ಡಾ.ಗೀತಾ ದಾನಶೆಟ್ಟಿ ಬಾಗಲಕೋಟೆ ಅವರ ಕವಿತೆ “ಒಲವಿನ ಉಡುಗೊರೆ”
ಕಾವ್ಯ ಸಂಗಾತಿ ಡಾ.ಗೀತಾ ದಾನಶೆಟ್ಟಿ “ಒಲವಿನ ಉಡುಗೊರೆ” ಜೀವನವೆಂಬುದುದೇವರು ಕೊಟ್ಟ ಕೊಡುಗೆಕಳೆಯುವ ಪ್ರತಿಕ್ಷಣವೂ ಒಲವಿನ ಉಡುಗೊರೆ ಹುಟ್ಟಿ ಬಂದ ಈ ಜಗಕೆಕೊಟ್ಟು ಹೋಗುವುದು ಬೆಟ್ಟದಷ್ಟಿದೆಉಣಲು ಮುದ್ದೆ,ನೆಮ್ಮದಿಯ ನಿದ್ದೆಸದ್ಗುಣಗಳಿಂದ ಗೆದ್ದು ಬೀಗಬೇಕು ಮನವೆಂಬ ವನದಲ್ಲಿಪ್ರೀತಿ, ಪ್ರೇಮ,ಪ್ರೇರಣೆಪ್ರಾಮಾಣಿಕತೆ,ಪರಿಶ್ರಮ,ಉತ್ಸಾಹದಬೀಜಗಳ ಬಿತ್ತಿ ಬೆಳೆಯಬೇಕು ಬದುಕಿನ ಪಯಣದಲಿಏರಿಳಿತಗಳನು ಸ್ವೀಕರಿಸಿಸೋಲು,ಗೆಲುವಿನ ಸೋಪಾನದಿಸಾಧನೆ ಶಿಖರವೇರಬೇಕು ಸುಖ-ದುಃಖಗಳನು ಮರೆತುಮಾನವೀಯ ಮೌಲ್ಯಗಳನರಿತುದಿವ್ಯತೆಯ ದಾರಿಯಲಿಭವ್ಯತೆಯ ಬಾಳು ಬೆಳಗಬೇಕು ಪ್ರೀತಿಸುವರೆಷ್ಟೋ,ದ್ವೇಷಿಸುವರೆಷ್ಟೋಕೆಡಿಸಿಕೊಳ್ಳದೆ ಮನದ ಮತಿವಿಶಿಷ್ಟ ವಿಚಾರ,ಆಚಾರಗಳಿಂದಅರೆಕ್ಷಣ ಅರಿತುಕೊಳ್ಳಬೇಕುಡಾ.ಗೀತಾ ದಾನಶೆಟ್ಟಿ ಬಾಗಲಕೋಟೆ
ಡಾ.ಗೀತಾ ದಾನಶೆಟ್ಟಿ ಬಾಗಲಕೋಟೆ ಅವರ ಕವಿತೆ “ಒಲವಿನ ಉಡುಗೊರೆ” Read Post »









