ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಹಚ್ಚಿಕೊಂಡರೆ

ಕವಿತೆ ಹಚ್ಚಿಕೊಂಡರೆ ನಿರ್ಮಲಾ ಶೆಟ್ಟರ ಸಾಕಿನ್ನು ಹೊರಡುಎನ್ನುವುದೆ ತಡ ಹೊರಡಲಾಗದು ಸರಿ ಇದ್ದುಬಿಡುಎಂದೊಡನೆ ಉಳಿಯಲಾಗದು ನಡೆಯುವ ಮುನ್ನ ನಿನ್ನೊಳಗಿನನನ್ನ ತೊರೆದು ನಡೆ ಎಂದೆನಲುಅದೆಷ್ಟು ಬಾರಿ ಅಂದುಕೊಂಡಿಲ್ಲತೊರೆಯಲಾಗದು ನನ್ನಒಳಗಿನ ನಿನ್ನ ಹೀಗೆ ಒಂದೊಮ್ಮೆ ಹಚ್ಚಿಕೊಂಡರೆರೆಕ್ಕೆ ಮೂಡಿ ನಿಂತ ಹಕ್ಕಿಮುನ್ನುಡಿ ತೀಡಿದ ಮೊದಲ ಪುಟತಾಯೊಡಲು ಸೀಳಿ ಬಂದ ಮೊಳಕೆ ಸಸಿಕಂಡಿಕೆ ಪೋಣಿಸಿಕೊಂಡ ಮಗ್ಗಎಲ್ಲದರಾಚೆ ಪ್ರೀತಿ ಕಾಪಿಟ್ಟುಕೊಂಡ ಹೃದಯ ನಡೆಯುವದು ಸರಳಾತೀ ಸರಳಅಲ್ಲಲ್ಲೆ ಚಾಚಿದ ಬೇರ ಕತ್ತರಿಸಿದಲ್ಲಿಚಿಗುರು ಆವರಿಸಿಕೊಂಡಂತೆ ಮಳೆಗೆಅಳಿದುಳಿದವು ತಮ್ಮಿರುವಿನ ಗುರುತಿನಲಿ ಭೂಮಿ ಬಸಿರ ಧಿಕ್ಕರಿಸಿದರೆಅತ್ತಂತೆ ಭಾನು ಮೋಡ ಸುರಿಸಿಮತ್ತೆ ಕನಸಿಗಾಗಿ ಕತ್ತಲೆ ಹಗಲಬಚ್ಚಿಟ್ಟಂತೆ ದಿನ ದಿನವೂ ಹಚ್ಚಿಕೊಂಡೆನೆಂದು ನೆಚ್ಚಿಕೊಳದ ನೋವುಬಾಳ ಯಂತ್ರಕೆ ಕೀಲೆಣ್ಣೆ ಕೊನೆತನಕರೆಕ್ಕೆಗಳೀಗ ಹಾರಲು ಹವಣಿಸಿವೆಆಗಸದ ಹೊಸ ಹಾದಿಗೆಅಣಿಗೊಂಡ ವಿದಾಯಕೊಂದು ನಗು ಸೇರಲಿನೀರಸವಾಗದಿರಲಿನಿನ್ನ ಹಾದಿ ಮತ್ತೆ ನನ್ನದೂ ********************************

ಹಚ್ಚಿಕೊಂಡರೆ Read Post »

ಕಾವ್ಯಯಾನ

ಬೆವರು ಹಾಗೂ ಹೆಣ್ಣು

ಕವಿತೆ ಬೆವರು ಹಾಗೂ ಹೆಣ್ಣು ನೂತನ ದೋಶೆಟ್ಟಿ ಹೆಂಟೆಯೊಡೆದು ಮಡಿ ಮಾಡಿಬೆವರ ಧಾರೆ ಎರೆದೆರೆದುನೀರುಣಿಸಿದ ಪೈರೀಗಕಾಳುಕಟ್ಟಿ ನಿಂತಿದೆಎದೆಯೆತ್ತರದ ಮಗನಂತೆ ಕೈಯ ಕೆಸರುಮನದ ಕೊಸರುಹಚ್ಚಿಟ್ಟ ಕಣ್ಣ ಹಣತೆಹನಿಸಿದ್ದ ಎದೆಯಾಮೃತ ಹಿಂಡಿ ತೆಗೆದ ಕಾಳ ಹಾಲುಸೇರಿ ಸವಿದ ಪಾಯಸಾನ್ನಸಂಭ್ರಮದ ನಗೆಯ ಮೋಡಿ ಆಳೆತ್ತರ ಬೆಳೆದ ಪೈರುಎದೆಯೆತ್ತರ ಬೆಳೆದ ಮಗಹೆಣೆದ ಕನಸುಗಳ ಕೊಂಡಿಬೆವರಿಗೂ ಹೆಣ್ಣಿಗೂ ತಾಳೆಯ ಮಾಡಿ. ********************************

