ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ಗಝಲ್

ರತ್ನರಾಯ ಮಲ್ಲ ಕೋಟೆಯಲ್ಲಿ ಕುಂತಿರುವೆ ಬರುವವರೆಲ್ಲ ಬಂದುಬಿಡಿಹಸಿವಿನಿಂದ ಬಳಲುತಿರುವೆ ತಿನ್ನುವವರೆಲ್ಲ ತಿಂದುಬಿಡಿ ಬುದ್ಧಿಮಾತುಗಳು ಬುದ್ಧಿಭ್ರಮಣೆಯಲಿ ಕೊಳೆಯುತಿವೆಜೋಳಿಗೆಯು ಹರಿದಿದೆ ನೋಟುಗಳಿಂದ ತುಂಬಿಸಿಬಿಡಿ ಭೂಷಣವಾಗಿದ್ಧ ನಾಚಿಕೆಯ ಪರದೆಯನ್ನು ಎಸೆದಿರುವೆನೀವು ಬಂದ ಕೆಲಸವನ್ನು ಮುಗಿಸಿಕೊಂಡು ಹೋಗಿಬಿಡಿ ಪೂಜೆ-ಪುನಸ್ಕಾರದ ಜೊಳ್ಳು ಮೌಲ್ಯಗಳು ಬೇಡವಾಗಿವೆನಮ್ಮ ಪಾಡಿಗೆ ನಮಗೆ ಸುಖವಾಗಿ ಇರಲು ಬಿಟ್ಟುಬಿಡಿ ಹಸಿಮಾಂಸ ತಿನ್ನುವ ರಣಹದ್ದುಗಳ ಪರಪಂಚವಿದುಅನ್ನ ತಿನ್ನುವುದನ್ನು ಕಲಿತು ನೆಮ್ಮದಿಯಾಗಿ ಇದ್ದುಬಿಡಿ **************

ಗಝಲ್ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ಮಾಲತಿ ಹೆಗಡೆ ನೂರು ಆಸೆ ನೂರು ಕನಸ ಹತ್ತಿಕ್ಕುತ ನಡೆದೆಯೇಕೆ?ಕೋಪತಾಪದಲ್ಲಿ ಬಳಲಿ ಬಿಕ್ಕುತ್ತ ನಡೆದೆಯೇಕೆ? ಹೆತ್ತ ಕೂಸಿನ ವಾತ್ಸಲ್ಯವ ಕಳಚಿ ನಿರ್ಮೋಹ ಮೆರೆದೆಉತ್ತರ ಕೊಡದ ಮೌನ ಕಕ್ಕುತ್ತ ನಡೆದೆಯೇಕೆ? ಸಿಕ್ಕ ಬದುಕ ಕಟ್ಟಲರಿಯದೇ ಸಿಕ್ಕು ಸಿಕ್ಕಾಗಿಸಿ ಸೊರಗಿದೆನಕಾರಾತ್ಮಕ ವಿಚಾರದಲ್ಲೇ ಸೊಕ್ಕುತ್ತ ನಡೆದೆಯೇಕೆ? ಹುಟ್ಟಿದವರಿಗೆಲ್ಲ ಒಂದು ದಿನ ಬರುವುದು ಸಾವು ನಿಶ್ಚಿತಅರೆ ಆಯುಷ್ಯದಲ್ಲೇ ಸೋಲು ಮುಕ್ಕುತ್ತ ನಡೆದೆಯೇಕೆ? ಮುದ್ದುಕಂದನಿಗೆ ಅಮ್ಮನಾಗಿ ಹೆಮ್ಮೆಯ ದೇವತೆಯಾಗಿದ್ದೆನಕ್ಷತ್ರವಾಗುವ ಹುಚ್ಚಿನಲಿ ನೋಯುತ್ತ ನಡೆದೆಯೇಕೆ? ************

