ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ

ವಿನೋದ ತಾವ್ಡೆಕರ್ “ಗುಡಿ ಯೊಳಗೆ ಇವ-ನಮ್ಮವ ಹೊರಬಂದರೆ ಯಾರಿವ !!”

ಕಾವ್ಯ ಸಂಗಾತಿ ವಿನೋದ ತಾವ್ಡೆಕರ್ “ಗುಡಿ ಯೊಳಗೆ ಇವ-ನಮ್ಮವ ಹೊರಬಂದರೆ ಯಾರಿವ !!” ತೋರಿಕೆಯ ಜೀವನ ನೀ ಬಿಟ್ಟುಬಿಡು ಮನುಜ,ಮೇಲೊಂದು ಒಳಗೊಂದ ಮಾಡುವುದ ಬಿಡು!! ಅರಿತುಕೊ ನಿನ್ನ., ಕಲಿತುಕೊ ಒಳಿತನ್ನ !! ಬಯಸ ಬೇಡ ನೀ ನನ್ನಿಂದ ಎಂದಿಗೂ,ದುರಾಸೆಯ ನೀ ಬಿಟ್ಟುಬಿಡು!!ಕೊಡುವೆ ನಾ ನಿನ್ನ ರ‍್ಮದ ಫಲ ವ ಕೇಳಿ ಪಡೆಯುವ ಆಸೆ ನೀ ಬಿಟ್ಟುಬಿಡು ಮನುಜ!!ನಿನ್ನಿಂದ ನನಗೆ ಯಾವುದೇ ಆಸೆಯೂ ಇಲ್ಲ,ಕೊಡುತ್ತಿರುವೆ ನಾ ನಿನಗೆ ಕುರಿಯ-ತಲಿ, ಪ್ರಾಣಿಯ-ಬಲಿ ಎಂಬ,ನಾಲಕ್-ಕಾಸಿನ ತೋರಿಕೆಯ ಜೀವನ ನೀ ಬಿಟ್ಟುಬಿಡು ಮನಜ!! ಹಿಂಸೆಯ ಬದಿಗಿಟ್ಟು ದ್ವೇಷವ ನೀ ತೋರದುಬಿಡು,ಪ್ರೇಮದ ದಾರಿಯ ನೀ ಸ್ವೀಕರಿಸು ಮನುಜ !!ಅಸಹಾಯನಿಗೆ ಸಹಾಯ, ಪೀಡಿತನಿಗೆ ಧಾನ,ಸಹಜ ಕರುಣೆಯಲಿ ನೀ ನನ್ನ ಕಾಣುವೆ ಮನುಜ !! ನೀ ಸಹಕರಿಸಿದ, ದೇಹವು ವೊಂದಿಸುತ್ತಿರುವ ಪ್ರತೀ ವೊಂದನೆಯೂ ನನಗೆ ಸ್ವೀಕಾರವಿದೆ. ನಿನ್ನ ನಮನ ಯಾಚಿಸುವ ಆಸೆ ನನಗಿಲ್ಲ,ನೀ ಧ್ಯಾನವೇ ಆಚರಿಸು. ನನಗೆ ನಿನ್ನ ವೊಂದನೆಯೂ ರ‍್ಮವೇ ಸೂಚಿಸಲು ಬಿಡು,ತೋರಿಕೆಯ ಜೀವನ ನೀ ಬಿಟ್ಟುಬಿಡು ಮನುಜ!! ಒಪ್ಪಿಕೋ ಪ್ರೇಮವ ದುಃಖದ ಜೀವನ ನೀಬಿಟ್ಟುಬಿಡು ಮನುಜ ನೀ ಬಿಟ್ಟುಬಿಡು ಮನುಜ!! -ವಿನೋದ ತಾವ್ಡೆಕರ್

ವಿನೋದ ತಾವ್ಡೆಕರ್ “ಗುಡಿ ಯೊಳಗೆ ಇವ-ನಮ್ಮವ ಹೊರಬಂದರೆ ಯಾರಿವ !!” Read Post »

ಕಾವ್ಯಯಾನ

ಹಮೀದಾಬೇಗಂ ದೇಸಾಯಿ “ಮಳೆಯಲಿ,ಜೊತೆಯಲಿ”

