ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಮಿಂಚು ನಾದದಲೆಯ ಮೇಲೆ

ಕವಿತೆ ಮಿಂಚು ನಾದದಲೆಯ ಮೇಲೆ ನೂತನ ದೋಶೆಟ್ಟಿ ನಗುವ ಹೂಗಳು ಹಲವುಬೇಲಿಗುಂಟ ಬೆಳೆದಿವೆಕೈಚಾಚುವ ಆಸೆ ಮಾತ್ರ ಇಲ್ಲ ಕಣ್ಣು ಮಿಟುಕಿಸಿದ ನಕ್ಷತ್ರದ ಮೋಹಏಕೆಂದು ಹೇಳಲಿ? ಹಗಲು ಕಾಣುವ ಹೂಗಳಅಂದ ಚಂದ ಕಂಪುಯಾವುದೂ ಕಂಪಿಸಲೇ ಇಲ್ಲ ರಾತ್ರಿ ನಕ್ಕ ತಾರೆಗೆಒಲವೇ ಧಾರೆ ಎರೆದೆಹೊಳಪಿಗೊ ಚೆಲುವಿಗೊ ಹೇಳಲಾರೆ ಅಂತರಂಗವ ಆವರಿಸಿದ ಬೆಳಕುಮೂಲೆ ಮೂಲೆಯಲಿ ಮಿನುಗುತಿದೆಮಿಂಚುನಾದದಲೆಯ ಮೇಲೆಒಲುಮೆ ಹಾಯಿ ನಡೆಸಿದೆ ಸೊಗಸ ಸಂಗ ಸಾಕು ಇನ್ನುಪ್ರೀತಿ ತೊರೆಯು ಹರಿಯಲಿಬಾಳಿನಾಟದಂಕದಲ್ಲಿಬಣ್ಣ ಮೂಡಿ ಬರಲಿ **********************************

ಮಿಂಚು ನಾದದಲೆಯ ಮೇಲೆ Read Post »

ಕಾವ್ಯಯಾನ

ಕನಸು

ಕವಿತೆ ಕನಸು ಮೋಹನ್ ಗೌಡ ಹೆಗ್ರೆ ಜಗದಗಲವ ಅಳೆದ ಕಣ್ಗಳುಎದೆಯದವ ತಟ್ಟಿದ ಮೌನ ಮಾತುಗಳುಅಮೂರ್ತ ವಿಸ್ಮಯಗಳ ಮೂಟೆ ಕಟ್ಟಿ ಮುದ್ದಾಡುತ್ತವೆನಮ್ಮೊಳಗೆ ಹೊಸ ಕನಸಿನ ಪರಪಂಚದೊಂದಿದೆ…….. ಕಣ್ಣಲ್ಲಿ ನೋಡದೇ ಇದ್ದರೂಕೈಯಲ್ಲಿ ಮುಟ್ಟದಿದ್ದರೂಅಲ್ಲೊಂದು ಕ್ಷಣಿಕ ಮೂರ್ತ ಸ್ಥಿತಿಪರಿಚಿತ ಅಪರಿಚಿತ ವ್ಯಕ್ತಿ ಜಾಗೆಗಳ ಅನಾವರಣ ಕನಸುಗಳಿಗೋ ಸಾಕಷ್ಟು ಕವಲುಗಳುಹೌದೆನಿಸುವ, ಬೇಕು, ಬೇಡವೆನಿಸೋನಮ್ಮದೇ ವಸ್ತು ವಿಷಯಗಳೇ ಕನಸಿನ ಒಡಲಾಳಆದರೂ ಹೋಲಿಕೆಯಾಗದ ಕನಸುಗಳೂ ಒಮ್ಮೊಮ್ಮೆ ಕನಸಿನ ನೂರು ಮುಖಗಳಲ್ಲಿಪ್ರೀತಿ, ಖುಷಿ, ಭಯ, ನಿರೀಕ್ಷೆಗಳಿದ್ದರೂಕಂಡು ಕಾಣದಾದ ಕನಸನೂಕ್ಷಣಿಕ ಮನದಾಳದಲ್ಲಿ ಇರಿಸಿಕೊಂಡಿದ್ದಿದೆ ಕನಸಿನ ವಿಳಾಸ ಪಡೆದು ಮಾತಾಡಬೇಕಿದೆಭ್ರಷ್ಟತೆ, ನ್ಯಾಯ ನಿಷ್ಠತೆಕೆಡಕುಗಳಮುಂಚಿತವಾಗಿಯೇ ಎದುರಿಸುವ ತಯಾರಿಗಾಗಿಒಡೆದು ಹೋದ ಅನಾಥ ಮನಸುಗಳಿಗೆಮನೆ ಇದ್ದೂ ಹಸಿದೇ ಇರುವ ಒಡಲುಗಳಿಗೆಎಲ್ಲ ಇದ್ದೂ ಇಲ್ಲದಂತ ಕಣ್ಣುಗಳಿಗಿಷ್ಟುಕನಸಲ್ಲಾದರೂ ಖುಷಿ ಪಡಿಸೆಂದುಒಂದು ಆಪ್ತ ತಾಕಿತು ಮಾಡಲು…….. ********************************

