ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ನಾ..ದಶಮುಖ

ಕವಿತೆ ನಾ..ದಶಮುಖ ಅಬ್ಳಿ,ಹೆಗಡೆ   ನನ್ನ ಮುಖ ನಾನೇ             ಇನ್ನೂ ಓದದ             ಓದಬೇಕೆಂದರೂ             ಓದಲಾಗದ,ಹಳೆಯ             ಪುಟ್ಟ ಪುಸ್ತಕ             ತೆರೆಯದೇ..             ಎಷ್ಟೋ ಕಾಲದ             ಮೇಲೆ             ಹೊತ್ತು ಗೊತ್ತಿಲ್ಲದೇ             ಯಾರ್ಯಾರೋ             ಬಂದು,ಮಡಚಿದ             ನೆರಿಗೆಗಳ             ನೇರಮಾಡಿ             ಧೂಳ ಝಾಢಿಸಿ             ಅವಸರದಲ್ಲಿ ಓದಿ             ತಮ್ಮಿಷ್ಟದಂತೇ             ತಮಗನಿಸಿದಂತೇ             ವ್ಯಾಖ್ಯಾನಿಸಿ             ನನ್ನೆದುರು ಕನ್ನಡಿ             ಆಗುತ್ತಾರೆ ನನಗೆ.             ನನ್ನ ಒಂದು ಮುಖ             ಹತ್ತಾಗಿ,ಒಂದೊಂದೂ             ಒಂದೊಂದು ತರಹ             ನನಗೇ ದಿಗ್ಭ್ರಮೆ             ನನಗೇ ಅರಿವಿಲ್ಲದ             ನನ್ನ ದಶಮುಖ             ಕಾಣಿಸಿದ ಕನ್ನಡಿಗೆ                     ನಾನೆಂದೂ ಕ್ರತಜ಼. **********************************

ನಾ..ದಶಮುಖ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರತ್ನರಾಯ ಮಲ್ಲ ದೇವರ ಮಂದಿರಗಳಿಗಿಂತ ಮಸಣವೇ ಲೇಸುಆಡಂಬರದ ಪ್ರದರ್ಶನಕ್ಕಿಂತ ಮೌನವೇ ಲೇಸು ಬಜಾರ ಎಂದರೆ ಎಲ್ಲರೂ ಬೆನ್ನು ಹತ್ತುವವರೆಯಾರೂ ಬರದ ಸ್ಮಶಾನದ ಪ್ರಯಾಣವೇ ಲೇಸು ಬಂಧಗಳು ನರಳುತಿವೆ ಬಾಡಿದ ಬಾಂಧವ್ಯದಲ್ಲಿತಬ್ಬಲಿಯಲ್ಲಿ ಅರಳಿದ ಈ ಒಂಟಿತನವೇ ಲೇಸು ಶ್ರೀಮಂತಿಕೆಯು ಆಟವಾಡುತಿದೆ ಜಗದೊಳಗೆಜೊತೆ ಜೊತೆಗೆ ಹೆಜ್ಜೆ ಹಾಕುವ ಬಡತನವೇ ಲೇಸು ಅನುದಿನವೂ ಸಾಯಿಸುತಿವೆ ಮೌಲ್ಯಗಳು ನನ್ನ‘ಮಲ್ಲಿ’ಯ ಹೃದಯದಲ್ಲಿರುವ ಮರಣವೇ ಲೇಸು **********************

ಗಝಲ್ Read Post »