ಕಾವ್ಯ ಸಂಗಾತಿ ಹಮೀದಾಬೇಗಂ ದೇಸಾಯಿ “ಮಳೆಯಲಿ,ಜೊತೆಯಲಿ” ಸುರಿದಿದೆ ಸೋನೆಯುಮುತ್ತುಗಳಂದದಿಮುಂಗಾರಿನ ಮಳೆಯುಇಳಿಯುತ ಬಳುಕಿಹಾಲ್ನೊರೆಯಂದದಿಇಳೆಯೊಡಲಿಗೆ  ಧಾರೆಯು… ಬೀಸಿದೆ ಮೆಲ್ಲನೆಸುಳಿಗಾಳಿಯು ಸುತ್ತಲೂತೂಗಿವೆ  ಬೆಳೆಗಳುತಲೆ  ಎತ್ತುತಲಿಹಸಿರಿನ ಶಾಲನುಹೊದೆದಿದೆ  ಕಾನುಬೆಚ್ಚಗೆ ನಿದ್ರೆಯ ಮಾಡುವೊಲು… ಸುಂದರ  ಸಂಜೆಯಜಿಟಿ  ಜಿಟಿ  ಮಳೆಯಲಿಸಾಗುವಾ ಜೊತೆಯಲಿದೂರದ ನಮ್ಮೊಲವಿನ ಮನೆಗೆ… ಹಮೀದಾಬೇಗಂ ದೇಸಾಯಿ

ಹಮೀದಾಬೇಗಂ ದೇಸಾಯಿ “ಮಳೆಯಲಿ,ಜೊತೆಯಲಿ” Read Post »

ಕಾವ್ಯಯಾನ

ಡಾ.ಭಾರತಿ ಅಶೋಕ್‌ ಅವರ ಕವಿತೆ “ಮದ್ದಾಗಬಹುದಿತ್ತು”

ಕಾವ್ಯ ಸಂಗಾತಿ ಡಾ.ಭಾರತಿ ಅಶೋಕ್‌ “ಮದ್ದಾಗಬಹುದಿತ್ತು” ಈ ಹೊತ್ತಿಗುನಿನಗು ಹೇಳದಮಾತೊಂದು ಎದೆಯಲ್ಲೇಉಳಿದು ಮುಳ್ಳಾಗಿ ಚುಚ್ಚು ತ್ತಿದೆ ಆಮಾತು ಏನೆಂದು ಕೇಳುವಸಹನೆ ಹೋಗಲಿ ಅಲ್ಲೇ ಉಳಿದು ಚುಚ್ಚಿದಗಾಯಕ್ಕಾದರೂ ಮದ್ದಾಗಬಹುದಿತ್ತು ಅದೆಲ್ಲಾ ಬಿಡುನಾನು ಹೇಳದೇ ಉಳಿದ ಮಾತೊಂದು ನನ್ನಲ್ಲೇ ಉಳಿದುಗಾಯವಾಗಿ ಈಗ ಬದುಕನ್ನೇಬಲಿ ಕೇಳುತ್ತಿದೆಎನ್ನುವ ಸತ್ಯದ ಅರಿವು ನಿನಗಿಲ್ಲ ನನಗೋಸತ್ಯ ಅರುಹಿ ಗಾಯ ವಾಸಿ ಮಾಡಿಕೊಂಡು ಬದುಕನ್ನುಬದುಕಿಸಿಬಿಡುವ ತಹತಹಿಕೆ ಈಗಬದುಕಿನ ಬದಲಾಗಿನೀನೇ ಕೇಳಲಿ, ತಿಳಿಯಲಿ ಅರಿಯಲಿ ಎನ್ನುವ ಅಹಂನ್ನುಬಲಿ ಕೊಡವೆ. ಆ ಮಾತನ್ನು ನಿನ್ನಲ್ಲಿ ಹೇಳಿ ಬದುಕಿನೊಟ್ಟಿಗೆನಾನೂ ಗೆದ್ದುಬಿಡುವೆ ಡಾ.ಭಾರತಿ ಅಶೋಕ್

ಡಾ.ಭಾರತಿ ಅಶೋಕ್‌ ಅವರ ಕವಿತೆ “ಮದ್ದಾಗಬಹುದಿತ್ತು” Read Post »