ಕನಸು Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಸರೋಜಾ ಶ್ರೀಕಾಂತ್ ಸುರಿದ ಬೆಳದಿಂಗಳಿಗೆ ಇರುಳೆಲ್ಲ ಮಾಯವಾಗಿದೆ ಕೇಳು ಸಖಬಳಿಗೆ ಕರೆವ ಸನಿಹಕ್ಕೂ ತುಸು ನಾಚಿಕೆ ಕೇಳು ಸಖ ರಂಗೇರಿದ ಕೆನ್ನೆಗೆ ಕಾರಣವೇ ನಿನ್ನಾಗಮನಒಲವರಿತ ಮುಂಗುರುಳಿಗೆ ಸ್ಪರ್ಶದ ಸಡಗರ ಕೇಳು ಸಖ ಸದ್ದಿಲ್ಲದ ಮೌನದೊಳಗೂ ನೂರೊಂದು ಮಾತುಗಳಿವೆಕಿವಿಗಪ್ಪಳಿಸುತ್ತ ಚಿತ್ತವನ್ನೆಲ್ಲ ಅಪಹರಿಸುತ್ತಿವೆ ಕೇಳು ಸಖ ಸೋತೆನೆನ್ನುವ ಭಾವಕ್ಕೂ ನವಿರಾದ ಮಂದಹಾಸಗೆಲುವಿನ ನಗೆ ನೀ ಬೀರುವಾಗ ಸೊಗಸಿದೆ ಕೇಳು ಸಖ ನೇಸರ ಬರುವ ಮುನ್ನವೇ ಸಂಭ್ರಮಿಸಲಿ ಮತ್ತೊಂದು ಸಲ‘ಸರೋಜ’ಳ ಅಂತರಂಗ ಪ್ರತಿಧ್ವನಿಸುತ್ತಿದೆ ಕೇಳು ಸಖ ***********************************

ಗಜಲ್ Read Post »

