ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ

ಟಿ.ಪಿ.ಉಮೇಶ್ ಚಿತ್ರದುರ್ಗ ಅವರ ಕವಿತೆ “ಮಳೆಗೆ ನೆಲದ ಮೇಲೆ ಪ್ರೇಮವಿತ್ತೋ”

ಕಾವ್ಯ ಸಂಗಾತಿ ಟಿ.ಪಿ.ಉಮೇಶ್ ಚಿತ್ರದುರ್ಗ “ಮಳೆಗೆ ನೆಲದ ಮೇಲೆ ಪ್ರೇಮವಿತ್ತೋ” ಅಗೋ ಅದಾವ ಮೋಡ ಮೊದಲು ಕಣ್ಣೀರಿಟ್ಟಿತೊ?ಅದಾವ ಗಾಳಿ ಅದನ್ನು ಹೊತ್ತು ತಂದಿತೊ?ಅದಾವ ಎಲೆ ಚಿಗುರು ಮೊದಲು ತೇವಗೊಂಡಿತೊ?ಅದಾವ ಮಣ್ಣು ಅದನ್ನು ತನ್ನದಾಗಿಸಿಕೊಂಡಿತೊ?ಜಾರಿದ ಹನಿಗಳ ಲೆಕ್ಕ ಹಿಡಿದಷ್ಟುಸುಲಭವಲ್ಲಆಕಾಶದ ಮನಸ್ಸಿನ ಆಳ ಅಗಲ ಅರಿಯುವುದು! ತೇಲಿದ್ದು ಸಾಕೆಂದು ಸುರಿದವೊ?ಬರುವ ದಾರಿಯಲ್ಲೇ ಕರಗಿದವೊ?ಎಲೆಯ ತುದಿಯಲ್ಲಿ ನಿಂತು ತೂಗುವಹನಿಗಳ ನಡುಕವನ್ನು ಓದಿದಷ್ಟುಸುಲಭವಲ್ಲಬೀಳದ ಹನಿಯ ಕನಸು ಅರ್ಥಮಾಡಿಕೊಳ್ಳುವುದು! ನೆಲ ಮುಟ್ಟದ ಮಳೆಹನಿಯ ವ್ಯಥೆಮೋಡದೊಳಗೆ ಉಳಿದ ಮಳೆಹನಿಯ ಮಾತುಯಾರ ಕಿವಿಗು ಸಂಪೂರ್ಣ ಕೇಳುವುದಿಲ್ಲ! ಯಾರೋ ಕೊಡೆ ಬಿಚ್ಚಿ ಹಿಡಿದು ನಡೆದರು!ಯಾರೋ ಕೈಚಾಚಿ ನೆನೆಯುತ್ತ ನಿಂತರು!ಯಾರೋ ಮನೆಮಬೆಯ ಕಿಟಕಿಯ ಗಾಜಿನ ಮೇಲೆತಮ್ಮ ಏಕಾಂತ ಬರೆದು ಜಾರಿಹೋದರು!ಮಳೆ ಸದಾ ಏಕಾಂಗಿಮಳೆಯಿಂದ ಒದ್ದೆಯಾದನೆಲದ ಮನ ಮನೆಗಳ ಕಥೆಗಳು ಮಾತ್ರ ಬೇರೆ ಬೇರೆ! ಮಳೆಗೆ ನೆಲದ ಮೇಲೆ ಪ್ರೇಮವಿತ್ತೊ?ಬರುವ ಬಾನ ದಾರಿಯಲ್ಲೇ ಕರಗುವ ಆಸೆಯಿತ್ತೊ?ಭುವಿಯಲ್ಲಿ ನದಿಯಾಗುವ ದಾಹವಿತ್ತೊ?ಸಮುದ್ರ ಸೇರುವ ಪ್ರತಿಜ್ಞೆಯಿತ್ತೊ?ಮಳೆಯ ಉನ್ಮಾದ ಉಮ್ಮೇದುಗಳ ಬಲ್ಲವರಾರು?ಮಳೆಯಲ್ಲಿ ಸುಮ್ಮನೆ ನೆನೆದವರುಮತ್ತೆ ಮತ್ತೆ ಮಳೆಯನ್ನು ಕಾಯುವರು!ಅರ್ಧ ನೆನೆದವರುಆಕಾಶವನ್ನೇ ದೂರುವರು!ಮೋಡಗಳನ್ನೇ ಗದರಿಸುವರು! ಒಂದು ಹನಿನೆತ್ತಿ ಹಣೆ ಮೂಗು ಕೆನ್ನೆಈ ಎದೆಯ ಮೇಲೆ ಬಿದ್ದುನೆನಪಾಗುವುದು ಸಾಮಾನ್ಯವಲ್ಲ! ತೇವಗೊಂಡ ತುಮುಲಒಣಗಿದ ಮಣ್ಣಿಗು ಮರೆಯುವುದಿಲ್ಲ!ಮಳೆ ಬರೆಯುವಮಣ್ಣ ಕಥೆಗಳಿಗೆ ಯಾವತ್ತೂ ಅಂತ್ಯವಿಲ್ಲ!ಕಾಯುತ್ತಿರುವ ಹೃದಯಗಳಿಗುಮಳೆ ಹೊರತು ಸಂಪೂರ್ಣ ತೃಪ್ತಿಯಿಲ್ಲ! ಟಿ.ಪಿ.ಉಮೇಶ್ ಚಿತ್ರದುರ್ಗ