ಕಾವ್ಯಯಾನ, ಗಝಲ್

ಅರುಣಾ ನರೇಂದ್ರ ಅವರ ಗಜಲ್

ಕಾವ್ಯ ಸಂಗಾತಿ ಅರುಣಾ ನರೇಂದ್ರ ಗಜಲ್ ಕಂಡ ಕನಸುಗಳು ನನಸಾಗಬೇಕು ಎಂದೇನೂ ಇಲ್ಲಬಯಸಿದುದೆಲ್ಲಾ ಸಿಕ್ಕು ಬಿಡಬೇಕು ಎಂದೇನೂ ಇಲ್ಲ ಅವ ಬಂದಾಗ ನಕ್ಕು ಹೋಗುವಾಗ ಅಳುವ ಕಾಲ ಕಳೆದಿದೆಸಮಯ ಎಂದಿಗೂ ನನ್ನ ಪರವಿರಬೇಕು ಎಂದೇನೂ ಇಲ್ಲ ಮೌನಕ್ಕೆ ಅಗಾಧವಾದ ಶಕ್ತಿಯಿದೆಯೆಂದು ನನಗೆ ತಿಳಿದಿದೆಮನದ ಭಾವಗಳ ಮಾತಲ್ಲೇ ಹೇಳಬೇಕು ಎಂದೇನೂ ಇಲ್ಲ ಮಾತಾಡಿದ ಮಾತು ಮರೆತಿಲ್ಲ ಮನದ ತುಂಬಾ ತುಂಬಿದೆರೂಪು ಕಣ್ಣಲ್ಲಿದೆ ಕಣ್ಣೆದುರೇ ಇರಬೇಕು ಎಂದೇನೂ ಇಲ್ಲ ಬದುಕನ್ನು ಬಂದಂತೆ ಸ್ವೀಕರಿಸುತ್ತಾ ಬಂದಿದ್ದಾಳೆ ಅರುಣಾಎಲ್ಲಾ ಕಥೆಗಳು ಸುಖಾಂತ್ಯವಾಗಬೇಕು ಎಂದೇನೂ ಇಲ್ಲ ಅರುಣಾ ನರೇಂದ್ರ

ಅರುಣಾ ನರೇಂದ್ರ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಡಾ.ರೇಖಾ ಉದಯ ಅವರ ಗಜಲ್

ಕಾವ್ಯ ಸಂಗಾತಿ ಡಾ.ರೇಖಾ ಉದಯ ಗಜಲ್ ಮಳೆಯ ಹನಿಯೊಂದು ಮುತ್ತಿಕ್ಕಿತ್ತು ಧರೆಗೆಕಾನನದ ಹೂವೊಂದು ಅರಳಿತ್ತು ಕೊನೆಗೆ ಪ್ರಕೃತಿ ಸೊಬಗ ಸವಿಯಲು ಕಾದು ನಿಂತಿಹೆಹರ್ಷದಿ ನವಿಲೊಂದು ನರ್ತಿಸಿತ್ತು ಮಳೆಗೆ ಅಲ್ಲೊಂದು ಕುಹೂ ಗಾನ ಮೈಮರೆಸಿತ್ತು ಕ್ಷಣನಿನ್ನೊಲವಿನ ಓಲೆಯೊಂದು ತಲುಪಿತ್ತು ನನಗೆ ಮೇಘ ಸಂದೇಶದೊಳು ರವಾನಿಸುವ ತವಕಪ್ರೇಮದ ಬಾಣವೊಂದು ಚುಚ್ಚುತ್ತಿತ್ತು ಎದೆಗೆ ಒಲವಿನ ಜಾಲದೊಳು ಸಿಲುಕಿಹಳು ರೇಖೂಮಳೆಬಿಲ್ಲ ಬಣ್ಣವೊಂದು ಸಿಂಗರಿಸಿತ್ತು ಮುಡಿಗೆ ರೇಖಾಕ್ಷರ 

ಡಾ.ರೇಖಾ ಉದಯ ಅವರ ಗಜಲ್ Read Post »

ಕಾವ್ಯಯಾನ

ಎನ್.ಜಯಚಂದ್ರನ್ ದಾಂಡೇಲಿ ಅವರ ಕವಿತೆ”ಕಣ್ಣೆದುರಿನ ಸತ್ಯ”

