ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

“ಸಾವ ತುಟಿಯೂ ನಗು ಹೊತ್ತಿರಬೇಕು” ಡಾ ಬಿ ಎನ್‌ ತಾರಾ ಧಾರವಾಡ

ಕಾವ್ಯ ಸಂಗಾತಿ ಡಾ ಬಿ ಎನ್‌ ತಾರಾ ಧಾರವಾಡ “ಸಾವ ತುಟಿಯೂ ನಗು ಹೊತ್ತಿರಬೇಕು” ಬದುಕು ಹೆಂಗಿರಬೇಕು,ಕತ್ತಲ ಗರ್ಭದಲ್ಲೂಬೆಳಕು ಹೊತ್ತಿರಬೇಕು.ಹಸಿವು ಅಸಾಧ್ಯವಾದರೂಆಸೆಯ ದೀಪವೊಂದುಎದೆಯಲಿ ಹೊತ್ತಿರಬೇಕು.ಬಿದ್ದೆವೆಂದು ಭಯಪಟ್ಟು ಮೌನವಾದರೆ,ಬದುಕು ಪಾಠಕಲಿಸೋದಿಲ್ಲ.ಕಣ್ಣೀರ ಹನಿಗಳು ನೆಲ ಸೇರುವ ಮುನ್ನ, ಮುತ್ತಾಗುವಷ್ಟುಮೌಲ್ಯವಿರಬೇಕು.ಹಾರದೆ ಮುರಿದ ಕನಸುಗಳ  ಹೊಸ ಕನಸಿನ ಬೀಜ ಮೊಳಕೆಯೊಡೆಯಬೇಕು.ನೋವಿನ ಪ್ರತಿಯೊಂದು ಹೆಜ್ಜೆಯ ಹಿಂದೆಯೂ,ಅರ್ಥವುಮೌನವಾಗಿ ನಗಬೇಕು.ಸೋಲಿನ ನೆರಳು ಮೇಲೆ ಬಿದ್ದರೂ,ಕಾಲದ ಹೊಡೆತಎದೆ ಚೂರಿದರೂಧೈರ್ಯವೆಂಬ ಬೇರು ಇರಬೇಕು. ನಗು  ನಗುತಿರಬೇಕು ಸಾವಿರ ನೋವಿಗೆಉತ್ತರವಾಗಬೇಕು.ಕೊನೆಯ ಉಸಿರಿನ ಕ್ಷಣದಲ್ಲೂ,ಜೀವನ ಜಯಿಸಿದತೃಪ್ತಿಯಿರಬೇಕು.ಸಾವ ಬಂದಾಗದೇಹ ಮೌನವಾದರೂ,ಮನಸ್ಸು ಮಾತ್ರ ರಾಗ ಹಾಡುತ್ತಿರಬೇಕು. ಬದುಕಿದ ಜೀವಕ್ಕೆಸಾವ ತುಟಿಯೂನಗುವ ಹೊತ್ತಿರಬೇಕು.ಕತ್ತಲ ಗರ್ಭದಲ್ಲೂಬೆಳಕು ಹೊತ್ತಿರಬೇಕ,ಕಣ್ಣೀರ ಹನಿಗಳುನೆಲ ಸೇರುವ ಮುನ್ನ,ಮುತ್ತಾಗುವಷ್ಟ ಮೌಲ್ಯವಿರಬೇಕು.ಆಕಾಶಕ್ಕೆ ಹಾರದೆ ,ಹೊಸ ಕನಸಿನ ಬೀಜನೋವಿನ ಪ್ರತಿಯೊಂದುಹೆಜ್ಜೆಯ ಹಿಂದೆಯೂ,ಅರ್ಥ ಮೌನವಾಗಿ ನಗಬೇಕು.ಭ್ರಮಿಸಬಾರದು.ಕಾಲದ ಹೊಡೆತ ಎದೆ ಚೂರಿದರೂ ಸಹ,ಧೈರ್ಯವೆಂಬ ನಡುಗದ ಬೇರು ಇರಬೇಕು. ನಗು ಸಣ್ಣದಾದರೂ ಸಾಕು,ಅದು ಸಾವಿರ ನೋವಿಗೆ ಉತ್ತರವಾಗಬೇಕು. ಉಸಿರಿನ  ಕ್ಷಣದಲ್ಲೂ,ಜೀವನ ಜಯಿಸಿದೆವೆಂಬ ತೃಪ್ತಿಯಿರಬೇಕು.ಮನಸ್ಸು  ಹಾಡುತ್ತಿರಬೇಕು.ಸಾವ ತುಟಿಯೂನಗುವ ಹೊತ್ತಿರಬೇಕು. ಡಾ ತಾರಾ ಬಿ ಎನ್ ಧಾರವಾಡ

“ಸಾವ ತುಟಿಯೂ ನಗು ಹೊತ್ತಿರಬೇಕು” ಡಾ ಬಿ ಎನ್‌ ತಾರಾ ಧಾರವಾಡ Read Post »

ಕಾವ್ಯಯಾನ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ ಅವರ ಕವಿತೆ “ನೆನಪಾಗುತ್ತಾರೆ”

ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ನೆನಪಾಗುತ್ತಾರೆ” ಗೆಳೆಯರೆಸತ್ಯ ಶುದ್ಧತೆಗೆಇಲ್ಲ ಬೆಲೆ ಗೌರವಉಪ್ಪಿನಲ್ಲಿ ಕಾಣದ ಇರುವೆಗಳುಸಕ್ಕರೆಯಲ್ಲಿ ಮುಕ್ಕುತ್ತವೆ.ಹಾಲು ಮಾರುವವನುಓಣಿ ಕೇರಿ ತಿರುಗಬೇಕುಹಾಲು ಕೊಳ್ಳುವವರು ಕೇಳುತ್ತಾರೆನೀರೆಷ್ಟು ಬೆರೆಸಿದೆಯೆಂದುಆಲ್ಕೊಹಾಲ್ ಮಾರುವವನಅಂಗಡಿಯಲ್ಲಿ ಜನ ಜಂಗುಳಿಅವರೆ ಸಾರಾಯಿಯಲ್ಲಿನೀರು ಸೋಡಾ ಬೆರೆಸಿ ಸಂಭ್ರಮಿಸುತ್ತಾರೆಮನುಷ್ಯನಿಗೆ ಪಶುವೆಂದರೆಎಲ್ಲಿಲ್ಲದ ಕೋಪಸಿಂಹ ಹುಲಿಯೆಂದರೆಹಿಗ್ಗಿ ಕುಣಿಯುತ್ತಾನೆ.ಪಾಪ ಅವನಿಗೆ ಗೊತ್ತಿಲ್ಲಅವುಗಳು ಪಶುವೆಂದುತಿಳಿ ನೀರಿನಲ್ಲಿ ಎಂದೂ ಮೀನು ವಾಸಿಸುವುದಿಲ್ಲಕೊಳಚೆಯಲ್ಲಿ ಅವುಗಳ ಸಂತೆಸತ್ಯ ಹೇಳುವವನಿಂದುಒಂಟಿಯಾಗುತ್ತಿದ್ದಾನೆಸುಳ್ಳಿಗೆ ಸನ್ಮಾನದ  ಪಟ್ಟನೆನಪಾಗುತ್ತಾರೆಬುದ್ಧ ಬಸವ ಬಾಪುಸತ್ಯ ಹೇಳಿ ಬಿಟ್ಟು ಹೋದರು ಜಗವ ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ ಅವರ ಕವಿತೆ “ನೆನಪಾಗುತ್ತಾರೆ” Read Post »

