ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್

ಗಝಲ್ ಸುಜಾತಾ ರವೀಶ್ ಬಾಳಿನ ಪಥದಲಿ ಬೀಸಿದ ತಂಗಾಳಿ ನೆನಪುಗಳ ಹಸಿಯಾಗಿಸಿತು ನಾಳಿನ ಕನಸಿನ  ಕಲ್ಪನೆ ಹಾದಿಯು ಮೆಲುಕುಗಳ ಬಿಸಿಯಾಗಿಸಿತು  ಧುತ್ತನೆ ಕವಿದಿಹ ಕಾರ್ಮೋಡ ಬಾನನು ಮಂಕಾಗಿಸಿತು ಒಮ್ಮೆಲೆಯೇ ಮೆತ್ತನೆ ಬರುತಿಹ ಹೊಂಗಿರಣ ನಗುವಿನ ಹೂಬಿಸಿಲಲಿ ಸೊಗಸಾಗಿಸಿತು ಮಾರ್ದವ  ಭಾವವ ಮುಳ್ಳಿನ ಮೊನೆಯೊಲು ಚುಚ್ಚ ತೊಡಗಿತು ಚಿಂತೆಯು ಹಾರ್ದಿಕ ಆಶಯ ಹೃದಯವ ಮುಟ್ಟುತ ಶಂಕೆಗಳನು ಮರೆಯಾಗಿಸಿತು ಜೀವನ ನೌಕೆಯು ಸಿಲುಕಿ ಬಿರುಗಾಳಿಗೆ ಹೊಯ್ದಾಡುತಿದೆ ಹೀಗೇಕೆ? ದೇವನ ಒಲುಮೆ ಭದ್ರತೆ ನೀಡುತ ಭರವಸೆಯಲಿ ಖುಷಿಯಾಗಿಸಿತು ಹಂಬಲ ಕಾಮನೆ ಮನುಜನ ಬದುಕಲಿ ನನಸಾದರೆನಿತು ಒಳಿತು ನಂಬಿದ ದೈವದ ಸನ್ನಿಧಿ ಸುಜಿಯ ಅಂತರಂಗದಲಿ ಮೊರೆಯಾಗಿಸಿತು   *******************************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಗಾಂಧಿ ನಾಡಿನಲಿ ಮಾತುಗಳು ಮೌನ ಅರ್ಥ ಕಳೆದುಕೊಂಡಿವೆ |ಗಾಂಧಿ ನಾಡಿನಲಿ ಕನಸುಗಳು ಹೊಸಕಿ ಬಿಸಾಕಿ ಹಾಕಲಾಗುತ್ತಿವೆ || ಬಾಪೂಜಿ ದೇಶದಲಿ ನಾಲಿಗೆ ಹರಿತವಾದರೆ ಕತ್ತರಿಸಲಾಗುತ್ತದೆ |ಇಲ್ಲಿ ಎಲ್ಲವೂ ಭಕ್ತಿಯ ಪರಾಕಾಷ್ಠೆ ಉಧೋಒಪ್ಪಿತ ನಿರ್ಧಾರಗಳಿವೆ || ಮಲಗಿದವರ ಎಬ್ಬಿಸಬಹುದು ಸತ್ತಂತೆ ನಟಿಸುವ ದುರುಳರು ತುಂಬಿದ್ದಾರೆ |ಕಟ್ಟೆ ಪಂಚಾಯತಿ ನ್ಯಾಯ ತೀರ್ಮಾನ ಕಚ್ಚೆ ಹರುಕರೆ ತುಂಬಿಕೊಂಡಿವೆ || ಉಳ್ಳವರ ಕಾಯ್ದೆಗೆ ಹೆಣ್ಣು ಭೋಗ ವಸ್ತು ಆಕೆಯ ರಕ್ತವೇ ಗುಲಾಲು |ರಾತ್ರಿಯೂ ಕೆಲಸಗಳು ನಡೆಯುತ್ತಿವೆ ಸತ್ತ ಹೆಣಗಳು ಬೂದಿಯಾಗಿವೆ || ‘ಮುತ್ತು’ಬದಲಾವಣೆಗೆ ಕಾಯದಿರು