ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ, ಗಝಲ್

ವಾಣಿ ಯಡಹಳ್ಳಿಮಠ ಅವರ ಗಜಲ್

ಕಾವ್ಯ ಸಂಗಾತಿ ವಾಣಿ ಯಡಹಳ್ಳಿಮಠ ಗಜಲ್ ಮನದ ಮಗು ಹಠ ಮಾಡುವ ಮುನ್ನ ಬಂದುಬಿಡುನೊಂದು ಬಿಕ್ಕಿ ಅಳುವ ಮುನ್ನ ಬಂದುಬಿಡು ಇರಲಿ ಮೈಲುಗಟ್ಟಲೇ ಅಂತರ  ಇಬ್ಬರ ನಡುವೆ ನೆನಪು ನರಳುತ ಮಾಸುವ ಮುನ್ನ ಬಂದುಬಿಡು  ನನಗೂ ಇದೆ ಹಗಲು ದುಡಿಯುವ ಜವಾಬ್ದಾರಿಇರುಳ ಕನಸು ಸಾಯುವ ಮುನ್ನ ಬಂದುಬಿಡು ಜೊತೆ ಬಾಳುವ ಅವಕಾಶವೇ ಇಲ್ಲ ನಮಗೆಪ್ರೀತಿಯ ಎದೆಬಡಿತ ನಿಲ್ಲುವ ಮುನ್ನ ಬಂದುಬಿಡು ವಾಣಿಯ ಈ ಜನ್ಮವೆನೋ ಕಳೆಯುವುದು ವಿರಹದಿಮರುಜನ್ಮದಿ ಮತ್ಯಾರೋ ಕೈ ಹಿಡಿವ ಮುನ್ನ ಬಂದುಬಿಡು ವಾಣಿ ಯಡಹಳ್ಳಿಮಠ

ವಾಣಿ ಯಡಹಳ್ಳಿಮಠ ಅವರ ಗಜಲ್ Read Post »

ಕಾವ್ಯಯಾನ

ಡಾ. ಪುಷ್ಪಾವತಿ ಶಲವದಿಮಠ ಅವರ ಕವಿತೆ “ಅರಿವಿನ ದಾರಿ ಹುಡುಕುತ”

ಕಾವ್ಯ ಸಂಗಾತಿ ಡಾ. ಪುಷ್ಪಾವತಿ ಶಲವದಿಮಠ “ಅರಿವಿನ ದಾರಿ ಹುಡುಕುತ” ಇದ್ದು ಬಿಡು ಸುಮ್ಮನೆ  ಬುದ್ಧನಂತೆ ಸುಮ್ಮನಿದ್ದುಬಿಡುಹೊರಟು ಬಿಡು ಈ ಜಗದ ಜಂಜಡ ಕಳೆದುಕೊಂಡು ಬಿಡು  ಹೊರಟು ಬಿಡು ನೀನುನಡೆವ ದಾರಿ ದೊಡ್ಡದಿದೆಕಲ್ಲು ಮುಳ್ಳು ಚುಚ್ಚಬಹುದುರಕ್ತ ಒಸರಬಹುದುಮುಲಾಮು ಹಚ್ಚಿಕೋಪಟ್ಟಿ ಕಟ್ಟಿಕೋನಡೆಯುವುದು  ಮಾತ್ರ ಬಿಡಬೇಡಎಲ್ಲೂ ನಿಲ್ಲಬೇಡಾ ನಡೆಯುತ್ತಲೇ ಇದ್ದುಬಿಡು ನಿನ್ನ ಅಂಜಿಸುವವರುಹೀಯಾಳಿಸುವವರುಅನುಮಾನಿಸುವವರುಹಿಂದೆಳೆಯುವವರುತೆಗಳುವವರುಬೈಯುವವರುನೂರೆಂಟು ಮಂದಿ ಇರಬಹುದುಬಿಟ್ಟು ಬಿಡು ಮಂದಿಯ ಸಹವಾಸಮನದ ಮಾತು ಕೇಳು ಸಾಕು ನಿನ್ನ ಕಷ್ಟ ಕಣ್ಣಿರಿಗೂ ಕರುಗುವರಿಲ್ಲಈ ದುರ್ಬಲತೆಯ ನೀಗಲೇ ಬೇಕು ನೀನುನಿನಗೆ ನೀನು ಆಸರೆಯಾಗಬೇಕುಕಾಲ ನಿಲ್ಲುವುದಿಲ್ಲನೀನು ನಿಂತರೆ ಹೇಗೆ?!ತಳ್ಳಿಕೊಂಡೆ ಹೋಗಿಬಿಡುವುದು ಕಾಲಜೊತೆಗೆ ನಿಲ್ಲುವರಿಲ್ಲನಿಲ್ಲಬೇಡ  ನೀನು ಓಡು ಓಡುಯಾರಿಗೂ ಕಾಯಬೇಡಯಾರೂ ಕಾದಿಲ್ಲ ನಿನಗಾಗಿ ಒಂಟಿ ಪಯಣವೆಂದು ಬೇಸರಸದಿರುದೂರದ  ದಡ ಸೇರಲುಒಂಟಿಯಾಗಿಯೇ ನಡೆಯಬೇಕುನಿನ್ನ ಪಾಪ ಪುಣ್ಯಗಳ ಮೂಟೆ ಹೆಗಲಿಗೆರಿಸಿಕೊಂಡುನಡೆದು ಬಿಡು ಮೋಹ ಮಮಕಾರಗಳ ತೊರೆದುಬುದ್ಧ ಬಸವ ನಡೆಯಲಿಲ್ಲವೇಅವರ ದಾರಿಯೇನು ಸಲೀಸಾಗಿತ್ತೆ?! ಬೆಳಕಿನ ಅರಮನೆಗೆನೂರಾರು ದಾರಿಗಳಿವೆಯಂತೆನಡೆದು ಬಿಡು ಬೆಳಕಿನೆಡೆಗೆಸವಿ ಸಗ್ಗ ಪಡೆಯಲುಇಹದ ಕಗ್ಗ ಬಿಡಿಸಿಕೊಳ್ಳಬೇಕುಬಿಡಿಸಿಕೊಂಡು ಬಿಡುಅಲ್ಲಮ ನಡೆದ ದಾರಿಅಕ್ಕ ನಡೆದ ದಾರಿನಿನ್ನೆದುರಿಗಿದೆಆ ದಾರಿಗುಂಟ ನಡೆದು ಬಿಡುಸಿಗಬಹುದು ನಿನಗೆಅರಿವಿನ ಮನೆಬೆಳಕಿನ ಅರಮನೆ ತೊರೆದು ಬಿಡು ಸಾವಿರ ಚಿಂತೆಇದ್ದು ಬಿಡು ಬುದ್ಧನಂತೆಹೊರಟು ಬಿಡು ಹೊರಟು ಬಿಡುಬಿಟ್ಟು ಅವರಿವರ ಚಿಂತೆಅರಿವ ದಾರಿ ಹುಡುಕುತಕನಕ ಶರೀಫರು ಮೀಟಿದತಂಬೂರಿ ಮೀಟತ…..  ಡಾ. ಪುಷ್ಪಾವತಿ ಶಲವದಿಮಠ

ಡಾ. ಪುಷ್ಪಾವತಿ ಶಲವದಿಮಠ ಅವರ ಕವಿತೆ “ಅರಿವಿನ ದಾರಿ ಹುಡುಕುತ” Read Post »

ಕಾವ್ಯಯಾನ

ಡಾ ಡೋ ನಾ ವೆಂಕಟೇಶ ಕವಿತೆ “ಖುಷಿಯ ಆಸ್ತಿ”