ಟಿ.ಪಿ.ಉಮೇಶ್ ಚಿತ್ರದುರ್ಗ ಅವರ ಕವಿತೆ “ಮಳೆಗೆ ನೆಲದ ಮೇಲೆ ಪ್ರೇಮವಿತ್ತೋ” Read Post »

ಕಾವ್ಯಯಾನ, ಗಝಲ್

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್

ಕಾವ್ಯಸಂಗಾತಿ ಡಾ ಅನ್ನಪೂರ್ಣ ಹಿರೇಮಠ ಗಜಲ್ ದೇಹವೀಣೆಯಿದು ನಿಲ್ಲದೆ ಕಂಪಿಸುತಿದೆ ನೀ ನುಡಿಸದೇಮನ ಮಂದಾರವಿದು ತಾಪದಿ ಮರುಗುತಿದೆ ನೀ ಬರದೇ ನೆನಪಿನಂಗಳದ ತುಂಬ ಕನಸುಗಳ ಬಣ್ಣದ ರಂಗೋಲಿಜೀವತಂತಿಯಿದು ಬಿಗಿದು ಗಟ್ಟಿಗೊಂಡಿದೆ ನೀ ಬಾರಿಸದೇ ದುಃಖ ಉಮ್ಮಳಿಸಿ ಕಣ್ಣೀರ ಹನಿ ಧಾರೆಯಾಗಿ ಸುರಿಯುತಿವೆಸ್ಪರ್ಶಸುಖವಿಲ್ಲದೆ ರಕ್ತ ಹೆಪ್ಪುಗಟ್ಟಿ ಕೊಲ್ಲುತಿದೆ ನೀ ಸೋಕದೇ ತಂಗಾಳಿಯ ಚಾಮರವೂ ಸುಡುತಿದೆ ಕ್ಷಣ ಕ್ಷಣ ಪ್ರತಿಕ್ಷಣವಿರಹವೇದನೆ ಒಂದೇ ಸವನೇ ಬಾಧಿಸುತಿದೆ ನೀ ಸೇರದೇ ಬಾನ ಬಯಲಲ್ಲೆಲ್ಲಾ ಒಲವಿನೋಲೆಯ ಅಕ್ಷರಗಳ ಕಲರವಎದೆಪುಟದಚ್ಚಾದ ಪ್ರೇಮದ ಚಿತ್ರ ಕೊರೆಯುತಿದೆ ನೀ ಇರದೇ ಅಂತರಂಗದಲ್ಲೆಲ್ಲಾ ನಿನ್ನ ಪ್ರೀತಿ ಪರಿಮಳದ ನೀನಾದದ ಸದ್ದುಕನವರಿಕೆಯ ತರಂಗಗಳ ಭೋಗ೯ರೆತ ಕೊಚ್ಚುತಿದೆ ನೀ ತಬ್ಬದೇ ಅನುಳ ಭಾವಬಿಂದಿಗೆಯಲಿ ಹೊಮ್ಮೊ ಬಯಕೆಗಳ ತೊಳಲಾಟಮುತ್ತಿನಾ ಕತ್ತು ಒತ್ತರಿಸಿ ಮೈಮರೆಸಿ ಮರುಗಿಸಿದೆ ನೀ ಕೂಡದೇಡಾ ಅನ್ನಪೂರ್ಣ ಹಿರೇಮಠ