ಕಾವ್ಯಯಾನ

ಅರುಣಾ ನರೇಂದ್ರ ಅವರ ಗಜಲ್

ಕಾವ್ಯ ಸಂಗಾತಿ ಅರುಣಾ ನರೇಂದ್ರ ಗಜಲ್ ಅವನು ಬಾಳ ಪುಸ್ತಕಕೆ ಮುನ್ನುಡಿ ಬರೆದಿದ್ದಾನೆಬದುಕಿನ ಪುಟ ಪುಟಕೂ ಚೆನ್ನುಡಿ ಬರೆದಿದ್ದಾನೆ ಲೋಕದ ಸುಖವೆಲ್ಲ ನನಗೆ ಇರಲೆಂಬ ಹಂಬಲಮುಖಪುಟಕೆ ಬಣ್ಣ ತುಂಬಿ ನಲ್ನುಡಿ ಬರೆದಿದ್ದಾನೆ ಅನಂತತೆಯ ಹರವಿನಲಿ ನಾನೊಂದು ಬಿಂದುಅಕ್ಷರ-ಅಕ್ಷರ ಸರಿಪಡಿಸಿ ಹೊನ್ನುಡಿ ಬರೆದಿದ್ದಾನೆ ತಾನೆಟ್ಟ ಸಸಿ ಆಗಸದೆತ್ತರಕೆ ಹಬ್ಬಲೆಂಬ ಆಶಯ ಉಳಿಯಲೆಂದು ಕಾಪಿಟ್ಟು ಜೇನ್ನುಡಿ ಬರೆದಿದ್ದಾನೆ ಬೆರಗಿನಲ್ಲಿ ಜಗವಿದನು ಓದಬೇಕೆಂಬ ಹರಕೆ ಅವನದುಮುಗುದೆ ಅರುಣಾಳ ಬೆನ್ನು ತಟ್ಟಿ ಬೆನ್ನುಡಿ ಬರೆದಿದ್ದಾನೆ ಅರುಣಾ ನರೇಂದ್ರ

ಅರುಣಾ ನರೇಂದ್ರ ಅವರ ಗಜಲ್ Read Post »

ಕಾವ್ಯಯಾನ

ಡಾ. ಪುಷ್ಪಾವತಿ ಶಲವಡಿಮಠ ಅವರ ಕವಿತೆ, “ಶರಣಾಗಿರುವೆ ನಿನಗೀಗ”

ಕಾವ್ಯ ಸಂಗಾತಿ ಡಾ. ಪುಷ್ಪಾವತಿ ಶಲವಡಿಮಠ “ಶರಣಾಗಿರುವೆ ನಿನಗೀಗ” ಓ ಮೌನವೇ! ಮಹಾಮೌನವೇ!ನೀರವ ನಿರಾಳ ಮೌನವೇ!ಬಾ ನನ್ನೆದೆಯಾಳದಲಿನಿಶ್ಚಲವಾಗಿ ನೆಲೆಸುಶರಣಾಗಿರುವೆ ನಿನಗೀಗಸೋತು ಬಂದಿರುವೆ ನಿನ್ನ ಬಳಿಗೀಗಕರುಣೆದೋರು ದಯೆತೋರಿ|| ಓ!ಅನಂತ ಮಹಾಮೌನವೇ!ನಿನ್ನ ಮೌನಗರ್ಭದಲಿ ಮಿಸುಕಾಡುತಿರುವಭಾವಕೂಸುಗಳೆಲ್ಲ ಸುಂದರ ಪದಗಳೇಒಂದೊಂದು ಮೌನ ಮಹಾಕಾವ್ಯಗಳೇ|| ತೀಡಿ ಬಂದ ತಂಗಾಳಿಯುತೂಗಿ ತಂದ ಮಣ್ಣ ಗಂಧವೆಲ್ಲಬಾಳ ಗಂಧವೇlತುಂಬಿ ಬಂದ ತಾಯ್ ಮಮತೆಯೆಲ್ಲಮಡಿಲ ಮಗುವಿಗೆ ಜೋಗುಳವೇ lಮೌನದ ಬಿಸಿ ಅಪ್ಪುಗೆಯದುಸುಂದರ ಭಾಷೆಯೇ ll ಪ್ರಕೃತಿಯ ಭಾಷೆಯೆಲ್ಲವೂ ಮೌನವೇlಮೊಗ್ಗೆಯೊಡೆದು ಅರಳುವ ಅರಳೇ!ಒಲವಿನ ಬೆಳಕೇ!ಸದ್ದಿಲ್ಲದೇ ನಡೆಯುವ ಸಂಭ್ರಮವೇ! ಓ ಮೌನವೇ!ಸೂರ್ಯೋದಯ ಚಂದ್ರೋದಯನಿನ್ನ ಪದ ಲಾಲಿತ್ಯವೇ lದಣಿದ ಮನಗಳಿಗೆ ನಿನ್ನ ಮಡಿಲದುಹೂವಿನ ಹಾಸಿಗೆಯೇ ll ಗಾಳಿಯ ಮೃದು ಸ್ಪರ್ಶಕೆ ತೂಗುವಸಸ್ಯ ಕುಲವೇ ಭೂ ದೇವಿಯ ದಣಿವಿಗೆಬೀಸಿದ ಮೌನ ಚಾಮರವೇ llಅಯ್ಯೋ!ಗಳಿಗೆಗೊಂದು ತೆರೆ ಬಂದುಕಲಕುತಿದೆ ಕಡಲ ಧ್ಯಾನವನೆ lಹಕ್ಕಿಗಳಿಂಚರವದು ತೇಲಿ ಬಂದುಕದಡುತಿದೆ ಅನಂತಕಾಲದ ಬನದ ತಪವನೆ lನೀರವತೆಯಲೂ ಮೌನವೇಸದ್ದಿನಲ್ಲೂ ನಿದ್ದೆಯೇ lಮೌನವೇ ಇದೆಲ್ಲ ನಿನ್ನ ಲೀಲೆಯೇ ll ಋಷಿಮುನಿಗಳ ಕವಿಪುಂಗವರೆದೆಯಲಿವಿರಮಿಸಿದ ಮಾತೆಯೇ!ಮೌನ ತಪಸ್ವಿನಿಯೇ!ಜಗದ ಸುಂದರ ಭಾಷಿಣಿ ನೀನೆಯೇ llಕರುಣೆದೋರಿ ಬಾ ನನ್ನೊಳಗೆ ತಾಯಿಯೇ lಮೌನದೇವಿಯೇ!ಅನಂತಯಾನಕೆ ಮೌನದಲಿಕೈಹಿಡಿದು ನಡೆಸೆನ್ನನುl ಶರಣಾಗಿರುವೆ ನಾನೀಗ ನಿನಗೆಓ!ಮೌನದೇವತೆಯೇನಾನೀಗ ಶರಣಾಗಿರುವೆ ನಿನ್ನಡಿಗಳಿಗೆಓ!ಮೌನ ದೇವತೆಯೇಶರಣಾಗಿರುವೆ ನಿನಗೀಗ ಶರಣಾಗಿರುವೆ. ಡಾ. ಪುಷ್ಪಾವತಿ ಶಲವಡಿಮಠ