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಕಾವ್ಯಸಂಗಾತಿ

ಗಝಲ್ ಬಾಗೇಪಲ್ಲಿ ಕೃಷ್ಣಮೂರ್ತಿ ಬ್ರಹ್ಮಾಂಡದಿ ನೀನು ತೃಣಅದಕೆ ನೀ ಇರುವೆ ಋಣ ಹೇಗೆ ತೀರಿಸುವೆ ಅದನುಯೋಚಿಸು ಒಂದು ಕ್ಷಣ ಸದಾ ಸಲಹಲು ನಿನ್ನಬದಲಾಗಿಸು ನಿನ್ನ ಗುಣ ಅತಿಯಾಸೆಯಿಂದ ನೀನುಮಾಡಿರುವೆ ಎಲ್ಲಾ ರಣ ಸಿಕ್ಕ ಸಿಕ್ಕಲ್ಲೆಲ್ಲಾ ಅಗೆದುಮಾಡಿರುವೆ ಅದಕೆ ವ್ರಣ ಪರಿಸರ ರಕ್ಷಣೆ ಆಗಬೇಕುಸೇರು ನೀನು ಅದರ ಬಣ ಕ್ಷಮೆ ಎನೆ ಭೂಮಿ’ಮಂಕೇ’ಸಕಲರೂ ತೊಡಬೇಕು ರಕ್ಷಣೆಗೆ ಪಣ (ಚೋಟಿ ಬೆಹರ್ ರಚಿಸುವ ಯತ್ನ) **********

ಕಾವ್ಯಸಂಗಾತಿ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ದೀಪಾಜಿ ಬದುಕು ಬಯಲಾಗಿದೆ ಬಾಳು ಹಣ್ಣಾಗಿದೆ ಬೇಕೆ ನಿನಗೀಗ ದೀಪದೇಹ ಬೆಂಡಾಗಿದೆ ಮನವೂ ಮಾಗಿಹೋಗಿದೆ ಬೇಕೆ ನಿನಗೀಗ ದೀಪ ಸುತ್ತಲು ಆವರಿಸಿ ನಿಂತ ಮಬ್ಬುಗತ್ತಲಿಗೆ ಎಷ್ಟೆಣ್ಣೆ ಸುರಿವೆಬಾಯ್ತುಂಬಿಕೊಂಡ ಗಾಳಿ ಉದುವ ದ್ವೇಷಿಗಳಿಗೆ ನಂಜಿದೆ ಬೇಕೆ ನಿನಗೀಗ ದೀಪ ಒಂದಿಷ್ಟು ಮೆಟ್ಟಿಲಾಚೆ ಬಾಗಿಲಿಲ್ಲದ ಬದುಕೊಂದಿದೆಸುತ್ತೆಲ್ಲ ಸಣ್ಣಗೆ ಮಳೆ ಇದೆ ದೀವಟಿಗೆ ಕುಡಿ ಮೇಲೆ ಅಂಗೈ ಹಿಡಿದೆ ಬೇಕೆ ನಿನಗೀಗ ದೀಪ.. ಕೂಸೆರಡು ಕೈಹಿಡಿದು ಪ್ರೇಮದಾರಿ ತೋರಿಸುತಿವೆಮುಳ್ಳ ಕಣಿವೆಯ ಮೇಲೆ ಮಮತೆಯ ಸೇತುವೆ ಕಟ್ಟಲಾಗಿದೆ ಬೇಕೆ ನಿನಗೀಗ ದೀಪ.. ಗಂವ್…ಎನ್ನುವ ಯೌವನವಿಲ್ಲ ಹುಚ್ಚೆಬ್ಬಿಸುವ ಕಾಮದ ತಹತಹಿ ಇಲ್ಲಇದ್ದುದೊಂದೆ ವಾತ್ಸಲ್ಲ ಹಿಡಿಯಷ್ಟು ಒಲವು ಇದೆ ಬೇಕೆ ನಿನಗೀಗ ದೀಪ… *******