ಬೆವರು ಹಾಗೂ ಹೆಣ್ಣು Read Post »

ಕಾವ್ಯಯಾನ

ಹಣೆಗೆ ಹಣೆ ಹಚ್ಚಿ

ಕವಿತೆ ಹಣೆಗೆ ಹಣೆ ಹಚ್ಚಿ ನಾಗರಾಜ ಹರಪನಹಳ್ಳಿ ಹಣೆಗೆ ಹಣೆ ಹಚ್ಚಿಪಿಸುಮಾತಾನಾಡೋಣಜಗಕೆ ಪ್ರೀತಿಯ ಹಾಡ ಹಾಡೋಣ ಇರುವಷ್ಟು ದಿನಹಗಲುಜೀವ ಕಾರುಣ್ಯದ ಹಾಡ ಹಾಡಿನೆಲದ ಜನಕೆ ಬದುಕ ಹಾಡೋಣ ಸುಖವೋ ದುಃಖವೋ ಸಮನಾಗಿ ಸ್ವೀಕರಿಸಿಹಣೆ ತುಂಬ , ಮನ ತುಂಬ ಸಿಹಿಯ ಹಂಚೋಣ ಬದುಕೆಂಬುದು ಸುಖದ ಹಾಸಿಗೆಯಲ್ಲಕಡು ಕಷ್ಟವನೆ ಹೊದ್ದ ದಾರಿಯೂ ಅಲ್ಲಎಂಬುದು ಸಾರಿ ಹೇಳೋಣ ಹಗಲು ಸೂರ್ಯನ ಪಯಣಇರುಳು ಚಂದ್ರನ ಗಗನಸುಳಿವ ಗಾಳಿಗೆ ದಣಿವಿಲ್ಲದಿರುವಾಗದುಡಿಮೆ ಒಲುವೆ ಜೊತೆ ಜೊತೆಗೆ ಎಂಬ ತತ್ವ ಸಾರೋಣ ಮಗನ ಹಣೆಗೆ ಹಣೆಯಿಟ್ಟುಬದುಕ ಪ್ರೀತಿಸುವುದ ಕಲಿಸೋಣಪಿಸುಮಾತು ಎದೆಯೊಳಗೆನುಡಿಗಟ್ಟು ಕಣ್ಣೊಳಗೆಹಾಡಾಗುವ ಗುಟ್ಟನಲಿಸಿ ಕಲಿಸೋಣ ಪ್ರೀತಿ ಎಂಬುದು ಹಿಗ್ಗುಬದುಕು ಎಂಬುದು ಸುಗ್ಗಿಹೋರಾಡಿ ಪಡೆದ ಸುಖವುಕೊನೆತನಕ ಎಂಬ ಗುಟ್ಟಕಲಿಸೋಣ ಹಣೆಗೆ ಹಣೆ ಹಚ್ಚಿ ಪ್ರೀತಿಸೋಣಕೊನೆಯಿರದ ಬದುಕಿನ ಹಾಡ ಹಾಡೋಣಕೊನೆಯಿರದ ಬದುಕಿನ ಪ್ರೀತಿ ಕಲಿಸೋಣ**************************

ಹಣೆಗೆ ಹಣೆ ಹಚ್ಚಿ Read Post »