ಡಾ ಅನ್ನಪೂರ್ಣ ಹಿರೇಮಠ ಅವರ ಗಜಲ್ Read Post »

ಕಾವ್ಯಯಾನ

ಡಾ.ಲತಾ ಎ. ಆರ್. ಬಾಳೆಹೊನ್ನೂರು ಕವಿತೆ “ಸವಿಗಾನ”

ಕಾವ್ಯಸಂಗಾತಿ ಡಾ.ಲತಾ ಎ. ಆರ್. ಬಾಳೆಹೊನ್ನೂರು “ಸವಿಗಾನ” ಹೃದಯದಲಿ ವೀಣೆಯ ತಂತಿ ಮೀಟಿದೆಸುಖ ಸ್ವಪ್ನದ ಸವಿಗಾನ ನುಡಿಸಿದೆಮಧುರ ಮಮತೆಯ ಭಾವ ಬಿಂಬಿಸಿದೆಒಡಲಿನೊಳಗೆ  ಬಿಸಿ ಅನುಭವ ಮೊಳಗಿಸಿದೆ ನೀ ನೀಡಿದ ಪ್ರೀತಿ ಕಾಣಿಕೆ ಮರೆಯಲಾರೆಎಂದೆಂದೂ ಜೊತೆಯ ಪಾತ್ರ ತೊರೆಯಲಾರೆಭರವಸೆಯ ಜೊತೆಗಾರ ಬಾಳಲಿ ನೀನಾಸರೆನೆನಪಿಡುವೆ ಸದಾಕಾಲ ಮರೆಯದೆ ಮನಸಾರೆ ನಂಬಿಕೆಯ ನಡೆಯಲಿ ಸದಾ ನನ್ನೊಂದಿಗಿರುಬದುಕಲಿ ಬದುಕುವ ಭರವಸೆ ನೀನಾಗಿರುಯಾವ ಜನ್ಮದ ಋಣವೋ ತಿಳಿದಿರುಕೈ ಹಿಡಿದು ಬಾಳಲಿ ಮುನ್ನಡೆಸುತ್ತಿರು ಮುಗಿಯುವ ಪಯಣದಲಿ ಕಾವ್ಯವಾಗಿರುನಾ ಬರೆವ ಕವಿತೆಯಲಿ ಹಸಿರಾಗಿರುನೆಮ್ಮದಿಯ ಬದುಕಿಗೆ ನಿರಾಳ ಉಸಿರಾಗಿರುನಾ ಕಂಡ ಸುಂದರ ಕನಸುಗಳಲಿ ನನಸಾಗಿರು. ಡಾ.ಲತಾ ಎ. ಆರ್. ಬಾಳೆಹೊನ್ನೂರು

ಡಾ.ಲತಾ ಎ. ಆರ್. ಬಾಳೆಹೊನ್ನೂರು ಕವಿತೆ “ಸವಿಗಾನ” Read Post »