ಕಾವ್ಯ ಸಂಗಾತಿ ಡಾ ಡೋ ನಾ ವೆಂಕಟೇಶ “ಖುಷಿಯ ಆಸ್ತಿ” ಖುಷಿ ಮರೀಚಿಕೆಯಲ್ಲಮನಸು ಮರುಳುಗಾಡಲ್ಲ ಪುಟ್ಟಪುಟ್ಟ ಆಸೆಗಳುದೊಡ್ಡ ದೊಡ್ಡ ನಿರಾಸೆಗಳುಮಜಲುಗಳುಎಲ್ಲಾ ಗೋಜಲುಗಳ ಕುಸ್ತಿ ಈ ದಿನ ರವಿ ಪೂರ್ವದಲ್ಲಿರುವುದಕ್ಕೆ ಖುಷಿಯಾಗಿರು,ಈ ದಿನವೂ ಸಾಗರದಲ್ಲಿಉಬ್ಬರವಿಳಿತ ಕಂಡು ನಿಬ್ಬೆರಗಾಗು. ಇರುವ ಭಕ್ತಿ ಮೆರೆಸಲೂ ಖುಶಿಇಲ್ಲದಿರುವ ಆಸ್ತಿ ಮರೆಯಲೂ ಖುಶಿ ಖುಶಿ ಇರುವಷ್ಟಕ್ಕೆ ತೃಪ್ತಿಇಲ್ಲದಾಗಿದ್ದಷ್ಟಕ್ಕೆ ಖುಷಿಹುಟ್ಟಿದ್ದಕ್ಕೆ, ಇರುವಷ್ಟನ್ನೇ ಅನುಭವಿಸಿದ್ದಕ್ಕೆ,ಖುಷಿಯಾಗಿರು ಸದಾ. ಮುಷ್ಟಿಯಲ್ಲಿ, ಮನಸಲ್ಲಿಉಳಿದಷ್ಟಕ್ಕೆ ತೃಪ್ತಿಕನಸಲ್ಲಿ ಕಂಡದ್ದಕ್ಕೂ ತೃಪ್ತಿನನಸಲ್ಲಿಹೊಂದಿದ್ದಕ್ಕೂ ತೃಪ್ತಿ ತೃಪ್ತಿಯೇ ಖುಷಿಯ ಆಸ್ತಿ  ಡಾ ಡೋ ನಾ ವೆಂಕಟೇಶ

ಡಾ ಡೋ ನಾ ವೆಂಕಟೇಶ ಕವಿತೆ “ಖುಷಿಯ ಆಸ್ತಿ” Read Post »

ಕಾವ್ಯಯಾನ, ಗಝಲ್

ಡಾ.ರೇಖಾ ಉದಯ್‌ ಅವರ ಗಜಲ್

ಕಾವ್ಯ ಸಂಗಾತಿ ಡಾ.ರೇಖಾ ಉದಯ್‌ ಗಜಲ್ ನಿನ್ನೊಳಗಿನ ಸೆಳೆತಕ್ಕೆ ಸೋತಿದ್ದೇನೆ ಕವಿತೆನನ್ನೊಳಗಿನ ಭಾವನೆಗಳ ಹೇಳಿದ್ದೇನೆ ಕವಿತೆ ಸೋತು ಗೆದ್ದು ನನ್ನೊಳಗೆ ನೀನಾಗಿದ್ದೀಯಲ್ಲೇನಿನ್ನಿಂದ ನವೀರಾದ ಭಾವ ತಾಳಿದ್ದೇನೆ ಕವಿತೆ ದುಗುಡ  ದುಮ್ಮಾನಗಳ ಸರಸಿ ಆವರಿಸಿದ್ದಿಯಲ್ಲೇನೀನಿಲ್ಲದ ನಾನು ಶೂನ್ಯಳೆಂದು ಕೇಳಿದ್ದೇನೆ ಕವಿತೆ ಮುದುಡಿದ ಮನಸ್ಸಿಗೆ ಹೊಸ ಸಂಚಲನ ಮೂಡಿಸಿದೆನನ್ನಲ್ಲಿ ತಿಳಿಯದೆ ನೀ ಅವಿತದ್ದು ನೋಡಿದ್ದೇನೆ ಕವಿತೆ ಒಣಗಿದ ಮರದಲ್ಲಿ ಹೊಸ ಚಿಗುರ ಕಂಡಂತಾಗಿದೆರೇಖೂಳ ಮೇಲಿರುವ ಆ ಒಲವಿಗೆ ನಕ್ಕಿದ್ದೇನೆ ಕವಿತೆ ಡಾ.ರೇಖಾ ಉದಯ್

ಡಾ.ರೇಖಾ ಉದಯ್‌ ಅವರ ಗಜಲ್ Read Post »

ಕಾವ್ಯಯಾನ

ಮೂಗಪ್ಪ ಗಾಳೇರ ಅವರ ಕವಿತೆ “ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….?”