ಕಾವ್ಯಯಾನ

ಸಾವಿನಂಗಡಿಯಲ್ಲಿ

ಕವಿತೆ ಸಾವಿನಂಗಡಿಯಲ್ಲಿ ಅಬ್ಳಿ,ಹೆಗಡೆ ಈಗ..ಇದೊಂದು ಭ್ರಹತ್ ಅಂಗಡಿ   ಜಗದ ಮೂಲೆ,ಮೂಲೆಗೂ   ಕೋಟಿ,ಕೋಟಿ ಶಾಖೆಗಳ ತೆರೆದು   ಕುಳಿತಿದ್ದಾನೆ ಯಜಮಾನ ನಗುತ್ತಾ   ಎಲ್ಲ ಶಾಖೆಗಳಲ್ಲೂ ಭರ್ಜರಿ ವ್ಯಾಪಾರ   ಒಂದು ಕೊಂಡರೆ ಒಂದು ಫ್ರೀ,   ಗಿರಾಕಿಗಳಿಗೆ ಆಮಿಷ,ನೂಕು ನುಗ್ಗಲು   ಮೇಲಾಟ,ತಳ್ಳಾಟ ಕೊಂಡುಕೊಳ್ಳಲು   ಅಂತರಕಾಯ್ದುಕೊಳ್ಳುವವರ,ಇಲ್ಲದವರ   ಮುಖವಿದ್ದೂ ಮುಖವಾಡ ದರಿಸಿದವರ   ದರಿಸಿಲ್ಲದವರ,ಸಂದೋಹ ಎಲ್ಲೆಡೆಗೂ   ಹೊಸ,ಹೊಸ ಆವಿಷ್ಕಾರ   ಶೋ ಕೇಸುಗಳಲ್ಲಿ ಗ್ಯಾರಂಟಿ ಕಾರ್ಡುಗಳ   ಸಹಿತ.ಹಳೇ ಸಾಮಾನುಗಳೂ ಇವೆ   ಎಲ್ಲೋ ಅಪರೂಪಕ್ಕೊಮ್ಮೆ ಬೇಡಿಕೆ   ಅದಕ್ಕೆಂದೇ ಇಟ್ಟ ಕಪಾಟುಗಳಲ್ಲಿ   ಅಂಗಡಿಯ ಹಿಂದೆ,ಹಿಂದೆ ಕಾಣುವಂತೆ   ಅಪರೂಪಕ್ಕೆ ಕೊಳ್ಳಲು ಬಂದಾಗಲೂ   ಚೌಕಾಸಿ ಗಿರಾಕಿಗಳಿಗಾಗಿ ಕಿರಿ,ಕಿರಿ   ಯೆನಿಸಿದರೂ ಕೊಡುತ್ತಾನೆ ಯಜಮಾನ   ನಸುನಗುತ್ತ ಅವುಗಳನ್ನ.   ಈಗೀಗ ಲಭ್ಯವಿರುವ ಹೊಸ ಅವಿಷ್ಕಾರ   ಗಳಿಗೇ ಹೆಚ್ಚು ಬೇಡಿಕೆ ತುಂಬ   ಅಗ್ಗ ಅದಕ್ಕಾಗಿ.ಇಲ್ಲಿ ಕೊಳ್ಳಲು ಬೇಕಾದದ್ದು   ಹಣ ಅಲ್ಲ,ಮಾನ,ಪ್ರಾಣ,ಧರ್ಮ,ಅಧರ್ಮ   ನೀತಿ,ಅನೀತಿ,ಒಳಿತು,ಕೆಡುಕು,ಸತ್ಯ,ಸುಳ್ಳು   ನೋವು,ನಲಿವು,ಬಣ್ಣ,ಭಾಷೆ,ಸಾಕ಼ರ,ರಾಕ಼ಸ   ಯಾವುದಾದರೂ ಆದೀತು.   ಅಸಲಿಗೆ ಇಲ್ಲಿ ಸಿಗುವ ಸಾಮಾನುಗಳು   ಯಾವವು ಗೊತ್ತೇ….?   ಗುಣಿತಕ್ಕೆ ಸಿಗದ ಅಗಣಿತ,ಕಲ್ಪನೆಗೂ   ಎಟುಕದ ‘ಸಾವಿಲ್ಲ’ದ ಸಾವುಗಳು….!!    ಸಾವಿನಂಗಡಿ ಇದು,ಹೊಸ ಆಕರ್ಷಣೆ   ‘ಕೊರೋನಾ’ಕೊಳ್ಳಲು ಗಿರಾಕಿಗಳ   ಜಿದ್ದಾಜಿದ್ದಿ ಕಂಡು ಖುಷಿಯಿಂದಲೋ   ವಿಷಾದದಿಂದಲೋ…   ನಗುತ್ತಿದ್ದಾನೆ ಯಜಮಾನ,   ಲೋಕಾತೀತ,ಕಾಲಾತೀತ,ನಿರ್ಮೋಹಿ             ಅತೀತ ಎತ್ತರದಲ್ಲಿ ಕುಳಿತು….!!! *******************************