ಡಾ. ಪುಷ್ಪಾವತಿ ಶಲವಡಿಮಠ ಅವರ ಕವಿತೆ, “ಶರಣಾಗಿರುವೆ ನಿನಗೀಗ” Read Post »

ಕಾವ್ಯಯಾನ

ಎಮ್ಮಾರ್ಕೆ ಅವರ ಕವಿತೆ “ಜಾತಿಭೂತ”

ಕಾವ್ಯ ಸಂಗಾತಿ ಎಮ್ಮಾರ್ಕೆ “ಜಾತಿಭೂತ” ಹಿಡ್ಕೊಂಡದ ಬಡ್ಕೊಂಡದಹಾಳು ಜಾತಿಯ ಭೂತ,ಅದರ ಬೆನ್ನು ಹತ್ತಿ ಹತ್ತಿಯೇಈ ಮನುಷ್ಯಾ ಸೋತ ಮ್ಯಾಲ ಮ್ಯಾಲಂತ ಇವ್ರುತುಂಬಾ ಮೆರಿಲಾಕತ್ತಾರ,ಕೀಳ ಕೀಳ ಅಂತ ಅವ್ರನತುಂಬ ತುಳಿಲಾಕತ್ತಾರ ಖೊಟ್ಟಿ ಮಂದಿ ಎಲ್ಲ ಸೇರಿಗಟ್ಟ್ಯಾನ ಗ್ವಾಡಿ ಕಟ್ಟ್ಯಾರ,ಆರಕ ಜೋತ ಬಿದ್ದ ಮ್ಯಾಲಇದ್ದ ಮೂರನ್ನೂ ಬಿಟ್ಟಾರ ಜಾತಿಯ ಹೆಸರಲ್ಲಿ ಎಷ್ಟೋಜೀವಗಳ ಬಲಿ ಕೊಟ್ಟಾರ,ದೇವ್ರು ದಿಂಡ್ರೆಲ್ಲವು ಕೂಡಜಾತಿಗಿ ಸೇರಿಸಿ ಬಿಟ್ಟಾರ ಭೂಮಿ ಮ್ಯಾಲ ಏನಂತಇಂತವರೆಲ್ಲ ಹುಟ್ಟ್ಯಾರ,ಜಾತಿ ಜಾತಿ ಅಂತಾ ಹೇಳಿಮನುಷ್ಯತ್ವವ ಸುಟ್ಟಾರ ಎಮ್ಮಾರ್ಕೆ

ಎಮ್ಮಾರ್ಕೆ ಅವರ ಕವಿತೆ “ಜಾತಿಭೂತ” Read Post »

ಕಾವ್ಯಯಾನ

ಪ್ರೊ. ರಾಜೇಶ್ವರಿ ಶೀಲವಂತ ಪುಣೆ “ಸಂವೇದನೆ”

ಕಾವ್ಯ ಸಂಗಾತಿ ಪ್ರೊ. ರಾಜೇಶ್ವರಿ ಶೀಲವಂತ ಪುಣೆ “ಸಂವೇದನೆ”. ಮರಿ ಹಕ್ಕಿಗೆ ರೆಕ್ಕೆಗಳಿವೆಎಲ್ಲವನು ಎದುರಿಸುವಛಲವಿದೆಆಗಸದೆತ್ತರಕ್ಕೆ ಏರುವಆಕಾಂಕ್ಷೆಯಿದೆರೆಕ್ಕೆಯ ಶಕ್ತಿಗೆ  ಅನುಮತಿಗಿಂತಪ್ರೀತಿ ವಿಶ್ವಾಸದಆರೈಕೆಯಿರಲಿಬಾನೆತ್ತರಕೆ ಹಾರಬೇಕಾದಒಲವಿರಲಿಜೊತೆಯಿರುವೆನೆಂಬ ಭರವಸೆಯಿರಲಿಸಂವಾದದಸಂವೇದನೆಯಿರಲಿ. ಪ್ರೊ. ರಾಜೇಶ್ವರಿ ಶೀಲವಂತ ಪುಣೆ

ಪ್ರೊ. ರಾಜೇಶ್ವರಿ ಶೀಲವಂತ ಪುಣೆ “ಸಂವೇದನೆ” Read Post »

ಕಾವ್ಯಯಾನ

“ಹೌದು, ಗಂಡಸರೆ ಹೀಗೇ!!” ಸರಸ್ವತಿ ಕೆ ನಾಗರಾಜ್

ಕಾವ್ಯ ಸಂಗಾತಿ ಸರಸ್ವತಿ ಕೆ ನಾಗರಾಜ್ “ಹೌದು, ಗಂಡಸರೆ ಹೀಗೇ!!” ಗಂಡಸರು ಸ್ವಲ್ಪ ಕೆಟ್ಟವರೇ ಹೌದು,ಆದರೆ ಜವಾಬ್ದಾರಿಯ ಸಾಹುಕಾರರು.ಮಾತಿನಲ್ಲಿ ಕಠಿಣತೆ ಇದ್ದರೂ,ಮನದೊಳಗೆ ಕರ್ತವ್ಯದ ಭಾರ ಹೊತ್ತವರು. ಹೌದು, ಅವರು ಕೆಟ್ಟವರೇ ಸರಿ,ಭಾವನೆ ತೋರಿಸೋದು ಅವರು ಕಲಿತಿಲ್ಲ.ನೋವುಗಳನ್ನು ನಗು ಮುಖಕ್ಕೆ ಮರೆಸಿಕೊಂಡು,ಜೀವನದ ಹೊರೆ ಹೊತ್ತು ನಡೆಯುವವರು. ತಮ್ಮ ಕನಸುಗಳನ್ನು ಬಲಿಕೊಟ್ಟು,ಕುಟುಂಬದ ನಗುವಲ್ಲಿ ಸಂತೋಷ ಕಂಡವರು.ಮೌನದಲ್ಲೇ ಪ್ರೀತಿ ತೋರಿ,ನಗುವ ಮಾರಿಯೇ ಬದುಕಿದವರು. ಕಣ್ಣೀರು ಕಣ್ಣಲ್ಲಿ ನಿಂತರೂ,“ನಾನು ಬಲಿಷ್ಠ” ಎನ್ನುವ ಮುಖವಾಡ.ಕುಟುಂಬದ ನಾಳೆಗೆ ಆಶ್ರಯವಾಗಿ,ಇಂದಿನ ನೋವನ್ನು ನುಂಗಿದವರು. ಹೆಣ್ಣಿಗೆ ಸಹಾಯ ಮಾಡಿದರೆ,ಅವನು “ಕಾಮುಕ” ಎಂಬ ಬಿರುದು.ಉದ್ದೇಶದ ಪಾವಿತ್ರ್ಯ ಕಾಣದೆ,ಸಮಾಜವೇ ತೀರ್ಪು ಬರೆಯುವುದು. ಒಳ್ಳೆಯತನಕ್ಕೂ ಸಂಶಯದ ಕಣ್ಣು,ಸಹಾಯಕ್ಕೂ ತಪ್ಪು ಅರ್ಥ.ಮೌನವಾಗಿ ಹಿಂದೆ ಸರಿದು,ತಮ್ಮ ಮನಸನ್ನೇ ಮುಚ್ಚಿಕೊಂಡವರು. ಹೌದು ಗಂಡಸರೆ ಹೀಗೆ ಅವರು ದೂರ ಉಳಿದರು,ಭಾವನೆ ತೋರಿಸೋ ಧೈರ್ಯ ಕಳೆದುಕೊಂಡರು.ತಪ್ಪಾಗಿ ಅರ್ಥವಾಗುವ ಭಯದಲ್ಲಿ,ಒಳ್ಳೆಯತನವನ್ನೇ ಮರೆಮಾಚಿಕೊಂಡರು.  ಹೌದು ಗಂಡಸರೆ ಹೀಗೆ,ಅತ್ತರು ಅವಮಾನ, ನಕ್ಕರು ಅವಮಾನ,ಭಾವನೆ ತೋರಿಸದಿದ್ದರೆ,ಕಲ್ಲು ಹೃದಯದವರು. ಅವರಿಗೆ ಯಾರೂ ಹೇಳಲಿಲ್ಲ,“ನಿನ್ನ ಅಳುವಿಗೂ ಅರ್ಥ ಇದೆ” ಎಂದು.ಕಣ್ಣೀರಿಲ್ಲದೇ ಅಳುವುದನ್ನ ಕಲಿತು,ಹೃದಯವನ್ನೇ ಸಮಾಧಿ ಮಾಡಿಕೊಂಡವರು.ಈ ಗಂಡಸರು. ಹೌದು ಈ ಗಂಡಸರೆ ಹೀಗೆ ಸರಸ್ವತಿ ಕೆ ನಾಗರಾಜ್.

