ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್

ಗಝಲ್ ರತ್ನರಾಯಮಲ್ಲ ಆ ಕಡೆ ಭಜನೆಯ ನಾದವು ಜಿನುಗುತಿದೆಈ ಕಡೆ ಆಕ್ರಂದನ ಮುಗಿಲು ಮುಟ್ಟುತಿದೆ ಕಣ್ಣೀರ ಕೋಡಿ ಹರಿಯುತಿದೆ ಸದ್ದಿಲ್ಲದೆ ಇಲ್ಲಿಅಲ್ಲಿ ಹೆಂಡದ ನಶೆ ನೆಲವು ಚುಂಬಿಸುತಿದೆ ಸಂಬಂಧಗಳು ಗೋಳಾಡುತಿವೆ ನೆನೆ ನೆನೆದುಹಲಗೆಯ ಸದ್ದಿಗೆ ಹೆಜ್ಜೆಯು ಕುಣಿಯುತಿದೆ ಗುಲಾಬಿ ಹೂ ಕಸವಾಗಿ ಬಿದ್ದಿದೆ ಬೀದಿಯಲ್ಲಿಗಡಿಯಾರದ ಮುಳ್ಳು ಹೆಣವನ್ನು ಎತ್ತುತಿದೆ ದರುಶನಕ್ಕೆಂದು ಜನ ಸಾಲುಗಟ್ಟಿಹರು ಮಲ್ಲಿಕುಣಿಯ ಮುಖ ಕಾಣದೆ ಗುಂಪು ಚದುರುತಿದೆ **********************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಅಕ್ಷತಾ ಕೃಷ್ಣಮೂರ್ತಿ. ನಿನ್ನ ಮುಂಗೈ ಮೇಲೆ ನನ್ನ ಹೆಸರು ಹೇಗೆ ಬರೆಯಲಿ ನೀನೇ ಹೇಳುನಿನ್ನ ಗಲ್ಲ ಕುಕ್ಕುವ ಮುಂಗುರುಳು ಹೇಗೆ ಮುಟ್ಟಲಿ ನೀನೇ ಹೇಳು. ಆ ಒಂದು ದಿನದ ಸವಿ ನೆನಪು ಕಣ್ಣ ತುಂಬ ಹಾಗೆಯೇ ಉಳಿದಿದೆನಿನ್ನ ಕನಸಿನ ಬಾಗಿಲು ತೆರೆದೆ ಇದೆ ಹೇಗೆ ಮುಚ್ಚಲಿ ನೀನೇ ಹೇಳು. ಮನದ ಅಂಗಳದಲ್ಲಿ ನಿನ್ನ ಹೆಸರಿನ ರಂಗೋಲಿ ಹೂ ನಗುವಿನಂತೆನಿನ್ನ ಮೌನ ಧ್ಯಾನ ಇನ್ನು ಇದೆ ಹೇಗೆ ಎಬ್ಬಿಸಲಿ ನೀನೇ ಹೇಳು. ನೆರಳಿನೊಳಗಿನ ನೆರವಾಗಬೇಕು ನೆನಪಲಿ ನಾನು ನೀನು ಕೈ ಕೈ ಹಿಡಿದುನಿನ್ನ ನಗುವಿನೊಳಗೆ ಇನ್ನೂ ಸಲುಗೆ ಇದೆ ಹೇಗೆ ಮರೆಯಲಿ ನೀನೇ ಹೇಳು. ಉದುರಿದ ಎಲೆಯೊಂದು ನಗುತ ಸ್ವರ್ಗ ಸುಖ ಅನುಭವಿಸುತ್ತಿದೆ ಎನ್ನ ಮುಂದೆನಿನ್ನ ನೆನಪಿನೊಳಗೆ ನೆನಪಾಗದೇ “ಅಕ್ಷತಾ” ಹೇಗೆ ಇರಲಿ ನೀನೇ ಹೇಳು. **********************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ಹೃದಯದ ನೋವು ಅರಿಯದಾಯಿತು ಗೆಳತಿಪ್ರೀತಿಯ ಆಳಕಿಳಿದು ಕೇಳಿ ತಿಳಿಯದಾಯಿತುಗೆಳತಿ ಮನವೆಲ್ಲ ಸೋತು