ಕಾವ್ಯಯಾನ

“ಭೂದೇವಿಯಮದುವೆ” ಶ್ರೀದೇವಿ ಗುಮ್ಮಗೋಳ

ಕಾವ್ಯ ಸಂಗಾತಿ ಶ್ರೀದೇವಿ ಗುಮ್ಮಗೋಳ “ಭೂದೇವಿಯಮದುವೆ” (ಜಾನಪದ ಶೈಲಿಯ‌ಲ್ಲಿ‌ ಬರೆದ ಗೀತೆ)ಮಳೆರಾಯ ಮದುಮಗ ಬಂದಾನಭೂದೇವಿಗ ಮದುವ್ಯಾಗಕ ನಿಂದಾನ| ಮೋಡಗಳ ದಿಬ್ಬಣ ಹೊತ್ತ ಬಂದಾನಸುರಗಿನೀರ ಬರಬರ ಸುರಸ್ಯಾನ| ಭೂದೇವಿಗೆ ಮನಸೋತು ಕರಿಗ್ಯಾನಮುತ್ತು ಹನಿಗಳ ಹೂಹಾರ ಹಿಡಿದಾನ| ರೈತ ಬೀಗನ್ನ ಹಂದರಕ ಕರೆದಾನಜೊಡೆತ್ತಿನ್ಯಾಗ ಸಾರೂಟ ಹೊರಟಾಣ| ಜೋಳಗ್ಯಾಗ ಮುತ್ತಿನ ಜೋಳ ಹಿಡದಾನಬಸವಣ್ಣ ನೇಗಿಲ ಹೊತ್ತಾನ| ಬಸವಣ್ಣ ಬಿತ್ತುತ ನೇಯ್ಗಿ ನೇಯ್ದಾನಭೂದೇವಿಯ ಹಸಿರು ಸೀರೆಯ ಉಟ್ಟಾಳ| ಹಸಿರು ಉಸುರಾಗಿ ಫಲವಾಗಿ ನಿಂತಾಳದವಸದ ಉಡಿ ತಂದೇನಿ ಅಂದಾಳ| ಹಿಗ್ಗಿ ಹಿರಿದು ಊರ ಮಂದಿನನಮ್ಮಣ್ಣ ಸುಗ್ಗಿ ಊಟಕ್ಕ ಕರದಾನ| ಉಂಡ ಮಂದಿ ಬಾಯಿತುಂಬ ಅಣ್ಣನ ಹರಸ್ಯಾರಭೂತಾಯವ್ವಗ ಕೈ ಎತ್ತಿ ಮುಗದಾರ|  ಶ್ರೀದೇವಿ ಗುಮ್ಮಗೋಳ

“ಭೂದೇವಿಯಮದುವೆ” ಶ್ರೀದೇವಿ ಗುಮ್ಮಗೋಳ Read Post »

ಕಾವ್ಯಯಾನ, ಗಝಲ್

ಎ.ಹೇಮಗಂಗಾ ಅವರ ಗಜಲ್

ಕಾವ್ಯ ಸಂಗಾತಿ ಎ.ಹೇಮಗಂಗಾ ಅವರ ಗಜಲ್ ಬೇಕೆನಿಸಿದ ಕ್ಷಣಗಳಲಿ ನೀ ತೊರೆದು ಹೋದೆವಿರಹದ ಕಾವ್ಯಕೆ ಮುನ್ನುಡಿ ಬರೆದು ಹೋದೆ ನಡೆವ ಹಾದಿಗೆ ಸುರಿದ ಪ್ರೀತಿ ಸುಮಗಳೆಷ್ಟೋಕೊಂಚವೂ ದಯೆಯಿರದೇ ತುಳಿದು ಹೋದೆ ನಿನ್ನ ಕೈಯಲಿ ಕೀಲುಗೊಂಬೆ ನಾನಾಗಿ ಕುಣಿದೆಕಟು ಮಾತಿನ ಕೂರಂಬುಗಳಲಿ ಇರಿದು ಹೋದೆ ನಂಬಿ ಬಂದ ಈ ಜೀವಕೆ ಅದೆಷ್ಟು ಆಘಾತಗಳು !ತೋರಿದ ಅಸೀಮ ಒಲವನು ಜರೆದು ಹೋದೆ ನನಸಾಗದ ಕನಸುಗಳ ನೀ ಕಾಣದಿರು *ಹೇಮ*ನಿನಗಾಗಿ ಮಿಡಿದ ಹೃದಯವ ಮುರಿದು ಹೋದೆ ಎ. ಹೇಮಗಂಗಾ