ಮನೆ ಹೆಣ್ಣು ಮಕ್ಕಳ ಕಾವಲುಗಾರನಾಗು |ನನ್ನ ಸುಟ್ಟ ಹೊಗೆಯ ವಾಸನೆ ಪಕ್ಕದ ಗೂಡಸಲಿಗೂ ಹಬ್ಬಲಿದೆ ಎಚ್ಚರಿಸಿರುವೆ | ****************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಅರಳಿದ ಸುಮ ದೇವರಿಗೆ ಅಪಿ೯ತವಾಗಲಿ ಬಾಡುವ ಮುನ್ನವೀಣೆ ತಂತಿ ಮೀಟಿ ಶ್ರುತಿ ಸರಾಗವಾಗಲಿ ಹಾಡುವ ಮುನ್ನ ಜಗದ ನಿಂದೆ ಅಪಹಾಸ್ಯ ಗಳಿಗೆ ನೊಂದು ಅನುಮಾನಿಸದಿರುಜೀವಿಗಳ ಪ್ರೀತಿ ಬೆಸುಗೆ ಗಟ್ಟಿಯಾಗಲಿ ಕೂಡುವ ಮುನ್ನ ನೆರಳಿರದ ಹಾದಿಯಲಿ ಬದುಕಿನ ಬಂಡಿ ಸಾಗಿದೆ ಅನವರತಬಾಳಿನ ಕಹಿ ನೆನಪ ದಿನಗಳು ಮರೆಯಾಗಲಿ ಕಾಡುವ ಮುನ್ನ ವಿರಹ ದಳ್ಳುರಿಯಲಿ ನಿತ್ಯ ದಹಿಸುತಿವೆ ಪ್ರೇಮಿಗಳ ಉಸಿರುಅನುರಾಗ ಚುಂಬನಕೆ ಹೃದಯ ಹಗುರಾಗಲಿ ಬೇಡುವ ಮುನ್ನ ಕೋಶ ಕೀಟಕೆ ರೆಕ್ಕೆಗಳ ಹಚ್ಚಿ ಕೊಂಡು ಹಾರುವ ಆತುರಪ್ರಭೆಯ ಮೋಹ ಇರುಳ ಧ್ಯಾನ ದೂರಾಗಲಿ ಹೊರಡುವ ಮುನ್ನ *************************************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಕವಿತೆ ಗಝಲ್ ರತ್ನರಾಯ ಮಲ್ಲ ಒರಟಾದ ಅಧರಗಳಲಿ ನುಲಿಯುತಿದೆ ನಿನ್ನದೆ ಹೆಸರುಎದೆಯ ಎಡ ಭಾಗದಲ್ಲಿ ಕುಣಿಯುತಿದೆ ನಿನ್ನದೆ ಉಸಿರು ಹಗಲಿರುಳು ಕಳೆಯುತಿರುವೆ ನಿನ್ನಯ ಕನವರಿಕೆಯಲ್ಲಿಕನಸುಗಳೆಂಬ ಹೆಪ್ಪಿನಿಂದ ಭಾವವು ಆಗಿದೆ ಮೊಸರು ಈ ರಾತ್ರಿಯು ಹರಿಯುತಿದೆ ನಿದ್ರೆಯ ಆಲಿಂಗನವಿಲ್ಲದೆಹಾಸಿಗೆಯ ತುಂಬೆಲ್ಲ ಬರಿ ನಿನ್ನ ಮಾದಕತೆಯ ಒಸರು ಗಾಳಿ ಬೀಸುತಿದೆ ಅನುರಾಗದ ಕಡಲು ಭೋರ್ಗರೆಯಲುಕಂಗಳ ಬಾಯಾರಿಕೆಯಲ್ಲಿ ಬರಿ ನಿನ್ನ ಬಿಂಬದೆ ಕೊಸರು ‘ಮಲ್ಲಿ’ಯ ಈ ಬಿಳಿ ಬಾಹುಗಳು ನಿನ್ನನ್ನೇ ಹುಡುಕುತಿವೆಅಂತರವನ್ನು ಮುಗಿಸಲು ಅನುವಾಗಿದೆ ಪ್ರಣಯದ ಕೆಸರು ********************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ತೇಜಾವತಿ ಹೆಚ್.ಡಿ. ಮತ್ಲಾಸಾನಿ /ಹುಸ್ನೆಮತ್ಲಾ ಗಜಲ್ ಕಂಡ ಕನಸೆಲ್ಲವೂ ಗುರಿಯ ಮುಟ್ಟವು ಕೇಳುನಡೆದ ಘಟನೆಯೆಲ್ಲವೂ ನನಸಾಗವು ಕೇಳು ವನದ ಸುಮವೆಲ್ಲವೂ ಗುಡಿಯ ಸೇರವು ಕೇಳುಬೀರಿದ ಕಂಪೆಲ್ಲವೂ ಸುಗಂಧ ದ್ರವ್ಯವಾಗವು ಕೇಳು ಅವನಿಯೆದೆಯ ಗೂಡ ಸ್ಪರ್ಶಿಸುವುದು ವರ್ಷಧಾರೆಬಿದ್ದ ಹನಿಗಳೆಲ್ಲವೂ ಸ್ವಾತಿಯ ಮುತ್ತಾಗವು ಕೇಳು ಬಯಲ ಭೂಮಿಯನ್ನೆಲ್ಲ ಹಸನು ಮಾಡಿ ಉಳಬಹುದುಬಿತ್ತಿದ ಬೆಳೆಗಳೆಲ್ಲವೂ ಫಲವ ನೀಡವು ಕೇಳು ಭವದ ಸಾಗರವು ವಿಸ್ತಾರವಾಗಿರುವುದು ಈ ಜಗದಲ್ಲಿಹೊರಟ ನಾವೆಗಳೆಲ್ಲವೂ ದಡವ ಸೇರವು ಕೇಳು ಸಪ್ತ ವರ್ಣಗಳ ಮೂಲವು ಶ್ವೇತವೇ ಆಗಿರುವುದುನೋಡಿದ ಬಿಳುಪೆಲ್ಲವೂ ಕ್ಷೀರವಾಗಲಾರವು ಕೇಳು ಇತಿಹಾಸದ ಚರಿತ್ರೆಯು ದೀರ್ಘವಾಗಿರುವುದು ‘ತೇಜ’ನೆಟ್ಟ ಹೆಜ್ಜೆಗಲೆಲ್ಲವೂ ಗುರುತಾಗಲಾರವು ಕೇಳು ******************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಶುಭಲಕ್ಷ್ಮಿ ಆರ್ ನಾಯಕ ಹೃದಯ ಸಿರಿವಂತಿಕೆಗೆ ಅರಮನೆ ಗುಡಿಮನೆಗಳೆಂಬ ಭೇದವುಂಟೇ ಸಖೀಗುಣ ಅವಗುಣಗಳಿಗೆ ಬಡವನು ಬಲ್ಲಿದನೆಂಬ ಅಂತರಗಳುಂಟೇ ಸಖೀ ಅವರವರ ಭಾವಗಳಲಿ ಅವರವರ ಅರಿವಿಂಗೆ ಬಂದಂತೆ ಮಾಡುತಿಹರುಸನ್ನಡತೆ ದುರ್ನಡತೆಗಳಿಗೆ ನಾನು ನೀನೆಂಬ ದೂರಗಳುಂಟೇ ಸಖೀ ಸಂಕುಚಿತ ಭಾವದಲಿ ಸ್ವಾರ್ಥದ ಬೆಂಬತ್ತಿ ತಮ್ಮ ತನಗಳ ಮರೆತಿಹರುಜೀವನದಿ ಸ್ವಾರ್ಥವೆಂಬ ಮುಸುಕಿಗೆ ಬಲಿಯಾಗಿ ಗೆದ್ದವರುಂಟೇ ಸಖೀ ಬಡವನಲಿ ಕಾಣಬಹುದಲ್ಲವೇ ನಯ ವಿನಯತುಂಬಿರುವ ವಿಶಾಲ ಹೃದಯವಅವನ ಕಷ್ಟ ತ್ಯಾಗ ಸಹನೆಗಳ ಅಸಹನೆಯಿಂದ ಮರೆಯಲುಂಟೇ ಸಖೀ ಸಂಕುಚಿತ ಸ್ವಾರ್ಥದ ಬದುಕ ಕಂಡು ಶುಭ ಳ ಕೋಮಲ ಹೃದಯ ಚೂರಾಗಿದೆಭೇದ ಭಾವ ಸ್ವಾರ್ಥ ಮೋಹಗಳಿಂದ ಮಹಲುಗಳ ಕಟ್ಟಲುಂಟೇ ಸಖೀ *****************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಶ್ರೀದೇವಿ ಕೆರೆಮನೆ ನೀನು ಮತ್ತೆ ಬರುವುದಿಲ್ಲವೆಂದು ಬುದ್ಧಿಗೆ ಅರ್ಥವಾಗಿದೆಹಾಳಾದ ಮನಸ್ಸು ಇನ್ನೂ ನಿನಗಾಗಿ ಕಾತರಿಸುತ್ತಿದೆ ಹೀಗೆ ಬಂದು ಹಾಗೆ ಹೋಗಲು ನಾನೇಕೆ ಬೇಕಿತ್ತು ಹೇಳುನನ್ನ ಮನೆಯಂಗಳದ ಮಲ್ಲಿಗೆ ನಿನಗೀಗ ಮರೆತು ಹೋಗಿದೆ ಅಗಲುವ ಮಾತಾಡಿದ್ದು ಇಂದು, ನಿರ್ಧಾರ ಎಂದಾಗಿತ್ತು?ಮಾಮರದ ಕೋಗಿಲೆಯೇಕೆ ಹೀಗೆ ಕರ್ಕಶವಾಗಿ ಅಳುತಿದೆ ಕೊನೆಯ ಕ್ಷಣದವರೆಗೂ ಗುಟ್ಟು ಬಿಡದ ಮಹಾ ಚತುರ ನೀನುನೆತ್ತರಿಲ್ಲದೇ ಇರಿಯುವುದನು ನಿನ್ನಿಂದ ಕಲಿಯಬೇಕಿದೆ ನಾಟಕದ ಮಂದಿರದಲ್ಲೀಗ ಕಣ್ಣು ಕುಕ್ಕುವ ಬೆಳಕಿಲ್ಲಮನಸನು ಬಲಿ‌ಪಡೆದ ಪ್ರಹಸನವು ಜಗಜ್ಜಾಹೀರಾಗಿದೆ ನಿನ್ನವಳೆಂಬ ಹೆಮ್ಮೆ ಎದೆಯೊಳಗೆ ಮೊರೆದು ನೆತ್ತಿಗೇರಿತ್ತುಸುರೆಗೂ ಮಿಗಿಲಾಗಿ ಆವರಿಸಿದ ಯೌವನದ ನಶೆ ಇಳಿದಿದೆ ಸದಾ ಜೊತೆಗಿದ್ದ ಗೆಲುವಿಗು ನಾನೆಂದರೀಗ ತಿರಸ್ಕಾರಎಂದು ಬತ್ತದ ಉಕ್ಕುವ ಸೆಲೆಯಂತಹ ತುಟಿಯ ನಗು ಮಾಸಿದೆ ಶ್ರೀ, ಎರಡು ದಿನ ನಿನ್ನ ಹೆಸರಿನ ಸೆರಗಿನಲ್ಲಿ ಮೆರೆದಾಡಿದೆಮೇಲಕ್ಕೇರಿ ಕೆಳಗಿಳಿದ ಮೇಲೀಗ ಬದುಕು ಸಾಕೆನಿಸಿದೆ ***************************************************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ.ಹೇಮಗಂಗಾ ಮಧುಶಾಲೆಗಿನ್ನು ಮರಳಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲುನೆನಪ ಗೋರಿಯನಿನ್ನು ಅಗೆಯಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಏಕಾಂಗಿ ಜೀವದ ತಾಪ ತಣಿಸಲೆಂದೇ ಏಕಾಂತದಿ ಮೈ ಮರೆತವನುನೋವ ಕುಲುಮೆಯಲ್ಲಿನ್ನು ಬೀಳಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಸಾವಿರ ಟೀಕೆಗಳ ಕತ್ತಿ ಇರಿತಕೆ ಬಲಿಯಾಗಿಸಿದರು ಕುಹಕಿ ಗೆಳೆಯರುನಾಲಿಗೆಗಿನ್ನು ಆಹಾರವಾಗಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಮಂದ ಬೆಳಕಿನ ನಿಶೆಯ ನಶೆ ಲೋಕ ಬಲೆಯಾಗಿ ಉಸಿರುಗಟ್ಟಿಸಿದೆಬೇಡುತ ಮದಿರೆಗಿನ್ನು ದಾಸನಾಗಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ಬದುಕಿನ ಗಮ್ಯ ಸಾರ್ಥಕತೆಯತ್ತ ಸೆಳೆಯಲು ಕೈ ಬೀಸಿ ಕರೆಯುತ್ತಿದೆಅವನತಿ ಹಾದಿಯನಿನ್ನು ತುಳಿಯಲಾರೆ ಸಾಕಿ ಬೇಡವಾಗಿದೆ ಮಧುಬಟ್ಟಲು ***********************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಸಹದೇವ ಯರಗೊಪ್ಪ ಪ್ರೇಮದ ಹೂ ಬಾಣ ಹೃದಯದಲಿ ರುಜು ಹಾಕುವಾಗ ನಾನೇ ಇಲ್ಲದಾದೆಹದವರಿತ ಎದೆಹೊಲದಿ ಬಿತ್ತಿದ ಪ್ರೀತಿ ಫಲ ನೀಡುವಾಗ ನಾನೇ ಇಲ್ಲದಾದೆ ಅಂಗಗಳ ಸಂಗ ಬಯಸಿದ ಮನಸು ನಿದಿರೆ ಬತ್ತಿಸಿ ಕಂಗಳ ವಿಶ್ರಾಂತಿ ಕದ್ದಿದೆತುಂಬಿದ ರೂಪದ ಬಟ್ಟಲು ಕಂಡು ಗುಲಾಬಿ ರಂಗೇರಿದಾಗ ನಾನೇ ಇಲ್ಲದಾದೆ ಫಕೀರನಂತೆ ತಂಬೂರಿ ಮೀಟುತ ಅವಳ ಹಿಮ್ಮಡಿಯ ಹುಡಿಬೆಳಕಲಿ ಅಲೆದೆಬದುಕಿನ ತಿರುವಿನಲ್ಲಿ ಕಣ್ಣ ಪ್ರಣತಿ ಹೊತ್ತಿಸಿ ಕಾಯುವಾಗ ನಾನೇ ಇಲ್ಲದಾದೆ ಮೋಹ ತೃಷೆಯಲಿ ತೇಲಾಡುವ ಅಮಲಿಗೆ ಬಿಸಿಯುಸಿರ ಗುಟುಕಿಸಿದೆಒಲವ ಮಳೆಗೆ ಹರಕೆ ಹೊತ್ತು ಇಳೆ ಸ್ನಾನ ಮಾಡುವಾಗ ನಾನೇ ಇಲ್ಲದಾದೆ ಕಸಿ ಮಾಡಿದ ಹೂ ಬಳ್ಳಿ ತೆಕ್ಕೆಯಲಿ ಬಿಗಿದಪ್ಪಿ ಮುತ್ತಿಡಲು ಸಿದ್ದವಾಗಿದೆಶ್ರಮ ಹರಿಸಿ ನೆಟ್ಟ ಗಿಡ ಹಸಿರನುಟ್ಟು ನೆರಳು ಹಾಸುವಾಗ ನಾನೇ ಇಲ್ಲದಾದೆ ಒಡಲು ಕುಡಿಯೊಡೆಯಲು ಊರ ದೇವರಿಗೆ ನಡೆಮಡಿ ಹಾಸಿರುವೆಹೆತ್ತು ಹೊತ್ತು ಬೆಳೆಸಿದ ಮಗ ಎದೆ ಎತ್ತರ ಬೆಳೆದಾಗ ನಾನೇ ಇಲ್ಲದಾದೆ ಪಾಪಿ ‘ಸಾಚಿಗೆ’ ವಿಧಿ ಆಟದಲಿ ಕೈಗೆ ಬಂದ ತುತ್ತು ಬಾಯಿಗೆ ನಿಲುಕದಾಗಿದೆಬೆವರನ್ನ ಉಂಡು ಒಕ್ಕಿದ ಫಸಲಿಗೆ ತಕ್ಕ ಬೆಲೆ ದಕ್ಕಿದಾಗ ನಾನೇ ಇಲ್ಲದಾದೆ ********************************

ಗಝಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಎ. ಹೇಮಗಂಗಾ ಬೆರಳುಗಳು ಯಾಂತ್ರಿಕವಾಗಿ ಹೂ ಕಟ್ಟುತ್ತಿವೆ ಮನಸೆಲ್ಲೋ ಕಳೆದುಹೋಗಿದೆಕಂಗಳು ಬರುವಿಕೆಯನ್ನೇ ನಿರೀಕ್ಷಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ಪ್ರೀತಿ, ಪ್ರೇಮದಲ್ಲಿನ ಸುಖವೇನೆಂದು ತೋರಿಸಿಕೊಟ್ಟವನು ನೀನುಸವಿನೆನಪಲಿ ಅಧರಗಳು ಬಿರಿಯುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ನಿನಗಾಗೇ ಮಿಡಿಯುವ ಹೃದಯದಲಿ ನೂರೆಂಟು ತವಕ, ತಲ್ಲಣಗಳುಧಮನಿಗಳು ನಿನ್ನ ಹೆಸರನ್ನೇ ಜಪಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ಕಣ್ರೆಪ್ಪೆಯೊಳು ಅವಿತಿಹ ಕನಸು ನನಸಾಗಲು ಕಾಯುವ ಕಾಯಕವಿದುಕಾಲದ ಘಳಿಗೆಗಳು ತಮ್ಮಂತೆ ಸರಿಯುತ್ತಿವೆ ಮನಸೆಲ್ಲೋ ಕಳೆದುಹೋಗಿದೆ ವರ್ಷಗಳು ಉರುಳಿದರೇನು ಹೇಮ ಳ ಒಲವಿಗೆಂದೂ ಮುಪ್ಪು ಬಾರದುತನುವಿನ ಕಣಕಣಗಳೂ ಹಂಬಲಿಸುತ್ತಿವೆ ಮನಸೆಲ್ಲೋ ಕಳೆದುಹೋಗಿದೆ *****************************

ಗಝಲ್ Read Post »

You cannot copy content of this page

Scroll to Top