ಮೆತ್ತಗಾಗಿ ಹೋದೆ ನಾನುಮೌನವೆ ಉಸಿರಾಗಿ ಮಾತು ಬಾರದಾಯಿತು ಗೆಳತಿ ಒಲವನೆಲ್ಲ ತಂದು ಸುರಿದರೂ ನಿನಗೆ ತಿಳಿಯಲಿಲ್ಲಗಾಯಗಳ ಬರೆಗೆ ಜೀವ ಮೇಲೇಳದಾಯಿತು ಗೆಳತಿ ಜೀವ ಶವವಾಗಿ ನರಳುತಿದೆ ನಿನ್ನೆಡೆಗಿನ ಆಸೆಗೆಬರುವಿಕೆಗೆ ಕಾದು ಜೀವ ಶವವಾಯಿತು ಗೆಳತಿ ಕಂಡ ಕನಸುಗಳೆಲ್ಲ ನುಚ್ಚು ನೂರಾದವು ನಿನಗಾಗಿಮರುಳನ ಕಣ್ಣಿರಧಾರೆ ನದಿಯಾಗಿ ಹರಿದೊಯಿತು ಗೆಳತಿ *********************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರೇಷ್ಮಾ ಕಂದಕೂರ. ಹಸಿವಿನಿಂದ ಕಂಗೆಟ್ಟವರ ತೊಳಲಾಟ ನೋಡದಾಗಿದೆಕೃಶ ದೇಹದ ಅಧೋಗತಿಯ ಪರಿಸ್ಥಿತಿ ನೋಡದಾಗಿದೆ ಕಮರಿದೆ ಭರವಸೆಯ ಬೆಳಕು ಮಂದಾಗ್ನಿಯಲಿಹಣೆಬರಹದ ಕ್ರೂರತನ ಮದವೇರಿದನು ನೋಡದಾಗಿದೆ ತುತ್ತಿನ ಚೀಲ ತುಂಬಿಸಲು ಕಗ್ಗಂಟಾಗಿ ಹೋಗಿದೆಆ ದೇವನ ದೂಷಿಸತ ದಿನ ದೂಡುವದನು ನೋಡದಾಗಿದೆ ತಿಂದು ತೇಗಿ ಬಿಸಾಕುವ ಜನಕೆ ತಿಳಿಯಬಾರದೇಕೊಳ್ಳುಬಾಕ ಮನೋಭಾವದಿ ಮೆರೆಯುವವರ ನೋಡದಾಗಿದೆ ಪರಿಹಾರಕೆ ರೇಷಿಮೆಯ ಮನ ಮರುಗಿ ತಡಕಾಡಿದೆಪಿಷ್ಟ ಹೊತ್ತು ಕುಚೇಷ್ಟೆ ಮಾಡುವವರ ನೋಡದಾಗಿದೆ. ****************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ.ಹೇಮಗಂಗಾ ಕಡುಗಪ್ಪು ಕುರುಳ ನಡುವೆ ಮೊಗ ಚಂದಿರನಂತೆ ಹೊಳೆದಿದೆ ಗೆಳತಿಬಿರಿದ ಅಧರಗಳ ನಡುವೆ ಮಿಂಚು ನಗು ಹೊರಹೊಮ್ಮಿದೆ ಗೆಳತಿ ಅಪೂರ್ವ ಸೌಂದರ್ಯ ಬಣ್ಣಿಸಲು ಕವಿಯಾಗುವನು ನಿನ್ನ ನಲ್ಲಸೆಳೆವ ಕಾಡಿಗೆ ಕಂಗಳ ಮೇಲಿನ ಹುಬ್ಬು ಕಬ್ಬಿನಂತೆ ಬಾಗಿದೆ ಗೆಳತಿ ಆಗಸದತ್ತ ದಿಟ್ಟಿ ನೆಟ್ಟ ನೋಟದಿ ಅದಾವ ಭಾವ ತುಂಬಿದೆಯೋವಿಚಲಿತಳಾಗದೇ ನೀ ಕುಳಿತ ಭಂಗಿ ಮೋಹಕವಾಗಿ ಕಂಡಿದೆ ಗೆಳತಿ ನಿನ್ನವನ ಚರಣಕೆ ಸಮರ್ಪಿಸಲು ಹೂಗಳ ಗುಚ್ಛ ಹಿಡಿದಿಹೆ ಏನು?