ಕಾವ್ಯಯಾನ

ಗಾಂಧಿ

ಕವಿತೆ ಗಾಂಧಿ ಡಾ.ಕಾತ್ಯಾಯಿನಿ ಕುಂಜಿಬೆಟ್ಟು. ಹದಿಹರೆಯದಲ್ಲಿ ಶ್ರವಣನನ್ನೂ ಹರಿಶ್ಚOದ್ರನನ್ನೂಅಡ್ಡೆಯಲ್ಲಿ ಕೂರಿಸಿ ಹೆಗಲಲ್ಲಿ ಹೊತ್ತು ನಡೆಯಲಾರಂಭಿಸಿದ ಈತಒಂದೂವರೆ ಶತಮಾನದಿಂದ ನಡೆಯುತ್ತಲೇ ಇದ್ದಾನೆಹೇ ರಾಮ್… ಹೇ ರಾಮ್… ಎನ್ನುತ್ತ…ಎಷ್ಟೋ ಬಾರಿಅಡ್ಡೆಯಲ್ಲಿ ಕುಳಿತ ಶ್ರವಣನಿಗೆ ವ್ರಣವಾಗಿದ್ದುಂಟುಹರಿಶ್ಚಂದ್ರನಿಗೆ ಭಗಂದರವಾಗಿ ನರಳಿದ್ದುಂಟುಆಗೆಲ್ಲ ತನ್ನ ಹೃದಯದಲ್ಲೇ ಹುಣ್ಣು ಆದವನಂತೆಪಶ್ಚಾತ್ತಾಪದ ಕಂಬನಿಯಲ್ಲಿ ನೆನೆಸಿದ ಮದ್ದು ಪಟ್ಟಿಯನ್ನು ಕಟ್ಟಿಹಗಲು ರಾತ್ರಿ ಶುಶ್ರೂಷೆ ಮಾಡಿಬರಿಗಾಲಲ್ಲಿ ಬಿಸಿಲು ಮಳೆ ಚಳಿ ಗಾಳಿಯೆನ್ನದೆ ನಡೆದಿದ್ದಾನೆಬಸುರಿ ಸೀತೆ ಹೊಟ್ಟೆಯೊಳಗೆ ಅವಳಿಭ್ರೂಣಗಳ ಹೊತ್ತು ತಿರುಗಿದಂತೆ ಹಾದಿಯುದ್ದಕ್ಕೂ ಕಸಾಯಿ ಮಾಂಸದಂಗಡಿಗಳಲ್ಲಿತಲೆ ಕೆಳಗಾಗಿ ನೇತಾಡುತ್ತ ಸಿಪ್ಪೆ ಸುಲಿಸಿಕೊಂಡು ಚೀರಾಡುವ ಆಡು ಕುರಿ ಕೋಳಿಗಳನಡುವೆ ಹಿಟ್ಟು ನಾದಿ ಮೊಟ್ಟೆಯಾಕಾರದಲ್ಲಿ ಲಟ್ಟಿಸಿಬೆಂಕಿಯಲ್ಲಿಅಹಿಂಸಾ… ಅಹಿಂಸಾ… ಎಂದುಚೀರುತ್ತಲೇ ಸುಟ್ಟ ರೊಟ್ಟಿಯಂತಹ ಹೃದಯ ಹೊತ್ತು ಒಣಕಲು ರೊಟ್ಟಿಯಂತಹ ದೇಹದ ದಂಟು ಕೈ ಕಾಲುಗಳಲ್ಲಿ ಹಾರು ನಡಿಗೆಯಲ್ಲಿ ಓಡುತ್ತಿದ್ದಾನೆಕಡಲ ತಡಿಯಲ್ಲಿ ಉಪ್ಪಿನ ಸತ್ಯಾಗ್ರಹಕ್ಕೆ ಕುಳಿತವನ ಹೃದಯಬಾಯ್ಬಾಯ್ ಬಿಡುತ್ತಿರುವ ಬಂಗುಡೆ ಮೀನಿನ ಮೈಗೆ ಉಪ್ಪು ಖಾರ ಹಚ್ಚಿದಂತೆ ಬೇಯುತ್ತ ಚೀರುತ್ತಿದೆ ಕೃತ ತ್ರೇತಾ ದ್ವಾಪರ ಕಲಿ ಕಾಲಗಳುಯುದ್ಧ ಕೊಲೆ ರಕ್ತಪಾತದಲ್ಲಿ ನೆಂದುಪೂವ೯ದಲ್ಲಿ ಮೂಡಿದ ಸೂಯ೯ನನ್ನೇ ನುಂಗಿ ಪಶ್ಚಿಮಕ್ಕೆ ಉಗುಳುತ್ತಿವೆನೀಲಿ ಆಗಸದಲ್ಲಿ ನೀಲಿ ಕಡಲಲ್ಲಿಕೆಂಪು ಬಟ್ಟೆಯ ಹೆಣಗಳ ರಾಶಿತೇಲುತ್ತಿವೆಕೈಗಳನ್ನು ಚಾಚುತ್ತ ಅಹಿಂಸೆ ಅಹಿಂಸೆ… ಹೇ ರಾಮ್ ಹೇ ರಾಮ್ ಎಂದು ಚೀರುತ್ತಲೇ ಇವೆ ಅಡ್ಡೆ ಹೊತ್ತ ತಾತ ನಡೆಯುತ್ತಲೇ ಇದ್ದಾನೆಅವನ ಎದೆಯೊಳಗಿನ ಅಹಿಂಸೆಯಬೆಂಕಿಯ ಬೇಗೆ ಸಹಿಸಲಾಗದೆಫರಂಗಿಗಳು ಹೊರಗೆ ಓಡಿ ಹೋಗಿದ್ದಾರೆ…ಗೋಡ್ಸೆ ಕೋವಿ ಸಹಿತ ಒಳ ನುಗ್ಗಿದ್ದಾನೆಹೇ ರಾಮ್….! ಕಣ್ಣು ಮುಚ್ಚಿದಾಗೆಲ್ಲಎವೆಗಳ ಪರದೆಯ ಒಳಗೆಬಿಳಿ ಕಚ್ಚೆಯ ಸಣಕಲು ಕಪ್ಪು ಮೈಯ ಆತ ಬೀಸ ಬೀಸಓಡು ನಡಿಗೆಯಲ್ಲಿ ನಡೆಯುತ್ತಲೇ ಇರುತ್ತಾನೆಮೆದುಳಿನಿಂದ ಹೃದಯಕ್ಕೆಹೃದಯದಿಂದ ಮೆದುಳಿಗೆಬೆಳಕು ಹೊತ್ತ ಮಿಣುಕು ಹುಳದಂತೆ ಇಡೀ ಲೋಕದ ಹೃದಯ ಹೊಕ್ಕುಅಲ್ಲಿಂದ ಮೆದುಳಿಗೇರುತ್ತ ಇಳಿಯುತ್ತ ಏರುತ್ತ ಇಳಿಯುತ್ತನಡೆಯುವ ಮೊದಲುಆತ ತನ್ನೊಳಗೆೇ ಕವುಚಿ ಬಿದ್ದು ಹೊಟ್ಟೆ ಎಳೆದು ಅಂಬೆ ಹರಿದುಕುಳಿತು ನಿಂತು ಬಿದ್ದು ಎದ್ದುನಡಿಗೆ ಕಲಿತಿದ್ದನಂತೆಅದನ್ನು ನೋಡಲೆಂದು ಅವನೊಳಗೇಸೂಯ೯ ಮೂಡಿದ್ದನಂತೆ ಬೆಳಕು ಕೋಲನು ಊರಿಕತ್ತಲ ಕೋಲ್ಮಿಂಚಂತೆಬೀಸ ಬೀಸ ನಡೆಯುವ ಈ ಅಜ್ಜಅಜ್ಜನಲ್ಲ… ಗಲ್ಲದಲ್ಲಿ ಮೊಲೆಹಾಲುಕ್ಕಿಸುತಬೊಚ್ಚು ಬಾಯಲ್ಲಿ ನಗುವ ಮಗುಎದೆ ಎದೆಗಳಲ್ಲಿ ಹರಿಯುವ ಶಾಂತಿಗೊಂದು ರೂಪ ಕೊಟ್ಟು ನೋಡಿರಿ…ಅವ ಗಾಂಧಿ ಮನೆ ಮನೆಯಲ್ಲೂ ಗಾಂಧಿಯುಹುಟ್ಟುತ್ತಲೇ ಇರುತ್ತಾನೆಬೊಚ್ಚು ಬಾಯಲ್ಲಿ ಮುದ್ದು ಮುದ್ದಾಗಿ ನಗುತ್ತಮನೆ ಮನೆಯಲ್ಲೂ ಗಾಂಧಿ ಸಾಯುತ್ತಲೇ ಇರುತ್ತಾನೆಬೊಚ್ಚು ಬಾಯಲ್ಲಿ ಹೇರಾo ಎನ್ನುತ್ತಗೋಡ್ಸೆಯ ಗೋಡೆ ಗೋಡೆಗಳ ನಡುವೆ ಹಿಂಸೆಯ ಗೋಲಿಗಳಿಗೆ ಎದೆಯೊಡ್ಡಿ… ಇವನನ್ನು ಕ್ಷಮಿಸು ಎಂದು ಯೇಸು ವಾಗುತ್ತಅಂಗುಲೀ ಮಾಲನ ಕಂಬನಿಯಲ್ಲಿ ತೊಯ್ದ ಬುದ್ಧನಾಗುತ್ತ ***********************