ಕಾವ್ಯ ಸಂಗಾತಿ ಮೂಗಪ್ಪ ಗಾಳೇರ “ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….?” ಬಿದ್ದ ವೈರಿಗಳನ್ನಷ್ಟೇ ಅಲ್ಲಬದ್ಧ ವೈರಿಗಳಿಗೂ ಬೆಚ್ಚಿ ಬೀಳಿಸಿದ್ದ ಬುದ್ಧಮಾಡಿದ್ದು ರಕ್ತ ಹರಿಸುವ ಯುದ್ಧವನಲ್ಲಪ್ರೀತಿ ತುಂಬಿ ಸ್ನೇಹ ಬೆಳೆಸುವ ಧರ್ಮದ ನಡಿಗೆ ಬುದ್ಧ ನಡೆದ ಹಾದಿ ಉದ್ದಗಲಕ್ಕೂ ಜನಸಸಾಗರವೋ ಜನಸಾಗರನಿಮ್ಮ ಯುದ್ಧದ ಪಿರಿಂಗಿಗಳುಆಕಾಶದೆತ್ತರಕ್ಕೆ ಚಿಮ್ಮುತ್ತ ಬೆಂಕಿಯ ಕೆಂಡವನ್ನು ಉಗುಳುತಿದ್ದರೆಬುಧ್ದನ ಉಪದೇಶಗಳುಆ ಬೆಂಕಿಯ ಕೆಂಡದಲ್ಲಿ ಶಾಂತಿಯ ತೋಟವನ್ನು ಸೃಷ್ಟಿಸುತ್ತಿವೆ ಯುದ್ಧ ಗೆದ್ದಿತು ಎನ್ನುವುದಕ್ಕೆನಿಮ್ಮ ಪಿರಿಂಗಿಯ ಮದ್ದು ಗುಂಡುಗಳು ಹರಿಸಿದ ರಕ್ತದ ಚರಿತ್ರೆಗೆಸಡ್ಡು ಹೊಡೆದು ನಿಂತಿದ್ದುಮುಗಿಲೆತ್ತರಕ್ಕೂ ಚಿಮ್ಮಿ ಶಾಂತಿ ಮಳೆ ಸುರಿಸಿದ್ದುನನ್ನ ಬುದ್ಧನ ಮೌನ ಮತ್ತು ಅಹಿಂಸೆ ಅಗೋ ಅಲ್ಲೋಡಿನನ್ನ ಬುದ್ಧನ ಮೌನದ ಮಳೆಗೆನಿಮ್ಮ ಪಿರಂಗಿಯ ಅವಶೇಷಗಳುಸುಟ್ಟ ಇಟ್ಟಿಗೆಗಳಾಗಿವೆಹೆದರ ಬೇಡಿ ಅವುಗಳಿಗೆ ಒಂದಿಷ್ಟುಬುದ್ಧನ ನಾಲ್ಕು ಆರ್ಯ ಸತ್ಯಗಳನ್ನ ಲೇಪಿಸಿದರೆಮತ್ತೆ ಆಕಾಶದೆತ್ತರಕ್ಕೆ ನಿಮ್ಮ ಪಿರಿಂಗಿಗಳು ಸಿಡಿಯಬಹುದುಆಗ ಸಿಡಿಯುವ ಪಿರಿಂಗಿಗಳಿಂದ ಸುರಿಯುವುದು ಬೆಂಕಿ ಉಂಡೆಯಲ್ಲನನ್ನ ಬುದ್ಧನ ಶಾಂತಿ ಮತ್ತು ಅಹಿಂಸೆಯ ಮಳೆಆಗ ಯುದ್ಧದಲ್ಲಿ ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….? ಮೂಗಪ್ಪ ಗಾಳೇರ