ಎ.ಹೇಮಗಂಗಾ ಅವರ ಗಜಲ್ Read Post »

ಕಾವ್ಯಯಾನ

ಕಲ್ಪನಾ ಎಸ್‌ ಪಾಟೀಲ ಅವರ ಕವಿತೆ “ಅಳು ಬಂದರೆ ಅತ್ತು ಬಿಡು”

ಕಾವ್ಯ ಸಂಗಾತಿ ಕಲ್ಪನಾ ಎಸ್‌ ಪಾಟೀಲ “ಅಳು ಬಂದರೆ ಅತ್ತು ಬಿಡು” ಅಳು ಮನವೆ ತಡೆದುಕೊಳ್ಳಬೇಡಈ ಕಣ್ಣೀರು ದೌರ್ಬಲ್ಯ ಅಲ್ಲವೊಅದಾರ ಮೇಲಿನ ಪ್ರೀತಿಯ ಸಾಕ್ಷಿಗೊಮುನಿಸಿಗೊ ನಿನ್ನ ಮನಸ ಹಗುರಾಗಲುಅತ್ತೆ ಬಿಡು ಅಳು ಬಂದರೆ. ಗಂಟಲು ಕಟ್ಟಿ ಮಾತು ಬಾರದಾದಾಗಕಣ್ಣುಗಳೇ ಮಾತಾಡಲಿ ನಿನ್ನೊಡನೆಒಂದೊಂದು ಹನಿಯೂ ಹೇಳಿವೆ“ನೆನಪುಗಳೆ ನೆನಪಾಗ್ತೀರಿ” ಅಂತ.   ಜನ ಏನಂದಾರೆಂದು ನೋಡಬೇಡಗಂಡಸರು ಅಳಬಾರದು ಅನ್ನೋದೆಲ್ಲ ಸುಳ್ಳುಅವಳು ಹೋದ ನೋವಿಗೆ ಅಳದಿದ್ರೆ  ಆ ಎದೆ ಕಲ್ಲು ಆಗಿರಬೇಕು ಎನ್ನುವರಲ್ಲ. ಅಳು, ಆದ್ರೆ ಆ ಹನಿಗಳಲ್ಲಿ ಮುಳುಗಬೇಡಅದೇ ಹನಿಗಳಿಂದಲೆ ಎದ್ದು ನಿಲ್ಲುನಿನ್ನ ಕಣ್ಣೀರು ಒರೆಸೋ ಕೈ ಇಲ್ಲಎಂದು ಕೊರಗಬೇಡ ಆಕಾಶದಿಂದಅವಳು ನೋಡುವಳಂತೆ. ಅಳು ನೀನು ಮನಸಾರೆ ಅಳು ಮನವೆ  ಅತ್ತ ಮೇಲೆ ಮನಸ್ಸು ಹಗುರ ಆಗವುದಂತೆಮತ್ತೆ ಬದುಕೋಕೆ ಶಕ್ತಿ ಬರುವುದಂತೆಅವಳಿಗಿಷ್ಟ ಆಗೋ ಹಾಗೆ ನಗೋಕೆದಾರಿ ಸಿಗುವುದಂತೆ.   ಅತ್ತೆಯಾ ಅತ್ತು ಬಿಡು ಅಳು ಬಂದರೆಅತ್ತು ಹಗುರ ಆಗು ನಾನಿದ್ದೀನಿ ನಿನ್ನ ಜೊತೆಗೆ. ಇಂತಿ ನಿನ್ನ  ಮನ. ಕಲ್ಪನಾ ಎಸ್ ಪಾಟೀಲ

ಕಲ್ಪನಾ ಎಸ್‌ ಪಾಟೀಲ ಅವರ ಕವಿತೆ “ಅಳು ಬಂದರೆ ಅತ್ತು ಬಿಡು” Read Post »

