ಅಪ್ಪಣ್ಣನಿಗೊಂದು ಮನವಿ
ಕವಿತೆ ಅಪ್ಪಣ್ಣನಿಗೊಂದು ಮನವಿ ಎ.ಎಸ್.ಮಕಾನದಾರ ಅಪ್ಪಣ್ಣಎಷ್ಟೊಂದು ಕತ್ತಿಗಳುಸೇರಿಕೊಂಡಿವೆ ನಿನ್ನ ಹಸಬಿಯೊಳುಆ ಕತ್ತಿಗಳೇ ಮಾಡಿದ ಕ್ಷೌರಹೇಗೆ ಸೂಚಿಸಿ ಬಿಡುತ್ತವೆ. ಆ ಚಾಂದ ದಾಡಿ ಮುಸ್ಲಿಮನದೆಂದುಆ ಜುಟ್ಟು ಬ್ರಾಹ್ಮಣನನದೆಂದುಆ ಕೆಳದಾಡಿ ಸಿಖ್ಖನದೆಂದುಆ ಫ್ರೆಂಚ್ ದಾಡಿ ಕ್ರಿಶ್ಚಿಯನನದೆಂದು ಮೀಸೆ ಬಿಟ್ಟರೊಂದು ಜಾತಿಕೇಶ ಬಿಟ್ಟರೊಂದು ಜಾತಿಮುಡಿ ಕಟ್ಟಿ ದಾಡಿ ಬಿಟ್ಟರೊಂದು ಜಾತಿಎಲ್ಲವನು ಬೋಳಿಸಿಟ್ಟುಹೊಸದೊಂದು ವ್ಯವಸ್ಥೆನಿರ್ಮಿಸಬಾರದಿತ್ತೇ ಅಪ್ಪಣ್ಣ ನೀನುಅಣ್ಣ ಅಕ್ಕ ಅಲ್ಲಮರೊಂದಿಗೆಅನುಭವ ಮಂಟಪದ ಚುಕ್ಕಾಣಿಯಾಗಿದ್ದಿ ಯಾಕಣ್ಣ ಈ ವ್ಯವಸ್ಥೆಗೆಕಡಿವಾಣ ಹಾಕದೆ ಸುಮ್ಮನಾದೆಗಂಡಲ್ಲದೆ-ಹೆಣ್ಣಲ್ಲದೆ ಒಳಗಿರುವಆತ್ಮಕ್ಕೆ ಅನುಭವ ಮಂಟಪದಲಿಅಂತರಂಗ ಶುದ್ಧಿ ಮಾಡಿದ ನೀನೇಬಹಿರಂಗ ಶುದ್ಧಿಗಾಗಿಮಾಡಿದ ಈ ಕ್ಷೌರದಿಂದಅದ್ಹೇಗೆ ಅಶಾಂತಿ ತಾಂಡವವಾಡುತ್ತಿದೆ ? ಅಪ್ಪಣ್ಣನಿನಗೆ ನೆನಪಾಗಲಿಲ್ಲವೇಶೂನ್ಯನಾದ ಅಣ್ಣ ಬೆತ್ತಲಾದ ಅಕ್ಕ ಜಗದ ಕೊಳೆ ತೊಳೆಯುವ ಮಾಚಿದೇವ ತನ್ನ ಚರ್ಮವನೇ ಕತ್ತರಿಸಿ ಚಡಾವುಮಾಡಿದ ಹರಳಯ್ಯ ಕಲ್ಯಾಣಮ್ಮ ಯುದ್ಧಕ್ಕೆ ವಿದಾಯವಿತ್ತ ಅಶೋಕ ಬುದ್ಧನಾದ ಸಿದ್ಧ ಅಂತೆಯೇಎಸೆದು ಬಿಡಲು ಹೇಳುಎಲ್ಲ ಸಹೋದರರಿಗೆಈ ಜಾತಿ ಸೂಚಕ ಕತ್ತಿಗಳನು…….. **********************************
ಅಪ್ಪಣ್ಣನಿಗೊಂದು ಮನವಿ Read Post »