“ಹೌದು, ಗಂಡಸರೆ ಹೀಗೇ!!” ಸರಸ್ವತಿ ಕೆ ನಾಗರಾಜ್ Read Post »

ಕಾವ್ಯಯಾನ

ಮನ್ಸೂರ್ ಮುಲ್ಕಿ ಅವರ ಕವಿತೆ “ಆ ರಾತ್ರಿ”

ಕಾವ್ಯ ಸಂಗಾತಿ ಮನ್ಸೂರ್ ಮುಲ್ಕಿ “ಆ ರಾತ್ರಿ” ಆ…. ರಾತ್ರಿ… ಯಾಕೇ… ಹೀಗೆಕಡಲ ತೆರೆಯ ಶಬ್ದದ ಹಾಗೆ….ತೆರೆಯನೊರೆಯು ತಟವ ಸೇರಿದ ಹಾಗೆ..ಕತ್ತಲೆಯಲ್ಲಿ ಮೌನವೇ ಮಾತಾಡಿದ ಹಾಗೆ ನಿನ್ನ ಕಣ್ಣೊಳಗಿನ ಬೆಳಕಿನಲಿನನ್ನ ಕನಸು ಕರಗಿದ ಹಾಗೆತುಟಿಗಳ ಅಂಚಿನ ನಗುವಿನಲಿನನ್ನ ಮನಸು ನಾಚಿದ ಹಾಗೆ ನಿನ್ನ ಉಸಿರಿನ ಬೆಚ್ಚನೆಯಲಿನಾ ನನ್ನ ಮರೆತ ಹಾಗೆನಿನ್ನ ಹೃದಯದ ಬಡಿತಕೆನನ್ನ ಹೃದಯ ನೃತ್ಯ ಮಾಡಿದ ಹಾಗೆ ನಿನ್ನ ಬೆರಳ ಬಂಧನದಲ್ಲಿನನ್ನ ಅಲಂಕಾರ ಕಂಡ ಹಾಗೆನಿನ್ನ ಎದೆಗೆ ತಲೆಬಾಗಿನನ್ನುಸಿರನು ಚೆಲ್ಲಿದ ಹಾಗೆ ನಿನ್ನ ತುಟಿಗಳ ಮೌನನನ್ನೊಡಲ ಮಧುರತೆಯ ಹಾಗೆಈ ಪ್ರೀತಿಯ ರಾತ್ರಿಯ ಅಂಗಳದಲ್ಲಿನಿನ್ನಲ್ಲಿ ನಾನು ಲೀನವಾದ ಹಾಗೆ. ಮನ್ಸೂರ್ ಮುಲ್ಕಿ

ಮನ್ಸೂರ್ ಮುಲ್ಕಿ ಅವರ ಕವಿತೆ “ಆ ರಾತ್ರಿ” Read Post »

ಕಾವ್ಯಯಾನ

ವ್ಯಾಸ ಜೋಶಿ ಅವರ ತನಗಗಳು

ಕಾವ್ಯ ಸಂಗಾತಿ ವ್ಯಾಸ ಜೋಶಿ ತನಗಗಳು ಮಳೆ ಹೊಯ್ದ ವರುಣಸೂರ್ಯನ ಕಳಿಸಿದಹಸಿಯಾದ ಭೂಮಿಯುಹದವಾಗಿದೆನೆಂದ? ಬಿಸಿ ಕೊಟ್ಟ ರವಿಯುಹೂವು ಅರಳಿಸಿದಸಂಜೆ ಹೊತ್ತಾಗುತಾತಾನೇ ನಾಚಿ ಕೆಂಪಾದ. ಮಳೆ ಸುರಿಸಿ ಬಾನುಇಳೆಗೆ ಇಣುಕಿತುಚಿಗುರೊಡೆದ ಭೂಮಿಧನ್ಯವಾದ ಹೇಳಿತು. ಹುಲುಸಾದ ಭೂಮಿಗೆಸಂಕ್ರಾಂತಿಯೇ ಸೀಮಂತಸಲಹುವ ಭೂತಾಯಿಕಕ್ಕುಲಾತಿ ಹೃದಯಿ. ಕೀಟವ ತಿಂದ ಹಕ್ಕಿಬೆಳೆಯ ರಕ್ಷಿಸಿತುಮಾಗಿದ ತೆನೆ ತುಂಬಿಮೃಷ್ಟಾನ್ನಪಡೆಯಿತು. ಬೆವರು ಸುರಿಸುತಕಷ್ಟಪಡೋ ರೈತನುಸಾಲ-ಶೂಲವಾದರೂಅನ್ನ ಕೊಡೋ ದಾತನು. ವ್ಯಾಸ. ಜೋಶಿ.