ಸಾವಿನಂಗಡಿಯಲ್ಲಿ Read Post »

ಕಾವ್ಯಯಾನ, ಗಝಲ್

ಮತ್ಲಾ ಗಜಲ್

ಮತ್ಲಾ ಗಜಲ್ ತೇಜಾವತಿ ಹೆಚ್.ಡಿ. ನೀನಿರದ ವಿರಾಮವು ಬೇಡವಾಗಿವೆ ಈಗಮಾಯಾ ಮನಸ್ಸು ಖಿನ್ನತೆಗೆ ಜಾರುತಿವೆ ಈಗ ನೀ ನೋಡದ ಅಲಂಕಾರವು ಮಂಕಾಗಿವೆ ಈಗತೊಟ್ಟ ಆಭರಣಗಳೇ ಭಾರವಾಗಿವೆ ಈಗ ನಿನ್ನಗಲಿದ ಇರುಳೆಲ್ಲವೂ ಘೋರವಾಗಿವೆ ಈಗದೇವಾ ಕಂಡ ಕನಸೆಲ್ಲವೂ ದುಃಸ್ವಪ್ನವಾಗಿವೆ ಈಗ ನೀನಾಡದ ಮಾತುಗಳು ಕರಗಿ ಹೋಗಿವೆ ಈಗಅಳಿದುಳಿದ ಭಾವನೆಗಳು ಹೆಪ್ಪುಗಟ್ಟಿವೆ ಈಗ ನೀನಿಲ್ಲದ ನಂದನವನ ಬರಡಾಗಿವೆ ಈಗಬೀಸುವ ತಂಗಾಳಿಯೂ ಬತ್ತಿಹೋಗಿವೆ ಈಗ ‘ತೇಜ’ ನೀ ಬಾರದ ದಿನಗಳು ಸ್ತಬ್ಧವಾಗಿವೆ ಈಗಹಗಲು ರಾತ್ರಿಯ ವ್ಯತ್ಯಾಸವೇ ತಿಳಿಯದಾಗಿವೆ ಈಗ *

ಮತ್ಲಾ ಗಜಲ್ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಸುಜಾತಾ ರವೀಶ್ ಅಕ್ಷರದ ಪಯಣಕ್ಕೆ ಒಂದಾಗಿ ಹೊರಡೋಣ  ಬರುವೆಯಾ ಸಂಗಾತಿ ಅಕ್ಷಯದ ಒಲವಿನ ಸುಗಮ ಸಂಪ್ರೀತಿಯನು ತರುವೆಯಾ ಸಂಗಾತಿ  ಶಬ್ದಗಳ ಮಾಲೆಯನ್ನು ಕಟ್ಟುತಾ ಹಾಕೋಣವೇ ಕನ್ನಡಮ್ಮನಿಗೆ ಹಾರ?  ಪದಗಳ ಅಡಿಪಾಯ ನೆಡಲು ಶ್ರಮದಕಲ್ಲ ಹೊರುವೆಯಾ ಸಂಗಾತಿ ಸಾಹಿತ್ಯದ ತೇರನೆಳೆಯುತ ಮುಂದಡಿ ಇಡುತಲಿ ಸಾಗೋಣವೇ?  ಸಾಂಗತ್ಯದ ಭರವಸೆ ಕೊಡುತ ಬಾಳಗಮ್ಯ ಸೇರುವೆಯಾ ಸಂಗಾತಿ    ಕುಶಲ ಕರ್ಮಿಯಂತೆ ಮಾಡೋಣ ಚಿತ್ತಾರದ  ಕುಸುರಿ ಕೆಲಸ ವಿಶಾಲ ಪುಸ್ತಕಗಳ ಆಗಸದಿ ನನ್ನೊಡನೆಯೇ  ಹಾರುವೆಯಾ ಸಂಗಾತಿ  ಅನನ್ಯವು ಕಾವ್ಯಪ್ರಪಂಚ ವಿಸ್ಮಯ ವಿನೂತನ ವಿಹಾರವಿದು ಅಮೂಲ್ಯವು ಸುಜಿಗೆ ಓದುವಿಕೆ ಕಡೆವರೆಗೂ ಇರುವೆಯಾ ಸಂಗಾತಿ  *****************************

