ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಭೂಮಿಗೆ ನಮನ”
ಕಾವ್ಯಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಭೂಮಿಗೆ ನಮನ” ಹಸಿರ ಉಸಿರ ಹೊತ್ತ ಭೂದೇವಿ ನೀನು,ನಮ್ಮ ಬಾಳ ಹಾದಿಗೆ ದಿವ್ಯ ಬೆಳಕು ನೀನು.ಕೋಟಿ ಜೀವ ರಾಶಿಗೆ ಆಸರೆಯ ಮಡಿಲು,ನಿನ್ನ ಪ್ರೀತಿಗೆ ಸಾಟಿಯಿಲ್ಲ, ಕರುಣೆ ಕಡಲು. ಬೆಟ್ಟ ಸಾಲುಗಳು ನಿನ್ನ ಮುಡಿಗೆ ಹೂವು,ಹರಿಯುವ ನದಿಗಳು ನಿನ್ನ ಜೀವ ಸೆಲೆಯು.ಗಾಳಿ, ಮಣ್ಣು, ನೀರು ಮರ ನಿನ್ನ ಕೊಡುಗೆ,ಮರೆತ ಮಾನವನ ಎಂತ ಉಡುಗೆ ತೊಡುಗೆ ನಮ್ಮ ಭೂಮಿ ನಾವು ಉಳಿಸ ಬೇಕು,ಕಲುಷಿತವ ತೆಗೆದು ಹಸಿರ ಬೆಳೆಸ ಬೇಕು.ಮರಗಿಡಗಳ ನಟ್ಟು ತಂಪ ಹರಡ ಬೇಕು,ಭೂ ಮಾತೆಯ ಋಣ ತೀರಿಸಬೇಕು. ಭೂಮಿ ದಿನ ಅಲ್ಲ ಬರಿ ಆಚರಣೆ,ಧರೆಯ ಉಳಿಸುವ ಸಂಕಲ್ಪ ರಕ್ಷಣೆ.ಇರುವುದೊಂದೇ ಭೂಮಿ, ಉಳಿಸ ಬನ್ನಿ,ಭವ್ಯ ಭವಿಷ್ಯಕೆ ಹೆಜ್ಜೆ ಹಾಕ ಬನ್ನಿ. ಡಾ ಶಶಿಕಾಂತ ಪಟ್ಟಣ ರಾಮದುರ್ಗ
ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಭೂಮಿಗೆ ನಮನ” Read Post »