ಗಾಂಧಿ Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ರತ್ನರಾಯ ಮಲ್ಲ ಸಿದ್ಧಾಂತಗಳು ಕಚ್ಚಾಡಿದರೆ ಮತ್ತೆಂದಿಗೂ ಹತ್ತಿರವಾಗಲಾರವುವಾಸನೆಗಳು ಬಡಿದಾಡಿದರೂ ಯಾವತ್ತೂ ದೂರವಾಗಲಾರವು ಜಗಳವು ಸಾಗುತ್ತಿದೆ ಅಲ್ಲಿ ಜೋರಾಗಿ ನಿನ್ನ ಮನ ಕಲುಕುವಂತೆನ್ಯಾಯ ಹುಡುಕುವ ಮನಗಳು ನೆಮ್ಮದಿಯಿಂದ ಬಾಳಲಾರವು ಮೂರನ್ನು ತೊರೆಯುವುದೆ ಇಂದು ಸೌಹಾರ್ದದ ರೂಪ ತಾಳಿದೆಕೈ-ಕಾಲುಗಳು ಹಿಡಿಯದ ಪ್ರತಿಭೆಗಳಿಗೆ ಪ್ರಚಾರ ಮುತ್ತಿಕ್ಕಲಾರವು ಕಸ ಗುಡಿಸುವ ಹುಚ್ಚು ಭ್ರಮೆಯಲ್ಲಿ ಕಸಬರಿಗೆ ಆಗದಿರು ನೀನುಸುಂದರ-ಉತ್ತಮ ಪೊರಕೆಗಳೂ ಸಹ ಪೂಜೆಗೆ ಒಳಗಾಗಲಾರವು ವೈಯಕ್ತಿಕ ಗಟ್ಟಿ ಹೆಜ್ಜೆಯೂರಬೇಕು ನಿಸ್ವಾರ್ಥದ ನೆಲೆಯಲ್ಲಿ ಇಲ್ಲಿಚೂರಿ ಹಾಕಿದ ಹೃದಯಗಳು ‘ಮಲ್ಲಿ’ ಎದೆಯಲ್ಲಿ ಉಳಿಯಲಾರವು ************************************