ವ್ಯಾಸ ಜೋಶಿ ಅವರ ತನಗಗಳು Read Post »

ಇತರೆ, ಗಜಲ್ ದುನಿಯಾ

“ಗಜಲ್ ಮನಸುಗಳಿಗಾಗಿ, ಗಜಲ್ ಕುರಿತು ಒಂದಿಷ್ಟು ವಿಚಾರಗಳು.” ಡಾ. ಮಲ್ಲಿನಾಥ ಎಸ್. ತಳವಾರ

ಗಜಲ್‌ ಸಂಗಾತಿ ಡಾ. ಮಲ್ಲಿನಾಥ ಎಸ್. ತಳವಾರ “ಗಜಲ್ ಮನಸುಗಳಿಗಾಗಿ, ಗಜಲ್ ಕುರಿತು ಒಂದಿಷ್ಟು ವಿಚಾರಗಳು.” ಎಲ್ಲರಿಗೂ ನಮಸ್ಕಾರಗಳು…ಗಜಲ್.. ಇದು ಕೇವಲ ಕಾವ್ಯ ಪ್ರಕಾರವಲ್ಲ, ಇದೊಂದು ಜೀವನ ಶೈಲಿ, ತಹಜೀಬ್ ಹಾಗೂ ಸಂವೇದನೆಗಳ ಒಂದು ಭಾಗ. ಹೃದಯದ ಆಳದಿಂದ ಹೊರಬರುವ ನಿಜವಾದ ಧ್ವನಿ. ಇದು ಭಾವನೆಗಳು, ಪ್ರೀತಿ, ನೋವು ಮತ್ತು ಭರವಸೆಯ ಸುಂದರ ಅಭಿವ್ಯಕ್ತಿ. ಇದೊಂದು ಎಕ್ಸರೇ ಇದ್ದಂತೆ, ನಮ್ಮೊಳಗಿನ ಗಾಯ ತೋರಿಸಿ ಅರಿತುಕೊಳ್ಳಲು ಸಹಕರಿಸುತ್ತದೆ. ಗಜಲ್… ಕನ್ನಡದಲ್ಲಿ ಹಿಂದೆಂದಿಗಿಂತಲೂ ಇಂದು ಹೆಚ್ಚು ಪ್ರಚಲಿತದಲ್ಲಿರುವ ಹಾಗೂ ಹೆಚ್ಚೆಚ್ಚು ಓದುಗರನ್ನೂ- ಬರಹಗಾರರನ್ನು ಸೆಳೆಯುತ್ತಿರುವ ಕಾವ್ಯ ಪ್ರಕಾರ. ಕನ್ನಡದ ಭಾಗಶಃ ಸಾಹಿತ್ಯಾಸಕ್ತರು ಗಜಲ್ ಗಳನ್ನು ಬರೆಯಲು, ಓದಲು ಹಾಗೂ ಗಜಲ್ ಕುರಿತು ತಿಳಿದುಕೊಳ್ಳಲು ಆಸಕ್ತರಾಗಿದ್ದಾರೆ. ಇಂಥ ಗಜಲ್ ಕನ್ನಡ ಸಾರಸ್ವತ ಲೋಕವನ್ನು ಪ್ರವೇಶಿಸಿ ಅರ್ಧ ಶತಮಾನವೇ ಉರುಳಿದೆ. ಇಂದು ಗಜಲ್ ಕಾವ್ಯ ಪ್ರಕಾರ ಅಸಂಖ್ಯಾತ ಸಹೃದಯಿಗಳಿಂದ ಕನ್ನಡ ಸಾಹಿತ್ಯ ಪರಪಂಚದಲ್ಲಿ ಸಕ್ರೀಯವಾಗಿದೆ. ಈ ಗಜಲ್ ಕಾವ್ಯ ಪ್ರಕಾರ ಹತ್ತು ಹಲವಾರು ವಿಶಿಷ್ಟ ಲಕ್ಷಣಗಳನ್ನು ಹೊಂದಿದೆ. ಅವುಗಳನ್ನು ಆಂತರಿಕ ಹಾಗೂ ಬಾಹ್ಯ ಲಕ್ಷಣಗಳೆಂದು ವಿಂಗಡಿಸಲಾಗಿದೆ. ಇಂದು ನಾವು ಈ ಲಕ್ಷಣಗಳನ್ನು ಎಷ್ಟರಮಟ್ಟಿಗೆ ಅಳವಡಿಸಿಕೊಂಡಿದ್ದೇವೆ, ಅಳವಡಿಸಿಕೊಳ್ಳುತಿದ್ದೇವೆ ಹಾಗೂ ಆ ದಿಸೆಯಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳುವ ಸಮಯ ಬಂದಿದೆ. ಮತ್ಲಾ, ಮಕ್ತಾ, ರದೀಫ್ ಹಾಗೂ ಕಾಫಿಯಾ… ಇವು ಗಜಲ್ ನ ನಾಲ್ಕು ಅಂಗಗಳು. ಇವುಗಳಲ್ಲಿ ‘ರದೀಫ್’ ಐಚ್ಛಿಕವಾಗಿದ್ದು, ಉಳಿದವುಗಳು ಗಜಲ್ ನ ಜೀವಾಳವಾಗಿವೆ. ಇವುಗಳ ಹೊರತು ಗಜಲ್ ರಚನೆಯಾಗದು. ಯಾರಾದರೂ ಬರೆದಿದ್ದಾರೆ, ಬರೆಯುತ್ತಾರೆ ಎಂದರೆ ಅದು ಗಜಲ್ ಎಂದೆನಿಸಿಕೊಳ್ಳದೆ, ಕಾವ್ಯ ಎಂದೆನಿಸಿಕೊಳ್ಳುವುದು! ಗಜಲ್ ಮೂಲಭೂತವಾಗಿ ಷೇರ್ ಮಾದರಿಯಲ್ಲಿ ಇರುವಂತದ್ದು. ಈ ಷೇರ್ ನ ಪ್ರತಿ ಮಿಸ್ರಾ ಸ್ವತಂತ್ರವಾಗಿದ್ದು, ಒಂದಕ್ಕೊಂದು ಪೂರಕವಾಗಿಯೋ ಅಥವಾ ವಿರುದ್ಧಮುಖವಾಗಿಯೊ ಇರಬೇಕು. ಮಿಸ್ರಾ-ಎ-ಊಲಾದ ಕೊನೆಯಲ್ಲಿಯ ಕೌತುಕತೆ ಮಸ್ರಾ-ಎ-ಸಾನಿಯ ಆರಂಭದಲ್ಲಿ ರೂಪ ಪಡೆಯಬೇಕು. ಅವು ಒಂದರೊಳಗೊಂದು ತಳುಕು ಹಾಕಿಕೊಂಡಿರಬಾರದು. ಇದುವೇ ಕಾವ್ಯವನ್ನು ‘ಗಜಲ್’ ಆಗಿಸುವತ್ತ ಮುನ್ನಡೆಯುತ್ತದೆ. ಇಂಥ ಗಜಲ್ ಗೆ ‘ಮತ್ಲಾ’ ತುಂಬಾ ಅವಶ್ಯಕ. ಇದು