ಗಝಲ್ Read Post »

ಕಾವ್ಯಯಾನ

ಕನ್ನಡಮ್ಮನ ಬೆಡಗು

ಕವಿತೆ ಕನ್ನಡಮ್ಮನ ಬೆಡಗು ವೀಣಾ ರಮೇಶ್ ಕರುನಾಡು ನನ್ನದುಕನ್ನಡವದೇ ಸಾಕುನನಗೆ ಬಿರುದುಸಂಸ್ಕೃತಿಯ ತವರಿದುಹಸಿರು ಸಿರಿಯಶೃಂಗಾರದಲಿ ಬಿರಿದು ಧೀರ ಶರಧಿಯ ಬಗೆದುಕವಿಶ್ರೇಷ್ಠ ರ ಆಗೆದುಸಾಹಿತ್ಯ ಶಿಖರದನೆತ್ತಿಯಲಿ ಇಳಿದುಹರಿಸಿದಳು ಅಕ್ಷರಧಾರೆಮೊಗೆ ಮೊಗೆದು ಮಲೆನಾಡ ಕಾಡಲ್ಲಿಕಂಗೊಳಿಸಿದ ಸುಂದರಿರಸಋಷಿಗೆ ಜ್ಞಾನಪೀಠದಹೆಮ್ಮೆಯ ಗರಿನಾಲ್ಕು ತಂತಿಗಳಲಿಮೀಟಿದ ನಾದಲಹರಿನಮ್ಮ ವರಕವಿ ಶಿಲ್ಪಕಲೆ,ಬೇಲೂರು ಹಳೇಬೀಡಿನ ಬೆಡಗುರಾಜ ವೈಭೋಗದಮೈಸೂರಿನ ಸೊಬಗುಹಂಪಿಯ ಸುವರ್ಣ ಯುಗ ಕನ್ನಡಾಂಬೆಯಮೆರುಗು. ಯಕ್ಷ ಪ್ರೇಮಿಗಳ ಹೃದಯದಲಿಯಕ್ಷಗಾನದ ಹೆಜ್ಜೆಗಳಲಿಮದ್ದಳೆಯ ಸದ್ದಲ್ಲಿಕುಣಿಯಿತು ಯಕ್ಷಗಾನಕಾರಂತರ ಹೆಜ್ಜೆಗಳಲಿ ಎಲ್ಲೆಲ್ಲೂಮೊಳಗಲಿ ನಿನ್ನ ಕಹಳೆಸಮರಸದ ಸಹಬಾಳ್ವೆಬೆಳಗಲಿ ,ಹರಡಲಿಕನ್ನಡ ದೇವಿಯಪ್ರಭಾವಳಿ **********

ಕನ್ನಡಮ್ಮನ ಬೆಡಗು Read Post »