ಗಝಲ್ Read Post »

ಕಾವ್ಯಯಾನ

ಸಾಧ್ಯವಾದರೆ ಕಲಿ

ಕವಿತೆ ಸಾಧ್ಯವಾದರೆ ಕಲಿ ಪ್ರತಿಮಾ ಕೋಮಾರ ಈರಾಪುರ ಹೌದು ನಾನು ಬರೀ ಇರುವೆನನ್ನಾಕಾರ,ಗಾತ್ರ,ಬಣ್ಣನೋಡಿನನ್ನೆಳೆಯದಿರು ಮನವೆನನ್ನ ಹೊಸಕದಿರುಸಾಧ್ಯವಾದರೆ ಕಲಿನನ್ನ ಸಂಘ ಜೀವನತುಸುವಾದರೂಹಂಚಿ ತಿನ್ನುವ ಉದಾರತೆ ನೀ ಕೊಡುವ ಪ್ರತೀತುತ್ತಿಗೂ ನಾನು ಋಣಿನಿನ್ನ ಮನೆ ಮೂಲೆಯೇಎನ್ನ ಸಾಮ್ರಾಜ್ಯನೀ ತೋರುವ ಹನಿ ಪ್ರೀತಿಗೆದುಪ್ಪುಟ್ಟು ಸೇರಿಸಿಕೊಡುವೆ ಪ್ರೀತಿಸಾಧ್ಯವಾದರೆ ಕಲಿಉಂಡ ಮನೆಗೆ ದ್ರೋಹ ಬಗೆಯದನನ್ನ ಪ್ರಾಮಾಣಿಕತೆ ನೀ ಬತ್ತಿಯಿಟ್ಟು ತೈಲವೆರೆದುಉರಿಸುವ ಹಣತೆ ನಾನುನಾ ಕತ್ತಲೆಯಲ್ಲುಳಿದರೂನೀಡುವೆ ನಿನಗೆ ಬರೀಬೆಳಕುಸಾಧ್ಯವಾದರೆ ಕಲಿಬೆಳಕ ನೀಡಿದವರಬದುಕ ಬೆಳಕಾಗಿಸಲುಇಲ್ಲ ಆರಿಸುವವಿಶ್ವಾಸ ದ್ರೋಹವಾದರೂಮಾಡದಿರು ಹಣ್ಣು ಹೇಗಿದ್ದರೂಬರೀ ಸವಿಯನ್ನಷ್ಟೇಕುಕ್ಕಿ ಹೀರಿಖುಷಿಪಡುವುದು ಹಕ್ಕಿಸಾಧ್ಯವಾದರೆ ಕಲಿಒಂದು ಕೆಟ್ಟದ್ದನ್ನೇಕೆದಕಿಕೂಗಿ ಹೇಳುವ ಬದಲುಸಾವಿರ ಒಳ್ಳೆಯದಕಂಡು ಕಲಿತುಖುಷಿಪಡುವ ಉದಾತ್ತತೆ **************************

