ವಾಣಿ ಯಡಹಳ್ಳಿಮಠ ಅವರ ಗಜಲ್
ಕಾವ್ಯ ಸಂಗಾತಿ ವಾಣಿ ಯಡಹಳ್ಳಿಮಠ ಗಜಲ್ ಅದೆಷ್ಟು ಮುದ್ದಿಸಿ ಹಿಡಿದರೂ,ಮೂಷ್ಟಿಯಲ್ಲಿನ ಮರಳು ಸೋರಿದಾಗ ನೀ ನೆನಪಾದೆರಾತ್ರಿಯಿಡೀ ನಿಟ್ಟಿಸುತ ಕೂತರೂ,ಬೆಳಕಾದಂತೆ ಚಂದ್ರ ಮರೆಯಾದಾಗ ನೀ ನೆನಪಾದೆ ಹೊರೆಯೆನಿಸಿದರೂ ಎಂದೂ ಹೊರಗೆಲ್ಲೂ ಹೇಳಿಕೊಳ್ಳಲಿಲ್ಲಹಗಲನು ಹೊಂಗನಸಿನಂತೆ ಬದುಕಿದರೂ ,ಕತ್ತಲಾದಂತೆ ರವಿಯು ಕರಗಿದಾಗ ನೀ ನೆನಪಾದೆ ಪ್ರತಿದಿನವೂ ಮಮತೆಯಿಂದ, ನಗು ನಗುತಾ ನೋಡಿಕೊಂಡೆಅಡಿಗಡಿಗೆ ನೀರುಣಿಸಿ ಪೋಷಿಸಿದರೂ, ಗಿಡವು ಹೂ ಬಿಡದಾದಾಗ ನೀ ನೆನಪಾದೆ ನನ್ನದೆನ್ನುವ ಮೋಹದಲಿ ಪ್ರತಿ ಹೊಡೆತವನೂ ಅಪ್ಪಿಕೊಳ್ಳುತಾ ಹೋದೆಸುನಾಮಿಯಿಂದ ಭೋರ್ಗರೆದು ಸಾಗರ ಅತ್ತರೂ, ಆ ಬಂಡೆ ಅನುನಯಿಸದಾಗ ನೀ ನೆನಪಾದೆ ತನ್ನ ಶಾಂತ ಕಂಗಳನೇ ತಂಗುದಾಣದಂತೆ ನೀಡಿದಳು ವಾಣಿ,ಬೇಡೆಂದರೂ ಕೃತಘ್ನನಂತೆ ಅನ್ಯರೆದುರು ಕಂಬನಿ ಸುರಿದಾಗ ನೀ ನೆನಪಾದೆ ವಾಣಿ ಯಡಹಳ್ಳಿಮಠ
ವಾಣಿ ಯಡಹಳ್ಳಿಮಠ ಅವರ ಗಜಲ್ Read Post »