ಕಾವ್ಯಯಾನ

ಎಸ್. ಆರ್. ಆರ್. ವಿಜಯಲಕ್ಷ್ಮಿ ಅವರ ಕವಿತೆ “ನೀಲ ನಭದೊಳಗಣ ಮುಗಿಲ ದಿಬ್ಬಣ”

ಕಾವ್ಯ ಸಂಗಾತಿ ಎಸ್. ಆರ್. ಆರ್. ವಿಜಯಲಕ್ಷ್ಮಿ “ನೀಲ ನಭದೊಳಗಣ ಮುಗಿಲ ದಿಬ್ಬಣ” ನೀಲ ನಭದೊಳಗಣಮುಗಿಲ ದಿಬ್ಬಣ. ನೀಲ ನಭ ದೊಳಗಣಮುಗಿಲ ಮೇಘಗಾನಸೋಜಿಗದ ಸೊಬಗುಸೃಜಿಸಿದೆ ರಿಂಗಣ           ಬಂಗಾರ ವರ್ಣದ         ಬಾಂದಳದೊಡೆಯಭಾಸ್ಕರನ ಶೃಂಗಾರಕಲ್ಪಲೀಲಾ ಮಗದೊಮ್ಮೆಮರು ಹುಟ್ಟು ಪಡೆದಿದೆ         ಮುಸ್ಸಂಜೆ ಯು  ರವಿಯರಶ್ಮಿ ಯೊಳಗೆ ಮಿಂದೆದ್ದ. ಉಷೆಯ ಉಸುಕುರಂಗೇರಿ ಮೇಘ ತರಂಗಗಳಹಣೆಗೆ ಕೆಂಪಿನ ತಿಲಕ ವಿಟ್ಟಂತೆಇಲ್ಲೊಂದು. ಗಾಂಧಾರಲೋಕ ವರಳಿಸಿದೆ           ಜಗ ತನ್ನಿರುವ ಮರೆತಿರುವಂತೆಮೆಲ್ಲ ನೆಲ್ಲೋ  ಬಾನಾಡಿ. ಗರಿ ಗೆದರಿನಭ ನೋಡಿ  ನಕ್ಕಂತೆಭ್ರಮರವಿದೋ. ಮೆಲು ಹೂವು ಸ್ಪರ್ಶಿಸಿಮಧುವ ಹೀರಿ ಸಂಭ್ರಮಿಸುವಂತೆ                            ಮೇಲ್ ಮುಗಿಲುನೀಲಿ ಕಂಗಳ ತೆರೆದುಧರಣಿ ಯನ್ನೊಮ್ಮೆ ಬಳಿ ಕರೆದುಅವಳ ಕರಿ ಮುಂಗುರಳ               ತೆರೆ ಸರಿಸಿದಂತೆಅಲ್ಲಲ್ಲಿ. ರಂಗೇರಿದಕೆಂದಾವರೆಯ  ಕೆನ್ನೆ ಯನಾಚಿಕೆಯ  ಕೆಂಪುಎಲ್ಲೆಡೆ ಪಸರಿಸಿ ದಂತೆ           ಆಮುಗಿಲ. ಸೌಂದರ್ಯ ದಸಾರವನ್ನೆಲ್ಲ     ತನ್ನೊಡಲೊಳಗಿನಕಡಲಿನೊಳಗಿರಿಸಿ.ಛಾಯೆಯಾಗಿಸಿದೃಷ್ಟಿ ಬೊಟ್ಟಿನಂತೆ.ಪ್ರತಿ ಬಿಂಬಿಸಿನಭದ ನಕ್ಷೆ ಯಲ್ಲಿಚಿತ್ತಾರ.  ಬರೆದಜಗದ ಸೃಷ್ಟಿ ಯಸಾಕ್ಷಾತ್ಕಾರ,   ಎಸ್. ಆರ್. ಆರ್. ವಿಜಯಲಕ್ಷ್ಮಿ                                   