ಕಾವ್ಯಯಾನ

ಮಾಯಾವಿ 2020

ಕವಿತೆ ಮಾಯಾವಿ 2020 ರಜಿಯಾ ಕೆ ಭಾವಿಕಟ್ಟಿ ಅಳಿದು ಉಳಿದದ್ದು ಎಲ್ಲವೂನಿಗೂಢತೆಯ ಸಾರವನ್ನು ಹೊತ್ತು ತಂದು ತೇಲುವ ದೋಣಿಯಲ್ಲಿ ಜಲದ ಸುಳಿಯೇ ಇಲ್ಲದೆ ಮುಳುಗಿ ಸತ್ತಂತೆ ಭಾಸವಾಗಿತ್ತು ಅಂಧನಿಗೂ ಕುರಡನೆಂಬ ಹಣೆಪಟ್ಟಿ ಮೊದಲೇ ಇದ್ದರು ಹೊಸತರಹದ ಮುಖವಾಡದನೇತ್ರಗಳಿಗೆ ಬಣ್ಣಗಳ ಲೇಪಿಸಲಾಗಿತ್ತು ಕಾಣದಾ ಜೀವಯು ಎಂಬ ಸುಳ್ಳುಗಳ ಸೋಗಿಗೆ ಕಾಲವೇನಿಂತು ಮುನ್ನುಡಿ ಬರೆದಿತ್ತುಅದಕೆ ಸತ್ಯವೆಂಬಂತೆ ಸಮಯಸಾತು ನೀಡಿ ಗರ್ವಪಟ್ಟಿತ್ತು. ಬಿತ್ತಿದವನು ಬರೀಗೈಲಿ ಬೆತ್ತಲಾಗಿ ನಿಂತು ಪರರ ಪಾಲಿಗೆಹುಚ್ಚನಂತೆ ಕಂಡು ಬದುಕುವ ಪಾಡು ಬಂದು ನಿಂತಿತ್ತು. ಗುಡಿ ಗುಂಡಾರ ಮಸೀದಿಗಳನದೇವರಿಗೂ ಗರ ಬಡಿದು ದೈವತ್ವದ ಬೆಳಕಿಗೂ ಅಂಧಕಾರದ ಕಿಡಿ ಸೊಕಿ ಬೆಂಕಿ ಅಲ್ಲೆ ನಂದಿ ತಣ್ಣಗಾಗಿತ್ತು. ಊರುರು ಅಲೆದು ದುಡಿದು ದಣಿದವನ ಹೊಟ್ಟೆಯ ಹಸಿವುಇಮ್ಮಡಿಗೊಂಡು ಮರಳಿ ಮಣ್ಣಿಗೆ ತಲುಪದೇ ಮಧ್ಯದಲ್ಲೆ ಮಸಣಕೂ ಆಗದೇ ಬೀದಿಯ ನಾಯಿಗಳಿಗೂ ಆಹಾರವಾಗದೆ ಆತ್ಮ ನಗ್ನವಾಗಿಯೇ ಉಳಿದಿತ್ತು ಸಂಬಂಧಗಳು ಮೊದಲಿಗಿಂತಲೂ ಬಹು ದೂರವೇ ಉಳಿದು ಮೋಸದ ಚಹರೆಗಳ ಒಟ್ಟಿಗೆ ಚಾಪುಗಳು ಹೊಂದಿ ಕುಹುಕ ತಾಂಡವದ ನಾಟಕಕೆ ನಡು ಸಂಚು ನಡೆಸಿದ್ದವು . ಶಿವಶರಣರ ನುಡಿಗಳು ನಿಜವಾದವು ಎಂಬಂತೆ ವರುಷದುದ್ದಕೂ ನಿಜ ಘಟನೆಗಳೇ ಕಣ್ಣಿಗೆ ದೊರಕುವಂತಿದ್ದವು ಹಣ ಹೆಣಗಳ ಲೆಕ್ಕವು ಸಿಗದೇಒಂದರ ಮೆಲೋಂದು ಘೋರಿಗಳು ಕಟ್ಟಲುರುದ್ರ ಭೂಮಿಯು ನಾಚಿ ತಲೆತಗ್ಗಿಸುವಂತಾಗಿತ್ತು ಸತ್ಯ ನ್ಯಾಯ ನೀತಿ ಧರ್ಮಗಳುಸತ್ತು ಅಗೋಚರಗಾಗಿ ದೂರ ನಿಂತದ್ದು ಮತ್ತೊಮ್ಮೆ ಭಾಸವಾಗಿತ್ತು . ಅಳಿದು ಉಳಿದದ್ದು ಏನಿದೆ ಎಲ್ಲವೂ ಬರೀ ನೋವಿನ ಸರಮಾಲೆಗಳೇ ಹೊರತು ಸಂತಸ ಕಂಡ ದಿನಗಳೇ ಕಡಿಮೆ ಮೊದಲು ಕಳೆದು ಬಿಡಲಿ ಈ ಕರಾಳ ಸಮಯ ಎಂದು ಎಲ್ಲರ ಮನಸಿನಲೂ ನಿಟ್ಟುಸಿರು ಒಂದೇ ಆಗಿತ್ತು. ********************************