ಕಾವ್ಯಯಾನ

ವಿವೇಕ ವಾಣಿ

ಕವಿತೆ ವಿವೇಕ ವಾಣಿ ಬಾಗೇಪಲ್ಲಿ ಕೃಷ್ಣಮೂರ್ತಿ ಬೆಳಕು ಮೂಡುವಮುನ್ನ ನಡಿಗೆಗೆ ಹೊರಟೆಬಿಳುಪಿಗೆ ಪರಿಕಲಿತ ಸೌಂದರ್ಯದ ಆಕಾಶ ಮಲ್ಲಿಗೆ ಹೂ ಕಂಡೆ ಮರದ ಎತ್ತರದಿಆನಂದಿಸಲು ಬಿಡದ ಮನ ಹೇಳಿತುಆಕೆ ಇಷ್ಟೇ ಅಲ್ಲವೆ ನಿನಗೆ? ಮುನ್ನಡೆದು ಹಾದಿಬದಿಯ ಗಿಡದ ಹೂ ಮೇಲೆ ಕುಂತ ಬಣ್ಣದಚಿಟ್ಟೆ ಕಂಡೆಪ್ರಯಾಸದಿ ಹಿಡಿದೆ ಪಾಪವೆನಿಸೆ ಬದುಕಲ ಬಿಟ್ಟೆಹಿಡಿದ ಬೆರಳಿಗೆ ಹತ್ತಿತ್ತು ರೆಕ್ಕೆಯ ಬಣ್ಣಸಂತೋಷಿಪ ಮೊದಲೇ ಮನ ಹೇಳಿತು ಪುನಃಆಕೆ ಇಷ್ಟೇ ಅಲ್ಲವೆ ನಿನಗೆ! ಯೋಚನೆ ಹರಿವನು ಬದಲಿಸ ಲೆತ್ನಿಸಿಮುಂದಿನ ಮರದ ರೆಂಬೆಯಲಿ ಕುಂತ ಹಕ್ಕಿಕಂಡೆರಾತ್ರಿ ಓದಿದ ನೆನಪು ಇವು ನೈಲ್ ನದಿಯನು ಬಳಸಿ ವಲಸೆ ಬರವುದಂತೆಮೂಬೈಲಿಗೆ ಕ್ಲಿಕ್ಕಿಸಿ ಕೊಂಡೆ ಚಿತ್ರ ಚನ್ನಾಗಿಯೇ ಮೂಡಿತ್ತುಸಂತೋಷಿಪ ಮುನ್ನ ಮನ ಹೇಳಿತು ಮತ್ತೊಮ್ಮೆಆಕೆ ಇಷ್ಟೇ ಅಲ್ಲವೆ ನಿನಗೆ? ಮನವ ಕೇಳಿದೆ ಹೀಗೇಕೆ ಹಿಂಸಿಸುತಿರುವೆ ಮನ ಹೇಳಿತುನಿನ್ನ ಪ್ರಙ್ಞೆಯೊಂದಿಗೆ ನೀನೇ ಕಣ್ಣುಮುಚ್ಚಾಲೆ ಆಡಬೇಡ. ಇಂದು ಬೇಗನೆ ನಡಿಗೆಗೆ ಬಂದುದೇಕೆನೆನ್ನೆ ಕಂಡು ಮಾತನಾಡಿದ ಸುಂದರ ಗರತಿಯ ಕಾಣಲಲ್ಲವೇ?ಅದಕೇ ಎಚ್ಚರಿಸುತಿರುವೆ ಸಭ್ಯನಾಗು ಆಕೆ ಗರತಿ! ಎಟುಕದ ಹೂ ದಕ್ಕದ ಪಾತರಗಿತ್ತಿಚಿತ್ರದೊಳಗಿನ ಸುಂದರ ಹೆಣ್ಣು ಆಕೆಯ ಗುಂಗನು ಬಿಡುನಿರ್ಮಲ ಚಿತ್ತದಿ ನಡಿಗೆ ನಡಿ!ನಾನೂ ಸಹಕರಿಸುವೆ ಅಂದಿತು. ************************

ವಿವೇಕ ವಾಣಿ Read Post »