ಸಾಧ್ಯವಾದರೆ ಕಲಿ Read Post »

ಕಾವ್ಯಯಾನ

ಹೂ ಬೆಳಗು

ಕವಿತೆ ಹೂ ಬೆಳಗು ಫಾಲ್ಗುಣ ಗೌಡ ಅಚವೆ ಸರಿಯುವ ಕತ್ತಲನ್ನು ಮರದಎಲೆಗಳ ನಡುವೆ ಕುಳಿತ ಹಕ್ಕಿಗಳುತದೇಕ ಚಿತ್ತದಿಂದ ನೋಡುತ್ತಿವೆ ಆಗಷ್ಟೇ ಕಣ್ಣು ಬಿಟ್ಟ ನಸುಕುದೊಸೆ ಹೊಯ್ಯಲುಬೆಂಕಿ ಒಟ್ಟುತ್ತಿದೆ ಹೊಂಗನಸ ನೆನೆದುಒಂದೇ ಸವನೆ ಮುಸುಕುವ ಮಂಜುಮರದ ಎಲೆಗಳ ತೋಯಿಸಿಕಚಗುಳಿಯಿಡುತ್ತಿದೆ ಆಗತಾನೇ ಹೊಳೆ ಸಾಲಿನಲ್ಲಿಮುಖ ತೊಳೆದುಕೊಂಡ ಮೋಡಗಳ ಕೆನ್ನೆಅರಳುವ ಎಳೆಬಿಸಿಲಿಗೆಕೆಂಪಾಗುಗುತ್ತಿದೆ ದಾಸಾಳದ ಹೂಗಳುಹೂ ಕೊಯ್ಯುವ ಪುಟ್ಟಿಯಪುಟಾಣಿ ಕೈಯ ಮುದ್ದು ಮಾಡುತ್ತಿವೆ ತಡವಾಗಿ ಎದ್ದ ಮುತ್ತುಮಲ್ಲಿಗೆಹೂಗಳು ಮುಖಕ್ಕೆ ಇಬ್ಬನಿಯೆರಚಿನಿದ್ದೆಗಣ್ಣುಗಳನ್ನು ತೊಳೆಯುತ್ತಿವೆ ಕಣ್ಣು ತೆರೆದೇ ಸಣ್ಣ ನಿದ್ದೆಗೆ ಜಾರಿದಅಬ್ಬಲಿ ಹೂಗಳನ್ನುಬೀಸಿ ಬಂದ ತಂಗಾಳಿ ಮುದ್ದಿಸಿಎಬ್ಬಿಸುತ್ತಿದೆ ಹೊದ್ದ ಚಾದರ ಸರಿಸಿಮಗುವಿನ ಕನಸಿನ ಕದ ತೆರೆದುಕಣ್ಣೆವೆ ಉಜ್ಜಿಕೊಳ್ಳುತ್ತಲೇ ತೆರೆವಕೂಸಿಗೆ ಕರವೀರದ ಹೂಗಳು ಮಂದಹಾಸ ಬೀರಿವೆ ನೈದಿಲೆಯ ಮೊಗ್ಗುಗಳಿಗೆಹೂ ಮುತ್ತನಿತ್ತ ಕ್ರೌಂಚ ಪಕ್ಷಿಗಳುಹಿಮದಂತಹ ನೀರಲ್ಲಿ ತೇಲುತ್ತಿವೆಆವರಿಸಿದ ಚಳಿ ಲೆಕ್ಕಿಸದೆ ಮೊಗ್ಗುಗಳು ನಾಳೆ ಅರಳುವಖುಷಿ ಹಂಚಿಕೊಂಡರೆಪಾತರಗಿತ್ತಿಗಳು ದಿನಪತ್ರಿಕೆ ಓದುತ್ತಿವೆ ಹೂವಿನ ಪರಿಮಳವ ಹೊತ್ತೊಯ್ಯುವ ತಂಗಾಳಿಯ ರೀತಿಅಲೌಕಿಕ ಬೆಳಗಲ್ಲಿ ಅಕಾರಣ ಪ್ರೀತಿ ಎಲೆ ಎಲೆಗಳ ಮೇಲೆಕುಳಿತಿಹ ಚಿಟ್ಟೆಯ ಕಂಡುಪ್ರತಿ ಗಿಡ ತೊಟ್ಟಿವೆ ಹೂವಿನ ಬಟ್ಟೆ!! *********************************************************