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ನೆನಪು ಮರೆಯಲು ಮದಿರೆಯ ಸಂಗ ಮಾಡಿದ್ದೆ ಸಖಿವ್ಯಸನ ತೊರೆಯಲು ಸುರೆಯ ಹಂಗ ಬಿಡದಾಗಿದೆ ಸಖಿ ಮಧುವಿನ ದಾಸನಾಗಿ ದಾಸ್ಯದಿ ಬದುಕ ನೂಕುತಿರುವೆತುಟಿಯಂಚಿಗಿಟ್ಟ ಬಟ್ಟಲಿನಲ್ಲಿ ನೀನು ಕಾಣುತಿರುವೆ ಮರೆಯದಾಗಿದೆ ಸಖಿ ನೀರವ ಮೌನದ ಕತ್ತಲೆಯಲಿ ಸಿಗಬಹದೆಂದು ಹುಡುಕಿರುವೆಶರಾಬಿನ ಸಿಸೆಯೊಳಗೂ ನಿನ್ನದೆ ಬಿಂಬವ ಕಾಣುತಿದೆ ಸಖಿ ಮರೆಯಲಾಗದ ಹವ್ಯಾಸ ನನ್ನನು ಬೆಂಬಿಡದೆ ಕಾಡಿದೆಅವಳನು ಮರೆಯುವ ಮಾತಾಡಿಮಿಣುಕು ದೀಪದ ಮುಂದೆ ಕುಳಿತಿದ್ದೆ ಸಖಿ ಸುರಪಾನದ ಸುಖದಲಿ ತೇಲಾಡಿ ನೊಂದ ಮರುಳನು ಮರುಗುತಿರುವನುಆದದ್ದೇಲ್ಲ ಮರೆತು ಹೊಸಬಾಳ್ವೆಗೆ ಹೊಂದಿ ನಡೆಯ ಬೇಕೆಂದಿದ್ದೆ ಸಖಿ ***********

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ರತ್ನರಾಯಮಲ್ಲ ಆಗಸದಲ್ಲಿ ನೇಸರ ಹುಟ್ಟುತಿದ್ದಾನೆ ನೋಡಿಕನಸುಗಳು ಮೂಟೆ ತರುತಿದ್ದಾನೆ ನೋಡಿ ಇರುಳು ಕಳೆದು ಹೋಗಿದೆ ಹಗಲಿನ ಒಡಲಲ್ಲಿಚೈತನ್ಯವನ್ನು ಹೊತ್ತು ಬಂದಿದ್ದಾನೆ ನೋಡಿ ಮೂಡಣದಲ್ಲಿ ರವಿ ಅಂಬೆಗಾಲು ಇಡುತಿರುವನುಅಕ್ಷಯ ಉಲ್ಲಾಸವನ್ನು ಹಂಚುತಿದ್ದಾನೆ ನೋಡಿ ಅವನಿಯನ್ನು ಹೊಂಗಿರಣಗಳು ಚುಂಬಿಸುತಿವೆಪಾದರಸದ ಚಲನೆಯನ್ನು ನೀಡುತಿದ್ದಾನೆ ನೋಡಿ ಹಕ್ಕಿಗಳ ಚಿಲಿಪಿಲಿಯು ಹೃದಯವನ್ನು ತಟ್ಟುತ್ತಿದೆನಿರಾಸೆಯ ಕೊಳೆಯನ್ನು ತೊಳೆಯುತಿದ್ದಾನೆ ನೋಡಿ ಗಿಡ-ಮರಗುಳು ತಂಗಾಳಿಯಿಂದ ಸ್ವಾಗತಿಸುತಿವೆಬಾಳಿನ ಅನನ್ಯ ಕಲೆಯನ್ನು ಕಲಿಸುತಿದ್ದಾನೆ ನೋಡಿ ಹಾಸಿಗೆಯನ್ನು ತೊರೆದು ಹೊರಗೆ ನೋಡು ಮಲ್ಲಿಮಂದಹಾಸದ ಪಾಠವನ್ನು ಹೇಳುತಿದ್ದಾನೆ ನೋಡಿ