ಮೂಗಪ್ಪ ಗಾಳೇರ ಅವರ ಕವಿತೆ “ಗೆದ್ದಿದ್ದು ನನ್ನ ಬುದ್ಧನಲ್ಲದೇ ಮತ್ತಿನ್ಯಾರು….?” Read Post »

ಕಾವ್ಯಯಾನ

ಕಲ್ಪನಾ ಎಸ್ ಪಾಟೀಲ ಅವರ ಕವಿತೆ “ಮಣ್ಣಿಗೆ ಭೇದವಿಲ್ಲ”

ಕಾವ್ಯ ಸಂಗಾತಿ ಕಲ್ಪನಾ ಎಸ್ ಪಾಟೀಲ “ಮಣ್ಣಿಗೆ ಭೇದವಿಲ್ಲ” ಊರ ಬಿಟ್ಟು ದೂರಾಚೆ ಹಾಳು ಸುಡುಗಾಡಂತೆಅದ್ಯಾಕೋ ಯಾರಿಗೂ ಇಷ್ಟವಲ್ಲದ ಜಾಗವಂತೆಇಲ್ಲ್ಯಾರಿಗೂ ಯಾವುದೇ ಭೇದವಿಲ್ಲವಂತೆಹಾಸಿ ಹೊದ್ದಿಕೊಳ್ಳಲಿರುವುದೊಂದೆ ಮಣ್ಣಿನ ಮುದ್ದೆಯಂತೆ ಮನುಷ್ಯನ ಎಲ್ಲದಕ್ಕೂ ಪೂರ್ಣವಿರಾಮ ಇಲ್ಲಿಇದ್ದಾಗ ನಾನೇ ಎನ್ನುವ ಭರದಲ್ಲಿಬೀದಿಯು ನಮ್ಮದಲ್ಲ ಎನ್ನುತ ಉಗಿಯುವನಲ್ಲಿನಾನು ನನ್ನದೆನ್ನುವ ಸ್ವಾರ್ಥದ ವ್ಯಾಮೋಹದಲ್ಲಿ. ನಶ್ವರ ಕಾಯವ ಕಾಯಕಕ್ಕಾಗಿ ಮೀಸಲಿಡುಪರೋಪಕಾರಾರ್ಥಂ ಇದಂ ಶರೀರಂ ಮರೆಯದಿರುಸಮಾಜದ ಉಪಯೋಗಕ್ಕಾಗಿ ಜೀವಿಸಿ ನೋಡುಕಾಯಕದಲ್ಲೇ ಕೈಲಾಸವ ಕಾಣುತಿರು. ಪ್ರತಿಫಲ‌ ಬಯಸದೆ ಸೇವೆಯ ಮಾಡುತಿರುಕಂಗಳ ಕೊಡದಿದ್ದರೂ ಅನ್ಯರ ಕಣ್ಗಳ‌ ಕೀಳದಿರುನಡೆಸಲಾಗದಿದ್ದರೂ ಬೆಳಕಿನ‌ ಮಾರ್ಗ ತೋರಿಸುಜೊತೆ ನಡೆಯಲಾಗದಿದ್ದರೂ ಎಡರು ತೊಡರಾಗದಿರು. ದೇಹವ ನಂಬಿ ಬದುಕು ನಡೆಸುವ ಮನುಜನುಮಣ್ಣಲಿ ಮಣ್ಣಾಗುವ ಮುನ್ನ ನಾಲ್ವರ ಬಾಯಲ್ಲಿರು ನೀನುಅಳಿಯದೆ ಉಳಿಯುವವು ಮಾನವೀಯ ಮೌಲ್ಯಗಳಲ್ಲವೇನು!ಸತ್ಯದ ಮಾರ್ಗದೊಳು ನಡೆ ಅರಿತು ನೈಜತೆಯನು. ಕಲ್ಪನಾ ಎಸ್ ಪಾಟೀಲ

ಕಲ್ಪನಾ ಎಸ್ ಪಾಟೀಲ ಅವರ ಕವಿತೆ “ಮಣ್ಣಿಗೆ ಭೇದವಿಲ್ಲ” Read Post »

ಕಾವ್ಯಯಾನ, ಗಝಲ್

ಎಮ್ಮಾರ್ಕೆ ಅವರ ಗಜಲ್

ಕಾವ್ಯ ಸಂಗಾತಿ ಎಮ್ಮಾರ್ಕೆ ಗಜಲ್ ಎದೆಗಡಲನು ಮಥಿಸಿ ಪಡೆದಿಹ ಅಮೃತವದು ಪ್ರೀತಿಭಾವದಲೆಯು ದಡವ ಸೇರಿದ ಸಂಗಮವದು ಪ್ರೀತಿ ತೋರಿಕೆಗೆ ತಳೆದ ಹೂ ಹೇರಿಕೆಗೆ ಹಬ್ಬಿದ ಬಳ್ಳಿಯಲ್ಲನೆಲ ಮುಗಿಲುಗಳ ನೆಚ್ಚಿ ಬಿರಿದ ಕುಸುಮವದು ಪ್ರೀತಿ ಅಹಮಿಕೆಯ ಅರಿವಿಲ್ಲ ಸಂಶಯಗಳ ಸುಳಿವೆನಿತಿಲ್ಲಗುಡಿಸಲನೇ ಗುಡಿಯ ಮಾಡಿದ ಪವಾಡವದು ಪ್ರೀತಿ ಹೆಚ್ಚು ಕಡಿಮೆ ಎಂಬ ಗಡಿಗಳಿಲ್ಲ ಗಡಿಬಿಡಿಯೂ ಇಲ್ಲಆಡಂಬರಕಾತುಕೊಳ್ಳದ ಸುಗ್ಗಿ ಸಂಭ್ರಮವದು ಪ್ರೀತಿ ಈ ಒಲವ ಜನನಕೆ ಮಹೂರ್ತ ಘಳಿಗೆಗಳು ಬೇಕಿಲ್ಲಬೆಸೆದ ಮನಗಳಂಗಳದ ನಿತ್ಯದ ಉತ್ಸವವದು ಪ್ರೀತಿ ಎಮ್ಮಾರ್ಕೆ

ಎಮ್ಮಾರ್ಕೆ ಅವರ ಗಜಲ್ Read Post »