ಇಹದ ಅರಿವಿಲ್ಲದೇ ನಗುತಿಹ ಅಭಿಸಾರಿಕೆ ನೀನಾದಂತಿದೆ ಗೆಳತಿ ತುಸು ಹೊತ್ತು ತಾಳಿದರೆ ಸಾಕು ಬಂದೇ ಬರುವನು ಪ್ರಿಯತಮಪ್ರತಿಕ್ಷಣವೂ ಮೆಲುಕು ಹಾಕುವ ಒಡನಾಟದ ಸವಿ ಕಾದಿದೆ ಗೆಳತಿ *************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್ ಜುಗಲ್

ಗಝಲ್ ಜುಗಲ್ ಮೊಟ್ಟಮೊದಲಬಾರಿಗೆ ಗಝಲ್ ಕವಿಗಳವಿವರಣೆಗಳೊಂದಿಗೆ ಶ್ರೀದೇವಿ ಕೆರೆಮನೆ ಗಿರೀಶ್ ಜಕಾಪುರೆ ನನ್ನ ದನಿಗೆ ನಿನ್ನ ದನಿಯು (ಶ್ರೀದೇವಿ ಕೆರೆಮನೆ) ಜಗದ ಜೀವನಾಡಿಯಲ್ಲಿ ಅಮೃತದ ಕಳಶ ಜೊತೆಯಾದಂತೆ ನನ್ನ ದನಿಗೆ ನಿನ್ನ ದನಿಯುಜೀವ ಕರುಣೆಯ ಪೊರೆವ ಜಗನ್ಮಾತೆಯ ಸುದೀರ್ಘ ಉಸಿರಂತೆ ನನ್ನ ದನಿಗೆ ನಿನ್ನ ದನಿಯು ಸೆರಗಿನ ಮರೆಯಿಂದ ಇಣುಕಿದ ಕೂಸಿನ ಹವಳದ ತುಟಿಯ ಕಟವಾಯಿಯಲ್ಲಿದೆ ನೊರೆವಾಲುಹಾಲುಗಲ್ಲದ ಮುಗ್ಧ ಮುಖದ ಮಗುವಿನ ಕಿಲಕಿಲ ನಗುವಂತೆ ನನ್ನ ದನಿಗೆ ನಿನ್ನ ದನಿಯು ಕನಸುಗಳೇ ಇರದ ಬರಡು ಎದೆಯೊಳಗೆ ಮೊಳೆತಿದೆ ನಿನ್ನ ನೆನಪಿನ ಗರಿಕೆ ಹುಲ್ಲಿನ ಚಿಗುರುಶರದೃತುವಿಗೆ ಆವರಿಸಿ ಮೈ ನಡುಗಿಸುವ ತಂಗಾಳಿಯಂತೆ ನನ್ನ ದನಿಗೆ ನನ್ನ ದನಿಯು ಸುತ್ತೆಲ್ಲ ಹರಡಿದೆ ಎದೆಕೋಟೆಯ ಬತ್ತಲಾರದ ಬಯಕೆಯಂತೆ ಸುರುಗಿಯ ಸಮ್ಮೋಹನಬದುಕಿನ ಪ್ರತಿಕ್ಷಣದಲ್ಲೂ ಜೀವದೃವ್ಯ ಚಿಮ್ಮಿದಂತೆ ನನ್ನ ದನಿಗೆ ನಿನ್ನ ದನಿಯು ಮಥುರೆಯೊಂದಿಗೆ ತೊರೆದು ಹೋದ ಕೃಷ್ಣನಿಗಾಗಿ ಜೀವಮಾನವಿಡಿ ಕಾತರಿಸಿದಳು ರಾಧೆನವಿಲುಗರಿಯ ಸಾವಿರ ಎಳೆಗಳ ನವಿರಾದ ಸ್ಪರ್ಶದಂತೆ ನನ್ನ ದನಿಗೆ ನಿನ್ನ ದನಿಯು ಸಪ್ತಸಾಗರಗಳಿದ್ದರೂ ಪಾಲ್ಗಡಲ ಬೆಳ್ನೊರೆಯೇ ಬೇಕಂತೆ ಲಕ್ಷ್ಮಿಕಾಂತ ಹರಿಗೆಶಿವನ ರುದ್ರ ಡಮರುಗದ ಅಬ್ಬರಿಸುವ ಅಲೆಯ ನಿನಾದಂತೆ ನನ್ನ ದನಿಗೆ ನಿನ್ನ ದನಿಯು ಸುರೆಯಲ್ಲೇ ಮುಳುಗಿರುವ ದೇವಲೋಕದ ಅಧಿಪತಿಗೆ ಅಮರಾವತಿಯೂ ಬೇಸರವಂತೆಗಸಗಸೆ ಪಾಯಸದ ಗೋಡಂಬಿಗೆ ನಶೆಯೇರಿದ ಅಮಲಂತೆ ನನ್ನ ದನಿಗೆ ನಿನ್ನ ದನಿಯು ಅಳುವ ಮಗುವಿನ ದನಿಗೆ ಮೈಮರೆತು ರಮಿಸಿ ಮುದ್ದಿಸುವ ನಿನ್ನ ಹಳೆಯ ಚಾಳಿ ಬಿಡು ಅಲ್ಲಮಮಗುವಿನ ಅಳುವಿನಲ್ಲಿರುವ ಸಪ್ತಸ್ವರದ ನಿನಾದದಂತೆ ನನ್ನ ದನಿಗೆ ನಿನ್ನ ದನಿಯು ಕಾತರಿಸುತಿದೆ ನಿದ್ದೆಯಿರದ ಕಮಲ ಸೂರ್ಯನಿಗೆ, ನೈದಿಲೆಯ ನೆತ್ತಿಗೀಗ ವಿರಹದ ಉರಿನಸುಕಿನ ಸೂರ್ಯನ ಎಳಸು ಕಿರಣಕೆ ನಾಚುವ ಇಬ್ಬನಿಯಂತೆ ನನ್ನ ದನಿಗೆ ನಿನ್ನ ದನಿಯು ಸಿರಿ, ಆಗದಿರುವುದಕೆ ಮರುಗುವ ಬದಲು ಪಾಲಿಗೆ ಬಂದಿದ್ದನ್ನು ಸಂತಸದಲಿ ಒಪ್ಪಿಕೊಒಮ್ಮೆಯೂ ಸೇರದ ಎಂದಿಗೂ ಅಗಲದ ರೈಲು ಹಳಿಯಂತೆ ನನ್ನ ದನಿಗೆ ನಿನ್ನ ದನಿಯು ನನ್ನ ದನಿಗೆ ನಿನ್ನ ದನಿಯು (ಗಿರೀಶ ಜಕಾಪುರೆ) ಮಧುರ ಮದಿರಿಗೆ ಅಧರ ಮಧು ಬೆರೆಸಿದಂತೆ ನನ್ನ ದನಿಗೆ ನಿನ್ನ ದನಿಯುನೆಲದ ಕುಸುಮಕೆ ಮುಗಿಲ ಘಮ ಸುರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಜಗದ ರೀತಿ ರಿವಾಜು ಮುರಿದು ಒಲವಿಗಾಗಿ ಎಲ್ಲೆ ಮೀರಿಗೆ, ಅಪ್ಪಿದೆಕಡಲು ತಾನೇ ಹರಿದು ನದಿ ಸೇರಿದಂತೆ ನನ್ನ ದನಿಗೆ ನಿನ್ನ ದನಿಯು ನಿನ್ನ ಹೆಸರು ಕೇಳಿದೊಡನೆ ಮನಸಿನಲಿ ಹೆಜ್ಜೆ ಗೆಜ್ಜೆಯ ಘಲಿರು ನಾದಒಲವ ಮಿಡಿತ ಎದೆಯಿಂದ ಎದೆಗೆ ಹರಿಸಿದಂತೆ ನನ್ನ ದನಿಗೆ ನಿನ್ನ ದನಿಯು ತಿಳಿಯದಾಗಿದೆ ಈಗ ಯಾವ ಬಿಂಬ ನನ್ನದು ಯಾವ ಬಿಂಬ ನಿನ್ನದುನನ್ನ ದೇಹ ನಿನ್ನ ರೂಪ ಧರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಮಗುವು ತಾಯಿಯ ಹಿಂದೆ ಬರುವಂತೆ ಬಂದೆ ಒಲವ ಸಮ್ಮೋಹಿತನಾಗಿಶಾರೀರ ಶರೀರವ ಅನುಕರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಜೀವದಲ್ಲಿ ಬೆರೆತೆ ನೀನು ಒಲವಾಗಿ, ಉಸಿರಾಗಿ, ಉಸಿರ ಸಿರಿಯಾಗಿದೇಹ ಆತ್ಮದ ಜೊತೆಜೊತೆಗೆ ಸಂಚರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಯಾವ ಜನ್ಮದ ಬಂಧವೂ ಚೆಂಬೆಳಕಾಗಿ ಬಂದು ಕೂಡಿದೆ ಬಾಳಿಗೆಕತ್ತಲಲಿ ನಂದಾದೀಪ ಉರಿಸಿದಂತೆ ನನ್ನ ದನಿಗೆ ನಿನ್ನ ದನಿಯು ನೀನು ಮುಟ್ಟಿದ ಶಿಲೆಗಳಿಂದ ಹೊಮ್ಮುತಿದೆ ಸುರಸಂಗೀತ ಝರಿಯಾಗಿಬರೀ ಸ್ಪರ್ಶದಿಂದ ಗಾಯ ಭರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಯಾವ ಪ್ರಹರದಲೂ ಮರೆತಿಲ್ಲ ಮಾಯೆ ‘ಅಲ್ಲಮ’ ಒಬ್ಬರನೊಬ್ಬರುಬೇಟವು ಬೇಟೆಗಾರನ ಸ್ಮರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಇದು ಶ್ರೀದೇವಿ ಕೆರೆಮನೆ ಹಾಗೂ ಗಿರೀಶ್ ಜಕಾಪುರೆಯವರು ಬರೆದ ಗಜಲ್ ಜುಗಲ್ ನನ್ನ ದನಿಗೆ ನಿನ್ನ ದನಿಯು ಸಂಕಲನದ ಶೀರ್ಷಿಕಾ ಗಜಲ್‌ಗಳು. ಇಲ್ಲಿ ಶ್ರೀದೇವಿ ಕೆರೆಮನೆಯವರು ೩೮ ಮಾತ್ರೆ ಬಳಸಿದ್ದರೆ, ಗಿಋಈಶ್ ಜಕಾಪುರೆಯವರು ೩೦ ಮಾತ್ರೆ ಬಳಸಿ ಬರೆದಿದ್ದಾರೆ. ಈ ಗಜಲ್‌ಗಳ ವೈಶಿಷ್ಟ್ಯತೆ ಏನೆಂದರೆ ಇಬ್ಬರೂ ಪರಸ್ಪರರ ತಕಲ್ಲೂಸ್‌ನ್ನು ತಮ್ಮ ಗಜಲ್‌ಗಳಲ್ಲಿ ಬಳಸಿಕೊಂಡಿದ್ದಾರೆ. ಅಳುವ ಮಗುವಿನ ದನಿಗೆ ಮೈಮರೆತು ರಮಿಸಿ ಮುದ್ದಿಸುವ ನಿನ್ನ ಹಳೆಯ ಚಾಳಿ ಬಿಡು ಅಲ್ಲಮಮಗುವಿನ ಅಳುವಿನಲ್ಲಿರುವ ಸಪ್ತಸ್ವರದ ನಿನಾದದಂತೆ ನನ್ನ ದನಿಗೆ ನಿನ್ನ ದನಿಯು ಎಂದು ಶ್ರೀದೇವಿಯವರು ಬರೆದಿದ್ದರೆ ಜೀವದಲ್ಲಿ ಬೆರೆತೆ ನೀನು ಒಲವಾಗಿ, ಉಸಿರಾಗಿ, ಉಸಿರ ಸಿರಿಯಾಗಿದೇಹ ಆತ್ಮದ ಜೊತೆಜೊತೆಗೆ ಸಂಚರಿಸಿದಂತೆ ನನ್ನ ದನಿಗೆ ನಿನ್ನ ದನಿಯು ಎಂದು ಗಿರೀಶ ಜಕಾಪುರೆಯವರು ಹೇಳಿದ್ದಾರೆ. ಗಜಲ್ ಪರಂಪರೆಯಲ್ಲಿಯೇ ಇಂತಹುದ್ದೊಂದು ವಿಶಿಷ್ಟ ಪ್ರಯೋಗ ಪ್ರಪ್ರಥಮ ಬಾರಿಗೆ ಬಳಕೆಯಾಗಿದೆ. ಗಜಲ್ ಬರೆಯುವವರಿಗೆ ಇವು ಅಭ್ಯಾಸಕ್ಕೆ ಯೋಗ್ಯವಾದ ಗಜಲ್‌ಗಳಾಗಿವೆ