ಎಸ್. ಆರ್. ಆರ್. ವಿಜಯಲಕ್ಷ್ಮಿ ಅವರ ಕವಿತೆ “ನೀಲ ನಭದೊಳಗಣ ಮುಗಿಲ ದಿಬ್ಬಣ” Read Post »

ಕಾವ್ಯಯಾನ

ಡಾ. ಹೆಚ್. ನಟರಾಜ್ ಆರ್ಯ‌ ಅವರ ಕವಿತೆ”ಸ್ವರ್ಗ ಮನದೊಳಿದೆ”

ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ‌ “ಸ್ವರ್ಗ ಮನದೊಳಿದೆ” ಕಾಣದ ಸ್ವರ್ಗಕೆಹಂಬಲವೇಕೆಕಾಣುವ ಬದುಕನುಕಳೆವೆಯೇಕೆ ಹುಟ್ಟಿದ ಉಸಿರುಹೊರಡಲೇಬೇಕುಈ ನಿತ್ಯ ಸತ್ಯವನುಮರೆವೆಯೇಕೆ ನರಕದ ಭಯಕೆನಡುಗುವೆಯೇಕೆಮನದ ಗಾಯಕ್ಕಿಂತದೊಡ್ಡದೇನಿದೆ ಮೂರ್ತಿಯಲ್ಲಅಮೂರ್ತದಲ್ಲಕೊನೆಯ ತೀರ್ಪುಆತ್ಮಸಾಕ್ಷಿಯಲ್ಲವೇ ಕೈಯಲಿ ಕರುಣೆಮನದಲಿ ಪ್ರೀತಿಬದುಕಲಿ ಮಾನವತೆಸಾಕಲ್ಲವೇ ಕಾಣುವ ಬದುಕೇಕೈಯಲ್ಲಿರುವುದುಪ್ರೀತಿ ಇರುವೆಡೆಸ್ವರ್ಗ ಇರುವುದು ಮೂರು ದಿನದ ಬದುಕುನಗುನಗುತಾ ಸಾಗಲಿಒಬ್ಬರ ನೋವಿಗೆಇನ್ನೊಬ್ಬ ಕಾರಣವಾಗದಿರಲಿ ಸ್ವರ್ಗ ನರಕವೆಲ್ಲಮನದೊಳಿವೆಮಾಡಿದ ಒಳಿತುಗಳೇಉಳಿಯಲಿವೆ ಡಾ. ಹೆಚ್. ನಟರಾಜ್ ಆರ್ಯ

ಡಾ. ಹೆಚ್. ನಟರಾಜ್ ಆರ್ಯ‌ ಅವರ ಕವಿತೆ”ಸ್ವರ್ಗ ಮನದೊಳಿದೆ” Read Post »

ಕಾವ್ಯಯಾನ, ಗಝಲ್

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್

ಕಾವ್ಯ ಸಂಗಾತಿ ಪ್ರಭಾವತಿ ಎಸ್ ದೇಸಾಯಿ ಗಜಲ್                                            ಅವಳ ಕಂಗಳ ಮಿಂಚನು ಅರಸುತಾ ಕಾಡಿನಿಂದ ಬಂದೀನಿಅವಳಿಗಾಗಿ ಸುಂದರ ಕನಸುಗಳ ಮೂಟೆ ಹೊತ್ತು ತಂದೀನಿ ಅವಕುಂಠದೊಳಗಿನ ಮೊಗವು ನಗೆ ಜೊನ್ನ ಚೆಲ್ಲುತಿದೆಮಾನಸ ‌ಸರೋವರದೊಳಗಿನ ಬಿರಿದ ನೈದಿಲೆ ಹಿಡಿದು ನಿಂತೀನಿ ಕರದೊಳಗಿನ ಕುಸುಮ ಜಾರಿದರೂ ಕಂಪು ಉಳಿದಿದೆ ದುಂಬಿ ಯಾಗಿ ಅವಳ ಒಡಲೊಳಗೆ ಪರಾಗ ತುಂಬೀನಿ ನಾನು ಅವಳ ವ್ಯಾಮೋಹದ ಬಲೆಯಲಿ ಸಿಲುಕಿರುವೆ ನೋಡುಹೊಳೆವ ಅವಳ ಕಪೋಲದ ಮೇಲೆ ಪ್ರೇಮದುಂಗುರ ಒತ್ತೀನಿ ಬೆಳದಿಂಗಳ ಇರುಳು ಅರಳಿದ ಪಾರಿಜಾತದ ಘಮಲು ಹರಡಿದೆಅನುರಾಗದ ಕಡಲಿಂದ ಪ್ರಭೆಯ ಹೃದಯದ ಮುತ್ತನು ಕದ್ದೀನಿ ಪ್ರಭಾವತಿ ಎಸ್ ದೇಸಾಯಿ