ಮಾಯಾವಿ 2020 Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಶಿವರಾಜ್.ಡಿ ಪ್ರೇಮ ಮದಿರೆಯ ನಶೆಗೆ ಸಿಹಿಮುತ್ತುಗಳೇ ಸಾಕ್ಷಿ ಸಾಕಿಮುತ್ತಿನ ಮತ್ತಿಗೆ ಜೋಲಾಡುತ್ತಿರುವ ಅಕ್ಷಿಗಳೇ ಸಾಕ್ಷಿ ಸಾಕಿ ಪ್ರೀತಿ ಪ್ರೇಮಕೂ ಕಾಮದ ರೂಪ ಉಂಟೂ ಲೋಕದಲಿನಮ್ಮಿಬ್ಬರ ಪರಿಶುದ್ಧ ಪ್ರೇಮಕೆ ಈ ರಾತ್ರಿಗಳೇ ಸಾಕ್ಷಿ ಸಾಕಿ ಸೌಂದರ್ಯವ ಆಸ್ವಾದಿಸದೇ ಅನುಭೋಗಿಸುವುದು ಸಲ್ಲದುಹೃದಯಾಂತರಾಳದಲಿ ಮಿಳಿತಗೊಂಡ ಆತ್ಮಗಳೇ ಸಾಕ್ಷಿ ಸಾಕಿ ನಿನ್ನೊಲವ ಸವಿರುಚಿಯ ಉಣಬಡಿಸು ನನ್ನೆದೆಗೆನೀನಿರದ ಅನುಕ್ಷಣಗಳಿಗೆ ವಿರಹಗಳೇ ಸಾಕ್ಷಿ ಸಾಕಿ ಪ್ರೀತಿ ಎಂದರೆ ಬರೀ ದೇಹಾಕರ್ಷಣೆ ಅಲ್ಲ ‘ ಬಾಬಾ ‘ಮನಸ್ಸು ಮನಸ್ಸುಗಳ ಸಮ್ಮೀಲನಗಳೇ ಸಾಕ್ಷಿ ಸಾಕಿ *******************************************

ಗಜಲ್ Read Post »

ಕಾವ್ಯಯಾನ

ನನ್ನವನು

ಕವಿತೆ ನನ್ನವನು ಅನಿಲ ಕಾಮತ ಮದಿರೆಯ ಅಮಲಿನಲ್ಲಿದ್ದಾಗಕೈಹಿಡಿದು ಕುಳುಣಿಸಿದ್ದೇನೆಹಸಿವಿನಿಂದ ಒಡಲುಉರಿ ಎದ್ದರುಒಡಲು ತುಂಬಿದವರಂತೆನಟಿಸಿರುವೆ ಮಾನನಿಯರ ಸಂಘದಲ್ಲಿಮುಳುಗಿದರುಮೌನ ಮುರಿಯದಿರುವೆಮೈಯ ಮೇಲಿನಬರೆ ಸರಿಕರಿಗೆಸಣ್ಣ ಗುಮಾನಿಯೂಬರೆದ ಹಾಗೆಸೀರೆಯಿಂದಸುತ್ತಿಕೊಂಡಿರುವೆರಂಡೆ ಮುಂಡೆಯಬೈಗಳಿಗೆ ದಿನಂಪ್ರತಿಆಹಾರವಾಗಿರುವೆನಿನ್ನ ಸಿಟ್ಟಿಗೆ ಅದೆಷ್ಟು ಸಲನಾನು ಆಹುತಿಯಾಗಿರುವೆಏಕೆಂದರೆ ನೀನುನನ್ನವನು…………. ******************************************************

ನನ್ನವನು Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ಎ. ಹೇಮಗಂಗಾ ವಿರಹ ಹೃದಯಕೆ ಹೊರೆಯಾಗುತಿದೆ ತೊರೆದು ಹೋಗದಿರು ನನ್ನಸನಿಹ ನೀನಿರದ ಕೊರಗು ಕೊರೆಯುತಿದೆ ತೊರೆದು ಹೋಗದಿರು ನನ್ನ ಹೊಂಬೆಳಕ ಸೂರ್ಯನೂ ಕೆಂಡದಂತೆ ಸುಡುವನು ನಿಷ್ಕರುಣಿಯಾಗಿಕುದಿಎಸರಿನಂತೆ ಮನಸು ಕುದಿಯುತಿದೆ ತೊರೆದು ಹೋಗದಿರು ನನ್ನ ಭಾವ ಸಂವಹನಕೆ ಬರಿಯ ಕಂಗಳೇ ಸಾಕು ಮಾತಿನ ಹಂಗಿಲ್ಲ ನನಗೆಎದೆಗೂಡಲಿ ಪ್ರೀತಿದೀಪವಿನ್ನೂ ಬೆಳಗುತಿದೆ ತೊರೆದು ಹೋಗದಿರು ನನ್ನ ಸುಖವೆಲ್ಲಿದೆ ಒಂಟಿ ಬಾಳಲ್ಲಿ ನಿನ್ನ ಕೂಡಿ ಒಡನಾಡದ ಹೊರತು ?ಮಧುಪಾನಕೆ ಅಧರ ಹಂಬಲಿಸುತಿದೆ ತೊರೆದು ಹೋಗದಿರು ನನ್ನ ತನುವಿಂದು ಕೊರಡಾಗಿ ಬಾಡಿದೆ ಹಿತ ಸಂವೇದನೆಯ ಸ್ಪರ್ಶವಿರದೇಅಪ್ಪುಗೆಯ ಬಿಸುಪು ನೆನಪಾಗಿ ಕಾಡುತಿದೆ ತೊರೆದು ಹೋಗದಿರು ನನ್ನ ನನ್ನ ಮರೆತು ಬದುಕುವುದು ಬದುಕೇ ಅಲ್ಲವೆಂದು ಹಳಹಳಿಸಿದ್ದೆಜೀವ ಸಹಿಸಲಾಗದ ನೋವ ಸಹಿಸುತಿದೆ ತೊರೆದು ಹೋಗದಿರು ನನ್ನ ಬುವಿಯೊಂದು ಗೋಲ ಮರಳಲೇಬೇಕು ‘ಹೇಮ’ ಳೆಡೆಗೆ ಕೊನೆಗೊಮ್ಮೆಹೊಸಬದುಕು ನಮಗಾಗಿ ಕಾಯುತಿದೆ ತೊರೆದು ಹೋಗದಿರು ನನ್ನ ******************************

ಗಜಲ್ Read Post »

ಕಾವ್ಯಯಾನ, ಗಝಲ್

ಗಜಲ್

ಗಜಲ್ ರತ್ನರಾಯಮಲ್ಲ ಚಳಿಯ ನಿನ್ನಯ ಆಲಿಂಗವನ್ನು ಬಯಸುತಿದೆಒಂಟಿತನ ನಿನ್ನಯ ಜೊತೆಯನ್ನು ಬಯಸುತಿದೆ ಬದುಕಿನಲ್ಲಿ ಬಹು ದೂರ ಸಾಗಬೇಕಾಗಿದೆ ನಾನುಜೀವನವು ನಿನ್ನಯ ಸನಿಹವನ್ನು ಬಯಸುತಿದೆ ನನ್ನೆದೆಯ ಗೂಡು ಹಾಳುಬಿದ್ದ ಕೊಂಪೆಯಾಗಿದೆನನ್ನ ಹೃದಯವು ನಿನ್ನ ಬಡಿತವನ್ನು ಬಯಸುತಿದೆ ತಿಂದ ಅನ್ನ ರುಚಿಯೆನಿಸುತಿಲ್ಲ ಮುದ್ದು ಬಂಗಾರಿಜೀವವು ನಿನ್ನ ಪ್ರೀತಿಯ ಕೈತುತ್ತನ್ನು ಬಯಸುತಿದೆ ‘ಮಲ್ಲಿ’ಯ ಮೈ-ಮನವು ಮರೆತಿದೆ ಬದುಕುವುದನ್ನುಬರಡಾದ ಬಾಳು ನಿನ್ನ ಸಾಂಗತ್ಯವನ್ನು ಬಯಸುತಿದೆ

ಗಜಲ್ Read Post »

ಕಾವ್ಯಯಾನ

ನಾಲ್ಕು ದಿನದ ಪಯಣ

ಕಾವ್ಯಯಾನ ನಾಲ್ಕು ದಿನದ ಪಯಣ ತೇಜಾವತಿ ಹೆಚ್.ಡಿ. ಪ್ರವಾಹವೋ ಬಿರುಗಾಳಿಯೋಚಂಡಮಾರುತವೋ ಜ್ವಾಲಾಮುಖಿಯೋ ಸುನಾಮಿಯೋ… ಯಾವುದೋ ಒಂದು ವಿಕೋಪಬಂದೆರಗಲೇಬೇಕುನವನೆಲೆ ರೂಪಾಂತರವಾಗಲುಹೊಸ ಅಲೆ ಪ್ರಸಾರವಾಗಲು… ಬೇಕಾದದ್ದು ಬೇಡವಾಗಿಬೇಡವಾದದ್ದು ಬೇಕಾಗಿಕಸ ರಸವಾಗಿ, ರಸ ಕಸವಾಗಿಎಲ್ಲವೂ ತಲೆಕೆಳಾಗಾಗುವವಿಚಿತ್ರ ಸತ್ಯ-ಮಿಥ್ಯ ಪ್ರತಿಬಿಂಬಗಳ ದರ್ಶನವಾಗಲು…ಓ ಕಾಲನೇ… ವಜ್ರಕ್ಕಿಂತಲೂ ನೀನೆಷ್ಟು ಕಠೋರ.. ನಿನ್ನನುಗ್ರಹವಿದ್ದರೆಹೂವಿನ ಮೇಲಿನ ನಡಿಗೆಇಲ್ಲದಿದ್ದರೆ..ಕತ್ತಿಯ ಮೇಲಿನ ನಡಿಗೆಮುಟ್ಟಿದ್ದೆಲ್ಲಾ ಮಲ್ಲಿಗೆಯಾಗಿಸುವ ನಿನಗೆತಾಕಿದ್ದೆಲ್ಲ ನಂಜಾಗಿಸುವ ಕಲೆಯೂ ಕರಗತವಾಗಿದೆ ಬಿಡು.. ಎಂದಾದರೂ ನಿನ್ನಂತರಗವ ಅಳೆಯಲಾದೀತೇ…?ಈ ಕ್ಷಣಿಕದ ಗೊಂಬೆಗಳು..! ದಾನ ಮಾಡಿದ ಕರಗಳು ಬೇಡುವುದೆಂದರೇನು..ತನ್ನಸ್ತಿತ್ವವ ಪರರ ವಶದಲ್ಲಿಟ್ಟುನಶ್ವರದ ಬಾಳು ಬದುಕುವುದೆಂದರೇನು.. ನೂರೊಂದು ಮನೆಗಳ ಬೆಳಗಾಗಿದ್ದ ಬೆಳಕುಕತ್ತಲಕೋಣೆಯಲ್ಲಿ ಕೊಳೆಯುವುದೆಂದರೇನು…ದೃಷ್ಟಿ ಕಳೆದುಕೊಂಡ ನಯನಗಳುಎಲ್ಲಿದ್ದರೇನು… ಎಂತಿದ್ದರೇನು? ಭೂಮಿ ತಿರುಗುವುದುಕಾಲ ಉರುಳುವುದುಕಾಡು ನಾಡಾಗಿ, ನಾಡು ಕಾಡಾಗಿನೆಲ ನೀರಾಗಿ, ನೀರು ನೆಲವಾಗಿದೇಹ ಮಣ್ಣಾಗಿ, ಜೀವ ಹಾರಿಹೋಗಿ ಆತ್ಮ ಅಮರವಾಗುವುದು…. ಇದಿಷ್ಟೇ ತಾನೇ…ನಾಲ್ಕು ದಿನದ ಪಯಣ..ಇದಿಷ್ಟೇ ತಾನೇ..ಮುಕ್ತಗುಟ್ಟು… **************************