ಅನುವಾದ, ಕಾವ್ಯಯಾನ

ಡಾ. ದೇವರಾಜು ಮಹಾರಾಜು ಅವರ ತೆಲುಗು ಕವಿತೆ”ಜಲಭಾಷೆ” ಕನ್ನಡಾನುವಾದ ರಂಗನಾಥ ರಾಮಚಂದ್ರರಾವು

ಅನುವಾದ ಸಂಗಾತಿ “ಜಲಭಾಷೆ” ತೆಲುಗು ಮೂಲ:ಡಾ. ದೇವರಾಜು ಮಹಾರಾಜು ಕನ್ನಡಾನುವಾದ ರಂಗನಾಥ ರಾಮಚಂದ್ರರಾವು ಕವನ ಒಂದು ಪ್ರತ್ಯೇಕ ಪರಿಭಾಷೆಅದು ಎಲ್ಲಾ ಭಾಷೆಗಳಿಗೂ ಬಗ್ಗುತ್ತದೆಎಲ್ಲಾ ಭಾಷೆಗಳನ್ನು ಬಗ್ಗಿಸಿಕೊಳ್ಳುತ್ತದೆತಲೆ ಬಗ್ಗಿಸಿದಂತೆ ಬಗ್ಗಿಸಿ, ಎಲ್ಲಾ ಪ್ರಕಾರಗಳನ್ನುತನ್ನ ರೆಕ್ಕೆಗಳ ಕೆಳಗೆ ಎಳೆದುಕೊಳ್ಳುತ್ತದೆಕಾಲದೊಂದಿಗೆ ಸಾಗುತ್ತಾಒಂದೊಂದು ಸಲ ಕಾಲವನ್ನೂ ದಾಟಿಹೋಗುತ್ತದೆಕವನ ಒಂದು ಜಲ ಭಾಷೆಅದು ಯಾವ ಪಾತ್ರೆಯಲ್ಲಾದರೂ ತುಂಬುತ್ತದೆ –ಒದಗುತ್ತದೆ ಕವನ ಒಂದು IDEOGRAMಅದು ಛಂದಸ್ಸಿನಲ್ಲಿ ಬದುಕುವುದೇಮಾತ್ರಾ ಛಂದಸ್ಸಿನಲ್ಲಿ ಬದುಕುವುದೇವಚನದಲ್ಲಿ ಬದುಕುತ್ತದೆ ಎಂಬ ಚರ್ಚೆಎಷ್ಟು ಅರ್ಥರಹಿತವೆಂದರೆ …ಜೀವವು ಯಾವ ರೀತಿಯ ಜೀವಿಯಾಗಿ ನಿಲ್ಲುತ್ತದೆಪ್ರಾಣಿಗಳು ಹುಟ್ಟುತ್ತವೆ, ಸಾಯುತ್ತವೆ , ಆದರೆ …ನಿರಂತರವಾಗಿ ಮುಂದುವರಿಯುವುದು ಜೀವಶಕ್ತಿ ಮಾತ್ರವೇ!ಪ್ರಕಾರಗಳೂ ಅಷ್ಟೇ !!ಅಂತರ್ಗತವಾಗಿ ಸಾಗುವುದು ಕವನಶಕ್ತಿ ಮಾತ್ರವೇ!ಅದೊಂದೇ ಕಾಲಕ್ಕೂ ಜೀವನಕ್ಕೂ ಮಾನವತೆಗೂತಳಮಟ್ಟದಲ್ಲಿ ಹರಿಯುವುದುಆಧಾರವಾಗಿ ಇರುತ್ತಿರುವುದುಕವನ ಒಂದು ಫ್ರತ್ಯೇಕ ಭಾಷೆಅದು ಎಲ್ಲಾ ಜೀವಿಗಳ ಜೀವ ಭಾಷೆಗಳಲ್ಲಿ ಪ್ರಕಟಗೊಳ್ಳುತ್ತದೆ ! ತೆಲುಗುಮೂಲ: ಡಾ. ದೇವರಾಜು ಮಹಾರಾಜುಕನ್ನಡಕ್ಕೆ : ರಂಗನಾಥ ರಾಮಚಂದ್ರರಾವು

ಡಾ. ದೇವರಾಜು ಮಹಾರಾಜು ಅವರ ತೆಲುಗು ಕವಿತೆ”ಜಲಭಾಷೆ” ಕನ್ನಡಾನುವಾದ ರಂಗನಾಥ ರಾಮಚಂದ್ರರಾವು Read Post »

ಕಾವ್ಯಯಾನ

ಸುಮನಾ ರಮಾನಂದ ಅವರ ಕವಿತೆ “ಮಲ್ಲಿಗೆಯ ಸವಿನುಡಿ”

ಕಾವ್ಯ ಸಂಗಾತಿ ಸುಮನಾ ರಮಾನಂದ “ಮಲ್ಲಿಗೆಯ ಸವಿನುಡಿ” ಮಾನಿನಿಯ ಆರೈಕೆಯಲರಳುವದುಂಡುಮಲ್ಲೆ ಹೂಗಳು ನಾವು..ಚಿಗುರ ಹಸಿರೆಲೆಯ ನಡುವಲಿರಾಣಿಯಂತೆ ಮೆರೆಯುವೆವು..!! ನಾಚಿಹ ನವವಧುವರರ ಕರದಲಿಕಟ್ಟಿದ ಮಾಲೆಯಾಗಿ ನಗುವೆವು..ಪೂಜಾವೇಳೆಯಲಿ ದೈವದಪಾದಾರವಿಂದದಿ ಧನ್ಯರಾಗಿಹೆವು!! ಮುಂಜಾವಲಿ ಹೂಮಾಲೆಯಾಗಿದೇವರ ಕೊರಳಲಿ ನಲಿವೆವು..ಹೆಂಗಳೆಯರ ಮುಡಿಯಲಲಂಕರಿಸಿ..ಮುಸಂಜೆಯಲಿ ನಲುಗುವೆವು!! ನಾವಿರುವ ಹೂಬನದ ಸುತ್ತಹರಡುತಲಿದೆ ನಮ್ಮ ಕಂಪು..ನಮ್ಮನು ಜಡೆಯಲಿರಿಸಿದ ನಲ್ಲನಕಂಡು ನಲ್ಲೆಯ ಕೆನ್ನೆ ಕೆಂಪು!! ಸುಮನಾ ರಮಾನಂದ,ಕೊಯ್ಮತ್ತೂರು