ಕಾವ್ಯಯಾನ

ಮೋಹದ ಕಡಲಲ್ಲಿ…

ಕವಿತೆ ಮೋಹದ ಕಡಲಲ್ಲಿ… ಜಯಲಕ್ಷ್ಮೀ ಎನ್ ಎಸ್ ಕೋಳಗುಂದ ಅಂಗ ಸಂಗವ ಜರೆದುಅರಿವೆ ಹಂಗನು ತೊರೆದುಬೆತ್ತಲಾದ ಅಕ್ಕಯ್ಯನಿಗೂಆತ್ಮ ಸಂಗಾತದ ಮೋಹ..! ಮಾಯೆಯ ಜಗದೊಳಗೆಈಸಿ ಗೆದ್ದ ಅಲ್ಲಮನಿಗೂಲಿಂಗದಾಲಿಂಗನದ ಮೋಹ…! ಕಾನನದ ಕಾರ್ಪಣ್ಯಗಳಅರಿವಿದ್ದೂ ಸೀತೆಯ ಬಿಡದಬಂಗಾರದ ಮೋಹ…! ಬಸುರಿ ಹೆಂಡತಿಯಕಾಡಿಗಟ್ಟಿದ ಪುರುಷೋತ್ತಮನಜನಪದದ ಮೋಹ..! ಮಡದಿಯ ಅಡವಿಟ್ಟೂಮಾತುತಪ್ಪದ ಹರೀಶ್ಚಂದ್ರನಸತ್ಯನಿಷ್ಠೆಯ ಮೋಹ..! ಗೆದ್ದ ರಾಜ್ಯವ ಒದ್ದುತಪೋನಿರತನಾದವನಿಗೂಜಿತನಾಗುವ ಮೋಹ…! ಸಾವಿನ ಬಾಗಿಲಿನಲಿ ನಿಂತಅರಿವಿದ್ದೂ ಫಣಿಕೇತನನಿಗೆಛಲಮೆರೆವ ಮೋಹ..! ತುಂಡು ಅರಿವೆಯ ಮಂಡಿಯ ಮೇಲೆಸುತ್ತಿಕೊಂಡ ಫಕೀರನಿಗೆಮುಕ್ತಿ ಕೊಡಿಸುವ ಮೋಹ…! ಮೋಹವ ಗೆದ್ದೂ ಗೆಲ್ಲದನಿರ್ಮೋಹಿಗಳೂಮೋಹದ ಕಡಲೊಳಗಿನಆಣಿಮುತ್ತುಗಳಾದರು….!! **************************************

ಮೋಹದ ಕಡಲಲ್ಲಿ… Read Post »

ಕಾವ್ಯಯಾನ

ಅವ್ಯಕ್ತ

ಕವಿತೆ ಅವ್ಯಕ್ತ ಡಾ.ಪ್ರೀತಿ. ಕೆ. ಎ  ಹೇಳಿಬಿಡಬಹುದಿತ್ತು ನಾನುನಿನ್ನ ಪ್ರತಿಯೊಂದು ಮಾತುನನ್ನಲ್ಲಿ ಅನುರಾಗದ ಅಲೆಗಳನ್ನುಎಬ್ಬಿಸುವುದೆಂದು ನಿನ್ನ ಸಾಮೀಪ್ಯವು ನನಗೆಎಷ್ಟೊಂದು ಮುದನೀಡುವುದೆಂದು ಹೇಳಿಬಿಡಬಹುದಿತ್ತು ನಾನುನಿನ್ನ ಹೊಗಳಿಕೆಯೊಂದುಇಂದಿಗೂ ಕೂಡನನ್ನ ಕೆನ್ನೆಯ ರಂಗೇರಿಸುವುದೆಂದು ನನ್ನ ನಗೆಯ ಹಿಂದಿನಕಾರಣವು ನೀನಷ್ಟೇಆಗಿರುವೆಯೆಂದು ಹೇಳಿಬಿಡಬಹುದಿತ್ತು ನಾನುನಿನ್ನ ಒಂದೇ ಒಂದು ಸ್ಪರ್ಶನನ್ನೊಳಗಿನ ಭಾವ ತಂತಿಯನ್ನುಮೀಟುವುದೆಂದು ನಿನ್ನ ಬಾಹುಗಳಲ್ಲಿನನ್ನನ್ನೇ ನಾನುಕಳೆದುಕೊಳ್ಳುತ್ತೇನೆಂದು ಹೇಳಿಬಿಡಬಹುದಿತ್ತು ನಾನುನೀನು ನನ್ನೊಡನಿದ್ದ ಕ್ಷಣನನಗೆ ಮತ್ತೇನೂನೆನಪಾಗುವುದಿಲ್ಲವೆಂದು ಎದೆ ಬಡಿತ ನಿಲ್ಲುವ ತನಕನನ್ನ ಹೃದಯ ನಿನ್ನ ಹೆಸರನ್ನಷ್ಟೇಕೂಗುವುದೆಂದು ಆದರೂ ಹೇಳಲಿಲ್ಲಏಕೆಂದರೆ ನನಗೆ ಗೊತ್ತುನಿನ್ನೆಡೆಗಿನ ನನ್ನ ಪ್ರೀತಿಹೇಳಿದರಷ್ಟೇ ನಿನಗೆ ಗೊತ್ತಾಗುವಷ್ಟುಬಲಹೀನವಲ್ಲವೆಂದು ! **********************************