ಪ್ರಭಾವತಿ ಎಸ್ ದೇಸಾಯಿ ಅವರ ಗಜಲ್ Read Post »

ಕಾವ್ಯಯಾನ

ಡಾ.ವೈ.ಎಂ.ಯಾಕೊಳ್ಳಿ ಅವರ “ಹತ್ತು‌ ಕವಿತೆ ಚೂರು”

ಕಾವ್ಯ ಸಂಗಾತಿ ಡಾ.ವೈ.ಎಂ.ಯಾಕೊಳ್ಳಿ “ಹತ್ತು‌ ಕವಿತೆ ಚೂರು” ೧ಅವ್ವ ಕಾಯುತ್ತಾಳೆಕಣ್ಣಾಗಿ ಜಗವಬುದ್ಧನಂತೆ ೨ಅಪ್ಪನ‌ ನೇಗಿಲಕುಳಕ್ಕೆ ಬೇಸರವೆಂಬುದಿಲ್ಲಬರಿ ಹಸಿರು ಬಿತ್ತುತ್ತದೆ ೩ಲೋಕ ನಿದ್ದೆಗಣ್ಣಲ್ಲಿದೆಎಚ್ಚರಿಸ ಬೇಕಾದ ದೈವಮರೆತು‌ ಮಲಗಿದೆ ೪ಯುದ್ಧ ನಿಲ್ಲದುಎದೆಯಲ್ಲಿ ಶಾಂತಿ ತೋಟಬೆಳೆಯುವವರೆಗೆ ೫ಕೈಯ ಕೋವಿಗೂಕ್ಷಮಿಸುವ ಶಕ್ತಿಕೊಟ್ಟಾಗ ಬುದ್ಧ ನಗುತ್ತಾನೆ ೬ನಮ್ಮ‌ಕೇರಿಯತುಂಬ ಹೂವು ಚೆಲ್ಲಿವೆರಂಜಾನ್,ಯುಗಾದಿ ಕೂಡಿ ನಡೆದಿವೆ೭ಅವ್ವ  ತಟ್ಟುವರೊಟ್ಟಿಗೆ ಜಗದ ಹಸಿವುನೀಗಿಸೊ ತಾಕತ್ತಿದೆ ೮ಬರೆದು ಸೋಲುತ್ತೇನೆಆಕೆ ಮಹಾಜಾಣೆಕಣ್ಣೊಳಗೇ ಓದಿ ನಗುತ್ತಾಳೆ ೯ನಾನು ಅಕ್ಷರ ಜೀವಅವಳು‌ ಪ್ರೇಮದ ಅರ್ಥಬಲ್ಲವಳು ಸಾಂಗತ್ಯ ಸಸಾರ ೧೦ಪ್ರೀತಿಯ ಬಾವಿಬತ್ತಿದ ದಿನಸಂಸಾರ ಸತ್ತು ಹೋಗಿರುತ್ತದೆ ಡಾ.ವೈ.ಎಂ.ಯಾಕೊಳ್ಳಿ

ಡಾ.ವೈ.ಎಂ.ಯಾಕೊಳ್ಳಿ ಅವರ “ಹತ್ತು‌ ಕವಿತೆ ಚೂರು” Read Post »

You cannot copy content of this page

Scroll to Top