ಮನೆಗೆ ಹೊಸ್ತಿಲು ಇರುವಂತೆ! ಇನ್ನೂ ‘ಮತ್ಲಾ’ ಅಂದರೆ ಆರಂಭ, ಉದಯ ಎಂದರ್ಥ. ಇಲ್ಲಿ ಏನು ಹೇಳಬೇಕಾಗಿದೆ ಎನ್ನುವುದರ ನಿರ್ಣಯ, ಗಜಲ್ ಕಾರರ ಉದ್ದೇಶವಿರುತ್ತದೆ. ಗಜಲ್ ಒಳಗೊಂಡಿರಬಹುದಾದ, ಒಳಗೊಳ್ಳಬಹುದಾದ ವಿಷಯ, ಮೀಟರ್, ವಜನ್, ಬೆಹರ್ ಹಾಗೂ ಕವಾಫಿ (ಕಾಫಿಯಾಗಳು) ಆಯ್ಕೆಯನ್ನು ನಿರ್ಧರಿಸುತ್ತದೆ. ‘ಮತ್ಲಾ’ ಏನು ಒಳಗೊಂಡಿರುತ್ತದೆಯೋ ಅದುವೇ ಇಡೀ ಗಜಲ್ ನ ಉದ್ದಕ್ಕೂ ಬರಬೇಕು. ಅದು ಅಲಾಮತ್ ಆದರೂ ಸರಿ, ಮೀಟರ್, ಬೆಹರ್ ಆದರೂ ಸರಿಯೆ! ಅಂತೆಯೇ ಶಾಯರ್/ಶಾಯರಾ ಆದವರು ಮತ್ಲಾವನ್ನು ತುಂಬಾ ಪ್ರಜ್ಞಾಪೂರ್ವಕವಾಗಿ ರೂಪಿಸಿಕೊಂಡು ಹೋಗಬೇಕು. ಇದೊಂದು ರೀತಿಯಲ್ಲಿ ಗಜಲ್ ನ ಉಳಿದ ಅಶ್ಆರ್ ಗೆ ಸ್ಪಷ್ಟಿಕರಣ ಕೊಡುವ ರೀತಿಯಲ್ಲಿ ಇರುತ್ತದೆ, ಇರಬೇಕು! ಇದು ಗಜಲ್ ನ ಸೌಂದರ್ಯಕ್ಕೆ ಬಾಗಿಲು, ಭಾವ ಲೋಕಕ್ಕೆ ಪ್ರವೇಶದ್ವಾರವಿದ್ದಂತೆ. ಇದು ಅಷ್ಟೊಂದು ಸರಳವಲ್ಲ, ಸುಲಭವೂ ಅಲ್ಲ. ಪ್ರತಿಯೊಬ್ಬರೂ ಇದನ್ನು ‘ಸವಾಲು’ ಎಂದು ಸ್ವೀಕರಿಸಿ ಗಜಲ್ ರಚನೆಗೆ ಮುಂದಾಗಬೇಕು. ‘ಮಕ್ತಾ’ ಎಂದರೆ ಅಂತ್ಯ, ಮುಕ್ತಾಯ. ಗಜಲ್ ಗೆ ‘ಮತ್ಲಾ’ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ‘ಮಕ್ತಾ’. ಇದು ಗಜಲ್ ಗೆ ಒಂದು ತಾರ್ಕಿಕ ಹಾಗೂ ಭಾವನಾತ್ಮಕ ಅಂತ್ಯವನ್ನು ನೀಡುತ್ತದೆ. ಅಂದರೆ, ಶಾಯರ್/ಶಾಯರಾ ಅವರ ಇಂಗಿತ, ಆಶಯ ಹಾಗೂ ಉದ್ದೇಶವನ್ನು ಈಡೇರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಅಂದರೆ, ಅವರ ಅಂತಿಮ ಮಾತು, ಸಂದೇಶ ಹಾಗೂ ವೈಯಕ್ತಿಕ ಧ್ವನಿಗೆ ವೇದಿಕೆಯನ್ನು ಒದಗಿಸುತ್ತದೆ. ಈ ಷೇರ್ ಓದುತಿದ್ದಂತೆಯೇ ಗಜಲ್ ಮುಗಿಯಿತು ಎಂಬ ಭಾವ ಸಹೃದಯ ಓದುಗರಲ್ಲಿ, ಕೇಳುಗರಲ್ಲಿ ಬರುತ್ತದೆ, ಬರಬೇಕು. ಇಂತಹ ‘ಮಕ್ತಾ’ಗೆ ಇನ್ನೊಂದು ಬಹುಮುಖ್ಯವಾದ ಲಕ್ಷಣವಿದೆ. ಅದೆಂದರೆ ‘ತಖಲ್ಲುಸ’. ತಖಲ್ಲುಸ್ ಅಂದರೆ ಶಾಯರ್/ಶಾಯರಾ ಅವರ ಗುರುತು. ಇಲ್ಲಿ ಅವರು ತಮ್ಮ ಹೆಸರು, ಇಲ್ಲವೇ ತಮ್ಮ ಇಷ್ಟದ ಹೆಸರನ್ನು ಬಳಸುತ್ತಾರೆ. ಇದು ಹೆಚ್ಚಾಗಿ ‘ನಾಮವಾಚಕ’ವಾಗಿಯೇ ಬಳಕೆಯಾಗಿದೆ. ಆದಾಗ್ಯೂ ಈ ತಖಲ್ಲುಸ್ ರೂಪಕವಾಗಿ ಬಳಕೆಯಾದರೆ ‘ಮಕ್ತಾ’ಗೆ ಒಂದು ಅನುಪಮ ಕಳೆ ಬರುತ್ತದೆ. ‘ತಖಲ್ಲುಸ್’ ಬಳಕೆ ಐಚ್ಛಿಕವಾಗಿದ್ದರೂ ಅದರ ಉಪಸ್ಥಿತಿಯೇ ‘ಮಕ್ತಾ’ಗೆ ಅನ್ವರ್ಥಕವಾಗಿದೆ. ಒಂದುವೇಳೆ ಬೇಮಕ್ತಾ ಷೇರ್ ಇದ್ದರೆ ಅದನ್ನು ಗಜಲ್ ನ ಕೊನೆಯ ಷೇರ್ ಎಂದು ಗುರುತಿಸುವುದು ಕಷ್ಟ! ಇನ್ನೂ ಕಾಫಿಯಾ… ಗಜಲ್ ನ ಉಸಿರು, ಕವಾಫಿ (ಕಾಫಿಯಾಗಳು) ಹೊರತುಪಡಿಸಿ ಗಜಲ್ ಅನ್ನು ಊಹಿಸಿಕೊಳ್ಳಲೂ ಆಗದು! ಕಾಫಿಯ ಆಯ್ಕೆ ಶಾಯರ್/ಶಾಯರಾ ಅವರ ಸೃಜನಶೀಲತೆ, ಗಜಲ್ ಮೇಲಿನ ಪ್ರೀತಿ-ಹುಚ್ಚನ್ನು