ಕಾವ್ಯ ಸಂಗಾತಿ ಎನ್.ಜಯಚಂದ್ರನ್ ದಾಂಡೇಲಿ “ಕಣ್ಣೆದುರಿನ ಸತ್ಯ” ಕೇಳಿ…!ಇದು ಕಥೆಯಲ್ಲ…ಕಲ್ಪನೆಯೂ ಅಲ್ಲ…ನಮ್ಮ ಕಣ್ಣೆದುರೇ ಪ್ರತಿದಿನ ನಡೆಯುವಕಟು ಸತ್ಯ! ರಸ್ತೆಯ ಬದಿಯಲ್ಲಿಹಸಿವಿನಿಂದ ಅಳುವ ಮಗುವನ್ನುನೋಡಿದ ಕಣ್ಣುಗಳೇ…ಮೊಬೈಲ್ ಪರದೆಯ ಮೇಲೆನಗುವಿನ ಚಿಹ್ನೆಗಳನ್ನು ಹುಡುಕುತ್ತಿವೆ! ಒಂದು ಕಡೆಅನ್ನ ಕಸದ ಬುಟ್ಟಿಗೆ ಬೀಳುತ್ತಿದೆ…ಮತ್ತೊಂದು ಕಡೆಒಂದು ತುತ್ತಿಗಾಗಿಪ್ರಾಣವೇ ಒಣಗುತ್ತಿದೆ! ಹೆಣ್ಣಿನ ಕಣ್ಣೀರಿಗೆಬೆಲೆ ಕಟ್ಟುವ ಸಮಾಜ…ಅವಳ ಕನಸುಗಳಿಗೆ ಮಾತ್ರಬೆಲೆಯೇ ಇಲ್ಲ!ನ್ಯಾಯದ ಮಾತು ದೊಡ್ಡದು…ನ್ಯಾಯದ ನಡೆ ಮಾತ್ರಇನ್ನೂ ಕುಂಟುತ್ತಲೇ ಇದೆ! ಮರವನ್ನು ಕಡಿಯುವ ಕೊಡಲಿಯೇಬಿಸಿಲಿಗೆ ನೆರಳು ಹುಡುಕುತ್ತಿದೆ.ಪ್ರಕೃತಿಯನ್ನು ಗಾಯಗೊಳಿಸಿದ ಮನುಷ್ಯ,ಪ್ರಳಯ ಬಂದಾಗಆಕಾಶವನ್ನೇ ಪ್ರಶ್ನಿಸುತ್ತಿದ್ದಾನೆ! ಧರ್ಮದ ಹೆಸರಿನಲ್ಲಿಗೋಡೆಗಳನ್ನು ಕಟ್ಟಿದ್ದೇವೆ…ಮಾನವೀಯತೆಯ ಹೆಸರಿನಲ್ಲಿಒಂದು ಸೇತುವೆಯನ್ನಾದರೂ ಕಟ್ಟಿದ್ದೇವೆಯೇ? ಕಣ್ಣೆದುರಿನ ಸತ್ಯವನ್ನುಮುಚ್ಚಲು ಸಾಧ್ಯವಿಲ್ಲ!ಮೌನದಿಂದಬದಲಾವಣೆ ಬರಲಾರದು! ಎದ್ದೇಳಿ!ಪ್ರಶ್ನಿಸಿ!ಅನ್ಯಾಯದ ಮುಂದೆತಲೆಬಾಗಬೇಡಿ! ಒಂದು ಧ್ವನಿಸಾವಿರ ಧ್ವನಿಗಳಿಗೆ ದಾರಿ.ಒಂದು ಹೆಜ್ಜೆಹೊಸ ಸಮಾಜದ ಆರಂಭ. ನೆನಪಿರಲಿ…ಸತ್ಯಕ್ಕೆ ಕಣ್ಣುಗಳಿಲ್ಲ,ಆದರೆಅದನ್ನು ನೋಡುವ ಕಣ್ಣುಗಳುನಮ್ಮಲ್ಲಿರಬೇಕು! ಕಣ್ಣೆದುರಿನ ಸತ್ಯವನ್ನುಕಂಡು ಮೌನವಾಗಬೇಡಿ…ಕಂಡು ಬದಲಾಗಿ…ಕಂಡು ಬದಲಾಯಿಸಿ…ಏಕೆಂದರೆ,ನಾಳೆಯ ಇತಿಹಾಸನಮ್ಮ ಇಂದಿನ ಧೈರ್ಯದಿಂದಲೇ ಬರೆಯಲ್ಪಡುತ್ತದೆ! ಎನ್.ಜಯಚಂದ್ರನ್. ದಾಂಡೇಲಿ