ಹೂ ಬೆಳಗು Read Post »

ಕಾವ್ಯಯಾನ, ಗಝಲ್

ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಪ್ರೀತಿಯ ಆಳ ಹರವು ತಿಳಿದಿಲ್ಲ ಸಾವೇ ದೂರವಿರುಕಡಲು ಈಜಿ ದೇಹವು ದಣಿದಿಲ್ಲ ಸಾವೇ ದೂರವಿರು ಮಧುಶಾಲೆಯಲಿ ನೆಮ್ಮದಿ ಹುಡುಕುತಿರುವೆ ತಡೆಯ ಬೇಡಸುಖ ಪಡೆಯುವ ಸರದಿಯು ಬಂದಿಲ್ಲ ಸಾವೇ  ದೂರವಿರು ಕೊರೆವ ಚಳಿ ನಡುಗುತಿದೆ ತನು ನೆನಪ ಬಾಹು ಬಂಧನದಲಿಹೊದ್ದ ಒಲವ ಕಂಬಳಿ ಹರಿದಿಲ್ಲ ಸಾವೇ ದೂರವಿರು ಮೋಹನ ಮುರಳಿ ಗಾನಕೆ ಮನ ಸೋತು ಬಂದೆ ನದಿ ತಟಕೆಹೃದಯ ತಣಿಸುವ ಮಾತು ಮುಗಿದಿಲ್ಲ ಸಾವೇ ದೂರವಿರು ತಾಮಸದ ಕರಿ ನೆರಳು ಕರಗಿ ಅರಿವಿನ”ಪ್ರಭೆ” ಹರಡಲಿಮೋಹದ ಕವಚ ಸರಿದಿಲ್ಲ ಸಾವೇ ದೂರವಿರು. ****************************************

ಗಝಲ್ Read Post »

ಕಾವ್ಯಯಾನ

ಅನ್ನದಗಳುಗಳ ಲೆಕ್ಕ..