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ಸುಜಾತಾ ಲಕ್ಮನೆ ಗಂಟಿಕ್ಕಿ ಹುರಿ ಹುಬ್ಬು ಹಾರಿಸಿದಂತೆಲ್ಲ ನಾನೇನೂ ಬೆದರುವುದಿಲ್ಲಪೊದೆ ಮೀಸೆಯಲ್ಲೇ ರೋಷ ಉಕ್ಕಿಸಬೇಡ ಸೊಪ್ಪು ಹಾಕುವುದಿಲ್ಲ ತವರಲ್ಲಿ ಮುದ್ದಾಗಿ ಅಂಗೈಲೇ ಬುವಿ ಬಾನು ದೋಚಿದವಳು ನಾನುಕಣ್ಣಲ್ಲೇ ಕೆಣಕಿದಂತೆಲ್ಲ ಮೈ ಮನದ ಕಣಗಳೆಲ್ಲ ನವಿರೇಳುವುದಿಲ್ಲ ನಿನ್ನಂತೆಯೇ ಆಡಿ ನಲಿದು ಬಣ್ಣದ ಲಂಗದಲಿ ಕನಸ ಜೀಕಿದವಳುಮಾತು ಮೌನಕೆ ಮಣಿವ ಬೆಳ್ನಗೆಯಲಿ ಸ್ವಂತಿಕೆ ನಳನಳಿಸುವುದಿಲ್ಲ ನಿನ್ನ ಸೇವೆಯೇ ಎನ್ನ ಜೀವನದ ಪರಮ ಗುರಿಯೆಂಬ ಭ್ರಮೆಯೇಕೆಸದಾ ಕೀಲುಗೊಂಬೆಯಂತೆ ನಡೆವ ಪರಿ ನನಗೂ ಇಷ್ಟವಾಗುವುದಿಲ್ಲ ಕಾಲ ಮೇಲೆ ಕಾಲು ಹಾಕಿ ಕೂತು ಗಂಡು ಜನ್ಮವೆಂಬ ಬೀಗುವಿಕೆಯೇಮಗ್ಗಲಿಗೆಳೆದು ಬರಸೆಳೆದರೆ ಹಗಲಿಡಿಯ ದರ್ಪ ಮರೆಯಾಗುವುದಿಲ್ಲ ಒಮ್ಮೆಯಾದರೂ ಅಹರ್ನಿಶಿ ನಾ ಏಗಿದಂತೆ ಏಗಬಲ್ಲೆಯ ನೀನೂನುಒಡಲಗುದಿಯ ಸವರದಿರೆ ದಾಂಪತ್ಯ ಒಳಗೊಳಗೆ ಪದುಳಿಸುವುದಿಲ್ಲ ನಿನಗಿರುವಂತೆಯೇ “ಸುಜೂ” ಗೂ ತನ್ನವರ ಹಿತಾಸಕ್ತಿ ಇರಬಾರದೇನುನಿನ್ನ ವರ್ತುಲವೇ ಅಂತಿಮವಾದರೆ ಸಾಮರಸ್ಯ ಸೊಗಯಿಸುವುದಿಲ್ಲ *************

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ಅಸಲಿಗೆ ನಕಲಿಯ ಲೇಪನ ಬಳಿದಿರಬಹುದು ನೋಡುಕಂಗಳಿಗೆ ಆವರಿಸಿರುವ ಪೊರೆಯ ಸರಿಸಿ ಅರಿಯಬಹುದು ನೋಡು ಭಿತ್ತಿಯ ಮೇಲೆ ಬಿದ್ದ ಛಾಯೆಯು ಮಿಥ್ಯವಿರಬಹುದು ಒಮೊಮ್ಮೆಅಂತಃಕರಣದ ಅಕ್ಷಿಯರಳಿಸಿ ದಿಟವ ತಿಳಿಯಬಹುದು ನೋಡು ತಳವಿಲ್ಲದ ಬಾವಿ ಅನಂತ ಆಳವ ತೋರಿರಬಹುದು ಅಲ್ಲಿಭ್ರಮೆಯಿಂದ ಹೊರಬಂದು ನೈಜತೆಯ ಕಾಣಬಹುದು ನೋಡು ದಿಗಂತವು ಇಳೆ ಆಗಸವು ಸಂಧಿಸಿದಂತೆ ಭಾಸವಾಗುವುದುವಿಶ್ವವನ್ನೊಮ್ಮೆ ಪರ್ಯಟಿಸಿ ಅವಲೋಕಿಸಬಹುದು ನೋಡು ಅಖಂಡ ಆಗಸವು ನೀಲವರ್ಣದಿ ಗೋಚರಿಸುವುದು ಮೇಲೆಬೆಳಕಿನ ಮೂಲದ ಸತ್ಯಾಸತ್ಯತೆಯನ್ನು ಪರಾಮರ್ಶಿಸಬಹುದು ನೋಡು ********