ಎನ್.ಜಯಚಂದ್ರನ್ ದಾಂಡೇಲಿ ಅವರ ಕವಿತೆ”ಕಣ್ಣೆದುರಿನ ಸತ್ಯ” Read Post »

ಕಾವ್ಯಯಾನ

“ಬಿಕರಿಯಾದ ಪ್ರೀತಿ” ಕಲ್ಪನಾ ಎಸ್‌ ಪಾಟೀಲ

ಕಾವ್ಯ ಸಂಗಾತಿ “ಬಿಕರಿಯಾದ ಪ್ರೀತಿ” ಕಲ್ಪನಾ ಎಸ್‌ ಪಾಟೀಲ ಬಿಕರಿಯಾದ ಪ್ರೀತಿ ಅಂದ್ರೆ ಗೊತ್ತೇನು!ಇದ್ದದ್ದೆಲ್ಲವನ್ನೂ ಕೊಟ್ಟುಒಂದು ನಗುವಿಗೆ ಕಾಯೋದುಅದು ಬರದಾಗ ಎದೆ ಖಾಲಿ ಆಗೋದು. ನಿನಗೊ ಪ್ರತಿ ಮಾತಿಗೂ ಅರ್ಥಕಂಡುಕೊಳ್ಳುವ ತವಕಅವರೊ ಪ್ರತಿ ಮಾತಿಗೂ ಬೆಲೆ ಕಟ್ಟಿದ್ರುನೀನು ಕಣ್ಣೀರಲ್ಲಿ ಹೆಸರು ಬರೆದೆಅವರು ಅದನ್ನ ಮಳೆಗೆ ಕೊಟ್ಟು ಹೋದ್ರು. ಒಲವಿನ ಪ್ರೀತಿ ಕೇಳಿದ್ದೇನು?ಸಿಗೋದು ಸುಳ್ಳಿನ ವ್ಯಾಪಾರ ಆಯ್ತು.ನಾನಿಲ್ಲವಾ ಎಂದಿದ್ದ ಕೈ,ಬಿಟ್ಟು ಹೋಗೋವಾಗ “ನಿನ್ನ ತಪ್ಪು”ಅಂದಿತ್ತು ಅದರಲ್ಲಿ ಅಚ್ಚರಿ ಏನಿಲ್ಲ. ಆದ್ರೂ ನಿನಗೆ ಗೊತ್ತಾ?ಬಿಕರಿಯಾದ ಪ್ರೀತಿ ನಿನ್ನನ್ನು ಚಿಕ್ಕದಾಗಿಸಲ್ಲಅದು ನಿನ್ನ ದೊಡ್ಡತನಕ್ಕೆ ಸಾಕ್ಷಿಯಾಕಂದ್ರೆ ಪ್ರೀತಿಸೋಕೆ ಧೈರ್ಯಬೇಕಲ್ಲವೆ ಮೋಸ ಮಾಡೋಕೆ ಅಲ್ಲ. ಅದಕೇಕೆ ಅಳುವೆ ಅಳುವುದಾದರೆಮನಸಾರೆ ಎದೆ ಹಗುರಾಗುವವರೆಗೆ ಅಳುಆಮೇಲೆ ಆ ಕಣ್ಣೀರನ್ನೇ ಶಕ್ತಿಮಾಡ್ಕೊಂಡು ಬಿಡು ಅದರಲ್ಲೆನಗೋದನ್ನ ಕಲಿತುಬಿಡು. ಬಿಕರಿಯಾದ ಪ್ರೀತಿಗೇಕೆ ಅಳುವೆನಿನ್ನನ್ನು ನಿಜವಾಗಿ ಪ್ರೀತಿಸೋಒಲವಿಗಾಗಿ ಕಾಯೋದಾ?ಕಾಯುವುದಾದರೆ ಇನ್ನೆಷ್ಟು ದಿನ.!?ಬರಬಹುದೆಂಬ ಊಹೆಯ ಬಿಟ್ಟು ಬಿಡು. ಊಹಿಸಿರೊದೆಲ್ಲವೂ ಇಲ್ಲಿ ನೈಜವಾಗಿನಡೆಯುವುದಿಲ್ಲ ಊಹೆಯೊಳುಬದುಕುತ್ತಿದ್ದರೆ ಅದು ಬದುಕಲ್ಲಬದುಕಿನ್ನು ಬಿಕರಿಯಾಗುವುದಕ್ಕಿಂತಮೊದಲೆ ನಿನ್ನ ನೀನು ಪ್ರೀತಿಸುವುದನ್ನಕಲಿತುಬಿಡು. ಕಲ್ಪನಾ ಎಸ್ ಪಾಟೀಲಕಾವ್ಯಧರೆ

