ಪ್ರೊ.ರಾಜಕುಮಾರ ಬಿ ಟಿ. ಅವರ ಕವಿತೆ “ಮಾನವೀಯತೆ ಹರಿಕಾರರು”
ಕಾವ್ಯ ಸಂಗಾತಿ ಪ್ರೊ.ರಾಜಕುಮಾರ ಬಿ ಟಿ. “ಮಾನವೀಯತೆ ಹರಿಕಾರರು” ಅವಿಭಕ್ತ ಕುಟುಂಬದಲಿ ಜನಿಸಿಅಸ್ಪೃಶ್ಯತಾ ಅಂಧಕಾರವನು ಅಳಿಸಿಜಾತೀಯತೆ ಹೊಡೆದೊಡಿಸಲುಜಾತ್ಯತೀತ ಭಾವ ಮೂಡಿಸಲು ಮೂಡಿಹರು ದಲಿತ ಸೂರ್ಯ’ರು -೧- ಅಸ್ಪೃಶ್ಯತೆಯ ಕಹಿಯನು ಉಂಡುಅವಮಾನದಿಕುಲುಮೆಯಲಿ ಬೆಂದುಬದುಕಿನ ಬವಣೆಗಳಲಿ ನೊಂದುಅಸಹಾಯಕತೆಯ ಕಣ್ಣಿರಲಿ ಮಿಂದುದೀನ-ದುರ್ಬಲರ ಧ್ವನಿಯಾಗಿಹರು -೨- ಸಮಾನತೆಯ ಲೇಖನಿ ಹಿಡಿದುಸಮ ಸಮಾಜಕೆ ಸಂವಿಧಾನ’ವ ಬರೆದುಸರ್ವರಲೂ ಸಮಭಾವ ತಂದು ಸಾಮಾಜಿಕ ನ್ಯಾಯವೆಂದು ಸಾರಿಹರು ಮಾನವತಾವಾದಿಆಗಿಹರು -೩- ಅಕ್ಷರಗಳನು ಆಯುಧವಾಗಿರಿಸಿಅಂಧಶ್ರದ್ಧೆಗಳನು ಬೇಧಿಸಿಲೇಖನಿಯ ಮಸಿಕೋಟಿ-ಕೋಟಿ ಜನಗಳಿಗೆ ಬಿಸಿಎಂದಬ್ಬರಿಸಿ ಘರ್ಜಿಸಿದ ಭೀಮ’ರಿವರು -೪- ಅನಿಷ್ಟಗಳ ನಡುವಿಂದ ಸಿಡಿದುಅಜ್ಞಾನವ ದೈರ್ಯದಿ ತುಳಿದು ದೇಶ-ಕೋಶಗಳಿಗೆ ಮಿಡಿದುಜ್ಞಾನಕ್ಷೀರವನು ಕುಡಿದುಘರ್ಜಿಸಿಹರು ಮಹಾ ನಾಯಕರಿವರುಅಂಬೇಡ್ಕರರು -೫- ಪ್ರೊ.ರಾಜಕುಮಾರ ಬಿ ಟಿ.
ಪ್ರೊ.ರಾಜಕುಮಾರ ಬಿ ಟಿ. ಅವರ ಕವಿತೆ “ಮಾನವೀಯತೆ ಹರಿಕಾರರು” Read Post »