ಕಾವ್ಯಯಾನ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ತೇಜಾವತಿ ಹೆಚ್.ಡಿ. ಕೊರೆಯುವ ಚಳಿಯಲ್ಲೂ ವಹ್ನಿಯೊಡಲು ದಹಿಸುತ್ತಿದೆ ಸಾಕಿಬಹಿರಂಗದ ತೊಗಲು ಅಂತರಂಗದ ಜ್ವಾಲೆಯಲ್ಲಿ ಮೈ ಕಾಯಿಸುತ್ತಿದೆ ಸಾಕಿ ಹೆಪ್ಪುಗಟ್ಟಿದ್ದ ಹೃದಯ ರಂಧ್ರ ಮುಚ್ಚಿದ್ದ ಕಾಯದ ಬಾಯಿ ತೆರೆದುನರನಾಡಿಯಲ್ಲೂ ಶರವೇಗದಿ ಕಾವು ಮಿಂಚಂತೆ ಸಂಚರಿಸುತ್ತಿದೆ ಸಾಕಿ ರೆಕ್ಕೆ ಮೂಡದ ಹಕ್ಕಿಯ ಕನಸೊಳಗೆ ಮೌನದ ನೀರವತೆ ಮಡುಗಟ್ಟಿದೆಹನಿವ ಮಳೆಯೊಡನೆ ಹರಿವಕಂಬನಿ ಧರೆಯಲಿ ಲೀನವಾಗುತ್ತಿದೆ ಸಾಕಿ ಸಲಿಲದಿಂದ ಬೇರ್ಪಟ್ಟ ಮತ್ಸ್ಯದ ಒದ್ದಾಟದ ಚಡಪಡಿಕೆಯಲಿಜಾತಕಪಕ್ಷಿ ಜೀವಸೆಲೆಗಾಗಿ ಕಾತರಿಸಿ ಜವವ ಕಾಯುತ್ತಿದೆ ಸಾಕಿ ಇರುಳ ತಿಂಗಳ ತೇಜಸ್ಸನ್ನು ಭ್ರಮಿಸಿ ಸ್ಮೃತಿಪಟಲದ ಅಕ್ಷಿಗಳಲ್ಲಿಜಾರಿದ ಅಶ್ರುಬಿಂದುಗಳ ಒರೆಸಿ ದಿಂಬಿನ ಮಡಿಲು ಸಂತೈಸುತ್ತಿದೆ ಸಾಕಿ ********

ಗಝಲ್ Read Post »

ಕಾವ್ಯಯಾನ, ಗಝಲ್

ಕಾವ್ಯಯಾನ

ಗಝಲ್ ಸ್ಮಿತಾ ಭಟ್ ಗೂಡಿನಲ್ಲಿ ಕನಸುಗಳು ಆಗಮನಕ್ಕಾಗಿ ಕಾಯುತ್ತಿವೆಗಡಿಯಲ್ಲಿ ಬದುಕುಗಳು ಶಾಂತಿಗಾಗಿ ಕಾಯುತ್ತಿವೆ. ಕುದಿಯುವ ಜ್ವಾಲಾಗ್ನಿ ಸಿಡಿದೇಳುವುದು ಸತ್ಯಮೌನದಲಿ ಜೀವಗಳು ಪ್ರೀತಿಗಾಗಿ ಕಾಯುತ್ತಿವೆ ಗಡಿ ಗೆರೆಗಳು ನೆಮ್ಮದಿಯ ನೀಡಿದ್ದುಂಟೇ ಎಲ್ಲಾದರೂಬಲಿದಾನದ ದೀವಿಗೆಗಳು ಬೆಳಕಿಗಾಗಿ ಕಾಯುತ್ತಿವೆ ಕೋಟೆ ಕಟ್ಟಿ ಆಳಿದವರೆಲ್ಲ ಉಳಿದಿರುವರೇ ಎಲ್ಲಾದರೂಹೆಪ್ಪುಗಟ್ಟಿದ ದ್ವೇಷಗಳು ಸೋಲಿಗಾಗಿ ಕಾಯುತ್ತಿವೆ. ಅಸ್ತ್ರ,ಶಸ್ತ್ರಗಳೇ ಮಾತಿಗಿಳಿಯುತ್ತಿವೆ ಜಗದೊಳಗೆಅಮಾಯಕರ ಉಸಿರು ನಂಬಿಕೆಗಾಗಿ ಕಾಯುತ್ತಿವೆ. ಯದಾ ಯದಾಹಿ ಧರ್ಮಸ್ಯ ಅನ್ನುತ್ತೀಯಲ್ಲೋ “ಮಾಧವ”ಬುವಿಯೊಡಲ ನೋವುಗಳು ನಿನ್ನ ನ್ಯಾಯಕ್ಕಾಗಿ ಕಾಯುತ್ತಿವೆ *********

ಕಾವ್ಯಯಾನ Read Post »

You cannot copy content of this page

Scroll to Top