“ಬಿಕರಿಯಾದ ಪ್ರೀತಿ” ಕಲ್ಪನಾ ಎಸ್‌ ಪಾಟೀಲ Read Post »

ಕಾವ್ಯಯಾನ

ಡಾ.ಲತಾ ಎ. ಆರ್ ಬಾಳೆಹೊನ್ನೂರು “ಲಂಚಾವತಾರ”

ಕಾವ್ಯಸಂಗಾತಿ ಡಾ.ಲತಾ ಎ. ಆರ್ ಬಾಳೆಹೊನ್ನೂರು “ಲಂಚಾವತಾರ” ಅಮಾಯಕರ ಜೀವ ಹಿಂಡುವ ಅಧಿಕಾರಕೊಡಲಿಲ್ಲ ಯಾರಿಗೂ ಪ್ರೀತಿಯ ಸಹಕಾರಮೆರೆದರು ತೋರಿಸಿ ಹಣದ ಅಹಂಕಾರಮರೆತರು ಸೊಕ್ಕಿನಲಿ ಪ್ರೇಮದ ಮಮಕಾರ ಕೊನೆಗಾಲದ ನೋವ ನೀ ಅನುಭವಿಸುವೆಹುಟ್ಟು ಸಂಭ್ರಮ ಸಾವು ನಿಗೂಢ ಅರಿವೆಸಾವಿನಲಿ ಕಾಯುವುದಿಲ್ಲ ನಿನ್ನ ಹಣವೇಒಂದು ದಿನ ಶವವಾಗಿ ಮಣ್ಣಲ್ಲಿ ಕೊಳೆಯುವೆ ಹೊತ್ತೋಯ್ಯುವುದಿಲ್ಲ ಮರಣದ ಕೊನೆಯಲ್ಲಿಬೆಳಕಾಗು ದೀನ ದಲಿತರ ಸೇವೆಯಲಿಕಾಯಕದಿ ಕೈಲಾಸ ನೋಡುವೆ ನೀನಿಲ್ಲಿದುರಹಂಕಾರದಿ ಮಣ್ಣು ಲೋಕದ ಬಯಲಲಿ ದುರಾಸೆಯ ಬದುಕಿನಲಿ ಮಾನವನ ಜೀವನಅತಿ ಆಸೆಯಲಿ ಮಾಡದಿರು ಮೋಸತನಕಾಣಬೇಕಿದೆ ನೂತನ ಜೀವನ ಪಾವನಲಂಚಾವತಾರದ ನೀಚ ರಕ್ಕಸರಿಗೆ ಈ ಕವನ ಡಾ.ಲತಾ ಎ. ಆರ್ ಬಾಳೆಹೊನ್ನೂರು

ಡಾ.ಲತಾ ಎ. ಆರ್ ಬಾಳೆಹೊನ್ನೂರು “ಲಂಚಾವತಾರ” Read Post »

ಕಾವ್ಯಯಾನ

ಮನ್ಸೂರ್ ಮುಲ್ಕಿ  ಅವರ ಕವಿತೆ ” ಕಂಗಳ ಹೊಳಪು”

