಮತ್ತು ಆಶೀರ್ವಾದ ನಮಗೆ ಲಭಿಸುತ್ತದೆ.​ವ್ಯಕ್ತಿತ್ವ ವಿಕಸನದ ದೃಷ್ಟಿಯಿಂದಲೂ ನಮ್ರತೆ ಅತಿ ಮುಖ್ಯ ಗುಣ. ಜ್ಞಾನ ಹೆಚ್ಚಾದಂತೆ ವ್ಯಕ್ತಿ ನಮ್ರನಾಗುತ್ತಾನೆ. ಅತಿಯಾಗಿ ತಲೆಬಾಗದ ಮರ ಮುರಿದುಬೀಳಬಹುದು, ಆದರೆ ಬಾಗಿದ ಬಿದಿರು ಎಂತಹ ಚಂಡಮಾರುತವನ್ನೂ ತಡೆದುಕೊಳ್ಳುತ್ತದೆ. ನಮ್ರತೆ ನಮ್ಮನ್ನು ಇತರರ ಪ್ರೀತಿಗೆ ಪಾತ್ರರಾಗುವಂತೆ ಮಾಡುತ್ತದೆ.​ಲೇಖನದ ಸಾರಾಂಶ:​ಶಿರಬಾಗುವುದು ದೌರ್ಬಲ್ಯದ ಸಂಕೇತವಲ್ಲ, ಬದಲಾಗಿ ಅದು ಆಂತರಿಕ ಶಕ್ತಿ ಮತ್ತು ಸಂಸ್ಕಾರದ ಪ್ರದರ್ಶನ. ನಾವು ಹಿರಿಯರ ಮುಂದೆ ತಲೆಬಾಗಿದಾಗ, ಅವರು ನೀಡುವ ಆಶೀರ್ವಾದವು ನಮ್ಮನ್ನು ಜೀವನದ ಕಠಿಣ ಹಾದಿಯಲ್ಲಿ ಮುನ್ನಡೆಸುವ ದಾರಿದೀಪವಾಗುತ್ತದೆ.“ನಮಸ್ಕಾರ ಮಾಡುವವನಿಗೆ ನಮ್ರತೆಯ ಸಂಸ್ಕಾರವಿರಲಿ, ಆಶೀರ್ವದಿಸುವವನಿಗೆ ಮಮತೆಯ ಸಂಸ್ಕಾರವಿರಲಿ. ಶಿರಬಾಗಿದಾಗ ಕೈಗಳು ಆಶೀರ್ವದಿಸದಿದ್ದರೆ, ಅಲ್ಲಿ ಸಂಸ್ಕಾರವು ಪೂರ್ಣಗೊಳ್ಳುವುದಿಲ್ಲ.”ನಮ್ರತೆಯಿಂದ ಶಿರಬಾಗಿ, ನಾವೆಲ್ಲರೂ ಆಶೀರ್ವಾದದ ಮಳೆಯಲ್ಲಿ ಮೀಯೋಣ. ಲೇಖನ : ಕವಿತಾ ಶ್ರೀನಿವಾಸ್ ನಾಯಕ್ ಕಾರ್ಕಳಉಡುಪಿ ಜಿಲ್ಲೆ.

“ಶಿರಬಾಗಿದರೆ ಆಶೀರ್ವಾದ” ಕವಿತಾ ಶ್ರೀನಿವಾಸ್ ನಾಯಕ್  Read Post »

You cannot copy content of this page

Scroll to Top