ಅವಲಂಬಿಸುತ್ತದೆ. ಗಜಲ್ ಕಲಿಕೆಯ ಆರಂಭಿಕ ಹಂತದಲ್ಲಿ ‘ಕಾಫಿಯಾ’ವನ್ನು ಸಾಮಾನ್ಯವಾಗಿ ‘ಪ್ರಾಸ’ ಎಂದು ಗುರುತಿಸಲಾಗುತ್ತದೆ. ಆದರೆ ‘ಪ್ರಾಸ’ ಎಂಬ ಸಾಮಾನ್ಯೀಕರಣ ತುಂಬಾ ಅಪಾಯಕಾರಿ! ಏಕೆಂದರೆ ಕಾಫಿಯಾ ಎಂದರೆ ಕೇವಲ ಪ್ರಾಸವಲ್ಲ, ರವಿ/ರವೀಶ್ ಹೊಂದಿದ್ದರೆ ಸಾಲದು. ಸಾಧ್ಯವಾದಷ್ಟು ಸಮತೂಕ ಹಾಗೂ ಸಮ ಅಕ್ಷರಗಳಿಂದ ಕೂಡಿದ್ದು ರೌಫ್, ಕೈದ್ ಒಳಗೊಂಡಿರಬೇಕು. ಏಕ ಅಲಾಮತ್ -ಬಹು ಅಲಾಮತ್ ರೂಢಿಸಿಕೊಂಡಿರಬೇಕು. ಇದು ಅಷ್ಟೊಂದು ಸುಲಭವಲ್ಲ, ಇದಕ್ಕೆ ಬದ್ಧತೆ ಮತ್ತು ಅಭ್ಯಾಸ ಬೇಕು. ಇದು ಸೃಜನಶೀಲತೆಗೆ ಅಡ್ಡಿಪಡಿಸುತ್ತದೆ ಎಂದು ಭಾವಿಸುವುದು ತರವಲ್ಲ, ಬದಲಿಗೆ ಇದುವೇ ಸೃಜನಶೀಲತೆ ಎಂದು ಬಯಸಬೇಕು! ಪರಿಪೂರ್ಣ ಕವಾಫಿಯ ಆಯ್ಕೆಯೇ ಗಜಲ್ ಅನ್ನು ಗೆಲ್ಲಿಸುತ್ತದೆ. ಅಂತೆಯೇ ಕವಾಫಿ ಗಜಲ್ ನ ಧ್ವನಿಯನ್ನು ಬಲಪಡಿಸುವಂತಿರಬೇಕು, ಗಜಲ್ ನ ಭಾವಕ್ಕೆ ಹೊಂದಿಕೊಳ್ಳುವ ರೀತಿಯಲ್ಲಿ ಆರಿಸಬೇಕು. ಸಂದರ್ಭಕ್ಕೆ ತಕ್ಕಂತೆ ಭಾವಪೂರ್ಣವಾಗಿ, ಅರ್ಥಪೂರ್ಣವಾಗಿ ಇರಬೇಕು. ಇಂತಹ ‘ಕಾಫಿಯಾ’ ಇಲ್ಲದ ಬರಹ ಕಾವ್ಯವಾಗಬಹುದೇ ಯಾವತ್ತೂ ಗಜಲ್ ಆಗದು! ಇದು ಕಹಿಯೆನಿಸಿದರೂ ಸತ್ಯ! ರದೀಫ್.. ಗಜಲ್ ಗೆ ಹಾಡುಗಬ್ಬದ ಪೋಷಾಕು ತೊಡಿಸುವ ವಿಶಿಷ್ಟ ಲಕ್ಷಣವನ್ನು ಹೊಂದಿದೆ. ‘ಗಜಲ್’ ಶಿಷ್ಟ ಸಾಹಿತ್ಯ ಪ್ರಕಾರವಾದರೂ ರದೀಫ್ ಇದಕ್ಕೆ ಜಾನಪದೀಯ ರೂಪವನ್ನು ನೀಡುವಲ್ಲಿ ಶ್ರಮಿಸುತ್ತದೆ. ಗಜಲ್ ಗೆ ವಿಶಿಷ್ಟ ಗೇಯತೆ, ಲಾಲಿತ್ಯ ಮತ್ತು ಭಾವತೀವ್ರತೆಯನ್ನು ನೀಡುತ್ತದೆ. ಇದುವೇ ಜನರ ನಾಲಿಗೆಯ ತುದಿಯಲ್ಲಿ ಜೀವಂತವಾಗಿ ಉಳಿಯುವಂತೆ ಮಾಡುತ್ತದೆ. ಈ ಕಾರಣಕ್ಕಾಗಿಯೇ ರದೀಫ್ ನ ಆಯ್ಕೆಗೆ ಸಮರ್ಪಕ ಯೋಚನೆ ಅವಶ್ಯಕ. ಅನಗತ್ಯ ಪದಗಳ, ಶಬ್ಧಗಳ ಬಳಕೆ ರಸಭಂಗ ಮಾಡುತ್ತದೆ ಎಂಬುದನ್ನು ಮರೆಯಬಾರದು! ಸಾಮಾನ್ಯವಾಗಿ ದಿನನಿತ್ಯ ಬಳಸುವ ಪದಗಳಿಗಿಂತ ವಿಭಿನ್ನವಾಗಿಯೂ, ಗಾಢಭಾವ, ಸುಲಭವಾಗಿ ಉಚ್ಚರಿಸಬಲ್ಲಂತಹ ಪದಗಳ ಆಯ್ಕೆ ಮಾಡಬೇಕು. ರದೀಫ್ ಗಜಲ್ ನ ಕಾಂತಿ, ರಮ್ಯತೆ ಹಾಗೂ ವೈವಿಧ್ಯತೆಯನ್ನು ಹೆಚ್ಚಿಸುತ್ತದೆ. ಈ ಹಿನ್ನೆಲೆಯಲ್ಲಿ ಗಜಲ್ ಗೆ ‘ರದೀಫ್’ ಅತ್ಯವಶ್ಯಕ. ಆದಾಗ್ಯೂ ಇದರ ಬಳಕೆ ಐಚ್ಛಿಕವಾಗಿದೆ! ಇನ್ನೂ ಗಜಲ್‌ನ ಭಾಷೆ ಲಾಲಿತ್ಯಪೂರ್ಣ, ಸಂಕೇತಾತ್ಮಕ ಮತ್ತು ಸಂವೇದನಾಶೀಲವಾಗಿರಬೇಕು. ನೇರವಾದ ಹೇಳಿಕೆಗಳ ಬದಲು ಸೂಚನೆ, ಸಂಕೇತ ಮತ್ತು ರೂಪಕಗಳ ಮೂಲಕ ಭಾವವನ್ನು ಹೇಳುವುದು ಗಜಲ್‌ನ ಮುಖ್ಯ ಲಕ್ಷಣವಾಗಿದೆ. ಭಾಷೆ ಸರಳವಾಗಿದ್ದರೂ ಅರ್ಥದಲ್ಲಿ ಗಾಢತೆ ಹೊಂದಿರಬೇಕು. ರೂಪಕ, ಪ್ರತೀಕ, ಅಲಂಕಾರ, ವ್ಯಂಗ್ಯಗಳ ಸಮೃದ್ಧ ಬಳಕೆಯಾಗಬೇಕು. ಪ್ರತಿ ಷೇರ್ ಸ್ವತಂತ್ರವಾಗಿದ್ದರೂ ಭಾಷೆಯ ಲಯ ಮತ್ತು ಭಾವದ ತೀವ್ರತೆ ಗಜಲ್‌ಗೆ ಏಕತೆಯನ್ನು ನೀಡಬೇಕು. ಉರ್ದೂ ಗಜಲ್ ಪರಂಪರೆಯಲ್ಲಿ ಪರ್ಷಿಯನ್–ಅರಬಿ ಪದಗಳ ಪ್ರಭಾವ ಕಂಡುಬಂದರೂ, ಕನ್ನಡ ಗಜಲ್‌ನಲ್ಲಿ ದೇಸಿ, ತದ್ಭವ ಮತ್ತು ತತ್ಸಮ ಪದಗಳ ಸಮನ್ವಯ ಕಾಣಸಿಗುತ್ತದೆ. ಈ ನೆಲೆಯಲ್ಲಿ ಗಮನಿಸಿದಾಗ ಗಜಲ್‌ನ ಭಾಷೆ ಹೇಳುವುದಕ್ಕಿಂತ ಸೂಚಿಸುವುದರ ಕಡೆಗೆ, ವಿವರಿಸುವುದಕ್ಕಿಂತ ಅನುಭವಿಸಿಸುವುದರ ಕಡೆಗೆ ಗಮನ ಹರಿಸುತ್ತದೆ ಎಂಬುದು ಮನವರಿಕೆಯಾಗುತ್ತದೆ. ಅಂದರೆ ಗಜಲ್ ಕೋಮಲ, ಮೃದುತ್ವ ಮತ್ತು ಹೃದಯ ತಟ್ಟುವ ಪದಗಳ ಬಳಕೆಯನ್ನು ನಿರೀಕ್ಷಿಸುತ್ತದೆ. ಅಂತೆಯೇ ಇಲ್ಲಿ ಬೌದ್ಧಿಕತೆಗಿಂತ ಹೃದಯವಂತಿಕೆ ಅತ್ಯವಶ್ಯಕ! ಇಂದು ಗಜಲ್ ಕೇವಲ ಪ್ರೇಮಕ್ಕೆ ಸೀಮಿತವಾಗಿ ಉಳಿದಿಲ್ಲ; ಮಾನವನ ಅಂತರಂಗ ಮತ್ತು ಸಮಾಜದ ವಿವಿಧ ಆಯಾಮಗಳನ್ನು ಸ್ಪರ್ಶಿಸುತ್ತಿದೆ. ಪ್ರೇಮ ಮತ್ತು ವಿರಹ, ನೋವು ಮತ್ತು ಮನೋವ್ಯಥೆ, ತತ್ತ್ವ ಮತ್ತು ಅಸ್ತಿತ್ವದ ಪ್ರಶ್ನೆಗಳು, ಸಾಮಾಜಿಕ ವ್ಯಂಗ್ಯ ಮತ್ತು ವಿರೋಧ, ಆಧ್ಯಾತ್ಮಿಕ ಮತ್ತು ಸೂಫಿ ಭಾವನೆ, ನೆನಪು, ಕನಸು ಮತ್ತು ಹಂಬಲ.. ಎಲ್ಲವನ್ನೂ ಗಜಲ್ ಒಳಗೊಳ್ಳುತ್ತಿದೆ! ಆದರೆ ಒಂದನ್ನು ನಾವು ಮರೆಯಬಾರದು, ಅದೆಂದರೆ ಅಭಿವ್ಯಕ್ತಿಯ ಕ್ರಮ! ಗಜಲ್ ಯಾವುದೇ ವಿಷಯವನ್ನು ಒಳಗೊಳ್ಳಬಹುದು, ಆದರೆ ಅದು ಸಹೃದಯ ಓದುಗರ, ಕೇಳುಗರ ಹೃದಯದ ಕದ ತಟ್ಟಬೇಕು! ಪ್ರತಿಯೊಂದು ಕಾವ್ಯದ ಬಗ್ಗೆ ಮಾತಾಡುವಾಗಲೆಲ್ಲ ನಾವು ‘ಆತ್ಮ’ದ ಉಲ್ಲೇಖ ಮಾಡುತ್ತೇವೆ. ಅಂದರೆ, ಬಾಹ್ಯ ಲಕ್ಷಣಗಳಿಗಿಂತಲೂ ಆಂತರಿಕ ಭಾವಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂಬ ನೆಲೆಯಲ್ಲಿ! ಹೌದು, ಪ್ರತಿ ಬರಹದ ಮೂಲ ಸ್ಥಾಯಿಯೇ ಅದು ಒಳಗೊಂಡಿರಬಹುದಾದ ಧ್ವನಿ, ರಸ! ಹಾಗಂತ ಬಾಹ್ಯ ಲಕ್ಷಣಗಳನ್ನು ನಿರಾಕರಿಸುವಂತಿಲ್ಲ. ಏಕೆಂದರೆ ನಮಗೆ ಮೊದಲು ಗೋಚರಿಸುವುದೆ ಭೌತಿಕ ಶರೀರ, ನಂತರವಷ್ಟೇ ಆತ್ಮದ ಪರಿಚಯ! ಇಲ್ಲಿ ಇನ್ನೊಂದು ಅಪಾಯವಿದೆ, ಏನೆಂದರೆ ಲಕ್ಷಣಗಳು ಕೇವಲ ‘ಹಿಟ್ಟಿನ ಹುಂಜ’ವನ್ನು ತಯಾರಿಸುವಂತಾಗಬಾರದು! ಆಂತರಿಕ ಹಾಗೂ ಬಾಹ್ಯ ಲಕ್ಷಣಗಳ ಸಾಮರಸ್ಯ ಶಾಯರ್/ಶಾಯರಾ ಸಾಧಿಸುವಂತಾಗಬೇಕು. ಆವಾಗಲೇ ಗಜಲ್ ಉದಯಿಸಲು ಸಾಧ್ಯ, ಸಾರಸ್ವತ ಲೋಕದಲ್ಲಿ ನೆಲೆಯೂರಲು ಸಾಧ್ಯ ಹಾಗೂ ರಸಿಕರ ನಾಲಿಗೆಯ ತುದಿಯಲ್ಲಿ ನುಲಿಯಲೂ ಸಾಧ್ಯ! ಡಾ. ಮಲ್ಲಿನಾಥ ಎಸ್. ತಳವಾರ ಮುಖ್ಯಸ್ಥರು ಹಾಗೂ ಸಹಾಯಕ ಪ್ರಾಧ್ಯಾಪಕರು,ಕನ್ನಡ ಅಧ್ಯಯನ ವಿಭಾಗ,ನೂತನ ವಿದ್ಯಾಲಯ ಪದವಿ ಮಹಾವಿದ್ಯಾಲಯ,ಕಲಬುರಗಿ ೫೮೫ ೧೦೩

“ಗಜಲ್ ಮನಸುಗಳಿಗಾಗಿ, ಗಜಲ್ ಕುರಿತು ಒಂದಿಷ್ಟು ವಿಚಾರಗಳು.” ಡಾ. ಮಲ್ಲಿನಾಥ ಎಸ್. ತಳವಾರ Read Post »

You cannot copy content of this page

Scroll to Top