ಕವಿತೆ ಅನ್ನದಗಳುಗಳ ಲೆಕ್ಕ.. ವಸುಂದರಾ ಕದಲೂರು ಕೈ ಚಾಚಿತು ಒಡಲ ಹಸಿವು, ಅನ್ನದತಟ್ಟೆ ಹಿಡಿದು ಮುಷ್ಠಿ ತುತ್ತಿಗೆ…ಕೈ ಬಿಚ್ಚಿ ಹಾಕಿದರು ಅದರೊಳಗೆ ‘ಕ್ರಾಂತಿ’ ಬೇಕೆಂದು ಸಿಡಿದು ಬೀಳುವ ಹೊಳಪುಅಚ್ಚಿನ ನಾಣ್ಯಗಳನು. ಹಸಿದ ಉದರಕೆ ಓದಲು ಬಾರದು.ತಟ್ಟೆಗೆ ಬಿದ್ದ ಕಹಳೆ ಮೊರೆತದನಾಣ್ಯಗಳು ಕ್ರಾಂತಿಯ ಶ್ವೇತಪತ್ರಓದಿಸಲು ಪೈಪೋಟಿಗೆ ಬಿದ್ದವು.. ಅನ್ನ ಸಿಗುವ ಭರವಸೆಯಿದ್ದ, ತಟ್ಟೆಗೆಬೀಳುವ ಅಗುಳಿನ ಸದ್ದಿಗೆ ಕಾದವರು;ಕೆಂಪು ಉರಿ ಬೆಳಗಿನಲಿ ಉರಿದು, ಸಂಜೆ ಕಪ್ಪಿನಲಿ ನಿಧಾನ ಕರಗಿ, ನಾಳೆಯಾದರೂಹೊಟ್ಟೆ ತುಂಬುವ ಅನ್ನದಗುಳುಗಳ ಕನಸುಕಾಣುತ್ತಾ… ಎವೆಗಳನು ಮುಚ್ಚುತ್ತಿದ್ದರು. ಕಿವುಡು ಕಿವಿಗಳಿಗೆ ಸಾಮಾಧಾನದದನಿಯೊಂದು, ‘ಇಲ್ಲೀಗ ಮುಳುಗಿದ ಸೂರ್ಯ ಉದಯಿಸುತ್ತಾನೆ ಅಖಂಡ ಭೂಮಂಡಲದ ಇನ್ನೊಂದು ಭಾಗದಲ್ಲಿ’ ಸ್ವಪ್ನವೋ ಬದುಕೋ! ಪಿಸುಗುಡುತ್ತಿತ್ತು.. ಹಸಿದ ಹೊಟ್ಟೆಯನು ಅಂಗೈಲಿ ಹಿಡಿದು ಚಾಚಿದ ಕೈಗೆ ಸೂರ್ಯನನು ಕೊಟ್ಟುವರು, ಕಸಿದು ಮರೆಮಾಡುವ ದಟ್ಟ ಸಾಲುಮೋಡಗಳನು ಕಳಿಸಿ, ಅಕಾಲ ಅತಿವೃಷ್ಟಿ.. ಭೀಕರ ಅನಾವೃಷ್ಟಿ.. ತರುತ್ತಾರೆ. ಕೈಗೂ ಬಾರದ, ಬಾಯಿಗೂ ಸೇರದ,ವಿಕೋಪಗಳ ಸರಣಿಯಲಿ ಮಣ್ಣುಪಾಲಾದ ಅನ್ನದಗಳುಗಳು ಮರುಗುವ ಕಣ್ಣುಗಳಿಂದ ಉದುರುವ ನಷ್ಟದ ಕಣ್ಣೀರ ಹನಿಗಳಾಗಿ ಬೆಳ್ಳಗೆ ಹೊಳೆಯುತ್ತವೆ…. ***********************************

ಅನ್ನದಗಳುಗಳ ಲೆಕ್ಕ.. Read Post »

ಕಾವ್ಯಯಾನ

ಹನಿಗಳು

ಕವಿತೆ ಹನಿಗಳು ನಾಗರಾಜ. ಹರಪನಹಳ್ಳಿ -1-ಮೌನವಾಗಿ ಬಿದ್ದ ದಂಡೆಯಲ್ಲಿಒಂಟಿಯಾಗಿಧ್ಯಾನಿಸುತ್ತಿದೆ ದೋಣಿಬದುಕಿನ ಯಾತ್ರೆ ಮುಗಿಸಿ -2-ಕಡಲ ಅಲೆಗಳ ಸದ್ದುಕೇಳಿಯೂ ಕೇಳದಂತೆಬಿದ್ದಿರುವ ದಂಡೆಯ ಕಂಡುಆಗಸದಲ್ಲಿ ಚಂದ್ರನಗುತ್ತಿದ್ದ -3-ಸಂಜೆ ಗತ್ತಲುದಂಡೆಯಲ್ಲಿ ನಡೆದಾಡುತ್ತಿರುವಜೋಡಿ ನೆರಳುಗಳುನಕ್ಷತ್ರಗಳು ಹಾಡುತ್ತಿರೆಮಗುಮರಳಲ್ಲಿ ಗುಬ್ಬಚ್ಚಿಗಾಗಿಮನೆ ಮಾಡುತ್ತಿತ್ತು -4-ಗಾಳಿ ಸಿಳ್ಳೆಹಾಕುತ್ತಿತ್ತುಕಡಲಲ್ಲಿ ಯಾರೋದೀಪಸಾಲು ಹಚ್ಚಿಟ್ಟಂತೆದೋಣಿಗಳುಬದುಕಿಗಾಗಿಹುಡುಕಾಡುತ್ತಿದ್ದವು ********************************

ಹನಿಗಳು Read Post »

You cannot copy content of this page

Scroll to Top