ಗಝಲ್ ಜುಗಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸುಜಾತಾ ಲಕ್ಮನೆ ಇಲ್ಲಿ ಅಬ್ಬರದ ಬಿನ್ನಾಣ, ಮಾತಿನ ಸಂಚಲಿ ಮೌನ ಗೆಲ್ಲುವುದಿಲ್ಲಸಭ್ಯ ನಡೆಗೆಲ್ಲ ನ್ಯಾಯದ ತಕ್ಕಡಿಯಲಿ ಮಾನ್ಯತೆ ಸಿಗುವುದಿಲ್ಲ ತಾ ನಡೆವ ದಾರಿಯೆಲ್ಲವೂ ರಾಜಪಥವೆಂಬ ವಿಭ್ರಮೆ ತರವೇಯಾವ ಪಯಣವೂ ಕವಲೊಡೆಯದೇ ಗುರಿ ತಲುಪುವುದಿಲ್ಲ ಶಶಿ ಸೂಸುವ ಕಿರಣ ಪ್ರಭೆ ಇಳೆಯ ಕಣಕಣಕೂ ತಂಪನ್ನೆರಚದೇಒಳತೋಟಿಗಳ ತೂರಿದಂತೆ ಎದೆಯ ತೊಳಲಾಟ ತಗ್ಗುವುದಿಲ್ಲ ಅಂತರಂಗ ತೆರೆದಿಟ್ಟ ಭಾವಗಳು ಬೀದಿಗಳಲಿ ಬಿಕರಿಯಾಗುತ್ತವೆಸುಳ್ಳಿನ ಜಗದಲಿ ಸತ್ಯದ ಕದಪಿಗಿಟ್ಟ ಮಸಿ ಬಿಳಿಯಾಗುವುದಿಲ್ಲ ನೇರವಾಗಿ ನಿಂತಷ್ಟೂ ವಕ್ರರೇಖೆಯ ಬಣ್ಣ ಬೆನ್ನಿಗೆ ಮೆತ್ತುವರುಒಳದನಿಯ ಧಿಕ್ಕರಿಸಿ ನಡೆದಂತೆಲ್ಲ ಬಂಧ ಹಿತವಾಗುವುದಿಲ್ಲ ಕೈ ಚೀಲ ಹಿಡಿದು ಹಲ್ಕಿರಿದು ಓಲೈಸುವವರಿಗಷ್ಟೇ ಮನ್ನಣೆಯಿಲ್ಲಿನಲ್ನುಡಿಗಳಿಗೂ ಕೆಸರೆರಚುವವರ ಘನತೆ ಅಟ್ಟಕ್ಕೇರುವುದಿಲ್ಲ ಒಲವು, ಆದರವಿಲ್ಲದ ಕಡೆ ಇದ್ದು ಸಾಧಿಸುವುದೇನು “ಸುಜೂಅಸಲಿ, ನಕಲಿಯನೆ ಒರೆ ಹಚ್ಚಲು ಸೋತರೆ ಮೌಲ್ಯವಿರುವುದಿಲ್ಲ **************************

ಗಜಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಅನ್ನಪೂರ್ಣಾ ಬೆಜಪ್ಪೆ ಇದ್ದರೂ ನೋವುಗಳು ಹಲವಾರು ನಗುತಿರು ಸಖೀಬಿದ್ದರೂ ಧೃತಿಗೆಡದೆ ಪುಟಿದೆದ್ದು ಸಾಗುತಿರು ಸಖೀ ವಿಶಾಲ ಜಗವಿದು ಅವಕಾಶಗಳಿಗಹುದೇನು ಕೊರತೆವಿಷಮ ಭಾವಗಳಳಿಸಿ ಹೊಸತನಕೆ ತೆರೆಯುತಿರು ಸಖೀ ಮುಂದೆ ಸರಿದಂತೆಲ್ಲ ಜಗ್ಗಲೆತ್ನಿಸುವ ಮನವೆ ಬಹುವಿಲ್ಲಿಹಿಂದೆ ಜಾರದಂತೆ ಸಮಸ್ಥಿತಿಯ ಕಾಯುತಿರು ಸಖೀ ಸೋಲು ಬಂತೆನಲು ಕೊರಗಿ ಹತಾಶೆ ತೋರುವುದೇಕೆಗೆಲುವು ಪಡೆಯುವ ತನಕವೂ ಬಿಡದೆ ಓಡುತಿರು ಸಖೀ ಕ್ಲೇಶ ಕಳೆಯಲು ಅನುವಿಗೆ ವಿಶ್ವಾಸವೇ ಬಲವಲ್ಲವೇನುತೋಷಕಾಗಿ ಕರ್ಮ ಸಾಧನೆಯ ಕಡೆ ನಡೆಯುತಿರು ಸಖೀ ********

ಗಝಲ್ Read Post »

You cannot copy content of this page

Scroll to Top