ಸುಮನಾ ರಮಾನಂದ ಅವರ ಕವಿತೆ “ಮಲ್ಲಿಗೆಯ ಸವಿನುಡಿ” Read Post »

ಕಾವ್ಯಯಾನ

ಡಾ. ಗೀತಾ ದಾನಶೆಟ್ಟಿ ಬಾಗಲಕೋಟೆ ಅವರ ಕವಿತೆ “ಅಜ್ಞಾನಿ ಕೈಯಲ್ಲಿ ವಿಜ್ಞಾನ “

ಕಾವ್ಯ ಸಂಗಾತಿ ಡಾ. ಗೀತಾ ದಾನಶೆಟ್ಟಿ ಬಾಗಲಕೋಟೆ ” ಅಜ್ಞಾನಿ ಕೈಯಲ್ಲಿ ವಿಜ್ಞಾನ “ ತಾಂತ್ರಿಕ ಯುಗದಲ್ಲಿಮನುಜ ಯಾಂತ್ರಿಕನಾಗಿಯಂತ್ರ ಮಾನವ ಸೃಷ್ಟಿಸಿಕುತಂತ್ರ ಜ್ಞಾನ ಬೆಳೆಸುತ್ತಿದ್ದಾನೆ ತಾತ್ವಿಕ ತಳದಿ ತಳ್ಳಿ ಹಾಕಿಮಾನವೀಯ ಮೌಲ್ಯಗಳ ಮರೆತುಸಂಚು ಮಾಡಿ ಹೊಂಚು ಹಾಕಿವಿಕೃತಿ ಮೆರೆಯುತ್ತಿದ್ದಾನೆ ವೈಚಾರಿಕತೆ ಇಲ್ಲದ ವಿಜ್ಞಾನಿಅಜ್ಞಾನದ ಅಂಧಕಾರದಲಿಅಪಾಯಕಾರಿ ಅನ್ವಸ್ತ್ರಗಳಿಂದನಾಗರಿಕತೆ ನಾಶಗೊಳಿಸುತ್ತಿದ್ದಾನೆ ಭಾವನೆಗಳನ್ನು ಬರುಡಾಗಿಸಿಅಧರ್ಮದ ಅಡ್ಡ ದಾರಿಯಲ್ಲಿದುರಾಸೆಯ ದಾಸನಾಗಿಧರ್ಮದ್ರೋಹಿಯಾಗುತ್ತಿದ್ದಾನೆ ವಿಜ್ಞಾನ ಅಜ್ಞಾನಕ್ಕೆ ಕಾರಣವಾಗಿಮಾನವತೆ ಮೌನವಾಗಿದೆಹೇಡಿಗಳ ಹಗೆತನದಿಂದಅಶಾಂತಿಯ ಸಮರ ಸಾರುತ್ತಿದೆ ವಿಜ್ಞಾನಿಗಳು ಸುಜ್ಞಾನಿಗಳಾಗಿವಿನಾಶ ತಡೆವ ವಿವೇಕಿಗಳಾಗಬೇಕಿದೆಸ್ವಾರ್ಥ ಬಿಟ್ಟು,ಪ್ರೇಮ ಕೊಟ್ಟುಸಾಮರಸ್ಯದ ಜಗವ ಬೆಳಗಬೇಕಿದೆ ಡಾ. ಗೀತಾ ದಾನಶೆಟ್ಟಿ ಬಾಗಲಕೋಟೆ

ಡಾ. ಗೀತಾ ದಾನಶೆಟ್ಟಿ ಬಾಗಲಕೋಟೆ ಅವರ ಕವಿತೆ “ಅಜ್ಞಾನಿ ಕೈಯಲ್ಲಿ ವಿಜ್ಞಾನ “ Read Post »

You cannot copy content of this page

Scroll to Top