ಅವ್ಯಕ್ತ Read Post »

ಕಾವ್ಯಯಾನ

ಪ್ರಕೃತಿ

ಕವಿತೆ ಪ್ರಕೃತಿ ಭಾಗ್ಯ ಸಿ ಮನುಜ ಜೀವನದ ಅವಿಭಾಜ್ಯ ಅಂಗ ಪ್ರಕೃತಿಜತನದಲಿ ಕಾಪಾಡಿಕೊಳ್ಳುವುದಾಗಬೇಕು ನಮ್ಮ ಪ್ರವೃತ್ತಿಗಾಳಿ,ಬೆಳಕು,ನೀರು ಎಲ್ಲಾ ಪ್ರಕೃತಿಯ ಒಡಲಲಿ ನಗುತಿರೆಮನುಜನ ಜೀವನವು ವಜ್ರದಂತೆ ಹೊಳೆಯುತ್ತಿರೆ ವಿಪರೀತ ಬಯಕೆಗೆ ಪರಿಸರ ಬಲಿಪ್ರಾಣಿ ಪಕ್ಷಿಗಳ ಆಸರೆಗಿಟ್ಟ ಕೊಡಲಿಸಣ್ಣ ಮಳೆಗೂ ಕುಸಿಯುತ್ತಿದೆ ಬೆಟ್ಟ ಗುಡ್ಡಜಲಪ್ರಳಯ, ಚಂಡಮಾರುತ ಸೀಳಿದೆ ಅಡ್ಡಡ್ಡ ಬಳಲಿಕೆ ನಿವಾರಣೆಗೆ ಬೇಕು ನೀರುಪಂಚಭೂತಗಳ ನಿರ್ವಹಣೆ ಹೊತ್ತವರಾರುಪ್ರಕೃತಿಯ ಒಡಲ ಸೀಳಿ ತಲೆಯೆತ್ತಿವೆ ಕಟ್ಟಡಗಳುಅವೈಜ್ಞಾನದ ಫಲವಾಗಿ ಉರುಳುತ್ತಿವೆ ತಲೆಗಳು ಅಪ್ಪಿಕೋ ಚಳುವಳಿಯ ರೂವಾರಿ ತಾಯಿಹದಿನೇಳನೆ ಶತಮಾನದ ಅಮೃತಾದೇವಿ ಬಿಷ್ಣೋಯಿಅಧಿಕಾರವಲ್ಲ ಅಸ್ತಿತ್ವವಿದೆ ನಮಗೆ ಪ್ರಕೃತಿಯೊಂದಿಗೆಸಂದೇಶ ಬಿಟ್ಟಿದ್ದಾರೆ ಪ್ರಾಣ ತ್ಯಾಗದೊಂದಿಗೆ ಅರಿಯಬೇಕಿದೆ ಜೋಧಪುರದ ಹೆಣ್ಣು ಮಗಳ ಕಾಳಜಿಯನ್ನುವ್ಯರ್ಥವಾಗಲು ಬಿಡಬಾರದು ಬಿಷ್ಣೋಯಿ ಜನರ ತ್ಯಾಗವನ್ನುಓ ವಿಶ್ವ ಮಾನವರೆ ಸಿದ್ದರಾಗಿ ಪೋಷಿಸಲು ನೀವಿನ್ನುಸೃಷ್ಠಿಯ ವಿಶೇಷವಾದ ಚರಾಚರ ಚೈತನ್ಯವನ್ನು **********************************************************

ಪ್ರಕೃತಿ Read Post »

You cannot copy content of this page

Scroll to Top