ನಾಲ್ಕು ದಿನದ ಪಯಣ Read Post »

ಕಾವ್ಯಯಾನ

ಸಾವಿತ್ರಿ

ಕವಿತೆ ಸಾವಿತ್ರಿ ಡಾ.ಸುರೇಖಾ ರಾಠೋಡ ವೀರ ಮಹಿಳೆ ಸಾವಿತ್ರಿಅಕ್ಷರದ ಅವ್ವ ಸಾವಿತ್ರಿ ಅಕ್ಷರ ಕಲಿಯಲು ಹೊರಾಡಿದಅಕ್ಷರ ಕಲಿಸಲು ಶ್ರಮಿಸಿದವೀರ ಮಹಿಳೆ ಸಾವಿತ್ರಿ ದಿನ ದಲಿತರ ಶಿಕ್ಷಣಕ್ಕಾಗಿನಿಂದನೆ, ಅಪಮಾನ, ಅವಮಾನಗಳನ್ನುಸಹಿಸಿದ ವೀರ ಮಾತೆ ಸಾವಿತ್ರಿ ಬಡವಬಲ್ಲಿದವರೆನ್ನೆದೆ ಎಲ್ಲರಸೇವೆ ಮಾಡಿದದೇಶದ ಮೊದಲ ಶಿಕ್ಷಕಿಮೊದಲ ಮುಖ್ಯೋಪಾಧ್ಯಾಯಿನಿಸಾವಿತ್ರಿ ಮಹಿಳಾ ಶಿಕ್ಷಣಕ್ಕಾಗಿ ಜೀವನವನ್ನೇಮುಡುಪಾಗಿಟ್ಟವೀರ ಮಾತೆ ಸಾವಿತ್ರಿ ಜ್ಯೋತಿ ಬಾ ಪುಲೆಯವರೊಂದಿಗೆಶಾಲೆಗಳನ್ನು ತೆರೆದ ಶಿಕ್ಷಣದಾತೆಸಾವಿತ್ರಿ ಜನರ ಕೆಂಗಣ್ಣಿಗೆ ಗುರಿಯಾಗಿಸಂಪ್ರದಾಯಸ್ಥರನ್ನು ಎದುರು ಹಾಕಿಕೊಂಡುದಿಟ್ಟತನದಿಂದ ಮುಂದೆ ನಡೆದದಿಟ್ಟ ಮಹಿಳೆ ಸಾವಿತ್ರಿ ಶಾಲಾ ಮಕ್ಕಳ ಬೇಕು ಬೇಡಗಳನ್ನುಕುಂದುಕೊರತೆಗಳನ್ನು ನಿಗಿಸಿದಸಹನಾಮಯಿ ಸಾವಿತ್ರಿ ಶಿಕ್ಷಣದ ಜೊತೆಗೆಜೀವನ ಕೌಶಲ್ಯ ಕಲಿಸಿದಜೀವನವಿಧಾತೆ ಸಾವಿತ್ರಿ ರೂಢಿ, ಸಂಪ್ರದಾಯ, ಸಮಾಜಿಕರಣದಕಟ್ಟಳೆಗಳನ್ನು ಮುರಿದು ಶವಸಂಸ್ಕಾರವ ಮಾಡಿದ ಧೈರ್ಯವಂತೆ ಸಾವಿತ್ರಿಅಕ್ಷರದವ್ವ ಸಾವಿತ್ರಿಮೊದಲ ಶಿಕ್ಷಕಿ ಸಾವಿತ್ರಿ ***********************

ಸಾವಿತ್ರಿ Read Post »

You cannot copy content of this page

Scroll to Top