ಕಾವ್ಯ ಸಂಗಾತಿ ಮನ್ಸೂರ್ ಮುಲ್ಕಿ  “ಕಂಗಳ ಹೊಳಪು” ಹೂವಿನ ಪರಿಮಳ ಬಣ್ಣದಲ್ಲಿರದೆಸುಗಂಧವನೇ ಸೂಸುತಿದೆಸಹನೆಯ ತೊರೆದು ನಡೆಯಲು ಜಗದಲ್ಲಿಪ್ರೀತಿಯೇ ಸೋಲುತಿದೆ. ಕಾಡಿನ ದಾರಿಯು ನಾಡನು ಸೇರಲು ಪ್ರಕೃತಿಯೇ ನಗುತಲಿದೆತಿರುಗುವ ಮನುಜನ ಕಂಡು ಭೂಮಿಯೂ ತಿರುಗುತ ನೋಡುತಿದೆ. ಕಂಗಳ ಹೊಳಪಿಗೆ ಮುತ್ತನು ಹುಡುಕಲುಮನಸ್ಸು ಕಡಲಾಳಕ್ಕೆ ಇಳಿಯುತಿದೆಬೆಳದಿಂಗಳ ಚುಕ್ಕಿಯು ಮೆಲ್ಲನೆ ಭೂಮಿಗೆ ಜಾರುತಿದೆ. ಸ್ವರಗಳು ಪ್ರಾಸವ ಸೇರಿ ಛಂದಸ್ಸಿನಲ್ಲಿ ಅಡಗುತಿವೆಭಾವಗಳೆಲ್ಲವೂ ಲಯದಲ್ಲಿ ಸೇರಿ ಸಾಹಿತ್ಯವನ್ನು ನೀಡುತಿವೆ. ಮನ್ಸೂರ್ ಮುಲ್ಕಿ 

ಮನ್ಸೂರ್ ಮುಲ್ಕಿ  ಅವರ ಕವಿತೆ ” ಕಂಗಳ ಹೊಳಪು” Read Post »

ಕಾವ್ಯಯಾನ, ಗಝಲ್

ಡಾ.ಹಸೀನಾ ಹೆಚ್.ಕೆ. ಶಿವಮೊಗ್ಗ ಅವರ ಗಜಲ್

ಕಾವ್ಯ ಸಂಗಾತಿ ಡಾ.ಹಸೀನಾ ಹೆಚ್.ಕೆ. ಶಿವಮೊಗ್ಗ ಗಜಲ್ *ಸಪ್ತ* ಸಾಗರ ದಾಟಿ ಪರ್ಯವಸಾನಗೊಂಡ *ಹಾದಿಯಿದು* ಪ್ರೇಮ*ಗುಪ್ತ* ಬಯಕೆಯ ಮೀಟಿ ಆಲಾಪಗೊಂಡ *ಶೃತಿಯಿದು* ಪ್ರೇಮ ಹೃದಯದಂಗಳದಲ್ಲಿ ಮಲ್ಲಿಗೆ ಬಳ್ಳಿ ನೆಟ್ಟವನು ನೀನಲ್ಲವೆ ಒಡೆಯ*ಸುಪ್ತ* ಮನವ ಮತ್ತೆ ಮತ್ತೆ ತೀಡಿ *ಲಯಗೊಂಡ* ಭಾವವಿದು ಪ್ರೇಮ ತನ್ನ ತಾ ಅರಿವಿನ ಮೊರೆಗೆ ಕಿವಿ ತೆರೆದು ಕೇಳಿದವರಾರು?*ಕ್ಲುಪ್ತ* ಕಲ್ಪನೆ ಕಟಿ ಕಟಿದು ಕೆನೆಗೊಂಡ *ಚತ್ರವಿದು* ಪ್ರೇಮ ಸುಟ್ಟು ಬೂದಿಯಾಗುವ ಹಂಬಲಕೆ ಕೊನೆ ಮೊದಲಿಲ್ಲ ಗೆಳತಿ*ತಪ್ತ* ಸ್ವರವ ಕುಡಿ ಕುಡಿದು ಹದಗೊಂಡ *ಗುನುಗಿದು* ಪ್ರೇಮ ಜಗದಲಿ ಅದೆಷ್ಟು ಮಧುಪಾತ್ರೆಗಳು ಬರಿದಾಗಿವೆ ನೋಡು ಹಸೀನಾ..*ತೃಪ್ತ* ಹೃದಯವ ಹುರಿದು ಮೆದುಮಾಡಿಕೊಂಡ *ನೈವೇದ್ಯವಿದು* ಪ್ರೇಮ -ಡಾ.ಹಸೀನಾ ಹೆಚ್.ಕೆ, ಶಿವಮೊಗ್ಗ

ಡಾ.ಹಸೀನಾ ಹೆಚ್.ಕೆ. ಶಿವಮೊಗ್ಗ ಅವರ ಗಜಲ್ Read Post »

You cannot copy content of this page

Scroll to Top